Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ - Vistara News

ದೇಶ

Kalika Temple: ಭಕ್ತರು ಈ ದೇವಾಲಯಕ್ಕೆ ತುಂಡುಡುಗೆ ಧರಿಸಿ ಬಂದರೆ ಪ್ರವೇಶ ಇಲ್ಲ; ಆಡಳಿತ ಮಂಡಳಿ ಆದೇಶ

Kalika Temple: ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ಈ ದೇವಾಲಯವನ್ನು ನಿರ್ಮಿಸಿದ್ದಾರೆ. ಈಗ ದೇವಾಲಯದ ಆಡಳಿತ ಮಂಡಳಿಯು ತುಂಡುಡುಗೆ, ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಿದೆ. ಭಕ್ತರು ಆಡಳಿತ ಮಂಡಳಿಯ ತೀರ್ಮಾನವನ್ನು ಸ್ವಾಗತಿಸಿದ್ದಾರೆ.

VISTARANEWS.COM


on

Kalika Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್:‌ ಬದಲಾದ ಕಾಲಘಟ್ಟದಲ್ಲಿ, ದೇವಾಲಯಗಳಿಗೂ ತುಂಡುಡುಗೆ ಧರಿಸಿ ಬರುವ ಭಕ್ತರ ಸಂಖ್ಯೆ ಜಾಸ್ತಿಯಾಗಿರುವ ಕಾರಣ ಭಾರತದ ಹಲವು ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತರಲಾಗಿದೆ. ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯಕ್ಕೆ ಆಗಮಿಸಬೇಕು ಎಂಬುದಾಗಿ ದೇವಾಲಯಗಳ ಆಡಳಿತ ಮಂಡಳಿಗಳು ಆದೇಶ ಹೊರಡಿಸಿವೆ. ಈಗ ಮಧ್ಯಪ್ರದೇಶದ (Madhya Pradesh) ರತ್ಲಾಮ್‌ನಲ್ಲಿರುವ (Ratlam), ಪ್ರಸಿದ್ಧ ಕಾಳಿಕಾ ದೇವಾಲಯವು (Kalika Temple) ಕೂಡ ವಸ್ತ್ರಸಂಹಿತೆ ಜಾರಿಗೊಳಿಸಿದ್ದು, ಭಕ್ತಾದಿಗಳು ವಿದೇಶಿ ಹಾಗೂ ತುಂಡುಡುಗೆ ಧರಿಸಿ ಬರುವಂತಿಲ್ಲ ಎಂದು ಆದೇಶಿಸಿದೆ.

ದೇವಾಲಯದ ಅರ್ಚಕ ರಾಜೇಂದ್ರ ಶರ್ಮಾ ಅವರು ವಸ್ತ್ರಸಂಹಿತೆ ಜಾರಿಗೊಳಿಸಿದ್ದಾರೆ. “ದೇವಾಲಯದ ಪಾವಿತ್ರ್ಯ ಕಾಪಾಡಲು, ಭಕ್ತರು ವಿದೇಶಿ ಹಾಗೂ ತುಂಡುಡುಗೆ, ಶಾರ್ಟ್ಸ್‌ಗಳನ್ನು ಧರಿಸಿ ಬಂದರೆ, ಅವರಿಗೆ ದೇವಾಲಯ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಇಂತಹ ಉಡುಪು ಧರಿಸಿ ಬರುವ ಯಾರಿಗೂ ದೇವಾಲಯದ ಗರ್ಭಗುಡಿ ಪ್ರವೇಶಿಸಲು ಭದ್ರತಾ ಸಿಬ್ಬಂದಿಯು ಬಿಡುವುದಿಲ್ಲ. ಅಂತಹ ಭಕ್ತಾದಿಗಳು ದೇವಾಲಯದ ಹೊರಗಿನಿಂದಲೇ ದರ್ಶನ ಪಡೆದು ಹೋಗಬೇಕಾಗುತ್ತದೆ” ಎಂಬುದಾಗಿ ಅರ್ಚಕ ತಿಳಿಸಿದ್ದಾರೆ.

ಸುಮಾರು 400 ವರ್ಷಗಳ ಹಿಂದೆ ರತ್ಲಾಮ್‌ ಅರಸನಾಗಿದ್ದ ರತನ್‌ ಸಿಂಗ್‌ ಅವರು ಕಾಳಿಕಾ ದೇವಿಯ ಆರಾಧಕರಾಗಿದ್ದು, ಅವರು ದೇವಾಲಯವನ್ನು ನಿರ್ಮಿಸಿದ್ದಾರೆ. ಪ್ರಸಕ್ತ ದೇವಾಲಯದ ನಿರ್ವಹಣೆಯನ್ನು ಕೋರ್ಟ್‌ ಆಫ್‌ ವಾರ್ಡ್ಸ್‌ ಕಾಯ್ದೆ ಅಡಿಯಲ್ಲಿ ಜಿಲ್ಲಾಡಳಿತವೇ ನೋಡಿಕೊಳ್ಳುತ್ತದೆ. ತಹಸೀಲ್ದಾರ್‌ ರಿಷಭ್‌ ಠಾಕೂರ್‌ ಅವರು ಕೂಡ ವಸ್ತ್ರಸಂಹಿತೆ ಕುರಿತು ಮಾತನಾಡಿದ್ದಾರೆ. “ದೇವಾಲಯದ ನಿರ್ವಹಣಾ ಸಮಿತಿಯು ಪಾಶ್ಚಿಮಾತ್ಯ ಉಡುಪುಗಳನ್ನು ನಿರ್ಬಂಧಿಸಿದೆ” ಎಂದು ಹೇಳಿದ್ದಾರೆ.

ನಿರ್ಧಾರ ಸ್ವಾಗತಿಸಿದ ಭಕ್ತರು

ಕಾಳಿಕಾ ದೇವಾಲಯದಲ್ಲಿ ಪಾಶ್ಚಿಮಾತ್ಯ ಹಾಗೂ ತುಂಡುಡುಗೆಯನ್ನು ನಿಷೇಧಿಸಿರುವ ದೇವಾಲಯ ಆಡಳಿತ ಮಂಡಳಿ ತೀರ್ಮಾನವನ್ನು ಭಕ್ತರು ಸ್ವಾಗತಿಸಿದ್ದಾರೆ. ದೇಶ-ವಿದೇಶಗಳಿಂದ ದೇವಾಲಯಕ್ಕೆ ಭಕ್ತರು ಆಗಮಿಸುತ್ತಾರೆ. ಇತ್ತೀಚೆಗೆ ದೇವಾಲಯಕ್ಕೂ ತುಂಡುಡುಗೆ ಧರಿಸಿ ಬರುವವರ ಸಂಖ್ಯೆ ಜಾಸ್ತಿಯಾಗಿದೆ. ಹಾಗಾಗಿ, ದೇವಾಲಯವು ವಸ್ತ್ರಸಂಹಿತೆ ಜಾರಿಗೊಳಿಸಿರುವುದು ಉತ್ತಮ ನಿರ್ಧಾರವಾಗಿದೆ. ಭಕ್ತರು ಸಾಂಪ್ರದಾಯಿಕ ದಿರಸು ಧರಿಸಿ ದೇವಾಲಯಕ್ಕೆ ಆಗಮಿಸುವುದು ಉತ್ತಮ ಎಂದು ಭಕ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 16 ದೇಗುಲಗಳಲ್ಲಿ ವಸ್ತ್ರಸಂಹಿತೆ; ಹರಿದ ಜೀನ್ಸ್‌, ಶಾರ್ಟ್ಸ್‌ ತೊಟ್ಟು ಹೋದರೆ ಹೆಣ್ಣುಮಕ್ಕಳಿಗಿಲ್ಲ ಪ್ರವೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಮುಕೇಶ್ ಅಂದರೆ ಹಾಂಟಿಂಗ್ ಮೆಲಡಿ, ನೋವಿನಲ್ಲಿ ಅದ್ದಿ ತೆಗೆದ ದನಿ!

ರಾಜಮಾರ್ಗ ಅಂಕಣ: ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ.

VISTARANEWS.COM


on

mukesh bollywood ರಾಜಮಾರ್ಗ ಅಂಕಣ
Koo

ಸಹಸ್ರಮಾನದ ಬಾಲಿವುಡ್ ಗಾಯಕ ಮುಕೇಶ್ – ನೂರಾ ಒಂದರ ನೆನಪು

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆತನು ಬದುಕಿದ್ದರೆ ಮೊನ್ನೆ ಜುಲೈ 22ಕ್ಕೆ ನೂರಾ ಒಂದು ವರ್ಷಗಳು ತುಂಬಿದ ಸಂಭ್ರಮವು ಇರುತ್ತಿತ್ತು! ಇಂದು ಮುಕೇಶ್ (Mukesh) ನಮ್ಮೊಂದಿಗಿಲ್ಲ! ಆದರೆ ಆ ಗಾಯಕ (Singer) ಹಾಡಿರುವ 1300 ಮಾಧುರ್ಯದ ಹಾಡುಗಳಿವೆ! ಸಾವಿಲ್ಲದ ಹಾಡುಗಳನ್ನು ಮುಕೇಶ್ ಬಾಲಿವುಡ್ (Bollywood) ಜಗತ್ತಿನಲ್ಲಿ ಹಾಡಿ ಸೂತಕದ ಛಾಯೆ ಮೂಡಿಸಿ ಹೊರಟೇ ಹೋದರು!

ದಿಲ್ ಜಲ್ತಾ ಹೈ ತೋ ಜಲನೇ ದೋ

ʼದಿಲ್ ಜಲ್ತಾ ಹೆ ತೋ’ ಎಂದು ನೋವಿನಲ್ಲಿ ಹಾಡುತ್ತ ನಮ್ಮ ʼದಿಲ್ ತೋಡಕರ್’ ಆತನು ಹೊರಟು ಹೋಗಿ 46 ವರ್ಷಗಳೇ ಕಳೆದುಹೋದವು! ಆದ್ರೂ ನಾವು ʼಜಾನೆ ಕಹಾ ಗಯೇ ಓ ದಿನ್’ ಎಂದು ಹಾಡುತ್ತ, ʼಕಭಿ ಕಭಿ ಮೇರೆ ದಿಲ್ ಮೆ’ ಎಂದು ಗುನುಗುತ್ತ ಅವನಿಗೆ ಶ್ರದ್ಧಾಂಜಲಿ ಸಮರ್ಪಣೆ ಮಾಡುತ್ತಾ ಇದ್ದೇವೆ. ಬಾಲಿವುಡ್ಡಿಗೆ ಇನ್ನೊಬ್ಬ ಮುಕೇಶ್ ಮತ್ತೆ ಹುಟ್ಟಿ ಬರಲಿ ಎಂಬ ಹಾರೈಕೆಯೊಂದಿಗೆ!

ಆವಾರಾ ಹೂಂ…ಆವಾರಾ ಹೂಂ!

ಅವನ ಪೂರ್ತಿ ಹೆಸರು ಮುಕೇಶ್ ಚಂದ್ ಮಾಥುರ್. ಹುಟ್ಟಿದ್ದು ದೆಹಲಿಯಲ್ಲಿ. ಓದಿದ್ದು ಎಸೆಸೆಲ್ಸಿ. ಉದ್ಯೋಗ ಮಾಡಿದ್ದು PWD ಇಲಾಖೆಯಲ್ಲಿ. ಅವನ ಅಕ್ಕ ಸುಂದರ ಪ್ಯಾರಿಗೆ ಸಂಗೀತ ಕಲಿಸಲು ಗುರುಗಳು ಪ್ರತೀ ದಿನ ಮನೆಗೆ ಬಂದಾಗ ಪಕ್ಕದ ಕೋಣೆಯಲ್ಲಿ ಹಾಡುಗಳನ್ನು ಗುನುಗುತ್ತ ಸಂಗೀತವನ್ನು ಕಲಿತವನು ಮುಕೇಶ್. ಅವನ ಅಕ್ಕನ ಮದುವೆಯ ರಸಮಂಜರಿಯ ವೇದಿಕೆಯಲ್ಲಿ ಆತನು ಹಾಡುವಾಗ ಕೇಳಿದ್ದ ಹಿಂದಿಯ ಖ್ಯಾತ ನಟ ಮೋತಿಲಾಲ್ ಅವನಿಗೆ ಹೇಳಿದ್ದು ‘ನೀನು ಇರಬೇಕಾದ್ದು ಇಲ್ಲಿ ಅಲ್ಲ! ನಡಿ ಮುಂಬೈಗೆ!’

ಮುಂಬೈಗೆ ಕರೆದುಕೊಂಡು ಬಂದ ಮೋತಿಲಾಲ್ ಅವರು ಅವನ ಸಂಗೀತ ಕಲಿಕೆಗೂ ಅವಕಾಶ ಮಾಡಿಕೊಟ್ಟರು.

ಅದರ ನಡುವೆ ಎರಡು ಸಿನೆಮಾದಲ್ಲಿ ಹೀರೋ ಆಗಿ ಅಭಿನಯ ಮಾಡಲು ಹೋಗಿ ಎಡವಟ್ಟು ಮಾಡಿಕೊಂಡಿದ್ದ ಮುಕೇಶ್! ಸಿನೆಮಾ ಓಡಲಿಲ್ಲ. ಅವನಿಗೆ ತಕ್ಷಣವೇ ಅರ್ಥ ಆಗಿತ್ತು, ಇದು ನನ್ನ ಕ್ಷೇತ್ರ ಅಲ್ಲ!

ಮತ್ತೆ ಅವಕಾಶ ಹುಡುಕುತ್ತ ಸ್ಟುಡಿಯೋಗಳಿಗೆ ಅಲೆದಾಟ ತಪ್ಪಲಿಲ್ಲ. ಅನಿಲ್ ಬಿಸ್ವಾಸ್ ಕಂಪೋಸ್ ಮಾಡಿದ ‘ಪೇಹ್ಲಿ ನಜರ್’ ಸಿನಿಮಾದ ಸ್ಮರಣೀಯ ಹಾಡು ‘ದಿಲ್ ಜಲ್ತಾ ಹೈ ತೋ ಜಲನೇ ದೋ’ ಮುಕೇಶ್ ಹಾಡಿದ್ದೇ ಹಾಡಿದ್ದು, ಬಂಪರ್ ಹೊಡೆಯಿತು! ಆ ಹಾಡನ್ನು ಕೇಳಿದ ಆಗಿನ ಲೆಜೆಂಡ್ ಸಿಂಗರ್ ಸೈಗಲ್ ಹೇಳಿದರಂತೆ, ‘ಈ ಹಾಡು ನಾನೇ ಹಾಡಿದ್ದಲ್ಲವಾ! ಯಾವಾಗ ಹಾಡಿದ್ದು ಎಂದು ಮರೆತುಹೋಗಿದೆ!’

ಆಗ ಅವನಿಗೆ ಅರ್ಥ ಆದದ್ದು ʼನಾನು ಅರಿವಿಲ್ಲದೆ ಸೈಗಲ್ ಅವರ ಅನುಕರಣೆಯನ್ನು ಮಾಡುತ್ತಿರುವೆ’ ಎಂದು!

ಮುಖೇಶಗೆ ಒಲಿದ ಗುರು ನೌಶಾದ್

ಅನುಕರಣೆಯಿಂದ ಹೊರಬಂದು ಅವನದ್ದೇ ವಾಯ್ಸ್ ಡೆವೆಲಪ್ ಮಾಡಲು ತರಬೇತಿ ನೀಡಿದವರು ನೌಶಾದ್ ಸಾಬ್. ಅವರನ್ನು ಮುಕೇಶ್ ಕೊನೆತನಕ ಮರೆಯಲಿಲ್ಲ. ಸಂಗೀತ ಕ್ಷೇತ್ರದಲ್ಲಿ ತಾನು ಮಾಡಿದ ಅಷ್ಟೂ ಸಾಧನೆಯನ್ನು ತನ್ನ ಗುರುವಿಗೆ ಸಮರ್ಪಣೆ ಮಾಡಿದ್ದಾನೆ ಮುಕೇಶ್.

ಚಂಚಲ್ ಶೀತಲ್ ಸರಲಾ!

ಬಾಲಿವುಡ್ಡಿನಲ್ಲಿ ಗಟ್ಟಿಯಾಗಿ ಕಾಲು ಊರುವ ಮೊದಲೇ ಆತ ಪ್ರೀತಿಯ ಬಲೆಗೆ ಬಿದ್ದಾಗಿತ್ತು. ಅವಳ ಹೆಸರು ಸರಲಾ. ಕೋಟ್ಯಾಧಿಪತಿ ಅಪ್ಪನ ಪ್ರೀತಿಯ ಒಬ್ಬಳೇ ಮಗಳು. ಇವನೋ ʼಮಾನಾ ಆಪ್ನಿ ಜೇಬ್ ಸೆ ಫಕೀರ್ ಹೆ’ ಎಂದು ಹಾಡುತ್ತಿದ್ದ ಐಡೆಂಟಿಟಿ ಇಲ್ಲದ ಹಿನ್ನೆಲೆ ಗಾಯಕ! ʼಮೈನಾ ಭೂಲೂಂಗಾ’ ಎಂದು ಹಾಡುತ್ತ ಮುಕೇಶ್ ಅವಳಿಗೆ ಮೋಡಿಯನ್ನು ಮಾಡಿದ್ದ! ʼಚಂಚಲ ಶೀತಲ್’ ಸರಲಾ ಅವನನ್ನು ಬಿಟ್ಟಿರಲು ಆಗದೇ ಒಂದು ದಿನ ʼಭಾಗ್ ಚಲೇ’ ಎಂದಳು!

ಸಾವನ್ ಕಾ ಮಹೀನಾ..

ಸರಳವಾಗಿ ಒಂದು ʼಸಾವನ ಕಾ ಮಹೀನಾ’ ಅವರು ಒಂದು ದೇವಸ್ಥಾನದಲ್ಲಿ ಮದುವೆ ಆದರು. ಕೊನೆಯವರೆಗೂ ಪ್ರೀತಿಯಿಂದ ಬಾಳಿದರು.

1945-1978ರ ಅವಧಿಯಲ್ಲಿ ಅವನು ಹಾಡಿದ್ದು 1300 ಅಮರವಾದ ಹಾಡುಗಳನ್ನು! ಅವನ ಸಮಕಾಲೀನ ಗಾಯಕರಾದ ರಫೀ ಮತ್ತು ಕಿಶೋರ್ ಕುಮಾರ್ ಅವರಿಗೆ ಹೋಲಿಸಿದರೆ ಈ ಸಂಖ್ಯೆಯು ತುಂಬಾ ಕಡಿಮೆ. ಆದರೆ ಮುಕೇಶ್ ಹಾಡಿದ ಹಾಡುಗಳು ಎಲ್ಲವೂ ಸೂಪರ್ ಹಿಟ್. ಮಾಧುರ್ಯದ ಪರಾಕಾಷ್ಠೆ!

ಶೋಕ ಗೀತೆಗಳ ಸಾಮ್ರಾಟ ಮುಕೇಶ್!

ಅವನ ಧ್ವನಿಯಲ್ಲಿ ರಫಿಯ ವೈವಿಧ್ಯತೆ ಇರಲಿಲ್ಲ. ಕಿಶೋರ್ ಕುಮಾರನ ಕಶಿಷ್ ಇರಲಿಲ್ಲ. ಆದರೆ ಒಂದು ಹಾಂಟಿಂಗ್ ಮೆಲಡಿಯು ಖಂಡಿತವಾಗಿಯು ಇರುತ್ತಿತ್ತು. ಅದರಲ್ಲಿ ಕೂಡ ಭಗ್ನಪ್ರೇಮಿಗಳಿಗೆ ಒಂದಿಷ್ಟು ಸಾಂತ್ವನ ನೀಡುವ ವಿಷಾದ ಭಾವ ಇರುತ್ತಿತ್ತು. ಅದಕ್ಕೆ ಅವನನ್ನು ‘ಶೋಕ ಗೀತೆಗಳ ಸಾಮ್ರಾಟ’ ಎಂದು ಜನರು ಕರೆದರು. ನೋವಿನಲ್ಲಿ ಅದ್ದಿ ತೆಗೆದ ಆ ಆರ್ದ್ರ ಧ್ವನಿಯು ಬೇರೆ ಯಾವ ಗಾಯಕನಲ್ಲೂ ಇರಲಿಲ್ಲ! ಒಂದು ರೀತಿಯಲ್ಲಿ ಆತನದ್ದು ನಶೆ ಏರಿಸುವ ಧ್ವನಿ ಆಗಿತ್ತು. ಶಂಕರ್ ಜೈಕಿಷನ್, ಕಲ್ಯಾಣ್ ಜಿ ಆನಂದ ಜಿ, ಸಚಿನ್ ದೇವ್ ಬರ್ಮನ್, ಖಯ್ಯಾಂ, ಸಲೀಲ್ ಚೌಧರಿ ಮೊದಲಾದ ಸಂಗೀತ ನಿರ್ದೇಶಕರು ಮುಕೇಶನ ಒಳಗಿದ್ದ ಅದ್ಭುತ ಗಾಯಕನನ್ನು ಕಡೆದು ನಿಲ್ಲಿಸಿದರು.

ಆಗಿನ ಕಾಲದಲ್ಲಿ ಸ್ಟುಡಿಯೋ ವ್ಯವಸ್ಥೆ ಹೇಗಿತ್ತು ಎಂದರೆ ಎಲ್ಲಾ ವಾದ್ಯಗಳ ಕಲಾವಿದರು ಸಾಕಷ್ಟು ರಿಹರ್ಸಲ್ ಮಾಡಿ ಲೈವ್ ಆಗಿ ನುಡಿಸಬೇಕಾಗಿತ್ತು. ಹಿನ್ನೆಲೆ ಗಾಯಕರು ರೀ ಟೇಕ್ ಮಾಡಲು ಅವಕಾಶ ಇಲ್ಲದೆ ಒಂದೇ ಉಸಿರಲ್ಲಿ ಹಾಡಿ ಮುಗಿಸಬೇಕು. ಮುಕೇಶ್ ಇಂತಹ ಸವಾಲನ್ನು ಗೆದ್ದು ಬಂದಿದ್ದವರು!

ʼಮುಕೇಶ್ ನನ್ನ ಆತ್ಮ’ ಎಂದರು ರಾಜಕಪೂರ್

ಹಿಂದಿ ಸಿನೆಮಾರಂಗದ ಮಹಾನಟ, ಶೋಮ್ಯಾನ್ ರಾಜ್ ಕಪೂರ್ ಅವರ ವ್ಯಕ್ತಿತ್ವಕ್ಕೆ ಮುಕೇಶ್ ಧ್ವನಿಯು ತುಂಬಾ ಚೆನ್ನಾಗಿಯೇ ಹೊಂದಾಣಿಕೆ ಆಗುತ್ತಿತ್ತು. ಅದರಿಂದ ಹುಟ್ಟಿ ಬಂದದ್ದು ಎವರ್ ಗ್ರೀನ್ ಆದ ನೂರಾರು ಹಾಡುಗಳು! ಆವಾರಾ, ಬರ್ಸಾತ್, ಶ್ರೀ 420, ಸಂಗಂ, ಮೇರಾ ನಾಮ್ ಜೋಕರ್, ಅನಾರಿ, ಆಗ್, ಜಿಸ್ ದೇಶ್ ಮೆ ಗಂಗಾ ಬಹತಿ ಹೈ……….. ಈ ಸಿನಿಮಾಗಳ ಹಾಡುಗಳನ್ನು ಕೇಳಿ ನೋಡಿ. ಅಂತಹ ಹಾಡುಗಳಿಗೆ ಸಾವಿಲ್ಲ. ಅದಕ್ಕಾಗಿ ಮುಂದೆ ಮುಕೇಶ್ ನಿಧನರಾದಾಗ ರಾಜಕಪೂರ್ ಹೇಳಿದ್ದು – ನಾನು ನನ್ನ ಆತ್ಮವನ್ನು ಕಳೆದುಕೊಂಡೆ!

ಕಯಿ ಬಾರ್ ಯೂ ಹಿ ದೇಖಾ ಹೈ..

ಮುಕೇಶನಿಗೆ ‘ರಜನಿ ಗಂಧಾ’ ಹಿಂದೀ ಸಿನಿಮಾದ ಹಾಡಿಗೆ ಅತ್ಯುತ್ತಮ ಗಾಯಕ ರಾಷ್ಟ್ರ ಪ್ರಶಸ್ತಿ ದೊರೆಯಿತು( ಕಯಿ ಬಾರ್ ಯೂ ಹಿ ದೇಖಾ ಹೈ). ನಾಲ್ಕು ಫಿಲ್ಮ್ ಫೇರ್ ಪ್ರಶಸ್ತಿ, ಬೆಂಗಾಲಿ ಪತ್ರಕರ್ತರ ಸಂಘದ ಮೂರು ಪ್ರಶಸ್ತಿಗಳು ಅವನಿಗೆ ದೊರೆತಿವೆ. ಇದೆಲ್ಲಕ್ಕಿಂತ ಹೆಚ್ಚಾಗಿ ಆತನ ಮೆಲಡಿ ಹಾಡುಗಳನ್ನು ಈಗಲೂ ಕೇಳುವ, ಆಸ್ವಾದಿಸುವ, ಫೀಲ್ ಮಾಡಿಕೊಳ್ಳುವ ಬಹು ದೊಡ್ಡ ಅಭಿಮಾನಿಗಳ ಪ್ರೀತಿಯು ದೊರೆತಿತು. ಮುಖೇಶನಿಗೆ ವಿದೇಶದಲ್ಲಿ ಕೂಡ ಬಹಳ ದೊಡ್ಡ ಸಂಖ್ಯೆಯ ಅಭಿಮಾನಿಗಳ ಬಳಗ ಇದೆ.

ʼದಿಲ್ ಜಲ್ತಾ ಹೈ’ ಮುಕೇಶ್ ಅವನ ಮೊದಲ ಮತ್ತು ಕೊನೆಯ ಹಾಡಾಯಿತು!

1976 ಆಗಸ್ಟ್ 27ರಂದು ಅಮೆರಿಕಾದ ಒಂದು ಆರ್ಕೆಸ್ಟ್ರಾ ಕಾರ್ಯಕ್ರಮಕ್ಕೆ ಹಾಡಲು ಹೋಗಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಮುಕೇಶ್ ಉಸಿರು ನಿಂತಿತು. ಅಲ್ಲಿ ಕೂಡಾ ಆತ ಹಾಡಿದ ಕೊನೆಯ ಹಾಡು – ದಿಲ್ ಜಲ್ತಾ ಹೈ ತೋ ಜಲನೆ ದೋ! ನೆನಪು ಮಾಡಿಕೊಳ್ಳಿ, ಅದು ಮುಕೇಶ್ ಹಾಡಿದ ಮೊದಲ ಹಾಡು ಕೂಡ ಆಗಿತ್ತು! ಉಸಿರು ನಿಂತಾಗ ಅವನಿಗೆ ಕೇವಲ 53 ವರ್ಷ ಆಗಿತ್ತು. ಮುಂದೆ ಆತನ ಮಗ ನಿತಿನ್ ಮುಕೇಶ್ ಅಪ್ಪನ ಹಾಗೆ ಹಿನ್ನೆಲೆ ಗಾಯಕರಾಗಿ ಜನಪ್ರಿಯತೆ ಪಡೆದರು.

ಮುಕೇಶನ ಹಾಡುಗಳನ್ನು ಆರಾಧಿಸುತ್ತಾ, ಅವುಗಳನ್ನು ನನಗೆ ದೊರೆತ ಎಲ್ಲಾ ಕಾಲೇಜಿನ ವೇದಿಕೆಯಲ್ಲಿ, ಸ್ಪರ್ಧೆಗಳಲ್ಲಿ ಆರ್ದ್ರವಾಗಿ ಹಾಡುತ್ತ ಇದ್ದ ನನ್ನ ಹಾಗೆ ಇರುವ ಕೋಟಿ ಕೋಟಿ ಅಭಿಮಾನಿಗಳ ಮೇಲೆ ಆತನು ದಟ್ಟವಾದ ಪ್ರಭಾವವನ್ನು ಬಿಟ್ಟು ಹೋಗಿದ್ದಾನೆ. ಆತನ ಟಾಪ್ 12 ಹಾಡುಗಳನ್ನು ಪಟ್ಟಿ ಮಾಡಿ ಇಲ್ಲಿಟ್ಟು ಅವನಿಗೆ ಶ್ರದ್ಧಾಂಜಲಿ ಕೊಡುತ್ತಿರುವೆ. ಅವನ ಸಾವಿರದ ಹಾಡುಗಳಿಗೆ ಕಿವಿ ಆಗಿ ಆಯ್ತಾ!

ಈ ಹಾಡುಗಳನ್ನೊಮ್ಮೆ ಕೇಳಿ, ನೀವು ಮುಕೇಶ್ ಫ್ಯಾನ್ ಆಗದಿದ್ದರೆ ಮತ್ತೆ ಹೇಳಿ!

1) ಹೊಂಟೋ ಪೆ ಸಚ್ಚಾಯಿ ರಹತಿ ಹೈ( ಜೀಸ್ ದೇಶ್ ಮೆ ಗಂಗಾ ಬೇಹತಿ ಹೈ)
2) ದೋಸ್ತ್ ದೋಸ್ತ್ ನಾ ರಹಾ( ಸಂಗಂ)
3) ಸಾವನ ಕಾ ಮಹೀನಾ ಪವನ್ ಕರೆ ಶೋರ್ (ಮಿಲನ್)
4) ಬಸ್ ಏಹಿ ಅಪರಾಧ್ ( ಪೆಹಾಚಾನ್)
5) ಜಾನೆ ಕಹಾನ್ ಗಯೇ ಓ ದಿನ್ (ಮೇರಾ ನಾಮ್ ಜೋಕರ್)
6) ಕಹೀನ್ ದೂರ್ ಜಬ್ ದಿನ್ ಧಲ ಜಾಯೆ ( ಆನಂದ್)
7) ಮೈ ನಾ ಭೂಲೂಂಗಾ(ರೋಟಿ ಕಪಡಾ ಔರ್ ಮಕಾನ್)
8) ಇಕ್ ದಿನ್ ಭಿಕ್ ಜಾಯೆಗಾ ( ಧರಂ ಕರಂ)
9) ಕಭೀ ಕಭಿ ಮೇರೆ ದಿಲ್ ಮೆ( ಕಭೀ ಕಭಿ)
10) ಮೇರಾ ಜೂತಾ ಹೈ ಜಪಾನಿ( ಆವಾರ)
11) ತಾಲ್ ಮಿಲೆ ನದೀ ಕೆ ಜಲ ಮೆ ( ಅನೋಖಿ ರಾತ)
12) ದಿಲ್ ತಡಪ್ ತಡಪ್ ಕೆ (ಮಧುಮತಿ)

ಸಹಸ್ರಮಾನದ ಮುಕೇಶ್ ಧ್ವನಿಗೆ ಕೋಟಿ ಪ್ರಣಾಮಗಳು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನಾಲ್ಕನೇ ತರಗತಿ ಮಾತ್ರ ಓದಿದ ಎನ್ ನರಸಿಂಹಯ್ಯ 550 ಪತ್ತೇದಾರಿ ಕಾದಂಬರಿ ಬರೆದರು!

Continue Reading

ದೇಶ

India Maldives: ದುರಹಂಕಾರ ಬಿಟ್ಟು ಭಾರತಕ್ಕೆ ಧನ್ಯವಾದ ತಿಳಿಸಿದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು!

India Maldives: ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಭರವಸೆ ಇದೆ ಎಂದು ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಹೇಳಿದ್ದಾರೆ. ಕಳೆದ ತಿಂಗಳು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲೂ ಮೊಹಮ್ಮದ್‌ ಮುಯಿಜು ಭಾಗವಹಿಸಿದ್ದರು.

VISTARANEWS.COM


on

India Maldives
Koo

ನವದೆಹಲಿ: ಕೆಲ ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲಕ್ಷದ್ವೀಪಕ್ಕೆ ಭೇಟಿ ಕೊಟ್ಟು, ಪ್ರವಾಸೋದ್ಯಮದ ಉತ್ತೇಜನಕ್ಕೆ ಕರೆ ಕೊಟ್ಟ ಬಳಿಕ ಉದ್ಧಟತನ ತೋರಿದ್ದ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಕೊನೆಗೂ ದುರಹಂಕಾರ ಮರೆತು, ಭಾರತದ ಜತೆ ಕೈಜೋಡಿಸಲು ಮುಂದಾಗಿದ್ದಾರೆ. ಸಾಲ ಮರುಪಾವತಿ ನಿಯಮಗಳಲ್ಲಿ ಭಾರತವು ಸಡಿಲಿಕೆ ಮಾಡಿರುವುದರಿಂದ ಮೊಹಮ್ಮದ್‌ ಮುಯಿಜು ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ. ಹಾಗೆಯೇ, ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ (India Maldives) ಮಾಡಿಕೊಳ್ಳುವ ಆಸಕ್ತಿ ತೋರಿದ್ದಾರೆ.

ಕಳೆದ ಶುಕ್ರವಾರ (ಜುಲೈ 26) ಮಾಲ್ಡೀವ್ಸ್‌ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೊಹಮ್ಮದ್‌ ಮುಯಿಜು ಮಾತನಾಡಿದರು. “ವಿದೇಶಾಂಗ ನೀತಿಯಲ್ಲಿ ಮಾಲ್ಡೀವ್ಸ್‌ ಉತ್ತಮ ಸುಧಾರಣೆ ಕಾಣುತ್ತಿದೆ. ಬೇರೆ ದೇಶಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳು ಚೆನ್ನಾಗಿವೆ” ಎಂದು ಹೇಳಿದರು. ಇದೇ ವೇಳೆ ಅವರು, “ಮಾಲ್ಡೀವ್ಸ್‌ ಸಾಲ ಮರುಪಾವತಿ ಕುರಿತು ನಿಯಮ ಸಡಿಲಿಸಿದ ಭಾರತಕ್ಕೆ ಧನ್ಯವಾದಗಳು. ಭಾರತದ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಭರವಸೆ ಇದೆ” ಎಂದು ಹೇಳಿದ್ದಾರೆ. ಕಳೆದ ತಿಂಗಳು ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕಾರ್ಯಕ್ರಮದಲ್ಲೂ ಮೊಹಮ್ಮದ್‌ ಮುಯಿಜು ಭಾಗವಹಿಸಿದ್ದರು.

ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ ಭಾರತ ಹಾಗೂ ಮೋದಿ ವಿರುದ್ಧ ಮಾಲ್ಡೀವ್ಸ್‌ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಾಲ್ಡೀವ್ಸ್‌ನಲ್ಲಿಯೇ ಟೀಕೆಗಳು ವ್ಯಕ್ತವಾಗಿದ್ದವು ಮಾಲ್ಡೀವ್ಸ್‌ ಸಂಸದರು ಭಾರತದ ಕ್ಷಮೆಯಾಚಿಸಿದ್ದರು. ಭಾರತದಲ್ಲಂತೂ ಮಾಲ್ಡೀವ್ಸ್‌ ವಿರುದ್ಧ ಅಭಿಯಾನವೇ ಶುರುವಾಗಿತ್ತು. ನೂರಾರು ಸೆಲೆಬ್ರಿಟಿಗಳು, ನಟರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದರು. ಇದಾದ ಬಲಿಕ ಮಾಲ್ಡೀವ್ಸ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದರು. ಈಗ ಅದರ ಪರಿಣಾಮವನ್ನು ಮಾಲ್ಡೀವ್ಸ್‌ ಎದುರಿಸುತ್ತಿದೆ.

ಮೊಹಮ್ಮದ್‌ ಮುಯಿಜು ಚೀನಾ ಪರ ನಿಲುವು

ಚೀನಾ ಸರ್ಕಾರದಿಂದ ತೀವ್ರ ಸಾಲ ತಂದಿರುವ ಮಾಲ್ಡೀವ್ಸ್‌ನ ನೂತನ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರು ಚೀನಾ ಪರ ಒಲವುಳ್ಳ ನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಈ ಹಿಂದಿನ ಸರ್ಕಾರವು ಚೀನಾದಿಂದ ಸಾಕಷ್ಟು ಸಾಲವನ್ನು ಪಡೆದುಕೊಂಡಿದೆ. ಈಗ ಚೀನಾಗೆ ತೆರಳಿರುವ ಮೊಹಮ್ಮದ್‌ ಮುಯಿಜು, 50 ದಶಲಕ್ಷ ಡಾಲರ್‌ ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಸಾಲ, ವ್ಯಾಪಾರದ ಆಸೆ ತೋರಿಸುತ್ತಿರುವ ಚೀನಾ, ಪಾಕಿಸ್ತಾನದಂತೆ ಮಾಲ್ಡೀವ್ಸ್‌ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ, ಮೊಹಮ್ಮದ್‌ ಮುಯಿಜು ಅವರು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಮಾಲ್ಡೀವ್ಸ್‌ ಸಚಿವರು ಭಾರತದ ವಿರುದ್ಧ ಆರೋಪ ಮಾಡಿರುವುದು ಕೂಡ ಓಲೈಕೆಯ ಸಂಕೇತ ಎನ್ನಲಾಗಿತ್ತು. ಆದರೆ, ಈಗ ಎಲ್ಲವನ್ನು ಮರೆತು ಭಾರತದ ಜತೆ ಒಪ್ಪಂದ ಮಾಡಿಕೊಳ್ಳಲು ಮುಯಿಜು ಮುಂದಾಗಿದ್ದಾರೆ.

ಇದನ್ನೂ ಓದಿ: Union Budget 2024: ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಅನುದಾನದಲ್ಲಿ ಭಾರೀ ಕಡಿತ! ನೆರೆಯ ರಾಷ್ಟ್ರಗಳಿಗೆ ಎಷ್ಟೆಷ್ಟು ನೆರವು ಘೋಷಣೆ?

Continue Reading

ವೈರಲ್ ನ್ಯೂಸ್

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

Rajendra Nagar Tragedy: ಶನಿವಾರ (ಜುಲೈ 27) ದೆಹಲಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗಿ ಮೂವರು ಮೃತಪಟ್ಟಿದ್ದಾರೆ. ಇದೀಗ ಈ ದುರಂತದಿಂದ ಪಾರಾದವರ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Rajendra Nagar Tragedy
Koo

ನವದೆಹಲಿ: ಶನಿವಾರ (ಜುಲೈ 27) ದೆಹಲಿಯಲ್ಲಿ (Delhi Floods) ಸುರಿದ ಧಾರಾಕಾರ ಮಳೆಯಿಂದ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Rajendra Nagar Tragedy). ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ (Rau’s IAS Coaching Institute)ನಲ್ಲಿ ಈ ದುರಂತ ಸಂಭವಿಸಿದೆ. ಸಂಜೆ ಏಕಾಏಕಿ ನೀರು ನುಗ್ಗಿದ ಕಾರಣ ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ. ಇದೀಗ ದುರಂತದಿಂದ ಕೂದಲೆಳೆ ಅಂತರದಿಂದ ಪಾರಾದವರ ವಿಡಿಯೊ ವೈರಲ್‌ (Viral Video) ಆಗಿದೆ.

ಘಟನೆಯನ್ನು ಖಂಡಿಸಿ ಈಗಾಗಲೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದುರಂತಕ್ಕೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂಬ ಕೂಗು ಎಲ್ಲೆಡೆ ಕೇಳಿ ಬಂದಿದೆ. ಈ ಮಧ್ಯೆ ದುರಂತದಿಂದ ಪಾರಾದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಹೃದೇಶ್ ಚೌಹಾಣ್ ಘಟನೆ ಯಾವಾಗ ನಡೆಯಿತು ಎಂಬುದರ ಆಘಾತಕಾರಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ನೆಲಮಹಡಿಗೆ ನೆರೆ ನುಗ್ಗಿದ ನಂತರ ಅಲ್ಲಿನ ಪರಿಸ್ಥಿತಿ ಹೇಗಿತ್ತು ಎನ್ನುವುದನ್ನು ಈ ವೈರಲ್ ವಿಡಿಯೊ ತೋರಿಸುತ್ತದೆ. ಹಲವು ವಿದ್ಯಾರ್ಥಿಗಳು ದುರಂತದಿಂದ ಪಾರಾಗುವುದನ್ನು ಕಾಣಬಹುದು. ಜತೆಗೆ ನೆರೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ವಿದ್ಯಾರ್ಥಿಗಳ ಗುಂಪು ಸಹಾಯಹಸ್ತ ಚಾಚಿ ನೆರವಾಗುತ್ತಿರುವುದೂ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೊಂಡಿರುವ ಹೃದೇಶ್‌ ಚೌಹಾಣ್‌, ನೆಲಮಹಡಿಯು ಹತ್ತು ನಿಮಿಷಗಳಲ್ಲಿ ಪ್ರವಾಹದಿಂದ ತುಂಬಿಕೊಂಡಿತ್ತು ಎಂದು ಬರೆದುಕೊಂಡಿದ್ದಾರೆ. ಸಂಜೆ 6.40ಕ್ಕೆ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (National Disaster Management Authority)ಕ್ಕೆ ತಕ್ಷಣ ಮಾಹಿತಿ ನೀಡಲಾಯಿತು. ಆದರೆ ಅವರು ರಾತ್ರಿ 9ರ ನಂತರವೇ ತಲುಪಿದರು. ಇದು ಮೂವರು ಐಎಎಎಸ್‌ ಆಕಾಂಕ್ಷಿಗಳ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ನೆಟ್ಟಿಗರಿಂದ ಆಕ್ರೋಶ

ಸದ್ಯ ಈ ವಿಡಿಯೊವನ್ನು 10 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಹಲವು ಮಂದಿ ಆಡಳಿತ ಯಂತ್ರದ ವೈಫಲ್ಯವನ್ನು ಖಂಡಿಸಿದ್ದಾರೆ. ʼʼಇದು ನಿಜವಾಗಿಯೂ ಭಯಾನಕʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಈ ದುರಂತಕ್ಕೆ, ಮೂವರ ಸಾವಿಗೆ ನಾವು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಬಹುದೇ?ʼʼ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

“ದೆಹಲಿ ಪೊಲೀಸ್‌ ನೀವು ಸಮಯಕ್ಕೆ ಸರಿಯಾಗಿ ಏಕೆ ತಲುಪಲಿಲ್ಲ? ಮತ್ತು ಈಗ ನೀವು ಕೋಚಿಂಗ್ ಸೆಂಟರ್ ಮೇಲೆ ಎಫ್ಐಆರ್ ದಾಖಲಿಸುತ್ತೀರಿ. ಎಂತಹ ವಿಪರ್ಯಾಸ” ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. “ಈ ದುರಂತದ ಹಿಂದಿರುವ ಕಾರಣಕರ್ತರ ವಿರುದ್ಧ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ಪ್ರವೃತ್ತರಾಗಬೇಕು” ಎಂದು ಮಗದೊಬ್ಬರು ಸೂಚಿಸಿದ್ದಾರೆ.

ಇದನ್ನೂ ಓದಿ: Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Continue Reading

ದೇಶ

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

India Pakistan War: ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದು ಭಾರತ ಹಾಗೂ ಪಾಕಿಸ್ತಾನದ ನಡುವಿನ ಮತ್ತೊಂದು ಯುದ್ಧಕ್ಕೆ ಮುನ್ನುಡಿಯಂತಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

India Pakistan War
Koo

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 1947-48ರಿಂದ ಇದುವರೆಗೆ ಪಾಕಿಸ್ತಾನವು ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ (India Pakistan War) ಮಾಡಿದೆ ಹಾಗೂ ನಾಲ್ಕು ಬಾರಿಯೂ ಸೋತು ಸುಣ್ಣವಾಗಿದೆ. ಇಷ್ಟಾದರೂ, ಗಡಿಯಲ್ಲಿ ಉದ್ಧಟತನ ಮಾಡುವುದು, ಉಗ್ರರನ್ನು ಛೂ ಬಿಡುವುದನ್ನು ಮಾತ್ರ ಕುತಂತ್ರಿ ಪಾಕಿಸ್ತಾನ ಬಿಟ್ಟಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಈಗ ಪಾಕಿಸ್ತಾನದ 600 ಕಮಾಂಡೋಗಳು ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರ್ಗಿಲ್‌ (Kargil War) ಮಾದರಿಯಲ್ಲೇ ಉಭಯ ದೇಶಗಳ ಮಧ್ಯೆ ಮತ್ತೊಂದು ಯುದ್ಧ ಆರಂಭವಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಹೌದು, ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿರುವುದು ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದಾರೆ.

“ಕಣಿವೆಯ ಸ್ಥಳೀಯ ಜಿಹಾದಿ ಹೋರಾಟಗಾರರು ಪಾಕಿಸ್ತಾನದ ಪರವಾಗಿ ಹೋರಾಡಲು ಸಜ್ಜಾಗಿದ್ದಾರೆ. ಜಮ್ಮುವಿನಲ್ಲಿ ನಡೆಯುತ್ತಿರುವ ದಾಳಿಯ ಉಸ್ತುವಾರಿಯನ್ನು ಪಾಕಿಸ್ತಾನದ ಲೆಫ್ಟಿನೆಂಟ್‌ ಕರ್ನಲ್‌ ಶಾಹಿದ್‌ ಸಲೀಮ್‌ ಜಂಜುವಾ ವಹಿಸಿಕೊಂಡಿದ್ದಾನೆ. ಭಾರತೀಯ ಸೇನೆಯ 15 ಕಾರ್ಪ್ಸ್‌ ಯೋಧರೇ ಅವರ ಗುರಿಯಾಗಿದ್ದಾರೆ. ಇನ್ನೂ ಎರಡು ಬೆಟಾಲಿಯನ್‌ಗಳು ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಲು ಮುಂದಾಗಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಇದು ಈಗ ಆತಂಕದ ವಾತಾವರಣ ನಿರ್ಮಾಣವಾಗಲು ಕಾರಣವಾಗಿದೆ.

ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ವಾರ್ನಿಂಗ್‌ ಕೊಟ್ಟಿರುವ ಮೋದಿ

ಜುಲೈ 26ರ ಕಾರ್ಗಿಲ್‌ ವಿಜಯ ದಿವಸದಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. “ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ. ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಇದನ್ನೂ ಓದಿ: ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Continue Reading
Advertisement
Actor Darshan case Vinod Raj said that he did not go to negotiations Renukaswamy family
ಕ್ರೈಂ1 min ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಸಂಧಾನಕ್ಕೆ ಹೋಗಿದ್ದಲ್ಲ ಎಂದ ವಿನೋದ್‌ ರಾಜ್‌ !

Road Accident
ಕಲಬುರಗಿ1 min ago

Road Accident : ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಚೆಲ್ಲಾಪಿಲ್ಲಿಯಾಗಿ ಬಿದ್ದ ಇಬ್ಬರು ಸಾವು

Paris Olympics 2024
ಕ್ರೀಡೆ8 mins ago

Paris Olympics 2024: ಪ್ಯಾರಿಸ್‌ ಒಲಿಂಪಿಕ್ಸ್;‌ ಇಂದು ಭಾರತೀಯರ ಅಥ್ಲೀಟ್‌ಗಳ ಕಾದಾಟ ಏನೇನು? ಪದಕ ನಿಶ್ಚಿತ?

Stock Market
ವಾಣಿಜ್ಯ8 mins ago

Stock Market: ಭರ್ಜರಿಯಾಗಿಯೇ ಕಂಬ್ಯಾಕ್‌ ಮಾಡಿದ ಷೇರುಪೇಟೆ; ಸಾರ್ವಕಾಲಿಕ ಗರಿಷ್ಠ ಅಂಕಕ್ಕೆ ತಲುಪಿದ ಸೆನ್ಸೆಕ್ಸ್‌

robbery case brahmavara
ಕ್ರೈಂ17 mins ago

Robbery Case: ಐಟಿ ದಾಳಿ ಮಾದರಿಯಲ್ಲಿ ಬಂದು ದರೋಡೆಗೆ ಯತ್ನಿಸಿದ ಖದೀಮರು! ಲೂಟಿ ವಿಫಲಗೊಳಿಸಿದ ಲೈವ್‌ ಸೆಕ್ಯುರಿಟಿ

Viral Video
Latest24 mins ago

Viral Video: ಬೀದಿ ನಾಯಿ ದಾಳಿಯಿಂದ ಮಗುವನ್ನು ರಕ್ಷಿಸಿದ ಸಾಕು ನಾಯಿ! ಅಪರೂಪದ ವಿಡಿಯೊ

Actor Dhanush Raayan box office Day 3
ಕಾಲಿವುಡ್26 mins ago

Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

Deepika Padukone Were Not Easy Task For Siddhant Chaturvedi Gehraiyaan Deepika Padukone Were Not Easy Task For Siddhant Chaturvedi Gehraiyaan
ಬಾಲಿವುಡ್47 mins ago

Deepika Padukone: ದೀಪಿಕಾ ಜತೆ ಹಸಿ ಬಿಸಿ ದೃಶ್ಯಗಳನ್ನು ನಿಭಾಯಿಸಿದ್ದು ಅಷ್ಟು ಸುಲಭವಾಗಿರಲಿಲ್ಲ ಎಂದ ಸಿದ್ಧಾಂತ್ ಚತುರ್ವೇದಿ!

Donald Trump
ವಿದೇಶ53 mins ago

Donald Trump: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೂಗಲ್‌ ಹಸ್ತಕ್ಷೇಪ: ರಿಪಬ್ಲಿಕನ್‌ ಪಾರ್ಟಿಯ ಆರೋಪಕ್ಕೆ ಕಾರಣವೇನು?

shiradi landslide railway track
ಪ್ರಮುಖ ಸುದ್ದಿ1 hour ago

Shiradi Landslide: ಹಳಿ ಮೇಲೆ ಭೂಕುಸಿತ, ಬೆಂಗಳೂರು- ಮಂಗಳೂರು ರೈಲುಗಳು 15 ದಿನ ಬಂದ್, 400 ಕಾರ್ಮಿಕರಿಂದ ತೆರವು ಕಾರ್ಯಾಚರಣೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ17 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ19 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ21 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ22 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌