Maha politics: ಡಿಸಿಎಂ ಆಗಲು ಒಪ್ಪಿದ ಫಡ್ನವಿಸ್‌, ಹೈಕಮಾಂಡ್‌ ಸಲಹೆಗೆ ಮನ್ನಣೆ - Vistara News

ದೇಶ

Maha politics: ಡಿಸಿಎಂ ಆಗಲು ಒಪ್ಪಿದ ಫಡ್ನವಿಸ್‌, ಹೈಕಮಾಂಡ್‌ ಸಲಹೆಗೆ ಮನ್ನಣೆ

Maha politics: ದೇವೇಂದ್ರ ಫಡ್ನವಿಸ್‌ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ. ಮೊದಲು ಅವರು ತನಗೆ ಯಾವುದೇ ಹುದ್ದೆ ಬೇಡ ಎಂದಿದ್ದರು.

VISTARANEWS.COM


on

devendra fadnvis
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮಹಾರಾಷ್ಟ್ರ ರಾಜಕೀಯದಲ್ಲಿ ನಡೆದ ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವಿಸ್‌ ಅವರು ಏಕನಾಥ್‌ ಶಿಂಧೆ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಲು ಒಪ್ಪಿದ್ದಾರೆ.

ಅಚ್ಚರಿಯ ನಡೆಯಲ್ಲಿ ಶಿವಸೇನೆಯ ಬಂಡಾಯ ನಾಯಕ ಏಕನಾಥ್‌ ಶಿಂಧೆ ಅವರನ್ನೇ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಎಂದು ಘೋಷಿಸಿದ ದೇವೇಂದ್ರ ಫಡ್ನವಿಸ್‌ ಅವರು ತಾನು ಯಾವುದೇ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದರು.

ಏಕನಾಥ್‌ ಶಿಂಧೆ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಾನು ಯಾವ ಹುದ್ದೆಯನ್ನೂ ವಹಿಸಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದ ಫಡ್ನವಿಸ್‌ ಅವರು ಕಿಂಗ್‌ ಮೇಕರ್‌ ಆಗಿ ರಾಜ್ಯ ರಾಜಕಾರಣದಲ್ಲಿ ನೇಪಥ್ಯಕ್ಕೆ ಸರಿಯುವ ಮಾತನ್ನು ಆಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಫಡ್ನವಿಸ್‌ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳುವಂತೆ ಮನವಿ ಮಾಡಿದೆ. ಹಿರಿಯ ನಾಯಕರಾದ ಅಮಿತ್‌ ಶಾ ಮತ್ತು ಜೆ.ಪಿ. ನಡ್ಡಾ ಅವರಿಬ್ಬರೂ ಮಹಾರಾಷ್ಟ್ರದ ಹಿತದೃಷ್ಟಿಯಿಂದ ಡಿಸಿಎಂ ಹುದ್ದೆ ವಹಿಸಿಕೊಳ್ಳುವಂತೆ ಕೋರಿದ್ದರು.

ಅಂತಿಮವಾಗಿ ಹೈಕಮಾಂಡ್‌ ಮನವಿಗೆ ಮಣಿದ ಫಡ್ನವಿಸ್‌ ಉಪಮುಖ್ಯಮಂತ್ರಿಯಾಗಲು ಒಪ್ಪಿದ್ದಾರೆ. ದೇವೇಂದ್ರ ಫಡ್ನವಿಸ್‌ ಅವರು ೨೦೧೪ರಿಂದ ೨೦೧೯ರವರೆಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು.

ಒಪ್ಪಿದರೆಂದ ಜೆ.ಪಿ. ನಡ್ಡಾ
ದೇವೇಂದ್ರ ಫಡ್ನವಿಸ್‌ ಅವರು ಡಿಸಿಎಂ ಆಗಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಟ್ವೀಟ್‌ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷವು ಮಹಾರಾಷ್ಟ್ರದ ಜನತೆಯ ಆಶೋತ್ತರಗಳಿಗಾಗಿ ದೊಡ್ಡ ಮನಸ್ಸಿನೊಂದಿಗೆ ಏಕನಾಥ್‌ ಶಿಂಧೆ ಅವರನ್ನು ಬೆಂಬಲಿಸುವ ನಿರ್ಣಯ ಮಾಡಿದೆ. ದೇವೇಂದ್ರ ಫಡ್ನವಿಸ್‌ ಅವರು ಕೂಡಾ ದೊಡ್ಡ ಮನಸು ಮಾಡಿ ಮಂತ್ರಿಮಂಡಲದಲ್ಲಿ ಸೇರಲು ನಿರ್ಧರಿಸಿದ್ದಾರೆ. ಇದು ಮಹಾರಾಷ್ಟ್ರದ ಜನತೆಯ ಬಗ್ಗೆ ಅವರಿಗೆ ಇರುವ ಪ್ರೀತಿಯನ್ನು ತೋರಿಸುತ್ತದೆ ಎಂದು ಜೆ.ಪಿ. ನಡ್ಡಾ ಹೇಳಿದ್ದಾರೆ.

Maha politics | ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ ಶಿಂಧೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Manish Sisodia: ಜಾಮೀನು ಅರ್ಜಿಯನ್ನು ವಿರೋಧಿಸಿದ ತನಿಖಾ ಸಂಸ್ಥೆ, “ಸಿಸೋಡಿಯಾ ಹಗರಣದ ಕಿಂಗ್​​ಪಿನ್. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ನೀಡಿದರೆ, ಅವರು ಸಾಕ್ಷ್ಯಗಳನ್ನು ತಿರುಚಬಹುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ವಾದ ಮಾಡಿತ್ತು.

VISTARANEWS.COM


on

Manish Sisodia
Koo

ನವದೆಹಲಿ: ಪ್ರಸ್ತುತ ರದ್ದುಪಡಿಸಲಾದ ದೆಹಲಿ ಮದ್ಯ ಅಬಕಾರಿ ನೀತಿ 2021-22 ರ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ದಾಖಲಿಸಿದ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನುದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 30 ರಂದು ವಜಾಗೊಳಿಸಿದೆ. ಕೇಂದ್ರ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಕೋರಿದ್ದರು. ಹೀಗಾಗಿ ಅವರು ಜೈಲಿನಲ್ಲೇ ಉಳಿಯುವಂತಾಗಿದೆ. ಅರವಿಂದ್ ಕೇಜ್ರಿವಾಲ್ ಕೂಡ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಹೀಗಾಗಿ ಇಬ್ಬರೂ ಇನ್ನಷ್ಟು ದಿನ ಜೈಲಿನಲ್ಲೇ ದಿನ ಕಳೆಯುಂತಾಗಿದೆ.

ಈ ಹಿಂದೆ ಕೆಳ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದವು. ಜಾಮೀನು ಅರ್ಜಿಯನ್ನು ವಿರೋಧಿಸಿದ ತನಿಖಾ ಸಂಸ್ಥೆ, “ಸಿಸೋಡಿಯಾ ಹಗರಣದ ಕಿಂಗ್​​ಪಿನ್. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ನೀಡಿದರೆ, ಅವರು ಸಾಕ್ಷ್ಯಗಳನ್ನು ತಿರುಚಬಹುದು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ವಾದ ಮಾಡಿತ್ತು.

ಸಿಸೋಡಿಯಾ ಫೆಬ್ರವರಿ 26, 2023 ರಿಂದ ಬಂಧನದಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸಿಬಿಐ ಮತ್ತು ಇಡಿ ಎರಡೂ ತನಿಖೆ ನಡೆಸುತ್ತಿವೆ. ಲಂಚಕ್ಕಾಗಿ ದೆಹಲಿ ಸರ್ಕಾರಿ ಅಧಿಕಾರಿಗಳು ಕೆಲವು ವ್ಯಾಪಾರಿಗಳಿಗೆ ಮದ್ಯದ ಪರವಾನಗಿ ನೀಡಿರುವ ಪ್ರಕರಣದಲ್ಲಿ ಸಿಸೊಡಿಯಾ ಶಾಮೀಲಾಗಿದ್ದಾರೆ ಎಂಬ ಆರೋಪಗಳಿವೆ. ಕೆಲವು ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಅಬಕಾರಿ ನೀತಿಯನ್ನು ತಿರುಚಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

ವಿಶೇಷವೆಂದರೆ, ವಿಚಾರಣಾ ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು ಇದು ಎರಡನೇ ಬಾರಿ. ಸಿಬಿಐ ಪ್ರಕರಣದಲ್ಲಿ ಅವರ ಮೊದಲ ಜಾಮೀನು ಅರ್ಜಿಯನ್ನು ಮಾರ್ಚ್ 31, 2023 ರಂದು ತಿರಸ್ಕರಿಸಲಾಗಿತ್ತು. ಏಪ್ರಿಲ್ 28 ರಂದು ವಿಚಾರಣಾ ನ್ಯಾಯಾಲಯವು ಇಡಿ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು.

ವಿಚಾರಣೆಗೆ ವೇಗ ಕೊಡುವಂತೆ ಸುಪ್ರೀಂ ಕೋರ್ಟ್​ ಹೇಳಿತ್ತು

ಬಳಿಕ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅದು ಅಕ್ಟೋಬರ್ 30, 2023 ರಂದು ಅವರಿಗೆ ಜಾಮೀನು ನಿರಾಕರಿಸಲಾಗಿತ್ತು. ಆದಾಗ್ಯೂ, ವಿಚಾರಣೆಯು ನಿಧಾನಗತಿಯಲ್ಲಿ ಮುಂದುವರಿದರೆ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಆ ಸಮಯದಲ್ಲಿ ಹೇಳಿತ್ತು.

ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದ್ದರೂ, ಸಿಸೋಡಿಯಾ ಅವರು ಈಗ ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂದು ಸಿಸಿಡಿಯಾ ಪರ ವಕೀಲರು ವಾದ ಮಾಡಿದ್ದರು.

ನಾವು ಫೆಬ್ರವರಿಯಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಪ್ರಕರಣವನ್ನು ನಾಲ್ಕು ಬಾರಿ ಮುಂದೂಡಲಾಗಿದೆ. ಅರ್ಜಿದಾರರು ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದಾರೆ ಎಂದು ವಕೀಲ ವಿವೇಕ್ ಜೈನ್ ವಾದಿಸಿದ್ದಾರೆ. ಏತನ್ಮಧ್ಯೆ, ವಿಚಾರಣೆಯ ವಿಳಂಬವು ಸಿಸೋಡಿಯಾ ಮತ್ತು ಇತರ ಸಹ ಆರೋಪಿಗಳಿಂದಾಗಿದೆಯೇ ಹೊರತು ತಮ್ಮಿಂದ ಅಲ್ಲ ಸಿಬಿಐ ಸಮರ್ಥಿಸಿಕೊಂಡಿವೆ.

ಕೆಲವು ವ್ಯಾಪಾರಿಗಳಿಗೆ ಅನುಕೂಲಕರವಾದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಸಿಸೋಡಿಯಾ ಪ್ರಮುಖ ವ್ಯಕ್ತಿಯಾಗಿದ್ದರು. ಪ್ರತಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಕಿಕ್​ಬ್ಯಾಕ್​ ಪಡೆದಿದೆ ಎಂದು ಎರಡೂ ಏಜೆನ್ಸಿಗಳು ವಾದಿಸಿವೆ. ಈ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಎಪಿ ನಾಯಕ ಸಂಜಯ್ ಸಿಂಗ್, ಎಎಪಿ ಸಂವಹನ ಮುಖ್ಯಸ್ಥ ವಿಜಯ್ ನಾಯರ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್​​ಎಸ್) ನಾಯಕಿ ಕೆ ಕವಿತಾ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್ ಮತ್ತು ಕವಿತಾ ಪ್ರಸ್ತುತ ಜೈಲಿನಲ್ಲಿದ್ದರೆ, ಸಂಜಯ್ ಸಿಂಗ್ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

Continue Reading

Lok Sabha Election 2024

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಮೈತ್ರಿ ಒಕ್ಕೂಟದ ತುಷ್ಟೀಕರಣ ನೀತಿ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಕರೆ ನೀಡಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಬಿಜೆಪಿಯ ಎಲ್ಲ ಅಭ್ಯರ್ಥಿಗಳಿಗೆ ಪತ್ರ ಬರೆದಿದ್ದು, ಎಸ್‌ಸಿ / ಎಸ್‌ಟಿ ಮತ್ತು ಒಬಿಸಿಯಿಂದ ಮುಸ್ಲಿಮರಿಗೆ ಮೀಸಲಾತಿ ನೀಡುವ ಕಾರ್ಯಸೂಚಿ, ಪಿತ್ರಾರ್ಜಿತ ಆಸ್ತಿ ತೆರಿಗೆಯ ಪ್ರಸ್ತಾವ ಸೇರಿದಂತೆ ಕಾಂಗ್ರೆಸ್‌ ಮತ್ತು ವಿಪಕ್ಷಗಳ ʼಇಂಡಿಯಾʼ ಒಕ್ಕೂಟಗಳ ಹಿಂಜರಿತ ರಾಜಕೀಯ ನೀತಿಯ ಬಗ್ಗೆ ಜನರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮತ್ತು ಗುಜರಾತ್‌ನ ಪೋರ್‌ ಬಂದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನ್ಸುಖ್ ಮಾಂಡವಿಯಾ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ಬರೆದಿರುವ ಪತ್ರವನ್ನು ಹಂಚಿಕೊಂಡು ಪ್ರಧಾನಿ ಅವರ ಪ್ರೇರಕ ಮಾತುಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. “ಈ ಸ್ಫೂರ್ತಿದಾಯಕ ಮಾತುಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. 10 ವರ್ಷಗಳಲ್ಲಿ ನೀವು ಮಾಡಿದ ಕೆಲಸಗಳು ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತಂದಿವೆ. ನಾವೆಲ್ಲರೂ ನಿಮ್ಮ ಸಲಹೆಯಂತೆ ಕಾರ್ಯ ನಿರ್ವಹಿಸುತ್ತೇವೆʼʼ ಎಂದು ಬರೆದುಕೊಂಡಿದ್ದಾರೆ.

ಪತ್ರದಲ್ಲಿ ಏನಿದೆ?

ʼʼಇದು ಸಾಮಾನ್ಯ ಚುನಾವಣೆಯಲ್ಲ ಮತ್ತು ಬಿಜೆಪಿಗೆ ನೀಡುವ ಪ್ರತಿಯೊಂದು ಮತವು ಬಲವಾದ ಸರ್ಕಾರವನ್ನು ರಚಿಸುವ ಮತ್ತು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳನ್ನು ವೇಗಗೊಳಿಸುತ್ತದೆʼʼ ಎಂದು ಪತ್ರದಲ್ಲಿ ಮೋದಿ ಹೇಳಿದ್ದಾರೆ. “ಈ ಚುನಾವಣೆ ನಮ್ಮ ವರ್ತಮಾನ ಮತ್ತು ಉಜ್ವಲ ಭವಿಷ್ಯವನ್ನು ನಿರ್ಮಿಸಲು ಎದುರಾಗಿರುವ ಸುವರ್ಣಾವಕಾಶ. ಐದಾರು ದಶಕಗಳ ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ಕುಟುಂಬ ಮತ್ತು ಕುಟುಂಬದ ಹಿರಿಯರು ಅನುಭವಿಸಿದ ಕಷ್ಟಗಳಿಂದ ಪರಿಹಾರ ಪಡೆಯಲು ಈ ಚುನಾವಣೆ ಒಂದು ಪ್ರಮುಖ ಅಸ್ತ್ರ ಎನಿಸಿಕೊಂಡಿದೆ. ಕಳೆದ ದಶಕದಲ್ಲಿ ಸಮಾಜದ ಪ್ರತಿಯೊಂದು ವರ್ಗದವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವ ಮೂಲಕ ದೇಶವಾಸಿಗಳ ಅನೇಕ ತೊಂದರೆಗಳನ್ನು ತೊಡೆದುಹಾಕಲಾಗಿದೆʼʼ ಎಂದು ಬರೆದಿದ್ದಾರೆ.

“ಇದಲ್ಲದೆ ಕಾಂಗ್ರೆಸ್ ಮತ್ತು ಅದರ ʼಇಂಡಿಯಾʼ ಮೈತ್ರಿಕೂಟದ ವಿಭಜಕ ಮತ್ತು ತಾರತಮ್ಯದ ಉದ್ದೇಶಗಳ ವಿರುದ್ಧ ಮತದಾರರಿಗೆ ಮಾಹಿತಿ ನೀಡುವಂತೆ ನಾನು ಕೇಳಿಕೊಳ್ಳುತ್ತೇನೆ. ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಾಂವಿಧಾನಿಕವಾಗಿದ್ದರೂ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ಮೂಲಕ ʼಇಂಡಿಯಾʼ ಒಕ್ಕೂಟ ತಮ್ಮ ಮತ ಬ್ಯಾಂಕ್‌ ಆದ ಮುಸ್ಲಿಮರಿಗೆ ಮೀಸಲಾತಿ ನೀಡಲು ಮುಂದಾಗಿದೆ. ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಸಿದುಕೊಂಡು ಇವರಿಗೆ ನೀಡಲು ಮುಂದಾಗಿದೆ. ಜತೆಗೆ ಕಾಂಗ್ರೆಸ್‌ ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಪ್ರಸ್ತಾವಿಸಿದೆ. ಇದನ್ನು ತಡೆಯಲು ದೇಶವು ಒಂದಾಗಬೇಕಾಗಿದೆʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ಪತ್ರವು ಆರೋಗ್ಯ ಸಲಹೆಯನ್ನೂ ಒಳಗೊಂಡಿದೆ. ʼʼಬೇಸಿಗೆಯ ಶಾಖವು ಎಲ್ಲರಿಗೂ ಸಮಸ್ಯೆಗಳನ್ನು ತಂದೊಡ್ಡಿದೆ. ಆದ್ದರಿಂದ ಮತದಾರರು ಬೆಳಗ್ಗೆಯೇ ಮತಗಟ್ಟೆಗೆ ತೆರಳಿ ಬಿಸಿಲಿನ ತಾಪ ಆರಂಭವಾಗುವ ಮುನ್ನ ಮತ ಚಲಾಯಿಸಬೇಕುʼʼ ಎಂದು ಮೋದಿ ಸಲಹೆ ನೀಡಿದ್ದಾರೆ. ಎಲ್ಲ ಪತ್ರಗಳು ವೈಯಕ್ತಿಕ ಉಲ್ಲೇಖವನ್ನೂ ಹೊಂದಿರುವುದು ವಿಶೇಷ. ಉದಾಹರಣೆಗೆ, ಮಾಂಡವಿಯಾ ಅವರನ್ನು ಉದ್ದೇಶಿಸಿ “ಸಣ್ಣ ಉದ್ಯಮಿಗಳಿಗಾಗಿ ಪಿಎಂ ಭಾರತೀಯ ಜನೌಷಧಿ ಕೇಂದ್ರವನ್ನು (PMBJAK) ಸ್ಥಾಪಿಸಲು ಮತ್ತು ಮೇಲ್ದರ್ಜೆಗೇರಿಸಲು ನೀವು ಮಾಡಿದ ಕೆಲಸ ಗಮನಾರ್ಹʼʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅತ್ಯಂತ ಚಿಕ್ಕ ವಯಸ್ಸಿನಲ್ಲಿ, ನೀವು ಭಾರತೀಯ ಜನತಾ ಯುವ ಮೋರ್ಚಾದ ನಾಯಕರಾದಿರಿ ಮತ್ತು ವಿವಿಧ ಸ್ಥಾನಗಳಲ್ಲಿ ಸಂಘಟನೆಗಾಗಿ ಕೆಲಸ ಮಾಡಿದ್ದೀರಿ. ಮಧ್ಯಮ ವರ್ಗದ ರೈತ ಕುಟುಂಬದಿಂದ ಬಂದ ನೀವು ನಿಮ್ಮ ಮತದಾರರೊಂದಿಗೆ ಸಂಪರ್ಕ ಹೊಂದಿದ್ದೀರಿ. ನೀವು ಕೆಲವು ವರ್ಷಗಳ ಹಿಂದೆ ನಿಮ್ಮ ಡಾಕ್ಟರೇಟ್ ಪೂರ್ಣಗೊಳಿಸಿದ್ದೀರಿ, ಇದು ಅನೇಕ ಜನರಿಗೆ ಸ್ಫೂರ್ತಿಯ ಮೂಲವಾಗಿದೆ” ಎಂದು ಪತ್ರದಲ್ಲಿ ಕೇಂದ್ರ ಸಚಿವರನ್ನು ಶ್ಲಾಘಿಸಲಾಗಿದೆ.

ಇದನ್ನೂ ಓದಿ: PM Narendra Modi: ಡೀಪ್‌ ಫೇಕ್‌ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ವಿಡಿಯೊ ಕಂಡರೆ ನೀವೇನು ಮಾಡಬೇಕು?

Continue Reading

ದೇಶ

Jammu Kashmir Flash Flood: ಜಮ್ಮ- ಕಾಶ್ಮೀರದಲ್ಲಿ ಭೂಕುಸಿತ, ಹಠಾತ್ ಪ್ರವಾಹ: 5 ಸಾವು

Jammu Kashmir Flash Flood: ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತಗಳು ಸಂಭವಿಸಿವೆ. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆಗಳಲ್ಲಿ ಕಳೆದ ಮೂರು ದಿನಗಳಿಂದ ಭೂಕುಸಿತವುಂಟಾಗುತ್ತಿದ್ದು, ರಸ್ತೆ ಮುಚ್ಚಲ್ಪಟ್ಟಿದೆ.

VISTARANEWS.COM


on

jammu kashmir flash flood
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ಸಂಭವಿಸಿದ ಹಠಾತ್‌ ಭೂಕುಸಿತ (Landslide) ಮತ್ತು ಪ್ರವಾಹದಲ್ಲಿ (Flash flood) ಐವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಲವಾರು ಮನೆಗಳಿಗೆ ಹಾನಿಯಾಗಿದ್ದು, ನೂರಾರು ನಿವಾಸಿಗಳು ತೊಂದರೆಗೀಡಾಗಿದ್ದಾರೆ.

ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತಗಳು ಸಂಭವಿಸಿವೆ. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆಗಳಲ್ಲಿ ಕಳೆದ ಮೂರು ದಿನಗಳಿಂದ ಭೂಕುಸಿತವುಂಟಾಗುತ್ತಿದ್ದು, ರಸ್ತೆ ಮುಚ್ಚಲ್ಪಟ್ಟಿದೆ.

ಕುಪ್ವಾರದಲ್ಲಿ ಪರಿಸ್ಥಿತಿ ಸುಧಾರಿಸಲು ಪ್ರಾರಂಭಿಸಿದೆ. ನೀರಿನ ಮಟ್ಟ ಕಡಿಮೆಯಾಗಿದೆ ಮತ್ತು ಜನರು ತಮ್ಮ ಹಾನಿಗೊಳಗಾದ ಮನೆಗಳಿಗೆ ಮರಳುತ್ತಿದ್ದಾರೆ. ನಿನ್ನೆಯ ದೃಶ್ಯಗಳಲ್ಲಿ ಕಂಡುಬರುವಂತೆ, ಹಠಾತ್ ಪ್ರವಾಹದಿಂದಾಗಿ ರಸ್ತೆಯ ಒಂದು ಭಾಗ ಕೊಚ್ಚಿಹೋಗಿದೆ. ಹಲವಾರು ಮನೆಗಳು ಮೊಣಕಾಲು ಆಳದ ನೀರಿನಲ್ಲಿ ಜಲಾವೃತವಾಗಿವೆ. ನದಿಗೆ ಮುಖ ಮಾಡಿರುವ ಮನೆಯ ಒಂದು ಭಾಗ ಕೊಚ್ಚಿ ಹೋಗಿದೆ. ನಿನ್ನೆ ಅಧಿಕಾರಿಗಳು ಕುಪ್ವಾರದ ಪೊಹ್ರು ನಲ್ಲಗೆ ಅಪಾಯದ ಎಚ್ಚರಿಕೆಯನ್ನು ನೀಡಿದ್ದಾರೆ.

ಸಮಯೋಚಿತ ಸ್ಥಳಾಂತರ ಕಾರ್ಯಾಚರಣೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜೀವಗಳನ್ನು ಉಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಆಡಳಿತ ಹೇಳಿದೆ. ಹಂದ್ವಾರದ ಹೆಚ್ಚುವರಿ ಜಿಲ್ಲಾಧಿಕಾರಿ ಅಜೀಜ್ ಅಹ್ಮದ್, “ನಾವು ನಷ್ಟವನ್ನು ಲೆಕ್ಕ ಹಾಕುತ್ತಿದ್ದೇವೆ. ಜೀವಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದೆ” ಎಂದು ಹೇಳಿದರು.

ಪ್ರವಾಹವು ಕುಪ್ವಾರಾ ಜಿಲ್ಲೆಯಲ್ಲಿ ಶುಮ್ರಿಯಾಲ್ ಸೇತುವೆ, ಖುಮ್ರಿಯಾಲ್ ಸೇತುವೆ, ಶತ್ಮುಕಮ್ ಸೇತುವೆ, ಸೋಹಿಪೋರಾ-ಹಯ್ಹಮಾ ಸೇತುವೆ, ಫರ್ಕ್ಯಾನ್ ಸೇತುವೆ, ಕುಪ್ವಾರದಲ್ಲಿರುವ ಎರಡು ಗ್ರಾಮೀಣಾಭಿವೃದ್ಧಿ ಇಲಾಖೆ ಕಟ್ಟಡಗಳು ಮತ್ತು ಸಹಾಯಕ ನಿರ್ದೇಶಕ ಕರಕುಶಲ ಕಚೇರಿ ಕಟ್ಟಡ ಸೇರಿದಂತೆ ಕೆಲವು ಪ್ರಮುಖ ಮೂಲಸೌಕರ್ಯಗಳನ್ನು ಹಾನಿಗೊಳಿಸಿದೆ. ಡೋಬನ್ ಕಚಮಾ ಅಣೆಕಟ್ಟಿನಲ್ಲಿ ಸೋರಿಕೆ ಮತ್ತು ಒಡೆತದ ಕಾರಣ ಶುಮ್ರ್ಯಾಲ್-ಗುಂಡಜಾಂಗರ್ ರಸ್ತೆ ಕಡಿತಗೊಂಡಿದೆ.

“ಪ್ರವಾಹದಲ್ಲಿ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ, ನಮಗೆ ಆಹಾರ ಮತ್ತು ಬಟ್ಟೆ ಬೇಕು” ಎಂದು ಸ್ಥಳೀಯರು ಹೇಳಿದ್ದಾರೆ. ನಿರಂತರ ಮಳೆಯಿಂದಾಗಿ ಶ್ರೀನಗರ-ಜಮ್ಮು ಹೆದ್ದಾರಿಯ ಕೆಲವು ಭಾಗಗಳು ನೀರಿನಿಂದ ಮುಳುಗಿವೆ. ಶ್ರೀನಗರದ ಹಲವಾರು ಪ್ರದೇಶಗಳು ಮತ್ತು ಕಾಶ್ಮೀರ ಕಣಿವೆಯ ಇತರ ತಗ್ಗು ಪ್ರದೇಶಗಳು ಜಲಾವೃತವಾದವು.

ಕಳೆದ ಮೂರು ದಿನಗಳಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾಶ್ಮೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಶ್ಮೀರ ವಿಶ್ವವಿದ್ಯಾಲಯವು ಇಂದು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.

ಇದನ್ನೂ ಓದಿ: Sikkim Flash Flood: ದಿಢೀರ್‌ ಪ್ರವಾಹದಲ್ಲಿ ಮೃತಪಟ್ಟ 19 ಮಂದಿ ಪೈಕಿ 6 ಯೋಧರು

Continue Reading

ದೇಶ

‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Love Jihad: ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆ ಪ್ರಿಯಕರ ಜುನೈದ್‌ ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Love Jihad
Koo

ಮಧ್ಯಪ್ರದೇಶ: ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆ(Love Jihad)ಯಾಗಿದ್ದು, ಆಕೆ ಪ್ರಿಯಕರ ಜುನೈದ್‌(Junaid) ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶ(Madhyapradesh)ದ ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣ(Social Media)ದಲ್ಲಿ ವಿಡಿಯೋ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಮದುವೆಗೆ ನಿರಾಕರಿಸಿದ್ದಕ್ಕೆ ಸೂಸೈಡ್‌

ಇನ್ನು ಆರೋಪಿ ಜುನೈದ್‌ ಮದುವೆಗೆ ನಿರಾಕರಿಸಿದಕ್ಕೆ ಬೇಸರಗೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಆದಿಕಾರಿ ಅಮಿತ್‌ ಕುಮಾರ್‌ ಮಿಶ್ರಾ, 24 ವರ್ಷದ ಯುವತಿ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದೆವು. ಆಕೆ ತನ್ನ ಚೂಡಿದಾರ್‌ ಶಾಲಿನಿಂದ ಕುತ್ತಿಗೆ ಬಿಗಿದು ಸಾವಿಗೆ ಶರಣಾಗಿದ್ದಾಳೆ. ಇನ್ನು ಈಕೆ ಎರಡು ದಿನಗಳಿಂದ ಜುನೈದ್‌ ಎಂಬಾತನ ಜತೆ ಹೊಟೇಲ್‌ನಲ್ಲಿ ತಂಗಿದ್ದಳು ಎಂಬ ಮಾಹಿತಿ ಇದೆ.

ಇದನ್ನೂ ಓದಿ:America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

ಯುವತಿ ಮತ್ತು ಆರೋಪಿ ಜುನೈದ್‌ ಇಂಧೋರ್‌ನ ಮಹುಗಾವ್‌ ಜಿಲ್ಲೆಯವರಾಗಿದ್ದು, ಇಬ್ಬರೂ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಕಾಲೇಜಿನಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರುಮಾಡಿದ್ದು, ಕಳೆದ ಐದು ವರ್ಷದಿಂದ ರಿಲೇಶನ್‌ಶಿಪ್‌ನಲ್ಲಿದ್ದರು. ಯುವತಿ ತನ್ನನ್ನು ಮದುವೆ ಆಗುವಂತೆ ಜುನೈದ್‌ನನ್ನು ಆಗಾಗ ಒತ್ತಾಯಿಸುತ್ತಿದ್ದಳು. ಆದರೆ ಆತ ಮದುವೆಗೆ ತಯಾರಿರಲಿಲ್ಲ. ನೆಪ ಹೇಳಿಕೊಂಡು ಮದುವೆಯನ್ನು ಮುಂದಕ್ಕೆ ತಳ್ಳುತ್ತಲೇ ಇದ್ದ. ಇದೇ ಕಾರಣಕ್ಕೆ ಬೇಸರಗೊಂಡಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇವರಿಬ್ಬರ ಪ್ರೀತಿಯ ವಿಷಯ ಮನೆಯವರಿಗೂ ತಿಳಿದಿತ್ತು. ಇದೀಗ ನಾಪತ್ತೆಯಾಗಿರುವ ಜುನೈದ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Continue Reading
Advertisement
KL Rahul
ಕ್ರೀಡೆ6 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್6 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ9 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ29 mins ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ30 mins ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ36 mins ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
ರಾಜಕೀಯ40 mins ago

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Manish Sisodia
ಪ್ರಮುಖ ಸುದ್ದಿ47 mins ago

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Mohammed Shami
ಕ್ರೀಡೆ47 mins ago

Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

Lok Sabha Election 2024
Lok Sabha Election 202457 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌