Maharashtra Politics: ಏಕ್‌ನಾಥ್‌ ಶಿಂಧೆಗೆ ಮತ್ತಷ್ಟು ಬಲ; ಅಸ್ಸಾಂಗೆ ತೆರಳಿದ ಇನ್ನೂ ಮೂವರು ಶಾಸಕರು - Vistara News

ದೇಶ

Maharashtra Politics: ಏಕ್‌ನಾಥ್‌ ಶಿಂಧೆಗೆ ಮತ್ತಷ್ಟು ಬಲ; ಅಸ್ಸಾಂಗೆ ತೆರಳಿದ ಇನ್ನೂ ಮೂವರು ಶಾಸಕರು

Eknath Shinde: ಜೂ.20ರಿಂದ ಮಹಾರಾಷ್ಟ್ರದಲ್ಲಿ ರಾಜಕೀಯ ಪ್ರಹಸನ ಶುರುವಾಗಿದೆ. ಶಿವಸೇನೆ ನಾಯಕ ಏಕನಾಥ್‌ ಶಿಂಧೆ ತಮ್ಮ ಬೆಂಬಲಿಗರೊಂದಿಗೆ ಗುಜರಾತ್‌ಗೆ ತೆರಳಿ, ಈಗ ಅಲ್ಲಿಂದ ಅಸ್ಸಾಂಗೆ ಬಂದು ನೆಲೆಸಿದ್ದಾರೆ.

VISTARANEWS.COM


on

Eknath Shinde in hotel
ಏಕನಾಥ್‌ ಶಿಂಧೆ ಬಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಸರ್ಕಾರದ ವಿರುದ್ಧ ಬಂಡಾಯವೆದ್ದು ಸುಮಾರು 46 ಶಾಸಕರೊಂದಿಗೆ ಅಸ್ಸಾಂನ ಗುವಾಹಟಿಯ ಹೋಟೆಲ್‌ ಸೇರಿರುವ ಏಕನಾಥ್‌ ಶಿಂಧೆಗೆ (Eknath Shinde) ಇನ್ನೂ ಮೂವರು ಶಾಸಕರ ಬೆಂಬಲ ಸಿಕ್ಕಿದೆ. ಇಂದು ಬೆಳಗ್ಗೆ ಶಿವಸೇನೆಯ ಮೂವರು ಶಾಸಕರು ಹೋಟೆಲ್‌ಗೆ ತೆರಳಿ ಶಿಂಧೆ ಬಣ ಸೇರಿಕೊಂಡಿದ್ದಾರೆ. ಈ ಶಿಂಧೆಗೇ ಮುಖ್ಯಮಂತ್ರಿ ಹುದ್ದೆ ಕೊಡುವಂತೆ ಶಿವಸೇನೆಯೆ ಮೈತ್ರಿ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಸಲಹೆ ನೀಡಿವೆ. ಆದರೆ ಶಿಂಧೆ ಈ ಮೈತ್ರಿಯನ್ನೇ ಒಪ್ಪುತ್ತಿಲ್ಲ. ಇದೊಂದು ಅಸಹಜ ಮೈತ್ರಿ, ಶಿವಸೇನೆ ಕಾಂಗ್ರೆಸ್‌-ಎನ್‌ಸಿಪಿಯಿಂದ ಹೊರಬೀಳಬೇಕು ಎಂದು ಆಗ್ರಹಿಸಿದ್ದಾರೆ.

ಒಂದೆಡೆ ಶಿವಸೇನೆ ಶಾಸಕರು ಬಂಡಾಯ ಎದ್ದಿದ್ದರೆ, ಇನ್ನೊಂದೆಡೆ ಶಿವಸೇನೆಯ ಹಲವು ಸಂಸದರೂ ಉದ್ಧವ್‌ ಠಾಕ್ರೆ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಇವರೆಲ್ಲ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದೂ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಇನ್ನು ಬಂಡಾಯ ಎದ್ದ ಏಕನಾಥ್‌ ಶಿಂಧೆಗೆ ಕೇವಲ ತಮ್ಮ ಪಕ್ಷದ ಶಾಸಕರಷ್ಟೇ ಅಲ್ಲ, ಸ್ವತಂತ್ರ ಶಾಸಕರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ಉದ್ಧವ್‌ ಠಾಕ್ರೆ ಈಗಾಗಲೇ ತಮ್ಮ ಸೋಲನ್ನು ಅರ್ಧದಷ್ಟು ಒಪ್ಪಿಕೊಂಡಿದ್ದು, ಅವರು ನಿನ್ನೆ ರಾತ್ರಿಯೇ ತಮ್ಮ ಅಧಿಕೃತ ನಿವಾಸ ವರ್ಷಾವನ್ನು ತೊರೆದು, ಖಾಸಗಿ ನಿವಾಸ ಸೇರಿಕೊಂಡಿದ್ದಾರೆ. ಯಾವಾಗ ಬೇಕಾದರೂ ರಾಜೀನಾಮೆ ನೀಡುವುದಾಗಿಯೂ ಘೋಷಿಸಿದ್ದಾರೆ.

ನನಗೇನೂ ಗೊತ್ತಿಲ್ಲ ಎನ್ನುತ್ತಿದೆ ಬಿಜೆಪಿ
ಶಿವಸೇನೆಯಲ್ಲಿ ಆಗುತ್ತಿರುವ ಈ ಬೆಳವಣಿಗೆಗೂ ನಮಗೂ ಸಂಬಂಧವೇ ಇಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ. ಹೀಗೆ ಶಾಸಕರೆಲ್ಲ ಬಂಡಾಯ ಎದ್ದು ಹೋಗಿರುವುದು ಶಿವಸೇನೆಯ ಆಂತರಿಕ ವಿಚಾರ. ಇದರಲ್ಲಿ ನಮ್ಮ ಪಾತ್ರ ಸ್ವಲ್ಪವೂ ಇಲ್ಲ. ಬಂಡಾಯ ಎದ್ದಿರುವ ಏಕನಾಥ್‌ ಶಿಂಧೆ ಜತೆ ನಾವು ಇದುವರೆಗೂ ಮಾತನಾಡಿಲ್ಲ. ನಾವಂತೂ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲು ಹೋಗುತ್ತಿಲ್ಲ ಎಂದು ಬಿಜೆಪಿ ನಾಯಕ, ಕೇಂದ್ರ ಸಚಿವ ರಾವ್‌ಸಾಹೇಬ್‌ ಪಾಟೀಲ್‌ ದಾನ್ವೆ ತಿಳಿಸಿದ್ದಾರೆ. ಇವರು ನಿನ್ನೆ ದೇವೇಂದ್ರ ಫಡ್ನವೀಸ್‌ರನ್ನು ಭೇಟಿಯಾಗಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಮಹಾ ಅʼಗಾಡಿʼ ಸರ್ಕಾರ ಪಂಕ್ಚರ್‌?; ಶುರುವಾದಂತಿದೆ ಆಪರೇಶನ್‌ ಕಮಲ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Swati Maliwal: ವೈಭವ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ಇವರು ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಸ್ವಾತಿ ಮಾಲಿವಾಲ್‌ ಕರೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ರಾಜ್ಯಸಭೆ ಆಪ್‌ ಸದಸ್ಯೆ, ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಾಲಿವಾಲ್‌ (Swati Maliwal) ಅವರ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ನಿವಾಸದಲ್ಲಿಯೇ ಹಲ್ಲೆ ನಡೆದಿದೆ ಎಂದು ದೆಹಲಿ ಪೊಲೀಸರು (Delhi Police) ತಿಳಿಸಿದ್ದಾರೆ. “ದೆಹಲಿ ಮುಖ್ಯಮಂತ್ರಿ ನಿವಾಸದ ಸಿವಿಲ್‌ ಲೈನ್‌ನಿಂದಲೇ ಕರೆ ಬಂದಿದ್ದು, ಸ್ವಾತಿ ಮಾಲಿವಾಲ್‌ ಅವರ ಹೆಸರಿನಲ್ಲಿ ಹಲ್ಲೆ ಕುರಿತು ಮಾಹಿತಿ ನೀಡಲಾಗಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ಬೆಳಗ್ಗೆ 9.34ರ ಸುಮಾರಿಗೆ ಪಿಎಸ್‌ ಸಿವಿಲ್‌ ಲೈನ್‌ಗಳಿಂದ ಮೊದಲ ಕರೆ ಬಂತು. ಮಹಿಳೆಯೊಬ್ಬರು ಕರೆ ಮಾಡಿ, ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದರು. ಇದಾದ ಬಳಿಕ, ಸಂಸದೆ ಮಾಲಿವಾಲ್‌ ಅವರು ಸಿವಿಲ್‌ ಲೈನ್‌ಗೆ ಬಂದರು. ನಾನು ದೂರು ನೀಡುತ್ತೇನೆ ಎಂಬುದಾಗಿ ತಿಳಿಸಿದರು. ನಂತರ ಪೊಲೀಸರ ತಂಡವು ದೆಹಲಿ ಸಿಎಂ ನಿವಾಸದ ಬಳಿ ತೆರಳಿ ಸ್ವಾತಿ ಮಾಲಿವಾಲ್‌ ಅವರನ್ನು ಪೊಲೀಸ್‌ ಸ್ಟೇಷನ್‌ಗೆ ಕರೆದುಕೊಂಡು ಹೋದರು. ಶಿಷ್ಟಾಚಾರದ ಪ್ರಕಾರ ದೆಹಲಿ ಪೊಲೀಸರು ಅನುಮತಿ ಇಲ್ಲದೆ ದೆಹಲಿ ಸಿಎಂ ನಿವಾಸದೊಳಗೆ ಹೋಗುವಂತಿರಲಿಲ್ಲ. ಅದಕ್ಕಾಗಿ ಅವರನ್ನು ಠಾಣೆಗೆ ಕರೆದುಕೊಂಡು ಹೋಗಲಾಯಿತು” ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬೆಳಗ್ಗೆ ಎರಡು ಕರೆಗಳು ಬಂದಿದ್ದು, 9.30ರ ಸುಮಾರಿಗೆ ಬಂದ ಕರೆಯಲ್ಲಿ ದೆಹಲಿ ಸಿಎಂ ಅವರ ಆಪ್ತ ವೈಭವ್‌ ಕುಮಾರ್‌ ಅವರಿಂದಲೇ ಹಲ್ಲೆ ನಡೆಸಲಾಗಿದೆ” ಎಂಬ ಮಾಹಿತಿ ನೀಡಲಾಯಿತು ಎಂದಿದ್ದಾರೆ. ಆದಾಗ್ಯೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವೈಭವ್‌ ಕುಮಾರ್‌ ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ಇವರು ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಸ್ವಾತಿ ಮಾಲಿವಾಲ್‌ ಕರೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ವಾಗ್ದಾಳಿ

ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಾಗ್ದಾಳಿ ನಡೆಸಿದೆ. “ಆಮ್‌ ಆದ್ಮಿ ಪಕ್ಷದಲ್ಲಿ ನಾರಿ ಶಕ್ತಿಯು ಸುರಕ್ಷಿತವಾಗಿಲ್ಲ. ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆಗೇ ದೆಹಲಿ ಸಿಎಂ ನಿವಾಸದಲ್ಲಿ ರಕ್ಷಣೆ ಇಲ್ಲದಿದ್ದರೆ, ಅವರ ಮೇಲೆ ಹಲ್ಲೆ ನಡೆಯುತ್ತದೆ ಎಂದಾದರೆ, ಸಾಮಾನ್ಯ ಜನರ ಪಾಡೇನು? ಇದರಿಂದಾಗಿ ಆಮ್‌ ಆದ್ಮಿ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಬಯಲಾಗಿದೆ” ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಟೀಕಿಸಿದ್ದಾರೆ. ಆದಾಗ್ಯೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸ್ವಾತಿ ಮಾಲಿವಾಲ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Swati Maliwal: ತಂದೆಯಿಂದಲೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಹೇಳಿಕೆ

Continue Reading

ದೇಶ

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

Madhavi Latha:ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

VISTARANEWS.COM


on

Madhavi Latha
Koo

ಹೈದರಾಬಾದ್‌: ಲೋಕಸಭಾ ಚುನಾವಣೆ(Lok Sabha Election 2024)ಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ. ಈ ನಡುವೆ ಕೆಲವೊಂದು ಕಡೆ ಅಭ್ಯರ್ಥಿಗಳಿಂದ ಎಡವಟ್ಟುಗಳೂ ನಡೆದಿವೆ. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ(Madhavi Latha) ಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌(Viral Video) ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷ(AIMIM) ಮುಖಂಡ ಅಸಾದುದ್ದೀನ್‌ ಓವೈಸಿ(Asaduddin Owaisi) ಚುನಾವಣಾ ಆಯೋಗಕ್ಕೆ (Election Commission of India) ದೂರು ನೀಡಿದ್ದಾರೆ.

ಘಟನೆ ವಿವರ:

ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಕಾದು ಕುಳಿತಿದ್ದ ಮುಸ್ಲಿಂ ಮಹಿಳೆಯ ಬಳಿ ಬಂದ ಲತಾ, ಮುಖಕ್ಕೆ ಧರಿಸಿದ್ದ ಹಿಜಾಬ್‌ ತೆಗೆಯುವಂತೆ ಹೇಳಿ ಅವರ ಗುತುತಿನ ಚೀಟಿ ಪರಿಶೀಲನೆ ಮಾಡಿದರು. ಅದೂ ಅಲ್ಲದೇ ಸರಿಯಾದ ರೀತಿಯಲ್ಲಿ ಪರಿಶೀಲನೆ ನಡೆದ ಬಳಿಕಷ್ಟೇ ಮತದಾನಕ್ಕೆ ಅವಕಾಶ ಮಾಡಿಕೊಡುವಂತೆ ಅಲ್ಲಿನ ಅಧಿಕಾರಿಗಳಿಗೆ ಆಕೆ ಸೂಚಿಸಿದ್ದಾರೆ. ಇನ್ನು ಇದೇ ವೇಳೆ ಮತಪಟ್ಟಿಯಲ್ಲಿ ಮತದಾರರ ಹೆಸರು ಮಿಸ್‌ ಆಗಿವೆ ಎಂದು ಹೇಳಿದ್ದಾರೆ.

ಮಾಧವಿ ಲತಾ ಅವರು ವಿವಾದಕ್ಕೀಡಾಗುತ್ತಿರುವುದು ಇದೇ ಮೊದಲೇನಲ್ಲ. ಕೆಲ ದಿನಗಳ ಹಿಂದೆ ಹೈದರಾಬಾದ್ ನಲ್ಲಿ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿರುವ ಸಿದ್ದಿಯಂಬರ್ ಬಜಾರ್ ಮಸೀದಿಯತ್ತ ಮಾಧವಿ ಲತಾ ಅವರು ಬಾಣ ಬಿಟ್ಟಂತೆ ಸನ್ನೆ ಮಾಡುವ ಮೂಲಕ ಸುದ್ದಿಯಾಗಿದ್ದರು.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಮಾಧವಿ ಲತಾ ಅವರು ಕೇಸರಿ ಶಾಲು ಧರಿಸಿ ವಾಹನವೊಂದರ ಮೇಲೆ ನಿಂತು ಮಸೀದಿಯತ್ತ ಬಾಣ ಬಿಟ್ಟಂತೆ ಸನ್ನೆ ಮಾಡಿರುವುದು ಮತ್ತು ಸುತ್ತಲು ಕೇಸರಿ ಧ್ವಜ ಹಿಡಿದು ನಿಂತಿದ್ದ ನೂರಾರು ಜನರು ಚಪ್ಪಾಳೆ ತಟ್ಟಿ ಹರ್ಷೋದ್ಘಾರ ಮೊಳಗಿಸಿದ್ದು ವೈರಲ್ ವಿಡಿಯೋದಲ್ಲಿತ್ತು.

ಇದನ್ನೂ ಓದಿ: Viral Video: ಸಾಲಿನಲ್ಲಿ ಬನ್ನಿ ಅಂದಿದ್ದೇ ತಪ್ಪಾಯ್ತಾ? ಮತದಾರನಿಗೆ MLA ಕಪಾಳಮೋಕ್ಷ

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಲೇ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಸ್ಪಷ್ಟನೆ ನೀಡಿದ್ದು, ‘ತಪ್ಪು ಭಾವನೆ ಮೂಡಿಸಲು ನನ್ನ ವಿಡಿಯೋವೊಂದನ್ನು ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ಅಪೂರ್ಣ ವಿಡಿಯೋ ಎಂಬುವುದನ್ನು ನಾನು ಸ್ಪಷ್ಟಪಡಿಸಲು ಇಚ್ಚಿಸುತ್ತೇನೆ. ಈ ವಿಡಿಯೋದಿಂದ ಯಾರ ಭಾವನೆಗಾದರು ಧಕ್ಕೆಯಾಗಿದ್ದರೆ, ನಾನು ಎಲ್ಲರನ್ನು ಗೌರವಿಸುವವಳಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

Continue Reading

ಪ್ರಮುಖ ಸುದ್ದಿ

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

VISTARANEWS.COM


on

pm Narendra Modi
Koo

ಹೊಸದಿಲ್ಲಿ: “ಪಾಕಿಸ್ತಾನ (Pakistan) ಬಳೆ (Bangals) ತೊಡದಿದ್ದರೆ ಅದನ್ನು ತೊಡುವಂತೆ ನಾವು ಮಾಡುತ್ತೇವೆ” ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಇತ್ತೀಚೆಗೆ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ (Farooq Abdullah) ಹಾಗೂ ಕಾಂಗ್ರೆಸ್‌ ಮುಖಂಡ ಮಣಿಶಂಕರ ಅಯ್ಯರ್‌ (Mani Shankar Aiyar) ಆಡಿರುವ ಮಾತುಗಳಿಗೆ ಪ್ರತಿಯಾಗಿ ಅವರು ಹೀಗೆಂದಿದ್ದಾರೆ.

ಫಾರೂಕ್ ಅಬ್ದುಲ್ಲಾ ಮತ್ತು ಮಣಿಶಂಕರ್ ಅಯ್ಯರ್ ಮಾಡಿದ ಟೀಕೆಗಳ ಬಗ್ಗೆ ತೀವ್ರ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಆರ್ಥಿಕ ಕುಸಿತದಿಂದ ತತ್ತರಿಸಿರುವ ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ ಭಾರತವು ಅದನ್ನು ಕೊಡುತ್ತದೆ ಎಂದು ಲೇವಡಿ ಮಾಡಿದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (POK) ಹಿಂಪಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಡಿದ ಶಪಥಕ್ಕೆ ಪ್ರತಿಕ್ರಿಯಿದ್ದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, “ನೆರೆಯ ದೇಶವು ಬಳೆಗಳನ್ನು ಧರಿಸಿಲ್ಲ ಮತ್ತು ಭಾರತಕ್ಕೆ ಹಾನಿ ಮಾಡುವ ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದು ಹೇಳಿದ್ದರು. ಮಣಿಶಂಕರ್ ಅಯ್ಯರ್ ಕೂಡ ಇತ್ತೀಚೆಗೆ ಒಂದು ಹೇಳಿಕೆ ನೀಡಿ, “ಭಾರತ ಸರ್ಕಾರ ಪಾಕಿಸ್ತಾನವನ್ನು ಗೌರವಿಸಬೇಕು. ಏಕೆಂದರೆ ಅದು ಪರಮಾಣು ಬಾಂಬ್‌ಗಳನ್ನು ಹೊಂದಿದೆ” ಎಂದಿದ್ದರು. ಈ ವೀಡಿಯೊ ಕಳೆದ ವಾರ ವೈರಲ್ ಆಗಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಪಾಕಿಸ್ತಾನ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. “ಪಾಕಿಸ್ತಾನ ಬಳೆಗಳನ್ನು ಧರಿಸದಿದ್ದರೆ, ನಾವು ಅವುಗಳನ್ನು ಕೊಡಿಸುತ್ತೇವೆ. ಅವರ ಬಳಿ ಬಳೆಗಳಿಲ್ಲ, ಅವರ ಬಳಿ ವಿದ್ಯುತ್ ಇಲ್ಲ, ಈಗ ಅವರಿಗೆ ಬಳೆಗಳ ಕೊರತೆಯಿದೆ ಎಂದು ನಮಗೆ ತಿಳಿದಿದೆ” ಎಂದು ಬಿಹಾರದ ಮುಜಾಫರ್‌ಪುರದಲ್ಲಿ ಪ್ರಧಾನಿ ಮೋದಿ ಅಬ್ದುಲ್ಲಾ ಅಥವಾ ಅಯ್ಯರ್ ಹೆಸರನ್ನು ಉಲ್ಲೇಖಿಸದೆ ಹೇಳಿದರು.

ಅಯ್ಯರ್‌ ಮಾತಿಗೆ ಪ್ರತಿಕ್ರಿಯಿಸಿದ ಮೋದಿ, “ಕಾಂಗ್ರೆಸ್ ದೇಶದ ಜನರನ್ನು ಬೆದರಿಸಲು ಪ್ರಯತ್ನಿಸುತ್ತಿದೆ” ಎಂದು ಕಳೆದ ವಾರ ಹೇಳಿದ್ದರು. ಇಂತಹ ದುರ್ಬಲ ಧೋರಣೆ ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಗೆ ಉತ್ತೇಜನ ನೀಡಿತ್ತು. ಭಾರತದ ವಿಚ್ಛೇದಿತ ನೆರೆಯ ದೇಶವು ತನ್ನ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದೆ. ಆದರೆ ಅವುಗಳ ಕಳಪೆ ಗುಣಮಟ್ಟದ ಕಾರಣ ಯಾರೂ ಆಸಕ್ತಿ ವಹಿಸುತ್ತಿಲ್ಲ ಎಂದು ಹೇಳಿದರು.

ಕಳೆದ 10 ವರ್ಷಗಳಲ್ಲಿ ತಮ್ಮ ಸರ್ಕಾರ ₹ 2200 ಕೋಟಿ ಅಕ್ರಮ ಹಣವನ್ನು ವಶಪಡಿಸಿಕೊಂಡಿದೆ. ಆರ್‌ಜೆಡಿ ಮತ್ತು ಕಾಂಗ್ರೆಸ್ ಬಿಹಾರದ ಜನರ ಕಲ್ಯಾಣಕ್ಕಿಂತ ತಮ್ಮ ಮತ ಬ್ಯಾಂಕ್‌ಗೆ ಆದ್ಯತೆ ನೀಡುತ್ತವೆ. ಆರ್‌ಜೆಡಿ ರಾಜ್ಯಕ್ಕೆ ಜಂಗಲ್ ರಾಜ್ ತಂದಿದೆ ಎಂದು ಮೋದಿ ಆರೋಪಿಸಿದರು.

ಲಾಲು ಪ್ರಸಾದ್ ಯಾದವ್ ಅವರ “ಮುಸ್ಲಿಮರು ಮೀಸಲಾತಿ ಪಡೆಯಬೇಕು” ಎಂಬ ಹೇಳಿಕೆಯನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಆರ್‌ಜೆಡಿ ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗದವರಿಗೆ ಸಂವಿಧಾನದಿಂದ ಒದಗಿಸಿದ ಮೀಸಲಾತಿಯನ್ನು ಕಿತ್ತುಕೊಳ್ಳಲಿವೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಆರ್‌ಜೆಡಿ ನಾಯಕರು ತಮ್ಮ ಸ್ವಂತ ಮಕ್ಕಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Continue Reading

ಪ್ರಮುಖ ಸುದ್ದಿ

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Karnataka Politics: ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

VISTARANEWS.COM


on

karnataka politics eknath shinde
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್ (Karnataka Congress) ಸರ್ಕಾರದ ಪತನಕ್ಕೆ (Karnataka politics) ಸಮಯ ಸನ್ನಿಹಿತವಾಗಿದೆ. ಈ ಸಂದರ್ಭದಲ್ಲಿ ತನ್ನ ನೆರವನ್ನು ರಾಜ್ಯದ ಬಿಜೆಪಿ (BJP) ನಾಯಕರು ಕೋರಿದ್ದಾರೆ ಎಂಬ ಸುಳಿವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra CM Eknath Shinde) ಬಿಟ್ಟುಕೊಟ್ಟಿದ್ದಾರೆ. ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಮಾತನಾಡಿ ಅವರು ಈ ಸೂಚನೆ ನೀಡಿದ್ದಾರೆ.

ಅತ್ತ ಬಿಜೆಪಿ ನಾಯಕರಿಂದಲೂ ಪದೇ ಪದೆ ಸರ್ಕಾರ ಬೀಳಿಸುವ ಕುರಿತ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸಿಎಂ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರದ ಸತಾರಾದಲ್ಲಿ ನಡೆದ ಒಂದು ಸಭೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಅವರು ಮಾತನಾಡುತ್ತಿದ್ದರು. “ಕರ್ನಾಟಕ ಸರ್ಕಾರ ಬೀಳುವುದು ಖಚಿತ” ಎಂದು ಏಕನಾಥ ಶಿಂಧೆ ಹೇಳಿದ್ದಾರೆ. “ಈ ಕುರಿತು ನನ್ನ‌ ಅನುಭವ ಬೇಕು ಅಂತ ಹೇಳಿದ್ದಾರೆ” ಎಂದು ಶಿಂಧೆ ತಿಳಿಸಿದ್ದಾರೆ.

ರಾಜ್ಯದಲ್ಲಿ ನಡೆದ ಒಂದು ಸಭೆಯಲ್ಲಿ ಚರ್ಚೆಯಾದ ಗುಟ್ಟನ್ನು ಅವರು ಈ ಮೂಲಕ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ. “ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ ಹೋಗಿದ್ದೆ. ಕರ್ನಾಟಕದಲ್ಲಿಯೂ ʼಆಪರೇಶನ್‌ ನಾಥʼ ನಡೆಸುವುದಿದೆ ಎಂದು ಅಲ್ಲಿನ ನಾಯಕರು ಹೇಳಿದರು. ಹಾಗೆಂದರೇನು ಎಂದು ವಿಚಾರಿಸಿದಾಗ, ಮಹಾರಾಷ್ಟ್ರದಲ್ಲಿ ಹಿಂದಿನ ಸರ್ಕಾರ ಪತನ ಮಾಡಿದಂತೆ ಇಲ್ಲಿಯೂ ಮಾಡುವುದಿದೆ ಎಂದಿದ್ದರು. ಅದಕ್ಕೆ ನಿಮ್ಮ ಅನುಭವ ಅಗತ್ಯ ಎಂದಿದ್ದರುʼʼ ಎಂದು ಶಿಂಧೆ ಹೇಳಿದ್ದಾರೆ. ಇದಕ್ಕಾಗಿ ಚುನಾವಣೆ ಮುಗಿದ ಮೇಲೆ ಮತ್ತೆ ನಾನು ಕರ್ನಾಟಕಕ್ಕೆ ಬರುತ್ತೇನೆ ಎಂದಿದ್ದೇನೆ ಎಂದವರು ಹೇಳಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡುತ್ತ ರಾಜ್ಯ ವಿಪಕ್ಷ ನಾಯಕ ಆರ್. ಆಶೋಕ್ ಅವರು, “ಈ ಸರ್ಕಾರಕ್ಕೆ ಆಯುಷ್ಯವಿಲ್ಲ” ಎಂದಿದ್ದರು. ಅದಕ್ಕೂ ಮೊದಲು ಬೆಳಗಾವಿಯಲ್ಲಿ “ಈ ಸರ್ಕಾರ ಲೋಕಸಭಾ ಚುನಾವಣೆ ಬಳಿಕ ಬೀಳುವುದು ಖಚಿತ” ಎಂದು ರಮೇಶ್ ಜಾರಕಿಹೊಳಿ ಹೇಳಿದ್ದರು. ಇದೀಗ ಶಿಂಧೆ ಹೇಳಿಕೆ ಇನ್ನಷ್ಟು ಕುತೂಹಲ ಮೂಡಿಸಿದೆ.

ಆದರೆ ಈ ಹೇಳಿಕೆಗಳ ಅಸಲಿಯತ್ತಿನ ಬಗ್ಗೆ ಅನುಮೂನ ಮೂಡುವಂತಿದೆ. ಸದ್ಯ ಕಾಂಗ್ರೆಸ್‌ ವಿಧಾನಸಭೆಯಲ್ಲಿ 136 ಸ್ಥಾನ ಹೊಂದಿದ್ದು, ಬಹುಮತ ಹೊಂದಿದೆ. ಒಟ್ಟು 224 ಶಾಸಕ ಸ್ಥಾನಗಳಲ್ಲಿ ಬಿಜೆಪಿ ಕೇವಲ 66 ಸ್ಥಾನ ಹೊಂದಿದ್ದು, ಜೆಡಿಎಸ್‌ 19 ಶಾಸಕಬಲ ಹೊಂದಿದೆ. ಎರಡೂ ಪಕ್ಷಗಳು ಒಟ್ಟಾದರೂ 85 ಸ್ಥಾನಗಳು ಆಗುತ್ತವೆ; ಇದು ಬಹುಮತದ ಹತ್ತಿರಕ್ಕೂ ಬರುವುದಿಲ್ಲ. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಬೀಳಿಸುವುದು ಅಷ್ಟೊಂದು ಸುಲಭವಲ್ಲ.

ಹಾಗಾದರೆ ಇದು ಕೇವಲ ರಾಜಕೀಯ ಹೇಳಿಕೆಯಾ? ಇಲ್ಲದಿದ್ದರೆ 45 ಶಾಸಕರನ್ನು ಸೆಳೆದು ಸರ್ಕಾರ ಪತನ ಮಾಡುವುದು ಅಷ್ಟೊಂದು ಸುಲಭವಾ? ಅತೃಪ್ತ ಶಾಸಕರನ್ನು ಸೆಳೆದು ಸರ್ಕಾರ ಬೀಳಿಸುವ ಸರ್ಕಸ್ ಶುರು ಮಾಡುತ್ತಾರಾ? ಸಿಎಂ ಆಗುವ ಕನಸು ಕಾಣುತ್ತಿರುವ ನಾಯಕನಿಗೆ ಬಿಜೆಪಿ ಗಾಳ ಹಾಕಲಿದೆಯಾ? ರಾಜ್ಯದಲ್ಲೂ ಒಬ್ಬ ಶಿಂಧೆಯನ್ನು ಕಾಂಗ್ರೆಸ್‌ನಲ್ಲಿ ಬಿಜೆಪಿ ಹುಟ್ಟು ಹಾಕಲಿದೆಯಾ? ಹಾಗಿದ್ದರೆ ಅಂಥವರು ಯಾರು? ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆದ್ದು ದೆಹಲಿಯಲ್ಲಿ ಅಧಿಕಾರ ಹಿಡಿದರೆ ರಾಜ್ಯದಲ್ಲೂ ಕಾಂಗ್ರೆಸ್‌ನೊಳಗೆ ಬಂಡಾಯ ಖಚಿತವಾ? ರಾಜ್ಯ ಕಾಂಗ್ರೆಸ್‌ನಲ್ಲಿ ಶಿಂಧೆಗಾಗಿ ಹುಡುಕಾಟ ನಡೆದಿದೆಯಾ? ಮುಂತಾದ ಪ್ರಶ್ನೆಗಳು ಈಗ ಎದ್ದಿವೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ 2019ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದವು. ಬಿಜೆಪಿ 105 ಸ್ಥಾನಗಳನ್ನು ಹಾಗೂ ಶಿವಸೇನೆ 56 ಸ್ಥಾನಗಳನ್ನು ಗೆದ್ದಿದ್ದವು. ಸರ್ಕಾರ ರಚನೆಯ ಸಂದರ್ಭದಲ್ಲಿ ಬಿರುಕು ಉಂಟಾಗಿತ್ತು. ಬಳಿಕ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಸೇರಿ ಸರ್ಕಾರ ರಚಿಸಿದ್ದವು. ನಂತರ ಶಿವಸೇನೆ ನಾಯಕ ಏಕನಾಥ ಶಿಂಧೆ ಮೂರನೇ ಎರಡರಷ್ಟು ಶಾಸಕರ ಜೊತೆಗೆ ಹೊರಬಿದ್ದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರು. ಇದರಿಂದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಪತನವಾಗಿ ಬಿಜೆಪಿ- ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಎನ್‌ಸಿಪಿಯ ಅಜಿತ್‌ ಪವಾರ್‌ ಕೂಡ ಇದಕ್ಕೆ ಕೈ ಜೋಡಿಸಿದ್ದರು.

ಇದನ್ನೂ ಓದಿ: Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Continue Reading
Advertisement
Ujjaini Sri Marulasiddeshwara Rathotsava
ವಿಜಯನಗರ3 mins ago

Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

Swati Maliwal
ದೇಶ3 mins ago

Swati Maliwal: ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲೇ ಆಪ್‌ ಸಂಸದೆ ಸ್ವಾತಿ ಮೇಲೆ ಹಲ್ಲೆ!

Madhavi Latha
ದೇಶ23 mins ago

Madhavi Latha: ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಬುರ್ಖಾ ತೆಗೆಸಿ ಐಡಿ ಕಾರ್ಡ್‌ ಚೆಕ್‌ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ!

pm Narendra Modi
ಪ್ರಮುಖ ಸುದ್ದಿ41 mins ago

PM Narendra Modi: “ಪಾಕ್‌ ಬಳೆ ತೊಡದಿದ್ದರೆ ನಾವು ತೊಡಿಸುತ್ತೇವೆ….” ಪಿಎಂ ಮೋದಿ ಗುಡುಗು

karnataka politics eknath shinde
ಪ್ರಮುಖ ಸುದ್ದಿ2 hours ago

Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

Vijayapura news Drowned in water
ವಿಜಯಪುರ2 hours ago

Vijayapura News: ನಾಪತ್ತೆಯಾಗಿದ್ದ ಮೂವರು ಮಕ್ಕಳು ಚರಂಡಿ ಶುದ್ಧೀಕರಣ ಕೇಂದ್ರಕ್ಕೆ ಬಿದ್ದು ಸಾವು

Road Accident between Bolero and bike Couple dies on the spot
ಕಲಬುರಗಿ2 hours ago

Road Accident: ಬೊಲೇರೋ – ಬೈಕ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಆಳಂದದ ದಂಪತಿ ಸಾವು

Arvind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ರಿಲೀಫ್‌; ಸಿಎಂ ಸ್ಥಾನ ವಜಾಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ

Assault case Cubbon park
ಬೆಂಗಳೂರು2 hours ago

Cubbon park: ಕಬ್ಬನ್‌ ಪಾರ್ಕ್‌ನಲ್ಲಿ ಯುವಕನನ್ನು ಅಟ್ಟಾಡಿಸಿ ಚಪ್ಪಲಿಯಿಂದ ಹೊಡೆದ ಮಹಿಳೆಯರು!

A Manju and Naveen Gowda
ಕ್ರೈಂ2 hours ago

Prajwal Revanna Case: ಪೆನ್‌ ಡ್ರೈವ್‌ ಹಂಚಿಕೆ ಆರೋಪ ಮಾಡಿದ್ದ ನವೀನ್‌ ಗೌಡ ಮೇಲೆ ಶಾಸಕ ಮಂಜು ದೂರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ9 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ11 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ21 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ22 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ22 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌