Manipur Violence: ಮಣಿಪುರದಲ್ಲಿ 40 ಕುಕಿ ಬಂಡುಕೋರರ ಹತ್ಯೆ; ಸಿಎಂ ಬಿರೇನ್‌ ಸಿಂಗ್‌ ಮಾಹಿತಿ - Vistara News

ದೇಶ

Manipur Violence: ಮಣಿಪುರದಲ್ಲಿ 40 ಕುಕಿ ಬಂಡುಕೋರರ ಹತ್ಯೆ; ಸಿಎಂ ಬಿರೇನ್‌ ಸಿಂಗ್‌ ಮಾಹಿತಿ

Manipur Violence: ಮಣಿಪುರದಲ್ಲಿ ಶನಿವಾರ ಸಂಜೆ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇದರ ಬೆನ್ನಲ್ಲೇ, ಬಂಡುಕೋರರ ಹಾವಳಿ ಜಾಸ್ತಿ ಇರುವ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿಯ ಕಾರ್ಯಾಚರಣೆಗೆ ಸಿಎಂ ಬಿರೇನ್‌ ಸಿಂಗ್‌ ಆದೇಶಿಸಿದ್ದಾರೆ.

VISTARANEWS.COM


on

Manipur CM N Biren Singh LikelyTo Resign
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur Violence) ಹಿಂಸಾಚಾರ ಭುಗಿಲೆದ್ದಿರುವ ಬೆನ್ನಲ್ಲೇ ಬಂಡುಕೋರರ ಹತ್ಯೆ ಕುರಿತು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ಮಾಹಿತಿ ನೀಡಿದ್ದಾರೆ. “ಮಣಿಪುರದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಲ್ಲಿ ಭದ್ರತಾ ಸಿಬ್ಬಂದಿಯು ಸುಮಾರು 40 ಕುಕಿ ಬಂಡುಕೋರರನ್ನು ಹೊಡೆದುರುಳಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಣಿಪುರದಲ್ಲಿ ಹಿಂಸಾಚಾರ ಜಾಸ್ತಿಯಾಗಿದೆ. ಬಂಡುಕೋರರ ಹಿಂಸಾಚಾರಕ್ಕೆ ನಾಲ್ವರು ನಾಗರಿಕರು ಹಾಗೂ ಒಬ್ಬ ಅರೆಸೇನಾ ಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ. ಹಾಗಾಗಿ, ಬಂಡುಕೋರರ ಹಾವಳಿ ಹೆಚ್ಚಾಗಿರುವ ಸ್ಥಳಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಕಾರ್ಯಾಚರಣೆ ವೇಳೆ 40 ಕುಕಿ ಬಂಡುಕೋರರನ್ನು ಹೊಡೆದುರುಳಿಸಲಾಗಿದೆ. ಹಾಗೆಯೇ, ಕೆಲವರನ್ನು ಬಂಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಮಣಿಪುರದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟು ಅಲ್ಲದ ಸಮುದಾಯಗಳ ಮಧ್ಯೆ ಸಂಘರ್ಷ ನಡೆಯುತ್ತಲೇ ಇದೆ. ಶನಿವಾರ ಸಂಜೆ (May 27) ಮತ್ತೆ ಹೊಸದಾಗಿ ಹಿಂಸಾಚಾರ ಆರಂಭವಾದ ಕಾರಣ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಣಿಪುರದ ರಾಜಧಾನಿ ಇಂಪಾಲ್‌ನ ನ್ಯೂಚಾಕಾನ್ ಪ್ರದೇಶದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಕೆಲ ದಿನಗಳ ಹಿಂದಷ್ಟೇ ಹಿಂಸಾಚಾರ ಸಂಭವಿಸಿತ್ತು. ಈ ಪ್ರದೇಶದಲ್ಲಿ ಮತ್ತೆ ಕರ್ಫ್ಯೂ ಜಾರಿ ಮಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಮುಂದಾಗಿದ್ದವು ಈ ಮೊದಲು ಕರ್ಫ್ಯೂ ಸಂಜೆ ನಾಲ್ಕು ಗಂಟೆಯವರೆಗೆ ಸಡಿಲ ಮಾಡಲಾಗಿತ್ತು. ಆದರೆ, ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕರ್ಫ್ಯೂ ಹೇರಲಾಗಿತ್ತು.

ಎರಡು ವಾರಗಳ ಹಿಂದೆ ಸಂಭವಿಸಿದ ಹಿಂಸಾಚಾರದಲ್ಲಿ ಸುಮಾರು 7500 ಜನರು ಸಂತ್ರಸ್ತರಾಗಿದ್ದರು. ಅವರನ್ನು ಸುರಕ್ಷಿತ ಸ್ಥಳಾಂತರ ಮಾಡಲಾಗಿತ್ತು. ಬಹುಸಂಖ್ಯಾತ ಮೈತೈ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆ ಮಾಡಲು ವಿವಿಧ ಬುಡಕಟ್ಟು ಸಮುದಾಯವರ ಪ್ರಬಲ ವಿರೋಧವಿದೆ. ಈ ಹಿನ್ನೆಲೆಯಲ್ಲಿ ಮೈತೈ ಮತ್ತು ಆಲ್ ಟ್ರೈಬಲ್ ಸ್ಟುಡೆಂಟ್ಸ್ ಯುನಿಯನ್ ನಡುವಿನ ಸಂಘರ್ಷವೇ ಮಣಿಪುರದ ಹಿಂಸಾಚಾರಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿಸ್ತಾರ Explainer: ಮಣಿಪುರದಲ್ಲಿ ಮತ್ತೆ ಹಿಂಸೆಯ ಭುಗಿಲು; ಬುಡಕಟ್ಟು ಜನರ ಕದನಕ್ಕೆ ಇಲ್ಲಿದೆ ಕಾರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Governor: ಸಿ.ಪಿ ರಾಧಾಕೃಷ್ಣನ್‌ಗೆ ತೆಲಂಗಾಣ ರಾಜ್ಯಪಾಲ ಹುದ್ದೆ ಉಸ್ತುವಾರಿ

ಮಾರ್ಚ್ 18ರಂದು ತಮಿಳಿಸೈ ಸೌಂದರರಾಜನ್ (Tamilisai Soundararajan) ಅವರ ರಾಜೇನಾಮೆಯಿಂದ ತೆಲಂಗಾಣದ ರಾಜ್ಯಪಾಲ (Telanagana Governor) ಹುದ್ದೆ ತೆರವಾಗಿತ್ತು.

VISTARANEWS.COM


on

cp radhakrishnan
Koo

ಹೊಸದಿಲ್ಲಿ: ಜಾರ್ಖಂಡ್ ರಾಜ್ಯಪಾಲ (Jharkhand Governor) ಸಿ.ಪಿ ರಾಧಾಕೃಷ್ಣನ್ (CP Radhakrishnan) ಅವರಿಗೆ ತೆಲಂಗಾಣ (Telangana) ಮತ್ತು ಪುದುಚೇರಿಯ (Puducherry) ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ. ಈ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಮಂಗಳವಾರ ಆದೇಶ ಹೊರಡಿಸಿದ್ದಾರೆ.

“ನಿರ್ದಿಷ್ಟ ನೇಮಕಾತಿ ಮಾಡುವವರೆಗೆ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯಗಳನ್ನು ತಮ್ಮ ಸ್ವಂತ ಕರ್ತವ್ಯಗಳ ಜೊತೆಗೆ ನಿರ್ವಹಿಸಲು ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಿಸಲು ಭಾರತದ ರಾಷ್ಟ್ರಪತಿಗಳು ಸಂತೋಷಪಡುತ್ತಾರೆ” ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಮಾರ್ಚ್ 18ರಂದು ತಮಿಳಿಸೈ ಸೌಂದರರಾಜನ್ (Tamilisai Soundararajan) ಅವರ ರಾಜೇನಾಮೆಯಿಂದ ತೆಲಂಗಾಣದ ರಾಜ್ಯಪಾಲ ಹುದ್ದೆ ತೆರವಾಗಿತ್ತು. ಅವರು ಬಿಜೆಪಿ ಟಿಕೆಟ್‌ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಊಹಿಸಲಾಗಿದೆ. ತಮಿಳಿಸೈ ಸೌಂದರರಾಜನ್ ಅವರು ಚೆನ್ನೈ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಯಾಗಲಿದ್ದಾರೆ ಎನ್ನಲಾಗಿದೆ.

“ಸಾರ್ವಜನಿಕರಿಗೆ ನೇರವಾಗಿ ಸೇವೆ ಸಲ್ಲಿಸುವುದು ನನ್ನ ಇಚ್ಛೆಯಾಗಿದ್ದು, ನಾನು ನನ್ನ ಸ್ವಂತ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ನಾನು ತೀವ್ರವಾದ ಸಾರ್ವಜನಿಕ ಸೇವೆಯಲ್ಲಿ ನನ್ನನ್ನು ತೊಡಗಿಸಿಕೊಳ್ಳಲು ಬಯಸುತ್ತೇನೆ” ಎಂದು ಅವರು ರಾಜೀನಾಮೆ ಸಂದರ್ಭದಲ್ಲಿ ಹೇಳಿದ್ದರು.

ರಾಧಾಕೃಷ್ಣನ್ ಅವರು ತಮಗೆ ಹೆಚ್ಚುವರಿ ಜವಾಬ್ದಾರಿ ನೀಡಿದ್ದಕ್ಕಾಗಿ ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. “ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸುವ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ನಾನು ವಿನಮ್ರ. ನಮ್ಮ ಮಾತೃಭೂಮಿಗೆ ಸೇವೆ ಸಲ್ಲಿಸಲು ಈ ಮಹತ್ತರವಾದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದ್ದಕ್ಕಾಗಿ ನಮ್ಮ ಪ್ರೀತಿಯ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಗೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆ ನಾನು ನನ್ನ ಹೃದಯದ ಆಳದಿಂದ ಧನ್ಯವಾದ ಅರ್ಪಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣವು ತಮಿಳುನಾಡು ಮೂಲದ ರಾಜ್ಯಪಾಲರನ್ನು ಹೊಂದುತ್ತಿರುವ ಮೂರನೇ ನಿದರ್ಶನ ಇದಾಗಿದೆ. ಮೊದಲ ಗವರ್ನರ್ ನರಸಿಂಹನ್, ಎರಡನೇ ಗವರ್ನರ್ ತಮಿಳಿಸೈ ಸೌಂದರರಾಜನ್ ಕೂಡ ತಮಿಳುನಾಡಿನವರು. ಕೊಯಮತ್ತೂರಿನಿಂದ ಎರಡು ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಗೆ ಆರಿಸಿ ಬಂದಿರುವ ರಾಧಾಕೃಷ್ಣನ್‌, 2023ರಲ್ಲಿ ಜಾರ್ಖಂಡ್‌ ರಾಜ್ಯಪಾಲರಾಗಿದ್ದರು.

ಇದನ್ನೂ ಓದಿ: ತಮಿಳುನಾಡಿನಲ್ಲೇ ರಜನಿಕಾಂತ್‌ Top Tax payer, ಹಾಗಿದ್ದರೆ ಅವರ ವಾರ್ಷಿಕ ಆದಾಯ ಎಷ್ಟು?

Continue Reading

ಪ್ರಮುಖ ಸುದ್ದಿ

Lok Sabha Election 2024: ಮೋದಿ ಮತ್ತೆ ಪ್ರಧಾನಿ, ಎನ್‌ಡಿಗೆ 400: ನಿತಿನ್‌ ಗಡ್ಕರಿ; 2026ರಲ್ಲಿ ಬುಲೆಟ್‌ ಟ್ರೇನ್:‌ ಅಶ್ವಿನಿ ವೈಷ್ಣವ್

“ಭಾರತದ ಮೊದಲ ಬುಲೆಟ್ ರೈಲು 2026ರಲ್ಲಿ ಸಿದ್ಧವಾಗಲಿದೆ” ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

VISTARANEWS.COM


on

nitin gadkari ashiwini vaishnav
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತೆ ಆರಿಸಿ ಬರಲಿದ್ದಾರೆ. ನಾವು 400ಕ್ಕಿಂತ ಅಧಿಕ ಸ್ಥಾನಗಳನ್ನು ಪಡೆಯಲಿದ್ದೇವೆ” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

ಅವರು ಸಿಎನ್ಎನ್-ನ್ಯೂಸ್ 18 ವಾಹಿನಿಗಳು ಏರ್ಪಡಿಸಿದ್ದ ʼರೈಸಿಂಗ್ ಭಾರತ್ ಶೃಂಗಸಭೆ 2024ʼರಲ್ಲಿ ಭಾಗವಹಿಸಿ ಮಾತನಾಡಿದರು. “ಪ್ರಧಾನಿ ಮೋದಿಯವರಿಗೆ ಸಬ್‌ಕಾ ಸಾಥ್, ಸಬ್‌ಕಾ ವಿಕಾಸದ ದೂರದೃಷ್ಟಿ ಇದೆ. ಅವರು ಮತ್ತೆ ಪ್ರಧಾನಿಯಾಗುತ್ತಾರೆ. ಎನ್‌ಡಿಎ 400ರ ಗಡಿ ದಾಟಲಿದೆ” ಎಂದವರು ನುಡಿದರು.

“ಇದೀಗ ನಾವು ಮುಂಬಯಿಯಿಂದ ಕೇವಲ 40 ನಿಮಿಷಗಳಲ್ಲಿ ನವಮುಂಬಯಿ ವಿಮಾನ ನಿಲ್ದಾಣವನ್ನು ತಲುಪಲು ಅಗತ್ಯವಾದ ಮೂಲಸೌಕರ್ಯಗಳನ್ನು ರಚಿಸುತ್ತಿದ್ದೇವೆ. ಕಳೆದ 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ.ಗಳ ಕಾಮಗಾರಿ ನಡೆದಿದೆ. ಇ-ಟೆಂಡರ್ ಇಲ್ಲದೆ ಒಂದೇ ಒಂದು ಯೋಜನೆಯೂ ನಡೆದಿಲ್ಲ. ಪ್ರತಿಯೊಂದು ಯೋಜನೆಯನ್ನೂ ಪಾರದರ್ಶಕ ಮತ್ತು ಭ್ರಷ್ಟಾಚಾರರಹಿತ ರೀತಿಯಲ್ಲಿ ಕಾರ್ಯಗತಗೊಳಿಸಲಾಗಿದೆ” ಎಂದು ಗಡ್ಕರಿ ಹೇಳಿದರು.

ಇದೇ ಸಮಾವೇಶದಲ್ಲಿ ಭಾಗವಹಿಸಿದ ಕೇಂದ್ರ ರೈಲ್ವೆ ಹಾಗೂ ಐಟಿ ಸಚಿವ ಅಶ್ವಿನಿ ವೈಷ್ಣವ್‌, “ಭಾರತದ ಮೊದಲ ಬುಲೆಟ್ ರೈಲು 2026ರಲ್ಲಿ ಸಿದ್ಧವಾಗಲಿದೆ. ಅದು ಸೂರತ್‌ನಿಂದ ಒಂದು ವಿಭಾಗದಲ್ಲಿ ಓಡಲಿದೆ” ಎಂದು ಹೇಳಿದ್ದಾರೆ. “ರೈಲ್ವೆಯಿಂದ ಸುಧಾರಿತ ಯೋಜನೆಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಎಲ್ಲಾ ಹಂತಗಳಲ್ಲಿ ಕಠಿಣ ಪರಿಶ್ರಮ ಮತ್ತು ಸಂವಹನದ ಅಗತ್ಯವಿದೆ. 1980ರ ದಶಕದಲ್ಲಿ ಇತರ ದೇಶಗಳಲ್ಲಿ ಸ್ವಯಂಚಾಲಿತ ರೈಲು ರಕ್ಷಣೆ ಬಂದಿತು. ಆದರೆ ಆಗಿನ ಸರ್ಕಾರ ಅದನ್ನು ಭಾರತದಲ್ಲಿ ತರಲಿಲ್ಲ. ಅವರು ಸುರಕ್ಷತೆಯ ಮೇಲೆ ಹೂಡಿಕೆ ಮಾಡಲಿಲ್ಲ. ಪ್ರಧಾನಿ ಮೋದಿ ಅವರು ಸ್ವಯಂಚಾಲಿತ ರೈಲು ರಕ್ಷಣೆಯನ್ನು 2016ರಲ್ಲಿ ತಂದರು” ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.

ʼರೈಸಿಂಗ್ ಭಾರತ್ ಶೃಂಗಸಭೆ 2024ʼ ನಾಲ್ಕನೇ ಆವೃತ್ತಿಯಾಗಿದ್ದು, ಮಾರ್ಚ್ 19-20ರಂದು ನವದೆಹಲಿಯಲ್ಲಿ ನಡೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದನ್ನು ಉದ್ದೇಶಿಸಿ ಮುಖ್ಯ ಭಾಷಣವನ್ನು ಮಾಡಲಿದ್ದಾರೆ. ರಾಜಕೀಯ, ಕಲೆ, ಕಾರ್ಪೊರೇಟ್ ಜಗತ್ತು, ಮನರಂಜನೆ ಮತ್ತು ಕ್ರೀಡಾ ಕ್ಷೇತ್ರದ ಹಲವಾರು ಪ್ರಮುಖರು ಈವೆಂಟ್‌ನಲ್ಲಿ ಭಾಗವಹಿಸುತ್ತಿದ್ದಾರೆ.

ಎರಡು ದಿನಗಳ ರೈಸಿಂಗ್ ಭಾರತ್ ಶೃಂಗಸಭೆ 2024ರ ಮೊದಲ ದಿನವು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಅಶ್ವಿನಿ ವೈಷ್ಣವ್ ಅವರ ಉಪಸ್ಥಿತಿಗೆ ಸಾಕ್ಷಿಯಾಯಿತು. ಅಯೋಧ್ಯೆಯ ಭವ್ಯವಾದ ರಾಮಮಂದಿರದ ವಾಸ್ತುಶಿಲ್ಪಿ ಆಶಿಶ್ ಸೋಂಪುರ, ಇತಿಹಾಸಕಾರ ಮತ್ತು ರಾಮ್ ಲಲ್ಲಾ ವಿಗ್ರಹ ಆಭರಣ ವಿನ್ಯಾಸಕ ಯತೀಂದರ್ ಮಿಶ್ರಾ ಅವರು ಆಧ್ಯಾತ್ಮಿಕತೆಯ ಮಾತನಾಡಿದರು. ಶೃಂಗಸಭೆಯ ಮೊದಲ ದಿನವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ʼನಯಾ ಭಾರತ್, ಉಭರ್ತ ಭಾರತ’ ಕುರಿತು ಪ್ರಮುಖ ಭಾಷಣದ ನಂತರ ಮುಕ್ತಾಯಗೊಳ್ಳಲಿದೆ.

ಶೃಂಗಸಭೆಯ ಎರಡನೇ ದಿನದಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭಾರತದ ವರ್ತಮಾನದ ಮತ್ತು ಮುಂಬರುವ ವರ್ಷಗಳಲ್ಲಿ ಅದರ ಬೆಳವಣಿಗೆಯ ಬಗ್ಗೆ ಮಾತನಾಡಲಿದ್ದಾರೆ. ಕ್ರಿಕೆಟ್ ಜಗತ್ತಿನ ಜನಪ್ರಿಯರಾದ ಮುಖಗಳಾದ ಎಬಿ ಡಿವಿಲಿಯರ್ಸ್, ಬ್ರೆಟ್ ಲೀ, ಆಕಾಶ್ ಚೋಪ್ರಾ ಮತ್ತು ಅಂಜುಮ್ ಚೋಪ್ರಾ ಕೂಡ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: Lok Sabha Election 2024: 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ದಿಗ್ವಿಜಯ; ಈ ಆತ್ಮವಿಶ್ವಾಸಕ್ಕೆ ಕಾರಣ ಬಿಚ್ಚಿಟ್ಟ ವಿಜಯೇಂದ್ರ

Continue Reading

ಪ್ರಮುಖ ಸುದ್ದಿ

Lok Sabha Election: ಚಿರಾಗ್‌ಗೆ ಮಣೆ ಹಾಕಿದ ಎನ್‌ಡಿಎ, ಸಿಟ್ಟಿಗೆದ್ದ ಕೇಂದ್ರ ಸಚಿವ ಪಶುಪತಿ ಕುಮಾರ್‌ ಪರಾಸ್‌ ರಾಜೀನಾಮೆ

Lok Sabha Election: ಎನ್‌ಡಿಎ, ಬಿಹಾರದಲ್ಲಿ ಎಲ್‌ಜೆಪಿ (ರಾಮ್‌ವಿಲಾಸ್) ಗಾಗಿ ಐದು ಲೋಕಸಭಾ ಸ್ಥಾನಗಳನ್ನು ನೀಡಿದೆ. ಇದರಿಂದ ಅವರ ಚಿಕ್ಕಪ್ಪ ಪರಾಸ್‌ ಸಿಟ್ಟಿಗೆದ್ದಿದ್ದಾರೆ.

VISTARANEWS.COM


on

Pashupati Kumar Paras
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ (Lok Sabha Election) ಮುನ್ನ ಲೋಕಜನ ಶಕ್ತಿ ಪಕ್ಷ (ರಾಮ್‌ವಿಲಾಸ್‌) (Lok Janshakti party- Ram Vilas) ನಾಯಕ ಚಿರಾಗ್ ಪಾಸ್ವಾನ್ (Chirag Paswan) ಅವರೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿರುವುದರಿಂದ ಸಿಟ್ಟಿಗೆದ್ದಿರುವ ಚಿರಾಗ್‌ ಚಿಕ್ಕಪ್ಪ ಹಾಗೂ ಕೇಂದ್ರ ಸಚಿವ ಪಶುಪತಿ ಕುಮಾರ್ ಪರಾಸ್ (Pashupati Kumar Paras) ಮಂಗಳವಾರ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

“ಎನ್‌ಡಿಎ ಮಿತ್ರಪಕ್ಷಗಳನ್ನು ಘೋಷಿಸಲಾಗಿದೆ. ನಾನು ಪ್ರಧಾನಿಗೆ ಕೃತಜ್ಞನಾಗಿದ್ದೇನೆ. ನನ್ನ ಪಕ್ಷ ಮತ್ತು ನಾನು ಅನ್ಯಾಯಕ್ಕೆ ಒಳಗಾಗಿದ್ದೇವೆ. ಹಾಗಾಗಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಪರಾಸ್ ಹೇಳಿದ್ದಾರೆ.

ಪರಾಸ್‌ ಅವರು ಚಿರಾಗ್‌ ಪಾಸ್ವಾನ್‌ ಅವರ ಚಿಕ್ಕಪ್ಪ ಆಗಿದ್ದು, ಅವರ ಪ್ರತಿಸ್ಪರ್ಧಿ ಬಣದ ನಾಯಕನಾಗಿದ್ದಾರೆ. 2021ರಲ್ಲಿ ಎಲ್‌ಜೆಪಿ ಅದರ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರ ಮರಣದ ನಂತರ ಬಿಹಾರದಲ್ಲಿ ವಿಭಜನೆಯಾಯಿತು. ರಾಮ್ ವಿಲಾಸ್ ಪಾಸ್ವಾನ್ ಅವರ ಕಿರಿಯ ಸಹೋದರ ಪರಾಸ್ ಅವರು ಪಕ್ಷದಲ್ಲಿ ಪ್ರಾಬಲ್ಯ ಹೊಂದಿದ್ದು, ಐವರು ಸಂಸದರನ್ನು ತಮ್ಮೊಂದಿಗೆ ಕರೆದುಕೊಂಡರು. ಪಾಸ್ವಾನ್ ಅವರ ಮಗ ಚಿರಾಗ್ ಪ್ರತ್ಯೇಕ ಪಕ್ಷವನ್ನು (ಲೋಕಜನ ಶಕ್ತಿ ಪಕ್ಷ- ರಾಮ್‌ವಿಲಾಸ್‌) ರಚಿಸಬೇಕಾಗಿ ಬಂದಿತ್ತು.

ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ, ಚಿರಾಗ್‌ ಅವರ ವಯಸ್ಸು ಮತ್ತು ರಾಜ್ಯದಲ್ಲಿ ಅವರ ಆಕ್ರಮಣಕಾರಿ ಬೆಳವಣಿಗೆಯನ್ನು ಕಂಡಿದ್ದು, ಅವರನ್ನು ಬಿಹಾರ ರಾಜಕೀಯದ ದೀರ್ಘಾವಧಿಯ ಆಟಗಾರನಾಗಿ ಗುರುತಿಸಿದೆ. ರ್ಯಾಲಿಗಳಲ್ಲಿ ದೊಡ್ಡ ಜನಸಮೂಹವನ್ನು ಸೆಳೆಯುವ ಚಿರಾಗ್ ಪಾಸ್ವಾನ್ ಅವರ ಸಾಮರ್ಥ್ಯವನ್ನು ಗ್ರಹಿಸಿದ ಎನ್‌ಡಿಎ, ಬಿಹಾರದಲ್ಲಿ ಎಲ್‌ಜೆಪಿ (ರಾಮ್‌ವಿಲಾಸ್) ಗಾಗಿ ಐದು ಲೋಕಸಭಾ ಸ್ಥಾನಗಳನ್ನು ಹಂಚಿತು. ದಿವಂಗತ ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ವಾರಸುದಾರರು ಚಿರಾಗ್‌ ಎಂದು ಬಿಜೆಪಿ ಈ ನಡೆಯ ಮೂಲಕ ಒತ್ತಿಹೇಳಿದಂತಾಗಿದೆ.

ಇದರಿಂದ ರೊಚ್ಚಿಗೆದ್ದಿರುವ ಪಾರಸ್ ಅವರು ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದರು. ಅಲ್ಲಿ ಎನ್‌ಡಿಎ ಜೊತೆಗಿನ ಸಂಬಂಧವನ್ನು ಮುರಿದುಕೊಳ್ಳುವ ನಿರ್ಧಾರಕ್ಕೆ ಬರಲಾಯಿತು. “ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆ ಒಪ್ಪಂದ ಮಾಡಿಕೊಳ್ಳುವಾಗ ನಮ್ಮ ಪಕ್ಷಕ್ಕೆ ಸರಿಯಾದ ಗೌರವ ನೀಡಿಲ್ಲ. ಈಗ ನಾವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಮತ್ತು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವತಂತ್ರರಾಗಿದ್ದೇವೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

ಸೋಮವಾರದ ಸಭೆಯಲ್ಲಿ ಪರಾಸ್ ಅವರಲ್ಲದೆ, ಸಂಸದರಾದ ಪ್ರಿನ್ಸ್ ರಾಜ್ (ಸಮಸ್ತಿಪುರ), ಚಂದನ್ ಸಿಂಗ್ (ನವಾಡ), ಮತ್ತು ಮಾಜಿ ಸಂಸದ ಸೂರಜ್‌ಭಾನ್ ಸಿಂಗ್ ಉಪಸ್ಥಿತರಿದ್ದರು. ಬಿಹಾರದಲ್ಲಿ ಆಪ್ ಮಹಾ ಮೈತ್ರಿಕೂಟದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆಯೂ ಮಾತುಕತೆ ನಡೆದಿದೆ. ವರದಿಗಳ ಪ್ರಕಾರ, ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ (ಆರ್) ಗೆ ಹಂಚಿಕೆಯಾಗಿರುವ ಹಾಜಿಪುರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಪರಾಸ್ ತಿಳಿಸಿದ್ದಾರೆ.

ಸೀಟು ಹಂಚಿಕೆಯಾದ ನಂತರ ಚಿರಾಗ್ ಪಾಸ್ವಾನ್ ಶಿಬಿರ ಸಂಭ್ರಮಾಚರಣೆಯಲ್ಲಿ ಮುಳುಗಿದೆ. ಪರಾಸ್ ನೇತೃತ್ವದ ಪ್ರತಿಸ್ಪರ್ಧಿ ಬಣವನ್ನು ಬಿಜೆಪಿ ನಿರ್ಲಕ್ಷಿಸಿದ್ದರಿಂದ ಪಕ್ಷದ ಕಾರ್ಯಕರ್ತರು ಸಂತೋಷಗೊಂಡರು.

ಇದನ್ನೂ ಓದಿ: Lok Sabha Election 2024: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ; ಯಾವ ಸಮೀಕ್ಷೆ, ಎಷ್ಟು ಸೀಟು?

Continue Reading

ದೇಶ

PM Narendra Modi: ಮೋದಿಗೆ ಥ್ಯಾಂಕ್ಸ್‌ ಹೇಳಿದ ಬಲ್ಗೇರಿಯಾ ಅಧ್ಯಕ್ಷ, ಮೋದಿ ಉತ್ತರ ಹೀಗಿತ್ತು

PM Narendra Modi: ಕಳೆದ ವರ್ಷ ಡಿಸೆಂಬರ್ 14ರಂದು ಸೊಮಾಲಿ ಕಡಲ್ಗಳ್ಳರು ವಶಪಡಿಸಿಕೊಂಡಿದ್ದ ಎಂವಿ ರುಯೆನ್ ಅನ್ನು ಭಾರತೀಯ ನೌಕಾಪಡೆ ಶನಿವಾರ ಯಶಸ್ವಿಯಾಗಿ ರಕ್ಷಿಸಿತು.

VISTARANEWS.COM


on

narendra modi rumen radev
Koo

ಹೊಸದಿಲ್ಲಿ: ತಮ್ಮ ದೇಶದ ಹಡಗು ಮತ್ತು ಸಿಬ್ಬಂದಿಯನ್ನು ರಕ್ಷಿಸಿದ್ದಕ್ಕಾಗಿ ಭಾರತೀಯ ನೌಕಾಪಡೆಗೆ (Indian Navy) ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಬಲ್ಗೇರಿಯಾದ ಅಧ್ಯಕ್ಷ (Bulgarian President) ರುಮೆನ್ ರಾದೇವ್ (Rumen Radev) ಅವರು ಧನ್ಯವಾದ ಸಲ್ಲಿಸಿದ್ದಾರೆ. “ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸಮುದ್ರಯಾನ ಸ್ವಾತಂತ್ರ್ಯವನ್ನು ರಕ್ಷಿಸಲು, ಕಡಲ್ಗಳ್ಳತನ (Piracy) ಮತ್ತು ಭಯೋತ್ಪಾದನೆಯನ್ನು (terrorism) ಎದುರಿಸಲು ಭಾರತ ಬದ್ಧವಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದಾರೆ.

ರುಮೆನ್ ರಾದೇವ್ ಅವರು ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. “ಏಳು ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ರುಯೆನ್ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಕೆಚ್ಚೆದೆಯ ಕಾರ್ಯಾಚರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು” ಎಂದು ಅವರು ಟ್ವೀಟ್‌ ಮಾಡಿದ್ದರು.

ತಮ್ಮ ಪ್ರತ್ಯುತ್ತರದಲ್ಲಿ, ಮೋದಿ ಅವರು, ““ಏಳು ಬಲ್ಗೇರಿಯನ್ ಪ್ರಜೆಗಳು ಸುರಕ್ಷಿತವಾಗಿರುವುದು ಮತ್ತು ಶೀಘ್ರದಲ್ಲೇ ಮನೆಗೆ ಮರಳುತ್ತಿರುವುದು ನಮಗೆ ಸಂತೋಷ ತಂದಿದೆ. ನೌಕಾಯಾನದ ಸ್ವಾತಂತ್ರ್ಯವನ್ನು ರಕ್ಷಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಕಡಲ್ಗಳ್ಳತನ ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತ ಬದ್ಧವಾಗಿದೆ” ಎಂದಿದ್ದಾರೆ.

ಅಪಹರಣಕ್ಕೊಳಗಾದ ಎಂವಿ ರುಯೆನ್ ಹಡಗನ್ನು ಯಶಸ್ವಿಯಾಗಿ ರಕ್ಷಿಸಿದ್ದಕ್ಕಾಗಿ ಭಾರತ, ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಬಲ್ಗೇರಿಯಾದ ಉಪಪ್ರಧಾನಿ ಭಾನುವಾರ ಧನ್ಯವಾದಗಳನ್ನು ಅರ್ಪಿಸಿದ್ದರು. “ಅಪಹರಣಕ್ಕೊಳಗಾದ ನೌಕೆ ರೂಯೆನ್‌, 7 ಬಲ್ಗೇರಿಯನ್ ಪ್ರಜೆಗಳು ಸೇರಿದಂತೆ ಸಿಬ್ಬಂದಿಯನ್ನು ರಕ್ಷಿಸಲು ಯಶಸ್ವಿ ಕಾರ್ಯಾಚರಣೆಗಾಗಿ ಭಾರತೀತ ನೌಕಾಪಡೆಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಸಿಬ್ಬಂದಿಯ ಜೀವಗಳನ್ನು ರಕ್ಷಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಬಲ್ಗೇರಿಯನ್ ಸಚಿವ ಮರಿಯಾ ಗೇಬ್ರಿಯಲ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಸ್ನೇಹಿತರು ಇರುವುದೇ ಇದಕ್ಕಾಗಿ” ಎಂದು ಜೈಶಂಕರ್ ಉತ್ತರಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ 14ರಂದು ಸೊಮಾಲಿ ಕಡಲ್ಗಳ್ಳರು ವಶಪಡಿಸಿಕೊಂಡಿದ್ದ ಎಂವಿ ರುಯೆನ್ ಅನ್ನು ಭಾರತೀಯ ನೌಕಾಪಡೆ ಶನಿವಾರ ಯಶಸ್ವಿಯಾಗಿ ರಕ್ಷಿಸಿತು. 35 ಕಡಲ್ಗಳ್ಳರನ್ನು ಶರಣಾಗುವಂತೆ ಮಾಡಿದೆ. ಬಲ್ಗೇರಿಯಾ ಮಾಲೀಕತ್ವದ MV ರುಯೆನ್‌ನ ಅಪಹರಣ, 2017ರಿಂದ ಸೊಮಾಲಿ ಕಡಲ್ಗಳ್ಳರು ಸರಕು ಹಡಗನ್ನು ಹತ್ತಿದ ಮೊದಲ ನಿದರ್ಶನ. ಎಲ್ಲಾ ಸಿಬ್ಬಂದಿಯನ್ನು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಭಾರತೀಯ ನೌಕಾಪಡೆ ಕಾರ್ಯಾಚರಣೆ

ಐಎನ್‌ಎಸ್ ಕೋಲ್ಕತ್ತಾ ಕಾರ್ಯಾಚರಣೆಯನ್ನು ಮುನ್ನಡೆಸಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ನೌಕಾಪಡೆಯು ತನ್ನ P-8I ಕಡಲ ಗಸ್ತು ವಿಮಾನವನ್ನು, ಮುಂಚೂಣಿ ಹಡಗುಗಳಾದ INS ಕೋಲ್ಕತ್ತಾ ಮತ್ತು INS ಸುಭದ್ರ ಮತ್ತು ಎತ್ತರದ ದೀರ್ಘ-ಸಹಿಷ್ಣುತೆ (HALE) ಮಾನವರಹಿತ ವೈಮಾನಿಕ ವಾಹನವನ್ನು ಬಳಸಿಕೊಂಡಿತು. ಭಾರತೀಯ ವಾಯುಪಡೆಯ C-17 ವಿಮಾನವು ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ ʼಆಪರೇಷನ್ ಸಂಕಲ್ಪ್’ ಅನ್ನು ಬೆಂಬಲಿಸಿತು.

40 ಗಂಟೆಗಳ ರಕ್ಷಣಾ ಕಾರ್ಯಾಚರಣೆಯಲ್ಲಿ, INS ಕೋಲ್ಕತ್ತಾ ಭಾರತೀಯ ಕರಾವಳಿಯಿಂದ ಸುಮಾರು 2600 ಕಿಮೀ ದೂರದಲ್ಲಿ ಕಡಲ್ಗಳ್ಳರ ದಾಳಿಗೆ ಒಳಗಾಗಿದ್ದ MV ರುಯೆನ್ ಅನ್ನು ತಡೆಹಿಡಿಯಿತು. ವ್ಯಾಪಾರಿ ಹಡಗನ್ನು ಡಿಸೆಂಬರ್ 2023ರಲ್ಲಿ ಹೈಜಾಕ್ ಮಾಡಲಾಗಿತ್ತು. ಇಲ್ಲಿಯವರೆಗೂ ಸೊಮಾಲಿಯನ್ ಕಡಲ್ಗಳ್ಳರ ನಿಯಂತ್ರಣದಲ್ಲಿತ್ತು. ಡಿಸೆಂಬರ್‌ನಲ್ಲಿ ಯೆಮೆನ್‌ನ ಸೊಕೊಟ್ರಾ ದ್ವೀಪದಿಂದ ಪೂರ್ವಕ್ಕೆ 380 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸೊಮಾಲಿ ಕಡಲ್ಗಳ್ಳರು ಅದನ್ನು ವಶಪಡಿಸಿಕೊಂಡಿದ್ದರು. ನಂತರ MV ರುಯೆನ್ ಮತ್ತು ಅದರ 17 ಸಿಬ್ಬಂದಿಯನ್ನು ಸೊಮಾಲಿಯಾದ ಅರೆ ಸ್ವಾಯತ್ತ ರಾಜ್ಯವಾದ ಪಂಟ್‌ಲ್ಯಾಂಡ್‌ಗೆ ಕರೆದೊಯ್ದರು.

ಇದನ್ನೂ ಓದಿ: Ship Hijacked: ಸೊಮಾಲಿಯಾ ಬಳಿ 15 ಭಾರತೀಯರಿದ್ದ ಹಡಗು ಹೈಜಾಕ್;‌ ನೌಕಾಪಡೆ ಕಟ್ಟೆಚ್ಚರ

Continue Reading
Advertisement
cp radhakrishnan
ಪ್ರಮುಖ ಸುದ್ದಿ3 mins ago

Governor: ಸಿ.ಪಿ ರಾಧಾಕೃಷ್ಣನ್‌ಗೆ ತೆಲಂಗಾಣ ರಾಜ್ಯಪಾಲ ಹುದ್ದೆ ಉಸ್ತುವಾರಿ

Self Harming fire
ಚಿತ್ರದುರ್ಗ43 mins ago

Self Harming : ಇಬ್ಬರು ಮಕ್ಕಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ತಾನೂ ಆಹುತಿಯಾದ ತಾಯಿ

BY Vijayendra meets HD Kumaraswamy
Lok Sabha Election 20241 hour ago

Lok Sabha Election 2024: ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರ; ಮೋದಿ ಪ್ರವಾಸದ ಬಗ್ಗೆ ಬಿ.ವೈ. ವಿಜಯೇಂದ್ರ ಹೇಳಿದ್ದೇನು?

Acid Attack Anekal coupleAcid Attack Anekal couple
ಬೆಂಗಳೂರು1 hour ago

Acid Attack : ಕೌಟುಂಬಿಕ ಕಲಹ; ಹೆಂಡತಿ ಮೇಲೆ ಆಸಿಡ್‌ ದಾಳಿ ನಡೆಸಿದ ಧೂರ್ತ ಗಂಡ

nitin gadkari ashiwini vaishnav
ಪ್ರಮುಖ ಸುದ್ದಿ1 hour ago

Lok Sabha Election 2024: ಮೋದಿ ಮತ್ತೆ ಪ್ರಧಾನಿ, ಎನ್‌ಡಿಗೆ 400: ನಿತಿನ್‌ ಗಡ್ಕರಿ; 2026ರಲ್ಲಿ ಬುಲೆಟ್‌ ಟ್ರೇನ್:‌ ಅಶ್ವಿನಿ ವೈಷ್ಣವ್

Tom Curran
ಕ್ರೀಡೆ1 hour ago

IPL 2024: ಎಲ್ಲ ಅನುಮಾನಗಳಿಗೂ ತೆರೆ; ಆರ್​ಸಿಬಿ ಸೇರಿದ ಇಂಗ್ಲೆಂಡ್​ ಆಲ್​ರೌಂಡರ್​

MP Tejaswi surya participate at Nagarthapet protest
ಬೆಂಗಳೂರು1 hour ago

Hanuman Chalisa: ನಗರ್ತಪೇಟೆಯಲ್ಲಿ ಗುಡುಗಿದ ‘ಕೇಸರಿ’; ಕಠಿಣ ಕ್ರಮದ ಭರವಸೆ, ಪ್ರತಿಭಟನೆಗೆ ವಿರಾಮ

SS Rajamouli soft launches Mahesh Babu
ಟಾಲಿವುಡ್1 hour ago

SS Rajamouli: ಮಹೇಶ್‌ ಬಾಬು ಸಿನಿಮಾ ಬಗ್ಗೆ ಜಪಾನ್‌ನಲ್ಲಿ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಜಮೌಳಿ!

Student Death Deeksha
ತುಮಕೂರು2 hours ago

Student death: ದೇವರಿಗೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಸಾವು; ಶಿಕ್ಷಕರ ಸಸ್ಪೆಂಡ್

Thalapathy Vijay
ಕಾಲಿವುಡ್2 hours ago

Thalapathy Vijay: 14 ವರ್ಷಗಳ ಬಳಿಕ ದಳಪತಿ ವಿಜಯ್‌ ಕೇರಳಕ್ಕೆ; ಕಾರಿನ ಗ್ಲಾಸ್ ಪೀಸ್ ಪೀಸ್!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು2 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು21 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌