Manipur Violence: ಮಹಿಳೆಯರ ಮೇಲೆ ದೌರ್ಜನ್ಯ ನಡೆದು 2 ತಿಂಗಳಾದರೂ ಕ್ರಮ ಏಕಿಲ್ಲ? ಪೊಲೀಸರು ಕೊಟ್ಟ ಕಾರಣ ಇದು - Vistara News

ದೇಶ

Manipur Violence: ಮಹಿಳೆಯರ ಮೇಲೆ ದೌರ್ಜನ್ಯ ನಡೆದು 2 ತಿಂಗಳಾದರೂ ಕ್ರಮ ಏಕಿಲ್ಲ? ಪೊಲೀಸರು ಕೊಟ್ಟ ಕಾರಣ ಇದು

Manipur Violence: ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ನಡೆದು ಎರಡು ತಿಂಗಳಾದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಜನ ಆಕ್ರೋಶಪಡಿಸಿರುವ ಬೆನ್ನಲ್ಲೇ ಮಣಿಪುರ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Manipur High Court modifies its order to add Maitai community to ST list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಫಾಲ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ (Manipur Violence) ಮಾಡಿದ ವಿಡಿಯೊ ವೈರಲ್‌ ಆಗಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜುಲೈ 20ರಂದು ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ, ಘಟನೆ ನಡೆದು ಎರಡು ತಿಂಗಳಾದರೂ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂಬ ಕುರಿತು ಮಣಿಪುರ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಬಳಿಕ ಎಲ್ಲ ಆರೋಪಿಗಳು ಪರಾರಿಯಾಗಿದ್ದಾರೆ. 800-1000 ಜನ ಅಮಾನುಷ ಕೃತ್ಯದಲ್ಲಿ ತೊಡಗಿದ್ದರು. ಎಲ್ಲರೂ ಮನೆ ಬಿಟ್ಟು ಓಡಿಹೋಗಿದ್ದರು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದರೂ ಪೊಲೀಸರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿರಲಿಲ್ಲ. ಅಲ್ಲದೆ, ನೋಂಗ್‌ಪೋಕ್‌ ಸೆಕ್ಮಾಯಿ ಪೊಲೀಸ್‌ ಠಾಣೆಗೆ ಜನ ನುಗ್ಗಿದ್ದರು. ಪೊಲೀಸರು ಠಾಣೆಯಲ್ಲಿ ಕಾವಲು ಕಾಯುತ್ತಿದ್ದರು” ಎಂದು ಕಾಂಗ್‌ಪೊಕ್ಪಿ ಎಸ್‌ಪಿ ಸಚ್ಚಿದಾನಂದ ಮಾಹಿತಿ ನೀಡಿದ್ದಾರೆ.

ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಸಾವಿರಾರು ಜನ ಇಬ್ಬರು ಮಹಿಳೆಯರನ್ನು ಬೆತ್ತೆಗೊಳಿಸಿ ಮೆರವಣಿಗೆ ಮಾಡಿದ್ದಾರೆ. ಇದಾದ ಬಳಿಕ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ. ಮಹಿಳೆಯೊಬ್ಬರ ಸಹೋದರನನ್ನು ಕೊಲೆ ಮಾಡಿದ್ದಾರೆ. ನಮ್ಮ ಮೇಲೂ ಹಲ್ಲೆಯಾಗಿದೆ ಎಂದು ಮಹಿಳೆಯರ ಕುಟುಂಬಸ್ಥರು ತಿಳಿಸಿದ್ದಾರೆ. ಮೇ 4ರಂದೇ ಘಟನೆ ನಡೆದಿದ್ದು, ಇದುವರೆಗೆ ಕ್ರಮ ತೆಗೆದುಕೊಳ್ಳದಿರುವ ಕುರಿತು ಆಕ್ರೋಶ ವ್ಯಕ್ತವಾಗಿದೆ. ಆದರೂ, ಪೊಲೀಸರು ನೀಡಿರುವ ಕಾರಣಗಳು ಜನರಿಗೆ ಸಮಾಧಾನ ತಂದಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಮಹಿಳೆಯರ ನಗ್ನ ಮೆರವಣಿಗೆ ಅಮಾನುಷ, ಮಣಿಪುರದ ಅರಾಜಕತೆ ಮುಗಿಯಲಿ

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೊ ತಡವಾಗಿ ವೈರಲ್ ಆದರೂ ದೇಶಾದ್ಯಂತ ಸಂಚಲನ ಮೂಡಿಸಿದೆ. ಮಣಿಪುರ ಸಿಎಂ ಎನ್.ಬಿರೇನ್‌ ಸಿಂಗ್‌ ರಾಜೀನಾಮೆಗೆ ಒತ್ತಾಯ ಕೇಳಿಬಂದಿವೆ. ಮೋದಿ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ. ಪ್ರತಿಪಕ್ಷಗಳು ಸಂಸತ್‌ನಲ್ಲಿ ಇದೇ ವಿಚಾರಕ್ಕೆ ಗಲಾಟೆ ನಡೆಸುತ್ತಿವೆ. “ಘಟನೆಯಿಂದ ಮನಸ್ಸಿಗೆ ನೋವಾಗಿದ್ದು, ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಮೋದಿ ಈಗಾಗಲೇ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

ಫೋರ್ಬ್ಸ್‌ನ ವಿಶ್ವ ಬಿಲಿಯನೇರ್‌ಗಳ ಪಟ್ಟಿಯಲ್ಲಿ (Forbes World Billionaires List) ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಲೋರಿಯಲ್ ಉತ್ತರಾಧಿಕಾರಿ ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ ಸ್ಥಾನ ಪಡೆದಿದ್ದಾರೆ. ಉಳಿದ ಒಂಬತ್ತು ಮಂದಿ ಯಾರು ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟಿದೆ ಗೊತ್ತೇ?

VISTARANEWS.COM


on

By

Forbes World Billionaires List
Koo

ಫೋರ್ಬ್ಸ್‌ನ ವಿಶ್ವ ಬಿಲಿಯನೇರ್‌ಗಳ ಪಟ್ಟಿಯಲ್ಲಿ (Forbes World Billionaires List) ಅತ್ಯಂತ ಸಣ್ಣ ಪಾಲನ್ನು ಮಹಿಳೆಯರು (womens) ಪಡೆದಿದ್ದಾರೆ. ಈ ವರ್ಷ 2,781 ಬಿಲಿಯನೇರ್‌ಗಳಲ್ಲಿ (Billionaires) 369 ಅಂದರೆ ಶೇ. 13.3ರಷ್ಟು ಮಹಿಳೆಯರು ಬಿಲಿಯನೇರ್ ಗಳಾಗಿ (Women Billionaires) ಗುರುತಿಸಿಕೊಂಡಿದ್ದಾರೆ. 2023 ರಲ್ಲಿ 337 ರಿಂದ ಮಹಿಳೆಯರು ಈ ಪಟ್ಟಿಯಲ್ಲಿದ್ದರು. ಇವರ ಒಟ್ಟು ಆಸ್ತಿ ಮೌಲ್ಯ ಸುಮಾರು 1.8 ಲಕ್ಷ ಕೋಟಿ ಡಾಲರ್.. ಕಳೆದ ವರ್ಷಕ್ಕಿಂತ ಈ ಬಾರಿ ಸುಮಾರು 240 ಶತಕೋಟಿ ಡಾಲರ್ ಹೆಚ್ಚಾಗಿದೆ.

ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಲೋರಿಯಲ್ ಉತ್ತರಾಧಿಕಾರಿ ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ (Françoise Bettencourt Meyers) ಸ್ಥಾನ ಪಡೆದಿದ್ದಾರೆ. ಆಕೆಯ ಸಂಪತ್ತು ಕಳೆದ 12 ತಿಂಗಳುಗಳಲ್ಲಿ 19 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ. ಆಕೆಯ ನಿವ್ವಳ ಮೌಲ್ಯ 99.5 ಶತಕೋಟಿ ಡಾಲರ್ ಆಗಿದೆ. 100 ಶತಕೋಟಿ ಡಾಲರ್ ಕ್ಲಬ್‌ನ ಪ್ರವೇಶಸಿದ ಮೊದಲ ಮಹಿಳೆ ಎಂಬ ಖ್ಯಾತಿ ಇವರದಾಗಿದೆ.

ಎರಡು ದಶಕಗಳಿಗೂ ಹೆಚ್ಚು ಕಾಲ ಬೆಟೆನ್‌ಕೋರ್ಟ್ ನಂ. 1 ಸ್ಥಾನದಲ್ಲಿದ್ದಾರೆ. 2006 ರಿಂದ 2017 ರವರೆಗೆ ಆರು ವರ್ಷಗಳ ಕಾಲ ಪ್ರಶಸ್ತಿಯನ್ನು ಹೊಂದಿದ್ದ ಅವರ ತಾಯಿ ಲಿಲಿಯಾನ್ ಬೆಟೆನ್‌ಕೋರ್ಟ್ ಅವರ ಮರಣದ ಎರಡು ವರ್ಷಗಳ ಅನಂತರ 2019 ರಲ್ಲಿ ಬೆಟೆನ್‌ಕೋರ್ಟ್ ಮೇಯರ್ಸ್ ಮೊದಲ ಸ್ಥಾನವನ್ನು ಪಡೆದರು.

ವಾಲ್‌ಮಾರ್ಟ್ ಸಂಸ್ಥಾಪಕ ಸ್ಯಾಮ್ ವಾಲ್ಟನ್ ಅವರ ಏಕೈಕ ಪುತ್ರಿ ಆಲಿಸ್ ವಾಲ್ಟನ್ ಎರಡನೆಯ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಿಕೊಂಡಿದ್ದಾರೆ. 2018 ಮತ್ತು 2020 ರಲ್ಲಿ ಇವರು ಮೊದಲ ಸ್ಥಾನದಲ್ಲಿದ್ದರು.
ವಿಶ್ವದ 10 ಶ್ರೀಮಂತ ಮಹಿಳೆಯರಲ್ಲಿ ಒಂಬತ್ತು ಮಂದಿ ತಮ್ಮ ಆಸ್ತಿಯನ್ನು ತಂದೆ, ಗಂಡ ಅಥವಾ ತಾಯಿಯಿಂದ ಪಡೆದಿದ್ದಾರೆ. ವಿಚ್ಛೇದನದ ಬಳಿಕ ತಮ್ಮ ಅದೃಷ್ಟವನ್ನು ಬದಲಾಯಿಸಿಕೊಂಡ ಟಾಪ್ 10 ರಲ್ಲಿ ಸ್ಥಾನ ಪಡೆದಿರುವುದು ಮೆಕೆಂಜಿ ಸ್ಕಾಟ್ ಮಾತ್ರ.

35.6 ಶತಕೋಟಿ ಡಾಲರ್ ಮೌಲ್ಯದ ಜೆಫ್ ಬೆಜೋಸ್ ಅವರ ಮಾಜಿ ಪತ್ನಿ ಸ್ಕಾಟ್ ಅವರ ಮೌಲ್ಯ ಕಳೆದ ವರ್ಷದಿಂದ 11.2 ಶತಕೋಟಿ ಡಾಲರ್ ಗೆ ಏರಿಕೆಯಾಗಿದೆ. ಇವರು ಇತ್ತೀಚೆಗೆ 300 ಕ್ಕೂ ಹೆಚ್ಚು ಲಾಭೋದ್ದೇಶವಿಲ್ಲದವರಿಗೆ 640 ದಶಲಕ್ಷ ಡಾಲರ್ ದೇಣಿಗೆ ನೀಡಿದ್ದಾರೆ. ಇವರು ಇಷ್ಟೊಂದು ದಾನ ಮಾಡುವುದಲ್ಲದೇ ಇದ್ದರೆ ಒಟ್ಟು 69 ಶತಕೋಟಿ ಡಾಲರ್ ಮೌಲ್ಯವನ್ನು ಹೊಂದಿರುತ್ತಿದ್ದರು. ಈ ಬಾರಿ ಇವರು ಐದನೇ ಸ್ಥಾನದಲ್ಲಿದ್ದಾರೆ.

ಟಾಪ್ 10ರಲ್ಲಿ ಇರುವವವರು


ಅಬಿಗೈಲ್ ಜಾನ್ಸನ್

ಇವರ ನಿವ್ವಳ ಮೌಲ್ಯ 29 ಶತಕೋಟಿ ಡಾಲರ್. ವಯಸ್ಸು 62. ಫಿಡೆಲಿಟಿ ಇನ್ವೆಸ್ಟ್‌ಮೆಂಟ್ಸ್ ನಲ್ಲಿ ಸಿಇಒ ಸ್ಥಾನದಲ್ಲಿರುವ ಇವರು . ಅಮೆರಿಕದವರಾದ ಇವರು ಈ ವರ್ಷ ಟಾಪ್ 10ನೇ ಶ್ರೀಮಂತ ಮಹಿಳೆಯಾಗಿದ್ದಾರೆ. ತಂದೆಯ ಬಳಿಕ ಇವರಿಗೆ ಈ ಅಧಿಕಾರ ಸಿಕ್ಕಿತ್ತು.

ಗಿನಾ ರೈನ್ಹಾರ್ಟ್

ಇವರ ನಿವ್ವಳ ಮೌಲ್ಯ 30.8 ಶತಕೋಟಿ ಡಾಲರ್. ವಯಸ್ಸು 70. ಆಸ್ಟ್ರೇಲಿಯಾದವರಾದ ಇವರು ಆಸ್ಟ್ರೇಲಿಯನ್ ಮ್ಯಾಗ್ನೆಟ್ ಗಣಿಗಾರಿಕೆ ಮತ್ತು ಕೃಷಿ ಕಂಪನಿ ಹ್ಯಾನ್ಕಾಕ್ ಪ್ರಾಸ್ಪೆಕ್ಟಿಂಗ್ ಗ್ರೂಪ್ ಅಧ್ಯಕ್ಷರಾಗಿದ್ದಾರೆ. ತಂದೆಯ ಬಳಿಕ ಇವರಿಗೆ ಈ ಸ್ಥಾನ ಪ್ರಾಪ್ತವಾಗಿದೆ. ಇವರು ವಿಶ್ವದ 9ನೇ ಶ್ರೀಮಂತ ಮಹಿಳೆಯಾಗಿ ಗುರುತಿಸಿಕೊಂಡಿದ್ದಾರೆ.

ಮಿರಿಯಮ್ ಅಡೆಲ್ಸನ್ ಮತ್ತು ಕುಟುಂಬ

ಎಂಟನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 32 ಶತಕೋಟಿ ಡಾಲರ್. ವಯಸ್ಸು 78. ಅಡೆಲ್ಸನ್ ಮತ್ತು ಅವರ ಕುಟುಂಬವು ವಿಶ್ವದ ಅತಿದೊಡ್ಡ ಕ್ಯಾಸಿನೊ ನಿರ್ವಾಹಕರಲ್ಲಿ ಒಂದಾದ ಲಾಸ್ ವೇಗಾಸ್ ಸ್ಯಾಂಡ್ಸ್‌ನ ಅರ್ಧಕ್ಕಿಂತ ಹೆಚ್ಚು ಮಾಲೀಕತ್ವವನ್ನು ಹೊಂದಿದೆ. ಪತಿಯ ಮರಣದ ಬಳಿಕ ಮಿರಿಯಮ್ ಪಾಲನ್ನು ಪಡೆದರು.

ರಾಫೆಲಾ ಅಪೊಂಟೆ-ಡಯಮಂಟ್

ಏಳನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 33.1 ಶತಕೋಟಿ ಡಾಲರ್. ವಯಸ್ಸು 79. ಸ್ವಿಟ್ಜರ್ಲೆಂಡ್ ನವರಾದ ಇವರು ಎಂಎಸ್ ಸಿ ಯ ಸಹಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಪತಿಯಿಂದ ಶೇ. 50ರಷ್ಟು ಪಾಲು ಪಡೆದರು. ಎಂಎಸ್ ಸಿಯ ಕಂಪನಿಯಲ್ಲಿ ರಾಫೆಲಾ ವಿಶ್ವದ ಅತಿದೊಡ್ಡ ಹಡಗುಗಳನ್ನು ಅಲಂಕರಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ.


ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

ಆರನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 33.5 ಶತಕೋಟಿ ಡಾಲರ್. ವಯಸ್ಸು 74. ಉಕ್ಕು ಉದ್ಯಮದಲ್ಲಿರುವ ಇವರು ಭಾರತದ ಪೌರತ್ವವನ್ನು ಪಡೆದಿದ್ದಾರೆ. ಜಿಂದಾಲ್ ಗ್ರೂಪ್‌ನ ಅಧ್ಯಕ್ಷೆರಾಗಿರುವ ಈ ಇವರು ಓಂ ಪ್ರಕಾಶ್ ಜಿಂದಾಲ್ ಅವರ ಪತ್ನಿ. ಭಾರತದ ಅತ್ಯಂತ ಶ್ರೀಮಂತ ಮಹಿಳೆ. ಜಿಂದಾಲ್ ಗ್ರೂಪ್ ಉಕ್ಕು, ವಿದ್ಯುತ್, ಸಿಮೆಂಟ್ ಮತ್ತು ಮೂಲಸೌಕರ್ಯ ಒದಗಿಸುವ ಕಾರ್ಯದಲ್ಲಿ ಸಕ್ರಿಯವಾಗಿದೆ.

ಮ್ಯಾಕೆಂಜಿ ಸ್ಕಾಟ್

ಐದನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 35.6 ಶತಕೋಟಿ ಡಾಲರ್. ವಯಸ್ಸು 53. ಯು.ಎಸ್. ನವರಾದ ಇವರು 2019 ರಲ್ಲಿ ಜೆಫ್ ಬೆಜೋಸ್ ಅವರ ವಿಚ್ಛೇದನದ ಬಳಿಕ ಅಮೆಜಾನ್‌ ನಲ್ಲಿ ಶೇ. 4ರಷ್ಟು ಪಾಲನ್ನು ಪಡೆದರು.

ಜಾಕ್ವೆಲಿನ್ ಮಾರ್ಸ್

ನಾಲ್ಕನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 38.5 ಶತಕೋಟಿ ಡಾಲರ್. ವಯಸ್ಸು: 84. ಯುಎಸ್ ನವರಾದ ಇವರು ಕ್ಯಾಂಡಿ, ಸಾಕುಪ್ರಾಣಿಗಳ ಆಹಾರದಿಂದ ಆದಾಯ ಗಳಿಸುತ್ತಿದ್ದಾರೆ.
Mars Inc ನ ಉತ್ತರಾಧಿಕಾರಿ ಜಾಕ್ವೆಲಿನ್ ಮಾರ್ಸ್ ತನ್ನ ಸಹೋದರ ಜಾನ್ ಮಾರ್ಸ್ ಮತ್ತು ಇನ್ನೋರ್ವ ದಿವಂಗತ ಸಹೋದರ ಫಾರೆಸ್ಟ್ ಜೂನಿಯರ್ ಅವರ ನಾಲ್ಕು ಹೆಣ್ಣುಮಕ್ಕಳೊಂದಿಗೆ ಈ ಉದ್ಯಮ ನಡೆಸುತ್ತಿದ್ದಾರೆ. ಇವರ ಕಂಪೆನಿಯು M&Ms, Snickers, Ben’s Original ಮತ್ತು Pedigree ನಂತಹ ಸಾಂಪ್ರದಾಯಿಕ ಬ್ರ್ಯಾಂಡ್‌ಗಳನ್ನು ಹೊಂದಿದೆ. ಇದನ್ನು ಆಕೆಯ ಅಜ್ಜ ಫ್ರಾಂಕ್ ಸಿ. ಮಾರ್ಸ್ ಸ್ಥಾಪಿಸಿದ್ದರು.

ಜೂಲಿಯಾ ಕೋಚ್ ಮತ್ತು ಕುಟುಂಬ

ಮೂರನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 64.3 ಶತಕೋಟಿ ಡಾಲರ್. ವಯಸ್ಸು: 61. ಅಮೆರಿಕದವರಾದ ಇವರು ಎರಡನೇ ಸ್ಥಾನದಿಂದ ಮೂರನೇ ಸ್ಥಾನ ಕ್ಕೆ ಇಳಿದಿದ್ದಾರೆ. ಜೂಲಿಯಾ ತನ್ನ ಮೂವರು ಮಕ್ಕಳೊಂದಿಗೆ ಕೋಚ್ ಇಂಡಸ್ಟ್ರೀಸ್‌ನಲ್ಲಿ ಶೇ. 42ರಷ್ಟು ಪಾಲನ್ನು ಹೊಂದಿದ್ದಾರೆ. ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್‌ನ ಟ್ರಸ್ಟಿಯಾಗಿರುವ ಇವರು ತೈಲ ಸಂಸ್ಕರಣೆ ಮತ್ತು ಪೇಪರ್ ಟವೆಲ್‌ಗಳವರೆಗಿನ ವ್ಯವಹಾರಗಳನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Forbes India: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಖ್ಯಾತ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ

ಆಲಿಸ್ ವಾಲ್ಟನ್

ಎರಡನೇ ಸ್ಥಾನದಲ್ಲಿರುವ ಇವರ ನಿವ್ವಳ ಮೌಲ್ಯ 72.3 ಶತಕೋಟಿ ಡಾಲರ್. ವಯಸ್ಸು 74. ಅಮೆರಿಕದವರಾದ ಇವರು ವಾಲ್‌ಮಾರ್ಟ್‌ನ ಉದ್ಯಮದಲ್ಲಿದ್ದಾರೆ. ಅಮೆರಿಕದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಿಕೊಂಡಿರುವ ಇವರು ವಾಲ್ಮಾರ್ಟ್ ಸಂಸ್ಥಾಪಕ ಸ್ಯಾಮ್ ವಾಲ್ಟನ್ ಅವರ ಏಕೈಕ ಪುತ್ರಿ.


ಫ್ರಾಂಕೋಯಿಸ್ ಬೆಟೆನ್‌ಕೋರ್ಟ್ ಮೇಯರ್ಸ್ ಮತ್ತು ಕುಟುಂಬ

ಫೋರ್ಬ್ ಪಟ್ಟಿಯಲ್ಲಿ ಮೊದಲನೇ ಸ್ಥಾನ ಗಳಿಸಿರುವ ಇವರ ನಿವ್ವಳ ಮೌಲ್ಯ 99.5 ಶತಕೋಟಿ ಡಾಲರ್. ವಯಸ್ಸು 70. ಫ್ರಾನ್ಸ್ ನವರಾದ ಇವರು ಲೋರಿಯಲ್ ಸಂಸ್ಥಾಪಕರ ಮೊಮ್ಮಗಳು. ಸತತ ನಾಲ್ಕನೇ ವರ್ಷ ವಿಶ್ವದ ಅತ್ಯಂತ ಶ್ರೀಮಂತ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Continue Reading

ದೇಶ

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Delhi Temperature: ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ತಾಪಮಾನ ಹೆಚ್ಚಾದ ಕಾರಣ ಜನ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿಗಳ ಮೊರೆ ಹೋಗಿದ್ದಾರೆ.

VISTARANEWS.COM


on

Delhi Temperature
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಇರುವುದೇ ಹಾಗೆ. ಮಳೆ ಬಂದರೆ ಅತಿಯಾದ ಮಳೆ, ಚಳಿಗಾಲದಲ್ಲಿ ವಿಪರೀತ ಚಳಿ ಹಾಗೂ ಬೇಸಿಗೆಯಲ್ಲಿ ವಿಪರೀತ ಬಿಸಿಲು. ಇದಕ್ಕೆ ನಿದರ್ಶನ ಎಂಬಂತೆ, ದೆಹಲಿಯ ಮಂಗೇಶ್‌ಪುರದಲ್ಲಿ (Mungeshpur) ಬುಧವಾರ (ಮೇ 29) ಮಧ್ಯಾಹ್ನ 2.30ರ ಸುಮಾರಿಗೆ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ (Delhi Temperature) ದಾಖಲಾಗಿದ್ದು, ದೇಶದ ಇತಿಹಾಸದಲ್ಲಿಯೇ ಗರಿಷ್ಠ ತಾಪಮಾನ ಇದಾಗಿದೆ ಎಂದು ತಿಳಿದುಬಂದಿದೆ. ಚುರುಗುಡುವ ಬಿಸಿಲು, ಮನೆಯಲ್ಲಿ ಕೂತರೂ ಬೆವರುವ ಪರಿಸ್ಥಿತಿ ಎದುರಾದ ಕಾರಣ ರಾಜಧಾನಿ ಜನ ಪರಿತಪಿಸುವಂತಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯತ್ತ ಉಷ್ಣಮಾರುತ ಅಪ್ಪಳಿಸುತ್ತಿದೆ. ಮಳೆಯೂ ಇಲ್ಲದ ಕಾರಣ ಬಿಸಿಲು ಮತ್ತಷ್ಟು ಜೋರಾಗಿದೆ. ನಿರೀಕ್ಷೆಗಿಂತ ಬರೋಬ್ಬರಿ 9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಹೆಚ್ಚಾಗಿರುವುದು ಜನ ಹೈರಾಣಾಗುವಂತೆ ಮಾಡಿದೆ. ದೆಹಲಿಯಲ್ಲಿ 2002ರಲ್ಲಿ 49.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದೇ ಇದುವರೆಗಿನ ದಾಖಲೆಯಾಗಿತ್ತು. ಆದರೀಗ, ತಾಪಮಾನವು 50 ಡಿಗ್ರಿ ಸೆಲ್ಸಿಯಸ್‌ ದಾಟಿರುವುದು ಜನರಿಗೆ ಚಿಂತೆಯಾಗಿದೆ. ತಾಪಮಾನದ ಕುರಿತು ದೆಹಲಿಯ ಹವಾಮಾನ ಇಲಾಖೆಯ ಕಚೇರಿಯು ಮಾಹಿತಿ ನೀಡಿದೆ.

ವಿದ್ಯುತ್‌ ಬೇಡಿಕೆಯಲ್ಲೂ ದಾಖಲೆ

ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೆಹಲಿಯ ವಿದ್ಯುತ್‌ ಬೇಡಿಕೆ ಪ್ರಮಾಣವೂ ದಾಖಲೆಯಾಗಿದೆ. ದೆಹಲಿಯ ವಿದ್ಯುತ್‌ ಬಳಕೆಯು ಗುರುವಾರ ಮಧ್ಯಾಹ್ನದ 3.36ರ ಸುಮಾರಿಗೆ 8,300 ಮೆಗಾವ್ಯಾಟ್‌ ದಾಟಿದೆ. ಇದು ದೆಹಲಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಳಕೆಯಾದ ವಿದ್ಯುತ್‌ ಪ್ರಮಾಣ ಎಂಬ ದಾಖಲೆಯಾಗಿದೆ. ವಿದ್ಯುತ್‌ ಪೂರೈಕೆ ಕಂಪನಿಗಳ ಪ್ರಕಾರ ದೆಹಲಿಗೆ ನಿತ್ಯ 8,200 ಮೆಗಾ ವ್ಯಾಟ್‌ ವಿದ್ಯುತ್ ಬೇಕಾಗುತ್ತಿತ್ತು. ಆದರೆ, ತಾಪಮಾನ ಜಾಸ್ತಿಯಾದ ಕಾರಣ ಪ್ರತಿಯೊಂದು ಮನೆಯಲ್ಲೂ ನಿರಂತರವಾಗಿ ಫ್ಯಾನ್‌, ಕೂಲರ್‌ ಹಾಗೂ ಎ.ಸಿ ಬಳಸುತ್ತಿರುವ ಕಾರಣ ವಿದ್ಯುತ್‌ ಬೇಡಿಕೆಯೂ ದಾಖಲೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯ ನಜಾಫ್‌ಗಢ, ಮಂಗೇಶ್‌ಪುರ ಹಾಗೂ ನರೇಲಾದಲ್ಲಿ ಗುರುವಾರ 45 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಕನಿಷ್ಠ ಎಂಬಂತಾಗಿದೆ. ಇದರಿಂದಾಗಿ ಬಹುತೇಕ ನಗರಗಳಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದೆ. ಇನ್ನು ಹೆಚ್ಚು ಮರುಭೂಮಿ ಹೊಂದಿರುವ ರಾಜಸ್ಥಾನದ ಫಲೋಡಿಯಲ್ಲಿ ಗರಿಷ್ಠ 51 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಂಗಾಳ ಕೊಲ್ಲಿಯಿಂದ ತಂಪು ಗಾಳಿ ಬೀಸುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ತಾಪಮಾನ ನಿಯಮಿತವಾಗಿದೆ ಎಂದು ತಿಳಿದುಬಂದಿದೆ.

ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿ

ಗರಿಷ್ಠ ತಾಪಮಾನ ದಾಖಲಾಗುತ್ತಿರುವ ಕಾರಣ ದೆಹಲಿಯಲ್ಲಿ ಅಗ್ನಿ ದುರಂತಗಳ ಸಂಖ್ಯೆಯೂ ಜಾಸ್ತಿಯಾಗುತ್ತಿವೆ ಎಂಬುದಾಗಿ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. “ಪ್ರತಿದಿನ ಅಗ್ನಿ ಅವಘಡಗಳ ಕುರಿತು ಸರಾಸರಿ 200ಕ್ಕೂ ಅಧಿಕ ಕರೆಗಳು ಬರುತ್ತಿವೆ. ಇದು ಕಳೆದ 10 ವರ್ಷಗಳಲ್ಲೇ ಗರಿಷ್ಠವಾಗಿದೆ. ಇನ್ನೂ ಒಂದು ಡಿಗ್ರಿ ಸೆಲ್ಸಿಯಸ್‌ ಹೆಚ್ಚಾದರೂ ಕರೆಗಳ ಸಂಖ್ಯೆ 250 ದಾಟಬಹುದು. ಹಾಗಾಗಿ, ದೆಹಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಯನ್ನು ಇನ್ನಷ್ಟು ಹೆಚ್ಚಿಸಲಾಗುತ್ತಿದೆ” ಎಂದು ದೆಹಲಿ ಫೈರ್‌ ಡಿಪಾರ್ಟ್‌ಮೆಂಟ್‌ ನಿರ್ದೇಶಕ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Continue Reading

ವೈರಲ್ ನ್ಯೂಸ್

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Viral News: ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ಸದ್ಯ ವೈರಲ್‌ ಆಗಿದೆ. ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೊ ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral News
Koo

ಲಕ್ನೋ: ಮೊಸಳೆ- ಈ ಹೆಸರು ಕೇಳಿದರೆ ಸಾಕು ದೈತ್ಯ ದೇಹ, ಚೂಪಾದ ಹಲ್ಲು, ಸದಾ ಬೇಟೆಯಾಡಲು ಹೊಂಚು ಹಾಕುತ್ತಿರುವ ದೃಶ್ಯವೇ ಕಣ್ಣ ಮುಂದೆ ಬರುತ್ತದೆ. ಮೃಗಾಲಯದಲ್ಲಿ ದೂರದಿಂದ ಮೊಸಳೆಯನ್ನು ನೋಡಿ ಅದರ ಅಗಾಧ ಶಕ್ತಿಗೆ ಬೆರಗಾಗುತ್ತೇವೆ. ಅದು ಬಿಟ್ಟು ಕೋಟಿ ರೂ. ಕೊಡುತ್ತೇವೆ ಎಂದರೆ ಯಾರೂ ಮೊಸಳೆ ಸಮೀಪಕ್ಕೆ ಸುಳಿಯುವ ದುಸ್ಸಾಹಸ ಮಾಡುವುದಿಲ್ಲ. ಹೀಗಿರುವಾಗ ನಗರದ ಮಧ್ಯೆ ದೈತ್ಯ ದೇಹಿ ಮೊಸಳೆ ಕಂಡು ಬಂದರೆ ಏನಾಗಬೇಡ? ಹೌದು, ಇಂತಹದ್ದೊಂದು ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾಲುವೆಯ ಗೇಟ್‌ ದಾಟಿ ಜನ ನಿಬಿಡ ಪ್ರದೇಶಕ್ಕೆ ಬಂದಿದ್ದ ಸುಮಾರು 10 ಅಡಿ ಉದ್ದದ ಮೊಸಳೆ ಮರಳಿ ನೀರಿನತ್ತ ತೆರಳಲು ಪ್ರಯತ್ನಪಡುವ ದೃಶ್ಯ ನೋಡಿ ನೆಟ್ಟಿಗರು ರೋಮಾಂಚನಗೊಂಡಿದ್ದಾರೆ (Viral News).

ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಘಾಟ್ ಬಳಿ ಈ ಘಟನೆ ನಡೆದಿದೆ. ಗಂಗಾ ಕಾಲುವೆಯಿಂದ ಆಕಸ್ಮಿಕವಾಗಿ ಹೊರಗೆ ಬಂದ ಈ ಬೃಹತ್‌ ಗಾತ್ರದ ಮೊಸಳೆ ನರೋರಾ ಬ್ಯಾರೇಜ್ ಕೆಳಗಿನ ಗಂಗಾ ನದಿಗೆ ಹಾರಲು ಪ್ರಯತ್ನಿಸುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೊದಲ್ಲಿ ಏನಿದೆ?

ಅದು ನರೋರಾ ಘಾಟ್‌ನ ನರೋರಾ ಬ್ಯಾರೇಜ್. ಕಾಲುವೆ ಸುತ್ತಲೂ ಕಬ್ಬಿಣದ ಸರಳುಗಳ ಗೇಟ್‌ ಅಳವಡಿಸಲಾಗಿದೆ. ಹೇಗೋ ಗೇಟ್‌ ದಾಟಿ ಈಚೆ ಬಂದ ಮೊಸಳೆಯೊಂದು ಸಿಮೆಂಟ್‌ ನೆಲದ ಮೇಲೆ ಒದ್ದಾಡುತ್ತಿರುವುದನ್ನು ತೋರಿಸುವ ಮೂಲಕ ದೃಶ್ಯ ಆರಂಭವಾಗುತ್ತದೆ. ನೀರಿಗೆ ಹೋಗಲು ಆ ಗೇಟ್‌ ದಾಟಲು ಮೊಸಳೆ ಪ್ರಯತ್ನಿಸುತ್ತದೆ. ಸರಳು ಹತ್ತಿ ಇನ್ನೇನು ಆಚೆ ಜಿಗಿಯಬೇಕು ಎನ್ನುವಷ್ಟರಲ್ಲಿ ನಿಯಂತ್ರಣ ತಪ್ಪಿ ದೈತ್ಯ ದೇಹದೊಂದಿಗೆ ದೊಪ್ಪೆಂದು ಸಿಮೆಂಟ್‌ ನೆಲಕ್ಕೆ ಬೀಳುತ್ತದೆ. ಮತ್ತೂ ಕೂಡ ಅದು ತನ್ನ ಪ್ರಯತ್ನವನ್ನು ಬಿಡುವುದಿಲ್ಲ. ಗೇಟ್‌ ಆಚೆ ಹಾರಲು ಯತ್ನಿಸುತ್ತದೆ. ಅಲ್ಲೇ ಸಮೀಪದಲ್ಲಿರುವ ಅಧಿಕಾರಿಯೊಬ್ಬರು ದೊಣ್ಣೆ ಹಿಡಿದು ಮೊಸಳೆ ಜನರತ್ತ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಇದಿಷ್ಟು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ಅದನ್ನು ಸುರಕ್ಷಿತವಾಗಿ ನೀರಿಗೆ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆ ಹೇಗಿತ್ತು?

ಈ ಮೊಸಳೆಯನ್ನು ನೀರಿಗೆ ಸಾಗಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಹರ ಸಾಹಸವನ್ನೇ ಪಡಬೇಕಾಯಿತು. ಆರಂಭದಲ್ಲಿ ಅದರ ತಲೆಯನ್ನು ಬಟ್ಟೆಯಿಂದ ಮುಚ್ಚಿ ಅದರ ಕಾಲುಗಳನ್ನು ಹಗ್ಗದಿಂದ ಕಟ್ಟಲಾಯಿತು. ಬಳಿಕ ನಾಲ್ವರು ಅರಣ್ಯ ಅಧಿಕಾರಿಗಳು ಮೊಸಳೆಯ ತಲೆ ಮತ್ತು ಮುಂಭಾಗದ ಕಾಲುಗಳನ್ನು ಬಿಗಿದಿರುವ ಹಗ್ಗಗಳನ್ನು ಹಿಡಿದರು. ಈ ವೇಳೆ ಇನ್ನೊಬ್ಬ ಅಧಿಕಾರಿ ಅದರ ಹಿಂದಿನ ಕಾಲುಗಳಿಗೆ ಹಗ್ಗವನ್ನು ಸುತ್ತಿದರು. ಇಬ್ಬರು ಮೊಸಳೆಯ ಬಾಲವನ್ನು ಎತ್ತಿಕೊಂಡರು. ಹೀಗೆ ಕೆಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮೊಸಳೆಯನ್ನು ಸುರಕ್ಷಿತವಾಗಿ ನೀರಿಗೆ ಬಿಡಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹುಲಿ-ಮೊಸಳೆ ಮಧ್ಯೆ ರಣ ರೋಚಕ ಕದನ; ಕೊನೆಯಲ್ಲಿ ಗೆದ್ದವರು ಯಾರು?

ಹಲವರು ವಿಡಿಯೊ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪಾಪ ಮೊಸಳೆ ಹಸಿದಿರಬೇಕು. ಆಹಾರ ಅರಸಿಕೊಂಡು ಬಂದಿದೆ ಎಂದು ಹಲವರು ಕರುಣೆ ತೋರಿದ್ದಾರೆ. ಇನ್ನು ಕೆಲವರು ಇದು ಫೇಕ್‌ ವಿಡಿಯೊ, ಕೃತಕ ಬುದ್ಧಿಮತ್ತೆ ಬಳಸಿ ತಯಾರಿಸಲಾಗಿದೆ ಎಂದೂ ಹೇಳಿದ್ದಾರೆ. ಅದೇನೇ ಇರಲಿ ಇಷ್ಟು ದೈತ್ಯ ದೇಹಿ ಮೊಸಳೆ, ಅದರ ಸಾಹಸವನ್ನು ನೋಡಿ ಹಲವರು ರೋಮಾಂಚನಗೊಂಡಿದ್ದು ಸುಳ್ಳಲ್ಲ.

Continue Reading

ದೇಶ

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

PM Narendra Modi: ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

PM Narendra Modi
Koo

ಪಾಟ್ನಾ: ಲೋಕಸಭೆ ಚುನಾವಣೆ(Lok Sabha Election 2024)ಯ ಕೊನೆಯ ಹಂತಕ್ಕೆ ತಲುಪಿದ್ದು, ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯನ್ನೂ ಎದುರಿಸುತ್ತಿರುವ ಒಡಿಶಾದಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸಿಎಂ ನವೀನ್‌ ಪಟ್ನಾಯಕ್‌ (Naveen Patnaik) ಅವರ ಆರೋಗ್ಯದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಇದೀಗ ಈ ವಿಡಿಯೂ ದೇಶವ್ಯಾಪಿ ಬಹಳ ಸದ್ದು ಮಾಡುತ್ತಿದೆ.

ಒಡಿಶಾದ ಮಯೂರ್‌ಭಂಜ್‌ನಲ್ಲಿ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಡಿಶಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹಾಲಿ ಸಿಎಂ ನವೀನ್‌ ಪಟ್ನಾಯಕ್‌ ಅವರ ಆರೋಗ್ಯ ಕ್ಷೀಣಿಸಲು ಕಾರಣ ಏನೆಂಬುದರ ಬಗ್ಗೆ ತನಿಖೆಗೆ ಆದೇಶಿಸುತ್ತೇವೆ ಎಂದು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಕಳೆದೊಂದು ವರ್ಷಗಳಿಂದ ನವೀನ್‌ ಬಾಬು(ಪಟ್ನಾಯಕ್‌) ಅವರ ಆರೋಗ್ಯ ಸ್ಥಿತಿ ದಿನೇ ದಿನೇ ಹದಗೆಡುತ್ತಿರುವ ಬಗ್ಗೆ ಅವರ ಹಿತೈಷಿಗಳು ಇತ್ತೀಚೆಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಕಳೆದೊಂಡು ವರ್ಷಗಳಿಂದ ಪಟ್ನಾಯಕ್‌ ಅವರ ಪರಿಚಯಸ್ಥರು ಯಾರೇ ನನ್ನನ್ನು ಭೇಟಿ ಮಾಡಿದರೂ ಅವರ ಆರೋಗ್ಯದ ಬಗ್ಗೆ ಚರ್ಚೆ ಮಾಡುತ್ತಾರೆ. ಈಗೀಗ ಅವರಿಗೆ ತಮ್ಮ ಸ್ವಂತ ಕೆಲಸಗಳನ್ನೂ ಮಾಡಿಕೊಳ್ಳಲಾಗದಂತಹ ಅನಾರೋಗ್ಯ ಕಾಡುತ್ತಿದೆ ಎಂಬುದು ಅವರ ಆಪ್ತರಿಂದ ತಿಳಿದಿದೆ.

ಪಟ್ನಾಯಕ್‌ ಅವರ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಇಷ್ಟೊಂದು ಹದಗೆಟ್ಟಿರುವ ಹಿಂದೆ ಏನೋ ಸಂಚು ಇದೆ ಅವರ ಆಪ್ತರು ಆಗಾಗ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ನಾಯಕ್‌ ಜೊತೆಗಿದ್ದುಕೊಂಡೇ ಅವರ ಅಧಿಕಾರವನ್ನು ಮೋಜಿಗೆ ಬಳಸಿಕೊಳ್ಳುತ್ತಿರುವವರೇ ಅವರನ್ನು ನಿಧಾನವಾಗಿ ಅನಾರೋಗ್ಯಕ್ಕೆ ತಳ್ಳುತ್ತಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಈ ಅನುಮಾನಕ್ಕೆ ತೆರೆ ಬೀಳಬೇಕಿದೆ. ಜೂ.10ರ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ನವೀನ್‌ ಬಾಬು ಅವರ ಅನಾರೋಗ್ಯಕ್ಕೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ವಿಶೇಷ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು ಒಡಿಶಾದಲ್ಲಿ ಬಿಜೆಡಿಯ 25 ವರ್ಷಗಳ ಆಡಳಿತ ಅಂತ್ಯಗೊಳ್ಳುವುದು ಖಚಿತ. ಬಿಜೆಪಿಯ ವ್ಯಕ್ತಿ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಒಡಿಶಾಗೆ ಒಡಿಯಾ ವ್ಯಕ್ತಿಯೇ ಸಿಎಂ ಆದರೆ ಚೆಂದ. ಹೊರಗಿನವರ ಕೈಗೆ ಅಧಿಕಾರ ಕೊಡಲು ಜನರಿಗೂ ಮನಸಿಲ್ಲ ಎಂದು ಪರೋಕ್ಷವಾಗಿ ಬಿಜೆಡಿ ಸಿಎಂ ಸ್ಥಾನದ ಆಕಾಂಕ್ಷಿ ಪಾಂಡಿಯನ್‌ಗೆ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Continue Reading
Advertisement
Dinesh Karthik
ಕ್ರೀಡೆ25 mins ago

Dinesh Karthik: ಪ್ಯಾರಿಸ್​ನಲ್ಲಿ ನೀರಜ್​ಗೆ ತೀವ್ರ ಪೈಪೋಟಿ ನೀಡಲು ಮುಂದಾದರೇ ದಿನೇಶ್​ ಕಾರ್ತಿಕ್​?; ಜಾವೆಲಿನ್​ ಅಭ್ಯಾಸದ ವಿಡಿಯೊ ವೈರಲ್​

Prajwal Revanna Case
ಕರ್ನಾಟಕ36 mins ago

Prajwal Revanna Case: ಚೇತನ್‌, ನವೀನ್ ಗೌಡಗೆ ಮೂರು ದಿನ ಎಸ್‌ಐಟಿ ಕಸ್ಟಡಿ

Forbes World Billionaires List
ವಾಣಿಜ್ಯ48 mins ago

Forbes World Billionaires List: ವಿಶ್ವದ ಶ್ರೀಮಂತ ಮಹಿಳೆಯರು; ಭಾರತದ ಸಾವಿತ್ರಿ ಜಿಂದಾಲ್‌ಗೆ ಎಷ್ಟನೇ ಸ್ಥಾನ?

Cannes 2024 Sandalwood Actress Interview
ಫ್ಯಾಷನ್50 mins ago

Cannes 2024 Sandalwood Actress Interview: ಕಾನ್‌ನಲ್ಲಿ ಹ್ಯಾಟ್ರಿಕ್‌ ವಾಕ್‌ ಮಾಡಿದ ಸ್ಯಾಂಡಲ್‌ವುಡ್‌ ನಟಿ ಇತಿ ಆಚಾರ್ಯ ಹೇಳಿದ್ದೇನು?

Delhi Temperature
ದೇಶ55 mins ago

Delhi Temperature: ದೆಹಲಿಯಲ್ಲಿ 52 ಡಿಗ್ರಿ ಸೆಲ್ಸಿಯಸ್‌ ತಾಪಮಾನ; ದೇಶದಲ್ಲೇ ಇದುವರೆಗಿನ ಗರಿಷ್ಠ ಟೆಂಪರೇಚರ್!

Babar Azam
ವೈರಲ್ ನ್ಯೂಸ್1 hour ago

Babar Azam: ಫೋಟೋ ತೆಗೆಯಲು ಬಂದ ಅಭಿಮಾನಿಗಳಿಗೆ ಬೈದು ಓಡಿಸಿದ ಬಾಬರ್ ಅಜಂ; ವಿಡಿಯೊ ವೈರಲ್​

Madhu Chopra on Priyanka Chopra-Nick Jonas' age gap
ಬಾಲಿವುಡ್1 hour ago

Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

Tamarind Fruit Benefits
ಆರೋಗ್ಯ1 hour ago

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

Karnataka Weather
ಮಳೆ2 hours ago

Karnataka Weather: ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಇಂದು ಸಂಜೆ ಭಾರಿ ಮಳೆ ಸಾಧ್ಯತೆ!

Viral News
ವೈರಲ್ ನ್ಯೂಸ್2 hours ago

Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ23 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌