Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ - Vistara News

ದೇಶ

Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

Mann Ki Baat: ʼಮನ್​ ಕಿ ಬಾತ್​ʼನ 112ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಜತೆಗೆ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದರು. ಮಾತ್ರವಲ್ಲ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು.

VISTARANEWS.COM


on

Mann Ki Baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024)ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಪ್ರೋತ್ಸಾಹಿಸುವಂತೆ ದೇಶವಾಸಿಗಳಲ್ಲಿ ಮನವಿ ಮಾಡಿದರು. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ʼಮನ್​ ಕಿ ಬಾತ್​ʼ (Mann Ki Baat)ನ 112ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಈ ಕರೆ ನೀಡಿದರು.

“ಇದೀಗ ಇಡೀ ಜಗತ್ತಿನ ಕಣ್ಣು ಪ್ಯಾರಿಸ್ ಒಲಿಂಪಿಕ್ಸ್‌ನತ್ತ ನೆಟ್ಟಿದೆ. ನಮ್ಮ ಕ್ರೀಡಾಪಟುಗಳಿಗೆ ಜಾಗತಿಕ ವೇದಿಕೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲು ಮತ್ತು ದೇಶಕ್ಕಾಗಿ ಗಮನಾರ್ಹ ಕೊಡುಗೆ ನೀಡಲು ಒಲಿಂಪಿಕ್ಸ್ ಅವಕಾಶ ಒದಗಿಸುತ್ತದೆ. ನೀವೂ ಸಹ ನಮ್ಮ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಮತ್ತು ಭಾರತವನ್ನು ಹುರಿದುಂಬಿಸಿ” ಎಂದು ಅವರು ಹೇಳಿದರು.

ಇದೇ ವೇಳೆ ಅವರು ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ (International Mathematics Olympiad)ನಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು. “ಕೆಲವು ದಿನಗಳ ಹಿಂದೆ ನಡೆದ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾರತದ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ. ಆ ಮೂಲಕ 4 ಚಿನ್ನದ ಪದಕ ಮತ್ತು 1 ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. 100ಕ್ಕೂ ಹೆಚ್ಚು ದೇಶಗಳ ಸ್ಪರ್ಧಿಗಳು ಈ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿದ್ದರು. ನಮ್ಮ ತಂಡ ಅಗ್ರ 5ರಲ್ಲಿ ಸ್ಥಾನ ಪಡೆದುಕೊಂಡಿದೆʼʼ ಎಂದು ಮೋದಿ ಹೆಮ್ಮೆಯಿಂದ ಹೇಳಿದರು.

ʼʼಪುಣೆಯ ಆದಿತ್ಯ ವೆಂಕಟ ಗಣೇಶ್, ಪುಣೆಯ ಸಿದ್ಧಾರ್ಥ್ ಚೋಪ್ರಾ, ದೆಹಲಿಯ ಅರ್ಜುನ್ ಗುಪ್ತಾ, ಗ್ರೇಟರ್ ನೋಯ್ಡಾದ ಕನವ್ ತಲ್ವಾರ್, ಮುಂಬೈಯ ರುಶಿಲ್ ಮಾಥುರ್ ಮತ್ತು ಗುವಾಹಟಿಯ ಆನಂದ ಭಾದುರಿ ಈ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿದ್ದಾರೆʼʼ ಎಂದು ಪ್ರಧಾನಿ ಮೋದಿ ಮೆಚ್ಚುಗೆ ಸೂಚಿಸಿದರು.

ʼಮನ್ ಕಿ ಬಾತ್ʼ ಸಂಚಿಕೆಯಲ್ಲಿ ಭಾಗವಹಿಸುವಂತೆ ಅವರು ಇತ್ತೀಚೆಗೆ ಈ ಯುವ ಸಾಧಕರನ್ನು ವಿಶೇಷವಾಗಿ ಆಹ್ವಾನಿಸಿದ್ದರು. ತಮ್ಮ ಅನುಭವಗಳನ್ನು ದೇಶದೊಂದಿಗೆ ಹಂಚಿಕೊಳ್ಳುವಂತೆ ಮೋದಿ ಕೇಳಿಕೊಂಡಿದ್ದರು. ಗಣಿತದಲ್ಲಿನ ತಮ್ಮ ಆಸಕ್ತಿಯೇ ಸಾಧನೆಗೆ ಮುಖ್ಯ ಕಾರಣ ಎಂದು ವಿದ್ಯಾರ್ಥಿಗಳು ತಿಳಿಸಿದರು.

ವಿದ್ಯಾರ್ಥಿಗಳು ಹೇಳಿದ್ದೇನು?

ಪುಣೆಯ ಆದಿತ್ಯ ಮತ್ತು ಸಿದ್ಧಾರ್ಥ್ ತಮ್ಮ ಗಣಿತ ಶಿಕ್ಷಕ ಪ್ರಕಾಶ್ ಅವರ ಕೊಡುಗೆಯನ್ನು ನೆನೆದರು. ಅವರಿಂದಲೇ ತಮ್ಮ ಗೆಲುವು ಸಾಧ್ಯವಾಯಿತು ಎಂದರು. ಅರ್ಜುನ್ ಗುಪ್ತಾ ಪ್ರಧಾನಿ ಅವರೊಂದಿಗೆ ಮಾತನಾಡಲು ಹೆಮ್ಮೆ ವ್ಯಕ್ತಪಡಿಸಿದರು. ಗಣಿತವು ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಇದು ಜೀವನದ ಪ್ರತಿಯೊಂದು ಅಂಶಕ್ಕೂ ಅನ್ವಯವಾಗುತ್ತದೆ ಎಂದು ತಿಳಿಸಿದರು.

ಕನವ್ ತಲ್ವಾರ್ ಪೋಷಕರು ಮತ್ತು ಸಹೋದರಿ ನೆರವಿನಿಂದ ಯಶಸ್ಸು ಪಡೆದಿರುವುದಾಗಿ ನುಡಿದರು. ಕಳೆದ ವರ್ಷ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾದ ಅನುಭವವನ್ನು ಹಂಚಿಕೊಂಡು, ಈ ಬಾರಿ ಹೇಗಾದರೂ ಸ್ಥಾನ ಪಡೆಯಬೇಕೆಂಬ ಛಲದಲ್ಲಿ ಶ್ರಮ ಹಾಕಿದ್ದನ್ನು ವಿವರಿಸಿದರು. ಗಣಿತವು ತಾರ್ಕಿಕ ಚಿಂತನೆಯನ್ನು ಮಾತ್ರವಲ್ಲ ಸೃಜನಶೀಲತೆಯನ್ನೂ ಹೆಚ್ಚಿಸುತ್ತದೆ. ಸಮಸ್ಯೆ ಪರಿಹರಿಸುವಾಗ ಔಟ್‌ ಆಫ್‌ ಬಾಕ್ಸ್‌ ಯೋಚಿಸಲು ಸಹಾಯ ಮಾಡುತ್ತದೆ ಎನ್ನುವ ಅಭಿಮತ ರುಶಿಲ್ ಮಾಥುರ್‌ ಅವರದ್ದು. ಎರಡನೇ ಬಾರಿ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಭಾಗವಹಿಸಿರುವುದಕ್ಕೆ ಆನಂದ ಭಾದುರಿ ಹೆಮ್ಮೆ ವ್ಯಕ್ತಪಡಿಸಿದರು.

ಸಿದ್ದಗಂಗಾ ಮಠದಲ್ಲಿ ʼಮನ್ ಕೀ ಬಾತ್ʼ ಪ್ರಸಾರಕ್ಕೆ ವ್ಯವಸ್ಥೆ

ತುಮಕೂರು: ಕ್ಯಾತ್ಸಂದ್ರ ಬಳಿಯಿರುವ ಸಿದ್ದಗಂಗಾ ಮಠದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಬೃಹತ್ ಎಲ್‌ಇಡಿ ಪರದೆಗಳನ್ನ ಅಳವಡಿಸಲಾಗಿದ್ದು, ಸುಮಾರು ಹತ್ತು ಸಾವಿರ ಮಕ್ಕಳು ವೀಕ್ಷಿಸಿದರು. ಸಿದ್ದಗಂಗಾ ಮಠದ ಕಿರಿಯ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸ್ವತಃ ಕರೆ ಮಾಡಿ ಶುಭ ಕೋರಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಅಧಿಕೃತ ನೇಮಕಾತಿ ಪತ್ರವೂ ದೊರಕಿದೆ. ನಮ್ಮಲ್ಲಿ ಪ್ರಾಮಾಣಿಕತೆ ಇದ್ದರೆ ಯಾವುದೂ ಸವಾಲು ಅಲ್ಲ. ನಾನು ಮೇಘಾಲಯಕ್ಕೆ ರಾಜ್ಯಪಾಲ ಆಗಿರಬಹುದು. ಆದರೆ ಹುಣಸೂರು, ಮೈಸೂರು ಈ ನೆಲದ ಋಣ ನನ್ನ ಮೇಲೆ ಇದೆ ಎಂದು ಸಿ.ಎಚ್.ವಿಜಯಶಂಕರ್ (CH Vijayashankar) ಹೇಳಿದ್ದಾರೆ.

VISTARANEWS.COM


on

CH Vijayashankar2
Koo

ಮೈಸೂರು: ಇದು ನನಗೆ ಇದು ಬಯಸದೇ ಬಂದ ಭಾಗ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘ (Rashtriya Swayamsevak Sangh) ಮತ್ತು ಭಾರತೀಯ ಜನತಾ ಪಕ್ಷ (BJP) ನನ್ನನ್ನು ಗುರುತಿಸಿ ಅವಕಾಶ ನೀಡಿದೆ ಎಂದು ಮೇಘಾಲಯದ (Meghalaya) ನೂತನ ರಾಜ್ಯಪಾಲರಾಗಿ (Governor) ನೇಮಕವಾಗಿರುವ ಮೈಸೂರಿನ ಮಾಜಿ ಸಂಸದ (Mysore Ex MP) ಸಿಎಚ್ ವಿಜಯಶಂಕರ್ (CH Vijayashankar) ಹೇಳಿದ್ದಾರೆ.

ವಿಸ್ತಾರ ನ್ಯೂಸ್ ಜತೆ ಮಾತನಾಡಿದ ಸಿಎಚ್‌ವಿ, ರಾಜ್ಯಪಾಲರಾಗಿ ನೇಮಕವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ನಾನು ಹುಣಸೂರು ಕ್ಷೇತ್ರದ ಶಾಸಕ, ಮೈಸೂರು ಲೋಕಸಭೆ ಕ್ಷೇತ್ರದ ಸಂಸದ ಆಗಿದ್ದವನು. 2014ರಲ್ಲಿ ಲೋಕಸಭೆ ಚುನಾವಣೆಗೆ ಪಕ್ಷದ ಟಿಕೆಟ್ ತಪ್ಪಿತು. ಹಾಸನಕ್ಕೆ ಹೋಗಿ ದೇವೇಗೌಡರ ಎದುರು ಸ್ಪರ್ಧಿಸಿ ಸೋತಿದ್ದೆ. ಅಲ್ಲಿಂದ ಸತತ ವನವಾಸ ಅನುಭವಿಸಿದ್ದೆ. ಈಗ ಅತ್ಯಂತ ದೊಡ್ಡ ಹುದ್ದೆ ದೊರಕಿದೆ ಎಂದು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸ್ವತಃ ಕರೆ ಮಾಡಿ ಶುಭ ಕೋರಿದ್ದಾರೆ. ಕೆಲವೇ ನಿಮಿಷಗಳ ಹಿಂದೆ ಅಧಿಕೃತ ನೇಮಕಾತಿ ಪತ್ರವೂ ದೊರಕಿದೆ. ನಮ್ಮಲ್ಲಿ ಪ್ರಾಮಾಣಿಕತೆ ಇದ್ದರೆ ಯಾವುದೂ ಸವಾಲು ಅಲ್ಲ. ನಾನು ಮೇಘಾಲಯಕ್ಕೆ ರಾಜ್ಯಪಾಲ ಆಗಿರಬಹುದು. ಆದರೆ ಹುಣಸೂರು, ಮೈಸೂರು ಈ ನೆಲದ ಋಣ ನನ್ನ ಮೇಲೆ ಇದೆ ಎಂದು ಸಿ.ಎಚ್.ವಿಜಯಶಂಕರ್ ಹೇಳಿದ್ದಾರೆ.

ನಿನ್ನೆ ನೇಮಕ

ಕೇಂದ್ರ ಸರ್ಕಾರದ ಶಿಫಾರಸ್ಸಿನಂತೆ ವಿಜಯಶಂಕರ್‌ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ನಿನ್ನೆ ತಡರಾತ್ರಿ ಆದೇಶ ಹೊರಡಿಸಿದ್ದಾರೆ. 6 ಮಂದಿ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿಯಾಗಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ. ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಸಂತೋಷ್‌ ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಒ.ಪಿ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ತ್ರಿಪುರಾ ಮಾಜಿ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಅವರು ಛತ್ತೀಸಗಢಕ್ಕೆ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ವಿಜಯಶಂಕರ್‌ ರಾಜಕೀಯ ಏಳುಬೀಳು

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಮಾಕನೂರಿನಲ್ಲಿ 1956ರ ಅಕ್ಟೋಬರ್‌ 21ರಂದು ಜನಿಸಿದ ವಿಜಯಶಂಕರ್‌, ಬದುಕು ಕಟ್ಟಿಕೊಂಡದ್ದು ಮೈಸೂರಿನಲ್ಲಿ. ಅವರ ಶಿಕ್ಷಣ ಆಗಿದ್ದು ಬ್ಯಾಡಗಿಯಲ್ಲಿ. ಬಿಎಸ್ಸಿ ಪದವೀಧರರರಾದ ವಿಜಯಶಂಕರ್‌, ಹುಣಸೂರಿನಲ್ಲಿದ್ದ ತಮ್ಮ ಸಹೋದರಿಯ ಮನೆಗೆ ಬಂದವರು ಇಲ್ಲಿ ಆ ಕುಟುಂಬದವರು ನಡೆಸುತ್ತಿದ್ದ ಸಿಮೆಂಟ್‌ ವ್ಯಾಪಾರದಲ್ಲಿ ತೊಡಗಿಸಿಕೊಂಡರು. ವೃತ್ತಿಯಲ್ಲಿ ಗುರುತಿಸಿಕೊಂಡ ವಿಜಯಶಂಕರ್‌ ನಂತರ ರಾಜಕೀಯ ಸೇರಿದರು.

90ರ ದಶಕದ ಆರಂಭದಲ್ಲಿ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡ ಅವರು ನಂತರ ಬಿಜೆಪಿಯನ್ನು ಸೇರಿಕೊಂಡರು. 1991ರಲ್ಲಿ ನಡೆದ ಹುಣಸೂರು ಕ್ಷೇತ್ರದ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಚಿಕ್ಕಮಾದು ವಿರುದ್ಧ ಸೋತರು. 1994ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದು ಶಾಸಕರಾದರು. 1998ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಅವರು, ಲೋಕಸಭೆ ಸದಸ್ಯರಾಗಿ ಚುನಾಯಿತರಾದರು. ಮರು ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ವಿರುದ್ಧ ಸೋತರು. 2004ರಲ್ಲಿ ಅವರನ್ನೇ ಮಣಿಸಿ ಎರಡನೇ ಬಾರಿಗೆ ಲೋಕಸಭೆ ಸದಸ್ಯರಾದರು. ಆಗ ಎನ್‌ಡಿಎ ಸರ್ಕಾರದಲ್ಲಿ ಮಂತ್ರಿಯಾಗುವ ಅವಕಾಶ ಸಿಕ್ಕಿತು.

ಮೈಸೂರಿನ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಸಹಿತ ಹಲವಾರು ಕೆಲಸಗಳನ್ನು ವಿಜಯಶಂಕರ್‌ ಮಾಡಿಸಿದ್ದಾರೆ. 2009ರಲ್ಲಿ ಕಾಂಗ್ರೆಸ್‌ನ ವಿಶ್ವನಾಥ್‌ ವಿರುದ್ಧ ವಿಜಯಶಂಕರ್‌ ಸೋಲು ಕಂಡರು. ಆನಂತರ ರಾಜ್ಯ ರಾಜಕಾರಣಕ್ಕೆ ಮರಳಿದ ಅವರು ಯಡಿಯೂರಪ್ಪ ಸರಕಾರದ ವೇಳೆ ಎಂಎಲ್ಸಿ ಆದರು. ಕೊಡಗು ಹಾಗೂ ಚಾಮರಾಜನಗರ ಉಸ್ತುವಾರಿ, ಅರಣ್ಯ, ಹಾಗೂ ಸಣ್ಣ ಕೈಗಾರಿಕೆ ಸಚಿವರೂ ಆದರು. 2014ರಲ್ಲಿ ವಿಜಯಶಂಕರ್‌ ಅವರನ್ನು ಮೈಸೂರಿನ ಬದಲು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಿಜೆಪಿ ನಿಯೋಜಿಸಿತು. ಅಲ್ಲಿ ದೇವೇಗೌಡರ ವಿರುದ್ಧ ವಿಜಯಶಂಕರ್‌ ಸೋತರು.

ಬಿಜೆಪಿಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ಗೆ ವಿಜಯಶಂಕರ್‌ ಸೇರಿಕೊಂಡರು. 2019ರಲ್ಲಿ ಮೈಸೂರು ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಸೋತರು. ಒಂದೇ ವರ್ಷಕ್ಕೆ ಬಿಜೆಪಿಗೆ ಮರಳಿದರು. ಕಳೆದ ವರ್ಷ ಪಿರಿಯಾಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡರು. ಈ ಬಾರಿ ಲೋಕಸಭೆ ಚುನಾವಣೆಗೂ ಆಕಾಂಕ್ಷಿಯಾಗಿದ್ದರೂ ಟಿಕೆಟ್‌ ಸಿಕ್ಕಿರಲಿಲ್ಲ.

ಇದನ್ನೂ ಓದಿ: CH Vijayashankar: ಮೇಘಾಲಯ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

Continue Reading

ವೈರಲ್ ನ್ಯೂಸ್

Viral News: ರೈಲ್ವೇ ಪೊಲೀಸ್‌ ಸಿಬ್ಬಂದಿಯ ಹೊಡೆತಕ್ಕೆ ಯುವಕನ ಕರುಳೇ ಹೊರಬಂತು! ಶಾಕಿಂಗ್‌ Video ಇಲ್ಲಿದೆ

Viral News: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Viral News
Koo

ಪಾಟ್ನಾ: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣ (Janakpur Road railway station)ದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ (Government Railway Police) ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸುವ ವಿಡಿಯೊ ಸದ್ಯ ವೈರಲ್‌ ಆಗಿದ್ದು, ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ (Viral News).

ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡ ಫುರ್ಕಾನ್ ಅನ್ನು ಹೊತ್ತೊಯ್ಯುತ್ತಿರುವುದು ಮತ್ತು ಜನರ ಗುಂಪು ಅವರನ್ನು ಹಿಂಬಾಲಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಜತೆಗೆ “ಪೊಲೀಸರು ಅವನನ್ನು ಎಷ್ಟು ಕೆಟ್ಟದಾಗಿ ಥಳಿಸಿದ್ದಾರೆ ಎನ್ನುವುದನ್ನು ನೋಡಿ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೇಳಬಹುದು. ಮೊಹಮ್ಮದ್ ಫುರ್ಕಾನ್‌ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮುಂಬೈಗೆ ಹೋಗುತ್ತಿದ್ದ ತನ್ನ ಚಿಕ್ಕಮ್ಮನನ್ನು ಬೀಳ್ಕೊಡಲು ಆಗಮಿಸಿದ್ದ ವೇಳೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಘಟನೆ ವಿವರ

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಫುರ್ಕಾನ್‌ನ ಹೊಟ್ಟೆಯ ಮೇಲೆ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹಲವು ಬಾರಿ ಹೊಡೆದಿದ್ದಾನೆ. ಇದರಿಂದಾಗಿ ಹೊಟ್ಟೆ ಒಡೆದು ಕರುಳು ಹೊರಗೆ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ʼʼನನ್ನ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆ ನಡೆದಿದೆ. ನೋವಾಗುತ್ತಿದೆ ಎಂದು ಪದೇ ಪದೆ ಹೇಳುತ್ತಿದ್ದರೂ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹೊಡೆಯುತ್ತಲೇ ಇದ್ದರುʼʼ ಎಂದು ಮೊಹಮ್ಮದ್ ಫುರ್ಕಾನ್‌ ತಿಳಿಸಿದ್ದಾನೆ.

ಹೊರಬಂದ ಕರುಳು

ಫುರ್ಕಾನ್‌ ಸುಮಾರು ಎರಡು ವರ್ಷಗಳ ಹಿಂದೆ ಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ. ಶಸ್ತ್ರಚಿಕಿತ್ಸೆಗೊಳಗಾದ ಭಾಗದ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತನ ಹೊಟ್ಟೆ ಎಡಭಾಗ ತೆರೆದುಕೊಂಡಿತು ಮತ್ತು ಅದರಿಂದ ಕರುಳು ಹೊರಬಂದಿದೆ ಎಂದು ಮೂಲಗಳು ತಿಳಿಸಿವೆ.

ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ

ಘಟನೆ ಬೆಳಕಿಗೆ ಬಂದ ಬಳಿಕ ಜಿಆರ್‌ಪಿ ಸಿಬ್ಬಂದಿಯ ಅನಾಗರಿಕ ವರ್ತನೆಯಿಂದ ಕೋಪಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಜನಕ್‌ಪುರ ರಸ್ತೆ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತ ಗುಂಪು ಸ್ಟೇಷನ್‌ ಸೂಪರಿಟೆಂಡೆಂಟ್‌ ಕಚೇರಿಯ ಮುಖ್ಯ ದ್ವಾರದ ಕಬ್ಬಿಣದ ಗ್ರಿಲ್ ಮತ್ತು ಗಾಜಿನ ಗೇಟ್ ಮುರಿದು ಒಳಗೆ ಪ್ರವೇಶಿಸಿ ಗಲಾಟೆ ಮಾಡಿದೆ. ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಸೀಟುಗಳಿಗಾಗಿ ಪ್ರಯಾಣಿಕರ ನಡುವೆ ಜಗಳ ಕಂಡು ಬಂದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳೆಂದು ಗುರುತಿಸಲಾದ ಪ್ರಣಿ ದಯಾನಂದ್ ಪಾಸ್ವಾನ್ ಮತ್ತು ಗೋರೆಲಾಲ್ ಚೌಕಿ ಎಂದಿಬ್ಬರನ್ನು ಅಮಾನತುಗೊಳಿಸಲಾಗಿದ್ದು, ಜಗಳದಲ್ಲಿ ಭಾಗಿಯಾಗಿದ್ದ ಹಲವು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading

ಉದ್ಯೋಗ

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

RRB Recruitment 2024: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ.

VISTARANEWS.COM


on

RRB Recruitment 2024
Koo

ಬೆಂಗಳೂರು: ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವವರಿಗೆ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ (Railway Recruitment Board) ಗುಡ್‌ನ್ಯೂಸ್‌ ನೀಡಿದೆ. ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿನಿಸಿದೆ (RRB Recruitment 2024). ಬರೋಬ್ಬರಿ 7,951 ಜೂನಿಯರ್‌ ಎಂಜಿನಿಯರ್‌, ಕೆಮಿಕಲ್‌ ಸೂಪರ್‌ವೈಸರ್‌ ಹುದ್ದೆಗಳು ಇದಾಗಿದ್ದು, ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 30ರಿಂದ ಅರ್ಜಿ ಸಲ್ಲಿಬೇಕಿದ್ದು, ಕೊನೆಯ ದಿನ ಆಗಸ್ಟ್‌ 29 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೆಮಿಲ್‌ ಮೇಲ್ವಿಚಾರಕ / ಸಂಶೋಧನೆ ಮತ್ತು ಮೆಟಲರ್ಜಿಕಲ್ ಮೇಲ್ವಿಚಾರಕ / ಸಂಶೋಧನೆ (Chemical Supervisor / Research and Metallurgical Supervisor / Research)- 17 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ ಟೆಕ್ನಾಲಜಿ, ಮೆಟಲರ್ಜಿ ಎಂಜಿನಿಯರಿಂಗ್‌ನಲ್ಲಿ ಪದವಿ.
ಕಿರಿಯ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಹಾಗೂ ಮೆಟಲರ್ಜಿಕಲ್ ಅಸಿಸ್ಟೆಂಟ್ (Junior Engineer, Depot Material Superintendent and Chemical & Metallurgical Assistant)- 7,934 ಹುದ್ದೆ, ವಿದ್ಯಾರ್ಹತೆ: ಡಿಪ್ಲೊಮಾ ಇನ್ ಇಂಜಿನಿಯರಿಂಗ್, ಬಿ.ಎಸ್‌ಸಿ, ಪದವಿ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್‌ & ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಮಹಿಳಾ ಅಭ್ಯರ್ಥಿಗಳು / ತೃತೀಯ ಲಿಂಗಿಗಳು / ಅಲ್ಪಸಂಖ್ಯಾತರು / ಇಬಿಸಿ ವಿಭಾಗದ ಅಭ್ಯರ್ಥಿಗಳು 250 ರೂ. ಮತ್ತು ಇತರ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ.

RRB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.rrbapply.gov.in/)
  • ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: indianrailways.gov.inಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: Helpline No: 9592001188, 01725653333ಕ್ಕೆ ಕರೆ ಮಾಡಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ದೇಶ

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Delhi Floods: ರಾಷ್ಟ್ರ ರಾಜಧಾನಿ ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ಮೃತಪಟ್ಟಿದ್ದಾರೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ದುರಂತ ಸಂಭವಿಸಿದೆ. ಇದೀಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

VISTARANEWS.COM


on

Delhi Floods
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹದ ಸ್ಥಿತಿ (Delhi Floods) ಉಂಟಾಗಿದೆ. ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ (Rau’s IAS Coaching Institute) ನೀರು ನುಗ್ಗಿ ಅನಾಹುತ ಸಂಭವಿಸಿದ್ದು, ಮೃತರ ಸಂಖ್ಯೆ 3ಕ್ಕೆ ಏರಿದೆ.

ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ರಾಜೇಂದ್ರ ನಗರದಲ್ಲಿ ಭಾರಿ ಪ್ರವಾಹದ ಸ್ಥಿತಿ ಉಂಟಾಗಿದೆ. ಇದರಿಂದಾಗಿ ಇಲ್ಲಿನ ರಾವ್‌ ಐಎಎಸ್‌ ಸ್ಟಡಿ ಸರ್ಕಲ್‌ನ ನೆಲಮಹಡಿಗೆ ನೀರು ನುಗ್ಗಿದೆ. ಸಂಜೆ 7.19ಕ್ಕೆ ಏಕಾಏಕಿ ನೀರು ನುಗ್ಗಿದ ಕಾರಣ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ.

ಬೇಸ್‌ಮೆಂಟ್‌ನಲ್ಲಿ ಸಂಸ್ಥೆಯ ಲೈಬ್ರರಿ ಇದ್ದು, ಇಲ್ಲಿ ಸುಮಾರು 150-180 ವಿದ್ಯಾರ್ಥಿಗಳು ಕೂರಲು ವ್ಯವಸ್ಥೆ ಮಾಡಲಾಗಿದೆ. ಲೈಬ್ರರಿಯಲ್ಲಿ ಕುಳಿತು ಓದುತ್ತಿರುವಾಗ ಚರಂಡಿ ಮೋರಿಯ ತಡೆಗೋಡೆ ಒಡೆದು ಮಳೆ ನೀರು ನುಗ್ಗಿದ ಹಿನ್ನಲೆ ದುರ್ಘಟನೆ ಸಮಭವಿಸಿದೆ. “ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಕೋಚಿಂಗ್‌ ಸೆಂಟರ್‌ನ ಬೇಸ್‌ಮೆಂಟ್‌ಗೆ ನೀರು ನುಗ್ಗಿದೆ. ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಹೊರಬರಲು ಆಗದೆ, ಮೇಲಿನ ಮಹಡಿಗೂ ಹೋಗಲು ಆಗದೆ ನೀರಿನಲ್ಲೇ ಸಿಲುಕಿರುವ ಸಾಧ್ಯತೆ ಇದೆ. ಇದರಿಂದಾಗಿ ಮೂವರು ವಿದ್ಯಾರ್ಥಿಗಳ ಸಾವುಂಟಾಗಿದೆ. ಕೂಡಲೇ ಎನ್‌ಡಿಆರ್‌ಎಫ್‌ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ” ಎಂದು ಸೆಂಟ್ರಲ್‌ ದೆಹಲಿ ಡಿಸಿಪಿ ಎಂ. ಹರ್ಷವರ್ಧನ್‌ ತಿಳಿಸಿದ್ದಾರೆ.

ಪ್ರತಿಭಟನೆ

ಇದೀಗ ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದೆ. ಮುನ್ಸಿಪಾಲ್‌ ಕಾರ್ಪೋರೇಷನ್‌ ಆಫ್‌ ದಿಲ್ಲಿ (MCD)ಯನ್ನು ನಿಯಂತ್ರಿಸುವ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ಮೇಲೆ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. “ಇದು ಸರ್ಕಾರ ಮತ್ತು ಪುರಸಭೆಯ ವೈಫಲ್ಯ. ಇದು ಈ ದೇಶದ ಅತ್ಯಂತ ಸಂವೇದನಾರಹಿತ ಸರ್ಕಾರ. ಇದು ವಿದ್ಯಾರ್ಥಿಗಳ ಸಾವಲ್ಲ, ಕೊಲೆ” ಎಂದು ಬಿಜೆಪಿ ವಕ್ತಾರ ಮಂಜಿಂದರ್ ಸಿಂಗ್ ಸಿರ್ಸಾ ತಿಳಿಸಿದ್ದಾರೆ. ಇನ್ನು ಈ ಆರೋಪಕ್ಕೆ ತಿರುಗೇಟು ನೀಡಿದ ಆಪ್‌, ʼʼಇದಕ್ಕೆ ಬಿಜೆಪಿ ಕೂಡ ಉತ್ತರಿಸಬೇಕು. ಕಳೆದ 15 ವರ್ಷಗಳಿಂದ ಈ ಪ್ರದೇಶದಲ್ಲಿ ಬಿಜೆಪಿ ಕೌನ್ಸಿಲರ್‌ಗಳಿದ್ದರು. ಅವರೇಕೆ ಚರಂಡಿಯನ್ನು ದುರಸ್ತಿ ಮಾಡಲಿಲ್ಲ? ಎಲ್ಲ ಚರಂಡಿಗಳನ್ನು ಒಂದು ವರ್ಷದಲ್ಲಿ ಮಾಡಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ಮಾಡಬಾರದು” ಎಂದು ಹೇಳಿದೆ.

ಇನ್ನು ಹಲವು ವಿದ್ಯಾರ್ಥಿಗಳು ಶನಿವಾರ ರಾತ್ರಿಯಿಂದಲೇ ಸಂಸ್ಥೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸ್ಥೆಯ ಹೊರಗಿನ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. “ಎಂಸಿಡಿ ಇದು ವಿಪತ್ತು ಎಂದು ಹೇಳುತ್ತದೆ. ಆದರೆ ಇದು ಸಂಪೂರ್ಣ ನಿರ್ಲಕ್ಷ್ಯದಿಂದ ಸಂಭವಿಸಿದ ದುರಂತ. ಅರ್ಧ ಗಂಟೆ ಮಳೆ ಬಂದರೆ ಸಾಕು ಮೊಣಕಾಲುವರೆಗೆ ನೀರು ನಿಲ್ಲುತ್ತದೆ. ಅಸಮರ್ಪಕ ಒಳಚರಂಡಿಯಿಂದಾಗಿ ಇದು ಸಂಭವಿಸುತ್ತಿದೆ. ಚರಂಡಿಯನ್ನು ಸ್ವಚ್ಛಗೊಳಿಸಬೇಕು 10-12 ದಿನಗಳಿಂದ ಕೌನ್ಸಿಲರ್‌ಗೆ ಮನವಿ ಸಲ್ಲಿಸುತ್ತಿದ್ದೇನೆ ಎಂದು ಮಾಲೀಕರು ತಿಳಿಸಿದ್ದಾರೆ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐಗೆ ಹೇಳಿದ್ದಾರೆ.

ಇದನ್ನೂ ಓದಿ: Delhi Floods: ದೆಹಲಿಯಲ್ಲಿ ಭಾರಿ ಮಳೆ; ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಇಬ್ಬರು ವಿದ್ಯಾರ್ಥಿನಿಯರ ಸಾವು!

“ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದು ನಮ್ಮ ಮೊದಲ ಬೇಡಿಕೆ. ಘಟನೆಯಿಂದಾದ ಸಾವುಗಳು ಮತ್ತು ಗಾಯಾಳುಗಳ ನಿಜವಾದ ಸಂಖ್ಯೆಯನ್ನು ಬಹಿರಂಗಪಡಿಸಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆ ಹಿನ್ನಲೆಯಲ್ಲಿ ಸದ್ಯ ಘಟನಾ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Continue Reading
Advertisement
Dog Meat Controversy
ಕರ್ನಾಟಕ1 min ago

Dog Meat Controversy: ಬೆಂಗಳೂರಿನಲ್ಲಿ ಸಿಕ್ಕಿರೋದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಗೃಹ ಸಚಿವ ಪರಮೇಶ್ವರ್‌

Actor Dhanush new poster from Kubera unveiled on his birthday
ಟಾಲಿವುಡ್10 mins ago

Actor Dhanush: ಧನುಷ್‌ ಬರ್ತ್‌ಡೇ ಸ್ಪೆಷಲ್‌; ‘ಕುಬೇರ’ ಸಿನಿಮಾದಿಂದ ಲುಕ್‌ ಪೋಸ್ಟರ್‌ ಔಟ್‌!

theft case
ಮೈಸೂರು26 mins ago

Theft case : ಪೊಲೀಸ್‌ ಮನೆಯಲ್ಲಿ ಕಳ್ಳರ ಕಳ್ಳಾಟ; ಚಿನ್ನಾಭರಣ ಕದ್ದು ಎಸ್ಕೇಪ್‌

CH Vijayashankar2
ಪ್ರಮುಖ ಸುದ್ದಿ31 mins ago

CH Vijayashankar: ಬಯಸದೇ ಬಂದ ಭಾಗ್ಯ: ಮೇಘಾಲಯ ನೂತನ ರಾಜ್ಯಪಾಲ ಸಿಎಚ್‌ ವಿಜಯಶಂಕರ್

Paris 2024 Shooting
ಕ್ರೀಡೆ42 mins ago

Paris 2024 Shooting: ಶೂಟಿಂಗ್​ನಲ್ಲಿ ಫೈನಲ್​ ಪ್ರವೇಶಿಸಿದ ರಮಿತಾ ಜಿಂದಾಲ್; ಭಾರತಕ್ಕೆ 2 ಪದಕ ನಿರೀಕ್ಷೆ

Ranveer Singh up for new film directed by Aditya Dhar
ಬಾಲಿವುಡ್42 mins ago

Ranveer Singh:‌ ಒಂದೇ ಸಿನಿಮಾದಲ್ಲಿ ಬಾಲಿವುಡ್‌ನ ಐದು ಸ್ಟಾರ್ಸ್; ರಣವೀರ್ ಸಿಂಗ್ ಹೊಸ ಸಿನಿಮಾ ಅನೌನ್ಸ್!

DK Shivakumar
ಕರ್ನಾಟಕ56 mins ago

DK Shivakumar: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಸಿಎಂ ಡಿಕೆಶಿ ಮನವಿ

Israel Palestine War
ವಿದೇಶ2 hours ago

Israel Palestine War: ಹಿಜ್ಬುಲ್ಲಾ ದಾಳಿಗೆ 12 ಮಂದಿ ಸಾವು; ಇಸ್ರೇಲ್‌ನಿಂದ ಪ್ರತೀಕಾರದ ಎಚ್ಚರಿಕೆ

hd kumaraswamy muda
ಪ್ರಮುಖ ಸುದ್ದಿ2 hours ago

HD Kumaraswamy: ನಾನು ಮುಡಾದಿಂದ ನಿವೇಶನ ಪಡೆದಿಲ್ಲ, ಸಿಗದಿದ್ದುದೇ ನನ್ನ ಭಾಗ್ಯ: ಎಚ್‌ಡಿ ಕುಮಾರಸ್ವಾಮಿ

Paris Olympics 2024
ಕ್ರೀಡೆ2 hours ago

Paris Olympics 2024: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಲರಾಜ್; ಪದಕದ ಆಸೆ ಜೀವಂತ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ21 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ1 day ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

ಟ್ರೆಂಡಿಂಗ್‌