Site icon Vistara News

ಮನ್‌ ಕೀ ಬಾತ್‌ನಲ್ಲಿ ಬಾಗಲಕೋಟೆಯ ವೆಂಕಪ್ಪಗೆ ಮೋದಿ ಮೆಚ್ಚುಗೆ; ಇವರ ಕೊಡುಗೆ ಏನು?

Venkappa Ambaji

Mann Ki Baat: PM Narendra Modi Praises Folk Singer Venkappa Ambaji Of Karnataka

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮನ್‌ ಕೀ ಬಾತ್‌ (Mann Ki Baat) ರೇಡಿಯೊ ಸರಣಿಯ 110ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶೀಸಿ ಮಾತನಾಡಿದ್ದಾರೆ. ನಾರಿಶಕ್ತಿ, ತಂತ್ರಜ್ಞಾನ, ಜಲ ಸಂರಕ್ಷಣೆ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದ ಮೋದಿ, ಕರ್ನಾಟಕದ (Karnataka) ಬಾಗಲಕೋಟೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗೆಟ್ಕರ್‌ ಅವರ ಸಾಧನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ಭಾರತದ ಸಂಸ್ಕೃತಿ, ಗಾಯನಗಳಿಗೆ ಲಕ್ಷಾಂತರ ಜನ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಬಾಗಲಕೋಟೆ ನಿವಾಸಿಯಾದ ವೆಂಕಪ್ಪ ಅಂಬಾಜಿ ಸುಗೆಟ್ಕರ್‌ ಅವರು ಸಾವಿರಕ್ಕೂ ಅಧಿಕ ಜನಪದ (ಗೊಂದಲಿ) ಹಾಡುಗಳನ್ನು ಹಾಡಿ ಜನಪ್ರಿಯರಾಗಿದ್ದಾರೆ. ಹಾಗೆಯೇ, ಸಾವಿರಾರು ಜನರಿಗೆ ಇವರು ಒಂದು ರೂಪಾಯಿಯನ್ನೂ ಪಡೆಯದೆ ಜನಪದ ಹಾಡುಗಳನ್ನು ಹಾಡುವುದನ್ನು ಕಲಿಸಿದ್ದಾರೆ. ಇವರ ಸೇವೆ ಶ್ಲಾಘನೀಯವಾಗಿದೆ” ಎಂದು ತಿಳಿಸಿದರು.

ಬೆಂಗಳೂರಿನ ಕಂಪನಿ ಕುರಿತು ಮೆಚ್ಚುಗೆ

ವನ್ಯಜೀವಿ ಸಂರಕ್ಷಣೆ ಕುರಿತು ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಿದ ಬೆಂಗಳೂರಿನ ಕಂಪನಿಯನ್ನು ಅವರು ಬಣ್ಣಿಸಿದರು. ಹಾಗೆಯೇ, ಕಂಪನಿ ಅಭಿವೃದ್ಧಿಪಡಿಸಿದ ಬಘೀರ (Bagheera) ಹಾಗೂ ಗರುಡ (Garud) ಎಂಬ ಆ್ಯಪ್‌ಗಳ ಕುರಿತು ನರೇಂದ್ರ ಮೋದಿ ಮಾಹಿತಿ ನೀಡಿದರು.

“ಮಾರ್ಚ್‌ 3ರಂದು ವಿಶ್ವ ವನ್ಯಜೀವಿ ದಿನಾಚರಣೆ ಇದೆ. ಎಲ್ಲರೂ ವನ್ಯಜೀವಿಗಳ ರಕ್ಷಣೆಗೆ ಆದ್ಯತೆ ನೀಡೋಣ. ವನ್ಯಜೀವಿ ರಕ್ಷಣೆಯಲ್ಲೂ ಕೇಂದ್ರ ಸರ್ಕಾರವು ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನ ಕಂಪನಿಯೊಂದು ಬಘೀರ ಹಾಗೂ ಗರುಡ ಎಂಬ ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಿದೆ. ಇವುಗಳಿಂದ ವನ್ಯಜೀವಿಗಳನ್ನು ರಕ್ಷಣೆ ಮಾಡಬಹುದಾಗಿದೆ” ಎಂದು ತಿಳಿಸಿದರು.

“ಬಘೀರ್‌ ಆ್ಯಪ್‌ ಮೂಲಕ ಅರಣ್ಯದಲ್ಲಿ ಸಫಾರಿ ಮಾಡುವ ವಾಹನಗಳ ವೇಗದ ಮೇಲೆ ನಿಗಾ ಇರಿಸುತ್ತದೆ. ಅರಣ್ಯ ಪ್ರದೇಶದ ಹಲವು ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಆ್ಯಪ್‌ ಸಹಕಾರಿಯಾಗಿದೆ. ದೇಶದ ಹಲವು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಈ ಆ್ಯಪ್‌ಅನ್ನು ಬಳಸಲಾಗುತ್ತಿದೆ. ಗರುಡ ಆ್ಯಪ್‌ಅನ್ನು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿ ಅಭಿವೃದ್ಧಿಪಡಿಸಲಾಗಿದೆ. ಇದನ್ನು ಯಾವುದೇ ಸಿಸಿಟಿವಿಗೆ ಕನೆಕ್ಟ್‌ ಮಾಡಬಹುದಾಗಿದೆ. ಇದರಿಂದ ವನ್ಯಜೀವಿಗಳ ಚಲನವಲನ ಸೇರಿ ಹಲವು ಮಾಹಿತಿಯನ್ನು ಅಲರ್ಟ್‌ ಮೂಲಕ ಪಡೆಯಬಹುದಾಗಿದೆ” ಎಂದು ಮಾಹಿತಿ ನೀಡಿದರು.

ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌

ಇದನ್ನೂ ಓದಿ: 22 ವರ್ಷಗಳ ಹಿಂದೆ ಮೋದಿ ಮೊದಲ ಬಾರಿ ಶಾಸಕರಾದಾಗ ಏನು ಮಾಡಿದರು? ವಿಡಿಯೊ ಇಲ್ಲಿದೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version