Mann Ki Baat : ಇದು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದ ಮೋದಿ - Vistara News

ದೇಶ

Mann Ki Baat : ಇದು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದ ಮೋದಿ

Mann Ki Baat ಕಳೆದ ಸಲದಂತೆ ಈ ಬಾರಿಯೂ ಸ್ವಾತಂತ್ರ್ಯ ದಿನಾಚರಣೆಗೆ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. 103ನೇ ಮನ್‌ ಕಿ ಬಾತ್‌ ವಿವರ ಇಲ್ಲಿದೆ.

VISTARANEWS.COM


on

Prime minister Modi in 103th Mann ki Baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಜೂನ್-ಜುಲೈ ಎಂದರೆ ಮುಂಗಾರು ಮಾರುತದ ಅವಧಿ. ಯಮುನಾ ನದಿ ಸೇರಿದಂತೆ ಹಲವಾರು ನದಿ ಪ್ರದೇಶಗಳಲ್ಲಿ ಜನರಿಗೆ ಸಂಕಷ್ಟವಾಗಿದೆ. ದೇಶದ ಪಶ್ಚಿಮ ಭಾಗ ಹಾಗೂ ಉತ್ತರದ ವಲಯದಲ್ಲಿ ಭಾರಿ ಮಳೆ, ಸೈಕ್ಲೋನ್‌ ಪರಿಣಾಮ ಜನತೆಗೆ ಸಂಕಷ್ಟವಾಗಿದೆ. ಆದರೂ, ಪ್ರಾಕೃತಿಕ ವಿಕೋಪ ಎದುರಿಸಲು ಭಾರತ ಹಿಂದೆಂದಿಗಿಂತ ಹೆಚ್ಚು ಸಜ್ಜಾಗಿದೆ. ಈಗ ಗಿಡ ಮರಗಳನ್ನು ನೆಟ್ಟು ವೃಕ್ಷ ಸಂರಕ್ಷಣೆ, ಜಲ ಸಂರಕ್ಷಣೆ ಮಾಡಬೇಕಾದ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ (Mann Ki Baat) ಹೇಳಿದ್ದಾರೆ.

ಸ್ವಾತಂತ್ರ್ಯೋತ್ಸವದ ಸಂದರ್ಭ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ತಮ್ಮ ನೆಚ್ಚಿನ ಬಾನುಲಿ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ಮನವಿ ಮಾಡಿದ್ದಾರೆ. ಹರ್‌ ಘರ್‌ ತಿರಂಗಾ (Har Ghar Tiranga) ಸಂಪ್ರದಾಯವನ್ನು ಮುಂದುವರಿಸಲು ಕರೆ ಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು 103ನೇ ಮನ್‌ ಕಿ ಬಾತ್‌ನಲ್ಲಿ ಮಾತನಾಡಿ, ಭಾರತೀಯರ ಕಠಿಣ ಪರಿಶ್ರಮ, ಬುದ್ಧಿವಂತಿಕೆ, ಕೌಶಲಗಳು, ಸಾಹಸ ಪ್ರವೃತ್ತಿ ಅನನ್ಯ. ಎರಡು ದಶಕಗಳ ಹಿಂದೆ ಗುಜರಾತಿನ ಕಛ್‌ ಜಿಲ್ಲೆ ಭೀಕರ ಭೂಕಂಪಕ್ಕೀಡಾಗತ್ತು. ಇನ್ನೆಂದಿಗೂ ಕಛ್‌ ಸುಧಾರಣೆ ಆಗದು ಎಂದು ಭಾವಿಸಲಾಗಿತ್ತು. ಆದರೆ ಕಛ್‌ ಈಗ ಹೇಗೆ ಚೇತರಿಸಿದೆ ಎಂದರೆ ದೇಶದ ವಿಕಸಿತ ಜಿಲ್ಲೆಗಳಲ್ಲಿ ಇದೂ ಒಂದಾಗಿದೆ.

ಪ್ರಾಕೃತಿಕ ವಿಕೋಪಗಳನ್ನು ನಿಯಂತ್ರಿಸುವುದು ಯಾರ ಕೈಯಲ್ಲೂ ಇಲ್ಲ. ಆದರೆ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯ. ಭಾರತ ಅಂಥ ಸಾಮರ್ಥ್ಯವನ್ನು ಗಣನೀಯವಾಗಿ ವೃದ್ಧಿಸಿದೆ. ಇತ್ತೀಚೆಗೆ ದೇಶದ ಪಶ್ಚಿಮ ಭಾಗದಲ್ಲಿ ಭೀಕರ ಸೈಕ್ಲೋನ್‌ ಅಪ್ಪಳಿಸಿತ್ತು. ಹೀಗಿದ್ದರೂ ಕಛ್‌ ಇಂಥ ಸೈಕ್ಲೋನ್‌ ಅನ್ನೂ ಯಶಸ್ವಿಯಾಗಿ ಎದುರಿಸಿದೆ. ಇತರ ಸೈಕ್ಲೋನ್ ಪೀಡಿತ ಪ್ರದೇಶಗಳೂ ಶೀಘ್ರ ಚೇತರಿಸುವ ವಿಶ್ವಾಸ ಇದೆ ಎಂದರು.

ಪ್ರಾಕೃತಿಕ ವಿಕೋಪಗಳನ್ನು ಎದುರಿಸುವ ವಿಧಾನಗಳಲ್ಲಿ ಪ್ರಕೃತಿಯ ಸಂರಕ್ಷಣೆಯೂ ಒಂದು. ಈ ಹಿಂದಿನ ಮನ್‌ ಕಿ ಬಾತ್‌ನಲ್ಲಿ ನೀರಿನ ಸಂರಕ್ಷಣೆಯಲ್ಲಿ ತೊಡಗಿಸಿರುವ ಸ್ಟಾರ್ಟಪ್‌ಗಳ ಬಗ್ಗೆ ಚರ್ಚಿಸಲಾಗಿತ್ತು. ನೈಋತ್ಯ ಮುಂಗಾರಿನ ಸಂದರ್ಭ ದೇಶವಾಸಿಗಳ ರಕ್ಷಣೆಯೂ ದೊಡ್ಡದು. ಉತ್ತರಪ್ರದೇಶದ ಬಾಂದ್ರಾ, ಬುಂದೇಲ್ ಖಂಡ್‌ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಹೆಚ್ಚು. ಬಾಂದ್ರಾ ಜಿಲ್ಲೆಯ ಲುಕ್ತರಾ ಗ್ರಾಮದ ಪಂಚಾಯಿತಿ ಮುಖ್ಯಸ್ಥ ತುಳಸಿ ರಾಮ್‌ ಯಾದವ್‌ ಜಿ ಬಗ್ಗೆ ಪ್ರಧಾನಿ ಸ್ಮರಿಸಿದರು. ನೀರಿನ ಸಮಸ್ಯೆ ನೀಗಿಸಲು ತುಳಸಿ ರಾಮ್‌ ಅವರು ಗ್ರಾಮಗಳಲ್ಲಿ 40ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದಾರೆ. ಈ ಕೆಲಸ ಪರಿಣಾಮಕಾರಿಯಾಗಿದೆ. ಅಂತರ್ಜಲದ ಮಟ್ಟ ಸುಧಾರಿಸಿದೆ.

ನದಿಯ ಪುನರುಜ್ಜೀವನ: ಉತ್ತರಪ್ರದೇಶದ ಹಾಪುರ್‌ ಜಿಲ್ಲೆಯಲ್ಲಿ ನೀಮ್‌ ಎಂಬ ನದಿ ಇತ್ತು. ಕ್ರಮೇಣ ಮರೆಯಾಗಿತ್ತು. ಆದರೆ ಜನ ಮರೆತಿರಲಿಲ್ಲ. ಎಲ್ಲರೂ ಸೇರಿ ನದಿಯ ಪುನರುಜ್ಜೀವನ ಕಾಯಕಲ್ಪ ಕೈಗೊಂಡರು. ನದಿ, ಸರೋವರ ಕೇವಲ ನೀರಿನ ತಾಣವಲ್ಲ, ಜನ ಜೀವನದ ಮೂಲ ದ್ರವ್ಯವೂ ಹೌದು ಎಂದು ಪ್ರಧಾನಿ ಹೇಳಿದರು. ನದಿಯ ಉಗಮ ಸ್ಥಳದಲ್ಲಿ ಅಮೃತ ಸರೋವರ ನಿರ್ಮಿಸಲಾಗಿದೆ.

ಮಹಾರಾಷ್ಟ್ರದ ಜಿಲ್ಲೆಯೊಂದರಲ್ಲಿ 53 ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ನಿಲ್‌ವಂಡೆ ಕಾಲುವೆಯ ಕಾಮಗಾರಿ ಮುಕ್ತಾಯವಾಗಿದೆ. ಈ ಯೋಜನೆಯನ್ನು 1970ರಲ್ಲಿ ಅಂದಾಜು 7.9 ಕೋಟಿ ರೂ.ಗಳ ವೆಚ್ಚದೊಂದಿಗೆ ಅನುಮೋದಿಸಲಾಗಿತ್ತು. ನಾಸಿಕ್‌ ವಲಯದ ಆರು ತಾಲ್ಲೂಕಿನಲ್ಲಿ ನೀರಿನ ಕೊರತೆಯನ್ನು ಈ ಕಾಲುವೆ ನೀಗಿಸಲಿದೆ. (ಈಗ ಯೋಜನೆಗೆ 5,177 ಕೋಟಿ ರೂ. ವೆಚ್ಚ) ಇತ್ತೀಚೆಗೆ ಪ್ರಾಯೋಗಿಕವಾಗಿ ಕಾಲುವೆಗೆ ನೀರು ಹರಿಸಿದಾಗ ಸ್ಥಳೀಯರು ಹಬ್ಬದಂತೆ ಆಚರಿಸಿದ್ದರು.

ಛತ್ರಪತಿ ಶಿವಾಜಿ ಮಹಾರಾಜರು ಶೌರ್ಯ-ಸಾಹಸಕ್ಕೆ ಹೆಸರಾಗಿದ್ದಲ್ಲದೆ, ಉತ್ತಮ ಆಡಳಿತಗಾರರೂ, ದೂರದೃಷ್ಟಿ ಇರುವ ನಾಯಕರೂ ಆಗಿದ್ದರು. ಜಲ ಸಂರಕ್ಷಣೆಗೆ ಶಿವಾಜಿಯವರು ಪಣ ತೊಟ್ಟಿದ್ದರು. ಶಿವಾಜಿ ಅವರ ನಾಯಕತ್ವದಲ್ಲಿ ಸಮುದ್ರ ಮತ್ತು ನದಿಗಳ ಸಮೀಪದ ಜಲದುರ್ಗ ಕೆರೆ, ಕೋಟೆಗಳು ಶತ ಶತಮಾನಗಳ ಬಳಿಕವೂ ಉಳಿದುಕೊಂಡು ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಭಾರತವನ್ನು ಕ್ಷಯ ರೋಗದಿಂದ ಮುಕ್ತಗೊಳಿಸಲು ಮಕ್ಕಳು, ಯುವ ಜನತೆ ನೆರವು ನೀಡುತ್ತಾರೆ. ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ 7 ವರ್ಷದ ಬಾಲಕಿ ನಳಿನಿ ಸಿಂಗ್‌ ತನ್ನ ಪಾಕೆಟ್‌ ಮನಿಯನ್ನು ಬಳಸಿ ಕ್ಷಯ ರೋಗದ ವಿರುದ್ಧ ಜನ ಜಾಗೃತಿ ಮೂಡಿಸುತ್ತಿದ್ದಾಳೆ. ಟಿಬಿ ರೋಗಿಗಳಿಗೆ ನೆರವು ನೀಡುತ್ತಾಳೆ. ಮಧ್ಯಪ್ರದೇಶದ 13 ವರ್ಷದ ಮೀನಾಕ್ಷಿ, ಪಶ್ಚಿಮ ಬಂಗಾಳದ ಬಶ್ವರ್‌ ಮುಖರ್ಜಿ ಕೂಡ ಕ್ಷಯ ರೋಗದ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. ಇದು ಸ್ಪೂರ್ತಿ ನೀಡುವಂಥದ್ದು ಎಂದು ಪ್ರಧಾನಿ ವಿವರಿಸಿದರು.

ಜಮ್ಮು ಕಾಶ್ಮೀರದಲ್ಲಿ ಜಿ 20 ಶೃಂಗ ಸಭೆಯ ಕಾರ್ಯಕ್ರಮಗಳಿಂದ ಗಮನ ಸೆಳೆಯುತ್ತದೆ. ಬಾರಾಮುಲ್ಲಾದಲ್ಲಿ ಹಾಲಿನ ಕೊರತೆ ಇತ್ತು. ಈ ಗ್ರಾಮದಲ್ಲಿ ಮಹಿಳೆಯರು ಹೈನೋದ್ಯಮಕ್ಕೆ ತೊಡಗಿಸಿದ್ದಾರೆ. ಇಶ್ರತ್‌ ನಬಿ ಎಂಬ ಪದವೀಧರೆ ಡೇರಿ ಸ್ಥಾಪಿಸಿದ್ದಾರೆ. ಅದು ದಿನಕ್ಕೆ 150 ಲೀಟರ್‌ ಹಾಲು ಮಾರಾಟ ಮಾಡುತ್ತದೆ.

ಇತ್ತೀಚೆಗೆ ಅಮೆರಿಕ್ಕೆ ಹೋಗಿದ್ದಾಗ ಭಾರತದ ಪ್ರಾಚೀನ ಕಲಾಕೃತಿಗಳನ್ನು ಭಾರತಕ್ಕೆ ವಾಪಸ್‌ ತರಲಾಯಿತು. ದೇಶದ ಪ್ರಾಚೀನ ಸಂಸ್ಕೃತಿ ಬಗ್ಗೆ ತಿಳಿಯಲ ಇದು ಅನುಕೂಲಕರ. ಪಂಜಾಬ್‌ನಲ್ಲಿ ಮಾದಕ ದ್ರವ್ಯಗಳಿಂದ ಯುವ ಜನತೆಯನ್ನು ಪಾರು ಮಾಡಲು ಅಭಿಯಾನ ಕೈಗೊಳ್ಳಲಾಗಿದೆ. ಭವಿಷ್ಯದ ಪೀಳಿಗೆಗೋಸ್ಕರ 2020ರ ಆಗಸ್ಟ್‌ 15ರಂದು ಇದಕ್ಕಾಗಿ ಅಭಿಯಾನ ಕೈಗೋಳ್ಳಲಾಗಿದೆ.

ಮಿನಿ ಬ್ರೆಜಿಲ್‌ : ಮಧ್ಯಪ್ರದೇಶದ ಬಿಚಾರ್‌ಪುರ್‌ ಗ್ರಾಮವನ್ನು ಮಿನಿ ಬ್ರೆಜೆಲ್‌ ಎಂದು ಕರೆಯುತ್ತಾರೆ. ಈ ಗ್ರಾಮವು ಫುಟ್ಬಾಲ್‌ಗೆ ವಿಶೇಷ ಗಮನ ನೀಡುತ್ತಿರುವುದು ಇದಕ್ಕೆ ಕಾರಣ. ಎರಡು ದಶಕಗಳ ಹಿಂದೆ ಈ ಕುರಿತ ಅಭಿಯಾನ ಕೈಗೊಳ್ಳಲಾಗಿತ್ತು. ಈಗ ಫುಟ್ಬಾಲ್‌ ಕ್ರಾಂತಿಯೇ ಅಲ್ಲಿ ಆರಂಭವಾಗಿದೆ. ವಿಶ್ವ ದರ್ಜೆಯ ತರಬೇತುದಾರರು ತರಬೇತಿ ನೀಡುತ್ತಿದ್ದಾರೆ. ನಮ್ಮ ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಅವರ ಅನ್ವೇಷಣೆ ಮತ್ತು ತರಬೇತಿ ಮುಖ್ಯ ಎಂದರು.

ಇದನ್ನೂ ಓದಿ: PM Narendra Modi Interview: ಜಾಗತಿಕ ನಾಯಕತ್ವ ವಹಿಸಲು ಭಾರತ ಸಿದ್ಧ: ಫ್ರಾನ್ಸ್‌ ಪತ್ರಿಕೆಗೆ ನರೇಂದ್ರ ಮೋದಿ ವಿಶೇಷ ಸಂದರ್ಶನ

ಅಮೃತ ಮಹೋತ್ಸವ ಆಚರಣೆ: ನಾವು ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಪೂರ್ಣಗೊಳಿಸಿದ್ದೇವೆ. ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಸಲಾಗಿತ್ತು. ದೇಶದ ರಕ್ಷಣೆಯಲ್ಲಿ ಹುತಾತ್ಮರಾದವರನ್ನು ಗೌರವಿಸಲು ಅವರ ಸ್ಮರಣಾರ್ಥ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ದೇಶದಲ್ಲಿ ಅಮೃತ್‌ ಕಲಶ್‌ ಯಾತ್ರಾ ನಡೆಯಲಿದೆ. ದೇಶದ ಮೂಲೆ ಮೂಲೆಗಳಿಂದ 7,500 ಕಲಶಗಳಲ್ಲಿ ಮಣ್ಣನ್ನು ತುಂಬಿ ದಿಲ್ಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ಅಮೃತ್‌ ವಾಟಿಕಾ ನಿರ್ಮಿಸಲಾಗುವುದು. ಇದು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌ ಸಂದೇಶ ಬಿಂಬಿಸಲಿದೆ ಎಂದು ಪ್ರಧಾನಿ ವಿವರಿಸಿದರು. ಕಳೆದ ವರ್ಷದಂತೆ ಈ ಸಲವೂ ಆಗಸ್ಟ್‌ 15ರಂದು ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸಿ ಸ್ವಾತಂತ್ರ್ಯ ಆಚರಿಸೋಣ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

Fire Accident: ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ ಆರು ಜನ ಮಕ್ಕಳು ಬಲಿಯಾಗಿದ್ದಾರೆ. ಇನ್ನು ಉಳಿದ ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಡಿಎಸ್‌ಎಫ್‌ ಮುಖ್ಯಸ್ಥ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Fire accident
Koo

ನವದೆಹಲಿ: ಗುಜರಾತ್‌(Gujarat)ನ ಅಗ್ನಿ ದುರಂತ (Fire Accident)ದ ಬೆನ್ನಲ್ಲೇ ದೆಹಲಿಯಲ್ಲೂ ಭೀಕರ ದುರ್ಘಟನೆಯೊಂದು ನಡೆದಿದೆ. ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 7 ಮಕ್ಕಳು ದುರ್ಮರಣಕ್ಕೀಡಾಗಿದ್ದಾರೆ. ದೆಹಲಿಯ ವಿವೇಕ್‌ ವಿಹಾರ್‌ನಲ್ಲಿರುವ ನ್ಯೂ ಬಾರ್ನ್‌ ಬೇಬಿ ಕೇರ್‌ ಆಸ್ಪತ್ರೆ(Hospital)ಯಲ್ಲಿ ಶನಿವಾರ ತಡರಾತ್ರಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ವೆಂಟಿಲೇಟರ್‌ನಲ್ಲಿದ್ದ ಮಗು ಸೇರಿದಂತೆ ಒಟ್ಟು 7 ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ 12 ಮಕ್ಕಳನ್ನು ರಕ್ಷಿಸಲಾಗಿದೆ.

ಘಟನೆ ವಿವರ:

ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ 7 ಜನ ಮಕ್ಕಳು ಬಲಿಯಾಗಿದ್ದಾರೆ. ಇನ್ನು ಉಳಿದ ಮಕ್ಕಳನ್ನು ರಕ್ಷಿಸಲಾಗಿದೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ಏನೆಂಬುದು ಇನ್ನೂ ತಿಳಿದಿಲ್ಲ ಎಂದು ಡಿಎಸ್‌ಎಫ್‌ ಮುಖ್ಯಸ್ಥ ಅತುಲ್‌ ಗರ್ಗ್‌ ಮಾಹಿತಿ ನೀಡಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27ಜನ ಮೃತಪಟ್ಟಿದ್ದರು. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಈಗಲೂ ಅಗ್ನಿ ನಂದಿಸುವ ಕಾರ್ಯವನ್ನು ಅಗ್ನಿಶಾಮಕದ ದಳದ ಸಿಬ್ಬಂದಿಯು ಮುಂದುವರಿಸಿದ್ದಾರೆ. ಇನ್ನೂ ಹಲವು ಜನ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ನಿರಾಕ್ಷೇಪಣಾ ಪತ್ರವೇ (NOC) ಸಿಕ್ಕಿರಲಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ: Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Continue Reading

ದೇಶ

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Subramanian Swamy:ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

VISTARANEWS.COM


on

subramanian swamy
Koo

ನವದೆಹಲಿ: ಸ್ವಪಕ್ಷ ನಾಯಕರು, ಪ್ರಧಾನಿ ಮೋದಿ(PM Narendra Modi) ವಿರುದ್ಧವೇ ಅಚ್ಚರಿಕೆಯ ಹೇಳಿಕೆ ನೀಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಕೇಂದ್ರ ಸಚಿವ ಹಿರಿಯ ಬಿಜೆಪಿ ನಾಯಕ(BJP Leader) ಸುಬ್ರಮಣಿಯನ್‌ ಸ್ವಾಮಿ(Subramanian Swamy) ಮತ್ತೆ ಸದ್ದು ಮಾಡಿದ್ದಾರೆ. ಲೋಕಸಭೆ ಚುನಾವಣೆ(Lok Sabha Elections 2024)ಯ ಆರನೇ ಹಂತದ ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ವೋಟ್‌ ಮಾಡಿರೋದಾಗಿ ಬಹಿರಂಗಪಡಿಸಿದ್ದಾರೆ. ಮತದಾನ ಅನ್ನೋದು ಅತ್ಯಂತ ಗೌಪ್ಯ ವಿಚಾರ. ಅದಾಗ್ಯೂ ಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ತಾವು ಯಾರಿಗೆ ಮತ ಚಲಾಯಿಸಿದ್ದು ಮತ್ತು ಆ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ ಎಂಬ ಭರವಸೆ ವ್ಯಕ್ತಪಡಿಸುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಮೋದಿಯನ್ನು ಬೈಯುತ್ತಲೇ ಅವರು ಬಿಜೆಪಿ ಪರ ಮತ ಚಲಾಯಿಸಿದ್ದಾರೆ.

ಸ್ವಾಮಿಯ ಟ್ವೀಟ್‌ನಲ್ಲಿ ಏನಿದೆ?

ನಿನ್ನೆ ದೆಹಲಿಯ ಎಲ್ಲಾ 7ಕ್ಷೇತ್ರಗಳಲ್ಲೂ ಮತದಾನ ನಡೆದಿತ್ತು. ನಿಜಾಮುದ್ದೀನ್‌ ಪ್ರದೇಶದಲ್ಲಿ ಸುಬ್ರಮಣಿಯನ್‌ ಸ್ವಾಮಿ ಮತ ಚಲಾಯಿಸಿದ್ದರು. ಮತದಾನದ ಬಳಿಕ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಸ್ವಾಮಿ, ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ ನಾನು ವೋಟ್‌ ಮಾಡಿದ್ದೇನೆ. ಅವರು ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ ಎಂದು ಬಹಿರಂಗಪಡಿಸಿದ್ದಾರೆ.

ಮತದಾನಕ್ಕೆ ಎರಡು ದಿನ ಮೊದಲೂ ಇಂತಹದ್ದೇ ಒಂದು ಪೋಸ್ಟ್‌ ಮಾಡಿದ್ದ ಅವರು ಹರ್ಷ್‌ ಮಲ್ಹೋತ್ರಾ ಅವರನ್ನು ಹೊಗಳಿದ್ದರು. “ಇದೇ ಬರುವ ಶನಿವಾರ ಬೆಳಗ್ಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಮತ ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ, ಮಾಜಿ ಡೆಪ್ಯೂಟಿ ಮೇಯರ್‌ ಹರ್ಷ್‌ ಮಲ್ಹೋತ್ರ ಅವರಿಗೆ. ಅವರೊಬ್ಬ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ದಾಖಲೆ ಇದೆ. ಸಂಸದರಾಗುವ ಎಲ್ಲಾ ಅರ್ಹತೆ ಅವರಿಗೆ ಇದೆ. ನಾನು ಪೂರ್ವ ನಿಜಾಮುದ್ಧೀನ್‌ ಪ್ರದೇಶದಲ್ಲಿ ವಾಸವಾಗಿದ್ದೇನೆ ಎಂದು ಟ್ವೀಟ್‌ ಮಾಡಿದ್ದರು.

ಇನ್ನು ಸ್ವಾಮಿಯವರ ಟ್ವೀಟ್‌ಗೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡಿದ್ದು, ಶಾಹಿ ಹಾಕಿರುವ ಬೆರಳಿನೊಂದಿಗೆ ಫೊಟೋ ತೆಗೆದು ಅಪ್‌ಲೋಡ್‌ ಮಾಡಿ ಎಂದು ಅನೇಕ ಮನವಿ ಮಾಡಿದ್ದಾರೆ.

ಈ ಹಿಂದೆ ಸುಬ್ರಮಣಿಯನ್‌ ಸ್ವಾಮಿ, ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ, ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ: IndiGo Flight: ಗಾಂಜಾ ಮತ್ತಿನಲ್ಲಿ ಹಾರುತ್ತಿದ್ದ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಕಿಡಿಗೇಡಿ; ಮುಂದೇನಾಯ್ತು?

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಇಂತಹ ಹಲವು ಸಂಗತಿಗಳ ಬಗ್ಗೆ ನಾವು ಎಚ್ಚರಿಕೆ ವಹಿಸಲೇಬೇಕಿದೆ.

VISTARANEWS.COM


on

Fire Accident
Koo

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಭೀಕರ ಅಗ್ನಿ ದುರಂತ (Fire Accident) ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿ 24 ಮಂದಿ ಮೃತಪಟ್ಟಿದ್ದಾರೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯು ಇಡೀ ಕಟ್ಟಡದ ತುಂಬ ಆವರಿಸಿಕೊಂಡಿದ್ದು, ಇನ್ನೂ ಹಲವರು ಅಗ್ನಿಯ ಕೆನ್ನಾಲಗೆಯಲ್ಲಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿ ನಂದಿಸಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ವೀಕೆಂಡ್ ಆದ ಕಾರಣ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ಇದೇ ವೇಳೆ ಏಕಾಏಕಿ ಅಗ್ನಿದುರಂತ ಸಂಭವಿಸಿದ ಕಾರಣ 24 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಘಟನೆ ಸಂಭವಿಸುತ್ತಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದುವರೆಗೆ 15-20 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೊಂದು ದಾರುಣ ವಿಷಾದನೀಯ ದುರಂತ.

ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದರು. ಸುಮಾರು 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿತ್ತು. ಈ ಪ್ರಕರಣಗಳಲ್ಲಿ ಆಕಸ್ಮಿಕಕ್ಕೆ ಕಾರಣ ಹುಡುಕುವುದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡುವುದು ಅಗತ್ಯ.

ಕಾರ್ಖಾನೆಗಳು, ಸಾರ್ವಜನಿಕ ತಾಣಗಳಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ್ಳುವುದು ನಮ್ಮಲ್ಲಿ ಇನ್ನೂ ರೂಢಿಯಾಗಿಲ್ಲ. ನಮ್ಮಲ್ಲಿ ನಗರಗಳು ಜನದಟ್ಟಣೆಯ ಕೇಂದ್ರಗಳಾಗಿವೆ. ಆದರೆ ಸೂಕ್ತ ನಗರ ಯೋಜನೆಯ ಕೊರತೆಯಿದೆ. ಕಟ್ಟಡಗಳ ನಡುವೆ ಸಾಕಷ್ಟು ಸೆಟ್‌ಬ್ಯಾಕ್ ಬಿಡಬೇಕು ಎಂಬುದು ನಿಯಮ. ಈ ನಿಯಮದ ಪಾಲನೆ ಆಗದಿರುವುದರಿಂದ, ಒಂದು ಕಟ್ಟಡಕ್ಕೆ ಹಾನಿ ಅಥವಾ ಅಗ್ನಿ ಆಕಸ್ಮಿಕ‌ ಸಂಭವಿಸಿದರೆ ಇನ್ನೊಂದು ಕಟ್ಟಡಕ್ಕೂ ಹಾನಿಯಾಗುತ್ತದೆ. ಮಾಲ್‌ಗಳು, ನಿಲ್ದಾಣಗಳು, ಹೆಚ್ಚು ಜನ ಸೇರುವ ಸಾರ್ವಜನಿಕ ತಾಣಗಳಲ್ಲಿ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯ. ಆದರೆ ಎಷ್ಟು ಜನ ಇದನ್ನು ಪಾಲಿಸುತ್ತಾರೆ? ದೊಡ್ಡ ಕಂಪನಿಗಳ ಸಿಬ್ಬಂದಿಗೆ ಆಗಾಗ ಅಣಕು ಅಗ್ನಿ ಸುರಕ್ಷತಾ ಡ್ರಿಲ್‌ಗಳನ್ನು ಮಾಡಿಸುವುದು ಅಗತ್ಯ. ಆದರೆ ತುಂಬಾ ಕಡೆ ಮಾಡಿಸುವುದಿಲ್ಲ.

ಬೆಂಗಳೂರು ನಗರ ಕೂಡ ಅಡ್ಡಾದಿಡ್ಡಿಯಾಗಿ ಬೆಳೆದಿದೆ. ಇಂಥ ಆಕಸ್ಮಿಕಗಳು ನಮಗೆ ಎಚ್ಚರಿಕೆಯ ಪಾಠ ಆಗಬೇಕು. ದುರಂತಗಳು ನಮಗೆ ಸುರಕ್ಷತೆಯ ನಿಯಮಗಳನ್ನು ನೆನಪಿಸಬೇಕು. ಪ್ರತಿ ಕಟ್ಟಡದಲ್ಲೂ ಫೈರ್ ಎಕ್ಸಿಟ್‌ಗಳು, ಅಗ್ನಿಶಾಮಕ ಸಿಲಿಂಡರ್‌ಗಳು ಸೇರಿದಂತೆ ಸುರಕ್ಷತಾ ಸಾಧನಗಳಿರಬೇಕು. ಸೆಕ್ಯುರಿಟಿ ಸಿಬ್ಬಂದಿ ಹಾಗೂ ನಿವಾಸಿಗಳಿಗೆ ತರಬೇತಿ ನೀಡುತ್ತಿರಬೇಕು. ತುರ್ತು ಕಾರ್ಯಾಚರಣೆ ವ್ಯವಸ್ಥೆಯ ಅರಿವಿರಬೇಕು. ಗ್ಯಾಸ್ ಸಿಲಿಂಡರ್‌ಗಳು, ಎಲೆಕ್ಟ್ರಿಕ್ ವ್ಯವಸ್ಥೆಗಳ ಸುರಕ್ಷತೆಯನ್ನು ಕಾಲಕಾಲಕ್ಕೆ ಗಮನಿಸುತ್ತಿರಬೇಕು. ಹೀಗೆಲ್ಲ ಇದ್ದಾಗ ಮಾತ್ರ ಇಂಥ ದುರಂತಗಳಿಂದ ಪಾರಾಗಬಹುದು.

ಇದನ್ನೂ ಓದಿ: Chemical Factory: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರಿ ಸ್ಫೋಟ; ನಾಲ್ವರ ಸಾವು, 25 ಮಂದಿಗೆ ಗಾಯ

Continue Reading

ಪ್ರಮುಖ ಸುದ್ದಿ

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Election Commission: ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

VISTARANEWS.COM


on

election commission
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಗರಿಷ್ಠ ಪ್ರಮಾಣದ ಮತದಾನದ ಆಗಿರುವುದರಿಂದ ಚೈತನ್ಯ ಪಡೆದಿರುವ ಚುನಾವಣಾ ಆಯೋಗವು (Election Commission) ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಪ್ರಕ್ರಿಯೆ ಆರಂಭಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶನಿವಾರ ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮದೇ ಸರ್ಕಾರದ ವ್ಯಾಪ್ತಿಗೆ ಸೇರಲು ಅರ್ಹರು ಎಂದು ಅವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಕ್ರಿಯೆಗಳು ಮತ್ತು ವಿಧಾನಸಭಾ ಚುನಾವಣೆ ಎಂದು ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯ ಚುನಾವಣಾ ಆಯುಕ್ತ ಕುಮಾರ್, ಲೋಕಸಭಾ ಚುನಾವಣೆಯಲ್ಲಿ ಜನರ ಭಾಗವಹಿಸುವಿಕೆಯಿಂದ ಚುನಾವಣಾ ಆಯೋಗವು ತುಂಬಾ ಪ್ರೇರಣೆಗೊಂಡಿದೆ. ಅವರ ಉತ್ಸಾಹ ನಮಗೆ ಖುಷಿಯ ವಿಚಾರ. ಯುವಕರು, ಮಹಿಳೆಯರು ಸಂತೋಷದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. ಜನರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ಜಮ್ಮು ಕಾಶ್ಮೀರದ ಮಂದಿ ತಮ್ಮ ಸರ್ಕಾರಕ್ಕೆ ಅರ್ಹರು. ನಾವು ಶೀಘ್ರದಲ್ಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ಮತದಾನಕ್ಕಾಗಿ ತುಂಬಾ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಮಾರ್ಚ್​ನಲ್ಲಿ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸುವಾಗ ಭದ್ರತಾ ಕಾರಣಗಳಿಂದಾಗಿ ವಿಧಾನಸಭಾ ಮತ್ತು ಸಂಸದೀಯ ಚುನಾವಣೆಗಳನ್ನು ಜಮ್ಮು ಕಾಶ್ಮೀರದಲ್ಲಿ ಏಕಕಾಲದಲ್ಲಿ ನಡೆಸುವುದು ಸೂಕ್ತವಲ್ಲ ಎಂಬ ತೀರ್ಮಾನಕ್ಕೆ ಬರಲಾಯಿತು ಎಂದು ಕುಮಾರ್ ಅವರು ಬಹಿರಂಪಡಿಸಿದರು.

ಆಗಸ್ಟ್ 2019 ರಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ನಡೆಯುತ್ತಿರುವ ಮೊದಲ ಚುನವಾಣೆ ಇದಾಗಿದೆ. ಇಲ್ಲಿನ ಭಾಗವಹಿಸುವಿಕೆಯನ್ನು ನೋಡಿದ ಬಳಿಕ ಇದೀಗ ವಿಧಾನಸಭಾ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: 6ನೇ ಹಂತದಲ್ಲಿ 59% ಮತದಾನ ; ಬಂಗಾಳದಲ್ಲಿ ವೋಟಿಂಗ್‌ ಹೆಚ್ಚು, ಹಿಂಸೆಯ ಕಿಚ್ಚು

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆಯು ಸಾಮಾನ್ಯವಾಗಿ ಒಂದು ತಿಂಗಳ ಕಾಲ ನಡೆಯುತ್ತದೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ನಂತರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನಿಗದಿಪಡಿಸಿದ ಸ್ಥಾನಗಳನ್ನು ಹೊರತುಪಡಿಸಿ ವಿಧಾನಸಭಾ ಸ್ಥಾನಗಳ ಸಂಖ್ಯೆ 83 ರಿಂದ 90 ಕ್ಕೆ ಏರಿಕೆಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭಾ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್​ ಡಿಸೆಂಬರ್​ನಲ್ಲಿ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

Continue Reading
Advertisement
Actor  Ravichandran Talks About Kannada Movie Industry Problems yash darshan
ಸ್ಯಾಂಡಲ್ ವುಡ್3 mins ago

Actor  Ravichandran: ಯಶ್, ದರ್ಶನ್ ವರ್ಷಕ್ಕೆ 3 ಸಿನಿಮಾ ಮಾಡಿಬಿಟ್ರೆ ಕಥೆ ಅಷ್ಟೇ ಎಂದ ರವಿಚಂದ್ರನ್‌!

KKR vs SRH IPL Final
ಕ್ರೀಡೆ7 mins ago

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

Fire accident
ದೇಶ31 mins ago

Fire Accident: ಬೆಚ್ಚಿ ಬೀಳಿಸಿದ ಮತ್ತೊಂದು ಅಗ್ನಿ ಅವಘಡ; ಆಸ್ಪತ್ರೆಯಲ್ಲಿ ಭಾರೀ ದುರಂತ- 7 ನವಜಾತ ಶಿಶುಗಳು ಸಜೀವ ದಹನ

KKR vs SRH IPL Final
ಕ್ರೀಡೆ35 mins ago

KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Hassan Accident Terrible accident Five died on the spot
ಹಾಸನ41 mins ago

Hassan Accident: ಹಾಸನದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Mother Sentiment
ಅಂಕಣ1 hour ago

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

subramanian swamy
ದೇಶ1 hour ago

Subramanian Swamy: ಮೋದಿ ವಿರೋಧಿ ಸುಬ್ರಮಣಿಯನ್‌ ಸ್ವಾಮಿ ವೋಟ್‌ ಹಾಕಿದ್ದು ಯಾರಿಗೆ‌ ನೋಡಿ!

Mint Leaf Water
ಆರೋಗ್ಯ2 hours ago

Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

Karnataka weather Forecast
ಮಳೆ3 hours ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ3 hours ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌