Marriage is a sacrament, not a means of enjoyment; Dattatreya Hosabale RSS on Marriage : ಮದುವೆಯೆಂದರೆ ಸಂಸ್ಕಾರ, ಎಂಜಾಯ್ ಮಾಡುವ ಸಾಧನವಲ್ಲ; ದತ್ತಾತ್ರೆಯ ಹೊಸಬಾಳೆ - Vistara News

ದೇಶ

RSS on Marriage : ಮದುವೆಯೆಂದರೆ ಸಂಸ್ಕಾರ, ಎಂಜಾಯ್ ಮಾಡುವ ಸಾಧನವಲ್ಲ; ದತ್ತಾತ್ರೆಯ ಹೊಸಬಾಳೆ

ಭಾರತೀಯ ಸಂಸ್ಕೃತಿಯಲ್ಲಿ ಸಲಿಂಗಿಗಳ ವಿವಾಹಕ್ಕೆ ಅವಕಾಶವೇ ಇಲ್ಲ ಎಂಬುದಾಗಿ ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ಹೇಳಿದ್ದಾರೆ.

VISTARANEWS.COM


on

Better coordination is needed among global Hindu organizations
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದು ಧರ್ಮದಲ್ಲಿ ಮದುವೆಯೆಂದರೆ (Marriage) ಸಂಸ್ಕಾರ. ಅದು ಅನುಭೋಗಕ್ಕೆ ಇರುವ ಸಾಧನವಲ್ಲ ಎಂಬುದಾಗಿ ಆರ್​ಎಸ್​ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಅವರು ಅಭಿಪ್ರಾಯಪಟ್ಟಿದ್ದಾರೆ. ಸಲಿಂಗಿಗಳ ಮದುವೆಗೆ ವಿರೋಧಿಸಿ ಕೇಂದ್ರ ಸರಕಾರ ಸುಪ್ರೀಮ್​ ಕೋರ್ಟ್​ಗೆ ಅಫಿಡವಿಟ್​ ಸಲ್ಲಿಸಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದ ನಿರ್ಧಾರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಪೂರ್ಣ ಬೆಂಬಲವಿದೆ ಎಂದ ಹೇಳಿದ್ದಾರೆ.

ವಿವಾಹ ಪರಸ್ಪರ ವಿರುದ್ಧ ಲಿಂಗಿಗಳ ನಡುವೆ ಮಾತ್ರ ನಡೆಯಬೇಕು ಎಂಬ ಕೇಂದ್ರ ಸರಕಾರದ ಅಭಿಪ್ರಾಯ ಸರಿಯಾಗಿದೆ ಎಂದು ದತ್ತಾತ್ರೆಯ ಹೊಸಬಾಳೆ ಹೇಳಿದ್ದಾರೆ. “ಮದುವೆ ಹೆಣ್ಣು ಮತ್ತು ಗಂಡಿನ ನಡುವೆ ನಡೆಯಬೇಕು. ಹಿಂದು ತತ್ವಶಾಸ್ತ್ರದಲ್ಲಿ ವಿವಾಹ ಒಂದು ಸಂಸ್ಕಾರ. ಖುಷಿ ಪಡಲು ಇರುವ ಸಾಧನವಲ್ಲ. ಅದೊಂದು ಗುತ್ತಿಗೆಯೂ ಅಲ್ಲ. ಸಹಸ್ರಾರು ವರ್ಷಗಳಿಂದ ನಾವು ಅದನ್ನು ಸಂಸ್ಕಾರ ಎಂದೇ ನಂಬಿಕೊಂಡು ಬರಲಾಗಿದೆ. ಅಂದರೆ ಇಬ್ಬರು ವಿವಾಹ ಸಂಬಂಧಕ್ಕೆ ಒಳಗಾಗಿ ಜತೆಯಾಗಿ ಬಾಳುವುದು ತಮಗಾಗಿ ಮಾತ್ರವಲ್ಲ, ಕುಟುಂಬಕ್ಕಾಗಿ ಹಾಗೂ ಸ್ವಸ್ಥ ಸಮಾಜಕ್ಕಾಗಿ” ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಹೊಸಬಾಳೆ ಅವರು ಸಾಮಾಜಿಕ ಪಿಡುಗಾಗಿರುವ ವರದಕ್ಷಿಣೆಯನ್ನೂ ಕೊನೆಗಾಣಿಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಸಲಿಂಗ ವಿವಾಹ ಸಾಧ್ಯವಿಲ್ಲ, ರಾಹುಲ್ ಜವಾಬ್ದಾರಿಯಿಂದ ಮಾತನಾಡಲಿ: ಆರೆಸ್ಸೆಸ್

ಕಳೆದ ಭಾನುವಾರ (ಮಾರ್ಚ್ 12ರಂದು) ಕೇಂದ್ರ ಸರಕಾರ ಸಲಿಂಗಿಗಳ ವಿವಾಹದಿಂದ ಅಧ್ವಾನಕ್ಕೆ ಕಾರಣವಾಗುತ್ತದೆ. ವೈಯಕ್ತಿಕ ಕಾನೂನಿನ ಅಸಮತೋಲನಕ್ಕೂ ಕಾರಣವಾಗುತ್ತದೆ. ಜತೆಗೆ ಸಾಮಾಜಿಕ ಮೌಲ್ಯವೂ ಕುಸಿಯುತ್ತಿದೆ ಎಂದು ಸುಪ್ರೀಮ್​ ಕೋರ್ಟ್​ಗೆ ಅಫಿಡವಿಟ್​ ಸಲ್ಲಿಕೆ ಮಾಡಿತ್ತು. ಏತನ್ಮಧ್ಯೆ, ಸಲಿಂಗಿಗಳ ವಿವಾಹವನ್ನು ಕಾನೂನುಬದ್ಧಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ಸುಪ್ರೀಮ್​ ಕೋರ್ಟ್​​, ಐವರು ನ್ಯಾಯಮೂರ್ತಿಗಳು ಇರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

Asaduddin Owaisi: ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

VISTARANEWS.COM


on

Asaduddin Owaisi Party Leader
Koo

ನಾಸಿಕ್: ಅಸಾದುದ್ದೀನ್ ಓವೈಸಿ (Asaduddin Owaisi) ಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

ಅಯೋಧ್ಯೆಯಲ್ಲಿ ರಾಮಮಂದಿರವೇ ಇರ್ಲಿಲ್ಲ: ಅಸಾದುದ್ದೀನ್‌ ಓವೈಸಿ ವಿವಾದ!

ಕಲಬುರಗಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರು (Asaduddin Owaisi), “ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “500 ವರ್ಷಗಳಿಂದ ಬಾಬರಿ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ. ಆದರೆ, ಷಡ್ಯಂತ್ರದ ಮೂಲದ ಮುಸ್ಲಿಮರಿಂದ ರಾಮಮಂದಿರವನ್ನು ಕಸಿದುಕೊಳ್ಳಲಾಯಿತು. ಕಾಂಗ್ರೆಸ್‌ನ ಜಿ.ಬಿ. ಪಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಮಸೀದಿಯಲ್ಲಿ ರಾಮನ ಮೂರ್ತಿಗಳನ್ನು ಇರಿಸಲಾಯಿತು. ಆಗ, ನಾಯರ್‌ ಅವರು ಅಯೋಧ್ಯೆ ಜಿಲ್ಲಾಧಿಕಾರಿಯಾಗಿದ್ದರು. ಇದಾದ ಬಳಿಕ ರಾಮನ ಮೂರ್ತಿಗಳನ್ನು ಮಸೀದಿಯಿಂದ ತೆಗೆಯಲೇ ಇಲ್ಲ” ಎಂದು ತಿಳಿಸಿದ್ದಾರೆ.

“ರಾಮಮಂದಿರದ ಕುರಿತು ಮಹಾತ್ಮ ಗಾಂಧೀಜಿ ಅವರು ಎಂದಿಗೂ ಪ್ರಸ್ತಾಪ ಮಾಡಿಲ್ಲ. ವಿಶ್ವ ಹಿಂದು ಪರಿಷತ್‌ ಹುಟ್ಟುವ ಮೊದಲೇ ಮಸೀದಿ ಇತ್ತು. ಜಿ.ಬಿ. ಪಂತ್‌ ಅವರು ಮಸೀದಿಯಿಂದ ರಾಮನ ಮೂರ್ತಿಗಳನ್ನು ವಾಪಸ್‌ ತೆಗೆದುಕೊಂಡಿದ್ದರೆ 1992ರಲ್ಲಿ ಮಸೀದಿಯನ್ನು ನೆಲಸಮಗೊಳಿಸಲು ಆಗುತ್ತಿರಲಿಲ್ಲ. ತುಂಬ ವ್ಯವಸ್ಥಿತವಾಗಿ ಮಸೀದಿಯನ್ನು ಮುಸ್ಲಿಮರಿಂದ ಕಿತ್ತುಕೊಳ್ಳಲಾಯಿತು. ಇಂಡಿಯಾ ಒಕ್ಕೂಟದ ಸದಸ್ಯರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರೂ ಈಗ ಹನುಮಾನ್‌ ಚಾಲೀಸಾ ಪಠಣ ಆಯೋಜಿಸಲು ಮುಂದಾಗಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತರ ಮತಗಳೇ ಮುಖ್ಯವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ram Mandir: ಅಮೆಜಾನ್‌ನಲ್ಲಿ ರಾಮಮಂದಿರ ಪ್ರಸಾದ ಸಿಗುತ್ತದೆಯೇ? ಕೇಂದ್ರ ಕೆಂಡವಾಗಿದ್ದೇಕೆ?

Continue Reading

ದೇಶ

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Fire Accident:ಗುಜರಾತ್‌ ರಾಜ್‌ಕೋಟ್‌ ಮಹಾನಗರಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ನಾಲ್ಕು ವರ್ಷಗಳ ಕಾಲ ನೀವು ನಿದ್ದೆಯಲ್ಲಿದ್ದಿರೇ? ನಿಮಗೆ ಕಣ್ಣು ಕಾಣುವುದಿಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಇನ್ನು ಮುಂದೆ ರಾಜ್‌ ಕೋಟ್‌ ಸ್ಥಳೀಯಾಡಳಿತ ಮತ್ತು ರಾಜ್ಯ ಸರ್ಕಾರವನ್ನು ನಂಬಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಅಲ್ಲದೇ ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 28 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹೇಳಿದೆ.

VISTARANEWS.COM


on

Fire accident
Koo

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ (Fire Accident) ಸಂಬಂಧಿಸಿದಂತೆ ಹೈಕೋರ್ಟ್‌ ರಾಜ್ಯಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಗತ್ಯ ಅನುಮತಿ ಅಥವಾ ಪರವಾಣಗಿ ಪಡೆಯದೇ ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದ ಗೇಮಿಂಗ್‌ ಜೋನ್‌ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗುಜರಾತ್‌ ರಾಜ್‌ಕೋಟ್‌ ಮಹಾನಗರಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ನಾಲ್ಕು ವರ್ಷಗಳ ಕಾಲ ನೀವು ನಿದ್ದೆಯಲ್ಲಿದ್ದಿರೇ? ನಿಮಗೆ ಕಣ್ಣು ಕಾಣುವುದಿಲ್ಲವೇ? ಎಂದು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಇನ್ನು ಮುಂದೆ ರಾಜ್‌ ಕೋಟ್‌ ಸ್ಥಳೀಯಾಡಳಿತ ಮತ್ತು ರಾಜ್ಯ ಸರ್ಕಾರವನ್ನು ನಂಬಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಅಲ್ಲದೇ ಘಟನೆಯಲ್ಲಿ ಒಂಬತ್ತು ಮಕ್ಕಳು ಸೇರಿದಂತೆ 28 ಜನರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಹೇಳಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು ಬೆಂಕಿ ಅವಘಡ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಕೋರ್ಟ್‌ ಕೂಡ ಅನೇಕ ಸಲಹೆ ಸೂಚನೆ, ತೀರ್ಪನ್ನೂ ನೀಡಿತ್ತು. ಅದಾಗಿಯೂ ಮತ್ತೆ ಮತ್ತೆ ಇಂತಹ ಘಟನೆಗಳು ನಡೆಯುತ್ತಿದೆ ಎಂದಾದರೆ ಅದು ಸರ್ಕಾರ ಬೆಜವಾಬ್ದಾರಿಯುತ ನಡೆ ಎಂದು ಕೋರ್ಟ್‌ ಅಸಮಾಧಾನ ಹೊರ ಹಾಕಿದೆ.

ಶನಿವಾರ ರಾಜ್‌ಕೋಟ್‌ನಲ್ಲಿರುವ ಗೇಮಿಂಗ್‌ ಜೋನ್‌ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 28 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದೆ. ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ.

ಇದನ್ನೂ ಓದಿ: MLC Election: ಕಾಂಗ್ರೆಸ್ ಎಂಬುದು ದೇಶದಲ್ಲಿ ರಿಜೆಕ್ಟೆಡ್, ಎಕ್ಸ್‌ಪೈರಿ ಗೂಡ್ಸ್: ಪ್ರಲ್ಹಾದ್ ಜೋಶಿ ಲೇವಡಿ

ಇನ್ನು ಎರಡು ಅಂತಸ್ತಿನ ಶೆಡ್‌ನಲ್ಲಿ ನಿರ್ಮಿಸಲಾಗಿದ್ದ ರಾಜ್‌ಕೋಟ್‌ ಗೇಮಿಂಗ್‌ ಜೋನ್‌ಗೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರವೇ ಸಿಕ್ಕಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ರಾಜ್‌ಕೋಟ್‌ ಮೇಯರ್‌ ನಯನಾ ಪೆಢಾದಿಯಾ ಅವರೇ ಮಾಹಿತಿ ನೀಡಿದ್ದಾರೆ. “ನೋ ಅಬ್ಜೆಕ್ಷನ್‌ ಸರ್ಟಿಫಿಕೇಟ್‌ ಇಲ್ಲದೆಯೇ ಗೇಮಿಂಗ್‌ ಜೋನ್‌ ಕಾರ್ಯನಿರ್ವಹಿಸುತ್ತಿದ್ದ ಕುರಿತು ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ನುಸುಳದಂತೆ ತನಿಖೆ ನಡೆಸಲಾಗುತ್ತದೆ. ಇದು ಸಣ್ಣ ಸಂಗತಿ ಅಲ್ಲ” ಎಂಬುದಾಗಿ ಮಾಹಿತಿ ನೀಡಿದ್ದಾರೆ. ಈ ನಡುವೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: ಮನೆ ಕಟ್ಟಿಸಿದ; ಆ ಮನೆಯ ಮೇಲೆ ಆಟೊ ನಿಲ್ಲಿಸಿದ! ಇದರ ಕಥೆ ಕುತೂಹಲಕರ!

ತಾನು ಕಷ್ಟಪಟ್ಟು ಕಟ್ಟಿದ ಮನೆಯ ಚಾವಣಿಯ ಮೇಲೆ ಆಟೋ ಚಾಲಕನೊಬ್ಬ ತನ್ನ ಆಟೋವನ್ನು ಕ್ರೇನ್ ನ ಸಹಾಯದಿಂದ ನಿಲ್ಲಿಸಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ. ಆತ ಏಕೆ ಹೀಗೆ ಮಾಡಿದ? ಇದರ ಹಿಂದಿನ ಕತೆ ಏನು? ಇಲ್ಲಿದೆ ವಿವರಣೆ.

VISTARANEWS.COM


on

By

Viral Video:
Koo

ಕೆಲವರು ತಮ್ಮ ವಾಹನಗಳನ್ನು (own vehicle) ಪ್ರಾಣಕ್ಕಿಂತ ಹೆಚ್ಚು ಜೋಪಾನ ಮಾಡುತ್ತಾರೆ. ಮನೆಯಲ್ಲಿರುವ ಅಪ್ಪ. ಆಮ್ಮ, ಹೆಂಡತಿ, ಮಕ್ಕಳಿಗಿಂತ ಹೆಚ್ಚು ಮುದ್ದಿಸುತ್ತಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ (social media) ಹರಿದಾಡುತ್ತಿರುವ ಆಟೋ ಚಾಲಕನ (auto driver) ಈ ವಿಡಿಯೋವೊಂದು (Viral Video) ನೆಟ್ಟಿಗರಿಂದ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

ವೃತ್ತಿ ಯಾವುದೇ ಇರಲಿ. ತಾವು ಮಾಡುವ ಕೆಲಸದ ಬಗ್ಗೆ ಎಲ್ಲರಿಗೂ ಗೌರವ, ಪ್ರೀತಿ ಇದ್ದೇ ಇರುತ್ತದೆ. ಇದಕ್ಕೆ ಸಾಕ್ಷಿ ಈ ಆಟೋ ಚಾಲಕ. ಬದುಕಿಗೆ ಆಸರೆಯಾಗಿರುವ ಆಟೋ ಮೇಲಿನ ಆತನ ಪ್ರೀತಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ಗಳಿಸಿದೆ.

ಏನು ಮಾಡಿದ್ದಾನೆ ಈ ಆಟೋ ಚಾಲಕ?

ಆಟೋ ಚಾಲಕ ತನ್ನ ವೃತ್ತಿ ಗೆ ತೋರಿದ ಪ್ರೀತಿ ಮತ್ತು ಗೌರವ ಲಕ್ಷಾಂತರ ಮಂದಿಯ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾನ್ಯವಾಗಿ ಹೊಸದಾಗಿ ಖರೀದಿ ಮಾಡಿದ ವಾಹನದ ಮೇಲೆ ಒಂದಷ್ಟು ದಿನ ಹೆಚ್ಚಿನ ಪ್ರೀತಿ ತೋರಿಸುತ್ತೇವೆ. ಆದರೆ ದಿನ ಕಳೆದಂತೆ ಆ ಪ್ರೀತಿ ಕಡಿಮೆಯಾಗುತ್ತ ಹೋಗುತ್ತದೆ. ಆಟೋ, ಟ್ಯಾಕ್ಸಿ ಚಾಲಕರಿಗೆ ಅದು ಅವರ ಹೊಟ್ಟೆಪಾಡು ಮಾತ್ರವಲ್ಲ ಬದುಕಿನ ಸಂಪೂರ್ಣ ಆಸರೆಯಾಗಿರುತ್ತದೆ. ಈ ಆಟೋ ಚಾಲಕನಿಗೆ ಆಟೋ ಇಲ್ಲದೇ ಇದ್ದರೆ ತನ್ನ ಒಂದು ಕನಸು ನನಸಾಗುತ್ತಲೇ ಇರಲಿಲ್ಲ ಎಂಬ ಯೋಚನೆ ಬಂದಿದ್ದೇ ತಡ ತನ್ನ ಆಟೋಗೆ ಅತ್ಯುನ್ನತ ಸ್ಥಾನ ನೀಡಬೇಕೆಂದು ನಿರ್ಧರಿಸಿದ.


ಏನಾಗಿತ್ತು ಕನಸು?

ಸ್ವಂತ ಮನೆ ಕಟ್ಟಬೇಕು ಎನ್ನುವ ಕನಸು ಎಲ್ಲರಲ್ಲಿ ಇರುವಂತೆ ಈ ಆಟೋ ಚಾಲಕನಲ್ಲೂ ಇತ್ತು. ಅದಕ್ಕಾಗಿ ಹಗಲು ರಾತ್ರಿ ಆಟೋದಲ್ಲಿ ದುಡಿದು ಕಷ್ಟಪಟ್ಟ. ಒಂದು ವೇಳೆ ತನ್ನ ಬಳಿ ಆಟೋ ಇಲ್ಲದೇ ಇದ್ದಿದ್ದರೆ ಸ್ವಂತ ಮನೆಯ ಕನಸು ಯಾವತ್ತೂ ನನಸಾಗುತ್ತಿರಲಿಲ್ಲ. ಆದ್ದರಿಂದ ಆಟೋಗೆ ತನ್ನ ಬದುಕಿನಲ್ಲಿ ಅತ್ಯುನ್ನತ ಸ್ಥಾನ ನೀಡಬೇಕೆಂದು ನಿರ್ಧರಿಸಿ ಆಟೋ ವನ್ನು ಕ್ರೇನ್ ನ ಸಹಾಯದಿಂದ ಹೊಸ ಮನೆಯ ಮೇಲೆ ಇರಿಸಿದ್ದಾನೆ. ಹೊಸ ಮನೆಯ ಛಾವಣಿಯ ಮೇಲೆ ತನ್ನ ಪ್ರೀತಿಯ ಆಟೋವನ್ನು ನಿಲ್ಲಿಸಿ ಅದಕ್ಕೆ ಗೌರವ ನೀಡಿದ್ದಾನೆ.

ಇದನ್ನೂ ಓದಿ: Viral News: ಕಂಪನಿಯಲ್ಲಿ 1 ವರ್ಷ ವೇತನ ಸಹಿತ ರಜೆ ಪಡೆದ ಉದ್ಯೋಗಿ; ಈ ಲಕ್‌ ನಿಮ್ಮದಾಗಬೇಕೆ? ಹೀಗೆ ಮಾಡಿ

ಇದರ ವಿಡಿಯೋ ಇನ್ ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಈವರೆಗೆ ಸುಮಾರು 16 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಇದಕ್ಕೆ ಸಾಕಷ್ಟು ಮಂದಿ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಮನೆ ಕಟ್ಟುವ ಕನಸು ಹೊಂದಿರದ ಆಟೋ ಚಾಲಕ ತನ್ನ ಸ್ವಂತ ಆಟೋದಲ್ಲಿ ಕಷ್ಟಪಟ್ಟು ದುಡಿದು ಗಳಿಸಿದ ಹಣದಲ್ಲಿ ಮನೆ ಕಟ್ಟಿರುವುದಕ್ಕೆ ಮೆಚ್ಚುಗೆಯ ಹೊಳೆಯೇ ಹರಿದು ಬರುತ್ತಿದೆ.

Continue Reading

ದೇಶ

Thirumavalavan Controversy: “ಸನಾತನಿ ಉಗ್ರರು ಸಚಿವರ ಜೊತೆ ವೇದಿಕೆಯಲ್ಲೇ ಕಾಣ ಸಿಗುತ್ತಾರೆ”- ಕಾಂಗ್ರೆಸ್‌ ಮಿತ್ರಪಕ್ಷ ಮುಖಂಡನ ವಿವಾದ

Thirumavalavan Controversy: ಸನಾತನ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಭೀತಿಯಿಂದ ಸಂಚರಿಸುತ್ತಿದ್ದಾರೆ. ಶಸ್ತ್ರ ಸಜ್ಜಿತ ಮಾವೋವಾದಿಗಳು ಅರಣ್ಯಗಳಲ್ಲಿ ಅಡಗಿ ಕುಳಿತಿದ್ದಾರೆ. ಸನಾತನ ಉಗ್ರರು ಕೇಂದ್ರ ಸಚಿವರ ಜೊತೆಯಲ್ಲಿಯೇ ಓಡಾಡುತ್ತಿದ್ದಾರೆ. ಅವರಿಗೆ ಎಷ್ಟು ದೊಡ್ಡ ಹುದ್ದೆಯಾದರೂ ಸಿಗುತ್ತದೆ. ಮತ್ತು ಯಾವ ನಿರ್ಧಾರಗಳಾದರೂ ಅವರೇ ತಗೆದುಕೊಳ್ಳುತ್ತಾರೆ ತಿರುಮಾವಲವನ್‌ ಎಂದಿದ್ದಾರೆ.

VISTARANEWS.COM


on

tirumavalavan controversy
Koo

ತಮಿಳುನಾಡು: ಬಿಜೆಪಿ, ಪ್ರಧಾನಿ ಮೋದಿ(PM Narendra Modi) ಹಾಗೂ ಆರ್‌ಎಸ್‌ಎಸ್‌ ಅನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಹಾಗೂ ಇತರೆ ಪ್ರತಿಪಕ್ಷಗಳ ನಾಯಕರು ಸನಾತನ ಧರ್ಮದ(Sanatan Dharma) ಅಸ್ಥಿತ್ವವನ್ನೇ ಪ್ರಶ್ನಿಸಿ ವಿವಾದಕ್ಕೀಡುವುದು ಇದೆ. ಇದೀಗ ಕಾಂಗ್ರೆಸ್‌(Congress) ನೇತೃತ್ವದ ಇಂಡಿಯಾ ಒಕ್ಕೂಟ(I.N.D.I. Alliance)ದ ಮಿತ್ರ ಪಕ್ಷ ವಿದುತಲೈ ಚಿರುತೈಗಲ್‌ ಕಚ್ಛಿ(VCK) ಪಕ್ಷ ಸಂಸ್ಥಾಪಕ ತಿರುಮಾವಲವನ್‌(Thirumavalavan Controversy) ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ತಾವು ಆಯೋಜಿಸಿದ್ದ ವಾರ್ಷಿಕ VCK ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸನಾತನ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಭೀತಿಯಿಂದ ಸಂಚರಿಸುತ್ತಿದ್ದಾರೆ. ಶಸ್ತ್ರ ಸಜ್ಜಿತ ಮಾವೋವಾದಿಗಳು ಅರಣ್ಯಗಳಲ್ಲಿ ಅಡಗಿ ಕುಳಿತಿದ್ದಾರೆ. ಸನಾತನ ಉಗ್ರರು ಕೇಂದ್ರ ಸಚಿವರ ಜೊತೆಯಲ್ಲಿಯೇ ಓಡಾಡುತ್ತಿದ್ದಾರೆ. ಅವರಿಗೆ ಎಷ್ಟು ದೊಡ್ಡ ಹುದ್ದೆಯಾದರೂ ಸಿಗುತ್ತದೆ. ಮತ್ತು ಯಾವ ನಿರ್ಧಾರಗಳಾದರೂ ಅವರೇ ತಗೆದುಕೊಳ್ಳುತ್ತಾರೆ ಎಂದಿದ್ದಾರೆ.

ಸನಾತನ ಉಗ್ರರು ನಮ್ಮ ಜೊತೆಯಲ್ಲಿಯೇ ನಮ್ಮ ಮನೆಯಲ್ಲಿಯೇ ವಾಸಿಸುತ್ತಾರೆ. ಯಾವುದೇ ಸಮಯದಲ್ಲೂ ನಿಮ್ಮ ಮನೆಗೆ ನುಗ್ಗಿ ನಿಮ್ಮನ್ನು ಕೊಲ್ಲಬಹುದು. ಕೈಯಲ್ಲಿ ಮಾರಕಾಸ್ತ್ರ ಹಿಡಿದು ಸ್ವತಂತ್ರವಾಗಿ ಓಡಾಡುತ್ತಿದ್ದಾರೆ. ಅಲ್ಲದೇ ಬಿಜೆಪಿ ನಾಯಕರ ಜೊತೆಗೇ ವೇದಿಕೆಯಲ್ಲಿ ರಾಜಾರೋಷವಾಗಿ ಕಾಣಿಸಿಕೊಳ್ಳುತ್ತಾರೆ. ಅವರು ಎಲ್ಲೂ ಅಡಗಿ ಕೂರುವುದು ಅಥವಾ ಓಡುವುದು ಇದೆಲ್ಲಾ ಮಾಡುವುದೇ ಇಲ್ಲ. ಸಚಿವರ ಜಿತೆ ವೇದಿಕೆಯಲ್ಲೇ ಕಾಣಿಸಿಕೊಳ್ಳುವ ಕಾರಣ ಅವರಿಗೆ ಯಾವ ಭಯವೂ ಇರುವುದಿಲ್ಲ. ಇನ್ನು ಪ್ರಕಾಶ್‌ ರಾಜ್‌ರಂತಹ ವ್ಯಕ್ತಿಗಳನ್ನು ನಾವು ಉಳಿಸಿಕೊಳ್ಳಬೇಕಾಗಿದೆ. ಅವರ ಧೈರ್ಯವನ್ನ ಮೆಚ್ಚಲೇ ಬೇಕು ಎಂದು ಹೇಳಿದರು.

ಚೆನ್ನೈನಲ್ಲಿ ಆಯೋಜನೆಗೊಂಡಿದ್ದ ಈ ಕಾರ್ಯಕ್ರಮದಲ್ಲಿ ನಟ ಪ್ರಕಾಶ್‌ ರಾಜ್‌ ಅವರಿಗೆ ಅಂಬೇಡ್ಕರ್‌ ಸುದಾರ್‌ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅಷ್ಟೇ ಅಲ್ಲದೇ ಅನೇಕ ಎಡಪಂಥೀಯ ನಾಯಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ಮಾತನಾಡಿ ಪ್ರಕಾಶ್‌ ರಾಜ್‌, ಪ್ರಧಾನಿ ಮೋದಿ ಅವರ ದೈವಾಂಶ ಸಂಭೂತ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದರು. ಇಲ್ಲಿಗೆ ನಮ್ಮ ಕೆಲಸ ಮುಗಿಯುವುದಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದಕ್ಕೆ ಎಂದಿಗೂ ನಾನು ಹೆದರುವುದಿಲ್ಲ. ಅವರು (ಪ್ರಧಾನಿ ನರೇಂದ್ರ ಮೋದಿ) ಈಗ ಭಯಗೊಂಡಿದ್ದಾರೆ. ಅವರಂತಹವರು ಮತ್ತೆ ಬರದಂತೆ ನೋಡಿಕೊಳ್ಳಲು ನಾವು ಕೆಲಸ ಮಾಡಬೇಕು. ರಾಜಕೀಯ ಪಕ್ಷಗಳು ಬರುತ್ತವೆ ಹೋಗುತ್ತವೆ, ಆದರೆ ಜನರು ಶಾಶ್ವತ. ತಪ್ಪು ಪಕ್ಷವನ್ನು ಆರಿಸಿದರೆ ನಷ್ಟವಾಗುವುದು ಜನರಿಗೇ ಎಂದರು.

ಇದನ್ನೂ ಓದಿ: Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

Continue Reading
Advertisement
MLC Election
ರಾಜಕೀಯ22 mins ago

MLC Election: ಹೈಕಮಾಂಡ್ ಅಂಗಳದಲ್ಲಿ ಪರಿಷತ್ ಕೈ ಅಭ್ಯರ್ಥಿಗಳ ಆಯ್ಕೆ ಕಸರತ್ತು; ನಾಳೆ ದೆಹಲಿಗೆ ಸಿಎಂ, ಡಿಸಿಎಂ

Kiccha Sudeep visit chamundeshwari temple
ಸ್ಯಾಂಡಲ್ ವುಡ್41 mins ago

Kiccha Sudeep: ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್ ಭೇಟಿ; ಇವರನ್ನು ನೋಡಲು ಜನವೋ ಜನ!

Viral Video
ವೈರಲ್ ನ್ಯೂಸ್1 hour ago

Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

Mitchell Starc
ಕ್ರೀಡೆ1 hour ago

Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

Love Propose
ಬಾಗಲಕೋಟೆ1 hour ago

Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

Dhruva Sarja Trainer Prashanth Was Attacked First Reaction
ಸ್ಯಾಂಡಲ್ ವುಡ್2 hours ago

Dhruva Sarja: ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ನೀಡಿದ ಸ್ಪಷ್ಟನೆ ಏನು?

Asaduddin Owaisi Party Leader
ದೇಶ2 hours ago

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

BS Yediyurappa
ಪ್ರಮುಖ ಸುದ್ದಿ2 hours ago

BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

Fire accident
ದೇಶ2 hours ago

Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Sunil Narine
ಪ್ರಮುಖ ಸುದ್ದಿ2 hours ago

Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು22 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌