152ನೆ ಜನ್ಮದಿನ | ವಾಸುದೇವ ಬಲವಂತ ಫಡ್ಕೆ | ಕ್ರಾಂತಿವೀರನ ನೆನಪು - Vistara News

ದೇಶ

152ನೆ ಜನ್ಮದಿನ | ವಾಸುದೇವ ಬಲವಂತ ಫಡ್ಕೆ | ಕ್ರಾಂತಿವೀರನ ನೆನಪು

ಬ್ರಿಟಿಷರ ಬಗೆಬಗೆಯ ಹಿಂಸೆಗಳಿಗೂ ಬಗ್ಗದ ಜಗ್ಗದ ಧೀರ ಸೇನಾನಿ ವಾಸುದೇವ ಬಲವಂತ ಫಡ್ಕೆ, ಭಾರತದ ಸ್ವಾತಂತ್ರ್ಯ ಚಳವಳಿಗೆ ಹೊಸ ಕ್ರಾಂತಿಕಾರಿ ಹುಮ್ಮಸ್ಸನ್ನು ತಂದವರು.

VISTARANEWS.COM


on

vasudev balwant phadke
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
mayuralakshmi

| ಮಯೂರಲಕ್ಷ್ಮಿ

1857ರಲ್ಲಿ ಬ್ರಿಟಿಷರ ವಿರುದ್ಧ ಭಾರತದಲ್ಲಿ ಆರಂಭವಾದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವಂತ ಸೇನೆ ಕಟ್ಟಿ ಸಶಸ್ತ್ರ ಯುದ್ಧದಿಂದ ಬ್ರಿಟಿಷರನ್ನೆದುರಿಸಿದ ವೀರ ವಾಸುದೇವ್ ಬಲವಂತ ಫಡ್ಕೆ. ಮಹಾರಾಷ್ಟ್ರದ ಕೊಲಾಬಾ ಜಿಲ್ಲೆಯ ಶಿರ್ಧಾನ್ ಗ್ರಾಮದಲ್ಲಿ ನವೆಂಬರ್ 4, 1845ರಲ್ಲಿ ಚಿತ್ಪಾವನ ಕುಟುಂಬದ ಅತ್ಯಂತ ಶ್ರೀಮಂತ ಮನೆತನದಲ್ಲಿ ಜನಿಸಿದ ವಾಸುದೇವ ಬಲವಂತ ಫಡ್ಕೆ ಸಿಂಹದಂತಹ ಸಾಹಸಿ.

ಅವರ ಪೂರ್ವಜರು ಪೇಶ್ವಾ ಆಡಳಿತದಲ್ಲಿ “ಖಿಲ್ಲೇದಾರ” ವೃತ್ತಿಯಲ್ಲಿದ್ದವರು. ಪ್ರಾರಂಭಿಕ ಶಿಕ್ಷಣವನ್ನು ಮರಾಠೀ ಶಾಲೆಯಲ್ಲಿ ಮುಗಿಸಿದ ವಾಸುದೇವ್ ಆಂಗ್ಲ ಶಿಕ್ಷಣವನ್ನು ಇಷ್ಟಪಡದೆ ಬಾಂಬೆಗೆ ಹೋಗಿ ನಾನಾ ಶಂಕರ ಅವರ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದರು. ಮುಂದೆ ರೈಲ್ವೆ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದರು. ಛತ್ರಪತಿ ಶಿವಾಜಿ ಪರಾಕ್ರಮ ಗಾಥೆಗಳಿಂದ ಪ್ರೇರಿತನಾಗಿ ಕುದುರೆ ಸವಾರಿ, ಕತ್ತಿವರಸೆ ಮತ್ತು ಶೂಟಿಂಗ್‍ಗಳನ್ನೂ ಕಲಿತರು. ಬ್ರಿಟಿಷರಿಂದ ಭಾರತವನ್ನು ಸ್ವತಂತ್ರಗೊಳಿಸುವ ಅದಮ್ಯ ಬಯಕೆಯೊಡನೆ ಕ್ರಾಂತಿಕಾರಿ ವಿಚಾರಗಳು ಅವರಲ್ಲಿ ಮನೆಮಾಡಿತು.

ಅವರಿಗೆ ಸಣ್ಣ ವಯಸ್ಸಿನಲ್ಲಿ ವಿವಾಹವಾಯಿತು. ದುರದೃಷ್ಟವಶಾತ್ ಅವರ ಪತ್ನಿ ಅಕಾಲ ಮೃತ್ಯುವಿಗೀಡಾದ ನಂತರ ಮತ್ತೊಂದು ವಿವಾಹವಾದ ನಂತರ ಅವರ ಪರಿವಾರದ ಜವಾಬ್ದಾರಿ ಹೆಚ್ಚಾಯಿತು. ಮುಂದೆ ಬ್ರಿಟಿಷ್ ಸರಕಾರದಲ್ಲಿ ಮಿಲಿಟರಿಯ ಆರ್ಥಿಕ ವಿಭಾಗಕ್ಕೆ ಸೇರ್ಪಡೆಯಾದರು. ಅಲ್ಲಿ ಜಸ್ಟೀಸ್ ರಾನಡೇಯರ ಮಾರ್ಗದರ್ಶನದಲ್ಲಿ ಅವರ ಕ್ರಾಂತಿಕಾರಿ ನಿಲುವುಗಳು ಇನ್ನಷ್ಟು ಬಲವಾದವು. ಸರ್ಕಾರಿ ಕೆಲಸದಲ್ಲಿದ್ದ ಭಾರತೀಯರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದ್ದ ಬ್ರಿಟಿಷರ ಬಗ್ಗೆ ಆಕ್ರೋಶ ಮೂಡಿತು. ತಮ್ಮ ತಾಯಿ ನಿಧನರಾದಾಗ ಅಂತಿಮ ದರ್ಶನಕ್ಕೆ ಅವರಿಗೆ ಸರಕಾರ ರಜೆ ನೀಡಲಿಲ್ಲ. ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಾಗದೆ ಫಡ್ಕೆ ಮನಸ್ಸಲ್ಲಿ ಹತಾಶೆಯೊಡನೆ ಬ್ರಿಟಿಷರ ವಿರುದ್ಧ ಆಕ್ರೋಶ ಭುಗಿಲೆದ್ದಿತು.

ಅಂದಿನ ದಿನಗಳಲ್ಲಿ ಬ್ರಿಟಿಷ್ ಸರಕಾರದ ಕಲೆಕ್ಟರ್‌ಗಳು ಮತ್ತು ಅಧಿಕಾರಿಗಳು ರೈತರ ಮೇಲೆ ಮನಬಂದಂತೆ ಸುಂಕ ಹೇರಿ ದೌರ್ಜನ್ಯವೆಸಗುತ್ತಿದ್ದರು. ಈ ಎಲ್ಲಾ ಘಟನೆಗಳಿಂದ ಸಿಡಿದೆದ್ದ ಅವರು ಕೆಲಸಕ್ಕೆ ರಾಜೀನಾಮೆ ನೀಡಿದರು. ಮುಂದೆ ರಾಮೋಶಿ ಜನರ ಜೊತೆಗೂಡಿದರು. ನೂರಾರು ವರ್ಷಗಳಿಂದ ಮರಾಠಾ ದೊರೆಗಳ ಅರಮನೆ ಮತ್ತು ಕೋಟೆ ಕೊತ್ತಲಗಳನ್ನು ರಕ್ಷಿಸುತ್ತಿದ್ದ ರಾಮೋಶೀ ಜನರು ಬ್ರಿಟಿಷರಿಂದ ಪೀಡಿತರಾಗಿದ್ದರು. ತಮ್ಮದೆಲ್ಲವನ್ನೂ ಕಳೆದುಕೊಂಡು ಗುಲಾಮಗಿರಿಯಲ್ಲಿ ನರಳುತ್ತಿದ್ದ ಅವರಿಗೆ ಭರವಸೆಯಾದವರು ವಾಸುದೇವ್. ವಾಸುದೇವ್ ಫಡ್ಕೆಯನ್ನು ತಮ್ಮ “ಮಹಾರಾಜ” ಎಂದು ಸಾರಿದರು.

ಸೇನೆಯ ಕಾರ್ಯಗಳಿಗೆ ಹಣದ ಅವಶ್ಯಕತೆಯಿತ್ತು, ರಾಮೋಶೀ ಜನರಲ್ಲಿ ಶೌರ್ಯಬಲವಿತ್ತು ಆದರೆ ಹಣವಿರಲಿಲ್ಲ. ಶಸ್ತ್ರ ಖರೀದಿಯೊಂದಿಗೆ ಅನ್ಯ ವೆಚ್ಚಗಳಿಗಾಗಿ ಐದು ಸಾವಿರ ರೂಪಾಯಿಗಳ ಅವಶ್ಯಕತೆಯಿತ್ತು. ಬಡವರ ಹಣ ದೋಚುತ್ತಿದ್ದ ಶ್ರೀಮಂತರಿಂದ ಹಣ ಲೂಟಿಮಾಡಿ ಸೇನೆಯನ್ನು ಬಲಪಡಿಸುವುದು ಮುಂದಿನ ಯೋಜನೆಯಾಗಿತ್ತು. ಅದರೊಂದಿಗೆ ಬ್ರಿಟಿಷರ ಖಜಾನೆಯ ಹಣ ಮತ್ತು ಐಶ್ವರ್ಯದ ಲೂಟಿ. ಮೊದಲು ಧಮರಿ ಎನ್ನುವ ಊರಿನ ಖಜಾನೆ ವಶವಾದ ನಂತರ ವಲ್ಹೇ, ಪಲಬ್ಸೇ ಮುಂತಾದ ಅನೇಕ ಊರುಗಳ ಖಜಾನೆಗಳ ಮೇಲೆ ದಾಳಿ ಮಾಡಿದರು.

ಬ್ರಿಟಿಷರ ಪಾಲಿಗೆ ಕಂಟಕವಾಗಿದ್ದ ಫಡ್ಕೆಯ ಸೆರೆಹಿಡಿಯಲು ಅವರು ಮಾಡಿದ ಪ್ರಯತ್ನ ವ್ಯರ್ಥವಾಯಿತು. ಜನರ ಒಲವನ್ನು ಪಡೆದಿದ್ದ ಫಡ್ಕೆಯನ್ನು ಕುರಿತು ಯಾರೂ ಸುಳಿವು ಕೊಡಲಿಲ್ಲ. ಸುಳಿವು ನೀಡಿದವರಿಗೆ ಸೂಕ್ತ ಬಹುಮಾನವನ್ನೂ ಘೋಷಿಸಿ ಅವನ ಚಿತ್ರದೊಂದಿಗೆ ಭಿತ್ತಿಚಿತ್ರವನ್ನು ಅಂಟಿಸಿದರು. ಇದಕ್ಕೆ ಉತ್ತರವಾಗಿ ಫಡ್ಕೆಯ ಮಿತ್ರರು ಅಹೋರಾತ್ರಿ ರಸ್ತೆಗಳಲ್ಲಿ ಗೋಡೆಗಳ ಮೇಲೆ ಮತ್ತೊಂದು ಸೂಚನೆಯ ಭಿತ್ತಿಚಿತ್ರ ಅಂಟಿಸಿದರು. ಬಾಂಬೇ ಗವರ್ನರ್ ಸರ್ ರಿಚರ್ಡ್ ಟೆಂಪಲ್‍ನನ್ನು ಸೆರೆಹಿಡಿದು ಅಥವಾ ಕೊಂದರೆ ಬ್ರಿಟಿಷರು ಘೋಷಿಸಿದ ಹಣಕ್ಕೆ ಒಂದೂವರೆ ಪಟ್ಟು ಹೆಚ್ಚು ಬಹುಮಾನ ನೀಡುವುದಾಗಿ ಆ ಸೂಚನೆಯಲ್ಲಿತ್ತು.

ಫಡ್ಕೆಯ ಸೇನೆ ಪುಣೆಯ ಸರ್ಕಾರೀ ಕಚೇರಿಯನ್ನು ಸುಟ್ಟು ಧ್ವಂಸ ಮಾಡಿತು. ಬ್ರಿಟಿಷರು ಫಡ್ಕೆಯನ್ನು ಹಿಡಿಯಲು ತೀವ್ರ ಕಾರ್ಯಾಚರಣೆ ಆರಂಭಿಸಿದರು. ಕ್ರಮೇಣ ಫಡ್ಕೆ ಕಟ್ಟಿದ್ದ ಸೇನೆಯಲ್ಲಿ ಹಣದ ಅಭಾವ ಹೆಚ್ಚಾಯಿತು. ಜೊತೆಗೆ ಪೋಲೀಸರ ಸೆರೆಯಾಗುವ ಆತಂಕ. ಪೋಲಿಸರು ತಮ್ಮನ್ನು ಹಿಂಬಾಲಿಸುತ್ತಿದ್ದ ಸುಳಿವು ಸಿಕ್ಕ ಫಡ್ಕೆ ತಪ್ಪಿಸಿಕೊಂಡು ಗಂಗಾಪುರಕ್ಕೆ ಹೋದರು. ಅಲ್ಲಿಂದ ಮುಂದುವರಿದು ಸ್ನೇಹಿತರಿಂದ ಬೇರೆಯಾಗಿ ಹಗಲೂ-ರಾತ್ರಿ ನಿದ್ರಿಸದೆ ಕಾಡು-ಮೇಡುಗಳನ್ನು ಅಲೆದರು. ನಿದ್ರಾಹಾರವಿಲ್ಲದೆ ಜರ್ಝರಿತರಾದರು. ಕಾಡಿನ ಹಣ್ಣುಗಳು, ನದಿ ನೀರೇ ಆಹಾರವಾಯಿತು.

ಇದನ್ನೂ ಓದಿ| Bhagat Singh Birthday | ಲೇಖನ | ಯುವಕರಿಗೆ‌ ಸದಾ ಸ್ಫೂರ್ತಿ ಕ್ರಾಂತಿಕಾರಿ ಭಗತ್‌ ಸಿಂಗ್

1870, ಜುಲೈ 20ರ ದೇವಾರ್ ಎನ್ನುವ ಊರನ್ನು ತಲುಪಿದಾಗ ವಿಷಮ ಜ್ವರದಿಂದ ನಿತ್ರಾಣರಾದರು. ಅವರ ಸುಳಿವು ಸಿಕ್ಕ ಬ್ರಿಟಿಷ್ ಅಧಿಕಾರಿ ಡೇನಿಯಲ್ ಅವನ ಮೇಲೆರಗಿ ಸೆರೆಹಿಡಿದ. ಧೈರ್ಯವಿದ್ದಲ್ಲಿ ತಮ್ಮ ಬೇಡಿಗಳನ್ನು ತೆಗೆದು ಹೋರಾಡುವಂತೆ ಫಡ್ಕೆ ಸವಾಲೆಸೆದರು. ಅಲ್ಲಿಂದ ಕರೆದೊಯ್ದ ಅವರನ್ನು ಪುಣೆಯ ಸೆರೆಯಲ್ಲಿಟ್ಟರು. ಮುಂದೆ ಪುಣೆ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಯ್ತು. ಸರಕಾರೀ ಖಜಾನೆ ದರೋಡೆ ಮತ್ತು ಶ್ರೀಮಂತರ ಮೇಲೆ ದಾಳಿಗಳ ಆಪಾದನೆ ಹೊರಿಸಿದರು. ಫಡ್ಕೆ ಪರ ವಾದ ಮಾಡಲು ಗಣೇಶ್ ವಾಸುದೇವ ಜೋಶಿ ಮುಂದೆ ಬಂದರು. ದುರದೃಷ್ಟವಶಾತ್ ಅವರ ವಾದ ಫಲಿಸಲಿಲ್ಲ. ಸ್ವತ: ಫಡ್ಕೆ ತಮ್ಮ ದೇಶಹಿತ ಕಾರ್ಯ ಸಮರ್ಥಿಸಿ ವಾದ ಮಂಡಿಸಿದರು.

ಆದರೆ ಅದು ಫಲ ಕಾಣಲಿಲ್ಲ. ಅವರಿಗೆ ಆಜೀವ ಕಾರಾಗೃಹ ಶಿಕ್ಷೆ ವಿಧಿಸಲಾಯಿತು. ಭಾರತದಿಂದ ಅವನನ್ನು “ಆಡೆನ್” ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು. ಸೆರೆಮನೆಯಲ್ಲಿ ಡೈರಿಯಲ್ಲಿ ಫಡ್ಕೆ ತಮ್ಮ ಸಾಹಸ ಕಥನಗಳನ್ನು ದಾಖಲಿಸಿದರು. ಅಕ್ಟೋಬರ್ 31, 1880ರಂದು ಆಡೆನ್ ಜೈಲಿನ ಎತ್ತರದ ಗೋಡೆ ಹಾರಿ ತಪ್ಪಿಸಿಕೊಂಡರು. ಆದರೆ ಪರದೇಶವಾದ್ದರಿಂದ ಅಲ್ಪ ಸಮಯದಲ್ಲಿಯೇ ಮತ್ತೆ ಬ್ರಿಟಿಷರ ಸೆರೆಯಾಗಬೇಕಾಯ್ತು. ಮತ್ತೆ ಸೆರೆಮನೆಯ ವಾಸ, ನ್ಯಾಯಾಲಯದಲ್ಲಿ ವಿಚಾರಣೆ.

ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದಾಗ ಉಪವಾಸ ಸತ್ಯಾಗ್ರಹ ಮಾಡಿ ಪ್ರತಿಭಟಿಸಿದರು. 1883, ಫೆಬ್ರವರಿ 17ರಂದು ಸೆರೆಮನೆಯಲ್ಲಿ ಚಿತ್ರಹಿಂಸೆ ಮತ್ತು ತೀವ್ರ ಅನಾರೋಗ್ಯದಿಂದ ವಾಸುದೇವ್ ಫಡ್ಕೆ ಇಹಲೋಕ ತ್ಯಜಿಸಿದರು. ಸಾವಿನ ಸುದ್ದಿ ಮಿಂಚಿನಂತೆ ಹರಡಿತು. ಪರದೇಶದಲ್ಲಿ ತಮ್ಮ ನೆಚ್ಚಿನ ನಾಯಕ ಅಸ್ತಂಗತರಾದದ್ದನ್ನು ತಿಳಿದು ಭಾರತೀಯರು ಕಣ್ಣೀರಿಟ್ಟರು.

ಇದನ್ನೂ ಓದಿ | ಜನ್ಮದಿನ ಸ್ಮರಣೆ | ಬಲಿದಾನಿಯಾದ ಕ್ರಾಂತಿಕಾರಿ ಕವಿ ಅಷ್ಫಾಕುಲ್ಲಾ ಖಾನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

IIT Bombay: ಧರ್ಮ ಹಾಗೂ ದೇವರುಗಳ ವಿಷಯ ತುಂಬಾ ಸೂಕ್ಷ್ಮವಾದದ್ದು. ಇದನನು ಕೆದಕಿದರೆ ದೇಶದಲ್ಲಿನ ಶಾಂತಿ ಕದಡಿದ ಹಾಗೆ.ಅದರಲ್ಲೂ ದೇಶದ ಪ್ರಜೆಗಳಾದ ವಿದ್ಯಾರ್ಥಿಗಳು ಈ ವಿಷಯದ ಕುರಿತು ಹೆಚ್ಚಿನ ನಿಗಾವಹಿಸಬೇಕು. ಐಐಟಿ ಬಾಂಬೆಯ ಬಯಲು ರಂಗಮಂದಿರದಲ್ಲಿ ನಡೆದ ಇನ್ ಸ್ಟಿಟ್ಯೂಟ್ ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್ ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕವಾಡಿದ ವಿದ್ಯಾರ್ಥಿಗಳು ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು. ಇದಕ್ಕೆ ತೀವ್ರವಾದ ವಿರೋಧ ವ್ಯಕ್ತಗೊಂಡ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದೆ.

VISTARANEWS.COM


on

IIT Bombay
Koo

ಮುಂಬೈ : ರಾಮ ಮತ್ತು ಸೀತೆ ಹಿಂದೂ(Hindu)ಗಳ ಆರಾಧ್ಯ ದೇವರು. ಹಾಗಾಗಿ ಈ ದೇವರ ಹೆಸರಿಗೆ ಅವಮಾನ ಮಾಡಿದರೆ ಯಾರೂ ಸುಮ್ಮನೆ ಇರುವುದಿಲ್ಲ. ಆದರೆ ಇದೀಗ ಐಐಟಿ ಬಾಂಬೆಯಲ್ಲಿ (IIT Bombay) ಹಿಂದೂ ದೇವರಿಗೆ ಅವಹೇಳನ ಮಾಡುವಂತಹ ನಾಟಕವಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ (Student) ದಂಡ ವಿಧಿಸಲಾಗಿದೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಬಾಂಬೆಯ ಬಯಲು ರಂಗಮಂದಿರದಲ್ಲಿ ಈ ವರ್ಷ ಮಾರ್ಚ್ 31ರಂದು ನಡೆದ ಇನ್‌ಸ್ಟಿಟ್ಯೂಟ್‌ನ ಪರ್ಫಾರ್ಮಿಂಗ್ ಆರ್ಟ್ಸ್ ಫೆಸ್ಟಿವಲ್‌ನಲ್ಲಿ “ರಾಹೋವನ್” ಶೀರ್ಷಿಕೆಯ ನಾಟಕದಲ್ಲಿ ವಿದ್ಯಾರ್ಥಿಗಳು ರಾಮಾಯಣದ ಕಥಾ ಹಂದರವನ್ನು ಹೊಂದಿರುವ ನಾಟಕವಾಡಿದ್ದರು. ಇದರಲ್ಲಿ ಹಿಂದೂ ಧರ್ಮಕ್ಕೆ ಅಗೌರವ ತೋರಿದಲ್ಲದೇ ರಾಮ ಮತ್ತು ಸೀತೆಯನ್ನು ಅವಹೇಳನ ಮಾಡಿದ್ದರು.

ಈ ನಾಟಕವನ್ನು ವಿರೋಧಿಸಿ ಕಾಲೇಜಿನ ಒಂದು ವಿಭಾಗ ಪ್ರತಿಭಟನೆ ಮಾಡಿತ್ತು. ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್‌ನಲ್ಲಿನ ‘ಐಐಟಿ ಬಿ ಫಾರ್ ಭಾರತ್’ ಹ್ಯಾಂಡಲ್‌ನಲ್ಲಿ ಈ ನಾಟಕವನ್ನು ಖಂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಐಐಟಿ ವಿದ್ಯಾರ್ಥಿಯೊಬ್ಬನಿಗೆ 1.2 ಲಕ್ಷ ರೂ. ದಂಡ ವಿಧಿಸಿದೆ. ಇತರ ಏಳು ವಿದ್ಯಾರ್ಥಿಗಳಿಗೆ ತಲಾ 40,000 ರೂ. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Murder Case: ಅಶ್ಲೀಲ ವಿಡಿಯೊ ಚಟ; ಮಗಳನ್ನೇ ಲೈಂಗಿಕಕ್ರಿಯೆಗೆ ಒತ್ತಾಯಿಸಿ ಕೊಂದ ಪಾಪಿ ತಂದೆ

ಅಲ್ಲದೇ ನಾಟಕಕ್ಕೆ ಸಂಬಂಧಿಸಿದ ದೂರುಗಳ ಪರಿಹಾರಕ್ಕೆ ಶಿಸ್ತು ಸಭೆ ಕರೆದ ಐಐಟಿ ಅಲ್ಲಿನ ಚರ್ಚೆಗಳ ಆಧಾರದ ಮೇಲೆ ಶಿಕ್ಷಾರ್ಹ ಕ್ರಮಗಳನ್ನು ಶಿಫಾರಸು ಮಾಡಿದೆ. ಅದರಂತೆ ಜುಲೈ 20, 2024ರಂದು ವಿದ್ಯಾರ್ಥಿ ವ್ಯವಹಾರ ಡೀನ್ ಕಚೇರಿ ಯಲ್ಲಿ ರೂ. 1.2ಲಕ್ಷ ದಂಡವನ್ನು ಪಾವತಿಸಬೇಕಾಗಿ ಹೇಳಿದೆ. ಮತ್ತು ಸಂಸ್ಥೆಯ ಜಿಮ್ಖಾನಾ ಪ್ರಶಸ್ತಿಗಳಿಂದ ಯಾವುದೇ ಮಾನ್ಯತೆ ಪಡೆಯದಂತೆ ನಿರ್ಬಂಧ ಹೇರಿದರೆ ಕಿರಿಯ ಏಳು ವಿದ್ಯಾರ್ಥಿಗಳಿಗೆ 40,000 ದಂಡದ ಜೊತೆಗೆ ಹಾಸ್ಟೆಲ್ ಸೌಲಭ್ಯದಿಂದ ಅಮಾನತುಗೊಳಿಸಲಾಗಿದೆ. ಒಂದು ವೇಳೆ ದಂಡವನ್ನು ತಪ್ಪಿಸಿದರೆ ಮತ್ತಷ್ಟು ನಿರ್ಬಂಧಕ್ಕೆ ಒಳಪಡಿಸುವುದಾಗಿ ತಿಳಿಸಿದೆ.

Continue Reading

ದೇಶ

UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

UGC-NET: ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವಿಚಾರವಾಗಿ ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ”ಪ್ರಧಾನಿ ಮೋದಿ ಅವರಿಗೆ ರಷ್ಯಾ-ಉಕ್ರೇನ್ ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಕಾರಣಗಳಿಂದಾಗಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಅಥವಾ ಅದನ್ನು ನಿಯಂತ್ರಿಸಲು ಅವರು ಬಯಸುತ್ತಿಲ್ಲ” ಎಂದು ದೂರಿದ್ದಾರೆ.

VISTARANEWS.COM


on

UGC-NET
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET 2024) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಬೇಕು ಎಂಬ ಆಗ್ರಹ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವಿಚಾರವಾಗಿ ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ʼʼಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆಯೇ ಸಾವಿರಾರು ಮಂದಿ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ದೂರು ನೀಡಿದ್ದರು. ಪ್ರಧಾನಿ ಮೋದಿ ಅವರಿಗೆ ರಷ್ಯಾ-ಉಕ್ರೇನ್ ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ಕಾರಣಗಳಿಂದಾಗಿ ನರೇಂದ್ರ ಮೋದಿ ಅವರಿಗೆ ಭಾರತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಅಥವಾ ಅದನ್ನು ನಿಯಂತ್ರಿಸಲು ಅವರು ಬಯಸುತ್ತಿಲ್ಲ” ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.  “ಶಿಕ್ಷಣ ವ್ಯವಸ್ಥೆಯನ್ನು ಬಿಜೆಪಿಯ ಮಾತೃ ಸಂಸ್ಥೆ ವಶಪಡಿಸಿಕೊಂಡಿದೆ. ಈ ಕಾರಣಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆ ನಡೆಯುತ್ತಿದೆ. ಇದು ರಾಷ್ಟ್ರ ವಿರೋಧಿ ಚಟುವಟಿಕೆ” ಎಂದು ಅವರು ಟೀಕಿಸಿದ್ದಾರೆ.

“ಒಂದು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇನ್ನೊಂದನ್ನು ರದ್ದುಗೊಳಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂದು ನಮಗೆ ತಿಳಿದಿಲ್ಲ. ಅದೇನೇ ಇರಲಿ ತಪ್ಪಿತಸ್ಥರನ್ನು ಬಂಧಿಸಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ನಾಳೆ ದೇಶಾದ್ಯಂತ ಪ್ರತಿಭಟನೆ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET-UG) ಅಕ್ರಮ ನಡೆದಿದ್ದು, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಶುಕ್ರವಾರ (ಜೂನ್‌ 21) ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್, “ನೀಟ್ ಪರೀಕ್ಷೆಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳು ಮತ್ತು ಎನ್‌ಡಿಎ ಸರ್ಕಾರದ ನಿಷ್ಕೀಯತೆಯನ್ನು ಎತ್ತಿ ತೋರಿಸಿದೆ. ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಒತ್ತಾಯಿಸಿ ಎಲ್ಲ ಪ್ರದೇಶ ಕಾಂಗ್ರೆಸ್ ಸಮಿತಿಗಳು ಜೂನ್ 21ರಂದು ರಾಜ್ಯ ಪ್ರಧಾನ ಕಚೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕು. ಇದರಲ್ಲಿ ಹಿರಿಯ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಭಾಗಿಯಾಗಬೇಕು” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಇನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಟ್​ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು, “ನರೇಂದ್ರ ಮೋದಿಯವರೇ, ನೀವು ಪರೀಕ್ಷೆಗಳ ಬಗ್ಗೆ ಸಾಕಷ್ಟು ಚರ್ಚಿಸುತ್ತೀರಿ. ಆದರೆ ನೀವು ಯಾವಾಗ ‘ನೀಟ್ ಪರೀಕ್ಷಾ ಪೇ ಚರ್ಚಾ’ ನಡೆಸುತ್ತೀರಿ? ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಉತ್ಸಾಹಕ್ಕೆ ತಣ್ಣೀರೆರಚಿದ್ದೀರಿ. ಇದು ಮೋದಿ ಸರ್ಕಾರದ ದುರಹಂಕಾರದ ಸೋಲು” ಎಂದು ಖರ್ಗೆ ಟೀಕಿಸಿದ್ದಾರೆ.

Continue Reading

ದೇಶ

Nitish Kumar: ನಿತೀಶ್‌ ಕುಮಾರ್‌ ಸರ್ಕಾರಕ್ಕೆ ಹಿನ್ನಡೆ; ಮೀಸಲಾತಿ ಪ್ರಮಾಣ ಶೇ. 65ಕ್ಕೆ ಏರಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

Nitish Kumar: ಕಳೆದ ವರ್ಷ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿದ್ದ ಬಿಹಾರ ಸರ್ಕಾರದ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ಇದರಿಂದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸರ್ಕಾರಕ್ಕೆ ಹಿನ್ನಡೆಯಾಗಿದೆ.

VISTARANEWS.COM


on

Nitish Kumar
Koo

ಪಾಟ್ನಾ: ಪ್ರಮುಖ ಬೆಳವಣಿಗೆಯೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಳೆದ ವರ್ಷ ಮೀಸಲಾತಿ (Reservation) ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿದ್ದ ಬಿಹಾರ ಸರ್ಕಾರದ ಆದೇಶವನ್ನು ಪಾಟ್ನಾ ಹೈಕೋರ್ಟ್ (Patna High Court)​ ರದ್ದುಗೊಳಿಸಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶಿಸಿದ ಮೀಸಲಾತಿಯ ಶೇ. 50 ರ ಮಿತಿಯನ್ನು ಮೀರಿದೆ. ಹೀಗಾಗಿ ಪಾಟ್ನಾ ಹೈಕೋರ್ಟ್‌ ಇದನ್ನು ಸಂವಿಧಾನ ಬಾಹಿರ ಎಂದು ಕರೆದಿದೆ.

2023ರ ನವೆಂಬರ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವ ಸರ್ಕಾರ ಜಾರಿಗೆ ತಂದ ಕಾನೂನನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.

ಅರ್ಜಿದಾರರ ಪರ ವಕೀಲರಲ್ಲಿ ಒಬ್ಬರಾದ ರಿತಿಕಾ ರಾಣಿ ಈ ಬಗ್ಗೆ ಮಾತನಾಡಿ, “ಮೀಸಲಾತಿ ಕಾನೂನುಗಳ ಈ ತಿದ್ದುಪಡಿ ಸಂವಿಧಾನವನ್ನು ಉಲ್ಲಂಘಿಸುತ್ತವೆ ಎಂದು ನಾವು ಅರ್ಜಿ ಸಲ್ಲಿಸಿದ್ದೇವೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಇಂದು ಆದೇಶ ಹೊರಡಿಸಿದೆʼʼ ಎಂದು ತಿಳಿಸಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಕೆಲವು ದಿನಗಳ ನಂತರ, ನಿತೀಶ್ ಕುಮಾರ್ ಸರ್ಕಾರವು ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಮಿತಿಯನ್ನು ಶೇ. 50ರಿಂದ ಶೇ. 65 ಕ್ಕ ಹೆಚ್ಚಿಸಲು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿತ್ತು.

ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಆರ್‌ಜೆಡಿಯ ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ, ಇದು ದುರದೃಷ್ಟಕರ ಬೆಳವಣಿಗೆ ಎಂದು ಹೇಳಿದರು. ಮೀಸಲಾತಿಯನ್ನು ಸಂವಿಧಾನದ ಒಂಬತ್ತನೇ ಪರಿಚ್ಛೇದದಡಿ ಸೇರಿಸಿ ಮೀಸಲಾತಿ ಹೆಚ್ಚಳವನ್ನು ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು. “ಕೇಂದ್ರದಲ್ಲಿ ಈಗ ಅಸ್ತಿತ್ವದಲ್ಲಿರುವ ಸರ್ಕಾರಕ್ಕೆ ನಿತೀಶ್‌ ಕುಮಾರ್‌ ಬೆಂಬಲ ನೀಡಿದ್ದಾರೆ. ಹೀಗಾಗಿ ಅವರು ಉನ್ನತ ನ್ಯಾಯಾಲಯವನ್ನು ಸಮೀಪಿಸಿ ಮೀಸಲಾತಿಉ ಈ ಹಕ್ಕನ್ನು ಸಂರಕ್ಷಿಸಬೇಕುʼʼ ಎಂದು ಹೇಳಿದರು.

ಮೀಸಲಾತಿ ಹೆಚ್ಚಳ

ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಲು ಬಿಹಾರ ವಿಧಾನಸಭೆ 2023ರ ನವೆಂಬರ್‌ನಲ್ಲಿ ಮೀಸಲಾತಿ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಪರಿಷ್ಕೃತ ಮೀಸಲಾತಿ ಕೋಟಾದಲ್ಲಿ ಎಸ್‌ಸಿ ವರ್ಗಕ್ಕೆ ಶೇ. 20, ಎಸ್‌ಟಿ ವರ್ಗಕ್ಕೆ ಶೇ. 2, ಒಬಿಸಿ ವರ್ಗಕ್ಕೆ ಶೇಕಡಾ 18 ಮತ್ತು ಇಬಿಸಿ ವರ್ಗಕ್ಕೆ ಶೇ. 25ರಷ್ಟು ಮೀಸಲಾತಿ ನೀಡಲಾಗಿದೆ.

ಇದನ್ನೂ ಓದಿ: Agnipath Scheme: ಸರ್ಕಾರ ರಚನೆಗೂ ಮುನ್ನ ನಿತೀಶ್‌ ಕುಮಾರ್‌ ಬಿಗ್‌ ಡಿಮ್ಯಾಂಡ್‌! ಬಿಜೆಪಿಗೆ ʼಅಗ್ನಿʼ ಪರೀಕ್ಷೆ ಗ್ಯಾರಂಟಿ!

ಆರಂಭದಲ್ಲಿ ನಿತೀಶ್ ಕುಮಾರ್ ಅವರ ಜೆಡಿಯು ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಬಳಿಕ ಬಿಜೆಪಿಯ ಬೆಂಬಲದೊಂದಿಗೆ ಮತ್ತೆ ಮುಖ್ಯಮಂತ್ರಿಯಾದರು.

Continue Reading

ಉದ್ಯೋಗ

Job Alert: ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Continue Reading
Advertisement
Protest by BJP in Yallapur against petrol and diesel price hike
ಉತ್ತರ ಕನ್ನಡ6 mins ago

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Renuka swamy Murder case
ಬೆಂಗಳೂರು16 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್26 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest40 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ41 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್44 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ49 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು51 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ57 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest1 hour ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌