ಜಾಮಿಯಾ ಮಸೀದಿ ಎದುರಿನ ಹುಲ್ಲುಹಾಸಿನ ಮೇಲೆ ಮಹಿಳೆ-ಪುರುಷ ಒಟ್ಟಾಗಿ ಕುಳಿತುಕೊಳ್ಳುವಂತಿಲ್ಲ; ಫೋಟೋ ತೆಗೆಯುವಂತಿಲ್ಲ - Vistara News

ದೇಶ

ಜಾಮಿಯಾ ಮಸೀದಿ ಎದುರಿನ ಹುಲ್ಲುಹಾಸಿನ ಮೇಲೆ ಮಹಿಳೆ-ಪುರುಷ ಒಟ್ಟಾಗಿ ಕುಳಿತುಕೊಳ್ಳುವಂತಿಲ್ಲ; ಫೋಟೋ ತೆಗೆಯುವಂತಿಲ್ಲ

ಶ್ರೀನಗರ ಜಾಮಿಯಾ ಮಸೀದಿ ಎದುರು ಹುಲ್ಲುಹಾಸು ಇದೆ. ಪ್ರವಾಸಿಗರು ಅಲ್ಲೆಲ್ಲ ಕುಳಿತುಕೊಳ್ಳುವುದು ಸಾಮಾನ್ಯ. ಆದರೆ ಇನ್ನು ಮುಂದೆ ಅಲ್ಲಿ ಪುರುಷ-ಮಹಿಳೆ ಒಟ್ಟಿಗೇ ಕುಳಿತುಕೊಳ್ಳುವಂತಿಲ್ಲ ಎಂದು ಮಸೀದಿ ಆಡಳಿತ ತಿಳಿಸಿದೆ.

VISTARANEWS.COM


on

men and women are not allowed to sit together in lawn of Jamia Masjid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿರುವ ಜಾಮಿಯಾ ಮಸೀದಿ ಸುತ್ತಲಿನ ಹುಲ್ಲುಹಾಸಿನ ಮೇಲೆ ಮಹಿಳೆ ಮತ್ತು ಪುರುಷ ಒಟ್ಟಾಗಿ ಕುಳಿತುಕೊಳ್ಳುವಂತಿಲ್ಲ ಎಂದು ಮಸೀದಿ ಆಡಳಿತ ಅಧಿಸೂಚನೆ ಹೊರಡಿಸಿದೆ. ಅಷ್ಟೇ ಅಲ್ಲ, ಐತಿಹಾಸಿಕ ಜಾಮಿಯಾ ಮಸೀದಿ ಒಳಗೆ ಫೋಟೋ ತೆಗೆಯುವಂತಿಲ್ಲ ಎಂಬ ನಿರ್ಬಂಧವನ್ನೂ ವಿಧಿಸಲಾಗಿದೆ. ‘ಮಸೀದಿಯ ಒಳಗೆ ಛಾಯಚಿತ್ರ/ವಿಡಿಯೊ ಸೆರೆ ಹಿಡಿಯುವಂತೆಯೇ ಇಲ್ಲ. ಮೊಬೈಲ್​ ಫೋಟೋ ಕ್ಲಿಕ್ಕಿಸಲೂ ಅವಕಾಶವಿಲ್ಲ. ಯಾರಾದರೂ ಕ್ಯಾಮರಾ ಸಹಿತ ಬಂದರೆ ಅವರನ್ನು ಗೇಟ್​ ಬಳಿಯೇ ನಿಲ್ಲಿಸಲಾಗುವುದು’ ಎಂದು ಮಸೀದಿ ಹೇಳಿದ್ದು, ‘ಯಾವುದೇ ರೀತಿಯ ವೃತ್ತಿಪರ ಕಾರಣಕ್ಕೆ ಯಾರಿಗಾದರೂ ಫೋಟೋ/ವಿಡಿಯೊ ಅಗತ್ಯವಿದ್ದರೆ ಅಂಥವರು ಮಸೀದಿ ಆಡಳಿತದಿಂದ ಅನುಮತಿ ಪಡೆಯಬೇಕು’ ಎಂದು ಹೇಳಲಾಗಿದೆ.

ಅಷ್ಟೇ ಅಲ್ಲ, ಮಸೀದಿ ಒಳಗೆ ಯಾರೂ ಏನನ್ನೂ ತಿನ್ನಬಾರದು. ಅಲ್ಲಿ ತಿಂಡಿ/ಊಟ ಮಾಡುವುದನ್ನೂ ನಿರ್ಬಂಧಿಸಲಾಗಿದೆ. ಯಾರಾದರೂ ತಿಂಡಿ/ಊಟ ತಂದಿದ್ದು ಕಂಡುಬಂದರೆ ಅವರನ್ನೂ ಗೇಟ್​ ಬಳಿಯೇ ನಿಲ್ಲಿಸಲಾಗುವುದು. ಇದೊಂದು ಪೂಜಾಸ್ಥಳ ಆಗಿದ್ದರಿಂದ ಪಾವಿತ್ರ್ಯತೆ ಕಾಪಾಡುವ ಅಗತ್ಯವಿದೆ. ಇದು ಸಾರ್ವಜನಿಕ ಉದ್ಯಾನವನವೂ ಅಲ್ಲ, ಮನರಂಜನಾ ಸ್ಥಳವೂ ಅಲ್ಲ ಎಂಬುದನ್ನು ಪ್ರವಾಸಿಗರು ಗಮನದಲ್ಲಿ ಇಟ್ಟುಕೊಳ್ಳಬೇಕು. ಹಾಗೇ, ಮಹಿಳೆಯರು ಅವರಿಗಾಗಿ ಮೀಸಲಿಟ್ಟ ಜಾಗದಲ್ಲೇ ಪೂಜೆ ಸಲ್ಲಿಸಬೇಕು ಮತ್ತು ಪುರುಷರು ತಮಗೆ ನಿರ್ದಿಷ್ಟಪಡಿಸಿದ ಸ್ಥಳದಲ್ಲಿ ಪ್ರಾರ್ಥನೆ-ಪೂಜೆ ಸಲ್ಲಿಸಬೇಕು. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮಸೀದಿ ಅಧಿಸೂಚನೆಯಲ್ಲಿ ತಿಳಿಸಿದೆ. ಅಂದಹಾಗೇ, ಜಾಮಿಯಾ ಮಸೀದಿ ಇದೇ ಮೊದಲ ಬಾರಿಗೆ ಇಂಥ ನಿಯಮಗಳನ್ನು ಜಾರಿಗೊಳಿಸಿದೆ.

ಇದನ್ನೂ ಓದಿ:Kashmir Masjid Fire | ಕಾಶ್ಮೀರದಲ್ಲಿ ಜಾಮಿಯಾ ಮಸೀದಿಗೆ ಬೆಂಕಿ, ಬಹುತೇಕ ಭಾಗಕ್ಕೆ ಹಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Post Office GDS Recruitment 2024: ಪೋಸ್ಟ್‌ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ

Post Office GDS Recruitment 2024: ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಭಾರತೀಯ ಅಂಚೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5.

VISTARANEWS.COM


on

Post Office GDS Recruitment 2024
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್‌ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (Post GDS Recruitment 2024). ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇನ್ನು ಎರಡೇ ದಿನ ಬಾಕಿ ಉಳಿದಿದ್ದು ಕೂಡಲೇ ಅಪ್ಲೈ ಮಾಡಿ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಕರ್ನಾಟಕದಲ್ಲಿಯೂ ಇದೆ ಹುದ್ದೆ

ಕರ್ನಾಟಕದಲ್ಲಿ 1,940 ಹುದ್ದೆಗಳಿವೆ. ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/Reg_validation.aspx)
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನಮೂದಿಸಿ.
  • ರಚಿಸಲಾದ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಅಪ್ಲಿಕೇಷನ್‌ ಫಾರಂನಲ್ಲಿ ಕಂಡುಬರುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ನಿಮ್ಮ ಇತ್ತೀಚಿನ ಫೋಟೊ ಮತ್ತು ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indiapostgdsonline.gov.in/ಕ್ಕೆ ಭೇಟಿ ನೀಡಿ.

ಇದನ್ನೂ ಓದಿ: RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

Continue Reading

ದೇಶ

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! Video ಇದೆ

Ayodhya Rape Case: ಆಗಸ್ಟ್‌ 2ರಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಭದರ್ಸಾದಲ್ಲಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಜಿಲ್ಲಾಧಿಕಾರಿ ಚಂದ್ರ ವಿಜಯ್‌ ಸಿಂಗ್‌ ಹಾಗೂ ಎಸ್‌ಪಿ ರಾಜಕಿರಣ್ ನಾಯರ್‌ ನೇತೃತ್ವದಲ್ಲಿ ಧ್ವಂಸಗೊಳಿಸಲಾಗಿದೆ.

VISTARANEWS.COM


on

Ayodhya Rape Case
Koo

ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರವು ‘ಬುಲ್ಡೋಜರ್‌ ನ್ಯಾಯ’ (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್‌ಕೌಂಟರ್‌ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ.

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದ್ದು, ಮೊಯೀದ್‌ ಖಾನ್‌ ಪ್ರಮುಖ ಆರೋಪಿಯಾಗಿದ್ದಾನೆ. ಭದರ್ಸಾದಲ್ಲಿರುವ ಬೇಕರಿಯ ಮಾಲೀಕ ಮೊಯೀದ್‌ ಖಾನ್‌ ಆಗಿದ್ದು, ಬೇಕರಿಯಲ್ಲಿಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ತಿಳಿದುಬಂದಿದೆ. ಫುಡ್‌ ಸೇಫ್ಟಿ ಡೆಪ್ಯೂಟಿ ಕಮಿಷನರ್‌ ಅವರು ಈಗಾಗಲೇ ಬೇಕರಿಯಲ್ಲಿರುವ ತಿನಿಸುಗಳ ತಪಾಸಣೆಗೆ ಆದೇಶ ಹೊರಡಿಸಿದ್ದಾರೆ. ಇದರ ಬೆನ್ನಲ್ಲೇ, ಮೊಯೀದ್‌ ಖಾನ್‌ ಬೇಕರಿಯನ್ನು ಬುಲ್ಡೋಜರ್‌ ಮೂಲಕ ಧ್ವಂಸಗೊಳಿಸಲಾಗಿದೆ.

ಆಗಸ್ಟ್‌ 2ರಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಭದರ್ಸಾದಲ್ಲಿರುವ ಮೊಯೀದ್‌ ಖಾನ್‌ ಬೇಕರಿಯನ್ನು ಜಿಲ್ಲಾಧಿಕಾರಿ ಚಂದ್ರ ವಿಜಯ್‌ ಸಿಂಗ್‌ ಹಾಗೂ ಎಸ್‌ಪಿ ರಾಜಕಿರಣ್ ನಾಯರ್‌ ನೇತೃತ್ವದಲ್ಲಿ ಧ್ವಂಸಗೊಳಿಸಲಾಗಿದೆ. “ಬೇಕರಿಯನ್ನು ಜಪ್ತಿ ಮಾಡಲಾಗಿದೆ. ತಪಾಸಣೆ ನಡೆಸಿದಾಗ ಬೇಕರಿಯಲ್ಲಿ ಅಕ್ರಮ ವಸ್ತುಗಳು ಪತ್ತೆಯಾಗಿವೆ. ಇದಾದ ಬಳಿಕ ಬೇಕರಿಯನ್ನು ನೆಲಸಮಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ” ಎಂಬುದಾಗಿ ಚಂದ್ರ ವಿಜಯ್‌ ಸಿಂಗ್‌ ಮಾಹಿತಿ ನೀಡಿದ್ದಾರೆ.

ಮೂರು ದಿನಗಳ ಹಿಂದಷ್ಟೇ ನಡುರಸ್ತೆಯಲ್ಲಿ ಯುಕವರ ಗುಂಪೊಂದು ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌ ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿದ್ದರು. ಲಖನೌದಲ್ಲಿ ನಡೆದ ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ, ಇನ್ನು ಮುಂದೆ ʼಬುಲೆಟ್‌ ರೈಲುʼ ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದರು. ಆ ಮೂಲಕ ಅಪರಾಧಿಗಳಿಗೆ ಅವರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

Continue Reading

ದೇಶ

Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Wayanad Landslide: ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ 340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ. ಈ ಮಧ್ಯೆ ದಟ್ಟ ಅರಣ್ಯದೊಳಗೆ ಆಹಾರವಿಲ್ಲದೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದ ಬುಡಕಟ್ಟು ಕುಟುಂಬವೊಂದನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾಪಾಡಿದೆ. ಮಗುವನ್ನು ಅಧಿಕಾರಿಗಳು ಎತ್ತಿಕೊಂಡು ಬರುತ್ತಿರುವ ಫೊಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ (Wayanad Landslide) 340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ (Wayanad Landslide). ನಾಪತ್ತೆಯಾದವರ ರಕ್ಷಣೆಗಾಗಿ ಸೇನೆ, ಅರಣ್ಯ ಇಲಾಖೆ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಪಡೆ, ಸ್ಥಳೀಯರು, ವಿವಿಧ ಸಂಘ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತದೆ. ಈ ಮಧ್ಯೆ ದಟ್ಟ ಅರಣ್ಯದೊಳಗೆ ಆಹಾರವಿಲ್ಲದೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದ ಬುಡಕಟ್ಟು ಕುಟುಂಬವೊಂದನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾಪಾಡಿದೆ. ಮಗುವನ್ನು ಅಧಿಕಾರಿಗಳು ಎತ್ತಿಕೊಂಡು ಬರುತ್ತಿರುವ ಫೊಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral News).

ಮೆಪ್ಪಾಡಿಯ ಸೂಜಿಪ್ಪಾರ ಜಲಪಾತವಿರುವ ಎರಾಕುಂಡ್‌ ಅರಣ್ಯ ಪ್ರದೇಶದಲ್ಲಿದ್ದ ಕೃಷ್ಣನ್‌, ಅವರ ಪತ್ನಿ ಶಾಂತಾ ಮತ್ತು ನಾಲ್ಕು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ನಾಲ್ವರು ಅರಣ್ಯಾಧಿಗಳ ಗುಂಪು ಸತತ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. 10 ಹಗ್ಗಗಳನ್ನು ಸೇರಿಸಿ ಕಟ್ಟಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಲ್ಪೆಟ್ಟ ರೇಂಜ್‌ ಫಾರೆಸ್ಟ್‌ ಆಫೀಸರ್‌ ಕೆ.ಆಶೀಫ್‌, ಮುಂಡಕೈ ಸೆಕ್ಷನ್‌ ಫಾರೆಸ್ಟ್‌ ಆಫೀಸರ್‌ ಜಯಚಂದ್ರನ್‌, ಕಲ್ಪೆಟ್ಟ ರೇಂಜ್‌ ಬೀಟ್‌ ಫಾರೆಸ್ಟ್‌ ಆಫೀಸರ್‌ ಕೆ.ಅನಿಲ್‌ ಕುಮಾರ್‌ ಮತ್ತು ಕಲ್ಪೆಟ್ಟ ಆರ್‌.ಆರ್‌.ಡಿ. ಅನೂಪ್‌ ತೋಮಸ್‌ ಅವರನ್ನೊಳಗೊಂಡ ಗುಂಪು ಅತ್ಯಂತ ಸಾಹಸಿಕವಾಗಿ ಈ ಆದಿವಾಸಿ ಕುಟುಂಬನ್ನು ಕಾಪಾಡಿದೆ.

ಕಾಡಿನಲ್ಲಿ ಗುಡಿಸಲೊಂದರಲ್ಲಿ ಜೀವಿಸುತ್ತಿದ್ದ ಈ ಕುಟುಂಬ ಆಹಾರವಿಲ್ಲದೆ ಕಾಡಿನಲ್ಲಿ ಅಲೆದಾಡುತ್ತಿದ್ದಾಗ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಬಳಿಕ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ಯಲು ಮುಂದಾಗಿದ್ದಾರೆ. ಮೊದ ಮೊದಲು ಅವರು ಬರಲು ನಿರಾಕರಿಸಿದರು. ಬಳಿಕ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸಿದ ಬಳಿಕ ನಮ್ಮೊಂದಿಗೆ ಬರಲು ಒಪ್ಪಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪೈಕಿ ಚಿಕ್ಕ ಚಿಕ್ಕ ಮಕ್ಕಳಿಗೆ ಬಟ್ಟೆ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರು. ನಮ್ಮ ಬಟ್ಟೆಯನ್ನು ಅವರಿಗೆ ತೊಡಿಸಿ ಎದೆಗವುಚಿಕೊಂಡು ಅವರನ್ನು ಹೊರ ಕರೆ ತಂದೆವು ಎಂದು ಅವರು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ರಾತ್ರಿ ಇಡಿ ಕಾವಲು ನಿಂರ ಕಾಡಾನೆ

ಇನ್ನು ದುರಂತದಿಂದ ಪಾರಾಗಿ ಸದ್ಯ ಮೇಪ್ಪಾಡಿ ಜಿಎಚ್‌ಎಸ್‌ಎಸ್‌ನಲ್ಲಿರುವ ಚುರಲ್​​ಮಲದ ಸುಜಾತಾ ಅವರದ್ದು ಇನ್ನೊಂದು ರೋಚಕ ಅನುಭವ. ಮಂಗಳವಾರ ದುರಂತದಿಂದ ಪಾರಾಗಿ ಓಡಿ ಬಂದಿದ್ದ ತಮಗೆ ಕಾಡಾನೆಯೊಂದು ಕಾವಲಾಗಿ ನಿಂತಿರುವ ಅಪರೂಪದ ಕ್ಷಣವನ್ನು ಅವರು ಹಂಚಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಭೂಕುಸಿತದಿಂದ ಸುಜಾತಾ ಅವರ ಮನೆ ನೆಲಸಮವಾಗಿತ್ತು. ಈ ವೇಳೆ ಅವರು ಮತ್ತು ಕುಟುಂಬದ ನಾಲ್ವರು ಸಿಕ್ಕಿ ಬಿದ್ದಿದ್ದರು. ಕೂಡಲೇ ಅವರ ಮಗ ಗಿಗೀಶ್ ಪ್ರತಿಯೊಬ್ಬರನ್ನೂ ಹೊರಗೆ ಕರೆ ತಂದಿದ್ದರು.

ಸುತ್ತಲೂ ನೀರು ಆವರಸಿತ್ತು. ಹೇಗೋ ಈಜುತ್ತಾ ಬೆಟ್ಟದ ಬಳಿ ಬಂದಿದ್ದರು. ಎಲ್ಲರ ಕೈಕಾಲುಗಳಿಗೆ ಗಾಯವಾಗಿತ್ತು. ಅಲ್ಲಿಗೆ ಬಂದಾಗ ದೊಡ್ಡ ಕಾಡಾನೆಯೊಂದು ಎದುರಾಗಿತ್ತು. ʼʼನಾವು ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೀವಿ. ನೀನು ನಮಗೇನೂ ಮಾಡಬೇಡಪ್ಪ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆಣೆಗೂ ಕರಣೆ ಉಕ್ಕಿತ್ತು. ಬಳಿಕ ಬೆಳಗಾಗುವವರೆಗೆ ನಾವು ಆನೆಯ ಕಾಲ ಹತ್ತಿರವೇ ಸಮಯ ಕಳೆದೆವು. ಬೆಳಗ್ಗೆ ಎಲ್ಲಿಂದಲೂ ಬಂದವರು ನಮ್ಮನ್ನು ಕರೆದುಕೊಂಡು ಈ ಕಾಳಜಿ ಕೇಂದ್ರಕ್ಕೆ ತಲುಪಿಸಿದರುʼʼ ಎಂದು ಸುಜಾತಾ ವಿವರಿಸಿದ್ದಾರೆ.

ಇದನ್ನೂ ಓದಿ: Wayanad Landslide: ಭೂಕುಸಿತದ ಹಾಟ್‌ಸ್ಪಾಟ್‌ಗಳಲ್ಲಿ ಕಾಮಗಾರಿಗೆ ಅನುಮತಿ ನೀಡಿದ್ದೇಕೆ? ಹಸಿರು ನ್ಯಾಯ ಮಂಡಳಿ ಪ್ರಶ್ನೆ

Continue Reading

ದೇಶ

DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

DMK leader Controversy:ಭಗವಾನ್ ರಾಮನು 3,000 ವರ್ಷಗಳ ಹಿಂದೆ ಬದುಕಿದ್ದನೆಂದು ಅವರು ಹೇಳಿಕೊಳ್ಳುತ್ತಾರೆ ಮತ್ತು ಅವನನ್ನು ಅವತಾರ ಪುರುಷ ಎಂದು ಕರೆಯುತ್ತಾರೆ. ಅವತಾರ ಪುರುಷನಾದವನಿಗೆ ಹುಟ್ಟು ಸಾವಿಲ್ಲ. ರಾಮನ ಅವತಾರ ಆಗಿದ್ದರೆ ಅವನು ಹುಟ್ಟುತ್ತಿರಲಿಲ್ಲ. ಅವನು ಹುಟ್ಟಿದ್ದರೆ ಅವನು ದೇವರಾಗಲು ಸಾಧ್ಯವಿಲ್ಲ ಎಂದು ಎಸ್‌ಎಸ್‌ ಶಿವಶಂಕರ್‌ ವಿವಾದ ಸೃಷ್ಟಿಸಿದ್ದಾರೆ.

VISTARANEWS.COM


on

DMK Leader Controversy
Koo

ಚೆನ್ನೈ: ಅದೆಷ್ಟೋ ಸಹಸ್ರಾರು ಸಂಖ್ಯೆ ಭಕ್ತರು ಪೂಜಿಸುವ ಆರಾಧಿಸುವ ಭಗವಾನ್‌ ಶ್ರೀರಾಮ(Lord Ram) ಅಸ್ತಿತ್ವದ ಬಗ್ಗೆ ಆಗಾಗ ಪ್ರಶ್ನೆಗಳು ಭುಗಿಲೇಳುತ್ತಲೇ ಇರುತ್ತವೆ. ಅದರಲ್ಲೂ ಪ್ರತಿಪಕ್ಷ ನಾಯಕರು ರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸಿರುವ ಘಟನೆ ಆಗಾಗ ವರದಿಯಾಗುತ್ತಲೇ ಇರುತ್ತದೆ. ಇದೀಗ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ತಮಿಳುನಾಡಿನ ಡಿಎಂಕೆ ನಾಯಕ(DMK leader Controversy) ಎಸ್‌.ಎಸ್‌. ಶಿವಶಂಕರ್‌(SS Sivasankar) ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವಿಡಿಯೋದಲ್ಲಿ ಏನಿದೆ?

ಅರಿಯಾಲೂರ್‌ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಪ್ರದೇಶದಲ್ಲಿ ನಡೆದ ರಾಜೇಂದ್ರ ಚೋಳನ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿವಶಂಕರ್‌, ರಾಜೇಂದ್ರ ಚೋಳನ ಪರಂಪರೆಯನ್ನು ಆಚರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿತ್ತು. ಕೆಲವರು ಅಪ್ರಸ್ತುತ ವ್ಯಕ್ತಿಗಳ ಪೂಜೆಗೆ ಜನರನ್ನು ಒತ್ತಾಯಿಸಿದರು. ನಾವು ಚೋಳ ರಾಜವಂಶದ ಚಕ್ರವರ್ತಿ ರಾಜೇಂದ್ರ ಚೋಳನ ಜನ್ಮದಿನವನ್ನು ಆಚರಿಸುತ್ತೇವೆ, ಏಕೆಂದರೆ ನಮ್ಮಲ್ಲಿ ಶಾಸನಗಳು, ಅವನು ನಿರ್ಮಿಸಿದ ದೇವಾಲಯಗಳು ಮತ್ತು ಅವನು ರಚಿಸಿದ ಸರೋವರದಂತಹ ಪುರಾತತ್ತ್ವ ಶಾಸ್ತ್ರದ ಪುರಾವೆಗಳಿವೆ. ಆದರೆ, ರಾಮನ ಇತಿಹಾಸವನ್ನು ಪತ್ತೆಹಚ್ಚಲು ಯಾವುದೇ ಪುರಾವೆಗಳಿಲ್ಲ ಎಂದು ಶಿವಶಂಕರ್ ಹೇಳಿದ್ದಾರೆ.

“ಭಗವಾನ್ ರಾಮನು 3,000 ವರ್ಷಗಳ ಹಿಂದೆ ಬದುಕಿದ್ದನೆಂದು ಅವರು ಹೇಳಿಕೊಳ್ಳುತ್ತಾರೆ ಮತ್ತು ಅವನನ್ನು ಅವತಾರ ಪುರುಷ ಎಂದು ಕರೆಯುತ್ತಾರೆ. ಅವತಾರ ಪುರುಷನಾದವನಿಗೆ ಹುಟ್ಟು ಸಾವಿಲ್ಲ. ರಾಮನ ಅವತಾರ ಆಗಿದ್ದರೆ ಅವನು ಹುಟ್ಟುತ್ತಿರಲಿಲ್ಲ. ಅವನು ಹುಟ್ಟಿದ್ದರೆ ಅವನು ದೇವರಾಗಲು ಸಾಧ್ಯವಿಲ್ಲ. ನಮ್ಮನ್ನು ಕುಶಲತೆಯಿಂದ, ನಮ್ಮ ಇತಿಹಾಸವನ್ನು ಮರೆಮಾಚಲು ಮತ್ತು ಇನ್ನೊಂದು ಇತಿಹಾಸವನ್ನು ದೊಡ್ಡದಾಗಿ ತೋರಿಸಲು ಇದನ್ನು ಮಾಡಲಾಗುತ್ತಿದೆ. ರಾಮಾಯಣ ಮತ್ತು ಮಹಾಭಾರತದಿಂದ ಕಲಿಯುವಂತಹ ಯಾವುದೇ ಜೀವನ ಪಾಠ ಇಲ್ಲ ಎಂದು ಸಚಿವರು ಟೀಕಿಸಿದ್ದಾರೆ.

ಇನ್ನು ಡಿಎಂಕೆ ಸಚಿವ ವಿವಾದಾತ್ಮಕ ಹೇಳಿಕೆ ಬಿಜೆಪಿ ಭಾರೀ ಕಿಡಿಕಾರಿದೆ. ಈ ಬಗ್ಗೆ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಈ ಬಗ್ಗೆ ಕಿಡಿಕಾರಿದ್ದು, ಡಿಎಂಕೆ ಶ್ರೀರಾಮನ ಬಗ್ಗೆ ಏಕೆ ಇಷ್ಟು ಕೋಪ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Continue Reading
Advertisement
Wild Animals
ದಾವಣಗೆರೆ5 seconds ago

Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

Friendship Band Trend
ಫ್ಯಾಷನ್1 min ago

Friendship Band Trend: ಹೊಸ ಜನರೇಷನ್‌‌ಗೆ ಪ್ರಿಯವಾದ 4 ವಿನ್ಯಾಸದ ಫ್ರೆಂಡ್‌ ಶಿಪ್‌ ಬ್ಯಾಂಡ್‌‌ಗಳಿವು

ಕ್ರೀಡೆ4 mins ago

Paris Olympics: 40 ಎ.ಸಿ. ಕಳುಹಿಸಿದ ಕ್ರೀಡಾ ಸಚಿವಾಲಯಕ್ಕೆ ಧನ್ಯವಾದ ತಿಳಿಸಿದ ಅಥ್ಲೀಟ್​ಗಳು

Post Office GDS Recruitment 2024
ಉದ್ಯೋಗ5 mins ago

Post Office GDS Recruitment 2024: ಪೋಸ್ಟ್‌ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ

Anchor Shalini reveals her paycheck per day for paapa pandu tv serial
ಕಿರುತೆರೆ19 mins ago

Anchor Shalini: ಅವತ್ತಿನ ಕಾಲಕ್ಕೆ ‘ಪಾಪ ಪಾಂಡು’ ಖ್ಯಾತಿಯ ಶಾಲಿನಿ ಪಡೆಯುತ್ತಿದ್ದ ಸಂಭಾವನೆ ಏಷ್ಟು?

Ayodhya Rape Case
ದೇಶ21 mins ago

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! Video ಇದೆ

poison food bellary news
ಬಳ್ಳಾರಿ40 mins ago

Poison Food: ವಿಷಕಾರಿ ಬೀಜ ತಿಂದು 8 ಮಕ್ಕಳು ಅಸ್ವಸ್ಥ

Wayanad Landslide
ದೇಶ42 mins ago

Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Paris Olympics
ಕ್ರೀಡೆ56 mins ago

Paris Olympics Archery: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ದೀಪಿಕಾ; ಭಜನ್ ಕೌರ್​ಗೆ ಸೋಲು

Viral Video
Latest1 hour ago

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ3 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌