physical abuse : ರಾಜಸ್ಥಾನದಲ್ಲಿ ಬಾಲಕಿ ಮೇಲೆ ಸಹೋದರನಿಂದಲೇ ಅತ್ಯಾಚಾರ - Vistara News

ದೇಶ

physical abuse : ರಾಜಸ್ಥಾನದಲ್ಲಿ ಬಾಲಕಿ ಮೇಲೆ ಸಹೋದರನಿಂದಲೇ ಅತ್ಯಾಚಾರ

ವಿಷಯವನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದ ಹೊರತಾಗಿಯೂ ಆಕೆ ಪೊಲೀಸ್ ದೂರು ನೀಡದಂತೆ ತಡೆದಿದ್ದಳು ಎಂದು ಬಾಲಕಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.

VISTARANEWS.COM


on

physical abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜಸ್ಥಾನದ ಪಾಲಿಯಲ್ಲಿ ಸಹೋದರಿ ಮೇಲೆಯೇ ಸತತ ಮೂರು ವರ್ಷ ಅತ್ಯಾಚಾರ (physical abuse) ಮಾಡಿದ ಘಟನೆ ನಡೆದಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಪಾಲಿ ಜಿಲ್ಲೆಯ ಬಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿ ಈ ಘಟನೆಯನ್ನು ತನ್ನ ತಾಯಿಯೊಂದಿಗೆ ಹಂಚಿಕೊಂಡಿದ್ದಳು. ಆದರೆ ಆಕೆ ವಿಷಯವನ್ನು ನಿರ್ಲಕ್ಷಿಸಿದ್ದಳು. ಇದೀಗ ಬಾಲಕಿ ಪಾಲಿಯ ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್ಪಿ) ಸಂಪರ್ಕಿಸಿ ವಿಷಯ ತಿಳಿಸಿದ ಬಳಿಕ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆಯ 5/6 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆಗಸ್ಟ್ 10 ರಂದು ಆರೋಪಿಯನ್ನು ಬಂಧಿಸಿ ಪೋಕ್ಸೊ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

18 ವರ್ಷದ ಯುವತಿ ಆಗಸ್ಟ್ ಮೊದಲ ವಾರದಲ್ಲಿ ಎಸ್ಪಿಯನ್ನು ಸಂಪರ್ಕಿಸಿದ್ದಾಳೆ ಎಂದು ಬಾಲಿಯ ಸ್ಟೇಷನ್ ಹೌಸ್ ಅಧಿಕಾರಿ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. 2020ರಲ್ಲಿ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ, ತನ್ನ ಸಹೋದರ ತನ್ನ ಮೇಲೆ ಅತ್ಯಾಚಾರ ಎಸಗಿದ್ದ. ಘಟನೆಯನ್ನು ಯಾರೊಂದಿಗಾದರೂ ಹಂಚಿಕೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಆಕೆ ಆರೋಪಿಸಿದ್ದಾಳೆ. ವಿಷಯವನ್ನು ತನ್ನ ತಾಯಿಯೊಂದಿಗೆ ತಿಳಿಸಿದ್ದರೂ ಸಾಮಾಜಿಕ ಅಪಮಾನಕ್ಕೆ ಹೆದರಿ ಯಾವುದೇ ಕ್ರಮ ತೆಗೆದುಕೊಳ್ಳುವ ಬದಲು ಸುಮ್ಮನಿರಿಸಿದ್ದರು. ಇದರ ಲಾಭ ಪಡೆದ ಸಹೋದರ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ. ಪೊಲೀಸರ ಪ್ರಕಾರ, ಬಾಲಕಿಗೆ ಇಬ್ಬರು ಸಹೋದರಿಯರು ಮತ್ತು ಒಬ್ಬ ಸಹೋದರ ಇದ್ದಾರೆ. ಅವರ ಇಬ್ಬರು ಹಿರಿಯ ಸಹೋದರಿಯರು 2019 ರಲ್ಲಿ ವಿವಾಹವಾಗಿದ್ದರು.

ಇದನ್ನೂ ಓದಿ : Murder Attempt : JDS ಮುಖಂಡನ ಕೊಲೆಗೆ ಪ್ರಾಣ ಸ್ನೇಹಿತನಿಂದಲೇ ಸುಪಾರಿ! ಬೆಂಗಳೂರಿಂದ ಬಂದಿದ್ದರು KILLERS

ಅತ್ಯಾಚಾರ ಘಟನೆ ನಡೆದಾಗ ಬಾಲಕಿ ಅಪ್ರಾಪ್ತ ವಯಸ್ಕಳಾಗಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ. ಆಗಸ್ಟ್ 7 ರಂದು ಪಾಲಿ ಜಿಲ್ಲೆಯಿಂದ ಮತ್ತೊಂದು ಪ್ರಕರಣ ವರದಿಯಾಗಿದ್ದು, ಅಲ್ಲಿ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಶನಿವಾರ ಪಾಲಿಯ ಆಸ್ಪತ್ರೆಗೆ ಕರೆತಂದ ನಂತರ ಮತ್ತು ಆಕೆಯ ಸೋನೋಗ್ರಫಿ ವರದಿಯು ಅವಳು ಗರ್ಭಿಣಿ ಎಂದು ದೃಢಪಡಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ.

VISTARANEWS.COM


on

Lok Sabha Election Result
Koo

ನವದೆಹಲಿ: ಕಳೆದ ಕೆಲ ತಿಂಗಳಿಂದ ದೇಶಾದ್ಯಂತ ತೀವ್ರ ಚರ್ಚೆ, ಕುತೂಹಲ, ರಾಜಕಾರಣಿಗಳ ಅಬ್ಬರದ ಪ್ರಚಾರ, ವಾದ, ವಾಗ್ವಾದ, ವಿವಾದಗಳಿಗೆ ಕಾರಣವಾಗಿದ್ದ ಲೋಕಸಭೆ ಚುನಾವಣೆಯು (Lok Sabha Election 2024) ನಿರ್ಣಾಯಕ ಘಟ್ಟಕ್ಕೆ ತಲುಪಿದೆ. ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ (Lok Sabha Election Result 2024) ಪ್ರಕಟವಾಗಲಿದ್ದು, ದೇಶದ ಭವಿಷ್ಯಕ್ಕೆ ಇದು ದಿಕ್ಸೂಚಿ ಎನಿಸಲಿದೆ. ಸಹಜವಾಗಿಯೇ ರಾಜಕಾರಣಿಗಳು, ಅಭ್ಯರ್ಥಿಗಳ ಜತೆಗೆ ದೇಶದ ನಾಗರಿಕರ ಕುತೂಹಲವೂ ಜಾಸ್ತಿಯಾಗಿದೆ.

ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹ್ಯಾಟ್ರಿಕ್‌ ಬಾರಿಸುವ ಉತ್ಸಾಹದಲ್ಲಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವೇ ಗೆಲುವು ಸಾಧಿಸಲಿದೆ ಎಂಬುದಾಗಿ ಬಹುತೇಕ ಮತಗಟ್ಟೆ ಸಮೀಕ್ಷೆಗಳು ತಿಳಿಸಿವೆ.

ಬಿಜೆಪಿಗೆ ಒಲಿಯುವುದೇ ಗೆಲುವು?

ನರೇಂದ್ರ ಮೋದಿ ಅವರ ಅಲೆ, ಕಳೆದ 10 ವರ್ಷಗಳ ಅಭಿವೃದ್ಧಿ ಕೆಲಸಗಳು, ರಾಮಮಂದಿರ, 370ನೇ ವಿಧಿ ರದ್ದು ಸೇರಿ ಹಲವು ಪ್ರಮುಖ ತೀರ್ಮಾನಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಚುನಾವಣೆ ಎದುರಿಸಿದೆ. ಅದರಲ್ಲೂ, ಮೋದಿ ಅವರು 200ಕ್ಕೂ ಅಧಿಕ ಸಮಾವೇಶಗಳ ಮೂಲಕ ದೇಶದ ಮೂಲೆ ಮೂಲೆಯಲ್ಲಿ ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರು ಕೂಡ ಇದಕ್ಕೆ ಶ್ರಮಿಸಿದ್ದಾರೆ. ಹಾಗಾಗಿ, ಬಿಜೆಪಿಯು ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯು ಕನಸು ಕಾಣುತ್ತಿದೆ.

ಕುತೂಹಲ ಘಟ್ಟದಲ್ಲಿ ಇಂಡಿಯಾ ಒಕ್ಕೂಟ

ಬಿಜೆಪಿಯನ್ನು ಶತಾಯ ಗತಾಯ ಸೋಲಿಸಬೇಕು ಎಂಬ ಕಾರಣಕ್ಕಾಗಿಯೇ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಇಂಡಿಯಾ ಒಕ್ಕೂಟವನ್ನು ರಚಿಸಿ, ಪ್ರತಿಪಕ್ಷಗಳು ಒಗ್ಗೂಡಿ ಚುನಾವಣೆ ಎದುರಿಸಿವೆ. ಮತಗಟ್ಟೆ ಸಮೀಕ್ಷೆಗಳ ವರದಿಗಳ ಆಚೆಯೂ ಅಚ್ಚರಿಯ ಫಲಿತಾಂಶವನ್ನು ಇಂಡಿಯಾ ಒಕ್ಕೂಟದ ಪಕ್ಷಗಳು ನಿರೀಕ್ಷಿಸುತ್ತಿವೆ. ಹಾಗೊಂದು ವೇಳೆ, ಮತಗಟ್ಟೆ ಸಮೀಕ್ಷೆಗಳು ಉಲ್ಟಾ ಹೊಡೆದರೆ, ಇಂಡಿಯಾ ಮೈತ್ರಿಕೂಟವು ಮುನ್ನಡೆ ಸಾಧಿಸಲಿದೆ.

ಸಮೀಕ್ಷೆಗಳು ಹೇಳಿರುವುದೇನು?

ಎಲ್ಲ ಸಮೀಕ್ಷಾ ವರದಿಗಳನ್ನು ವಿಶ್ಲೇಷಿಸಿದಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 543 ಕ್ಷೇತ್ರಗಳ ಪೈಕಿ 355-380 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ 2019ರ ಲೋಕಸಭೆ ಚುನಾವಣೆ ಫಲಿತಾಂಶವೇ ಮರುಕಳಿಸಲಿದೆ ಎಂದು ಹೇಳಲಾಗುತ್ತಿದೆ. 2019ರಲ್ಲಿ ಎನ್‌ಡಿಎ ಮೈತ್ರಿಕೂಟವು 353 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿಯೊಂದೇ 303 ಕ್ಷೇತ್ರಗಳಲ್ಲಿ ಜಯ ಕಂಡಿತ್ತು.

Kharage or Rahul may be pm candidate for India bloc Sasy Shashi Shashi Tharoor

200 ಸಮೀಪವೂ ಬಾರದ ಇಂಡಿಯಾ ಒಕ್ಕೂಟ

ಕಾಂಗ್ರೆಸ್‌ ಸೇರಿ ಹಲವು ಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟವು ಪ್ರಸಕ್ತ ಸಾರ್ವತ್ರಿಕ ಚುನಾವಣೆಯಲ್ಲಿ 125-165 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬುದು ಮತಗಟ್ಟೆ ಸಮೀಕ್ಷೆಗಳ ಒಟ್ಟು ಸಾರವಾಗಿದೆ. ಇದರೊಂದಿಗೆ ಇಂಡಿಯಾ ಒಕ್ಕೂಟವು ಮ್ಯಾಜಿಕ್‌ ನಂಬರ್‌ (272) ಬಿಡಿ, 200 ಕ್ಷೇತ್ರಗಳನ್ನೂ ತಲುಪುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಇದರೊಂದಿಗೆ ಕಾಂಗ್ರೆಸ್‌ ಸೇರಿ ಪ್ರತಿಪಕ್ಷಗಳಿಗೆ ಸತತ ಮೂರನೇ ಬಾರಿಯೂ ಹಿನ್ನಡೆಯಾಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಲಾಭ

ದಕ್ಷಿಣ ಭಾರತದಲ್ಲಿ, ಅದರಲ್ಲೂ ಕೇರಳ ಹಾಗೂ ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಬಹುತೇಕ ಸಮೀಕ್ಷೆಗಳು ತಮಿಳುನಾಡಿನಲ್ಲಿ ಬಿಜೆಪಿ 1-3 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಅಂದಾಜಿಸಿವೆ. ಕಾಂಗ್ರೆಸ್ 8-11, ಬಿಜೆಪಿ 36-39 ಮತ್ತು ಇತರರು 0-2 ಸ್ಥಾನಗಳನ್ನು ಪಡೆಯಲಿವೆ. ಬಹು ಕಟ್ಟರ್ ಪ್ರಾಂತೀಯವಾದಿ ಮತದಾರರು ಇರುವ ತಮಿಳುನಾಡಿನಲ್ಲಿ ಖಾತೆ ತೆರೆಯುವುದು ಬಿಜೆಪಿಗೆ ಸುಲಭ ಮಾತಲ್ಲ. ಹೀಗಾಗಿ ಈ ಸಲ ಗೆದ್ದರೆ ಅದೊಂದು ಐತಿಹಾಸಿಕ ಸಾಧನೆಯಾಗಲಿದೆ.

ಎನ್​ಡಿಎ ಕೇರಳದಲ್ಲಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆಯಲು ಸಜ್ಜಾಗಿದೆ ಎಂಬುದಾಗಿ ಸಮೀಕ್ಷೆಗಳು ಅಂದಾಜಿಸಿವೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದ್ದು, 2019ರಲ್ಲಿ ಶೇ.77.84ರಷ್ಟಿದ್ದ ಮತದಾನ ಪ್ರಮಾಣ ಈ ಬಾರಿ ಶೇ.70.35ಕ್ಕೆ ಕುಸಿದಿತ್ತು.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Continue Reading

Lok Sabha Election 2024

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

Mallikarjun Kharge: ಜೂನ್‌ 4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ದೇಶದ ಅಧಿಕಾರಿಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪತ್ರ ಬರೆದು, ಭಯವಿಲ್ಲದೆ ರಾಷ್ಟ್ರದ ಸೇವೆ ಮಾಡುವಂತೆ ಕರೆ ನೀಡಿದ್ದಾರೆ. ಮತ ಎಣಿಕೆಗೆ ಮುಂಚಿತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಅಧಿಕಾರಿಗಳನ್ನು ಕರೆದು ಬೆದರಿಕೆ ಹಾಕಲು ಪ್ರಯತ್ನಿಸಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ಅವರು ಈ ರೀತಿಯ ಮನವಿ ಮಾಡಿದ್ದಾರೆ.

VISTARANEWS.COM


on

Mallikarjun Kharge
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಜೂನ್‌ 4ರಂದು ಬೆಳಿಗ್ಗೆ ಮತ ಎಣಿಕೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ದೇಶದ ಅಧಿಕಾರಿಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪತ್ರ ಬರೆದು, ಭಯವಿಲ್ಲದೆ ರಾಷ್ಟ್ರದ ಸೇವೆ ಮಾಡುವಂತೆ ಕರೆ ನೀಡಿದ್ದಾರೆ. ಮತ ಎಣಿಕೆಗೆ ಮುಂಚಿತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಅಧಿಕಾರಿಗಳನ್ನು ಕರೆದು ಬೆದರಿಕೆ ಹಾಕಲು ಪ್ರಯತ್ನಿಸಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ಅವರು ಈ ರೀತಿಯ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡೊರುವ ಖರ್ಗೆ, ʼʼಯಾರಿಗೂ ಹೆದರಬೇಡಿ. ಯಾವುದೇ ಅಸಂವಿಧಾನಿಕ ವಿಧಾನಗಳಿಗೆ ತಲೆಬಾಗಬೇಡಿ. ಅರ್ಹತೆಯ ಆಧಾರದ ಮೇಲೆ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಿ” ಎಂದು ಹೇಳಿದ್ದಾರೆ. “ಪ್ರತಿಯೊಬ್ಬ ನಾಗರಿಕ ಸೇವಕನು ‘ನಿಷ್ಠೆಯಿಂದ ಮತ್ತು ಆತ್ಮಸಾಕ್ಷಿಯಿಂದ ಕರ್ತವ್ಯಗಳನ್ನು ನಿರ್ವಹಿಸುತ್ತೇನೆ ಮತ್ತು ಸಂವಿಧಾನ ಮತ್ತು ಕಾನೂನಿಗೆ ಅನುಗುಣವಾಗಿ, ಭಯ ಅಥವಾ ಒಲವು, ಪ್ರೀತಿ ಅಥವಾ ದುರುದ್ದೇಶವಿಲ್ಲದೆ ಎಲ್ಲ ರೀತಿಯ ಜನರನ್ನು ಸಮಾನ ದೃಷ್ಟಿಯಿಂದ ನೋಡಿ ಕಾರ್ಯ ನಿರ್ವಹಿಸುತ್ತೇನೆʼ ಎಂದು ಪ್ರಮಾಣ ವಚನ ಸ್ವೀಕರಿಸುತ್ತಾನೆ” ಎಂದು ಅವರು ನೆನಪಿಸಿಕೊಂಡಿದ್ದಾರೆ.

ಮುಂದುವರೆದು, “ಪ್ರತಿಯೊಬ್ಬ ಅಧಿಕಾರಿ ಮತ್ತು ಎಲ್ಲ ಸಿಬ್ಬಂದಿ ಆಡಳಿತ ಪಕ್ಷ ಅಥವಾ ವಿಪಕ್ಷದ ಯಾವುದೇ ಬೆದರಿಕೆ ಅಥವಾ ಒತ್ತಡಕ್ಕೆ ತಲೆಬಾಗದೆ ತಮ್ಮ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಲಿದ್ದಾರೆ ಎನ್ನುವ ನಂಬಿಕೆ ಇದೆʼʼ ಎಂದು ಖರ್ಗೆ ಹೇಳಿದ್ದಾರೆ.

ಜೈರಾಮ್ ರಮೇಶ್ ಅವರು ಅಮಿತ್‌ ಶಾ ವಿರುದ್ಧ ಧ್ವನಿ ಎತ್ತಿರುವ ಆರೋಪಗಳನ್ನು ಕಾಂಗ್ರೆಸ್‌ ಚುನಾವಣಾ ಆಯೋಗದ ಗಮನಕ್ಕೆ ತಂದಿತ್ತು. ಆದರೆ ಇದನ್ನು ಚುನಾವಣಾ ಆಯೋಗ ನಿರಾಕರಿಸಿದೆ. “ನೀವು ಆರೋಪಿಸಿರುವಂತೆ ಯಾವುದೇ ಅಧಿಕಾರಿ ಅಂತಹ ದೂರನ್ನು ನೀಡಿಲ್ಲ” ಎಂದು ಆಯೋಗ ತಿಳಿಸಿದೆ. ಗೃಹ ಸಚಿವರು ಇಂತಹ ಕರೆಗಳನ್ನು ಮಾಡಿದ್ದಾರೆಂದು ಹೇಳಲಾದ 150 ಅಧಿಕಾರಿಗಳ ವಿವರಗಳನ್ನು ಹಂಚಿಕೊಳ್ಳುವಂತೆಯೂ ಆಯೋಗ ಮನವಿ ಮಾಡಿದೆ.

ಇದನ್ನೂ ಓದಿ: Exit Poll 2024: ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್‌, ಉತ್ತರ ಪ್ರದೇಶದಲ್ಲಿ ಮೇಲುಗೈ; ರಾಜ್ಯವಾರು ಎಕ್ಸಿಟ್‌ ಪೋಲ್‌ ವರದಿ ಇಲ್ಲಿದೆ

ಎಕ್ಸಿಟ್‌ ಪೋಲ್‌ ಹೇಳಿದ್ದೇನು?

ಎಲ್ಲ ಹಂತಗಳ ಮತದಾನ ಮುಗಿದ ಜೂನ್‌ 1ರಂದು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಇಂಡಿಯಾ ನ್ಯೂಸ್ ಡೈನಾಮಿಕ್ಸ್ ಸಮೀಕ್ಷಾ ವರದಿ ಎನ್‌ಡಿಎ 371, ಇಂಡಿಯಾ ಮೈತ್ರಿ 125 ಇತರರು 47 ಸ್ಥಾನಗಳನ್ನು ಪಡೆದರೆ, ಜನ್ ಕಿ ಬಾತ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 377, ಇಂಡಿಯಾ ಒಕ್ಕೂಟ 151, ಇತರರು 15, ಎನ್‌ಡಿಟಿವಿ ಇಂಡಿಯಾ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 365, ಇಂಡಿಯಾ ಒಕ್ಕೂಟ 142, ಇತರರು 36, ನ್ಯೂಸ್ ನೇಷನ್ ಸಮೀಕ್ಷಾ ವರದಿ ಪ್ರಕಾರ, ಎನ್‌ಡಿಎ 342-378, ಇಂಡಿಯಾ ಒಕ್ಕೂಟ 153-169, ಇತರರು 21-23, ರಿಪ್ಲಬಿಕ್ ಭಾರ್ ಮ್ಯಾಟ್ರಿಜ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 353-368, ಇಂಡಿಯಾ ಒಕ್ಕೂಟ 118-133, ಇತರರು 43-48 ಸ್ಥಾನಗಳನ್ನು ಗಳಿಸಲಿದೆ. ಇನ್ನು ಪಿಮಾರ್ಕ್ ಸಮೀಕ್ಷಾ ವರದಿ ಪ್ರಕಾರ ಎನ್‌ಡಿಎ 359, ಇಂಡಿಯಾ ಒಕ್ಕೂಟ 154, ಇತರರು 30 ಕ್ಷೇತ್ರಗಳಲ್ಲಿ ಗೆಲ್ಲಲಿದೆ.

Continue Reading

ದೇಶ

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

K Kavitha: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ ನಾಯಕಿ, ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ವಿರುದ್ಧ ಜಾರಿ ನಿರ್ದೇಶನಾಲಯ ಸೋಮವಾರ ಆರೋಪ ಪಟ್ಟಿ ಸಲ್ಲಿಸಿದೆ. ಕವಿತಾ ಅವರು ಸುಮಾರು 292.8 ಕೋಟಿ ರೂ. ಮೌಲ್ಯದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಜತೆಗೆ ಈ ಹಗರಣದಲ್ಲಿ 1,100 ಕೋಟಿ ರೂ.ಗಿಂತ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದೂ ತಿಳಿಸಿದೆ.

VISTARANEWS.COM


on

K Kavitha
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Policy Case) ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ (BRS) ನಾಯಕಿ, ವಿಧಾನ ಪರಿಷತ್‌ ಸದಸ್ಯೆ (MLC) ಕೆ. ಕವಿತಾ (K Kavitha) ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಸೋಮವಾರ ಆರೋಪ ಪಟ್ಟಿ ಸಲ್ಲಿಸಿದೆ. ಕವಿತಾ ಅವರು ಸುಮಾರು 292.8 ಕೋಟಿ ರೂ. ಮೌಲ್ಯದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಜತೆಗೆ ಈ ಹಗರಣದಲ್ಲಿ ಒಟ್ಟು 1,100 ಕೋಟಿ ರೂ.ಗಿಂತ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದೂ ತಿಳಿಸಿದೆ.

ದೆಹಲಿ ಕೋರ್ಟ್‌ನ ವಿಶೇಷ ನ್ಯಾಯಾಧೀಶೆ ಕಾವೇರಿ ಬೆವೇಜಾ ಅವರ ಮುಂದೆ ಪೂರಕ ಪ್ರಾಸಿಕ್ಯೂಷನ್ ದೂರು ಸಲ್ಲಿಸಿದ್ದು, ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಲಾಗಿದೆ. ಜತೆಗೆ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಎಂಬ ಮೂವರು ಸಹ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಇಲ್ಲಿಯ ತನಕ ನಡೆದ ತನಿಖೆಯ ಪ್ರಕಾರ ಒಟ್ಟು 1,100 ಕೋಟಿ ರೂ. ಮೊತ್ತದ ಹಗರಣ ನಡೆದಿರುವುದು ಕಂಡು ಬಂದಿದೆ. ಕವಿತಾ, ಚಂಪ್ರೀತ್ ಸಿಂಗ್, ಪ್ರಿನ್ಸ್ ಕುಮಾರ್, ದಾಮೋದರ್ ಶರ್ಮಾ ಮತ್ತು ಅರವಿಂದ್ ಸಿಂಗ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ಈ ಪೈಕಿ ಕವಿತಾ ಅವರು 292.8 ಕೋಟಿ ರೂ.ಗಳ ಪಿಒಸಿ (Money generated and laundered in crime)ಯಲ್ಲಿ ಭಾಗಿಯಾಗಿದ್ದಾರೆ. 100 ಕೋಟಿ ರೂ.ಗಳ ಕಿಕ್‌ಬ್ಯಾಕ್‌ ಅನ್ನು ಎಎಪಿ ನಾಯಕರಿಗೆ ನೀಡಲಾಗಿದೆ. ಮಾತ್ರವಲ್ಲ ಕವಿತಾ ಅವರು ಮೊಬೈಲ್‌ನಲ್ಲಿದ್ದ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದೂ ದೂರಲಾಗಿದೆ.

ಆರೋಪಿ ವಿಜಯ್ ನಾಯರ್ (ಎಎಪಿಯ ಉನ್ನತ ನಾಯಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ) ಮೂಲಕ ಕವಿತಾ ಅವರು ಸೌತ್ ಗ್ರೂಪ್ ಸದಸ್ಯರು ಮತ್ತು ಎಎಪಿ ನಾಯಕರೊಂದಿಗೆ ಸೇರಿ 100 ಕೋಟಿ ರೂ.ಗಳನ್ನು ಪಾವತಿಸಲು ಮತ್ತು ಅನಗತ್ಯ ಪ್ರಯೋಜನಗಳನ್ನು ಪಡೆಯಲು ಸಂಚು ರೂಪಿಸಿದ್ದರು ಎಂದು ವಿವರಿಸಲಾಗಿದೆ.

ಪ್ರಕರಣದ ಹಿನ್ನೆಲೆ

ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್‌ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೀಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.

ಇದನ್ನೂ ಓದಿ: Liquor Policy Case : ಆಪ್​ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ

ಸೌತ್‌ ಗ್ರೂಪ್‌ ಎಂಬ ಕಂಪನಿಯನ್ನು ಕೆ. ಕವಿತಾ ಸೇರಿ ಹಲವರನ್ನು ಮುನ್ನಡೆಸುತ್ತಿದ್ದು, ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ಬಳಿಕ ಇದೇ ಕಂಪನಿಗೆ ಗುತ್ತಿಗೆ ಪಡೆಯಲು ಆಮ್‌ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಕ್ಕೆ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕಾಗಿ ಇ.ಡಿ ಹಾಗೂ ಸಿಬಿಐ ಕೂಲಂಕಷ ತನಿಖೆ ನಡೆಸುತ್ತಿದೆ. 

Continue Reading

ದೇಶ

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Lok Sabha Election Result 2024 Live: ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ. ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.

VISTARANEWS.COM


on

Lok Sabha Election Result 2024 Live
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ (Lok Sabha Election Result 2024 Live) ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ (ಜೂನ್‌ 4) ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಪ್ರತಿಕ್ಷಣದ ಮಾಹಿತಿಯು ಇಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Continue Reading
Advertisement
Home Remedies For Mosquito Bite
ಆರೋಗ್ಯ28 mins ago

Home Remedies For Mosquito Bite: ಸೊಳ್ಳೆ ಕಚ್ಚಿದ ಜಾಗದಲ್ಲಿ ವಿಪರೀತ ಉರಿಯೇ? ಈ ಸರಳ ಮನೆಮದ್ದುಗಳನ್ನು ಬಳಸಿ

Lok Sabha Election Result
ದೇಶ1 hour ago

Lok Sabha Election Result 2024: ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರು; ದೇಶದ ಚುಕ್ಕಾಣಿ ಹಿಡಿಯೋರು ಯಾರು?

Dina Bhavishya
ಭವಿಷ್ಯ1 hour ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಡಬಲ್‌ ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Mallikarjun Kharge
Lok Sabha Election 20247 hours ago

Mallikarjun Kharge: ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಿ: ಮತ ಎಣಿಕೆ ಸಿಬ್ಬಂದಿಗೆ ಮಲ್ಲಿಕಾರ್ಜುನ ಖರ್ಗೆ ಕರೆ

SA vs SL
ಕ್ರೀಡೆ7 hours ago

SA vs SL: ಲಂಕಾ ದಹನ ಮಾಡಿದ ನೋರ್ಜೆ; ಹರಿಣ ಪಡೆಗೆ 6 ವಿಕೆಟ್​ ಜಯ

Arecanut Price
ಕೃಷಿ7 hours ago

Arecanut Price: ಅಡಿಕೆ ಧಾರಣೆ ನಿರೀಕ್ಷೆ ಮೀರಿ ಏರಲಿದೆ! ಇದು ರೈತರ ‘ನಂಬಿಕೆ’ ಮತ್ತು ‘ಅಭಿಪ್ರಾಯ’ಗಳ ಎಕ್ಸಿಟ್ ಪೋಲ್!

First PU Class Commencement Programme at Vishwadarshana College
ಉತ್ತರ ಕನ್ನಡ8 hours ago

Uttara Kannada News: ವಿಶ್ವದರ್ಶನ ಕಾಲೇಜಿನಲ್ಲಿ ಪ್ರಥಮ ಪಿಯು ತರಗತಿ ಪ್ರಾರಂಭೋತ್ಸವ

Job News
ಉದ್ಯೋಗ8 hours ago

Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

Road Accident
ಕರ್ನಾಟಕ9 hours ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ9 hours ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ15 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ15 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು7 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌