Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ! Vistara News
Connect with us

ದೇಶ

Viral Video: ರಸ್ತೆ ಅಂತಾರಾ ಇದಕ್ಕೆ?-ಆಕ್ರೋಶದಿಂದ ಕೂಗುತ್ತ, ತಮ್ಮ ಬೂಟು ಕಾಲಿನಿಂದ ಡಾಂಬರು ಕೆದರಿದ ಶಾಸಕ!

ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು.

VISTARANEWS.COM


on

MLA scrapes off the asphalt Of Road In Uttar Pradesh Video Viral
Koo

ಗಾಝಿಪುರ: ಕಳಪೆಯಾದ ರಸ್ತೆಯನ್ನು ನೋಡಿ ಶಾಸಕರೊಬ್ಬರು ಕೆಂಡಾಮಂಡಲರಾಗಿ, ತಮ್ಮ ಬೂಟು ಕಾಲಿನಿಂದ ಆ ರಸ್ತೆಯನ್ನು ಕೆದರಿ, ಜಲ್ಲಿಕಲ್ಲು, ಡಾಂಬರುಗಳನ್ನೆಲ್ಲ ತೆಗೆದು ತೋರಿಸಿದ ಘಟನೆ ಉತ್ತರ ಪ್ರದೇಶದ ಗಾಝಿಪುರದಲ್ಲಿ ನಡೆದಿದೆ. ಶಾಸಕರ ಆಕ್ರೋಶ ಮತ್ತು ಅವರು ಕಾಲಿನಿಂದಲೇ ರಸ್ತೆಯನ್ನು ಕೆದರಿದ, ಗುತ್ತಿಗೆದಾರನಿಗೆ ಬಾಯಿಗೆ ಬಂದಂತೆ ಬೈದಿರುವ ವಿಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸುಹೇಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಶಾಸಕ ಬೇದಿರಾಮ್​ ಅವರು ತಮ್ಮ ವಿಧಾನಸಭಾ ಕ್ಷೇತ್ರವಾದ ಗಾಝಿಪುರಕ್ಕೆ ಭೇಟಿಕೊಟ್ಟಿದ್ದರು. ಅಲ್ಲಿ ಒಂದು ಕಡೆ ಹಾಳಾದ ರಸ್ತೆಯನ್ನು ನೋಡಿದ ಅವರು ಉಗ್ರಸ್ವರೂಪ ತಾಳಿದ್ದಾರೆ. ‘ಇದಕ್ಕೆ ಯಾರಾದರೂ ರಸ್ತೆ ಎನ್ನುತ್ತಾರಾ? ಇಲ್ಲಿ ಕಾರು ಸಂಚಾರ ಮಾಡಬಹುದಾ?’ ಎಂದು ಕೋಪದಿಂದ ಗುತ್ತಿಗೆದಾರನ ಬಳಿ ಪ್ರಶ್ನಿಸಿದ್ದಾರೆ.

‘ಗಾಝಿಪುರದಲ್ಲಿ ಹಲವು ಕಡೆಗಳಲ್ಲಿ ರಸ್ತೆ ಸರಿಯಿಲ್ಲ ಎಂದು ಸ್ಥಳೀಯರು ದೂರು ಕೊಟ್ಟ ಕಾರಣಕ್ಕೆ, ಪರಿಶೀಲನೆ ನಡೆಸಲು ಅಲ್ಲಿಗೆ ತೆರಳಿದ್ದೆ. ಆದರೆ ನಾನು ಅಲ್ಲಿಗೆ ಹೋದರೆ ಪಿಡಬ್ಲ್ಯೂಡಿ ಇಲಾಖೆಯ ಯಾವ ಅಧಿಕಾರಿಯೂ ಇರಲಿಲ್ಲ. ಹೀಗಾಗಿ ಗುತ್ತಿಗೆದಾರನನ್ನು ಸ್ಥಳಕ್ಕೆ ಕರೆಸಿ ಸಮಸ್ಯೆ ಏನೆಂದು ತೋರಿಸಿದ್ದೇನೆ. ಅದಾದ ಮೇಲೆ ಪಿಡಬ್ಲ್ಯೂಡಿ ಉನ್ನತ ಅಧಿಕಾರಿಯೊಂದಿಗೆ ಮಾತಾಡಿದ್ದೇನೆ. ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಲಾಗಿದ್ದರೂ, ಗುಣಮಟ್ಟದ ರಸ್ತೆ ನಿರ್ಮಾಣ ಮಾಡಿಲ್ಲ. ಒಂದು ವರ್ಷ ಬಿಡಿ, ಆರು ತಿಂಗಳೂ ಕೂಡ ರಸ್ತೆ ಬಾಳಿಕೆಗೆ ಬರುವುದಿಲ್ಲ’ ಎಂದು ಶಾಸಕರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಂದಹಾಗೇ, ಶಾಸಕ ಬೇದಿರಾಮ್ ಅವರು ಭೇಟಿಕೊಟ್ಟಿದ್ದು ಗಾಝಿಪುರದ ಜಖಾನಿಯನ್​ ಏರಿಯಾದಲ್ಲಿ ನಿರ್ಮಿಸಲಾದ, ಜಂಗೀಪುರ- ಬಹರಿಯಾಬಾದ್-ಯೂಸುಫ್‌ಪುರ್ ಸಂಪರ್ಕ ರಸ್ತೆಗೆ. ಇಲ್ಲಿ 4.5 ಕಿಮೀಗಳಷ್ಟು ದೂರವನ್ನು 3.8 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ತಿಂಗಳ ಹಿಂದಷ್ಟೇ ನಿರ್ಮಿಸಲಾಗಿತ್ತು. ಆದರೆ ಈಗಲೇ ಹಾಳಾಗಿದೆ. ಹೀಗಾಗಿ ಸ್ಥಳೀಯರು ಒಟ್ಟಾಗಿ ಅಲ್ಲಿನ ಶಾಸಕರಿಗೆ ದೂರು ಕೊಟ್ಟಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದಲ್ಲಿ ಹಾಳಾದ ರಸ್ತೆಯ ಚಿತ್ರಣ ಬಹಿರಂಗವಾಗಿದ್ದು ಇದೇ ಮೊದಲಲ್ಲ. ಕಳೆದ ವರ್ಷ ಪಿಲಿಬಿತ್​​ನಲ್ಲಿ ನಾಗರಿಕರೊಬ್ಬರು ರಸ್ತೆಯನ್ನು ತಮ್ಮ ಕೈಗಳಿಂದಲೇ ಕಿತ್ತು ಹಾಕಿದ್ದರು. ರಸ್ತೆ ಮೇಲ್ಮೈಯೆಲ್ಲ ಕಿತ್ತುಬಂದಿದ್ದನ್ನು ತೋರಿಸಿದ್ದರು. ಅದೆಷ್ಟು ಕಳಪೆಯಾಗಿ ರಸ್ತೆ ನಿರ್ಮಾಣ ಮಾಡಲಾಗಿದೆ ನೋಡಿ ಎಂದು ವಿಡಿಯೊ ಮೂಲಕ ತೋರಿಸಿದ್ದರು. ಆ ವಿಡಿಯೊ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೀಡೆ

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Heart Attack: ನೊಯ್ಡಾ 11ನೇ ಸೆಕ್ಟರ್‌ ನಿವಾಸಿ ಮಹೇಂದ್ರ ಶರ್ಮಾ ಅವರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಕಳೆದ ಐದು ವರ್ಷದಿಂದ ಅವರು ನಿತ್ಯ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಆದರೆ, ಅವರಿಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿದೆ. ಇದಾದ ಕೆಲವೇ ನಿಮಿಷದಲ್ಲಿ ಅವರು ಮೃತಪಟ್ಟಿದ್ದಾರೆ.

VISTARANEWS.COM


on

Edited by

Man Dies Of Heart Attack In Noida
Koo

ನೊಯ್ಡಾ: ಇತ್ತೀಚೆಗೆ ಹೃದಯಾಘಾತಕ್ಕೀಡಾಗಿ, ಮೃತಪಡುತ್ತಿರುವವರ ಸಂಖ್ಯೆ ಜಾಸ್ತಿಯಾದ ಕಾರಣ ಜನರ ಬದುಕು ಮತ್ತಷ್ಟು ಅನಿಶ್ಚಿತತೆಯಿಂದ ಕೂಡಿದೆ. ನಮ್ಮೆದುರು ಚೆನ್ನಾಗಿ ಇರುವವರು ಕೆಲವೇ ಗಂಟೆಯಲ್ಲಿ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಭೀತಿ ಹುಟ್ಟಿಸಿದೆ. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ ನೊಯ್ಡಾದಲ್ಲಿ ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಹೃದಯಾಘಾತದಿಂದ (Heart Attack) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಸೆಕ್ಟರ್‌ 21 ಎನಲ್ಲಿರುವ ನೊಯ್ಡಾ ಸ್ಟೇಡಿಯಂನಲ್ಲಿ 52 ವರ್ಷದ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಅವರು ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬೀಳುತ್ತಲೇ ಸ್ಟೇಡಿಯಂನಲ್ಲಿದ್ದ ತುರ್ತು ವೈದ್ಯಕೀಯ ತಂಡ ಆಗಮಿಸಿ ತಪಾಸಣೆ ಮಾಡಿದೆ. ವೈದ್ಯರು ಮಹೇಂದ್ರ ಶರ್ಮಾ ಅವರ ಎದೆ ಒತ್ತಿ, ತಿಕ್ಕಿದ್ದಾರೆ. ಆದರೂ, ಮಹೇಂದ್ರ ಶರ್ಮಾ ಅವರು ಸುಧಾರಿಸಿಕೊಳ್ಳದ ಕಾರಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹೇಂದ್ರ ಶರ್ಮಾ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. “ಶನಿವಾರ ಬೆಳಗ್ಗೆ 7.30ರ ಸುಮಾರಿಗೆ ಮಹೇಂದ್ರ ಶರ್ಮಾ ಅವರು ಬ್ಯಾಡ್ಮಿಂಟನ್‌ ಆಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Heart attack: 16,000 ಹೃದ್ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಹೃದಯಾಘಾತಕ್ಕೆ ಬಲಿ

ಸೆಕ್ಟರ್‌ 11ನೇ ನಿವಾಸಿಯಾಗಿರುವ ಮಹೇಂದ್ರ ಶರ್ಮಾ ಅವರು ಕಳೆದ ಐದು ವರ್ಷದಿಂದ ಬ್ಯಾಡ್ಮಿಂಟನ್‌ ಆಡುತ್ತಿದ್ದರು. ಅಷ್ಟರಮಟ್ಟಿಗೆ ಅವರು ಆರೋಗ್ಯದ ಕಡೆ ಗಮನ ಹರಿಸುತ್ತಿದ್ದರು. ಆದರೆ, ಏಕಾಏಕಿ ಹಾರ್ಟ್‌ ಅಟಾಕ್‌ ಆಗಿ ಅವರು ಮೃತಪಟ್ಟಿರುವುದು ದುಃಖದ ವಿಚಾರ ಎಂದು ಮಹೇಂದ್ರ ಶರ್ಮಾ ಗೆಳೆಯರು ವಿಷಾದ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ, ಕಡಿಮೆ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕ ಮೂಡಿಸಿದೆ.

Continue Reading

ದೇಶ

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

Narendra Modi: ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಅವರು ಸುದ್ದಿಗೋಷ್ಠಿ ನಡೆಸಿ, ನರೇಂದ್ರ ಮೋದಿ ಅವರ ಅವಧಿಯಲ್ಲಿ ಮಾಡಲಾದ ಸಾಲದ ಮಾಹಿತಿಯನ್ನು ನೀಡಿದ್ದಾರೆ. ಹಾಗೆಯೇ, ಕಳೆದ ಒಂಬತ್ತು ವರ್ಷದಲ್ಲಿ ಮಾಡಿದ ಸಾಲವು ಎಷ್ಟುಪಟ್ಟು ಹೆಚ್ಚಾಗಿದೆ ಎಂಬುದನ್ನೂ ವಿವರಿಸಿದ್ದಾರೆ. ಅವರು ನೀಡಿದ ಮಾಹಿತಿಯ ಪ್ರಮುಖಾಂಶ ಹೀಗಿದೆ…

VISTARANEWS.COM


on

Edited by

Debt Under Narendra Modi Government
Koo

ನವದೆಹಲಿ: ಸ್ವಾತಂತ್ರ್ಯದ ಬಳಿಕ ದೇಶವನ್ನು ಮುನ್ನಡೆಸಿದ ಪ್ರಧಾನಿಗಳು ಮಾಡಿದ ಸಾಲ ಹಾಗೂ ನರೇಂದ್ರ ಮೋದಿ ಅವರ ಅವಧಿಯಲ್ಲಿ ಮಾಡಲಾದ ಸಾಲದ ಅಂಕಿ-ಅಂಶವನ್ನು ಇಟ್ಟುಕೊಂಡು ಮೋದಿ ಅವರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ನರೇಂದ್ರ ಮೋದಿ (Narendra Modi) ಅವರು ಆಡಳಿತ ನಡೆಸುತ್ತಿರುವ 9 ವರ್ಷದ ಅವಧಿಯಲ್ಲಿ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಅವರು ಸುದ್ದಿಗೋಷ್ಠಿ ನಡೆಸಿ ಮೋದಿ ಅವಧಿಯಲ್ಲಾದ ಸಾಲದ ಕುರಿತು ಮಾಹಿತಿ ನೀಡಿದರು. “2014ರಲ್ಲಿ ದೇಶದ ಸಾಲ 55 ಲಕ್ಷ ಕೋಟಿ ರೂಪಾಯಿ ಇತ್ತು. ಆದರೆ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ. ಸದ್ಯ, ದೇಶದ ಸಾಲ 155 ಲಕ್ಷ ಕೋಟಿ ರೂಪಾಯಿ ಇದೆ. ಒಂಬತ್ತು ವರ್ಷದಲ್ಲಿಯೇ 100 ಲಕ್ಷ ಕೋಟಿ ರೂಪಾಯಿ ಸಾಲ ಮಾಡಲಾಗಿದೆ” ಎಂದು ಅಂಕಿ-ಅಂಶಗಳ ಸಮೇತ ಕುಟುಕಿದರು.

“ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರವನ್ನು ತೆಗಳುತ್ತಿದ್ದರು. ಭ್ರಷ್ಟ, ಅಸಮರ್ಥ ಎಂದೆಲ್ಲ ಟೀಕಿಸುತ್ತಿದ್ದರು. ಆದರೆ, ಒಂಬತ್ತು ವರ್ಷದಲ್ಲಿ ದೇಶದ ಸಾಲದ ಪ್ರಮಾಣ ಏರಿಕೆಯಾಗಿದ್ದು ನೋಡಿದರೆ, ಟೀಕೆಗಳು ಮೋದಿ ಅವರಿಗೇ ಹೆಚ್ಚು ಸಮಂಜಸ ಎನಿಸುತ್ತವೆ. ದೇಶದ ಆರ್ಥಿಕತೆ ಹಾಳು ಮಾಡಿದ್ದು, ನಿರುದ್ಯೋಗ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದ್ದು, ಹಣದುಬ್ಬರ ಹೆಚ್ಚಳ ಸೇರಿ ಹಲವು ದಿಸೆಯಲ್ಲಿ ದೇಶವನ್ನು ಮೋದಿ ಸರ್ಕಾರ ಹಾಳುಮಾಡಿದೆ. ಎಲ್ಲ ನಕಾರಾತ್ಮಕ ಏರಿಕೆಗಳು ಎಚ್ಚರಿಕೆಯ ಗಂಟೆಗಳಾಗಿವೆ” ಎಂದು ಹೇಳಿದರು.

ಇದನ್ನೂ ಓದಿ: Loksabha 2024: ಹೇ ಕೂತ್ಕೊಳಪ್ಪ, ಮೋದಿ ಸೋತಾಗ ಗೊಬ್ಬರದ ರೇಟ್‌ ಕಡಿಮೆ ಮಾಡ್ತೀವಿ: ಅಭಿಮಾನಿಗೆ ರೇಗಿದ ಸಿಎಂ ಸಿದ್ದರಾಮಯ್ಯ

“ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕದ 67 ವರ್ಷದಲ್ಲಿ 14 ಪ್ರಧಾನಿಗಳು 55 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದರು. ಆದರೆ, ಮೋದಿ ಅವರೊಬ್ಬರೇ 100 ಕೋಟಿ ರೂಪಾಯಿ ಸಾಲ ಮಾಡಿರುವುದು ಅಪಾಯಕಾರಿ ಸಂಗತಿಯಾಗಿದೆ. ಸದ್ಯದ ಆರ್ಥಿಕ ಬೆಳವಣಿಗೆಯ ಕುರಿತ ಮಾಹಿತಿಯು ಹೆಡ್‌ಲೈನ್‌ ಮ್ಯಾನೇಜ್‌ಮೆಂಟ್‌ ರೀತಿಯೇ ಆಗಿದೆ. ಇದರಿಂದ ದೇಶದ ವಿತ್ತೀಯ ಸ್ಥಿತಿ ಸುಧಾರಣೆಯಾಗುವುದಿಲ್ಲ” ಎಂದು ತಿಳಿಸಿದರು.

Continue Reading

ದೇಶ

Garbha Sanskar: ‘ರಾಷ್ಟ್ರಭಕ್ತ’ ಮಕ್ಕಳ ಜನನಕ್ಕಾಗಿ ಆರೆಸ್ಸೆಸ್ ‘ಗರ್ಭ ಸಂಸ್ಕಾರ’ ಅಭಿಯಾನ, ಭಾನುವಾರ ಚಾಲನೆ

Garbha Sanskar: ಜನಿಸುವ ಮಕ್ಕಳಲ್ಲಿ ದೇಶಭಕ್ತಿ, ಸಂಸ್ಕಾರ, ಮೌಲ್ಯಗಳು ಅಡಕವಾಗಿರಬೇಕು ಎಂಬ ದೃಷ್ಟಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘವು ಭಾನುವಾರ ಗರ್ಭಸಂಸ್ಕಾರ ಅಭಿಯಾನವನ್ನು ಆರಂಭಿಸಲಿದೆ.

VISTARANEWS.COM


on

Edited by

RSS Garbha Samskar Campaign
Koo

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (RSS) ದೇಶಾದ್ಯಂತ ಸೋಮವಾರದಿಂದ ‘ಗರ್ಭ ಸಂಸ್ಕಾರ’ ಅಭಿಯಾನಕ್ಕೆ ಚಾಲನೆ ನೀಡಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ದೇಶದಲ್ಲಿ ಸಂಸ್ಕಾರವಂತ ಹಾಗೂ ದೇಶಭಕ್ತ ಮಕ್ಕಳ ಜನನಕ್ಕಾಗಿ ಗರ್ಭಿಣಿಯರು ಭಗವದ್ಗೀತೆ, ರಾಮಾಯಣ ಗ್ರಂಥಗಳನ್ನು ಓದುವಂತೆ ಪ್ರೋತ್ಸಾಹಿಸಲು ಆರ್‌ಎಸ್‌ಎಸ್‌ ಅಭಿಯಾನ ಕೈಗೊಳ್ಳುತ್ತಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಹಿಳಾ ಘಟಕವಾದ ರಾಷ್ಟ್ರ ಸೇವಿಕಾ ಸಂಘದ ಅಂಗಸಂಸ್ಥೆಯಾದ ಸಂವರ್ಧಿನಿ ನ್ಯಾಸ್‌ (Samvardhinee Nyas) ಎಂಬ ಅಂಗಸಂಸ್ಥೆಯಿಂದ ದೇಶಾದ್ಯಂತ ಅಭಿಯಾನ ಕೈಗೊಳ್ಳಲಾಗುತ್ತಿದೆ. “ಜನಿಸುವ ಮಕ್ಕಳಲ್ಲಿ ಸಂಸ್ಕೃತಿ, ಮೌಲ್ಯಗಳು ಹಾಗೂ ದೇಶಭಕ್ತಿ ಅಡಕವಾಗಿರಬೇಕು ಎಂಬ ದೃಷ್ಟಿಯಿಂದ ವೈಜ್ಞಾನಿಕ ದೃಷ್ಟಿಯಿಂದಲೇ ಗರ್ಭ ಸಂಸ್ಕಾರ ಅಭಿಯಾನ ಕೈಗೊಳ್ಳಲಾಗುತ್ತಿದೆ” ಎಂದು ಸಂವರ್ಧಿನಿ ನ್ಯಾಸ್‌ ಸಂಸ್ಥೆ ತಿಳಿಸಿದೆ.

ಹೇಗೆ ನಡೆಯುತ್ತದೆ ಅಭಿಯಾನ?

“ಗರ್ಭಿಣಿಯರು ಭಗವದ್ಗೀತೆ, ರಾಮಾಯಣದಂತಹ ಧರ್ಮಗ್ರಂಥಗಳನ್ನು ಓದಲು ಪ್ರೋತ್ಸಾಹಿಸುವುದು, ಸಂಸ್ಕೃತದ ಶ್ಲೋಕಗಳನ್ನು ಪಠಿಸುವುದು, ಗರ್ಭವತಿಯಾದ ಬಳಿಕ ಸಾತ್ವಿಕ ಆಹಾರ ಸೇವಿಸುವುದು, ಯೋಗಾಭ್ಯಾಸ ಮಾಡುವುದು ಅಭಿಯಾನದ ಉದ್ದೇಶವಾಗಿದೆ. ಗರ್ಭಿಣಿಯರು ಇಷ್ಟೆಲ್ಲ ಚಟುವಟಿಕೆಗಳು ಆರಂಭಿಸಿ, ಮಗುವಿಗೆ ಎರಡು ವರ್ಷ ತುಂಬುವವರೆಗೆ ಚಟುವಟಿಕೆಗಳಲ್ಲಿ ತೊಡಗುವಂತೆ ಪ್ರೋತ್ಸಾಹಿಸಲಾಗುತ್ತದೆ” ಎಂದು ಮಾಹಿತಿ ನೀಡಿದೆ.

“ಅಭಿಯಾನದ ಜಾರಿಗಾಗಿ ದೇಶದಲ್ಲಿ ಐದು ಪ್ರದೇಶಗಳನ್ನಾಗಿ ವಿಂಗಡಿಸಲಾಗಿದೆ. ಇದಕ್ಕಾಗಿ ತಂಡಗಳನ್ನು ರಚಿಸಲಾಗಿದ್ದು, ಒಂದು ತಂಡದಲ್ಲಿ 10 ವೈದ್ಯರು ಇರುತ್ತಾರೆ. ಪ್ರತಿಯೊಬ್ಬ ವೈದ್ಯರು ಆಯಾ ಸೀಮಿತ ಪ್ರದೇಶದ ವ್ಯಾಪ್ತಿಯಲ್ಲಿ ತಲಾ 20 ಗರ್ಭಿಣಿಯರಿಗೆ ಅಭಿಯಾನದ ಜಾರಿ, ಚಟುವಟಿಕೆ ಕೈಗೊಳ್ಳುವ ಕುರಿತು ಮಾರ್ಗದರ್ಶನ ನೀಡಲಿದ್ದಾರೆ” ಎಂದು ಸಂಸ್ಥೆಯು ವಿವರಿಸಿದೆ.

ಇದನ್ನೂ ಓದಿ: RSS: ʼಆರ್‌ಎಸ್‌ಎಸ್‌ʼಗೆ ನೀಡಿದ್ದ ಭೂಮಿ ಹಿಂಪಡೆಯಲಿದೆಯೇ ಸರ್ಕಾರ?: ಮಾಹಿತಿ ಕೇಳಿದ ಸಿಎಂ ಸಿದ್ದರಾಮಯ್ಯ

ವಾಷಿಂಗ್ಟನ್ ವಿಶ್ವವಿದ್ಯಾಲಯದ ವರದಿಯ ಪ್ರಕಾರ, ಗರ್ಭದಲ್ಲಿರುವಾಗಲೇ ಶಿಶುಗಳು ಭಾಷೆಯನ್ನು ಕಲಿತುಕೊಳ್ಳಲು ಪ್ರಾರಂಭಿಸುತ್ತವೆ. ಗರ್ಭಾವಸ್ಥೆಯ 30 ವಾರಗಳಲ್ಲಿ ಶ್ರವಣೇಂದ್ರಿಯ ಮತ್ತು ಮೆದುಳಿನ ಕಾರ್ಯವಿಧಾನಗಳು ಅಭಿವೃದ್ಧಿಯಾಗುತ್ತದೆ. ಗರ್ಭದಲ್ಲಿರುವ ಮಕ್ಕಳು ಗರ್ಭಾವಸ್ಥೆಯ ಕೊನೆಯ 10 ವಾರಗಳಲ್ಲಿ ತಮ್ಮ ತಾಯಂದಿರ ಮಾತುಗಳನ್ನು ಕೇಳುತ್ತಾರೆ ಎಂದು ತಿಳಿದುಬಂದಿದೆ.

Continue Reading

ದೇಶ

Kshama Bindu: ತನ್ನನ್ನು ತಾನೇ ಮದುವೆ ಆಗಿದ್ದ ಯುವತಿಗೆ ವಿವಾಹ ವಾರ್ಷಿಕೋತ್ಸವ ಸಂಭ್ರಮ; ಹೇಗಿತ್ತು ಜರ್ನಿ?

Kshama Bindu: ಕಳೆದ ವರ್ಷದ ಜೂನ್‌ 9ರಂದು ಕ್ಷಮಾ ಬಿಂದು ತಮ್ಮನ್ನು ತಾವೇ ಮದುವೆಯಾಗಿದ್ದರು. ನನಗೆ ವರ ಬೇಡ, ಸ್ವಯಂ ಮದುವೆಯಾಗುತ್ತೇನೆ ಎಂದು, ತಮಗೆ ತಾವೇ ಮದುವೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದರು. ಈಗ ಅವರ ಸ್ವಯಂ ವಿವಾಹಕ್ಕೆ ಮೊದಲ ವಾರ್ಷಿಕೋತ್ಸವದ ಸಂಭ್ರಮ.

VISTARANEWS.COM


on

Edited by

Kshama Bindu Wedding Anniversary
Koo

ಗಾಂಧಿನಗರ: ಕಳೆದ ವರ್ಷ ಗುಜರಾತ್‌ನಲ್ಲಿ ತನ್ನನ್ನು ತಾನೇ ಮದುವೆಯಾಗುವ (Sologamy) ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಕ್ಷಮಾ ಬಿಂದು (Kshama Bindu) ಅವರು ಮೊದಲ ವರ್ಷದ ಸ್ವಯಂ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಅಲ್ಲದೆ, ಕಳೆದ ಒಂದು ವರ್ಷದ ವೈವಾಹಿಕ ಜೀವನದ ಕುರಿತು ವಿಡಿಯೊ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ್ದಾರೆ. ಅವರ ವಿವಾಹ ವಾರ್ಷಿಕೋತ್ಸವ ಜರ್ನಿಯ ವಿಡಿಯೊ ಈಗ ವೈರಲ್‌ ಆಗಿದೆ.

ಕ್ಷಮಾ ಬಿಂದು ಅವರು ಕಳೆದ ವರ್ಷ ತಮ್ಮನ್ನು ತಾವೇ ಮದುವೆಯಾಗಿದ್ದು, ಮದುವೆಯಾದ ಸುಂದರ ಕ್ಷಣಗಳು, ಸ್ವಯಂ ಮದುವೆಯ ಮೊದಲ ವಾರ್ಷಿಕೋತ್ಸವದ ಆಚರಣೆ, ಒಂದು ವರ್ಷದಲ್ಲಿ ಮಾಡಿದ ಪ್ರವಾಸ, ಅನುಭವಿಸಿದ ಮಧುರ ಕ್ಷಣಗಳು ಇರುವ ವಿಡಿಯೊವನ್ನು ಅವರು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಸ್ವಯಂ ವಿವಾಹವಾದ ಒಂದು ವರ್ಷದಲ್ಲಿ ಹೇಗೆ ಬದುಕನ್ನು ಖುಷಿಯಿಂದ ಕಳೆದೆ ಎಂಬುದನ್ನು ಅವರು ವಿಡಿಯೊ ಮೂಲಕ ಜನರ ಎದುರಿಟ್ಟಿದ್ದಾರೆ. ಇದಕ್ಕೆ ಜನ ಒಂದೊಂದು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಕ್ಷಮಾ ಬಿಂದು ಅವರು ತಮಗೆ ತಾವೇ “Happy Anniversary” ಎಂದು ವಿಶ್‌ ಮಾಡಿಕೊಂಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೊ

ಇದನ್ನೂ ಓದಿ: ತನ್ನನ್ನು ತಾನೇ ಮದುವೆಯಾಗಿ 24 ಗಂಟೆಯಲ್ಲೇ ವಿಚ್ಛೇದನ ಪಡೆದ ಯುವತಿ; ಒಂದಿನವೂ ಕಳೆಯಲಾಗಲಿಲ್ಲವಂತೆ!

ಕ್ಷಮಾ ಬಿಂದು 2022 ಜೂ.11 ರಂದು ಗುಜರಾತ್‌ನ ದೇವಸ್ಥಾನವೊಂದರಲ್ಲಿ ನನ್ನನ್ನು ನಾನೇ ಮದುವೆಯಾಗುತ್ತೇನೆ ಎಂದು ಹೇಳಿಕೊಂಡಿದ್ದರು. ಆದರೆ ಬಿಜೆಪಿ ನಾಯಕಿ ಸುನೀತಾ ಶುಕ್ಲಾ, ʼಇಂಥ ಸ್ವಯಂ ಮದುವೆಗಳಿಗೆ ನನ್ನ ವಿರೋಧವಿದೆ. ಇದರಿಂದ ಹಿಂದು ಜನಸಂಖ್ಯೆ ಕಡಿಮೆಯಾಗುತ್ತದೆ. ಕ್ಷಮಾ ಬಿಂದು ಯಾವುದೇ ದೇವಸ್ಥಾನದಲ್ಲೂ ಸ್ವಯಂ ವಿವಾಹವಾಗಲು ನಾವು ಅವಕಾಶ ಕೊಡುವುದಿಲ್ಲʼ ಎಂದು ಹೇಳಿದ್ದರು. ಇವರಷ್ಟೇ ಅಲ್ಲ, ಕಾಂಗ್ರೆಸ್‌ನ ಕೆಲವು ರಾಜಕಾರಣಿಗಳೂ ಇದನ್ನು ವಿರೋಧಿಸಿದ್ದರು. ತಮ್ಮ ಸೋಲೊಗಮಿಗೆ ವಿರೋಧ ವ್ಯಕ್ತವಾಗುತ್ತಿರುವುದನ್ನು ಗಮನಿಸಿದ ಕ್ಷಮಾ ಬಿಂದು ಜೂನ್‌ 9ರಂದೇ ತಮ್ಮನ್ನು ತಾವು ವರಿಸಿದ್ದರು. ಇದು ದೇಶದ ಮೊದಲ ಸ್ವಯಂ ಮದುವೆ ಎಂದು ಕೂಡ ಖ್ಯಾತಿಯಾಗಿತ್ತು.

ಗುಜರಾತ್‌ನ ಗೋತ್ರಿ ಏರಿಯಾದಲ್ಲಿರುವ ತಮ್ಮ ಮನೆಯಲ್ಲಿಯೇ ಕ್ಷಮಾ ಮದುವೆಯಾಗಿದ್ದರು. ಸುಮಾರು 40 ನಿಮಿಷಗಳ ಕಾಲ ವಿವಾಹ ಕಾರ್ಯಕ್ರಮ ನಡೆದಿತ್ತು. ಇನ್ನೊಂದು ಬಹುಮುಖ್ಯ ಅಂಶವೆಂದರೆ ಪುರೋಹಿತರೂ ಇರಲಿಲ್ಲ. ಆದರೆ ಕ್ಷಮಾ ಇಚ್ಛೆಯೇ ಹಾಗಿತ್ತು. ಅವರಿಗೆ ವರನೇ ಬೇಕಾಗಿಲ್ಲ ಎಂದ ಮೇಲೆ ಪುರೋಹಿತರು ಬಂದೇನು ಮಾಡುತ್ತಾರೆ? ಇಷ್ಟೆಲ್ಲ ಆದ ಮೇಲೆ ತನ್ನನ್ನು ತಾನು ವಿವಾಹಿತ ಮಹಿಳೆ ಎಂದೇ ಕ್ಷಮಾ ಬಿಂದು ಕರೆದುಕೊಂಡಿದ್ದರು. ಮತ್ತು ಹೀಗೆ ಕರೆದುಕೊಳ್ಳಲು ಸಂತೋಷವಾಗುತ್ತಿದೆ ಎಂದೂ ತಿಳಿಸಿದ್ದರು. ಅದರಂತೆ, ಅವರು ಒಂದು ವರ್ಷವನ್ನು ಸಂತಸದಿಂದ ಕಳೆದಿದ್ದಾರೆ.

Continue Reading
Advertisement
Sphoorti Salu
ಸುವಚನ21 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Horoscope Today
ಪ್ರಮುಖ ಸುದ್ದಿ21 mins ago

Horoscope Today: ಈ ರಾಶಿಯವರ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಎಚ್ಚರ ಇರಲಿ!

Hindu janajagruti samiti pressmeet
ಕರ್ನಾಟಕ5 hours ago

ಜೂ.16 ರಿಂದ 22ರವರೆಗೆ ಗೋವಾದಲ್ಲಿ ‘ವೈಶ್ವಿಕ ಹಿಂದು ರಾಷ್ಟ್ರ ಮಹೋತ್ಸವʼ

Man Dies Of Heart Attack In Noida
ಕ್ರೀಡೆ5 hours ago

Heart Attack: ಬ್ಯಾಡ್ಮಿಂಟನ್‌ ಆಡುತ್ತಿದ್ದವನ ಬಾಳಲ್ಲಿ ಆಟವಾಡಿದ ವಿಧಿ; ಹೃದಯಾಘಾತದಿಂದ ವ್ಯಕ್ತಿ ಸಾವು

Digital Payment
ಪ್ರಮುಖ ಸುದ್ದಿ6 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್ ಪಾವತಿಯಲ್ಲಿ ಭಾರತ ನಂ.1, ಭಾರತೀಯರ ಪ್ರೌಢಿಮೆಗೆ ಇದು ಸಾಕ್ಷಿ

aamir khan to act in rajamouli movie
ಸಿನಿಮಾ6 hours ago

Aamir Khan : ದಕ್ಷಿಣ ಭಾರತ ಸಿನಿಮಾದಲ್ಲಿ ವಿಲನ್‌ ಆಗ್ತಾರಂತೆ ಬಾಲಿವುಡ್‌ನ ಮಿಸ್ಟರ್‌ ಪರ್ಫೆಕ್ಟ್‌ ಆಮೀರ್ ಖಾನ್‌!

Minister Pralhad Joshi
ಕರ್ನಾಟಕ6 hours ago

ಹುಬ್ಬಳ್ಳಿ ಏರ್‌ಪೋರ್ಟ್‌ ವಿಸ್ತರಣೆಗೆ 273 ಕೋಟಿ ರೂ.; ಕೇಂದ್ರಕ್ಕೆ ಪ್ರಲ್ಹಾದ್‌ ಜೋಶಿ ಧನ್ಯವಾದ

Viat kohli WTC Final 2023
ಕ್ರಿಕೆಟ್6 hours ago

WTC Final : ಭಾರತದ ಗೆಲುವಿಗೆ ಇನ್ನೂ ಬೇಕು 280 ರನ್​, ಕೌತುಕದಲ್ಲಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​

Debt Under Narendra Modi Government
ದೇಶ7 hours ago

Narendra Modi: 14 ಪ್ರಧಾನಿಗಳು ಮಾಡಿದ್ದ ಸಾಲ 55 ಲಕ್ಷ ಕೋಟಿ ರೂ., ಮೋದಿ ಒಬ್ಬರೇ ಮಾಡಿದ ಸಾಲವೆಷ್ಟು?

murder case accused tippayya
ಕರ್ನಾಟಕ7 hours ago

Bellary News: ಪತ್ನಿ, ಮಕ್ಕಳು ಸೇರಿ ಐವರನ್ನು ಕೊಂದವನಿಗೆ ಮರಣ ದಂಡನೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ1 day ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Autodrivers oppose free bus service
ಕರ್ನಾಟಕ12 hours ago

Free Bus Service: ನನ್ ಒಂದೇ ಓಟಲ್ಲ ಸ್ವಾಮಿ, ನಮ್ ಫ್ಯಾಮಿಲಿದೆಲ್ಲ ಇದೆ ಹುಷಾರ್: ಸಿದ್ದರಾಮಯ್ಯಗೆ ಆಟೋ ಡ್ರೈವರ್‌ ವಾರ್ನಿಂಗ್‌

accident in kerala
ವೈರಲ್ ನ್ಯೂಸ್17 hours ago

Viral Video: ಬಸ್ಸು ಮತ್ತು ಲಾರಿ ಮಧ್ಯೆ ಸ್ಕೂಟರ್‌ ಅಪ್ಪಚ್ಚಿ, ಸವಾರರ ಕಣ್ ಮುಂದೆ ಯಮ ರಪ್ ಅಂತ ಪಾಸ್ ಆದ!

Cancellation of tenders for 108 ambulances and Dinesh Gundu rao
ಆರೋಗ್ಯ2 days ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ2 days ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ2 days ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ2 days ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ2 days ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ2 days ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ3 days ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ3 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

ಟ್ರೆಂಡಿಂಗ್‌

error: Content is protected !!