MNS v/s Shiv Sena: MNS ಕಾರ್ಯಕರ್ತರ ಪುಂಡಾಟ; ಉದ್ಧವ್‌ ಠಾಕ್ರೆ ಬೆಂಗಾವಲು ವಾಹನದ ಮೇಲೆ ದಾಳಿ - Vistara News

ದೇಶ

MNS v/s Shiv Sena: MNS ಕಾರ್ಯಕರ್ತರ ಪುಂಡಾಟ; ಉದ್ಧವ್‌ ಠಾಕ್ರೆ ಬೆಂಗಾವಲು ವಾಹನದ ಮೇಲೆ ದಾಳಿ

MNS v/s Shiv Sena:ರಂಗಾಯತನ್‌ ಬಳಿ ಈ ಘಟನೆ ನಡೆದಿದ್ದು, ಪಕ್ಷದ ಕಾರ್ಯಕರ್ತರ ಸಭೆ ಆಯೋಜನೆಗೊಂಡಿತ್ತು. ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಉದ್ಧವ್ ಠಾಕ್ರೆ ಮತನಾಡಲಿದ್ದರು. ಠಾಕ್ರೆ ಸ್ಥಳಕ್ಕೆ ಆಗಮಿಸುತ್ತಿದ್ದಂತೆ, ಎಂಎನ್‌ಎಸ್ ಕಾರ್ಯಕರ್ತರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿರುದ್ಧ ಪ್ರತಿಭಟಿಸಿ ಸಭಾಂಗಣಕ್ಕೆ ಮುತ್ತಿಗೆ ಹಾಕಿದರು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮತ್ತು ಹಲವಾರು MNS ಪ್ರತಿಭಟನಾಕಾರರನ್ನು ಬಂಧಿಸಿದರು

VISTARANEWS.COM


on

MNS v/s Shiv Sena
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಥಾಣೆ: ರಾಜ್‌ ಠಾಕ್ರೆಯವರ(Raj Thackeray) ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಕಾರ್ಯಕರ್ತರು ಉದ್ಧವ್ ಠಾಕ್ರೆ(Uddhav Thackeray) ಅವರ ಬೆಂಗಾವಲು ಪಡೆಯ ಮೇಲೆ ಶನಿವಾರ ದಾಳಿ ಮಾಡಿರುವ ಘಟನೆ ವರದಿಯಾಗಿದೆ. MNS ಕಾರ್ಯಕರ್ತರು ಬಳೆಗಳು, ಟೊಮೆಟೊಗಳು ಮತ್ತು ತೆಂಗಿನಕಾಯಿಗಳನ್ನು ಎಸೆದಿದ್ದು, ಉದ್ವಿಗ್ನ ಪರಿಸ್ಥಿತಿ(MNS v/s Shiv Sena) ಉಂಟಾಯಿತು. ಪರಿಣಾಮವಾಗಿ ಶಿವಸೇನೆ (ಯುಬಿಟಿ) ಮುಖ್ಯಸ್ಥರ ಬೆಂಗಾವಲು ಪಡೆಯ ವಾಹನಗಳಿಗೆ ಹಾನಿಯಾಗಿದೆ.

ರಂಗಾಯತನ್‌ ಬಳಿ ಈ ಘಟನೆ ನಡೆದಿದ್ದು, ಪಕ್ಷದ ಕಾರ್ಯಕರ್ತರ ಸಭೆ ಆಯೋಜನೆಗೊಂಡಿತ್ತು. ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಉದ್ಧವ್ ಠಾಕ್ರೆ ಮತನಾಡಲಿದ್ದರು. ಠಾಕ್ರೆ ಸ್ಥಳಕ್ಕೆ ಆಗಮಿಸುತ್ತಿದ್ದಂತೆ, ಎಂಎನ್‌ಎಸ್ ಕಾರ್ಯಕರ್ತರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿರುದ್ಧ ಪ್ರತಿಭಟಿಸಿ ಸಭಾಂಗಣಕ್ಕೆ ಮುತ್ತಿಗೆ ಹಾಕಿದರು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮತ್ತು ಹಲವಾರು MNS ಪ್ರತಿಭಟನಾಕಾರರನ್ನು ಬಂಧಿಸಿದರು

ಠಾಕ್ರೆಯವರ ಬೆಂಗಾವಲು ವಾಹನದ ಮೇಲಿನ ದಾಳಿಯು ಬೀಡ್‌ನಲ್ಲಿ ನಡೆದ ಇದೇ ರೀತಿಯ ಘಟನೆಗೆ ಪ್ರತೀಕಾರ ಎಂದು ವರದಿಯಾಗಿದೆ, ಅಲ್ಲಿ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ಅಡಿಕೆ ಮತ್ತು ಟೊಮೆಟೊಗಳಿಂದ ದಾಳಿ ಮಾಡಿದರು.

ಥಾಣೆಯ ಎಂಎನ್‌ಎಸ್‌ ಮುಖಂಡ ಅವಿನಾಶ್‌ ಜಾಧವ್‌, ನಮ್ಮ ಎಂಎನ್‌ಎಸ್‌ ಕಾರ್ಯಕರ್ತರು ತಕ್ಕ ಉತ್ತರ ನೀಡಿದ್ದಾರೆ. ನೀವು ವೀಳ್ಯದೆಲೆ ಎಸೆದಿದ್ದೀರಿ, ನಾವು ತೆಂಗಿನಕಾಯಿಯಿಂದ ದಾಳಿ ಮಾಡಿದ್ದೇವೆ. ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಸುಮಾರು 16 ರಿಂದ 17 ವಾಹನಗಳಿಗೆ ತೆಂಗಿನಕಾಯಿಯಿಂದ ಹಾನಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Uddhav Thackeray: ಉದ್ಧವ್ ಠಾಕ್ರೆ ಎನ್‌ಡಿಎಗೆ ವಾಪಸ್? ಇಂಡಿ ಒಕ್ಕೂಟದ ಸಭೆಗೆ ಹೋಗದ ಶಿವಸೇನೆ ನಾಯಕ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Bangladesh Unrest: ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ.

VISTARANEWS.COM


on

Bangladesh Unrest
Koo

ನವದೆಹಲಿ: ಶೇಖ್ ಹಸೀನಾ(Sheikh Hasina) ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ(Resignation) ನೀಡಿ ಭಾರತಕ್ಕೆ ಪಲಾಯನ ಮಾಡಿದ ನಂತರ ಬಾಂಗ್ಲಾದೇಶದ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿ(Bangladesh Unrest)ಯನ್ನು ವಿರೋಧಿಸಿ ಲಕ್ಷಾಂತರ ಹಿಂದೂಗಳು ಶನಿವಾರ ಬೀದಿಗಿಳಿದಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾ ಮತ್ತು ದೇಶದ ಎರಡನೇ ಅತಿದೊಡ್ಡ ನಗರವಾದ ಚಿತ್ತಗಾಂಗ್, ಬೃಹತ್ ರ್ಯಾಲಿಗಳಲ್ಲಿ ಲಕ್ಷಾಂತರ ಜನರು ಭಾಗಿಯಾದರು.

ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಆಗಸ್ಟ್ 5 ರಂದು Ms ಹಸೀನಾ ನೇತೃತ್ವದ ಸರ್ಕಾರ ಪತನದ ನಂತರ 52 ಜಿಲ್ಲೆಗಳಲ್ಲಿ 205 ಕ್ಕೂ ಹೆಚ್ಚು ದಾಳಿಯ ಘಟನೆಗಳನ್ನು ಎದುರಿಸಿದ್ದಾರೆ. ನೂರಾರು ಹಿಂದೂಗಳು ತಮ್ಮ ಮನೆಗಳು ಮತ್ತು ವ್ಯವಹಾರಗಳ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ನಂಬಲಾಗಿದೆ. ಹಲವಾರು ಹಿಂದೂ ದೇವಾಲಯಗಳನ್ನು ಸಹ ಧ್ವಂಸಗೊಳಿಸಲಾಗಿದೆ ಮತ್ತು Ms ಹಸೀನಾ ಅವರ ಅವಾಮಿ ಲೀಗ್ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಕನಿಷ್ಠ ಇಬ್ಬರು ಹಿಂದೂ ನಾಯಕರು ಹಿಂಸಾಚಾರದಲ್ಲಿ ಬಲಿಯಾಗಿದ್ದಾರೆ.

ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಬಾಂಗ್ಲಾದೇಶಿ ಹಿಂದೂಗಳು ನೆರೆಯ ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವವರ ವಿಚಾರಣೆಯನ್ನು ತ್ವರಿತಗೊಳಿಸಲು ವಿಶೇಷ ನ್ಯಾಯಮಂಡಳಿಗಳು, ಅಲ್ಪಸಂಖ್ಯಾತರಿಗೆ ಶೇಕಡಾ 10 ರಷ್ಟು ಸಂಸದೀಯ ಸ್ಥಾನಗಳನ್ನು ಹಂಚಿಕೆ ಮತ್ತು ಇತರರೊಂದಿಗೆ ಅಲ್ಪಸಂಖ್ಯಾತರ ರಕ್ಷಣೆಗಾಗಿ ಕಾನೂನು ಜಾರಿಗೆ ಒತ್ತಾಯಿಸಿ, ಹಿಂದೂಗಳು ರ್ಯಾಲಿ ನಡೆಸಿ ಉಗ್ರ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಮುಸ್ಲಿಂ ಪ್ರತಿಭಟನಾಕಾರರು ಅಲ್ಪಸಂಖ್ಯಾತರ ಪರವಾಗಿ ಒಗ್ಗಟ್ಟನ್ನು ವ್ಯಕ್ತಪಡಿಸಿದರು.

ಚಿತ್ತಗಾಂಗ್‌ನಲ್ಲಿ ಐತಿಹಾಸಿಕ ಚೆರಗಿ ಪಹಾರ್ ಚೌಕದಲ್ಲಿ ಬೃಹತ್ ಸಮಾವೇಶ ನಡೆಯಿತು. ಕೆಲವು ವರದಿಗಳ ಪ್ರಕಾರ, ಏಳು ಲಕ್ಷಕ್ಕೂ ಹೆಚ್ಚು ಜನರು ರ್ಯಾಲಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

US,UK ಗಳಲ್ಲೂ ಪ್ರೊಟೆಸ್ಟ್‌

ಇನ್ನು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಅಮೆರಿಕ ಮತ್ತು ಇಂಗ್ಲೆಂಡ್‌ನಲ್ಲೂ ಪ್ರತಿಭಟನೆ ನಡೆದಿದೆ. ವಾಷಿಂಗ್ಟನ್‌ ಮತ್ತು ಲಂಡನ್‌ನ ಬಿಬಿಸಿ ಪ್ರಧಾನ ಕಚೇರಿ ಎದುರು ಸಹಸ್ರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾಗಿ ಹಿಂದೂಗಳ ಮೇಲಿನ ದಾಳಿಗೆ ಖಂಡನೆ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರ ಮೇಲಿನ ದಾಳಿಯ ಕುರಿತು ಬಾಂಗ್ಲಾದೇಶದ ಹಂಗಾಮಿ ನಾಯಕ ಬಾಂಗ್ಲಾದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಪ್ರತಿಕ್ರಿಯಿಸಿದ್ದಾರೆ. ಶನಿವಾರ ಹಿಂಸಾಚಾರ ಪೀಡಿತ ರಾಷ್ಟ್ರದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ, ಅವರನ್ನು “ಹೇಯ ಕೃತ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

Continue Reading

ದೇಶ

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

Kejriwal Bungalow Case: ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

Kejriwal Bungalow Case
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ(Delhi CM) ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರ ಅಧಿಕೃತ ಮನೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ(Kejriwal Bungalow Case)ದಲ್ಲಿ ಮೂವರು ಇಂಜಿನಿಯರ್‌ಗಳನ್ನು ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ) ಅಮಾನತುಗೊಳಿಸಿದೆ. ಮೂವರು ಇಂಜಿನಿಯರ್‌ಗಳಾದ ಪ್ರದೀಪ್ ಕುಮಾರ್ ಪರ್ಮಾರ್, ಅಭಿಷೇಕ್ ರಾಜ್ ಮತ್ತು ಅಶೋಕ್ ಕುಮಾರ್ ರಾಜ್‌ದೇವ್ ಅವರು ಕೇಜ್ರಿವಾಲ್ ಅವರ ಬಂಗಲೆಯನ್ನು ನವೀಕರಿಸುವಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದು, ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅರವಿಂದ ಕೇಜ್ರಿವಾಲ್ ಅವರ ಸೂಚನೆಗಳ ಮೇರೆಗೆ ಬಂಗಲೆಯಲ್ಲಿ ಉನ್ನತ ಮಾರ್ಪಾಡುಗಳ ಹೆಸರಿನಲ್ಲಿ ನಿಯಮ ಉಲ್ಲಂಘನೆ ಮತ್ತು ವೆಚ್ಚವನ್ನು ಹೆಚ್ಚಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಲ್ವರನ್ನು ಅಮಾನತು ಮಾಡಲಾಗಿದೆ. ಪರ್ಮಾರ್ ಪ್ರಸ್ತುತ ಅಸ್ಸಾಂನ ಗುವಾಹಟಿಯಲ್ಲಿ ನಿಯೋಜನೆಗೊಂಡಿದ್ದಾರೆ, ರಾಜ್ ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಇಂಜಿನಿಯರ್‌ಗಳಿಗೆ ದೆಹಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಚಿವರು ಕೈಜೋಡಿಸಿದ್ದು, ಮತ್ತು ಸಿಎಂ ಬಂಗಲೆ ತುರ್ತಾಗಿ ನವೀಕರಣಗೊಳಿಸುವ ಅವಶ್ಯಕತೆ ಇದೆ ಎಂದು ಈ ಕಾರ್ಯಕ್ಕೆ ಕೈ ಹಾಕಿದ್ದರು. ಆದರೆ ಇಡೀ ದೇಶವೇ ಕೋವಿಡ್‌ ಎದುರಿಸುತ್ತಿದ್ದ ಸಂದರ್ಭದಲ್ಲಿ ಅಂತಹ ಯಾವುದೇ ಅವಶ್ಯಕತೆ ಇರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಹಣಕಾಸು ಇಲಾಖೆಯು ಹಣಕಾಸಿನ ನಿರ್ವಹಣೆ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಕುರಿತು ಆದೇಶಗಳನ್ನು ನೀಡುತ್ತಿರುವಾಗ, PWD ಸಚಿವರು ಹೊಸ ಬಂಗಲೆ ನಿರ್ಮಾಣದ ಪ್ರಸ್ತಾವನೆಯನ್ನು ಇಟ್ಟಿದ್ದರು ಎನ್ನಲಾಗಿದೆ.

ಪಿಡಬ್ಲ್ಯುಡಿ ಸಚಿವರ ನಿರ್ದೇಶನದ ಮೇರೆಗೆ ಹಳೆಯ ಕಟ್ಟಡವನ್ನು ಕೆಡವಿ ಹೊಸದನ್ನು ನಿರ್ಮಿಸುವುದು ಮತ್ತು ಅದರ ವೆಚ್ಚ ಹೆಚ್ಚಳ ಮಾಡಲಾಗಿದೆ. ಹೆಚ್ಚುವರಿ ಕಲಾತ್ಮಕ ಮತ್ತು ಅಲಂಕಾರಿಕ ಕೆಲಸಗಳು, ಅತ್ಯುತ್ತಮ ಗುಣಮಟ್ಟದ ಕಲ್ಲಿನ ನೆಲಹಾಸುಗಳು, ಉನ್ನತ ಮರದ ಬಾಗಿಲುಗಳು ಮತ್ತು ಸ್ವಯಂಚಾಲಿತ ಜಾರುವ ಗಾಜಿನ ಬಾಗಿಲುಗಳು ಮುಂತಾದ ಬದಲಾವಣೆಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ ಎನ್ನಲಾಗಿದೆ. ಈ ಪ್ರಕರಣವನ್ನು ಈಗಾಗಲೇ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ ಮತ್ತೊಂದು ಸಂಕಷ್ಟ; ಸ್ವಾತಿ ಮಾಲಿವಾಲ್‌ ಕೇಸ್‌ನಲ್ಲೂ ಸಿಎಂ ವಿರುದ್ಧ ಚಾರ್ಜ್‌ಶೀಟ್!

ಅಬಕಾರಿ ನೀತಿ ಹಗರಣದಲ್ಲಿ ತಿಹಾರ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯಸಭೆಯ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಭವ್‌ ಕುಮಾರ್‌ ವಿರುದ್ಧ ದೆಹಲಿ ಪೊಲೀಸರು (Delhi Police) ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರ ಹೆಸರನ್ನೂ ಪ್ರಸ್ತಾಪಿಸಲಾಗಿದೆ. ಇದು ಈಗ ಸಿಎಂಗೆ ಮತ್ತೊಂದು ಕಂಟಕವಾಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Continue Reading

ಪ್ರಮುಖ ಸುದ್ದಿ

Madhabi Puri Buch: ಅದಾನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಭಾಗಿ; ಯಾರಿವರು? ಹಿನ್ನೆಲೆ ಏನು?

Madhabi Puri Buch: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ಗೌತಮ್‌ ಅದಾನಿ ಕಂಪನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆಯೇ ಬಾಗಿಯಾಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹಾಗಾದರೆ, ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಯಾರು? ಅವರ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ.

VISTARANEWS.COM


on

Madhabi Puri Buch
Koo

ನವದೆಹಲಿ: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿದ ಬೆನ್ನಲ್ಲೇ ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ವಿದೇಶದಲ್ಲಿ ಗೌತಮ್‌ ಅದಾನಿ ಹೊಂದಿರುವ ಕಂಪನಿಗಳಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಅವರ ಪಾಲಿದೆ ಎಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ಈಗ ಮಾಧಬಿ ಪುರಿ ಬುಚ್‌ ಯಾರು? ಅವರ ಹಿನ್ನೆಲೆ ಏನು? ಎಂಬ ವಿಷಯ ಮುನ್ನೆಲೆಗೆ ಬಂದಿದೆ.

ಮಾಧಬಿ ಪುರಿ ಬುಚ್‌ ಯಾರು?

ಮಾಧಬಿ ಪುರಿ ಬುಚ್‌ ಅವರ ವೃತ್ತಿಜೀವನವು ಅಮೋಘ ಇತಿಹಾಸ ಹೊಂದಿದೆ. 1996ರಲ್ಲಿ ಮುಂಬೈನಲ್ಲಿ ಜನಿಸಿದ ಅವರು, ಗಣಿತ, ಹಣಕಾಸಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಹಾಗಾಗಿ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಅಹ್ಮದಾಬಾದ್‌ನಿಂದ ಎಂಬಿಎ ಪಡೆದಿದ್ದಾರೆ. 1989ರಲ್ಲಿ ಅವರು ಐಸಿಐಸಿಐ ಬ್ಯಾಂಕ್‌ ಸೇರುವ ಮೂಲಕ ಹಣಕಾಸು ಕ್ಷೇತ್ರದಲ್ಲಿ ವೃತ್ತಿ ಆರಂಭಿಸಿದರು.

ಚಾಣಾಕ್ಷತನಕ್ಕೆ ಹೆಸರಾಗಿರುವ ಮಾಧಬಿ ಪುರಿ ಬುಚ್‌ ಅವರು ಐಸಿಐಸಿಐ ಬ್ಯಾಂಕ್‌ನಲ್ಲಿ ಒಂದೊಂದೇ ಹುದ್ದೆಗಳನ್ನು ಏರುತ್ತ, 2009ರಲ್ಲಿ ಐಸಿಐಸಿಐ ಸೆಕ್ಯುರಿಟೀಸ್‌ನ ಎಂಡಿ ಹಾಗೂ ಸಿಇಒ ಆದರು. ಐಸಿಐಸಿಐ ತೊರೆದ ಅವರು ಶಾಂಘೈನಲ್ಲಿರುವ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ನ ಕನ್ಸಲ್ಟಂಟ್‌ ಆಗಿ ನೇಮಕಗೊಂಡರು. ಇದಾದ ಬಳಿಕವೇ ಅವರಿಗೆ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಸಂಪರ್ಕ ಬೆಳೆದವು ಎಂದು ಹೇಳಲಾಗುತ್ತಿದೆ. ನಂತರ ಭಾರತಕ್ಕೆ ಬಂದ ಅವರು 2022ರಲ್ಲಿ ಸೆಬಿ ಅಧ್ಯಕ್ಷೆಯಾಗಿಯೂ ನೇಮಕಗೊಂಡರು. ಆ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಗೆ ಮುಖ್ಯಸ್ಥೆಯಾದ ಮೊದಲ ಮಹಿಳೆ ಎನಿಸಿದರು. ಈಗ ಅವರ ವಿರುದ್ಧವೇ ಹಗರಣದ ಆರೋಪ ಕೇಳಿಬಂದಿದೆ.

ಹೊಸ ವರದಿಯಲ್ಲಿ ಏನಿದೆ?

ಅದಾನಿ ಗ್ರೂಪ್‌ ವಿದೇಶದಲ್ಲಿ ಹೊಂದಿರುವ ಕಂಪನಿಗಳ ಹಗರಣಗಳಲ್ಲಿ ಸೆಬಿ ಅಧ್ಯಕ್ಷೆಯಾಗಿರುವ ಮಾಧಬಿ ಪುರಿ ಬುಚ್‌ ಹಾಗೂ ಅವರ ಪತಿ ಧವಳ್‌ ಬುಚ್‌ ಅವರ ಪಾಲೂ ಇದೆ. ಕಂಪನಿಗಳಲ್ಲೂ ಇವರು ಷೇರುಗಳನ್ನು ಹೊಂದಿದ್ದಾರೆ. ವಿದೇಶದಲ್ಲಿ ಕಂಪನಿಗಳಿಂದ ಅಕ್ರಮವಾಗಿ ಪಡೆದುಕೊಂಡ ಹಣದಲ್ಲಿ ಇವರದ್ದೂ ಪಾಲಿದೆ. ಬರ್ಮುಡಾ ಹಾಗೂ ಮಾರಿಷಸ್‌ ಫಂಡ್‌ಗಳಲ್ಲಿ ಮಾಧಬಿ ಪುರಿ ಬುಚ್‌ ಹಾಗೂ ಧವಳ್‌ ಬುಚ್‌ ಅವರ ಪಾಲು ಇದೆ ಎಂಬುದಾಗಿ ಹಿಂಡನ್‌ಬರ್ಗ್‌ ಸಂಸ್ಥೆಯು ಸ್ಫೋಟಕ ವರದಿ ಬಯಲು ಮಾಡಿದೆ.

ಮಾಧಬಿ ಪುರಿ ಬುಚ್‌ ಅವರು 2015ರಿಂದಲೂ ಗೌತಮ್‌ ಅದಾನಿ ಕಂಪನಿಗಳಲ್ಲಿ ತಮ್ಮ ವೈಯಕ್ತಿಕ ಹಣವನ್ನು ಹೂಡಿಕೆ ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ಗೌತಮ್‌ ಅದಾನಿ ಸಹೋದರ ವಿನೋದ್‌ ಅದಾನಿ ಅವರು ಭಾರತದ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳಿಂದ ಸೈಫೊನಿಂಗ್‌ (ಕಂಪನಿಗಳಿಂದ ಅಕ್ರಮವಾಗಿ ಹಣ ಪಡೆಯುವುದು) ಮೂಲಕ ಹಣ ಪಡೆದಿದ್ದಾರೆ. ಇದರಲ್ಲಿ ಮಾಧಬಿ ಪುರಿ ಬುಚ್‌ ಅವರ ಪಾಲೂ ಇದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: Hindenburg: ಅದಾನಿ ವಿದೇಶಿ ಕಂಪನಿಯಲ್ಲಿ ಸೆಬಿ ಅಧ್ಯಕ್ಷೆಯದ್ದೂ ಪಾಲು; ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ

Continue Reading

ದೇಶ

Natwar Singh: ವಿದೇಶಾಂಗ ವ್ಯವಹಾರಗಳ ಖಾತೆ ಮಾಜಿ ಸಚಿವ ನಟ್ವರ್‌ ಸಿಂಗ್‌ ನಿಧನ; ಗಣ್ಯರ ಸಂತಾಪ

Natwar Singh: ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ (Medanta Hospital) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಟ್ವರ್‌ ಸಿಂಗ್‌ ಅವರು ಹಲವು ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

VISTARANEWS.COM


on

natwar singh
Koo

ಗುರುಗ್ರಾಮ: ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್‌ ಹಿರಿಯ ನಾಯಕ ಕೆ. ನಟ್ವರ್‌ ಸಿಂಗ್‌ (Natwar Singh) (95) ಅವರು ನಿಧನರಾಗಿದ್ದಾರೆ. ಸುದೀರ್ಘ ಅವಧಿಯಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ (Medanta Hospital) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಟ್ವರ್‌ ಸಿಂಗ್‌ ಅವರು ಹಲವು ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಜೀವನದ ಕೊನೆಯ ಕ್ಷಣಗಳಲ್ಲಿ ಪುತ್ರ, ಶಾಸಕರೂ ಆಗಿರುವ ಜಗತ್‌ ಸಿಂಗ್‌ ಸೇರಿ ಹಲವು ಕುಟುಂಬಸ್ಥರು ಇದ್ದರು ಎಂದು ತಿಳಿದುಬಂದಿದೆ.

ಭಾರತೀಯ ವಿದೇಶಾಂಗ ಸೇವೆಗಳ ಅಧಿಕಾರಿಯಾಗಿ ಭಾರತದ ರಾಜತಾಂತ್ರಿಕತೆಗೆ ಅಪಾರ ಕೊಡುಗೆ ನೀಡಿದ ಅವರು ವಿದೇಶಾಂಗ ವ್ಯವಹಾರಗಳ ಸಚಿವರಾಗಿಯೂ ಹೆಚ್ಚಿನ ಸೇವೆ ಸಲ್ಲಿಸಿದ್ದಾರೆ. ನಟ್ವರ್‌ ಸಿಂಗ್‌ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಸ್ನೇಹ, ಸಂಬಂಧ ಮೂಡಲು ಎರಡೂ ದೇಶಗಳು ಏಕರೂಪದ ವಿದೇಶಾಂಗ ನೀತಿಯನ್ನು ಹೊಂದಿರಬೇಕು ಎಂಬುದು ಅವರ ಅಭಿಪ್ರಾಯವಾಗಿತ್ತು. ದೇಶಕ್ಕೆ ಹಲವು ರೀತಿಯಲ್ಲಿ ಸೇವೆ ಸಲ್ಲಿಸಿದ ನಟ್ವರ್‌ ಸಿಂಗ್‌ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಜಗ್ಹೀನಾ ಗ್ರಾಮದಲ್ಲಿ 1929ರ ಮೇ 16ರಂದು ಜನಿಸಿದ ಅವರು ಗೋವಿಂಗ್‌ ಸಿಂಗ್‌ ಅವರ ಪ್ರಯಾಗ್‌ ಕೌರ್‌ ದಂಪತಿಯ ನಾಲ್ಕನೇ ಪುತ್ರ. ಅಜ್ಮೇರ್‌ ಹಾಗೂ ಗ್ವಾಲಿಯರ್‌ನಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಮುಗಿಸಿದ ಅವರು, ದೆಹಲಿಯ ಸೇಂಟ್‌ ಸ್ಟೀಫನ್ಸ್‌ ಕಾಲೇಜಿನಲ್ಲಿ ಪದವಿ ಪಡೆದರು. ಕೆಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಅವರು ಉನ್ನತ ಶಿಕ್ಷಣ ಪಡೆದರು.

ವಿದೇಶಾಂಗ ಸೇವೆಗಳಲ್ಲಿ ಅತೀವ ಆಸಕ್ತಿ ಹೊಂದಿದ್ದ ಅವರು 1953ರಲ್ಲಿ ಭಾರತೀಯ ವಿದೇಶಾಂಗ ಸೇವೆ (IFS) ಸೇರಿದರು. ಚೀನಾ, ನ್ಯೂಯಾರ್ಕ್‌, ಪೋಲ್ಯಾಂಡ್‌, ಇಂಗ್ಲೆಂಡ್‌, ಪಾಕಿಸ್ತಾನ, ಜಮೈಕಾ ಹಾಗೂ ಜಂಬಿಯಾದಲ್ಲಿ ಅವರು ಭಾರತದ ಪರವಾಗಿ ಹಲವು ರೀತಿಯಲ್ಲಿ ಕಾರ್ಯನಿರ್ವಹಿಸಿದರು. 1984ರಲ್ಲಿ ಐಎಫ್‌ಎಸ್‌ ತೊರೆದ ಅವರು ಕಾಂಗ್ರೆಸ್‌ ಸೇರಿದರು. ಇದೇ ವರ್ಷ ಲೋಕಸಭೆ ಪ್ರವೇಶಿಸಿದ ಅವರು 1986ರಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಹಾಯಕ ಸಚಿವರಾದರು.

1991ರಲ್ಲಿ ಕಾಂಗ್ರೆಸ್‌ ತೊರೆದ ಅವರು ಎನ್‌.ಡಿ.ತಿವಾರಿ ಹಾಗೂ ಅರ್ಜುನ್‌ ಸಿಂಗ್‌ ಅವರ ಜತೆಗೂಡಿ ಕಾಂಗ್ರೆಸ್‌ ತೊರೆದು, ಆಲ್‌ ಇಂಡಿಯಾ ಇಂದಿರಾ ಕಾಂಗ್ರೆಸ್‌ ಎಂಬ ಪಕ್ಷ ಸ್ಥಾಪಿಸಿದರು. 1998ರಲ್ಲಿ ಕಾಂಗ್ರೆಸ್‌ಗೆ ಮರಳಿದ ಅವರು 1998ರಲ್ಲಿ ಭರತ್‌ಪುರ ಲೋಕಸಭೆ ಕ್ಷೇತ್ರದಲ್ಲಿ ಗೆದ್ದು ಸಂಸತ್‌ ಪ್ರವೇಶಿಸಿದರು. 2002ರಲ್ಲಿ ರಾಜ್ಯಸಭೆ ಪ್ರವೇಶಿಸಿದ ಅವರು 2004ರಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವರಾದರು.

ಇದನ್ನೂ ಓದಿ: Yamini Krishnamurthy: ಪದ್ಮವಿಭೂಷಣ ಪುರಸ್ಕೃತ ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಇನ್ನಿಲ್ಲ

Continue Reading
Advertisement
Police Firing
ಕ್ರೈಂ10 mins ago

Police Firing: ಪೊಲೀಸರ ಮೇಲೆ ದಾಳಿ ನಡೆಸಿದ ರೌಡಿ ಕಾಲಿಗೆ ಗುಂಡೇಟು

Bangladesh Unrest
ವಿದೇಶ11 mins ago

Bangladesh Unrest: ಹಿಂದೂಗಳ ಮೇಲಿನ ದಾಳಿ ಖಂಡಿಸಿ ಬಾಂಗ್ಲಾದೇಶದಲ್ಲಿ ಭಾರೀ ಪ್ರತಿಭಟನೆ; ಅಮೆರಿಕ, ಯುಕೆಯಲ್ಲೂ ಧರಣಿ

Tharun Sudhir wedding live video is here
ಸ್ಯಾಂಡಲ್ ವುಡ್32 mins ago

Tharun Sudhir: ತರುಣ್ ಸುಧೀರ್-ಸೋನಲ್ ಮದುವೆ ಸಂಭ್ರಮದ ಲೈವ್‌ ವಿಡಿಯೊ ಇಲ್ಲಿದೆ ನೋಡಿ!

Shiva Rajkumar Bhairathi Ranagal Title Song Geetha SRK
ಸ್ಯಾಂಡಲ್ ವುಡ್49 mins ago

Shiva Rajkumar: ʻಭೈರತಿ ರಣಗಲ್ʼ ಟೈಟಲ್ ಸಾಂಗ್ ಔಟ್‌; ಸೆಪ್ಟೆಂಬರ್‌ನಲ್ಲಿ ತೆರೆಗೆ!

Women’s T20 World Cup
ಕ್ರೀಡೆ55 mins ago

Women’s T20 World Cup: ವಿಶ್ವಕಪ್​ ನಡೆಸಲು ಸೇನೆಯ ನೆರವು ಕೇಳಿದ ಬಾಂಗ್ಲಾ ಕ್ರಿಕೆಟ್​ ಮಂಡಳಿ

Jr NTR luxury watch at Hyderabad event
South Cinema1 hour ago

Jr NTR: ಸಿನಿಮಾ ಮುಹೂರ್ತದಲ್ಲಿ ಜ್ಯೂ. ಎನ್​ಟಿಆರ್ ಧರಿಸಿದ ವಾಚ್ ಬೆಲೆ ಕೇಳಿದರೆ ನೀವು ಬೆರಗಾಗೋದು ಖಚಿತ​!

Police Firing
ಕ್ರೈಂ1 hour ago

Police Firing: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆಯೇ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್‌

Kejriwal Bungalow Case
ದೇಶ1 hour ago

Kejriwal Bungalow Case: ಕೇಜ್ರಿವಾಲ್‌ ಬಂಗಲೆ ನವೀಕರಣ ಅಕ್ರಮ; ಮೂವರು ಇಂಜಿನಿಯರ್‌ಗಳು ಸಸ್ಪೆಂಡ್‌

ಕ್ರೀಡೆ1 hour ago

Paris Olympics: ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ​ಒಲಿಂಪಿಕ್ಸ್​ ಪದಕ!

Cyber Crime
ಕ್ರೈಂ2 hours ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌