ವಿಸ್ತಾರ TOP 10 NEWS : ದಕ್ಷಿಣ ಕರ್ನಾಟಕದಲ್ಲಿ ಮೋದಿ ಅಬ್ಬರ, ಕಾಂಗ್ರೆಸ್​ 6ನೇ ಗ್ಯಾರಂಟಿ ಇತ್ಯಾದಿ ಪ್ರಮುಖ ಸುದ್ದಿಗಳಿವು - Vistara News

ದೇಶ

ವಿಸ್ತಾರ TOP 10 NEWS : ದಕ್ಷಿಣ ಕರ್ನಾಟಕದಲ್ಲಿ ಮೋದಿ ಅಬ್ಬರ, ಕಾಂಗ್ರೆಸ್​ 6ನೇ ಗ್ಯಾರಂಟಿ ಇತ್ಯಾದಿ ಪ್ರಮುಖ ಸುದ್ದಿಗಳಿವು

VIstara TOP 10 News : ರಾಜ್ಯದ ಚುನಾವಣೆ ಕಣದಲ್ಲಿ ಅಬ್ಬರ ಜೋರಾಗಿದೆ. ಇದೂ ಸೇರಿದಂತೆ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಪ್ರಮುಖ ಘಟನಾವಳಿಗಳ ಗುಚ್ಛವೇ ವಿಸ್ತಾರ TOP 10 NEWS

VISTARANEWS.COM


on

modis-outburst-in-south-karnataka-congresss-6th-guarantee-etc
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಮೈಸೂರು, ಹಾಸನ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮೋದಿ ಮೇನಿಯಾ
ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ ಪ್ರಚಾರದ ರಂಗು ಜೋರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ರಾಮನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ಮತ್ತು ರೋಡ್​ಶೋ ಕೈಗೊಂಡರು. ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್​ನ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು ಸುಸ್ಥಿರ ಸರಕಾರ ಹಾಗೂ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಕೇಳಿಕೊಂಡರು. ಮೋದಿ ಪ್ರಚಾರದ ಪ್ರಮುಖ ಸುದ್ದಿಗಳು ಇಲ್ಲಿವೆ.
1. ಭ್ರಷ್ಟಾಚಾರ ವಿರುದ್ಧ ಹೋರಾಡುತ್ತಿರುವ ನನಗೆ ಕಾಂಗ್ರೆಸ್ ಧಮ್ಕಿ ಹಾಕುತ್ತಿದೆ; ಪ್ರಧಾನಿ ನರೇಂದ್ರ ಮೋದಿ
2. Karnataka Election 2023: ಶೀಘ್ರವೇ ನನಗೆ ಬೈಯುವುದರಲ್ಲಿ ಕಾಂಗ್ರೆಸಿಗರು ಶತಕ ಬಾರಿಸಲಿದ್ದಾರೆ; ಪ್ರಧಾನಿ ಮೋದಿ
3. ಕಾಂಗ್ರೆಸ್, ಜೆಡಿಎಸ್‌ನದ್ದು ತುಷ್ಟೀಕರಣದ ನೀತಿ; ಬಿಜೆಪಿಯದ್ದು ಸಂತುಷ್ಟೀಕರಣದ ರಾಜನೀತಿ ಎಂದ ಮೋದಿ
4. Modi In Karnataka: ಮೈಸೂರಿನಲ್ಲಿ ಮೋದಿ ರೋಡ್‌ ಶೋ ಮ್ಯಾಜಿಕ್‌; ಜನಸ್ತೋಮದಿಂದ ಪುಷ್ಪವೃಷ್ಟಿ

2. ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ; ಇದು ಕಾಂಗ್ರೆಸ್‌ 6ನೇ ಗ್ಯಾರಂಟಿ
ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಕೆ, ಪದವೀಧರರಿಗೆ ಮಾಸಿಕ 3 ಸಾವಿರ ರೂ. ನಿರುದ್ಯೋಗ ಭತ್ಯೆ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿ ಹಲವು ಉಚಿತ ಭರವಸೆಗಳ ಗ್ಯಾರಂಟಿ ಮೂಲಕ ರಾಜ್ಯದ ಜನರ ಮತ (Congress Guarantee) ಸೆಳೆಯಲು ಮುಂದಾಗಿರುವ ಕಾಂಗ್ರೆಸ್‌ ಆರನೇ ಗ್ಯಾರಂಟಿ ಘೋಷಣೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ., ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ 5 ಸಾವಿರ ರೂ. ವೇತನ ನೀಡುವುದಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಘೋಷಿಸಿದ್ದಾರೆ. ಇದು ಕಾಂಗ್ರೆಸ್‌ನ ಆರನೇ ಗ್ಯಾರಂಟಿಯಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
1. ಲೂಟಿ ಸರ್ಕಾರ ಬಿಡಿ, ಪ್ರಾಮಾಣಿಕ ಕಾಂಗ್ರೆಸ್‌ಗೆ ಅಧಿಕಾರ ಕೊಡಿ: ಪ್ರಿಯಾಂಕಾ ಗಾಂಧಿ
2. ಗಾಳಿಗೂ ಮೋದಿ ಜಿಎಸ್‌ಟಿ ವಿಧಿಸಿದರೆ ಅಚ್ಚರಿ ಇಲ್ಲ: ಖರ್ಗೆ ವಾಗ್ದಾಳಿ

3. ಮೇ 10ಕ್ಕೆ ಕುಮಾರಸ್ವಾಮಿಯನ್ನು ಗೆಲ್ಲಿಸಿ, 13ಕ್ಕೆ ಸಿಎಂ ಆಗ್ತಾರೆ: ಎಚ್‌.ಡಿ. ದೇವೇಗೌಡ
ರಾಜ್ಯದಲ್ಲಿ ಬಡವರ ಪರ ಇರುವ ರಾಜಕಾರಣಿ ಎಂದರೆ ಅದುವೇ ಎಚ್.ಡಿ. ಕುಮಾರಸ್ವಾಮಿ. ಹಾಗಾಗಿ ಅವರಿಗೆ ಈ ಬಾರಿ ನೀವು ಆರ್ಶೀವಾದ ಮಾಡಬೇಕು. ಅವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಚನ್ನಪಟ್ಟಣಕ್ಕೆ ಅವರು ಬರಲು ಸಾಧ್ಯವಾಗಲ್ಲ. ಅವರ ಪರವಾಗಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕಿದೆ. ಚನ್ನಪಟ್ಟಣ ನಮಗೆ ಕರ್ಮಭೂಮಿ‌ಯಾಗಿದೆ. ಮೇ 10 ರಂದು ನಡೆಯುವ ಚುನಾವಣೆಯಲ್ಲಿ (Karnataka Election 2023) ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ, ಮೇ 13ಕ್ಕೆ ಅವರು ಸಿಎಂ ಆಗುತ್ತಾರೆ. ಹಾಗಾಗಿ ಎಲ್ಲರೂ ಕುಮಾರಸ್ವಾಮಿ ಪರವಾಗಿ ಕೆಲಸ ಮಾಡಿ ಎಂದು ಎಚ್.ಡಿ. ದೇವೇಗೌಡ ಅವರು ಕರೆ ನೀಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

4. ದಿಲ್ಲಿಗೆ ಬಂದ ಬಳಿಕ ಜನರಿಗೆ ಹತ್ತಿರವಾಗಲು ನೆರವಾಗಿದ್ದು ಮನ್‌ ಕೀ ಬಾತ್:‌ ಪ್ರಧಾನಿ ಮೋದಿ
ನನ್ನ ಪ್ರೀತಿಯ ದೇಶವಾಸಿಗಳೇ, ನಿಮಗೆ ನಮಸ್ಕಾರ, ನನಗೆ ಜನರ ಸಾವಿರಾರು ಪತ್ರಗಳು ಬಂದಿವೆ. ಲಕ್ಷಾಂತರ ಸಂದೇಶಗಳನ್ನು ಓದಿ ಹಲವು ಸಲ ಭಾವುಕನಾಗಿದ್ದೇನೆ. ಮನಸ್ಸು ಭಾವನೆಗಳಿಂದ ತುಂಬಿದಾಗ ನನ್ನನ್ನು ನಾನೇ ಸಂಭಾಳಿಸಿದ್ದೇನೆ. ಮನ್‌ ಕೀ ಬಾತ್‌ ಕೋಟ್ಯಂತರ ಭಾರತೀಯರ ಭಾವನೆಯಾಗಿದೆ. 2014ರ ಅಕ್ಟೋಬರ್‌ 3ರ ವಿಜಯ ದಶಮಿಯಂದು ಮನ್‌ ಕೀ ಬಾತ್‌ ಆರಂಭವಾಗಿತ್ತು. (Mann Ki Baat ) ಇದು ದೇಶದ ಜನತೆಯ ಸಕಾರಾತ್ಮಕ ಭಾವೆನಗಳನ್ನು ಅಭಿವ್ಯಕ್ತಪಡಿಸುವ ಹಬ್ಬವಾಗಿದೆ. ಪ್ರತಿ ತಿಂಗಳೂ ಇದು ಬರುತ್ತದೆ. ಹೀಗೆಂದು ಪ್ರಧಾನಿ ಮೋದಿ ಅವರು 100ನೇ ಮನ್‌ ಕೀ ಬಾತ್‌ ಅನ್ನು ಆರಂಭಿಸಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ಕಾಂಗ್ರೆಸ್‌ ಪೇಯ್ಡ್‌ ಎಂಜಿನ್‌ ಬಿಡಿ, ಬಿಜೆಪಿ ಡಬಲ್ ಎಂಜಿನ್ ಕೈಹಿಡಿಯಿರಿ: ಯೋಗಿ ಆದಿತ್ಯನಾಥ ಕರೆ
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ತುಷ್ಟೀಕರಣ ಮಾಡುತ್ತಿದೆ. ಕರ್ನಾಟಕವನ್ನು ಸಂಕಷ್ಟಕ್ಕೀಡು ಮಾಡಿದೆ. ನಮ್ಮ ಡಬಲ್ ಎಂಜಿನ್ ಸರ್ಕಾರದಿಂದ ಸಶಕ್ತೀಕರಣಕ್ಕೆ ನಮ್ಮ ಅಭಿಯಾನ ನಡೆದಿದೆ. ಯುವ ಕಲ್ಯಾಣ, ಕೃಷಿ ಕಲ್ಯಾಣ, ಗ್ರಾಮೀಣ ಕಲ್ಯಾಣ, ನಗರ ಕಲ್ಯಾಣ ನಡೆದಿದೆ. ಈ ಚುನಾವಣೆಯಲ್ಲಿ (Karnataka Election 2023) ಕಾಂಗ್ರೆಸ್‌ ಪೇಯ್ಡ್‌ ಎಂಜಿನ್‌ ಕೈ ಬಿಟ್ಟು, ನಮ್ಮ ಡಬಲ್ ಎಂಜಿನ್ ಸರ್ಕಾರವನ್ನು ತನ್ನಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಹೇಳಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

6.ಸುಡಾನ್‌ನಲ್ಲಿ ಸಿಲುಕಿದ್ದ ಹಕ್ಕಿಪಿಕ್ಕಿ ಜನಾಂಗ‌ದವರು ವಾಪಸ್‌; ಕೇಂದ್ರ ಸರ್ಕಾರಕ್ಕೆ ಧನ್ಯವಾದ
ಆಯುರ್ವೇದಿಕ್ ಔಷಧಿ ಮಾರಾಟ ಮಾಡಲು ಹೋಗಿ ದಕ್ಷಿಣ ಆಫ್ರಿಕಾದ ಸುಡಾನ್ ನಗರದಲ್ಲಿ ಸಿಲುಕಿದ್ದ ಹಕ್ಕಿಪಿಕ್ಕಿ ಜನಾಂಗ‌ದವರು (Operation Kaveri) ರಾಜ್ಯಕ್ಕೆ ವಾಪಸ್‌ ಆಗಿದ್ದಾರೆ. ಸುಡಾನ್ ನಗರದಿಂದ ವಿಮಾನ ನಿಲ್ದಾಣದವರೆಗೂ ತೆರಳಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

7. ಜೆಡಿಎಸ್‌ ಅಭ್ಯರ್ಥಿಗೆ ಆಮಿಷವೊಡ್ಡಿದ್ದ ಸೋಮಣ್ಣ ವಿರುದ್ಧ FIR; ಸ್ಪರ್ಧೆಯಿಂದ ಅನರ್ಹ ಭೀತಿ
ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಲೂರು ಮಲ್ಲು (Aluru Mallu) ಅವರಿಗೆ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ (V Somanna) ಅವರು ಕರೆ ಮಾಡಿ ಈ ಚುನಾವಣೆಗೆ (Karnataka Election 2023) ಸಲ್ಲಿಸಿರುವ ನಾಮಪತ್ರವನ್ನು ವಾಪಸ್‌ ಪಡೆಯಲು 50 ಲಕ್ಷ ರೂಪಾಯಿ ಹಣ ನೀಡುವ ಆಮಿಷವೊಡ್ಡಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಸೋಮಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

8. ಲುಧಿಯಾನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಪಂಜಾಬ್​​ನ ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿರುವ ಒಂದು ಕಾರ್ಖಾನೆಯಲ್ಲಿ ಅನಿಲ ಸೋರಿಕೆ (Ludhiana Gas Leak) ಉಂಟಾಗಿ 11 ಮಂದಿ ಮೃತಪಟ್ಟಿದ್ದಾರೆ. ಪ್ರಾರಂಭದಲ್ಲಿ ಈ ಸಂಖ್ಯೆ 9 ಇತ್ತು. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹಲವರು ಅಸ್ವಸ್ಥರಾಗಿದ್ದು ಅವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ವಿಷಾನಿಲಯ ಸೋರಿಕೆಯಾಗಿರುವ ಕಾರ್ಖಾನೆಗೆ ಎನ್​ಡಿಆರ್​ಎಫ್​ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ), ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತಪಟ್ಟವರಲ್ಲಿ 13 ಮತ್ತು 11 ವರ್ಷದ ಇಬ್ಬರು ಬಾಲಕರೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

9. ಲಾಸ್ಟ್​ ಬಾಲ್​ ಥ್ರಿಲ್​, ಚೆನ್ನೈ ವಿರುದ್ಧ ಪಂಜಾಬ್​ ತಂಡಕ್ಕೆ 4 ವಿಕೆಟ್​ ವಿಜಯ
ಅತ್ಯಂತ ರೋಚಕವಾಗಿ ನಡೆದ ನಡೆದ ಐಪಿಎಲ್​ 16ನೇ ಆವೃತ್ತಿಯ (IPL 2023) 41ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡ 4 ವಿಕೆಟ್​ ವಿಜಯ ಸಾಧಿಸಿದೆ. ಕೊನೇ ಎಸೆತದಲ್ಲಿ ಗೆಲುವಿಗೆ ಬೇಕಾಗಿದ್ದ ಮೂರು ರನ್​ಗಳನ್ನು ಬಾರಿಸಿದ ಪಂಜಾಬ್ ತಂಡ ವಿಜಯೋತ್ಸವ ಆಚರಿಸಿದರೆ, ತವರಿನ ಪ್ರೇಕ್ಷಕರ ಮುಂದೆ ಚೆನ್ನೈ ತಂಡಕ್ಕೆ ತೀವ್ರ ನಿರಾಸೆ ಉಂಟಾಯಿತು. ಇದು ಕೂಡ ಹಾಲಿ ಆವೃತ್ತಿಯ ಮತ್ತೊಂದು ಲಾಸ್ಟ್​ ಬಾಲ್​ ಥ್ರಿಲ್​ ಪಂದ್ಯ ಎನಿಸಿಕೊಂಡಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

10.ಚೆನ್ನೈ ಏರ್​ಪೋರ್ಟ್​ಗೆ ಬಂದಿಳಿದ ಮಹಿಳೆಯ ಬ್ಯಾಗ್​​ನಲ್ಲಿ 22 ಹಾವುಗಳು, ಒಂದು ಗೋಸುಂಬೆ
ಮಲೇಷ್ಯಾದಿಂದ ಚೆನ್ನೈ ಏರ್​ಪೋರ್ಟ್​ಗೆ (Chennai Airport) ಬಂದಿಳಿದ ಮಹಿಳೆಯ ಬ್ಯಾಗ್​​ನಲ್ಲಿ 22 ಹಾವುಗಳು, ಒಂದು ಗೋಸುಂಬೆ ಪತ್ತೆಯಾಗಿದೆ. ಚೆನ್ನೈ ಏರ್​ಪೋರ್ಟ್​ನಲ್ಲಿ ಭದ್ರತಾ ಸಿಬ್ಬಂದಿ ಕೈಯಲ್ಲಿ ಆಕೆ ಸಿಕ್ಕಿಬಿದ್ದಿದ್ದಾಳೆ. ಹಾವುಗಳು ನೆಲದ ಮೇಲೆ ಹರಿದಾಡುತ್ತಿರುವ, ಭದ್ರತಾ ಸಿಬ್ಬಂದಿ ಹಾವುಗಳನ್ನು ಕೈಯಲ್ಲಿ ಹಿಡಿದಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಲೇಷ್ಯಾದ ಕೌಲಾಲಂಪುರ್​​ದಿಂದ ಆಕೆ ಚೆನ್ನೈಗೆ ಫ್ಲೈಟ್​ ನಂಬರ್​ ಎಕೆ13ನಲ್ಲಿ ಬಂದಿಳಿದಿದ್ದಳು. ಚೆನ್ನೈನಲ್ಲಿ ಆಕೆಯ ಬ್ಯಾಗ್​​ನ್ನು ಕಸ್ಟಮ್ಸ್​ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. 22 ವಿವಿಧ ಪ್ರಬೇಧಗಳ ಹಾವುಗಳು, ಒಂದು ಗೋಸುಂಬೆ ಪತ್ತೆಯಾಗಿದೆ. ಆ ಮಹಿಳೆಯನ್ನು ಸದ್ಯ ಅರೆಸ್ಟ್ ಮಾಡಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಅವಳನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Reserve Bank of India : ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

VISTARANEWS.COM


on

Reserve Bank of India
Koo

ನವದೆಹಲಿ: ಬ್ಯಾಂಕುಗಳಲ್ಲಿ ಯಾರೂ ಕ್ಲೈಮ್ ಮಾಡದ (ವಾಪಸ್ ಪಡೆಯದ) ಠೇವಣಿಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26ರಷ್ಟು ಏರಿಕೆ ಕಂಡು 2024 ರ ಮಾರ್ಚ್ ಅಂತ್ಯದ ವೇಳೆಗೆ 78,213 ಕೋಟಿ ರೂ.ಗೆ ತಲುಪಿದೆ ಎಂದು ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾ (Reserve Bank of India) ವಾರ್ಷಿಕ ವರದಿ ತಿಳಿಸಿದೆ. ಅದೇ ರೀತಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಯು ಮಾರ್ಚ್ 2023 ರ ಅಂತ್ಯದ ವೇಳೆಗೆ 62,225 ಕೋಟಿ ರೂಪಾಯಿಗೆ ಏರಿದೆ ಎಂದು ಅದು ಹೇಳಿದೆ.

ಸಹಕಾರಿ ಬ್ಯಾಂಕುಗಳು ಸೇರಿದಂತೆ ಬ್ಯಾಂಕುಗಳು ತಮ್ಮ ಖಾತೆಗಳಲ್ಲಿ 10 ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳವರೆಗೆ ಯಾರೂ ಕ್ಲೇಮ್ ಮಾಡದೇ ಇರುವ ಖಾತೆಯಲ್ಲಿನ ದುಡ್ಡನ್ನು ಆರ್​ಬಿಯ ಠೇವಣಿ ಶಿಕ್ಷಣ ಮತ್ತು ಜಾಗೃತಿ (ಡಿಇಎ) ನಿಧಿಗೆ ವರ್ಗಾಯಿಸುತ್ತವೆ.

ಖಾತೆದಾರರಿಗೆ ಸಹಾಯ ಮಾಡುವ ಕ್ರಮವಾಗಿ ಮತ್ತು ನಿಷ್ಕ್ರಿಯ ಖಾತೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಈ ವರ್ಷದ ಆರಂಭದಲ್ಲಿ ಖಾತೆಗಳು ಮತ್ತು ಠೇವಣಿಗಳನ್ನು ನಿಷ್ಕ್ರಿಯ ಖಾತೆಗಳು ಮತ್ತು ಕ್ಲೈಮ್ ಮಾಡದ ಠೇವಣಿಗಳು ಎಂದು ವರ್ಗೀಕರಿಸಲು ಬ್ಯಾಂಕುಗಳು ಜಾರಿಗೆ ತರಬೇಕಾದ ಕ್ರಮಗಳ ಬಗ್ಗೆ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದನ್ನು ಸಂದರ್ಭಕ್ಕೆ ತಕ್ಕಂತೆ ಅನುಸರಿಬಹುದಾಗಿದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಖಾತೆಗಳ ನಿಯಮಿತ ಪರಿಶೀಲನೆ, ಅಂಥ ಖಾತೆಗಳ ಮೂಲಕ ವಂಚನೆ ತಡೆಗಟ್ಟುವ ಕ್ರಮಗಳು, ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕುಂದುಕೊರತೆ ಪರಿಹಾರ ಕಾರ್ಯವಿಧಾನ, ಖಾತೆಗಳನ್ನು ಮರು ಸಕ್ರಿಯಗೊಳಿಸಲು ಅವರ ನಾಮನಿರ್ದೇಶಿತರು ಅಥವಾ ಕಾನೂನುಬದ್ಧ ವಾರಸುದಾರರು ಸೇರಿದಂತೆ ನಿಷ್ಕ್ರಿಯ ಖಾತೆಗಳು ಅಥವಾ ಕ್ಲೈಮ್ ಮಾಡದ ಠೇವಣಿಗಳ ಗ್ರಾಹಕರನ್ನು ಪತ್ತೆಹಚ್ಚಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸೂಚಿಸಲಾಗಿತ್ತು. ಕ್ಲೇಮ್​ಗಳ ಇತ್ಯರ್ಥ ಅಥವಾ ಖಾತೆ ಮುಚ್ಚಲು ಅನುಸರಿಸಬೇಕಾದ ಪ್ರಕ್ರಿಯೆಗಳಿಗೆ ಆರ್​ಸಿಬಿ ಬ್ಯಾಂಕುಗಳಿಗೆ ಸಲಹೆ ನೀಡಿದೆ.

ಈ ಸೂಚನೆಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಕ್ಲೈಮ್ ಮಾಡದ ಠೇವಣಿಗಳ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಅಂತಹ ಠೇವಣಿಗಳನ್ನು ಅವುಗಳ ನಿಜವಾದ ಮಾಲೀಕರು / ಹಕ್ಕುದಾರರಿಗೆ ಹಿಂದಿರುಗಿಸಲು ಬ್ಯಾಂಕುಗಳು ಮತ್ತು ರಿಸರ್ವ್ ಬ್ಯಾಂಕ್ ಕೈಗೊಂಡ ಪ್ರಯತ್ನಗಳು ಮತ್ತು ಉಪಕ್ರಮಗಳಿಗೆ ಪೂರಕವಾಗಿತ್ತು. ಪರಿಷ್ಕೃತ ಸೂಚನೆಗಳು ಎಲ್ಲಾ ವಾಣಿಜ್ಯ ಬ್ಯಾಂಕುಗಳು (ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಸೇರಿದಂತೆ) ಮತ್ತು ಎಲ್ಲಾ ಸಹಕಾರಿ ಬ್ಯಾಂಕುಗಳಿಗೆ ಅನ್ವಯಿಸುತ್ತವೆ ಮತ್ತು ಏಪ್ರಿಲ್ 1, 2024 ರಿಂದ ಜಾರಿಗೆ ಬಂದಿವೆ.

Continue Reading

ದೇಶ

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Modi Meditation: ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಸುಮಾರು 45 ಗಂಟೆಗಳವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. ಇದೇ ವೇಳೆ ಅವರು ಎರಡು ದಿನವೂ ಆಹಾರ ಸೇವಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Modi Meditation
Koo

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024) ಕೊನೆಯ ಹಂತ ತಲುಪಿದ ಮಧ್ಯೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) 45 ಗಂಟೆಗಳ ಧ್ಯಾನ ಕೈಗೊಳ್ಳುತ್ತಿದ್ದಾರೆ. ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ಮೋದಿ ಧ್ಯಾನದಲ್ಲಿ (Modi Meditation) ತೊಡಗಿಕೊಂಡಿದ್ದಾರೆ. ಇನ್ನು ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ ಎಂದು ತಿಳಿದುಬಂದಿದೆ.

ಹೌದು, ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ. ಜ್ಯೂಸ್‌, ಹಾಲಿನಲ್ಲಿಯೇ ಎರಡು ದಿನ ಕಳೆಯಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಜನವರಿಯಲ್ಲಿ ರಾಮಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿಯೂ ನರೇಂದ್ರ ಮೋದಿ ಅವರು 11 ದಿನಗಳ ಉಪವಾಸ ಕೈಗೊಂಡಿದ್ದರು. ಹಾಸಿಗೆಯ ಮೇಲೆ ಮಲಗುವುದನ್ನು ನಿಲ್ಲಿಸಿದ್ದರು. ನೆಲದ ಮೇಲೆ ಬಟ್ಟೆ ಹಾಸಿಕೊಂಡು ನಿದ್ದೆ ಮಾಡಿದ್ದರು. ಈ ಅವಧಿಯಲ್ಲಿ ಅವರು ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸಿದ್ದರು. ಹಣ್ಣುಗಳನ್ನು ಮಾತ್ರ ಸೇವಿಸಿದ್ದರು.

ಭಗವತಿ ಅಮ್ಮನ್‌ ದೇವಾಲಯಕ್ಕೆ ಭೇಟಿ

ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?

ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ. ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ವಿವೇಕಾನಂದ ರಾಕ್‌ ಮೆಮೋರಿಯಲ್‌ನಲ್ಲಿ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mumbai Satta Bazar: ಮೋದಿ ಹ್ಯಾಟ್ರಿಕ್‌ ಗ್ಯಾರಂಟಿ ಎಂದ ಮುಂಬೈ ಸಟ್ಟಾ ಬಜಾರ್;‌ ಕಾಂಗ್ರೆಸ್‌ಗೆ ಎಷ್ಟು ಕ್ಷೇತ್ರ?

Continue Reading

ಬೆಂಗಳೂರು

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Zakir Naik: ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್‌ನನ್ನು ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಂಗಳೂರಿನ ಅಪರ ಜಿಲ್ಲಾಧಿಕಾರಿ ಟಿ. ಎನ್. ಕೃಷ್ಣಮೂರ್ತಿ ಹಾಗೂ ಮುಂಬಯಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

VISTARANEWS.COM


on

Hindu Janajagruthi Samithi demands declaration of Zakir Naik as international terrorist
Koo

ಬೆಂಗಳೂರು: ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್‌ನನ್ನು (Zakir Naik) ಅಂತಾರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬೆಂಗಳೂರಿನ ಅಪರ ಜಿಲ್ಲಾಧಿಕಾರಿ ಟಿ. ಎನ್. ಕೃಷ್ಣಮೂರ್ತಿ ಹಾಗೂ ಮುಂಬಯಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್‌ನ ಡಾ. ಜಾಕೀರ್ ನಾಯಕ್ ‘ಹುಡಾ ಟಿ.ವಿ’ ಹೆಸರಿನ ಯುಟ್ಯೂಬ್ ಚಾನೆಲ್‌ನವೊಂದರ ಸಂದರ್ಶನದಲ್ಲಿ ಅನೇಕ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾನೆ, ಇದರಿಂದ ಕೋಟ್ಯಾಂತರ ಹಿಂದೂಗಳ ಶ್ರದ್ಧಾಸ್ಥಾನವಾಗಿರುವ ಹಿಂದೂ ದೇವಸ್ಥಾನಗಳ ಬಗ್ಗೆ ಸಮಾಜದಲ್ಲಿ ಜಾತೀಯ ದ್ವೇಷ, ತಿರಸ್ಕಾರ ಮತ್ತು ಶತ್ರುತ್ವದ ಭಾವನೆ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ದುಷ್ಕೃತ್ಯ ಮಾಡಿದ್ದಾನೆ ಎಂದು ಆರೋಪಿಸಿರುವ ಹಿಂದೂ ಜನಜಾಗೃತಿ ಸಮಿತಿಯು, ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಜಾಕೀರ್ ನಾಯಕ್‌ ನನ್ನು ಅಂತರರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಬೇಕು ಹಾಗೂ ಅವನನ್ನು ಭಾರತಕ್ಕೆ ಒಪ್ಪಿಸುವುದಕ್ಕಾಗಿ ಮಲೇಶಿಯಾ ಸರ್ಕಾರದ ಮೇಲೆ ಭಾರತ ಸರ್ಕಾರ ಒತ್ತಡ ಹೇರಬೇಕು ಎಂದು ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

ಕೇಂದ್ರ ಸರ್ಕಾರದಿಂದ ಭಯೋತ್ಪಾದಕ ಸಂಘಟನೆ ಎಂದು ನಿಷೇಧ ಹೇರಿದ ನಂತರವೂ ಜಾಕೀರ್ ನಾಯಕ್ ಮತ್ತು ಇಸ್ಲಾಮಿಕ ರಿಸರ್ಚ್ ಫೌಂಡೇಶನ್‌ನ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಇತರೆ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿನ ಅಕೌಂಟ್ ಮುಂದುವರೆದಿವೆ. ಅವುಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಸಮಿಯ ವತಿಯಿಂದ ಮನವಿ ಪತ್ರದಲ್ಲಿ ಆಗ್ರಹಿಸಿದೆ.

ಇದನ್ನೂ ಓದಿ: Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ, ನೀಲೇಶ್, ಸತೀಶ ಸೋನಾರ, ದೇವೇಗೌಡ, ವೆಂಕಟೇಶ ಮೂರ್ತಿ ಹಾಗೂ ರವೀಂದ್ರ ದಾಸಾರಿ, ಸಂದೀಪ್ ತುಳಸಿಕರ, ಸುಶೀಲ ಭುಜಬಳ, ವಿಲಾಸ ನಿಕಮ ಮತ್ತು ಮನೀಷ ಸೈನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ವೈರಲ್ ನ್ಯೂಸ್

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

ಮುಂಬಯಿ ವಿಮಾನ ನಿಲ್ದಾಣದಲ್ಲಿ ರೀಲ್ಸ್ ಮಾಡಿದ ಮಹಿಳೆಯೊಬ್ಬಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ನೆಟ್ಟಿಗರಿಂದ ಭಾರೀ ಟೀಕೆಗೆ ಗುರಿಯಾಗಿದೆ. ಆಕೆಯ ವಿರುದ್ಧ ಕ್ರಮಕ್ಕೆ ಸಾಕಷ್ಟು ಮಂದಿ ಒತ್ತಾಯಿಸಿದ್ದಾರೆ.

VISTARANEWS.COM


on

By

Viral Video
Koo

ಸಾರ್ವಜನಿಕ ಸ್ಥಳಗಳಲ್ಲಿ (public areas) ಇತ್ತೀಚೆಗೆ ವಿಡಿಯೋ ಮಾಡುವವರ ಹಾವಳಿ ಹೆಚ್ಚಾಗಿದೆ. ಮುಂಬಯಿ ವಿಮಾನ ನಿಲ್ದಾಣದಲ್ಲಿ (Mumbai Airport) ಮಹಿಳೆಯೊಬ್ಬರು ನೃತ್ಯ ಮಾಡಿರುವ ವಿಡಿಯೋವನ್ನು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಹಂಚಿಕೊಂಡಿದ್ದು, ಸಾಕಷ್ಟು ಟೀಕೆಗೆ ಗುರಿಯಾಗಿದೆ. ಕೆಲವರು ಆಕೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮೆಟ್ರೋ ರೈಲುಗಳು, ರೈಲು ಪ್ಲಾಟ್‌ಫಾರ್ಮ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಜನರು ನೃತ್ಯ ಮಾಡುವ ಪ್ರವೃತ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕಿದೆ ಎನ್ನುವ ಒತ್ತಾಯಗಳೂ ಕೇಳಿ ಬರುತ್ತಿದೆ.

ಇತರ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡುವ, ಕಿರಿಕಿರಿ ಮಾಡುವ ವಿಡಿಯೋವೊಂದನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಚಿತ್ರೀಕರಿಸಲಾಗಿದೆ. ಬಾಲಿವುಡ್ ಹಾಡಿಗೆ ಮಹಿಳೆಯೊಬ್ಬರು ನೃತ್ಯ ಮಾಡುತ್ತಿರುವ ಈ ಹೊಸ ವಿಡಿಯೋ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಕುರುಕ್ಷೇತ್ರದ ‘ಆಪ್ ಕಾ ಆನಾ’ ಹಾಡಿನಲ್ಲಿ ಮಹಿಳೆಯೊಬ್ಬಳು ಸಲ್ವಾರ್ ಕುರ್ತಾ ಧರಿಸಿ ನೃತ್ಯ ಮಾಡಿದ್ದಾಳೆ. ಆಕೆಯ ಕೆಲವು ಭಂಗಿಗಳು ಸಾರ್ವಜನಿಕರಿಗೆ ಮುಜುಗರ ಉಂಟು ಮಾಡಿದೆ. ಅನೇಕ ಜನರು ಅವಳನ್ನು ಕುತೂಹಲದಿಂದ ನೋಡುತ್ತಿದ್ದರೆ, ಇತರರು ನೋಡಿಯೂ ನೋಡದಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

”ವೈರಸ್ ವಿಮಾನ ನಿಲ್ದಾಣವನ್ನು ತಲುಪಿದೆ” ಎಂಬ ಶೀರ್ಷಿಕೆಯಡಿ @desimojito ಎಂಬ ಹೆಸರಿನ ಬಳಕೆದಾರ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅನೇಕರು ಆಕೆಯನ್ನು ಟೀಕಿಸಿದ್ದಾರೆ. ಇದೊಂದು ಸಾರ್ವಜನಿಕ ಉಪದ್ರವ ಎಂದು ಹೇಳಿದ್ದಾರೆ. ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕೆಲವರು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಹೆಚ್ಚುತ್ತಿರುವ ಈ ಪ್ರವೃತ್ತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದು ಶೀಘ್ರದಲ್ಲೇ ನಿಲ್ಲುವಂತೆ ತೋರುತ್ತಿಲ್ಲ ಎಂದು ಹೇಳಿದ್ದಾರೆ.

ಒಬ್ಬ ಬಳಕೆದಾರನು ಹೀಗೆ ಬರೆದಿದ್ದಾನೆ, ಅಷ್ಟು ಗಟ್ಟಿಯಾಗಿ ನನ್ನ ಕರುಳನ್ನು ಗಂಟುಗೆ ತಿರುಗಿಸಿದೆ. ಇದು ಯಾವಾಗಲೂ ಭಯಾನಕ, ಅಸ್ಪಷ್ಟ 90ರ ಬಾಲಿವುಡ್ ಹಾಡು ಎಂದು ಹೇಳಿದ್ದು, ಮತ್ತೊಬ್ಬರು, ಮಾನವೀಯತೆ ಮತ್ತು ವಿವೇಕ ಎಲ್ಲಿಗೆ ಹೋಗುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ‘ಇವರಂತಹ ಜನರಿಗೆ ಕಠಿಣ ಕಾನೂನು ಮತ್ತು ದಂಡದ ಅಗತ್ಯವಿದೆ. ಅವರು ಪ್ರತಿ ಸ್ಥಳವನ್ನು ಸರ್ಕಸ್ ಆಗಿ ಪರಿವರ್ತಿಸಿದ್ದಾರೆ ಎಂದು ತಿಳಿಸಿದ್ದಾರೆ.


ಮತ್ತೊಬ್ಬರು ಪ್ರಧಾನಿ ಮೋದಿ ಅವರ ಮುಂದಿನ ಅವಧಿಯಲ್ಲಿ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಈ ವಿದೂಷಕರನ್ನು ನಿಷೇಧಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದು, ಇನ್ನೊಬ್ಬರು ವಿಮಾನ ನಿಲ್ದಾಣದ ಒಳಗೆ ಮತ್ತು ಹೊರಗೆ ಇಂತಹ ಪ್ರದರ್ಶನಕ್ಕೆ ಅನುಮತಿ ಇರುವುದಿಲ್ಲ. ಜನರು ಗಂಭೀರ ವ್ಯವಹಾರಕ್ಕಾಗಿ ವಿಮಾನ ನಿಲ್ದಾಣಗಳಿಗೆ ಭೇಟಿ ನೀಡುವುದು. ಟೈಮ್ ಪಾಸ್ ಮತ್ತು ಮನರಂಜನೆಗಾಗಿ ಅಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕಾರಿಗಳಿಂದ ಪ್ರತಿಕ್ರಿಯೆ ಬಂದಿಲ್ಲ.

ಈ ಹಿಂದೆ ಮುಂಬಯಿನಲ್ಲಿ ಚಲಿಸುತ್ತಿರುವ ಲೋಕಲ್ ರೈಲಿನೊಳಗೆ ಯುವತಿಯೊಬ್ಬಳು ಭೋಜ್‌ಪುರಿ ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

Continue Reading
Advertisement
Reserve Bank of India
ದೇಶ28 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ36 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌