Rain Alert: ಮುಂದಿನ 3 ದಿನ ದೇಶಾದ್ಯಂತ ಭಾರಿ ಮಳೆ, ಈಗಾಗಲೇ 10 ಜನ ಸಾವು, ಕಟಾವು ಬೇಡ ಎಂದ ಹವಾಮಾನ ಇಲಾಖೆ - Vistara News

ದೇಶ

Rain Alert: ಮುಂದಿನ 3 ದಿನ ದೇಶಾದ್ಯಂತ ಭಾರಿ ಮಳೆ, ಈಗಾಗಲೇ 10 ಜನ ಸಾವು, ಕಟಾವು ಬೇಡ ಎಂದ ಹವಾಮಾನ ಇಲಾಖೆ

Rain Alert: ಕರ್ನಾಟಕದ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಇದರ ಮಹಾರಾಷ್ಟ್ರ ಹಾಗೂ ಗುಜರಾತ್‌ನಲ್ಲಂತೂ ಮಳೆ ಸಂಬಂಧಿತ ಅವಘಡಗಳಿಂದ 10 ಜನ ಮೃತಪಟ್ಟಿದ್ದಾರೆ.

VISTARANEWS.COM


on

More Rain Next Week, Farmers Asked to Postpone Harvest
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕರ್ನಾಟಕದ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ ಮಹಾರಾಷ್ಟ್ರ, ಗುಜರಾತ್‌ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗುತ್ತಿದೆ. ಇದರ ಬೆನ್ನಲ್ಲೇ, ಹವಾಮಾನ ಇಲಾಖೆ ವರದಿ (Rain Alert) ಬಿಡುಗಡೆ ಮಾಡಿದ್ದು, ಮುಂದಿನ ಮೂರು ದಿನ ದೇಶಾದ್ಯಂತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

“ಕಳೆದ 24 ಗಂಟೆಯಿಂದ ದೇಶದ ಬಹುತೇಕ ರಾಜ್ಯಗಳಲ್ಲಿ ಭಾರಿ ಮಳೆಯಾಗಿದೆ. ಮುಂದಿನ 3 ದಿನಗಳವರೆಗೆ ಹೀಗೆಯೇ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ, ಪಂಜಾಬ್‌, ಹರಿಯಾಣದಲ್ಲಿ ಸಾಸಿವೆ, ಮಹಾರಾಷ್ಟ್ರ ಮತ್ತು ಗುಜರಾತ್‌ನ ಹಲವೆಡೆ ಗೋಧಿ ಮತ್ತು ಕಾಳಿನ ಬೆಳೆಗಳ ಕಟಾವು ಮಾಡಬಾರದು” ಎಂದು ಹವಾಮಾನ ಇಲಾಖೆ ರಾಜ್ಯಗಳಿಗೆ ಸೂಚನೆ ನೀಡಿದೆ.

“ದೇಶದ ಬಹುತೇಕ ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಲಿದೆ. ಇನ್ನೂ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಇರಲಿದೆ. ಹಾಗಾಗಿ, ಬೆಳೆಹಾನಿಯಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣ ರೈತರು ಕಟಾವು ಮಾಡಬಾರದು. ಆದಾಗ್ಯೂ, ಕೆಲ ರಾಜ್ಯಗಳಲ್ಲಿ ಮಾರ್ಚ್‌ 20ರ ವೇಳೆಗೆ ಕಡಿಮೆಯಾಗಲಿದೆ” ಎಂದು ತಿಳಿಸಿದೆ.

ಎಲ್ಲೆಲ್ಲಿ ಭಾರಿ ಮಳೆ ಸಾಧ್ಯತೆ?

ಕರ್ನಾಟಕದಲ್ಲಿ ಮಾರ್ಚ್‌ 18ರಂದು ಮಾತ್ರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಷ್ಟ್ರ ರಾಜಧಾನಿ ದೆಹಲಿ, ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ. ಹಾಗೆಯೇ, ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಲಡಾಕ್‌, ಉತ್ತರಾಖಂಡ, ರಾಜಸ್ಥಾನದ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ಹಾಗೆಯೇ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್‌, ಒಡಿಶಾ, ಗುಜರಾತ್‌, ಮಧ್ಯಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ವರುಣನ ಆರ್ಭಟ ಇರಲಿದೆ ಎಂದು ಹೇಳಿದೆ.

ಇದನ್ನೂ ಓದಿ: Bangalore Rain : ಬೆಂಗಳೂರು ನಗರದಲ್ಲಿ ಶುಕ್ರವಾರ ಸಂಜೆ ಮತ್ತೆ ಜೋರು ಮಳೆ, ವಾಹನ ಸವಾರರ ಪರದಾಟ

ಗುಜರಾತ್‌, ಮಹಾರಾಷ್ಟ್ರದಲ್ಲಿ 10 ಜನ ಸಾವು

ಗುಜರಾತ್‌ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದುವರೆಗೆ ಸಂಭವಿಸಿದ ಮಳೆ ಸಂಬಂಧಿತ ಅವಘಡಗಳಿಂದ 10 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುಜರಾತ್‌ನಲ್ಲಿ ಶುಕ್ರವಾರ ಒಂದೇ ದಿನ ಭೂಕುಸಿತ, ಕಟ್ಟಡ ಕುಸಿತ, ಸಿಡಿಲು ಸೇರಿ ಹಲವು ಅವಘಡಗಳಿಂದ ಐವರು ಮೃತಪಟ್ಟಿದ್ದಾರೆ. ಮಾರ್ಚ್‌ 4ರಿಂದ ಇದುವರೆಗೆ ರಾಜ್ಯದಲ್ಲಿ 12 ಜನ ಇಂತಹ ದುರಂತಗಳಲ್ಲಿ ಮೃತಪಟ್ಟಿದ್ದಾರೆ. ಇನ್ನು ಮಹಾರಾಷ್ಟ್ರದಲ್ಲೂ ಭಾರಿ ಮಳೆಗೆ ಐವರು ಬಲಿಯಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

Narendra Modi : ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ಅಮ್ರೋಹಾ(ಉತ್ತರ ಪ್ರದೇಶ): ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi ) ಮತ್ತೊಂದು ಬಾರಿ ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಅವರು, ಕ್ರಿಕೆಟ್ ವಿಶ್ವಕಪ್​ನಲ್ಲಿ ಸಹೋದರ ಮೊಹಮ್ಮದ್ ಶಮಿ ಮಾಡಿದ ಅದ್ಭುತ ಸಾಧನೆಯನ್ನು ಇಡೀ ಜಗತ್ತು ನೋಡಿದೆ. ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಅವರಿಗೆ ಕೇಂದ್ರ ಸರ್ಕಾರ ಅರ್ಜುನ ಪ್ರಶಸ್ತಿ ನೀಡಿದೆ. “ಯೋಗಿ ಜಿ ಅವರ ಸರ್ಕಾರ ಎರಡು ಹೆಜ್ಜೆ ಮುಂದೆ ಹೋಗಿದೆ. ಯೋಗಿ ಜಿ ಅವರು ಇಲ್ಲಿನ ಯುವಕರಿಗಾಗಿ ಶಮಿ ಹೆಸರಿನಲ್ಲಿ ಕ್ರೀಡಾಂಗಣವನ್ನು ಸಹ ನಿರ್ಮಿಸುತ್ತಿದ್ದಾರೆ. ಇದಕ್ಕಾಗಿ ನಾನು ಅಮ್ರೋಹಾದ ಜನರನ್ನು ತುಂಬಾ ಅಭಿನಂದಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್​ನಲ್ಲಿ ಶಮಿ ಏಳು ವಿಕೆಟ್​ಗಳನ್ನು ಪಡೆದಿದ್ದರು. ಎಡ ಪಾದದ ಗಾಯದಿಂದಾಗಿ ಅವರು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಂದ ಹೊರಗುಳಿದಿದ್ದಾರೆ.

ಅಮ್ರೋಹಾದ ‘ಧೋಲಕ್’ (ಸಂಗೀತ ವಾದ್ಯ) ಅನ್ನೂ ಪ್ರಧಾನಿ ಇದೇ ವೇಳೆ ಶ್ಲಾಘಿಸಿದರು. ಗಂಗಾ ಮಾತೆಯ ದಡದಲ್ಲಿರುವ ಈ ಭೂಮಿ ಭಗವಾನ್ ಶ್ರೀ ಕೃಷ್ಣನ ಹೆಜ್ಜೆಗುರುತುಗಳಿಗೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದು ರಾಜಾ ಗಜ ಸಿಂಗ್ ಮತ್ತು ಠಾಕೂರ್ ಜೈರಾಮ್ ಸಿಂಗ್ ಅವರಂತಹ ಸಾಹಸಿಗರು ಹುಟ್ಟಿದ ಜನರ ಭೂಮಿ. ನನಗೆ ಧೋಲಕ್ ನೀಡಿದ್ದೀರಿ. ಇದು ಅಮ್ರೋಹಾದ ಮತ್ತೊಂದು ಹೆಗ್ಗುರುತು. ಇಲ್ಲಿನ ಧೋಲಕ್ ನ ಬಡಿತವು ಎಲ್ಲೆಡೆ ಪ್ರತಿಧ್ವನಿಸುತ್ತದೆ. ನಮ್ಮ ಯೋಗಿ ಜಿ ಅವರ ಪ್ರಯತ್ನದಿಂದಾಗಿ, ಬಿಜೆಪಿ ಸರ್ಕಾರವು ಅಮ್ರೋಹಾದ ಧೋಲಕ್​ಗೆ ಜಿಐ (ಜಿಯಾಗ್ರಾಫಿಕಲ್ ಇಂಡಿಕೇಟೆಡ್​ ಒರಿಜಿನ್​) ಟ್ಯಾಗ್ ನೀಡಿದೆ. ಇಡೀ ಜಗತ್ತಿನಲ್ಲಿ ಅದಕ್ಕೆ ಒಂದು ಗುರುತನ್ನು ಕೊಟ್ಟಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಯುಪಿಯಲ್ಲಿ ಮತದಾನ ನಡೆಯಲಿದ್ದು, ಅಮ್ರೋಹಾ, ಮೀರತ್, ಬಾಗ್ಪತ್, ಗಾಜಿಯಾಬಾದ್, ಗೌತಮಬುದ್ಧ ನಗರ, ಬುಲಂದ್ಶಹರ್ (ಎಸ್ಸಿ), ಅಲಿಗಢ ಮತ್ತು ಮಥುರಾ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

ಅಮ್ರೋಹಾದಲ್ಲಿ ಬಿಜೆಪಿಯ ಕನ್ವರ್ ಸಿಂಗ್ ತನ್ವರ್ ಮತ್ತು ಕಾಂಗ್ರೆಸ್ ನ ಡ್ಯಾನಿಶ್ ಅಲಿ ನಡುವೆ ಪ್ರಮುಖ ಸ್ಪರ್ಧೆ ಇದೆ. ಬಿಎಸ್ಪಿಯ ಮುಜಾಹಿದ್ ಹುಸೇನ್ ಕೂಡ ಚುನಾವಣಾ ಕಣದಲ್ಲಿದ್ದಾರೆ. ಅಮ್ರೋಹಾದಿಂದ ಒಟ್ಟು 12 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

Continue Reading

Lok Sabha Election 2024

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಅದರಂತೆ ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ 92 ವರ್ಷದ ವೃದ್ಧರೊಬ್ಬರಿಗಾಗಿ ಚುನಾವಣಾ ಸಿಬ್ಬಂದಿ ಬರೋಬ್ಬರಿ 18 ಕಿ.ಮೀ. ಕಾಡು ದಾರಿಯಲ್ಲಿ ನಡೆದಿದ್ದಾರೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್‌ 19) ನಡೆದಿದೆ. ಒಟ್ಟು 7 ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಎಂದರೆ ಈ ಬಾರಿ ಚುನಾವಣಾ ಆಯೋಗ ಕೆಲ ವೃದ್ಧ, ಅಸಕ್ತ, ನಡೆಯಲು ಬಾರದ ಮತದಾರರಿಗೆ ಮನೆಯಿಂದಲೇ ವೋಟು ಹಾಕುವ ಅವಕಾಶವನ್ನು ಕಲ್ಪಿಸಿದೆ. ಈ ವೋಟ್‌ ಪ್ರಮ್ ಹೋಮ್‌ (Vote from home)ಗಾಗಿ ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿ ವೃದ್ಧರ ಮನೆ ಬಾಗಿಲಿಗೇ ಬರುತ್ತಾರೆ. ಅದರಂತೆ ಕೇರಳದಲ್ಲಿ 92 ವರ್ಷದ ವೃದ್ಧರೊಬ್ಬರ ಒಂದೇ ಒಂದು ವೋಟಿಗಾಗಿ ಚುನಾವಣಾ ಸಿಬ್ಬಂದಿ ದಟ್ಟ ಕಾಡಿನಲ್ಲಿ ಸುಮಾರು 18 ಕಿ.ಮೀ. ಪ್ರಯಾಣ ಬೆಳೆಸಿದ್ದಾರೆ. ಸದ್ಯ ಚುನಾವಣಾ ಸಿಬ್ಬಂದಿಯ ಈ ಕರ್ತವ್ಯ ಪ್ರಜ್ಞೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕೇರಳದ ಇಡುಕ್ಕಿ ಜಿಲ್ಲೆಯ ಎಡಮಲಕ್ಕುಡಿ ಎಂಬ ಬುಡಕಟ್ಟು ಗ್ರಾಮದಲ್ಲಿ ವಾಸಿಸುತ್ತಿರುವ ಶಿವಲಿಂಗಂ ಅವರ ವೋಟಿಗಾಗಿ ಚುನಾವಣಾ ಸಿಬ್ಬಂದಿ ಕಲ್ಲು-ಮುಳ್ಳುಗಳ ಹಾದಿ ತುಳಿದು 18 ಕಿ.ಮೀ. ನಡೆದಿದ್ದಾರೆ. ಇಡುಕ್ಕಿ ಲೋಕಸಭಾ ಕ್ಷೇತ್ರದ ಹಿರಿಯ ನಾಗರಿಕ ಮತದಾರರಾದ ಶಿವಲಿಂಗಂ ಅನಾರೋಗ್ಯದಿಂದ ಹಾಸಿಗೆ ಹಾಸಿಗೆ ಹಿಡಿದಿದ್ದಾರೆ. ಆದರೂ ತಮ್ಮ ಹಕ್ಕನ್ನು ಚಲಾಯಿಸಬೇಕೆಂಬ ಮಹದಾಸೆ ಹೊಂದಿದ್ದರು.

ಆನಂದ ಭಾಷ್ಪ

ಈ ಬಾರಿಯ ವೋಟ್ ಫ್ರಮ್ ಹೋಮ್ ಸೌಲಭ್ಯ ಶಿವಲಿಂಗಂ ಅವರ ಕುಟುಂಬದವರ ಗಮನಕ್ಕೆ ಬಂದಿತ್ತು. ಕೂಡಲೇ ಕುಟುಂಬಸ್ಥರು ಸ್ಥಳೀಯ ಬೂತ್ ಅಧಿಕಾರಿಯ ಸಹಾಯದಿಂದ ವೋಟ್ ಫ್ರಮ್ ಹೋಮ್‌ಗೆ ಅರ್ಜಿ ಸಲ್ಲಿಸಿದ್ದರು. ಇವರ ಮನವಿಯನ್ನು ಪುರಸ್ಕರಿಸಿದ ಚುನಾವಣಾ ಆಯೋಗ ಸಿಬ್ಬಂದಿಯನ್ನು ನೇಮಿಸಿತ್ತು. ಮತ ಚಲಾಯಿಸುವಾಗ ಶಿವಲಿಂಗಂ ಅವರಿಗೆ ಕಣ್ಣೀರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ರೋಚಕ ಪ್ರಯಾಣ

ಚುನಾವಣಾ ಸಿಬ್ಬಂದಿ ಶಿವಲಿಂಗಂ ಅವರ ಮನೆಗೆ ತಲುಪಿದ್ದೇ ಒಂದು ಸಾಹಸಗಾಥೆ. ಮೂವರು ಮಹಿಳೆಯರು ಸೇರಿದಂತೆ 9 ಜನರಿದ್ದ ಚುನಾವಣಾ ಸಿಬ್ಬಂದಿಯ ತಂಡ ಬುಧವಾರ ಶಿವಲಿಂಗಂ ಮನೆಗೆ ಹೊರಟಿತ್ತು. ಇದಕ್ಕಾಗಿ ಸಿಬ್ಬಂದಿ ಬೆಳಿಗ್ಗೆ ಸುಮಾರು 6 ಗಂಟೆಗೆ ಮುನ್ನಾರ್‌ನಿಂದ ಹೊರಟು ಅಲ್ಲಿಂದ ವಾಹನದಲ್ಲಿ ಪಯಣಿಸಿ ಇರ್ವಿಕುಲಂ ರಾಷ್ಟ್ರೀಯ ಉದ್ಯಾನವನದ ನಡುವೆ ಸಾಗಿ ಇಡಮಲಕ್ಕುಡಿಯ ಪ್ರವೇಶ ದ್ವಾರವಾದ ಪೆಟ್ಟಿಮುಡಿಯಲ್ಲಿರುವ ಕೆಪ್ಪಕಾಡು ಪ್ರದೇಶವನ್ನು ತಲುಪಿದರು.

ಅಲ್ಲಿಂದ ಮತ್ತೆ ನಿಜವಾದ ಸವಾಲು ಆರಂಭವಾಗಿತ್ತು. ಕಡಿದಾದ ನಿರ್ಜನ ರಸ್ತೆಯ ಮೂಲಕ ಅವರು ಮತ್ತೆ 18 ಕಿ. ಮೀ. ಪ್ರಯಾಣ ಬೆಳೆಸಿದರು. ದಟ್ಟ ಅರಣ್ಯದಲ್ಲಿ ಕಾಲ್ನಡಿಗೆ ಮೂಲಕ ಸಾಗಿದ ಅವರು ಶಿವಲಿಂಗಂ ಅವರ ಮನೆಗೆ ತಲುಪುವಾಗ ಗಂಟೆ ಮಧ್ಯಾಹ್ನ 1.15 ಆಗಿತ್ತು.

ಇದನ್ನೂ ಓದಿ: Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

ʼʼಅಲ್ಲಿಗೆ ತಲುಪಿದಾಗ ಮೊದಲಿಗೆ ಶಿವಲಿಂಗಂ ಅವರನ್ನು ಗುರುತಿಸುವುದು ಕಷ್ಟವಾಗಿತ್ತು. ಯಾಕೆಂದರೆ ಅಲ್ಲಿ ಸುಮಾರು 10 ಮನೆಗಳಿದ್ದವು. ಕೊನೆಗೂ ಶಿವಲಿಂಗಂ ಅವರನ್ನು ಗುರುತಿಸಿದೆವು. ಗುಡಿಸಲಿನಲ್ಲಿ ವಾಸವಾಗಿರುವ ಅವರು ಮಾತನಾಡಲು ಮತ್ತು ಎದ್ದು ನಿಲ್ಲಲೂ ಕಷ್ಟ ಪಡುತ್ತಿದ್ದಾರೆ. ಆದರೂ ಈ ಇಳಿ ವಯಸ್ಸಿನಲ್ಲಿಯೂ ತಮ್ಮ ಕರ್ತವ್ಯವನ್ನು ಮರೆಯದ ಅವರನ್ನು ನೋಡಿ ಹೆಮ್ಮೆ ಎನಿಸಿತು. ಕೊನೆಗೆ ಅವರ ಮನೆಯಲ್ಲೇ ವೋಟಿಂಗ್ ಬೂತ್ ಸಿದ್ಧಪಡಿಸಿ ಅವರ ಗೌಪ್ಯ ಮತದಾನಕ್ಕೆ ಅವಕಾಶ ಮಾಡಿಕೊಟ್ಟೆವುʼʼ ಎಂದು ಸಿಬ್ಬಂದಿಯೊಬ್ಬರು ವಿವರಿಸಿದಾರೆ.

Continue Reading

ಪ್ರಮುಖ ಸುದ್ದಿ

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Narendra Modi: “ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಎಕ್ಸ್​ ಪೋಸ್ಟ್​​ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿಕೊಂಡಿದ್ದಾರೆ. ಮತದಾನ ಪ್ರಮಾಣದಲ್ಲಿ ಹೆಚ್ಚಳ ಕಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಭಾರತದ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

“ಮೊದಲ ಹಂತ, ಉತ್ತಮ ಪ್ರತಿಕ್ರಿಯೆ! ಇಂದು ಮತ ಚಲಾಯಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ ಮತದಾನ ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಭಾರತದಾದ್ಯಂತ ಜನರು ದಾಖಲೆ ಸಂಖ್ಯೆಯಲ್ಲಿ ಎನ್​ಡಿಗೆ ಮತ ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಏಳು ಹಂತಗಳ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆಯಿತು. ಚುನಾವಣಾ ಆಯೋಗ ಮತದಾನ “ಹೆಚ್ಚಿನ ಪ್ರಮಾಣದಲ್ಲಿ ಆಗಿದೆ” ಎಂದು ಬಣ್ಣಿಸಿದೆ. ಮತದಾನವು “ಹೆಚ್ಚಾಗಿ ಶಾಂತಿಯುತವಾಗಿ” ಉಳಿದಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇಕಡಾ 69.43 ರಷ್ಟು ಮತದಾನ ದಾಖಲಾಗಿತ್ತು. ಕೆಲವು ಕ್ಷೇತ್ರಗಳು ಆಗ ವಿಭಿನ್ನವಾಗಿದ್ದವು ಮತ್ತು ಮತದಾನಕ್ಕೆ ಹೋದ ಒಟ್ಟು ಸ್ಥಾನಗಳ ಸಂಖ್ಯೆ 91 ಆಗಿತ್ತು.

ಇದನ್ನೂ ಓದಿ: lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳು ಮತ್ತು ಜನಾಂಗೀಯ ಬಿಕ್ಕಟ್ಟು ಪೀಡಿತ ಮಣಿಪುರದಿಂದ ಹಿಂಸಾಚಾರ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರು ಮತ್ತು ಸಶಸ್ತ್ರ ಗುಂಪು ಜನರು ಮತ ಚಲಾಯಿಸಲು ತಮ್ಮ ಮನೆಗಳಿಂದ ಹೊರಬರದಂತೆ ತಡೆದಿದ್ದಾರೆ ಎಂದು ಇನ್ನರ್​​ ಮಣಿಪುರದ ಕಾಂಗ್ರೆಸ್ ಅಭ್ಯರ್ಥಿ ಎ ಬಿಮೋಲ್ ಅಕೋಯಿಜಾಮ್ ಆರೋಪಿಸಿದ್ದಾರೆ.

ಮಣಿಪುರದ ಒಳಭಾಗದ ಮತಗಟ್ಟೆಗಳಲ್ಲಿ ಜನರು ವಿದ್ಯುನ್ಮಾನ ಮತದಾನ ಯಂತ್ರಗಳನ್ನು (ಇವಿಎಂ) ಒಡೆದ ಕನಿಷ್ಠ ನಾಲ್ಕು ಘಟನೆಗಳು ವರದಿಯಾಗಿವೆ. ಸಶಸ್ತ್ರ ಗುಂಪಿನ ಪ್ರಾಕ್ಸಿ ಮತದಾನದ ಬಗ್ಗೆ ಜನರು ಅಸಮಾಧಾನಗೊಂಡರು.

ಉತ್ತರಾಖಂಡ, ಅರುಣಾಚಲ ಪ್ರದೇಶ, ಸಿಕ್ಕಿಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳು ಇಂದು ಒಂದೇ ಹಂತದ ಚುನಾವಣೆಯಲ್ಲಿ ತಮ್ಮ ಮತದಾನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ.

ಛತ್ತೀಸ್ ಗಢದ ಬಸ್ತಾರ್ ನ 56 ಹಳ್ಳಿಗಳ ಜನರು ತಮ್ಮ ಸ್ವಂತ ಹಳ್ಳಿಗಳಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಬುಡಕಟ್ಟು ಸಮುದಾಯಗಳಿಗೆ ಸೇರಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಗ್ರೇಟ್ ನಿಕೋಬಾರ್ ನ ಶೋಂಪೆನ್ ಬುಡಕಟ್ಟು ಜನಾಂಗದವರು ಮೊದಲ ಬಾರಿಗೆ ಮತ ಚಲಾಯಿಸುವ ಮೂಲಕ ಇತಿಹಾಸ ನಿರ್ಮಿಸಿದರು.

ದೇಶದ ಹೆಚ್ಚಿನ ಭಾಗಗಳಲ್ಲಿ ಮತದಾರರು ಬಿಸಿಲಿನ ತಾಪವನ್ನು ಧೈರ್ಯದಿಂದ ಎದುರಿಸಿದರೆ, ಇತರ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಲ್ಲಿ ತಾಳ್ಮೆಯಿಂದ ಕಾಯುತ್ತಿದ್ದರು.

Continue Reading

ದೇಶ

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Boat Capsizes: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ.

VISTARANEWS.COM


on

Boat Capsizes
Koo

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading
Advertisement
charlie chaplin rajamarga
ಪ್ರಮುಖ ಸುದ್ದಿ3 mins ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ46 mins ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Modi in Karnataka today Massive rally in Chikkaballapur and roadshow in Bengaluru
Lok Sabha Election 20241 hour ago

Modi in Karnataka: ರಾಜ್ಯದಲ್ಲಿಂದು ಮೋದಿ ಮೋಡಿ; ಚಿಕ್ಕಬಳ್ಳಾಪುರದಲ್ಲಿ ಬೃಹತ್‌ ಸಮಾವೇಶ, ಬೆಂಗಳೂರಲ್ಲಿ ರೋಡ್‌ ಶೋ

Kids Sleep
ಲೈಫ್‌ಸ್ಟೈಲ್1 hour ago

Kids Sleep: ಪೋಷಕರೇ ಎಚ್ಚರ; ನಿಮ್ಮ ಮಕ್ಕಳ ನಿದ್ರೆ ಕಸಿದುಕೊಳ್ಳುವ ಈ ವಸ್ತುಗಳನ್ನು ಕೊಡಲೇಬೇಡಿ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

ಕರ್ನಾಟಕ7 hours ago

Water Crisis: ಬೆಂಗಳೂರಿನ 110 ಹಳ್ಳಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜಲಮಂಡಳಿ; ಶೀಘ್ರದಲ್ಲೇ ಹೆಸರಘಟ್ಟ ಕೆರೆಯಿಂದ ನೀರು!

Neha Hiremttt
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ನೇಹಾ ಹಿರೇಮಠಗೆ ನ್ಯಾಯ ಸಿಗಲಿ, ಆರೋಪಿಗೆ ಗಲ್ಲು ಶಿಕ್ಷೆಯಾಗಲಿ

Narendra Modi
ದೇಶ7 hours ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ8 hours ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ8 hours ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ16 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌