ದೇಶದ ಕಾಲು ಭಾಗ ಗರ್ಭಪಾತಗಳು ಮನೆಯಲ್ಲೇ ನಡೆಯುತ್ತವೆ! - Vistara News

ಆರೋಗ್ಯ

ದೇಶದ ಕಾಲು ಭಾಗ ಗರ್ಭಪಾತಗಳು ಮನೆಯಲ್ಲೇ ನಡೆಯುತ್ತವೆ!

ದೇಶದಲ್ಲಿ ಶೇ.27ಕ್ಕಿಂತಲೂ ಅಧಿಕ ಗರ್ಭಪಾತಗಳು ಅಸುರಕ್ಷಿತವಾಗಿ ಮನೆಗಳಲ್ಲೇ ನಡೆಯುತ್ತವೆ ಎಂದು ಆರೋಗ್ಯ ಸಮೀಕ್ಷೆ ಬಹಿರಂಗಪಡಿಸಿದೆ.

VISTARANEWS.COM


on

abortion
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಲ್ಲಿ ನಡೆಯುವ ಗರ್ಭಪಾತಗಳ ಪೈಕಿ ಶೇ.27ರಷ್ಟನ್ನು ಮಹಿಳೆಯರು ಮನೆಯಲ್ಲೇ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

ಈ ಗರ್ಭಪಾತ ಮಾಡಿಕೊಳ್ಳುವ ವಿಧಾನಗಳೂ ಅಸುರಕ್ಷಿತವಾಗಿವೆ. ಕೆಲವರಿಗಷ್ಟೇ ಸುರಕ್ಷಿತ ಗರ್ಭಪಾತದ ಬಗ್ಗೆ ಮಾಹಿತಿ ಇದೆ. ಅಸುರಕ್ಷಿತ ಗರ್ಭಪಾತದ ಪರಿಣಾಮ ಮಹಿಳೆಯರು ಸಾವಿಗೀಡಾಗುತ್ತಿದ್ದಾರೆ. ಸೂಕ್ತ ತಿಳಿವಳಿಕೆ, ಜಾಗೃತಿ ನೀಡುವ ಮೂಲಕ ಇವುಗಳನ್ನು ತಡೆಗಟ್ಟಿದಲ್ಲಿ ಗರ್ಭಿಣಿಯರ ಸಾವಿನ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಬಹುದು ಎಂದು ಇತ್ತೀಚೆಗಿನ ಒಂದು ಸಮೀಕ್ಷೆ ಹೇಳಿದೆ.

ಈ ಅಂಶಗಳು ಹೊರಬಿದ್ದಿರುವುದು ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ-5ರಲ್ಲಿ. ಇದಕ್ಕಾಗಿ 2015-16ರಿಂದ 2019-21rವರೆಗೆ ಕಲೆ ಹಾಕಲಾಗಿರುವ ಮಾಹಿತಿಯನ್ನು ಮಾಧ್ಯಮಗಳು ವಿಶ್ಲೇಷಿಸಿದ್ದು, ಮನೆಯಲ್ಲೇ ಅಸುರಕ್ಷಿತ ರೀತಿಯಲ್ಲಿ ಗರ್ಭಪಾತ ಮಾಡಿಕೊಳ್ಳುತ್ತಿರುವವರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಹೆಚ್ಚಳವೂ ಕಂಡುಬಂದಿದೆ.

ಮನೆಯಲ್ಲೇ ಗರ್ಭಪಾತ ಮಾಡಿಕೊಳ್ಳುವುದು ನಗರ ಪ್ರದೇಶಗಳಿಗಿಂತ (ಶೇ. 22.1) ಗ್ರಾಮೀಣ ಭಾಗಗಳಲ್ಲೇ (ಶೇ. 28.7) ಹೆಚ್ಚು ಎಂಬುದು ಕಂಡುಬಂದಿದೆ. 1971ರಲ್ಲೇ ಭಾರತದಲ್ಲಿ ಅನಿವಾರ್ಯ ಕಾರಣಗಳಿಗಾಗಿ ವೈದ್ಯಕೀಯವಾಗಿ ಗರ್ಭಪಾತ ಮಾಡುವುದಕ್ಕೆ ಕಾನೂನಿನ ಮಾನ್ಯತೆ ದೊರೆತಿದೆ. ಆದರೆ ಇಂಥ ಸುರಕ್ಷಿತ ಸೌಲಭ್ಯಗಳ ಲಭ್ಯತೆಯೇ ತೊಡಕಾಗಿದೆ.  ಸಾಮಾಜಿಕ ಕಾರಣಗಳೂ ಸಾಕಷ್ಟು ಇವೆ. ಇನ್ನು, ಶೇ. 55ರಷ್ಟು ಮಹಿಳೆಯರು ಗರ್ಭಪಾತ ಅಗತ್ಯವಾದಲ್ಲಿ ತಾವು ವೈದ್ಯರಲ್ಲಿಗೇ ಹೋಗುವುದಾಗಿ ಹೇಳಿದ್ದಾರೆ.

ಶೇ. 48ರಷ್ಟು ಮಹಿಳೆಯರು ಅನಿರೀಕ್ಷಿತವಾಗಿ ಗರ್ಭ ಧರಿಸಿದ್ದೇ ಗರ್ಭಪಾತಕ್ಕೆ ಮುಖ್ಯ ಕಾರಣವೆಂದು ಹೇಳಿದರೆ, ತಮ್ಮ ಆರೋಗ್ಯ ಇದಕ್ಕೆ ಅವಕಾಶ ನೀಡುತ್ತಿಲ್ಲವೆಂದೋ ಅಥವಾ ಮೊದಲನೇ ಮಗು ತೀರಾ ಚಿಕ್ಕದು ಎಂಬ ಕಾರಣಗಳನ್ನೋ ಉಳಿದವರು ನೀಡಿದ್ದಾರೆ. ಹೆಚ್ಚಿನ ಗರ್ಭಪಾತಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ (ಶೇ. 53) ಮಾಡಿಸಲಾಗಿದ್ದು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾಡಿಸಿದ ಪ್ರಮಾಣ ಕಡಿಮೆ (ಶೇ. 20). ಅದರಲ್ಲೂ, ಬಿಹಾರ (ಶೇ. 49.1), ರಾಜಸ್ಥಾನ (ಶೇ. 37.9) ಮತ್ತು ಉತ್ತರಪ್ರದೇಶಗಳಲ್ಲಿ (ಶೇ. 33.9) ದೇಶದಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ ಮನೆಯಲ್ಲೇ ಅಸುರಕ್ಷಿತ ರೀತಿಯಲ್ಲಿ ಗರ್ಭಪಾತಗಳು ನಡೆಯುತ್ತಿದೆ ಎಂದು ಸಮೀಕ್ಷಾ ವರದಿ ಹೇಳಿದೆ.  

ಇದನ್ನೂ ಓದಿ: World Food Safety Day: ನಿಮ್ಮ ಆಹಾರ ಆರೋಗ್ಯಕರ ಎನಿಸಬೇಕಾದರೆ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ದೇಶ

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Medicine Price: ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

VISTARANEWS.COM


on

Medicine Price
Koo

ನವದೆಹಲಿ: ದೇಶದಲ್ಲಿ ಅಗತ್ಯ ಔಷಧಗಳ ಬೆಲೆ ಏರಿಕೆ ಕುರಿತು ವದಂತಿಗಳು ಹರಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ (Central Government) ಇಳಿಸಿದೆ. ಔಷಧಗಳ ಬೆಲೆ ಇಳಿಕೆ (Medicine Price) ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (NPPA) ಆದೇಶ ಹೊರಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.

ಯಾವ ಕಾಯಿಲೆಗಳ ಔಷಧ ಬೆಲೆ ಇಳಿಕೆ?

ಮಧುಮೇಹ, ಹೃದ್ರೋಗ, ಯಕೃತ್ತಿನ ಸಮಸ್ಯೆ, ಆ್ಯಂಟಿಬಯೋಟಿಕ್ಸ್‌, ಮಲ್ಟಿ ವಿಟಮಿನ್‌ ಸೇರಿ ಹಲವು ಔಷಧಗಳ ಬೆಲೆಯನ್ನು ಎನ್‌ಪಿಪಿಎ ಇಳಿಕೆ ಮಾಡಿದೆ. ಭಾರತದಲ್ಲಿ 10 ಕೋಟಿಗೂ ಅಧಿಕ ಮಂದಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲೇ ಅತಿ ಹೆಚ್ಚು ಮಧುಮೇಹಿಗಳು ಇರುವ ದೇಶಗಳಲ್ಲಿ ಭಾರತವೂ ಸೇರಿದೆ. ಹಾಗಾಗಿ, ಸಕ್ಕರೆ ಕಾಯಿಲೆಗೆ ಬಳಸುವ ಮಾತ್ರೆಗಳು ಹಾಗೂ ಇನ್ಸುಲಿನ್‌ಗಳ ಬೆಲೆಯನ್ನು ಇಳಿಕೆ ಮಾಡಿರುವುದು ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

medicines

“ಸಾರ್ವಜನಿಕರಿಗೆ ಅನುಕೂಲವಾಗುವ ಔಷಧಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಬೆಲೆ ಇಳಿಕೆಯು ಒಂದು ನಿಯಮಿತ ಪ್ರಕ್ರಿಯೆಯಾಗಿದ್ದು, ಪ್ರಾಧಿಕಾರವು ಅದನ್ನು ಅನುಸರಿಸಿದೆ” ಎಂದು ಎನ್‌ಪಿಪಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

ಕೆಲ ತಿಂಗಳ ಹಿಂದಷ್ಟೇ, ಔಷಧಗಳ ಬೆಲೆಯೇರಿಕೆ ಕುರಿತು ವದಂತಿಗಳು ಹರಡಿದ್ದವು. ಆದರೆ, ಕೇಂದ್ರ ಸರ್ಕಾರವು ಇದನ್ನು ಅಲ್ಲಗಳೆದಿತ್ತು. “ಏಪ್ರಿಲ್‌ 1ರಿಂದ 500ಕ್ಕೂ ಅಧಿಕ ಔಷಧಗಳ ಬೆಲೆಯಲ್ಲಿ ಶೇ.12ರಷ್ಟು ಬೆಲೆ ಏರಿಕೆಯಾಗಿದೆ ಎಂಬ ವದಂತಿಗಳು, ವರದಿಗಳು ಸತ್ಯಕ್ಕೆ ದೂರವಾಗಿವೆ. ಜನರ ಹಾದಿ ತಪ್ಪಿಸಲು ಇಂತಹ ವರದಿಗಳನ್ನು ಪಸರಿಸಲಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಸಗಟು ಬೆಲೆ ಸೂಚ್ಯಂಕದ ಆಧಾರದ ಬೆಲೆ ಏರಿಕೆ ಮಾಡುತ್ತದೆ. ಆದರೆ, 782 ಔಷಧಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಇನ್ನು ಸುಮಾರು 54 ಔಷಧಗಳ ಬೆಲೆಯು ಒಂದು ಪೈಸೆ ಮಾತ್ರ ಏರಿಕೆಯಾಗಿದೆ” ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ಇದರ ಬೆನ್ನಲ್ಲೇ, ಅಗತ್ಯ ಔಷಧಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ.

ಇದನ್ನೂ ಓದಿ: Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Continue Reading

ಆರೋಗ್ಯ

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

ನಿತ್ಯವೂ ಸನ್‌ಸ್ಕ್ರೀನ್‌ ಹಚ್ಚುವುದರಿಂದ (Skin Care Tips in Kannada) ಮೆಲನೋಮ, ಕಾರ್ಸಿನೋಮಾದಂತಹ ಕ್ಯಾನ್ಸರ್‌ ಅಪಾಯವನ್ನು ನೀವು ತಪ್ಪಿಸಬಹುದು. ಚರ್ಮದ ಮೇಲೆ ಯುವಿ ಕಿರಣಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು. ಚರ್ಮದ ತಜ್ಞರು ಹೇಳುವ ಪ್ರಕಾರ ಸನ್‌ಸ್ಕ್ರೀನ್‌ ಹಚ್ಚುವುದರಿಂದ ಕೇವಲ ಚರ್ಮ ಕಪ್ಪಾಗುವುದನ್ನು ತಡೆಯುವುದು ಮಾತ್ರವಲ್ಲ ಇನ್ನೂ ಹಲವು ಲಾಭಗಳಿವೆ. ಅವು ಯಾವುದು ಗೊತ್ತೇ?

VISTARANEWS.COM


on

By

Skin Care Tips in Kannada
Koo

ಬಿಸಿಲಿಗೆ (sunny) ಹೊರಗೆ ಹೋಗುವ (Skin Care Tips in Kannada) ಮುನ್ನ ಮುಖದ ಚರ್ಮಕ್ಕೆ ಸನ್‌ಸ್ಕ್ರೀನ್‌ (sunscreen) ಹಚ್ಚಿಕೊಳ್ಳಬೇಕು ಎಂಬ ಕಿವಿಮಾತನ್ನು ನೀವು ಕೇಳಿರಬಹುದು. ಬಹುತೇಕರು ಇದನ್ನು ಪಾಲಿಸುತ್ತಾರೆ ಕೂಡ. ಆದರೆ, ಕೆಲವರು, ಉಡಾಫೆ ಮಾಡುವ ಜೊತೆಗೆ, ಬಿಸಿಲಿನಿಂದ ಚರ್ಮಕ್ಕೆ ಅಂಥದ್ದೇನೂ ಆಗಲ್ಲ, ಹೆಚ್ಚೆಂದರೆ ಸ್ವಲ್ಪ ಕಪ್ಪಾದೇನು (black) ಎಂದುಕೊಂಡು ಯಾವ ಸನ್‌ಸ್ಕ್ರೀನ್‌ಗಳ ಸಹವಾಸಕ್ಕೂ ಹೋಗುವುದಿಲ್ಲ.

ಚರ್ಮದ ತಜ್ಞರು (Skin specialist) ಹೇಳುವ ಪ್ರಕಾರ, ಸನ್‌ಸ್ಕ್ರೀನ್‌ ಹಚ್ಚದೇ ಇರುವುದರಿಂದ ಕೇವಲ ಕಪ್ಪಾಗುವುದಷ್ಟೇ ಅಲ್ಲ ಇತರ ಪರಿಣಾಮಗಳೂ ಇವೆ ಎನ್ನುತ್ತಾರೆ. ಸನ್‌ಸ್ಕ್ರೀನ್‌ ಹಚ್ಚುವುದರಿಂದ ಚರ್ಮಕ್ಕೆ ಸಾಕಷ್ಟು ಲಾಭಗಳಿವೆ. ಅವು ಯಾವುದು ಎಂಬುದನ್ನು ನೋಡೋಣ.

ಚರ್ಮದ ಕ್ಯಾನ್ಸರ್‌ ಅಪಾಯ ತಪ್ಪಿಸುತ್ತದೆ

ಸನ್‌ಸ್ಕ್ರೀನ್‌ ಹಚ್ಚುವುದರಿಂದ ಸೂರ್ಯನಿಂದ ಹೊರಬರುವ ಅಲ್ಟ್ರಾವಯಲೆಟ್‌ (ಯುವಿ) ಕಿರಣಗಳು ನೇರವಾಗಿ ನಿಮ್ಮ ಚರ್ಮವನ್ನು ತಾಕುವುದು ತಪ್ಪುತ್ತದೆ. ಹೀಗೆ ಈ ಕಿರಣಗಳು ಚರ್ಮವನ್ನು ನೇರವಾಗಿ ತಾಕುವುದರಿಂದ ಡಿಎನ್‌ಎಗಳ ಮೇಲೆ ಪರಿಣಾಮ ಬೀರಿ ಚರ್ಮದ ಕ್ಯಾನ್ಸರ್‌ನಂತಹ ಕಾಯಿಲೆಯೂ ಬರುವ ಅಪಾಯವಿದೆ. ನಿತ್ಯವೂ ಸನ್‌ಸ್ಕ್ರೀನ್‌ ಹಚ್ಚುವುದರಿಂದ ಮೆಲನೋಮ, ಕಾರ್ಸಿನೋಮಾದಂತಹ ಕ್ಯಾನ್ಸರ್‌ ಬರುವ ಅಪಾಯವನ್ನು ತಪ್ಪಿಸಬಹುದು. ಚರ್ಮದ ಮೇಲೆ ಯುವಿ ಕಿರಣಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು.


ಚರ್ಮದ ಬಹುಪದರಗಳ ಮೇಲೆ ಹಾನಿ

ಯುವಿ ಕಿರಣಗಳಿಂದ ಚರ್ಮದ ಮೇಲೆ ಹಾನಿಯಾಗಿ ಸನ್‌ಬರ್ನ್‌ ಆಗುವ ಅಪಾಯ ಹೆಚ್ಚು. ಈ ಕಿರಣಗಳು, ಕೇವಲ ಚರ್ಮದ ಮೇಲ್ಮೈಯ ಮೇಲಷ್ಟೇ ಅಲ್ಲ, ಚರ್ಮದ ಬಹುಪದರಗಳ ಮೇಲೂ ಹಾನಿ ಮಾಡುತ್ತದೆ. ಇದರಿಂದ ಚರ್ಮ ಕೆಂಪಾಗುವುದು, ಉರಿಯೂತ, ನೋವು ಇತ್ಯಾದಿಗಳಾಗುತ್ತವೆ. ಸನ್‌ಸ್ಕ್ರೀನ್‌ ಹಚ್ಚಿದರೆ ಈ ಹಾನಿಯನ್ನು ತಪ್ಪಿಸಬಹುದು.

ಚರ್ಮದ ಬಿಗುತನ

ಯುವಿ ಕಿರಣಗಳು ಚರ್ಮದ ಒಳಗಿನ ಪದರವರೆಗೆ ತಲುಪಿ ಕೊಲಾಜೆನ್‌ ಹಾಗೂ ಇಲಾಸ್ಟಿನ್‌ ಫೈಬರ್‌ಗಳನ್ನು ಒಡೆಯುವ ಮೂಲಕ ಚರ್ಮದ ಮೇಲೆ ನೆರಿಗೆಗಳು, ಕಪ್ಪು ಚುಕ್ಕೆಗಳನ್ನು ಹೆಚ್ಚು ಮಾಡುತ್ತದೆ. ಚರ್ಮ ಜೋತು ಬೀಳುತ್ತದೆ. ಚರ್ಮದ ಬಿಗುತನ ಕಡಿಮೆಯಾಗುತ್ತದೆ.

ಕಪ್ಪು ಕಲೆ

ಯುವಿ ಕಿರಣಗಳು ಮೆಲನೋಸೈಟ್‌ಗಳನ್ನು ಪ್ರಚೋದಿಸುವ ಕಾರಣದಿಂದ ಮೆಲನಿನ್‌ ಉತ್ಪಾದನೆ ಹೆಚ್ಚಾಗುತ್ತದೆ. ಇದರಿಂದ ಚರ್ಮದ ಮೇಲೆ ಕಪ್ಪು ಕಲೆಗಳು, ಅಲ್ಲಲ್ಲಿ ಬದಲಾದ ಚರ್ಮದ ಬಣ್ಣ ಇತ್ಯಾದಿ ಸಮಸ್ಯೆಗಳು ಆರಂಭವಾಗುತ್ತದೆ. ಸನ್‌ಸ್ಕ್ರೀನ್‌ ಹೀಗಾಗದಂತೆ ತಡೆಗಟ್ಟುತ್ತದೆ.


ಅಲರ್ಜಿಯಂತಹ ಸಮಸ್ಯೆ

ಕೆಲವು ಮಂದಿಯ ಚರ್ಮ ಸೂರ್ಯನ ಬೆಳಕಿಗೆ ತೆರೆದುಕೊಂಡ ತಕ್ಷಣ ಅಲರ್ಜಿಯಂತಹ ಸಮಸ್ಯೆಗಳು ಉಂಟಾಗುತ್ತದೆ. ಸನ್‌ಸ್ಕ್ರೀನ್‌ ಹಚ್ಚುವುದರಿಂದ ಇದನ್ನು ತಡೆಯಬಹುದು.

ಅಂಗಾಂಶಗಳ ಮೇಲೆ ಕೆಟ್ಟ ಪರಿಣಾಮ

ಯುವಿ ಕಿರಣಗಳು ಫ್ರೀ ರ್ಯಾಡಿಕಲ್ಸ್‌ಗಳ ಬಿಡುಗಡೆಗೆ ಉದ್ದೀಪಿಸುವುದರಿಂದ ಇದು ಚರ್ಮದ ಅಂಗಾಂಶಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸನ್‌ಸ್ಕ್ರೀನ್‌ನಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ಇದನ್ನು ಕಡಿಮೆ ಮಾಡುತ್ತವೆ. ವಾತಾವರಣದಲ್ಲಿರುವ ಮಾಲಿನ್ಯ ಚರ್ಮವನ್ನು ನೇರವಾಗ ತಲುಪದಂತೆಯೂ ನೋಡಿಕೊಳ್ಳುತ್ತದೆ.

ಒಣ ಚರ್ಮ

ಸೂರ್ಯನ ಬೆಳಕಿನ ಚರ್ಮ ಹೆಚ್ಚು ಹೊತ್ತು ತೆರೆದೇ ಇರುವುದರಿಂದ ಚರ್ಮ ಒಣಗಿದಂತಾಗುತ್ತದೆ. ಚರ್ಮದ ಮೇಲಿನ ನೀರಿನಂಶ ಆರಿಹೋಗುವುದು ಸೇರಿದಂತೆ ನಾನಾ ಸಮಸ್ಯೆಗಳು ಕಾಡುತ್ತವೆ. ಇದರಿಂದ ಚರ್ಮ ನಿಸ್ತೇಜವಾಗಿ, ಒಣವಾಗಿ ಕಾಣಿಸುತದೆ. ತಾಜಾತನ ಮಾಯವಾಗುತ್ತದೆ.

ಇದನ್ನೂ ಓದಿ: Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ನೀರುಗುಳ್ಳೆ, ಕಜ್ಜಿ ಸಂಭವ

ಬೇಸಿಗೆಯ ಬಿಸಿಲಿಗೆ ಚರ್ಮ ಸದಾ ತೆರೆದಿರುವುದರಿಂದ ಬೇಸಿಗೆ ನೀರುಗುಳ್ಳೆಗಳು, ಕಜ್ಜಿಗಳು ಬರುವ ಸಂಭವವೂ ಇರುತ್ತದೆ. ಸನ್‌ಸ್ಕ್ರೀನ್‌ ಹಚ್ಚುವುದರಿಂದ ಇಂಥ ಸಮಸ್ಯೆ ಬರಲಾರದು.

ರಕ್ಷಣಾ ಕವಚ

ಸನ್‌ಸ್ಕ್ರೀನ್‌ ಹಚ್ಚುವುದಕ್ಕೂ ಮೊದಲು ನೀವು ಹಚ್ಚಿದ ಮಾಯ್‌ಶ್ಚರೈಸರ್‌ ಅಥವಾ ಇತರ ಕ್ರೀಂಗಳು ನಿಮ್ಮ ಚರ್ಮದೊಳಕ್ಕೆ ಸರಿಯಾಗಿ ಇಳಿಯುತ್ತವೆ ಹಾಗೂ ಇದಕ್ಕೆ ರಕ್ಷಣಾ ಕವಚವಾಗಿ ಸನ್‌ಸ್ಕ್ರೀನ್‌ ಲೋಶನ್‌ ಕೆಲಸ ಮಾಡುತ್ತದೆ. ಹೀಗಾಗಿ, ಮೊದಲು ಹಚ್ಚಿದ ಕ್ರೀಂಗಳ ಸದ್ಬಳಕೆಯನ್ನು ಚರ್ಮ ಮಾಡಿಕೊಳ್ಳುತ್ತದೆ.

Continue Reading

ಆರೋಗ್ಯ

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

ಆರೋಗ್ಯ ಕ್ಷೇತ್ರದಲ್ಲೂ ಈಗ ಡಿಜಿಟಲ್ ಬಳಕೆ (UPI in Healthcare) ಹೆಚ್ಚಾಗಿದ್ದು, ನೋಂದಣಿ, ಓಪಿಡಿ ಟೋಕನ್ ಪಡೆಯಲು, ಪಾವತಿಗಳನ್ನು ನಡೆಸಲು ಪ್ರತಿ ದಿನ ಒಂದು ಲಕ್ಷಕ್ಕೂ ಹೆಚ್ಚು ಜನ ಸ್ಕ್ಯಾನರ್ ಗಳನ್ನು ಬಳಸಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ

VISTARANEWS.COM


on

By

UPI in Healthcare
Koo

ಡಿಜಿಟಲ್ ಕ್ಷೇತ್ರದಲ್ಲಿ (digital wave) ಈಗ ಕ್ರಾಂತಿಯಾಗುತ್ತಿದೆ. ಎಲ್ಲ ಕಡೆಯೂ ಯುಪಿಐ ಆಧಾರಿತ ಪಾವತಿಗಳು (UPI in Healthcare) ದಿನೇ ದಿನೇ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯ ಕ್ಷೇತ್ರದಲ್ಲೂ (health sector) ಡಿಜಿಟಲ್ ಪಾವತಿ, ಇತರ ತಂತ್ರಜ್ಞಾನಗಳ ಬಳಕೆ ಹೊಸ ಅಲೆಯನ್ನೇ ಸೃಷ್ಟಿಸುತ್ತಿದೆ. ಭಾರತದ (India) ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ತರಂಗ ಹೊರಹೊಮ್ಮುವ ಲಕ್ಷಣಗಳು ಕಾಣುತ್ತಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬರುತ್ತವೆ.

ಪ್ರತಿ ದಿನ ಸುಮಾರು ಒಂದು ಲಕ್ಷ ರೋಗಿಗಳು ಭಾರತದಾದ್ಯಂತ ಆಸ್ಪತ್ರೆ ಮತ್ತು ಚಿಕಿತ್ಸಾಲಯಗಳ ಹೊರರೋಗಿ ವಿಭಾಗದಲ್ಲಿ (OPD) ತಮ್ಮನ್ನು ನೋಂದಾಯಿಸಿಕೊಳ್ಳಲು ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡುತ್ತಾರೆ. ಈ ಟ್ರೆಂಡ್ ವೇಗವನ್ನು ಪಡೆದಿರುವುದು ಕೇವಲ ಮೆಟ್ರೋಪಾಲಿಟನ್ ಪ್ರದೇಶಗಳಲ್ಲ. ಉತ್ತರ ಪ್ರದೇಶವು ಆಂಧ್ರಪ್ರದೇಶ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ದೆಹಲಿಯಲ್ಲೂ ಹೆಚ್ಚಾಗಿ ಜನರು ಡಿಜಿಟಲ್ ಬಳಕೆಯನ್ನು ಹೆಚ್ಚಿಸಿದ್ದಾರೆ. ಯುಪಿಯಲ್ಲಿ, 86 ಲಕ್ಷಕ್ಕೂ ಹೆಚ್ಚು ಕ್ಯೂಆರ್ ಕೋಡ್ ಆಧಾರಿತ ನೋಂದಣಿಗಳನ್ನು ನೋಂದಾಯಿಸಲಾಗಿದೆ. ಕಾನ್ಪುರ್ ನಗರ ಮತ್ತು ಪ್ರಯಾಗ್‌ರಾಜ್ ನಲ್ಲೂ ಗರಿಷ್ಠ ನೋಂದಣಿಗಳು ನಡೆದಿವೆ.

ಎಲ್ಲ ವರದಿಗಳೂ ಡಿಜಿಟಲ್‌ನಲ್ಲಿ ಲಭ್ಯ

ರೋಗಿಗಳು ಸ್ಕ್ಯಾನಿಂಗ್ ಮಾಡುವುದಲ್ಲದೆ ತಮ್ಮ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸುತ್ತಿದ್ದಾರೆ ಅಥವಾ ಬಳಸುತ್ತಿದ್ದಾರೆ. ಇದರರ್ಥ ಅವರು ಡಿಜಿಟಲ್ ಪ್ರಿಸ್ಕ್ರಿಪ್ಷನ್‌ಗಳು, ಫಾರ್ಮಸಿ ದಾಖಲೆಗಳು, ರೋಗನಿರ್ಣಯದ ವರದಿಗಳು ಮತ್ತು ಬಹು ಆರೋಗ್ಯ ದಾಖಲೆಗಳನ್ನು ಒಂದೇ ಸ್ಥಳದಲ್ಲಿ ಸಂಗ್ರಹಿಸಿಡುತ್ತಿದ್ದಾರೆ. ಮೊಬೈಲ್ ಫೋನ್‌ನಲ್ಲಿ ಎಲ್ಲ ದಾಖಲೆ ಲಭ್ಯವಾಗುವುದರಿಂದ ಕಾಗದ ಆಧಾರಿತ ಪ್ರಿಸ್ಕ್ರಿಪ್ಷನ್‌ಗಳು ಅಥವಾ ವರದಿಗಳನ್ನು ಸಾಗಿಸುವ ಅಗತ್ಯವಿರುವುದಿಲ್ಲ.

1 ಲಕ್ಷ ಮಂದಿ ಬಳಕೆ

ಸರಕಾರದ ಅಂಕಿಅಂಶಗಳು ಪ್ರತಿದಿನ ಸರಾಸರಿ 1 ಲಕ್ಷಕ್ಕೂ ಹೆಚ್ಚು ನಾಗರಿಕರು ಈ ವೈಶಿಷ್ಟ್ಯವನ್ನು ಬಳಸುತ್ತಿದ್ದಾರೆ. ಇದು ಏಪ್ರಿಲ್ 2023 ಮತ್ತು ಏಪ್ರಿಲ್ 2024 ರ ನಡುವೆ ಮಾಸಿಕ ಟೋಕನ್‌ಗಳ ಸಂಖ್ಯೆಯಲ್ಲಿ ನಾಲ್ಕು ಪಟ್ಟು ಹೆಚ್ಚಳವನ್ನು ತೋರಿಸುತ್ತಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (NHA) ವಿಶೇಷ ಕರ್ತವ್ಯದ ಅಧಿಕಾರಿ ಹಿಮಾಂಶು ಬುರಾದ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.


ಹೆಚ್ಚು ಬಳಸಿದ ಆಸ್ಪತ್ರೆಗಳು

ಏಪ್ರಿಲ್‌ನಲ್ಲಿ ಸ್ಕ್ಯಾನ್ ಮತ್ತು ಟೋಕನ್ ಹಂಚಿಕೆ ವೈಶಿಷ್ಟ್ಯವನ್ನು ಹೆಚ್ಚು ವ್ಯಾಪಕವಾಗಿ ಬಳಸಿದ ಉತ್ತಮ ಪ್ರದರ್ಶನ ನೀಡುವ ಆಸ್ಪತ್ರೆಗಳೆಂದರೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS), ನವದೆಹಲಿ ಅನಂತರ AIIMS ಭೋಪಾಲ್ (ಮಧ್ಯಪ್ರದೇಶ), ಸರ್ಕಾರಿ ಜನರಲ್ ಆಸ್ಪತ್ರೆ, ಕಾಕಿನಾಡ (ಆಂಧ್ರ ಪ್ರದೇಶ) , ಗೌತಮ್ ಬುದ್ಧ ನಗರದಲ್ಲಿ (ಉತ್ತರ ಪ್ರದೇಶ) ಜಿಲ್ಲಾ ಸಂಯೋಜಿತ ಆಸ್ಪತ್ರೆ ಮತ್ತು ಉತ್ತರ ಪ್ರದೇಶದ ಝಾನ್ಸಿಯಲ್ಲಿರುವ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜು.

ಅತೀ ಹೆಚ್ಚು ನೋಂದಣಿ

ಅಧಿಕೃತವಾಗಿ ‘ಸ್ಕ್ಯಾನ್ ಮತ್ತು ಶೇರ್’ ಎಂದು ಕರೆಯಲ್ಪಡುವ ವೈಶಿಷ್ಟ್ಯವನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ABDM) ಅಡಿಯಲ್ಲಿ ಅಕ್ಟೋಬರ್ 2022 ರಲ್ಲಿ ಪರಿಚಯಿಸಲಾಯಿತು. ಇದು ರೋಗಿಗಳಿಗೆ OPD ನೋಂದಣಿ ಕೌಂಟರ್‌ನಲ್ಲಿ ಇರಿಸಲಾದ QR ಕೋಡ್ ಅನ್ನು ಸ್ಕ್ಯಾನ್ ಮಾಡಲು ಮತ್ತು ತ್ವರಿತ ನೋಂದಣಿಗಾಗಿ ಅವರ ABHA ಪ್ರೊಫೈಲ್ ಅನ್ನು ಹಂಚಿಕೊಳ್ಳಲು ಅನುಮತಿಸುತ್ತದೆ.

ABHA ಎಂಬುದು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯ ಪೂರ್ಣ ರೂಪವಾಗಿದೆ. ABHA ಕಾರ್ಡ್ ABHA ID ಎಂಬ ವಿಶಿಷ್ಟ 14-ಅಂಕಿಯ ಗುರುತಿನ ಸಂಖ್ಯೆಯನ್ನು ಒಳಗೊಂಡಿದೆ. ಸಂಪೂರ್ಣ ವೈದ್ಯಕೀಯ ಇತಿಹಾಸ, ಸಮಾಲೋಚನೆ ವಿವರಗಳು ಮತ್ತು ಪ್ರಿಸ್ಕ್ರಿಪ್ಷನ್‌ಗಳನ್ನು ABHA ID ಯಲ್ಲಿ ಸೇರಿಸಲಾಗಿದೆ.

ಈ ಸೇವೆಯು ಪ್ರಸ್ತುತ ಭಾರತದ 35 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 529 ಜಿಲ್ಲೆಗಳಾದ್ಯಂತ 4,694 ಕ್ಕೂ ಹೆಚ್ಚು ಆರೋಗ್ಯ ಸೌಲಭ್ಯಗಳಲ್ಲಿ ಸಕ್ರಿಯವಾಗಿದೆ. ಮೇ 14ರಂದು 1.60 ಲಕ್ಷಕ್ಕೂ ಹೆಚ್ಚು ಟೋಕನ್‌ಗಳನ್ನು ಪಡೆಯಲಾಗಿದೆ ಎಂದು ಬುರಾದ್ ತಿಳಿಸಿದ್ದು, ಈ ಪ್ರವೃತ್ತಿಯು ಭಾರತೀಯರು ಡಿಜಿಟಲ್ ಆರೋಗ್ಯದ ಸೌಕರ್ಯವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಮತ್ತು ಕ್ರಮೇಣ ತಮ್ಮ ಡಿಜಿಟಲ್ ಆರೋಗ್ಯ ದಾಖಲೆಗಳನ್ನು ರಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಸರಾಸರಿ, ಒಂದು ಲಕ್ಷ ರೋಗಿಗಳು ಈಗ ಪ್ರತಿದಿನ ಈ ಸೌಲಭ್ಯವನ್ನು ಬಳಸುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

ಶೀಘ್ರದಲ್ಲೇ ವಿಸ್ತರಣೆ

ಒಪಿಡಿ ಕೌಂಟರ್‌ಗಳಲ್ಲಿ ನೀಡಲಾಗುವ ಸ್ಕ್ಯಾನ್ ಮತ್ತು ಶೇರ್ ಸೇವೆಯು ತಂತ್ರಜ್ಞಾನ ಆಧಾರಿತ ಪರಿಹಾರವಾಗಿದ್ದು ಇದು ಸುಮಾರು ಒಂದು ಲಕ್ಷ ರೋಗಿಗಳಿಗೆ ಪ್ರತಿದಿನ ಆಸ್ಪತ್ರೆಯ ಸರತಿ ಸಾಲಿನಲ್ಲಿ ಕಾಯುವ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ. ರೋಗಿಗಳು ತಮ್ಮ ಆರೋಗ್ಯ ಭೇಟಿಗಳ ಸಮಯದಲ್ಲಿ ಎದುರಿಸುವ ಹೊರೆಗಳನ್ನು ಕಡಿಮೆ ಮಾಡಲು, ನಾವು ಇದನ್ನು ವಿಸ್ತರಿಸುವ ಗುರಿಯನ್ನು ಹೊಂದಿದ್ದೇವೆ. ಔಷಧಾಲಯ ಕೌಂಟರ್‌ಗಳು ಮತ್ತು ಪ್ರಯೋಗಾಲಯಗಳನ್ನು ಈ ಸೇವೆಯಡಿ ಸೇರಿಸಲು ನಿರ್ಧರಿಸಿದ್ದೇವೆ ಎಂದರು.

ವಯಸ್ಸಾದ ರೋಗಿಗಳು, ಗರ್ಭಿಣಿಯರು ಮತ್ತು ಇತರ ನಾಗರಿಕರು ಆರೋಗ್ಯ ಸೇವೆಗಳನ್ನು ಪಡೆಯಲು ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಹೆಚ್ಚುವರಿಯಾಗಿ, ABHA- ಆಧಾರಿತ ನೋಂದಣಿಗಳು ರೋಗಿಗಳಿಗೆ ಅವರ OPD ಡಿಜಿಟಲ್ ಪ್ರಿಸ್ಕ್ರಿಪ್ಷನ್‌ಗಳು, ಫಾರ್ಮಸಿ IPD ದಾಖಲೆಗಳು ಮತ್ತು ರೋಗನಿರ್ಣಯದ ವರದಿಗಳಿಗೆ ಇದು ಡಿಜಿಟಲ್ ಪ್ರವೇಶಕ್ಕೆ ಅನುಮತಿಯನ್ನು ನೀಡುತ್ತದೆ.

Continue Reading
Advertisement
Lady Constable
ದೇಶ1 hour ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 20242 hours ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ2 hours ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ2 hours ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ2 hours ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ3 hours ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ3 hours ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್3 hours ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ3 hours ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ3 hours ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ9 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು12 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌