Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ - Vistara News

ದೇಶ

Narendra Modi: ಲೋಕಸಭಾ ಚುನಾವಣೆಯ ಫಲಿತಾಂಶದಿಂದ ದೇಶೀಯ ಮಾರುಕಟ್ಟೆಗೆ ಉತ್ತೇಜನ; ಮೋದಿ ಬಣ್ಣನೆ

Narendra Modi: ಈ ಲೋಕಸಭಾ ಚುನಾವಣೆಯ ಫಲಿತಾಂಶ ದೇಶೀಯ ಬಂಡವಾಳ ಮಾರುಕಟ್ಟೆಗೆ ಉತ್ತೇಜನ ನೀಡಿದೆ ಎಂದು ರಾಜ್ಯಸಭೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಹೇಳಿದರು. ʼಭಾರತವು ಸದ್ಯದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, ಅದು ದೇಶೀಯ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಸಕಾರಾತ್ಮಕ ಪರಿಣಾಮ ಬೀರಲಿದೆʼʼ ಎಂದು ಅವರು ಅಭಿಪ್ರಾಯಪಟ್ಟರು.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜ್ಯಸಭೆ (Rajya Sabha)ಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ (ಜುಲೈ 3) ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಮಾತನಾಡಿ, ಈ ಲೋಕಸಭಾ ಚುನಾವಣೆಯ ಫಲಿತಾಂಶ ದೇಶೀಯ ಬಂಡವಾಳ ಮಾರುಕಟ್ಟೆಗೆ ಉತ್ತೇಜನ ನೀಡಿದೆ ಎಂದು ಹೇಳಿದರು.

ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ ಭಾಷಣಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಧನ್ಯವಾದ ಅರ್ಪಿಸುವ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ʼʼಭಾರತವು ಸದ್ಯದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, ಅದು ದೇಶೀಯ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಸಕಾರಾತ್ಮಕ ಪರಿಣಾಮ ಬೀರಲಿದೆʼʼ ಎಂದು ಅಭಿಪ್ರಾಯಪಟ್ಟರು.

“ಭಾರತದ ಆರ್ಥಿಕತೆಯು 10ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಜಿಗಿದಿದೆ. ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯನ್ನಾಗಿ ಮಾಡಲು ನಮಗೆ ಜನಾದೇಶ ಸಿಕ್ಕಿದೆ. ದೇಶದಲ್ಲಿ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ತ್ವರಿತ ಪರಿವರ್ತನೆಯಾಗಲಿದೆ. ತಂತ್ರಜ್ಞಾನದ ಹೆಜ್ಜೆ ಗುರುತುಗಳನ್ನು ಇಂದು ಅನೇಕ ಕ್ಷೇತ್ರಗಳಲ್ಲಿ ಕಾಣಬಹುದು” ಎಂದು ಅವರು ಹೇಳಿದರು.

ಮಹಿಳಾ ಸಬಲೀಕರಣ

ʼʼಮಹಿಳಾ ಸಬಲೀಕರಣದ ಪ್ರಯೋಜನಗಳು ಎಲ್ಲ ಕ್ಷೇತ್ರಗಳಲ್ಲಿ ಗೋಚರಿಸುತ್ತಿವೆ. ಸ್ವಸಹಾಯ ಗುಂಪುಗಳಲ್ಲಿ ಒಂದು ಕೋಟಿ ಮಹಿಳೆಯರು ‘ಲಖ್ಪತಿ ದೀದಿ’ಗಳಾಗಿದ್ದಾರೆ. ಈ ಸಂಖ್ಯೆ 3 ಕೋಟಿ ಹೆಚ್ಚಿಸಲು ಮುಂದಿನ ದಿನಗಳಲ್ಲಿ ಯತ್ನಿಸುತ್ತೇವೆ. ಜತೆಗೆ ನಮ್ಮ ಸರ್ಕಾರ ಬೆಂಬಲ ಬೆಲೆ ಹೆಚ್ಚಳ, ರಸಗೊಬ್ಬರಗಳಿಗೆ ರಿಯಾಯಿತಿ ನೀಡುವ ಮೂಲಕ ಕೃಷಿ ಕ್ಷೇತ್ರದ ಬಲವರ್ಧನೆಗೂ ಮುಂದಾಗಿದೆʼʼ ಎಂದು ತಿಳಿಸಿದರು.

ಮುಂದಿನ ಐದು ವರ್ಷಗಳಲ್ಲಿ ಮೂಲಭೂತ ಸೌಕರ್ಯಗಳ ವೃದ್ಧಿಗೆ ಶ್ರಮಿಸುತ್ತೇವೆ ಮತ್ತು ಬಡತನದ ವಿರುದ್ಧದ ಹೋರಾಡುತ್ತೇವೆ. ಮುಂದಿನ ಐದು ವರ್ಷಗಳಲ್ಲಿ ಈ ದೇಶವು ಬಡತನದ ವಿರುದ್ಧ ವಿಜಯಶಾಲಿಯಾಗಿ ಹೊರಹೊಮ್ಮಲಿದೆ ಎನ್ನುವ ವಿಶ್ವಾಸವಿದೆ. ಕಳೆದ 10 ವರ್ಷಗಳ ಅನುಭವದ ಆಧಾರದ ಮೇಲೆ ನಾನು ಇದನ್ನು ಹೇಳುತ್ತಿದ್ದೇನೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾದಾಗ, ಅದರ ಪರಿಣಾಮವು ಜೀವನದ ಪ್ರತಿಯೊಂದು ಕ್ಷೇತ್ರದ ಮೇಲೂ ಬೀರುತ್ತದೆ. ಭಾರತವು ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ನಿರ್ಣಾಯಕ ಹೆಜ್ಜೆಗಳನ್ನು ಇಟ್ಟಿದೆ ಮತ್ತು ಇಂದು ಅದರ ಫಲಿತಾಂಶ ನಮ್ಮ ಕಣ್ಣ ಮುಂದಿದೆ. ನಾವು ಮಹಿಳೆಯರ ಆರೋಗ್ಯ, ನೈರ್ಮಲ್ಯ ಮತ್ತು ಸ್ವಾಸ್ಥ್ಯ ಕ್ಷೇತ್ರಗಳಲ್ಲಿಯೂ ಕೆಲಸ ಮಾಡಿದ್ದೇವೆʼʼ ಎಂದು ಮೋದಿ ಹೇಳಿದರು.

ಈಗ ರದ್ದಾಗಿರುವ 2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಅವರು ಆಮ್ ಆದ್ಮಿ ಪಕ್ಷ (ಎಎಪಿ) ವಿರುದ್ಧ ವಾಗ್ದಾಳಿ ನಡೆಸಿದರು. ಜತೆಗೆ ಕಾಂಗ್ರೆಸ್ ಮತ್ತು ಎಎಪಿ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿದರು. “ಕೇಂದ್ರ ಸರ್ಕಾರವು ಸಿಬಿಐ ಮತ್ತು ಇಡಿ (ಜಾರಿ ನಿರ್ದೇಶನಾಲಯ) ನಂತಹ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಈಗ ಆರೋಪಿಸುತ್ತಿರುವವರು ಒಮ್ಮೆ ಅವುಗಳನ್ನು ಭ್ರಷ್ಟರ ವಿರುದ್ಧ ಬಳಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು” ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

BSP President: ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

BSP President
Koo

ಚೆನ್ನೈ: ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿದೆ. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಮಾರಕಾಸ್ತ್ರಗಳ ಸಮೇತ ಆಗಮಿಸಿದ ಅವರು ದಾಳಿ ನಡೆಸಿ, ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ನಗರದಲ್ಲಿರುವ ಥೌಸಂಡ್‌ ಲ್ಯಾಂಪ್ಸ್‌ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಇಷ್ಟಾದರೂ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ.

ಆರ್ಮ್‌ಸ್ಟ್ರಾಂಗ್‌ ಜತೆಗೆ ಇನ್ನಿಬ್ಬರ ಮೇಲೆಯೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ದಾಳಿ ಮಾಡಿದ ಆರು ಮಂದಿಯ ಕುರಿತು ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Continue Reading

ದೇಶ

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

RBI Fine: ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಳಿಕ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

RBI Fine
Koo

ಮುಂಬೈ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ (Punjab National Bank) ಭಾರತೀಯ ರಿಸರ್ವ್‌ ಬ್ಯಾಂಕ್‌ 1.31 ಕೋಟಿ ರೂಪಾಯಿ ದಂಡ ವಿಧಿಸಿದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೇಂದ್ರೀಯ ಬ್ಯಾಂಕ್‌ ಪಿಎನ್‌ಬಿಗೆ (PNB) ದಂಡ ವಿಧಿಸಿದೆ. ಕೆವೈಸಿ (Know Your Customer), ಸಾಲಗಳು ಹಾಗೂ ಅಡ್ವಾನ್ಸಸ್‌ ಕುರಿತು ನಿಯಮಗಳನ್ನು ಪಾಲಿಸಲು ಪಿಎನ್‌ಬಿ ವಿಫಲವಾದ ಕಾರಣ ಆರ್‌ಬಿಐ ದಂಡದ (RBI Fine) ಬರೆ ಎಳೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಎರಡು ರಾಜ್ಯಗಳಲ್ಲಿರುವ ರಾಜ್ಯ ಸರ್ಕಾರಿ ಒಡೆತನದ ನಿಗಮಗಳಿಗೆ ಸಾಲ ನೀಡಿರುವುದು ಸೇರಿ ಹಲವು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಪಿಎನ್‌ಬಿಗೆ ಆರ್‌ಬಿಐ ನೋಟಿಸ್‌ ಜಾರಿಗೊಳಿಸಿತ್ತು. ನೋಟಿಸ್‌ಗೆ ಪಿಎನ್‌ಬಿ ನೀಡಿದ ಪ್ರತಿಕ್ರಿಯೆಯ ಆಧಾರದ ಮೇಲೆ ಆರ್‌ಬಿಐ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.

RBI Balance Sheet

ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ತಿಂಗಳು ದಂಡ

ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ಕಳೆದ ಜೂನ್‌ ತಿಂಗಳಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ ವಿಧಿಸಿತ್ತು. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಲಾಗಿತ್ತು.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI Dividend: ಆರ್‌ಬಿಐನಿಂದ ಕೇಂದ್ರಕ್ಕೆ 2.11 ಲಕ್ಷ ಕೋಟಿ ರೂ.‌ ಡಿವಿಡೆಂಡ್! ಮುಂದಿನ ಸರ್ಕಾರಕ್ಕೆ ವರ!

Continue Reading

ವೈರಲ್ ನ್ಯೂಸ್

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

VISTARANEWS.COM


on

By

Viral Video
Koo

ಆಧಾರ್ ಕಾರ್ಡ್ ನಂತಹ (Aadhar card) ಕೆಲವೊಂದು ದಾಖಲೆಗಳಿಗೆ ಮಕ್ಕಳ (child) ಫೋಟೋ (photo) ಕಡ್ಡಾಯವಾಗಿರುತ್ತದೆ. ಆದರೆ ಪುಟ್ಟ ಮಕ್ಕಳ ಫೋಟೋ ತೆಗೆಸುವ ವೇಳೆಗೆ ತಂದೆ, ತಾಯಿ ಮಾತ್ರವಲ್ಲ ಫೋಟೋಗ್ರಾಫರ್ ಕೂಡ ಸುಸ್ತಾಗಿ ಬಿಡುತ್ತಾರೆ. ಆದರೆ ಇಲ್ಲೊಂದು ಮಗು ಮಾತ್ರ ಫೋಟೋ ಎಂದಾಕ್ಷಣ ತನ್ನ ಮುದ್ದಾದ ಭಂಗಿಯನ್ನು ತೋರಿಸಿ ಎಲ್ಲರ ಮನ ಗೆದ್ದಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದ್ದು, ಸಾಕಷ್ಟು ಮಂದಿಯ ಮೆಚ್ಚುಗೆ ಕೂಡ ಗಳಿಸಿದೆ.

ಸಣ್ಣ ಮಕ್ಕಳು ಮಾತ್ರವಲ್ಲ ದೊಡ್ಡವರ ಫೋಟೋಗಳು ಆಧಾರ್ ಕಾರ್ಡ್‌, ರೇಷನ್ ಕಾರ್ಡ್, ಮತದಾರರ ಗುರುತು ಪತ್ರದಲ್ಲಿ ಅಸಮಾಧಾನಗೊಂಡಿರುವಂತೆ ತೋರಿಸುತ್ತದೆ. ಆದರೆ ಈ ಪುಟ್ಟ ಹುಡುಗಿ ಮಾತ್ರ ಯಾವುದೇ ತಪ್ಪು ಆಗದಂತೆ ನೋಡಿಕೊಂಡಳು. ಗುರುತಿನ ಚೀಟಿಗಾಗಿ ಉತ್ತಮ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.
ಅವಳು ಕೆಮರಾದ ಮುಂದೆ ಮುಗುಳ್ನಕ್ಕಿರುವುದು ಮಾತ್ರವಲ್ಲ ತನ್ನ ವಿಭಿನ್ನ ಭಂಗಿಯನ್ನು ತೋರಿ ಎಲ್ಲರ ಮನ ಗೆದ್ದಳು.

ತಾನು ಯಾವುದಕ್ಕಾಗಿ ಫೋಟೋ ತೆಗೆಸಿಕೊಳ್ಳುತ್ತಿದ್ದೇನೆ ಎಂಬ ಅರಿವಿಲ್ಲದ ಈ ಮಗು ಆಧಾರ್ ಕಾರ್ಡ್ ಫೋಟೋಗಾಗಿ ಬಗೆ ಬಗೆಯ ಪೋಸ್ ನೀಡಿದ್ದಾಳೆ. 20ಕ್ಕೂ ಹೆಚ್ಚು ಪೋಸ್ ನೀಡಿರುವ ಆಕೆಯ ಯಾವ ಫೋಟೋವನ್ನು ಕಾರ್ಡ್ ನಲ್ಲಿ ಅಚ್ಚು ಹಾಕುವ ಗೊಂದಲ ಈಗ ಆಧಾರ್ ಕಾರ್ಡ್ ಮಾಡುವ ಸಿಬ್ಬಂದಿಯದ್ದಾಗಿದೆ.


ಗುರುತು ಚೀಟಿಗಳಿಗಾಗಿ ಸಾಮಾನ್ಯವಾಗಿ ವಯಸ್ಕರ ಫೋಟೋ ತೆಗೆಯುವುದು ಸುಲಭ. ಆದರೆ ಮಕ್ಕಳ ಫೋಟೋ ತೆಗೆಯುವುದು ಅಷ್ಟು ಸುಲಭವಲ್ಲ. ಅವುಗಳ ಗಮನ ಎಲ್ಲೋ ಇರುತ್ತದೆ. ಇನ್ನು ಕೆಲವು ಮಕ್ಕಳು ಅಪರಿಚಿತರನ್ನು ನೋಡಿ ಅಳಲು ಪ್ರಾರಂಭಿಸುತ್ತದೆ. ಮತ್ತೆ ಕೆಲವರು ನಿಂತಲ್ಲಿ ನಿಲ್ಲಲ್ಲ. ಅತ್ತಿತ್ತ ಓಡಿ ಹೋಗುವುದು ಮಾಡುತ್ತಾರೆ. ಇದಲ್ಲ ಮುಗಿದು ಒಂದು ಒಳ್ಳೆಯ ಫೋಟೋ ಸಿಕ್ಕರೆ ಮಾತ್ರ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಲು ಸಾಧ್ಯ. ಇಲ್ಲವಾದರೆ ಮತ್ತದೇ ಮಕ್ಕಳ ತಕರಾರು ಎದುರಿಸಬೇಕಾಗುತ್ತದೆ.

ಇದನ್ನೂ ಓದಿ: Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಆದರೆ ಈ ಮಗುವನ್ನು ಪೋಷಕರು ಆಧಾರ್ ಕಾರ್ಡ್ ಸೆಂಟರ್‌ಗೆ ಕರೆದುಕೊಂಡು ಬಂದು ಕುರ್ಚಿಯ ಮೇಲೆ ನಿಲ್ಲಿಸಿ ಕೆಮರಾಗೆ ಪೋಸ್ ನೀಡಲು ಹೇಳಿದ್ದಾರೆ. ಫೋಟೋ ತೆಗೆಯುತ್ತಾರೆ. ಕೆಮರಾ ನೋಡು ಎಂದಿದ್ದಾರೆ. ತಕ್ಷಣ ಮಗು ಒಂದರ ಮೇಲೊಂದರಂತೆ ಪೋಸ್ ನೀಡುತ್ತಾ ಹೋಗಿದ್ದಾಳೆ. ಪುಟಾಣಿ ಮಗುವಿನ ಈ ಪೋಸ್ ಅಲ್ಲಿರುವ ಸಿಬ್ಬಂದಿಗೆ ಮಾತ್ರವಲ್ಲ ಅಲ್ಲಿದ್ದವರೆಲ್ಲರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಫೋಟೋ ನೋಡಿ ಮೆಚ್ಚುಗೆ ವ್ಯಕ್ತಪಡಿಸಿ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ.

Continue Reading

ದೇಶ

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

ಕೇರಳದಲ್ಲಿ ಸರ್ಕಾರಿ (Kerala Govt) ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮುಸ್ಲಿಂ ಮತ್ತು ಕ್ರಿಶ್ಚಿಯನರು ಮೇಲುಗೈ ಸಾಧಿಸಿದ್ದಾರೆ. ಒಟ್ಟು ಸರ್ಕಾರಿ ಉದ್ಯೋಗಿಗಳಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಮಾತ್ರ ಕೆಲಸ ಮಾಡುತ್ತಿರುವ ಸಂಗತಿ ಅಂಕಿಅಂಶಗಳಿಂದ ಬಹಿರಂಗವಾಗಿದೆ. ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ.

VISTARANEWS.COM


on

By

Kerala govt
Koo

ಕೇರಳ ಸರ್ಕಾರದ (Kerala Govt) ಪ್ರತಿ ಮೂರು ಸರ್ಕಾರಿ ಉದ್ಯೋಗಿಗಳಲ್ಲಿ ಒಬ್ಬ (government employee) ಮುಸ್ಲಿಂ (Muslim) ಅಥವಾ ಕ್ರಿಶ್ಚಿಯನ್ (Christian) ಆಗಿದ್ದಾರೆ. ಈ ರಾಜ್ಯದಲ್ಲಿ ಕೇವಲ 26 ಯಾದವರು, 28 ಕ್ಷತ್ರಿಯರು, 27 ಜೈನರು ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂಬುದನ್ನು ಒಪಿಂಡಿಯಾ ಡೇಟಾ ಬಹಿರಂಗಪಡಿಸಿದೆ.

ಕೇರಳ ವಿಧಾನಸಭೆಯಲ್ಲಿ (kerala vidhansabha) ಮಂಡಿಸಲಾದ ಈ ಅಂಕಿ ಅಂಶವು ರಾಜ್ಯದಲ್ಲಿ ಪ್ರಸ್ತುತ 5,45,423 ನೌಕರರು ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಲ್ಲಿ 73,774 ಮುಸ್ಲಿಮರಾಗಿದ್ದಾರೆ. ಇದು ರಾಜ್ಯದ ಎಲ್ಲ ಸರ್ಕಾರಿ ನೌಕರರಲ್ಲಿ ಶೇ. 13.5ರಷ್ಟಿದೆ ಎಂದು ಡೇಟಾ ಬಹಿರಂಗಪಡಿಸಿದೆ.

ರಾಜ್ಯ ಸರ್ಕಾರದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಕ್ರಿಶ್ಚಿಯನ್‌ ನೌಕರರಿದ್ದಾರೆ. ಲ್ಯಾಟಿನ್ ಚರ್ಚ್‌ನ ಸದಸ್ಯರಾಗಿರುವ 22,452 ಕಾರ್ಮಿಕರು ಕೇರಳ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ. 2,399 ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. 929 ಕಾರ್ಮಿಕರನ್ನು ನಾಡಾರ್ ಕ್ರಿಶ್ಚಿಯನ್ ಎಂದು ಗುರುತಿಸಲಾಗಿದೆ. ಕೇರಳದಲ್ಲಿ ಸರ್ಕಾರಿ ಉದ್ಯೋಗದಲ್ಲಿರುವ ಎಲ್ಲಾ ಕ್ರಿಶ್ಚಿಯನ್ ಸಮುದಾಯಗಳ ಸಂಖ್ಯೆ 99,494. ಅವರ ಶೇಕಡಾವಾರು ಪ್ರಮಾಣವು ಶೇ. 18.25 ರಷ್ಟಾಗಿದೆ. ಅಂದರೆ ಈ ಸಂಖ್ಯೆ ಮುಸ್ಲಿಮರಿಗಿಂತ ಹೆಚ್ಚು.


ರಾಜ್ಯದಲ್ಲಿ 1,73,268 ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ರಾಜ್ಯ ಸರ್ಕಾರದ ಕರ್ತವ್ಯದ ಭಾಗವಾಗಿದ್ದಾರೆ. ಒಟ್ಟು ಉದ್ಯೋಗಿಗಳಲ್ಲಿ ಈ ಎರಡೂ ಸಮುದಾಯದವರು ಶೇ. 31.5ರಷ್ಟು ಪ್ರಮಾಣದಷ್ಟಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸುಮಾರು ಮೂರನೇ ಒಂದು ಭಾಗದಷ್ಟು ರಾಜ್ಯ ಕಾರ್ಮಿಕರನ್ನು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ವರ್ಗೀಕರಿಸಲಾಗಿದೆ.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading
Advertisement
Hardik Pandya
ಪ್ರಮುಖ ಸುದ್ದಿ6 mins ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ1 hour ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ1 hour ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ2 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ2 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ2 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ2 hours ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ2 hours ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್2 hours ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ2 hours ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ7 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ8 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ9 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ11 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು12 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು12 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌