Site icon Vistara News

National Youth Day | ವಿವೇಕಾನಂದರ ಆದರ್ಶ, ವಿಚಾರಗಳಿಂದ ದೇಶವಾಸಿಗಳಿಗೆ ನಿರಂತರ ಮಾರ್ಗದರ್ಶನ: ಮೋದಿ

PM Modi visti to state tomorrow Here is the complete details of the program

ನವದೆಹಲಿ: ಭಾರತದಲ್ಲಿ ಸ್ವಾಮಿ ವಿವೇಕಾನಂದ ಅವರ ಜಯಂತಿಯನ್ನು ಗುರುವಾರ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಸ್ವಾಮಿ ವಿವೇಕಾನಂದರ ಉನ್ನತ ಆದರ್ಶಗಳು ಮತ್ತು ಉನ್ನತ ವಿಚಾರಗಳು ದೇಶದ ಜನರಿಗೆ ಮಾರ್ಗದರ್ಶನ ನೀಡುತ್ತಿವೆ ಎಂದು ಹೇಳಿದ್ದಾರೆ. ಭಾರತದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ(National Youth Day).

ಅವರ ಜೀವನ, ದೇಶಭಕ್ತಿ, ಆಧ್ಯಾತ್ಮಿಕತೆ ಮತ್ತ ಸಮರ್ಪಣಾಭಾವ ಎಲ್ಲವೂ ಸ್ಫೂರ್ತಿದಾಯಕ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿಯನ್ನು ಭಾರತದಲ್ಲಿ ರಾಷ್ಟ್ರೀಯ ಯುವ ದಿನ ಎಂದೂ ಆಚರಿಸಲಾಗುತ್ತದೆ. ಇದೇ ವೇಳೆ, ಕರ್ನಾಟಕದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ಉದ್ಘಾಟಿಸಲಿದ್ದಾರೆ.

ಸ್ವಾಮಿ ವಿವೇಕಾನಂದ ಜಯಂತಿಯ ಹಿನ್ನೆಲೆಯಲ್ಲಿ ಭಾರತದ ನಾನಾ ಭಾಗಗಳಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆ ಮೂಲಕ ಜನರಿಗೆ ಸ್ವಾಮಿ ವಿವೇಕಾನಂದರ ವಿಚಾರಗಳನ್ನು ತಿಳಿಸಿಕೊಡಲಾಗುತ್ತದೆ. ಇದೇ ವೇಳೆ, ರಾಷ್ಟ್ರೀಯ ಯುವ ದಿನದ ಅಂಗವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | Vivekananda Jayanti: ವಿವೇಕಾನಂದ ಮತ್ತು ಅವರ ಮೇಲಿನ ಮೂರು ಪ್ರಭಾವಗಳು

Exit mobile version