Indian Passport : 70 ಸಾವಿರ ಭಾರತಿಯರಿಂದ ಪಾಸ್‌ಪೋರ್ಟ್ ಸರೆಂಡರ್! ಕಾರಣ ಏನಿರಬಹುದು? - Vistara News

ದೇಶ

Indian Passport : 70 ಸಾವಿರ ಭಾರತಿಯರಿಂದ ಪಾಸ್‌ಪೋರ್ಟ್ ಸರೆಂಡರ್! ಕಾರಣ ಏನಿರಬಹುದು?

Indian Passport: ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರು ತಮ್ಮ ಪಾಸ್‌ಪೋರ್ಟ್‌ಗಳನ್ನು ತ್ಯಜಿಸಿದ್ದಾರೆ. ಈ ಸಂಖ್ಯೆ ಗೋವಾದಲ್ಲಿ ಹೆಚ್ಚು ವರದಿ ಹೇಳಿದೆ.

VISTARANEWS.COM


on

Indian Passport
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2011 ಮತ್ತು 2022ರ ಅವಧಿಯಲ್ಲಿ ಸುಮಾರು 70 ಸಾವಿರ ಭಾರತೀಯರು ತಮ್ಮ ಪಾಸ್‌ಪೋರ್ಟ್‌ಗಳನ್ನು (Indian Passport) ಸರೆಂಡರ್ ಮಾಡಿದ್ದಾರೆ. ಈ ಪೈಕಿ ಗೋವಾದಲ್ಲಿ (Goa) ಹೆಚ್ಚಿನ ಸಂಖ್ಯೆಯಲ್ಲಿ ಪಾಸ್‌ಪೋರ್ಟ್‌ಗಳನ್ನು ಬಿಟ್ಟು ಕೊಡಲಾಗಿದೆ. ಮಾಹಿತಿ ಹಕ್ಕು ಕಾಯಿದೆಯಡಿ (Right to Information Act) ಕೇಳಲಾದ ಪ್ರಶ್ನೆಗೆ ಸರ್ಕಾರ ಉತ್ತರಿಸಿದೆ. ಪಾಸ್‌ಪೋರ್ಟ್‌ಗಳನ್ನು ಹೆಚ್ಚಾಗಿ ಪ್ರಾದೇಶಿಕ ಕಚೇರಿಗಳಲ್ಲಿ ಸರೆಂಡರ್ ಮಾಡಲಾಗಿದೆ. ಪಾಸ್‌ಪೋರ್ಟ್ ಸರೆಂಡರ್ ಮಾಡಿರುವ ಮಾಹಿತಿಯಲ್ಲಿ ಭಾರತೀಯ ರಾಯಭಾರ ಹಾಗೂ ಹೈಕಮಿಷನ್‌ ಕಚೇರಿಗಳ ಮಾಹಿತಿ ಸೇರಿಸಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಟ್ಟುಕೊಟ್ಟ 69,303 ಪಾಸ್‌ಪೋರ್ಟ್‌ಗಳಲ್ಲಿ ಅತಿ ಹೆಚ್ಚು 28,031 (ಶೇ.40.45) ಗೋವಾ ಕಚೇರಿಯಲ್ಲಿ ದಾಖಲಾಗಿದೆ. ಗೋವಾ ನಂತರದ ಪಟ್ಟಿಯಲ್ಲಿ 9,557 ಪಾಸ್‌ಪೋರ್ಟ್‌ಗಳೊಂದಿಗೆ(ಶೇ.13.79) ಪಂಜಬ್‌ನ ಅಮೃತಸರ, ಜಲಂಧರ್ ಮತ್ತು ಚಂಡೀಗಢ ಕಚೇರಿಗಳಲ್ಲಿ ಸರೆಂಡರ್ ಮಾಡಲಾಗಿದೆ. ಪಂಜಾಬ್ ಬಳಿಕ ನಂತರದ ಸ್ಥಾನದಲ್ಲಿ ಗುಜರಾತ್ ರಾಜ್ಯವಿದೆ.

ಈ ಸುದ್ದಿಯನ್ನೂ ಓದಿ: Parliament Budget Session: ಭಾರತೀಯ ಪೌರತ್ವ ತೊರೆದ 16 ಲಕ್ಷ ಜನ, ಇದಕ್ಕೇನು ಕಾರಣ?

2011ರ ಬಳಿಕ ಪಾಸ್‌ಪೋರ್ಟ್ ತ್ಯಜಿಸುವವರ ಸಂಖ್ಯೆ ಹೆಚ್ಚಿದ್ದರೂ ಪೌರತ್ವವ ಬಿಟ್ಟುಕೊಟ್ಟವರ ಸಂಖ್ಯೆ ತೀರಾ ಕ್ಷೀಣವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. 2011ರಿಂದ 2022ರ ಅಕ್ಟೋಬರ್ 31 ರ ನಡುವೆ 16.21 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಮಾರ್ಚ್‌ನಲ್ಲಿ ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ವಿ ಮುರಳೀಧರನ್ ಲೋಕಸಭೆಗೆ ತಿಳಿಸಿದ್ದರು. ಪೌರತ್ವವನ್ನು ತ್ಯಜಿಸಲು ಅಥವಾ ಪಡೆದುಕೊಳ್ಳಲು ವೈಯಕ್ತಿಕ ಕಾರಣಗಳಿರುತ್ತವೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿತ್ತು.

ದ್ವಿಪೌರತ್ವವನ್ನು ಹೊಂದಲು ಭಾರತೀಯ ಕಾನೂನುಗಳಲ್ಲಿ ಅವಕಾಶವಿಲ್ಲ. ಹಾಗಾಗಿ, ಬೇರೆ ದೇಶದ ಪಾಸ್‌ಪೋರ್ಟ್ ಪಡೆದುಕೊಂಡವರು ಭಾರತೀಯ ಪಾಸ್‌ಪೋರ್ಟ್‌ವನ್ನು ಸರ್ಕಾರಕ್ಕೆ ಒಪ್ಪಿಸಬೇಕಾಗುತ್ತದೆ. ಹಾಗಾಗಿ, ಪಾಸ್‌ಪೋರ್ಟ್ ಸರೆಂಡರ್ ಮಾಡುವವರ ಸಂಖ್ಯೆಯು ಹೆಚ್ಚಳವಾಗಲು ಕಾರಣವಾಗಿರಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತದೆ.

ದೇಶದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

Airtel Price Hike: ರಿಲಯನ್ಸ್ ಜಿಯೋ ತನ್ನ ಮೊಬೈಲ್‌ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‌ಟೆಲ್‌ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು. ಹೊಸ ದರವು ಜುಲೈ 3ರಿಂದ ಜಾರಿಗೆ ಬರಲಿದೆ.

VISTARANEWS.COM


on

airtel price hike
Koo

ಹೊಸದಿಲ್ಲಿ: ದೇಶದ ಎರಡನೇ ಅತಿ ದೊಡ್ಡ ಇಂಟರ್‌ನೆಟ್‌ ಸೇವಾದಾತ (internet provider) ಕಂಪನಿ ಭಾರ್ತಿ ಏರ್‌ಟೆಲ್‌ (Bharti Airtel) , ತನ್ನ ಡೇಟಾ ದರಗಳನ್ನು (Airtel price hike) ಶೇ.21ರಷ್ಟು ಹೆಚ್ಚಿಸಿದೆ. ನಿನ್ನೆ ಇದರ ಪ್ರತಿಸ್ಪರ್ಧಿ ರಿಲಯನ್ಸ್‌ ಜಿಯೊ (Reliance Jio) ಡೇಟಾ ದರಗಳನ್ನು (Data Price) ಏರಿಸಿದ ಬಿನ್ನಲ್ಲೇ ಇದು ಬಂದಿದೆ.

ರಿಲಯನ್ಸ್ ಜಿಯೋ ತನ್ನ ಮೊಬೈಲ್‌ ಡೇಟಾ ಯೋಜನೆಗಳಲ್ಲಿ 12%ರಿಂದ 25%ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್‌ಟೆಲ್‌ ಇಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21%ರಷ್ಟು ಹೆಚ್ಚಿಸಿತು. ಹೊಸ ದರವು ಜುಲೈ 3ರಿಂದ ಜಾರಿಗೆ ಬರಲಿದೆ.

ಕೆಲವು ಪರಿಷ್ಕೃತ ದರಗಳು ಹೀಗಿವೆ:

ಡೇಟಾ
ಅವಧಿ ಹಿಂದಿನ ದರ ಹೊಸ ದರ
ವಾಯಿಸ್‌ ಕಾಲ್‌ ಪ್ಲಾನ್‌
2 GB
28179199
8 GB 84455509
ಡೈಲಿ ಡೇಟಾ ಪ್ಲಾನ್‌
1.5 ಜಿಬಿ28299349
2.5 ಜಿಬಿ, 28, 359, 409
3 ಜಿಬಿ, 28, 399, 449
Add- On ಪ್ಲಾನ್‌
111922
212933

ಗ್ರಾಹಕರ ಮೇಲಿನ ಹೆಚ್ಚಿನ ಹೊರೆಗಳನ್ನು ನಿವಾರಿಸುವ ಸಲುವಾಗಿ, ಎಂಟ್ರಿ ಲೆವೆಲ್‌ ಪ್ಲಾನ್‌ಗಳಲ್ಲಿ ಅತ್ಯಂತ ಸಾಧಾರಣ ಬೆಲೆ ಏರಿಕೆ (ದಿನಕ್ಕೆ 70 ಪೈಸೆಗಿಂತ ಕಡಿಮೆ) ಮಾಡಲಾಗಿದೆ ಎಂದು ಭಾರ್ತಿ ಏರ್ಟೆಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿ ಟೆಲಿಕಾಂ ಕಂಪನಿಗಳು ಆರ್ಥಿಕವಾಗಿ ಆರೋಗ್ಯಕರ ವ್ಯವಹಾರ ಮಾಡಬೇಕು ಎಂದಿದ್ದರೆ ಮೊಬೈಲ್ ಸರಾಸರಿ ಆದಾಯ (ಎಆರ್‌ಪಿಯು) 300 ರೂ.ಗಿಂತ ಹೆಚ್ಚಾಗಿರಬೇಕು ಎಂದು ಭಾರ್ತಿ ಏರ್ಟೆಲ್ ಹೇಳಿದೆ. “ಈ ಮಟ್ಟದ ಎಆರ್‌ಪಿಯು ನೆಟ್‌ವರ್ಕ್ ತಂತ್ರಜ್ಞಾನ ಮತ್ತು ಸ್ಪೆಕ್ಟ್ರಮ್‌ನಲ್ಲಿ ಅಗತ್ಯವಿರುವ ಗಣನೀಯ ಹೂಡಿಕೆಗಳನ್ನು ಸಕ್ರಿಯಗೊಳಿಸುತ್ತದೆ ಮತ್ತು ಬಂಡವಾಳದ ಮೇಲೆ ಸಾಧಾರಣ ಆದಾಯವನ್ನು ನೀಡುತ್ತದೆ” ಎಂದು ಅದು ಹೇಳಿದೆ.

ಇಂದು ಭಾರ್ತಿ ಏರ್ಟೆಲ್ ಷೇರುಗಳು ಬಿಎಸ್ಇಯಲ್ಲಿ ಸುಮಾರು 2% ಏರಿಕೆಯಾಗಿ 1496.80 ರೂ.ಗೆ ತಲುಪಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್ಟೆಲ್ ಎರಡೂ ಜೂನ್ 28ರ ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಲಾಭ ಗಳಿಸಿದವು.

ಇದನ್ನೂ ಓದಿ: Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Continue Reading

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

Paris Olympics 2024: ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

VISTARANEWS.COM


on

Paris Olympics 2024
Koo

ನವದೆಹಲಿ: ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes) ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಶುಭಾಶಯ ಕೋರಿದ್ದಾರೆ. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದಾರೆ. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading

ದೇಶ

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Delhi Rain: ಅಧಿಕೃತ ಮೂಲಗಳ ಪ್ರಕಾರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Delhi Rain
Koo

ಹೊಸದಿಲ್ಲಿ: ಇಷ್ಟು ದಿನ ಬಿಸಿಲ ಬೇಗೆ, ಉಷ್ಣ ಗಾಳಿಯ ತಾಪಕ್ಕೆ ಬೇಸತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿ(New Delhi)ಯಲ್ಲಿ ವರಣನ ಅಬ್ಬರ(Delhi Rain) ಜೋರಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ದಿಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದಿದ್ದು, ಒಬ್ಬ ದುರ್ಮರಣಕ್ಕೀಡಾಗಿದ್ದಾನೆ. ಘಟನೆಯಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಟರ್ಮಿನಲ್‌ 1ರ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಅದೂ ಅಲ್ಲದೇ ಮುಂಜಾಗೃತಾ ಕ್ರಮವಾಗಿ ದಿಲ್ಲಿ ವಿಮಾನ ನಿಲ್ದಾಣ(Delhi International Airport)ದ ಎಲ್ಲಾ ಚೆಕ್-ಇನ್‌ ಕೌಂಟರ್‌ಗಳನ್ನು ಮುಚ್ಚಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಪ್ರತಿಕ್ರಿಯಿಸಿದ್ದು, ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ರಣಭೀಕರ ಮಳೆಗೆ ದಿಲ್ಲಿ ತತ್ತರ

ಎರಡನೇ ದಿನವೂ ದಿಲ್ಲಿಯ್ಲಿ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Continue Reading

ದೇಶ

Asaduddin Owaisi: ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Asaduddin Owaisi: ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

VISTARANEWS.COM


on

Asaduddin Owaisi
Koo

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ(AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು(AIMIM) ಎಕ್ಸ್‌ನಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಿದೆ.

ಇನ್ನು ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಸಾವರ್ಕರ್‌ ಮಾದರಿಯ ಹೇಡಿತನ ನಿಲ್ಲಿಸಿ

ಈ ‘ಸಾವರ್ಕರ್ ಮಾದರಿಯ ಹೇಡಿತನದ ವರ್ತನೆ’ ನಾನು ಹೆದರುವುದಿಲ್ಲ ಎಂದೂ ಓವೈಸಿ ಹೇಳಿದ್ದಾರೆ. “ನನ್ನ ಮನೆಯನ್ನು ಗುರಿಯಾಗಿಸುವ ಗೂಂಡಾಗಳ ಬಗ್ಗೆ ಹೆದರಿಕೆಯಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಹೊಡೆದು ನಂತರ ಓಡಿ ಹೋಗುವಂತಹ ಹೇಡಿತನ ಬೇಡ ಎಂದು ಅವರು ಹೇಳಿದರು. ಸೇರಿಸಲಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳು ಓವೈಸಿ ನಿವಾಸದ ಎದುರು ಅಳವಡಿಸಿದ್ದ ನೇಮ್‌ಪ್ಲೇಟ್‌ ಮೇಲೆ ಕಪ್ಪು ಮಸಿ ಬಳಿದು ಓದಿ ಹೋಗಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು. ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗುವ ಮೂಲಕ ಮುಕ್ತಾಯಗೊಳಿಸಿದರು. 2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಒ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಿಂದೂ ಫೈರ್ ಬ್ರಾಂಡ್​ ಮಾಧವಿ ಲತಾ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ:Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Continue Reading
Advertisement
Actor Darshan support by singer dr shamitha malnad
ಸ್ಯಾಂಡಲ್ ವುಡ್12 mins ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ16 mins ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

murder Case in Kalaburagi
ಕಲಬುರಗಿ19 mins ago

Murder case : ಗಾಣಗಾಪುರ ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Actor Darshan special appeal to the fans
ಸ್ಯಾಂಡಲ್ ವುಡ್33 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ37 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ39 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Gold Rate Today
ವಾಣಿಜ್ಯ49 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್52 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ2 hours ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌