Poster War: 'ರಾಹುಲ್‌ ಗಾಂಧಿ ಆಧುನಿಕ ಕಾಲದ ರಾವಣ' ಎಂದ ಬಿಜೆಪಿ; ಕಾಂಗ್ರೆಸ್ ತಿರುಗೇಟು - Vistara News

ದೇಶ

Poster War: ‘ರಾಹುಲ್‌ ಗಾಂಧಿ ಆಧುನಿಕ ಕಾಲದ ರಾವಣ’ ಎಂದ ಬಿಜೆಪಿ; ಕಾಂಗ್ರೆಸ್ ತಿರುಗೇಟು

Poster War: ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್‌ ವಾರ್‌ ಆರಂಭವಾಗಿದೆ. ಬಿಜೆಪಿ ರಾಹುಲ್‌ ಗಾಂಧಿ ಅವರನ್ನು ಗುರಿಯಾಗಿಸಿ ಪೋಸ್ಟರ್‌ ಮಾಡಿದರೆ, ಕಾಂಗ್ರೆಸ್‌ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಪೋಸ್ಟರ್‌ ಹಂಚಿಕೊಂಡಿದೆ.

VISTARANEWS.COM


on

Rahul Gandhi Poster
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇವೆ. ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಈಗಿನಿಂದಲೇ ರಣತಂತ್ರ ರೂಪಿಸುತ್ತಿವೆ. ಪ್ರಚಾರ, ಒಗ್ಗಟ್ಟು, ಒಕ್ಕೂಟ, ಜನರ ಮುಂದಿಡಬೇಕಾದ ವಿಚಾರಗಳು, ಸಾಮಾಜಿಕ ಜಾಲತಾಣಗಳ ಸದ್ಬಳಕೆ ಸೇರಿ ಹಲವು ದಿಸೆಯಲ್ಲಿ ತಂತ್ರ ರೂಪಿಸುತ್ತಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ವಿರುದ್ಧ ಬಿಜೆಪಿಯು ಪೋಸ್ಟರ್‌ ಸಮರ (Poster War) ಸಾರಿದೆ. ಇದಕ್ಕೆ ಕಾಂಗ್ರೆಸ್‌ ಕೂಡ ತಿರುಗೇಟು ನೀಡಿದೆ. “ರಾಹುಲ್‌ ಗಾಂಧಿ ಆಧುನಿಕ ರಾವಣ” ಎಂಬ ಪೋಸ್ಟರ್‌ ಶೇರ್‌ ಮಾಡುವ ಮೂಲಕ ಬಿಜೆಪಿಯು ಪೋಸ್ಟರ್‌ ಯುದ್ಧಕ್ಕೆ ನಾಂದಿ ಹಾಡಿದೆ.

ಬಿಜೆಪಿ ಪೋಸ್ಟರ್‌ ಏನು?

“ರಾಹುಲ್‌ ಗಾಂಧಿ ಅವರನ್ನು ರಾವಣನಂತೆ ಚಿತ್ರಿಸಿರುವ ಪೋಸ್ಟರ್‌ ಹಂಚಿಕೊಂಡಿರುವ ಬಿಜೆಪಿಯು, ರಾಹುಲ್‌ ಗಾಂಧಿ ಅವರನ್ನು ಆಧುನಿಕ ರಾವಣ ಎಂದು ಕರೆದಿದೆ. ಸಿನಿಮಾ ರೀತಿಯ ಪೋಸ್ಟರ್‌ನಲ್ಲಿ, “ಭಾರತ ಅಪಾಯದಲ್ಲಿದೆ. ರಾವಣ, ಕಾಂಗ್ರೆಸ್‌ ಪಕ್ಷದ ಪ್ರೊಡಕ್ಷನ್.‌ ನಿರ್ದೇಶನ ಜಾರ್ಜ್‌ ಸೋರೊಸ್”‌ ಎಂದಿದೆ. ಮತ್ತೊಂದೆಡೆ, “ಆಧುನಿಕ ಕಾಲದ ರಾವಣ. ಈತ ದುಷ್ಟ, ಧರ್ಮವಿರೋಧಿ, ರಾಮನ ವಿರೋಧಿ. ಭಾರತವನ್ನು ನಿರ್ನಾಮ ಮಾಡುವುದೇ ಈತನ ಗುರಿ” ಎಂಬ ಪೋಸ್ಟ್‌ ಹಂಚಿಕೊಂಡಿದೆ.

ತಿರುಗೇಟು ಕೊಟ್ಟ ಕಾಂಗ್ರೆಸ್‌

ಬಿಜೆಪಿ ಪೋಸ್ಟರ್‌ಗೆ ಕಾಂಗ್ರೆಸ್‌ ಕೂಡ ಪೋಸ್ಟರ್‌ ಮೂಲಕವೇ ತಿರುಗೇಟು ನೀಡಿದೆ. ನರೇಂದ್ರ ಮೋದಿ ಒಬ್ಬ ಸುಳ್ಳುಗಾರ ಎಂಬ ರೀತಿಯ ಪೋಸ್ಟರ್‌ ಹಂಚಿಕೊಂಡಿದೆ. “ಈತ ಆಧುನಿಕ ಕಾಲದ ಮೋದಾನವ. ಈತ ದುಷ್ಟ, ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ, ಜನವಿರೋಧಿ, ಮಾನವೀಯತೆಯ ವಿರೋಧಿ. ಭಾರತವನ್ನು ಹಾಳು ಮಾಡುವುದು ಹಾಗೂ ಇಂಡಿಯಾ ಎಂಬ ಐಡಿಯಾದ ನಿರ್ನಾಮ ಮಾಡುವುದು ಈತನ ಗುರಿ” ಎಂದು ಟಾಂಗ್‌ ಕೊಟ್ಟಿದೆ.

ಇದನ್ನೂ ಓದಿ: Social Media Harrassment : ಬಿಜೆಪಿ ಪರ ಪೋಸ್ಟ್‌ ಹಾಕುವವರಿಗೆ ಪೊಲೀಸ್‌ ದೌರ್ಜನ್ಯ, ಬೆದರಿಕೆ ; ಡಿಜಿಪಿಗೆ ದೂರು

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್‌ ಹಾಗೂ ಬಿಜೆಪಿ ಮಧ್ಯೆ ವಾಗ್ವಾದ, ವಾಗ್ಯುದ್ಧ, ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಪ್ರತಿಪಕ್ಷಗಳು ಕೂಡಿ ರಚಿಸಿರುವ ಇಂಡಿಯಾ ಒಕ್ಕೂಟವನ್ನು ನರೇಂದ್ರ ಮೋದಿ ಅವರು “ಘಮಂಡಿಯಾ” (ಅಹಂಕಾರಿಗಳು) ಎಂದು ಕರೆದಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಕೂಡ ಸರಿಯಾಗಿಯೇ ಪ್ರತ್ಯುತ್ತರ ನೀಡುತ್ತಿದೆ. ಈಗ ಎರಡೂ ಪಕ್ಷಗಳ ಮಧ್ಯೆ ಪೋಸ್ಟರ್‌ ಸಮರ ಆರಂಭವಾಗಿದ್ದು, ಇದು ಕೆಲವೇ ದಿನಗಳಲ್ಲಿ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ (Engineering Seats) ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸೀಟುಗಳು ಲಭ್ಯ ಆಗಲಿವೆ. ಆದರೆ ಸಿಇಟಿ ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಖ್ಯೆಯೂ ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿದೆ.

VISTARANEWS.COM


on

By

Engineering Seats
Koo

ಬೆಂಗಳೂರು: ಎಂಜಿನಿಯರ್ (engineering) ಆಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ (students) ಒಂದು ಸಿಹಿ ಸುದ್ದಿ. ಈ ಬಾರಿ ರಾಜ್ಯದಲ್ಲಿ ಹೆಚ್ಚುವರಿಯಾಗಿ ಎಂಟು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವ ಸುವರ್ಣ ಅವಕಾಶ ಸಿಗಲಿದೆ.

ಎಂಜಿನಿಯರಿಂಗ್ ಸೀಟುಗಳಿಗೆ (Engineering Seats) ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ತಾಂತ್ರಿ ಕ ಶಿಕ್ಷಣ ಪರಿಷತ್ (AICTE) ಇನ್ ಟೇಕ್ (IN-Take) ಸಡಿಲಗೊಳಿಸಿದ್ದರಿಂದ ಎಂಟು ಸಾವಿರಕ್ಕೂ ಹೆಚ್ಚು ಸೀಟುಗಳು ಈ ವರ್ಷದಲ್ಲಿ ಸಿಗಲಿದೆ.

ಉನ್ನತ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಸೀಟ್ ಲಭ್ಯತೆ ಬಗ್ಗೆ ಅಧಿಸೂಚನೆ ಹೊರಡಿಸಿದೆ. 2024- 25ನೇ ಸಾಲಿನ ಎಂಜಿನಿಯರಿಂಗ್ ಪ್ರವೇಶಕ್ಕೆ ಎಲ್ಲ ಮಾದರಿಯ 245 ಎಂಜಿನಿಯರಿಂಗ್ ಕಾಲೇಜುಗಳಿಂದ 1,32,309 ಸೀಟುಗಳ ಇನ್ ಟೆಕ್ ಆಗಿದೆ. ಇದರಲ್ಲಿ ಸರ್ಕಾರಿ ಕೋಟಾದಡಿಯಲ್ಲಿ 62,930 ಸೀಟುಗಳು, COMED-K ಕೋಟಾದ ಅಡಿಯಲ್ಲಿ 28,656 ಸೀಟುಗಳು ಮತ್ತು ಸೂಪರ್ ನ್ಯೂಮರರಿ ಕೋಟಾದ ಅಡಿಯಲ್ಲಿ 5,155 ಸೀಟುಗಳು ಸೇರಿವೆ.

ಈ ಬಾರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) 62,930 ಸೀಟುಗಳ ಲಭ್ಯ ವಾಗಿದೆ. 2023ರಲ್ಲಿ 245 ಕಾಲೇಜುಗಳಿಂದ 1,24,551 ಸೀಟುಗಳು ಲಭ್ಯವಾಗಿದ್ದು, ಇದರಲ್ಲಿ ಕೆಇಎಗೆ 58,845 ಸೀಟುಗಳಿದ್ದವು.
ಕಳೆದ ವರ್ಷ ಒಟ್ಟು ಸೀಟುಗಳ ಸಂಖ್ಯೆ 1,24,551 ಮತ್ತು ಸರ್ಕಾರಿ ಕೋಟಾದ ಸೀಟುಗಳು 58,845 ಆಗಿತ್ತು. ಈ ಬಾರಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಎಂಜಿನಿಯರಿಂಗ್ ಪ್ರವೇಶದ ಮೇಲಿನ ಮಿತಿಯನ್ನು ತೆಗೆದುಹಾಕುವುದರೊಂದಿಗೆ, ಈ ಶೈಕ್ಷಣಿಕ ವರ್ಷದಲ್ಲಿ ಸೀಟುಗಳ ಸಂಖ್ಯೆ 7,758 ಹೆಚ್ಚಲಿದೆ. ಇದರಲ್ಲಿ ಸರ್ಕಾರಿ ಕೋಟಾದ ಅಡಿಯಲ್ಲಿ 4,085ರಷ್ಟು ಸೀಟು ಹೆಚ್ಚು ಸಿಗಲಿದೆ.

ಇನ್ನು 13 ಕಾಲೇಜುಗಳ ಸೀಟುಗಳು ಇದಕ್ಕೆ ಸೇರ್ಪಡೆಯಾಗಲಿದ್ದು, ಹೀಗಾಗಿ ಕೆಇಎಗೆ ಇನ್ನೂ ಹೆಚ್ಚಿನ ಸೀಟುಗಳು ಲಭ್ಯವಾಗುವ ನಿರೀಕ್ಷೆ ಇದೆ.

ಎಲ್ಲಿ ಎಷ್ಟು ಸೀಟು ?

ಕೆಇಎಗೆ ಲಭ್ಯವಾಗಿರುವ 62,930 ಸೀಟುಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ 38,024 ಖಾಸಗಿ ವಿವಿಗಳಲ್ಲಿ 9,988 ಸೀಟುಗಳು ಸೇರಿವೆ. ಇದರಲ್ಲಿ 246 ಸೀಟುಗಳು ಆರ್ಕಿಟೆಕ್ಚರ್ ಗೆ ಸಂಬಂಧಿಸಿದೆ.

ಯಾವುದಕ್ಕೆ ಹೆಚ್ಚಿನ ಬೇಡಿಕೆ?

ಹೆಚ್ಚಿನ ಸೀಟುಗಳು ಕಂಪ್ಯೂಟರ್ ವಿಜ್ಞಾನ ಮತ್ತು ಸಂಬಂಧಿತ ವಿಷಯಗಳಲ್ಲಿವೆ. ಈ ಶೈಕ್ಷಣಿಕ ವರ್ಷದಿಂದ, ಎಐಸಿಟಿಇ ಪದವಿಪೂರ್ವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಮಿತಿಯನ್ನು ತೆಗೆದುಹಾಕಿದೆ. ಅದರ ಅನಂತರ ಹಲವಾರು ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಕಂಪ್ಯೂಟರ್ ಸೈನ್ಸ್ ಮತ್ತು ಸಂಬಂಧಿತ ವಿಷಯಗಳಿಗೆ ಸೀಟು ಗಳ ಸಂಖ್ಯೆಯನ್ನು 500ರಿಂದ 1,000ಕ್ಕೆ ಹೆಚ್ಚಿಸಿವೆ.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ಎಂಜಿನಿಯರಿಂಗ್ ಆಕಾಂಕ್ಷಿಗಳು ಹೆಚ್ಚಳ

ಈ ವರ್ಷ ಸಿಇಟಿಗೆ ಹಾಜರಾದ 3.1೦ ಲಕ್ಷ ವಿದ್ಯಾರ್ಥಿಗಳ ಪೈಕಿ 2.74 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರಲು ಅರ್ಹರಾಗಿದ್ದಾರೆ. ಕಳೆದ ವರ್ಷ ಈ ಸಂಖ್ಯೆ 2.03 ಲಕ್ಷ ಇತ್ತು. ಈ ವರ್ಷ 30 ಸಾವಿರ ವಿದ್ಯಾರ್ಥಿಗಳು ಹೆಚ್ಚಾಗಿದೆ.

ಈ ಹಿಂದೆ ಸೀಟು ಹೆಚ್ಚಳಕ್ಕೆ ಆಯಾ ವಿವಿಗಳಿಗೆ ಕಾಲೇಜುಗಳು ಪ್ರಸ್ತಾವನೆ ಸಲ್ಲಿಸಬೇಕಿತ್ತು. ಇದನ್ನು ಸ್ಥಳೀಯ ವಿಚಾರಣಾ ಸಮಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುತ್ತಿತ್ತು. ಆದರೆ ಈ ಬಾರಿ ಕಾಲೇಜುಗಳು ಸೀಟು ಹೆಚ್ಚಳಕ್ಕೆ ನೇರವಾಗಿ ಎಐಸಿಟಿಇಯಿಂದ ಅನುಮೋದನೆಯನ್ನು ಪಡೆಯಬೇಕಾಗಿದೆ. ಇದನ್ನು ರಾಜ್ಯ ಸರ್ಕಾರ ವಿರೋಧಿಸಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

Continue Reading

Latest

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

ಸಾಮಾನ್ಯವಾಗಿ ಯಾರಾದರೂ ರೈಲಿನಲ್ಲಿ ಪ್ರಯಾಣ ಮಾಡಬೇಕು ಎಂದುಕೊಂಡರೆ ಸ್ಟೇಷನ್ಗೆ ಹೋಗಿ ಟಿಕೆಟ್ ತೆಗೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಯಾರ ಹತ್ತಿದ IRCTC Ticket Booking IRCTC ಐಡಿ ಇದ್ದವರ ಬಳಿ ಹೋಗಿ ಟಿಕೆಟ್ ಮಾಡಿಸಿಕೊಳ್ಳುತ್ತಾರೆ.ಆದರೆ ಇನ್ನು ಮುಂದೆ ಹೀಗೆ ಮಾಡುವ ಹಾಗಿಲ್ಲವಂತೆ. ನಿಮ್ಮ ಐಡಿಯಿಂದ ನಿಮ್ಮ ಮನೆಯವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಬುಕ್ ಮಾಡಿಸಿಕೊಟ್ಟರೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10,000ರೂ. ದಂಡ ತೆರಬೇಕಾಗುತ್ತದೆಯಂತೆ. ನಿಮ್ಮ ಐಡಿಗೆ ಆಧಾರ್ ಲಿಂಕ್ ಮಾಡಿಲ್ಲದಿದ್ದರೆ ಅಂತವರ ಐಡಿಯಿಂದ ತಿಂಗಳಿಗೆ 12 ಟಿಕೆಟ್ ಗಳನ್ನು ಮಾತ್ರ ಬುಕ್ ಮಾಡುವ ಅವಕಾಶವಿರುತ್ತದೆ. ಆದರೆ ಆ 12 ಟಿಕೆಟ್ ನೀವು ಹಾಗೂ ನಿಮ್ಮ ಕುಟುಂಬದವರಿಗೆ ಮಾತ್ರ ಮೀಸಲಾಗಿರಬೇಕು. ಇಲ್ಲವಾದರೆ ಅದು ಅಪರಾಧವಾಗುತ್ತದೆ.

VISTARANEWS.COM


on

IRCTC Ticket Booking
Koo

ಬೆಂಗಳೂರು : IRCTC ಒಂದು ಸಾರ್ವಜನಿಕ ವಲಯದ ಸಂಸ್ಥೆಯಾಗಿದ್ದು, ಇದು ಸರ್ಕಾರಿ ಸ್ವಾಮ್ಯದ ಭಾರತೀಯ ರೈಲ್ವೆಗೆ ಟಿಕೆಟಿಂಗ್ (IRCTC Ticket Booking), ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ಸೇವೆಗಳನ್ನು ಒದಗಿಸುತ್ತದೆ. ಹೆಚ್ಚಿನ ಜನರು IRCTC ಐಡಿ ಬಳಸಿ ಟಿಕೆಟ್ ಗಳನ್ನು ಬುಕ್ ಮಾಡುತ್ತಾರೆ. ಆದರೆ ನಿಮ್ಮ ಐಡಿಯನ್ನು ಬಳಸಿಕೊಂಡು ಬೇರೆಯವರಿಗೆ ಟಿಕೆಟ್ ಬುಕ್ ಮಾಡಿದರೆ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ಅಥವಾ 10,000 ರೂ. ದಂಡ ವಿಧಿಸಲಾಗುತ್ತದೆ. ಹಾಗಾಗಿ IRCTCಯಿಂದ ಟಿಕೆಟ್ ಬುಕ್ ಮಾಡುವವರು ಈ ನಿಯಮ ತಿಳಿದಿರಿ.

  • -ವೈಯಕ್ತಿಕ ಐಡಿ ಬಳಸಿ ಬೇರೆಯವರಿಗೆ ಟಿಕೆಟ್ ಬುಕ್ ಮಾಡುವುದು ಅಪರಾಧ. ಹಾಗಾಗಿ ವೈಯಕ್ತಿಕ ಐಡಿ ಬಳಸಿಕೊಂಡು ಇತರರಿಗೆ ಟಿಕೆಟ್ ಗಳನ್ನು ಬುಕ್ ಮಾಡುವವರು ದಂಡ ಕಟ್ಟಬೇಕಾಗುತ್ತದೆ.
  • -ವಾಸ್ತವವಾಗಿ ರೈಲ್ವೆ ಕಾಯಿದೆ ಸೆಕ್ಷನ್ 143ರ ಪ್ರಕಾರ, ಅಧಿಕೃತವಾಗಿ ನೇಮಕಗೊಂಡ ವ್ಯಕ್ತಿ ಮಾತ್ರ ತಮ್ಮ ಐಡಿಯಿಂದ ಇತರರಿಗೆ ಟಿಕೆಟ್ ಗಳನ್ನು ಬುಕ್ ಮಾಡಿಕೊಡಬಹುದು
  • -ಆದರೆ ಒಬ್ಬ ಸಾಮಾನ್ಯ ವ್ಯಕ್ತಿ ತನ್ನ ವೈಯಕ್ತಿಕ ಐಡಿಯಿಂದ ತನ್ನ ಕುಟುಂಬದವರಿಗೆ ಮತ್ತು ಅವರ ಹೆಸರನ್ನೇ ಹೊಂದಿರುವ ವ್ಯಕ್ತಿಗಳಿಗೆ ಮಾತ್ರ ಟಿಕೆಟ್ ಬುಕ್ ಮಾಡಬಹುದು. ಇದಲ್ಲದೇ ನಿಮ್ಮ ಸ್ನೇಹಿತರಿಗೆ ಅಥವಾ ಇತರರಿಗೆ ಟಿಕೆಟ್ ಬುಕ್ ಮಾಡಿದರೆ 10,000 ರೂ. ದಂಡ ಅಥವಾ 3 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

IRCTC ವೆಬ್ ಸೈಟ್ ನಲ್ಲಿ ಒಂದು ಐಡಿಯಲ್ಲಿ ಒಬ್ಬ ವ್ಯಕ್ತಿ ಒಂದು ತಿಂಗಳಿನಲ್ಲಿ 24 ಟಿಕೆಟ್ ಗಳನ್ನು ಬುಕ್ ಮಾಡಬಹುದು. ಆದರೆ ಇವರ ಐಡಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿರಬೇಕು. ಒಂದು ವೇಳೆ ನಿಮ್ಮ ಐಡಿಗೆ ಆಧಾರ್ ಲಿಂಕ್ ಮಾಡಿಲ್ಲದಿದ್ದರೆ ಅಂತವರ ಐಡಿಯಿಂದ ತಿಂಗಳಿಗೆ 12 ಟಿಕೆಟ್ ಗಳನ್ನು ಮಾತ್ರ ಬುಕ್ ಮಾಡುವ ಅವಕಾಶವಿರುತ್ತದೆ. ಆದರೆ ಆ 12 ಟಿಕೆಟ್ ನೀವು ಹಾಗೂ ನಿಮ್ಮ ಕುಟುಂಬದವರಿಗೆ ಮಾತ್ರ ಮೀಸಲಾಗಿರಬೇಕು. ಇಲ್ಲವಾದರೆ ಅದು ಅಪರಾಧವಾಗುತ್ತದೆ.

ಇದನ್ನೂ ಓದಿ: Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

IRCTC ಐಡಿ ಬಳಸಿ ನೀವು ತತ್ಕಾಲ್ ಎಸಿ ಟಿಕೆಟ್ ಬುಕ್ ಮಾಡುವುದಾದರೆ ಬೆಳಿಗ್ಗೆ 10 ಗಂಟೆಯ ನಂತರ ಪ್ರಾರಂಭಿಸಬೇಕಾಗುತ್ತದೆ. ಹಾಗೇ ನಾನ್ ಎಸಿ ಟಿಕೆಟ್ ಬುಕ್ ಮಾಡುವವರು ಬೆಳಿಗ್ಗೆ 11 ಗಂಟೆಯ ನಂತರ ಬುಕ್ ಮಾಡಬಹುದಾಗಿದೆ.

Continue Reading

ಪ್ರಮುಖ ಸುದ್ದಿ

International Yoga Day 2024: ಯೋಗ ದಿನಚರಿಯ ಭಾಗವಾಗಲಿ: ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

International Yoga Day 2024: ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವವನ್ನು ಪ್ರಧಾನಿ ಮೋದಿ ವಹಿಸಿದರು. ದಾಲ್‌ ಸರೋವರದ ದಡದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಮಳೆಯಿಂದಾಗಿ ಒಳಾಂಗಣದಲ್ಲಿ ನಡೆಯಿತು.

VISTARANEWS.COM


on

pm narendra modi international yoga day 2024
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (jammu and kashmir) ಶ್ರೀನಗರದಲ್ಲಿ ಇಂದು ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಲು ಕರೆ ನೀಡಿದರು.

“ವಿಶ್ವದಾದ್ಯಂತ ಯೋಗಾಭ್ಯಾಸ ಮಾಡುವವರ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಯೋಗದ ಮೂಲಕ ನಾವು ಹೆಚ್ಚಿನ ಶಕ್ತಿಯನ್ನು ಪಡೆಯಬಹುದು. ಯೋಗ ದಿನದಂದು ದೇಶದ ಜನರಿಗೆ ಮತ್ತು ವಿಶ್ವದ ಮೂಲೆ ಮೂಲೆಗಳಲ್ಲಿ ಯೋಗ ಮಾಡುವ ಜನರಿಗೆ ನಾನು ಶುಭಾಶಯಗಳನ್ನು ಹೇಳುತ್ತೇನೆ. ಅಂತಾರಾಷ್ಟ್ರೀಯ ಯೋಗ ದಿನವು 10 ವರ್ಷಗಳ ಐತಿಹಾಸಿಕ ಪ್ರಯಾಣವನ್ನು ಪೂರ್ಣಗೊಳಿಸಿದೆ. 2014ರಲ್ಲಿ ನಾನು ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಸ್ತಾಪಿಸಿದೆ. ಭಾರತದ ಈ ಪ್ರಸ್ತಾಪವನ್ನು 177 ರಾಷ್ಟ್ರಗಳು ಬೆಂಬಲಿಸಿದವು. ಅಂದಿನಿಂದ ಯೋಗ ದಿನವು ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ” ಎಂದು ಮೋದಿ ನುಡಿದರು.

“ನಾನು ವಿದೇಶದಲ್ಲಿರುವಾಗ ಜಾಗತಿಕ ನಾಯಕರು ಯೋಗದ ಬಗ್ಗೆ ನನ್ನೊಂದಿಗೆ ಚರ್ಚಿಸುತ್ತಾರೆ. ನಾವು 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ, ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವಾಗಿಸಲು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ” ಎಂದು ಅವರು ಕರೆ ನೀಡಿದರು.

ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವವನ್ನು ಪ್ರಧಾನಿ ಮೋದಿ ವಹಿಸಿದರು. 30 ನಿಮಿಷಗಳ ಕಾಲ ನಡೆಯುವ ಯೋಗಾಭ್ಯಾಸ ಕಾರ್ಯಕ್ರಮ ಬೆಳಗ್ಗೆ 7 ಗಂಟೆಗೆ ಆರಂಭವಾಗಬೇಕಿತ್ತು. ದಾಲ್‌ ಸರೋವರದ ದಡದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಧಾರಾಕಾರ ಮಳೆಯಿಂದಾಗಿ ಅದು ಸಾಧ್ಯವಾಗಲಿಲ್ಲ. ಕಾರ್ಯಕ್ರಮವೂ ತಡವಾಗಿ, ಒಳಾಂಗಣ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಆಯುಷ್ ಸಚಿವ ಪ್ರತಾಪ್ರರಾವ್ ಗಣಪತರಾವ್ ಜಾಧವ್ ಸೇರಿದಂತೆ ಇತರರು ಭಾಗವಹಿಸಿದರು.

“ಈ ವರ್ಷ ಫ್ರಾನ್ಸ್‌ನ 101 ವರ್ಷದ ಮಹಿಳಾ ಯೋಗ ಶಿಕ್ಷಕಿಗೆ ಪದ್ಮಶ್ರೀ ನೀಡಲಾಗಿದೆ. ಅವರು ಎಂದಿಗೂ ಭಾರತಕ್ಕೆ ಬಂದಿರಲಿಲ್ಲ. ಆದರೆ ಅವರು ಯೋಗದ ಬಗ್ಗೆ ಜಾಗೃತಿ ಮೂಡಿಸಲು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಇಂದು ಯೋಗದ ಕುರಿತು ಪ್ರಪಂಚದಾದ್ಯಂತ ಸಂಶೋಧನೆ ನಡೆಸಲಾಗುತ್ತಿದೆ. ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳು ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸುತ್ತಿವೆ” ಎಂದು ಪ್ರಧಾನಿ ಹೇಳಿದರು.

ಈ ನಡುವೆ ದಾಲ್‌ ಸರೋವರದ ತೀರದಲ್ಲಿ ಮಳೆಯನ್ನೂ ಲೆಕ್ಕಿಸದೆ ಸಾವಿರಾರು ಮಂದಿ ಯೋಗ ಮಾಡಿದರು. ಪ್ರಧಾನಿ ಮೋದಿ ಭಾಗವಹಿಸಿದ ಕಾರ್ಯಕ್ರಮ ಒಳಾಂಗಣದಲ್ಲಿ ನಡೆಯಿತು ಹಾಗೂ ಅದನ್ನು ಸಾರ್ವಜನಿಕ ಟೆಲಿಕಾಸ್ಟ್‌ ಮಾಡಲಾಯಿತು.

ಇಂದು ದೇಶಾದ್ಯಂತ ಹಾಗೂ ವಿದೇಶಗಳಲ್ಲಿಯೂ ಯೋಗ ದಿನ ಆಚರಿಸಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ವಿಶ್ವ ಸಂಸ್ಥೆ, ಅಮೆರಿಕ, ಇಂಗ್ಲೆಂಡ್‌, ಅರಬ್‌ ದೇಶಗಳಲ್ಲಿ ಕೂಡ ಯೋಗ ದಿನಾಚರಣೆ ಮಾಡಲಾಗುತ್ತಿದೆ.

ಇದನ್ನೂ ಓದಿ: International Yoga Day 2024: ಮೋದಿ ಶಿಫಾರಸು ಮಾಡಿರುವ 7 ಯೋಗಾಸನಗಳ ವಿಡಿಯೊ ಇಲ್ಲಿದೆ, ನೀವೂ ಪ್ರಯತ್ನಿಸಿ!

Continue Reading

ದೇಶ

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಕಂಟಕ; ಹೈಕೋರ್ಟ್‌ ಮೆಟ್ಟಿಲೇರಲಿದೆ ಇಡಿ

Arvind Kejriwal:ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಅವೆನ್ಯೂ ಕೋರ್ಟ್‌ ನಿನ್ನೆ ಅವರಿಗೆ ಜಾಮೀನು ನೀಡಿತ್ತು. ಇದರೊಂದಿಗೆ ಅರವಿಂದ್‌ ಕೇಜ್ರಿವಾಲ್‌ ಅವರ ಮೂರು ತಿಂಗಳ ಜೈಲುವಾಸವೂ ತಾತ್ಕಾಲಿಕವಾಗಿ ಅಂತ್ಯವಾದಂತಾಗಿದೆ. ಶುಕ್ರವಾರ ಬಾಂಡ್‌ ಬೇಲ್‌ಗೆ ಅರವಿಂದ್‌ ಕೇಜ್ರಿವಾಲ್‌ ಅರ್ಜಿ ಹಾಕಬಹುದಾಗಿದ್ದು, ಶುಕ್ರವಾರವೇ (ಜೂನ್‌ 21) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌(Arvind Kejriwal) ಅವರಿಗೆ ಜಾಮೀನು ಸಿಕ್ಕಿರುವ ಬೆನ್ನಲ್ಲೇ ಇಂದು ಜಾರಿ ನಿರ್ದೇಶನಾಲಯ(ED) ಕೋರ್ಟ್‌ ಮೆಟ್ಟಿಲೇರಲಿದೆ. ನಿನ್ನೆ ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯವು, ಒಂದು ಲಕ್ಷ ರೂ. ಬಾಂಡ್‌ ಪಡೆದು, ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಇದೀಗ ಇದನ್ನು ಪ್ರಶ್ನಿಸಿ ಇಡಿ ದೆಹಲಿ ಹೈಕೋರ್ಟ್‌(Delhi High court)ಗೆ ಕದ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಇಂದು ಬೆಳಗ್ಗೆ ಇಡಿ ಕೇಜ್ರಿವಾಲ್‌ ಜಾಮೀನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಅವೆನ್ಯೂ ಕೋರ್ಟ್‌ ನಿನ್ನೆ ಅವರಿಗೆ ಜಾಮೀನು ನೀಡಿತ್ತು. ಇದರೊಂದಿಗೆ ಅರವಿಂದ್‌ ಕೇಜ್ರಿವಾಲ್‌ ಅವರ ಮೂರು ತಿಂಗಳ ಜೈಲುವಾಸವೂ ತಾತ್ಕಾಲಿಕವಾಗಿ ಅಂತ್ಯವಾದಂತಾಗಿದೆ. ಶುಕ್ರವಾರ ಬಾಂಡ್‌ ಬೇಲ್‌ಗೆ ಅರವಿಂದ್‌ ಕೇಜ್ರಿವಾಲ್‌ ಅರ್ಜಿ ಹಾಕಬಹುದಾಗಿದ್ದು, ಶುಕ್ರವಾರವೇ (ಜೂನ್‌ 21) ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಬೇಲ್‌ ಬಾಂಡ್‌ಗಳನ್ನು ಸ್ವೀಕರಿಸಲು ಎರಡು ದಿನ ಟೈಮ್‌ ಬೇಕು ಎಂಬುದಾಗಿ ಇ.ಡಿ ಮನವಿ ಮಾಡಿತ್ತು. ಆದರೆ, ಇದಕ್ಕೆ ನ್ಯಾ. ನಿಯಾಯ್‌ ಬಿಂದು ಅವರು ನಕಾರ ವ್ಯಕ್ತಪಡಿಸಿದರು.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ, ಕೇಜ್ರಿವಾಲ್‌ ಅವರು ಜೈಲಿಗೆ ಮರಳಿದ್ದರು. ಈಗ ಕೊನೆಗೂ ಅವರಿಗೆ ರಿಲೀಫ್‌ ಸಿಕ್ಕಂತಾಗಿದೆ.

ಇದನ್ನೂ ಓದಿ: International Yoga Day 2024: ಈ 5 ಯೋಗ ಭಂಗಿಗಳು ಬೆನ್ನು ನೋವನ್ನು ನಿವಾರಿಸುತ್ತವೆ!

Continue Reading
Advertisement
Engineering Seats
ಶಿಕ್ಷಣ20 mins ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ20 mins ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ34 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ38 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್42 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest57 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest1 hour ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ1 hour ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ2 hours ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌