ನಮ್ಮ ನೂತನ ರಾಷ್ಟ್ರಪತಿಯ ಮೂಲ ಹೆಸರು ದ್ರೌಪದಿ ಅಲ್ವೇ ಅಲ್ಲ !; ಹಾಗಿದ್ರೆ ಏನವರ ಹೆಸರು? - Vistara News

ದೇಶ

ನಮ್ಮ ನೂತನ ರಾಷ್ಟ್ರಪತಿಯ ಮೂಲ ಹೆಸರು ದ್ರೌಪದಿ ಅಲ್ವೇ ಅಲ್ಲ !; ಹಾಗಿದ್ರೆ ಏನವರ ಹೆಸರು?

ದ್ರೌಪದಿ ಮುರ್ಮುಗೆ ಸಂತಾಲಿ ಜನಾಂಗದ ಸಂಪ್ರದಾಯದಂತೆ ಇಟ್ಟಿದ್ದ ಹೆಸರು ಬೇರೆ. ಹಾಗೇ ಮುರ್ಮು ಎಂಬ ಸರ್‌ನೇಮ್‌ ಬಂದಿದ್ದು ಅವರ ಮದುವೆಯ ನಂತರ. ಈ ಬಗ್ಗೆ ಇಂಟರೆಸ್ಟಿಂಗ್‌ ವಿಚಾರ ಇಲ್ಲಿದೆ.

VISTARANEWS.COM


on

Draupadi Murmu 1
ದ್ರೌಪದಿ ಮುರ್ಮು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ದ್ರೌಪದಿ ಮುರ್ಮು ಅವರೀಗ ಟ್ರೆಂಡ್‌ನಲ್ಲಿದ್ದಾರೆ. ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗುವವರೆಗೂ ದ್ರೌಪದಿ ಮುರ್ಮು ಬಗ್ಗೆ ಅನೇಕರಿಗೆ ಗೊತ್ತಿರಲಿಲ್ಲ. ಅವರು ಬುಡಕಟ್ಟು ಸಮುದಾಯದವರು, ಜಾರ್ಖಂಡ್‌ನ ಮಾಜಿ ರಾಜ್ಯಪಾಲರು ಎಂಬುದು ಬಿಟ್ಟರೆ ಹೆಚ್ಚೇನೂ ಮಾಹಿತಿ ಇರಲಿಲ್ಲ. ಈಗಂತೂ ದ್ರೌಪದಿ ಮುರ್ಮು ಬಗ್ಗೆ ಹೆಚ್ಚೆಚ್ಚು ವಿಷಯ ತಿಳಿದುಕೊಳ್ಳಲು ಗೂಗಲ್‌ ಹುಡುಕಾಟ ನಡೆಸುವವರ ಸಂಖ್ಯೆ ಅಧಿಕವಾಗಿದೆ. ಈಗ ನಾವಿಲ್ಲಿ ಹೇಳ್ತಿರೋ ವಿಷಯ ಕೂಡ ಅಷ್ಟೇ ಇಂಟರೆಸ್ಟಿಂಗ್‌ ಆಗಿದೆ.

ನಮ್ಮ ನೂತನ ರಾಷ್ಟ್ರಪತಿಯ ನಿಜವಾದ ಹೆಸರು “ದ್ರೌಪದಿʼ ಎಂದು ಅಲ್ಲವಂತೆ. ಅವರು ಹುಟ್ಟಿದಾಗ ಇಟ್ಟ ಹೆಸರೇ ಬೇರೆಯಂತೆ. ಈ ಬಗ್ಗೆ ಅವರು ಒಡಿಶಾದ ಮ್ಯಾಗ್‌ಜಿನ್‌ವೊಂದರ ಜತೆಗೆ ಮಾಹಿತಿ ಹಂಚಿಕೊಂಡಿದ್ದಾಗಿ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. “ನನ್ನ ನಿಜವಾದ ಹೆಸರು ದ್ರೌಪದಿ ಅಲ್ಲ. ಸಾಮಾನ್ಯವಾಗಿ ನಮ್ಮ ಸಂತಾಲಿ ಜನಾಂಗದಲ್ಲಿ ತಲೆತಲಾಂತರದಿಂದಲೂ ಹೆಸರುಗಳು ಮುಂದುವರಿಯುತ್ತಲೇ ಇರುತ್ತವೆ. ಅಜ್ಜಿಯ ಹೆಸರನ್ನೇ ಮೊಮ್ಮಗಳಿಗೆ. ಹಾಗೇ ಗಂಡುಮಕ್ಕಳಿಗೆ ಅಜ್ಜನ ಹೆಸರನ್ನು ಇಡುತ್ತಾರೆ. ನನಗೂ ಹಾಗೇ “ಪುಟಿʼ ಎಂದು ನಾಮಕರಣ ಮಾಡಲಾಗಿತ್ತು. ಯಾಕೆಂದರೆ ಇದು ನನ್ನ ಅಜ್ಜಿಯ ಹೆಸರಾಗಿತ್ತು. ಆದರೆ ನಾನು ಶಾಲೆಗೆ ಹೋಗಲು ಶುರು ಮಾಡಿದ ಮೇಲೆ ನನ್ನ ಶಿಕ್ಷಕಿಯೊಬ್ಬರಿಗೆ ಅದು ಇಷ್ಟವಾಗಲಿಲ್ಲ. ಹಾಗಾಗಿ ʼದ್ರೌಪದಿʼ ಎಂದು ಹೆಸರಿಟ್ಟರು. ಮುಂದೆ ಈ ಹೆಸರು ದುರ್ಪ್ದಿ, ದೋರ್ಪ್ದಿ ಎಂಬೆಲ್ಲ ಸ್ವರೂಪಗಳನ್ನೂ ಪಡೆದು ಅಂತಿಮವಾಗಿ ನಾನು ದ್ರೌಪದಿಯಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಇನ್ನು ಮುರ್ಮು ಎಂಬ ಸರ್‌ನೇಮ್‌ ಬಂದಿದ್ದು ಹೇಗೆ ಎಂಬುದನ್ನೂ ವಿವರಿಸಿದ ಅವರು “ನಮ್ಮ ಜನಾಂಗದ ಪ್ರಕಾರ ನನ್ನ ಸರ್‌ನೇಮ್‌ ಮೊದಲು ತುಡು ಎಂದಾಗಿತ್ತು. ಶಾಲಾ-ಕಾಲೇಜುಗಳಲ್ಲೆಲ್ಲ ಇದೇ ಹೆಸರೇ ಇತ್ತು. ನಂತ ಶ್ಯಾಮ್‌ ಚರಣ್‌ ಮುರ್ಮು ಅವರನ್ನು ವಿವಾಹವಾದ ಬಳಿಕ ನಾನೂ ನನ್ನ ಹೆಸರಿನ ಎದುರು ಮುರ್ಮು ಎಂದು ಬಳಸಲು ಪ್ರಾರಂಭಿಸಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Draupadi Murmu | ಅಮೃತಕಾಲದಲ್ಲಿ ರಾಷ್ಟ್ರಪತಿ ಹುದ್ದೆ ಕೊಟ್ಟಿದ್ದಕ್ಕೆ ಧನ್ಯವಾದಗಳು: ದ್ರೌಪದಿ ಮುರ್ಮು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Bullet Train: ದೇಶದ ಮೊದಲ ಬುಲೆಟ್‌ ರೈಲು ಯೋಜನೆಯ ಮಾಹಿತಿ ಇರುವ ವಿಡಿಯೊವನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಹಂಚಿಕೊಂಡಿದ್ದಾರೆ. ಆ ವಿಡಿಯೊ ಇಲ್ಲಿದೆ.

VISTARANEWS.COM


on

Bullet Train
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ, ದೇಶದ ಶತಕೋಟಿ ಜನರ ಬುಲೆಟ್‌ ಟ್ರೇನ್‌ ಕನಸು ನನಸಾಗುವ ದಿನಗಳು ದೂರವಿಲ್ಲ! ಹೌದು, ದೇಶದ ಮೊದಲ ಬುಲೆಟ್‌ ರೈಲು (Bullet Train) ಸಂಚಾರದ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. “ಮುಂಬೈ-ಅಹಮದಾಬಾದ್‌ ಬುಲೆಟ್‌ (Mumbai to Ahmedabad) ರೈಲು ಯೋಜನೆ ಶೀಘ್ರದಲ್ಲಿಯೇ ಮುಗಿಯಲಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಅವರೊಂದು ವಿಡಿಯೊ ಹಂಚಿಕೊಂಡಿದ್ದು, ರೈಲು ಯೋಜನೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದಾರೆ.

ಮುಂಬೈ-ಅಹಮದಾಬಾದ್‌ ಬುಲೆಟ್‌ ರೈಲು ಗಂಟೆಗೆ 320 ಕಿಲೋಮೀಟರ್‌ ವೇಗದಲ್ಲಿ ಓಡಲಿದೆ. ಈಗಾಗಲೇ ದೇಶದ ಮೊದಲ ಬ್ಯಾಲಾಸ್ಟ್‌ಲೆಸ್‌ ಟ್ರ್ಯಾಕ್‌ ಸಿಸ್ಟಮ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಅಷ್ಟೇ ಅಲ್ಲ, 295.5 ಕಿಲೋಮೀಟರ್‌ ರೈಲು ಮಾರ್ಗ ನಿರ್ಮಿಸಲಾಗಿದೆ. 153 ಕಿಲೋಮೀಟರ್‌ ಉದ್ದದ ರೈಲ್ವೆ ಟ್ರ್ಯಾಕ್‌ಅನ್ನು ಸೇತುವೆ ಮೂಲಕ ನಿರ್ಮಿಸಲಾಗಿದೆ ಎಂಬುದಾಗಿ ಅಶ್ವಿನಿ ವೈಷ್ಣವ್‌ ಹಂಚಿಕೊಂಡ ವಿಡಿಯೊದಲ್ಲಿ ತಿಳಿಸಲಾಗಿದೆ.

“ಬುಲೆಟ್‌ ರೈಲು ಯೋಜನೆಯ ಕಾಮಗಾರಿ ಭರದಿಂದ ಸಾಗುತ್ತಿದೆ. ಬುಲೆಟ್‌ ರೈಲು ಯೋಜನೆಯು ಸಂಪರ್ಕ ಕ್ರಾಂತಿ ಜತೆಗೆ ಆರ್ಥಿಕ ಚಟುವಟಿಕೆಗಳ ಉತ್ತೇಜನಕ್ಕೆ ಸಹಕಾರಿಯಾಗಲಿದೆ. ಬುಲೆಟ್‌ ರೈಲು ಸಂಚರಿಸುವ ಮುಂಬೈ, ವಾಪಿ, ಬರೋಡಾ, ಸೂರತ್‌, ಆನಂದ್‌ ಹಾಗೂ ಅಹಮದಾಬಾದ್‌ ನಗರಗಳು ಆರ್ಥಿಕ ನಗರಗಳಾಗಿ ಬದಲಾಗಲಿವೆ. ಈ ನಗರಗಳಲ್ಲಿ ಪ್ರತ್ಯೇಕ ಆರ್ಥಿಕತೆಯೇ ಸೃಷ್ಟಿಯಾಗುತ್ತದೆ. ಯೋಜನೆಯ ಪ್ರಗತಿಯು ಕ್ಷಿಪ್ರವಾಗಿ ಸಾಗುತ್ತಿದೆ” ಎಂದು ಮಾಹಿತಿ ಕೆಲ ದಿನಗಳ ಹಿಂದಷ್ಟೇ ಅಶ್ವಿನಿ ವೈಷ್ಣವ್‌ ಹೇಳಿದ್ದರು.

ಸೂರತ್‌ನಲ್ಲಿ ತಿಂಡಿ, ಮುಂಬೈನಲ್ಲಿ ಕೆಲಸ

ಬುಲೆಟ್‌ ರೈಲು ಓಡಾಟ ಆರಂಭವಾದ ಬಳಿಕ ಜನರ ಜೀವನಶೈಲಿ ಹೇಗೆ ಬದಲಾಗುತ್ತದೆ? ಸಂಪರ್ಕ ಕ್ರಾಂತಿ ಹೇಗಾಗುತ್ತದೆ ಎಂಬುದನ್ನು ಅಶ್ವಿನಿ ವೈಷ್ಣವ್‌ ಅವರು ಉದಾಹರಣೆ ಸಮೇತ ತಿಳಿಸಿದರು. “ಬುಲೆಟ್ ರೈಲು ಓಡಾಟ ಆರಂಭವಾದರೆ, ಜನ ಸೂರತ್‌ನಲ್ಲಿ ತಿಂಡಿ ತಿಂದು, ಮುಂಬೈನಲ್ಲಿ ಕೆಲಸ ಮುಗಿಸಿಕೊಂಡು, ರಾತ್ರಿ ತಮ್ಮ ಮನೆ ಸೇರಬಹುದು. ಬುಲೆಟ್‌ ರೈಲುಗಳಲ್ಲಿ ಓಡಾಡುವ ಟಿಕೆಟ್‌ ದರ ಕೂಡ ನಿಯಮಿತವಾಗಿಯೇ ಇರಲಿದೆ” ಎಂದು ರೈಲ್ವೆ ಸಚಿವ ತಿಳಿಸಿದರು.

ಇದನ್ನೂ ಓದಿ: PM Narendra Modi: ಬೆಂಗಳೂರು- ಕಲಬುರಗಿ, ಮೈಸೂರು- ಚೆನ್ನೈ ಸೇರಿ 10 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಮುಂಬೈ-ಅಹಮದಾಬಾದ್‌ ಬುಲೆಟ್‌ ರೈಲು ಕಾರಿಡಾರ್‌ ಯೋಜನೆಯು 2021ರ ನವೆಂಬರ್‌ನಲ್ಲಿ ಆರಂಭವಾಗಿದೆ. ಇದಾದ ಆರು ತಿಂಗಳಲ್ಲಿ ಒಂದು ಕಿಲೋಮೀಟರ್‌ ರೈಲು ಮಾರ್ಗ ನಿರ್ಮಿಸಲಾಗಿದೆ. 2023ರ ಏಪ್ರಿಲ್‌ ವೇಳೆಗೆ 50 ಕಿಲೋಮೀಟರ್‌ ಆಗಿದೆ. ಇದೇ ಕಾರಿಡಾರ್‌ ಭಾಗವಾಗಿ ಎಂಟು ನದಿಗಳಿಗೆ ಸೇತುವೆ ನಿರ್ಮಿಸಲಾಗುತ್ತದೆ. ಮೊದಲ ಬುಲೆಟ್‌ ರೈಲು ಯೋಜನೆಗೆ 1.08 ಲಕ್ಷ ಕೋಟಿ ರೂ. ವ್ಯಯಿಸಲಾಗುತ್ತಿದೆ. ಇದಕ್ಕೆ ಜಪಾನ್‌ ಸರ್ಕಾರವು ಕೇವಲ 0.1ರ ಬಡ್ಡಿದರದಲ್ಲಿ ಸಾಲ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

IT Hiring: 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು. ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ನೇಮಕ ಆಗಲಿದೆ.

VISTARANEWS.COM


on

tcs jobs IT hiring
Koo

ಹೊಸದಿಲ್ಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ (IT services) ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್ – TCS) ನೂತನ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು (IT Hiring) ಪ್ರಾರಂಭಿಸಿದೆ. ಏಪ್ರಿಲ್ 10ರವರೆಗೆ ಹೊಸ ಉದ್ಯೋಗಗಳಿಗಾಗಿ (Job Openings) ಅರ್ಜಿಗಳನ್ನು ಕರೆಯಲಾಗುತ್ತಿದೆ.

ಇದುವರೆಗಿನ ನೇಮಕಾತಿ ಸ್ಥಗಿತದಿಂದ ಸಂಕಷ್ಟದಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಇದು ಸಿಹಿ ಸುದ್ದಿಯಾಗಿದೆ. ಕಲೆದೆರಡು ವರ್ಷಗಳಲ್ಲಿ ವಿವಿಧ ದೊಡ್ಡ ಐಟಿ ಸಂಸ್ಥೆಗಳು ನೇಮಕಾತಿ ನಿಲ್ಲಿಸಿದ್ದವು.

TCS ಏಪ್ರಿಲ್ 26ರಂದು ಪರೀಕ್ಷೆಗಳನ್ನು ನಡೆಸಲಿದೆ. ಕಂಪನಿಯು 2024ರ BTech, BE, MCA, MSc ಮತ್ತು MS ಬ್ಯಾಚ್‌ನಿಂದ ಏಪ್ರಿಲ್ 10ರವರೆಗೆ ಉದ್ಯೋಗ ಅರ್ಜಿಗಳನ್ನು ಆಹ್ವಾನಿಸುತ್ತಿದೆ ಎಂದು TCS ವೆಬ್‌ಸೈಟ್‌ನ ಇತ್ತೀಚಿನ ಪ್ರಕಟಣೆ ತಿಳಿಸಿದೆ. TCS ಮೂರು ವಿಭಾಗಗಳಲ್ಲಿ- ನಿಂಜಾ, ಡಿಜಿಟಲ್ ಮತ್ತು ಪ್ರೈಮ್- ನೇಮಕಾತಿ ಮಾಡುತ್ತಿದೆ.

ನಿಂಜಾ ವರ್ಗವು ವರ್ಷಕ್ಕೆ 3.36 ಲಕ್ಷ ರೂಪಾಯಿಗಳ, ಡಿಜಿಟಲ್ ಮತ್ತು ಪ್ರೈಮ್ ವಿಭಾಗಗಳು ವಾರ್ಷಿಕವಾಗಿ ಕ್ರಮವಾಗಿ 7 ಲಕ್ಷ ಮತ್ತು 9-11.5 ಲಕ್ಷ ರೂ.ಗಳ ಪ್ಯಾಕೇಜ್‌ ಅನ್ನು ನೀಡಲಿವೆ. ಖಾಲಿ ಇರುವ ಹುದ್ದೆಗಳ ಸಂಖ್ಯೆಯನ್ನು ಟಿಸಿಎಸ್‌ ಬಹಿರಂಗಪಡಿಸಿಲ್ಲ.

ಡಿಸೆಂಬರ್ 2023ರಂದೇ ಸಂಸ್ಥೆ ಹೊಸ ಉದ್ಯೋಗಗಳ ಸೂಚನೆ ನೀಡಿತ್ತು. “ನಾವು ಮುಂದಿನ ವರ್ಷಕ್ಕೆ ನಮ್ಮ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. TCSಗೆ ಸೇರಲು ಫ್ರೆಶರ್‌ಗಳಲ್ಲಿ ಪ್ರಚಂಡ ಉತ್ಸಾಹವನ್ನು ಕಾಣುತ್ತಿದೇವೆ” ಎಂದು TCS ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಡ್ ಹೇಳಿದ್ದರು.

“ಉದ್ಯೋಗಿಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸುವುದು ಕಷ್ಟ” ಎಂದು ಲಕ್ಕಾಡ್ ಹೇಳಿದ್ದರು. ದೊಡ್ಡ ಪ್ರಮಾಣದಲ್ಲಿ ನೇಮಕಾತಿ ಆಗುವ ಸಂಭವ ಇದೆ. 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು.

ಏತನ್ಮಧ್ಯೆ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಶುಕ್ರವಾರ ಅಮೆಜಾನ್ ವೆಬ್ ಸೇವೆಗಳು (AWS) ಜನರೇಟಿವ್ AI (GenAI) ಅನ್ನು ಬಿಡುಗಡೆ ಪಾಲುದಾರನಾಗಿ ಹೊಂದಿದೆ. GenAIನಲ್ಲಿ 350,000ಕ್ಕೂ ಹೆಚ್ಚು ಉದ್ಯೋಗಿಗಳು ಮೂಲಭೂತ ಕೌಶಲ್ಯಗಳ ಬಗ್ಗೆ ತರಬೇತಿ ಪಡೆದಿದ್ದು, TCS ವಿಶ್ವದಲ್ಲೇ ಅತಿ ದೊಡ್ಡ AI ಕಾರ್ಯಪಡೆಗಳಲ್ಲಿ ಒಂದನ್ನು ನಿರ್ಮಿಸಲು ಸಿದ್ಧವಾಗಿದೆ.

TCS ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: TCS NextStep ಪೋರ್ಟಲ್‌ಗೆ ಲಾಗಿನ್ ಮಾಡಿ
ಹಂತ 2: ಡ್ರೈವ್‌ಗಾಗಿ ನೋಂದಾಯಿಸಿ ಮತ್ತು ಅರ್ಜಿ ಸಲ್ಲಿಸಿ
ಸನ್ನಿವೇಶ A: ನೀವು TCS NextStep ಪೋರ್ಟಲ್, ‘IT’ ವರ್ಗದ ಅಡಿಯಲ್ಲಿ ನೋಂದಾಯಿತ ಬಳಕೆದಾರರಾಗಿದ್ದರೆ, ದಯವಿಟ್ಟು ನಿಮ್ಮ TCS ಉಲ್ಲೇಖ ID (CT/ DT ಉಲ್ಲೇಖ ಸಂಖ್ಯೆ) ಒಂದಿಗೆ ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ. ಸಲ್ಲಿಸಿದ ನಂತರ, ದಯವಿಟ್ಟು Apply For Drive ಮೇಲೆ ಕ್ಲಿಕ್ ಮಾಡಿ.
ಸನ್ನಿವೇಶ B: ನೀವು ಹೊಸ ಬಳಕೆದಾರರಾಗಿದ್ದರೆ, Register Now ಕ್ಲಿಕ್ ಮಾಡಿ. “IT” ವರ್ಗವನ್ನು ಆಯ್ಕೆಮಾಡಿ ಮತ್ತು ನಿಮ್ಮ ವಿವರಗಳನ್ನು ಭರ್ತಿ ಮಾಡಿ. ನಿಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು Apply For Drive ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Continue Reading

ದೇಶ

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Congress: ಆದಾಯ ತೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಐಟಿ ಇಲಾಖೆಯು ಸುಮಾರು 1,700 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ನೀಡಿದೆ. ಇದರಿಂದ ಪಕ್ಷವು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Rahul Gandhi And Sonia Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹೊಸ್ತಿಲಿನಲ್ಲಿಯೇ ಕಾಂಗ್ರೆಸ್‌ಗೆ (Congress) ಸಾಲು ಸಾಲು ಪೆಟ್ಟುಗಳು ಬೀಳುತ್ತಿವೆ. ಕಾಂಗ್ರೆಸ್‌ ನಾಯಕರ ಬಿಜೆಪಿ ಸೇರ್ಪಡೆ, ಇಂಡಿಯಾ ಒಕ್ಕೂಟದಲ್ಲಿ (India Bloc) ಬಿರುಕಿನ ಮಧ್ಯೆಯೇ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯು (Income Tax Department) ಹೊಸ ಶಾಕ್‌ ನೀಡಿದೆ. ಕೆಲ ವರ್ಷಗಳಿಂದ ತೆರಿಗೆ ರಿಟರ್ನ್ಸ್‌ನಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ 1,700 ಕೋಟಿ ರೂಪಾಯಿಯ ಟ್ಯಾಕ್ಸ್‌ ನೋಟಿಸ್‌ (Tax Notice) ಜಾರಿಗೊಳಿಸಿದೆ.

ಐಟಿ ಇಲಾಖೆ ನೋಟಿಸ್‌ ನೀಡಿರುವುದನ್ನು ಕಾಂಗ್ರೆಸ್‌ ನಾಯಕ ವಿವೇಕ್‌ ತಂಖಾ ದೃಢಪಡಿಸಿದ್ದಾರೆ. 2017-18ನೇ ಸಾಲಿನಿಂದ 2020-21ನೇ ಹಣಕಾಸು ಸಾಲಿನಲ್ಲಿ ಕಾಂಗ್ರೆಸ್‌ ತೆರಿಗೆ ರಿಟರ್ನ್ಸ್‌ ವೇಳೆ ವ್ಯತ್ಯಾಸವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆಯು ಕಾಂಗ್ರೆಸ್‌ಗೆ 1,700 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಜಾರಿಗೊಳಿಸಿದೆ. ಇದರಲ್ಲಿ ದಂಡ ಹಾಗೂ ಬಡ್ಡಿಯೂ ಸೇರಿದೆ ಎಂದು ವಿವೇಕ್‌ ತಂಖಾ ತಿಳಿಸಿದ್ದಾರೆ. ಅಲ್ಲದೆ, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಆದಾಯ ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ನ ಹಲವು ಖಾತೆಗಳಿಗೆ ತಡೆಹಿಡಿದಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ಪಕ್ಷದ ಹಲವು ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65 ಕೋಟಿ ರೂಪಾಯಿ ವಿತ್‌ಡ್ರಾ ಮಾಡಿದೆ. ನವದೆಹಲಿಯ ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಐಟಿ ಇಲಾಖೆಯು ಹಣ ವಿತ್‌ಡ್ರಾ ಮಾಡಿದೆ. ಕಾಂಗ್ರೆಸ್‌ನ ಮೂರು ಬ್ಯಾಂಕ್ ಖಾತೆಗಳಿಂದ 60.25 ಕೋಟಿಯನ್ನು ಡಿಮ್ಯಾಂಡ್ ಡ್ರಾಫ್ಟ್‌ಗಳ ರೂಪದಲ್ಲಿ ತೆಗೆದುಕೊಳ್ಳಲಾಗಿದೆ. ಭಾರತೀಯ ಯುವ ಕಾಂಗ್ರೆಸ್‌ನ ಖಾತೆಯಿಂದ 5 ಕೋಟಿ ರೂ. ಪಡೆಯಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಇದನ್ನೂ ಓದಿ: Parliament Flashback: ಕಾಂಗ್ರೆಸ್‌ನಿಂದ ನಾಲ್ಕು ಬಾರಿ ಗೆದ್ದು, ಬಿಜೆಪಿಯಿಂದ ಸ್ಪರ್ಧಿಸಿದಾಗ ಸೋತು ಹೋಗಿದ್ದ ಒಡೆಯರ್‌!

ಇದರಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್‌ಗೆ ಕಷ್ಟವಾಗುತ್ತಿದೆ. ಕಾಂಗ್ರೆಸ್‌ ನಾಯಕರಿಗೆ ರೈಲ್ವೆ ಟಿಕೆಟ್‌ ಬುಕ್‌ ಮಾಡಲು ಸಹ ಸಾಧ್ಯವಾಗುತ್ತಿಲ್ಲ ಎಂಬುದಾಗಿ ಕಾಂಗ್ರೆಸ್‌ ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು, ಆದಾಯ ತೆರಿಗೆ ಇಲಾಖೆಯ ಮರು ಮೌಲ್ಯಮಾಪನ ಪ್ರಕ್ರಿಯೆ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಇದರ ಬೆನ್ನಲ್ಲೇ, ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ನೋಟಿಸ್‌ ಜಾರಿ ಮಾಡಿದೆ. ಇದರಿಂದ ಕಾಂಗ್ರೆಸ್‌ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Sanjiv Bhatt: ಡ್ರಗ್ಸ್‌ ಕೇಸ್;‌ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ಗೆ 20 ವರ್ಷ ಜೈಲು!

Sanjiv Bhatt: ಮಾದಕವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರಿಗೆ ಗುಜರಾತ್‌ ನ್ಯಾಯಾಲಯವೊಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಷ್ಟಕ್ಕೂ ಏನಿದು ಪ್ರಕರಣ?

VISTARANEWS.COM


on

Sanjiv Bhatt
Koo

ಗಾಂಧಿನಗರ: ನಕಲಿ ಮಾದಕವಸ್ತು ಪ್ರಕರಣ ದಾಖಲಿಸಿ, ವಕೀಲರೊಬ್ಬರ ವಿರುದ್ಧ ಪಿತೂರಿ ನಡೆಸಿದ ಆರೋಪದಲ್ಲಿ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ (Sanjiv Bhatt) ಅವರಿಗೆ ಗುಜರಾತ್‌ (Gujarat) ನ್ಯಾಯಾಲಯವೊಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ. 1996ರ ನಕಲಿ ಡ್ರಗ್ಸ್‌ ಕೇಸ್‌ಗೆ ಸಂಬಂಧಿಸಿದಂತೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದಲ್ಲಿರುವ ನ್ಯಾಯಾಲಯವು (Palanpur Court) ಮಾಜಿ ಐಪಿಎಸ್‌ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದೆ. ಹಾಗೆಯೇ, 2 ಲಕ್ಷ ರೂ. ದಂಡ ವಿಧಿಸಿದ್ದು, ದಂಡ ಪಾವತಿಸಲು ಆಗದಿದ್ದರೆ ಒಂದು ವರ್ಷ ಹೆಚ್ಚುವರಿಯಾಗಿ ಜೈಲಿನಲ್ಲಿರಬೇಕು ಎಂದು ಸೂಚಿಸಿದೆ.

ಏನಿದು ಡ್ರಗ್ಸ್‌ ಕೇಸ್?‌

1996ರಲ್ಲಿ ರಾಜಸ್ಥಾನ ಮೂಲದ ವಕೀಲರೊಬ್ಬರು ಪಾಲನ್‌ಪುರ ಹೋಟೆಲ್‌ನಲ್ಲಿ ತಂಗಿದ್ದರು. ಅವರು ತಂಗಿರುವ ಹೋಟೆಲ್‌ ಕೋಣೆಯಲ್ಲಿ ಪೊಲೀಸರು ಡ್ರಗ್ಸ್‌ ವಶಪಡಿಸಿಕೊಂಡಿದ್ದರು. ಆದರೆ, ಇಡೀ ಪ್ರಕರಣವೇ ಸುಳ್ಳು ಎಂಬುದು ಬಳಿಕ ಸಾಬೀತಾಗಿದೆ. ಸಂಜೀವ್‌ ಭಟ್‌ ಅವರು ಆಗ ಬನಸ್ಕಾಂತದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿದ್ದರು. ಈಗ ನ್ಯಾಯಾಲಯವು ನಕಲಿ ಮಾದಕವಸ್ತು ಪ್ರಕರಣದ ಪಿತೂರಿ ನಡೆಸಿದ ಹಿನ್ನೆಲೆಯಲ್ಲಿ ಸಂಜೀವ್‌ ಭಟ್‌ ಅವರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

2018ರಿಂದಲೂ ಜೈಲಿನಲ್ಲಿರುವ ಭಟ್‌

ಸಂಜೀವ್‌ ಭಟ್‌ ಅವರು ವಿವಾದಾತ್ಮಕ ಐಪಿಎಸ್‌ ಅಧಿಕಾರಿಯಾಗಿದ್ದು, ಇವರು ಮತ್ತೊಂದು ಪ್ರಕರಣದಲ್ಲಿ 2018ರಿಂದಲೂ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜಾಮ್‌ನಗರದಲ್ಲಿ ಕಸ್ಟಡಿಯಲ್ಲಿರುವಾಗಲೇ ಆರೋಪಿಯೊಬ್ಬ ಮೃತಪಟ್ಟ ಪ್ರಕರಣದಲ್ಲಿ ನ್ಯಾಯಾಲಯವು ಸಂಜೀವ್‌ ಭಟ್‌ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇಂತಹ ಪ್ರಕರಣಗಳಿರುವ ಕಾರಣಗಳಿಂದಾಗಿಯೇ ಸಂಜೀವ್‌ ಭಟ್‌ ಅವರನ್ನು 2015ರಲ್ಲಿಯೇ ಕೆಲಸದಿಂದ ವಜಾಗೊಳಿಸಲಾಗಿದೆ.

ಇದನ್ನೂ ಓದಿ: Muhammad Yunus: ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞಗೆ ಜೈಲು ಶಿಕ್ಷೆ! ಕಾರ್ಮಿಕ ಕಾನೂನು ಉಲ್ಲಂಘನೆ ಆರೋಪ

ಪಾಲನ್‌ಪುರ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜೆ.ಎನ್‌.ಠಕ್ಕರ್‌ ಅವರು ಸಂಜೀವ್‌ ಭಟ್‌ ಅವರಿಗೆ ಶಿಕ್ಷೆ ವಿಧಿಸುವಾಗ ವಿಶೇಷ ಸೂಚನೆ ನೀಡಿದ್ದಾರೆ. ಸಂಜೀವ್‌ ಭಟ್‌ ಅವರು 20 ವರ್ಷ ಜೈಲು ಶಿಕ್ಷೆ ವಿಧಿಸಬೇಕು. ಈಗ ಸಂಜೀವ್‌ ಭಟ್‌ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಇದು ಮುಗಿದ ಬಳಿಕವೇ ಅವರಿಗೆ 20 ವರ್ಷ ಜೈಲು ಶಿಕ್ಷೆ ಆರಂಭವಾಗುತ್ತದೆ ಎಂದು ಸೂಚಿಸಿದ್ದಾರೆ. ಈಗ ಸಂಜೀವ್‌ ಭಟ್‌ ಅವರಿಗೆ 60 ವರ್ಷ ವಯಸ್ಸು. ಇವರ ವಿರುದ್ಧ ಎನ್‌ಡಿಪಿಎಸ್‌, ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bullet Train
ದೇಶ7 mins ago

Bullet Train: ಬುಲೆಟ್‌ ರೈಲು ಓಡೋದು ಯಾವಾಗ? ರೈಲ್ವೆ ಸಚಿವ ಹೇಳೋದಿಷ್ಟು

Lok Sabha Election 2024 BJP JDS coordination committee meeting successful Fight to win with the workers
Lok Sabha Election 202425 mins ago

Lok Sabha Election 2024: ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಯಶಸ್ವಿ; ಎಲೆಕ್ಷನ್‌ ಗೆಲ್ಲಲು ಮಾಸ್ಟರ್‌ ಪ್ಲ್ಯಾನ್!

tcs jobs IT hiring
ಉದ್ಯೋಗ26 mins ago

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

Road Accident
ಬೆಂಗಳೂರು ಗ್ರಾಮಾಂತರ29 mins ago

Road Accident : ತಲೆ ಮೇಲೆ ಹರಿದ ಲಾರಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು, ಮತ್ತೊಬ್ಬ ಗಂಭೀರ

Sonarika Bhadoria
ಕಿರುತೆರೆ37 mins ago

Sonarika Bhadoria: ಹನಿಮೂನ್‌ನ ಹಾಟ್‌ ಫೋಟೊ ಶೇರ್‌ ಮಾಡಿದ ಹಿಂದಿ ಸೀರಿಯಲ್‌ ನಟಿ!

Riyan Parag
ಕ್ರೀಡೆ49 mins ago

Riyan Parag: 3 ದಿನ ನೋವು ನಿವಾರಕ ಮಾತ್ರೆ ಸೇವಿಸಿ ಹಾಸಿಗೆಯಲ್ಲಿದ್ದೆ; ಪಂದ್ಯಶ್ರೇಷ್ಠ ಪ್ರಶಸ್ತಿ ವೇಳೆ ಭಾವುಕರಾದ ​ಪರಾಗ್

Accident Case
ತುಮಕೂರು1 hour ago

Accident Case : ಮರ ಕಡಿಯುವಾಗ ಕರೆಂಟ್‌ ಶಾಕ್‌ಗೆ ಬಲಿ; ಹುಣಸೆ ಹಣ್ಣು ಕೊಯ್ಯುವಾಗ ಬಿದ್ದು ಸಾವು

shani louk photo hamas terrorists
ವಿದೇಶ1 hour ago

Shani Louk Photo: ಹಮಾಸ್‌ ಒತ್ತೆಯಾಳು ಇಸ್ರೇಲಿ ಮಹಿಳೆಯ ನಗ್ನ ದೇಹದ ಫೋಟೋಗೆ ಪ್ರಶಸ್ತಿ; ಆಕ್ರೋಶ; ಉಗ್ರನೇ ತೆಗೆದ ಫೋಟೋನಾ?

Rahul Gandhi And Sonia Gandhi
ದೇಶ1 hour ago

Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Karimani Malika Ninalla play by violinist Aneesh Vidyashankar
ವೈರಲ್ ನ್ಯೂಸ್2 hours ago

Karimani Malika Ninalla: ʻಕರಿಮಣಿ ಮಾಲೀಕʼ ರೀಲ್ಸ್‌ಗೆ ಇನ್ನಷ್ಟು ಮೆರುಗು ನೀಡಿದ ವಯೋಲಿನ್‌ ವಾದಕ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌