New Year 2024: ವಿಶ್ವಾದ್ಯಂತ ಹೊಸ ವರ್ಷದ ಸಂಭ್ರಮ ಹೇಗಿತ್ತು? ಇಲ್ಲಿವೆ ಫೋಟೊಗಳು - Vistara News

ದೇಶ

New Year 2024: ವಿಶ್ವಾದ್ಯಂತ ಹೊಸ ವರ್ಷದ ಸಂಭ್ರಮ ಹೇಗಿತ್ತು? ಇಲ್ಲಿವೆ ಫೋಟೊಗಳು

New Year 2024: ಭಾರತ ಸೇರಿ ಜಗತ್ತಿನಾದ್ಯಂತ ಸಡಗರ-ಸಂಭ್ರಮದಿಂದ ಹೊಸ ವರ್ಷವನ್ನು ಆಚರಿಸಲಾಗಿದೆ. ಎಲ್ಲೆಲ್ಲಿ ಹೇಗೆ ಸಂಭ್ರಮ ಮನೆ ಮಾಡಿತ್ತು ಎಂಬುದರ ಫೋಟೊಗಳು ಇಲ್ಲಿವೆ.

VISTARANEWS.COM


on

Japan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ ಸೇರಿ ಜಗತ್ತಿನಾದ್ಯಂತ ಹೊಸ ವರ್ಷವನ್ನು (New Year 2024) ಪಟಾಕಿ ಸಿಡಿಸಿ, ಕೇಕ್‌ ಕತ್ತರಿಸಿ, ಹಾಡು, ನೃತ್ಯದ ಮೂಲಕ ಸಡಗರದಿಂದ ಆಚರಿಸಲಾಗಿದೆ. ಭಾನುವಾರ (ಡಿಸೆಂಬರ್‌ 31) ಮಧ್ಯರಾತ್ರಿಯಿಂದಲೇ ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ (New Year Celebration) ಆಚರಿಸಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಹೇಗಿತ್ತು? ಎಲ್ಲೆಲ್ಲಿ ಜನರ ಸಂಭ್ರಮ ಹೇಗೆ ಮನೆ ಮಾಡಿತ್ತು ಎಂಬುದರ ಕೆಲವು ಫೋಟೊಗಳು ಇಲ್ಲಿವೆ.

ಇದನ್ನೂ ಓದಿ: New Year 2024: ಈ ವರ್ಷ ನಿಮ್ಮ ಭವಿಷ್ಯ ಹೇಗಿದೆ? ಇಲ್ಲಿದೆ ವಿಡಿಯೊ ಸಹಿತ ವಿವರಣೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಇದಾದ ಬಳಿಕ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

VISTARANEWS.COM


on

Pune
Koo

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ. ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ನೂರಾರು ಬೆತ್ತಲೆ ಫೋಟೊಗಳನ್ನು (Photos) ತೆಗೆದು, ವಿಡಿಯೊಗಳನ್ನು (videos) ರೆಕಾರ್ಡ್‌ ಮಾಡಿ, ಅವುಗಳನ್ನು ತನ್ನ ಬಾಯ್‌ಫ್ರೆಂಡ್‌ಗೆ ಶೇರ್‌ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

ಮೇ 5ರಂದು ಈ ಕುರಿತು ವಿದ್ಯಾರ್ಥಿಯೊಬ್ಬ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಳಿಕ ಪ್ರಕರಣ ಬಯಲಾಗಿದೆ. “ಪ್ರತಿಷ್ಠಿತ ಸಿಒಇಪಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೂರಾರು ವಿದ್ಯಾರ್ಥಿನಿಯರು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವಾಗ ಅವರ ಫೋಟೊಗಳನ್ನು ತೆಗೆದು, ವಿಡಿಯೊ ರೆಕಾರ್ಡ್‌ ಮಾಡಿದ್ದಾಳೆ ಎಂಬ ಭಯಾನಕ ಸಂಗತಿ ಬಯಲಾಗಿದೆ. ಇಷ್ಟಾದರೂ ವಿಶ್ವವಿದ್ಯಾಲಯವು ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದಾಗಿ, ಗರ್ಲ್ಸ್‌ ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಅವರು ಹಾಸ್ಟೆಲ್‌ನಲ್ಲಿ ಇರಲು ಕೂಡ ಭಯಪಡುವಂತಾಗಿದೆ” ಎಂದು ವಿಡಿಯೊ ಪೋಸ್ಟ್ ಮಾಡಿದ್ದ. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

ಯಾವಾಗ ವಿದ್ಯಾರ್ಥಿನಿಯೊಬ್ಬಳು ಪ್ರಕರಣದ ಕುರಿತು ಪೋಸ್ಟ್‌ ಮಾಡಿದಳೋ, ಅದಾದ ಬಳಿಕ ಜನರಿಂದ ಭಾರಿ ಟೀಕೆಗಳು ವ್ಯಕ್ತವಾದವು. ಕೊನೆಗೆ ಎಚ್ಚೆತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದೆ. ಹಾಗೆಯೇ, ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಕೂಡ ಪ್ರಕರಣದ ಕುರಿತು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಮೇ 1ರಂದು ವಿದ್ಯಾರ್ಥಿನಿಯು ಬಾತ್‌ರೂಮ್‌ನಲ್ಲಿ ವಿಡಿಯೊ ರೆಕಾರ್ಡ್‌ ಮಾಡುವ ಕುರಿತು ಕೆಲ ವಿದ್ಯಾರ್ಥಿನಿಯರಿಗೆ ಸುಳಿವು ಸಿಕ್ಕಿದೆ. ಕೂಡಲೇ ವಿಷಯವು ಎಲ್ಲೆಡೆ ಹರಡಿದೆ. ಇದಾದ ಬಳಿಕ ಅವರು ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Continue Reading

ದೇಶ

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

Kulgam: ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ. ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ.

VISTARANEWS.COM


on

Kulgam
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭಾರತೀಯ ಸೇನೆಯು ಉಗ್ರರನ್ನು ಮಟ್ಟಹಾಕುವ ದಿಸೆಯಲ್ಲಿ ಸತತವಾಗಿ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಅದರಲ್ಲೂ, ಮೇ 4ರಂದು ಪೂಂಚ್‌ನಲ್ಲಿ (Poonch Terror Attack) ವಾಯುಪಡೆಯ ಬೆಂಗಾವಲು ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ (Kulgam) ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ.

ಸೋಮವಾರ (ಮೇ 6) ತಡರಾತ್ರಿಯೇ ಕುಲ್ಗಾಮ್‌ನ ರೆಡ್ವಾಣಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಭದ್ರತಾ ಸಿಬ್ಬಂದಿಗೆ ಗುಪ್ತಚರ ಮಾಹಿತಿ ದೊರೆತಿತ್ತು. ಇದರ ಅನ್ವಯ ರಾತ್ರೋರಾತ್ರಿ ಸೈನಿಕರು ಕಾರ್ಯಾಚರಣೆ ಕೈಗೊಂಡು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಭಾರತದ ಸೈನಿಕರು ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದರು. ಆದರೆ, ಕಾರ್ಯಾಚರಣೆ ವೇಳೆ ಭಾರಿ ಮುನ್ನಡೆ ಸಾಧಿಸಿದ ಯೋಧರು ಒಬ್ಬ ಕಮಾಂಡರ್‌ ಸೇರಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಈಗ ರೆಡ್ವಾಣಿ ಪ್ರದೇಶದಲ್ಲಿಯೇ ಮೂರನೇ ಉಗ್ರನನ್ನೂ ಹತ್ಯೆಗೈದಿದ್ದಾರೆ.

ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ. ಈತನ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು. ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ, ಪೊಲೀಸರು ಹಾಗೂ ನಾಗರಿಕರ ಹತ್ಯೆ ಸೇರಿ ಈತನ ವಿರುದ್ಧ 18 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಉಗ್ರರ ಫೋಟೊ ಬಿಡುಗಡೆ

ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Continue Reading

ದೇಶ

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Hindu Girl: ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Hindu Girl
ಸಾಂದರ್ಭಿಕ ಚಿತ್ರ.
Koo

ಮುಂಬೈ: ಯಾವ ಧರ್ಮವೂ ಹಿಂಸೆಯನ್ನು, ಬಲವಂತದ ಮತಾಂತರವನ್ನು, ಲೈಂಗಿಕ ಕಿರುಕುಳ ಸೇರಿ ಯಾವುದೇ ಅನಾಚಾರವನ್ನು ಬೋಧಿಸುವುದಿಲ್ಲ. ಯಾವ ಧರ್ಮಗ್ರಂಥವೂ ಬೇರೆಯವರಿಗೆ ಕೆಡಕು ಮಾಡಿ ಎನ್ನುವುದಿಲ್ಲ. ಆದರೆ, ಧರ್ಮಪಾಲಕರ ಮೂಲಭೂತವಾದವು ಸಮಾಜಕ್ಕೆ ಮಾರಕವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) ಮುಸ್ಲಿಂ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯು ಇಸ್ಲಾಂಅನ್ನು ಅನುಸರಿಸಬೇಕು ಎಂದು ಒತ್ತಾಯಿಸುವ ಮೂಲಕ ಹೀನ ಕೃತ್ಯ ಎಸಗಿದ್ದಾನೆ.

ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಇನ್ನು, ಕೃತ್ಯ ಬಯಲಾಗುತ್ತಲೇ ಇಬ್ರಾಹಿಂ ಖಾನ್‌ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Hubli

6 ತಿಂಗಳಿಂದ ನಿರಂತರ ಕಿರುಕುಳ

14 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿಯ ತಂದೆ-ತಾಯಿ ತೀರಿಕೊಂಡ ಕಾರಣ 2023ರ ಕಾಶಿಗಾಂವ್‌ಗೆ ಇಬ್ಬರೂ ಸ್ಥಳಾಂತರಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಕಾಶಿಗಾಂವ್‌ ನಿವಾಸಿಯಾದ ಇಬ್ರಾಹಿಂ ಖಾನ್‌, ಬಾಲಕಿಯನ್ನು ಗಮನಿಸಿದ್ದಾನೆ. ಪದೇಪದೆ ಬಾಲಕಿಯನ್ನು ಮಾತನಾಡಿಸುವುದು, ನಗುವುದು, ನೀನೇ ನನ್ನ ಜೀವನ ಎಂದು ಕಿಚಾಯಿಸುವುದು ಸೇರಿ ಹಲವು ರೀತಿಯಲ್ಲಿ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ.

ಕೆಲ ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಇಬ್ರಾಹಿಂ ಖಾನ್‌ ಬಾಲಕಿಯ ಮನೆಗೆ ನುಗ್ಗಿದ್ದಾನೆ. ಆಗ ಬಾಲಕಿಯ ಎದುರು ಪ್ರೇಮ ನಿವೇದನೆ ಮಾಡಿದ ಆತ, ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯ ಮನೆಗೆ ಹೋಗುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇಸ್ಲಾಂ ರೀತಿ-ರಿವಾಜುಗಳನ್ನು ಅನುಸರಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾನೆ. ಇಬ್ರಾಹಿಂ ಖಾನ್‌ನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಬಾಲಕಿಯು ಮೇ 3ರಂದು ಹಿರಿಯರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

“ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನುಗ್ಗುತ್ತಿದ್ದ ಆತ, ನನ್ನನ್ನು ಮದುವೆಯಾಗುತ್ತೇನೆ ಎಂಬುದಾಗಿ ಹೇಳು ಎಂದು ಒತ್ತಾಯಿಸುತ್ತಿದ್ದ. ನನಗೆ ನನ್ನ ತಂದೆ-ತಾಯಿ ಜತೆ ಇರಲು ಇಷ್ಟವಿಲ್ಲ. ನಿನ್ನೊಂದಿಗೆ ನಾನು ಬದುಕಲು ಇಷ್ಟ. ಇಬ್ಬರೂ ಬೇರೆ ಕಡೆ ಬಾಡಿಗೆ ಮನೆ ಮಾಡೋಣ. ಅಲ್ಲಿ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಬ್ಬರೂ ಜತೆಯಾಗಿರೋಣ ಎಂದು ಹೇಳಿದ. ಇದಕ್ಕೆ ನಾನು ಒಪ್ಪದಿದ್ದಾಗ ದೌರ್ಜನ್ಯ ಎಸಗಿದ” ಎಂಬುದಾಗಿ ಎಫ್‌ಐಆರ್‌ನಲ್ಲಿ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Continue Reading

ದೇಶ

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Poonch Terrorists: ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈಗ ದಾಳಿ ಮಾಡಿದ ಮೂವರು ಉಗ್ರರನ್ನು ಗುರುತಿಸಲಾಗಿದ್ದು, ಎನ್‌ಕೌಂಟರ್‌ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

Poonch Terrorists
Koo

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ (Indian Air Force) ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ (Poonch Terrorists) ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು (Indian Army) ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಪೂಂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಮೊದಲೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಸಿಸಿಟಿವಿ ದೃಶ್ಯಗಳು ಹಾಗೂ ಫೋಟೊಗಳನ್ನು ಪರಿಶೀಲನೆ ಮಾಡುತ್ತಿರುವ ಭಾರತೀಯ ಸೇನೆಯು ರಾಜೌರಿ ಹಾಗೂ ಪೂಂಚ್‌ನ ಅರಣ್ಯ ಪ್ರದೇಶದಲ್ಲಿ‌ ಮೂವರ ಹತ್ಯೆಗಾಗಿ ಬೃಹತ್ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕೆಲವೆಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೂಂಚ್‌ ದಾಳಿಯ ಬಳಿಕ ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಯೋಧರು ಸೇಡು ತೀರಿಸಿಕೊಂಡಿದ್ದರು. ಮೇ 6ರಂದು ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಒಟ್ಟು ಮೂವರು ಹತ್ಯೆಗೈದಿದ್ದರು.

ಇದನ್ನೂ ಓದಿ: Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Continue Reading
Advertisement
Pune
ದೇಶ5 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ5 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ5 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ6 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ6 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ7 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್7 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ7 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ7 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ7 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ24 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌