Maha politics: ಅಸ್ವಾಭಾವಿಕ ಮೈತ್ರಿ ಸರಕಾರಕ್ಕೆ ಉಳಿಗಾಲವಿಲ್ಲ, ಕರ್ನಾಟಕದ ಬಳಿಕ ಈಗ ಮಹಾರಾಷ್ಟ್ರ ಮಾದರಿ! - Vistara News

ದೇಶ

Maha politics: ಅಸ್ವಾಭಾವಿಕ ಮೈತ್ರಿ ಸರಕಾರಕ್ಕೆ ಉಳಿಗಾಲವಿಲ್ಲ, ಕರ್ನಾಟಕದ ಬಳಿಕ ಈಗ ಮಹಾರಾಷ್ಟ್ರ ಮಾದರಿ!

ರಾಜಕೀಯದಲ್ಲಿ ಅಸ್ವಾಭಾವಿಕ, ಅನೈಸರ್ಗಿಕ ಸಂಬಂಧಗಳು ಹುಟ್ಟುವುದು ಸಹಜ. ಆದರೆ, ಅದನ್ನು ದೀರ್ಘ ಕಾಲ ಕಾಪಾಡಿಕೊಳ್ಳುವುದು ಅಪಾಯಕಾರಿ. ಅದು ಒಂದು ಪಕ್ಷದ ಅಸ್ತಿತ್ವವನ್ನೇ ನಾಶ ಮಾಡಿಬಿಡುತ್ತದೆ. ಶಿವಸೇನೆಗೆ ಅಂಥದೊಂದು ಅಪಾಯವಿತ್ತು. ಆದರೆ, ಉದ್ಧವ್‌ ಠಾಕ್ರೆಗೆ ಅದು ಅರ್ಥವಾಗಲಿಲ್ಲ. ಅಸ್ವಾಭಾವಿಕ ಸಂಬಂಧಕ್ಕೆ ಡೈವೋರ್ಸ್‌ ಕೊಡುವುದನ್ನು ಮರೆತು ಸಂಬಂಧದ ಸಂಭ್ರಮದಲ್ಲೇ ಅವರು ಮುಳುಗಿಹೋದರು.

VISTARANEWS.COM


on

Maharastra political crisis: Shinde-Thackrey faction dispute transferred to Supreme Court extended bench
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಅದು ಐದು ವರ್ಷ ಉಳಿಯಬೇಕಾದ ಸರಕಾರ ಆಗಿರಲೇ ಇಲ್ಲ. ಇವತ್ತಲ್ಲ ನಾಳೆ, ಒಂದಲ್ಲ ಒಂದು ಕಾರಣಕ್ಕೆ ಅದು ಉರುಳಿ ಹೋಗಲೇಬೇಕಿತ್ತು. ಆದರೆ, ಅದನ್ನು ಜನನಿಬಿಡ ಪ್ರದೇಶದಲ್ಲಿರುವ ದೊಡ್ಡ ಕಟ್ಟಡವೊಂದನ್ನು ಅತ್ಯಂತ ಜತನದಿಂದ ಉರುಳಿಸುತ್ತಾರಲ್ಲ. ಆ ರೀತಿ ಯಾರಿಗೂ ಗೊತ್ತಾಗದಂತೆ ನೆಲಸಮ ಮಾಡಲು ಹಲವು ಅವಕಾಶಗಳಿದ್ದವು. ಆದರೆ, ಇಲ್ಲಿ ಬುಲ್ಡೋಜರ್‌ ತಂದು ಗುದ್ದಿಸಿ ಪುಡಿ ಮಾಡಲಾಗಿದೆ. ಕೆಲವರಿಗೆ ಗಾಯಗಳೂ ಆಗಿವೆ!

jds analysis

ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕಾರಕ್ಕಾಗಿ ಅಸಹಜ, ಅಸ್ವಾಭಾವಿಕ ಮೈತ್ರಿಗಳು ಅತ್ಯಂತ ಸಹಜ. ಆದರೆ, ಈಗೀಗ ಜೀವನಪೂರ್ತಿ ಜತೆಯಾಗಿ ಬಾಳುತ್ತೇವೆ ಎಂದು ಪ್ರತಿಜ್ಞೆ ಮಾಡಿ ಮದುವೆಯಾದ ಸಂಬಂಧಗಳೇ ಉಳಿಯುವುದಿಲ್ಲ. ಹಾಗಿರುವಾಗ ಅವಸರಕ್ಕೆ ಸೃಷ್ಟಿಯಾದ ರಾಜಕೀಯ ಸಂಬಂಧಗಳಿಗೆ ದೀರ್ಘ ಕಾಲ ಜೋತು ಬೀಳುವ ಅನಿವಾರ್ಯತೆ ಇರುವುದಿಲ್ಲ. ಹಾಗೆ ಜೋತು ಬೀಳುವುದು ಕೂಡಾ ಅಪಾಯಕಾರಿಯೆ.

ಮಹಾರಾಷ್ಟ್ರದಲ್ಲಿ ಆಗಿದ್ದು ಅದೇ

2019ರ ಅಕ್ಟೋಬರ್‌ 21ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಾಗ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮತ್ತು ಶಿವಸೇನೆ ನಿಚ್ಚಳ ಬಹುಮತವನ್ನೇ ಪಡೆದಿತ್ತು. 152 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 106 ಸ್ಥಾನಗಳಲ್ಲಿ ಗೆದ್ದಿದ್ದರೆ, 121 ಸ್ಥಾನಗಳಲ್ಲಿ ಕಣಕ್ಕಿಳಿದಿದ್ದ ಶಿವಸೇನೆ 56 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಅತ್ಯಂತ ಸಹಜವಾಗಿ ಬಿಜೆಪಿ ಮುಂದಾಳುತ್ವದಲ್ಲಿ ಸರಕಾರ ರಚನೆಗೆ ಬೇಕಾದ ಶಕ್ತಿ (ಮ್ಯಾಜಿಕ್‌ ನಂ. 145) ಜಮೆಯಾಗಿತ್ತು. ಆದರೆ, ಅಧಿಕಾರ ಹಂಚಿಕೆಯ ವಿಚಾರದಲ್ಲಿ ಹುಟ್ಟಿದ ಜಗಳದಿಂದಾಗಿ ಸರಕಾರವೇ ರಚನೆಯಾಗದೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಒಂದು ತಿಂಗಳ ರಾಷ್ಟ್ರಪತಿ ಆಡಳಿತದ ಬಳಿಕವೂ ಬಿಕ್ಕಟ್ಟು ಬಗೆಹರಿಯದೆ ಇದ್ದಾಗ ಅದಕ್ಕೊಂದು ಜರ್ಕ್‌ ಕೊಟ್ಟಿದ್ದು ದೇವೇಂದ್ರ ಫಡ್ನವಿಸ್‌. ಮಾಜಿ ಮುಖ್ಯಮಂತ್ರಿ ಫಡ್ನವಿಸ್‌ ಅವರು ಎನ್‌ಸಿಪಿಯನ್ನು ಒಡೆದು ಅಜಿತ್‌ ಪವಾರ್‌ ಅವರ ಟೀಮ್‌ನ ಬೆಂಬಲ ಪಡೆದು ನವೆಂಬರ್‌ 23ರಂದು ರಾತ್ರೋರಾತ್ರಿ ಸರಕಾರವನ್ನು ರಚಿಸಿದರು. ರಾಜ್ಯಪಾಲರ ಸಹಾಯ ಹಸ್ತ, ಕೇಂದ್ರ ಸರಕಾರದ ಕೃಪಾಕಟಾಕ್ಷದ ನೆರವಿನಿಂದ ಮಹಾರಾಷ್ಟ್ರದಲ್ಲಿ ಸರಕಾರ ರಚನೆಯಾಯಿತು. ಅಲ್ಲಿಯವರೆಗೆ ನಿದ್ದೆಯಲ್ಲಿದ್ದ ಎ‌ನ್‌ಸಿಪಿ ಬೆಚ್ಚಿ ಬಿದ್ದಿತು. ಬಂಧುವೇ ಆಗಿರುವ ಅಜಿತ್‌ ಪವಾರ್‌ ಮೋಸ ಮಾಡಿದರು ಎಂದು ಶರದ್‌ ಪವಾರ್‌ ಅಲವತ್ತುಕೊಂಡರು. ನಿಜವೆಂದರೆ, ಅಜಿತ್‌ ಮೋಸ ಮಾಡಿದ್ದು ತಮಗಲ್ಲ ಬಿಜೆಪಿಗೆ ಎಂದು ಗೊತ್ತಾಗಿದ್ದು ನವೆಂಬರ್‌ 26ರಂದು! ಸರಕಾರ ರಚನೆಗೆ ಬೆಂಬಲ ನೀಡುವುದಾಗಿ ಬಿಜೆಪಿಗೆ ಎಂದು ಯೊಂದಿಗೆ ಸೇರಿಕೊಂಡ ಅಜಿತ್‌ ಪವಾರ್‌ ಉಪಮುಖ್ಯಮಂತ್ರಿಯೇ ಆದರು. ತನ್ನ ಮೇಲಿದ್ದ 20,000 ಕೋಟಿ ರೂ.ಗಳ ಹಗರಣದಲ್ಲಿ ರಾತ್ರೋ ರಾತ್ರಿ ಕ್ಲೀನ್‌ ಚಿಟ್‌ ಪಡೆದು ಪರಿಶುದ್ಧರಾದರು. ಮೂರೇ ದಿನದ ಅಂತರದಲ್ಲಿ ನಡೆದ ವಿಶ್ವಾಸ ಮತ ಯಾಚನೆಯಲ್ಲಿ ದೇವೇಂದ್ರ ಫಡ್ನವಿಸ್‌ಗೆ ಕೈ ಕೊಟ್ಟು ಮರಳಿ ಎನ್‌ಸಿಪಿ ಸೇರಿಕೊಂಡರು. ಫಡ್ನವಿಸ್‌ ಸರಕಾರ ಉರುಳಿತು.

ದೇವೇಂದ್ರ ಫಡ್ನವಿಸ್‌

1984ರಲ್ಲಿ ಜತೆಯಾದ ಬಳಿಕ  ಬಿಜೆಪಿ- ಶಿವಸೇನೆ ಹಲವು ಬಾರಿ ಜತೆಗೂಡಿ ಸರಕಾರ ರಚಿಸಿದರೂ ಬಿಜೆಪಿ ಹಿರಿಯಣ್ಣನಾಗಿ  ಅಧಿಕಾರ ನಡೆಸಿದ್ದು 2014ರಲ್ಲಿ. ಅದಾದ ಬಳಿಕ ಶಿವಸೇನೆಗೆ ಬಿಜೆಪಿಯ ಮುಂದೆ ತಾನು ಮಂಕಾಗಬಹುದೆಂಬ ಆತಂಕ ಸೃಷ್ಟಿಯಾಗಲು ಶುರುವಾಗಿತ್ತು. ಅದೇ ಕಾರಣಕ್ಕೆ 2019ರ ಚುನಾವಣೆಯಲ್ಲಿ ಗೆದ್ದರೂ ಅಧಿಕಾರ ಹಂಚಿಕೆಯೇ ಕಗ್ಗಂಟಾಯಿತು.

ಹುಟ್ಟಿಕೊಂಡಿತು ಹೊಸ ಮೈತ್ರಿ!

ತನ್ನನ್ನು ಕಡೆಗಣಿಸುತ್ತಿರುವ ಬಿಜೆಪಿಗೆ ಪಾಠ ಕಲಿಸಲೇಬೇಕೆಂಬ ಹಠದಲ್ಲಿ ಶಿವಸೇನೆ ಯಾರೂ ನಂಬಲು ಸಾಧ್ಯವೇ ಇಲ್ಲದ ಮೈತ್ರಿಯೊಂದಕ್ಕೆ ಮುಂದಾಯಿತು. ತಾನು ಬದುಕಿನುದ್ದಕ್ಕೂ ಪ್ರತಿ ಹೆಜ್ಜೆಯಲ್ಲೂ ವಿರೋಧಿಸಿಕೊಂಡು ಬಂದಿದ್ದ, ಸಾಕಷ್ಟು ದಬ್ಬಾಳಿಕೆ, ದೌರ್ಜನ್ಯಗಳಿಗೆ ಕಾರಣವೂ ಆಗಿದ್ದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆಗೆ ಮೈತ್ರಿ ಮಾಡಿಕೊಳ್ಳುವ ಅಚ್ಚರಿಯ ಹೆಜ್ಜೆ ಇಟ್ಟಿತು. ನಿಜವೆಂದರೆ, ಇಂಥಹುದೊಂದು ಪ್ರಸ್ತಾಪವನ್ನು ತಂದಿಟ್ಟಿದ್ದು ಶರದ್‌ ಪವಾರ್‌. ಇಂಥಹುದೊಂದು ಮೈತ್ರಿ ಸಾಧ್ಯವೆಂದು ಕಾಂಗ್ರೆಸ್‌ನ್ನು ಮನವೊಲಿಸಿ ಶಿವಸೇನೆಯ ಮುಂದೆ ಉಡುಗೊರೆಯ ತಟ್ಟೆ ಇಟ್ಟರು. ಹಲವು ವರ್ಷಗಳಿಂದ ಅಧಿಕಾರವಿಲ್ಲದೆ ಕಂಗಾಲಾಗಿದ್ದ ಕಾಂಗ್ರೆಸ್‌ ಮತ್ತು ಎನ್‌ಸಿಪಿಗೂ ಇಂಥಹುದೊಂದು ಅವಕಾಶ ಬೇಕಿತ್ತು. ಶಿವಸೇನೆ ಒಪ್ಪಿದ್ದು ಅದಕ್ಕೆ ಖುಷಿಯಾಯಿತು. ರಾಜಕಾರಣದಲ್ಲಿ ಹೀಗೂ ಆಗಬಹುದೇ ಎಂಬ ಸೋಜಿಗ ದೇಶಕ್ಕೂ ಆಯಿತು. ನಿಜವೆಂದರೆ  ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ಶಿವಸೇನೆಯು ಬಿಜೆಪಿಗಿಂತಲೂ ಚೆನ್ನಾಗಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜತೆಗೇ ಬೆರೆತುಕೊಂಡಿತು! ಈ ಮೈತ್ರಿ ಹೇಗಿತ್ತೆಂದರೆ ಮುಂದಿನ ಚುನಾವಣೆಗಳಲ್ಲಿ ಈ ಮೂರೂ ಪಕ್ಷಗಳು ಜತೆಗೂಡಿಯೇ ಸ್ಪರ್ಧೆ ಮಾಡಿಬಿಡಬಹುದೇ ಎಂಬಷ್ಟು ಆತ್ಮೀಯತೆ ಬೆಳೆದಿತ್ತು.

ಉದ್ಧವ್‌ ಠಾಕ್ರೆಗೆ ಶರದ್‌ ಪವಾರ್‌ ಬೆಂಬಲ

 ಆದರೆ ತಳಮಟ್ಟದಲ್ಲಿ ಹಾಗಿರಲಿಲ್ಲ!
ಮೈತ್ರಿ ಸರಕಾರ ಎನ್ನುವುದು ರಾಜಕಾರಣಿಗಳು ತಮ್ಮ ಅಧಿಕಾರಕ್ಕಾಗಿ ಮಾಡಿಕೊಳ್ಳುವ ತಾತ್ಕಾಲಿಕ ವ್ಯವಸ್ಥೆ. ಆದರೆ, ತಳಮಟ್ಟದಲ್ಲಿ ಈ ಬಂಧ ಬೆಸೆಯುವುದು ಅಷ್ಟು ಸುಲಭವಲ್ಲ. ಈ ನಡುವೆ, ಕೆಲವೊಂದು ಸ್ಥಳೀಯ ಚುನಾವಣೆಗಳನ್ನು ಕಾಂಗ್ರೆಸ್‌-ಎನ್‌ಸಿಪಿ- ಶಿವಸೇನೆ ಜತೆಗೂಡಿ ಎದುರಿಸಿದವರಾದರೂ ಹೀಗೇ ಅದರೆ ಮುಂದೊಂದು ದಿನ ಶಿವಸೇನೆಯ ಅಸ್ತಿತ್ವವೇ ನಾಶವಾಗಬಹುದು ಎಂಬ ಆತಂಕ ಕಾರ್ಯಕರ್ತರಲ್ಲಿ ಹುಟ್ಟಿಕೊಂಡಿತ್ತು. ಅದನ್ನು ಚೆನ್ನಾಗಿ ಗ್ರಹಿಸಿದ್ದು ಉದ್ಧವ್‌ ಠಾಕ್ರೆ ಅಲ್ಲ, ಏಕನಾಥ್‌ ಶಿಂಧೆ!

ಶಿವಸೇನೆ ತನ್ನ ಸಹಜ, ಸ್ವಾಭಾವಿಕ ಸ್ನೇಹಿತ, ಬಾಳ್‌ ಠಾಕ್ರೆ ಅವರ ಹಿಂದುತ್ವ ಸಿದ್ಧಾಂತಕ್ಕೆ ಬದ್ಧವಾದ ಬಿಜೆಪಿಯನ್ನು ಬಿಟ್ಟು ಕಡುವೈರಿಗಳಾದ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆ ಅನೈತಿಕ ಮೈತ್ರಿ ಮಾಡಿಕೊಂಡ ಅಧಿಕಾರ ರಾಜಕಾರಣ ಆಂತರಿಕವಾಗಿ ಶಿವಸೈನಿಕರನ್ನು ಘಾಸಿಗೊಳಿಸಿತ್ತು. ಹೀಗಾಗಿ ಶಿವಸೇನೆ ಈ ಮೈತ್ರಿಯನ್ನು ಆದಷ್ಟು ಬೇಗ ಕಡಿದುಕೊಳ್ಳಬೇಕು ಎನ್ನುವ ಒತ್ತಡ ಒಳಗೊಳಗೆ ಹೆಚ್ಚಿತ್ತು. ಆದರೆ, ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಬಾಳ್‌ ಠಾಕ್ರೆ ಅವರಿಗೆ ಇದ್ಯಾವುದೂ ಕೇಳಿಸಲೇ ಇಲ್ಲ. ಜೀವನದಲ್ಲಿ ಮೊದಲ ಬಾರಿ ಸಿಕ್ಕಿದ ಅಧಿಕಾರದ ರುಚಿಯೋ, ಅಧಿಕಾರದಲ್ಲಿ ಕಳೆದುಹೋದ ಪರಿಯೋ ಅಂತೂ ಶಾಸಕರ ಒಳ ಕುದಿಯೂ ಅವರಿಗೆ ಅರ್ಥವಾಗಲಿಲ್ಲ. ಆದರೆ, ಬಾಳ್ ಠಾಕ್ರೆ ಕಾಲದಿಂದಲೂ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಜನದನಿಗೆ ಕಿವಿಗೊಟ್ಟಿದ್ದ ಶಿಂಧೆಗೆ ನೆಲದ ನಾಡಿಯ ಅರಿವಿತ್ತು. ಹಾಗಾಗಿಯೇ ಅವರು ಶಿವಸೇನೆಯ ಮೂಲವಾದ ಹಿಂದುತ್ವದ ಅಸ್ಮಿತೆಯನ್ನು ಆಧಾರವಾಗಿಟ್ಟು ಒಳಗೊಳಗೆ ಬಲೆ ನೇಯ್ದರು!

ಈ ಕೆಲಸ ಉದ್ಧವ್‌ ಠಾಕ್ರೆಯೇ ಮಾಡಬೇಕಿತ್ತು!
ನಿಜವೆಂದರೆ ರಾಜಕಾರಣದಲ್ಲಿ ಅಸ್ವಾಭಾವಿಕವಾದ ಮೈತ್ರಿಗಳು, ರಾಜಕೀಯ ಅನಿವಾರ್ಯತೆಗಾಗಿ ಹುಟ್ಟಿಕೊಂಡ ವಿರೋಧಿ ಸಿದ್ಧಾಂತಗಳ ಕೂಟ ಹೆಚ್ಚು ಕಾಲ ಬಾಳುವುದು ಕೆಲವು ಪಕ್ಷಗಳಿಗೆ ಅಪಾಯಕಾರಿಯೇ. ಅದರಲ್ಲೂ ಶಿವಸೇನೆಯಂಥ ಹಿಂದುತ್ವವೇ ಜೀವಾಳವಾಗಿರುವ ಪಕ್ಷಗಳು ದೀರ್ಘ ಕಾಲ ಪರಮ ವಿರೋಧಿ ಧೋರಣೆಯ ಕಾಂಗ್ರೆಸ್‌ ಮತ್ತು ಎನ್‌ಸಿಪಿಗಳ ಜತೆ ಮೈತ್ರಿ ಮಾಡಿಕೊಳ್ಳುವುದು ಸೇನೆಯ ಅಸ್ತಿತ್ವಕ್ಕೇ ಅಪಾಯಕಾರಿ. ಇದಕ್ಕೆ ಕಾರಣಗಳು ಹಲವು.

ಒಂದೊಮ್ಮೆ ಮಹಾ ವಿಕಾಸ ಅಘಾಡಿ ಸರಕಾರ ಐದು ವರ್ಷ ಪೂರ್ಣಗೊಳಿಸಿದರೆ ಮುಂದಿನ ಚುನಾವಣೆಯನ್ನು ಶಿವಸೇನೆ ಹೇಗೆ ಎದುರಿಸುತ್ತದೆ ಎನ್ನುವುದು ದೊಡ್ಡ ಪ್ರಶ್ನೆ. ಮೈತ್ರಿಯನ್ನು ಮುಂದುವರಿಸಿದರೆ ಈ ಮೂರೂ ಪಕ್ಷಗಳು ಹೇಗೆ ಸೀಟು ಹಂಚಿಕೆ ಮಾಡಿಕೊಳ್ಳುತ್ತವೆ? ಶಿವಸೇನೆ ಕಳೆದ ಬಾರಿ ಸ್ಪರ್ಧಿಸಿದ್ದ 121 ಕ್ಷೇತ್ರಗಳಲ್ಲಿ ಪ್ರತಿಯೊಂದರಲ್ಲೂ ಕಾಂಗ್ರೆಸ್‌, ಎನ್‌ಸಿಪಿ ಸಮಾನ ಶತ್ರು. ಹಾಗಿರುವಾಗ ಮುಂದಿನ ಚುನಾವಣೆಯಲ್ಲಿ ಅದು ಕಾಂಗ್ರೆಸ್‌ ಪರವೋ, ಎನ್‌ಸಿಪಿ ಪರವೋ ಹೇಗೆ ಮತ ಯಾಚನೆ ಮಾಡುತ್ತದೆ. ಅದಕ್ಕಿಂತಲೂ ಹೆಚ್ಚಾಗಿ ಕತ್ತಿ, ದೊಣ್ಣೆ ಹಿಡಿದು ಬಡಿದಾಡುವ ಶಿವಸೇನೆ ಕಾರ್ಯಕರ್ತರು ತಮ್ಮ ಕ್ಷೇತ್ರದಲ್ಲಿ ಶಿವಸೇನೆ ಸ್ಪರ್ಧಿಸದೆ ಇದ್ದರೆ ಕಾಂಗ್ರೆಸ್‌, ಇಲ್ಲವೇ ಎನ್‌ಸಿಪಿಗೆ ಹೇಗೆ ಮತ ಹಾಕುತ್ತಾರೆ? ಆಗ ಅವರು ಸಹಜವಾಗಿಯೇ ಹಿಂದುತ್ವದ ಪ್ರಬಲ ಆರಾಧಕ ಬಿಜೆಪಿಯತ್ತ ಸಾಗುವುದು ನಿಶ್ಚಿತ. ಹೀಗಾಗಿ ಶಿವಸೇನೆಗೆ ತನ್ನ ಕೇಡರ್‌ ಬೇಸನ್ನು ಉಳಿಸಿಕೊಳ್ಳಲು ಎನ್‌ಸಿಪಿ, ಕಾಂಗ್ರೆಸ್‌ ಜತೆಗಿನ ಮೈತ್ರಿ ಮುರಿದುಕೊಳ್ಳುವುದು ಅನಿವಾರ್ಯವೇ ಆಗಿರುತ್ತದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅರಿವಿತ್ತು!

ಕರ್ನಾಟಕದಲ್ಲಿ 2018ರಲ್ಲಿ ಚುನಾವಣೆ ಜೋಶ್‌ನಲ್ಲಿ ಕಾಂಗ್ರೆಸ್‌ ಅವಸರಕ್ಕೆ ಬಿದ್ದು ಅಧಿಕಾರಕ್ಕಾಗಿ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಿತ್ತು.  ಆ ಕ್ಷಣಕ್ಕೆ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಅದರ ಪ್ಲ್ಯಾನ್‌ ರಾಷ್ಟ್ರ ಮಟ್ಟದಲ್ಲೂ ಪ್ರಶಂಸೆಗೆ ಒಳಗಾಗಿತ್ತು. ಆದರೆ, ಇದರಿಂದ ಪಕ್ಷದ ಮೇಲೆ ದೀರ್ಘಕಾಲೀನವಾಗಿ ಆಗಬಹುದಾದ ಪರಿಣಾಮಗಳ ಬಗ್ಗೆ ಸಿದ್ಧರಾಮಯ್ಯರಂಥ ನಾಯಕರಿಗೆ ಸ್ಪಷ್ಟವಾದ ಅರಿವು ಇತ್ತು. ಹೀಗಾಗಿ ಅಧಿಕಾರದಲ್ಲಿ ಜತೆಯಾಗಿದ್ದರೂ ಕಾರಣ ಸಿಕ್ಕಿದಾಗಲೆಲ್ಲ ತಾವು ಬೇರೆ ಬೇರೆ ಎನ್ನುವುದನ್ನು ನಿರೂಪಿಸುತ್ತಲೇ ಹೋದರು. ಕೊನೆಗೆ ಸರಕಾರದ ಪತನಕ್ಕೂ ನಾನಾ ಕಾರಣಗಳು ಜತೆಗೂಡಿದವು. ಅಂತಿಮವಾಗಿ ಸರಕಾರ ಉರುಳಿದ್ದು ನಿಜಾರ್ಥದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡಕ್ಕೂ ಲಾಭದಾಯಕ ಬೆಳವಣಿಗೆಯೇ.

ಎಚ್‌.ಡಿ. ಕುಮಾರಸ್ವಾಮಿ ಅವರು ಜೀನಾಮೆ ನೀಡಿ ನಿರ್ಗಮಿಸುತ್ತಿರುವ ಕ್ಷಣ

ಯಾಕೆಂದರೆ, ಪರಸ್ಪರ ಎದುರಾಳಿಗಳಾಗೇ ನಿಂತು ಹೋರಾಡಿ ಅಸ್ತಿತ್ವ ಉಳಿಸಿಕೊಳ್ಳಬೇಕಾದ ಪಕ್ಷಗಳು ದೀರ್ಘ ಕಾಲ ಅಧಿಕಾರಕ್ಕಾಗಿ ರಾಜಿ ಮಾಡಿಕೊಂಡರೆ ಕೇಡರ್‌ ಬೇಸ್‌ ಕರಗಿ ಅಸ್ತಿತ್ವಕ್ಕೇ ಹೊಡೆತ ಬೀಳುತ್ತದೆ ಎಂಬುದು ರಾಜಕೀಯ ಸತ್ಯ.

ಒಂದೊಮ್ಮೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗಳು ಕೊನೆಯವರೆಗೂ ಆಡಳಿತ ನಡೆಸಿದರೂ ಮುಂದಿನ ಚುನಾವಣೆಯನ್ನು ಜತೆಯಾಗಿ ಎದುರಿಸುವುದಂತೂ ಸಾಧ್ಯವೇ ಇರಲಿಲ್ಲ. ಯಾಕೆಂದರೆ, ಹಳೆ ಮೈಸೂರು ಭಾಗದಲ್ಲಿ ಪರಸ್ಪರ ಜಿದ್ದಾಜಿದ್ದಿಗೆ ಇಳಿಯವುದು ಅವೆರಡೇ ಪಕ್ಷಗಳು. ಅವರೇ ಮೈತ್ರಿ ಮಾಡಿಕೊಳ್ಳುವುದಂತೂ ಸಾಧ್ಯವೇ ಇಲ್ಲ.  ಹಾಗೆ ಮಾಡಿಕೊಂಡರೆ  ಇಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿರುವ ಬಿಜೆಪಿಗೆ ಕೆಂಪು ಹಾಸಿಗೆ ಹಾಸಿದಂತೆಯೇ.  ಹಾಗಂತ, ಕೊನೆಯ ಕ್ಷಣದಲ್ಲಿ ಮೈತ್ರಿ ಮುರಿದುಕೊಳ್ಳುವ ನಾಟಕ ಮಾಡಿದರೂ ಅದು ಜನರಿಗೆ ಅಧಿಕಾರ ದಾಹ ಅಂತ ತಕ್ಷಣಕ್ಕೆ ಅನಿಸಿಬಿಡುತ್ತದೆ.

ಚುನಾವಣೆಗೆ ಇನ್ನೂ ಎರಡುವರೆ ವರ್ಷ ಇರುವಾಗಲೇ ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದಿದ್ದು ಎರಡುವರೆ ವರ್ಷ ಅಧಿಕಾರ ಅನುಭವಿಸಿದ್ದೂಆಯಿತು, ಉಳಿದ ಅವಧಿ ಪಕ್ಷ ಕಟ್ಟಲು ಸಿಕ್ಕಿದ್ದೂ ಆಯಿತು! ಇದು ನಿಜವಾದ ರಾಜಕಾರಣ.

ಮಹಾರಾಷ್ಟ್ರದಲ್ಲೂ ಹೀಗೇ ಆಗಬೇಕಿತ್ತು!

ನಿಜವೆಂದರೆ, ಉದ್ಧವ್‌ ಠಾಕ್ರೆ ಅವರಿಗೆ ಕರ್ನಾಟಕವೇ ಮಾದರಿ ಆಗಬೇಕಿತ್ತು. ಅಧಿಕಾರದ ಒಂದು ಹಂತದಲ್ಲಿ ಮಹಾ ವಿಕಾಸ ಅಘಾಡಿ ಸರಕಾರದಿಂದ ಹೊರಬಂದು ಸಹಜ ಮಿತ್ರನಾಗಿರುವ ಬಿಜೆಪಿ ಜತೆಗೆ ಸೇರಿಕೊಳ್ಳುವ ಅವಕಾಶವನ್ನು ಬಳಸಿಕೊಳ್ಳಬಹುದಿತ್ತು. ಅಥವಾ ಬಂಡಾಯದ ಸಣ್ಣ ಸೂಚನೆ ಸಿಕ್ಕಾಗ ತಾನೇ ಅದನ್ನು ಸಮಾಧಾನಪಡಿಸಿ, ಅಘಾಡಿ ಮೈತ್ರಿಕೂಟದಿಂದ ಹೊರಬರುವ ಭರವಸೆ ನೀಡಬಹುದಿತ್ತು. ಆದರೆ, ಉದ್ಧವ್‌ ಠಾಕ್ರೆ ಅವರು ಶಿವಸೈನಿಕರಿಗಿಂತಲೂ ಕಾಂಗ್ರೆಸ್‌ ಮತ್ತು ಎನ್‌ಸಿಪಿಯನ್ನೇ ನಂಬಿಕೊಂಡಂತೆ ವರ್ತಿಸಿದರು. ತಮಗೆ ಅಧಿಕಾರ ನೀಡಿದ ಪಕ್ಷಗಳಿಗೆ ಮೋಸ ಮಾಡಬಾರದು ಎಂಬ ಧ್ವನಿ ಅವರ ಮಾತುಗಳಲ್ಲಿ ಹೊಮ್ಮುತ್ತಿತ್ತು. ಹೀಗಾಗಿ ಶಿವಸೇನಾ ಶಾಸಕರಿಗೇ ಅವರ ಮೇಲೆ ಭರವಸೆ ಕುಸಿಯಿತು. ಅಂತಿಮವಾಗಿ ಈಗ ಉದ್ಧವ್‌ ಠಾಕ್ರೆ ಅವರೇ ಏಕಾಂಗಿಯಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಸಶಕ್ತ ನಾಯಕನೊಬ್ಬ ಅಸಹಾಯಕನಾಗಿ, ದೈನೇಸಿಯಂತೆ ಕೈ ಮುಗಿಯುವ ಸ್ಥಿತಿ ಸೃಷ್ಟಿಯಾಯಿತು.

ಉದ್ಧವ್‌ ಠಾಕ್ರೆ ಕೊನೆಯ ಹಂತದಲ್ಲಾದರೂ ತನ್ನ ಪಕ್ಷದೊಳಗೆ ಹುಟ್ಟಿಕೊಂಡಿರುವ ಬಂಡಾಯದ ಸಾಚಾತನವನ್ನು ಅರ್ಥ ಮಾಡಿಕೊಂಡು ವ್ಯವಹರಿಸಿದ್ದರೆ ಇವತ್ತು ಅಧಿಕಾರವಿಲ್ಲದಿದ್ದರೂ ಶಿವಸೇನೆಯ ಪ್ರಧಾನ ಸೇನಾನಿಯಾಗಿ, ಸಾರಥಿಯಾಗಿ ನಿಂತು ರಥ ಓಡಿಸಬಹುದಿತ್ತು. ಎಲ್ಲ ಶಿವಸೈನಿಕರು ಅವರ ಬೆನ್ನ ಹಿಂದೆ ನಿಲ್ಲುತ್ತಿದ್ದರು. ಆದರೆ, ಈಗ ಅರಮನೆ ಇದೆ, ರಥವಿದೆ, ಸೈನಿಕರೇ ಇಲ್ಲದ ಸ್ಥಿತಿ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Labour Day: ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.

VISTARANEWS.COM


on

labour Day
Koo

ಬೆಂಗಳೂರು: ಕಾರ್ಮಿಕರು ಯಾವುದೇ ಸಮಾಜ ಅಥವಾ ದೇಶದ ಶಕ್ತಿ. ಅವರಿಂದಲೇ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತದೆ. ಕಾರ್ಮಿಕರು ರಾಷ್ಟ್ರೀಯ ಸಂಪತ್ತು. ಹೀಗೆ ಹಲವು ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ನೆರವಾ ಗುವ ಕಾರ್ಮಿಕರಿಗಾಗಿಯೇ ಒಂದು ದಿನವಿದೆ. ಅದುವೇ ಕಾರ್ಮಿಕರ ದಿನ. ಅಂದರೆ ಮೇ1. ಜಗತ್ತಿನ ಹಲವಾರು ದೇಶಗಳಲ್ಲಿ ಕಾರ್ಮಿಕ ದಿನವನ್ನು (Labour Day ) ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ಸಂದರ್ಭವನ್ನು ‘ಮೇ ದಿನ’ ಅಥವಾ ಕಾರ್ಮಿಕರ ದಿನ ಎಂದೂ ಕರೆಯಲಾಗುತ್ತದೆ. ಈ ದಿನವನ್ನು ಕೆಲಸ ಮಾಡುವವರಿಗೆ ವಿಶ್ರಾಂತಿ ದಿನವಾಗಿ ಆಚರಿಸಲಾಗುತ್ತದೆ

ಸಮಾಜಕ್ಕೆ ಕಾರ್ಮಿಕರ ಅಗತ್ಯತೆ ದೊಡ್ಡದು. ಹೀಗಾಗಿ ಅವರ ಹಕ್ಕುಗಳ ಬಗ್ಗೆಯೂ ಗಮನ ಹರಿಸಬೇಕು. ಹೀಗಾಗಿ ಅವರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 1 ರಂದು ಅಂತರರಾಷ್ಟ್ರೀಯ ಕಾರ್ಮಿಕ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ಕಾರ್ಮಿಕರು ತಮ್ಮ ಸಾಧನೆಗಳು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ. ಕಾರ್ಮಿಕ ದಿನವನ್ನು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ವಿಶೇಷ ಸಂದರ್ಭದ ಇತಿಹಾಸ, ಮಹತ್ವ ಅರಿಯೋಣ.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಇತಿಹಾಸ

ಅಂತಾರರಾಷ್ಟ್ರೀಯ ಕಾರ್ಮಿಕ ದಿನದ ಇತಿಹಾಸವು 1889 ರಲ್ಲಿ ಯುರೋಪ್, ಪ್ಯಾರಿಸ್​​ನಲ್ಲಿ ನಡೆದ ಸೋಶಿಯಲಿಸ್ಟ್​ ಪಾರ್ಟಿಗಳ ಮೊದಲ ಸಭೆ (ಇಂಟರ್​ನ್ಯಾಷನಲ್​ ಕಾಂಗ್ರೆಸ್​​) ಮೇ 1 ರಂದು ನಡೆಯಿತು. ಅದನ್ನು ಕಾರ್ಮಿಕರಿಗೆ ಸಮರ್ಪಿಸಲು ಮತ್ತು ಅದನ್ನು ಅಂತರರಾಷ್ಟ್ರೀಯ ಕಾರ್ಮಿಕ ದಿನ ಎಂದು ಘೋಷಣೆ ಮಾಡಲಾಯಿತು. 1886 ರಲ್ಲಿ, ಅಮೆರಿಕದ ಕೆಲವು ಭಾಗಗಳಲ್ಲಿ ಕಾರ್ಮಿಕರು ಗರಿಷ್ಠ ಎಂಟು ಗಂಟೆಗಳ ಕೆಲಸದ ದಿನಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಮುಷ್ಕರದ ಮೂರನೇ ದಿನ ಚಿಕಾಗೋದಲ್ಲಿ ಹಿಂಸಾಚಾರ ಉಂಟಾಯಿತು. ಈ ಘಟನೆಯನ್ನು ‘ದಿ ಹೇಮಾರ್ಕೆಟ್ ಅಫೇರ್’ ಎಂದು ಕರೆಯಲಾಯಿತು. ಇದು ಅಂತರರಾಷ್ಟ್ರೀಯ ಕಾರ್ಮಿಕ ದಿನದ ಸ್ಥಾಪನೆಗೆ ಕಾರಣವಾಯಿತು.

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಮಹತ್ವ

ಕಾರ್ಮಿಕರ ಹೋರಾಟ ಮತ್ತು ಕಠಿಣ ಪರಿಶ್ರಮವನ್ನು ಗುರುತಿಸುವುದು, ಅವರ ಹಕ್ಕುಗಳ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಅವರನ್ನು ಶೋಷಣೆಗೆ ಒಳಗಾಗದಂತೆ ತಡೆಯುವುದು ಕಾರ್ಮಿಕ ದಿನಾಚರಣೆಯ ಉದ್ದೇಶ. ಈ ಸಂದರ್ಭದಲ್ಲಿ, ಕಾರ್ಮಿಕರು ನ್ಯಾಯಯುತ ವೇತನ ಮತ್ತು ಉತ್ತಮ ಕೆಲಸದ ಪರಿಸ್ಥಿತಿಗಳಿಗೆ ಒತ್ತಾಯಿಸಿ ಬೀದಿಗಳಲ್ಲಿ ಜಾಥಾ ನಡೆಸುತ್ತಾರೆ. ಮೇ ದಿನದಿಂದ ಕಾರ್ಮಿಕರು ಮತ್ತು ಕಾರ್ಮಿಕ ಚಳುವಳಿಯು ಮಾಡಿದ ಐತಿಹಾಸಿಕ ಹೋರಾಟಗಳು ಮತ್ತು ಲಾಭಗಳನ್ನು ಸ್ಮರಿಸಲಾಗುತ್ತದೆ.

ಇದನ್ನೂ ಓದಿ: Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

ಅಂತಾರಾಷ್ಟ್ರೀಯ ಕಾರ್ಮಿಕ ದಿನ 2024 ಧ್ಯೇಯ

ಪ್ರತಿ ವರ್ಷ, ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಆಚರಣೆಗಾಗಿ ಹೊಸ ಥೀಮ್ ಅನ್ನು ಘೋಷಿಸಲಾಗುತ್ತದೆ. ಬದಲಾಗುತ್ತಿರುವ ಹವಾಮಾನದಲ್ಲಿ ಕೆಲಸದಲ್ಲಿ ಸುರಕ್ಷತೆ ಮತ್ತು ಆರೋಗ್ಯವನ್ನು ಖಚಿತಪಡಿಸಿಕೊಳ್ಳುವುದು ಈ ವರ್ಷದ ಧ್ಯೇಯ.

ಕಾರ್ಮಿಕರ ದಿನದ ಬಗ್ಗೆ ವಾಸ್ತವಾಂಶಗಳು

ಮೊದಲ ಬಾರಿಗೆ ಯುಎಸ್ ಕಾರ್ಮಿಕ ದಿನವನ್ನು ಸೆಪ್ಟೆಂಬರ್ 5, 1882ರ ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ಕೇಂದ್ರ ಕಾರ್ಮಿಕ ಒಕ್ಕೂಟವು ಯೋಜಿಸಿತು. ಕಾರ್ಮಿಕ ಚಳುವಳಿಯನ್ನು ಗೌರವಿಸುವ ದಿನವನ್ನು ಆಯೋಜಿಸುವ ಕಲ್ಪನೆ ಕೆನಡಾದಲ್ಲಿ ಹುಟ್ಟಿತು. 1872 ರಲ್ಲಿ ಮುಷ್ಕರ ನಿರತ ಕಾರ್ಮಿಕರಿಗೆ ಬೆಂಬಲವನ್ನು ತೋರಿಸಲು ಅವರು ‘ಒಂಬತ್ತು ಗಂಟೆಗಳ ಚಳುವಳಿ’ ನಡೆಸಿದರು.

ಒರೆಗಾನ್ 1887 ರಲ್ಲಿ ಕಾರ್ಮಿಕ ದಿನವನ್ನು ಕಾನೂನುಬದ್ಧ ರಜಾದಿನವಾಗಿ ಆಚರಿಸಿದ ಮೊದಲ ದೇಶ . 19ನೇ ಶತಮಾನದಲ್ಲಿ ಅಮೆರಿಕನ್ನರು ವಾರದಲ್ಲಿ ಏಳು ದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ನ್ಯೂಯಾರ್ಕ್ ನಗರದಲ್ಲಿ ಮೊದಲ ಬಾರಿ ಮೆರವಣಿಗೆ ನಡೆಸಿದ ಜಾಗದಲ್ಲಿ ಇನ್ನೂ ಕಾರ್ಮಿಕ ದಿನದ ಮೆರವಣಿಗೆ ಮಾಡಲಾಗುತ್ತದೆ. 1882 ರ ಕಾರ್ಮಿಕ ಮೆರವಣಿಗೆಯ ಉತ್ತರದ 20 ಬ್ಲಾಕ್​​ಗಳಲ್ಲಿನಡೆಯುತ್ತದೆ.

Continue Reading

Lok Sabha Election 2024

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Parliament Flashback: 1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು.

VISTARANEWS.COM


on

Parliament Flashback
Koo

ಬೆಂಗಳೂರು: 1991ರ ಚುನಾವಣೆಯಲ್ಲಿ (Parliament Flashback) ಬಹುಮತ ಕೊರತೆ ಎದುರಿಸುತ್ತಿದ್ದ ಕಾಂಗ್ರೆಸ್‌, ಪಿ.ವಿ.ನರಸಿಂಹ ರಾವ್‌ ನೇತೃತ್ವದಲ್ಲಿ ಹಾಗೂ ಹೀಗೂ ಐದು ವರ್ಷ ಆಡಳಿತ ನಡೆಸಿತು. ಆದರೆ ರಾಜೀವ್‌ ಗಾಂಧಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಭ್ರಷ್ಟಾಚಾರ ಆರೋಪಗಳು ನರಸಿಂಹ ರಾವ್‌ ಸರ್ಕಾರದ ಅವಧಿಯಲ್ಲಿ ಇನ್ನೂ ಜೋರಾಗಿ ಕೇಳಿ ಬಂದವು. ನರಸಿಂಹ ರಾವ್‌ ಸಂಪುಟದ ಏಳು ಸಚಿವರು ನಾನಾ ಹಗರಣಗಳಲ್ಲಿ ಸಿಲುಕಿ ರಾಜೀನಾಮೆ ನೀಡಬೇಕಾಯಿತು. ಸ್ವತಃ ಪ್ರಧಾನಿ ನರಸಿಂಹ ರಾವ್‌ ವಿರುದ್ಧವೂ ಭ್ರಷ್ಟಾಚಾರ ಆರೋಪ ಕೇಳಿ ಬಂತು.
ಇದರ ಜತೆಗೆ ಕಾಶ್ಮೀರದಲ್ಲಿ ಭಯೋತ್ಪಾದನೆ ಭುಗಿಲೆದ್ದಿತು. ಕಾಂಗ್ರೆಸ್‌ ನ ತುಷ್ಟೀಕರಣ ರಾಜಕಾರಣದ ವಿರುದ್ಧ ಬಹುಸಂಖ್ಯಾತ ಹಿಂದೂಗಳು ದನಿ ಎತ್ತಲಾರಂಭಿಸಿದರು. ಇನ್ನೊಂದೆಡೆ ಕಾಂಗ್ರೆಸ್‌ ಪಕ್ಷದೊಳಗೆ ಬಂಡಾಯ ತೀವ್ರವಾಯಿತು. ಎನ್‌.ಡಿ.ತಿವಾರಿ, ಅರ್ಜುನ್‌ ಸಿಂಗ್‌ರಂಥ ಹಿರಿಯ ನಾಯಕರು ಕಾಂಗ್ರೆಸ್‌ನಿಂದ ಸಿಡಿದು ಆಲ್‌ ಇಂಡಿಯಾ ಇಂದಿರಾ ಕಾಂಗ್ರೆಸ್‌(ತಿವಾರಿ ಬಣ) ಸ್ಥಾಪಿಸಿದರು. ತಮಿಳುನಾಡಿನ ಜಿ.ಕೆ.ಮೂಪನಾರ್‌ ತಮಿಳ್‌ ಮಾನಿಲ ಕಾಂಗ್ರೆಸ್‌ ಕಟ್ಟಿದರು.

ದೊಡ್ಡ ಪಕ್ಷವಾದ ಬಿಜೆಪಿ

1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 545ರಲ್ಲಿ 161 ಸ್ಥಾನ ಗೆದ್ದ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಬಿಜೆಪಿಯ ಮಿತ್ರ ಪಕ್ಷ ಶಿವಸೇನೆ 15 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್‌ ಕೇವಲ 140 ಸೀಟುಗಳಿಗೆ ಸೀಮಿತವಾಯಿತು. ಕಾಂಗ್ರೆಸ್‌ ಬಂಡಾಯ ಪಕ್ಷವಾದ ತಮಿಳ್‌ ಮಾನಿಲ ಕಾಂಗ್ರೆಸ್‌ 20 ಮತ್ತು ಎನ್‌ ಡಿ ತಿವಾರಿ ಬಣ 4 ಸೀಟುಗಳನ್ನು ಗೆದ್ದುಕೊಂಡಿತು. ಜನತಾ ದಳ 46 ಸ್ಥಾನಗಳಲ್ಲಿ ಜಯ ಗಳಿಸಿತು. ಸಿಪಿಎಂ 32 ಸ್ಥಾನಗಳಲ್ಲಿ ಗೆದ್ದಿತು.
ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರಿಂದ ರಾಷ್ಟ್ರಪತಿಯವರು ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರು. ಅಟಲ್‌ ಬಿಹಾರಿ ವಾಜಪೇಯಿ ಅವರು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ- ಸುಷ್ಮಾ ಸ್ವರಾಜ್‌ ಮಧ್ಯೆ ಐತಿಹಾಸಿಕ ಕದನ!

1999ರ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿತ್ತು. ಇದಕ್ಕೆ ಕಾರಣ ಕಾಂಗ್ರೆಸ್‌ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಮತ್ತು ಬಿಜೆಪಿಯ ಫೈರ್‌ ಬ್ರಾಂಡ್‌ ನಾಯಕಿ, ದಿಲ್ಲಿಯ ಮುಖ್ಯಮಂತ್ರಿಯೂ ಆಗಿದ್ದ ಸುಷ್ಮಾ ಸ್ವರಾಜ್‌ ನಡುವಿನ ಮುಖಾಮುಖಿ.

ಆಗಷ್ಟೇ ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್‌ ಅಧ್ಯಕ್ಷ ಪಟ್ಟಕ್ಕೆ ಏರಿಸಲಾಗಿತ್ತು. ಅವರನ್ನು ಲೋಕಸಭೆಗೆ ಕಳುಹಿಸುವ ತೀರ್ಮಾನವಾಗಿತ್ತು. ತಮ್ಮ ಪತಿ ರಾಜೀವ್‌ ಗಾಂಧಿ ಪ್ರತಿನಿಧಿಸುತ್ತಿದ್ದ ಉತ್ತರ ಪ್ರದೇಶದ ಅಮೇಠಿ ಲೋಕಸಭೆ ಕ್ಷೇತ್ರ ಸೋನಿಯಾ ಅವರ ಮೊದಲ ಆಯ್ಕೆಯಾಗಿತ್ತು. ಅಲ್ಲಿ ಅವರು ನಾಮಪತ್ರ ಸಲ್ಲಿಸಿದರು. ಆದರೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ 1998ರ ಲೋಕಸಭೆ ಚುನಾವಣೆಯಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್‌ಗೆ ಸೋಲಾಗಿತ್ತು. ರಾಜೀವ್‌ ಗಾಂಧಿ ಅವರ ಪರಮಾಪ್ತರಾಗಿದ್ದ ಕ್ಯಾಪ್ಟನ್‌ ಸತೀಶ್‌ ಶರ್ಮಾ ಅವರನ್ನು ಬಿಜೆಪಿ ಅಭ್ಯರ್ಥಿ ಡಾ. ಸಂಜಯ್‌ ಸಿಂಗ್‌ ಸೋಲಿಸಿದ್ದರು. ಹಾಗಾಗಿ ಅಲ್ಲಿ ಸುಲಭವಾಗಿ ಗೆಲ್ಲುವ ವಿಶ್ವಾಸ ಸೋನಿಯಾಗಿರಲಿಲ್ಲ. ಹಾಗಾಗಿ ಸೋನಿಯಾ ಗಾಂಧಿ ಹಿತೈಷಿಗಳೆಲ್ಲ ಸೇರಿ ಲೆಕ್ಕಾಚಾರ ಹಾಕಿ ಆರಿಸಿದ ಮತ್ತೊಂದು ಕ್ಷೇತ್ರವೇ ಬಳ್ಳಾರಿ. ಏಕೆಂದರೆ 1952ರಿಂದ 1999ರವರೆಗೆ ನಡೆದ 12 ಚುನಾವಣೆಗಳಲ್ಲೂ ಕಾಂಗ್ರೆಸ್‌ ಬಳ್ಳಾರಿಯಲ್ಲಿ ಜಯ ಸಾಧಿಸಿತ್ತು.
ಹೈದರಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಬಳ್ಳಾರಿಗೆ ಬಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದರು.

ಸೋನಿಯಾ ನಾಮಪತ್ರದ ಬೆನ್ನಿಗೇ ಸುಷ್ಮಾ ಸ್ವರಾಜ್‌ ಅವರನ್ನು ಕಣಕ್ಕಿಳಿಸಿ ಕಾಂಗ್ರೆಸ್‌ಗೆ ಬಿಜೆಪಿ ನಡುಕ ಹುಟ್ಟಿಸಿತು. ಸೋನಿಯಾ ಗಾಂಧಿ ಮತ್ತು ಸುಷ್ಮಾ ಸ್ವರಾಜ್‌ ಅವರ ಚುನಾವಣಾ ಪ್ರಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿತು. ವಿದೇಶಿ ಸೊಸೆ ಮತ್ತು ಸ್ವದೇಶಿ ಮಗಳ ನಡುವಿನ ಸ್ಪರ್ಧೆ ಎಂದೇ ಮಾಧ್ಯಮಗಳು ಬಣ್ಣಿಸಿದವು. ಸುಷ್ಮಾ ಸ್ವರಾಜ್‌ ಅವರು ಕನ್ನಡದಲ್ಲೇ ಭಾಷಣ ಮಾಡಿ ಅಚ್ಚರಿ ಮೂಡಿಸಿದರು. ಕಾಂಗ್ರೆಸ್‌ ಮತ್ತು ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಇಲ್ಲಿಗೆ ಬಂದು ಪ್ರಚಾರ ಮಾಡಿದರು. ಆದರೆ ಅಂತಿಮವಾಗಿ ಸೋನಿಯಾ ಗಾಂಧಿ ಅವರು 56,100 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ಇದನ್ನೂ ಓದಿ: Parliament Flashback: ಇಂದಿರಾ ಗಾಂಧಿಯ ತುರ್ತು ಪರಿಸ್ಥಿತಿಯ ಎಫೆಕ್ಟ್‌; 1977ರಲ್ಲಿ ಧೂಳಿಪಟವಾಗಿದ್ದ ಕಾಂಗ್ರೆಸ್‌!

ಅತ್ತ ಅಮೇಠಿಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆದ್ದ ಸೋನಿಯಾ ಗಾಂಧಿ ಬಳ್ಳಾರಿ ಕ್ಷೇತ್ರ ತೊರೆದರು. ಸುಷ್ಮಾ ಸ್ವರಾಜ್‌ ಇಲ್ಲಿ ಸೋತರು. ಆದರೆ ಪ್ರತಿವರ್ಷ ವರ ಮಹಾಲಕ್ಷ್ಮಿ ದಿನ ಬಳ್ಳಾರಿಗೆ ಬಂದು ಪೂಜೆಯಲ್ಲಿ ಭಾಗಿಯಾಗುತ್ತಿದ್ದರು. ಅವರ ಸ್ಪರ್ಧೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿತು. ಮುಂದೆ 2004, 2009, 20014 ಮತ್ತು 20019ರ ಚುನಾವಣೆಯಲ್ಲಿ ಇಲ್ಲಿ ಬಿಜೆಪಿ ಜಯ ದಾಖಲಿಸಿದ್ದೇ ಇದಕ್ಕೆ ಸಾಕ್ಷಿ.

Continue Reading

ವೈರಲ್ ನ್ಯೂಸ್

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Viral News: ಸದ್ಯ ದೇಶಾದ್ಯಂತ ಉಷ್ಣಾಂಶ ವಿಪರೀತ ಮಟ್ಟಕ್ಕೆ ಏರಿಕೆಯಾಗಿದ್ದು, ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಬಾಧಿಸಿದೆ. ಈ ಮಧ್ಯೆ ಉತ್ತರ ಪ್ರದೇಶದ ಕನೌಜ್‌ನ ಶಾಲೆಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದರು. ಇದಕ್ಕೆ ಶಾಲೆಯ ಶಿಕ್ಷಕರು ಪರಿಹಾರ ಕಂಡುಕೊಂಡಿದ್ದಾರೆ. ಈ ಕ್ರಮದಿಂದಾಗಿ ಇದೀಗ ಶಾಲೆಯ ಹಾಜರಾತಿ ಹೆಚ್ಚಿದೆ. ಹಾಗಾದರೆ ಶಿಕ್ಷಕರು ಕಂಡುಕೊಂಡ ಉಪಾಯವೇನು ಎನ್ನುವ ವಿವರ ಇಲ್ಲಿದೆ.

VISTARANEWS.COM


on

Viral Video
Koo

ಲಕ್ನೋ: ʼʼಉಫ್‌! ಏನು ಸೆಕೆʼʼ ಸದ್ಯ ಎಲ್ಲೆಂದರಲ್ಲಿ ಈ ಮಾತು ಕಿವಿಗೆ ಬೀಳುತ್ತಿದೆ. ದೇಶಾದ್ಯಂತ ತಾಪಮಾನ ತೀವ್ರವಾಗಿ ಏರಿಕೆ ಕಂಡಿದೆ. ಈ ಎಲ್‌ ನಿನೊ ಪರಿಣಾಮದಿಂದ ದೇಶಾದ್ಯಂತ ಜನರು ಪರಿತಪಿಸುತ್ತಿದ್ದಾರೆ. ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿ ಮುಂದೆ ಸಾಗುತ್ತಿದೆ. ಜತೆಗೆ ಉಷ್ಣ ಅಲೆ (Heatwave)ಯು ಜನ-ಜೀವನವನ್ನು ಬಾಧಿಸಿದೆ. ಮನುಷ್ಯರು ಸೇರಿದಂತೆ ಸಕಲ ಜೀವ ರಾಶಿಯನ್ನು ಈ ಬೇಸಿಗೆ ಹೈರಾಣಾಗಿಸಿದೆ. ಮನೆಯಿಂದ ಹೊರಗೆ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ಮಧ್ಯಾಹ್ನ ಅಘೋಷಿತ ಬಂದ್‌ ಎನಿಸುವಂತೆ ರಸ್ತೆಗಳೆಲ್ಲ ಖಾಲಿ ಹೊಡೆಯುತ್ತವೆ. ಈ ಮಧ್ಯೆ ವಿದ್ಯಾರ್ಥಿಗಳನ್ನು ಉರಿ ಸೆಕೆಯಿಂದ ಪಾರು ಮಾಡಲು ಶಾಲೆಯೊಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಉತ್ತರ ಪ್ರದೇಶದ ಶಾಲೆಯ ಈ ವಿಡಿಯೊ ಸದ್ಯ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದೆ (Viral News).

ಶಿಕ್ಷಕರ ಐಡಿಯಾ ನೋಡಿ

ಉತ್ತರ ಪ್ರದೇಶದ ಕನೌಜ್‌ನ ಶಾಲೆಯ ತರಗತಿಯೊಂದನ್ನು ಈಜುಕೊಳವನ್ನಾಗಿ ಪರಿವರ್ತಿಸಿ ತೀವ್ರ ಶಾಖದಿಂದ ಮಕ್ಕಳನ್ನು ಪಾರು ಮಾಡಲಾಗಿದೆ. ಸುಮಾರು ಎರಡು ಅಡಿ ನೀರು ತುಂಬಿದ ಕ್ಲಾಸ್‌ ರೂಮ್‌ನಲ್ಲಿ ವಿದ್ಯಾರ್ಥಿಗಳು ಖುಷಿಯಿಂದ ಈಜಾಡುತ್ತಿರುವ, ಆಡುತ್ತಿರುವ ದೃಶ್ಯ ಇದೀಗ ನೆಟ್ಟಿಗರ ಗಮನ ಸೆಳೆದಿದೆ.

ಕಾರಣ ಏನು?

ದೇಶದ ಇತರ ಭಾಗಗಳಂತೆ ಉತ್ತರ ಪ್ರದೇಶದಲ್ಲಿಯೂ ವಿಪರೀತ ಉಷ್ಣತೆ ದಾಖಲಾಗುತ್ತಿದೆ. ಹೀಗಾಗಿ ಮಕ್ಕಳು ಶಾಲೆಗಳಿಗೆ ಬರಲೂ ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಶಾಲೆಯಲ್ಲಿ ಕಡಿಮೆ ಹಾಜರಾತಿ ಕಂಡು ಬಂದಿತ್ತು. ಇದನ್ನು ಗಮನಿಸಿದ ಕನ್ನೌಜ್ ಜಿಲ್ಲೆಯ ಮಹಾಸೌನಾಪುರ್‌ನ ಪ್ರಾಥಮಿಕ ಶಾಲೆಯ ಶಿಕ್ಷಕರು ಈ ಸಮಸ್ಯೆಯ ಪರಿಹಾರಕ್ಕೆ ಕಂಡುಕೊಂಡ ಮಾರ್ಗವೇ ಈ ಈಜುಕೊಳದ ಉಪಾಯ. ಸದ್ಯ ವಿದ್ಯಾರ್ಥಿಗಳು ಖುಷಿಯಿಂದಲೇ ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಪ್ರಾಂಶುಪಾಲರು ಹೇಳೋದೇನು?

ʼʼಕೆಲವು ದಿನಗಳಿಂದ ವಾತಾವರಣದ ಉಷ್ಣಾಂಶ 38ರಿಂದ 40 ಡಿಗ್ರಿ ಸೆಲ್ಶಿಯಸ್‌ಗೆ ತಲುಪುತ್ತಿದೆ. ಹೀಗಾಗಿ ನಿರಂತರವಾಗಿ ಮಕ್ಕಳು ಶಾಲೆಗೆ ಗೈರಾಗುತ್ತಿದ್ದರು. ಇದನ್ನು ತಪ್ಪಿಸಲು ಈ ಉಪಾಯ ಕೈಗೊಂಡಿದ್ದೇವೆʼʼ ಎಂದು ಶಾಲೆಯ ಪ್ರಾಂಶುಪಾಲ ವೈಭವ್‌ ರಾಜಪೂತ್‌ ತಿಳಿಸಿದ್ದಾರೆ. ಇದೀಗ ಕ್ಲಾಸ್‌ ರೂಮಿಗೆ ನೀರನ್ನು ತುಂಬಿಸಿರುವುದರಿಂದ ಮಕ್ಕಳು ಶಾಲೆಗೆ ಉತ್ಸಾಹದಿಂದ ಬರುತ್ತಿದ್ದಾರೆ. ಇದೀಗ ಮಕ್ಕಳು ನೀರಿನಲ್ಲಿ ಆಟವಾಡುತ್ತಾ ಕಲಿಯುತ್ತಿದ್ದಾರೆʼʼ ಎಂದು ಅವರು ವಿವರಿಸಿದ್ದಾರೆ. ಅವರ ಈ ಐಡಿಯಾಕ್ಕೆ ಗ್ರಾಮಸ್ಥರು ಭೇಷ್‌ ಎಂದಿದ್ದಾರೆ. ನೆಟ್ಟಿಗರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ

ಈ ಮಧ್ಯೆ ಹವಾಮಾನ ಇಲಾಖೆ ಹೆಚ್ಚುತ್ತಿರುವ ತಾಪಮಾನದ ಬಗ್ಗೆ ಎಚ್ಚರಿಕೆ ನೀಡಿದೆ. ಸೋಮವಾರ ದೇಶದ ಕೆಲವೆಡೆ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಮುಂದಿನ ಐದು ದಿನಗಳಲ್ಲಿ ಇದೇ ರೀತಿಯ ಬಿಸಿಯ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಮುಂತಾದೆಡೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ತೆಲಂಗಾಣ, ಕರ್ನಾಟಕ, ಕೇರಳ ಮತ್ತು ಸಿಕ್ಕಿಂಗೆ ಆರಂಜ್‌ ಅಲರ್ಟ್‌ ಸೂಚಿಸಲಾಗಿದೆ.

Continue Reading

ದೇಶ

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

Labour Day 2024: ದೇಶದಲ್ಲಿ ಬಡ ವರ್ಗದ ಕಾರ್ಮಿಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹರು ಇದರ ಪ್ರಯೋಜನವನ್ನು ಪಡೆಯಬಹುದು. ಸರ್ಕಾರ ಕಾರ್ಮಿಕರಿಗಾಗಿ ಒದಗಿಸಿರುವ ವಿವಿಧ ಯೋಜನೆಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Labour Day 2024
Koo

ವಿಶ್ವದಾದ್ಯಂತ ಮೇ 1ರಂದು ಕಾರ್ಮಿಕರ ದಿನವನ್ನು (Labour Day 2024) ಆಚರಿಸಲಾಗುತ್ತಿದೆ. ದುಡಿಯುವ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಶೋಷಣೆಯಿಂದ ಅವರನ್ನು ರಕ್ಷಿಸಲು ಪಣ ತೊಡುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಭಾರತದಲ್ಲೂ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ (Labour and Employment) ನೀಡಿರುವ ಮಾಹಿತಿ ಪ್ರಕಾರ ದೇಶದ ಕಾರ್ಮಿಕರಿಗೆ ಇರುವ ಯೋಜನೆಗಳು ಹೀಗಿವೆ.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಪಿಎಂಜೆಜೆಬಿವೈ ಯೋಜನೆ (PMJJBY)

ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (PMJJBY) ಜೀವನ ಮತ್ತು ಅಂಗವೈಕಲ್ಯದಿಂದ ಕುಟುಂಬಕ್ಕೆ ರಕ್ಷಣೆಯನ್ನು ಒದಗಿಸಲು ರೂಪಿಸಲಾಗಿದೆ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಗೆ 18 ರಿಂದ 50 ವರ್ಷಗಳ ಒಳಗಿನ ಜನರು ಪಡೆಯಬಹುದು. ಇದಕ್ಕಾಗಿ ಬ್ಯಾಂಕ್/ ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರಬೇಕು. ಖಾತೆಯಿಂದ ಹಣ ಸ್ವಯಂ ಡೆಬಿಟ್ ಆಗಲು ಅಥವಾ ಸಕ್ರಿಯಗೊಳಿಸಲು ಖಾತೆ ಹೊಂದಿರುವವರು ತಮ್ಮ ಒಪ್ಪಿಗೆಯನ್ನು ನೀಡಬೇಕು. ವಿಮಾದಾರನ ಮರಣವಾದರೆ ಆತನ ಕುಟುಂಬಕ್ಕೆ ಈ ಯೋಜನೆಯಡಿಯಲ್ಲಿ 2 ಲಕ್ಷ ರೂ. ವರೆಗೆ ವಿಮೆ ಪಾವತಿಸಲಾಗುವುದು. ಇದರ ವಾರ್ಷಿಕ ಪ್ರೀಮಿಯಂ 436 ರೂ. ಇದು ವಿಮಾದಾರರ ಖಾತೆಯಿಂದ ನೇರವಾಗಿ ಕಡಿತಗೊಳ್ಳುವುದು.


ಪಿ ಎಂ ಎಸ್ ಬಿ ವೈ ಯೋಜನೆ (PMSBY)

ಜೀವನ ಮತ್ತು ಅಂಗವೈಕಲ್ಯದಿಂದ ರಕ್ಷಣೆಯನ್ನು ಒದಗಿಸಲು ರೂಪಿಸಿರುವ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆ (PMSBY) ಸಹ 18 ರಿಂದ 70 ವರ್ಷಗಳ ವಯೋಮಾನದ ಜನರಿಗೆ ನೀಡಲಾಗುತ್ತದೆ. ಬ್ಯಾಂಕ್, ಪೋಸ್ಟ್ ಆಫೀಸ್ ಖಾತೆಯನ್ನು ಹೊಂದಿರುವವರು ಸ್ವಯಂ ಡೆಬಿಟ್‌ಗೆ ಸೇರಲು ಅಥವಾ ಸಕ್ರಿಯಗೊಳಿಸಲು ಒಪ್ಪಿಗೆಯನ್ನು ನೀಡಬೇಕು. ಈ ಯೋಜನೆಯಡಿಯಲ್ಲಿ ಅಪಾಯದ ಕವರೇಜ್ ವಿಮಾದಾರನ ಮರಣ ಅಥವಾ ಸಂಪೂರ್ಣ ಶಾಶ್ವತ ಅಂಗವೈಕಲ್ಯ ಸಂದರ್ಭದಲ್ಲಿ 2 ಲಕ್ಷ ರೂ. ಮತ್ತು ಭಾಗಶಃ ಶಾಶ್ವತ ಅಂಗವೈಕಲ್ಯಕ್ಕೆ 1 ಲಕ್ಷ ರೂ. ನೀಡಲಾಗುತ್ತದೆ. ಅಪಘಾತದ ಕಾರಣ ಪ್ರೀಮಿಯಂ ಮೊತ್ತ ವರ್ಷಕ್ಕೆ 20 ರೂ. ಇದಕ್ಕಾಗಿ ಖಾತೆದಾರರ ಬ್ಯಾಂಕ್, ಪೋಸ್ಟ್ ಆಫೀಸ್ ಖಾತೆಯಿಂದ ‘ಆಟೋ-ಡೆಬಿಟ್’ ಮೂಲಕ ಕಡಿತಗೊಳಿಸಬೇಕು.

ಎಬಿಪಿಎಂಜೆಎವೈ (ABPMJAY)

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆಯಡಿ (ABPMJAY) ವಾರ್ಷಿಕ ಆರೋಗ್ಯ ರಕ್ಷಣೆಗಾಗಿ 27 ರೂ. ಪಾವತಿಸಬೇಕು. ಇದರ ವಿಶೇಷತೆ ಎಂದರೆ 1949 ರ ಚಿಕಿತ್ಸಾ ವಿಧಾನಗಳಿಗೆ ಅನುಗುಣವಾಗಿ ದ್ವಿತೀಯ ಮತ್ತು ತೃತೀಯ ಆರೈಕೆ ಆಸ್ಪತ್ರೆಗೆ ಅರ್ಹ ಕುಟುಂಬಕ್ಕೆ 5 ಲಕ್ಷ ರೂ. ವರೆಗೆ ವಿಮೆ ನೀಡಲಾಗುತ್ತದೆ.

ಶ್ರಮ ಯೋಗಿ ಮಾನ್-ಧನ್ (PM-SYM)

ವೃದ್ಧಾಪ್ಯ ರಕ್ಷಣೆಯನ್ನು ಒದಗಿಸುವ ಸಲುವಾಗಿ ಭಾರತ ಸರ್ಕಾರವು 2019 ರಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿತು. ಇದು 60 ವರ್ಷ ವಯಸ್ಸನ್ನು ತಲುಪಿದ ಅನಂತರ 3000 ರೂ. ಮಾಸಿಕ ಪಿಂಚಣಿ ನೀಡುತ್ತದೆ. 18-40 ವರ್ಷ ವಯಸ್ಸಿನ ಕಾರ್ಮಿಕರ ಮಾಸಿಕ ಆದಾಯ ರೂ. 15,000 ಅಥವಾ ಅದಕ್ಕಿಂತ ಕಡಿಮೆ ಮತ್ತು ಇಪಿಎಫ್‌ಒ/ಇಎಸ್‌ಐಸಿ/ಎನ್‌ಪಿಎಸ್ (ಸರ್ಕಾರಿ ನಿಧಿ) ಸದಸ್ಯರಲ್ಲದವರು PM-SYM ಯೋಜನೆಗೆ ಸೇರಬಹುದು. ಈ ಯೋಜನೆಯಡಿಯಲ್ಲಿ ಫಲಾನುಭವಿಯು ಶೇ. 50 ಮಾಸಿಕ ಕೊಡುಗೆಯನ್ನು ಪಾವತಿಸಬೇಕು ಮತ್ತು ಸಮಾನ ಹೊಂದಾಣಿಕೆಯ ಕೊಡುಗೆಯನ್ನು ಕೇಂದ್ರ ಸರ್ಕಾರವು ಪಾವತಿಸುತ್ತದೆ. ಯೋಜನೆಯ ಅಡಿಯಲ್ಲಿ ಸರ್ಕಾರದ ಕೊಡುಗೆಗಾಗಿ ಹಣವನ್ನು ಎಲ್ಐಸಿ ನಿಧಿ ವ್ಯವಸ್ಥಾಪಕರಿಗೆ ಒದಗಿಸಲಾಗುತ್ತದೆ.


ಇವುಗಳು ಮಾತ್ರವಲ್ಲದೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಮೂಲಕ ಸಾರ್ವಜನಿಕ ವಿತರಣಾ ವ್ಯವಸ್ಥೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಗರೀಬ್ ಕಲ್ಯಾಣ್ ರೋಜ್ ಗಾರ್ ಅಭಿಯಾನ, ಮಹಾತ್ಮ ಗಾಂಧಿ ಬಂಕರ್ ಬಿಮಾ ಯೋಜನೆ, ದೀನ್ ದಯಾಳ್ ಅಂತ್ಯೋದಯ ಯೋಜನೆ, ಪಿಎಂಎಸ್‌ವನಿಧಿ, ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ ಇತ್ಯಾದಿಗಳು ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಅವರ ಅರ್ಹತೆಯ ಮಾನದಂಡಗಳಿಗೆ ಅನುಗುಣವಾಗಿ ಲಭ್ಯವಿದೆ.

ಸಾಮಾಜಿಕ ಭದ್ರತಾ ಯೋಜನೆಗಳು, ಕಲ್ಯಾಣ ಯೋಜನೆಗಳ ಬಗ್ಗೆ 16- 59 ವರ್ಷ ವಯಸ್ಸಿನ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ (NDUW) ಅನ್ನು ರಚಿಸುವ ಉದ್ದೇಶದಿಂದ ಇ-ಶ್ರಾಮ್ ಪೋರ್ಟಲ್ ಅನ್ನು 2021ರ ಆಗಸ್ಟ್, ನಲ್ಲಿ ಪ್ರಾರಂಭಿಸಲಾಗಿದೆ.

Continue Reading
Advertisement
labour Day
ಪ್ರಮುಖ ಸುದ್ದಿ33 mins ago

Labour Day : ಮೇ 1ರಂದೇ ಕಾರ್ಮಿಕ ದಿನ ಆಚರಿಸುವುದು ಯಾಕೆ? ರಜೆ ಕೊಡಲು ಶುರು ಮಾಡಿದ್ದು ಯಾವಾಗ?

Parliament Flashback
Lok Sabha Election 202438 mins ago

Parliament Flashback: 1996ರಲ್ಲಿ ಬಿಜೆಪಿ ಮೊದಲ ಬಾರಿ ಕೇಂದ್ರದಲ್ಲಿ ಸರ್ಕಾರ ನಡೆಸಿದ್ದು ಹೇಗೆ?

Viral Video
ವೈರಲ್ ನ್ಯೂಸ್55 mins ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ60 mins ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ1 hour ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ1 hour ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ2 hours ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Rescue of a boy who drowned at Malpe beach Two boys die after taking bath in Sindagi
ಕ್ರೈಂ2 hours ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ2 hours ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ17 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌