Nirmala Sitharaman : ಬಟ್ಟೆ ದುಬಾರಿ.. ತುಟಿ ಸುಡಲಿದೆ ಸಿಗರೇಟ್ Vistara News

ದೇಶ

Nirmala Sitharaman : ಬಟ್ಟೆ ದುಬಾರಿ.. ತುಟಿ ಸುಡಲಿದೆ ಸಿಗರೇಟ್ 

VISTARANEWS.COM


on

budget 2023 nirmala sitharaman about cigarette and clothes
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

ತಮಿಳುನಾಡಿನಲ್ಲಿ ಮೈಚಾಂಗ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಮಳೆ ಸಂಬಂಧಿತ ಅವಘಡದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಒಬ್ಬ ಗಾಯಗೊಂಡಿದ್ದು, ಇನ್ನೂ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Michaung Cyclone
Koo

ಚೆನ್ನೈ: ಮೈಚಾಂಗ್‌ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿ ಹೋಗಿದೆ. ಚಂಡಮಾರುತದಿಂದಾಗಿ ತಮಿಳುನಾಡಿನಲ್ಲಿ (Tamil Nadu) ಭಾರಿ ಮಳೆಯಾಗಿದ್ದು, ಚೆನ್ನೈ ಜಲಾವೃತಗೊಂಡಿದೆ. ಅದರಲ್ಲೂ, ಚನ್ನೈನ ಕಣತೂರ್‌ನಲ್ಲಿ ಭಾರಿ ಮಳೆಗೆ ಇತ್ತೀಚೆಗಷ್ಟೇ ಕಟ್ಟಿದ ಗೋಡೆ ಕುಸಿದು ಇಬ್ಬರು ಮೃತಪಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ಇಬ್ಬರೂ ಜಾರ್ಖಂಡ್‌ನವರು ಎಂದು ತಿಳಿದುಬಂದಿದೆ. ಮತ್ತೊಂದೆಡೆ, ಮೈಚಾಂಗ್‌ ಚಂಡಮಾರುತದ (Maichaung Cyclone) ಅಬ್ಬರ ಜೋರಾಗಿರುವುದರಿಂದ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ಮೈಚಾಂಗ್‌ ಚಂಡಮಾರುತ ರೂಪುಗೊಂಡಿರುವ ಕಾರಣ ತಮಿಳುನಾಡಿನ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿರುವ ಕಾರಣ ಎರಡೂ ರಾಜ್ಯಗಳಲ್ಲಿ ಸೋಮವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರ್ನಾಟಕದ ನೆರೆಯ ರಾಜ್ಯಗಳಾಗಿರುವ ಕಾರಣ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ.

ಕೆರೆಯಂತಾದ ಚೆನ್ನೈ ಏರ್‌ಪೋರ್ಟ್‌

ನಿರಂತರವಾಗಿ ಸುರಿದ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವು ಜಲಾವೃತಗೊಂಡಿದೆ. ವಿಮಾನ ನಿಲ್ದಾಣದ ರನ್‌ವೇ, ಪಾರ್ಕಿಂಗ್‌ ಜಾಗವು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮತ್ತೊಂದೆಡೆ, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಬೇಕಿದ್ದ 11 ವಿಮಾನಗಳನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ವಿಮಾನಗಳ ಹಾರಾಟ ಕಷ್ಟ ಸಾಧ್ಯ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

ವರ್ಕ್‌ ಫ್ರಂ ಹೋಮ್‌ಗೆ ಸೂಚನೆ

ತಮಿಳುನಾಡಿನಲ್ಲಿ ಗಂಟೆಗೆ 90-100 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಳೆಯೂ ಅಷ್ಟೇ ಜೋರಾಗಿದೆ. ಇದರಿಂದಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜತೆಗೆ ಚೆನ್ನೈ, ತಿರುವಳ್ಳೂರ್‌, ಕಾಂಚಿಪುರಂ ಹಾಗೂ ಚೆಂಗಲ್‌ಪಟ್ಟು ನಗರಗಳಲ್ಲಿ ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ (ವರ್ಕ್‌ ಫ್ರಂ ಹೋಮ್)‌ ಮಾಡುವಂತೆ ಸೂಚಿಸಿವೆ. ಭಾರಿ ಮಳೆಯಿಂದಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ಷೇರು ಮಾರುಕಟ್ಟೆಯಲ್ಲಿ ಹೊಸ ಲವಲವಿಕೆ ಕಾಣಿಸಿದೆ. ಬಿಜೆಪಿ ಗೆಲುವಿಗೂ, ಷೇರು ಮಾರುಕಟ್ಟೆಗೆ ಏನು ಸಂಬಂಧ ಎಂಬುದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

Narendra Modi And Share Market
Koo

ಮುಂಬೈ: ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ.

ಷೇರು ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಭಾರಿ ಲವಲವಿಕೆ ಕಂಡುಬಂದಿದೆ. ಬಿಎಸ್‌ಇ ಸೆನ್ಸೆಕ್ಸ್‌ 877.43 ಪಾಯಿಂಟ್‌ಗಳ ಏರಿಕೆಯೊಂದಿಗೆ (ಶೇ.1.3%) 68,358.52 ಅಂಕಗಳೊಂದಿಗೆ ಸಾರ್ವಕಾಲಿಕ ಸಾಧನೆ ಮಾಡಿತು. ಇನ್ನು ನಿಫ್ಟಿಯೂ 284.80 ಅಂಕಗಳ ಏರಿಕೆಯೊಂದಿಗೆ (ಶೇ.1.41) 20,552.70 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪಾಯಿಂಟ್‌ಗಳ ದಾಖಲೆ ಬರೆಯಿತು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಾಲರ್‌ ಎದುರು ರೂಪಾಯಿ ಮೌಲ್ಯವು 6 ಪೈಸೆ ಸುಧಾರಣೆಯಾಗಿದೆ. ಇನ್ನು ಷೇರು ಮಾರುಕಟ್ಟೆಯಲ್ಲ ವಹಿವಾಟು ಆರಂಭವಾದ ಕೆಲವೇ ನಿಮಿಷಗಳಲ್ಲಿ ಹಲವು ಕಂಪನಿಗಳ ಮಾರುಕಟ್ಟೆ ಬಂಡವಾಳವು 4.09 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬೆಳಗ್ಗೆಯ ಟ್ರೇಡಿಂಗ್‌ನಲ್ಲಿ ಅದಾನಿ ಗ್ರೂಪ್‌ ಕಂಪನಿಗಳು ಹೆಚ್ಚು ಲಾಭ ಗಳಿಸಿವೆ. ಹಾಗೆಯೇ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಎನ್‌ಟಿಪಿಸಿ ಹಾಗೂ ಲಾರ್ಸೆನ್‌ & ಟರ್ಬೊ ಕೂಡ ಹೆಚ್ಚಿನ ಲಾಭ ಗಳಿಸಿದವು.

ಷೇರು ಪೇಟೆಗೂ, ಚುನಾವಣೆಗೂ ಏನು ಸಂಬಂಧ?

ಚುನಾವಣೆ ಫಲಿತಾಂಶಕ್ಕೂ, ಷೇರುಪೇಟೆ ವಹಿವಾಟಿಗೂ ಸಂಬಂಧವಿದೆ ಎಂದು ಹೂಡಿಕೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. “ಷೇರುಪೇಟೆಯು ಸ್ಥಿರ ಹಾಗೂ ಸುಧಾರಣೆ ಪರವಾಗಿರುವ ರಾಜಕಾರಣವನ್ನು ಬಯಸುತ್ತದೆ. ಮಾರುಕಟ್ಟೆ ದೃಷ್ಟಿಯಿಂದ ಚುನಾವಣೆ ಫಲಿತಾಂಶವು ನಿರೀಕ್ಷೆಗಿಂತ ಹೆಚ್ಚಾಗಿದೆ. ಬಿಜೆಪಿ ಗೆಲುವು ಸಾಧಿಸಿದ ಕಾರಣ ಷೇರು ಮಾರುಕಟ್ಟೆಯಲ್ಲಿ 500 ಪಾಯಿಂಟ್‌ಗಳ ಏರಿಕೆಯಾಗಿದೆ. ಇದೇ ಬೆಳವಣಿಗೆ ಮುಂದುವರಿಯಲಿದೆ” ಎಂದು ಹೂಡಿಕೆ ತಜ್ಞ ವಿ.ಕೆ. ವಿಜಯ್‌ಕುಮಾರ್‌ ಅವರು ಪಿಟಿಐಗೆ ತಿಳಿಸಿದ್ದಾರೆ.

Rajastan BJP Win

ಇದನ್ನೂ ಓದಿ: PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

ಮಧ್ಯಪ್ರದೇಶದಲ್ಲಿ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 163, ಕಾಂಗ್ರೆಸ್‌ 66 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ರಾಜಸ್ಥಾನದ 199 ಕ್ಷೇತ್ರಗಳ ಪೈಕಿ ಬಿಜೆಪಿ 115, ಕಾಂಗ್ರೆಸ್‌ 69 ಹಾಗೂ 18 ಕ್ಷೇತ್ರಗಳು ಇತರೆ ಪಕ್ಷಗಳ ಪಾಲಾಗಿವೆ. ಛತ್ತೀಸ್‌ಗಢದಲ್ಲಿರುವ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 54, ಕಾಂಗ್ರೆಸ್‌ 35 ಹಾಗೂ ಒಬ್ಬ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮೂರೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Aircraft Crash: ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Aircraft Crash
Koo

ಹೈದರಾಬಾದ್:‌ ತೆಲಂಗಾಣದ ಮೇಡಕ್‌ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ತರಬೇತಿ ವಿಮಾನವೊಂದು ಪತನಗೊಂಡಿದ್ದು (Aircraft Crash), ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಟೂಪ್ರಾನ್‌ ಪಟ್ಟಣದ ರಾವೆಳ್ಳಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಸೋಮವಾರ (ಡಿಸೆಂಬರ್‌ 4) ವಿಮಾನ ಪತನಗೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರು ಪೈಲಟ್‌ಗಳು (Two Pilots Dead) ಮೃತಪಟ್ಟಿದ್ದಾರೆ ಎಂದು ವಾಯುಪಡೆ ಮಾಹಿತಿ ನೀಡಿದೆ.

ದುಂಡಿಗಲ್‌ ಏರ್‌ಫೋರ್ಸ್‌ ಅಕಾಡೆಮಿಯಿಂದ ಹಾರಾಟ ಆರಂಭಿಸಿದ ಪೈಲಟಸ್‌ ಪಿಸಿ 7 ಎಂಕೆ-II ವಿಮಾನವು ರಾವೆಳ್ಳಿ ಗ್ರಾಮದಲ್ಲಿ ಪತನಗೊಂಡಿದೆ. ವಿಮಾನದಲ್ಲಿದ್ದ ಒಬ್ಬ ಇನ್‌ಸ್ಟ್ರಕ್ಟರ್‌ ಪೈಲಟ್‌ ಹಾಗೂ ಒಬ್ಬ ಕೆಡೆಟ್‌ ಮೃತಪಟ್ಟಿದ್ದಾರೆ. “ದಿನ ನಿತ್ಯದ ಹಾರಾಟದ ಭಾಗವಾಗಿ ತರಬೇತಿ ವಿಮಾನವು ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಮೃತಪಟ್ಟಿದ್ದಾರೆ. ಯಾವುದೇ ಸಾರ್ವಜನಿಕರು ಮೃತಪಟ್ಟಿಲ್ಲ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟಾಗಿಲ್ಲ” ಎಂದು ವಾಯುಪಡೆ ಮಾಹಿತಿ ನೀಡಿದೆ.

ಗುಡ್ಡಗಾಡು ಪ್ರದೇಶದಲ್ಲಿ ವಾಯುಪಡೆ ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಇದಾದ ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ವಿಮಾನ ಪತನವಾಗಲು ನಿಖರ ಕಾರಣ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಯುಪಡೆಯು ತನಿಖೆಗೆ ಆದೇಶಿಸಿದೆ. ವಿಮಾನದಲ್ಲಿ ಇಬ್ಬರು ಪೈಲಟ್‌ಗಳಷ್ಟೇ ಇದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಮೆಜಾನ್​ ದಟ್ಟಾರಣ್ಯದಲ್ಲಿ ವಿಮಾನ ಪತನ; 4 ಮಕ್ಕಳ 40 ದಿನಗಳ ಹೋರಾಟ, ಹಸುಳೆಯೂ ಜೀವಂತ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಆಗಸ್ಟ್‌ನಲ್ಲಿ ಡಿಆರ್‌ಡಿಒ ವಿಮಾನವೊಂದು ಪತನಗೊಂಡಿತ್ತು. ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮಾನವರಹಿತ ಲಘುವಿಮಾನ ಪತನಗೊಂಡಿತ್ತು. ಪ್ರಾಯೋಗಿಕ ಹಾರಾಟದ ವೇಳೆ ತಪಸ್‌ 07A-14 ವಿಮಾನವು ಜಮೀನಿನಲ್ಲಿ ಪತನಗೊಂಡಿತ್ತು. ಗ್ರಾಮದ ಸಿದ್ದಪ್ಪ ಎಂಬುವರ ಜಮೀನಿನಲ್ಲಿ ಲಘು ವಿಮಾನ ಬಿದ್ದಿತ್ತು. 2019ರ ಸೆಪ್ಟೆಂಬರ್‌ನಲ್ಲಿ ಕೂಡ ಡಿಆರ್‌ಡಿಒದ ರುಸ್ತುಂ 2 ಎಂಬ ಮಾನವರಹಿತ ಲಘು ವಿಮಾನ ಕೂಡ ಚಿತ್ರದುರ್ಗ ಜಿಲ್ಲೆದಲ್ಲಿ ಪತನವಾಗಿತ್ತು.

Continue Reading

ದೇಶ

ಜನರಿಂದ ನಕಾರಾತ್ಮಕತೆಯ ತಿರಸ್ಕಾರ, ಸಂಸತ್ತಲ್ಲಿ ಹತಾಶೆ ಪ್ರದರ್ಶಿಸದಿರಿ; ಪ್ರತಿಪಕ್ಷಗಳಿಗೆ ಮೋದಿ ಮನವಿ

ಸಂಸತ್‌ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಇದೇ ವೇಳೆ ಅವರು ಪ್ರತಿಪಕ್ಷಗಳಿಗೆ ಹಲವು ಮನವಿ ಮಾಡಿದರು.

VISTARANEWS.COM


on

Narendra Modi
Koo

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸದಸ್ಯರು ನರೇಂದ್ರ ಮೋದಿ ಅವರ ಪರವಾಗಿ ಘೋಷಣೆ ಕೂಗಿದ್ದಾರೆ. ಇನ್ನು ಅಧಿವೇಶನ ಆರಂಭಕ್ಕೂ ಮುನ್ನ ನರೇಂದ್ರ ಮೋದಿ (Narendra Modi) ಅವರು ವಿಧಾನಸಭೆ ಚುನಾವಣೆ ಫಲಿತಾಂಶದ (Assembly Election Results 2023) ಕುರಿತು ಮಾತನಾಡಿದರು. “ದೇಶದ ಜನ ನಕಾರಾತ್ಮಕತೆಯನ್ನು ತಿರಸ್ಕಾರ ಮಾಡಿದ್ದಾರೆ. ಇದರ ಹತಾಶೆಯನ್ನು ಪ್ರತಿಪಕ್ಷಗಳು ಸಂಸತ್ತಿನಲ್ಲಿ ಪ್ರದರ್ಶಿಸಬಾರದು. ಸುಗಮವಾಗಿ ಕಲಾಪಗಳು ನಡೆಯಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

“ಸಂಸತ್ತಿನ ಎಲ್ಲ ಸದಸ್ಯರು ಪೂರ್ವ ತಯಾರಿ ಮಾಡಿಕೊಂಡು ಸಂಸತ್‌ ಕಲಾಪಗಳಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇನ್ನು ದೇಶದ ಜನ ಪ್ರತಿಪಕ್ಷಗಳ ನಕಾರಾತ್ಮಕತೆಯನ್ನು ತಿರಸ್ಕರಿಸಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬದಲಾವಣೆಯಾಗಲು ಪ್ರತಿಪಕ್ಷಗಳಿಗೆ ಸಕಾಲ. ಪ್ರತಿಪಕ್ಷಗಳು ಕಳೆದ ಒಂಬತ್ತು ವರ್ಷಗಳಿಂದ ಹರಡುತ್ತಿರುವ ನಕಾರಾತ್ಮಕತೆಯನ್ನು ಬಿಟ್ಟು, ಸಕಾರಾತ್ಮಕ ಮನೋಭಾವ ಪ್ರದರ್ಶಿಸಲು ಇದು ಉತ್ತಮ ಅವಕಾಶ. ನೀವು ಸಂಸತ್ತಿನಲ್ಲಿ ಸೋಲಿನ ಹತಾಶೆಯನ್ನು ಪ್ರದರ್ಶಿಸಬಾರದು” ಎಂದು ಕೋರಿದರು.

“ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷಗಳ ಪಾತ್ರವು ದೊಡ್ಡದಿದೆ. ಪ್ರತಿಪಕ್ಷಗಳು ಸಂಸತ್‌ ಅಧಿವೇಶನ ಯಶಸ್ವಿಯಾಗಲು ಸಹಕರಿಸಬೇಕು. ಜನರ ಕಲ್ಯಾಣಕ್ಕಾಗಿ ಪ್ರತಿಪಕ್ಷಗಳು ಹೊಂದಿರುವ ಮಹತ್ವವನ್ನು ಅರಿಯಬೇಕು. ಸುಗಮ ಕಲಾಪಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶದ ಅಭಿವೃದ್ಧಿಗೆ ಹಾದಿ ಮಾಡಿಕೊಡಬೇಕು. ಅಷ್ಟಕ್ಕೂ, ದೇಶವು ಅಭಿವೃದ್ಧಿಗೆ ಯಾವುದೇ ಅಡ್ಡಿಯನ್ನು ಬಯಸುವುದಿಲ್ಲ. ಪ್ರತಿಪಕ್ಷಗಳು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ಸಂಸತ್ತಲ್ಲಿ ಮೋದಿ ಪರ ಘೋಷಣೆ

ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಂಸತ್‌ನಲ್ಲಿ ಬಿಜೆಪಿ ಸದಸ್ಯರು ನರೇಂದ್ರ ಮೋದಿ ಪರವಾಗಿ ಘೋಷಣೆ ಕೂಗಿದರು. “ಮೂರನೇ ಬಾರಿಯೂ ಮೋದಿ ಸರ್ಕಾರ”, “ಪ್ರತಿ ಬಾರಿಯೂ ಮೋದಿ ಸರ್ಕಾರ” ಎಂಬ ಘೋಷಣೆಗಳನ್ನು ಕೂಗಿದರು. ಇನ್ನು ದೇಶದ ಸಮಸ್ಯೆಗಳನ್ನು ಇಟ್ಟುಕೊಂಡು ಆಡಳಿತ ಪಕ್ಷಕ್ಕೆ ಚಾಟಿ ಬೀಸಲು ಪ್ರತಿಪಕ್ಷಗಳು ಸಜ್ಜಾಗಿವೆ.

ಇದನ್ನೂ ಓದಿ: PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

ವಸಾಹತು ಕಾಲದ ಕ್ರಿಮಿನಲ್‌ ಕೋಡ್‌, ಜಸ್ಟಿಸ್‌ ಕೋಡ್‌ಗಳ ಬದಲಾವಣೆಗೆ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮೋದಿ ಸರ್ಕಾರ ಮುಂದಾಗಿರುವ ʼಅವಸಾಹತೀಕರಣ ಪ್ರಕ್ರಿಯೆʼಯಲ್ಲಿ ಕ್ರಿಮಿನಲ್ ಕೋಡ್‌ಗಳ ಬದಲಾವಣೆ ನಿರ್ಣಾಯಕ ಹೆಜ್ಜೆಯಾಗಿದೆ. ಭಾರತೀಯ ದಂಡ ಸಂಹಿತೆಯ (Indian Penal Code – IPC) ಬದಲಿಗೆ ಭಾರತೀಯ ನ್ಯಾಯ ಸಂಹಿತಾ (BNS) ವಿಧೇಯಕ- 2023 ಹಾಗೂ ಅಪರಾಧ ಪ್ರಕ್ರಿಯಾ ಸಂಹಿತೆ (Criminal procedure Code – CrPC) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ವಿಧೇಯಕ- 2023 ಮಂಡನೆಯಾಗಲಿವೆ. ಜತೆಗೆ ಭಾರತೀಯ ಸಾಕ್ಷಿ ಮಸೂದೆ (Bharatiya Sakshi Bill – BSB) ಕೂಡ ಮಂಡನೆಯಾಗಲಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Michaung Cyclone
ಕರ್ನಾಟಕ8 mins ago

ಮೈಚಾಂಗ್‌ ಚಂಡಮಾರುತ; ಭಾರಿ ಮಳೆಗೆ ತಮಿಳುನಾಡಿನಲ್ಲಿ ಇಬ್ಬರ ಸಾವು, ಬೆಂಗಳೂರಿಗೂ ಎಫೆಕ್ಟ್?

Rishab rashmika
South Cinema23 mins ago

Rishab Shetty: ಪರೋಕ್ಷವಾಗಿ ರಶ್ಮಿಕಾ, ಪ್ರಶಾಂತ್‌ ನೀಲ್‌ಗೆ ತಿರುಗೇಟು ಕೊಟ್ರಾ ರಿಷಬ್‌! ಸ್ಪಷ್ಟನೆ ಏನು?

18 bills likely to be introduced in Belagavi Winter Session
ಕರ್ನಾಟಕ30 mins ago

Belagavi Winter Session: ಬೆಳಗಾವಿ ಅಧಿವೇಶನದಲ್ಲಿ ಈ 18 ಬಿಲ್ ಮಂಡನೆ ಸಾಧ್ಯತೆ

Narendra Modi And Share Market
ದೇಶ51 mins ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ1 hour ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ1 hour ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ2 hours ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ2 hours ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್2 hours ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Murder Case Ballary
ಕ್ರೈಂ2 hours ago

Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ9 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌