ನಂಬಿಕೆ ಇರುವ ಅನ್ಯಧರ್ಮೀಯರ ದೇವಸ್ಥಾನ ಪ್ರವೇಶವನ್ನು ತಡೆಯಲು ಆಗದು ಎಂದ ಮದ್ರಾಸ್‌ ಹೈಕೋರ್ಟ್‌ - Vistara News

ಅಧ್ಯಾತ್ಮ

ನಂಬಿಕೆ ಇರುವ ಅನ್ಯಧರ್ಮೀಯರ ದೇವಸ್ಥಾನ ಪ್ರವೇಶವನ್ನು ತಡೆಯಲು ಆಗದು ಎಂದ ಮದ್ರಾಸ್‌ ಹೈಕೋರ್ಟ್‌

ದೇವಸ್ಥಾನದ ಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶ ನೀಡಬಹುದೇ ಎಂಬ ಚರ್ಚೆ ಜೋರಾಗಿದೆ. ಕೆಲವು ಕಡೆ ದೇವಸ್ಥಾನಕ್ಕೆ ಅನ್ಯ ಧರ್ಮೀಯರ ಪ್ರವೇಶ ನಿರ್ಬಂಧಿಸಲಾಗಿದೆ. ಇಂಥ ಸಂದರ್ಭದಲ್ಲಿ ಮದ್ರಾಸ್‌ ಹೈಕೋರ್ಟ್‌ ನೀಡಿರುವ ತೀರ್ಪು ಮಹತ್ವ ಪಡೆದಿದೆ.

VISTARANEWS.COM


on

Thiruvettar temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಒಬ್ಬ ಅನ್ಯಧರ್ಮೀಯ ವ್ಯಕ್ತಿಗೆ ನಿರ್ದಿಷ್ಟ ಹಿಂದೂ ದೇವರಲ್ಲಿ ನಂಬಿಕೆ ಇದ್ದು, ಆತ ದೇವಸ್ಥಾನಕ್ಕೆ ಬಂದಿದ್ದರೆ, ಆತನ ಪ್ರವೇಶವನ್ನು ತಡೆಯಲು ಸಾಧ್ಯವಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಇತ್ತೀಚೆಗೆ ಹೇಳಿದೆ.

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ತಿರುವಟ್ಟಾರ್‌ನಲ್ಲಿರುವ ಅರುಲ್ಮಿಘು ಆದಿಕೇಶವ ಪೆರುಮಾಳ್ ತಿರುಕೋವಿಲ್‌ನ ಕುಂಭಾಭಿಷೇಕ ಉತ್ಸವದಲ್ಲಿ ಹಿಂದೂಯೇತರರು ಭಾಗವಹಿಸಲು ಅನುಮತಿ ನೀಡದಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಿ ಎನ್ ಪ್ರಕಾಶ್ ಮತ್ತು ಆರ್ ಹೇಮಲತಾ ಅವರಿದ್ದ ವಿಭಾಗೀಯ ಪೀಠ ಈ ಅಭಿಪ್ರಾಯ ಹೇಳಿದೆ. ಕ್ರೈಸ್ತ ಧರ್ಮಕ್ಕೆ ಸೇರಿದವರು ಎನ್ನಲಾದ ಸಚಿವರೊಬ್ಬರ ಹೆಸರನ್ನು ಕುಂಭಾಭಿಷೇಕ ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಸಿ ಸೋಮನ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು.

ಕೋರ್ಟ್‌ ಹೇಳಿದ್ದೇನು?
ಒಂದು ದೇವಸ್ಥಾನದಲ್ಲಿ ಕುಂಭಾಭಿಷೇಕದಂಥ ದೊಡ್ಡ ಕಾರ್ಯಕ್ರಮ ನಡೆಯುವಾಗ ಲಕ್ಷಾಂತರ ಮಂದಿ ಆಗಮಿಸುತ್ತಾರೆ. ಅವರಲ್ಲಿ ಪ್ರತಿಯೊಬ್ಬರ ಧಾರ್ಮಿಕ ಅಸ್ಮಿತೆಯನ್ನು ಪರಿಶೀಲಿಸಿ ಪ್ರವೇಶ ನೀಡುವುದು ದೇವಳದ ಅಧಿಕಾರಿಗಳಿಗೆ ಸಾಧ್ಯವೇ ಇಲ್ಲ. ಅದಕ್ಕಿಂತಲೂ ಹೆಚ್ಚಾಗಿ ಒಬ್ಬ ಅನ್ಯ ಧರ್ಮೀಯ ವ್ಯಕ್ತಿಗೆ ಯಾವುದಾದರೂ ಹಿಂದೂ ದೇವರ ಮೇಲೆ ನಂಬಿಕೆ ಇದ್ದು, ಅವನು ದೇವಸ್ಥಾನಕ್ಕೆ ಬರುತ್ತಾನೆ ಎಂದಾದರೆ ಅವನನ್ನು ತಡೆಯುವುದು, ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸುವುದು ಸಾಧ್ಯವಿಲ್ಲ.

ಕ್ರಿಶ್ಚಿಯನ್‌ ಧರ್ಮದಲ್ಲಿ ಹುಟ್ಟಿದ ಕೆ.ಜೆ. ಯೇಸುದಾಸ್‌ ಅವರು ಹಿಂದೂ ದೇವರ ಬಗ್ಗೆ ಹಾಡಿದ ಭಕ್ತಿಗೀತೆಗಳನ್ನು ಯಾವುದೇ ತಕರಾರು, ಬೇಸರವಿಲ್ಲದೆ ದೇವಸ್ಥಾನಗಳಲ್ಲೂ ಹಾಕಲಾಗುತ್ತದೆ. ನಿಜವೆಂದರೆ, ನಾಗೋರ್‌ ದರ್ಗಾ, ವೆಲಕಣಿ ಚರ್ಚ್‌ಗಳಿಗೆ ಹೋಗಿ ಹಿಂದೂಗಳೂ ಪೂಜೆ ಮಾಡುತ್ತಾರೆ ಎಂದು ನ್ಯಾಯಾಲಯ ನೆನಪು ಮಾಡಿಕೊಂಡಿದೆ.

“ನಮ್ಮ ಅಭಿಪ್ರಾಯದಲ್ಲಿ, ದೇವಾಲಯದ ಕುಂಭಾಭಿಷೇಕದಂತಹ ಸಾರ್ವಜನಿಕ ಉತ್ಸವ ನಡೆದಾಗ, ದೇವಾಲಯದ ಪ್ರವೇಶ ಅನುಮತಿಸುವ ಉದ್ದೇಶದಿಂದ ಪ್ರತಿಯೊಬ್ಬ ಭಕ್ತನ ಧಾರ್ಮಿಕ ಗುರುತನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಅಸಾಧ್ಯವಾಗುತ್ತದೆ. ಮತ್ತೊಂದು ಧರ್ಮಕ್ಕೆ ಸೇರಿದ ವ್ಯಕ್ತಿ, ನಿರ್ದಿಷ್ಟ ಹಿಂದೂ ದೇವತೆಯಲ್ಲಿ ನಂಬಿಕೆಯನ್ನು ಹೊಂದಿದ್ದರೆ, ಅದನ್ನು ತಡೆಯಲು ಸಾಧ್ಯವಿಲ್ಲ ಅಥವಾ ದೇವಾಲಯದ ಪ್ರವೇಶವನ್ನು ನಿಷೇಧಿಸಲಾಗದು” ಎಂದು ತಿಳಿಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಯಾಕೆ ಈ ತೀರ್ಪು ಪ್ರಮುಖ?
– ಮದ್ರಾಸ್‌ ಹೈಕೋರ್ಟ್‌ನ ಈ ತೀರ್ಪು ಇತ್ತೀಚೆಗೆ ನಡೆಯುತ್ತಿರುವ ಕೆಲವು ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಹತ್ವವನ್ನು ಪಡೆದಿದೆ. ಹಿಂದೂ ದೇವಸ್ಥಾನಗಳ ಜಾತ್ರೆ ಸಂದರ್ಭದಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ವಾದ ಜೋರಾಗಿ ನಡೆಯುತ್ತಿದೆ.

– -ಕೇರಳದ ಹಲವು ದೇವಾಲಯಗಳಲ್ಲಿ ಹಿಂದೂಯೇತರರಿಗೆ ಪ್ರವೇಶ ನಿರಾಕರಿಸಲಾಗುತ್ತದೆ ಮತ್ತು ಹಿಂದೂಗಳಲ್ಲದವರಿಗೆ ಪ್ರವೇಶ ಇಲ್ಲ ಎಂದು ಹೊರ ಭಾಗದಲ್ಲೇ ನಮೂದು ಮಾಡಲಾಗಿರುತ್ತದೆ.

ಇದನ್ನೂ ಓದಿ| ಮಾರಮ್ಮನ ಜಾತ್ರೆಗೆ ಮುಸ್ಲಿಮರ ಪಾನೀಯ: ಚಂದ್ರಾ ಲೇಔಟ್‌ನಲ್ಲಿ ಚಂದದ ಸೌಹಾರ್ದತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮ ದಿನದ (Basavanna jayanti) ಈ ಶುಭ ಸಂದರ್ಭದಲ್ಲಿ ಅವರ ಕೆಲವು ವಚನಗಳ ಸಾಲುಗಳ ಸಾರವನ್ನು ತಿಳಿದುಕೊಳ್ಳುವ, ಈ ಮೂಲಕ ಎಲ್ಲರ ಬದುಕಿನಲ್ಲೂ ಅಳವಡಿಸಿಕೊಳ್ಳಲು ಪ್ರೇರಣೆಯಾಗಲಿ ಎಂಬ ಉದ್ದೇಶ ಇಲ್ಲಿದೆ. ಬಸವಣ್ಣ ಅವರ ಹತ್ತು ವಚನಗಳು ಮತ್ತು ಅವುಗಳ ಸಾರ ಇಲ್ಲಿದೆ.

VISTARANEWS.COM


on

By

Basavanna jayanti
Koo

12ನೇ ಶತಮಾನದಲ್ಲಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಸಮಾಜ ಸುಧಾರಕರೂ ಆಗಿದ್ದ ಬಸವಣ್ಣ (Basavanna jayanti) ಸಾವಿರಾರು ವಚನಗಳ (vachana) ಸೃಷ್ಟಿಕಾರರು. ಶಿವ ಕೇಂದ್ರೀಕೃತ ಭಕ್ತಿ ಚಳವಳಿ ನಡೆಸಿದ ಇವರು ತಮ್ಮ ವಚನಗಳ ಮೂಲಕ ಸಾಮಾಜಿಕ ಅರಿವನ್ನು ಮೂಡಿಸಿದರು.

1130ರಲ್ಲಿ ಕರ್ನಾಟಕದ ಈಗಿನ ಬಿಜಾಪುರ (bijapur) ಜಿಲ್ಲೆಯ ಬಸವನ ಬಾಗೇವಾಡಿ (basavana bagewadi) ಗ್ರಾಮದಲ್ಲಿ ಮಾದರಸ ಮತ್ತು ಮಾದಲಾಂಬಿಕೆ ದಂಪತಿಯ ಮಗನಾಗಿ ಜನಿಸಿದ ಬಸವಣ್ಣ ಶಿವನ ಭಕ್ತಿ ಮತ್ತು ಸಾಮಾಜಿಕ ಸಮಾನತೆಗೆ ಒತ್ತು ನೀಡಿರುವ ವಿಶಿಷ್ಟ ತತ್ತ್ವವನ್ನು ಸಾರಿದರು. ಇವರ ಹತ್ತು ಪ್ರಮುಖ ವಚನಗಳ ಸಾಲು ಮತ್ತು ಅದರ ಸಾರ ಇಲ್ಲಿದೆ.

ವಚನ 1: ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ

ತನಗಾದ ಆಗೇನು ಅವರಿಗಾದ ಚೇಗೆಯೇನು

ತನುವಿನ ಕೋಪ ತನ್ನ ಹಿರಿತನದ ಕೇಡು

ಮನದ ಕೋಪ ತನ್ನ ಅರಿವಿನ ಕೇಡು,

ಮನೆಯೊಳಗಿನ ಕಿಚ್ಚು ಮನೆಯ ಸುಟ್ಟಲ್ಲದೆ

ನೆರೆಮನೆಯ ಸುಡದು ಕೂಡಲ ಸಂಗಮ ದೇವಾ.
ಸಾರ: ನಮ್ಮೊಂದಿಗೆ ಯಾರಾದರೂ ಮುನಿಸಿಕೊಂಡರೆ ನಾವೇಕೆ ಅವರೊಂದಿಗೆ ಮುನಿಸಿಕೊಳ್ಳಬೇಕು? ಇದರಿಂದ ಅವರಿಗೂ, ನಮಗೂ ಯಾವುದೇ ಲಾಭವಿಲ್ಲ. ಮನದ ಕೋಪ ನಮ್ಮ ವಿವೇಕವನ್ನು ಹಾಳು ಮಾಡುವುದು ಎಂಬುದು ಇದರ ಸಾರ.

ವಚನ 2. ಹಬ್ಬಕ್ಕೆ ತಂದ ಹರಕೆಯ ಕುರಿ

ತೋರಣಕ್ಕೆ ತಂದ ತಳಿರ ಮೇಯಿತ್ತು

ಕುಂಡ ಹರೆಂಬುದ ನರಿಯದ ಬೆಂದ ಒಡಲ

ಹೊರೆವುತ್ತಲದೆ ಅದಂದೆ ಹುಟ್ಟಿತ್ತು ಅದಂದೆ ಹೊಂದಿತ್ತು

ಕೊಂದವರುಳಿವರೇ ಕೊಡಲಸಂಗಮ ದೇವಾ.
ಸಾರ: ತಾನು ಶಾಶ್ವತ ಎಂಬ ಭ್ರಮೆಯಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅಮಾಯಕ ಜೀವವನ್ನು ಬಲಿ ಕೊಡುತ್ತಾನೆ. ಅದನ್ನು ಖಂಡಿಸಿರುವ ಅವರು ಹಿಂಸೆಯನ್ನು ವಿರೋಧಿಸಿ ಎಲ್ಲರೂ ಸಜ್ಜನರಾಗಬೇಕು.

ವಚನ 3: ಸಾರ ಸಜ್ಜನರ ಸಂಗ ಲೇಸು ಕಣಯ್ಯಾ

ದೂರ ದುರ್ಜನರ ಸಂಗವದು ಭಂಗವಯ್ಯಾ

ಸಂಘವೆರಡುಂಟು ಒಂದು ಹಿಡಿ ಒಂದು ಬಿಡು

ಮಂಗಳಮೂರ್ತಿ ನಮ್ಮ ಕೂಡಲ ಸಂಗನ ಶರಣರ
ಸಾರ: ಒಳ್ಳೆಯವರ ಸಹವಾಸ ಮಾಡಿದರೆ ಒಳ್ಳೆಯದು, ಕೆಟ್ಟವರ ಸಹವಾಸದಿಂದ ಅವಮಾನ ಸಿಗುತ್ತದೆ. ಈ ಎರಡರಲ್ಲಿ ನಮಗೇನು ಬೇಕು ಎಂಬುದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು.

ವಚನ 4. ಆಚಾರವರಿಯಿರಿ, ವಿಚಾರವರಿಯಿರಿ

ಜಂಗಮ ಸ್ಥಳ, ಲಿಂಗ ಕಾಣಿರಯ್ಯಾ,

ಜಾತಿ, ಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ,

ನುಡಿದಂತೆ ನಡೆಯದಿದ್ದರೆ ಕೂಡಲ ಸಂಗಮ ಮೆಚ್ಚ ಕಾಣಿರಯ್ಯಾ
ಸಾರ: ಒಳ್ಳೆಯ ಸಂಪ್ರದಾಯವನ್ನು ಅರಿತು ವಿವೇಕವನ್ನು ತಿಳಿಯಬೇಕು. ದೇವರಿಗೆ ಜಾತಿ ಭೇದ ಮೈಲಿಗೆಯ ಭೇದವಿಲ್ಲ. ಜನನ ಮರಣವಿಲ್ಲದ ದೇವರಿಗೆ ಕುಲವಿಲ್ಲ. ಮಾತನಾಡಿದಂತೆ ನಡೆಯದಿದ್ದರೆ ಅವನು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ .

ವಚನ 5: ಆಯುಷ್ಯ ತೀರಿದಲ್ಲದೆ ಮರಣವಿಲ್ಲ

ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ

ಅಂಜಲದೇಕೋ ಲೋಕ ವಿಗರ್ಭಣೆಗೆ

ಅಂಜಲದೇಕೋ ಕೊಡಲ ಸಂಗಮ ನಿಮ್ಮಾಳಾಗಿ
ಸಾರ: ಆಯುಷ್ಯ ಮುಗಿಯದೆ ಮರಣ ಬರುವುದಿಲ್ಲ, ಮಾತು ತಪ್ಪಿದರೆ ಮಾತ್ರ ದಾರಿದ್ರ್ಯ ಉಂಟಾಗುತ್ತದೆ. ದೇವರ ಸೇವಕನಾಗಿ ಲೋಕದ ಭಯೋತ್ಪಾದಕತೆಗೆ ನಾನೇಕೆ ಇಳಿಯಲಿ ಎಂಬ ಅರ್ಥವಿದೆ.


ವಚನ 6: ನೆಲಗೊಂದೆ ಹೊಲಗೇರಿ ಶಿವಾಲಯಕ್ಕೆ,

ಜಲವೊಂದೆ ಶೌಚಾಚಮನಕ್ಕೆ

ಕುಲವೊಂದೆ ತನ್ನತಾನರಿದವಂಗೆ

ಫಲವೊಂದೆ ಷಡುದರುಶನ ಮುಕ್ತಿಗೆ

ನಿಲವೊಂದೆ ನಿಮ್ಮನರಿದವಂಗೆ ಕೂಡಲಸಂಗಮ ದೇವಾ
ಸಾರ: ದೇವಸ್ಥಾನ ಮತ್ತು ಹೊಲಗೇರಿಯವರಿಗೆ ಭೂಮಿ ಒಂದೇ ಆಗಿದೆ. ಸ್ನಾನ ಮತ್ತು ತಪಸ್ಸು ಮಾಡಲು ನೀರು ಕೂಡ ಒಂದೇ ಆಗಿದೆ. ವಿಮೋಚನೆಯು ಎಲ್ಲಾ ಆಲೋಚನೆಗಳ ಅಂತಿಮ ಗುರಿಯಾಗಿದೆ. ಪ್ರಭುವನ್ನು ತಿಳಿದವನಿಗೆ ವಾಸಸ್ಥಾನ ಎಲ್ಲಿದ್ದರೂ ಒಂದೇ ಆಗಿರುತ್ತದೆ.

ವಚನ 7: ನುಡಿದರೆ ಮುತ್ತಿನ ಹಾರದಂತಿರಬೇಕು

ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು

ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು

ನುಡಿದರೆ ಲಿಂಗ ಮೆಚ್ಚಿ ಹೌದೌದು ಎನಬೇಕು

ನುಡಿಯೊಳಗಾಗಿ ನಡೆಯದಿದ್ದರೆ ಕೂಡಲ ಸಂಗಮ ಮನೆಂತೊಲಿವನಯ್ಯಾ ?
ಸಾರ: ನಾವಾಡುವ ಮಾತು ಸರಳ ಮತ್ತು ಸುಲಲಿತವಾಗಿರಬೇಕು. ಆಡಿದ ಮಾತಿನಂತೆ ನಡೆಯದಿದ್ದರೆ ದೇವರು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ.

ವಚನ 8: ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ

ಮಾರಿ ಎಂಬುದೇನು ಕಂಗಳು ತಪ್ಪಿ ನೋಡಿದರೆ

ಮಾರಿ ನಾಲಿಗೆ ತಪ್ಪಿ ನುಡಿದರೆ

ಮಾರಿ ನಮ್ಮ ಕೂಡಲ ಸಂಗಮ ದೇವರ ನೆನಹ

ಮರೆದಡೆ ಮಾರಿ ಕಾಣಿರೋ
ಸಾರ: ಮೃತ್ಯು, ರುದ್ರ ದೇವರೆಂಬುವವರು ಬೇರೆ ಯಾರೂ ಇಲ್ಲ. ಕೆಟ್ಟ ದೃಶ್ಯ, ಮಾತು, ದುರಾಚಾರ ಮಾಡಿದರೆ ಇದ್ದರೂ ಸತ್ತಂತೆಯೇ ಸರಿ.

ವಚನ 9: ಬೇವಿನ ಬೀಜವ ಬಿತ್ತಿ ಬೆಲ್ಲದ ಕಟ್ಟಿಯ ಕಟ್ಟಿ

ಆಕಳ ಹಾಲನೆರೆದು ಜೇನು ತುಪ್ಪವ ತೋಯ್ದೆಡೆ

ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ

ಶಿವಭಕ್ತರಲ್ಲದವರ ಕೊಡೆ ನುಡಿಯಲಾಗದು

ಕೂಡಲ ಸಂಗಮ ದೇವಾ
ಸಾರ: ಬೇವಿನ ಬೀಜವನ್ನು ಹಾಕಿ ಅದರಲ್ಲಿ ಸಿಹಿಯಾದ ಹಣ್ಣು ಸಿಗಬೇಕು ಎಂದು ಬಯಸಲು ಸಾಧ್ಯವಿದೆಯೇ ಎಂಬುದನ್ನು ಬಸವಣ್ಣನವರು ಇಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

ವಚನ 10: ವೇದವ ಓದಿದರೇನು ಶಾಸ್ತ್ರವ ಕೇಳಿದಡೇನಯ್ಯಾ

ಜಪವ ಮಾಡಿದಡೇನು ತಪವ ಮಾಡಿದಡೇನಯ್ಯಾ

ಏನು ಮಾಡಿದಡೇನು ನಮ್ಮ ಕೂಡಲ ಸಂಗಯ್ಯನ ಮನ ಮುಟ್ಟದನ್ನಕ್ಕ
ಸಾರ: ವೇದ ಓದಿ, ಶಾಸ್ತ್ರಗಳನ್ನು ಮಾಡಿ ದೇವರನ್ನೇ ಅದು ಮುಟ್ಟದಿದ್ದರೆ ಎಲ್ಲವೂ ವ್ಯರ್ಥ ಎಂಬುದನ್ನು ಹೇಳಿರುವ ಬಸವಣ್ಣ ನಮ್ಮ ಭಕ್ತಿ ಹೇಗಿರಬೇಕು ಎನ್ನುವುದನ್ನು ಹೇಳುತ್ತಾರೆ.

Continue Reading

ಲೈಫ್‌ಸ್ಟೈಲ್

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

Vastu Tips: ಮನೆಯ ಹೊರಗಿರುವ ಉದ್ಯಾನವೂ ನಮ್ಮ ಮನಸ್ಸಿನ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯ ಉದ್ಯಾನವನವನ್ನು ವಾಸ್ತು ಶಾಸ್ತ್ರದ ಪ್ರಕಾರ ಯೋಜಿಸುವುದು ಮತ್ತು ವಿನ್ಯಾಸಗೊಳಿಸುವುದು ಉತ್ತಮ. ಇದರಿಂದ ಆರೋಗ್ಯ ಮತ್ತು ಸಮೃದ್ಧಿ ಖಂಡಿತ ಸಿಗುವುದು.

VISTARANEWS.COM


on

By

Vastu Tips
Koo

ಮನೆಯ (home) ಒಳಾಂಗಣ (Indoor), ಹೊರಾಂಗಣದ (outdoor) ಪ್ರತಿಯೊಂದು ವಸ್ತುವೂ ನಮ್ಮ ಮನೆ, ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೇ ಮನೆಯಲ್ಲಿ ವಾಸ್ತು (Vastu Tips) ಪಾಲಿಸಬೇಕು ಎನ್ನುತ್ತಾರೆ ಹಿರಿಯರು. ವಾಸ್ತು ಪಾಲನೆ ಮಾಡುವುದರಿಂದ ಧನಾತ್ಮಕ ಪ್ರಭಾವವನ್ನು (Positive influence) ಮನೆಯ ಸುತ್ತಮುತ್ತ ಹೆಚ್ಚಿಸಿಕೊಳ್ಳಬಹುದು.

ಮನೆಯ ಹೊರಗಿರುವ ಉದ್ಯಾನವೂ ನಮ್ಮ ಮನಸ್ಸಿನ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಹೀಗಾಗಿ ಮನೆಯ ಉದ್ಯಾನವನವನ್ನು ವಾಸ್ತು ಶಾಸ್ತ್ರದ ಪ್ರಕಾರ ಯೋಜಿಸುವುದು ಮತ್ತು ವಿನ್ಯಾಸಗೊಳಿಸುವುದು ಉತ್ತಮ. ಇದರಿಂದ ಆರೋಗ್ಯ ಮತ್ತು ಸಮೃದ್ಧಿ ಖಂಡಿತ ಸಿಗುವುದು.

ಹೊರಾಂಗಣ ಉದ್ಯಾನವು ನಮ್ಮನ್ನು ಪ್ರಕೃತಿಗೆ ಹತ್ತಿರವಾಗಲು ಅನುವು ಮಾಡಿಕೊಡುತ್ತದೆ. ಸಸ್ಯವರ್ಗದ ಸಮೃದ್ಧಿಯಿಂದ ಪ್ರಭಾವಿತವಾಗಿರುವ ಪ್ರಶಾಂತತೆ ಮತ್ತು ಶಾಂತತೆಯನ್ನು ಆನಂದಿಸಲು ಇದು ಸಹಾಯ ಮಾಡುತ್ತದೆ.

ಹೆಚ್ಚಿನವರು ಮನಸ್ಸಿನ ಉಲ್ಲಾಸಕ್ಕಾಗಿ ಉದ್ಯಾನಗಳನ್ನು ಬೆಳೆಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ ಉದ್ಯಾನವು ನೈಸರ್ಗಿಕ ಸೌಂದರ್ಯ ಮತ್ತು ಅದರ ಶಕ್ತಿಯುತ ಗುಣಗಳನ್ನು ನಮಗೆ ಒದಗಿಸುತ್ತದೆ. ಹೀಗಾಗಿ ಉದ್ಯಾನ ರಚಿಸುವಾಗ ಉದ್ಯಾನ ವಾಸ್ತು ಪಾಲಿಸಿ.

ಇದನ್ನೂ ಓದಿ: Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

ಉದ್ಯಾನದ ಸ್ಥಳ

ವಾಸ್ತು ಶಾಸ್ತ್ರದ ಪ್ರಕಾರ ಉದ್ಯಾನದ ಪ್ರತಿಯೊಂದು ವಿಭಾಗವು ಪಂಚ ಮಹಾಭೂತದ ಐದು ಅಂಶಗಳಲ್ಲಿ ಒಂದನ್ನು ಹೋಲುತ್ತದೆ. ಮನೆಯ ನೈಋತ್ಯ ಭಾಗವು ಭೂಮಿಯನ್ನು, ಈಶಾನ್ಯವು ನೀರನ್ನು, ಆಗ್ನೇಯವು ಬೆಂಕಿಯನ್ನು, ವಾಯುವ್ಯವು ಗಾಳಿಯನ್ನು ಪ್ರತಿನಿಧಿಸುತ್ತದೆ. ಕೇಂದ್ರವು ಜಾಗವನ್ನು ಪ್ರತಿನಿಧಿಸುತ್ತದೆ. ಆಗ್ನೇಯ ಅಥವಾ ನೈಋತ್ಯದಲ್ಲಿರುವ ಉದ್ಯಾನವು ಉದ್ವಿಗ್ನತೆಯನ್ನು ಉಂಟುಮಾಡುತ್ತದೆ.


ಉದ್ಯಾನವು ಮುಂಭಾಗದಲ್ಲಿ ನೆಲೆಗೊಂಡಿದ್ದರೆ ಬೃಹತ್ ಮರವು ಅದರ ಪ್ರವೇಶವನ್ನು ಎಂದಿಗೂ ನಿರ್ಬಂಧಿಸಬಾರದು. ಉದ್ಯಾನದ ಗೋಡೆಯ ಪಕ್ಕದಲ್ಲಿ ಮರವನ್ನು ನೆಡಬಹುದು. ವಾಸ್ತವವಾಗಿ ವಾಸ್ತು ದೃಷ್ಟಿಕೋನದಿಂದ ಪೀಪಲ್, ಮಾವು, ಬೇವು ಅಥವಾ ಬಾಳೆ ಮರವನ್ನು ನೆಡಲು ಆದ್ಯತೆ ನೀಡಲಾಗುತ್ತದೆ. ಈ ಮರಗಳು ತಮ್ಮ ಸುಗಂಧಕ್ಕೆ ಮಾತ್ರವಲ್ಲ, ಅವುಗಳು ನೀಡುವ ಧನಾತ್ಮಕ ಶಕ್ತಿಗಳಿಗೂ ಹೆಸರುವಾಸಿಯಾಗಿದೆ.

ಗಿಡ, ಮರಗಳು

ಉದ್ಯಾನದ ಪೂರ್ವ ಅಥವಾ ಉತ್ತರ ಭಾಗಗಳಲ್ಲಿ ಸಣ್ಣ ಪೊದೆಗಳನ್ನು ನೆಡಬೇಕು, ಈಶಾನ್ಯ ಭಾಗವನ್ನು ಮುಕ್ತವಾಗಿ ಬಿಡಬೇಕು. ಉದ್ಯಾನದ ಪಶ್ಚಿಮ, ದಕ್ಷಿಣ ಮತ್ತು ನೈಋತ್ಯ ವಿಭಾಗಗಳಲ್ಲಿ ಎತ್ತರದ ಮರಗಳನ್ನು ನೆಡಬೇಕು. ಮುಖ್ಯ ಮನೆ ಮತ್ತು ಮರಗಳ ನಡುವೆ ಗಣನೀಯ ಅಂತರವನ್ನು ನಿರ್ವಹಿಸಬೇಕು. ವಾಸ್ತು ಶಾಸ್ತ್ರದ ಪ್ರಕಾರ ಮರಗಳ ನೆರಳು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ರ ನಡುವೆ ಮನೆಯ ಕಟ್ಟಡದ ಮೇಲೆ ಬೀಳಬಾರದು. ದೊಡ್ಡ ಮರಗಳನ್ನು ಮನೆಗೆ ತುಂಬಾ ಹತ್ತಿರದಲ್ಲಿ ನೆಡಬಾರದು. ಯಾಕೆಂದರೆ ಅವುಗಳ ಬೇರುಗಳು ಮನೆಯ ಅಡಿಪಾಯವನ್ನು ಹಾನಿಗೊಳಿಸುತ್ತವೆ. ಕೀಟ, ಹುಳು, ಜೇನುನೊಣ ಅಥವಾ ಸರ್ಪಗಳನ್ನು ಆಕರ್ಷಿಸುವ ಮರಗಳನ್ನು ಉದ್ಯಾನದಲ್ಲಿ ತಪ್ಪಿಸಬೇಕು. ಇವುಗಳು ಮನೆಗೆ ದುರಾದೃಷ್ಠವನ್ನು ತರುತ್ತದೆ.


ಸೂಕ್ತ ಸಸ್ಯಗಳು

ತುಳಸಿ ಸಸ್ಯವು ಧನಾತ್ಮಕ ಪ್ರಭಾವವನ್ನು ಹೊಂದಿದೆ. ಇದನ್ನು ಮನೆಯ ಉತ್ತರ, ಈಶಾನ್ಯ ಮತ್ತು ಪೂರ್ವ ಭಾಗಗಳಲ್ಲಿ ನೆಡಬೇಕು. ಮುಳ್ಳು ಇರುವ ಗಿಡಗಳನ್ನು ತೋಟದಲ್ಲಿ ನೆಡಬಾರದು. ಕಳ್ಳಿಯವನ್ನು ನೆಡಬಾರದು. ಮುಳ್ಳಿನ ಗಿಡಗಳು ನಕಾರಾತ್ಮಕ ಶಕ್ತಿಯನ್ನು ಪ್ರತಿನಿಧಿಸುತ್ತವೆ.

ಕಾಂಪೌಂಡ್ ಗೋಡೆಯ ಎತ್ತರವನ್ನು ಹೆಚ್ಚಿಸುವುದರಿಂದ ಅದರ ಮೇಲೆ ಹೂವಿನ ಕುಂಡಗಳನ್ನು ಇಡಬಾರದು. ಹೂವಿನ ಕುಂಡಗಳನ್ನು ನೆಲದ ಮೇಲೆ ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು.

ಹುಲ್ಲುಹಾಸು

ಉದ್ಯಾನದಲ್ಲಿ ಹುಲ್ಲುಹಾಸು ಪೂರ್ವ ಅಥವಾ ಉತ್ತರಕ್ಕೆ ಎದುರಾಗಿರಬೇಕು. ಅಲ್ಲಿ ಉತ್ತರ-ದಕ್ಷಿಣ ಅಕ್ಷದ ಸ್ವಿಂಗ್ ಅನ್ನು ಇರಿಸಬಹುದು. ಇದು ವಾಸ್ತುಶಾಸ್ತ್ರದ ಪ್ರಕಾರ ಅಡೆತಡೆಯಿಲ್ಲದ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ.

ಜಲಪಾತ

ಪೂರ್ವ ಅಥವಾ ಉತ್ತರದಲ್ಲಿ ಮಿನಿ ಜಲಪಾತವನ್ನು ನಿರ್ಮಿಸಬಹುದು. ಉದ್ಯಾನದ ಈಶಾನ್ಯ ಮೂಲೆಯು ಮಿತಿಯಿಂದ ಹೊರಗಿರಬೇಕು.


ಈಜುಕೊಳ

ಉದ್ಯಾನದಲ್ಲಿ ಸಣ್ಣ ಈಜುಕೊಳವಿದ್ದರೆ, ಅದು ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿರಬೇಕು. ಕಮಲಗಳಿರುವ ಮಿನಿ ಕೊಳವು ಅದೃಷ್ಟವನ್ನು ತರುತ್ತದೆ. ತಪ್ಪು ದಿಕ್ಕಿನಲ್ಲಿ ಜಲಪಾತವು ಮಾನಸಿಕ ಶಾಂತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.

ಬೆಂಚುಗಳು

ದೊಡ್ಡ ಉದ್ಯಾನಗಳಲ್ಲಿ ಬೆಂಚುಗಳು ಉಪಯುಕ್ತವಾಗಿವೆ ಮತ್ತು ಅವುಗಳ ಮೇಲೆ ಕುಳಿತುಕೊಳ್ಳುವ ಜನರು ಪೂರ್ವ ಅಥವಾ ಪಶ್ಚಿಮಕ್ಕೆ ಮುಖ ಮಾಡುವುದನ್ನು ಖಚಿತಪಡಿಸಿಕೊಳ್ಳಲು ಉತ್ತರ ಅಥವಾ ಪೂರ್ವದಲ್ಲಿ ಬೆಂಚುಗಳನ್ನು ಇರಿಸಬಹುದು.

Continue Reading

ಅಂಕಣ

ರಾಜಮಾರ್ಗ ಅಂಕಣ: ಶ್ರೀರಾಮ ಆಗುವುದು ಕಷ್ಟ, ರಾವಣ ಆಗುವುದು ಕೂಡ ಕಷ್ಟವೇ!

ರಾಜಮಾರ್ಗ ಅಂಕಣ: ಇಂದು ಶ್ರೀರಾಮ ನವಮಿ. ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

VISTARANEWS.COM


on

sri rama rajamarga column
Koo

ಈ ಕತೆಯನ್ನು ಓದಿದ ನಂತರ ನೀವು ಯಾರನ್ನೂ ದ್ವೇಷ ಮಾಡುವುದಿಲ್ಲ!

Rajendra-Bhat-Raja-Marga-Main-logo

ಇಂದು ರಾಮನವಮಿ (Sri Ram Navami). ನನ್ನ ಜನ್ಮ ನಕ್ಷತ್ರ ಪುನರ್ವಸು. ಅದು ಶ್ರೀ ರಾಮಚಂದ್ರನ ಜನ್ಮ ನಕ್ಷತ್ರವೂ ಹೌದು! ನಾನು ಕೂಡ ರಾಮನ ಹಾಗೆ ನನ್ನ ಹೆತ್ತವರಿಗೆ ಹಿರಿಯ ಮಗ. ಆದರೆ ನಮ್ಮ ಹೋಲಿಕೆಯು ಅಷ್ಟಕ್ಕೇ ನಿಂತು ಬಿಡುತ್ತದೆ!

ಏಕೆಂದರೆ ಶ್ರೀರಾಮನ ಹಾಗೆ ಬದುಕುವುದು ತುಂಬಾನೆ ಕಷ್ಟ. ಶ್ರೀಕೃಷ್ಣನ ಹಾಗೆ ಯೋಚನೆ ಮಾಡುವುದು ಕೂಡ ಕಷ್ಟ. ನನಗೆ ಎರಡೂ ಈವರೆಗೆ ಸಾಧ್ಯವಾಗಲೇ ಇಲ್ಲ ಅನ್ನುವುದು ವಾಸ್ತವ. ಅದರಲ್ಲಿಯೂ ಮೊದಲನೆಯದ್ದು ಭಾರೀ ಕಷ್ಟ.

ವಾಲ್ಮೀಕಿಯು ಕೆತ್ತಿದ್ದು ಅದ್ಭುತವಾದ ವ್ಯಕ್ತಿತ್ವ ರಾಮ

ಶ್ರೀರಾಮನ ಬಗ್ಗೆ ಬೇರೆ ಬೇರೆ ವೇದಿಕೆಗಳಲ್ಲಿ ಗಂಟೆಗಳ ಕಾಲ ಮಾತಾಡಿದ್ದೇನೆ. ಅವನ ಜೀವನದ ಪ್ರತೀ ಒಂದು ಘಟನೆ ಕೂಡ ನನಗೆ ಬೆರಗನ್ನೇ ಮೂಡಿಸುತ್ತದೆ. ಆದಿ ಕವಿ ವಾಲ್ಮೀಕಿಯು ರಾಮಾಯಣದ ಮೂಲಕ ಕೆತ್ತಿದ ರಾಮನ ಪಾತ್ರವು ಅದು ವಿಶ್ವದ ಅದ್ಭುತ!

ನನಗೆ ಅಚ್ಚರಿ ಮೂಡಿಸಿದ ಒಂದೆರಡು ಘಟನೆಗಳು

ಶ್ರೀ ರಾಮನಿಗೆ ಪಟ್ಟಾಭಿಷೇಕಕ್ಕೆ ಸಂಕಲ್ಪವನ್ನು ದಶರಥನು ತೆಗೆದುಕೊಂಡಾಗಿತ್ತು. ಅದಕ್ಕಾಗಿ ತೀವ್ರ ಹಂಬಲ ಪಟ್ಟವರು ಅಯೋಧ್ಯೆಯ ಪ್ರತೀ ಒಬ್ಬ ನಾಗರಿಕರು. ರಾಮನು ಅರಸ ಆಗಬಾರದು ಅಂತ ಒಬ್ಬರೂ ಹೇಳಿರಲಿಲ್ಲ. ಪಟ್ಟಾಭಿಷೇಕಕ್ಕೆ ದಿನವನ್ನು ನಿಗದಿ ಮಾಡಿದ ದಶರಥ ಮಹಾರಾಜನು ಇಡೀ ಅಯೋಧ್ಯಾ ನಗರವನ್ನು ಸಿಂಗಾರ ಮಾಡಿ ಪಟ್ಟಕ್ಕೆ ಸಿದ್ಧತೆ ಮಾಡಿದ್ದನು.

ಆದರೆ ಮಂಥರೆ ಎಂಬ ಅತೃಪ್ತ ಆತ್ಮವು ಕೈಕೇಯಿ ರಾಣಿಯ ತಲೆಯನ್ನು ಕೆಡಿಸಿ ರಾಮನ ಪಟ್ಟಾಭಿಷೇಕಕ್ಕೆ ವಿಘ್ನವನ್ನು ಒಡ್ಡಿದ್ದು ನಮಗೆಲ್ಲ ಗೊತ್ತಿದೆ. ಹಿಂದೆ ಯಾವುದೋ ಒಂದು ಕಾಲದಲ್ಲಿ ಕೊಟ್ಟಿದ್ದ ಎರಡು ವರಗಳನ್ನು ಕೈಕೇಯಿಯು ಆ ಮಧ್ಯರಾತ್ರಿ ದಶರಥ ಮಹಾರಾಜನಿಗೆ ಕೇಳಿದಾಗ ರಾಜನು ಅದನ್ನು ನೆರವೇರಿಸಲು ಸಾಧ್ಯವೇ ಆಗದೇ ಕುಸಿದು ಬಿದ್ದ ಕಥೆಯು ಕೂಡ ನಮಗೆ ಗೊತ್ತಿದೆ.

ಪಿತೃ ವಾಕ್ಯಂ ಶಿರೋಧಾರ್ಯಂ!

ಆಗ ಶ್ರೀ ರಾಮನು ಕಟ್ಟು ಬಿದ್ದದ್ದು ಯಾವುದೋ ಒಂದು ಗಳಿಗೆಯಲ್ಲಿ ತನ್ನ ಅಪ್ಪ ತನ್ನ ಚಿಕ್ಕಮ್ಮನಿಗೆ ಕೊಟ್ಟಿದ್ದ ಒಂದು ಮಾತಿಗೆ! ಅದನ್ನು ತಂದೆಯು ನೇರವಾಗಿ ಹೇಳಲು ಸಾಧ್ಯ ಆಗದೆ ಕಣ್ಣೀರನ್ನು ಸುರಿಸುತ್ತ ನೆಲಕ್ಕೆ ಒರಗಿದಾಗಲೂ ರಾಮನಿಗೆ ಅದು ಖಂಡಿತವಾಗಿಯೂ ‘ಪಿತೃ ವಾಕ್ಯಮ್ ಶಿರೋಧಾರ್ಯಮ್’!

king dasharatha

ರಾಮನು ಅರಸ ಆಗಬಾರದು ಎಂದು ರಾಣಿ ಕೈಕೇಯಿಯ ಮನಸ್ಸಿನಲ್ಲಿ ಕೂಡ ಇರಲಿಲ್ಲ. ಆದರೆ ಆಕೆಯಲ್ಲಿ ಆ ಭ್ರಮೆ ಮತ್ತು ಪುತ್ರ ವಾತ್ಸಲ್ಯವನ್ನು ಹುಟ್ಟಿಸಿದವಳು ಆ ಗೂನಜ್ಜಿ ಮಂಥರೆ!

ಅವಳು ಹೇಗೂ ಅಯೋಧ್ಯೆಯ ಪ್ರಜೆ ಆಗಿರಲಿಲ್ಲ. ಅವಳು ಕೈಕೇಯಿಯ ತಾಯಿಯ ಮನೆಯಿಂದ ಕೈಕೇಯಿ ಜೊತೆಗೆ ಬಂದವಳು. ಒಂದು ರೀತಿಯಲ್ಲಿ ಶ್ರೀರಾಮನು ಪಟ್ಟವೇರಿ ಅರಸನಾಗಲು ಆ ಅಯೋಧ್ಯೆಯಲ್ಲಿ ನೂರು ಪ್ರತಿಶತದ ಬಹುಮತದ ಮುದ್ರೆ ಇತ್ತು! ಆದರೆ ರಾಮನು ತಂದೆ ಬಹಳ ಹಿಂದೆ ತನ್ನ ರಾಣಿಗೆ ಕೊಟ್ಟ ಒಂದು ಮಾತಿಗೆ ಕಟ್ಟು ಬಿದ್ದು ಅರಸೊತ್ತಿಗೆಯನ್ನು ಎಡಗಾಲಿನಿಂದ ಒದ್ದು ನಾರು ಮುಡಿ ತೊಟ್ಟು ಕಾಡಿಗೆ ಹೋದವನು. ತನ್ನದೇ ಹಕ್ಕಿನ ರಾಜ್ಯವನ್ನು ತ್ಯಾಗ ಮಾಡಲು ಆತ ಹಿಂದೆ ಮುಂದೆ ನೋಡಲಿಲ್ಲ!

‘ನೀನು ಕೊಟ್ಟ ಮಾತಿಗೆ ನಾನು ಹೇಗೆ ಹೊಣೆ ಆಗಬೇಕು?’ ಎಂದು ಅಪ್ಪನನ್ನು ಒಂದು ಮಾತು ಕೂಡ ಶ್ರೀ ರಾಮನು ಕೇಳಲಿಲ್ಲ! ಆ ರೀತಿಯ ಸಣ್ಣ ಯೋಚನೆ ಕೂಡ ಆತನ ಮನದಲ್ಲಿ ಬರಲಿಲ್ಲ ಅಂದರೆ ಅದು ಅದ್ಭುತವೇ ಹೌದು! ಸರ್ವಾಲಂಕಾರ ಆಗಿದ್ದ ಅಯೋಧ್ಯೆಯ ನಡುವೆ ಯಾವ ವಿಷಾದ ಕೂಡ ಇಲ್ಲದೆ ಎದ್ದು ಹೋಗುವುದು ಸುಲಭ ಅಲ್ಲ! ಅದು ರಾಮನಿಗೆ ಮಾತ್ರ ಸಾಧ್ಯವಾಗುವ ನಡೆ.

ರಾಮನಿಗೆ ನೂರು ಪ್ರತಿಶತ ಜನಮತದ ಬೆಂಬಲ ಇತ್ತು!

ಆಗ ಪೂರ್ಣ ಜನಮತ ತನ್ನ ಪರವಾಗಿ ಇದ್ದಾಗ ರಾಮನು ಪಿತೃ ವಾಕ್ಯವನ್ನು ಧಿಕ್ಕರಿಸಿ ಆಡಳಿತವನ್ನು ಮಾಡಬಹುದಿತ್ತು ಎಂದು ನನಗೆ ಹಲವರು ಕೇಳಿದ್ದಾರೆ. ಆದರೆ ಆಗ ರಾಮನು ಕೇವಲ ದಶರಥನ ಮಗ ಮಾತ್ರ ಆಗಿದ್ದ. ಅರಸ ಆಗಿರಲಿಲ್ಲ ಅನ್ನುವುದು ನನ್ನ ಉತ್ತರ!

ಮುಂದೆ ರಾಣಿ ಕೈಕೇಯಿ ಕಾಡಿಗೆ ಬಂದು ತಮ್ಮ ತಪ್ಪಿಗೆ ಕ್ಷಮೆ ಕೇಳಿ ಮತ್ತೆ ಅಯೋಧ್ಯೆಗೆ ಬರಬೇಕು ಎಂದು ಎಷ್ಟು ವಿನಂತಿ ಮಾಡಿದರೂ ರಾಮಚಂದ್ರನ ಮನಸ್ಸು ಒಂದಿಷ್ಟೂ ವಿಚಲಿತ ಆಗಲಿಲ್ಲ. ಕಣ್ಣೀರು ಸುರಿಸುತ್ತಾ ಬಂದ ಭರತನನ್ನು ಧೈರ್ಯ ತುಂಬಿಸಿ ಅರಸನಾಗಲು ಮಾನಸಿಕವಾಗಿ ಸಿದ್ಧತೆ ಮಾಡಿ ಕಳುಹಿಸಿದ್ದು ಅದೇ ರಾಮ. ಈ ರೀತಿಯ ನಿರ್ಧಾರಗಳು ರಾಮನ ವ್ಯಕ್ತಿತ್ವದ ಕೈಗನ್ನಡಿ.

Sri Ramachandra

ಮುಂದೆ ಅದೇ ರಾಮನು ರಾವಣನ ವಧೆಯಾದ ನಂತರ ಅತ್ಯಂತ ವಿಧಿವತ್ತಾಗಿ ಲಂಕೆಯಲ್ಲಿ ಆತನ ಕ್ರಿಯಾಕರ್ಮ ಮುಗಿಸುತ್ತಾನೆ. ಆಗ ರಾಮ ಹೇಳಿದ ಎರಡು ಮಾತುಗಳನ್ನು ಕೇಳಿ.

ರಾಮನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ!

‘ನಾನು ದ್ವೇಷ ಮಾಡಿದ್ದು ರಾವಣನನ್ನು ಅಲ್ಲ. ಅವನ ಒಳಗಿದ್ದ ರಾವಣತ್ವವನ್ನು! ಯಾರನ್ನೇ ಆದರೂ ಮರಣದ ನಂತರ ದ್ವೇಷ ಮಾಡಬಾರದು. ರಾವಣನು ಹೇಳಿ ಕೇಳಿ ಮಹಾ ಬ್ರಾಹ್ಮಣ. ಆತನು ದೈವಭಕ್ತ. ಆದ್ದರಿಂದ ಅವನನ್ನು ಗೌರವಿಸುವುದು ನಮ್ಮ ಕರ್ತವ್ಯ!’

ಸೀತೆಯನ್ನು ಅಗ್ನಿಪರೀಕ್ಷೆ ಮಾಡಿದ್ದು ಸರಿಯಾ?

ಮುಂದೆ ಅದೇ ರಾಮಚಂದ್ರನು ಅಯೋಧ್ಯೆಗೆ ಬಂದು ಪಟ್ಟಾಭಿಷೇಕ ಆಗುವ ಮೊದಲು ತನ್ನ ಪತ್ನಿ ಸೀತೆಯನ್ನು ಅಯೋಧ್ಯೆಯ ಜನರ ಮುಂದೆ ಅಗ್ನಿ ಪರೀಕ್ಷೆಗೆ ಒಡ್ಡಿದ ವಿಷಯದ ಬಗ್ಗೆ ತುಂಬಾ ಟೀಕೆಗಳು ಇವೆ. ಅದೇ ರೀತಿ ಒಬ್ಬ ಸಾಮಾನ್ಯ ಅಗಸನ ಮಾತನ್ನು ಕೇಳಿ ತನ್ನ ಕೈ ಹಿಡಿದ ಮಡದಿ ಸೀತೆಯನ್ನು ಮತ್ತೆ ಕಾಡಿಗೆ ಕಳುಹಿಸಿದ ನಿರ್ಧಾರದ ಬಗ್ಗೆ ಕೂಡ ಸಾಕಷ್ಟು ಟೀಕೆಗಳು ಬಂದಿವೆ.

ಆದರೆ ಅವೆರಡು ಕೂಡ ಶ್ರೀರಾಮನು ರಾಜಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು. ಅವು ಸೀತಾರಾಮನಾಗಿ ತೆಗೆದುಕೊಂಡ ನಿರ್ಧಾರಗಳು ಅಲ್ಲ!

ರಾಜನ ನಡೆಗಳು ಸಂಶಯಾಸ್ಪದ ಆಗಿರಬಾರದು!

ರಾಜಾರಾಮನಾಗಿ ತನ್ನ ಪ್ರತಿಯೊಬ್ಬ ಪ್ರಜೆಯ ಮುಂದೆ ಸಂಶಯಾತೀತವಾಗಿ ಇರಬೇಕು ಮತ್ತು ಕಾಣಿಸಿಕೊಳ್ಳಬೇಕು ಎನ್ನುವುದು ರಾಜನ ಆದ್ಯ ಕರ್ತವ್ಯ. ತಾನು ನೆಟ್ಟಗಿರುವುದು ಮಾತ್ರವಲ್ಲ, ತನ್ನ ನೆರಳು ಕೂಡ ನೆಟ್ಟಗಿರಬೇಕು ಎಂದು ಭಾವಿಸುವುದು ಒಬ್ಬ ರಾಜನ ಆದ್ಯತೆಯೇ ಆಗಿದೆ. ಒಬ್ಬ ಬಹು ಸಾಮಾನ್ಯ ಅಗಸನೂ ಅರಸನಿಗೆ ಒಬ್ಬ ಗೌರವಾನ್ವಿತ ಪ್ರಜೆಯೇ ಆಗಿದ್ದಾನೆ. ಆತನ ಮನದ ಸಂಶಯವನ್ನು ಕೂಡ ನಿವಾರಣೆ ಮಾಡುವುದು ಒಬ್ಬ ಅರಸನ ಕರ್ತವ್ಯ. ಹೀಗೆ ಯಾವ ಕೋನದಲ್ಲಿ ನೋಡಿದರೂ ರಾಮನ ವ್ಯಕ್ತಿತ್ವದಲ್ಲಿ ಒಂದು ಕಪ್ಪುಚುಕ್ಕೆ ಕೂಡ ಕಂಡು ಬರುವುದು ಸಾಧ್ಯ ಇಲ್ಲ. ಆದ್ದರಿಂದ ರಾಮ ಆಗುವುದು ಎಲ್ಲರಿಗೂ ಕಷ್ಟ!

ರಾವಣ ಆಗುವುದು ಕಷ್ಟವೇ!

ರಾಮ ಆಗುವುದು ಎಷ್ಟು ಕಷ್ಟವೋ ರಾವಣ ಆಗುವುದು ಅಷ್ಟೇ ಕಷ್ಟ! ಕವಿ ವಾಲ್ಮೀಕಿಯು ಕಥಾ ನಾಯಕ ರಾಮನ ಪಾತ್ರಕ್ಕೆ ಎಷ್ಟು ಶಕ್ತಿ ತುಂಬಿದ್ದಾನೋ ಖಳನಾದ ರಾವಣನ ಪಾತ್ರಕ್ಕೆ ಕೂಡ ಅಷ್ಟೇ ಶಕ್ತಿಯನ್ನು ತುಂಬಿದ್ದಾನೆ. ಆತನ ಪಾತ್ರವೂ ಅಮೋಘವೆ ಆಗಿದೆ!

ಸೀತಾ ಸ್ವಯಂವರದಲ್ಲಿ ತನಗಾದ ಅಪಮಾನದಿಂದ ಕುದ್ದು ಹೋಗಿದ್ದ ರಾವಣನ ಅಂತರ್ಯದಲ್ಲಿ ಸೀತೆಯನ್ನು ಒಮ್ಮೆ ಗೆಲ್ಲಬೇಕು ಎಂದು ಮಾತ್ರ ಇತ್ತು. ಅನುಭವಿಸುವುದು ಆಗಿರಲಿಲ್ಲ. ಅನುಭವಿಸುವ ಆಸೆ ಇದ್ದಿದ್ದರೆ ಅವನದ್ದೇ ಲಂಕೆಯಲ್ಲಿ ಏಕಾಂಗಿ ಆಗಿದ್ದ ಸೀತೆಯು ತನ್ನ ಮಾನವನ್ನು ಉಳಿಸಿಕೊಳ್ಳಲು ಸಾಧ್ಯವೇ ಇರಲಿಲ್ಲ!

ಹೀಗೊಂದು ಕಥೆಯನ್ನು ನಾನು ಓದಿದ್ದು!

ಈ ಕಥೆಯು ಮೂಲ ರಾಮಾಯಣದಲ್ಲಿ ಇಲ್ಲ. ಆದರೆ ಅದ್ಭುತವಾಗಿದೆ. ಕಾಲ್ಪನಿಕ ಎಂದು ಬೇಕಾದರೂ ಕರೆಯಿರಿ. ಸೀತೆಯನ್ನು ಹುಡುಕುತ್ತಾ ಲಂಕೆಗೆ ಬಂದಿದ್ದ ಶ್ರೀರಾಮನಿಗೆ ರಾವಣನ ಬಗ್ಗೆ ಸಾಕಷ್ಟು ಒಳ್ಳೆಯ ಮಾತುಗಳು ಆಲ್ಲಿ ಕೇಳಿಬರುತ್ತವೆ. ಆತನು ಮಹಾ ಯೋಧ. ಆತನನ್ನು ಸೋಲಿಸುವುದು ಖಂಡಿತ ಸುಲಭದ ಕೆಲಸ ಅಲ್ಲ ಎಂದು ಗೊತ್ತಾಗುತ್ತದೆ. ಅದಕ್ಕೆ ‘ಶತ್ರು ಸಂಹಾರ’ದ ಯಾಗವನ್ನು ಮಾಡಬೇಕು ಎಂದು ಅಲ್ಲಿದ್ದ ಹಿರಿಯರು ಹೇಳುತ್ತಾರೆ.

ಲಂಕೆ ಹೇಳಿ ಕೇಳಿ ರಾಕ್ಷಸರ ನಾಡು! ಅಲ್ಲಿ ಆ ಯಾಗವನ್ನು ಮಾಡಬೇಕು ಅಂತಾದರೆ ಪುರೋಹಿತರು ಯಾರು ಸಿಗುತ್ತಾರೆ? ಆಗ ಹಿರಿಯರು ಇನ್ನೊಂದು ಉಪಾಯವನ್ನು ಹೇಳುತ್ತಾರೆ. ಲಂಕೆಯಲ್ಲಿ ಒಬ್ಬನೇ ಬ್ರಾಹ್ಮಣ ಇರುವುದು ಅದು ರಾವಣ! ಆತನಿಗೆ ಎಲ್ಲಾ ವೇದ ವಿದ್ಯೆಗಳು ಗೊತ್ತಿವೆ. ಆತ ಪುರೋಹಿತನಾಗಿ ಬರಲು ಒಪ್ಪಿದರೆ ಆದೀತು ಎಂಬ ಅಭಿಪ್ರಾಯ ಬಂತು.

ತನ್ನದೇ ವಧೆಯನ್ನು ಮಾಡುವ ‘ಶತ್ರುಸಂಹಾರ ಯಾಗ’ಕ್ಕೆ ಪುರೋಹಿತನಾಗಿ ರಾವಣನು ಬರಬಹುದೇ? ಈ ಪ್ರಶ್ನೆಯು ಎದ್ದಾಗ ನೋಡೋಣ, ಒಮ್ಮೆ ಪ್ರಯತ್ನ ಮಾಡೋಣ ಎಂಬ ಮಾತು ಬಂತು. ಆಗ ರಾವಣನಿಗೆ ಶ್ರೀರಾಮನ ಕಡೆಯಿಂದ ಗೌರವಪೂರ್ವಕ ಆಮಂತ್ರಣವು ಹೋಯಿತು. ರಾವಣ ಬರಲು ಸಾಧ್ಯ ಇಲ್ಲವೇ ಇಲ್ಲ ಎಂದು ಎಲ್ಲರೂ ನಂಬಿದ್ದರು.

ಇದನ್ನೂ ಓದಿ: ರಾಜಮಾರ್ಗ ಅಂಕಣ: RCB- ʼಹೊಸ ಅಧ್ಯಾಯʼ ಆರಂಭ ಆಗೋದು ಯಾವಾಗ?

ಆದರೆ ಶ್ರೀರಾಮನ ಆಮಂತ್ರಣಕ್ಕೆ ತಲೆ ಬಾಗಿ ರಾವಣನು ಬಂದೇ ಬಿಟ್ಟ! ಪುರೋಹಿತನಾಗಿ ಕೂತು ‘ಶತ್ರು ಸಂಹಾರ’ ಯಾಗವನ್ನು ಪೂರ್ತಿ ಮಾಡಿದ. ಪೂರ್ಣಾಹುತಿ ಆದ ನಂತರ ಶ್ರೀರಾಮನು ಪುರೋಹಿತ ರಾವಣನ ಪಾದ ಮುಟ್ಟಿ ನಮಸ್ಕಾರ ಮಾಡಿದ!

ಆಗ ರಾವಣ ರಾಮನಿಗೆ ಕೈ ಮುಗಿದು ಹೇಳಿದ ಮಾತು ಕೇಳಿ.

“ಶ್ರೀರಾಮ, ಸೀತೆಯನ್ನು ಅಪಹರಣ ಮಾಡಿಕೊಂಡು ಬಂದ ನಂತರ ಪಾಪ ಪ್ರಜ್ಞೆಯಿಂದ ಸರಿಯಾಗಿ ನಿದ್ದೆಯು ಬರುತ್ತಿಲ್ಲ. ನಿದ್ದೆ, ವಿಶ್ರಾಂತಿ ಇಲ್ಲದೆ ದಣಿದು ಬಿಟ್ಟಿದ್ದೇನೆ. ನಿನ್ನ ಕಾಲ ಮೇಲೆ ಒಂದು ಗಳಿಗೆ ಮಲಗಬೇಕು ಅನ್ನಿಸ್ತಾ ಇದೆ! ನಿನ್ನ ಅನುಮತಿಯನ್ನು ಕೊಡುವೆಯಾ?’

ತನ್ನ ಗೆಲುವಿಗೆ ಬೇಕಾಗಿ ದೊಡ್ಡ ಯಾಗವನ್ನೇ ಮಾಡಿಕೊಟ್ಟ ರಾವಣನ ವಿನಂತಿಯನ್ನು ಶ್ರೀರಾಮನು ನಿರಾಕರಿಸಲು ಸಾಧ್ಯವೇ ಇರಲಿಲ್ಲ. ಶ್ರೀರಾಮ ಅಸ್ತು ಅಂದ. ರಾವಣನು ಪುಟ್ಟ ಮಗುವಿನ ಹಾಗೆ ರಾಮನ ಕಾಲಿನ ಮೇಲೆ ಸುದೀರ್ಘ ಕಾಲ ಮೈಮರೆತು ಮಲಗಿದ. ಎಲ್ಲವನ್ನೂ ಮರೆತು ಬಿಟ್ಟನು! ತನ್ನ ಪಾಪದ ಭೀತಿಯನ್ನು ರಾಮನ ಪಾದಮೂಲದಲ್ಲಿ ಇಟ್ಟು ಎದೆಯ ಭಾರವನ್ನು ಇಳಿಸಿ ಹೊರಟು ಹೋದನು ರಾವಣ!

ಈಗ ಹೇಳಿ ರಾವಣ ಆಗುವುದು ಅಷ್ಟು ಸುಲಭವಾ?

ಇದನ್ನೂ ಓದಿ: Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

Continue Reading

ಭವಿಷ್ಯ/ಧಾರ್ಮಿಕ

Baba Vanga: 2024 ವರ್ಷವಿಡೀ ಭಯಾನಕ! ಬಾಬಾ ವಂಗಾ ಭವಿಷ್ಯ

Baba Vanga: ಹಲವು ವರ್ಷಗಳ ಹಿಂದೆ ಬಲ್ಗೇರಿಯಾದ ಅಂಧ ಮಹಿಳೆ ನುಡಿದಿರುವ ಭವಿಷ್ಯವಾಣಿಗಳು ನಿಜವಾಗುತ್ತಿರುವುದರಿಂದ 2024ರ ಕುರಿತು ಅವರು ಏನು ಹೇಳಿರಬಹುದು ಎನ್ನುವ ಕುತೂಹಲ ಸಾಕಷ್ಟು ಮಂದಿಗೆ ಇದೆ. ಇದಕ್ಕೆ ಉತ್ತರ ಇಲ್ಲಿದೆ.

VISTARANEWS.COM


on

By

Baba vanga
Koo

ದೆಹಲಿ: ಬಾಬಾ ವಂಗಾ (Baba Vanga) ಅವರ ಭವಿಷ್ಯವಾಣಿಯನ್ನು ಸಾಕಷ್ಟು ಮಂದಿ ನಂಬುತ್ತಾರೆ. ಇದಕ್ಕೆ ಮುಖ್ಯ ಕಾರಣ ಬಲ್ಗೇರಿಯಾದ (Bulgaria) ಈ ಅಂಧ ಮಹಿಳೆಯು ಹಲವು ವರ್ಷಗಳ ಹಿಂದೆಯೇ ನುಡಿಡಿರುವ ಬಹುತೇಕ ಭವಿಷ್ಯವಾಣಿಗಳು ನಿಜವಾಗಿವೆ. ಹೀಗಾಗಿ ಬಾಬಾ ವಂಗಾ ಅವರು ನುಡಿದಿರುವ ಭವಿಷ್ಯದ ಬಗ್ಗೆ ಕೇಳಲು ಬಹುತೇಕ ಮಂದಿ ಕುತೂಹಲದಿಂದ ಕಾಯುತ್ತಿರುತ್ತಾರೆ.

ವಾಂಜೆಲಿಯಾ ಪಾಂಡೆವಾ ಗುಶ್ಟೆರೋವಾ ಎಂಬ ಹೆಸರಿನ ಬಲ್ಗೇರಿಯನ್ ಮಹಿಳೆ ಬಾಬಾ ವಂಗಾ ತಮ್ಮ ಜೀವಿತಾವಧಿಯಲ್ಲಿ ಹಲವಾರು ಭವಿಷ್ಯವಾಣಿಗಳನ್ನು ಮಾಡಿದ್ದಾರೆ. ಎರಡು ದಶಕಗಳ ಹಿಂದೆಯೇ ಅವರು ನಿಧನರಾಗಿರುವ ಅವರ ಭವಿಷ್ಯವಾಣಿಗಳ ಬಗ್ಗೆ ಜನರು ನಿರಂತರ ಚರ್ಚೆ ಮಾಡುತ್ತಿರುತ್ತಾರೆ.

ಬಾಬಾ ವಂಗಾ ಅವರು ಈ ಹಿಂದೆ ಅಮೆರಿಕದ (america) ಮೇಲೆ ಉಗ್ರರ ದಾಳಿ, ಬರಾಕ್‌ ಒಬಾಮಾ (Barack Obama) ಅಮೆರಿಕ ಅಧ್ಯಕ್ಷರಾಗುವುದು, ಬ್ರೆಕ್ಸಿಟ್‌ (Brexit), ಡಯಾನಾ (Diana) ಸಾವಿನ ಕುರಿತು ನುಡಿದಿರುವ ಹಲವು ಭವಿಷ್ಯಗಳು ನಿಜವಾಗಿವೆ. ಇದೀಗ 2024ರ ಕುರಿತು ಅವರು ನುಡಿದಿರುವ ಭವಿಷ್ಯವಾಣಿ ಇಂತಿದೆ.

ಇದನ್ನೂ ಓದಿ: RBI News: ಆರ್‌ಬಿಐ ಯುಪಿಐ ಮೂಲಕ ಇನ್ನು ನಗದು ಠೇವಣಿ ಸೌಲಭ್ಯ; ಎಟಿಎಂ ಕಾರ್ಡ್‌ ಅಗತ್ಯವಿಲ್ಲ

ಹವಾಮಾನ ಬದಲಾವಣೆಗಳು


ಜಗತ್ತಿನಲ್ಲಿ 2024ರಲ್ಲಿ ತೀವ್ರ ಹವಾಮಾನ ಬದಲಾವಣೆಗಳು ಸಂಭವಿಸುತ್ತದೆ. ನೈಸರ್ಗಿಕ ವಿಕೋಪಗಳನ್ನು ಹೆಚ್ಚಾಗುತ್ತದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಸಂಶೋಧನೆ ನಡೆಸಿರುವ ವಿಜ್ಞಾನಿಗಳು ಈ ಬಾರಿ ಜಾಗತಿಕ ಶಾಖದ ಅಲೆಗಳು ಶೇ. 67ರಷ್ಟು ಹೆಚ್ಚಾಗಿ ಸಂಭವಿಸುತ್ತಿವೆ ಮತ್ತು ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ವಿಶ್ವ ಹವಾಮಾನ ಸಂಸ್ಥೆಯು ನೈಸರ್ಗಿಕ ವಿಕೋಪಗಳಿಗೆ ಕಾರಣವಾಗುವ ಸಂಗತಿಗಳನ್ನು ಗುರುತಿಸಿದ್ದು,ಈಗಾಗಲೇ ಮುನ್ಸೂಚನೆಯನ್ನೂ ನೀಡಿದ್ದಾರೆ.

ಸೈಬರ್ ದಾಳಿ

ಬಾಬಾ ವಂಗಾ ಸಾವನ್ನಪ್ಪಿದ್ದಾಗ ಇನ್ನೂ ಅಂತರ್ಜಾಲ ವ್ಯವಸ್ಥೆಯೇ ಸರಿಯಾಗಿ ಬೆಳೆದಿರಲಿಲ್ಲ. ಆದರೆ ಆಕೆ ಸಾವಿನ ಸಮಯದಲ್ಲಿ 2024 ರಲ್ಲಿ ಸೈಬರ್ ದಾಳಿಗಳು ಹೆಚ್ಚಾಗುವ ಮುನ್ಸೂಚನೆ ನೀಡಿದ್ದರು. ವಿಶೇಷವಾಗಿ ಪವರ್ ಗ್ರಿಡ್‌ ಮತ್ತು ನೀರಿನ ಸಂಸ್ಕರಣಾ ಯೋಜನೆಗಳಂತಹ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಸೈಬರ್ ದಾಳಿಯಾಗುವ ಅಪಾಯವಿದೆ ಎಂದು ಅವರು ಹೇಳಿದ್ದರು.

ಆರ್ಥಿಕ ಬಿಕ್ಕಟ್ಟು

2024ರ ವರ್ಷವು ಜಾಗತಿಕವಾಗಿ ಆರ್ಥಿಕ ಬದಲಾವಣೆಯನ್ನು ಕಾಣುತ್ತದೆ. ಇದು ರಾಜಕೀಯ ಉದ್ವಿಗ್ನತೆಗೆ ಕಾರಣವಾಗಬಹುದು. ಸಾಲದ ಪ್ರಮಾಣ ಹೆಚ್ಚಾಗಬಹುದು. ಯುಎಸ್ ನಲ್ಲಿ ಹಣದುಬ್ಬರ, ಜಪಾನ್ ನಲ್ಲಿ ಆರ್ಥಿಕ ಕುಸಿತ, ಯುಕೆಯಲ್ಲಿ ಹೆಚ್ಚಿನ ಬಡ್ಡಿದರಗಳು ಮತ್ತು ಕಡಿಮೆ ಉತ್ಪಾದಕತೆ, ಚೀನಾ ದೇಶಕ್ಕೂ ಆರ್ಥಿಕ ಸಂಕಷ್ಟ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ.

ರೋಗಗಳಿಗೆ ಚಿಕಿತ್ಸೆ

ಆಲ್ ಜ್ಹಮರ್ ಮತ್ತು ಕ್ಯಾನ್ಸರ್ ನಂತಹ ಕಾಯಿಲೆಗಳಿಗೆ ಔಷಧ ಲಭ್ಯವಾಗುವುದಾಗಿ ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇತ್ತೀಚೆಗೆ ರಷ್ಯಾದಲ್ಲಿ ನಡೆಯುತ್ತಿರುವ ಕ್ಯಾನ್ಸರ್ ಬಗ್ಗೆ ಸಂಶೋಧನೆಯ ಬಗ್ಗೆ ಹೇಳಿಕೆ ನೀಡಿದ್ದು, ಶೀಘ್ರದಲ್ಲೇ ಕ್ಯಾನ್ಸರ್ ಲಸಿಕೆಗಳು ಲಭ್ಯವಾಗುವ ಸಾಧ್ಯತೆಯ ಬಗ್ಗೆ ತಿಳಿಸಿದ್ದರು.

ಯುದ್ಧ

2024ರಲ್ಲಿ ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಯ ಸಾಧ್ಯತೆ ಬಗ್ಗೆ ಸುಳಿವು ನೀಡಿರುವ ಬಾಬಾ ವಂಗಾ ಭಯೋತ್ಪಾದಕ ಚಟುವಟಿಕೆ ಹೆಚ್ಚಾಗುವ ಬಗ್ಗೆಯೂ ಸೂಚನೆ ನೀಡಿದ್ದಾರೆ.

Continue Reading
Advertisement
Kangana Ranaut
Lok Sabha Election 202416 mins ago

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

anjali murder case hubli
ಕ್ರೈಂ22 mins ago

Anjali Murder Case: ಅಂಜಲಿ ಹಂತಕನಿಗೆ ಸ್ನೇಹಿತನೇ ಪ್ರೇರಣೆ? ಅವನೂ ಕೊಲೆ ಆರೋಪಿ!

Viral Video
ವೈರಲ್ ನ್ಯೂಸ್27 mins ago

Viral Video: 160 ಕಿ.ಮೀ. ವೇಗದಲ್ಲಿ ಡ್ರೈವಿಂಗ್‌..ಇನ್‌ಸ್ಟಾಗ್ರಾಂನಲ್ಲಿ ಲೈವ್‌..ಡೆಡ್ಲಿ ಆಕ್ಸಿಡೆಂಟ್‌! ವೈರಲಾಯ್ತು ಶಾಕಿಂಗ್‌ ವಿಡಿಯೋ

Slovakian PM Robert Fico critical after assassination attempt
ಪ್ರಮುಖ ಸುದ್ದಿ46 mins ago

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Health Tips in Kannada lady finger okra benefits
ಆರೋಗ್ಯ1 hour ago

Health Tips in Kannada: ಬೆಂಡೆಕಾಯಿ ನೀರನ್ನು ಕುಡಿಯೋದರಿಂದ ಏನೆಲ್ಲ ಲಾಭಗಳಿವೆ ತಿಳಿದುಕೊಳ್ಳಿ

ಕರ್ನಾಟಕ2 hours ago

Karnataka Weather: ಇಂದು ಕಲಬುರಗಿ, ವಿಜಯಪುರ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಮುನ್ಸೂಚನೆ

stay awake till late night what is the problem For health
ಆರೋಗ್ಯ2 hours ago

Health Tips in Kannada: ತಡರಾತ್ರಿಯವರೆಗೆ ಎಚ್ಚರದಿಂದ ಇದ್ದರೆ ಆಗುವ ಸಮಸ್ಯೆಗಳೇನು ಗೊತ್ತೇ?

dina bhavishya read your daily horoscope predictions for May 16 2024
ಭವಿಷ್ಯ3 hours ago

Dina Bhavishya : ಇಂದು 12 ರಾಶಿಯವರ ಫಲ ಏನಿದೆ? ಯಾರಿಗೆ ಶುಭ ತರುತ್ತೆ? ಹೂಡಿಕೆಯಲ್ಲಿ ಯಾರಿಗೆ ಲಾಭ?

Mamata Banerjee
ಪ್ರಮುಖ ಸುದ್ದಿ8 hours ago

ಚುನಾವಣೆ ಫಲಿತಾಂಶಕ್ಕೆ ಮೊದಲೇ ಇಂಡಿಯಾ ಒಕ್ಕೂಟಕ್ಕೆ ದೀದಿ ಶಾಕ್; ಬಾಹ್ಯ ಬೆಂಬಲವಷ್ಟೇ ಎಂದು ಘೋಷಣೆ!

Bengaluru News
ಕರ್ನಾಟಕ8 hours ago

Bengaluru News: ಹಸುಗೂಸನ್ನು ರಸ್ತೆ ಬದಿ ಎಸೆದು ಹೋದ ಅನಾಮಿಕರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌