Padma Award: ಕರ್ನಾಟಕದ ಇಬ್ಬರು ಸಾಧಕರಾದ ಸೋಮಣ್ಣ, ಪ್ರೇಮ ಧನರಾಜ್‌ಗೆ ಪದ್ಮಶ್ರೀ ಪ್ರಶಸ್ತಿ - Vistara News

ದೇಶ

Padma Award: ಕರ್ನಾಟಕದ ಇಬ್ಬರು ಸಾಧಕರಾದ ಸೋಮಣ್ಣ, ಪ್ರೇಮ ಧನರಾಜ್‌ಗೆ ಪದ್ಮಶ್ರೀ ಪ್ರಶಸ್ತಿ

Padma Award: ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರವು ಜನವರಿ 25ರಂದು ರಾತ್ರಿ ಘೋಷಣೆ ಮಾಡಿದೆ.

VISTARANEWS.COM


on

Padma Award, Padma Shri award to Somanna, Prema Dhanraj, two achievers from Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕರ್ನಾಟಕದ ಜೇನು ಕುರುಬ ಸಮುದಾಯ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿರುವ ಮೈಸೂರಿನ ಸೋಮಣ್ಣ, ಪ್ಲಾಸ್ಟಿಕ್ ಸರ್ಜನ್ ಪ್ರೇಮ್ ಧನರಾಜ್ ಅವರಿಗೆ 2024ರ ಸಾಲಿನ ಪದ್ಮಶ್ರೀ ಪ್ರಶಸ್ತಿ (Padma Award) ಘೋಷಣೆ ಮಾಡಲಾಗಿದೆ. ಹಾಗೆಯೇ ಕಾಸರಗೋಡಿನ ಭತ್ತ ಬೆಳೆಯುವ ರೈತ ಸತ್ಯ ನಾರಾಯಣ ಬೇಳೇರಿ ಅವರು ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪದ್ಮಶ್ರೀ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ….

ಗಣರಾಜ್ಯೋತ್ಸವಕ್ಕೆ ಯಾವ ಪುರಸ್ಕಾರ, ಪ್ರಶಸ್ತಿ ಘೋಷಣೆ?

ಪ್ರತಿ ವರ್ಷ ಜನವರಿ 26ರಂದು ಭಾರತವು ಅತ್ಯಂತ ಸಡಗರದಿಂದ ಗಣರಾಜ್ಯೋತ್ಸವನ್ನು ಆಚರಿಸುತ್ತದೆ (Republic Day 2023). ಇದೇ ವೇಳೆ, ರಾಷ್ಟ್ರ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡವರನ್ನು ಗುರುತಿಸಿ ಅವರಿಗೆ ನಾಗರಿಕ ಪ್ರಶಸ್ತಿಗಳನ್ನು ಕೂಡ ಘೋಷಣೆ ಮಾಡಲಾಗುತ್ತದೆ. ಇದರ ಜತೆಗೆ, ಶೌರ್ಯ, ಸಾಹಸ ಪ್ರದರ್ಶಿಸಿದ ಸೇನಾ ಯೋಧರು, ಅಧಿಕಾರಿಗಳು ಮತ್ತು ಪೊಲೀಸರಿಗೂ ಕ್ರಮವಾಗಿ ಸೇನಾ ಹಾಗೂ ಪೊಲೀಸ್ ಪದಕ, ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. ಯಾವೆಲ್ಲ ಪ್ರಶಸ್ತಿ, ಪದಕ, ಪುರಸ್ಕಾರಗಳನ್ನು ಘೋಷಿಸಲಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ(Padma Awards).

ಭಾರತರತ್ನ

ಇದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಈ ಗೌರವವನ್ನು ನೀಡಲಾಗುತ್ತದೆ. ಭಾರತದ ಪ್ರಧಾನಿಗಳ ಶಿಫಾರಸು ಆಧರಿಸಿ, ರಾಷ್ಟ್ರಪತಿಗಳು ಭಾರತರತ್ನ ಪ್ರಶಸ್ತಿಯನ್ನು ಘೋಷಿಸಿತ್ತಾರೆ. ಭಾರತೀಯರು ಹಾಗೂ ವಿದೇಶಿ ಪ್ರಜೆಗಳಿಗೂ ಘೋಷಣೆ ಮಾಡಬಹುದು.

ಪದ್ಮ ಪ್ರಶಸ್ತಿಗಳು

ಭಾರತದಲ್ಲಿ ಪದ್ಮ ಪ್ರಶಸ್ತಿಗಳಿಗೆ ವಿಶೇಷ ಗೌರವವಿದೆ. ಗಣರಾಜ್ಯೋತ್ಸವದ ಹಿಂದಿನ ಈ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತದೆ. ಈ ಪ್ರಶಸ್ತಿಯನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂದು ವರ್ಗೀಕರಿಸಲಾಗಿದೆ. ಪದ್ಮ ಪ್ರಶಸ್ತಿಗಳ ಘೋಷಣೆಗೆ ಸಮಿತಿಯನ್ನು ಪ್ರತಿ ವರ್ಷ ಪ್ರಧಾನಿಗಳು ರಚಿಸುತ್ತಾರೆ. ಅದರ ಶಿಫಾರಸುಗಳ ಅನ್ವಯ ಘೋಷಿಸಲಾಗುತ್ತದೆ.

ಗ್ಯಾಲಂಟ್ರಿ ಅವಾರ್ಡ್ಸ್

ಈ ಪ್ರಶಸ್ತಿಗಳನ್ನು ಶೌರ್ಯ ತೋರಿಸಿದ ಸೇನಾಧಿಕಾರಿಗಳು, ಯೋಧರಿಗೆ ನೀಡಿ ಗೌರವಿಸಲಾಗುತ್ತದೆ. 1950ರಲ್ಲಿ ಮೊದಲ ಬಾರಿಗೆ ಪರಮ ವೀರ ಚಕ್ರ, ಮಹಾ ವೀರ ಚಕ್ರ ಮತ್ತು ವೀರ ಚಕ್ರ ಎಂಬ ಮೂರು ಗ್ಯಾಲಂಟ್ರಿ ಪ್ರಶಸ್ತಿ ಸ್ಥಾಪಿಸಲಾಯಿತು. ಮತ್ತೆ 1952ರಲ್ಲಿ ಕೇಂದ್ರ ಸರ್ಕಾರವು ಹೆಚ್ಚುವರಿಯಾಗಿ ಅಶೋಕ ಚಕ್ರ, ಕ್ಲಾಸ್ 1, ಕ್ಲಾಸ್ 2 ಮತ್ತು ಕ್ಲಾಸ್ 3 ಗ್ಯಾಲಂಟ್ರಿ ಪ್ರಶಸ್ತಿ ನೀಡಲಾರಂಭಿಸಿತು. ಆ ನಂತರ, ಈ ಪ್ರಶಸ್ತಿಗಳಿಗೆ ಕ್ರಮವಾಗಿ ಅಶೋಕ ಚಕ್ರ, ಕೀರ್ತಿ ಚಕ್ರ ಮತ್ತು ಶೌರ್ಯ ಚಕ್ರ ಎಂದು ಹೆಸರಿಸಲಾಯಿತು.

ಪ್ರೆಸಿಡೆಂಟ್ಸ್ ಪೊಲೀಸ್ ಮೆಡಲ್ಸ್

ಈ ಪ್ರಶಸ್ತಿಗಳನ್ನು 1951 ಮಾರ್ಚ್ 1ರಂದು ಸ್ಥಾಪಿಸಲಾಯಿತು. ಯಾವುದೇ ಶ್ರೇಣಿ ಅಥವಾ ಸೇವಾ ಹಿರಿತನವನ್ನು ಲೆಕ್ಕಕ್ಕೆ ಪರಿಗಣಿಸದೇ, ಕೇವಲ ಅತ್ಯುತ್ತಮ ಕರ್ತವ್ಯವನ್ನು ಗುರುತಿಸಿ ಈ ಪದಕಗಳನ್ನು ಪೊಲೀಸರಿಗೆ ಘೋಷಣೆ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

18 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳ ಅತ್ಯುತ್ತಮ ಸಾಧನೆ ಗುರುತಿಸಿ ಈ ಪುರಸ್ಕಾರ ನೀಡಲಾಗುತ್ತದೆ. ಸಂಶೋಧನೆ, ಶೈಕ್ಷಣಿಕ ಅಥವಾ ಸಾಮಾಜಿಕ ಸೇವೆಗಳಾದ ಕಲೆ, ಶೌರ್ಯ ಅಥವಾ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ತೋರಿದವರಿಗೆ ನೀಡಿ ಗೌರವಿಸಲಾಗುತ್ತದೆ.

ಜೀವನ ರಕ್ಷಾ ಪದಕ

ಸರ್ವೋತ್ತಮ ಜೀವನ ರಕ್ಷಕ ಪದಕ, ಉತ್ತಮ ಜೀವನ ರಕ್ಷಾ ಪದಕ ಮತ್ತು ಜೀವನ ರಕ್ಷಾ ಪದಕ.. ಹೀಗೆ ಮೂರು ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಮತ್ತೊಬ್ಬರ ಜೀವವನ್ನು ಕಾಪಾಡಿದವರಿಗೆ ಈ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ.

ಕರೆಕ್‌ಷನಲ್ ಸರ್ವೀಸ್ ಮೆಡಲ್ಸ್

ವಿಶಿಷ್ಟ ಸೇವೆ, ಶ್ಲಾಘನೀಯ ಸೇವೆ ಹಾಗೂ ಗ್ಯಾಲಂಟ್ರಿಯಾಗಿ ಈ ಕರೆಕ್‌ಷನಲ್ ಸರ್ವೀಸ್ ಪದಕಗಳನ್ನು ಘೋಷಿಸಲಾಗುತ್ತದೆ. ಭಾರತದ ರಾಷ್ಟ್ರಪತಿಗಳು ಜೈಲು ಸಿಬ್ಬಂದಿಗೆ ಈ ಪ್ರಶಸ್ತಿಗಳನ್ನು ಪ್ರಕಟಿಸುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading

ಪ್ರಮುಖ ಸುದ್ದಿ

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai Spa
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ (Mumbai) ವೊರ್ಲಿ ಪ್ರದೇಶದ ಸ್ಪಾ (Spa) ಒಂದರಲ್ಲಿ ಕೊಲೆಯಾದ ವ್ಯಕ್ತಿಯ ಮೈಮೇಲೆ ಇದ್ದ ಟ್ಯಾಟೂ, ಟ್ಯಾಟೂ ಹಾಕಿಸಿಕೊಂಡ ಹೆಸರುಗಳು ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಟ್ಯಾಟೂ (Tattoo) ಹೆಸರುಗಳೇ ಹಿಸ್ಟರಿ ಶೀಟರ್‌ ಗುರು ವಾಘ್ಮರೆಯ ಕೊಲೆ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ, ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವೀಗ ದೇಶಾದ್ಯಂತ ಸುದ್ದಿಯಾಗಿದೆ.

ಗುರು ವಾಘ್ಮರೆಯನ್ನು ಜುಲೈ 24ರಂದು ಸ್ಪಾನಲ್ಲಿ ಕೊಲೆ ಮಾಡಲಾಗಿದೆ. ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Mumbai Spa
Mumbai Spa

ಟ್ಯಾಟೂ ಹೆಸರುಗಳೇ ಕೇಸ್‌ ಭೇದಿಸಲು ಕಾರಣ

ಗುರು ವಾಘ್ಮರೆಯು ಆರ್‌ಟಿಇ ಕಾರ್ಯಕರ್ತನೂ ಆಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈತನು ಹಿಸ್ಟರಿ ಶೀಟರ್‌ ಕೂಡ ಆಗಿದ್ದಾನೆ. ಆದರೆ, ಹತ್ಯೆಗೀಡಾಗುವ ಮುನ್ನ ಅಪಾಯದ ಮುನ್ಸೂಚನೆ ಅರಿತಿದ್ದ ಗುರು ವಾಘ್ಮರೆಯು ತನಗಿದ್ದ 22 ವೈರಿಗಳ ಹೆಸರುಗಳನ್ನು ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಪೋಸ್ಟ್‌ ಮಾರ್ಟಮ್‌ ಮಾಡುವ ವೇಳೆ ತೊಡೆಯ ಮೇಲೆ ಕಾಣಿಸಿದ ಹೆಸರುಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಗುರು ವಾಘ್ಮರೆಯು ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ಗೆ ಹಣಕ್ಕಾಗಿ ಪೀಡಿಸುವುದು, ಬೆದರಿಕೆ ಹಾಕುವುದು ಸೇರಿ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಸಂತೋಷ್‌, ಗುರು ವಾಘ್ಮರೆಯ ಹತ್ಯೆಗೆ ಸುಪಾರಿ ನೀಡಿದ್ದ ಎಂದು ತಿಳಿದುಬಂದಿದೆ. ಗುರು ವಾಘ್ಮರೆಯನ್ನು ಕೊಲ್ಲಲು ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೆ ಸಂತೋಷ್‌ 6 ಲಕ್ಷ ರೂ. ನೀಡಿದ್ದ ಎನ್ನಲಾಗಿದೆ.

ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೂ ಗುರು ಮೇಲೆ ಸೇಡಿತ್ತು. ಕಳೆದ ವರ್ಷ ಮುಂಬೈನ ನಲ್ಲಾಸೋಪರ ಬಳಿಯಲ್ಲಿದ್ದ ಮೊಹಮ್ಮದ್‌ ಫಿರೋಜ್‌ ಅನ್ಸಾರಿ ಒಡೆತನದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಅದನ್ನು ಸ್ಥಗಿತಗೊಳಿಸಿದ್ದರು. ಗುರು ವಾಘ್ಮರೆ ನೀಡಿದ ದೂರಿನಿಂದಾಗಿಯೇ ಸ್ಪಾ ಸ್ಥಗಿತಗೊಂಡಿತ್ತು. ಹಾಗಾಗಿ, ಅನ್ಸಾರಿಯು ಕೆಲವರೊಂದಿಗೆ ಸೇರಿ ಗುರು ವಾಘ್ಮರೆಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

Latest

Teacher Suspended: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

Teacher Suspended: ರಾಜಸ್ಥಾನದಲ್ಲಿ ಶಿಕ್ಷಕಿ ದಾಮೋರ್ ಎಂಬುವರು ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದರು. ಇಂದಿನಿಂದ ಎಲ್ಲಾ ಉಪವಾಸ ಆಚರಿಸುವುದನ್ನು ನಿಲ್ಲಿಸಿ, ನಾವು ಹಿಂದೂಗಳಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.

VISTARANEWS.COM


on

Teacher Suspended
Koo


ಹಿಂದೂ ಧರ್ಮದಲ್ಲಿ ಸಿಂಧೂರ ಮತ್ತು ಮಂಗಳಸೂತ್ರವನ್ನು ಮದುವೆಯಾದ ಹೆಣ್ಣುಮಕ್ಕಳು ಧರಿಸಬೇಕು ಎಂಬ ಸಂಪ್ರದಾಯವಿದೆ. ಇದು ಬಹಳ ಹಿಂದಿನ ಕಾಲದಿಂದಲೂ ಬಂದಂತಹ ಸಂಪ್ರದಾಯ. ಇಂದಿಗೂ ಬಹುತೇಕ ಸಂಪ್ರದಾಯಸ್ಥ ಕುಟುಂಬದ ಹೆಣ್ಣುಮಕ್ಕಳು ಈ ನಿಯಮವನ್ನು ಪಾಲಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಪಾಶ್ಚಿಮಾತ್ಯರ ಜೀವನಶೈಲಿಯನ್ನು ಅನುಸರಿಸುತ್ತಾ ಈ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆ ಇಂತಹ ಸಂಪ್ರದಾಯವನ್ನು ಪಾಲಿಸದಂತೆ ಶಿಕ್ಷಕಿಯೊಬ್ಬರು ಜನರಿಗೆ ಸಲಹೆ ನೀಡಿದ್ದಾರೆ. ರಾಜಸ್ಥಾನದ ಮಹಿಳಾ ಶಿಕ್ಷಕಿ ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಮತ್ತು ಮಂಗಳಸೂತ್ರವನ್ನು ಧರಿಸದಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನತು( Teacher Suspended)ಗೊಳಿಸಿದೆ ಎಂದು ವರದಿಯಾಗಿದೆ.

ಜುಲೈ 19ರಂದು ಬನ್ಸ್ವಾರಾದ ಮಂಗರ್ ಧಾಮ್‍ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶಿಕ್ಷಕಿ ದಾಮೋರ್ ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದರು. ಶಿಕ್ಷಕಿ ಮೇನಕಾ ದಾಮೋರ್ ತಮ್ಮ ಭಾಷಣದಲ್ಲಿ, “ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಹಚ್ಚುವುದಿಲ್ಲ, ಅವರು ಮಂಗಳಸೂತ್ರವನ್ನು ಧರಿಸುವುದಿಲ್ಲ. ಬುಡಕಟ್ಟು ಸಮಾಜದಲ್ಲಿ ಮಹಿಳೆಯರು ಮತ್ತು ಹುಡುಗಿಯರು ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಂದಿನಿಂದ, ಎಲ್ಲಾ ಉಪವಾಸಗಳನ್ನು ಆಚರಿಸುವುದನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ” ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಾಗಿದೆ.

Teacher Suspended
Teacher Suspended

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಶಿಕ್ಷಕಿ ದಾಮೋರ್ ಅವರನ್ನು ಅಮಾನತುಗೊಳಿಸಿದ್ದಾರೆ. ರಾಜಸ್ಥಾನ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಶಿಕ್ಷಣ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದ ಮೇಲೆ ದಾಮೋರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಶಿಕ್ಷಕಿ ಮೇನಕಾ ದಾಮೋರ್ ಅವರು ಆದಿವಾಸಿ ಪರಿವಾರ ಸಂಸ್ಥೆಯ (Adivasi Parivar Sanstha )ಸ್ಥಾಪಕಿಯಾಗಿ ಹೆಸರುವಾಸಿಯಾಗಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ಸಾದಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

ಮಂಗರ್ ಧಾಮ್‍ನಲ್ಲಿ ನಡೆದ ರ್ಯಾಲಿ ವಿಶಾಲವಾದ ಸಾಮಾಜಿಕ-ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲು ವೇದಿಕೆಯಾಯಿತು. ಇದು ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಬುಡಕಟ್ಟು ಸಮುದಾಯಗಳಿಂದ ಸಾವಿರಾರು ಜನರು ಇದರಲ್ಲಿ ಭಾಗವಹಿಸುತ್ತಾರೆ. ದಾಮೋರ್ ಅವರ ವಿವಾದಾತ್ಮಕ ಭಾಷಣದ ಜೊತೆಗೆ, ಭಿಲ್ ರಾಜ್ಯವನ್ನು ರಚಿಸಬೇಕೆಂದು ಪ್ರತಿಪಾದಿಸುವ ರಾಜಕೀಯ ನಿರ್ಣಯವನ್ನು ಸಹ ಈ ಸಂದರ್ಭದಲ್ಲಿ ಅಂಗೀಕರಿಸಲಾಯಿತು ಎನ್ನಲಾಗಿದೆ.

Continue Reading
Advertisement
Family Drama Film Review
ಸಿನಿಮಾ12 mins ago

Family Drama Film Review: ಹೊಸ ಅನುಭವ ನೀಡುವ ಫ್ಯಾಮಿಲಿ ಡ್ರಾಮಾ

Michel Phelps ರಾಜಮಾರ್ಗ ಅಂಕಣ
ಅಂಕಣ36 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ50 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ1 hour ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌