Kashmir | ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುಎಇ ಮಧ್ಯಸ್ಥಿಕೆ ವಹಿಸಲಿ: ಪಾಕ್ ಪ್ರಧಾನಿ - Vistara News

ದೇಶ

Kashmir | ಕಾಶ್ಮೀರ ಸಮಸ್ಯೆ ಬಗೆಹರಿಸಲು ಯುಎಇ ಮಧ್ಯಸ್ಥಿಕೆ ವಹಿಸಲಿ: ಪಾಕ್ ಪ್ರಧಾನಿ

ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ (Kashmir) ಸಮಸ್ಯೆಗೆ ಸಂಬಂಧಿಸಿದಂತೆ ಮಾತುಕತೆಗೆ ಯುಎಇ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕ್ ಪ್ರಧಾನಿ ಹೇಳಿದ್ದಾರೆ.

VISTARANEWS.COM


on

Shehbaz Sharif
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಾಕಿಸ್ತಾನ- ಭಾರತದ ನಡುವಿನ ಕಾಶ್ಮೀರ ಸಮಸ್ಯೆ (Kashmir) ಬಗೆಹರಿಸಲು ಯುಎಇ ಮಧ್ಯಸ್ಥಿಕೆ ವಹಿಸಬೇಕೆಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಯುಎಇ (ದುಬೈ) ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರಿಗೆ, ಎರಡು ದೇಶಗಳನ್ನು ಮಾತುಕತೆ ಟೇಬಲ್‌ಗೆ ಕರೆತರುವಂತೆ ಮನವಿ ಮಾಡಿರುವುದಾಗಿ ಶೆಹಬಾಜ್ ಷರೀಫ್ ಹೇಳಿದ್ದಾರೆ.

ನಾನು ಯುಎಇ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಅವರು ಪಾಕಿಸ್ತಾನದ ಸಹೋದರ. ಹಾಗೆಯೇ ಭಾರತದೊಂದಿಗೂ ಅವರು ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಉಭಯ ರಾಷ್ಟ್ರಗಳ ನಡುವಿನ ಮಾತುಕತೆ ಯಶಸ್ವಿಯಾಗಲು ಅವರು ಪ್ರಮುಖ ಪಾತ್ರ ನಿರ್ವಹಣೆ ಮಾಡಬಹುದು ಎಂದು ನಾನು ಹೇಳಿದ್ದೇನೆ.

ನಾವು(ಭಾರತ-ಪಾಕಿಸ್ತಾನ) ಅಣ್ವಸ್ತ್ರ ರಾಷ್ಟ್ರಗಳಾಗಿದ್ದೇವೆ. ಒಂದೊಮ್ಮೆ ಯುದ್ಧ ಸಂಭವಿಸಿದರೆ, ಏನಾಗಿತ್ತು ಎಂದು ಹೇಳಲು ಯಾರೂ ಉಳಿದಿರುವುದೇ ಇಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದಕ್ಕೂ ಮೊದಲು ಅವರು, ಭಾರತದ ಜತೆಗೆ ಯುದ್ಧ ಬದಲಿಗೆ ಮಾತುಕತೆ ಪಾಕಿಸ್ತಾನವು ಸಿದ್ಧವಾಗಿದೆ ಎಂದು ಹೇಳಿದ್ದರು. ಅಲ್-ಅರೇಬಿಯಾ ಟೆಲಿವಿಷನ್‌ಗೆ ನೀಡಿದ ಸಂದರ್ಶನದಲ್ಲಿ, ಷರೀಫ್ ಅವರು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಟ್ಟಿಗೆ ಕುಳಿತು ಕಾಶ್ಮೀರ ಸೇರಿದಂತೆ ಸಮಸ್ಯೆಗಳನ್ನು ಪರಿಹರಿಸಲು ಅವಕಾಶ ಕೋರಿದ್ದರು.

ಇದನ್ನೂ ಓದಿ | Shehbaz Sharif | ಮೋದಿ ಜತೆಗೆ ಮುಕ್ತ ಮಾತುಕತೆಗೆ ಸಿದ್ಧ, ಯುದ್ಧ ಮಾತ್ರ ಬೇಡವೇ ಬೇಡ ಎಂದ ಪಾಕ್‌ ಪ್ರಧಾನಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಡಿಜಿಟಲ್‌ ಇಂಡಿಯಾ ಬಗೆಗೆ ಬಿಲ್‌ ಗೇಟ್ಸ್‌ ಪ್ರಶಂಸೆ ಸ್ಫೂರ್ತಿದಾಯಕ

ʼಡಿಜಿಟಲ್ ಇಂಡಿಯಾʼದ ಮೂಲ ಉದ್ದೇಶಕ್ಕೆ ಚ್ಯುತಿ ಬರದಂತೆ ನಡೆಸಿಕೊಂಡು ಹೋದರೆ ಮುಂಬರುವ ದಿನಗಳಲ್ಲಿ ಜಗತ್ತಿನ ಇತರ ದೇಶಗಳಿಗೆ ಭಾರತ ಮಾದರಿ ದೇಶವಾಗಿ ನಿಲ್ಲಬಹುದು. ಆದರೆ ಇದರಲ್ಲಿರುವ ಕೆಲವು ಅನನುಕೂಲಗಳು ಮತ್ತು ವಂಚನೆಯ ಸಾಧ್ಯತೆಗಳೂ ಇದ್ದು, ಇವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕಿದೆ.

VISTARANEWS.COM


on

Modi and billgates
Koo

ಭಾರತ ಭೇಟಿಯಲ್ಲಿರುವ ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್‌ ಗೇಟ್ಸ್‌ (Bill Gates) ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಭಾರತದ ಅಭಿವೃದ್ಧಿ, ಕೃತಕ ಬುದ್ಧಿಮತ್ತೆಯ ಬಳಕೆ, ತಂತ್ರಜ್ಞಾನದ ಬಳಕೆ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದರು. ಈ ವೇಳೆ ಬಿಲ್‌ ಗೇಟ್ಸ್‌ ಅವರು ಭಾರತದ ಡಿಜಿಟಲ್‌ ತಂತ್ರಜ್ಞಾನದ ಅಳವಡಿಕೆ, ಜಾರಿ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬಳಕೆ, ಪ್ರಾಮುಖ್ಯತೆ ಕುರಿತು ನರೇಂದ್ರ ಮೋದಿ ಅವರು ಬಿಲ್‌ ಗೇಟ್ಸ್‌ ಅವರಿಗೆ ವಿವರಿಸಿದ್ದಾರೆ. “ಭಾರತವು ಡಿಜಿಟಲ್‌ ಮೂಲ ಸೌಕರ್ಯಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಿದೆ. ಮಹಿಳೆಯರು ಕೂಡ ಆನ್‌ಲೈನ್‌ ಪಾವತಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದಾರೆ. ತಂತ್ರಜ್ಞಾನದ ಅಳವಡಿಕೆಯಲ್ಲಿ ಭಾರತವು ಮುಂದಿದೆ” ಎಂದು ಬಿಲ್‌ ಗೇಟ್ಸ್‌ ಹೇಳಿದ್ದಾರೆ.

ʼಡಿಜಿಟಲ್‌ ಇಂಡಿಯಾʼ ಎಂಬುದು ಒಂದು ದೂರಗಾಮಿ ಕನಸು. ಡಿಜಿಟಲ್‌ ಪಾವತಿಯಲ್ಲಂತೂ ಭಾರತವೇ ಕಿಂಗ್.‌ 2022ರ ಅಂಕಿ ಅಂಶಗಳ ಪ್ರಕಾರ, ಡಿಜಿಟಲ್ ಪೇಮೆಂಟ್ಸ್‌ನಲ್ಲಿ ಭಾರತವು ನಾಲ್ಕು ರಾಷ್ಟ್ರಗಳನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಿದೆ. 2022ರಲ್ಲಿ 8.95 ಕೋಟಿ ಡಿಜಿಟಲ್ ಪಾವತಿಗಳಾಗಿವೆ. ಜಾಗತಿಕವಾಗಿ ನಡೆಯುವ ರಿಯಲ್‌ ಟೈಮ್ ಡಿಜಿಟಲ್ ಪೇಮೆಂಟ್‌ಗಳಿಗೆ ಭಾರತದ ಕೊಡುಗೆಯೇ ಶೇ.46ರಷ್ಟಾಗುತ್ತದೆ! ಭಾರತೀಯ ರಿಸರ್ವ್ ಬ್ಯಾಂಕಿನ ತಜ್ಞರ ಪ್ರಕಾರ, ಭಾರತದ ಡಿಜಿಟಲ್ ಪಾವತಿ ವಲಯವು ಮೌಲ್ಯ ಮತ್ತು ಪರಿಮಾಣ ಎರಡರಲ್ಲೂ ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇದು ದೇಶದ ಪಾವತಿ ಪರಿಸರ ವ್ಯವಸ್ಥೆಯ ಶಕ್ತಿ ಮತ್ತು ವ್ಯಾಪಕವಾದ ಸ್ವೀಕಾರವನ್ನು ಎತ್ತಿ ತೋರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಡಿಜಿಟಲ್ ವ್ಯವಹಾರಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಅದರ ಪರಿಣಾಮವೇ ಈಗ ಈ ಸಾಧನೆ ಮಾಡಲು ಸಾಧ್ಯವಾಗಿದೆ.

ಇದೇನೂ ಸುಲಭದ ನಡಿಗೆಯಾಗಿರಲಿಲ್ಲ. ಭಾರತದಲ್ಲಿ ಬಡವರು, ಅನಕ್ಷರಸ್ಥರೇ ಹೆಚ್ಚಿದ್ದಾರೆ. ಅವರೆಲ್ಲ ನೋಟು ಬಳಸದೆ ಡಿಜಿಟಲ್ ವ್ಯವಹಾರ ನಡೆಸಲು ಹೇಗೆ ಸಾಧ್ಯ ಎಂಬ ಬಗ್ಗೆ ವ್ಯಾಪಕ ಟೀಕೆಯೂ ವ್ಯಕ್ತವಾಗಿತ್ತು. ಆದರೆ ಇದಕ್ಕೆ ವ್ಯತಿರಿಕ್ತವಾಗಿ ದೇಶದ ಸಾಮಾನ್ಯ ಜನರೇ ಹೆಚ್ಚಿನ ಪ್ರಮಾಣದಲ್ಲಿ ಡಿಜಿಟಲ್ ವಹಿವಾಟಿಗೆ ಇಳಿದರು. ಎಳನೀರು ಮಾರುವವರು, ಚಪ್ಪಲಿ ಹೊಲಿಯುವವರು, ರಸ್ತೆ ಬದಿ ತರಕಾರಿ ಮಾರುವವರೂ ಈಗ QR ಕೋಡ್ ಬಳಸಿ ಡಿಜಿಟಲ್ ಮೂಲಕವೇ ವ್ಯವಹರಿಸುತ್ತಿದ್ದಾರೆ. ಡಿಜಿಟಲ್‌ ಪಾವತಿಯಿಂದ ಅನುಕೂಲಗಳು ಸಾಕಷ್ಟಿವೆ. ಸರ್ಕಾರಿ ಯೋಜನೆಗಳು ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿರುವುದು ಈ ಪಾವತಿ ಮೂಲಕವೇ ಆಗಿವೆ. ತೆರಿಗೆ ವಂಚನೆ ತಡೆಗಟ್ಟಲು ಸಾಧ್ಯವಾಗಿದೆ. ಭವಿಷ್ಯದಲ್ಲಿ ಎಲ್ಲ ಹಣದ ವಹಿವಾಟುಗಳೂ ಡಿಜಿಟಲ್‌ ಆಗಿಬಿಡುವ ಸಂಭವ ಇರುವುದರಿಂದ, ನಾವು ಆ ಹಾದಿಯಲ್ಲಿ ಶೀಘ್ರ ಹೆಜ್ಜೆ ಹಾಕುತ್ತಿದ್ದೇವೆ ಎಂದು ಹೆಮ್ಮೆ ಪಟ್ಟುಕೊಳ್ಳಬಹುದು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

ಆನ್‌ಲೈನ್ ಮೂಲಸೌಕರ್ಯ ಸುಧಾರಣೆ ಮತ್ತು ಇಂಟರ್ನೆಟ್ ಸಂಪರ್ಕವನ್ನು ಹೆಚ್ಚಿಸುವ ಮೂಲಕ ಸರ್ಕಾರಿ ಸೇವೆಗಳನ್ನು ವಿದ್ಯುನ್ಮಾನವಾಗಿ ನಾಗರಿಕರಿಗೆ ಲಭ್ಯವಾಗುವಂತೆ ಮಾಡಲು ಭಾರತ ಸರ್ಕಾರ ಡಿಜಿಟಲ್ ಇಂಡಿಯಾ ಅಭಿಯಾನವನ್ನು ಪ್ರಾರಂಭಿಸಿತು. ತಂತ್ರಜ್ಞಾನದ ಡೊಮೇನ್‌ನಲ್ಲಿ ದೇಶವನ್ನು ಡಿಜಿಟಲ್ ಆಗಿ ಸಶಕ್ತಗೊಳಿಸುವ ಗುರಿಯನ್ನು ಹೊಂದಿರುವ ಇದನ್ನು ಪ್ರಧಾನಿ ಮೋದಿ 2015ರಲ್ಲಿ ಆರಂಭಿಸಿದ್ದರು. ಡಿಜಿಟಲ್ ಇಂಡಿಯಾ ಮಿಷನ್ ದೇಶದ ಗ್ರಾಮೀಣ ಪ್ರದೇಶಗಳನ್ನು ಹೈಸ್ಪೀಡ್ ಇಂಟರ್ನೆಟ್ ನೆಟ್‌ವರ್ಕ್‌ಗಳೊಂದಿಗೆ ಸಂಪರ್ಕಿಸುವ ಯೋಜನೆಗಳನ್ನು ಒಳಗೊಳ್ಳುವ ಒಂದು ಉಪಕ್ರಮ. ಡಿಜಿಟಲ್ ಅಳವಡಿಕೆಯ ವೇದಿಕೆಯಲ್ಲಿ ಜಾಗತಿಕವಾಗಿ ಅಗ್ರ 2 ದೇಶಗಳಲ್ಲಿ ಭಾರತ ಸ್ಥಾನ ಪಡೆದಿದೆ.

ಡಿಜಿಟಲ್ ಇಂಡಿಯಾ ಉಪಕ್ರಮದಿಂದ ಸಮಾಜದಲ್ಲಿ ಹಣದ ವಹಿವಾಟಿನಲ್ಲಿ ಪಾರದರ್ಶಕತೆ ಬರುತ್ತದೆ. ಸರ್ಕಾರಿ ಕೆಲಸಗಳು ಸೇರಿದಂತೆ ಹಲವು ಹತ್ತು ಕ್ಷೇತ್ರದಲ್ಲಿ ನಡೆಯುವ ಕೆಲಸಗಳು ಪಾರ್ದರ್ಶಕ ಹಾಗೂ ಚುರುಕಾಗುತ್ತವೆ. ಒಟ್ಟಾರೆಯಾಗಿ ಜನಜೀವನದ ಮಟ್ಟ ಸುಧಾರಿಸುತ್ತದೆ. ಗ್ಯಾಸ್ ಸಬ್ಸಿಡಿ, ಪಿಂಚಣಿ, ಆರೋಗ್ಯ ವಿಮೆ ಇತ್ಯಾದಿಗಳಲ್ಲಿ ಆಗುತ್ತಿದ್ದ ವಿಳಂಬ ಮತ್ತು ಹಣಕಾಸು ಏರುಪೇರುಗಳು ಇಲ್ಲವೆನ್ನುವಷ್ಟು ಕಡಿಮೆಯಾಗಿವೆ. ʼಡಿಜಿಟಲ್ ಇಂಡಿಯಾʼದ ಮೂಲ ಉದ್ದೇಶಕ್ಕೆ ಚ್ಯುತಿ ಬರದಂತೆ ನಡೆಸಿಕೊಂಡು ಹೋದರೆ ಮುಂಬರುವ ದಿನಗಳಲ್ಲಿ ಜಗತ್ತಿನ ಇತರ ದೇಶಗಳಿಗೆ ಭಾರತ ಮಾದರಿ ದೇಶವಾಗಿ ನಿಲ್ಲಬಹುದು. ಆದರೆ ಇದರಲ್ಲಿರುವ ಕೆಲವು ಅನನುಕೂಲಗಳು ಮತ್ತು ವಂಚನೆಯ ಸಾಧ್ಯತೆಗಳೂ ಇದ್ದು, ಇವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕು.

Continue Reading

ಪ್ರಮುಖ ಸುದ್ದಿ

ISIS Threat : ಭಾರತಕ್ಕೆ ಎದುರಾಗಿದೆ ಐಸಿಸ್​ ಉಗ್ರರ ದಾಳಿಯ ಬೆದರಿಕೆ

 ISIS Threat: ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನ್ ಪ್ರಾವಿನ್ಸ್ ನ (ಐಎಸ್​ಪಿಪಿ) ಇತ್ತೀಚೆಗೆ ಭಾರತಕ್ಕೆ ಬೆದರಿಕೆ ಒಡ್ಡಿದ್ದು, ಅದು ಕೂಡ ಗಂಭೀರ ವಿಷಯ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲಿಬಾನ್ ದುರ್ಬಲಗೊಂಡ ನಂತರ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮತ್ತು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಕೈಜೋಡಿಸಿವೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

ISIS Terroirst- ISIS Threat
Koo

ಬೆಂಗಳೂರು: ಭಾರತಕ್ಕೆ ಐಸಿಸಿ ಸೇರಿದಂತೆ ಇಸ್ಲಾಮಿಕ್ ಭಯೋತ್ಪಾದಕ ಗುಂಪುಗಳಿಂದ ಬೆದರಿಕೆ (ISIS Threat) ಇವೆ ಎಂಬುದಾಗಿ ಗುಪ್ತಚರ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರ ಕೆಫೆ ಸ್ಫೋಟದಂಥ (Rameshwar cafe Blast) ಘಟನೆಗಳು ತೀವ್ರಗಾಮಿ ಗುಂಪುಗಳ ಕಾರ್ಯಾಚರಣೆಗೆ ಸಾಕ್ಷಿ ಒದಗಿಸುತ್ತಿದೆ. ಖಂಡಿತವಾಗಿಯೂ ಜಾಗತಿಕ ಭಯೋತ್ಪಾದಕ ಗುಂಪಿನಿಂದ ಬೆದರಿಕೆ ಎಂದು ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿವೆ.

ಇಸ್ಲಾಮಿಕ್ ಸ್ಟೇಟ್ ಪಾಕಿಸ್ತಾನ್ ಪ್ರಾವಿನ್ಸ್ ನ (ಐಎಸ್​ಪಿಪಿ) ಇತ್ತೀಚೆಗೆ ಭಾರತಕ್ಕೆ ಬೆದರಿಕೆ ಒಡ್ಡಿದ್ದು, ಅದು ಕೂಡ ಗಂಭೀರ ವಿಷಯ ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲಿಬಾನ್ ದುರ್ಬಲಗೊಂಡ ನಂತರ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಮತ್ತು ಪಾಕಿಸ್ತಾನದ ಗೂಢಚಾರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಕೈಜೋಡಿಸಿವೆ ಎಂದು ಮೂಲಗಳು ತಿಳಿಸಿವೆ.

ಐಎಸ್​​ಪಿಪಿಯೊಂದಿಗೆ ಸಂಯೋಜಿತವಾಗಿರುವ ನಶೀರ್ ಮೀಡಿಯಾ ಬಿಡುಗಡೆ ಮಾಡಿದ ಪೋಸ್ಟರ್​ನಲ್ಲಿ ಅಬ್ ಕಿಸ್ಕಿ ಬಾರಿ ಹೈ (ಯಾರು ಮುಂದಿನವರು) ಎಂದು ಬರೆಯಲಾಗಿದೆ. ಇದು ಭಾರತ, ಅಮೆರಿಕ , ಚೀನಾ ಮತ್ತು ಡೆನ್ಮಾರ್ಕ್​ಗೆ ಬೆದರಿಕೆ ಎಂದು ಹೇಳಲಾಗಿದೆ. ಅದೇ ರೀತಿ ಇತ್ತೀಚೆಗೆ ರಷ್ಯಾದ ಮಾಸ್ಕೋ ಮತ್ತು ಅಫಘಾನಿಸ್ತಾನದ ಕಂದಹಾರ್ ದಾಳಿಯೂ ಉಗ್ರರ ಜಾಗತಿಕ ಚಲನವಲನಕ್ಕೆ ಸಾಕ್ಷಿಯಾಗಿದೆ.

ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಉನ್ನತ ನಾಯಕತ್ವ ಮತ್ತು ಅದರ ಸರ್ವೋಚ್ಚ ನಾಯಕ ಮುಲ್ಲಾ ಹಿಬತುಲ್ಲಾ ಅಖುಂದ್ಜಾದಾ ಅವರನ್ನು ಗುರಿಯಾಗಿಸಿಕೊಂಡು ಮಾರ್ಚ್ 21 ರಂದು ಐಸಿಸ್ ದಾಳಿ ನಡೆಸಿತ್ತು. ಮರುದಿನ, ಬಂದೂಕುಧಾರಿಗಳು ರಷ್ಯಾದ ಮಾಸ್ಕೋದ ಕ್ರೋಕಸ್ ಸಿಟಿ ಹಾಲ್​ನಲ್ಲಿ ಆಯೋಜನೆಗೊಂಡಿದ್ದ ಸಂಗೀತ ಕಚೇರಿಗಳಿಗೆ ಹೋಗುವವರನ್ನು ಕಗ್ಗೊಲೆ ಮಾಡಿದ್ದರು. ಕನಿಷ್ಠ 130 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

“ನಾವು ಈ ಬೆದರಿಕೆಯನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ಭಾರತೀಯ ಗುಪ್ತಚರ ಅಧಿಕಾರಿಯೊಬ್ಬರು ಸಿಎನ್ಎನ್-ನ್ಯೂಸ್ 18 ಗೆ ತಿಳಿಸಿದ್ದಾರೆ. “ನಿರ್ದಿಷ್ಟ ಸಮುದಾಯದ ಭಾರತೀಯ ಯುವಕರನ್ನು ನಿಯಮಿತವಾಗಿ ಪ್ರಚೋದಿಸಲು ಐಸಿಸ್ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ. ರಾಜ್ಯ ಪೊಲೀಸರ ಸಹಾಯದಿಂದ ನಿಯಮಿತವಾಗಿ ಭಾರತದ ಮೇಲೆ ದಾಳಿ ಮಾಡುವ ಅವರ ಸಾಮರ್ಥ್ಯವನ್ನು ನಾವು ನಾಶಪಡಿಸುತ್ತಿದ್ದೇವೆ. ನಾವು ಹೆಚ್ಚಿನ ಎಚ್ಚರಿಕೆ ವಹಿಸಿದ್ದೇವೆ ಮತ್ತು ಈ ಚಟುವಟಿಕೆಗಳಲ್ಲಿ ತೊಡಗಿರುವ ಪ್ರತಿಯೊಬ್ಬರೂ ಕಣ್ಗಾವಲಿನಲ್ಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ನಾನಾ ವೇದಿಕೆಗಳ ಮೂಲಕ ಅಪಪ್ರಚಾರ

ದಾಳಿಗಳನ್ನು ನಡೆಸಲು ಪಾಕಿಸ್ತಾನದ ಐಎಸ್ಐ ಸಾಮಾಜಿಕ ಮಾಧ್ಯಮ ಮತ್ತು ಇತರ ವಿಒಐಪಿ ಪ್ಲಾಟ್​ಫಾರ್ಮ್​ಗಳಲ್ಲಿ ಭಾರತೀಯ ಯುವಕರಿಗೆ ನಿಯಮಿತವಾಗಿ ಸಹಾಯ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ಕೆಫೆ ಸ್ಫೋಟದ ಶಂಕಿತ ಮುಸ್ಸಾವಿರ್ ಶಜೀಬ್ ಹುಸೇನ್ ನಂತಹ ಕ್ರಿಮಿನಲ್ ದಾಖಲೆಗಳನ್ನು ಹೊಂದಿರುವ ಜನರನ್ನು ಅನಾಹುತಕಾರಿ ಚಟುವಟಿಕೆಗಳನ್ನು ಮಾಡಲು ಅವರು ಬೆಳೆಸುತ್ತಿದ್ದಾರೆ ಎಂದು ಅವರು ಹೇಳಿದರು.

ನಗರದ ವೈಟ್​ಫೀಲ್ಡ್​ ಪ್ರದೇಶದ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಗಾಯಗೊಂಡಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬರುವುದರೊಂದಿಗೆ ಐಸಿಸ್ ಬಲ ಪಡೆದುಕೊಂಡಿದೆ. ತಾಲಿಬಾನ್ ಮತ್ತು ಪಾಕಿಸ್ತಾನ ಸೇನೆಯು ಗಡಿಯಲ್ಲಿ ನಿಯಮಿತವಾಗಿ ಹೋರಾಡುತ್ತಿದೆ. ಪಾಕಿಸ್ತಾನದ ಐಎಸ್ಐ ಇಲ್ಲಿ ಐಸಿಸ್ ಬೆಂಬಲ ಪಡೆಯುತ್ತಿದೆ.

Continue Reading

ಪ್ರಮುಖ ಸುದ್ದಿ

Mukhtar Ansari : ನಿಜಕ್ಕೂ ಗ್ಯಾಂಗ್ ಸ್ಟರ್ ಅನ್ಸಾರಿ ಸತ್ತಿದ್ದು ಹೇಗೆ? ಬಂತು ಪೋಸ್ಟ್ ಮಾರ್ಟಮ್ ರಿಪೋರ್ಟ್!

Mukhtar Ansari : ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್ ನಲ್ಲಿ ಬಿದ್ದಿದ್ದ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ. ಸಾವಿನ ಹಿನ್ನೆಯಲ್ಲಿ ಲಖನೌ ಮತ್ತು ಮೌ ಸದರ್​ ಮತ್ತು ಗಾಜಿಪುರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

VISTARANEWS.COM


on

Mukthar Ansari
Koo

ನವ ದೆಹಲಿ : ಬಾಂಡಾ ಜೈಲಿನಲ್ಲಿ ಮೃತಪಟ್ಟ ಗ್ಯಾಂಗ್​ಸ್ಟರ್​ (Gangster) ಮತ್ತು ರಾಜಕಾರಣಿ (Politcian) ಮುಖ್ತಾರ್ ಅನ್ಸಾರಿ (Mukhtar Ansari) ಸಾವಿಗೆ ಹೃದಯಾಘಾತವೇ (Cardiac Arrest) ಕಾರಣ ಎಂಬುದಾಗಿ ಆರಂಭಿಕ ಮರಣೋತ್ತರ ಪರೀಕ್ಷೆಯು ಹೇಳಿದೆ. ಈ ಮೂಲಕ ಜೈಲಿನಲ್ಲಿ ಆತನಿಗೆ ನಿಧಾನ ವಿಷ ನೀಡಲಾಗಿದೆ ಎಂಬ ಆರೋಪವನ್ನು ವೈದ್ಯಕೀಯ ಪರಿಣತರ ಸಮಿತಿ ನಿರಾಕರಿಸಿದೆ. ಮುಖ್ತಾರ್ ಅನ್ಸಾರಿಯ ಕುಟುಬ ಸದಸ್ಯರು ನಿಧಾನವಾಗಿ ವಿಷ ನೀಡಿ ಕೊಲ್ಲಲಾಗಿದೆ ಎಂದು ಆರೋಪ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ಉನ್ನತ ಮಟ್ಟದ ಸಮಿತಿಯ ತನಿಖೆಗೂ ಬಾಂಡಾದ ನ್ಯಾಯಾಲಯ ಆದೇಶ ನೀಡಿತ್ತು. ಇದೀಗ ಮರಣೋತ್ತರ ಪರೀಕ್ಷೆಯ ಮೊದಲ ಸುಳಿವು ಹೊರಗೆ ಬಂದಿದ್ದು ಸಾವಿಗೆ ಹೃದಯಾಘಾತವೇ ಕಾರಣ ಎಂದು ಹೇಳಲಾಗಿದೆ.

ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್ ನಲ್ಲಿ ಬಿದ್ದಿದ್ದ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ. ಸಾವಿನ ಹಿನ್ನೆಯಲ್ಲಿ ಲಖನೌ ಮತ್ತು ಮೌ ಸದರ್​ ಮತ್ತು ಗಾಜಿಪುರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಬಾರಿಗೆ ಆತನ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅನ್ಸಾರಿಯನ್ನು ಮಂಗಳವಾರ ಬಾಂಡಾದಲ್ಲಿ ಸುಮಾರು 14 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು. ಏತನ್ಮಧ್ಯೆ. ತನ್ನ ಸಹೋದರನಿಗೆ ಜೈಲಿನಲ್ಲಿ ವಿಷಪ್ರಾಷನ ಮಾಡಲಾಗುತ್ತಿದೆ ಎಂದು ಮುಖ್ತಾರ್ ಸಹೋದರ ಅಫ್ಜಲ್ ಅನ್ಸಾರಿ ಅರೋಪಿಸಿದ್ದಾರೆ.

60 ಹೆಚ್ಚು ಪ್ರಕರಣಗಳ ಆರೋಪಿ, ಎಂಟರಲ್ಲಿ ಅಪರಾಧಿ

ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿದ್ದ ಮುಖ್ತಾರ್ ಅನ್ಸಾರಿ 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ ನಲ್ಲಿ ಜೈಲಿನಲ್ಲಿದ್ದ. ಆತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್ 2022 ರಿಂದ ಯುಪಿಯ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದು, ಅವರನ್ನು ಬಾಂಡಾ ಜೈಲಿನಲ್ಲಿರಿಸಲಾಗಿತ್ತು.

ಇದನ್ನೂ ಓದಿ: Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ 66 ದರೋಡೆಕೋರರ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇತ್ತು. ಮುಖ್ತಾರ್ ಅನ್ಸಾರಿಯನ್ನು ನಕಲಿ ಎನ್​ಕೌಂಟರ್ ಮೂಲಕ ಕೊಲ್ಲಬಹುದು ಎಂದು ಅವರ ಕುಟುಂಬ ಸದಸ್ಯರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಅನ್ಸಾರಿ ಅಜ್ಜ ಸ್ವಾತಂತ್ರ್ಯ ಹೋರಾಟಗಾರ

ಉತ್ತರ ಪ್ರದೇಶದ ಯೂಸುಫ್‌ಪುರದಲ್ಲಿ 1960ರಲ್ಲಿ ಜನಿಸಿದ ಮುಖ್ತಾರ್‌ ಅನ್ಸಾರಿಯ ಅಜ್ಜ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಇವರ ಅಜ್ಜ ಮುಖ್ತಾರ್‌ ಅಹ್ಮದ್‌ ಅನ್ಸಾರಿ ಅವರು ದೇಶದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ನಾಯಕರಾಗಿದ್ದ ಇವರು 1927ರವರೆಗೆ ಅದರ ಅಧ್ಯಕ್ಷರೂ ಆಗಿದ್ದರು. ಮುಸ್ಲಿಂ ಲೀಗ್‌ ಜತೆ ಗುರುತಿಸಿಕೊಂಡಿದ್ದ ಮುಖ್ತಾರ್‌ ಅಹ್ಮದ್‌ ಅನ್ಸಾರಿ ಅವರು ಪ್ರತ್ಯೇಕವಾದದ ಅಜೆಂಡಾ ಅರಿತು ಅಂತರ ಕಾಯ್ದುಕೊಂಡಿದ್ದರು. ಅಲ್ಲದೆ, ಇವರು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾದ ಚಾನ್ಸಲರ್‌ ಕೂಡ ಆಗಿದ್ದರು.

ಮುಖ್ತಾರ್‌ ಅನ್ಸಾರಿಯ ತಾಯಿಯ ತಂದೆ (ಅಜ್ಜ) ಮೊಹಮ್ಮದ್‌ ಉಸ್ಮಾನ್‌ ಅವರು ಭಾರತೀಯ ಸೇನೆಯಲ್ಲಿ ಬ್ರಿಗೇಡಿಯರ್‌ ಆಗಿದ್ದರು. ಇವರು ಪಾಕಿಸ್ತಾನದ ಜತೆಗಿನ ಯುದ್ಧದಲ್ಲಿ ಹುತಾತ್ಮರಾಗಿದ್ದರು. ಇವರಿಗೆ ಮರಣೋತ್ತರವಾಗಿ ಪರಮವೀರ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.

ಇಂತಹ ಕುಟುಂಬದಲ್ಲಿ ಜನಿಸಿದ ಮುಖ್ತಾರ್‌ ಅನ್ಸಾರಿ, 1980ರ ದಶಕದಲ್ಲಿ ಗ್ಯಾಂಗ್‌ಸ್ಟರ್‌ ಆಗಿ ಬದಲಾದ. ಈತ ಸರ್ಕಾರದ ಗುತ್ತಿಗೆ ಪಡೆಯುವ ಭರದಲ್ಲಿ ಗೂಂಡಾಗಿರಿ ಆರಂಭಿಸಿದ. ಕೊಲೆ, ದರೋಡೆ, ಸುಲಿಗೆ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದಿಂದ ಉತ್ತರ ಪ್ರದೇಶದಾದ್ಯಂತ ಸುದ್ದಿಯಾದ. ಹಣ, ದರ್ಪದ ಮದವೇರಿದ್ದ ಈತ ರಾಜಕೀಯವನ್ನೂ ಸೇರಿದ.

Continue Reading

ಪ್ರಮುಖ ಸುದ್ದಿ

Satyendar Jain : ಆಪ್​ಗೆ ಇನ್ನಷ್ಟು ಸಂಕಷ್ಟ; ಸತ್ಯೇಂದರ್​ ಜೈನ್ ವಿರುದ್ಧ ಸಿಬಿಐ ತನಿಖೆಗೆ ಆದೇಶ

Satyendar Jain: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸತ್ಯೇಂದರ್ ಜೈನ್ ಅವರನ್ನು 2022 ರ ಮೇ ತಿಂಗಳಲ್ಲಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್​ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಉನ್ನತ ನ್ಯಾಯಾಲಯವು ಅವರಿಗೆ ಸೂಚಿಸಿತು.

VISTARANEWS.COM


on

Satyendar Jain
Koo

ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ನಿಂದ 10 ಕೋಟಿ ರೂ.ಗಳನ್ನು ಸುಲಿಗೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದರ್ ಜೈನ್ (Satyendar Jain) ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಜೈನ್ ಮತ್ತು ತಿಹಾರ್ ಜೈಲಿನ ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರು ತಿಹಾರ್ ನಿಂದ ಸುಲಿಗೆ ದಂಧೆ ನಡೆಸುತ್ತಿದ್ದರು ಮತ್ತು ಉನ್ನತ ಮಟ್ಟದ ಕೈದಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಹೀಗಾಗಿ ಆಡಳಿತಾರೂಢ ಅಪ್​ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸತ್ಯೇಂದರ್ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಸುಲಿಗೆ ಆರೋಪಗಳ ಬಗ್ಗೆ ತನಿಖೆ ನಡೆಸಲು ಲೆಫ್ಟಿನೆಂಟ್ ಗವರ್ನರ್ ಅವರ ಅನುಮತಿ ಕೋರಿ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಮಟ್ಟದ ಸುಲಿಗೆ ದಂಧೆಯನ್ನು ನಡೆಸುತ್ತಿದ್ದಾರೆ. ಜೈಲಿನಲ್ಲಿ ಐಷಾರಾಮಿಯಾಗಿ ಬದುಕು ನಡೆಸಲು ಸುಕೇಶ್​ ಚಂದ್ರಶೇಖರ್ ನಿಂದ 10 ಕೋಟಿ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಸಿಬಿಐ ಕಳೆದ ವರ್ಷ ನವೆಂಬರ್​ನಲ್ಲಿ ಬರೆದಿತ್ತು.

ದೆಹಲಿಯ ವಿವಿಧ ಜೈಲುಗಳಾದ ತಿಹಾರ್, ರೋಹಿಣಿ ಮತ್ತು ಮಂಡೋಲಿಯಲ್ಲಿ ಆರಾಮವಾಗಿ ವಾಸಿಸಲು ಅನುಕೂಲವಾಗುವಂತೆ ಜೈನ್ ಗೆ ವೈಯಕ್ತಿಕವಾಗಿ ಅಥವಾ ತನ್ನ ಸಹಚರರ ಮೂಲಕ 2018-21ರ ಅವಧಿಯಲ್ಲಿ ವಿವಿಧ ಕಂತುಗಳಲ್ಲಿ ಹಣವನ್ನು ನೀಡಿದ್ದೇನೆ ಎಂದು ಸುಕೇಶ್ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: Blast in Bangalore : ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತರ ಸುಳಿವು ಕೊಟ್ಟರೆ 10 ಲಕ್ಷ ರೂ. ಇನಾಮು; ಇಲ್ಲಿದೆ ಉಗ್ರರ ಪೋಟೊ ಸಮೇತ ವಿವರ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಸತ್ಯೇಂದರ್ ಜೈನ್ ಅವರನ್ನು 2022 ರ ಮೇ ತಿಂಗಳಲ್ಲಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್​ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಉನ್ನತ ನ್ಯಾಯಾಲಯವು ಅವರಿಗೆ ಸೂಚಿಸಿತು. ಜೈಲಿನ ಸ್ನಾನಗೃಹದಲ್ಲಿ ಬಿದ್ದ ನಂತರ ಅವರಿಗೆ ಮೇ 26, 2023 ರಂದು ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಯಿತು. ಜಾಮೀನು ಅವಧಿಯಲ್ಲಿ, ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Continue Reading
Advertisement
Green tea
ಆರೋಗ್ಯ27 mins ago

Green Tea: ಗ್ರೀನ್ ಟೀ ಆರೋಗ್ಯಕರ‌ ಎಂದುಕೊಂಡಿದ್ದೀರಾ? ಸೈಡ್‌ ಎಫೆಕ್ಟ್‌ಗಳೂ ಇವೆ!

Dina Bhavishya
ಭವಿಷ್ಯ1 hour ago

Dina bhavishya: ಬಣ್ಣದ ಮಾತುಗಳನ್ನು ನಂಬಿ ಮೋಸ ಹೋಗ್ಬೇಡಿ

Pralhad Joshi
ಕರ್ನಾಟಕ5 hours ago

Pralhad Joshi: ಸಚಿವ ಪ್ರಲ್ಹಾದ್‌ ಜೋಶಿ ವೀರಶೈವರನ್ನು ಕಡೆಗಣಿಸಿಲ್ಲ: ಶ್ರೀ ರುದ್ರಮುನಿ‌ ಸ್ವಾಮೀಜಿ ಸಮರ್ಥನೆ

Lok Sabha Election 2024
ಕರ್ನಾಟಕ5 hours ago

Lok Sabha Election 2024: ಸಿದ್ದರಾಮಯ್ಯ ಗರ್ವಭಂಗ ಆಗಬೇಕು; ಸಿಎಂ ವಿರುದ್ಧ ಗುಡುಗಿದ ಎಚ್.ಡಿ.ದೇವೇಗೌಡರು

Assault Case
ಕರ್ನಾಟಕ6 hours ago

Assault Case: ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್ ಮೇಲೆ ಡಿ.ಕೆ.ಸುರೇಶ್‌ ಆಪ್ತನ ಗೂಂಡಾಗಿರಿ; ನಡುರಸ್ತೆಯಲ್ಲೇ ಹಲ್ಲೆ

Modi and billgates
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಡಿಜಿಟಲ್‌ ಇಂಡಿಯಾ ಬಗೆಗೆ ಬಿಲ್‌ ಗೇಟ್ಸ್‌ ಪ್ರಶಂಸೆ ಸ್ಫೂರ್ತಿದಾಯಕ

IPL 2024- virat - Gambhir
ಕ್ರೀಡೆ7 hours ago

Gambhir vs Kohli : ಇದಕ್ಕೆ ಆಸ್ಕರ್​ ಕೊಡಲೇಬೇಕು; ಗಂಭೀರ್​- ಕೊಹ್ಲಿ ಅಪ್ಪುಗೆಗೆ ರವಿ, ಗವಾಸ್ಕರ್​ ಬಣ್ಣನೆ

KKR Team- IPL 2024
ಕ್ರೀಡೆ8 hours ago

IPL 2024 : ಕೆಕೆಆರ್ ವಿರುದ್ಧ ಆರ್​ಸಿಬಿಗೆ 7 ವಿಕೆಟ್​ ಹೀನಾಯ ಸೋಲು

Lok Sabha Election 2024
ಪ್ರಮುಖ ಸುದ್ದಿ8 hours ago

Lok Sabha Election 2024: ಕಾಂಗ್ರೆಸ್‌ 9ನೇ ಪಟ್ಟಿ ಪ್ರಕಟ; ರಕ್ಷಾ ರಾಮಯ್ಯ, ಈ.ತುಕಾರಾಂ, ಸುನೀಲ್‌ ಬೋಸ್‌ಗೆ ಟಿಕೆಟ್‌

PM Narendra Modi leadership has been admired by the world says Vishweshwar Hegde Kageri
ಉತ್ತರ ಕನ್ನಡ8 hours ago

Sirsi News: ಇದು ಒಳಿತು ಕೆಡಕುಗಳ ನಡುವಿನ ಚುನಾವಣೆ; ವಿಶ್ವೇಶ್ವರ ಹೆಗಡೆ ಕಾಗೇರಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 hour ago

Dina bhavishya: ಬಣ್ಣದ ಮಾತುಗಳನ್ನು ನಂಬಿ ಮೋಸ ಹೋಗ್ಬೇಡಿ

Dina Bhavishya
ಭವಿಷ್ಯ1 day ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 days ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20242 days ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20243 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20243 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20243 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು4 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

ಟ್ರೆಂಡಿಂಗ್‌