Narendra Modi | ಪ್ರಧಾನಿ ಮೋದಿಯ ಸಾಧನೆ ಬಣ್ಣಿಸಿದ ಪಾಕಿಸ್ತಾನದ ಪತ್ರಿಕೆ; ವಿದೇಶಾಂಗ ನೀತಿಗೆ ಅಪಾರ ಪ್ರಶಂಸೆ Vistara News

ದೇಶ

Narendra Modi | ಪ್ರಧಾನಿ ಮೋದಿಯ ಸಾಧನೆ ಬಣ್ಣಿಸಿದ ಪಾಕಿಸ್ತಾನದ ಪತ್ರಿಕೆ; ವಿದೇಶಾಂಗ ನೀತಿಗೆ ಅಪಾರ ಪ್ರಶಂಸೆ

ನರೇಂದ್ರ ಮೋದಿ (Narendra Modi ) ಅವರು ಭಾರತವನ್ನು ಪ್ರಗತಿಯ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂಬುದಾಗಿ ಪಾಕ್​ನ ರಾಜಕೀಯ ವಿಶ್ಲೇಷಕರು ಹೊಗಳಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ : ಪ್ರತಿಪಕ್ಷಗಳು ದಿನ ಬೆಳಗಾಗುತ್ತಿದ್ದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi ) ಅವರನ್ನು ತೆಗಳುತ್ತಿರುವ ನಡುವೆಯೇ, ಪಾಕಿಸ್ತಾನದ ಪತ್ರಿಕೆಯೊಂದು ಮೋದಿಯ ಸಾಧನೆಯನ್ನು ಹೊಗಳಿ ಲೇಖನ ಬರೆದಿದೆ. ಅಲ್ಲಿನ ಎಕ್ಸ್​ಪ್ರೆಸ್ ಟ್ರಿಬ್ಯೂನ್​ ಪತ್ರಿಕೆಯ ಸಂಪಾದಕೀಯ ಪುಟದಲ್ಲಿ ರಾಜಕೀಯ ವಿಶ್ಲೇಷಕರೊಬ್ಬರು ಮೋದಿ ಜಾರಿಗೆ ತಂದಿರುವ ಆರ್ಥಿಕ ನೀತಿಯಿಂದ ಉಂಟಾಗಿರುವ ಪ್ರಗತಿ ಹಾಗೂ ವಿದೇಶಗಳಲ್ಲಿ ಮೋದಿಯ ವರ್ಚಸ್ಸು ಹೆಚ್ಚುತ್ತಿರುವುದನ್ನು ಕೊಂಡಾಡಿದ್ದಾರೆ.

ಪಾಕಿಸ್ತಾನದ ಪ್ರಖ್ಯಾತ ರಾಜಕೀಯ, ಆರ್ಥಿಕ ಹಾಗೂ ಭದ್ರತಾ ವಿಶ್ಲೇಷಕರಾಗಿರುವ ಶೆಹಜಾದ್​ ಚೌಧರಿ ಅವರು ಲೇಖನವನ್ನು ಬರೆದಿದ್ದು, ಮೋದಿ ಆಡಳಿತದಲ್ಲಿ ಭಾರತವು ಹೂಡಿಕೆದಾರರ ಪ್ರಶಸ್ತ ತಾಣವಾಗಿ ಮಾರ್ಪಟ್ಟಿದೆ ಎಂದು ಉಲ್ಲೇಖಿಸಿದ್ದಾರೆ. ಮುಂದುವರಿದ ಅವರು ಇದೊಂದು ಅವಿಸ್ಮರಣೀಯ ಸಾಧನೆ ಎಂಬುದಾಗಿಯೂ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರದ ಅಡಿಯಲ್ಲಿ ಭಾರತ ಮೂರು ಟ್ರಿಯಲಿಯನ್​ ಆರ್ಥಿಕತೆಯ ಗುರಿಯನ್ನು ಸಾಧಿಸಿದೆ. ಜಿಡಿಪಿಯು ವೃದ್ಧಿಯಾಗುತ್ತಿದೆ. ಉತ್ತಮ ವಿದೇಶಾಂಗ ನೀತಿಗಳ ಮೂಲಕ ಮುಂದುವರಿದ ದೇಶಗಳಲ್ಲಿ ಪ್ರಭಾವ ಬೀರುತ್ತಿದೆ ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ಭಾರತ ಕೃಷಿ ಉತ್ಪಾದನೆಯಲ್ಲಿ ದೊಡ್ಡ ಸಾಧನೆ ಮಾಡುತ್ತಿದೆ. ಅದೇ ರೀತಿ ಐಟಿ ಉದ್ಯಮದಲ್ಲೂ ಅಗಾಧ ಅಭಿವೃದ್ಧಿ ಹೊಂದಿದೆ. 140 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಎಕರೆಯೊಂದಕ್ಕೆ ಗರಿಷ್ಠ ಇಳುವರಿ ಹಾಗೂ ಸಂಪಾದನೆ ಪಡೆಯಲಾಗುತ್ತಿದೆ. ಇವೆಲ್ಲವೂ ಮೋದಿ ಸರಕಾರದ ಆರ್ಥಿಕ ಅಭಿವೃದ್ಧಿಯ ಪ್ರತೀಕಗಳು ಎಂಬದಾಗಿ ತಮ್ಮ ಲೇಖನದಲ್ಲಿ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಅವರು ನವ ಭಾರತದ ಹೊಸ ಬ್ರಾಂಡ್​ ಸೃಷ್ಟಿಸುತ್ತಿದ್ದಾರೆ. ಈ ಹಿಂದೆ ಯಾವ ನಾಯಕನೂ ಮಾಡದ ದೊಡ್ಡ ಸಾಧನೆ ಇದಾಗಿದೆ. ಪ್ರಮುಖವಾಗಿ ಭಾರತವು ತನ್ನ ಬೇಡಿಕೆಗೆ ಹಾಗೂ ಅಗತ್ಯಕ್ಕೆ ತಕ್ಕ ಹಾಗೆ ಬೆಳವಣಿಗೆ ಕಂಡಿದೆ ಎಂದು ಬರೆದಿದ್ದಾರೆ.

ಈ ಹಿಂದೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್ ಅವರು ಮೋದಿ ಸರಕಾರದ ವಿದೇಶಾಂಗ ನೀತಿಯನ್ನು ಹೊಗಳಿ ಮಾತನಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ | ಕನ್ನಡದಲ್ಲೇ ಟ್ವೀಟ್​ ಮಾಡಿ ಮಕರ ಸಂಕ್ರಾಂತಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ; ಪೊಂಗಲ್​, ಮಾಗ್​ ಬಿಹು ಹಬ್ಬಗಳಿಗೂ ವಿಶ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

Reliance Retail: ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ.

VISTARANEWS.COM


on

Reliance Retail launches beauty retail store 'Tira' in Bengaluru
Koo

ಬೆಂಗಳೂರು: ಇದೀಗ ‘ಟಿರಾ’ ಬೆಂಗಳೂರಿಗೆ (Bengaluru) ಕಾಲಿಟ್ಟಿದೆ. ಅಂದ ಹಾಗೆ ಟಿರಾ ಎಂಬುದು ರಿಲಯನ್ಸ್ ರೀಟೇಲ್ ನ (Reliance Retail) ಸೌಂದರ್ಯ ರೀಟೇಲ್ ಪ್ಲಾಟ್ ಪ್ಲಾರ್ಮ್. ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ (phoenix mall of Asia) ರೀಟೇಲ್ ಕೇಂದ್ರವನ್ನು ಶುರು ಮಾಡುವ ಮೂಲಕ ಟಿರಾ ಬೆಂಗಳೂರು ನಗರಕ್ಕೆ ಪ್ರವೇಶ ಮಾಡಿದೆ. ಇಲ್ಲಿಯ ತನಕ ಮುಂಬೈ, ಹೈದರಾಬಾದ್ ಹಾಗೂ ಚೆನ್ನೈನಲ್ಲಿ ಮಾತ್ರ ‘ಟಿರಾ’ (Tira) ಇತ್ತು. ಅದರ ಹೆಜ್ಜೆ ಗುರುತು ಬೆಂಗಳೂರಲ್ಲೂ ಮೂಡಿದೆ.

ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ. ಖರೀದಿ ಮಾಡುವಂಥ ಗ್ರಾಹಕರಿಗೆ ಸೌಂದರ್ಯ ರೀಟೇಲ್ ಉತ್ಪನ್ನಗಳ ಪೈಕಿ ಬೇರೆಲ್ಲೂ ಸಿಗದಂಥ ಅನುಭವ ದೊರೆಯಲಿ ಎಂಬ ಕಾರಣಕ್ಕಾಗಿಯೇ ‘ಟಿರಾ’ದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸದಾಗಿ ಶುರುವಾಗಿರುವ ಟಿರಾ ಮಳಿಗೆಯಲ್ಲಿ ತಮಗೆ ಬೇಕಾದಂಥ ಸುಗಂಧ ಅಥವಾ ಸುವಾಸನೆಯನ್ನು ಹುಡುಕಿಕೊಳ್ಳುವುದಕ್ಕೆ ಗ್ರಾಹಕರಿಗೆ ವಿಶಾಲವಾದ ಆಯ್ಕೆಗಳಿವೆ. ಪ್ರತಿ ವ್ಯಕ್ತಿಯೂ ತಮ್ಮದೇ ಆದ ಆದ್ಯತೆಯ ಮೇಲೆ ಸುಗಂಧ ದ್ರವ್ಯಗಳನ್ನು ಆರಿಸಿಕೊಳ್ಳಬಹುದಾಗಿದೆ. ಇನ್ನೂ ವಿಶೇಷ ಏನೆಂದರೆ, ಟಿರಾದಲ್ಲಿ ಲಭ್ಯ ಇರುವಂಥ ಸ್ಮಾರ್ಟ್ ಕನ್ನಡಿಗಳು ಹಾಗೂ ಆಗ್ಯುಮೆಂಟೆಡ್ ರಿಯಾಲಿಟಿ ಕಾರಣಕ್ಕೆ ಗ್ರಾಹಕರು ಉತ್ಪನ್ನಗಳನ್ನು ವರ್ಚುವಲ್ ಆಗಿ ಪ್ರಯೋಗಿಸಬಹುದು. ಅದೇ ರೀತಿ ಇಲ್ಲಿ ಲಭ್ಯ ಇರುವಂಥ ಬ್ಯೂಟಿ ಟ್ರೀಟ್ಸ್ ಮತ್ತು ನಮೂನೆಗಳನ್ನು ವಿತರಿಸುವಂಥ ವಿತರಣೆ ಯಂತ್ರಗಳ ಸಹಾಯದಿಂದ ಗ್ರಾಹಕರು ತಮಗೆ ಬೇಕಾದಂಥದ್ದನ್ನು ತಮ್ಮ ಮನೆಗೆ ಕೊಂಡೊಯ್ಯಬಹುದು.
ಅಂದಹಾಗೆ ಸೌಂದರ್ಯದ ವಿಚಾರದಲ್ಲಿ ಸಲಹೆ ನೀಡುವುದರಲ್ಲಿ ಪರಿಣತರಾದಂಥವರೇ ರೂಪಿಸಿರುವ ‘ಟಿರಾ ಸಿಗ್ನೇಚರ್ ಲುಕ್ಸ್’ ಬಗ್ಗೆ ಗ್ರಾಹಕರು ದೊಡ್ಡ ಮಟ್ಟದಲ್ಲಿ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರ ಜತೆಗೆ ಇಲ್ಲಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಉಚಿತ ಗ್ಲಾಮ್ ಲುಕ್ ಪಡೆಯಬಹುದಾಗಿದೆ. ಇನ್ನೂ ಮುಂದುವರಿದು ಹೇಳಬೇಕು ಅಂದರೆ, ‘ಟಿರಾ’ದಲ್ಲಿ ಉಡುಗೊರೆ ನೀಡುವುದಕ್ಕೆ ಅಂತಲೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ತಾವು ಖರೀದಿ ಮಾಡಿದ ವಸ್ತುಗಳ ಮೇಲೆ ಪ್ರೀತಿಪಾತ್ರರ ಹೆಸರನ್ನು ಬರೆಸಿ, ನೀಡುವುದರೊಂದಿಗೆ ತಮ್ಮ ಉಡುಗೊರೆಗಳನ್ನು ಇನ್ನಷ್ಟು ವಿಶೇಷ ಎನ್ನುವಂತೆ ಮಾಡಬಹುದು.

ಸೌಂದರ್ಯ ಉತ್ಪನ್ನಗಳ ರೀಟೇಲ್ ವ್ಯಾಪ್ತಿಯಲ್ಲಿ ಟಿರಾ ಹಿಗ್ಗಿಸುತ್ತಾ ಬಂದಿದ್ದು, ಪ್ರತಿ ಗ್ರಾಹಕರಿಗೆ ತಮಗೆ ಬೇಕಾದದ್ದು ಇಲ್ಲಿ ದೊರೆಯುತ್ತದೆ ಎಂಬ ಭರವಸೆಯನ್ನು ನೀಡಿತ್ತಾ ಬಂದಿದೆ. ಇನ್ನು ‘ಟಿರಾ’ ಆಪ್ ಡೌನ್ ಲೋಡ್ ಸಂಖ್ಯೆಯು ಐದು ಮಿಲಿಯನ್ ಸಂಖ್ಯೆಯ ಮೈಲುಗಲ್ಲು ದಾಟಿದೆ. ಈ ಸಂಖ್ಯೆಯೇ ಮೂಲಕ ತಿಳಿಯಬಹುದಾದದ್ದು ಏನೆಂದರೆ, ಸೌಂದರ್ಯ ಅಭಿಮಾನಗಳಲ್ಲಿ ಟಿರಾಗೆ ಜನಪ್ರಿಯತೆಯು ಹೆಚ್ಚುತ್ತಲೇ ಬರುತ್ತಿದೆ. ಭಾರತ ದೇಶದಾದ್ಯಂತ ಶೇ 98ರಷ್ಟು ಪಿನ್ ಕೋಡ್ ಗಳ ವ್ಯಾಪ್ತಿಯಲ್ಲಿ ಟಿರಾ ಉತ್ಪನ್ನಗಳನ್ನು ವೇಗವಾಗಿ ಪೂರೈಕೆ ಮಾಡಲಾಗುತ್ತಿದ್ದು, 100ಕ್ಕೂ ಹೆಚ್ಚು ನಗರಗಳ ಗ್ರಾಹಕರನ್ನು ತಲುಪುತ್ತಿದೆ.

ಮಾಲ್ ಆಫ್ ಏಷ್ಯಾದಲ್ಲಿನ ಮಳಿಗೆಯು ಬೆಂಗಳೂರು ಮಾತ್ರವಲ್ಲದೆ ಅದರ ಆಚೆಗೆ ಇರುವಂಥ ಸೌಂದರ್ಯ ಉತ್ಪನ್ನಗಳ ಬಳಕೆದಾರರ ಪಾಲಿಗೆ ಪ್ರಮುಖ ಕೇಂದ್ರ ಆಗುವುದಕ್ಕೆ ಎಲ್ಲ ರೀತಿಯಿಂದಲೂ ಸಜ್ಜಾಗಿದ್ದು, ಉನ್ನತ ಮಟ್ಟದ- ಅತ್ಯಾಧುನಿಕ ತಂತ್ರಜ್ಞಾನದ ಅನುಭವದ ಹೊಸ ಯುಗಕ್ಕೆ ಇದು ನಾಂದಿ ಹಾಡಿದೆ. ಟಿರಾ ಮಳಿಗೆ ವಿಳಾಸ: ಕೆಳ ಮಹಡಿ, 239/240, ಬ್ಯಾಟರಾಯನಪುರ, ಯಲಹಂಕ ಹೋಬಳಿ, ಯಲಹಂಕ ತಾಲೂಕು, ಬಳ್ಳಾರಿ ರಸ್ತೆ, ಬೆಂಗಳೂರು, ಕರ್ನಾಟಕ 560092.

ಈ ಸುದ್ದಿಯನ್ನೂ ಓದಿ: ರಿಲಯನ್ಸ್‌ ರಿಟೇಲ್‌ ಅಧ್ಯಕ್ಷರಾಗಿ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ನೇಮಕ

Continue Reading

ದೇಶ

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

VISTARANEWS.COM


on

Shri Ram Janmabhoomi Mandir carvings are wonderful
Koo

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಜನವರಿ 22ರಂದು ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ನಡುವೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಿಲೀಸ್ ಮಾಡಿದೆ.

ಅದ್ಭುತ ಕೆತ್ತನೆಗಳನ್ನು ಹೊಂದಿರುವ ಮಂದಿರ ಒಳಾಂಗಣ ಫೋಟೋಗಳು ಭಾರೀ ವೈರಲ್ ಆಗಿವೆ. ಸುಂದರ ಕಲಾಕೃತಿಗಳನ್ನು ಮಂದಿರದೊಳಗೆ ಕಾಣಬಹುದಾಗಿದೆ. ನಿನ್ನೆಯಷ್ಟೇ ರಾಮ ಮಂದಿರದ ಗರ್ಭಗಡಿಯು ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಮಂತ್ರಣ ನೀಡಲಾಗಿದೆ. ಸುಮಾರು 10 ಸಾವಿರದಿಂದ 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮನಮೋಹಕ ರಾಮ ಮಂದಿರ ಗರ್ಭ ಗುಡಿ

ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Continue Reading

ದೇಶ

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Murder Case: 2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಯುವಕನೊಬ್ಬ ತಪ್ಪಾಗಿ ಸಿಕ್ಕಿಸಲಾಗಿತ್ತು.

VISTARANEWS.COM


on

man accused of murder wins acquittal after studying law and fighting own Case
Koo

ನವದೆಹಲಿ: ಇದು ಅಸಾಧ್ಯವನ್ನು ಸಾಧ್ಯವಾಗಿಸಿದವನ ಕತೆ. ತಾನು ಮಾಡದ ಕೊಲೆಗಳ (Meerut Murder Case) ಆರೋಪಕ್ಕಾಗಿ 12 ವರ್ಷಗಳ ಕಾಲ ಜೈಲಿನಲ್ಲಿದ್ದ ಯುವಕ, ಸೆರೆಮನೆಯಲ್ಲೇ ಕಾನೂನು ಓದಿ, ತನ್ನ ಕೇಸ್ ಅನ್ನು ತಾನೇ ವಾದ ಮಾಡಿ (fight his own Case) ಕೊನೆಗೂ ಕೋರ್ಟ್‍‌ನಿಂದ ಆರೋಪ ಮುಕ್ತನಾಗಿ ಹೊರ ಬಂದಿದ್ದಾರೆ(Court acquitted). ಹೌದು, ಮೀರತ್‌ನ ಅಮಿತ್ ಚೌಧರಿ (Amit Chaudhary) ಇಂಥ ವಿಸ್ಮಯಕಾರಿ ಸಾಹಸವನ್ನು ಮಾಡಿರುವ ಸಾಹಸಿ.

2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆಯಾಗಿತ್ತು. ಈ ಕೊಲೆ ಪ್ರಕರಣ ಸಂಬಂಧ ಇವರನ್ನು ಬಂಧಿಸಲಾಗಿತ್ತು. ಕ್ರಮೇಣ ಈ ಕೊಲೆಗೆ ಸಂಚು ರೂಪಿಸಿದ್ದ ಕಾಳಿ ಗ್ಯಾಂಗ್‌ನ ಸದಸ್ಯ ಎಂದು ಆರೋಪಿಸಲಾಯಿತು. ಕೊಲೆ ನಡೆದ ಸಮಯದಲ್ಲಿ ಚೌಧರಿ ತಮ್ಮ ಸಹೋದರಿ ಮನೆ ಇರುವ ಶಾಮ್ಲಿಯಲ್ಲಿದ್ದರು. ಆದರೂ, ಈ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಚೌಧರಿ ಒಬ್ಬರಾದರು. ಅಂತಿಮವಾಗಿ ಭಾರತೀಯ ದಂಡ ಸಂಹಿತೆ ಮತ್ತು ರಾಷ್ಟ್ರೀಯ ಭದ್ರತಾ ಏಜೆನ್ಸಿಯ ಅಡಿಯಲ್ಲಿ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಯಿತು.

ಕೊಲೆಯಂಥ ಗಂಭೀರ ಆರೋಪಗಳನ್ನು ಎದುರಿಸಿದ ನಂತರ, ಕಿರ್ತಾಲ್ ಗ್ರಾಮದ ರೈತ ಕುಟುಂಬದಿಂದ ಬಂದ ಚೌಧರಿ, ಹಠಾತ್ತನೆ ಪಾತಾಳ ಕಂಡ ತನ್ನ ಮತ್ತು ತಮ್ಮ ಕುಟುಂಬವನ್ನು ಮತ್ತೆ ಹೋರಾಡಲು ಮತ್ತು ಅವರ ಜೀವನದ ದಿಕ್ಕನ್ನು ಬದಲಾಯಿಸಲು ಯೋಚಿಸಿದರು. ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಪಡಲು ಆರಂಭಿಸಿದರು.

ಅಮಿತ್ ಚೌಧರಿ ಜೈಲಿನಲ್ಲಿದ್ದಾಗಲೂ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದಾರೆ. ಚೌಧರಿ ಇದ್ದ ಮುಜಾಫ್ಫರ್‌ನಗರ ಜೈಲಿನಲ್ಲಿ ಗ್ಯಾಂಗಸ್ಟರ್‌ಗಳಾದ ಅನಿಲ್ ದುಜನಾ, ವಿಕ್ಕಿ ತ್ಯಾಗಿಯಂಥವರಿದ್ದರು. ಅವರು ಚೌಧರಿಯನ್ನು ತಮ್ಮ ಗ್ಯಾಂಗಿ‌ಗೆ ಸೇರಿಸಿಕೊಳ್ಳಲು ಮುಂದಾದರು. ಆದರೆ, ಅಲ್ಲಿನ ಜೈಲರ್ ಗೂಂಡಾಗಳಿಂದ ಚೌಧರಿಯನ್ನು ದೂರ ಇಡುವುದಕ್ಕಾ ಬೇರೆ ಬ್ಯಾರಾಕ್‌ಗೆ ವರ್ಗಾಯಿಸಿದರು.

2013ರಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಬಳಿಕ ಚೌಧರಿ ಕಾನೂನು ಪದವಿ ಕಲಿಯಲು ಮುಂದಾದರು. ಬಿಎ ಪೂರ್ಣಗೊಳಿಸಿ, ಎಲ್ಎಲ್‌ಬಿ, ಎಲ್‌ಎಲ್‌ಎಂ ಪಾಸು ಮಾಡಿದರು. ಅಷ್ಟೇ ಅಲ್ಲದೇ, ಬಾರ್ ಕೌನ್ಸಿಲ್ ಪರೀಕ್ಷೆಯನ್ನೂ ಪಾಸು ಮಾಡಿದರು. ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಸಾಬೀತುಪಡಿಸಿ, ತಮ್ಮ ಕುಟುಂಬವು ಸಮಾಜದಲ್ಲಿ ತಲೆ ಎತ್ತಿ ನಡೆಯುವುದನ್ನು ನೋಡುವುದೇ ಗುರಿಯಾಗಿತ್ತು.

ಲಾಯರ್ ಆದ ಮೇಲೆ ತಮ್ಮ ಕೇಸನ್ನು ತಾವೇ ನಡೆಸಲು ಆರಂಭಿಸಿದರು ಚೌಧರಿ. ಆದರೆ, ಪ್ರಕರಣದ ವಿಚಾರಣೆ ತುಂಬ ನಿಧಾನವಾಗಿ ನಡೆಯುತ್ತಿತ್ತು. ಯಾರ ಹೇಳಿಕೆಯನ್ನು ದಾಖಲಿಸಲಿಲ್ಲ. ಈ ಪ್ರಕರಣದಲ್ಲಿ ಚೌಧರಿ ನಿರಪರಾಧಿ ಎಂಬುದಕ್ಕೆ ಸಾಕ್ಷ್ಯ ಕೊಡ ದೊರೆಯಿತು. ಈ ಪ್ರಕರಣದಲ್ಲಿ ಹೇಳಿಕೆ ದಾಖಲಿಸಲು ಆಗಮಿಸಿದ ಸಾಕ್ಷಿಯೊಬ್ಬರು, ಕೋರ್ಟ್‌ನಲ್ಲಿ ವಕೀಲ ಹಾಗೂ ಆರೋಪಿಯಾಗಿರುವ ಅಮಿತ್ ಚೌಧರಿ ಪಕ್ಕದಲ್ಲೇ ನಿಂತರೂ ಗುರುತಿಸಲಿಲ್ಲ. ಈ ಬೆಳವಣಿಗೆಯು ನ್ಯಾಯಾಧೀಶರಿಗೆ ತನ್ನನ್ನು ತಪ್ಪಾಗಿ ಈ ಕೇಸಿನಲ್ಲಿ ಸಿಕ್ಕಿಸಲಾಗಿದೆ ಎಂದು ಮನವರಿಕೆಯಾಯಿತು ಎನ್ನುತ್ತಾರೆ ಚೌಧರಿ ಅವರು.

ಅಂತಿಮವಾಗಿ ಪುರಾವೆಗಳು ಇಲ್ಲದ್ದರಿಂದ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ಅಮಿತ್ ಚೌಧರಿ ಸೇರಿದಂತೆ 13 ಜನರನ್ನು ಇತ್ತೀಚೆಗಷ್ಟೇ ಖುಲಾಸೆಗೊಳಿಸಿತು. ಯಾವುದೇ ತಪ್ಪು ಮಾಡದೇ 12 ವರ್ಷ ಜೈಲಿನಲ್ಲಿ ಕಳೆದ ಚೌಧರಿಗೆ ಸೇನೆ ಸೇರಬೇಕು ಎಂಬ ಆಸೆ ಇತ್ತು. ಆದರೆ, ಈಗ ಎಲ್ಲ ಆದ್ಯತೆಗಳು ಬದಲಾಗಿವೆ. ಅಪರಾಧ ನ್ಯಾಯದಲ್ಲಿ ಪಿಎಚ್‌ಡಿ ಮಾಡುವ ಆಸೆಯನ್ನು ಅಮಿತ್ ಚೌಧರಿ ಹೊಂದಿದ್ದಾರೆ.

ಈ ಸುದ್ದಿಯನ್ನೂ ಓದಿ: ನಿಠಾರಿ ಸರಣಿ ಕೊಲೆ ಪ್ರಕರಣ: ಕೋಲಿ, ಪಂಧೇರ್‌ ಎದುರಿಸುತ್ತಿದ್ದ ಆರೋಪ ಏನು? ಅವರಿಗೇಕೆ ಗಲ್ಲು ಶಿಕ್ಷೆಯಾಗಿತ್ತು?

Continue Reading

ದೇಶ

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Akash Anand: 28 ವರ್ಷದ ಆಕಾಶ್ ಆನಂದ್ ಅವರು ಮಾಯಾವತಿಯ ಸಹೋದರನ ಪುತ್ರರಾಗಿದ್ದಾರೆ. ಲಂಡನ್‌ನಲ್ಲಿ ವ್ಯಾಸಂಗ ಮಾಡಿ, ಎಂಬಿಎ ಪದವಿ ಪಡೆದಿದ್ದಾರೆ.

VISTARANEWS.COM


on

Akash anand is BSP Leader mayawati's political heir
Koo

ನವದೆಹಲಿ: ಉತ್ತರ ಪ್ರದೇಶ (Uttar Pradesh) ಮತ್ತು ಉತ್ತರಾಖಂಡ (Uttarakhand) ಹೊರತುಪಡಿಸಿ ಬಹುಜನ ಸಮಾಜ ಪಕ್ಷದ (BSP) ಉತ್ತರಾಧಿಕಾರಿಯಾಗಿ ಮಾಯಾವತಿ (Mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಭಾನುವಾರ ಘೋಷಿಸಿದ್ದಾರೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಕಾಶ್ ಆನಂದ್ (ಮಾಯಾವತಿ ಅವರ ಸೋದರಳಿಯ) ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ” ಎಂದು ಪಕ್ಷದ ಮುಖಂಡ ಉದಯ್​ವೀರ್ ಸಿಂಗ್ ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದಾರೆ. ಪಕ್ಷದೊಳಗೆ ಆಕಾಶ್ ಆನಂದ್ ಬಗ್ಗೆ ಪರಿಚಯವಿತ್ತು. ಆದರೆ, ದೇಶದ ರಾಜಕಾರಣದಲ್ಲಿ ಅವರು ಹೆಸರು ಅಷ್ಟೇನೂ ಚಿರಪರಿಚಿತವಾಗಿರಲಿಲ್ಲ.

ಆಕಾಶ್ ಆನಂದ್ ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರಾಗಿದ್ದಾರೆ ಮತ್ತು ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಬುಡಕಟ್ಟು ಜನಾಂಗದವರ ಸಮಸ್ಯೆಗಳನ್ನು ಒಳಗೊಂಡ ಪಕ್ಷದ ಚುನಾವಣಾ ಪ್ರಚಾರವನ್ನು ತಯಾರಿಸಲು ನಿಯೋಗದ ಭಾಗವಾಗಿ ಮಾಯಾವತಿ ಅವರನ್ನು ನಿಯೋಜಿಸಿದ್ದರು.

2017ರಲ್ಲಿ ರಾಜಕೀಯ ಪ್ರವೇಶಿಸಿದ ಆಕಾಶ್

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡರು.

2019ರಲ್ಲಿ ಆಕಾಶ್ ಆನಂದ್ ಉತ್ತರ ಪ್ರದೇಶದ ಆಗ್ರಾದಲ್ಲಿ ತಮ್ಮ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಆಗ ಬಿಎಸ್‌ಪಿ ಮಹಾಘಟಬಂಧನ್‌ನ ಒಂದು ಭಾಗವಾಗಿತ್ತು, ಇದು 2019 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದೊಂದಿಗೆ ಅಖಿಲೇಶ್ ಯಾದವ್ ಮತ್ತು ಮಾಯಾವತಿ ನೇತೃತ್ವದಲ್ಲಿ ರಚನೆಯಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿ ಬಣವಾಗಿತ್ತು.

ಪಾದಯಾತ್ರೆ ಸಂಘಟಿಸಿದ್ದ ಆಕಾಶ್ ಆನಂದ್

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಮತ್ತು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಈ ಯಾತ್ರೆ ನಡೆಸಿದ್ದರು.

ಮಾಯಾವತಿ ಅವರು ಆಕಾಶ್ ಆನಂದ್ ಅವರನ್ನು ದೀರ್ಘಾವಧಿಗೆ ಸಿದ್ಧ ಮಾಡುತ್ತಿದ್ದರು. ಮಾಯಾವತಿಯವರ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿರುವ 28 ವರ್ಷದ ಆಕಾಶ್ ಆನಂದ್ ಬಿಎಸ್ಪಿ ವಲಯಗಳಲ್ಲಿ ಚಿರಪರಿಚಿತ ಹೆಸರು. ಇನ್‌ಸ್ಟಾಗ್ರಾಮದಲ್ಲಿ ಅವರು ತಮ್ಮನ್ನು ತಾವು “ಬಾಬಾ ಸಾಹೇಬ್ ಅವರ ದೃಷ್ಟಿಯ ಯುವ ಬೆಂಬಲಿಗರು. ನಾನು ಶಿಕ್ಷಣ, ಸಬಲೀಕರಣ ಮತ್ತು ಸಮಾನತೆಗಾಗಿ ನಿಲ್ಲುತ್ತೇನೆ” ಎಂದು ಕರೆದುಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mayawati : ಸೋದರಳಿಯನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಿದ ಬಿಎಸ್​ಪಿ ನಾಯಕಿ ಮಾಯಾವತಿ

Continue Reading
Advertisement
Rambhapuri seer and MB Patil
ಕರ್ನಾಟಕ16 mins ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್17 mins ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ32 mins ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್51 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ56 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ1 hour ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ1 hour ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ1 hour ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ2 hours ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್2 hours ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ7 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌