Dhirendra Shastri: ಹಿಂದುಗಳು ಒಗ್ಗಟ್ಟಾದರೆ ಪಾಕಿಸ್ತಾನವನ್ನೂ ಹಿಂದು ರಾಷ್ಟ್ರ ಮಾಡಬಹುದು: ಧೀರೇಂದ್ರ ಶಾಸ್ತ್ರಿ Vistara News
Connect with us

ದೇಶ

Dhirendra Shastri: ಹಿಂದುಗಳು ಒಗ್ಗಟ್ಟಾದರೆ ಪಾಕಿಸ್ತಾನವನ್ನೂ ಹಿಂದು ರಾಷ್ಟ್ರ ಮಾಡಬಹುದು: ಧೀರೇಂದ್ರ ಶಾಸ್ತ್ರಿ

Dhirendra Shastri: ಸದಾ ಒಂದಿಲ್ಲೊಂದು ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಯಲ್ಲಿರುವ ಆಚಾರ್ಯ ಧೀರೇಂದ್ರ ಶಾಸ್ತ್ರಿ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಹಿಂದುಗಳು ಒಗ್ಗಟ್ಟಾದರೆ ಪಾಕಿಸ್ತಾನವನ್ನೂ ಹಿಂದು ರಾಷ್ಟ್ರ ಮಾಡಬಹುದು ಎಂದಿದ್ದಾರೆ.

VISTARANEWS.COM


on

Dhirendra Shastri On Hindu Nation
Koo

ಗಾಂಧಿನಗರ: ಸದಾ ಒಂದಿಲ್ಲೊಂದು ಹೇಳಿಕೆ, ಪವಾಡಗಳು ಸೇರಿ ವಿವಿಧ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಮಧ್ಯಪ್ರದೇಶದ ಬಾಗೇಶ್ವರ ಧಾಮ್‌ ಟ್ರಸ್ಟ್‌ ಮುಖ್ಯಸ್ಥ ಆಚಾರ್ಯ ಧೀರೇಂದ್ರ ಶಾಸ್ತ್ರಿ (Dhirendra Shastri) (ಬಾಗೇಶ್ವರ ಬಾಬಾ) ಮತ್ತೆ ಸುದ್ದಿಯಲ್ಲಿದ್ದಾರೆ. “ನಮ್ಮ ದೇಶದ ಹಿಂದುಗಳು ಒಗ್ಗಟ್ಟಾದರೆ ಪಾಕಿಸ್ತಾನವನ್ನೂ ಹಿಂದು ರಾಷ್ಟ್ರ ಮಾಡಬಹುದು” ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ ನಡೆದ ದಿವ್ಯ ದರ್ಬಾರ್‌ ಎಂಬ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ಪಾಕಿಸ್ತಾನವನ್ನೂ ಹಿಂದು ರಾಷ್ಟ್ರ ಮಾಡಬಹುದು ಎಂದು ಹೇಳಿದರು. “ಗುಜರಾತ್‌ನ ಜನರಿಂದ ನಾನು ಹಣವನ್ನಾಗಲಿ, ಖ್ಯಾತಿಯನ್ನಾಗಲಿ ಬಯಸುವುದಿಲ್ಲ. ಆದರೆ, ಹಿಂದುತ್ವದ ಹೆಸರಿನಲ್ಲಿ ಹಿಂದುಗಳು ಒಗ್ಗೂಡಬೇಕು. ಹಾಗೊಂದು ವೇಳೆ, ಹಿಂದುಗಳೆಲ್ಲ ಒಂದಾದರೆ ಭಾರತ ಅ ಥವಾ ಪಾಕಿಸ್ತಾನವನ್ನೂ ಹಿಂದು ರಾಷ್ಟ್ರವನ್ನಾಗಿ ಮಾಡಬಹುದು” ಎಂದರು.

ಹಿಂದು ರಾಷ್ಟ್ರದ ಬಗ್ಗೆ ಹೇಳಿದ್ದೇನು?

ಧೀರೇಂದ್ರ ಶಾಸ್ತ್ರಿ ಅವರು ಮಾತನಾಡುವಾಗ ಕೆಲವು ಜನ “ಭಾರತವನ್ನು ಹೇಗೆ ಹಿಂದು ರಾಷ್ಟ್ರವನ್ನಾಗಿ ಮಾಡಬಹುದು” ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಬಾಗೇಶ್ವರ ಬಾಬಾ, “ಭಾರತ ಈಗಾಗಲೇ ಹಿಂದು ರಾಷ್ಟ್ರವಾಗಿದೆ ಹಾಗೂ ಹಿಂದು ರಾಷ್ಟ್ರವಾಗಿಯೇ ಇರಲಿದೆ. ಆದರೆ, ಸನಾತನಿಗಳು ಎಚ್ಚೆತ್ತುಕೊಳ್ಳಬೇಕು. ರಾಮಮಂದಿರ ವಿವಾದ ಈಗ ಮುಗಿದಿದೆ. ಮುಂದೆ ಮಥುರಾ ವಿವಾದವು ಇತ್ಯರ್ಥವಾಗಬೇಕು” ಎಂದು ಹೇಳಿದರು.

ಧೀರೇಂದ್ರ ಶಾಸ್ತ್ರಿ ಪವಾಡ ಪುರುಷ?

ಮಧ್ಯಪ್ರದೇಶದಲ್ಲಿ ಅಪಾರ ಭಕ್ತವೃಂದವನ್ನು ಹೊಂದಿರುವ ಇವರು ಪವಾಡ ಪುರುಷ ಎನ್ನುವ ವದಂತಿ ಇದೆ. ಬಾಗೇಶ್ವರ ಬಾಬಾ ಎಂದೇ ಪ್ರಸಿದ್ಧಿ ಪಡೆದುಕೊಂಡಿರುವ ಇವರು ಕೆಲ ತಿಂಗಳ ಹಿಂದೆ ಪವಾಡ ಪುರುಷನಾ ಎನ್ನುವ ಪ್ರಶ್ನೆ ಉದ್ಭವಿಸಿತ್ತು. ಈಗಿನ್ನೂ 26 ವರ್ಷದವರಾಗಿರುವ ಧೀರೇಂದ್ರ ಶಾಸ್ತ್ರಿ ಪವಾಡ ಪುರುಷ ಹೌದೇ? ಅಲ್ಲವೇ ಎನ್ನುವ ಬಗ್ಗೆ ʼಇಂಡಿಯಾ ಟಿವಿʼ ಸಂಸ್ಥೆ ಟ್ವಿಟರ್‌ನಲ್ಲಿ ಸಮೀಕ್ಷೆ ಮಾಡಿತ್ತು. ಸಂಸ್ಥೆ ಕೇಳಿರುವ ಪ್ರಶ್ನೆಗೆ ಶೇ. 68 ಮಂದಿ ʼಹೌದು, ಅವರೊಬ್ಬ ಪವಾಡ ಪುರುಷʼ ಎಂದು ಉತ್ತರಿಸಿದ್ದರು. ಇನ್ನು ಶೇ. 22.9 ಮಂದಿ ಅವರನ್ನು ಪವಾಡ ಪುರುಷರಲ್ಲ ಎಂದು ಹೇಳಿದ್ದರು. ಉಳಿದ ಮಂದಿ ತಮಗೆ ಅದರ ಬಗ್ಗೆ ಅರಿವಿಲ್ಲ ಎಂದಿದ್ದರು.

ಇದನ್ನೂ ಓದಿ: ಅಮೃತ್​ಪಾಲ್​​ನಂಥ ಪ್ರತ್ಯೇಕತಾವಾದಿ ಹುಟ್ಟಲು ಬಿಜೆಪಿ-ಆರ್​ಎಸ್​​ಎಸ್​​ನ ಹಿಂದು ರಾಷ್ಟ್ರ ಸಿದ್ಧಾಂತವೇ ಕಾರಣ; ಕಾಂಗ್ರೆಸ್​ ನಾಯಕ ಗೆಹ್ಲೋಟ್​ ವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Mulayam Singh Yadav: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿದ ಕಾರಣ ಮುಲಾಯಂ ಸಿಂಗ್‌ ಯಾದವ್‌ ಮೂರ್ತಿಯನ್ನು ತೆರವುಗೊಳಿಸಲಾಗಿದೆ.

VISTARANEWS.COM


on

Edited by

Mulayam Singh Yadav Statue
Koo

ಲಖನೌ: ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಪಾಲನೆ ಹಾಗೂ ಕಾನೂನು ಸುವ್ಯವಸ್ಥೆಗೆ (Law And Order) ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು, ಅಪರಾಧಿಗಳನ್ನು ಮಟ್ಟಹಾಕುವುದು ಸೇರಿ ಹಲವು ದಿಸೆಯಲ್ಲಿ ಯೋಗಿ ಆದಿತ್ಯನಾಥ್‌ ಕ್ರಮ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಅನುಮತಿ ಇಲ್ಲದೆ ಮೂರ್ತಿ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮೂರ್ತಿಯನ್ನು (Mulayam Singh Yadav) ತೆರವುಗೊಳಿಸಲಾಗಿದೆ.

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಮಾಜವಾದಿ ಪಕ್ಷದ ಕಚೇರಿಯನ್ನು ನಿರ್ಮಿಸಲಾಗಿದೆ. ಆ ಕಚೇರಿಯ ಬಳಿ ಮುಲಾಯಂ ಸಿಂಗ್‌ ಯಾದವ್‌ ಅವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಆದರೆ, ಅನುಮತಿ ಇಲ್ಲದೆ ಆರು ಅಡಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಪರಿಷತ್‌ ಅಧಿಕಾರಿಗಳು ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಆದರೆ, ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಸಮಾಜವಾದಿ ಪಕ್ಷದ ಹರ್ದೋಯಿ ಜಿಲ್ಲಾ ಘಟಕವು ನಿರಾಕರಿಸಿದೆ.

ನೋಟಿಸ್‌ ನೀಡಿದರೂ ಡೋಂಟ್‌ ಕೇರ್

“ನಗರ ಪಾಲಿಕೆ ಪರಿಷತ್‌ನಿಂದ ಹರ್ದೋಯಿಯಲ್ಲಿ ಎಂಟು ಅಂಗಡಿಗಳನ್ನು ವ್ಯಾಪಾರಿಗಳಿಗೆ ನೀಡಲಾಗಿದೆ. ಇವುಗಳ ಬಳಿಯೇ ಸಮಾಜವಾದಿ ಪಕ್ಷದ ಕಚೇರಿ ನಿರ್ಮಿಸಲಾಗಿದೆ. ಆದರೆ, ಅನುಮತಿ ಇಲ್ಲದೆಯೇ ನಗರ ಪಾಲಿಕೆ ಪರಿಷತ್‌ ಕಚೇರಿ ಬಳಿಯೇ ಮುಲಾಯಂ ಸಿಂಗ್‌ ಯಾದವ್‌ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲಾಗಿದೆ” ಎಂದು ನಗರ ಪಾಲಿಕೆ ಪರಿಷತ್‌ ಇ.ಒ ವಿನೋದ್‌ ಕುಮಾರ್‌ ಸೋಲಂಕಿ ಮಾಹಿತಿ ನೀಡಿದ್ದಾರೆ.‌

ಇದನ್ನೂ ಓದಿ: Women’ Reservation bill : ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್‌ ಏನಂತಾರೆ?

“ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿರುವ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಸೆಪ್ಟೆಂಬರ್‌ 23ರಂದು ನೋಟಿಸ್‌ ಜಾರಿಗೊಳಿಸಲಾಗಿತ್ತು. 24 ಗಂಟೆಯಲ್ಲಿ ಮೂರ್ತಿ ತೆರವುಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಗಡುವು ಮೀರಿದರೂ ಮೂರ್ತಿ ತೆರವು ಮಾಡದ ಕಾರಣ ಅಧಿಕಾರಿಗಳೇ ತೆರವು ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಕಚೇರಿ ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರು 10 ಲಕ್ಷ ರೂ. ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ.

Continue Reading

ಕ್ರೈಂ

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.

VISTARANEWS.COM


on

Edited by

Madhya Pradesh Rape News
Koo

ಭೋಪಾಲ್:‌ ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.

ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

ಆಸ್ಪತ್ರೆಗೆ ಸಾಗಿಸಿದ ಸಂತ

ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್‌ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!

ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Continue Reading

ದೇಶ

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್‌ ಮಾಡುತ್ತಿದ್ದ ಐಎಎಸ್‌ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.

VISTARANEWS.COM


on

Edited by

Koo

ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್‌ ಮಾಡಿದ್ದ ಐಎಎಸ್‌ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಿಂಕು ದುಗ್ಗ ಅವರ ಪತಿ ಸಂಜೀವ್‌ ಖೈರ್ವಾರ್‌ ಕೂಡ 1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್‌ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್‌ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.

ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್‌ ಸಿವಿಲ್‌ ಸರ್ವಿಸಸ್‌ (‌CCS) ಪೆನ್ಶನ್ ರೂಲ್ಸ್‌, 1972ರ ಫಂಡಮೆಂಟಲ್‌ ರೂಲ್ಸ್ (‌FR) 56(j), ರೂಲ್‌ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವಿವಾದವೇನು?

ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್‌ ಸೆಕ್ರೆಟರಿ ಅಗಿದ್ದ ಖೈರ್ವಾರ್‌ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್‌ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.

ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

ವಿವಾದದ ಬಳಿಕ 1994ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Continue Reading

ದೇಶ

Lok Sabha Election 2024: 2.5 ಲಕ್ಷ ಗ್ರಾಮಗಳಲ್ಲಿ ಬಿಜೆಪಿ ‘ರಥ’ಯಾತ್ರೆ; ‘ಲೋಕ’ ಸಮರಕ್ಕೆ ರಣತಂತ್ರ

Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ ಮಾಹಿತಿ ಇಲ್ಲಿದೆ.

VISTARANEWS.COM


on

Edited by

Narendra Modi
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಬಿಜೆಪಿ ಸೇರಿ ಎಲ್ಲ ಪಕ್ಷಗಳು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ. ಸುಮಾರು 26 ಪಕ್ಷಗಳನ್ನು ಒಗ್ಗೂಡಿಸಿಕೊಂಡು ಪ್ರತಿಪಕ್ಷಗಳು ಇಂಡಿಯಾ ಒಕ್ಕೂಟ (INDIA Bloc) ರಚಿಸಿದರೆ, ಬಿಜೆಪಿಯೂ ಎನ್‌ಡಿಎ (NDA) ಮೈತ್ರಿಕೂಟವನ್ನು ಮತ್ತಷ್ಟು ಬಲಿಷ್ಠಗೊಳಿಸುತ್ತಿದೆ. ಅದರಲ್ಲೂ, ಲೋಕಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದು, ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ಹೊಸ ಮಾದರಿಯಲ್ಲಿ ರಥಯಾತ್ರೆ (Grameen Samvaad Yatra) ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

ಹೌದು, ಬಿಜೆಪಿಯು ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ‘ಗ್ರಾಮೀಣ ಸಂವಾದ ಯಾತ್ರೆ’ ಕೈಗೊಳ್ಳಲು ತೀರ್ಮಾನಿಸಿದೆ. ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡುವುದು, ಕೇಂದ್ರದ ಸಾಧನೆ, ಪ್ರಮುಖ ತೀರ್ಮಾನಗಳನ್ನು ಜನರಿಗೆ ತಿಳಿಸುವುದು ಗ್ರಾಮೀಣ ಸಂವಾದ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರೊಂದಿಗೆ, ಲೋಕಸಭೆ ಚುನಾವಣೆಯಲ್ಲಿ ಗ್ರಾಮೀಣ ಭಾಗದ ಜನರನ್ನು ತನ್ನತ್ತ ಸೆಳೆಯುವುದು ಬಿಜೆಪಿಯ ರಣತಂತ್ರವಾಗಿದೆ ಎನ್ನಲಾಗಿದೆ.

BJP Flag

1,500 ರಥಗಳು ಸಜ್ಜು

ದೇಶದ ಸುಮಾರು 2.5 ಲಕ್ಷ ಗ್ರಾಮಗಳಲ್ಲಿ ರಥಗಳ ಮೂಲಕ ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳುವುದು ಬಿಜೆಪಿಯ ಯೋಜನೆಯಾಗಿದೆ. ಇದಕ್ಕಾಗಿ 1,500 ಅತ್ಯಾಧುನಿಕ ರಥಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ. ಜಿಪಿಎಸ್‌ ಅಳವಡಿಕೆ ಮಾಡಲಾದ, ಡ್ರೋನ್‌ಗಳ ನಿರ್ವಹಣೆ ಸೇರಿ ಹಲವು ರೀತಿಯಲ್ಲಿ ಜನರ ಜತೆ ಸಂವಾದ ನಡೆಸಲು ಸಾಧ್ಯವಾಗುವ ಅತ್ಯಾಧುನಿಕ ರಥಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಾಗಲೇ ರಥಯಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Lok Sabha Election 2024 : ಸೀಟು ಹಂಚಿಕೆ ಚರ್ಚೆ ಆಗಿಲ್ಲ; ಸುಮಲತಾ ʼಅತಂತ್ರʼದ ಬಗ್ಗೆ ಎಚ್‌ಡಿಕೆ ಹೇಳಿದ್ದೇನು?

ಕೇಂದ್ರದ ಸಚಿವರು, ಸಂಸದರು, ಬಿಜೆಪಿ ನಾಯಕರು, ಶಾಸಕರು ಸೇರಿ ಹಲವರು ಗ್ರಾಮೀಣ ಸಂವಾದ ಯಾತ್ರೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಕೇಂದ್ರ ಸರ್ಕಾರವು ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಇಳಿಸಿದೆ. ಇದರ ಜತೆಗೆ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನೂ ಇಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಭಾರಿ ಪ್ರಮಾಣದ ಪ್ರಚಾರಕ್ಕೂ ಬಿಜೆಪಿ ಎಲ್ಲ ರೀತಿಯಲ್ಲಿ ಸಜ್ಜಾಗುತ್ತಿದೆ.

Continue Reading
Advertisement
Nepal Team
ಕ್ರಿಕೆಟ್11 mins ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema16 mins ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ22 mins ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್24 mins ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್24 mins ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ31 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News49 mins ago

ind vs Aus : ಆಸ್ಟ್ರೇಲಿಯಾ ತಂಡದ ಮೊದಲ ವಿಕೆಟ್​ ಪತನ, ಡೇವಿಡ್ ವಾರ್ನರ್​ 56 ರನ್​ಗೆ ಔಟ್​​

Madhya Pradesh Rape News
ಕ್ರೈಂ1 hour ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ1 hour ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER1 hour ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌