Parbati Baruah: ಆನೆಗಳ ಒಡನಾಡಿಯನ್ನು ಅರಸಿ ಬಂತು ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಮೊದಲ ಮಹಿಳಾ ಮಾವುತರ ಸಾಹಸಗಾಥೆ - Vistara News

ದೇಶ

Parbati Baruah: ಆನೆಗಳ ಒಡನಾಡಿಯನ್ನು ಅರಸಿ ಬಂತು ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಮೊದಲ ಮಹಿಳಾ ಮಾವುತರ ಸಾಹಸಗಾಥೆ

Parbati Baruah: ಅಸ್ಸಾಂನ ಪಾರ್ವತಿ ಬರುವಾ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಭಾರತದ ಮೊದಲ ಮಹಿಳಾ ಆನೆ ಮಾವುತರಾದ ಅವರ ಸಾಹಸಗಾಥೆ ಇಲ್ಲಿದೆ.

VISTARANEWS.COM


on

parvathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಈ ಬಾರಿಯ ಪದ್ಮ ಪ್ರಶಸ್ತಿಗಳನ್ನು (Padma award) ಘೋಷಿಸಲಾಗಿದೆ. 110 ಪದ್ಮಶ್ರೀ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ ಸಾಧಕರಿಗೆ, ಅಪೂರ್ವ ಪ್ರತಿಭೆಗಳಿಗೆ ನೀಡಲಾಗಿದೆ. ಈ ಪೈಕಿ ಭಾರತದ ಮೊದಲ ಮಹಿಳಾ ಆನೆ ಮಾವುತ (India’s First Female Elephant Mahout) ಎಂದೇ ಕರೆಯಲ್ಪಡುವ ಪಾರ್ವತಿ ಬರುವಾ (Parbati Baruah) ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಅವರು ತಮ್ಮ 14 ವರ್ಷದಲ್ಲೇ ಮಾವುತರಾಗಿ ಗುರುತಿಸಿಕೊಂಡಿದ್ದು, ಸುಮಾರು 4 ದಶಕಗಳಿಂದ ಆನೆಯ ಒಡನಾಡಿಯಾಗಿದ್ದಾರೆ. ಪ್ರಸ್ತುವ ಅವರಿಗೆ 67 ವರ್ಷ.

ಹಸ್ತೀರ್ ಕನ್ಯಾ

ಪಾರ್ವತಿ ಅವರನ್ನು ‘ಹಸ್ತೀರ್ ಕನ್ಯಾ’ ಎಂದು ಕರೆಯಲಾಗುತ್ತದೆ. ಅಂದರೆ ಆನೆಯ ಪುತ್ರಿ ಎಂದರ್ಥ. ಸಮಾಜ ಕಲ್ಯಾಣ ಕ್ಷೇತ್ರದಲ್ಲಿನ ಗಣನೀಯ ಸೇವೆಗಾಗಿ ಅಸ್ಸಾಂ ಮೂಲದ ಇವರಿಗೆ ಪದ್ಮಶ್ರೀ ಲಭಿಸಿದೆ. ಪಾರ್ವತಿ ಅಸ್ಸಾಂನ ಶ್ರೀಮಂತ ಕುಟುಂಬವೊಂದರಲ್ಲಿ ಜನಿಸಿದರು. ಆಗೆಲ್ಲ ಆನೆಯನ್ನು ಮನೆಯಲ್ಲಿ ಸಾಕುವುದು ಬಹಳ ಪ್ರತಿಷ್ಠೆಯ ವಿಚಾರವಾಗಿತ್ತು. ಇವರ ಕುಟುಂಬವೂ ಆನೆಯನ್ನು ಸಾಕುತ್ತಿತ್ತು. ಇವರ ಬಳಿ ಸುಮಾರು 40 ಆನೆಗಳಿದ್ದವು. ಹೀಗಾಗಿ ಸಹಜವಾಗಿ ಬಾಲ್ಯದಲ್ಲಿಯೇ ಪಾರ್ವತಿ ಆನೆಗಳತ್ತ ಆಸಕ್ತಿ ಬೆಳೆಸಿದ್ದರು.

ಚಿಕ್ಕಂದಿನಿಂದಲೇ ಅವರು ಆನೆಯೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಆನೆಗೆ ತರಬೇತಿ ನೀಡುವುದನ್ನು ಕುತೂಹಲದ ಕಣ್ಣುಗಳಿಂದ ವೀಕ್ಷಿಸುತ್ತಿದ್ದರು. ಅವರ ಆಸಕ್ತಿಯನ್ನು ಗಮನಿಸಿ 14ನೇ ವಯಸ್ಸಿನಲ್ಲಿ ಅವರ ತಂದೆ ದಿ.ಪ್ರಾಕೃತೇಶ್ ಚಂದ್ರ ಬರುವಾ ಆನೆಗಳ ಪ್ರಪಂಚಕ್ಕೆ ಕರೆ ತಂದರು. ಅಲ್ಲಿಂದ ಅವರು ಮತ್ತೆ ಹಿಂದಿರುಗಿ ನೋಡಲೇ ಇಲ್ಲ.

ಆನೆಗಳ ಸೇವೆಗಾಗಿ ಜೀವವೇ ಮುಡಿಪು

ಪಾರ್ವತಿ ಆನೆಗಳಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದರೆ ಅದು ಖಂಡಿತಾ ಅತಿಶಯೋಕ್ತಿಯಲ್ಲ. ಗಜ ಪಡೆಗಳ ಜೀವನ ಮಟ್ಟ ಸುಧಾರಣೆಗೆ ಅವರು ಹಲವು ರೀತಿಯ ಕ್ರಮ ಕೈಗೊಂಡಿದ್ದಾರೆ. ಅವರು ತಮ್ಮ 14ನೇ ವಯಸ್ಸಿನಲ್ಲಿ ಅಸ್ಸಾಂನ ಕೊಚುಗಾಂವ್ ಅರಣ್ಯದಲ್ಲಿ (Kochugaon forest) ಮೊದಲ ಬಾರಿಗೆ ಆನೆಯನ್ನು ಸಾಕಿದರು. ಅವರು ಅಸ್ಸಾಂ (ದರ್ರಾಂಗ್ ಮತ್ತು ಕೊಚುಗಾಂವ್) ಮತ್ತು ಉತ್ತರ ಬಂಗಾಳದ (ಜಲ್ಪೈಗುರಿ ಮತ್ತು ಡಾರ್ಜಿಲಿಂಗ್) ಕಾಡುಗಳಲ್ಲಿ 14 ಆನೆಗಳನ್ನು ಸ್ವತಂತ್ರವಾಗಿ ಪಳಗಿಸಿದರು. ಹೊಸದಾಗಿ ಪಳಗಿಸಿದ ಆನೆಗಳ ಚಿಕಿತ್ಸೆ ಮತ್ತು ಶುಶ್ರೂಷೆಯಲ್ಲಿ ಅವರು ಅರಣ್ಯ ಅಧಿಕಾರಿಗಳಿಗೆ ಸಹಾಯ ಮಾಡಿದರು. 2000ರಲ್ಲಿ ಪಶ್ಚಿಮ ಬಂಗಾಳ ಅರಣ್ಯ ಇಲಾಖೆ ಆಯೋಜಿಸಿದ್ದ ಆನೆ ಗಣತಿಗಾಗಿ ಕೆಲಸ ಮಾಡುವ ಮಾವುತರು ಮತ್ತು ಕ್ಷೇತ್ರ ಸಿಬ್ಬಂದಿಗೆ ತರಬೇತಿಯನ್ನು ಆಯೋಜಿಸಲು ಅಗತ್ಯ ಮಾರ್ಗದರ್ಶನ ನೀಡಿದರು.

ಚೀಫ್‌ ಎಲಿಫೆಂಟ್‌ ವಾರ್ಡನ್‌

ಆನೆಗಳ ಕಲ್ಯಾಣಕ್ಕಾಗಿ ಕಾರ್ಯ ನಿರ್ವಹಿಸುವ ಪಾರ್ವತಿ ಅವರಿಗೆ 1989ರಲ್ಲಿ ವಿಶ್ವಸಂಸ್ಥೆಯ ʼಗ್ಲೋಬಲ್ 500- ರೋಲ್ ಆಫ್ ಹಾನರ್ʼ (Global 500 – Roll of Honour) ಪ್ರಶಸ್ತಿ ಲಭಿಸಿತು. ಅಲ್ಲದೆ 2003ರ ಜನವರಿ 11ರಂದು ಅಸ್ಸಾಂ ಸರ್ಕಾರವು ಅವರನ್ನು ʼHonorary Chief Elephant Warden of Assamʼ ಎಂದು ಗೌರವಿಸಿತು.

ಬಹುಮುಖ ಪ್ರತಿಭೆ

ಪಾರ್ವತಿ ಅವರು ಆನೆಯ ಬಗ್ಗೆ, ಅವುಗಳ ಜೀವನ ವಿಧಾನಗಳ ಬಗ್ಗೆ ಹಲವು ಲೇಖನಗಳನ್ನು ಇಂಗ್ಲಿಷ್‌, ಬಂಗಾಳಿ ಮತ್ತು ಅಸ್ಸಾಮಿಯಲ್ಲಿ ಬರೆದಿದ್ದಾರೆ. ಅಲ್ಲದೆ ಅವರು ಗೋಲ್ಪಾರನ್ ಜಾನಪದ ನೃತ್ಯದಲ್ಲಿ ಪರಿಣಿತಿ ಹೊಂದಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಪ್ರದರ್ಶನವನ್ನೂ ನೀಡಿದ್ದಾರೆ. ಮಾನವರನ್ನು ಕೊಂದ ಆನೆಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿದ ಏಕೈಕ ಮಹಿಳಾ ಮಾವುತ ಎನ್ನುವ ಹೆಗ್ಗಳಿಕೆಗೂ ಪಾರ್ವತಿ ಪಾತ್ರರಾಗಿದ್ದಾರೆ. ಅವರು ವಿಶ್ವಸಂಸ್ಥೆಯ ಏಷ್ಯನ್ ಎಲಿಫೆಂಟ್ ಸ್ಪೆಷಲಿಸ್ಟ್ ಗ್ರೂಪ್ ಮತ್ತು ಅಸ್ಸಾಂ ಸರ್ಕಾರದ ʼಮಾನವ-ಆನೆ ಸಂಘರ್ಷʼ (Man- Elephant Conflict) ಕಾರ್ಯಪಡೆಯ ಸದಸ್ಯರೂ ಹೌದು.

ಇದನ್ನೂ ಓದಿ: Padma Awards: ರೋಹನ್ ಬೋಪಣ್ಣ, ಅನುಪಮಾ ಹೊಸಕೆರೆ, ಸಿ.ಆರ್ ಚಂದ್ರಶೇಖರ್ ಸೇರಿ 8 ಕನ್ನಡಿಗರಿಗೆ ಪದ್ಮಶ್ರೀ

ಆನೆಗಳ ರಾಣಿ

ಬಿಬಿಸಿ ಹೊರ ತಂದ ʼಕ್ವೀನ್‌ ಆಫ್‌ ಎಲಿಫೆಂಟ್‌ʼ ಎಂಬ ಸಾಕ್ಷ್ಯ ಚಿತ್ರದ ಬಳಿಕ ಪಾರ್ವತಿ ಹೆಸರು ಇನ್ನಷ್ಟು ಜನಪ್ರಿಯವಾಯಿತು. ಈ ಡಾಕ್ಯುಮೆಂಟ್ರಿ ಅವರ ಜೀವನದ ಮೇಲೆ ಬೆಳಕು ಚೆಲ್ಲಿತ್ತು. ಆನೆಗಳೊಂದಿಗೆ ಅವರ ಒಡನಾಟ, ನಿಸ್ವಾರ್ಥ ಸೇವೆಯನ್ನು ʼಕ್ವೀನ್‌ ಆಫ್‌ ಎಲಿಫೆಂಟ್‌ʼ ಎಳೆ ಎಳೆಯಾಗಿ ಬಿಚ್ಚಿಟ್ಟಿತ್ತು. ಇದೀಗ ಪದ್ಮಶ್ರೀ ಪ್ರಶಸ್ತಿ ಅವರನ್ನು ಅರಸಿಕೊಂಡು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

Tirupati Temple: ತಿರುಮಲ ತಿರುಪತಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ ಬಿಡುಗಡೆ ಮಾಡಿದೆ. ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

VISTARANEWS.COM


on

Tirupathi Temple
Koo

ತಿರುಪತಿ: ದೇಶದ ಪ್ರಸಿದ್ಧ ಯಾತ್ರಾ ಸ್ಥಳ ತಿರುಮಲ ತಿರುಪತಿ ದೇವಸ್ಥಾನ(Tirupati Temple)ಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌. ಆಗಸ್ಟ್ ತಿಂಗಳ ದರ್ಶನ ಟಿಕೆಟ್ ವೇಳಾಪಟ್ಟಿಯನ್ನು ತಿರುಪತಿ ತಿರುಮಲ ದೇವಸ್ಥಾನ (TTD) ಬಿಡುಗಡೆ ಮಾಡಿದೆ. ಹೀಗಾಗಿ ಆಗಸ್ಟ್‌ನಲ್ಲಿ ತಿರುಪತಿಗೆ ಭೇಟಿ ನೀಡಲು ಬಯಸುವ ಭಕ್ತರು ಈ ಪಟ್ಟಿಯನ್ನು ಗಮನಿಸಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ತಿರುಮಲ ಶ್ರೀವಾರಿ ಆರ್ಜಿತ ಸೇವಾ ಟಿಕೆಟ್‌ಗಳ ಕೋಟಾವನ್ನು ಮೇ 18ರಂದು ಬಿಡುಗಡೆ ಮಾಡಲಾಗುವುದು. ಬೆಳಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಈ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ. ಈ ಸೇವಾ ಟಿಕೆಟ್‌ಗಳ ಎಲೆಕ್ಟ್ರಾನಿಕ್ ಡಿಪ್‌ಗಾಗಿ ಭಕ್ತರು ಮೇ 20ರಂದು ಬೆಳಿಗ್ಗೆ 10 ಗಂಟೆಯವರೆಗೆ ಆನ್‌ಲೈನ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಟಿಕೆಟ್ ಪಡೆದವರು ಮೇ 20ರಿಂದ ಮೇ 22ರವರೆಗೆ ಮಧ್ಯಾಹ್ನ 12 ಗಂಟೆಯೊಳಗೆ ಹಣ ಪಾವತಿಸಿದರೆ ಲಕ್ಕಿಡಿಪ್‌ನಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ.

ಶ್ರೀವಾರಿ ದೇವಸ್ಥಾನದಲ್ಲಿ ವಾರ್ಷಿಕ ಪವಿತ್ರೋತ್ಸವ ಆಗಸ್ಟ್ 15ರಿಂದ 17ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಡೆಸುವ ಕಲ್ಯಾಣೋತ್ಸವ, ಊಂಜಾಲ್ ಸೇವೆ, ಆರ್ಜಿತ ಬ್ರಹ್ಮೋತ್ಸವ, ಸಹಸ್ರ ದೀಪಾಲಂಕರ ಸೇವೆ, ವಾರ್ಷಿಕ ಪವಿತ್ರೋತ್ಸವ ಸೇವಾ ಟಿಕೆಟ್‌ಗಳನ್ನು ಮೇ 21ರಂದು ಬೆಳಿಗ್ಗೆ 10 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಮಾತ್ರವಲ್ಲ ತಿರುಮಲ ಶ್ರೀವಾರಿ ವರ್ಚುವಲ್ ಸೇವೆಗಳಿಗೆ ಸಂಬಂಧಿಸಿದ ಆಗಸ್ಟ್ ತಿಂಗಳ ಕೋಟಾ ಮತ್ತು ಅವುಗಳ ಸ್ಲಾಟ್‌ಗಳನ್ನು ಮೇ 21ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಲಭ್ಯ. ಜತೆಗೆ ಆಗಸ್ಟ್‌ನ ಅಂಗಪ್ರದಕ್ಷಿಣಂ ಟೋಕನ್‌ಗಳ ಕೋಟಾವನ್ನು ಮೇ 23ರಂದು ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ವಿಶೇಷ ಚೇತನರು, ವೃದ್ಧರಿಗಾಗಿ ವಿಶೇಷ ಕೋಟಾ

ವೃದ್ಧರು, ವಿಶೇಷ ಚೇತನರು ಮತ್ತು ದೀರ್ಘಕಾಲದ ಕಾಯಿಲೆ ಇರುವವರಿಗೆ ನೀಡಲಾಗುವ ಆಗಸ್ಟ್‌ನ ಉಚಿತ ವಿಶೇಷ ದರ್ಶನ ಟಿಕೆಟ್‌ಗಳು ಮೇ 23ರಂದು ಮಧ್ಯಾಹ್ನ 3 ಗಂಟೆಯಿಂದ ಆನ್‌ಲೈನ್‌ನಲ್ಲಿ ಲಭಿಸಲಿದೆ. ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಟಿಟಿಡಿ ಆಗಸ್ಟ್ ತಿಂಗಳ ವಿಶೇಷ ಪ್ರವೇಶ ದರ್ಶನ ಟಿಕೆಟ್‌ಗಳನ್ನು ಪ್ರಕಟಿಸಲಿದೆ. ಜತೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಆಗಸ್ಟ್ ರೂಮ್ ಕೋಟಾವನ್ನು ಮೇ 24 ರಂದು ಮಧ್ಯಾಹ್ನ 3 ಗಂಟೆಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಟಿಕೆಟ್‌ ಬುಕ್‌ ಮಾಡುವ ವಿಧಾನ

  • ತಿರುಮಲ ತಿರುಪತಿ ದೇವಸ್ಥಾನಗಳ ದರ್ಶನ ಟಿಕೆಟ್ ಬುಕ್ ಮಾಡಲು, ಟಿಟಿಡಿಯ ಅಧಿಕೃತ ಆನ್‌ಲೈನ್ ಬುಕಿಂಗ್ ವೆಬ್‌ಸೈಟ್‌ https://ttdevasthanams.ap.gov.inಗೆ ಭೇಟಿ ನೀಡಿ.
  • ದರ್ಶನ ಪ್ರಕಾರವನ್ನು ಆಯ್ಕೆ ಮಾಡಿಕೊಂಡು ಮೊಬೈಲ್‌ ನಂಬರ್‌ ನೀಡಿ ಲಾಗಿನ್‌ ಆಗಿ.
  • ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
  • ಆಲ್‌ನೈಲ್‌ ಮೂಲಕ ಟಿಕೆಟ್‌ ಮೊತ್ತವನ್ನು ಪಾವತಿಸಿ.
  • ನಿಮ್ಮ ಟಿಕೆಟ್‌ ಬುಕ್‌ ಆಗಿರುವ ಬಗ್ಗೆ ಮಾಹಿತಿ ಎಸ್‌ಎಂಎಸ್‌ ಮೂಲಕ ನಿಮಗೆ ರವಾನೆಯಾಗುತ್ತದೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಜನದಟ್ಟಣೆ ನಿಭಾಯಿಸುವ ಸಲಹೆ ನೀಡಿದ ತಿರುಪತಿಯ ಎಂಜಿನಿಯರ್‌ಗಳ ತಂಡ

Continue Reading

ತಂತ್ರಜ್ಞಾನ

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Elon Musk: ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಭಾರತದ 1,84,241 ಎಕ್ಸ್‌ ಖಾತೆಗಳನ್ನು ನಿಷೇಧಿಸಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಕಳೆದ ಬಾರಿ ಇದೇ ಕಾರಣಕ್ಕೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು.

VISTARANEWS.COM


on

Elon Musk
Koo

ನವದೆಹಲಿ: ಉದ್ಯಮಿ ಎಲಾನ್‌ ಮಸ್ಕ್‌ (Elon Musk) ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್‌ (Social media X) ಈ ವರ್ಷದ ಮಾರ್ಚ್ 26ರಿಂದ ಏಪ್ರಿಲ್ 25ರ ನಡುವೆ ಭಾರತದಲ್ಲಿ 1,84,241 ಖಾತೆಗಳನ್ನು ನಿಷೇಧಿಸಿದೆ. ಮಕ್ಕಳ ಲೈಂಗಿಕ ಶೋಷಣೆ ಮತ್ತು ಒಮ್ಮತವಿಲ್ಲದ ನಗ್ನತೆಯನ್ನು ಉತ್ತೇಜಿಸಿದ್ದಕ್ಕಾಗಿ ಹೆಚ್ಚಿನ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ. ಜತೆಗೆ ದೇಶದಲ್ಲಿ ಭಯೋತ್ಪಾದನೆಯನ್ನು ಉತ್ತೇಜಿಸಲಾಗುತ್ತದೆ ಎನ್ನುವ ಕಾರಣಕ್ಕೆ 1,303 ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಎಕ್ಸ್‌ ಹೊಸ ಐಟಿ ನಿಯಮ 2021ರ ಪ್ರಕಾರ ತನ್ನ ಮಾಸಿಕ ವರದಿ ಬಿಡುಗಡೆ ಮಾಡಿದೆ. ಅದರಲ್ಲಿ ಈ ಅಂಕಿ-ಅಂಶ ಬಹಿರಂಗಗೊಂಡಿದೆ. ಅದರಂತೆ ಈ ವೇಳೆ ಭಾರತೀಯ ಬಳಕೆದಾರರಿಂದ ಸುಮಾರು 18,562 ದೂರುಗಳ ಬಂದಿತ್ತು ಎಂದು ಸಂಸ್ಥೆ ಹೇಳಿದೆ.

ನಿಷೇಧಿತ ಖಾತೆಗಳು

ಭಾರತದಲ್ಲಿ ದಾಖಲಾದ ದೂರುಗಳ ಪೈಕಿ ನಿರ್ಬಂಧಗಳ ಉಲ್ಲಂಘನೆ (7,555), ದ್ವೇಷಪೂರಿತ ನಡವಳಿಕೆ (3,353), ಸೂಕ್ಷ್ಮ ವಯಸ್ಕ ವಿಷಯ (3,335) ಮತ್ತು ನಿಂದನೆ/ಕಿರುಕುಳ (2,402) ಹೆಚ್ಚಿನ ಸಂಖ್ಯೆಯಲ್ಲಿವೆ. ಇದಕ್ಕೂ ಹಿಂದಿನ ಬಾರಿ ಅಂದರೆ ಫೆಬ್ರವರಿ 26 ಮತ್ತು ಮಾರ್ಚ್ 25ರ ನಡುವೆ ದೇಶದಲ್ಲಿ 2,12,627 ಎಕ್ಸ್ ಖಾತೆಗಳನ್ನು ನಿಷೇಧಿಸಲಾಗಿತ್ತು. ಈ ಪೈಕಿ ಭಯೋತ್ಪಾದನೆಯನ್ನು ಉತ್ತೇಜಿಸಿದ್ದಕ್ಕಾಗಿ 1,235 ಖಾತೆಗಳನ್ನು ತೆಗೆದು ಹಾಕಲಾಗಿತ್ತು.

ಎಕ್ಸ್‌ಮೇಲ್‌ ಮೂಲಕ ಜಿಮೇಲ್‌ಗೆ ಪೈಪೋಟಿ

ಚಾಟ್‌ಜಿಪಿಟಿಗೆ (ChatGPT) ಪ್ರತಿಯಾಗಿ ತನ್ನದೇ ಆದ ಎಐ ಆವೃತ್ತಿಯನ್ನು ಬಿಡುಗಡೆ ಮಾಡಿದ ನಂತರ ಉದ್ಯಮಿ ಎಲಾನ್ ಮಸ್ಕ್ (Elon Musk) ಅವರು ಎಕ್ಸ್‌ಮೇಲ್ (Xmail) ಸೇವೆ ಆರಂಭಿಸುವುದನ್ನು ಖಚಿತಪಡಿಸಿದ್ದಾರೆ. ಎಕ್ಸ್‌ಮೇಲ್, ಗೂಗಲ್‌ನ (Google) ಜನಪ್ರಿಯ ಜಿಮೇಲ್‌ಗೆ (Gmail) ಪೈಪೋಟಿ ನೀಡಲಿದೆ. ಈ ಮಧ್ಯೆ, ಗೂಗಲ್‌ ತನ್ನ ಜಿಮೇಲ್ ಸೇವೆಯನ್ನು ಸ್ಥಗಿತಗೊಳಿಸಲಿದೆ ಎಂಬ ವದಂತಿ ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಗೂಗಲ್, ಜಿಮೇಲ್ ಸ್ಥಗಿತವಾಗುತ್ತಿಲ್ಲ. ಈ ಹಿಂದೆ ಎಚ್‌ಟಿಎಂಎಲ್ ಆಗಿದ್ದ ಡಿಫಾಲ್ಟ್ ಜಿಮೇಲ್ ಇಂಟರ್‌ಫೇಸ್‌ ಅನ್ನು ಮತ್ತಷ್ಟು ವರ್ಣರಂಜಿತಗೊಳಿಸಲಿದೆ. ಈ ಬದಲಾವಣೆ ಜನವರಿ 24ರಿಂದಲೇ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಎಕ್ಸ್‌ನಲ್ಲಿನ ಸಂಭಾಷಣೆಯೊಂದರಲ್ಲಿ ಮಸ್ಕ್ ಅವರು ‘ಎಕ್ಸ್‌ಮೇಲ್’ ಎಂದು ಕರೆಯಲ್ಪಡುವ ಉತ್ಪನ್ನವು ‘ಬರುತ್ತಿದೆ’ ಎಂದು ಹೇಳಿದ್ದಾರೆ. ಗೂಗಲ್‌ ಜಿಮೇಲ್ ಸ್ಥಗಿತವಾಗಲಿದೆ ಎಂಬ ನಕಲಿ ದಾಖಲೆಯು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವಾಗಲೇ ಎಕ್ಸ್‌ಮೇಲ್ ಆರಂಭದ ಕುರಿತು ಮಸ್ಕ್ ಹೇಳಿಕೆಯು ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಇಷ್ಟಾಗಿಯೂ ಎಕ್ಸ್‌ಮೇಲ್ ಆರಂಭದ ಕುರಿತು ಹೆಚ್ಚೇನೂ ಅವರು ಮಾಹಿತಿಯನ್ನು ನೀಡಿಲ್ಲ. ಈ ಸೇವೆ ಯಾವಾಗ ಆರಂಭವಾಗಲಿದೆ ಎಂಬ ಬಗ್ಗೆ ಯಾವುದೇ ವಿವರವನ್ನು ನೀಡಿಲ್ಲ. ಎಕ್ಸ್‌ನ ಸೆಕ್ಯುರಿಟಿ ಇಂಜಿನಿಯರಿಂಗ್ ತಂಡದ ಹಿರಿಯ ಸದಸ್ಯರಾದ ನಾಥನ್ ಮೆಕ್‌ಗ್ರಾಡಿ ಅವರು ಎಕ್ಸ್‌ಮೇಲ್ ಲಾಂಚ್ ದಿನಾಂಕದ ಬಗ್ಗೆ ಪ್ರಶ್ನಿಸಿದ ನಂತರ ಈ ದೃಢೀಕರಣವು ಬಂದಿದೆ. ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಮಸ್ಕ್, ಎಕ್ಸ್ ಮೇಲ್ ಶೀಘ್ರವೇ ಚಾಲ್ತಿಗೆ ಬರಲಿದೆ ಎಂದು ದೃಢಿಕರಿಸಿದರು.

ಇದನ್ನೂ ಓದಿ: OpenAI ChatGPT: ಚಾಟ್‌ಜಿಪಿಟಿ VS ಇಲಾನ್ ಮಸ್ಕ್‌ನ ಗ್ರೋಕ್‌: ಏನು ವ್ಯತ್ಯಾಸ?

Continue Reading

ದೇಶ

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

ಪಾಕಿಸ್ತಾನದ ಬಳಿ ಅಣುಬಾಂಬ್‌ ಇವೆ ಎಂದು ಎಚ್ಚರಿಸಿದ್ದ ಕಾಂಗ್ರೆಸ್‌ ನಾಯಕರ ಮಣಿಶಂಕರ್‌ ಅಯ್ಯರ್‌ ಅವರಿಗೆ ಯೋಗಿ ಆದಿತ್ಯನಾಥ್‌ ತಿರುಗೇಟು ನೀಡಿದರು. “ನಾವೇನೂ ಅಣುಬಾಂಬ್‌ಗಳನ್ನು ಫ್ರಿಡ್ಜ್‌ನಲ್ಲಿ ಇರಿಸಲು ತಯಾರಿಸಿಲ್ಲ. ಇದು ಹೊಸ ಭಾರತ. ನಮ್ಮ ತಂಟೆಗೆ ಬಂದರೆ ಯಾರನ್ನೂ ನಾವು ಬಿಡುವುದಿಲ್ಲ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ಭಾರತ ಕಳೆದ 10 ವರ್ಷಗಳಲ್ಲಿ ಕಂಡುಕೊಂಡಿದೆ” ಎಂದು ಹೇಳಿದರು.

VISTARANEWS.COM


on

Yogi Adityanath
Koo

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ಪಾಕಿಸ್ತಾನದ ಕುರಿತು ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾಗಿದೆ. “ಪಾಕಿಸ್ತಾನದ ಬಳಿ ಅಣುಬಾಂಬ್‌ಗಳು ಇವೆ, ನಾವು ಆ ರಾಷ್ಟ್ರವನ್ನು ಗೌರವಿಸಬೇಕು” ಎಂದು ಮಣಿಶಂಕರ್‌ ಅಯ್ಯರ್‌ ನೀಡಿದ ಹೇಳಿಕೆಯಿಂದ ಖುದ್ದು ಕಾಂಗ್ರೆಸ್‌ ಪಕ್ಷವೇ ಅಂತರ ಕಾಯ್ದುಕೊಂಡಿದೆ. ಇದರ ಬೆನ್ನಲ್ಲೇ, ಮಣಿಶಂಕರ್‌ ಅಯ್ಯರ್‌ ಅವರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಅವರು ತಿರುಗೇಟು ನೀಡಿದ್ದು, “ನಮ್ಮ ಬಳಿಯ ಅಣುಬಾಂಬ್‌ಗಳು ಫ್ರಿಡ್ಜ್‌ನಲ್ಲಿ ಇಡಲು ತಯಾರಿಸಿದ್ದೇವೆಯೇ” ಎಂದಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ನ ಆಪ್‌ ಕಿ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯೋಗಿ ಆದಿತ್ಯನಾಥ್‌, ಮಣಿಶಂಕರ್‌ ಅಯ್ಯರ್‌ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದರು. “ನಾವೇನೂ ಫ್ರಿಡ್ಜ್‌ನಲ್ಲಿ ಇರಿಸಲು ಅಣುಬಾಂಬ್‌ ತಯಾರಿಸಿಲ್ಲ. ಇದು ನವ ಭಾರತ. ಹೊಸ ಭಾರತವು ಯಾರ ತಂಟೆಗೂ ಹೋಗುವುದಿಲ್ಲ. ಹಾಗಂತ, ನಮ್ಮ ತಂಟೆಗೆ ಬಂದರೆ ಸುಮ್ಮನೆ ಇರುವುದಿಲ್ಲ. ನಮ್ಮ ತಂಟೆಗೆ ಬಂದವರ ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವ ಸಾಮರ್ಥ್ಯ ಹೊಂದಿದ್ದೇವೆ” ಎಂದು ಹೇಳಿದರು.

“ಮನೆಗೆ ನುಗ್ಗಿ ಪ್ರತ್ಯುತ್ತರ ನೀಡುವುದನ್ನು ಭಾರತ ಸಾಬೀತುಪಡಿಸಿದೆ. ಇದಕ್ಕೂ ಮೊದಲು ದೇಶದ ಹಲವೆಡೆ ಸ್ಫೋಟಗಳು ಸಂಭವಿಸಿದವು. ಮುಂಬೈ, ಅಯೋಧ್ಯೆ, ದೆಹಲಿ, ಕಾಶಿ, ಲಖನೌ, ವಾರಾಣಸಿ, ಗೋರಖ್‌ಪುರ ಸೇರಿ ಹಲವೆಡೆ ದಾಳಿಗಳು ನಡೆದವು. ದೇಶದ ಸಂಸತ್‌ ಮೇಲೆಯೇ ದಾಳಿ ನಡೆಯಿತು. ವಿವಿಧ ಸಂದರ್ಭಗಳಲ್ಲಿ ಹಲವು ರೀತಿಯ ದಾಳಿ ನಡೆದವು. ಆದರೆ, ಕಳೆದ 10 ವರ್ಷಗಳಲ್ಲಿ ಉಗ್ರವಾದ, ನಕ್ಸಲ್‌ವಾದವನ್ನು ನಿಗ್ರಹಿಸಲಾಗಿದೆ. ಭಾರತದಲ್ಲಿ ಜೋರಾಗಿ ಪಟಾಕಿ ಸಿಡಿದರೂ, ಇದರ ಹಿಂದೆ ನಮ್ಮ ಕೈವಾಡವಿಲ್ಲ ಎಂದು ಪಾಕಿಸ್ತಾನ ಹೇಳುತ್ತದೆ. ಇದು ಭಾರತದ ತಾಕತ್ತು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಅಂತಹ ಸಾಮರ್ಥ್ಯ ಬೆಳೆಸಿಕೊಂಡಿದೆ” ಎಂದು ತಿಳಿಸಿದರು.

ಮಣಿಶಂಕರ್‌ ಅಯ್ಯರ್‌ ಹೇಳಿದ್ದೇನು?

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದರು.

ಇದನ್ನೂ ಓದಿ: ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

Continue Reading

ದೇಶ

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Maggi Tragedy: ಡೆಹ್ರಾಡೂನ್‌ನ ಸೀಮಾ ಎಂಬುವರು ಪತಿ, ಮೂವರು ಮಕ್ಕಳ ಜತೆ ತಮ್ಮ ತವರು ಮನೆ ಇರುವ ರಾಹುಲ್‌ ನಗರಕ್ಕೆ ಆಗಮಿಸಿದರು. ಕಳೆದ ಗುರುವಾರ (ಮೇ 9) ರಾತ್ರಿ ಮೂವರು ಮಕ್ಕಳು ಸೇರಿ ಎಲ್ಲರೂ ಮ್ಯಾಗಿ ಹಾಗೂ ಅನ್ನ ಊಟ ಮಾಡಿದ್ದಾರೆ. ರಾತ್ರಿ ಮಲಗಿದವರೇ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಎಲ್ಲರಿಗೂ ವಾಂತಿ-ಭೇದಿ ಕಾಣಿಸಿಕೊಂಡಿದೆ.

VISTARANEWS.COM


on

Maggi Tragedy
Koo

ಲಖನೌ: ಉತ್ತರ ಪ್ರದೇಶದ ಪಿಲಿಭಿಟ್‌ನಲ್ಲಿ (Pilibhit) ಮ್ಯಾಗಿ ಸೇವಿಸಿ 10 ವರ್ಷದ ಬಾಲಕನೊಬ್ಬ (Maggi Tragedy) ಮೃತಪಟ್ಟಿದ್ದಾನೆ. ಒಂದೇ ಕುಟುಂಬದ ಐವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಜಾರ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಹುಲ್‌ ನಗರದಲ್ಲಿ (Rahul Nagar) ಘಟನೆ ನಡೆದಿದೆ. ಪುರಾನ್‌ಪುರದ ಸಿಎಚ್‌ಸಿಯಲ್ಲಿ ಐವರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಡೆಹ್ರಾಡೂನ್‌ನ ಸೀಮಾ ಎಂಬುವರು ಪತಿ, ಮೂವರು ಮಕ್ಕಳ ಜತೆ ತಮ್ಮ ತವರು ಮನೆ ಇರುವ ರಾಹುಲ್‌ ನಗರಕ್ಕೆ ಆಗಮಿಸಿದರು. ಕಳೆದ ಗುರುವಾರ (ಮೇ 9) ರಾತ್ರಿ ಮೂವರು ಮಕ್ಕಳು ಸೇರಿ ಎಲ್ಲರೂ ಮ್ಯಾಗಿ ಹಾಗೂ ಅನ್ನ ಊಟ ಮಾಡಿದ್ದಾರೆ. ರಾತ್ರಿ ಮಲಗಿದವರೇ ಒಬ್ಬೊಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಎಲ್ಲರಿಗೂ ವಾಂತಿ-ಭೇದಿ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆ ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ 10 ವರ್ಷದ ಬಾಲಕನು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಚಿಕನ್‌ ಶವರ್ಮಾ ತಿಂದು ಯುವಕ ಸಾವು

ಮಹಾರಾಷ್ಟ್ರದಲ್ಲಿ ಕೆಲ ದಿನಗಳ ಹಿಂದಷ್ಟೇ ಚಿಕನ್‌ ಶವರ್ಮಾ ಸೇವಿಸಿ 19 ವರ್ಷದ ಯುವಕ ಮೃತಪಟ್ಟಿದ್ದ. ಮೃತ ಯುವಕನನ್ನು ಪ್ರಥಮೇಶ್‌ ಭೋಕ್ಸೆ ಎಂದು ಗುರುತಿಸಲಾಗಿತ್ತು. ಮೇ 3ರಂದು ಸಾಯಂಕಾಲ ಮುಂಬೈನ ಮಾಂಖುರ್ದ್‌ ಪ್ರದೇಶದಲ್ಲಿರುವ ಬೀದಿ ಬದಿಯ ಅಂಗಡಿಯೊಂದಕ್ಕೆ ತೆರಳಿದ ಯುವಕನು ಚಿಕನ್‌ ಶವರ್ಮಾ ತಿಂದಿದ್ದಾನೆ. ಇದಾದ ಬಳಿಕ ಆತನು ಎಂದಿನಂತೆ ಮನೆಗೆ ತೆರಳಿದ್ದಾನೆ. ಮನೆಗೆ ತೆರಳಿದ ಮರುದಿನವೇ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪದೇಪದೆ ವಾಂತಿ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ತೀವ್ರವಾಗಿ ಅಸ್ವಸ್ಥಗೊಂಡಿದ್ದ ಯುವಕನು ಮಂಗಳವಾರ (ಮೇ 7) ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಬೀದಿ ಬದಿ ಅಂಗಡಿ ಮಾಲೀಕರು ಚಿಕನ್‌ ಶವರ್ಮಾ ತಯಾರಿಸುವಾಗ ಅದಕ್ಕೆ ಕೊಳೆತ ಮಾಂಸವನ್ನು ಬೆರೆಸಿದ್ದೇ ಯುವಕ ಮೃತಪಟ್ಟು, ಐವರು ಅಸ್ವಸ್ಥರಾಗಲು ಕಾರಣ ಎಂದು ತಿಳಿದುಬಂದಿತ್ತು. ಐವರು ಅಸ್ವಸ್ಥರು ಕೆಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಪ್ರಥಮೇಶ್‌ ಭೋಕ್ಸೆ ಸಾವಿನ ಬಳಿಕ ಅಂಗಡಿ ಮಾಲೀಕರ ವಿರುದ್ಧ ಆತನ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದಾದ ಬಳಿಕ ಇಬ್ಬರು ಅಂಗಡಿ ಮಾಲೀಕರನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Continue Reading
Advertisement
Prajwal Revanna Case Two people of pen drive allottees arrested
ಕ್ರೈಂ13 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

karnataka Rain Effected
ಮಳೆ14 mins ago

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Pavithra Jayaram Trinayani serial Fame No More
ಕಿರುತೆರೆ17 mins ago

Pavithra Jayaram: ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

six seats of Karnataka Legislative Council Elections to be held on June 3
ರಾಜಕೀಯ45 mins ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್45 mins ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Shekhar Suman Says Sex Workers Keep Society
ಬಾಲಿವುಡ್53 mins ago

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Tirupathi Temple
ದೇಶ54 mins ago

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

POSCO Case in Tumkur
ತುಮಕೂರು1 hour ago

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Mamitha Baiju
ಚಿನ್ನದ ದರ2 hours ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ2 hours ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Two people of pen drive allottees arrested
ಕ್ರೈಂ13 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ8 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು22 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

ಟ್ರೆಂಡಿಂಗ್‌