Special Parliament Session: ಇಂದಿನಿಂದ ಸಂಸತ್‌ ವಿಶೇಷ ಅಧಿವೇಶನ; ಕಾದಿದೆಯಾ ಅಚ್ಚರಿ? - Vistara News

ದೇಶ

Special Parliament Session: ಇಂದಿನಿಂದ ಸಂಸತ್‌ ವಿಶೇಷ ಅಧಿವೇಶನ; ಕಾದಿದೆಯಾ ಅಚ್ಚರಿ?

Special Parliament Session: ಸೋಮವಾರದಿಂದ ಐದು ದಿನಗಳ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗಲಿದೆ. ಕೇಂದ್ರ ಸರ್ಕಾರ ನಾಲ್ಕು ವಿಧೇಯಕ ಮಂಡಿಸಲು ಸಜ್ಜಾಗಿದ್ದರೆ, ಮಣಿಪುರ ಹಿಂಸೆ ಸೇರಿ ಹಲವು ವಿಷಯ ಪ್ರಸ್ತಾಪಿಸಿ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಪ್ರತಿಪಕ್ಷಗಳ ಯೋಜನೆಯಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಸೋಮವಾರದಿಂದ (ಸೆಪ್ಟೆಂಬರ್‌ 18) ಸಂಸತ್ತಿನ ವಿಶೇಷ ಅಧಿವೇಶನ (Special Parliament Session) ಆರಂಭವಾಗಲಿದ್ದು, ಐದು ದಿನ ಕಲಾಪಗಳು ನಡೆಯಲಿವೆ. ಒಂದು ರಾಷ್ಟ್ರ, ಒಂದು ಚುನಾವಣೆ, ಇಂಡಿಯಾ ಎಂಬ ಹೆಸರನ್ನು ಭಾರತ ಎಂಬುದಾಗಿ ಬದಲಿಸುವ ವಿಧೇಯಕ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ವಕೀಲರ ತಿದ್ದುಪಡಿ ವಿಧೇಯಕ ಸೇರಿ ನಾಲ್ಕು ವಿಧೇಯಕಗಳನ್ನು ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಸೆಪ್ಟೆಂಬರ್‌ 22ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಮಣಿಪುರ ಹಿಂಸಾಚಾರ, ಅದಾನಿ ಪ್ರಕರಣ, ಬೆಲೆಯೇರಿಕೆ ಸೇರಿ ಹಲವು ವಿಷಯಗಳ ಮೂಲಕ ಸರ್ಕಾರವನ್ನು ಪೇಚಿಗೆ ಸಿಲುಕಿಸಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ ಎಂದು ತಿಳಿದುಬಂದಿದೆ.

ಹೊಸ ಸಂಸತ್‌ ಭವನದಲ್ಲಿ ಮೊದಲ ಅಧಿವೇಶನ

ಸೋಮವಾರ ಹಳೆಯ ಸಂಸತ್‌ ಭವನದಲ್ಲಿಯೇ ವಿಶೇಷ ಅಧಿವೇಶನ ಆರಂಭವಾಗಲಿದೆ. ಆದರೆ, ಮಂಗಳವಾರ (ಸೆಪ್ಟೆಂಬರ್‌ 19) ನೂತನ ಸಂಸತ್‌ ಭವನದಲ್ಲಿ ಕಲಾಪಗಳು ಶುರುವಾಗಲಿವೆ. ಇದೇ ಮೊದಲ ಬಾರಿಗೆ ಹೊಸ ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿದೆ. ಇನ್ನು ನೂತನ ಸಂಸತ್‌ ಭವನದ ಸಿಬ್ಬಂದಿಗೆ ಹೊಸ ಸಮಸ್ತ್ರವನ್ನೂ ಕೇಂದ್ರ ಸರ್ಕಾರ ನೀಡಲಿದೆ.

ಸೆಪ್ಟೆಂಬರ್ 20ರಿಂದ ಸಾಮಾನ್ಯ ಸರ್ಕಾರಿ ಕೆಲಸಗಳು ನೂತನ ಸಂಸತ್ ಭವನದಲ್ಲಿ ಪ್ರಾರಂಭವಾಗೊಳ್ಳಲಿವೆ. ಸಂಸತ್ತಿನ ಪಯಣ, ಸಾಧನೆಗಳು, ನೆನಪು ಮತ್ತು ಕಲಿಕೆ ಕುರಿತ ಚರ್ಚೆಯು ಮೊದಲ ದಿನದ ಅಧಿವೇಶನದಲ್ಲಿ ನಡೆಯಲಿದೆ. ಸಂಸತ್ತಿನ 75 ವರ್ಷಗಳ ಪ್ರಯಾಣದ ಕುರಿತು ಸರ್ಕಾರ ಅಧಿವೇಶನದ ಮೊದಲ ದಿನದಂದು ಚರ್ಚೆ ನಡೆಸಲಿದೆ. ಸೆಪ್ಟೆಂಬರ್ 19 ರಂದು ಹಳೆಯ ಸಂಸತ್ತಿನಲ್ಲಿ ಸಂಸದರ ಫೋಟೊ ಸೆಷನ್‌ ಕೂಡ ಇರಲಿದೆ. ಅದಾದ ಬಳಿಕ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಮುಗಿದ ಬಳಿಕ ಹೊಸ ಸಂಸತ್ತಿಗೆ ಸಂಸದರು ಪ್ರವೇಶಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಂಡಿಸುವ ವಿಧೇಯಕಗಳು ಯಾವವು?

ವಿಶೇಷ ಅಧಿವೇಶನದಲ್ಲಿ 2023ರ ವಕೀಲರ ತಿದ್ದುಪಡಿ ವಿಧೇಯಕ ಹಾಗೂ 2023ರ ನಿಯತಕಾಲಿಕಗಳ ಮುದ್ರಣ ಮತ್ತು ನೋಂದಣಿ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಈ ಎರಡೂ ವಿಧೇಯಕಗಳು ಈ ಹಿಂದೆ ಆಗಸ್ಟ್ 3ರಂದು ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿವೆ. ಮತ್ತೊಂದೆಡೆ, ರಾಜ್ಯಸಭಾ ಸಂಸದರು 2023ರ ಪೋಸ್ಟ್ ಆಫೀಸ್ ವಿಧೇಯಕ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ವಿಧೇಯಕವನ್ನು ಚರ್ಚಿಸಲಿದ್ದಾರೆ. ಈ ಎರಡೂ ವಿಧೇಯಕಗಳನ್ನು ಆಗಸ್ಟ್ 10ರಂದು ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ.

ಇದನ್ನೂ ಓದಿ: Special Parliament Session: ವಿಶೇಷ ಅಧಿವೇಶನ; ಸಂಸದರಿಗೆ 3 ಸಾಲಿನ ವಿಪ್‌ ಜಾರಿಗೊಳಿಸಿದ ಬಿಜೆಪಿ

ಸರ್ಕಾರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಪ್ರಸ್ತಾಪಿಸುವ ಬಗ್ಗೆ ಊಹಾಪೋಹಗಳಿದ್ದರೂ, ಈಗ ಕೇಂದ್ರ ಸರ್ಕಾರವು ಬಿಡುಗಡೆ ಮಾಡಿರುವ ತಾತ್ಕಾಲಿಕ ಕಾರ್ಯಸೂಚಿಯಲ್ಲಿ ಆ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ವಿಶೇಷ ಸಂಸತ್ ಅಧಿವೇಶನದಲ್ಲಿ ಇಂಡಿಯಾ ಪದದ ಬದಲಿಗೆ ಭಾರತ ಪದವನ್ನು ಬಳಸುವ ಸಂಬಂಧ ಕೇಂದ್ರ ಸರ್ಕಾರವು ವಿಧೇಯಕ ಮಂಡಿಸಲಿದೆ ಎಂಬ ಊಹಾಪೋಹಗಳೂ ಕೂಡ ಇವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

ಪ್ರಮುಖ ಸುದ್ದಿ

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

Swati Maliwal: ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

VISTARANEWS.COM


on

swati maliwal bibhav kumar
Koo

ಹೊಸದಿಲ್ಲಿ: ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Rajya Sabha MP Swati Maliwal) ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar) ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ದಾಳಿಯ ಸಮಯದಲ್ಲಿ ಸ್ಪಷ್ಟವಾಗಿ ನಿಷ್ಕ್ರಿಯರಾಗಿದ್ದುದಕ್ಕಾಗಿ ಕೇಜ್ರಿವಾಲ್ ಅವರನ್ನು “ಮುಖ್ಯ ಅಪರಾಧಿ” ಎಂದು ಕರೆದಿದ್ದಾರೆ.

ಮಲಿವಾಲ್‌ ಅವರು ದೆಹಲಿ ಮುಖ್ಯಮಂತ್ರಿ ಮನೆಯಿಂದ ಹೊರಬರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸಿಎಂ ನಿವಾಸದಲ್ಲಿ ನಿಯೋಜಿಸಲಾದ ಸಿಬ್ಬಂದಿ ಮತ್ತು ಎಎಪಿ ರಾಜ್ಯಸಭಾ ಸಂಸದೆ ನಡುವೆ ವಾಗ್ವಾದ ನಡೆಯುವುದನ್ನು ಕಾಣಬಹುದು.

“ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾಗಿದ್ದೇನೆ ಮತ್ತು ಸಹಾಯಕ್ಕಾಗಿ ಪದೇ ಪದೆ ಕಿರುಚುತ್ತಿದ್ದೆ. ನನ್ನನ್ನು ರಕ್ಷಿಸಿಕೊಳ್ಳಲೆಂದು ನಾನು ಅವನನ್ನು ನನ್ನ ಕಾಲುಗಳಿಂದ ದೂರ ತಳ್ಳಿದೆ. ಆ ಸಮಯದಲ್ಲಿ ಆತ ನನ್ನ ಮೇಲೆ ಎರಗಿ ಕ್ರೂರವಾಗಿ ಎಳೆದುಕೊಂಡು ಮತ್ತು ಉದ್ದೇಶಪೂರ್ವಕವಾಗಿ ನನ್ನ ಅಂಗಿಯನ್ನು ಮೇಲಕ್ಕೆ ಎಳೆದ” ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ. “ಬಿಭವ್ ಕುಮಾರ್ ಪಶ್ಚಾತ್ತಾಪ ಪಟ್ಟಿಲ್ಲ. ನನ್ನ ಎದೆ, ಹೊಟ್ಟೆ ಮತ್ತು ಸೊಂಟದ ಪ್ರದೇಶಕ್ಕೆ ತನ್ನ ಕಾಲುಗಳಿಂದ ಒದೆಯುವ ಮೂಲಕ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ” ಎಂದು ಸ್ವಾತಿ ದೂರಿದ್ದಾರೆ.

 ಸ್ವಾತಿ ಮಾಲಿವಾಲ್‌ ಆರೋಪ ಸುಳ್ಳು ಎಂದು ಆಪ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿರುವ ಕುರಿತ ವಿಡಿಯೊವನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

“ಸ್ವಾತಿ ಮಾಲಿವಾಲ್‌ ಅವರು ನೀಡಿರುವ ಹೇಳಿಕೆಯು ಸಂಪೂರ್ಣವಾಗಿ ಸುಳ್ಳುಗಳಿಂದ ಕೂಡಿದೆ ಎಂಬುದು ಈ ವಿಡಿಯೊದಿಂದ ಬಯಲಾಗಿದೆ. ಸ್ವಾತಿ ಮಾಲಿವಾಲ್‌ ಅವರು ಹೇಳಿದ ಸುಳ್ಳುಗಳನ್ನು ದೇಶದ ಜನರ ಮುಂದಿಡುತ್ತಿದ್ದೇವೆ” ಎಂದು ಆಪ್‌ ನಾಯಕಿ, ಸಚಿವೆ ಆತಿಶಿ ಅವರು ಸುದ್ದಿಗೋಷ್ಠಿಯಲ್ಲಿ ತಮ್ಮದೇ ಪಕ್ಷದ ನಾಯಕಿ ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ, ಅವರು ದೆಹಲಿ ಸಿಎಂ ಕಚೇರಿಯಲ್ಲಿ ನಡೆದ ಗಲಾಟೆ ಕುರಿತ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.

ವಿಡಿಯೊದಲ್ಲಿ ಏನಿದೆ?

ದೆಹಲಿ ಸಿಎಂ ಕಚೇರಿಗೆ ಭೇಟಿ ನೀಡಿದ ವೇಳೆ ಸ್ವಾತಿ ಮಾಲಿವಾಲ್‌ ಅವರಿಗೆ ಭದ್ರತಾ ಸಿಬ್ಬಂದಿಯು ಹೊರಗೆ ತೆರಳಿ ಎಂಬುದಾಗಿ ಹೇಳಿದ್ದಾರೆ. ಆದರೆ, ನಾನು ಹೊರಗೆ ಹೋಗಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭದ್ರತಾ ಸಿಬ್ಬಂದಿಯೊಬ್ಬರಿಗೆ ಬಾಂಡ್ಲಿ (ಬೊಕ್ಕ ತಲೆಯವರು) ಎಂಬುದಾಗಿ ಬೈದಿದ್ದಾರೆ. ನಾನು ಇದರ ಬಗ್ಗೆ ಎಲ್ಲರಿಗೂ ಹೇಳುತ್ತೇನೆ ಎಂದು ಸ್ವಾತಿ ಮಾಲಿವಾಲ್‌ ಅವರು ದೆಹಲಿ ಸಿಎಂ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮಾಡಿ, ಆದರೆ ಇಲ್ಲಿಂದ ಹೊರಡಿ ಎಂದು ಸಿಬ್ಬಂದಿ ಸೂಚಿಸಿದ್ದಾರೆ. ಆಗ, ಸ್ವಾತಿ ಮಾಲಿವಾಲ್‌ ಅವರು ಭದ್ರತಾ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿದ್ದಾರೆ. ಇಷ್ಟೆಲ್ಲ ಅಂಶಗಳು ವಿಡಿಯೊದಲ್ಲಿವೆ.

ಇದನ್ನೂ ಓದಿ: Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Continue Reading

Lok Sabha Election 2024

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Nitin Gadkari: ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಅವರು ಮಾತನಾಡಿದರು.

VISTARANEWS.COM


on

Nitin Gadkari
Koo

ಮುಂಬೈ: ದೇಶದಲ್ಲಿ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ 4 ಹಂತಗಳ ಮತದಾನ ಮುಗಿದಿದೆ. ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಉತ್ತರಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ʼʼಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್‌ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ. ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ನಾವು (ಬಿಜೆಪಿ) ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್‌ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಗಡ್ಕರಿ ವಾಗ್ದಾಳಿ ನಡೆಸಿದ್ದಾರೆ.

ʼʼಸಬ್‌ ಕ ಸಾಥ್‌, ಸಬ್‌ ಕ ವಿಕಾಸ್‌ʼ ಎನ್ನುವುದು ನರೆಂದ್ರ ಮೋದಿ ನೇತೃತ್ವದ ಸರ್ಕಾರದ ಧ್ಯೇಯ ವಾಕ್ಯ. ಅದರಂತೆ ಕೇಂದ್ರ ಸರ್ಕಾರ ಸಮಾಜದ ಪ್ರತಿಯೊಬ್ಬರಿಗೂ ಯೋಜನೆ ತಲುಪಿಸುವ ಕೆಲಸ ಮಾಡುತ್ತಿದೆ. ಬಡವರು, ಶೋಷಿತರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಅವರಿಗಾಗಿ ವಿವಿಧ ಯೋಜನೆಗಳನ್ನೂ ಪ್ರಕಟಿಸಲಾಗಿದೆʼʼ ಎಂದು ವಿವರಿಸಿದ್ದಾರೆ.

ʼʼನಾಸಿಕ್‌ನ ಎರಡು ಪ್ರಮುಖ ಬೆಳೆಗಳಾದ ಈರುಳ್ಳಿ ಮತ್ತು ದ್ರಾಕ್ಷಿಯ ಸಂಗ್ರಹಣೆ ಮತ್ತು ಸಂಸ್ಕರಣೆಗೆ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆʼʼ ಎಂದೂ ಸಚಿವರು ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಆರೋಪ ಹೊರಿಸಿದ್ದ ಖರ್ಗೆ

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜತೆ ಮಾತನಾಡಿದ್ದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈ ಹಿಂದೆ ಆರ್‌ಎಸ್‌ಎಸ್‌ ನಾಯಕ ಮೋಹನ್ ಭಾಗವತ್ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನದಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಿಸಿದ್ದರು. ಜತೆಗೆ ಅನೇಕ ಬಿಜೆಪಿ ನಾಯಕರು ಇದೇ ರೀತಿಯ ಮಾತುಗಳನ್ನು ಆಡಿದ್ದಾರೆ. ಈ ಎಲ್ಲದರ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆʼʼ ಎಂದಿದ್ದರು. ಜತೆಗೆ ʼʼಸಂವಿಧಾನ ಬದಲಾವಣೆ ನಿಜವಾಗಿಯೂ ನಿಮ್ಮ ಉದ್ದೇಶವಲ್ಲದಿದ್ದರೆ, ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರ ವಿರುದ್ಧ ನೀವು ಏಕೆ ಕ್ರಮ ಕೈಗೊಳ್ಳಬಾರದು?” ಎಂದು ಮೋದಿ ಅವರನ್ನು ಪ್ರಶ್ನಿಸಿದ್ದರು. ʼʼನೀವು (ಮೋದಿ) ನಿಮ್ಮ 56 ಇಂಚಿನ ಎದೆಯ ಬಗ್ಗೆ ಪದೇ ಪದೆ ಮಾತನಾಡುತ್ತೀರಿ. ಆದರೆ ಸಂವಿಧಾನದ ವಿರುದ್ಧವಾಗಿ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ ಯಾಕೆ?ʼʼ ಎಂದು ಕೇಳಿದ್ದರು.

ಇದನ್ನೂ ಓದಿ: Lok Sabha Election 2024: ಮೋದಿ ಮತ್ತೆ ಪ್ರಧಾನಿ, ಎನ್‌ಡಿಗೆ 400: ನಿತಿನ್‌ ಗಡ್ಕರಿ; 2026ರಲ್ಲಿ ಬುಲೆಟ್‌ ಟ್ರೇನ್:‌ ಅಶ್ವಿನಿ ವೈಷ್ಣವ್

ಪ್ರಸ್ತುತ ನಡೆಯುತ್ತಿರುವ ಚುನಾವಣೆಯು ಸಿದ್ಧಾಂತಗಳ ನಡುವಿನ ಕದನ ಎಂದಿದ್ದ ಖರ್ಗೆ, ʼʼಒಂದು ಬಣ ಬಡವರಿಗಾಗಿ ಹೋರಾಟ ನಡೆಸುತ್ತಿದ್ದರೆ ಇನ್ನೊಂದು ಬಣ ಧರ್ಮದ ಆಧಾರದಲ್ಲಿ ತಮ್ಮ ಶ್ರೀಮಂತ ಗೆಳೆಯರಿಗಾಗಿ ಕಣ್ಣಕ್ಕಿಳಿದಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ ಕಡಿಮೆ ಮಾಡಲು ನಾವು ಹೋರಾಟ ನಡೆಸುತ್ತಿದ್ದೇವೆʼʼ ಎಂದು ಹೇಳಿದ್ದರು.

Continue Reading

ವಿದೇಶ

Advisory for Students: ಕಿರ್ಗಿಸ್ತಾನದಲ್ಲಿನ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಭಾರತ, ಪಾಕಿಸ್ತಾನ; ಕಾರಣವೇನು?

Advisory for Students: ಕಿರ್ಗಿಸ್ತಾನದಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ವಿರುದ್ಧ ದೊಡ್ಡ ಪ್ರಮಾಣದ ಗುಂಪು ಹಿಂಸಾಚಾರ ವರದಿಯಾಗುತ್ತಿರುವುದರಿಂದ ಅಲ್ಲಿರುವ ತನ್ನ ಪ್ರಜೆಗಳಿಗೆ ಮನೆಯೊಳಗೆ ಇರುವಂತೆ ಭಾರತ ಮತ್ತು ಪಾಕಿಸ್ತಾನ ಸಲಹೆ ನೀಡಿದೆ. ಜತೆಗೆ ಭಾರತ ಹೆಲ್ಪ್‌ಲೈನ್‌ ಆರಂಭಿಸಿದೆ. ಸಮಸ್ಯೆ ಕಂಡು ಬಂದರೆ ಹೆಲ್ಪ್‌ಲೈನ್‌ ನಂಬರ್‌ 0555710041ಕ್ಕೆ ಕರೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ.

VISTARANEWS.COM


on

Advisory for Students
Koo

ನವದೆಹಲಿ: ಮಧ್ಯ ಏಷ್ಯಾದ ಕಿರ್ಗಿಸ್ತಾನ (Kyrgyzstan)ದಲ್ಲಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ವಿರುದ್ಧ ದೊಡ್ಡ ಪ್ರಮಾಣದ ಗುಂಪು ಹಿಂಸಾಚಾರ ವರದಿಯಾಗುತ್ತಿರುವುದರಿಂದ ಅಲ್ಲಿರುವ ತನ್ನ ಪ್ರಜೆಗಳಿಗೆ ಮನೆಯೊಳಗೆ ಇರುವಂತೆ ಭಾರತ ಸಲಹೆ ನೀಡಿದೆ (Advisory for Students).

ʼʼನಮ್ಮ ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಆದರೂ ವಿದ್ಯಾರ್ಥಿಗಳಿಗೆ ಮನೆಯೊಗಳೇ ಇರುವಂತೆ ಸಲಹೆ ನೀಡಿದ್ದೇವೆ. ಯಾವುದೇ ಸಮಸ್ಯೆ ಬಂದರೆ ತಕ್ಷಣ ಸಂಪರ್ಕಿಸುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಿದ್ದೇವೆʼʼ ಎಂದು ರಾಯಭಾರ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹೆಲ್ಪ್‌ಲೈನ್‌ ಆರಂಭ

ಜತೆಗೆ ರಾಯಭಾರ ಕಚೇರಿ ಹೆಲ್ಪ್‌ಲೈನ್‌ ಕೂಡ ಆರಂಭಿಸಿದೆ. ʼʼಸಮಸ್ಯೆ ಕಂಡು ಬಂದರೆ ನಮ್ಮ ಹೆಲ್ಪ್‌ಲೈನ್‌ ನಂಬರ್‌ 0555710041ಕ್ಕೆ ಕರೆ ಮಾಡಿ. ಇದು 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆʼʼ ಎಂದಿರುವ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚಿದ್ದಾರೆ.

ಏನಿದು ಕಿರ್ಗಿಸ್ತಾನದಲ್ಲಿನ ಸಮಸ್ಯೆ?

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮೇ 13ರಂದು ಕಿರ್ಗಿಸ್ತಾನದ ಬಿಷ್ಕೆಕ್‌ನ ಹಾಸ್ಟೆಲ್‌ನಲ್ಲಿ ಸ್ಥಳೀಯರು ಮತ್ತು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ನಡುವೆ ಆರಂಭವಾದ ಘರ್ಷಣೆಯ ನಂತರ ಪರಿಸ್ಥಿತಿ ಬಿಗಡಾಯಿಸಿದೆ. ಬಿಷ್ಕೆಕ್‌ನಲ್ಲಿ ಗುಂಪುಗೂಡಿದ ಪ್ರತಿಭಟನಾಕಾರರು ರಸ್ತೆ ಸಂಚಾರವನ್ನು ತಡೆದಿದ್ದರು ಮತ್ತು ಕಟ್ಟಡಗಳನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಈಗಾಗಲೇ ಹಲವರನ್ನು ಬಂಧಿಸಿವೆ. ಕಿರ್ಗಿಸ್ತಾನ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದು, ಪ್ರಪಂಚದಾದ್ಯಂತದ ವಿದ್ಯಾರ್ಥಿಗಳು ಪ್ರತಿ ವರ್ಷ ಇಲ್ಲಿಗೆ ಆಗಮಿಸುತ್ತಾರೆ. ಅದರಲ್ಲಿಯೂ ಇಲ್ಲಿನ ವೈದ್ಯಕೀಯ ಶಿಕ್ಷಣ ಬಲು ಜನಪ್ರಿಯ. ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಸ್ಥಳೀಯರು ಮತ್ತು ವಿದೇಶಿ ವಿದ್ಯಾರ್ಥಿಗಳ ನಡುವೆ ಆಗಾಗ ಸಂಘರ್ಷ ನಡೆಯುತ್ತಿರುತ್ತದೆ.

2023ರ ಏಪ್ರಿಲ್ ವೇಳೆಗೆ ಕಿರ್ಗಿಸ್ತಾನದ ವಿವಿಧ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಸುಮಾರು 9,500 ವಿದೇಶಿ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದರು ಎಂದು ಅಂಕಿ-ಅಂಶ ತಿಳಿಸಿದೆ.

ಪಾಕಿಸ್ತಾನದಿಂದಲೂ ಮಾರ್ಗಸೂಚಿ ಬಿಡುಗಡೆ

ಭಾರತ ಜತೆಗೆ ಇದೀಗ ಪಾಕಿಸ್ತಾನ ಕೂಡ ತನ್ನ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವರದಿಯಾಗುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಬಿಷ್ಕೆಕ್‌ನಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿ ಸಲಹೆ ನೀಡಿದೆ. ಕಿರ್ಗಿಸ್ತಾನ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಸಂಘರ್ಷದ ವಿಡಿಯೊ ಮೇ 13ರಂದು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ವಿದೇಶಿ ವಿದ್ಯಾರ್ಥಿಗಳ ವಿರುದ್ಧದ ಹಿಂಸಾಚಾರವನ್ನು ಉಲ್ಲೇಖಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ʼʼವೈದ್ಯಕೀಯ ವಿಶ್ವ ವಿದ್ಯಾನಿಯಲಗಳ ಹಾಸ್ಟೆಲ್‌, ಖಾಸಗಿ ಪಿಜಿ ಸೇರಿ ವಿದೇಶಿ ವಿದ್ಯಾರ್ಥಿಗಳಿರುವ ಕಟ್ಟಡಗಳೇ ಪ್ರತಿಭಟನಾಕಾರರ ಗುರಿ. ಈಗಾಗಲೇ ಹಿಂಸಾಚಾರದಲ್ಲಿ ಕೆಲವು ಪಾಕಿಸ್ತಾನದ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದುವರೆಗೆ ಯಾವುದೇ ಸಾವು-ನೋವು ಸಂಭವಿಸಿಲ್ಲʼʼ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

ಪರಿಸ್ಥಿತಿ ತಿಳಿಯಾಗುವವರೆಗೆ ಮನೆಯೊಳಗೆ ಇರಿ ಎಂದು ಸಲಹೆ ನೀಡಿರುವ ಪಾಕಿಸ್ತಾನದ ರಾಯಭಾರ ಕಚೇರಿ ತನ್ನ ದೇಶದ ಸುಮಾರು 250 ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಸ್ಥರನ್ನು ಸಂಪರ್ಕಿಸಿದೆ. ಸ್ಥಳೀಯರು ಎಲ್ಲ ವಿದೇಶಿಗರನ್ನು ಗುರಿಯಾಗಿಸಿದ್ದಾರೆ. ಪಾಕಿಸ್ತಾನದವರು ಮಾತ್ರ ಇವರ ಟಾರ್ಗೆಟ್‌ ಅಲ್ಲ. ಯಾವುದೇ ಕಾರಣಕ್ಕೂ ಭಯ ಪಡಬೇಡಿ ಎಂದು ಹೇಳಿದೆ.

Continue Reading
Advertisement
Famous Food of bangalore
ಆಹಾರ/ಅಡುಗೆ20 mins ago

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Prime Minister of India
ರಾಜಕೀಯ24 mins ago

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

RCB FANS BIKE RALLY
ಕ್ರೀಡೆ30 mins ago

RCB FANS BIKE RALLY: ಪಂದ್ಯಕ್ಕೂ ಮುನ್ನವೇ ಬೃಹತ್​ ಬೈಕ್​ ರ‍್ಯಾಲಿ ಮಾಡಿದ ಆರ್​ಸಿಬಿ ಅಭಿಮಾನಿಗಳು; ವಿಡಿಯೊ ವೈರಲ್​​

Pavithra Jayaram Chandrakant are just friends, daughter said
ಕಿರುತೆರೆ36 mins ago

Pavithra Jayaram: ಚಂದ್ರಕಾಂತ್‌ ಹಾಗೂ ನನ್ನ ಅಮ್ಮ ಜಸ್ಟ್‌ ಫ್ರೆಂಡ್ಸ್‌, ಪವಿತ್ರಾ ಮಗಳ ಸ್ಪಷ್ಟನೆ!

Powerful Bike
ಪ್ರಮುಖ ಸುದ್ದಿ39 mins ago

Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

Road Accident
ಶಿವಮೊಗ್ಗ50 mins ago

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Kannada stone inscription found in Kashi Use as a foot bridge at the ghat
ಶಿವಮೊಗ್ಗ57 mins ago

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Road Accident
ಬೆಂಗಳೂರು ಗ್ರಾಮಾಂತರ1 hour ago

Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

Hyderabadi Biryani
ಪ್ರಮುಖ ಸುದ್ದಿ2 hours ago

Hyderabadi Biryani : ಎಸ್​ಆರ್​ಎಚ್​ ಅಭಿಮಾನಿಗಳೊಂದಿಗೆ ಹೈದ್ರಾಬಾದಿ ಬಿರಿಯಾನಿ ಸವಿದ ಹೇಡನ್ ಪುತ್ರಿ ಗ್ರೇಸ್​, ಇಲ್ಲಿದೆ ವಿಡಿಯೊ

Job Alert
ಉದ್ಯೋಗ2 hours ago

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ19 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌