ಜೈಲು ಸೇರಿದ ಅರ್ಪಿತಾ ಮುಖರ್ಜಿ; ಆಕೆಯ ಜೀವ ಅಪಾಯದಲ್ಲಿದೆ ಎಂದು ಕೋರ್ಟ್​ಗೆ ಹೇಳಿದ ಇಡಿ - Vistara News

ದೇಶ

ಜೈಲು ಸೇರಿದ ಅರ್ಪಿತಾ ಮುಖರ್ಜಿ; ಆಕೆಯ ಜೀವ ಅಪಾಯದಲ್ಲಿದೆ ಎಂದು ಕೋರ್ಟ್​ಗೆ ಹೇಳಿದ ಇಡಿ

ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಇಡಿ ಕಸ್ಟಡಿ ಅವಧಿ ಮುಗಿದಿದ್ದರಿಂದ ಇಂದು ಇಬ್ಬರನ್ನೂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗಸ್ಟ್​ 18ರವರೆಗೆ ಅವರಿಬ್ಬರೂ ಜೈಲಿನಲ್ಲಿ ಇರಲಿದ್ದಾರೆ.

VISTARANEWS.COM


on

Partha Chatterjee and Arpita Mukherjee Sent to Jail By Court
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕತ್ತ: ಪಶ್ಚಿಮ ಬಂಗಾಳ ಶಾಲಾ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿಯವರನ್ನು ಆಗಸ್ಟ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ, ಕೋಲ್ಕತ್ತದ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಇವರಿಬ್ಬರ ಇಡಿ ಕಸ್ಟಡಿ ಇಂದು ಅಂತ್ಯವಾಗುವ ಹಿನ್ನೆಲೆಯಲ್ಲಿ ಇಬ್ಬರನ್ನೂ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು.

ಇನ್ನು ಅರ್ಪಿತಾ ಮುಖರ್ಜಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಕೋರ್ಟ್​ಗೆ ಒಂದು ಮಹತ್ವದ ವಿಷಯ ತಿಳಿಸಿದ್ದಾರೆ. ‘ಅರ್ಪಿತಾ ಮುಖರ್ಜಿ ಜೀವಕ್ಕೆ ಗಂಭೀರ ಮಟ್ಟದ ಅಪಾಯ ಇದೆ. ಹೀಗಾಗಿ ಕಾರಾಗೃಹದಲ್ಲಿ ಅವರನ್ನು ನಾಲ್ವರಿಗಿಂತಲೂ ಹೆಚ್ಚು ಕೈದಿಗಳು ಇರುವ ಬ್ಯಾರಕ್​ನಲ್ಲಿ ಇಡಬಾರದು’ ಎಂದು ಹೇಳಿದ್ದಾರೆ. ಹಾಗೇ, ಅರ್ಪಿತಾ ಮುಖರ್ಜಿ ಪರ ವಕೀಲರು ಕೂಡ ಇದನ್ನೇ ಹೇಳಿದ್ದಾರೆ. ಅರ್ಪಿತಾರನ್ನು ಒಂದನೇ ದರ್ಜೆಯ ಕೈದಿ ಎಂದು ಪರಿಗಣಿಸಬೇಕು. ಆಕೆಗೆ ಜೈಲಿನಲ್ಲಿ ಆಹಾರ ಮತ್ತು ನೀರನ್ನು ಪರೀಕ್ಷೆ ಮಾಡಿಯೇ ಕೊಡಬೇಕು ಎಂದೂ ಕೇಳಿದ್ದಾರೆ.

ಇನ್ನು ಪಾರ್ಥ ಚಟರ್ಜಿ ಪರ ವಕೀಲರು ಕೋರ್ಟ್​​ನಲ್ಲಿ ವಾದ ಮಂಡಿಸಿ, ‘ಪಾರ್ಥ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಇಡಿ ಅಧಿಕಾರಿಗಳು ಹೇಳುತ್ತಿದ್ದಾರೆ. ನನ್ನ ಕಕ್ಷಿದಾರರದ್ದು ಏನೂ ತಪ್ಪಿಲ್ಲ. ಇಡಿ ಶೋಧದ ವೇಳೆ ಅವರ ಮನೆಯಲ್ಲಿ ಏನೂ ಸಿಕ್ಕಿಲ್ಲ. ಹಾಗಾಗಿಯೇ ಅವರು ಇಡಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಿಲ್ಲ, ತನಿಖೆಗೂ ಸಹಕರಿಸುತ್ತಿಲ್ಲ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಪಾರ್ಥ ಚಟರ್ಜಿ ಶಿಕ್ಷಣ ಸಚಿವರಾಗಿದ್ದಾಗ ನಡೆದ ಹಗರಣಕ್ಕೆ ಸಂಬಂಧಪಟ್ಟಂತೆ ಇ ಡಿ ತನಿಖೆ ತೀವ್ರಗೊಂಡಿದೆ. ಅವರ ಆಪ್ತೆ ಅರ್ಪಿತಾ ಮನೆಯಲ್ಲಿ 50 ಕೋಟಿ ರೂಪಾಯಿಗೂ ಅಧಿಕ ನಗದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ. ಪಾರ್ಥರನ್ನು ಟಿಎಂಸಿ ಪಕ್ಷದಿಂದಲೇ ಅಮಾನತು ಮಾಡಲಾಗಿದೆ. ಅರ್ಪಿತಾ ಮುಖರ್ಜಿ ತನ್ನದೇನೂ ತಪ್ಪಿಲ್ಲ. ನನ್ನ ಮನೆಯಲ್ಲಿರುವ ಹಣವೆಲ್ಲ ಪಾರ್ಥ ಚಟರ್ಜಿಯವರದ್ದೇ ಎಂದು ಇಡಿ ಅಧಿಕಾರಿಗಳ ಎದುರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಹೊರಗೆ ಪಾರ್ಥ ಚಟರ್ಜಿ ಮೇಲೆ ಚಪ್ಪಲಿ ಎಸೆದ ಮಹಿಳೆ; ಅವನೊಬ್ಬ ಅಯೋಗ್ಯ ಎಂದು ಬೈಗುಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Odisha: ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ. ಈಗ ಬಿಜೆಪಿಯ ಪ್ರಮುಖ ಐವರು ನಾಯಕರಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಪ್ರಶ್ನೆ, ಕುತೂಹಲ ಮೂಡಿದೆ.

VISTARANEWS.COM


on

Odisha
Koo

ಭುವನೇಶ್ವರ: ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ (Odisha Assembly Election 2024) ಬಿಜೆಪಿಯು ಸ್ಪಷ್ಟ ಬಹುಮತ ಸಾಧಿಸಿದ್ದು, ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ಅವರ 24 ವರ್ಷಗಳ ಸುದೀರ್ಘ ಆಡಳಿತ ಕೊನೆಗೊಂಡಿದೆ. ಇನ್ನು, ಒಡಿಶಾದಲ್ಲಿ (Odisha) ಬಿಜೆಪಿಯು ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಅಷ್ಟೇ ಅಲ್ಲ, ಒಡಿಶಾ ಮುಖ್ಯಮಂತ್ರಿ ಗಾದಿ ಮೇಲೆ ಬಿಜೆಪಿಯ ಐವರು ನಾಯಕರು ಕಣ್ಣಿಟ್ಟಿದ್ದು, ಯಾರಿಗೆ ಹುದ್ದೆ ಒಲಿಯಲಿದೆ ಎಂಬ ಕುತೂಹಲವೂ ಮೂಡಿದೆ.

ಐವರು ಆಕಾಂಕ್ಷಿಗಳು ಯಾರ‍್ಯಾರು?

ಒಡಿಶಾ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲು ಐವರು ನಾಯಕರು ತುದಿಗಾಲಿನಲ್ಲಿ ನಿಂತಿದ್ದಾರೆ. ಕೇಂದ್ರದ ಮಾಜಿ ಸಚಿವ ಜುವಲ್‌ ಓರಮ್‌, ಹಾಲಿ ಸಚಿವ ಧರ್ಮೇಂದ್ರ ಪ್ರಧಾನ್‌, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರಾ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೈಜಯಂತ್‌ ಪಾಂಡಾ ಅವರು ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ. ಇನ್ನು ಪಕ್ಷದ ರಾಜ್ಯಾಧ್ಯಕ್ಷ ಮನಮೋಹನ್‌ ಸಮಾಲ್‌ ಅವರು ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಜೂನ್‌ 10ರಂದು ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Sambita Patra

ಮುಖ್ಯಮಂತ್ರಿ ಆಯ್ಕೆ ಕುರಿತು ಒಡಿಶಾ ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್‌ ಸಮಾಲ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ಬಿಜೆಪಿಯ ಸಂಸದೀಯ ಮಂಡಳಿಯು ರಾಜ್ಯದಲ್ಲಿ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ತೀರ್ಮಾನಿಸುತ್ತದೆ. ಒಡಿಶಾದ ಮಣ್ಣಿನ ಸಂಸ್ಕೃತಿ, ಗುಣಗಳು ಇರುವ ನಾಯಕನನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗುವುದು ಎಂಬುದಾಗಿ ಇದಕ್ಕೂ ಮೊದಲು ನರೇಂದ್ರ ಮೋದಿ ಅವರು ಹೇಳಿದ್ದರು. ಅದರಂತೆ, ಪಕ್ಷವು ಸಿಎಂ ಹುದ್ದೆಯನ್ನು ಯಾರಿಗೆ ನೀಡಬೇಕು ಎಂಬುದರ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ” ಎಂದು ಹೇಳಿದರು.

ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ.

ಇನ್ನು ಒಡಿಶಾದಲ್ಲಿ ಈ ಬಾರಿ ಚುನಾವಣಾ ಫಲಿತಾಂಶವು ಬಹುತೇಕ 2019ರ ರೀತಿಯಲ್ಲೇ ಇರಲಿದೆ ಎಂದೂ ಅಂದಾಜಿಸಲಾಗಿತ್ತು. ಎಕ್ಸಿಟ್‌ ಪೋಲ್‌ ರಿಸಲ್ಟ್‌ ಪ್ರಕಾರ ಬಿಜೆಡಿ ಈ ಬಾರಿ 62-80 ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್‌ 5 ರಿಂದ 8 ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲಿದೆ. ಇನ್ನು ಲೋಕಸಭಾ ಎಲೆಕ್ಷನ್‌ ರಿಸಲ್ಟ್‌ಗೆ ಬಂದರೆ ಬಿಜೆಪಿ ಒಡಿಶಾದಲ್ಲಿ 18-20 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಡಿ ಕೇವಲ 0-2 ಸ್ಥಾನ ಪಡೆದುಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್‌ 0-1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ ಎಂದು ಅಂದಾಜಿಸಿತ್ತು ಇಂದಿನ ಈ ಫಲಿತಾಂಶ ಎಲ್ಲಾ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ತಲೆಕೆಳಗಾಗಿಸಿವೆ.

ಇದನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading

ಪ್ರಮುಖ ಸುದ್ದಿ

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Sunita Williams: ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಈಗ ಮತ್ತೆ ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಆರಂಭಿಸಿದ್ದಾರೆ. ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶಯಾನ ಕೈಗೊಳ್ಳುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಬಾಹ್ಯಾಕಾಶದಲ್ಲಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಒಂದು ವಾರ ಇರಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು. ಇದಕ್ಕೂ ಮೊದಲು ಮರ್ಕ್ಯುರಿ, ಜೆಮಿನಿ, ಅಪೋಲೊ, ಸ್ಪೇಸ್‌ ಶಟಲ್‌ ಹಾಗೂ ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡಲಾಗಿತ್ತು.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಗಣೇಶನ ಆರಾಧಕಿ

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

ಇದನ್ನೂ ಓದಿ: Gaganyaan : ಗಗನಯಾನ ಪೈಲೆಟ್​ ಪ್ರಶಾಂತ್​ ನಾಯರ್​ ​ಮದುವೆಯಾದ ಕೇರಳದ ನಟಿ ಲೆನಾ

Continue Reading

Latest

Minister Of Parliament: ನೀವು ಮತ ಹಾಕಿ ಕಳುಹಿಸಿರುವ ಸಂಸದರಿಗೆ ಎಷ್ಟು ಸಂಬಳ ಸಿಗುತ್ತದೆ ಗೊತ್ತೇ?

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ತಕ್ಷಣ ತಮ್ಮತಮ್ಮ ಕ್ಷೇತ್ರದ ಸಂಸದರಿಗೆ (Minister Of Parliament) ಸಿಗುವ ವಿವಿಧ ಸವಲತ್ತುಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಎಲ್ಲರಿಗೂ ಇದೆ. ಇದರಲ್ಲಿ ಅವರ ವೇತನ, ಸೌಲಭ್ಯಗಳು ಸೇರಿವೆ. ಹಾಗಾದರೆ ಪ್ರತಿ ಕ್ಷೇತ್ರದ ಸಂಸದರು ಐದು ವರ್ಷಗಳ ಅಧಿಕಾರಾವಧಿಯಲ್ಲಿ ಏನೆಲ್ಲಾ ಸೌಲಭ್ಯ ಪಡೆಯುತ್ತಾರೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Minister Of Parliament
Koo

ಲೋಕಸಭಾ ಚುನಾವಣೆ 2024ರ (Loksabha election-2024) ಫಲಿತಾಂಶ (result) ಈಗಾಗಲೇ ಹೊರಬಿದ್ದಿದೆ. ಇದರೊಂದಿಗೆ ತಮ್ಮತಮ್ಮ ಕ್ಷೇತ್ರದ ಸಂಸದರ (Minister Of Parliament) ಅಧಿಕಾರ, ಅವರ ವಿಶೇಷ ಸೌಲಭ್ಯಗಳ ಕುರಿತಾಗಿ ಒಂದಷ್ಟು ತಿಳಿದುಕೊಳ್ಳುವ ಆಸಕ್ತಿಯಂತೂ ಎಲ್ಲರಲ್ಲೂ ಇದ್ದೇ ಇರುತ್ತದೆ.

ಭಾರತೀಯ ಸಂಸತ್ತಿನ ಎರಡು ಸದನಗಳಲ್ಲಿ ಒಂದಾಗಿರುವ ಸಂಸತ್ತಿನ ಕೆಳಮನೆಯಾದ ಲೋಕಸಭೆಯ ಸದಸ್ಯರು ತಮ್ಮ ಕ್ಷೇತ್ರಗಳನ್ನು ಪ್ರತಿನಿಧಿಸಲು ಸಾರ್ವಜನಿಕರಿಂದ ಚುನಾಯಿತರಾಗುತ್ತಾರೆ. ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸಂಸತ್ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಇವರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಸಂಬಳ ಎಷ್ಟು?:

ಸಂಸದರು ಮಾಸಿಕವಾಗಿ 1 ಲಕ್ಷ ರೂ. ವೇತನವನ್ನು ಪಡೆಯುತ್ತಾರೆ. ಅವರ ಸಂಬಳವು ಪ್ರತಿ ಐದು ವರ್ಷಗಳಿಗೊಮ್ಮೆ ದೈನಂದಿನ ಭತ್ಯೆಗಳ ರೂಪದಲ್ಲಿ ಹೆಚ್ಚಾಗುತ್ತದೆ.

ಸಂಸತ್ತಿನ ಸದಸ್ಯರ ಭತ್ಯೆಗಳು ಮತ್ತು ಪಿಂಚಣಿ (ತಿದ್ದುಪಡಿ) ಕಾಯಿದೆ 2010ರ ಪ್ರಕಾರ ಅವರ ಮೂಲ ವೇತನವು ತಿಂಗಳಿಗೆ 50,000 ರೂ. ಅನ್ನು ಒಳಗೊಂಡಿರುತ್ತದೆ, ಸಂಬಳದ ಪ್ರಕಾರ, ಸಂಸತ್ತಿನ ಅಧಿವೇಶನಗಳಿಗೆ ಹಾಜರಾಗಲು ದೈನಂದಿನ ಭತ್ಯೆಯಾಗಿ ಅವರು 2,000 ರೂಪಾಯಿಗಳನ್ನು ಪಡೆಯುತ್ತಾರೆ. ಸಂಸದರು ರಸ್ತೆ ಮೂಲಕ ಪ್ರಯಾಣಿಸುತ್ತಿದ್ದರೆ ಪ್ರತಿ ಕಿ.ಮೀ.ಗೆ 16 ರೂ.ನಂತೆ ಪ್ರಯಾಣ ಭತ್ಯೆಗೆ ಅರ್ಹರಾಗಿರುತ್ತಾರೆ.

ಅವರು ತಿಂಗಳಿಗೆ 45,000 ರೂ.ಗಳ ಕ್ಷೇತ್ರ ಭತ್ಯೆಯನ್ನೂ ಪಡೆಯುತ್ತಾರೆ. ದೂರವಾಣಿ ಮತ್ತು ಅಂಚೆ ವೆಚ್ಚಕ್ಕೆ 15,000 ರೂ. ಸೇರಿದಂತೆ ಕಚೇರಿ ವೆಚ್ಚವಾಗಿ ತಿಂಗಳಿಗೆ 45,000 ರೂ. ಪಡೆಯುತ್ತಾರೆ.

ಇದನ್ನೂ ಓದಿ: Muslim Women: ಟಕಾ ಟಕ್‌ ಅಂದ್ರಲ್ಲ, 1 ಲಕ್ಷ ರೂ. ಕೊಡಿ; ಕಾಂಗ್ರೆಸ್‌ ಕಚೇರಿಗೆ ಲಗ್ಗೆ ಇಟ್ಟ ಮುಸ್ಲಿಂ ಮಹಿಳೆಯರು!

ಕಾರ್ಯದರ್ಶಿ, ಸಹಾಯಕರ ವೇತನ ನೀಡಲು ಅವರು ಭತ್ಯೆ ಬಳಸಿಕೊಳ್ಳಬಹುದು. ಪ್ರತಿ ತಿಂಗಳು ಸದಸ್ಯರು ತಮಗೆ ಮತ್ತು ತಮ್ಮ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಪಡೆಯಲು 500 ರೂ. ಪಡೆಯುತ್ತಾರೆ.

ಸಂಸದರಿಗೆ ವಿವಿಧ ಸಭೆಗಳಿಗೆ ಹಾಜರಾಗಲು ಸೇರಿದಂತೆ ತಮ್ಮ ಕರ್ತವ್ಯಗಳ ನಿರ್ವಹಣೆಗೆ ಉಂಟಾಗುವ ಪ್ರಯಾಣ ವೆಚ್ಚಗಳಿಗೆ ಮರುಪಾವತಿಗಳನ್ನು ನೀಡಲಾಗುತ್ತದೆ. ಸಂಸದರು ತಮ್ಮ ಅಧಿಕಾರ ಅವಧಿಗೆ ಬಾಡಿಗೆ ರಹಿತ ವಸತಿ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ.

ಇದಲ್ಲದೆ ಸಂಸದರಿಗೆ ಮತ್ತು ಅವರ ಕುಟುಂಬದವರಿಗೆ ಬಸ್‌, ರೈಲು ಮತ್ತು ವಿಮಾನ ಪ್ರಯಾಣ ಉಚಿತವಾಗಿರುತ್ತದೆ. ಸಂಸದರು ಮತ್ತು ಅವರ ಕುಟುಂಬದವರಿಗೆ ಚಿಕಿತ್ಸೆ ಉಚಿತವಾಗಿರುತ್ತದೆ. ಒಂದೇ ಒಂದು ದಿನ ಸಂಸದರಾಗಿದ್ದರೂ ಬದುಕಿರುವವರೆಗೂ ಪ್ರತಿ ತಿಂಗಳು 25,000 ರೂ. ಪಿಂಚಣಿ ಸಿಗುತ್ತದೆ. ಹತ್ತು ವರ್ಷ ಎಂಪಿ ಆಗಿದ್ದರೆ 35,000 ರೂ. ಪಿಂಚಣಿ ಸಿಗುತ್ತದೆ. ಜತೆಗೆ ಇತರ ಸೌಲಭ್ಯಗಳೂ ಮುಂದುವರಿಯುತ್ತವೆ.

Continue Reading

ದೇಶ

India Bloc Meeting: ಆಡಳಿತದ ಆಸೆ ಕೈಬಿಟ್ಟ ಇಂಡಿಯಾ ಒಕ್ಕೂಟ; ಒಗ್ಗಟ್ಟಿಗಾಗಿ ಸಭೆ, ಬಲಿಷ್ಠ ಪ್ರತಿಪಕ್ಷದ ಗುರಿ!

India Bloc Meeting: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು ಸೇರಿ ಹಲವು ವಿಷಯಗಳ ಕುರಿತು ಇಂಡಿಯಾ ಒಕ್ಕೂಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

India Bloc Meeting
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟವು ನರೇಂದ್ರ ಮೋದಿ ಅವರನ್ನೇ ನಾಯಕನನ್ನಾಗಿ ಘೋಷಣೆ ಮಾಡಿದೆ. ಎನ್‌ಡಿಎ ಸಭೆಯಲ್ಲಿ (NDA Meeting) ಎಲ್ಲ ಪಕ್ಷಗಳ ನಾಯಕರು ಮೋದಿ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ. ಜೂನ್‌ 8ರಂದು ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪವಾಡ ನಡೆದು, ಅಧಿಕಾರದ ಆಸೆಯಲ್ಲಿದ್ದ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ಸಭೆ (India Bloc Meeting) ನಡೆಸಿದ್ದು, ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂಡಿಯಾ ಒಕ್ಕೂಟದ ಸಭೆ ನಡೆದಿದೆ. ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾದ ಬಳಿಕ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡುವುದು, ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಮಧ್ಯೆ ಸಮನ್ವಯತೆ, ಒಗ್ಗಟ್ಟು ಸಾಧಿಸುವುದು, ರಚನೆಯಾದ ನೂತನ ಸರ್ಕಾರದ ವಿರುದ್ಧ ಹೋರಾಡುವುದು, ಅದನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ರಣತಂತ್ರಗಳ ಕುರಿತು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎನ್‌ಸಿಪಿಯ ಶರದ್‌ ಪವಾರ್‌, ಸುಪ್ರಿಯಾ ಸುಳೆ, ಡಿಎಂಕೆಯ ಎಂ.ಕೆ.ಸ್ಟಾಲಿನ್‌, ಟಿ.ಆರ್‌.ಬಾಲು, ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಜತೆಗೆ ಟಿಎಂಸಿ, ಶಿವಸೇನೆ (ಉದ್ಧವ್‌ ಠಾಕ್ರೆ ಬಣ), ಆರ್‌ಜೆಡಿ, ಸಿಪಿಐ (ಎಂ), ಸಿಪಿಐ, ಜೆಜೆಎಂ, ಆಮ್‌ ಆದ್ಮಿ ಪಾರ್ಟಿ, ವಿಸಿಕೆ, ಕೆಎಂಡಿಕೆ ಸೇರಿ ಹಲವು ಪಕ್ಷಗಳ ನಾಯಕರು, ಪ್ರತಿನಿಧಿಗಳು ಇಂಡಿಯಾ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಪವಾಡದ ನಿರೀಕ್ಷೆಯಲ್ಲಿದ್ದ ಒಕ್ಕೂಟ

ಲೋಕಸಭೆ ಚುನಾವಣೆಯಲ್ಲಿ 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಇಂಡಿಯಾ ಒಕ್ಕೂಟವು ಪವಾಡ ನಡೆಯುವ ನಿರೀಕ್ಷೆಯಲ್ಲಿತ್ತು. ಚಂದ್ರಬಾಬು ನಾಯ್ಡು ಅವರ ಟಿಡಿಪಿ ಹಾಗೂ ನಿತೀಶ್‌ ಕುಮಾರ್‌ ಅವರ ಜೆಡಿಯು ಕೂಡ ಇಂಡಿಯಾ ಒಕ್ಕೂಟದ ಜತೆಗೆ ಕೈಜೋಡಿಸಿದರೆ ಸರ್ಕಾರ ರಚಿಸುವ ಕನಸಿತ್ತು. ಆದರೆ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್‌ ಕುಮಾರ್‌ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದಾರೆ. ನರೇಂದ್ರ ಮೋದಿ ಅವರೇ ನಾಯಕ ಎಂಬುದಾಗಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ಇಂಡಿಯಾ ಒಕ್ಕೂಟವು ಅಧಿಕಾರದ ಆಸೆಯನ್ನು ಕೈಬಿಡುವಂತಾಗಿದೆ.

ಇನ್ನೂ ಓದಿ: HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Continue Reading
Advertisement
Odisha
ದೇಶ5 hours ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ5 hours ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ6 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ7 hours ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ7 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ7 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ7 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

500 Rs deposit in the name of new admission children by old students of Government Kannada School Lingasugur
ಕರ್ನಾಟಕ7 hours ago

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Koti Movie
ಸಿನಿಮಾ7 hours ago

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Belagavi Election Result 2024
ಬೆಳಗಾವಿ8 hours ago

ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌