Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ - Vistara News

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Isha Ambani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
Latest1 hour ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest3 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest6 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest7 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ1 day ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest1 day ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌