Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ - Vistara News

ದೇಶ

Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

Pawan Kalyan: ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

VISTARANEWS.COM


on

Pawan Kalyan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೀಠಾಪುರ್: ಆಂಧ್ರಪ್ರದೇಶ(Andra Pradesh) ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಅಭೂತಪೂರ್ವ ಗೆಲುವಿನ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಪವನ್‌ ಕಲ್ಯಾಣ್‌(Pawan Kalyan) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿರುವ ಹಿನ್ನೆಲೆ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ತಮ್ಮ ವೇತನ ಪಡೆಯಲು ನಿರಾಕರಿಸಿದ್ದಾರೆ.

ನಿನ್ನೆ ಕಾಕಿನಾಡ ಜಿಲ್ಲೆಯ ಗೋಲಾಪೊರ್ಲು ಗ್ರಾಮಕ್ಕೆ ಪವನ್ ಕಲ್ಯಾಣ್ ಭೇಟಿ ನೀಡಿ ಎನ್ ಟಿಆರ್ ಭರೋಸಾ ಪಿಂಚಣಿ ಪತ್ರಗಳನ್ನು ವಿತರಿಸಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವೇತನ ಪಡೆಯುವುದಿಲ್ಲ ಎಂದರು. ಇದೇ ವೇಳೆ ಅವರು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಗನ್‌ ಅನಗತ್ಯವಾಗಿ ಅರಮನೆ ಕಟ್ಟಿಸಿಕೊಂಡು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಇಲಾಖೆಗಳಲ್ಲಿ ಹಣದ ಕೊರತೆ ಇದ್ದರೂ ಬಂಗಲೆ ಕಟ್ಟಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ಇಲಾಖೆಯಲ್ಲಿ ಹಣವಿಲ್ಲ,. ಇದಕ್ಕಾಗಿಯೇ ಕಳೆದ ತಿಂಗಳ ವೇತನಕ್ಕೆ ಸಂಬಂಧಿಸಿದ ಕಡತಕ್ಕೆ ಕೆಲ ದಿನ ಸಹಿ ಹಾಕುವುದನ್ನು ತಡೆದರು. ಸಂಬಳದ ಅಗತ್ಯವಿಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಹಿಂದಿನ ಸರ್ಕಾರ ಪಂಚಾಯಿತಿ ಹಣ ಎಲ್ಲಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಟೀಕಿಸಿದರು. ಇಲಾಖೆಯ ಹಣದ ಕೊರತೆಯ ನಡುವೆಯೂ ಅಂದಿನ ಮುಖ್ಯಮಂತ್ರಿ ರುಷಿಕೊಂಡನಲ್ಲಿ ಅರಮನೆ ನಿರ್ಮಿಸಿದ್ದರು ಎಂದು ಆರೋಪಿಸಿದರು. ಪಂಚಾಯತ್ ರಾಜ್ ಇಲಾಖೆಯಲ್ಲಿ ತಮ್ಮ ಕಡೆಯಿಂದ ಯಾವುದೇ ಭ್ರಷ್ಟಾಚಾರ ನಡೆಯುವುದಿಲ್ಲ ಎಂದು ಪವನ್ ಕಲ್ಯಾಣ್ ಸಾರ್ವಜನಿಕರಿಗೆ ಭರವಸೆ ನೀಡಿದರು.

ಇದೇ ವೇಳೆ ಜನರಿಗೆ ಕುಡಿಯುವ ನೀರು ಸಮರ್ಪಕವಾಗಿ ತಲುಪಿಸುವುದೇ ನಮ್ಮ ಮೊದಲ ಆದ್ಯತೆ ಎಂದು ಪವನ್ ಕಲ್ಯಾಣ್ ಹೇಳಿದರು. ಗೋದಾವರಿ ನದಿಯ ಸಮೀಪವಿದ್ದರೂ, ಗೋದಾವರಿ ಜಿಲ್ಲೆಗಳ ಅನೇಕ ಪ್ರದೇಶಗಳು ಕುಡಿಯುವ ನೀರಿನ ಕೊರತೆಯನ್ನು ಎದುರಿಸುತ್ತಿವೆ ಎಂದು ಪವನ್ ಕಲ್ಯಾಣ್ ಪ್ರಸ್ತಾಪಿಸಿದರು. ಹಿಂದಿನ ಸರ್ಕಾರ ಜಲ ಜೀವನ್ ಮಿಷನ್ ನಿಧಿಯನ್ನು ಬಳಸಿಕೊಂಡಿಲ್ಲ ಎಂದು ಟೀಕಿಸಿದರು. ಮನವಿ ಮೇರೆಗೆ ಹಣ ಮಂಜೂರು ಮಾಡಲು ಕೇಂದ್ರ ಸರ್ಕಾರ ಸಿದ್ಧವಿದ್ದರೂ ಹೊಂದಾಣಿಕೆ ಅನುದಾನ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು. ಮುಂದಿನ ಐದು ವರ್ಷಗಳಲ್ಲಿ ಪವಾಡಗಳ ಭರವಸೆ ನೀಡುವುದಿಲ್ಲ, ಆದರೆ ಸರ್ಕಾರವು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ಭರವಸೆ ನೀಡಿದರು. ಪವನ್ ಕಲ್ಯಾಣ್ ಅವರು ತಮ್ಮ ದೇಶ ಮತ್ತು ಭೂಮಿಗಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು, ಅವರು ರಾಜ್ಯದ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತರಾಗಿದ್ದಾರೆ ಎಂದು ಒತ್ತಿ ಹೇಳಿದರು.

ಇದನ್ನೂ ಓದಿ: MUDA site scandal: ಮುಡಾ ನಿವೇಶನಗಳ ಹಂಚಿಕೆ ರದ್ದು; ಬಹುಕೋಟಿ ಹಗರಣದ ತನಿಖೆಗೆ ಸರ್ಕಾರ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Hathras Stampede: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇದೀಗ ಘಟನೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ಸ್ವಯಂಘೋಷಿತ ʼದೇವ ಮಾನವʼ ನಾರಾಯಣ ಸಾಕಾರ್‌ ಹರಿ ಆಲಿಯಾಸ್‌ ಭೋಲೇ ಬಾಬಾ ಇದೀಗ ಘಟನೆಗೆ ಸಮಾಜಘಾತುಕ ಶಕ್ತಿ ಕಾರಣ ಎಂದು ದೂರಿದ್ದಾರೆ. ತಾನು ಸ್ಥಳದಿಂದ ನಿರ್ಗಮಿಸಿದ ಬಹಳ ಸಮಯದ ನಂತರ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ (Hathras Stampede) ಪ್ರಕರಣದ ಆಘಾತದಿಂದ ದೇಶ ಇನ್ನೂ ಹೊರ ಬಂದಿಲ್ಲ. ಭೋಲೆ ಬಾಬಾ (Bhole Baba) ಅವರ ಸತ್ಸಂಗ ಕಾರ್ಯಕ್ರಮದಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 121 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ಸ್ವಯಂಘೋಷಿತ ʼದೇವ ಮಾನವʼ ನಾರಾಯಣ ಸಾಕಾರ್‌ ಹರಿ ಆಲಿಯಾಸ್‌ ಭೋಲೇ ಬಾಬಾ ಇದೀಗ ಘಟನೆಗೆ ಸಮಾಜಘಾತುಕ ಶಕ್ತಿ ಕಾರಣ ಎಂದು ದೂರಿದ್ದಾರೆ.

ಅಜ್ಞಾತ ಸ್ಥಳದಿಂದ ಹೇಳಿಕೆ ಬಿಡುಗಡೆ ಮಾಡಿರುವ ಭೋಲೇ ಬಾಬಾ, ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ತಾನು ಸ್ಥಳದಿಂದ ನಿರ್ಗಮಿಸಿದ ಬಹಳ ಸಮಯದ ನಂತರ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಭೋಲೇ ಬಾಬಾ ಹೇಳಿದ್ದೇನು?

“ನಾನು / ನಾವು ಮೃತರ ಕುಟುಂಬಗಳಿಗೆ ಸಂತಾಪವನ್ನು ಸಂತಾಪ ಸೂಚಿಸುತ್ತಿದ್ದೇವೆ. ಅವರ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ಲಭಿಸಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಭು / ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ. ಕೆಲವು ಸಮಾಜ ವಿರೋಧಿ ಶಕ್ತಿಗಳು ಸೃಷ್ಟಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ವಕೀಲ ಎ.ಪಿ.ಸಿಂಗ್ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಯಲ್ಲಿ ಏನಿದೆ?

ʼʼ80 ಸಾವಿರ ಜನರಿಗಾಗಿ ಅನುಮತಿ ಪಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಭೋಲೆ ಬಾಬಾ ಮಧ್ಯಾಹ್ನ 12.30ರ ಸುಮಾರಿಗೆ ಸತ್ಸಂಗ ಪೆಂಡಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮವು 1 ಗಂಟೆ ನಡೆಯಿತು. ನಂತರ ಮಧ್ಯಾಹ್ನ 1.40ರ ಸುಮಾರಿಗೆ ಭೋಲೆ ಬಾಬಾ ಪೆಂಡಾಲ್‌ನಿಂದ ಹೊರಬಂದರು” ಎಂದು ವರದಿ ತಿಳಿಸಿದೆ.

ʼʼಭೋಲೆ ಬಾಬಾ ಹೊರಡುವ ವೇಳೆ ವೇಳೆ ಲಕ್ಷಾಂತರ ಮಂದಿ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣ” ಎಂದು ತನಿಖೆಯ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

ಕಾಲ್ತುಳಿತದಿಂದ ಮೃತಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಬುಧವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಗಾಯಾಳುಗಳನ್ನು ಸಂತೈಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಕ್ರಮವಾಗಿ 2 ಲಕ್ಷ ರೂ. ಮತ್ತು 50 ಸಾವಿರ ರೂ. ಪರಿಹಾರ ಧನವನ್ನು ಈಗಾಗಲೇ ಘೋಷಿಸಲಾಗಿದೆ.

Continue Reading

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Hathras Stampede:ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 126(2), 223, ಮತ್ತು 238ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಕಾಲ್ತುಳಿತ(Hathras Stampede)ಕ್ಕೆ ಧಾರ್ಮಿಕ ಕಾರ್ಯಕ್ರಮ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ಮುಖ್ಯ ಸೇವಾಧರ್‌ ದೇವ್‌ಪ್ರಕಾಶ್‌ ಮಧುಕರ್‌ ಮತ್ತು ಇತರೆ ಆಯೋಜಕರ ವಿರುದ್ಧ ಸಿಕಂದ್ರ ರಾವ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಸತ್ಸಂಗ ನಡೆಸಿದ್ದ ಭೋಲೇ ಬಾಬಾ(Bhole Baba) ಹೆಸರು ಎಫ್‌ಐಆರ್‌ನಲ್ಲಿ ದಾಖಲಾಗಿಲ್ಲ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 126(2), 223, ಮತ್ತು 238ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಭೋಲೆ ಬಾಬಾ ಅವರಿಗಾಗಿ ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತಾದರೂ ಅವರು ಕ್ಯಾಂಪಸ್ ಒಳಗೆ ಕಂಡುಬಂದಿಲ್ಲʼʼ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ತಿಳಿಸಿದರು.

ಇನ್ನು ಭೋಲೆ ಬಾಬಾ ಮೈನ್‌ಪುರಿ ನಗರದ ಹೊರವಲಯದಲ್ಲಿರುವ ಅವರ ಆಶ್ರಮದಲ್ಲಿದ್ದಾರೆ ಎನ್ನಲಾಗಿದ್ದು, ಆಶ್ರಮಕ್ಕೆ ಬಿಗಿ ಬಂದೋಬಸ್ತ್‌ ನೀಡಲಾಗಿದೆ. ಆದರೆ ಮೈನ್‌ಪುರಿಯಲ್ಲಿರುವ ಆಶ್ರಮದ ಬಳಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಭೋಲೆ ಬಾಬಾ ಆಶ್ರಮದಲ್ಲಿ ಇರುವುದನ್ನು ತಳ್ಳಿಹಾಕಿದ್ದಾರೆ ಮತ್ತು ಮಂಗಳವಾರದ ಘಟನೆಯ ಹಿನ್ನೆಲೆಯಲ್ಲಿ ಆಶ್ರಮದೊಳಗಿನ ಭೋಲೆ ಬಾಬಾ ಅವರ ಅನುಯಾಯಿಗಳ ಸುರಕ್ಷತೆಗಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ಫುಲ್ರೈ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಸತ್ಸಂಗ’ದಲ್ಲಿ ಸುಮಾರು 2.5 ಲಕ್ಷ ಜನ ಸೇರಿದ್ದರು. ಆದರೆ ಸಂಘಟಕರು ಇದನ್ನು ಮರೆಮಾಚಿದ್ದರು. ಸಂಘಟಕರು ಕೇವಲ 80,000 ಜನ ಭಾಗಿಯಾಗಿದ್ದರು ಎಂದು ಹೇಳಿದ್ದರು. ಹೀಗಾಗಿ ಸತ್ಸಂಗ’ದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಲಕ್ಷಗಟ್ಟಲೆ ಇರುತ್ತದೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಸಂಘಟಕರನ್ನು ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಸತ್ಯಂಗ ಮುಗಿಸಿ ಭೋಲೆ ಬಾಬಾ ಅವರು ಅಪರಾಹ್ನ 3.30ರ ಸುಮಾರಿಗೆ ಸ್ಥಳದಿಂದ ಹೊರಡುವಾಗ ಕಾಲ್ತುಳಿತ ಸಂಭವಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ. ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರವು ಎಸ್‌ಐಟಿ ರಚಿಸಿದ್ದಲ್ಲದೇ, ಹೈಕೋರ್ಟ್‌ನ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಹತ್ರಾಸ್‌ನ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳುಗಳನ್ನು ವಿಚಾರಿಸಿದ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ”ಈ ದುರಂತ ಅತೀವ ಬೇಸರ ತರಿಸಿದೆ. ಇದೊಂದು ಆಕಸ್ಮಿಕವೋ ಅಥವಾ ದೊಡ್ಡ ಸಂಚಿನ ಭಾಗವೋ ಎಂಬುದು ಗೊತ್ತಾಗಬೇಕಿದೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕಿದೆ. ಸರಕಾರವು ಆಗ್ರಾದ ಎಡಿಜಿ ಅನುಪಮ್‌ ಕುಲಶ್ರೇಷ್ಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಹಾಗೆಯೇ ಹೈಕೋರ್ಟ್‌ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಲಾಗಿದೆ,” ಎಂದು ಮಾಧ್ಯಮಗಳಿಗೆ ವಿವರ ನೀಡಿದರು.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ವಾಣಿಜ್ಯ

Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Stock Market: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ ಕೂಡ ಸೆನ್ಸೆಕ್ಸ್  ಮತ್ತು ನಿಫ್ಟಿ ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ. ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು.

VISTARANEWS.COM


on

Stock Market
Koo

ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market)ಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ (ಜುಲೈ 3) ಕೂಡ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ.

ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿತ್ತು. ಜಾಗತಿಕವಾಗಿ ಪೂರಕ ವಾತಾವರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈ ಸಂಚಲನ ಮೂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೂನ್ 10ರ ನಂತರ ಇಲ್ಲಿಯವರೆಗೆ ಸೆನ್ಸೆಕ್ಸ್‌ನಲ್ಲಿ 3,000ಕ್ಕೂ ಹೆಚ್ಚು ಪಾಯಿಂಟ್‌ಗಳು ಏರಿವೆ. ವಿಶೇಷ ಎಂದರೆ 1980ರ ದಶಕದಲ್ಲಿ ಪ್ರಾರಂಭವಾದ ನಂತರ ಸೆಕ್ಸೆಕ್ಸ್‌ ಮೊದಲ ಬಾರಿಗೆ 80,400ರ ಗಡಿಯನ್ನು ಸಮೀಪಿಸಿದೆ. ಭಾರತದಲ್ಲಿ ಮಾನ್ಸೂನ್ ಪ್ರಗತಿಯೂ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಚ್‌ಸಿಎಲ್‌ ಟೆಕ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಂ & ಎಂ, ಟಿಸಿಎಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಮತ್ತು ಟೆಕ್ ಎಂ ಮುಂತಾದ ಪ್ರಮುಖ ಲಾರ್ಜ್ ಕ್ಯಾಪ್ ಷೇರುಗಳಲ್ಲಿ ಶೇ. 1.35ರಷ್ಟು ಏರಿಕೆಯಾಗಿದೆ. ಜತೆಗೆ ಬಿಎಸ್ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೆನ್ಸೆಕ್ಸ್ ಕ್ರಮವಾಗಿ ಶೇ. 0.36 ಮತ್ತು ಶೇ. 0.57ರಷ್ಟು ಏರಿಕೆ ದಾಖಲಿಸಿವೆ. ಇನ್ನು ಎಚ್‌ಡಿಎಫ್‌ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್, ಶ್ರೀರಾಮ್ ಫೈನಾನ್ಸ್ ಮತ್ತು ಅದಾನಿ ಎಂಟರ್‌ಟೈನ್‌ಮೆಂಟ್‌ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.

ದೇಶೀಯ ಮಾರುಕಟ್ಟೆಯ ಜತೆಗೆ ಜಾಗತಿಕ ಮಾರುಕಟ್ಟೆಗಳೂ ಸಕಾರಾತ್ಮಕವಾಗಿ ಸ್ಪಂದಿಸಿವೆ. ಟೆಕ್ ಷೇರುಗಳ ಲಾಭದಿಂದ ವಾಲ್ ಸ್ಟ್ರೀಟ್ ದಾಖಲೆಯ ಗರಿಷ್ಠ ಮಟ್ಟದಲ್ಲಿ ಕೊನೆಗೊಂಡಿದೆ. ಎಸ್ & ಪಿ 500 ಶೇ. 0.51ರಷ್ಟು ಮತ್ತು ನಾಸ್ಡಾಕ್ ಕಾಂಪೊಸಿಟ್ ಶೇ. 0.88ರಷ್ಟು ಏರಿಕೆಯಾಗಿದೆ. ಇನ್ನು ಜಪಾನ್‌ನ ನಿಕೈ 225 ಶೇ. 0.27, ಕೊರಿಯಾದ ಕೋಸ್ಪಿ ಶೇ. 0.87 ಮತ್ತು ಏಷ್ಯಾ ಡೌ ಶೇ. 1ರಷ್ಟು ಏರಿಕೆ ದಾಖಲಿಸಿವೆ. ಹಾಂಗ್‌ಕಾಂಗ್‌ನ ಹಾಂಗ್ ಸೆಂಗ್ ಕೂಡಾ ಶೇ. 0.56ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಮಾರುಕಟ್ಟೆಗಳು ಧನಾತ್ಮಕ ಪ್ರದರ್ಶನ ತೋರುತ್ತಿವೆ. ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. 

Continue Reading

ವಾಣಿಜ್ಯ

Price Hike: ಮೊಬೈಲ್ ಕಂಪನಿಗಳಿಂದ ದರ ಏರಿಕೆ; ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬಹುದೆ?

Price Hike: ರಿಲಯನ್ಸ್‌ ಜಿಯೋ, ಏರ್‌ಟೆಲ್‌, ವೋಡಾಫೋನ್‌ ಐಡಿಯಾ ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Price Hike
Koo

ನವದೆಹಲಿ: ದೇಶದ ಟೆಲಿಕಾಂ ಕಂಪನಿಗಳು ಕೆಲ ದಿನಗಳ ಹಿಂದೆ ಗ್ರಾಹಕರಿಗೆ ಬೆಲೆಯೇರಿಕೆಯ ಬಿಸಿ ಮುಟ್ಟಿಸಿವೆ (Price Hike). ರಿಲಯನ್ಸ್‌ ಜಿಯೋ (Reliance Jio), ಏರ್‌ಟೆಲ್‌ (Airtel), ವೋಡಾಫೋನ್‌ ಐಡಿಯಾ (Vodafone Idea) ಮುಂತಾದ ಕಂಪನಿಗಳು ಪ್ರಿಪೇಯ್ಡ್‌ ಹಾಗೂ ಪೋಸ್ಟ್‌ ಪೇಯ್ಡ್‌ ಬೆಲೆಗಳನ್ನು ಏರಿಕೆ ಮಾಡಿವೆ. ಇದೀಗ ಮೊಬೈಲ್‌ ಕಂಪನಿಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದು ಸಾಧ್ಯವೆ? ಈ ಕುರಿತಾದ ನಿಯಮ ಏನು ಹೇಳುತ್ತದೆ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಸರ್ಕಾರ ಮತ್ತು ಟೆಲಿಕಾಂ ನಿಯಂತ್ರಕ ಸಂಸ್ಥೆ ಟೆಲಿಕಾಂ ಕಂಪನಿಗಳ ಬೆಲೆ ಹೆಚ್ಚಳವನ್ನು ತಡೆಯುವುದಿಲ್ಲ ಮತ್ತು ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ. ʼʼಹಾಗೆ ನೋಡಿದರೆ ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿನ ದರ ಇನ್ನೂ ಅಗ್ಗವಾಗಿದೆ. ಕಂಪನಿಗಳು ಸೇವೆಗಳ ಗುಣಮಟ್ಟದ ಸೇವೆ ನೀಡಲು ತಮ್ಮ ಗಮನವನ್ನು ಹರಿಸಬೇಕುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಟೆಲಿಕಾಂ ಕ್ಷೇತ್ರದಲ್ಲಿ ಸಾಕಷ್ಟು ಸ್ಪರ್ಧೆ ಇದೆ. ಇದೀಗ ಸರ್ಕಾರ ಮಧ್ಯಪ್ರವೇಶಿಸುವಷ್ಟು ಪರಿಸ್ಥಿತಿ ಗಂಭೀರವಾಗಿಲ್ಲ. ಸುಮಾರು ಮೂರು ವರ್ಷಗಳ ನಂತರ ಸ್ವಲ್ಪ ಮಟ್ಟಿನ ಬೆಲೆ ಏರಿಕೆಯಾಗಿದೆಯಷ್ಟೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬೆಲೆ ಏರಿಕೆಯ ಬಿಸಿ

ಈ ವಾರ ಭಾರತದ ಮೂರು ಪ್ರಮುಖ ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್‌ ಜಿಯೋ, ಏರ್‌ಟೆಲ್‌ ಮತ್ತು ವೋಡಾಫೋನ್‌ ಐಡಿಯಾ ಮೊಬೈಲ್ ರೀಚಾರ್ಜ್‌ ದರವನ್ನು ಶೇ. 11-25ರಷ್ಟು ಹೆಚ್ಚಿಸಿವೆ. ʼʼಮೊಬೈಲ್‌ ರೀಚಾರ್ಜ್‌ ದರದಲ್ಲಿನ ಶೇ. 13 ಹೆಚ್ಚಳವು ತೀರಾ ಹೊರೆ ಎನಿಸಿಕೊಂಡಿಲ್ಲ. ದರ ಹೆಚ್ಚಳ ಮಧ್ಯಮವಾಗಿದೆ. ಇದು ಮನೆಯ ವೆಚ್ಚದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿಲ್ಲʼʼ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ (Trai) ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿ, “ಟೆಲಿಕಾಂ ಕಂಪನಿಗಳು ದರ ನಿರ್ಧರಿಸುವ ವಿಚಾರದಲ್ಲಿ ಸ್ವತಂತ್ರರಾಗಿದ್ದಾರೆ. ಅವರ ನಿರ್ಧಾರದಲ್ಲಿ ನಾವು ಮಧ್ಯ ಪ್ರವೇಸಿಸುವುದಿಲ್ಲ. ಆದರೆ ಅವರು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಬೇಕು. ಗುಣಮಟ್ಟದಲ್ಲಿ ರಾಜಿಯಾದರೆ ನಾವು ಮಧ್ಯಪ್ರವೇಶಿಸುತ್ತೇವೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಬೆಂಗಳೂರು: ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ (ಟಾರೀಫ್‌ ದರಪಟ್ಟಿಯನ್ನು) ಹೆಚ್ಚಳ ಮಾಡಿವೆ. ಮೂರು ಟೆಲಿಕಾಂಗಳ ಬೆಲೆ ಏರಿಕೆ ಕಂಡ ಯೋಜನೆಗಳ ಹೊಸ ದರಗಳನ್ನು ಹೋಲಿಸಿ ನೋಡಿದರೆ ನಮ್ಮ ಕಂಪನಿಯ ದರವೇ ಕಡಿಮೆ ಎಂದು ರಿಲಯನ್ಸ್‌ ಜಿಯೋ ಟೆಲಿಕಾಂ ಹೇಳಿಕೊಂಡಿದೆ.

ಜಿಯೋ ಸೇರಿದಂತೆ ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಸಂಸ್ಥೆಗಳು ಸಹ ತಮ್ಮ ಯೋಜನೆಗಳ ಬೆಲೆ ಏರಿಕೆ ಮಾಡಿವೆ. ಅದಾಗ್ಯೂ ಜಿಯೋದ ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಗಳು ಪ್ರತಿಸ್ಪರ್ಧಿಗಳಿಗಿಂತ ಶೇ. 20ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ. ಹಾಗೆಯೇ ಜಿಯೋ ಸಂಸ್ಥೆಯ ಅತ್ಯಂತ ಕಡಿಮೆ ಪೋಸ್ಟ್‌ಪೇಯ್ಡ್ ಯೋಜನೆಯು ಹತ್ತಿರದ ಪ್ರತಿಸ್ಪರ್ಧಿಯ ಪೋಸ್ಟ್ ಪೇಯ್ಡ್ ಪ್ಲಾನ್‌ಗಿಂತ ಶೇ. 29ರಷ್ಟು ಕಡಿಮೆಯಾಗಿದೆ ಎಂದು ಈ ಕಂಪನಿ ಹೇಳಿದೆ.

Continue Reading
Advertisement
dengue fever mysore death
ಪ್ರಮುಖ ಸುದ್ದಿ3 mins ago

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Hathras Stampede
ದೇಶ7 mins ago

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Virat Kohli
ಕ್ರೀಡೆ8 mins ago

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Shiva Rajkumar Bhairavana Kone PaaTa Title announce
ಸ್ಯಾಂಡಲ್ ವುಡ್33 mins ago

Shiva Rajkumar: ‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್‌; ಹ್ಯಾಟ್ರಿಕ್ ಹೀರೊಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌!

rain news no entry falls
ಪ್ರಮುಖ ಸುದ್ದಿ43 mins ago

Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

Tornado Effect in Udupi
ಉಡುಪಿ48 mins ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

MS Dhoni
ಕ್ರೀಡೆ53 mins ago

MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

Hathras Stampede
ದೇಶ1 hour ago

Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Stock Market
ವಾಣಿಜ್ಯ1 hour ago

Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Team India Arrival
ಕ್ರೀಡೆ1 hour ago

Team India Arrival: ಪ್ರಧಾನಿ ಮೋದಿ ಔತಣ ಕೂಟಕ್ಕೆ ತೆರಳಿದ ಟೀಮ್​ ಇಂಡಿಯಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tornado Effect in Udupi
ಉಡುಪಿ48 mins ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ7 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್‌