PFI Protest | ಕಣ್ಣೂರಿನ ಆರ್​ಎಸ್​ಎಸ್​ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ; ಕಿಟಕಿ ಗಾಜು ಪುಡಿ - Vistara News

ದೇಶ

PFI Protest | ಕಣ್ಣೂರಿನ ಆರ್​ಎಸ್​ಎಸ್​ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ; ಕಿಟಕಿ ಗಾಜು ಪುಡಿ

ಪಿಎಫ್​ಐ ವಿರುದ್ಧ ಎನ್​ಐಎ ದಾಳಿಯನ್ನು ಖಂಡಿಸಿ ಇಂದು ಕಾರ್ಯಕರ್ತರು ಕೇರಳದಲ್ಲಿ ಬಂದ್​ ನಡೆಸುತ್ತಿದ್ದಾರೆ. ಇದೀಗ ಹಿಂಸಾಸ್ವರೂಪಕ್ಕೆ ತಿರುಗಿದೆ. ಸಿಕ್ಕಸಿಕ್ಕ ವಾಹನಗಳಿಗೆ ಕಲ್ಲೆಸೆಯುತ್ತಿದ್ದಾರೆ.

VISTARANEWS.COM


on

Petrol bomb hurled at RSS office In Kerala
ಆರ್​ಎಸ್​ಎಸ್​ ಕಚೇರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿಯಾಗಿದೆ. ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಪೆಟ್ರೋಲ್​ ಬಾಂಬ್​ ಎಸೆದು ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಆರ್​ಎಸ್​ಎಸ್​ ಕಚೇರಿಯ ಕಿಟಕಿ ಮುರಿದಿದ್ದು ಬಿಟ್ಟರೆ ಇನ್ಯಾವುದೇ ರೀತಿಯ ಹಾನಿಯೂ ಆಗಲಿಲ್ಲ. ಯಾರೂ ಗಾಯಗೊಂಡಿಲ್ಲ. ಪೊಲೀಸರು ಆರೋಪಿಗಳ ಪತ್ತೆ ಕಾರ್ಯ ಪ್ರಾರಂಭ ಮಾಡಿದ್ದಾರೆ ಎಂದು ವರದಿಯಾಗಿದೆ.

ಇಂದು ಕೇರಳಾದಾದ್ಯಂತ ಪಿಎಫ್ಐ ಪ್ರತಿಭಟನೆ ನಡೆಯುತ್ತಿದೆ. ಸೆ.22ರಂದು ದೇಶಾದ್ಯಂತ ಪಿಎಫ್​ಐ ಮುಖಂಡರಿಗೆ ಸೇರಿದ ಸ್ಥಳಗಳ ಮೇಲೆ ಎನ್​ಐಎ ದಾಳಿ ಮಾಡಿತ್ತು. ಅದನ್ನು ವಿರೋಧಿಸಿ ಇಂದು ಪಿಎಫ್​ಐ ಕೇರಳ ಬಂದ್​ ಆಚರಿಸುತ್ತಿದೆ. ಬಂದ್ ನೆಪದಲ್ಲಿ ಹಿಂಸಾಚಾರ ನಡೆಸುತ್ತಿದೆ. ಮೂರ್ನಾಲ್ಕು ಬಸ್​​ಗಳು, ಕಾರು, ಆಟೋಗಳಿಗೆ ಪಿಎಫ್​ಐ ಕಾರ್ಯಕರ್ತರು ಕಲ್ಲು ಎಸೆದಿದ್ದಾರೆ. ಬೆಳಗ್ಗೆ ಇದೇ ಕಣ್ಣೂರಿನಲ್ಲಿ ಸುದ್ದಿಪತ್ರಿಕೆಗಳನ್ನು ಒಯ್ಯುತ್ತಿದ್ದ ವಾಹನವೊಂದರ ಮೇಲೆ ಕೂಡ ಪೆಟ್ರೋಲ್​ ಬಾಂಬ್​ ದಾಳಿಯಾಗಿತ್ತು.

ಇಂದು ಬೆಳಗ್ಗೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪಿಎಫ್​ಐ ಪ್ರತಿಭಟನಾಕಾರರು ಪೆಟ್ರೋಲ್ ಬಾಂಬ್​ ಎಸೆದಿದ್ದರು. ಅದರ ಬೆನ್ನಲ್ಲೇ ಈಗ ಕೇರಳದಲ್ಲಿ ಆರ್​ಎಸ್​ಎಸ್​ ಕಚೇರಿ ಮೇಲೆಯೂ ದಾಳಿಯಾಗಿದೆ. ಆದರೆ ಇದನ್ನೂ ಮಾಡಿದ್ದು ಪಿಎಫ್​ಐನವರೇನಾ? ಎಂಬುದು ಸ್ಪಷ್ಟವಾಗಿಲ್ಲ.
ಆರ್​ಎಸ್​ಎಸ್​ ಕಚೇರಿ ಮೇಲೆ ಇದೇ ವರ್ಷ ಜುಲೈ ತಿಂಗಳಲ್ಲಿ ಕೂಡ ದಾಳಿಯಾಗಿತ್ತು. ಅಂದು ದಾಳಿ ನಡೆಸಿದ್ದು ಸಿಪಿಐ (ಎಂ) ಕಾರ್ಯಕರ್ತರು ಎಂದು ಆರ್​ಎಸ್​ಎಸ್​ ನಾಯಕರು ಆರೋಪಿಸಿದ್ದರು.

ಇದನ್ನೂ ಓದಿ: PFI Protest | ಕೇರಳದಲ್ಲಿ ಬಂದ್​ ನೆಪದಲ್ಲಿ ಪಿಎಫ್​ಐ ಹಿಂಸಾಚಾರ; ಕಠಿಣ ಕ್ರಮಕ್ಕೆ ಹೈಕೋರ್ಟ್​ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ವೈರಲ್ ನ್ಯೂಸ್

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

Viral Video: ದೇಶದಲ್ಲಿ ಹೆಚ್ಚುತ್ತಿರುವ ಬಿಸಲಿ ಬೇಗೆಗೆ ಎಲ್ಲರೂ ಹೈರಾಣಾಗಿದ್ದಾರೆ. ಕೆಲವು ದಿನಗಳ ಹಿಂದೆ ಮಕ್ಕಳನ್ನು ಸೆಕೆಯಿಂದ ಪಾರು ಮಾಡಲು ತರಗತಿ ಕೋಣೆಗೆ ಎರಡು ಅಡಿ ನೀರು ತುಂಬಿಸಿ ಈಜುಕೊಳವನ್ನಾಗಿ ಪರಿವರ್ತಿಸಿದ ವಿಡಿಯೊ ವೈರಲ್‌ ಆಗಿತ್ತು. ಇದೀಗ ಸುಡುವ ಬಿಸಿಲಿನಿಂದ ಪಾರಾಗಲು ಮಂಗಗಳ ಗುಂಪು ಸ್ವಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊವನ್ನು ನೀವೂ ನೋಡಿ.

VISTARANEWS.COM


on

Viral Video
Koo

ನವದೆಹಲಿ: ದೇಶದೆಲ್ಲೆಡೆ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಈ ವೇಳೆ ಕೊಳ, ನದಿ ಕಂಡರೆ ಸಾಕು ಹೋಗಿ ಈಜಾಡೋಣ ಎನಿಸುತ್ತದೆ. ಈ ಪರಿಯ ಬಿಸಿಲಿನ ಬೇಗೆಗೆ ಮನುಷ್ಯರು ಮಾತ್ರವಲ್ಲ ಪ್ರಾಣಿಗಳೂ ಕಂಗಾಲಾಗಿವೆ. ಈ ಮಧ್ಯೆ ಮನುಷ್ಯರು ಮಾತ್ರ ಯಾಕೆ ನಾವೂ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿ ತಂಪು ಮಾಡಿಕೊಳ್ಳುತ್ತೇವೆ ಎಂಬಂತಿದೆ ಈ ಮಂಗಗಳ ವರ್ತನೆ. ಹೌದು, ಮುಂಬೈಯ ವಸತಿ ಸಂಕೀರ್ಣದ ಈಜುಕೊಳಕ್ಕೆ ಲಗ್ಗೆ ಇಟ್ಟ ಮಂಗಗಳ ಗುಂಪು ನೀರಾಟವಾಡುವ ಮೂಲಕ ಮೈ ಮನಸ್ಸು ಹಗುರ ಮಾಡಿಕೊಂಡಿವೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಮುಂಬೈಯ ಬೋರಿವಾಲಿ ಪ್ರದೇಶದಲ್ಲಿರುವ ವಸತಿ ಸಂಕೀರ್ಣದೊಳಗೆ ಕಂಡುಬಂದ ಈ ದೃಶ್ಯವನ್ನು ಸೆರೆ ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಲಾಗಿದೆ. ಅದು ಪರಸ್ಪರ ಸಂಪರ್ಕ ಹೊಂದಿರುವ ಎರಡು ಈಜು ಕೊಳಗಳು. ಮೊದಲ ವಿಡಿಯೊದಲ್ಲಿ ಕೊಳದಲ್ಲಿ ಮಂಗಗಳು ಈಜುತ್ತಿರುವುದು ಕಂಡು ಬಂದರೆ ಎರಡನೇ ವಿಡಿಯೊದಲ್ಲಿ ಒಂದು ಕೊಳದಿಂದ ಇನ್ನೊಂದು ಕೊಳಕ್ಕೆ ಮಂಗಗಳು ನೆಗೆಯುತ್ತಿರುವುದು ಕಾಣಿಸುತ್ತಿದೆ. ʼಮಂಗಗಳು ಈಜು ಕೊಳಕ್ಕೆ ಮರಳಿವೆ. ಈ ಬೇಸಿಗೆಯ ದಿನವನ್ನು ಸಿಮ್ಮಿಂಗ್‌ ಪೂಲ್‌ನಲ್ಲಿ ಕಳೆಯುತ್ತಿವೆʼ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ನೆಟ್ಟಿಗರು ಏನಂದ್ರು?

ಸದ್ಯ ಮಂಗಗಳ ಈ ನೀರಾಟ ನೆಟ್ಟಿಗರ ಗಮನ ಸೆಳೆದಿದೆ. ಈಗಾಗಲೇ ಸಾವಿರಾರು ಮಂದಿ ನೋಡಿ ಮನಸ್ಸು ಹಗುರ ಮಾಡಿಕೊಂಡಿದ್ದಾರೆ. ʼʼಈ ಬಿಸಿಲಿನ ಬೇಗೆಯಿಂದ ಪಾರಾಗಲು ಇದು ಅತ್ಯುತ್ತಮ ಮಾರ್ಗʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಸೂಪರ್‌. ಈ ಭೂಮಿ ಎಲ್ಲರಿಗಾಗಿ ಎನ್ನುವ ಮಾತನ್ನು ಈ ವಿಡಿಯೊ ನಿಜವಾಗಿಸಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼವಾವ್‌. ಈ ಕೋತಿಗಳ ಆಟ ನೋಡಲು ಖುಷಿಯಾಗುತ್ತಿದೆʼʼ ಎಂದು ಮತ್ತೊಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ. ʼʼಜೀವನ ಎಂದರೆ ಇದುʼʼ ಎನ್ನುವ ಉದ್ಘಾರ ಮಗದೊಬ್ಬರದ್ದು. ʼʼಈ ಕೋತಿಗಳು ಕೊಳದಲ್ಲಿ ಮಲ ವಿಸರ್ಜನೆ ಮಾಡದಿರುವವರೆಗೆ ಈಜುವುದು ಸ್ವೀಕಾರಾರ್ಹʼʼ ಎಂದು ಇನ್ನು ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ದೇಶಾದ್ಯಂತ ಅನುಭವಕ್ಕೆ ಬರುತ್ತಿರುವ ಬಿಸಿಲಿನ ಝಳದ ಗಂಭೀರತೆಯನ್ನು ತೆರೆದಿಟ್ಟಿದೆ. ಜತೆಗೆ ನೋಡುಗರ ತುಟಿಯಂಚಿನಲ್ಲಿ ಕಿರುನಗೆ ಅರಳಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

ಮಂಗಗಳು ಈಜುಕೊಳದಲ್ಲಿ ಈ ರೀತಿ ನೀರಾಟವಾಡುತ್ತಿರುವ ಪ್ರಸಂಗ ಇದು ಮೊದಲೇನಲ್ಲ. ಹಿಂದೆಯೂ ಇದೇ ರೀತಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಮನೆಯೊಂದರ ಬಾಲ್ಕನಿಯಲ್ಲಿ ಮಂಗವೊಂದು ಕುಳಿತಿರುತ್ತದೆ. ಸ್ವಲ್ಪ ಹೊತ್ತು ಆಚೆ-ಈಚೆ ನೋಡುವ ಅದು ಬಳಿಕ ಆ ಕಟ್ಟಡದ ಕೆಳಭಾಗದಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ಗೆ ಜಿಗಿದು ಈಜಾಡುತ್ತದೆ. ʼಯಾಕೆ ಎಲ್ಲ ಸಂತೋಷವನ್ನು ಮನುಷ್ಯ ಮಾತ್ರ ಅನುಭವಿಸಬೇಕು? ಪ್ರಾಣಿಗಳಿಗೂ ಈಜಲು ಬರುತ್ತೆʼ ಎನ್ನುವ ಅರ್ಥಪೂರ್ಣ ಕ್ಯಾಪ್ಶನ್‌ ನೀಡಿ ಈ ವಿಡಿಯೊವನ್ನು ಶೇರ್‌ ಮಾಡಲಾಗಿತ್ತು. ಇದು ಕೂಡ ಲಕ್ಷಾಂತರ ಮಂದಿಯ ಗಮನ ಸೆಳೆದಿತ್ತು. ಮಂಗನ ಬುದ್ಧಿವಂತಿಕೆಗೆ ಹಲವರು ತಲೆದೂಗಿದ್ದರು.

Continue Reading

ದೇಶ

Ram Mandir:ಪಾಕ್‌ನ 200 ಸಿಂಧಿ ಯಾತ್ರಿಕರು ಅಯೋಧ್ಯೆಗೆ ಭೇಟಿ; ಭರ್ಜರಿ ಸ್ವಾಗತ

Ram Mandir: ಶ್ರೀರಾಮ ಮಂದಿರಕ್ಕೆ ಭೇಟಿ ನೀಡುಲೆಂದು ಪಾಕಿಸ್ತಾನದ ಸಿಂಧಿ ಸಮುದಾಯದ 200 ಜನರ ನಿಯೋಗ ಇಂದು ಅಯೋಧ್ಯೆಗೆ ಬರಲಿದೆ. ಈ ಬಗ್ಗೆ ದೇಗುಲದ ಟ್ರಸ್ಟ್‌ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸಿಂಧಿ ಸಮುದಾಯ ಒಂದು ತಿಂಗಳು ಭಾರತದಲ್ಲಿ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದು, ರಸ್ತೆ ಮೂಲಕ ಪ್ರಯಾಗರಾಜ್‌ನಿಂದ ಅಯೋಧ್ಯೆಗೆ ಬರಲಿದೆ. ಇವರ ಜೊತೆಗೆ ಭಾರತ ಸಿಂಧಿ ಸಮುದಾಯದ 150ಕ್ಕೂ ಹೆಚ್ಚು ಜನ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ

VISTARANEWS.COM


on

Ram Mandir
Koo

ಉತ್ತರಪ್ರದೇಶ:ಶ್ರೀರಾಮ ಮಂದಿರ(Ram Mandir)ಕ್ಕೆ ಭೇಟಿ ನೀಡುಲೆಂದು ಪಾಕಿಸ್ತಾನದ ಸಿಂಧಿ ಸಮುದಾಯದ 200 ಜನರ ನಿಯೋಗ ಇಂದು ಅಯೋಧ್ಯೆ(Ayodhya)ಗೆ ಬರಲಿದೆ. ಈ ಬಗ್ಗೆ ದೇಗುಲದ ಟ್ರಸ್ಟ್‌ ಮಾಹಿತಿ ನೀಡಿದ್ದು, ಪಾಕಿಸ್ತಾನದ ಸಿಂಧಿ ಸಮುದಾಯ ಒಂದು ತಿಂಗಳು ಭಾರತದಲ್ಲಿ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದು, ರಸ್ತೆ ಮೂಲಕ ಪ್ರಯಾಗರಾಜ್‌ನಿಂದ ಅಯೋಧ್ಯೆಗೆ ಬರಲಿದೆ. ಇವರ ಜೊತೆಗೆ ಭಾರತ ಸಿಂಧಿ ಸಮುದಾಯದ 150ಕ್ಕೂ ಹೆಚ್ಚು ಜನ ಧಾರ್ಮಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಈ ಪವಾಸಿ ತಂಡವನ್ನು ಸ್ವಾಗತಿಸಲಿದ್ದಾರೆ. ರಾಮ್‌ ಕೀ ಪೈದಿಯಲ್ಲಿ ಇದಕ್ಕೆಂದೇ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಯಾಗ್‌ರಾಜ್‌ನಿಂ ಈ ಪ್ರವಾಸಿಗರ ತಂಡ ಬಸ್‌ ಮೂಲಕ ಅಯೋಧ್ಯೆ ತಲುಪಲಿದೆ. ಭರತ್‌ ಕುಂಡ, ಗುಪ್ತಾರ್‌ ಘಾಟ್‌, ರೂಪನ್‌ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ಕೊಡಲಾಗುತ್ತದೆ ಎಂದು ರಾಷ್ಟ್ರೀಯ ಸಿಂಧಿ ವಿಕಾಸ್‌ ಪರಿಷತ್‌ನ ಸದಸ್ಯ ವಿಶ್ವ ಪ್ರಕಾಶ್‌ ರೂಪನ್‌ ಹೇಳಿದ್ದಾರೆ.

ಸಿಂಧಿ ಯಾತ್ರಿಕರಿಗೆ ವಿಶೇಷ ವ್ಯವಸ್ಥೆ

ಅಯೋಧ್ಯೆಗೆ ಆಗಮಿಸುತ್ತಿರುವ ಪಾಕಿಸ್ತಾನದಿಂದ ಭಾರತಕ್ಕೆ ಬರುತ್ತಿರುವ ಸಿಂಧಿ ಸಮುದಾಯದ ಯಾತ್ರಿಕರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಯಾತ್ರಿಕರಿಗೆಂದೇ ಅಯೋಧ್ಯೆಯ ಉದಾಸಿನ್‌ ರಿಷಿ ಆಶ್ರಮ ಮತ್ತು ಶಬರಿ ರಸೋಯಿ ಆಶ್ರಮಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ ರಾಮ್‌ ಕೀ ಪೈದಿಯಲ್ಲಿ ನಡೆಯಲಿರುವ ಸರಯೂ ಆರತಿಯಲ್ಲಿ ಎಲ್ಲಾ ಯಾತ್ರಿಕರು ಭಾಗಿಯಾಗಲಿದ್ದಾರೆ. ಆ ಸಂದರ್ಭದಲ್ಲಿ ಚಂಪತ್‌ ರೈ ಸಿಂಧಿ ಯಾತ್ರಿಕರನ್ನು ಸ್ವಾಗತಿಸಲಿದ್ದಾರೆ.

ಅಲ್ಲದೇ ಅಯೋಧ್ಯೆಯ ಸಿಂಧಿ ಧಾಮ್‌ ಆಶ್ರಮದಲ್ಲಿ ಪಾಕ್‌ ಸಿಂಧಿ ಯಾತ್ರಿಕರಿಗೆಂದೇ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಇಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಲಿರುವ ಸಿಂಧಿ ಸಮುದಾಯದ ಯಾತ್ರಿಕರೂ ಭಾಗಿಯಾಗಿ ಪಾಕ್‌ ಯಾತ್ರಿಕರನ್ನು ಬರಮಾಡಿಕೊಳ್ಳಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸಂತ ಸದಾ ರಾಮ ದರ್ಬಾರ್‌ ಮಠದ ಪೀಠಾಧಿಪತಿ ಯುಧಿಷ್ಠಿರ ಲಾಲ್‌ ಕೂಡ ಸಾಥ್‌ ನೀಡಲಿದ್ದಾರೆ. ಇಂದು ರಾತ್ರಿ ಸಿಂಧಿ ಪ್ರವಾಸಿಗರು ಲಕ್ನೋಗೆ ತೆರಳಿ ಅಲ್ಲಿಂದ ರಾಯ್‌ಪುರಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: Lalu Prasad Yadav: ಬಿಹಾರದಲ್ಲಿ ಲಾಲೂ ಪ್ರಸಾದ್‌ ಯಾದವ್‌ v/s ಲಾಲೂ ಪುತ್ರಿ

 ಉತ್ತರ ಪ್ರದೇಶದ ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ಬಾಲಕ ರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ನೆರವೇರಿದೆ. ಜನವರಿ 22ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಮಾರಂಭ ಜನವರಿ 22ರಂದು ನಡೆಯಿತು. ಅದಾದ ಬಳಿಕ ಜನವರಿ 23ರಿಂದ ಈ ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದ್ದು, ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲಕ ರಾಮನ ದರ್ಶನ ಮಾಡುತ್ತಿದ್ದಾರೆ. ಸದ್ಯ ರಾಮ ಮಂದಿರದಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಭಕ್ತರಿಗೆ ದೇವರ ದರ್ಶನ ಭಾಗ್ಯ ಲಭಿಸಲಿದೆ. ಆರಂಭದಲ್ಲಿ ದೇಗುಲದ ಬಾಗಿಲನ್ನು ಬೆಳಗ್ಗೆ 7 ಗಂಟೆಗೆ ತೆರೆಯಲಾಗುತ್ತಿತ್ತು. ಬಳಿಕ ಪ್ರವಾಸಿಗರ ನೂಕು ನುಗ್ಗಲು ಗಮನಿಸಿ ದರ್ಶನದ ಸಮಯವನ್ನು ಹೆಚ್ಚಿಸಲಾಗಿತ್ತು. ಈ ಮಧ್ಯೆ ಮಧ್ಯಾಹ್ನ 12:30ರಿಂದ 1:30ರ ವರೆಗೆ ಬಾಲಕ ರಾಮನಿಗೆ ವಿಶ್ರಾಂತಿ ಸಮಯವಾಗಿರುವುದರಿಂದ ಈ ವೇಳೆ ಭಕ್ತರಿಗೆ ದರ್ಶನ ಲಭಿಸುವುದಿಲ್ಲ.

Continue Reading

ದೇಶ

Triple Talaq: ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಭೂಪ

Triple Talaq: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ ಅನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಸಲ್ಲೊಂದು ಇಲ್ಲೊಂದು ಇಂತಹ ಪ್ರಕರಣ ವರದಿಯಾಗುತ್ತಲೇ ಇರುತ್ತದೆ. ಅದಕ್ಕೆ ಇಲ್ಲಿದೆ ಉತ್ತಮ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Triple Talaq
Koo

ಲಕ್ನೋ: ಮುಸ್ಲಿಂ ಹೆಣ್ಣು ಮಕ್ಕಳ ಜೀವನಕ್ಕೇ ಕುತ್ತು ತರುತ್ತಿದ್ದ ತ್ರಿವಳಿ ತಲಾಕ್ (Triple Talaq) ಎಂಬ ಅನಿಷ್ಟ ಪದ್ಧತಿಯನ್ನು ಕೇಂದ್ರ ಸರ್ಕಾರ ಈಗಾಗಲೇ ನಿಷೇಧಿಸಿದೆ. ಆದರೂ ಕಾನೂನು ಕಣ್ಣು ತಪ್ಪಿಸಿ ಹಲವರು ಇನ್ನೂ ಈ ಅನಾಚಾರವನ್ನು ಮುಂದುವರಿಸುತ್ತಿದ್ದಾರೆ ಎನ್ನುವುದಕ್ಕೆ ಇಲ್ಲಿದೆ ಉದಾಹರಣೆ. ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿದ್ದಾನೆ.

ಏಪ್ರಿಲ್‌ 29ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ಹೀಗೆ ತ್ರಿವಳಿ ತಲಾಕ್‌ ನೀಡಿದ ಭೂಪ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ಈ ಘಟನೆ ನಡೆದಿದೆ.

ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಅನಿರೀಕ್ಷಿತ ಆಘಾತದಿಂದ ತಬ್ಬಿಬ್ಬಾದ ಅಫ್ಸಾನಾ ಕೂಡಲೇ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದ್ದರು. ಪೊಲೀಸರು ಅವರನ್ನು ಕಾನ್ಪುರ್ ದೆಹತ್‌ನ ಪುಖ್ರಾಯನ್‌ಗೆ ಕಳುಹಿಸಿದರು. ಅಲ್ಲಿಂದ ಅವರು ಭೋಪಾಲ್‌ಗೆ ರೈಲು ಹತ್ತಿದ್ದರು. ಕೊನೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮೊಹಮ್ಮದ್ ಅರ್ಷದ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಭೋಪಾಲ್‌ನ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್‌ ಎಂಜಿನಿಯರ್‌ ಆಗಿರುವ ಅರ್ಷದ್‌ ಈ ವರ್ಷದ ಜನವರಿ 12ರಂದು ರಾಜಸ್ಥಾನದ ಕೋಟದ ಅಫ್ಸಾನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮ್ಯಾಟ್ರಿಮೋನಿ ಜಾಹೀರಾತು ಮೂಲಕ ಪದವೀಧರೆಯಾದ ಅಫ್ಸಾನಾ ಮತ್ತು ಅರ್ಷದ್‌ ಪರಸ್ಪರ ಪರಿಚಿತರಾಗಿದ್ದರು. ದಂಪತಿ ಕಳೆದ ವಾರ ಪುಖ್ರಾಯನ್‌ನಲ್ಲಿರುವ ಅರ್ಷದ್‌ನ ಪೂರ್ವಜರ ಮನೆಗೆ ಭೇಟಿ ನೀಡಿದಾಗ ಅಫ್ಸಾನಾ ಅವರಿಗೆ ಆಘಾತಕಾರಿ ಸತ್ಯವೊಂದು ತಿಳಿಯಿತು. ಅರ್ಷದ್‌ಗೆ ಅದಾಗಲೇ ಮದುವೆಯಾಗಿತ್ತು ಎನ್ನುವುದು ಅಫ್ಸಾನಾ ಅವರಿಗೆ ಆಗಷ್ಟೇ ತಿಳಿದು ಬಂದಿತ್ತು.

ಈ ಬಗ್ಗೆ ಅಫ್ಸಾನಾ ಪ್ರಶ್ನಿಸಿದಾಗ ಕಿರುಕುಳ ಆರಂಭವಾಗಿತ್ತು. ಅರ್ಷದ್‌ ಮತ್ತು ಆತನ ತಾಯಿ ವರದಕ್ಷಿಣೆ ನೀಡುವಂತೆ ಪೀಡಿಸತೊಡಗಿದರು ಎಂದು ಅಫ್ಸಾನಾ ದೂರಿನಲ್ಲಿ ತಿಳಿಸಿದ್ದಾರೆ. ಕೊನೆಗೆ ರೈಲಿನಲ್ಲಿ ಆತ ತ್ರಿವಳಿ ತಲಾಕ್‌ ಕೊಟ್ಟು ನಾಪತ್ತೆಯಾಗಿದ್ದಾನೆ ಎಂದು ಅಫ್ಸಾನಾ ವಿವರಿಸಿದ್ದಾರೆ.

ಇದನ್ನೂ ಓದಿ: Triple Talaq: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತ್ರಿವಳಿ ತಲಾಕ್ ನೀಡಿದ ದುರುಳ; ವರದಕ್ಷಿಣೆ ಆಸೆಗೆ ನೀಚ ಕೃತ್ಯ

ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ

ಸದ್ಯ ಈ ವಿಚಾರ ಸದ್ದು ಮಾಡುತ್ತಿದೆ. ಅಫ್ಸಾನಾ ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಿ ತನಗೆ ನೆರವಾಗಬೇಕು ಎಂದು ಕೋರಿದ್ದಾರೆ. ಹೀಗೆ ತ್ರಿವಳಿ ತಲಾಕ್‌ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಸರ್ಕಲ್‌ ಆಫೀಸರ್‌ ಪ್ರಿಯಾ ಸಿಂಗ್‌ ಈ ಬಗ್ಗೆ ಮಾತನಾಡಿ, ʼʼಅಫ್ಸಾನಾ ಅವರ ದೂರಿನ ಮೇರೆಗೆ ಅರ್ಷಾದ್‌, ಆತನ ಮಾವ ಅಖೀಲ್‌, ತಂದೆ ನಫೀಸುಲ್ ಹಸನ್ ಮತ್ತು ತಾಯಿ ಪರ್ವೀನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.

Continue Reading
Advertisement
Prajwal Revanna Case Revanna withdraws anticipatory bail plea
ಕ್ರೈಂ2 mins ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ2 mins ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ8 mins ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್13 mins ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ17 mins ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Karnataka Weather Forecast
ಮಳೆ22 mins ago

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Rashmika Mandanna's younger sister Shiman
ಟಾಲಿವುಡ್34 mins ago

Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

Prajwal Revanna Case Wherever Prajwal escapes we will pick him up says CM Siddaramaiah
ಕ್ರೈಂ37 mins ago

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Devon Thomas
ಕ್ರೀಡೆ44 mins ago

Devon Thomas: ಟಿ20 ವಿಶ್ವಕಪ್​ಗೂ ಮುನ್ನ ವಿಂಡೀಸ್​ ಬ್ಯಾಟರ್​ಗೆ 5 ವರ್ಷ ನಿಷೇಧ ಹೇರಿದ ಐಸಿಸಿ

Prajwal Revanna Case If Prajwal and Revanna fails to appear infront of SIT they will be arrested says Dr Parameshwara
ಕ್ರೈಂ60 mins ago

Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ18 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌