Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟ; 18ಕ್ಕೂ ಅಧಿಕ ಮಂದಿ ಜೀವನ್ಮರಣ ಹೋರಾಟ - Vistara News

ದೇಶ

Pharma Company Blast: ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟ; 18ಕ್ಕೂ ಅಧಿಕ ಮಂದಿ ಜೀವನ್ಮರಣ ಹೋರಾಟ

Pharma Company Blast: ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.

VISTARANEWS.COM


on

Pharma Company Blast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಫಾರ್ಮಾ ಕಂಪನಿಯಲ್ಲಿ (Pharma Company Blast) ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಈ ಸಂಭವಿಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಚ್ಚುತ್ತಪುರಂ ವಿಶೇಷ ಆರ್ಥಿಕ ವಲಯ(Achutapuram Special Economic Zone)ದಲ್ಲಿರುವ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್‌ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಥಳದಿಂದ ಬಂದ ದೃಶ್ಯಗಳು ರಿಯಾಕ್ಟರ್‌ನಿಂದ ಹೊಗೆ ಹೊರ ಬರುತ್ತಿರುವುದು ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ಆವರಿಸುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇಂತಹದ್ದೇ ಒಂದು ಘಟನೆ ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದರು. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು. ದೊಂಬಿವಿಲಿ ಬಳಿಯ ಎಂಐಡಿಸಿ ಫೇಸ್‌ 2ರಲ್ಲಿರುವ ಕಾರ್ಖಾನೆಯಲ್ಲಿ ಕಾರ್ಮಿಕರು ಮೇ 23ರ ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಮುದನ್‌ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸಿತ್ತು.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ (Sangareddy District) ರಾಸಾಯನಿಕ ಕಾರ್ಖಾನೆಯೊಂದರಲ್ಲೂ ಏಪ್ರಿಲ್‌ 3)ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್‌ ಬ್ಲಾಸ್ಟ್‌; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kolkata Doctor Murder Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ; ಮತ್ತೆ ನೆನಪಿಗೆ ಬಂದಳು ಕರ್ನಾಟಕ ಮೂಲದ ನರ್ಸ್ ಅರುಣಾ ಶಾನ್‌ಬಾಗ್

ಕೋಲ್ಕತ್ತಾ ವೈದ್ಯರ ಅತ್ಯಾಚಾರ- ಕೊಲೆ ಪ್ರಕರಣದ (Kolkata Doctor Murder Case) ವಿಚಾರಣೆ ವೇಳೆ ಮಾತನಾಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ , ಬೇರೂರಿರುವ ಪಿತೃಪ್ರಭುತ್ವದ ಪಕ್ಷಪಾತದಿಂದಾಗಿ ಹೆಚ್ಚಿನ ಮಹಿಳೆಯರು ತೊಂದರೆ ಅನುಭವಿಸಿದ್ದಾರೆ. ರಾಷ್ಟ್ರವು ಮತ್ತೊಂದು ಅತ್ಯಾಚಾರಕ್ಕಾಗಿ ಕಾಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಮುಂಬಯಿಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ನರಕಯಾತನೆ ಅನುಭವಿಸಿದ್ದ ಕರ್ನಾಟಕ ಮೂಲದ ಅರುಣಾ ಶಾನಬಾಗ್ ಅವರನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Kolkata Doctor Murder Case
Koo

ನವದೆಹಲಿ: ಕೋಲ್ಕತ್ತಾ ವೈದ್ಯರ ಅತ್ಯಾಚಾರ- ಕೊಲೆ ಪ್ರಕರಣದ (Kolkata Doctor Murder Case) ವಿಚಾರಣೆ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (Chief Justice of India) ಡಿ.ವೈ. ಚಂದ್ರಚೂಡ್ (D.Y. Chandrachud ) ಅವರು 1973ರಲ್ಲಿ ನಡೆದ ನರ್ಸ್ ಅರುಣಾ ಶಾನ್‌ಬಾಗ್ (Aruna Shanbaug) ಅತ್ಯಾಚಾರದ ಘಟನೆಯನ್ನು ಉಲ್ಲೇಖಿಸಿದ್ದಾರೆ.

ಮಹಿಳಾ ವೈದ್ಯರ ಮೇಲಿನ ಕ್ರೂರ ದಾಳಿಯ ಬಗ್ಗೆ ಮಾತನಾಡಿರುವ ಅವರು, ಬೇರೂರಿರುವ ಪಿತೃಪ್ರಭುತ್ವದ ಪಕ್ಷಪಾತದಿಂದಾಗಿ ಹೆಚ್ಚಿನ ಮಹಿಳೆಯರು ತೊಂದರೆ ಅನುಭವಿಸಿದ್ದಾರೆ. ರಾಷ್ಟ್ರವು ಮತ್ತೊಂದು ಅತ್ಯಾಚಾರಕ್ಕಾಗಿ ಕಾಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಅರುಣಾ ಶಾನ್‌ಬಾಗ್ ಪ್ರಕರಣವು ಆಸ್ಪತ್ರೆಗಳಲ್ಲಿ ವೈದ್ಯಕೀಯ ವೃತ್ತಿಪರರ ಮೇಲಿನ ಅತ್ಯಂತ ಭಯಾನಕ ದಾಳಿಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದ್ದಾರೆ.

ಏನಿದು ಅರುಣಾ ಶಾನ್‌ಬಾಗ್ ಪ್ರಕರಣ?

ಮುಂಬಯಿಯ ವೈದ್ಯಕೀಯ ಸಂಸ್ಥೆಯಾದ ಕೆಇಎಂ ಆಸ್ಪತ್ರೆಯಲ್ಲಿ 1967 ರಲ್ಲಿ ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ಸೇರಿಕೊಂಡಿದ್ದ 25 ವರ್ಷ ವಯಸ್ಸಿನ ನರ್ಸ್ ಅರುಣಾ ಅವರು ಅದೇ ಆಸ್ಪತ್ರೆಯ ವೈದ್ಯ ಡಾ. ಸಂದೀಪ್ ಸರ್ದೇಸಾಯಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 1974ರ ಆರಂಭದಲ್ಲಿ ವಿವಾಹವಾಗಬೇಕಿತ್ತು. ಆದರೆ 1973ರ ನವೆಂಬರ್ 27ರಂದು ರಾತ್ರಿ, ವಾರ್ಡ್ ಅಟೆಂಡೆಂಟ್ ಸೋಹನ್‌ಲಾಲ್ ಭರ್ತಾ ವಾಲ್ಮೀಕಿ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ.

ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅನಂತರ ನಾಯಿ ಸರಪಳಿಯಿಂದ ಕತ್ತು ಹಿಸುಕಿದ್ದ. ಈ ದಾಳಿಯಿಂದ ಅರುಣಾ ಅವರ ಮೆದುಳಿಗೆ ತೀವ್ರವಾದ ಹಾನಿಯಾಗಿತ್ತು. ಇದಾಗಿ 42 ವರ್ಷಗಳ ಕಾಲ ಕೋಮಾದಲ್ಲಿದ್ದ ಅವರು 2015ರಲ್ಲಿ ಸಾವನ್ನಪ್ಪಿದರು. ಇವರು ಮೂಲತಃ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಹಳದೀಪುರದವರು.

ಅರುಣಾ ಅವರ ಮೆದುಳಿಗೆ ಆದ ಹಾನಿಯಿಂದ ಅವರು ಪಾರ್ಶ್ವವಾಯುವಿಗೆ ತುತ್ತಾಗಿದ್ದರು. ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ, ಮೂಲಭೂತ ಅಗತ್ಯಗಳಿಗಾಗಿ ಇತರರ ಮೇಲೆ ಅವಲಂಬಿತರಾಗಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕೆಇಎಂ ಆಸ್ಪತ್ರೆಯಲ್ಲಿ ಅವರನ್ನು ಆರೈಕೆ ಮಾಡಲಾಯಿತು. ಪತ್ರಕರ್ತೆ ಪಿಂಕಿ ವಿರಾನಿ 2011ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅವರ ದಯಾಮರಣಕ್ಕೆ ಅರ್ಜಿ ಸಲ್ಲಿಸಿದಾಗ ಅವರ ಬಗ್ಗೆ ರಾಷ್ಟ್ರ ವ್ಯಾಪಿಯಲ್ಲಿ ಚರ್ಚೆ ಪ್ರಾರಂಭವಾಯಿತು.

ಪಿಂಕಿ ವಿರಾನಿ ಅವರು ಅರುಣಾ ಅವರ ಬಗ್ಗೆ ಬರೆದ ಪುಸ್ತಕದ ಪ್ರಕಾರ, ‘ಅರುಣಾ ಅವರ ಕಥೆ’, ಆರೋಪಿ ವಾಲ್ಮೀಕಿಯು ಆಸ್ಪತ್ರೆಯಲ್ಲಿ ವೈದ್ಯಕೀಯ ಪ್ರಯೋಗಗಳಲ್ಲಿ ಬಳಸುವ ನಾಯಿಗಳಿಗೆ ಮೀಸಲಾದ ಆಹಾರವನ್ನು ಕಡಿಯುತ್ತಿರುವುದಾಗಿ ಆರೋಪಿಸಿದ ಬಳಿಕ ಅರುಣಾ ವಿರುದ್ಧ ದ್ವೇಷ ಸಾಧಿಸಲು ಪ್ರಾರಂಭಿಸಿದ್ದನು. ಆತನ ವಿರುದ್ಧ ಅರುಣಾ ಆಸ್ಪತ್ರೆಯ ಅಧಿಕಾರಿಗಳಿಗೆ ದೂರು ನೀಡುವಂತೆ ಬೆದರಿಕೆ ಹಾಕಿದ್ದರು.


ಕಾನೂನು ಹೋರಾಟ

ಅರುಣಾ ಅವರು ಜೀವನವನ್ನು ಯಾವುದೇ ಅರ್ಥಪೂರ್ಣ ರೀತಿಯಲ್ಲಿ ಅನುಭವಿಸಲು ಅಸಮರ್ಥರಾಗಿರುವ ಸ್ಥಿತಿಯಲ್ಲಿದ್ದ ಕಾರಣ ಘನತೆಯಿಂದ ಸಾಯಲು ಅವಕಾಶ ನೀಡಬೇಕು ಎಂದು ಎಂ.ಎಸ್. ವಿರಾಣಿ ಅವರ ಅರ್ಜಿಯಲ್ಲಿ ವಾದಿಸಲಾಗಿದೆ.

2011ರ ಮಾರ್ಚ್ 7ರಂದು ನೀಡಿದ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್, ಅರುಣಾ ಮೆದುಳು ಸತ್ತಿಲ್ಲ ಮತ್ತು ಆಸ್ಪತ್ರೆಯ ಸಿಬ್ಬಂದಿ ಗಮನಿಸಿದಂತೆ ಕೆಲವು ಪ್ರಚೋದನೆಗಳಿಗೆ ಪ್ರತಿಕ್ರಿಯಿಸಿದರು ಎಂದು ಉಲ್ಲೇಖಿಸಿ, ಸಕ್ರಿಯ ದಯಾಮರಣ ಅರ್ಜಿಯನ್ನು ತಿರಸ್ಕರಿಸಿತು. ಆದರೂ ನ್ಯಾಯಾಲಯವು “ನಿಷ್ಕ್ರಿಯ ದಯಾಮರಣ” ದ ಸಾಧ್ಯತೆಯನ್ನು ಅನುಮತಿಸಿತು. ಅಂದರೆ ರೋಗಿಗೆ ಕೃತಕ ಜೀವ ಬೆಂಬಲವನ್ನು ತಡೆಹಿಡಿಯುವ ಅಥವಾ ಹಿಂತೆಗೆದುಕೊಳ್ಳಬಹುದು ಎಂದು ಹೇಳಿತು. ಆದರೆ ಇದಕ್ಕೆ ಆಪ್ತ ಕುಟುಂಬ ಸದಸ್ಯರು ಅಥವಾ ಆರೈಕೆದಾರರ ವಿನಂತಿ ಬಂದರೆ ಮತ್ತು ನ್ಯಾಯಾಲಯದಿಂದ ಅನುಮತಿ ಪಡೆದರೆ ಮಾತ್ರ ಜೀವ ಬೆಂಬಲವನ್ನು ಕಾನೂನುಬದ್ಧವಾಗಿ ಹಿಂಪಡೆಯಬಹುದು ಎಂದು ತೀರ್ಪು ಹೇಳಿತು.

ಇದನ್ನೂ ಓದಿ: Kolkata Doctor Murder Case: ಕೋಲ್ಕತಾ ವೈದ್ಯೆಯ ಅತ್ಯಾಚಾರ- ಕೊಲೆ ಎಸಗುವ ಮುನ್ನ 2 ವೇಶ್ಯಾಗೃಹಗಳಿಗೆ ಭೇಟಿ ನೀಡಿದ್ದ ಕಾಮುಕ!

ನ್ಯುಮೋನಿಯಾದಿಂದ ಬಳಲುತ್ತಿದ್ದ ಅರುಣಾ ಅವರು 2015ರ ಮೇ 18ರಂದು ನಿಧನರಾದರು.
ಆಕೆಯ ಮೇಲೆ ದಾಳಿ ಮಾಡಿದ್ದ ಸೋಹನ್‌ಲಾಲ್ ಭರ್ತಾ ವಾಲ್ಮೀಕಿಯನ್ನು ದರೋಡೆ ಮತ್ತು ಕೊಲೆಯ ಯತ್ನಕ್ಕಾಗಿ ಶಿಕ್ಷೆಗೆ ಒಳಪಡಿಸಲಾಯಿತು. ಕೇವಲ ಏಳು ವರ್ಷಗಳ ಶಿಕ್ಷೆಯನ್ನು ಅನುಭವಿಸಿದ ಆತ 1980ರಲ್ಲಿ ಬಿಡುಗಡೆಯಾಗಿದ್ದಾನೆ. ಎಂಥ ವಿಪರ್ಯಾಸ!

Continue Reading

ದೇಶ

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಿ- ನಾಲ್ವರು ಶಂಕರಾಚಾರ್ಯರಿಂದ ಕೇಂದ್ರ ಸರ್ಕಾರಕ್ಕೆ ಮನವಿ

Bangladesh Unrest: ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಿಕ್ಕಿ ಅಲ್ಲಿನ ಹಿಂದೂಗಳು ನಲುಗಿ ಹೋಗಿರುವ ಬಗ್ಗೆ ಭಾರತದಲ್ಲಿ ಭಾರೀ ಖಂಡನೆ ವ್ಯಕ್ತವಾಗಿತ್ತು. ಇದೀಗ ಹಿಂದೂಗಳ ಮೇಲಿನ ಹಿಂಸಾಚಾರವನ್ನು ನಾಲ್ವರು ಶಂಕರಾಚಾರ್ಯರು ಖಂಡನೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

bangaldesh Unrest
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ(Bangladesh Unrest) ಸಿಕ್ಕಿ ಅಲ್ಲಿನ ಹಿಂದೂಗಳು ನಲುಗಿ ಹೋಗಿರುವ ಬಗ್ಗೆ ಭಾರತದಲ್ಲಿ ಭಾರೀ ಖಂಡನೆ ವ್ಯಕ್ತವಾಗಿತ್ತು. ಇದೀಗ ಹಿಂದೂಗಳ ಮೇಲಿನ ಹಿಂಸಾಚಾರವನ್ನು ನಾಲ್ವರು ಶಂಕರಾಚಾರ್ಯರು(Shankaracharyas) ಖಂಡನೆ ವ್ಯಕ್ತಪಡಿಸಿದ್ದಾರೆ. ಪುರಿ ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿದರು.

ಶಾಂತಿ ಸ್ಥಾಪನೆಯಿಂದ ಎಲ್ಲವನ್ನೂ ಇತ್ಯರ್ಥಗೊಳಿಸಬಹುದು. ಹಿಂದೂಗಳು ಶಾಂತಿಪ್ರಿಯ ಜನರು ಮತ್ತು ಹಿಂದೂಗಳು ಸುರಕ್ಷಿತವಾಗಿದ್ದಾಗ ದೇಶವು ಸುರಕ್ಷಿತವಾಗಿರುತ್ತದೆ. ಬಾಂಗ್ಲಾದೇಶದಲ್ಲಿ ಇಂತಹ ಹಿಂಸಾಚಾರ ಚೀನಾದ ಪಿತೂರಿಯಾಗಿದೆ. ಚೀನಾದಲ್ಲಿ ಮಸೀದಿಗಳನ್ನು ಧ್ವಂಸ ಮಾಡಲಾಗುತ್ತಿದೆ ಮತ್ತು ಮುಸ್ಲಿಮರನ್ನು ದೇಶದಿಂದ ಹೊರಹಾಕಲಾಗುತ್ತಿದೆ. ಈಗ ಭಾರತವನ್ನು ಅಸ್ಥಿರಗೊಳಿಸಲು ಚೀನಾ ಬಾಂಗ್ಲಾದೇಶವನ್ನು ಬಳಸಿಕೊಳ್ಳುತ್ತಿದೆ. ಬಾಂಗ್ಲಾದೇಶವು ಇದನ್ನು ಅರ್ಥಮಾಡಿಕೊಳ್ಳಲು ವಿಫಲವಾದರೆ, ಮುಂದಿನ ದಿನಗಳಲ್ಲಿ ಅದರ ಅಸ್ತಿತ್ವವು ಕುಸಿಯುತ್ತದೆ, ”ಎಂದು ನಿಶ್ಚಲಾನಂದ ಸರಸ್ವತಿ ಹೇಳಿದರು.

ಏತನ್ಮಧ್ಯೆ, ದ್ವಾರಕಾ ಶಂಕರಾಚಾರ್ಯ ಸ್ವಾಮಿ ಸದಾನಂದ ಸರಸ್ವತಿ ಮಾತನಾಡಿ, ಭಾರತ ಮತ್ತು ಬಾಂಗ್ಲಾದೇಶ ಸರ್ಕಾರಗಳು ಭೇಟಿಯಾಗಿ ಹಿಂದೂಗಳ ಸಂಕಷ್ಟದ ಬಗ್ಗೆ ಚರ್ಚಿಸಬೇಕು. “ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ಪರಿಸ್ಥಿತಿ ಚೆನ್ನಾಗಿಲ್ಲ, ಕಳೆದ 50 ವರ್ಷಗಳಿಂದ ನಡೆಯುತ್ತಿರುವುದು ಸರಿಯಿಲ್ಲ [ಹಿಂದೂಗಳ ಶೋಷಣೆ]. ಅವರ ತಪ್ಪೇನು? ಅವರನ್ನು ಏಕೆ ಆರಿಸಿ ಕೊಲ್ಲಲಾಗುತ್ತಿದೆ? ಅವರ ದೇವಾಲಯಗಳನ್ನು ಏಕೆ ನಾಶಪಡಿಸಲಾಗುತ್ತಿದೆ? ಈ ಸಮಸ್ಯೆಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಬೇಕು, ಇಲ್ಲವಾದರೆ ಜಗತ್ತಿನಾದ್ಯಂತ ಹಿಂದೂಗಳು ಎಲ್ಲೆಲ್ಲಿ ನೆಲೆಸಿದ್ದರೂ ಅವರಿಗೆ ಸಹಾಯ ಮಾಡುವವರು ಯಾರೂ ಇರುವುದಿಲ್ಲ,’’ ಎಂದು ಹೇಳಿದರು.

ಬಾಂಗ್ಲಾದೇಶದಲ್ಲಿ ಇನ್ನೂ ಸುಮಾರು 1.25 ಕೋಟಿ ಜನರಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿದ್ದರೂ ಅವರು ಬಿಕ್ಕಟ್ಟುಗಳನ್ನು ಎದುರಿಸುತ್ತಿರುವಾಗ ಅದನ್ನು ಪರಿಗಣಿಸಬೇಕು ಮತ್ತು ಭಾರತದಲ್ಲಿನ ಮುಸ್ಲಿಮರು ಅಲ್ಲಿ ಹತ್ಯೆಯನ್ನು ಯಾರು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಯೋಚಿಸಬೇಕು” ಎಂದು ದ್ವಾರಕಾ ಶಂಕರಾಚಾರ್ಯ ಹೇಳಿದರು. ಮತ್ತೊಂದೆಡೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯ ನಂತರ, ಕಂಚಿ ಶಂಕರಾಚಾರ್ಯ ಶಂಕರ ವಿಜಯೇಂದ್ರ ಸರಸ್ವತಿ ಅವರು ಅಶಾಂತಿ ಪೀಡಿತ ದೇಶದಲ್ಲಿ ಶಾಂತಿ ಮತ್ತು ಸಹಜ ಸ್ಥಿತಿಯ ಮರುಸ್ಥಾಪನೆಗಾಗಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅವರು ಬಾಂಗ್ಲಾದೇಶದಲ್ಲಿ ಶಾಂತಿ, ಸುರಕ್ಷತೆ ಮತ್ತು ಸ್ಥಿರತೆಗೆ ಕರೆ ನೀಡಿದರು, ಗಮನಾರ್ಹವಾದ ಹಿಂದೂಗಳ ಜನಸಂಖ್ಯೆ ಮತ್ತು ಶಕ್ತಿ-ಪೀಠವಾದ ಢಾಕೇಶ್ವರಿ ಮಂದಿರ ಸೇರಿದಂತೆ ವಿವಿಧ ಐತಿಹಾಸಿಕ ಹಿಂದೂ ದೇವಾಲಯಗಳ ಅಸ್ತಿತ್ವ ಉಳಿಸಿಕೊಳ್ಳಲು ಒತ್ತು ನೀಡಿದರು.

ಏತನ್ಮಧ್ಯೆ, ಜ್ಯೋತಿರ್ಮಠ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳ ದಾಳಿಗೆ ಒಳಗಾಗಿರುವ ಹಿಂದೂಗಳನ್ನು ರಕ್ಷಿಸಲು ಭಾರತ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸಬೇಕು. ಭಾರತದಲ್ಲಿ ಸಾವಿರಾರು ಬಾಂಗ್ಲಾದೇಶಿಗಳು ವಾಸಿಸುತ್ತಿದ್ದಾರೆ ಎಂಬುದನ್ನು ಬಾಂಗ್ಲಾದೇಶ ಸರ್ಕಾರ ಮರೆಯಬಾರದು. ಅವರಿಗೆ ಭೂಮಿ ಮತ್ತು ಭದ್ರತೆಯನ್ನು ಒದಗಿಸುವಂತೆ ನಾವು ಸರ್ಕಾರವನ್ನು ಕೋರುತ್ತೇವೆ ಮತ್ತು ಅವರ ಆಹಾರ ಮತ್ತು ಇತರ ಅವಶ್ಯಕತೆಗಳನ್ನು ನಾವು ನೋಡಿಕೊಳ್ಳುತ್ತೇವೆ ಮತ್ತು ಬಿಡುವುದಿಲ್ಲ. ಸರಕಾರಕ್ಕೆ ಹೊರೆಯಾಗುತ್ತಿದೆ ಎಂದರು.

ಇದನ್ನೂ ಓದಿ: Bangladesh Unrest: ಪ್ರಧಾನಿ ಮೋದಿಗೆ ಬಾಂಗ್ಲಾದೇಶದ ಮೊಹಮ್ಮದ್‌ ಯೂನಸ್‌ ಕರೆ; ಹಿಂದೂಗಳ ರಕ್ಷಣೆ ಬಗ್ಗೆ ಭರವಸೆ

Continue Reading

ದೇಶ

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

Champai Soren: ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಚಂಪೈ, ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ” ಎಂದು ಹೇಳಿದ್ದಾರೆ.

VISTARANEWS.COM


on

Champai Soren
Koo

ನವದೆಹಲಿ: ಸ್ವಪಕ್ಷದ ಬಗ್ಗೆ ತೀವ್ರ ಬೇಸರಗೊಂಡು ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಬಲವಾಗಿ ಕೇಳುತ್ತಿರುವ ಬೆನ್ನಲ್ಲೇ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ, ಜಾರ್ಖಂಡ್‌ ಮುಕ್ತಿ ಮೋರ್ಚಾ (Jharkhand Mukti Morcha-JMM)ದ ಹಿರಿಯ ನಾಯಕ ಚಂಪೈ ಸೊರೆನ್ (Champai Soren) ಹೊಸ ಸ್ಥಾಪನೆ ಬಗ್ಗೆ ಘೋಷಿಸಿದ್ದಾರೆ. ಚಂಪೈ ಸೊರೆನ್ ಬುಧವಾರ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಚಂಪೈ, ನಾನು ನಿವೃತ್ತಿ ಹೊಂದುವುದಿಲ್ಲ; ನಾನು ಪಕ್ಷವನ್ನ ಬಲಪಡಿಸುತ್ತೇನೆ, ಹೊಸ ಪಕ್ಷವನ್ನ ಬಲಪಡಿಸುತ್ತೇನೆ ಮತ್ತು ದಾರಿಯಲ್ಲಿ ಉತ್ತಮ ಸ್ನೇಹಿತನನ್ನ ಭೇಟಿಯಾದರೆ, ಅವರೊಂದಿಗೆ ಮುಂದುವರಿಯುತ್ತೇನೆ ” ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಎಕ್ಸ್‌ನಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಮಾಡಿರುವ ಚಂಪೈ, ತಮ್ಮ ಮುಂದೆ ಮೂರು ಆಯ್ಕೆಗಳಿವೆ ಎಂದಿದ್ದಾರೆ.ಭಾರವಾದ ಹೃದಯದಿಂದ, ನಾನು ಅದೇ ಶಾಸಕಾಂಗ ಪಕ್ಷದ ಸಭೆಯಲ್ಲಿ “ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಪ್ರಾರಂಭವಾಗಲಿದೆ ಎಂದು ಹೇಳಿದ್ದೆ. ಇದರಲ್ಲಿ ನನಗೆ ಮೂರು ಆಯ್ಕೆಗಳಿವೆ, ಮೊದಲನೆಯದಾಗಿ, ರಾಜಕೀಯದಿಂದ ನಿವೃತ್ತಿ, ಎರಡನೆಯದು, ನನ್ನದೇ ಆದ ಪ್ರತ್ಯೇಕ ಸಂಘಟನೆಯನ್ನು ಸ್ಥಾಪನೆ ಮತ್ತು ಮೂರನೆಯದಾಗಿ, ನಾನು ಈ ಹಾದಿಯಲ್ಲಿ ಮತ್ತೊಬ್ಬ ಜೊತೆಗಾರನನ್ನು ಹುಡುಕಿಕೊಳ್ಳುವುದು(ಪರೋಕ್ಷವಾಗಿ ಬಿಜೆಪಿ ಸೇರ್ಪಡೆ) ಆ ದಿನದಿಂದ ಇಂದಿನವರೆಗೆ ಮತ್ತು ಮುಂಬರುವ ಜಾರ್ಖಂಡ್ ಅಸೆಂಬ್ಲಿ ಚುನಾವಣೆಯವರೆಗೆ, ಈ ಪ್ರಯಾಣದಲ್ಲಿ ನನಗೆ ಎಲ್ಲಾ ಆಯ್ಕೆಗಳು ಮುಕ್ತವಾಗಿವೆ ಎಂದು ಪೋಸ್ಟ್‌ ಮಾಡಿದ್ದರು.

ನಾನು ಒಳಗೊಳಗೇ ಒಡೆದು ಚೂರಾಗಿದ್ದೇನೆ. ಏನು ಮಾಡಬೇಕೆಂದು ನನಗೆ ಅರ್ಥವಾಗಲಿಲ್ಲ. ಎರಡು ದಿನಗಳ ಕಾಲ ನಾನು ಶಾಂತವಾಗಿ ಕುಳಿತು ಆತ್ಮಾವಲೋಕನ ಮಾಡಿಕೊಂಡೆ, ಇಡೀ ಘಟನೆಯಲ್ಲಿ ನನ್ನ ತಪ್ಪನ್ನು ಹುಡುಕುತ್ತಲೇ ಇದ್ದೆ. ನನಗೆ ಅಧಿಕಾರದ ದುರಾಸೆ ಸ್ವಲ್ಪವೂ ಇರಲಿಲ್ಲ, ಆದರೆ ನನ್ನ ಸ್ವಾಭಿಮಾನಕ್ಕೆ ಈ ಹೊಡೆತ ಬಿದ್ದಿದೆ. ನನ್ನ ಸ್ವಂತ ಜನರು ಉಂಟುಮಾಡಿದ ನೋವನ್ನು ನಾನು ಎಲ್ಲಿ ವ್ಯಕ್ತಪಡಿಸಬಹುದು?” ಎಂದು ಚಂಪೈ ಸೊರೆನ್ ಪೋಸ್ಟ್‌ನಲ್ಲಿ ತಿಳಿಸಿದ್ದರು.

ಇದನ್ನೂ ಓದಿ: Champai Soren: ಜಾರ್ಖಂಡ್‌ ರಾಜಕೀಯಲ್ಲಿ ಸಂಚಲನ; ಮಾಜಿ ಸಿಎಂ ಚಂಪೈ ಸೊರೆನ್ ಬಿಜೆಪಿ ಸೇರ್ಪಡೆ?

Continue Reading

ದೇಶ

PM Narendra Modi: ಅಧಿಕಾರದಿಂದ ಕೆಳಗಿಳಿಯುತ್ತಾರಾ ಪ್ರಧಾನಿ ಮೋದಿ? ಸಂಚಲನ ಮೂಡಿಸಿದ ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌

Narendra Modi: ಸೆ.17ರಂದು ತಮ್ಮ 74ನೇ ಹುಟ್ಟುಹಬ್ಬ ಆಚರಿಸುತ್ತಿರುವ ಮೋದಿ ಅಧಿಕಾರಾವಧಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್‌ ಸ್ವಾಮಿ, ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi) ಅಧಿಕಾರ ಕಳೆದುಕೊಳ್ಳುವ ಬಗ್ಗೆ ಮತ್ತೊಮ್ಮೆ ಚರ್ಚೆ ರಾಜಕೀಯ ವಲಯದಲ್ಲಿ ಭುಗಿಲೆದ್ದಿದೆ. ಆರ್‌ಎಸ್‌ಎಸ್‌(RSS) ನಿಯಮ ಪ್ರಕಾರ ಹಾಗೂ ಈ ಹಿಂದೆ ತಾವೇ ಘೋಷಿಸಿದ ಪ್ರಕಾರ 75ವರ್ಷ ವಯಸ್ಸಿನ ನಂತರ ಪ್ರಧಾನಿಯಾಗಿ ಮುಂದುವರೆಯುವಂತಿಲ್ಲ. ಹೀಗಾಗಿ ಸೆ.17ರಂದು ತಮ್ಮ 74ನೇ ಹುಟ್ಟುಹಬ್ಬ ಆಚರಿಸುತ್ತಿರುವ ಮೋದಿ ಅಧಿಕಾರಾವಧಿ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಇದಕ್ಕೆ ಪೂರಕ ಎಂಬಂತೆ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್‌ ಸ್ವಾಮಿ(Subramanian Swamy), ಆರ್‌ಎಸ್‌ಎಸ್‌ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಸುಬ್ರಮಣಿಯನ್‌ ಸ್ವಾಮಿ, ಮೋದಿಯವರು ಆರ್‌ಎಸ್‌ಎಸ್ ಪ್ರಚಾರಕನ ಸಂಸ್ಕಾರಕ್ಕೆ ಬದ್ಧರಾಗಿ ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಸೆಪ್ಟೆಂಬರ್ 17 ರಂದು ನಿವೃತ್ತಿ ಘೋಷಿಸಬೇಕು. ಇಲ್ಲವಾದರೆ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷದಲ್ಲಿ (ಬಿಜೆಪಿ) 75 ವರ್ಷ ತುಂಬಿದ ಯಾವುದೇ ನಾಯಕ ಮುಂದಿನ ಪೀಳಿಗೆಗೆ ದಾರಿ ಮಾಡಿಕೊಡಲು ಸಚಿವ ಸ್ಥಾನದಿಂದ ಕೆಳಗಿಳಿಯಬೇಕು ಎಂಬ ಅಲಿಖಿತ ನಿಯಮವಿದೆ. ಬಿಜೆಪಿಯ ಹಲವು ನಾಯಕರನ್ನು ಉನ್ನತ ಸ್ಥಾನಗಳಿಂದ ಕೆಳಗಿಳಿಸಿದ ನಂತರ ಈ ಹೇಳಿಕೆ ನೀಡಲಾಗಿದೆ. ಆದಾಗ್ಯೂ, ಈ ನಿಯಮಕ್ಕೆ ವಿನಾಯಿತಿಗಳಿವೆ. ಉದಾಹರಣೆಗೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. 75ರ ವಯೋಮಿತಿ ದಾಟಿದ ನಂತರವೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿಯೇ ಉಳಿದಿದ್ದರು.

ಆದರೆ, ಈ ವರ್ಷದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ರ್ಯಾಲಿಯಲ್ಲಿ ನರೇಂದ್ರ ಮೋದಿ ಅವರು 75 ನೇ ವರ್ಷಕ್ಕೆ ಕಾಲಿಟ್ಟ ನಂತರ ನಿವೃತ್ತಿ ಹೊಂದುತ್ತಾರೆ ಮತ್ತು ಅಮಿತ್ ಶಾ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು. ನಂತರ, ಗೃಹ ಸಚಿವ ಅಮಿತ್ ಶಾ ಅವರು, “ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಐ ಮೈತ್ರಿಕೂಟಕ್ಕೆ ನಾನು ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದನ್ನೂ ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಪ್ರಧಾನಿ ಮೋದಿ ಮುಂದುವರಿಯಲಿದ್ದಾರೆ. ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸಲು ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದಿದ್ದಾರೆ.

ಇದನ್ನೂ ಓದಿ: PM Narendra Modi : ಆಗಸ್ಟ್​ 23ರಂದು ಉಕ್ರೇನ್​ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ

Continue Reading
Advertisement
Kolkata Doctor Murder Case
ದೇಶ8 mins ago

Kolkata Doctor Murder Case: ಕೋಲ್ಕತ್ತಾ ವೈದ್ಯೆ ಅತ್ಯಾಚಾರ; ಮತ್ತೆ ನೆನಪಿಗೆ ಬಂದಳು ಕರ್ನಾಟಕ ಮೂಲದ ನರ್ಸ್ ಅರುಣಾ ಶಾನ್‌ಬಾಗ್

bangaldesh Unrest
ದೇಶ11 mins ago

Bangladesh Unrest: ಬಾಂಗ್ಲಾದಲ್ಲಿ ಹಿಂದೂಗಳನ್ನು ರಕ್ಷಿಸಿ- ನಾಲ್ವರು ಶಂಕರಾಚಾರ್ಯರಿಂದ ಕೇಂದ್ರ ಸರ್ಕಾರಕ್ಕೆ ಮನವಿ

Assault Case
ಕರ್ನಾಟಕ16 mins ago

Assault Case: ಫುಡ್ ಡೆಲಿವರಿ ಬಾಯ್‌ನ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಹಲ್ಲೆ; ಸಿಸಿಟಿವಿಯಲ್ಲಿ ಸೆರೆ

Viral Video
ವೈರಲ್ ನ್ಯೂಸ್20 mins ago

Viral Video: ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

Tofu
ಆಹಾರ/ಅಡುಗೆ23 mins ago

Homemade Tofu Recipe: ಸೋಯಾ ಹಾಲಿನ ತೋಫು ಮನೆಯಲ್ಲೇ ಮಾಡಿಕೊಳ್ಳುವುದು ಹೇಗೆ?

Robin Uthappa
ಕ್ರೀಡೆ40 mins ago

Robin Uthappa: ಮಾನಸಿಕ ಖಿನ್ನತೆಯ ಅನುಭವಗಳನ್ನು ಬಿಚ್ಚಿಟ್ಟ ಭಾರತ ತಂಡದ ಮಾಜಿ ಕ್ರಿಕೆಟಿಗ

Fashion News
ಫ್ಯಾಷನ್48 mins ago

Fashion News: ಉದ್ಯಾನನಗರಿಯಲ್ಲಿ ಮಿನುಗಿದ ಇಂಡಿಯನ್ ಗ್ಲಾಮರ್ ಸ್ಟ್ರೀಟ್ ಫ್ಯಾಷನ್ ಶೋ!

thawar chand gehlot car
ಪ್ರಮುಖ ಸುದ್ದಿ60 mins ago

Thawar Chand Gehlot: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು! ಥಟ್‌ ಅಂತ ಯಾಕೀ ಬದಲಾವಣೆ?

Champai Soren
ದೇಶ1 hour ago

Champai Soren: ಹೊಸ ಪಕ್ಷ ಸ್ಥಾಪನೆ ಬಗ್ಗೆ ಚಂಪೈ ಸೊರೆನ್ ಘೋಷಣೆ; ಜಾರ್ಖಂಡ್‌ ರಾಜಕೀಯದಲ್ಲಿ ಸಂಚಲನ

fraud Case chikkaballapura
ಕ್ರೈಂ1 hour ago

Fraud Case: ʼಗಟ್ಟಿಮೇಳ ನಿಲ್ಸಿʼ ಗಂಡನನ್ನು ತರಾಟೆಗೆ ತೆಗೆದುಕೊಂಡ ಮೊದಲ ಹೆಂಡತಿ, ಮದುವೆ ಮನೆಯಲ್ಲಿ ಗಲಾಟೆ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌