Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ - Vistara News

ದೇಶ

Physical Abuse: ದೇಶದಲ್ಲಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ; ಬೆಚ್ಚಿಬೀಳಿಸುವ ಅಂಕಿ-ಅಂಶ ಬಹಿರಂಗ

Physical Abuse: ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ. ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ.

VISTARANEWS.COM


on

Physical Abuse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೋಲ್ಕಾತ್ತಾದ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜತೆಗೆ ಮಹಿಳೆಯರ ಸುರಕ್ಷತೆ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿದೆ. ಈ ಮಧ್ಯೆ ಬೆಚ್ಚಿ ಬೀಳಿಸುವ ಅಂಶವೊಂದು ಬಹಿರಂಗಗೊಂಡಿದ್ದು, ದೇಶದಲ್ಲಿ ಸರಾಸರಿ ಪ್ರತಿ ಗಂಟೆಗೊಮ್ಮೆ 4 ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ (Physical Abuse) ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2017 ಮತ್ತು 2022ರ ಅಂಕಿ-ಅಂಶಗಳ ಪ್ರಕಾರ ಪ್ರತಿ ದಿನ ಸುಮಾರು 86 ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ಪರಿಚಿತರಿಂದಲೇ ದೌರ್ಜನ್ಯ ನಡೆದಿದೆ ಎನ್ನುವುದು ಮತ್ತುಷ್ಟು ಭಯ ಹುಟ್ಟು ಹಾಕಿದೆ.

ಪ್ರತಿ ಗಂಟೆಗೊಮ್ಮೆ ನಡೆಯುವ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಮೂರರಲ್ಲಿ ಪರಿಚಿತ ವ್ಯಕ್ತಿಯೇ ದೌರ್ಜನ್ಯ ಎಸಗಿರುವುದನ್ನು ಅಂಕಿ-ಅಂಶ ಬಹಿರಂಗಪಡಿಸಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (National Crime Records Bureau-NCRB)ದ ವಾರ್ಷಿಕ ವರದಿಯ ಪ್ರಕಾರ, 2017 ಮತ್ತು 2022ರ ನಡುವೆ ಭಾರತದಲ್ಲಿ ಒಟ್ಟು 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ಪರಿಚಿತ ವ್ಯಕ್ತಿಯೇ ಆಗಿದ್ದು, 9,670 ಪ್ರಕರಣಗಳಲ್ಲಿ ಸಂತ್ರಸ್ತೆಗೆ ಅತ್ಯಾಚಾರಿಯ ಬಗ್ಗೆ ಮಾಹಿತಿ ಇರಲಿಲ್ಲ.

ಸಂತ್ರಸ್ತರ ಪೈಕಿ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಂದರೆ 1.89 ಲಕ್ಷ ಸಂತ್ರಸ್ತೆಯರ ಪೈಕಿ ಈ ವಯೋಮಾನದವರ ಸಂಖ್ಯೆ 1.13 ಲಕ್ಷ. ಇನ್ನು ಪ್ರತಿದಿನ ದಾಖಲಾಗಿ 86 ಪ್ರಕರಣಗಳಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು.

ಉದ್ಯೋಗ ಸ್ಥಳದಲ್ಲಿ ಪರಿಸ್ಥಿತಿ ಹೇಗಿದೆ?

ಭಾರತದಾದ್ಯಂತ ವರದಿಯಾದ ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಈ ಅಂಕಿ-ಅಂಶಗಳೂ ಗಾಬರಿ ತರಿಸುತ್ತವೆ. ಪ್ರತಿದಿನ ಸರಾಸರಿ ಓರ್ವ ಮಹಿಳೆ ಉದ್ಯೋಗದ ಸ್ಥಳ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತ್ತಾರೆ ಎನ್‌ಸಿಆರ್‌ಬಿ ತಿಳಿಸಿದೆ. ಎನ್‌ಸಿಆರ್‌ಬಿ 2014ರಿಂದ ಕಚೇರಿಗಳಲ್ಲಿ ನಡೆಯುತ್ತಿರುವ ಮಹಿಳೆಯರ ವಿರುದ್ಧದ ದೌರ್ಜನ್ಯ ಪ್ರಕರಣಗಳ ಮಾಹಿತಿ ಕಲೆ ಹಾಕುತ್ತಿದೆ.

ಆರಂಭದ ವರ್ಷಗಳಲ್ಲಿ (2014, 2015) ಎರಡು ವಿಭಾಗಗಳ ಮೂಲಕ ಈ ಅಂಕಿ ಅಂಶವನ್ನು ಕಲೆ ಹಾಕಲಾಗುತ್ತಿತ್ತು. ಕಚೇರಿಗಳಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎನ್ನುವ ಎರಡು ವಿಭಾಗಗಳನ್ನು ಮಾಡಿ ಮಾಹಿತಿ ಸಂಗ್ರಹಿಸಲಾಗುತ್ತಿತ್ತು. ಬಳಿಕ ಇವೆರಡನ್ನು ಸಂಯೋಜಿಸಿ ʼಉದ್ಯೋಗದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯʼ ಒಂಬ ಒಂದೇ ವಿಭಾಗದಲ್ಲಿ ಮಾಹಿರಿ ಸಂಗ್ರಹಿಸಿಡಲಾಗುತ್ತಿದೆ.

2014-2022ರ ಮಧ್ಯೆ ಉದ್ಯೋಗದ ಸ್ಥಳಗಳಲ್ಲಿ ಕನಿಷ್ಠ 4,231 ಲೈಂಗಿಕ ದೌರ್ಜನ್ಯ ಪ್ರಕರಗಳು ವರದಿಯಾಗಿವೆ. ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆ ಕಡಿಮೆ ದಾಖಲಾದರೆ ಕೆಲಸಕ್ಕೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿದೆ. 2017ರ ನಂತರ ಪ್ರತಿ ವರ್ಷ 400ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.

2014, 2015 ಮತ್ತು 2016ರಲ್ಲಿ ಎನ್‌ಸಿಆರ್‌ಬಿ ಮೇಲಾಧಿಕಾರಿಗಳು ಮತ್ತು ಸಹೋದ್ಯೋಗಿಗಳಿಂದ ನಡೆದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಮೂರು ವರ್ಷಗಳಲ್ಲಿ ಇಂತಹ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ನಂತರ ಈ ವರದಿಯಲ್ಲಿ ಮೇಲಾಧಿಕಾರಿಗಳು, ಸಹೋದ್ಯೋಗಿಗಳ ಜತೆಗೆ ಕುಟುಂಬ ಸದಸ್ಯರು ಮತ್ತು ಸ್ನೇಹಿತರನ್ನು ಸೇರಿಸಲಾಯಿತು.

ಕಾನೂನು ಏನು ಹೇಳುತ್ತದೆ?

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ ಕಾಯ್ದೆ 2013ರ ಪ್ರಕಾರ 10ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಎಲ್ಲ ಕಚೇರಿ / ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು ಆಂತರಿಕ ಸಮಿತಿಗಳನ್ನು (Internal Committees) ರಚಿಸುವುದನ್ನು ಕಡ್ಡಾಯ. ಸಂತ್ರಸ್ತ ಮಹಿಳೆ ಅಥವಾ ಆಕೆಯ ಪರವಾಗಿ ಆಪ್ತರು ಲೈಂಗಿಕ ಕಿರುಕುಳದ ಲಿಖಿತ ದೂರು ಸಲ್ಲಿಸಬಹುದು.

ಇದನ್ನೂ ಓದಿ: Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ (sexual abuse) ಮತ್ತು ಹತ್ಯೆಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ ಸುದ್ದಿಯೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಿಡುಗಡೆ ಮಾಡಿದೆ. ಅದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

sexual abuse
Koo

ಹೆಣ್ಣು ಮಕ್ಕಳು, ಇವರ ಪೋಷಕರು ಆತಂಕ ಪಡುವ (sexual abuse) ಸುದ್ದಿಯೊಂದಿದೆ. ದೇಶದಲ್ಲಿ ಪ್ರತಿ ಗಂಟೆಗೆ ನಾಲ್ಕು ಅತ್ಯಾಚಾರ (Rape Case) ಪ್ರಕರಣಗಳು ನಡೆಯುತ್ತಿದ್ದು, ಶೇ. 95 ಪ್ರಕರಣಗಳಲ್ಲಿ ತಿಳಿದಿರುವ ವ್ಯಕ್ತಿಗಳಿಂದಲೇ (Known person) ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವುದು ಆತಂಕದ ಸಂಗತಿಯಾಗಿದೆ. ಅದರಲ್ಲೂ 18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಪ್ರಕರಣಗಳಲ್ಲಿ ಬಲಿಪಶುಗಳಾಗಿದ್ದಾರೆ. 2017ರಿಂದ 2022ರ ನಡುವೆ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಇದರಲ್ಲಿ 82 ಪ್ರಕರಣಗಳಲ್ಲಿ ಸಂತ್ರಸ್ತ ಮಹಿಳೆಗೆ ಗೊತ್ತಿರುವವರಿಂದಲೇ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಗಂಟೆಗೆ ನಾಲ್ಕು ಪ್ರಕರಣ

ದೇಶದಲ್ಲಿ ಪ್ರತಿ ಗಂಟೆಗೆ ಸುಮಾರು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿದ್ದು, ಇವುಗಳಲ್ಲಿ ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸಂತ್ರಸ್ತೆಯು ಅತ್ಯಾಚಾರ ನಡೆಸಿದವರನ್ನು ಬಲ್ಲವಳಾಗಿದ್ದಳು ಎಂದು ದಾಖಲೆಗಳು ಹೇಳಿವೆ.

ವಾರ್ಷಿಕ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ 2017ರಿಂದ 2022ರ ನಡುವೆ ಭಾರತದಲ್ಲಿ ಒಟ್ಟು 1.91 ಲಕ್ಷ ಅತ್ಯಾಚಾರ ಪ್ರಕರಣಗಳು ನಡೆದಿದೆ ಎನ್ನಲಾಗಿದ್ದು, 1.89 ಲಕ್ಷ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಕನಿಷ್ಠ 1.79 ಲಕ್ಷ ಪ್ರಕರಣಗಳಲ್ಲಿ ಅತ್ಯಾಚಾರಿ ತಿಳಿದಿರುವ ವ್ಯಕ್ತಿಯಾಗಿದ್ದು, 9,670 ಪ್ರಕರಣಗಳಲ್ಲಿ ಅಷ್ಟೇ ಬಲಿಪಶುವಿಗೆ ತಿಳಿದಿಲ್ಲ.

18ರಿಂದ 30 ವರ್ಷದೊಳಗಿನವರೇ ಹೆಚ್ಚಿನ ಬಲಿಪಶುಗಳು

1.89 ಲಕ್ಷ ಪ್ರಕರಣಗಳಲ್ಲಿ 1.13 ಲಕ್ಷ ಅತ್ಯಾಚಾರ ಸಂತ್ರಸ್ತರು 18ರಿಂದ 30 ವರ್ಷ ವಯಸ್ಸಿನವರಾಗಿದ್ದಾರೆ. ಹೀಗಾಗಿ ಪ್ರತಿದಿನ ದಾಖಲಾಗುವ 86 ಅತ್ಯಾಚಾರ ಪ್ರಕರಣದಲ್ಲಿ 52 ಮಂದಿ 18ರಿಂದ 30 ವರ್ಷದೊಳಗಿನವರು. ಉಳಿದ ಪ್ರಕರಣಗಳು ದಿನಕ್ಕೆ 35 ಆಗಿದ್ದು, ಇತರ ವಯಸ್ಸಿನವರು ಎನ್ನಲಾಗಿದೆ.

ಕೆಲಸದ ಸ್ಥಳ ಸುರಕ್ಷಿತವೇ?

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳು ಬಹಳ ಕಡಿಮೆಯಾದರೂ ಸರಾಸರಿಯಾಗಿ ಪ್ರತಿದಿನ ಕನಿಷ್ಠ ಒಬ್ಬ ಮಹಿಳೆ ಕೆಲಸದಲ್ಲಿ ಅಥವಾ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತಿದ್ದರೆ ಎನ್ನುವುದನ್ನು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿ ಅಂಶ ತಿಳಿಸಿದೆ. 2014ರಿಂದ ಎನ್‌ಸಿಆರ್‌ಬಿ ಕಚೇರಿಯು ಐಪಿಸಿಯ ಸೆಕ್ಷನ್ 509 ಅವಮಾನದ ವರ್ಗದ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಕುರಿತು ಡೇಟಾವನ್ನು ಸಂಗ್ರಹಿಸಲು ಪ್ರಾರಂಭಿಸಿತು.

ಆರಂಭಿಕ ವರ್ಷಗಳಲ್ಲಿ ಅಂದರೆ 2014 ಮತ್ತು 2015ರಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳ ಮತ್ತು ಇನ್ನೊಂದು ಕೆಲಸಕ್ಕೆ ಸಂಬಂಧಿಸಿದ ಸ್ಥಳಗಳು ಎಂಬ ಎರಡು ವಿಭಿನ್ನ ವಿಭಾಗಗಳನ್ನು ಹೊಂದಿದ್ದವು. ಆದರೆ 2016 ರ ಅನಂತರ ಈ ವರ್ಗಗಳನ್ನು ಲೈಂಗಿಕ ಕಿರುಕುಳ ‘ಕೆಲಸ ಅಥವಾ ಕಚೇರಿ ಆವರಣದಲ್ಲಿ’ ಎಂಬುದಾಗಿ ವಿಲೀನಗೊಳಿಸಲಾಗಿದೆ.

2014 ಮತ್ತು 2022ರ ನಡುವೆ ಕೆಲಸ ಅಥವಾ ಕಚೇರಿ ಆವರಣದಲ್ಲಿ ಕನಿಷ್ಠ 4,231 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ. ಆರಂಭದಲ್ಲಿ ಕಚೇರಿ ಆವರಣದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಸಂಖ್ಯೆಯು ಕಡಿಮೆಯಿತ್ತು. ಆದರೆ 2017 ರ ಅನಂತರ ಪ್ರತಿ ವರ್ಷ 400 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತವೆ.

2014, 2015 ಮತ್ತು 2016 ರಲ್ಲಿ ಎನ್‌ಸಿಆರ್‌ಬಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ ಅತ್ಯಾಚಾರಗಳ ಸಂಖ್ಯೆಯನ್ನು ಬಹಿರಂಗಪಡಿಸಿದೆ. ಆರಂಭದ ಮೂರು ವರ್ಷಗಳಲ್ಲಿ ಉದ್ಯೋಗದಾತರು ಅಥವಾ ಸಹೋದ್ಯೋಗಿಗಳಿಂದ 1,795 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಸುಮಾರು ಎರಡು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ ಕಾಯಿದೆಯ ಅಡಿಯಲ್ಲಿ 2013ರಿಂದ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ದೂರುಗಳನ್ನು ಸ್ವೀಕರಿಸಲು 10ಕ್ಕಿಂತ ಹೆಚ್ಚು ಕೆಲಸಗಾರರನ್ನು ಹೊಂದಿರುವ ಎಲ್ಲಾ ಕೆಲಸದ ಸ್ಥಳಗಳಲ್ಲಿ ಆಂತರಿಕ ಸಮಿತಿಗಳನ್ನು ರಚಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನೊಂದ ಮಹಿಳೆ ಅಥವಾ ಆಕೆಯ ಪರವಾಗಿ ಅಧಿಕಾರ ಹೊಂದಿರುವ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳದ ಲಿಖಿತ ದೂರನ್ನು ಸಲ್ಲಿಸಬಹುದು.

Continue Reading

ವೈರಲ್ ನ್ಯೂಸ್

Bridge Collapse: 9 ವರ್ಷಗಳಿಂದ ನಿರ್ಮಾಣವಾಗುತ್ತಿರುವ ಸೇತುವೆ 3ನೇ ಬಾರಿ ಕುಸಿದು ಬಿತ್ತು; ವಿಡಿಯೊ ನೋಡಿ

Bridge Collapse: ಬಿಹಾರದಲ್ಲಿ ಸೇತುವೆ ಕುಸಿತದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ ಸೇತುವೆ ಕುಸಿತ (Bridge Collapse)ದ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದೆ. ಕಳೆದ 9 ವರ್ಷಗಳಿಂದ ನಿರ್ಮಾಣವಾಗುತ್ತಲೇ ಇರುವ ಸೇತುವೆಯೊಂದು 3ನೇ ಬಾರಿ ಕುಸಿದು ಬಿದ್ದಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ (Viral Video).

ಬಿಹಾರದ ಭಾಗಲ್ಪುರದ ಸುಲ್ತಂಗಂಜ್‌-ಅಗುವಾನಿ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಶನಿವಾರ (ಆಗಸ್ಟ್‌ 17) ಬೆಳಿಗ್ಗೆ ಕುಸಿದು ಗಂಗಾ ನದಿ ಪಾಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಗಾಯಗಳಾಗಿಲ್ಲ. ಗಮನಾರ್ಹ ಅಂಶ ಎಂದರೆ ಈ ಸೇತುವೆಯನ್ನೂ ಕಳೆದ 9 ವರ್ಷಗಳಿಂದ ನಿರ್ಮಿಸಲಾಗುತ್ತಿದ್ದು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಈ ಸೇತುವೆಯ ಕೆಲವೊಂದು ಭಾಗಗಳು ಈ ಹಿಂದೆ ಎರಡು ಬಾರಿ ಕುಸಿದು ಬಿದ್ದಿದ್ದವು.

ನಿರ್ಮಾಣ ಹಂತದ ಸೇತುವೆಯ 9 ಮತ್ತು 10ನೇ ಕಂಬಗಳ ನಡುವಿನ ಭಾಗ ಕುಸಿದು ಬಿದ್ದಿದೆ. ಖಗರಿಯಾ ಮತ್ತು ಭಾಗಲ್ಪುರ ಜಿಲ್ಲೆಗಳನ್ನು ಸಂಪರ್ಕಿಸಲು ಸೇತುವೆ ನಿರ್ಮಿಸಲಾಗುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಕನಸಿನ ಪ್ರಾಜೆಕ್ಟ್‌ ಇದಾಗಿದ್ದು, ಈ ಪ್ರದೇಶದ ನಿರ್ಣಾಯಕ ಕೊಂಡಿಯಾದ ವಿಕ್ರಮಶಿಲಾ ಸೇತುವೆ ಮೇಲಿನ ಸಂಚಾರ ದಟ್ಟಣೆಯನ್ನು ನಿವಾರಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಎಸ್‌.ಪಿ.ಸಿಂಗ್ಲಾ ಕಂಪೆನಿ ಈ ಸೇತುವೆ ಕಾಮಗಾರಿ ಕೈಗೆತ್ತಿಕೊಂಡಿದ್ದು, ಸದ್ಯ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸೇತುವೆ ಕುಸಿತದ ಇತಿಹಾಸ

ಈ ಹಿಂದೆ ಇದೇ ಸೇತುವೆ 2022ರ ಏಪ್ರಿಲ್‌ 27ರಂದು ಮೊದಲ ಬಾರಿ ಕುಸಿದು ಬಿದ್ದಿತ್ತು. ಅದಾಗಿ ಸುಮಾರು ಒಂದು ವರ್ಷದ ಬಳಿಕ ಅಂದರೆ 2023ರ ಜೂನ್‌ 4ರಂದು ಎರಡನೇ ಬಾರಿ ಸೇತುವೆ ಕುಸಿದಿತ್ತು. ಈ ವೇಳೆ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ನೀರು ಪಾಲಾಗಿದ್ದರು.

2014ರ ಫೆಬ್ರವರಿ 23ರಂದು 3.16 ಕಿ.ಮೀ ಉದ್ದದ ಈ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಮಗಾರಿಯನ್ನು 2015ರ ಮಾರ್ಚ್ 9ರಂದು ಆರಂಭಿಸಲಾಗಿತ್ತು. ಬಿಹಾರ ಸರ್ಕಾರವು ಈ ಯೋಜನೆಗೆ 1,710 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಇದೂ ಒಂದು. ಅದಾಗ್ಯೂ ನಿರ್ಮಾಣ ಆರಂಭವಾಗಿ ಸುಮಾರು 9 ವರ್ಷಗಳ ನಂತರವೂ ಸೇತುವೆ ಅಪೂರ್ಣವಾಗಿ ಉಳಿದಿದೆ.

17 ದಿನದಲ್ಲಿ 10 ಸೇತುವೆ ಕುಸಿತ

ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ಸೇತುವೆಗಳು ಕುಸಿದು ಬೀಳುತ್ತಿದ್ದು, ದೇಶಾದ್ಯಂತ ಚರ್ಚೆ ಹುಟ್ಟು ಹಾಕಿದೆ. ಕಳೆದ ತಿಂಗಳು 17 ದಿನಗಳಲ್ಲಿ 10 ಸೇತುವೆಗಳು ಕುಸಿದು ಬಿದ್ದಿದ್ದವು. ಸಣ್ಣ ಮಳೆಯಾದರೂ ಸೇತುವೆಗಳು ಕುಸಿಯುವುದು, ನಿರ್ಮಾಣ ಹಂತದಲ್ಲಿರುವಾಗಲೇ ಸೇತುವೆಗಳು ಧರೆಗುರುಳುವ ಪ್ರಕರಣಗಳು ಜಾಸ್ತಿಯಾಗಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಂತೂ ಜನ ಬಿಹಾರ ಸರ್ಕಾರದ (Bihar Government) ವಿರುದ್ಧ ಮುಗಿಬಿದ್ದಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದರು. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂದು ಟೀಕಿಸಿದ್ದರು.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Continue Reading

ಸ್ಯಾಂಡಲ್ ವುಡ್

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

70th National Film Awards: ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

VISTARANEWS.COM


on

70th National Film Awards ational Award winner Madhyantara Short Movie
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (70th National Film Awards) ಘೋಷಣೆಯಾಗಿವೆ. ಫೀಚರ್‌ ಫಿಲ್ಮ್ಸ್‌ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಗಳ ಪೈಕಿ ‘ಅತ್ಯುತ್ತಮ ಕನ್ನಡ ಸಿನಿಮಾ’ ಪ್ರಶಸ್ತಿ ‘ಕೆಜಿಎಫ್‌ ಚಾಪ್ಟರ್ 2’ ಪಾಲಾಗಿದೆ. ‘ಕೆಜಿಎಫ್ ಚಾಪ್ಟರ್‌ 2’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದವರು ನಿರ್ದೇಶಕ ಪ್ರಶಾಂತ್ ನೀಲ್‌. ಚಿತ್ರವನ್ನ ನಿರ್ಮಿಸಿದವರು ಹೊಂಬಾಳೆ ಫಿಲ್ಮ್ಸ್. ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

ಮಧ್ಯಂತರ ಕಿರು ಚಿತ್ರ

ಇದು ಸಿನಿಮಾ ಪ್ರೇಮಿಗಳಿಬ್ಬರ ಕಥೆ. ಬಂಟ್ವಾಳದ ದಿನೇಶ್ ಅವರು ಸ್ವತಃ ಸಿನಿಮಾ ಪ್ರಿಯರು. 27 ವರ್ಷಗಳಿಂದಲೂ ಅವರು ಮನೊರಂಜನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.2022ರ ಮಾರ್ಚ್ ತಿಂಗಳಲ್ಲಿ ‘ಮಧ್ಯಂತರ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದರು ದಿನೇಶ್ ಶೆಣೈ.ಸಿನಿಮಾದ ನಿರೂಪಣೆ ತಮಾಷೆಯ ಧಾಟಿಯಲ್ಲಿದ್ದರೂ ಗಂಭೀರವಾದ ವಸ್ತು ವಿಷಯ ಒಳಗೊಂಡಿದೆ. ಮುಖ್ಯ ಪಾತ್ರದಲ್ಲಿ ದಾವಣಗೆರೆಯ ವೀರೇಶ್ ಹಾಗೂ ರಂಗಭೂಮಿ ಹಿನ್ನೆಲೆಯ ಅಜಯ್ ನೀನಾಸಂ ನಟಿಸಿದ್ದಾರೆ.

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆಇದನ್ನೂ ಓದಿ:

ಹೋಟೆಲ್ ಸಪ್ಲೈಯರ್​ಗಳಾಗಿ ಕೆಲಸ ಮಾಡುವ ಇಬ್ಬರಿಗೆ ಸಿನಿಮಾ ಅಂದರೆ ಪಂಚ ಪ್ರಾಣ. ಡಾ ರಾಜ್​ಕುಮಾರ್ ಇವರ ಬಲು ಮೆಚ್ಚಿನ ನಟ. ಸಿನಿಮಾ ನೋಡಿ ಬಂದು ಅದನ್ನು ಗೆಳೆಯರ ಬಳಿ ಹೇಳುವುದು ಇವರ ಮೆಚ್ಚಿನ ಅಭ್ಯಾಸ. ಇದೇ ಪ್ರತಿಭೆಯಿಂದ ಇವರು ಸಿನಿಮಾ ನಿರ್ಮಾಣಕ್ಕೂ ಇಳಿಯುತ್ತಾರೆ. ನಿರ್ಮಾಪಕನಿಗೆ ಇವರು ಹೇಳಿದ ಕತೆಯೊಂದು ಒಪ್ಪಿಗೆ ಆಗಿಬಿಡುತ್ತದೆ. ಮುಂದೇನು? ಎಂದು ತಿಳಿಯಲು ಕಿರು ಚಿತ್ರ ನೋಡಬೇಕು.

16 ಎಂಎಂ ಕ್ಯಾಮೆರಾ ನಲ್ಲಿ ಕೊಡಾಕ್ ರೀಲ್ಸ್​ ಬಳಸಿ ಚಿತ್ರೀಕರಣ ಮಾಡಲಾಗಿದೆ. ಬಳಿಕ ಡಿಜಿಟಲ್‌ ಅಲ್ಲಿ ಕನ್ವರ್ಟ್‌ ಮಾಡಲಾಗಿದೆ. 11 ದಿನದಲ್ಲಿ ಸಿನಿಮಾದ ಚಿತ್ರೀಕರಣವನ್ನು ದಿನೇಶ್ ಪೂರ್ತಿ ಮಾಡಿದ್ದಾರೆ.

ಉಳಿದ ಪ್ರಶಸ್ತಿಗಳು

ಅತ್ಯುತ್ತಮ ಆಕ್ಷನ್ ಡೈರೆಕ್ಷನ್ ಪ್ರಶಸ್ತಿ ಅರ್ಥಾತ್ ಬೆಸ್ಟ್ ಸ್ಟಂಟ್ ಕೊರಿಯೋಗ್ರಫಿ ಅವಾರ್ಡ್‌ ಸಹ ‘ಕೆಜಿಎಫ್‌ ಚಾಪ್ಟರ್ 2’ ಸಿನಿಮಾದ ಪಾಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರಕ್ಕೆ Anbariv ಸ್ಟಂಟ್ಸ್‌ ಕೊರಿಯೋಗ್ರಫಿ ಮಾಡಿದ್ದರು. ಇದೀಗ Anbariv ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.ಇನ್ನೂ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿ ಅವರಿಗೆ ಒಲಿದು ಬಂದಿದೆ. ‘ಕಾಂತಾರ’ ಚಿತ್ರದಲ್ಲಿನ ಆಕ್ಟಿಂಗ್‌ಗಾಗಿ ರಿಷಬ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ‘ಭರಪೂರ ಮನರಂಜನೆ ನೀಡುವ ಅತ್ಯುತ್ತಮ ಜನಪ್ರಿಯ ಚಿತ್ರ’ ಪ್ರಶಸ್ತಿ ಸಿಕ್ಕಿದೆ.

ನಾನ್ ಫೀಚರ್‌ ಫಿಲ್ಮ್ಸ್ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು 3 ಪ್ರಶಸ್ತಿಗಳು ಲಭಿಸಿವೆ. ‘ಅತ್ಯುತ್ತಮ ಸಂಕಲನ’ ಪ್ರಶಸ್ತಿಗೆ ‘ಮಧ್ಯಂತರ’ ಚಿತ್ರಕ್ಕಾಗಿ ಸಂಕಲನಕಾರ (ಎಡಿಟರ್) ಸುರೇಶ್ ಅರಸ್‌ ಭಾಜನರಾಗಿದ್ದಾರೆ.ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ‘ರಂಗ ವೈಭೋಗ’ ಚಿತ್ರದ ಪಾಲಾಗಿದೆ. ಈ ಚಿತ್ರವನ್ನ ಸುನೀಲ್ ಪುರಾಣಿಕ್ ನಿರ್ಮಿಸಿ, ನಿರ್ದೇಶಿಸಿದ್ದಾರೆ.

Continue Reading

ದೇಶ

Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case) ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಸಂತ್ರಸ್ತೆಯ ದೇಹದಲ್ಲಿ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೃತ ವೈದ್ಯೆಯ ಶರೀರದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾಗಿದೆ ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಮರಣೋತ್ತರ ವರದಿಯು ಉಲ್ಲೇಖಿಸಲಾದ 150 ಗ್ರಾಂ ಸಂತ್ರಸ್ತೆಯ ಆಂತರಿಕ ಅವಯವ ವಿಶೇಷವಾಗಿ ಗರ್ಭಾಶಯದ ತೂಕವನ್ನು ಸೂಚಿಸುತ್ತದೆಯೇ ಹೊರತು ಅದು ಯಾವುದೇ ದ್ರವದ ತೂಕವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಸ್ಪಷ್ಟನೆಯಲ್ಲಿ ಏನಿದೆ?

ʼʼಇಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಒಳ ಅಂಗಗಳ ತೂಕವನ್ನು ಉಲ್ಲೇಖಿಸಲಾಗುತ್ತದೆ. ಹೀಗಾಗಿ 150 ಗ್ರಾಂ ಎನ್ನುವುದು ಗರ್ಭಾಶಯದ ಅಳತೆಯಾಗಿದೆ. ಅಲ್ಲದೆ ಘಟನೆ ನಡೆದ ಸುಮಾರು 5 ಗಂಟೆಗಳ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿದ್ದರು. ಹೀಗಾಗಿ ಅಷ್ಟು ದೀರ್ಘ ಸಮಯಗಳ ಕಾಲ ಯಾವುದೇ ದ್ರವ ವಸ್ತು ಅದೇ ಸ್ಥಿತಿಯಲ್ಲಿ ಉಳಿಯಲು ಸಾಧ್ಯವಿಲ್ಲʼʼ ಎಂದು ವೈದ್ಯರು ತಿಳಿಸಿದ್ದಾರೆ. “ಡಿಎನ್ಎ ಪರೀಕ್ಷೆಯ ವರದಿ ಹೊರ ಬಂದ ಬಳಿಕ ಎಲ್ಲ ಗೊಂದಲಗಳಿಗೆ ಉತ್ತರ ಸಿಗಲಿದೆʼʼ ಎಂದು ಅವರು ವಿವರಿಸಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಆಗಸ್ಟ್‌ 9 ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 31 ವರ್ಷದ ವೈದ್ಯೆಯ ದೇಹದಲ್ಲಿ ಅತೀ ಕ್ರೂರವಾಗಿ ಹಲ್ಲೆ ನಡೆಸಿದ್ದನ್ನು ಸೂಚಿಸುವ ಅನೇಕ ಗಾಯದ ಗುರುತುಗಳಿವೆ ಎನ್ನುವುದನ್ನು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿತ್ತು. ʼʼಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಿವೆʼʼ ಎಂದು ವರದಿ ತಿಳಿಸಿತ್ತು.

Continue Reading
Advertisement
CM Siddaramaiah Ashok
ಪ್ರಮುಖ ಸುದ್ದಿ11 mins ago

CM Siddaramaiah: ರಾಜ್ಯಪಾಲರ ಆದೇಶ ಬಿಜೆಪಿ ಪಾದಯಾತ್ರೆಗೆ ದೊರೆತ ಯಶಸ್ಸು, ಮುಡಾ ತನಿಖೆ ಸಿಬಿಐಗೆ ಕೊಡಲಿ: ಆರ್‌. ಅಶೋಕ್

sexual abuse
ಕ್ರೈಂ16 mins ago

sexual abuse: ಪ್ರತಿ ಗಂಟೆಗೆ ನಡೆಯುವ 4 ಅತ್ಯಾಚಾರದಲ್ಲಿ 3 ಪ್ರಕರಣಗಳ ಆರೋಪಿಗಳು ಪರಿಚಿತರೇ! ಆಘಾತಕಾರಿ ಅಂಕಿಅಂಶ

Bajrang Punia
ಕ್ರೀಡೆ34 mins ago

Bajrang Punia: ತ್ರಿವರ್ಣ ಧ್ವಜದ ಪೋಸ್ಟರ್​ ಮೇಲೆ ಕಾಲಿಟ್ಟ ಬಜರಂಗ್ ಪೂನಿಯಾ; ವಿಡಿಯೊ ವೈರಲ್

DK Shivakumar and CM Siddaramaiah
ಪ್ರಮುಖ ಸುದ್ದಿ34 mins ago

CM Siddaramaiah: ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೀತಾರಾ? ಡಿಕೆ ಶಿವಕುಮಾರ್ ಏನಂದ್ರು?

cm siddaramaiah 1
ಪ್ರಮುಖ ಸುದ್ದಿ38 mins ago

CM Siddaramaiah: ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ನಾನು ಸದಾ ಸಿದ್ಧ: ಸಿಎಂ ಸಿದ್ದರಾಮಯ್ಯ

Bengaluru Power Cut
ಬೆಂಗಳೂರು42 mins ago

Bengaluru Power Cut: ಗಮನಿಸಿ… ಬೆಂಗಳೂರಿನ ಈ ಪ್ರದೇಶಗಳಲ್ಲಿ ಆ.18ರಂದು ಕರೆಂಟ್‌ ಇರಲ್ಲ

Viral Video
Latest44 mins ago

Viral Video: 12 ವರ್ಷದ ಬಾಲಕಿಯನ್ನು ಬಲವಂತವಾಗಿ ಮದುವೆಯಾದ 62ರ ಮುದುಕ! ಹೃದಯ ಕರಗಿಸುತ್ತದೆ ಈ ವಿಡಿಯೊ

Amrutha Prem gave sweet news on Varamahalakshmi festival!
ಸ್ಯಾಂಡಲ್ ವುಡ್51 mins ago

Amrutha Prem: ವರಮಹಾಲಕ್ಷ್ಮೀ ಹಬ್ಬದಂದೇ ಸಿಹಿ ಸುದ್ದಿ ಕೊಟ್ಟ ಅಮೃತಾ ಪ್ರೇಮ್!

BMRCL Recruitment 2024
ಉದ್ಯೋಗ59 mins ago

BMRCL Recruitment 2024: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Pakistan Cricket
ಕ್ರೀಡೆ1 hour ago

Pakistan Cricket: ಬಾಡಿಗೆ ಫ್ಲಡ್‌ಲೈಟ್‌ ಅಳವಡಿಸಿ ಚಾಂಪಿಯನ್‌ ಟ್ರೋಫಿ ನಡೆಸಲು ಮುಂದಾದ ಪಾಕಿಸ್ತಾನ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌