National Commission For Men: ಪತ್ನಿಯರ ಕಿರುಕುಳ; ಪುರುಷರಿಗಾಗಿಯೂ ಆಯೋಗ ರಚಿಸುವಂತೆ ಸುಪ್ರೀಂಗೆ ಅರ್ಜಿ Vistara News
Connect with us

ದೇಶ

National Commission For Men: ಪತ್ನಿಯರ ಕಿರುಕುಳ; ಪುರುಷರಿಗಾಗಿಯೂ ಆಯೋಗ ರಚಿಸುವಂತೆ ಸುಪ್ರೀಂಗೆ ಅರ್ಜಿ

National Commission For Men: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಮಾಹಿತಿಯನ್ನು ಒದಗಿಸಿ, ಪುರುಷರಿಗೆ ಆಯೋಗ ರಚಿಸಬೇಕು ಎಂದು ವಕೀಲರೊಬ್ಬರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

VISTARANEWS.COM


on

Plea filed in Supreme Court seeking National Commission for Men
Koo

ನವದೆಹಲಿ: ಕೌಟುಂಬಿಕ ಹಿಂಸೆ ಎಂದರೆ ಪುರುಷ ಮಾತ್ರ ತನ್ನ ಹೆಂಡತಿ ಮೇಲೆ ದೌರ್ಜನ್ಯ, ಹಿಂಸೆ ಮಾಡುವುದಲ್ಲ. ಪುರುಷರು ಕೂಡ ಪತ್ನಿಯರಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ ಎಂಬ ಮಾತುಗಳು ಆಗಾಗ ಕೇಳಿಬರುತ್ತವೆ. ಹಾಗಾಗಿ, ಪತ್ನಿಯಿಂದ ಪತಿಗೆ ರಕ್ಷಣೆ ಸಿಗಬೇಕು ಎಂಬ ಕಾರಣಕ್ಕಾಗಿ ಪುರುಷರಿಗೂ ಒಂದು ಆಯೋಗ (National Commission For Men) ರಚಿಸಬೇಕು ಎಂದು ವಕೀಲ ಮಹೇಶ್‌ ಕುಮಾರ್‌ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (NCRB) ವರದಿಯ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಮಹೇಶ್‌ ಕುಮಾರ್‌ ಅವರು ಅರ್ಜಿ ಸಲ್ಲಿಸಿದ್ದಾರೆ. ಪುರುಷರು ಕೂಡ ಪತ್ನಿಯರಿಂದ ರಕ್ಷಣೆ ಪಡೆಯಲು ರಾಷ್ಟ್ರೀಯ ಪುರುಷರ ಆಯೋಗ ರಚಿಸಬೇಕು ಎಂಬುದಾಗಿ ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

“2021ರಲ್ಲಿ 1,64,033 ಜನ ದೇಶಾದ್ಯಂತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಲ್ಲಿ 81,063 ಪುರುಷರಿದ್ದರೆ, 28,680 ಮಹಿಳೆಯರು ಇದ್ದಾರೆ. ಪುರುಷರಲ್ಲಿ ಶೇ.33.2ರಷ್ಟು ಜನ ಕೌಟುಂಬಿಕ ಸಮಸ್ಯಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಶೇ.4.8ರಷ್ಟು ಮಂದಿ ಮದುವೆ ಸಂಬಂಧಿತ ಕಾರಣಗಳಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ಹೇಳುತ್ತದೆ. ಹಾಗಾಗಿ, ಪುರುಷರಿಗೂ ಆಯೋಗ ರಚಿಸಲು ಮಾನವ ಹಕ್ಕುಗಳ ಆಯೋಗಕ್ಕೆ ಸೂಚಿಸಬೇಕು” ಎಂಬುದಾಗಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Swati Maliwal: ತಂದೆಯಿಂದಲೇ ನನ್ನ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಹೇಳಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ದೇಶ

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿಯ ನೆರವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಸಂಸದ ಶಶಿ ತರೂರ್‌ ಅವರು ಧಾವಿಸಿದ್ದು, ಇದರಿಂದ ಬಾಲಕಿಯು ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ. ಮಾನವೀಯ ನೆಲೆಯ ನಡೆಯ ಬಗ್ಗೆ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Edited by

Indian govt let go of Rs 7 lakh in GST to save a baby girls life
Koo

ನವದೆಹಲಿ/ತಿರುವನಂತಪುರಂ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗೆ ಮಾನವೀಯತೆ ಇದ್ದರೆ, ಆಳುವ ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇದ್ದರೆ ಏನೆಲ್ಲ ಆಗುತ್ತದೆ ಎಂಬುದಕ್ಕೆ ನಿದರ್ಶನ ಸಿಕ್ಕಿದೆ. ಹೌದು, ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕಿಯೊಬ್ಬಳ ಪ್ರಾಣ ಉಳಿಸಲು ಕೇಂದ್ರ ಸರ್ಕಾರವು 7 ಲಕ್ಷ ರೂಪಾಯಿ ಜಿಎಸ್‌ಟಿಗೆ ವಿನಾಯಿತಿ ನೀಡಿದರೆ, ಬಾಲಕಿಗೆ ಅಗತ್ಯ ನೆರವಿನ ವ್ಯವಸ್ಥೆ ಮಾಡಿಸುವ ಮೂಲಕ ತಿರುವನಂತಪುರಂ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಮಾನವೀಯತೆ ಮೆರೆದಿದ್ದಾರೆ.

ನಿಹಾರಿಕಾ ಎಂಬ ಬಾಲಕಿಯು ನ್ಯೂರೋಬ್ಲಾಸ್ಟೋಮಾ (Neuroblastoma) ಎಂಬ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಕ್ಯಾನ್ಸರ್‌ ಈಕೆಗೆ ನಾಲ್ಕನೇ ಸ್ಟೇಜ್‌ನಲ್ಲಿದೆ. ಬಾಲಕಿಯ ಪ್ರಾಣ ಉಳಿಸಲು ಡಿನುಟುಕ್ಸಿಮ್ಯಾಬ್‌ ಬೆಟಾ (Dinutuximab Beta) ಅಥವಾ ಕರ್ಜಿಬಾ (Qarziba) ಎಂಬ ಇಂಜೆಕ್ಷನ್‌ ನೀಡಬೇಕು. ಈ ಇಂಜೆಕ್ಷನ್‌ನ ಒಂದು ಬಾಟಲಿಗೆ 10 ಲಕ್ಷ ರೂಪಾಯಿ ಇದ್ದು, ಇದನ್ನು ವಿದೇಶದಿಂದ ತರಿಸಬೇಕು. ಹೀಗೆ, ತರಿಸಿದ ಇಂಜೆಕ್ಷನ್‌ ಬೆಲೆ ಒಟ್ಟು 63 ಲಕ್ಷ ರೂಪಾಯಿ ಆಗಿದೆ. ಇದಕ್ಕೆ 7 ಲಕ್ಷ ರೂಪಾಯಿ ಜಿಎಸ್‌ಟಿ ಕಟ್ಟಬೇಕಿರುತ್ತದೆ. ಆದರೆ, ನಿಹಾರಿಕಾಳ ಕುಟುಂಬ ಸಂಕಷ್ಟದಲ್ಲಿರುವ ಕಾರಣ ಇಷ್ಟೊಂದು ಮೊತ್ತ ಭರಿಸಲು ಆಗುತ್ತಿರಲಿಲ್ಲ.

ಶಶಿ ತರೂರ್‌ ಪತ್ರ

ನೆರವಿಗೆ ಧಾವಿಸಿದ ಶಶಿ ತರೂರ್‌

ನಿಹಾರಿಕಾ ಕುಟುಂಬದ ಸಂಕಷ್ಟ ಅರಿತ ಶಶಿ ತರೂರ್‌ ಅವರು ನೆರವಿಗೆ ಧಾವಿಸಿದ್ದಾರೆ. ಮಾನವೀಯತೆ ಆಧಾರದ ಮೇಲೆ 7 ಲಕ್ಷ ರೂಪಾಯಿ ಜಿಎಸ್‌ಟಿ ಮನ್ನಾ ಮಾಡಬೇಕು ಎಂಬುದಾಗಿ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆಯುತ್ತಾರೆ. ಆದರೆ, ಸಚಿವಾಲಯದಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ. ಮತ್ತೊಂದೆಡೆ, ಔಷಧವು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು, ತೆರಿಗೆ ಕಟ್ಟದಿದ್ದರೆ ಅದನ್ನು ನೀಡುವುದಿಲ್ಲ ಎಂಬುದಾಗಿ ಕಸ್ಟಮ್ಸ್‌ ಅಧಿಕಾರಿಗಳು ಹೇಳುತ್ತಾರೆ. ಆದರೂ ಪ್ರಯತ್ನ ಬಿಡದ ಶಶಿ ತರೂರ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ನೇರವಾಗಿ ಕರೆ ಮಾಡಿ ಪರಿಸ್ಥಿತಿ ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಜಿಎಸ್‌ಟಿ ವಿನಾಯಿತಿ ನೀಡಲು ಒಪ್ಪಿ, ಕೊನೆಗೆ ಮಾರ್ಚ್‌ 28ರಂದು ಔಷಧಿಯು ನಿಹಾರಿಕಾ ಕುಟುಂಬಸ್ಥರ ಕೈ ಸೇರುತ್ತದೆ.

ಇದನ್ನೂ ಓದಿ: Karwar News: ನಿತ್ರಾಣಗೊಂಡಿದ್ದ ಭಿಕ್ಷುಕನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ

ಸೀತಾರಾಮನ್‌ಗೆ ತರೂರ್‌ ಧನ್ಯವಾದ

ಇಡೀ ಘಟನೆಯನ್ನು ಶಶಿ ತರೂರ್‌ ಅವರು ಪತ್ರದ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. “ಪುಟ್ಟ ಬಾಲಕಿಗೆ ಈಗ ಇಂಜೆಕ್ಷನ್‌ ಸಿಗಲಿದೆ. ಆಕೆ ಬದುಕುಳಿಯಲಿದ್ದಾಳೆ. ಕೇಂದ್ರ ಸರ್ಕಾರವು ಏಳು ಲಕ್ಷ ರೂಪಾಯಿ ಆದಾಯವನ್ನು ಬಿಟ್ಟಿದೆ. ನಿರ್ಮಲಾ ಸೀತಾರಾಮನ್‌ ಅವರಿಗೆ ಧನ್ಯವಾದಗಳು. ರಾಜಕೀಯದ ಹೊರತಾಗಿಯೂ ನೀವು ಮಾನವೀಯತೆ ಮೆರೆದಿದ್ದೀರಿ. ಸರ್ಕಾರದ ಮೇಲೆ ನಾನು ಇಟ್ಟಿರುವ ನಂಬಿಕೆಯನ್ನು ಹೆಚ್ಚಿಸಿದ್ದೀರಿ” ಎಂಬುದಾಗಿ ಭಾವುಕರಾಗಿ ಸಚಿವೆಗೆ ಧನ್ಯವಾದ ತಿಳಿಸಿದ್ದಾರೆ. ಶಶಿ ತರೂರ್‌ ಪೋಸ್ಟಿಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ಸಂಸದ ಹಾಗೂ ನಿರ್ಮಲಾ ಸೀತಾರಾಮನ್‌ ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.

Continue Reading

ಕರ್ನಾಟಕ

ವಿಸ್ತಾರ TOP 10 NEWS: ಮೇ 10ಕ್ಕೆ ಚುನಾವಣೆ ಮುಹೂರ್ತದಿಂದ, ಟೆಕ್ಕಿ ಪ್ರತಿಭಾ ಅತ್ಯಾಚಾರಿಗೆ 30 ವರ್ಷ ಜೈಲುವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

vistara top 10 news Karnataka elections date announced to punishment to rapist and more news
Koo

1. Karnataka Election: ಮೇ 10ರಂದು ಕರ್ನಾಟಕ ಚುನಾವಣೆ; ಮೇ 13ಕ್ಕೆ ಫಲಿತಾಂಶ ಎಂದು ಘೋಷಿಸಿದ ಚುನಾವಣಾ ಆಯೋಗ
ಕರ್ನಾಟಕದಲ್ಲಿ 16ನೇ ವಿಧಾನಸಭೆಯನ್ನು ಆಯ್ಕೆ ಮಾಡುವ ಸಲುವಾಗಿ ಮೇ 10 ರ ಬುಧವಾರದಂದು ಒಂದೇ ಹಂತದಲ್ಲಿ ಚುನಾವಣೆ (Karnataka Election) ನಡೆಯಲಿದೆ. ಈ ಕುರಿತು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಘೋಷಣೆ ಮಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Karnataka Elections 2023: ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳುವುದೇನು?
ಮುಂಬರುವ ಲೋಕಸಭೆ ಚುನಾವಣೆ, ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ, ರಾಹುಲ್‌ ಗಾಂಧಿ ಅನರ್ಹತೆ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಎಂಬುದು ಸೇರಿ ಹಲವು ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Elections 2023) ದಿನಾಂಕ ನಿಗದಿಯಾಗಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, 13ಕ್ಕೆ ಫಲಿತಾಂಶ ಪ್ರಕಟವಾಗಿದೆ. ಇದರ ಬೆನ್ನಲ್ಲೇ, ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಎಬಿಪಿ-ಸಿವೋಟರ್‌ ಹಾಗೂ ಜೀ ನ್ಯೂಸ್‌-ಮ್ಯಾಟ್ರಿಜ್‌ ಚುನಾವಣೆಪೂರ್ವ ಸಮೀಕ್ಷೆ ನಡೆಸಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Karnataka Elections 2023 : ಕಾಂಗ್ರೆಸ್‌ ಏನೇ ಆರೋಪ ಮಾಡಿದರೂ ಜನರು ನಮ್ಮ ಪರ: ಬೊಮ್ಮಾಯಿ ವಿಶ್ವಾಸ
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು (Karnataka Elections 2023) ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಕಾಂಗ್ರೆಸ್‌ ಏನೇ ಆರೋಪ ಮಾಡಿದರೂ ಜನತಾ ಜನಾರ್ದನ ನಮ್ಮ ಪರವಾಗಿದ್ದಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚುನಾವಣೆ ಘೋಷಣೆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಬಿಜೆಪಿ ತಳಮಟ್ಟದಿಂದಲೇ ಗಟ್ಟಿಯಾಗಿದೆ ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Karnataka Election: ಚುನಾವಣೆ ಘೋಷಣೆ ಬೆನ್ನಿಗೇ ಗರ್ಜಿಸಿದ ಕಾಂಗ್ರೆಸ್‌: ʼಮತ್ತೆ ಗರ್ಜಿಸಲಿದೆ ಕರ್ನಾಟಕʼ ಅಭಿಯಾನ ಆರಂಭ
ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ದಿನದಿಂದಲೇ ಕಾಂಗ್ರೆಸ್ ಪಕ್ಷ “ಮತ್ತೆ ಗರ್ಜಿಸಲಿದೆ ಕರ್ನಾಟಕ” ಎಂಬ ಹೊಸ ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಚಾಲನೆ ನೀಡಿ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ಅಭಿಯಾನವು ಕರ್ನಾಟಕದ ಜನರಿಗೆ ಪಕ್ಷದ ಬದ್ಧತೆಯನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ ಮತ್ತು ಎಲ್ಲರಿಗೂ ಉತ್ತಮ ಭವಿಷ್ಯವನ್ನು ಸೃಷ್ಟಿಸುವ ದೂರದೃಷ್ಟಿಯನ್ನು ಹೊಂದಿದೆ ಎಂದು ಎಂ.ಬಿ. ಪಾಟೀಲ್‌ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಕರ್ನಾಟಕ ವಿಧಾನಸಭೆ ಚುನಾವಣೆಯ ಎಲ್ಲ ಸುದ್ದಿಗಳನ್ನೂ ಓದಲು ಇಲ್ಲಿ ಕ್ಲಿಕ್‌ ಮಾಡಿ.

5. SC ST Reservation: ಮಾರ್ಚ್‌ 30ಕ್ಕೆ ನಡೆಯಲ್ಲ ಬಂಜಾರ ಸಮುದಾಯದ ಪ್ರತಿಭಟನೆ; ನೀತಿ ಸಂಹಿತೆ ಜಾರಿ ಹಿನ್ನೆಲೆ ಮುಷ್ಕರ ವಾಪಸ್‌
ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಗುರುವಾರ (ಮಾ. 30) ನಡೆಯಬೇಕಿದ್ದ ಬಂಜಾರ ಸಮುದಾಯದವರ ಬೃಹತ್ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ. ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ತೀರ್ಮಾನವನ್ನು ಹಿಂತೆಗೆದುಕೊಳ್ಳಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Amritpal Singh: ವಿಡಿಯೊ ಬಿಟ್ಟ ಅಮೃತ್‌ಪಾಲ್‌, ಬಂಧನದ ಯತ್ನ ಸಿಖ್ಖರ ಮೇಲಿನ ದಾಳಿ ಎಂದ ಖಲಿಸ್ತಾನಿ ನಾಯಕ
ಖಲಿಸ್ತಾನಿಗಳ ನಾಯಕ, ಪಂಜಾಬ್‌ನಲ್ಲಿ ಗಲಭೆಗೆ ಕಾರಣವಾಗಿರುವ ಅಮೃತ್‌ಪಾಲ್‌ ಸಿಂಗ್‌ (Amritpal Singh) ಮಾರ್ಚ್‌ 18ರಿಂದ ನಾಪತ್ತೆಯಾಗಿದ್ದಾನೆ. ಈತನ ಬಂಧನಕ್ಕೆ ರಾಜ್ಯದ ಪೊಲೀಸರು ಸತತ ಕಾರ್ಯಾಚರಣೆ ನಡೆಸಿದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ, ಅಮೃತ್‌ಪಾಲ್ ಸಿಂಗ್‌ ವಿಡಿಯೊ ಬಿಡುಗಡೆ ಮಾಡಿದ್ದು, “ನನ್ನ ಬಂಧನಕ್ಕೆ ನಡೆಸುತ್ತಿರುವ ಕಾರ್ಯಾಚರಣೆಯು ಇಡೀ ಸಿಖ್‌ ಸಮುದಾಯದ ಮೇಲೆ ನಡೆಸುತ್ತಿರುವ ದಾಳಿ” ಎಂದಿದ್ದಾನೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Karnataka Rain: ರಾಜ್ಯದಲ್ಲಿ ಮುಂದಿನ 5 ದಿನ ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ; ಚಾಮರಾಜನಗರ, ಬೆಂಗಳೂರಲ್ಲಿ ತಂಪೆರೆದ ವರುಣ
ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. UPI transactions : ಯುಪಿಐ ಬಳಕೆ ಗ್ರಾಹಕರಿಗೆ ಸಂಪೂರ್ಣ ಉಚಿತ ಎಂದ ಎನ್‌ಪಿಸಿಐ, ಹಾಗಾದರೆ 1.1% ಶುಲ್ಕ ಯಾರಿಗೆ?
ಬ್ಯಾಂಕ್‌ ಖಾತೆಗೆ ಲಿಂಕ್‌ ಹೊಂದಿರುವ ಯುಪಿಐ ಬಳಕೆಗೆ (UPI transactions) ಸಂಬಂಧಿಸಿ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದು ಉಚಿತ ಎಂದು ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಬುಧವಾರ ಸ್ಪಷ್ಟೀಕರಣ ನೀಡಿದೆ. ಇದರದೊಂದಿಗೆ ಯುಪಿಐ ಮೂಲಕ ಹಣ ಪಾವತಿಗೆ ಶುಲ್ಕ ( Interchange fee ) ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Rape and murder : ಬೆಂಗಳೂರಿನ ಐಟಿ ಉದ್ಯೋಗಿ ಪ್ರತಿಭಾ ಅತ್ಯಾಚಾರ, ಕೊಲೆ ಪ್ರಕರಣ; ಕ್ಯಾಬ್‌ ಡ್ರೈವರ್‌ಗೆ 30 ವರ್ಷ ಜೈಲು
ಇಡೀ ರಾಜ್ಯವೇ ನಡುಗುವಂತೆ ಮಾಡಿದ, ಐಟಿ ಉದ್ಯೋಗಿಗಳ ವಲಯದಲ್ಲಿ ತಲ್ಲಣವನ್ನು ಸೃಷ್ಟಿಸಿದ್ದ 2005ರ ಐಟಿಯ ಉದ್ಯೋಗಿಯ ಅತ್ಯಾಚಾರ ಮತ್ತು ಕೊಲೆ (Rape and murder) ಪ್ರಕರಣದಲ್ಲಿ ಆರೋಪಿಗೆ 30 ವರ್ಷಗಳ ಜೈಲುವಾಸದ ಶಿಕ್ಷೆಯನ್ನು ನೀಡಲಾಗಿದೆ. ಆರೋಪಿ ಶಿವಕುಮಾರ್‌ ಎಂಬಾತನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದ ಕೋರ್ಟ್‌ 30 ವರ್ಷಗಳ ಕಾಲ ಜೈಲಿನಿಂದ ಹೊರಗೆ ಬಿಡಬಾರದು ಎಂಬ ಷರತ್ತು ವಿಧಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. IPL 2023: ಐಪಿಎಲ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ
ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್​ ಕ್ರಿಕೆಟ್​ ಟೂರ್ನಿ(IPL 2023) ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಈ ಬಾರಿ ಯಾವ ತಂಡ ಕಪ್​ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಅದರಲ್ಲೂ ಆರ್​ಸಿಬಿ ಅಭಿಮಾನಿಗಳು ಈ ಬಾರಿ ಪಕ್ಕಾ ಕಪ್ ನಮ್ದೇ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆರ್​ಸಿಬಿ(RCB) ತನ್ನ ಮೊದಲ ಪಂದ್ಯವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. SC ST Scholarship: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಶೀಘ್ರವೇ ಬಂಪರ್‌, ಏರಿಕೆ ಆಗಲಿದೆ ವಿದ್ಯಾರ್ಥಿ ವೇತನ
  2. Google: ಗೂಗಲ್‌ಗೆ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!
  3. Ballary young Mayor : ಬಳ್ಳಾರಿ ಪಾಲಿಕೆಗೆ 21 ವರ್ಷದ ಯುವತಿ ಮೇಯರ್‌, ರಾಜ್ಯದಲ್ಲೇ ಅತಿಕಿರಿಯ ವಯಸ್ಸಿನ ಮಹಾಪೌರರು!
  4. Priyanka Chopra: ಫೇರ್‌ನೆಸ್ ಆ್ಯಡ್‌ಗಳಲ್ಲಿ ನಟಿಸುವುದು ಹಾನಿಕರ ಎಂದು ಪ್ರಿಯಾಂಕಾ ಚೋಪ್ರಾ ಹೇಳಿದ್ದೇಕೆ?
  5. Kabzaa Movie: ಕಬ್ಜ ಒಟಿಟಿ ರಿಲೀಸ್‌ ಯಾವಾಗ? ಕಬ್ಜ 2ಗೆ ತಯಾರಿ ನಡೆದಿದ್ಯಾ?
Continue Reading

ಕ್ರೈಂ

10 ಅಡಿ ಸುರಂಗ ಕೊರೆದು ಮಳಿಗೆಯಲ್ಲಿ ಆಭರಣ ಕದ್ದರು, ಬಳಿಕ ಕ್ಷಮಾಪಣೆ ಪತ್ರ ಬರೆದಿಟ್ಟು ಹೋದರು

ಉತ್ತರ ಪ್ರದೇಶದ ಮೀರತ್‌ನಲ್ಲಿ ಕಳ್ಳರು ಚರಂಡಿ ಮೂಲಕ ಸುರಂಗ ಕೊರೆದು, ಆಭರಣ ಮಳಿಗೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ. ಸಿನಿಮೀಯ ರೀತಿಯಲ್ಲಿ ನಡೆದ ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

Edited by

Thieves Rob UP Jewellery Shop By Digging 10 Foot Tunnel Through Drain
Koo

ಲಖನೌ: ಬ್ಯಾಂಕ್‌ಗಳ ಬಳಿ ನೂರಾರು ಅಡಿಗಳ ಸುರಂಗ ಕೊರೆದು, ತಿಂಗಳುಗಟ್ಟಲೆ ಪ್ಲಾನ್‌ ರೂಪಿಸಿ ಬ್ಯಾಂಕ್‌ಗಳಲ್ಲಿಯೋ, ಆಭರಣಗಳ ಮಳಿಗೆಗಳಲ್ಲಿಯೋ ಕೋಟ್ಯಂತರ ರೂಪಾಯಿ, ಆಭರಣಗಳನ್ನು ದೋಚುವುದನ್ನು ಸಿನಿಮಾಗಳಲ್ಲಿ, ವೆಬ್‌ ಸಿರೀಸ್‌ಗಳಲ್ಲಿ ನೋಡಿರುತ್ತೇವೆ. ಆದರೆ, ಇದೇ ಸಿನಿಮೀಯ ರೀತಿಯಲ್ಲಿ ಉತ್ತರ ಪ್ರದೇಶದಲ್ಲಿ ಕಳ್ಳರು ಚರಂಡಿ ಮೂಲಕ 10 ಅಡಿ ಸುರಂಗ ಕೊರೆದು, ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದಿದ್ದಾರೆ.

ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಜ್ಯುವೆಲ್ಲರಿ ಶೋರೂಮ್‌ ಪಕ್ಕದ ಚರಂಡಿ ಮೂಲಕ ಕಳ್ಳರು ಸುರಂಗ ಅಗೆದಿದ್ದಾರೆ. ಇಟ್ಟಿಗೆಗಳನ್ನು ತೆಗೆದು, ಕೆಸರನ್ನು ಅಗೆದು ಸುರಂಗ ಕೊರೆದಿದ್ದಾರೆ. ಇದಾದ ಬಳಿಕ ರಾತ್ರೋರಾತ್ರಿ ಮಳಿಗೆ ಪ್ರವೇಶಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ. ಆಭರಣ ಮಳಿಗೆಯ ಮಾಲೀಕರು ಬೆಳಗ್ಗೆ ಮಳಿಗೆ ತೆರೆದಾಗ, ಸುರಂಗ ಕೊರೆದು, ಚಿನ್ನಾಭರಣ ದೋಚಿರುವುದು ಗೊತ್ತಾಗಿದೆ.

ವ್ಯಾಪಾರಿಗಳಿಂದ ಪ್ರತಿಭಟನೆ

ಚಿನ್ನದ ಮಳಿಗೆಗೆ ನುಗ್ಗಿ, ಆಭರಣ ದೋಚಿರುವುದು ಅಂಗಡಿ ಮಾಲೀಕರ ಗಮನಕ್ಕೆ ಬರುತ್ತಲೇ, ನಗರದಾದ್ಯಂತ ಸುದ್ದಿ ಹರಡುತ್ತಲೇ ಮೀರತ್‌ ಬುಲ್ಲಿಯನ್‌ ಟ್ರೇಟರ್ಸ್‌ ಅಸೋಸಿಯೇಷನ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಕೂಡಲೇ ಕಳ್ಳರನ್ನು ಪತ್ತೆಹಚ್ಚಿ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಮಳಿಗೆಗೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಲ್ಲದೆ, ಪ್ರಕರಣ ದಾಖಲಿಸಿದ್ದಾರೆ.

ಕ್ಷಮಾಪಣೆ ಪತ್ರ ಬರೆದಿಟ್ಟ ಕಳ್ಳರು

ವಾರಗಟ್ಟಲೆ ಪ್ಲಾನ್‌ ಮಾಡಿ, ಚರಂಡಿಯಲ್ಲಿ ಸುರಂಗ ಕೊರೆದ ಕಳ್ಳರು, ಚಿನ್ನಾಭರಣಗಳನ್ನು ದೋಚಿಕೊಂಡು ಹೋಗುವ ಮುನ್ನ ಕ್ಷಮಾಪಣೆ ಪತ್ರವೊಂದನ್ನು ಬರೆದಿಟ್ಟು ಹೋಗಿದ್ದಾರೆ. “ನಾವು ನಿಮ್ಮ ಕ್ಷಮೆ ಕೇಳುತ್ತೇವೆ. ನಮಗೆ ಕಳ್ಳತನ ಮಾಡುವುದಷ್ಟೇ ಉದ್ದೇಶವಾಗಿತ್ತು. ಈ ಫ್ಲೋರ್‌ ತುಂಬ ಗಟ್ಟಿಯಾಗಿತ್ತು” ಎಂಬುದಾಗಿ ಪತ್ರದಲ್ಲಿ ಬರೆದಿದ್ದಾರೆ. ಆದಾಗ್ಯೂ, ಮಳಿಗೆಯಲ್ಲಿ ಎಷ್ಟು ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಲಾಗಿದೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಈ ಕುರಿತು ಮಾಹಿತಿ ನೀಡಿ ಎಂಬುದಾಗಿ ಮಳಿಗೆಯ ಮಾಲೀಕರಿಗೆ ಪೊಲೀಸರು ಸೂಚಿಸಿದ್ದಾರೆ.

ಇದನ್ನೂ ಓದಿ: Bike theft : ಉಳ್ಳಾಲದಲ್ಲಿ ಸರಣಿ ಬೈಕ್‌ ಕಳ್ಳತನ, ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರಿಗಾಗಿ ಪೊಲೀಸರ ಹುಡುಕಾಟ!

Continue Reading

ದೇಶ

Cheetah: 4 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ! ವಂಡರ್‌ಫುಲ್ ನ್ಯೂಸ್ ಎಂದ ಮೋದಿ

Cheetah: ಕಳೆದ ವರ್ಷ ನಮೀಬಿಯಾದಿಂದ ಭಾರತಕ್ಕೆ 8 ಚೀತಾಗಳನ್ನು ತಂದು ಮಧ್ಯಪ್ರದೇಶದ ಕಾಡಿಗೆ ಬಿಡಲಾಗಿತ್ತು. ಈ ಪೈಕಿ ಒಂದು ಚೀತಾ ನಾಲ್ಕು ಮರಿಗಳಿಗೆ ಈಗ ಜನ್ಮ ನೀಡಿದೆ. ಮೋದಿ(PM Narendra Modi) ಅವರು ಇದೊಂದು ಅದ್ಭುತ ಸುದ್ದಿ ಎಂದು ಹೇಳಿದ್ದಾರೆ.

VISTARANEWS.COM


on

Edited by

Cheetah that came from namibia to india Gives Birth To 4 Cubs
Koo

ನವದೆಹಲಿ: ಭಾರತದಲ್ಲಿ ಅಳಿಸಿ ಹೋಗಿರುವ ಚೀತಾ ಸಂತತಿ ಹೆಚ್ಚಿಸುವುದಕ್ಕಾಗಿ ಕಳೆದ ವರ್ಷ 8 ಚೀತಾಗಳನ್ನು (Cheetah) ನಮೀಬಿಯಾದಿಂದ ತಂದು ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಬಿಡಲಾಗಿತ್ತು. ಈ ಪೈಕಿ ಸಾಶಾ ಎಂಬ ಹೆಣ್ಣು ಚಿರತೆ ಕಿಡ್ನಿ ವೈಫಲ್ಯದಿಂದ ಎರಡು ದಿನಗಳ ಹಿಂದೆಯಷ್ಟೇ ಮೃತಪಟ್ಟ ದುಃಖದ ನಡುವೆ, ಖುಷಿಯ ಸುದ್ದಿಯೊಂದು ಹೊರ ಬಿದ್ದಿದೆ. ನಮೀಬಿಯಾದಿಂದ ಬಂದ ಮತ್ತೊಂದು ಚಿರತೆ 4 ಮರಿಗಳಿಗೆ ಜನ್ಮ ನೀಡಿದೆ. ಈ ಖುಷಿಯ ಸಂಗತಿಯನ್ನು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ರಿಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಂಡರ್‌ಫುಲ್ ನ್ಯೂಸ್ ಎಂದು ಹೇಳಿದ್ದಾರೆ.

Cheetah: ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರ ಟ್ವೀಟ್

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಚೀತಾಗಳ ಪೈಕಿ ಒಂದು ಚೀತಾಗೆ ನಾಲ್ಕು ಮರಿಗಳು ಜನಿಸಿದವು ಎಂದು ಹಂಚಿಕೊಳ್ಳಲು ನಾನು ಸಂತೋಷಪಡುತ್ತೇನೆ ಎಂದು ಭೂಪೇಂದ್ರ ಯಾದವ್ ಅವರು ಟ್ವೀಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇಡೀ ಚೀತಾ ಪ್ರಾಜೆಕ್ಟ್ ತಂಡವನ್ನು ಅಭಿನಂದಿಸಿದ್ದಾರೆ. ಚೀತಾಗಳನ್ನು ಮತ್ತೆ ಭಾರತಕ್ಕೆ ತರಲು ಹಾಗೂ ಈ ಹಿಂದೆಯಾದ ತಪ್ಪುಗಳನ್ನು ಪರಿಸರ ತಪ್ಪುಗಳನ್ನು ಸರಿಪಡಿಸುತ್ತಿರುವ ತಂಡದ ಕೆಲಸ ಶ್ಲಾಘನೀಯ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟ್

ಮಹತ್ವಾಕಾಂಕ್ಷೆಯ ಚೀತಾ ಮರುಪರಿಚಯ ಕಾರ್ಯಕ್ರಮದ ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷ ಸೆಪ್ಟೆಂಬರ್ 17 ರಂದು ತಮ್ಮ 72 ನೇ ಹುಟ್ಟುಹಬ್ಬದಂದು ನಮೀಬಿಯಾದಿಂದ ತರಲಾದ 8 ಚೀತಾಗಳನ್ನು ಮಧ್ಯಪ್ರದೇಶದ ಕುನೋ ನ್ಯಾಷನಲ್ ಪಾರ್ಕ್‌ಗೆ ಬಿಟ್ಟಿದ್ದರು. ಇಲ್ಲಿನ ಕ್ವಾರಂಟೈನ್ ಆವರಣದಲ್ಲಿ ಅವುಗಳನ್ನು ಇಡಲಾಗಿತ್ತು. ಸ್ವಲ್ಪ ದಿನಗಳ ಬಳಿಕ ಅವುಗಳನ್ನು ಕಾಡಿಗೆ ಬಿಡಲಾಗಿತ್ತು. ಇದರ ಮಧ್ಯೆಯೇ, ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದಲೂ 12 ಚೀತಾಗಳನ್ನು ತಂದು ಕುನೋ ನ್ಯಾಷನಲ್ ಪಾರ್ಕ್‌ಗೆ ಬಿಡಲಾಗಿತ್ತು.

ನಮೀಬಿಯಾದ ಹೆಣ್ಣು ಚೀತಾ ಸಾಶಾ ಸಾವು

ನಮೀಬಿಯಾದಿಂದ ಭಾರತಕ್ಕೆ ತರಲಾದ 8 ಚೀತಾಗಳ(Cheetah Died) ಪೈಕಿ ಒಂದು ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ. ಮೃತ ಚೀತಾ ಸಾಶಾಗೆ (Sasha) ಕಳೆದ ಜನವರಿಯಿಂದ ಕಿಡ್ನಿ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಈ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿಡಲಾಗಿತ್ತು. ಅಂತಿಮವಾಗಿ ಚೀತಾ ಸೋಮವಾರ ಕೊನೆಯುಸಿರೆಳೆದಿದೆ. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Cheetah Reintroduction : ಸೌದಿ ದೊರೆ ಕೊಟ್ಟಿದ್ದ ಚೀತಾ ಸಾವು

ಭಾರತದಲ್ಲಿ ಚೀತಾ ಸಂತತಿ ಅವಸಾನ ಕಂಡಿದ್ದವು. ಭಾರತದಲ್ಲಿ ಮತ್ತೆ ಚೀತಾ ಸಂತತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತವು ಚೀತಾ ಮರುಪರಿಚಯ ಕಾರ್ಯಕ್ರಮವನ್ನು ರೂಪಿಸಿತ್ತು. ಅದರನ್ವಯ ಕಳೆದ ವರ್ಷದ ನಮೀಬಿಯಾದಿಂದ ಒಟ್ಟು 8 ಚೀತಾಗಳನ್ನು ತಂದು ಮಧ್ಯ ಪ್ರದೇಶ ಕುನೊ ನ್ಯಾಷನಲ್ ಪಾರ್ಕ್‌ನಲ್ಲಿ ಬಿಡಲಾಗಿತ್ತು. ಈಗ ಮೃತಪಟ್ಟಿರುವ ಸಾಶಾ, ಐದು ಹೆಣ್ಣು ಚಿರತೆಗಳ ಪೈಕಿ ಒಂದಾಗಿದೆ. ಭಾರತಕ್ಕೆ ಮತ್ತೆ ಚೀತಾಗಳನ್ನು ಪರಿಚಯಿಸುವ ಕಾರ್ಯಕ್ರಮವು ಭಾರೀ ಸುದ್ದಿಯಾಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೆಮ್ಮೆ ಪಟ್ಟಿದ್ದರು. ಏತನ್ಮಧ್ಯೆ, ನಮೀಬಿಯಾದಿಂದ ತರಲಾಗಿರುವ ಚೀತಾಗಳು ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು.

Continue Reading
Advertisement
Road Accident
ಕರ್ನಾಟಕ1 min ago

Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು

High way robbery
ಕರ್ನಾಟಕ26 mins ago

Highway robbery : ಯುವಕ-ಯುವತಿಯನ್ನು ಅಡ್ಡಗಟ್ಟಿ ಬೈಕ್‌, ಐಫೋನ್‌ ಕಿತ್ತುಕೊಂಡು ಹೋದ ಮೂವರು ಸುಲಿಗೆಕೋರರು ಅರೆಸ್ಟ್‌

Restrictions on entry to Dharwad, Supreme Court dismisses Vinay Kulkarni's plea seeking exemption
ಕರ್ನಾಟಕ40 mins ago

Vinay kulkarni: ಧಾರವಾಡಕ್ಕೆ ಪ್ರವೇಶ ನಿರ್ಬಂಧ; ವಿನಾಯಿತಿ ಕೋರಿ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

Ram Navami 2023
ಧಾರ್ಮಿಕ1 hour ago

Ram Navami 2023: ಶ್ರೀರಾಮನ ಪರಿಪೂರ್ಣತೆ ನಮ್ಮಲ್ಲಿ ತುಂಬಿಕೊಳ್ಳೋದು ಹೇಗೆ? 

IPL 2023: Rohit likely to be unavailable for some IPL matches to relieve stress
ಕ್ರಿಕೆಟ್2 hours ago

IPL 2023: ಒತ್ತಡ ನಿವಾರಣೆಗಾಗಿ ಕೆಲ ಐಪಿಎಲ್​ ಪಂದ್ಯಗಳಿಗೆ ರೋಹಿತ್​ ಅಲಭ್ಯ ಸಾಧ್ಯತೆ

Karnataka Elections 2023
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

Aam Aadmi Party announces 300 units of free electricity, Rs 3,000. unemployment allowance, Implementation of OPS guarantee scheme
ಕರ್ನಾಟಕ2 hours ago

Karnataka Election: ಎಎಪಿಯಿಂದ 300 ಯೂನಿಟ್‌ ವಿದ್ಯುತ್‌ ಉಚಿತ, 3000 ರೂ. ನಿರುದ್ಯೋಗ ಭತ್ಯೆ, ಒಪಿಎಸ್‌ ಜಾರಿ ಗ್ಯಾರಂಟಿ

Indian govt let go of Rs 7 lakh in GST to save a baby girl’s life
ದೇಶ2 hours ago

ಬಾಲಕಿಯ ಪ್ರಾಣ ಉಳಿಸಲು 7 ಲಕ್ಷ ರೂ. ಜಿಎಸ್‌ಟಿ ಬಿಟ್ಟ ಕೇಂದ್ರ, ಮಾನವೀಯತೆ ಮೆರೆದ ಶಶಿ ತರೂರ್‌

IPL 2023: AB de Villiers wrote an emotional message about RCB
ಕ್ರಿಕೆಟ್2 hours ago

IPL 2023: ಆರ್​ಸಿಬಿ ಬಗ್ಗೆ ಭಾವನಾತ್ಮಕ ಸಂದೇಶ ಬರೆದ ಎಬಿ ಡಿ ವಿಲಿಯರ್ಸ್​

vistara top 10 news Karnataka elections date announced to punishment to rapist and more news
ಕರ್ನಾಟಕ3 hours ago

ವಿಸ್ತಾರ TOP 10 NEWS: ಮೇ 10ಕ್ಕೆ ಚುನಾವಣೆ ಮುಹೂರ್ತದಿಂದ, ಟೆಕ್ಕಿ ಪ್ರತಿಭಾ ಅತ್ಯಾಚಾರಿಗೆ 30 ವರ್ಷ ಜೈಲುವರೆಗಿನ ಪ್ರಮುಖ ಸುದ್ದಿಗಳಿವು

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

amit shah convoy
ಕರ್ನಾಟಕ2 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ2 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 week ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 week ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ1 week ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ1 week ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ1 week ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

ಟ್ರೆಂಡಿಂಗ್‌

error: Content is protected !!