ನವದೆಹಲಿ: ಅಯೋಧ್ಯೆ ರಾಮ ಮಂದಿರ(Ayodhya Ram Mandir) ಉದ್ಘಾಟನೆಯ ಬಳಿಕ ಪ್ರಮುಖ ಯೋಜನೆಯೊಂದನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಘೋಷಣೆ ಮಾಡಿದ್ದಾರೆ. ಸೌರಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯನ್ನು (Pradhanmantri Suryodaya Yojana) ಅವರು ಪ್ರಕಟಿಸಿದ್ದಾರೆ. ಅಯೋಧ್ಯೆಯಿಂದ ಹಿಂದಿರುಗಿದ ಬಳಿಕ ನಾನು ಘೋಷಿಸುತ್ತಿರುವ ಮೊದಲ ಯೋಜನೆ ಇದು ಎಂದು ಪ್ರಧಾನಿ ಮೋದಿ ಅವರು ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ.
ಜಗತ್ತಿನ ಎಲ್ಲಾ ಭಕ್ತರು ಯಾವಾಗಲೂ ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಯ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮದೇ ಆದ ಸೌರ ಛಾವಣಿಯ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವು ಮತ್ತಷ್ಟು ಬಲಗೊಂಡಿದೆ ಎಂದು ಪ್ರಧಾನಿ ಸಾಮಾಜಿಕ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
सूर्यवंशी भगवान श्री राम के आलोक से विश्व के सभी भक्तगण सदैव ऊर्जा प्राप्त करते हैं।
— Narendra Modi (@narendramodi) January 22, 2024
आज अयोध्या में प्राण-प्रतिष्ठा के शुभ अवसर पर मेरा ये संकल्प और प्रशस्त हुआ कि भारतवासियों के घर की छत पर उनका अपना सोलर रूफ टॉप सिस्टम हो।
अयोध्या से लौटने के बाद मैंने पहला निर्णय लिया है कि… pic.twitter.com/GAzFYP1bjV
ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ. ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣ ಕಾರ್ಮಿಕರಿಗೆ ಪುಷ್ಪವೃಷ್ಟಿ ಮಾಡಿದ ಪ್ರಧಾನಿ ಮೋದಿ
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ (Ram Mandir) ನಿರ್ಮಾಣ ತಂಡದ ಭಾಗವಾಗಿದ್ದ ಕಾರ್ಮಿಕರ ಮೇಲೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪುಷ್ಪ ವೃಷ್ಟಿ ಮಾಡಿದರು. ಆ ಬಳಿಕ ಅವರು ರಾಮ ಮಂದಿರದ ಆವರಣದಲ್ಲಿರುವ ಜಟಾಯು ವಿಗ್ರಹದ ಮೇಲೆ ಪ್ರಧಾನಿ ಹೂವುಗಳನ್ನು ಸಿಂಪಡಿಸಿದರು ಮತ್ತು ಅಯೋಧ್ಯೆ ಧಾಮದಲ್ಲಿ ಶಿವನಿಗೆ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಯೋಧ್ಯೆಯ ರಾಮ ದೇವಾಲಯದ ಆವರಣದಲ್ಲಿರುವ ಕುಬೇರ ತಿಲಾಕ್ಕೆ ಭೇಟಿ ನೀಡಿ ಅಲ್ಲಿ ಶಿವನಿಗೆ ಪೂಜೆ ಸಲ್ಲಿಸಿದರು.
ಪ್ರಧಾನಿ ‘ಜಲಾಭಿಷೇಕ’ ಮಾಡಿದರು ಮತ್ತು ದೇವಾಲಯದ ಪ್ರದಕ್ಷಿಣೆ ಮಾಡಿದರು. ರಾಮ ಜನ್ಮಭೂಮಿ ಸಂಕೀರ್ಣದಲ್ಲಿರುವ ಕುಬೇರ ತಿಲಾ ಮೇಲಿರುವ ಪ್ರಾಚೀನ ಶಿವ ದೇವಾಲಯವನ್ನು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನವೀಕರಿಸುತ್ತಿದೆ.
ಈ ಸುದ್ದಿಯನ್ನೂ ಓದಿ: Ram Mandir: ಭಕ್ತನಿಗೆ ಹಾರ್ಟ್ ಅಟ್ಯಾಕ್, ಜೀವ ಉಳಿಸಿದ ವಾಯುಪಡೆಯ ಮೊಬೈಲ್ ಹಾಸ್ಪಿಟಲ್!