PM Modi Birthday | ಗುಜರಾತ್‌ನಿಂದ ದಿಲ್ಲಿಯ ತನಕ, ಪ್ರಧಾನ ಸೇವಕರ ಜೈತ್ರಯಾತ್ರೆ, ಅಮೋಘ ಚರಿತ್ರೆ - Vistara News

ದೇಶ

PM Modi Birthday | ಗುಜರಾತ್‌ನಿಂದ ದಿಲ್ಲಿಯ ತನಕ, ಪ್ರಧಾನ ಸೇವಕರ ಜೈತ್ರಯಾತ್ರೆ, ಅಮೋಘ ಚರಿತ್ರೆ

ಕಳೆದ 21 ವರ್ಷಗಳಿಂದ ಅವರು ಸರ್ಕಾರಗಳ ಮುಖ್ಯಸ್ಥರಾಗಿ, ಒಂದು ದಿನವೂ ರಜೆಯನ್ನು ತೆಗೆದುಕೊಳ್ಳದೆ ಜನಸೇವೆಯೇ ಜನಾರ್ದನನ ಸೇವೆ ಎಂದು ಶ್ರಮಿಸುತ್ತಿದ್ದಾರೆ. ಈ ಜೈತ್ರಯಾತ್ರೆ ದೇಶದ ರಾಜಕೀಯ, ಸಾಮಾಜಿಕ, ಆರ್ಥಿಕ, ಆಡಳಿತಾತ್ಮಕ ವಲಯಗಳಲ್ಲಿ ಹೊಸ ಮನ್ವಂತರವನ್ನು (PM Modi birthday) ಸೃಷ್ಟಿಸಿದೆ.

VISTARANEWS.COM


on

PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ರಾಜಕೀಯ ಮತ್ತು ಸರ್ಕಾರಗಳ ಇತಿಹಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರವರ್ಧಮಾನ ಮಹತ್ವಪೂರ್ಣ. ಇದನ್ನು ಮೋದಿ ಪೂರ್ವ ಯುಗ ಮತ್ತು ನಂತರದ ಯುಗ ಎಂದು (PM Modi Birthday) ವರ್ಗೀಕರಿಸಬಹುದು.

ನರೇಂದ್ರ ಮೋದಿಯವರು 2001ರಲ್ಲಿ ಗುಜರಾತ್‌ನ ಮುಖ್ಯಮಂತ್ರಿಯಾದರು. ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ರಾಜ್ಯದಲ್ಲಿ ಸುದೀರ್ಘಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಸೇವೆ ಸಲ್ಲಿಸಿದರು. ಭೂಕಂಪ, ರಾಜಕೀಯ ವಿಪ್ಲವಗಳು, ಕೋಮುಗಲಭೆಗಳಿಂದ ತತ್ತರಿಸಿದ್ದ ಗುಜರಾತ್‌ನಲ್ಲಿ ಅಭಿವೃದ್ಧಿಯ ಹೊಸ ಶಕೆಯನ್ನು ಆರಂಭಿಸಿದರು. ಗುಜರಾತ್‌ನಲ್ಲಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳು ದೇಶದ ಗಮನ ಸೆಳೆಯಿತು. ಅಲ್ಲಿ ಗಳಿಸಿದ ಅದ್ವಿತೀಯ ಯಶಸ್ಸು ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ಬೆಳಗಲು ಹಾದಿಯನ್ನು ಸುಗಮಗೊಳಿಸಿತು. 2014ರಲ್ಲಿ ಪ್ರಧಾನಿಯಾದರು. 2019ರಲ್ಲಿ ಹಿಂದಿಗಿಂತಲೂ ಹೆಚ್ಚಿನ ಬಹುಮತವನ್ನು ಗಳಿಸಿ ಮತ್ತೊಮ್ಮೆ ಪ್ರಧಾನಿಯಾದರು. ಎರಡನೇ ಅವಧಿಯಲ್ಲೂ ಅಷ್ಟೇ, ಮೋದಿಯವರ ಜನಪ್ರಿಯತೆಯನ್ನು ಗಮನಿಸಿದರೆ, 2024ರಲ್ಲಿ ಹ್ಯಾಟ್ರಿಕ್‌ ಸಾಧಿಸಿದರೆ ಆಶ್ಚರ್ಯವಿಲ್ಲ. ಒಂದು ವೇಳೆ ಮೂರನೇ ಸಲ ಆಯ್ಕೆಯಾದರೆ, ನೆಹರೂ ನಂತರ ಸುದೀರ್ಘ ಕಾಲ ದೇಶದ ಪ್ರಧಾನಿಯಾದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ. ನೆಹರೂ 16 ವರ್ಷಗಳ ಕಾಲ ಪ್ರಧಾನಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ, ಜನರಿಂದಲೇ ಸತತವಾಗಿ ಚುನಾಯಿತರಾದ ಜನ ನಾಯಕ. ವಿಧಾನ ಪರಿಷತ್ತು ಅಥವಾ ರಾಜ್ಯಸಭೆಯ ಹಿಂಬಾಗಿಲಿನ ಮೂಲಕ ಅಧಿಕಾರ ರಾಜಕಾರಣದ ಪಡಸಾಲೆಗೆ ಬಂದವರಲ್ಲ. ಕಳೆದ 21 ವರ್ಷಗಳಿಂದ ಅವರು ಸರ್ಕಾರಗಳ ಮುಖ್ಯಸ್ಥರಾಗಿ, ಒಂದು ದಿನವೂ ರಜೆಯನ್ನು ತೆಗೆದುಕೊಳ್ಳದೆ ಜನಸೇವೆಯೇ ಜನಾರ್ಧನನ ಸೇವೆ ಎಂದು ಶ್ರಮಿಸುತ್ತಿದ್ದಾರೆ. ಈ ಜೈತ್ರಯಾತ್ರೆ ದೇಶದ ರಾಜಕೀಯ, ಸಾಮಾಜಿಕ, ಆರ್ಥಿಕ, ಆಡಳಿತಾತ್ಮಕ ವಲಯಗಳಲ್ಲಿ ಹೊಸ ಮನ್ವಂತರವನ್ನು ಸೃಷ್ಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ಈಗ ಜಗತ್ತಿನ ಪ್ರಮುಖ ನಾಯಕರಲ್ಲೊಬ್ಬರಾಗಿ, ಗೌರವಾದರಗಳಿಗೆ ಪಾತ್ರರಾಗಿದ್ದಾರೆ. ಇಡೀ ವಿಶ್ವ ಅವರನ್ನು ಬೆರಗಿನಿಂದ ನೋಡುತ್ತಿದೆ. ಕೋವಿಡ್-‌19 ಬಿಕ್ಕಟ್ಟಿನ ಸಂದರ್ಭವಂತೂ 138 ಕೋಟಿ ಜನಸಂಖ್ಯೆಯ ಭಾರತ ತನ್ನ ಸೀಮಿತ ಸಂಪನ್ಮೂಲವನ್ನು ಬಳಸಿಕೊಂಡು ಹೇಗೆ ಬಚಾವಾಗಲಿದೆ ಎಂದು ಜಗತ್ತು ಆತಂಕದಿಂದ ನೋಡುತ್ತಿತ್ತು. ಆದರೆ ಅಭೂತಪೂರ್ವ ಜನ ಬೆಂಬಲದೊಂದಿಗೆ ನರೇಂದ್ರ ಮೋದಿಯವರು ಶತಮಾನಕ್ಕೊಮ್ಮೆ ಸಂಭವಿಸುವ ಮಹಾ ಬಿಕ್ಕಟ್ಟನ್ನು ಜಗತ್ತೇ ಅಚ್ಚರಿಪಡುವಂತೆ ನಿಭಾಯಿಸಿದರು. ಭಾರತದಲ್ಲಿ ನಡೆದ ವಿಶ್ವದ ಅತಿ ದೊಡ್ಡ ಲಸಿಕೆ ವಿತರಣೆ ಕಾರ್ಯಕ್ರಮ, ಕೋವಿಡ್-‌19 ಬಿಕ್ಕಟ್ಟಿನ ಬಳಿಕದ ಪರಿಹಾರ ಕಾರ್ಯಾಚರಣೆಗಳು ಐತಿಹಾಸಿಕ.

ಗುಜರಾತ್‌ ಅಭಿವೃದ್ಧಿಯ ಮಾದರಿಯ ರೂವಾರಿ

gujarat-cm-modi

ಗುಜರಾತ್‌ನಲ್ಲಿ ಸಾಮಾನ್ಯ ಕುಟುಂಬವೊಂದರಲ್ಲಿ ಜನಿಸಿದ ನರೇಂದ್ರ ಮೋದಿಯವರ ಬಾಲ್ಯ, ಹೋರಾಟದ ಬದುಕು, ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಾಟ, ಆರೆಸ್ಸೆಸ್‌ ಪ್ರಚಾರಕರಾಗಿ ಸೇವೆ, ಬಳಿಕ ಬಿಜೆಪಿಯ ಕಾರ್ಯಕರ್ತನಾಗಿ, ನಂತರ ಪಕ್ಷದಲ್ಲಿ ಒಂದೊಂದೇ ಮೆಟ್ಟಿಲನ್ನೇರಿದ ಯಶೋಗಾಥೆ ಜನಜನಿತ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದ ಕುಟುಂಬವೊಂದರಲ್ಲಿ, ವಂಶ ಪಾರಂಪರ್ಯ ರಾಜಕಾರಣವಾಗಲಿ, ಧನ ಬಲವಾಗಲಿ ಅವರಿಗೆ ಇರಲಿಲ್ಲ. 2001ಕ್ಕೆ ಮೊದಲು ಶಾಸಕರಾಗಿಯೂ ಅನುಭವ ಇದ್ದಿರಲಿಲ್ಲ. ಆರೆಸ್ಸೆಸ್‌ನಲ್ಲಿ ಪರಿವ್ರಾಜಕರಂತೆ ಸೇವೆ ಸಲ್ಲಿಸುತ್ತಿದ್ದ ಮೋದಿ, ಬಳಿಕ ಬಿಜೆಪಿಗೆ ಬಂದರು.

ಕಳೆದ 21 ವರ್ಷಗಳಲ್ಲಿ ನರೇಂದ್ರ ಮೋದಿಯವರು 5 ಸಲ ಚುನಾವಣೆಗಳನ್ನು ಎದುರಿಸಿದ್ದಾರೆ. ಗುಜರಾತ್‌ನಲ್ಲಿ 2002, ೨೦೦೭ ಮತ್ತು 2012ರಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದರು. ಬಳಿಕ 2014 ಮತ್ತು 2019ರ ಲೋಕಸಭೆ ಚುನಾವಣೆಯನ್ನು ಗೆದ್ದುಕೊಂಡರು. ಪ್ರಧಾನಿಯಾಗಿ ಮೋದಿ ಆಯ್ಕೆಯಾಗುವುದಕ್ಕೆ ಮುನ್ನ ಮೂರು ದಶಕಗಳ ಕಾಲ ಒಂದೇ ಪಕ್ಷ ಬಹುಮತ ಗಳಿಸಿ ಸರ್ಕಾರ ನಡೆಸಿದ್ದಿರಲಿಲ್ಲ. ಸುದೀರ್ಘ ಮೈತ್ರಿಕೂಟ ಸರ್ಕಾರಗಳ ಹಗ್ಗ ಜಗ್ಗಾಟಗಳ ಜಂಜಾಟವನ್ನು ರಾಷ್ಟ್ರ ಕಂಡಿತ್ತು. ಜನತೆಗೆ ರಾಜಕಾರಣ ಎಂದರೆ ರೋಸಿ ಹೋಗುವಷ್ಟು ನಿರಾಸೆಯಾಗಿತ್ತು. 90ರ ದಶಕದಲ್ಲಂತೂ ಪ್ರತಿ ವರ್ಷ ಲೋಕಸಭೆ ಚುನಾವಣೆ ನಡೆಯುತ್ತಿದೆಯೇನೊ ಎಂಬಷ್ಟರ ಮಟ್ಟಿಗೆ ಅಸ್ಥಿರತೆ ಇತ್ತು.

ಮೋದಿಯವರು ಎಂದೂ ತಮ್ಮನ್ನು ಹಿಂದುಳಿದ ಜಾತಿ, ವರ್ಗದಿಂದ ಬಂದವನೆಂದು ಹೇಳಿಕೊಂಡವರಲ್ಲ. ಅಂಥ ಯಾವುದೇ ಅನುಕಂಪವನ್ನು ಗಿಟ್ಟಿಸಿಕೊಂಡು ರಾಜಕೀಯ ಮಾಡುವ ಜಾಯಮಾನ ಅವರದ್ದಾಗಿರಲಿಲ್ಲ. ಬದಲಿಗೆ ಉತ್ತಮ ಆಡಳಿತ ನೀಡುವ ಮೂಲಕ, ಅನೇಕ ಅಭಿವೃದ್ಧಿಯ ಯೋಜನೆಗಳ ಮೂಲಕ ಸಮಾಜದ ಎಲ್ಲ ವರ್ಗ, ಮತ ಪಂಥ ಮತ್ತು ಭೌಗೋಳಿಕ ಗಡಿಗಳನ್ನು ಮೀರಿ ಜನಪ್ರಿಯರಾದರು.

ಕೇಶುಭಾಯಿ ಪಟೇಲರ ಉತ್ತರಾಧಿಕಾರಿಯಾಗಿ ಆಯ್ಕೆ

ಗುಜರಾತ್‌ ರಾಜಕಾರಣವನ್ನು ಅವಲೋಕಿಸಿದರೆ, 1995ರಲ್ಲಿ ಬಿಜೆಪಿಯ ಜನಪ್ರಿಯ ಮತ್ತು ಹಿರಿಯ ನಾಯಕ ಕೇಶುಭಾಯ್‌ ಪಟೇಲ್‌ ಮುಖ್ಯಮಂತ್ರಿಯಾಗಿದ್ದರು. 1998-2001ರ ತನಕ ಮತ್ತೊಮ್ಮೆ ಅವರೇ ಸಿಎಂ ಆಗಿದ್ದರು. ಅವರ ಉತ್ತರಾಧಿಕಾರಿಯಾಗಿ ರಾಜ್ಯದ ಮುಖ್ಯಮಂತ್ರಿಯಾದವರೇ ನರೇಂದ್ರ ಮೋದಿ. ಕೇಶುಭಾಯಿ ಪಟೇಲ್‌ ಅವರಿಗೆ ರಾಜಕೀಯ ಅಸ್ಥಿರತೆ, ಶಂಕರ್‌ ಸಿಂಘ್‌ ವಘೇಲರ ಬಂಡಾಯದ ಪರಿಣಾಮ ಒಂದು ಕಡೆ ಸವಾಲುಗಳು ಎದುರಾಗಿತ್ತು. ಮತ್ತೊಂದು ಕಡೆ 2001ರಲ್ಲಿ ಗುಜರಾತ್‌ನ ಭುಜ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪ ರಾಜಕೀಯದ ಚಿತ್ರಣವನ್ನೇ ಬದಲಿಸಿತು. ದುರ್ಬಲ ಆಡಳಿತ ಕೇಶುಭಾಯಿ ಪಟೇಲರ ರಾಜಕೀಯ ಜೀವನವನ್ನೂ ಕ್ಷೀಣಿಸಿತು. ಆಗ ಪ್ರಧಾನಿಯಾಗಿದ್ದ ವಾಜಪೇಯಿ ಅವರು ಗುಜರಾತ್‌ನಲ್ಲಿ ಪಕ್ಷದ ವರ್ಚಸ್ಸು ವೃದ್ಧಿಸಲು ಹೊಸ ನಾಯಕತ್ವದ ಹುಡುಕಾಟ ನಡೆಸಿದರು. ಈ ಅನ್ವೇಷಣೆಯಲ್ಲಿ ಸಿಕ್ಕಿದ ಉತ್ತರ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ನರೇಂದ್ರ ಮೋದಿ! ಪ್ರಧಾನಿ ವಾಜಪೇಯಿ ಅವರ ಬುಲಾವ್‌ ಮೇರೆಗೆ ಅವರ ನಿವಾಸಕ್ಕೆ ತೆರಳಿದ ಮೋದಿಯವರಿಗೆ ಅಚ್ಚರಿ ಕಾದಿತ್ತು. ದಿಲ್ಲಿಯಿಂದ ಗುಜರಾತ್‌ಗೆ ತೆರಳಿ ಮುಖ್ಯಮಂತ್ರಿಯಾಗುವಂತೆ ವಾಜಪೇಯಿ ಸೂಚಿಸಿದ್ದರು. ಆದರೆ ಆಗಲೇ ಪಕ್ಷದ ಸಂಘಟನಾ ಕೌಶಲದಲ್ಲಿ ತಮ್ಮ ಛಾಪು ಮೂಡಿಸಿದ್ದ ಮೋದಿಯವರು ಸರ್ಕಾರವನ್ನೂ ನಡೆಸಬಲ್ಲರು ಎಂಬ ನಂಬಿಕೆ ವಾಜಪೇಯಿ ಅವರಲ್ಲಿತ್ತು. ಕೇಶುಭಾಯಿ ಪಟೇಲ್‌ ಅವರನ್ನು ತಮ್ಮ ರಾಜಕೀಯ ಗುರು ಎಂದು ಮೋದಿ ಹೇಳಿಕೊಂಡಿದ್ದಾರೆ. 2002ರ ಬಳಿಕ ಪಟೇಲ್‌ ಬಿಜೆಪಿಯಿಂದ ನಿರ್ಗಮಿಸಿದರು. ತಮ್ಮದೇ ಪಕ್ಷ ಕಟ್ಟಿದರು. ಕೊನೆಗೆ ಮತ್ತೆ ಬಿಜೆಪಿ ಜತೆ ವಿಲೀನಗೊಳಿಸಿದರು. 2020ರಲ್ಲಿ ಕೇಶುಭಾಯಿ ಪಟೇಲ್‌ ನಿಧನರಾದರು.

ಗುಜರಾತ್‌ ಭೂಕಂಪದ ನಿರ್ವಹಣೆ

ಗುಜರಾತ್‌ನಲ್ಲಿ 2001ರ ಜನವರಿ 26ರ ಗಣರಾಜ್ಯೋತ್ಸವದಂದು ಸಂಭವಿಸಿದ ಭೀಕರ ಭೂಕಂಪದಲ್ಲಿ 13 ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು. ಲಕ್ಷಾಂತರ ಮಂದಿ ಗಾಯಗೊಂಡಿದ್ದರು. ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ ಸಂಭವಿಸಿದ ಭೂಕಂಪದ ಬಳಿಕ ಪರಿಹಾರ, ಪುನರ್ವಸತಿ ಕಾರ್ಯಾಚರಣೆಯ ಜವಾಬ್ದಾರಿ ನರೇಂದ್ರ ಮೋದಿಯವರಿಗಿತ್ತು. ನಂತರದ ವರ್ಷಗಳಲ್ಲಿ ಕಛ್‌ ವಲಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಯಿತು.

ಗೋಧ್ರಾ ಹಿಂಸಾಚಾರ

death penalty for 11 Godhra Train Burning Convicts, Gujarat plead to Supreme Court

ಗುಜರಾತ್‌ ಸಿಎಂ ಆಗಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ ಆರಂಭಿಕ ವರ್ಷಗಳು ಕಲ್ಲು ಮುಳ್ಳಿನ ದುರ್ಗಮ ಹಾದಿಯಾಗಿತ್ತು. ಭೀಕರ ಭೂಕಂಪನದಿಂದ ರಾಜ್ಯ ತತ್ತರಿಸಿತ್ತು. ಲಕ್ಷಾಂತರ ನಿರಾಶ್ರಿತರ ಪುನರ್ವಸತಿಯ ಬೃಹತ್‌ ಸವಾಲು ಎದುರಿತ್ತು. ದುರದೃಷ್ಟವಶಾತ್‌ ೨೦೦೨ರ ಫೆಬ್ರವರಿ-ಮಾರ್ಚ್‌ ಅವಧಿಯಲ್ಲಿ ಗೋಧ್ರಾದಲ್ಲಿ ನಡೆದ ಘೋರ ನರಮೇಧ, ನಂತರ ಇಡೀ ರಾಜ್ಯವನ್ನು ಪ್ರಕ್ಷುಬ್ಧವಾಗಿಸಿದ ಕೋಮು ಗಲಭೆ, ನರೇಂದ್ರ ಮೋದಿಯವರಿಗೆ ಅಗ್ನಿ ಪರೀಕ್ಷೆಯಾಗಿತ್ತು. ಇದೇ ಸಂದರ್ಭ ಮೋದಿ ವಿರೋಧಿಗಳ ಗ್ಯಾಂಗ್‌ ಅವರ ವಿರುದ್ಧ ನಿರಂತರ ಷಡ್ಯಂತ್ರಗಳನ್ನು ನಡೆಸಿತು. ಮೋದಿಯವರೇ ಈ ಎಲ್ಲ ಗಲಭೆಗಳ ಸೂತ್ರಧಾರ ಎಂದು ಬಿಂಬಿಸಿತು. ಇಪ್ಪತ್ತು ವರ್ಷಗಳ ಕಾಲ ಈ ಗ್ಯಾಂಗ್‌ ಮೋದಿ ವಿರುದ್ಧ ಮಸಲತ್ತು ನಡೆಸಿದರೂ, ಅಂತಿಮವಾಗಿ ಸುಪ್ರೀಂಕೋರ್ಟ್‌, ಮೋದಿಯವರಿಗೆ ಕ್ಲೀನ್‌ ಚಿಟ್‌ ನೀಡಿತು. ಗೋಧ್ರಾ ಗಲಭೆಯಲ್ಲಿ ಮೋದಿಯವರದ್ದು ಯಾವುದೇ ತಪ್ಪಿಲ್ಲ ಎಂದ ಸುಪ್ರೀಂಕೋರ್ಟ್‌, ಮೋದಿ ವಿರುದ್ಧ ನಡೆದ 16 ವರ್ಷಗಳ ಷಡ್ಯಂತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಹಾಗೂ ತಪ್ಪಿತಸ್ಥರನ್ನು ಕಟಕಟೆಗೆ ತಂದು ನಿಲ್ಲಿಸಬೇಕು ಎಂದೂ ಆದೇಶಿಸಿತು. ಹೀಗಾಗಿ ಇದು ಐತಿಹಾಸಿಕ ಮಹತ್ವದ ತೀರ್ಪುಗಳಲ್ಲೊಂದು.

ವಿಶೇಷ ತನಿಖಾ ದಳ (ಎಸ್‌ಐಟಿ) 2012ರಲ್ಲೇ ಗಲಭೆಯಲ್ಲಿ ಮೋದಿಯವರ ಪಾತ್ರ ಇಲ್ಲ ಎಂದು ವರದಿ ನೀಡಿದ್ದರೂ, ಮೋದಿ ವಿರೋಧಿಗಳ ಸಂಚು ಮುಂದುವರಿದಿತ್ತು. ಈ ನಡುವೆ ಕಾಂಗ್ರೆಸ್‌, ಬಿಸ್ಪಿ, ಎಸ್ಪಿ ಸೇರಿದಂತೆ ಬಹುತೇಕ ಪ್ರತಿಪಕ್ಷಗಳ ನಾಯಕರು ರಾಜಕೀಯ ಲಾಭಕ್ಕಾಗಿ ಮೋದಿಯವರನ್ನು ಮನಬಂದಂತೆ ನಿಂದಿಸಿದರು. ಅವಾಚ್ಯ ಶಬ್ದಗಳಿಂದ ತೆಗಳಿದರು. ಸೋನಿಯಾ ಗಾಂಧಿಯವರಂತೂ ಮೌತ್‌ ಕಾ ಸೌದಾಗರ್‌ (ಸಾವಿನ ವ್ಯಾಪಾರಿ) ಎಂದು ಜರಿದಿದ್ದರು. ಆದರೆ ಸುಪ್ರೀಂಕೋರ್ಟ್‌ ಮೋದಿಯವರಿಗೆ ಕ್ಲೀನ್‌ ಚಿಟ್‌ ನೀಡಿದ ಬಳಿಕ ಈ ಎಲ್ಲ ಪ್ರತಿಪಕ್ಷಗಳು ಮೌನಕ್ಕೆ ಜಾರಿದವು.

ಮೋದಿಯವರು ಗೋಧ್ರಾ ಹಿಂಸಾಚಾರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಕಳಂಕಮುಕ್ತರಾದ ಬೆನ್ನಲ್ಲೇ, ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಿ, ಷಡ್ಯಂತ್ರ ನಡೆಸಿದ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್‌, ಮಾಜಿ ಹಿರಿಯ ಐಪಿಎಸ್‌ ಅಧಿಕಾರಿ ಶ್ರೀಕುಮಾರ್‌ ಅವರನ್ನು ಬಂಧಿಸಲಾಯಿತು. ಸಾಕ್ಷ್ಯಗಳನ್ನು ತಿರುಚಿರುವುದು, ಫೋರ್ಜರಿ, ಕ್ರಿಮಿನಲ್‌ ಸಂಚು ನಡೆಸಿದ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಮತ್ತೊಬ್ಬ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಈಗಾಗಲೇ ಮತ್ತೊಂದು ಕೇಸ್‌ನಲ್ಲಿ ಜೈಲಿನಲ್ಲಿದ್ದಾರೆ. ಈ ಮೂವರೂ, ಗೋಧ್ರಾ ಹಿಂಸಾಚಾರಕ್ಕೆ ಸಂಬಂಧಿಸಿ ಮೋದಿ ವಿರುದ್ಧ ಕ್ರಿಮಿನಲ್‌ ಸಂಚು ನಡೆಸಿದ ಆರೋಪಿಗಳಾಗಿದ್ದಾರೆ. ತೀಸ್ತಾ ಸೆತಲ್ವಾಡ್‌ ಜಾಮೀನಿನ ಮೇರೆಗೆ ಜೈಲಿನಿಂದ ಬಿಡುಗಡೆ ಆಗಿದ್ದರೂ, ವಿಚಾರಣೆ ಎದುರಿಸಬೇಕಾಗಿದೆ. ಗಮನಿಸಿ, ಮೋದಿ ವಿರುದ್ಧದ ಈ ಸಂಚು ಎಷ್ಟು ಕ್ರೂರವಾಗಿತ್ತು ಎಂದರೆ, ಇಂಥ ಕೇಸ್‌ಗಳಲ್ಲಿ ತಪ್ಪಿತಸ್ಥರಿಗೆ ಮರಣದಂಡನೆಯನ್ನು ಕೋರ್ಟ್‌ ವಿಧಿಸಬಹುದು.

9 ಗಂಟೆಗಳ ಸುದೀರ್ಘ ಎಸ್‌ಐಟಿ ವಿಚಾರಣೆ ಎದುರಿಸಿದ್ದರು ಮೋದಿ

ಗುಜರಾತ್‌ ಸಿಎಂ ಆಗಿದ್ದಾಗ ನರೇಂದ್ರ ಮೋದಿಯವರು ಸುಪ್ರೀಂಕೋರ್ಟ್‌ ನಿಯೋಜಿತ ವಿಶೇಷ ತನಿಖಾ ದಳದ ಎದುರು (ಎಸ್‌ಐಟಿ) ಎರಡು ಹಂತಗಳಲ್ಲಿ ನಿರಂತರ 9 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದರು. ಗೋಧ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದ 63 ಆರೋಪಿಗಳಲ್ಲಿ ಮೋದಿ ಒಬ್ಬರಾಗಿದ್ದರು. ಅಹಮದಾಬಾದ್‌ನ ಗುಲ್ಬರ್ಗ್‌ ಸೊಸೈಟಿ ನರಮೇಧದಲ್ಲಿ ಹತ್ಯೆಗೀಡಾಗಿದ್ದ ಕಾಂಗ್ರೆಸ್‌ ಸಂಸದ ಇಸಾನ್‌ ಜಾಫ್ರಿ ಅವರ ಪತ್ನಿ ಜಕಿಯಾ ಜಾಫ್ರಿ ಈ ಕೇಸ್‌ ದಾಖಲಿಸಿದ್ದರು. ಇದಕ್ಕೆ ತೀಸ್ತಾ ಸೆತಲ್ವಾಡ್‌ ಮತ್ತು ಅವರ ಪಡೆಯ ಬೆಂಬಲ ಇತ್ತು. ಆದರೆ ತಮ್ಮದಲ್ಲದ ತಪ್ಪಿಗೆ ನಾನಾ ಪಡಿಪಾಟಲನ್ನು ಆಗಿನ ಗುಜರಾತ್ ಸಿಎಂ ಮೋದಿ ಎದುರಿಸಬೇಕಾಯಿತು. ಹೀಗಿದ್ದರೂ, ಮೋದಿಯವರು ಧೃತಿಗೆಟ್ಟಿರಲಿಲ್ಲ. ಈ ನೆಲದ ಕಾನೂನನ್ನು ನಾನು ಗೌರವಿಸುತ್ತೇನೆ ಎಂದು ಶಾಂತಚಿತ್ತರಾಗಿ ಪ್ರತಿಕ್ರಿಯಿಸಿದ್ದರು.

ನರ್ಮದಾ ಅಣೆಕಟ್ಟೆ ಯೋಜನೆ ಪೂರ್ಣಗೊಳಿಸಿದ ಸಾಹಸ

narmada dam

ಗುಜರಾತ್‌ನ ಅಭಿವೃದ್ಧಿಗೆ ಸಂಬಂಧಿಸಿ ಮೋದಿಯವರ ಯೋಜನೆಗಳು ಹಲವು. ಅವುಗಳ ಪೈಕಿ ನರ್ಮದಾ ಅಣೆಕಟ್ಟೆ ಯೋಜನೆಯನ್ನು ಪೂರ್ಣಗೊಳಿಸಿರುವುದೂ ಒಂದು. ದಕ್ಷಿಣ ಗುಜರಾತ್‌ನಿಂದ ಸೌರಾಷ್ಟ್ರಕ್ಕೆ ನರ್ಮದೆಯ ನೀರನ್ನು ತಂದು ನೀರಾವರಿ ಕಲ್ಪಿಸುವ ಯೋಜನೆಯ ವಿರುದ್ಧ ಮೇಧಾ ಪಾಟ್ಕರ್‌ ಮತ್ತಿತರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಆದರೆ ಸರ್ದಾರ್‌ ಸರೋವರ್‌ ಯೋಜನೆ ಇವತ್ತು 18.45 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ವ್ಯವಸ್ಥೆ ನೀಡಿದೆ. 9,490 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಿದೆ. ಪ್ರವಾಹದಿಂದ ರಕ್ಷಣೆ ಕೊಟ್ಟಿದೆ. ಕೃಷಿ ಉತ್ಪಾದನೆಯ ಹೆಚ್ಚಳಕ್ಕೆ ಪುಷ್ಟಿ ನೀಡಿದೆ. ಮೋದಿಯವರು ಗುಜರಾತ್‌ ಸಿಎಂ ಆಗಿದ್ದ ಅವಧಿಯಲ್ಲಿ ಎಂಟು ವರ್ಷಗಳ ಕಾಲ ರಾಜ್ಯ ಎರಡಂಕಿಯ ಆರ್ಥಿಕ ಬೆಳವಣಿಗೆ ದಾಖಲಿಸಿ ದೇಶದ ಗಮನ ಸೆಳೆದಿತ್ತು. ತ್ವರಿತ ಅಭಿವೃದ್ಧಿಗೆ ಗುಜರಾತ್‌ ಮಾದರಿಯಾಗಿತ್ತು.

ಪ್ರಧಾನ ಸೇವಕನಾಗಿ ಮೋದಿಯವರ ಜೈತ್ರಯಾತ್ರೆ

ಪ್ರಧಾನಿ ನರೇಂದ್ರ ಮೋದಿಯವರ ಅಭೂತಪೂರ್ವ ಯಶಸ್ಸು, ಜನಪ್ರಿಯತೆಗೆ ಅವರೇ ವಿವರಿಸಬೇಕಿಲ್ಲ. 2014 ಮತ್ತು 2019ರ ಲೋಕಸಭೆ ಚುನಾವಣೆಯ ಫಲಿತಾಂಶದ ಅಂಕಿ ಅಂಶಗಳೇ ಸಾಕು.

ಇದನ್ನೂ ಓದಿ: PM Modi Birthday: ಸೇವೆಯಿಂದ ಅಭಿವೃದ್ಧಿವರೆಗೆ; ದೇಶಾದ್ಯಂತ ನಾಳೆ ಮೋದಿ ಜನ್ಮದಿನ ಭರ್ಜರಿ ಆಚರಣೆ

2014ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿಯವರು ಮೂರು ದಶಕಗಳ ಸಮ್ಮಿಶ್ರ ಸರ್ಕಾರಗಳ ಜಂಜಾಟಕ್ಕೆ ತೆರೆ ಎಳೆದರು. 284 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಇತಿಹಾಸ ಸೃಷ್ಟಿಸಿತು. 31% ಮತಗಳು ಲಭಿಸಿದವು. 2019ರಲ್ಲಿ ಮೋದಿ ಸರ್ಕಾರ್‌ ಮತ್ತಷ್ಟು ಪ್ರಬಲವಾಗಿತ್ತು. 37.3 ಮತಗಳು ಮತ್ತು 303 ಕ್ಷೇತ್ರಗಳಲ್ಲಿ ಗೆಲುವಿನ ಫಲಿತಾಂಶ ಬಂದಿತು. ಇದರೊಂದಿಗೆ ಅತಿ ಹೆಚ್ಚು ಕಾಲ ಪ್ರಧಾನಿ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸೇತರ ರಾಜಕಾರಣಿಯೂ ಆದರು.

ಮೋದಿ ಯುಗದಲ್ಲಿ ಬೆಳಗಿದ ತಾವರೆ

inauguration of New parliament building and Check details

ಕಳೆದ 2014ರಿಂದೀಚೆಗೆ ಬಿಜೆಪಿ ಕೇಂದ್ರ ಮತ್ತು ರಾಜ್ಯಗಳ ಮಟ್ಟದಲ್ಲಿನ ಚುನಾವಣೆಗಳಲ್ಲಿ ಸೋತಿದ್ದು ಕಡಿಮೆ, ಗೆಲುವು ಸಾಧಿಸಿದ್ದೇ ಹೆಚ್ಚು. ಬಿಜೆಪಿಯ ಹಿಂದುತ್ವ ಮತ್ತು ಅಭಿವೃದ್ಧಿ ರಾಜಕಾರಣದ ಹಿಂದೆ ನರೇಂದ್ರ ಮೋದಿಯವರ ವರ್ಚಸ್ಸು ಕೆಲಸ ಮಾಡಿದೆ. ಸದಸ್ಯತ್ವದ ದೃಷ್ಟಿಯಿಂದ ಬಿಜೆಪಿ ವಿಶ್ವದ ದೊಡ್ಡ ಪಕ್ಷವೆಂದು ಹೇಳಿಕೊಂಡಿದೆ. ದೇಶದಲ್ಲಿ ಕಾಂಗ್ರೆಸ್‌ಗೆ ಪರ್ಯಾಯವೇ ಇಲ್ಲ ಎಂಬ ಮಾತು ಹಿಂದೊಮ್ಮೆ ಇತ್ತು ಎಂದರೆ ಮುಂದಿನ ಪೀಳಿಗೆಗೆ ನಂಬಲೂ ಕಷ್ಟವಾಗಬಹುದು ಎಂಬ ಸ್ಥಿತಿಗೆ ಕಾಂಗ್ರೆಸ್‌ ಈಗ ತಲುಪಿದೆ. ಪ್ರತಿಪಕ್ಷ ಮಾನ್ಯತೆ ಪಡೆಯಲೂ ಪರದಾಡುವ ಸ್ಥಿತಿ. ಬಿಜೆಪಿ ಈ ಪರಿಯಲ್ಲಿ ಕಾಂಗ್ರೆಸ್‌ ರಾಜಕಾರಣಕ್ಕೆ ಪರ್ಯಾಯವಾಗಿ ಬೆಳೆಯಲಿದೆ ಎಂದು ಎಂಟು ವರ್ಷಗಳ ಹಿಂದೆ ಯಾವೊಬ್ಬ ರಾಜಕೀಯ ಪಂಡಿತರೂ ಭವಿಷ್ಯ ನುಡಿದಿರಲಿಲ್ಲ.

ಹೀಗಿದ್ದರೂ, ಮೋದಿಯವರು ಮುಂದಿನ ಹಂತದ ನಾಯಕರನ್ನು ಬೆಳೆಸುತ್ತಿಲ್ಲವೇ ಎಂಬ ಪಿಸುಮಾತು ಇದೆ. ವಾಜಪೇಯಿ ಸುತ್ತಮುತ್ತ ಪ್ರಮೋದ್ ಮಹಾಜನ್‌, ಸ್ವತಃ ನರೇಂದ್ರ ಮೋದಿ, ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌, ಅನಂತ ಕುಮಾರ್‌, ವೆಂಕಯ್ಯ ನಾಯ್ಡು ಹೀಗೆ ಘಟಾನುಘಟಿಗಳ ಜನರೇಷನ್‌ ಸೃಷ್ಟಿಯಾಗಿತ್ತು. ಆದರೆ ಮೋದಿಯವರ ಸುತ್ತಮುತ್ತ ಮುಂದಿನ ಹಂತದ ನಾಯಕರು ಕಾಣಿಸುತ್ತಿಲ್ಲವಲ್ಲ ಎಂಬ ಯೋಚನೆ. ಆದರೆ ಪಕ್ಷದ ಕಾರ್ಯಕರ್ತರಲ್ಲಿ ಒಂದು ಅಚಲ ವಿಶ್ವಾಸ ಅಬಾಧಿತವಾಗಿದೆ- ಮೋದಿ ಹೈ ತೊ ಮುಮ್‌ಕಿನ್‌ ಹೈ (ಮೋದಿಯವರಿದ್ದರೆ ಎಲ್ಲವೂ ಸಾಧ್ಯ)

ಇದನ್ನೂ ಓದಿ: PM Modi Birthday: ದಿರಸಿನಿಂದಲೇ ಮೋಡಿ ಮಾಡುತ್ತಾರೆ ಮೋದಿ… ಇಲ್ಲಿವೆ ಅವರ ಸ್ಪೆಷಲ್‌ ಲುಕ್‌ಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Bomb Threat: ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನಲ್ಲಿ ಈ ಘಟನೆ ನಡೆದಿರುವುದು ಆತಂಕ ಹೆಚ್ಚಿಸಿದೆ.

VISTARANEWS.COM


on

Bomb Threat
Koo

ಗಾಂಧಿನಗರ: ಕೆಲವು ದಿನಗಳ ಹಿಂದೆ ದೆಹಲಿ- ಎನ್‌ಸಿಆರ್ (Delhi NCR) ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ (Schools) ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ (Bomb Threat) ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಗುಜರಾತ್‌ನ ಅಹಮದಾಬಾದ್‌ನ ಹಲವು ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಇ ಮೇಲ್‌ ಬೆದರಿಕೆ ಬಂದಿದೆ. ಹೀಗಾಗಿ ಪೊಲೀಸರು ತ್ವರಿತ ತಪಾಸಣೆಗೆ ಮುಂದಾಗಿದ್ದಾರೆ. ಶಾಲೆಗಳ ಆವರಣದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎನ್ನಲಾಗಿದೆ. ಅದಾಗ್ಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಕಳೆದ ವಾರ ದೆಹಲಿ-ಎನ್‌ಸಿಆರ್‌ನ ಶಾಲೆಗೆ ಬಂದ ಬಾಂಬ್ ಬೆದರಿಕೆಯ ಇ ಮೇಲ್‌ನ ಮೂಲವಾದ ರಷ್ಯಾದ ಡೊಮೇನ್ mail.ruನಿಂದಲೇ ಈ ಬೆದರಿಕೆಯನ್ನೂ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪೊಲೀಸ್ ಮತ್ತು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (Bomb Detection and Disposal Squad) ತಂಡಗಳು ಶಾಲೆಗಳಲ್ಲಿ ವ್ಯಾಪಕ ಶೋಧ ನಡೆಸಿವೆ. ಸದ್ಯ ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ.

ದೆಹಲಿ ಶಾಲೆಗಳಿಗೆ ಬೆದರಿಕೆ

ಮೇ 1ರಂದು ದೆಹಲಿ- ಎನ್‌ಸಿಆರ್ ಪ್ರದೇಶದ ಕನಿಷ್ಠ 12 ಪ್ರತಿಷ್ಠಿತ ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿತ್ತು. ಬಾಂಬ್ ಬೆದರಿಕೆ ಇ ಮೇಲ್ ಸ್ವೀಕರಿಸಿದ ಶಾಲೆಗಳೆಂದರೆ – ಚಾಣಕ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಸ್ಕೃತಿ ಶಾಲೆ, ಪೂರ್ವ ದೆಹಲಿಯ ಮಯೂರ್ ವಿಹಾರ್, ದ್ವಾರಕಾ ಜಿಲ್ಲೆಯ ಡಿಪಿಎಸ್ ಶಾಲೆ, ದಕ್ಷಿಣದ ಬಸಂತ್ ಕುಂಜ್ ಪ್ರದೇಶದಲ್ಲಿರುವ ಡಿಎವಿ ಶಾಲೆ, ಅಮಿಟಿ ಸ್ಕೂಲ್, ಸಾಕೇತ್, ನವದೆಹಲಿಯ ಸಂಸ್ಕೃತಿ ಶಾಲೆ ಮುಂತಾದವು. ಸಂಸ್ಕೃತಿಯು ದೆಹಲಿಯ ಅತ್ಯಂತ ಉನ್ನತ ಮಟ್ಟದ ಶಾಲೆಗಳಲ್ಲಿ ಒಂದು.

ಇದನ್ನೂ ಓದಿ: Bomb Threat: ದೆಹಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮಾಡಿದವ 16 ವರ್ಷದ ಪೋರ?

ಬಾಂಬ್‌ ದಾಳಿ ಕುರಿತ ಬೆದರಿಕೆ ಇ ಮೇಲ್‌ಗಳು ರವಾನೆಯಾಗುತ್ತಲೇ ಪೊಲೀಸರು ಎಚ್ಚೆತ್ತುಕೊಂಡರು. ಕೂಲಂಕಷ ತನಿಖೆ, ಪರಿಶೀಲನೆ ನಡೆಸಿದ ಪೊಲೀಸರು, ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿ ಪೋಷಕರು, ಶಾಲೆಗಳ ಆಡಳಿತ ಮಂಡಳಿಯು ನಿಟ್ಟುಸಿರು ಬಿಡುವಂತೆ ಮಾಡಿದ್ದರು.

Continue Reading

Lok Sabha Election 2024

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಲೋಕಸಭಾ ಚುನಾವಣೆ 2024ರ 3ನೇ ಹಂತದ ಮತದಾನ ಮೇ 7 ರಂದು ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಎಸ್‌ಪಿಯ ಅಖಿಲೇಶ್‌ ಯಾದವ್‌ ಪತ್ನಿ ಡಿಂಪಲ್ ಯಾದವ್, ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಎನ್‌ಸಿಪಿ ನಾಯಕ ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪ್ರಮುಖರ ಅದೃಷ್ಟ ಪರೀಕ್ಷೆ (Lok Sabha Election 2024) ನಡೆಯಲಿದೆ. ಈ ಕುರಿತ ಚಿತ್ರಣ ಇಲ್ಲಿದೆ.

VISTARANEWS.COM


on

By

Lok Sabha Elections-2024
Koo

ಲೋಕಸಭಾ ಚುನಾವಣೆ 2024ರ (Lok Sabha Election 2024) 3ನೇ ಹಂತದ (3rd phase) ಮತದಾನ (voting) ಮೇ 7ರಂದು 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 95 ಸ್ಥಾನಗಳಿಗೆ ನಡೆಯಲಿದೆ. ಈ ಬಾರಿ ಕಣದಲ್ಲಿರುವ ಹಲವು ಪ್ರಮುಖ ನಾಯಕರ ಅದೃಷ್ಟ ಪರೀಕ್ಷೆ ನಡೆಯಲಿದೆ.

ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಬಂಡಾಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ( KS Eshwarappa), ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), ಡಿಂಪಲ್ ಯಾದವ್ (Dimple Yadav), ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತು ಸುಪ್ರಿಯಾ ಸುಳೆ (Supriya Sule) ಸೇರಿದ್ದಾರೆ.


2024 ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಸ್ಪರ್ಧಿಸುವ ಪ್ರಮುಖ ಪಕ್ಷಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿವೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಅಮಿತ್ ಶಾ

ಕೇಂದ್ರ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅವರು ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗಾಂಧಿನಗರದಿಂದ ಎರಡನೇ ಬಾರಿಗೆ ಕಣಕ್ಕಿಳಿದಿರುವ ಅಮಿತ್ ಶಾ ಅವರಿಗೆ ಕಾಂಗ್ರೆಸ್‌ನ ಸೋನಾಲ್ ಪಟೇಲ್ ಸ್ಪರ್ಧೆ ನೀಡುತ್ತಿದ್ದಾರೆ. 1989ರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಅಜೇಯವಾಗಿದೆ. 2019ರ ಚುನಾವಣೆಯಲ್ಲಿ ಅಮಿತ್ ಶಾ ಅವರು 5.55 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಸಿ.ಜೆ. ಚಾವ್ಡಾ ಅವರನ್ನು ಸೋಲಿಸಿದ್ದರು.

ಡಿಂಪಲ್ ಯಾದವ್

ಎಸ್‌ಪಿ ಅಭ್ಯರ್ಥಿ ಡಿಂಪಲ್ ಯಾದವ್ ಅವರು 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ‘ಮೈನ್‌ಪುರಿ’ಯಿಂದ ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರ ಸಮಾಜವಾದಿ ಪಕ್ಷದ ಭದ್ರಕೋಟೆ. ಡಿಂಪಲ್‌ ಯಾದವ್‌ ಅವರು ಎಸ್ಪಿ ವರಿಷ್ಠ ನಾಯಕ ಅಖಿಲೇಶ್‌ ಯಾದವ್‌ ಅವರ ಪತ್ನಿ. 2022ರಲ್ಲಿ ಎಸ್‌ಪಿ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಮರಣದ ಅನಂತರ ಅವರ ಸೊಸೆ ಡಿಂಪಲ್ ಯಾದವ್ ಅವರು ಉಪಚುನಾವಣೆಯಲ್ಲಿ ಇಲ್ಲಿಂದ ಗೆದ್ದಿದ್ದರು. ಡಿಂಪಲ್ ಯಾದವ್ ಅವರು ಮೂರು ಬಾರಿ ಸಂಸದರಾಗಿದ್ದಾರೆ. ಇವರ ವಿರುದ್ಧ ಬಿಜೆಪಿ ಅಭ್ಯರ್ಥಿ ಜೈವೀರ್ ಸಿಂಗ್ ಕಣದಲ್ಲಿ ಇದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು 2024ರ ಲೋಕಸಭಾ ಚುನಾವಣೆಯ 3ನೇ ಹಂತದಲ್ಲಿ ಮೇ 7ರಂದು ನಡೆಯಲಿರುವ ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್‌ನ ರಾವ್ ಯದ್ವೇಂದ್ರ ಸಿಂಗ್ ಅವರ ವಿರುದ್ಧ ಕಣದಲ್ಲಿ ಇದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣ ಪಾಲ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಸೋಲಿಸಿದ್ದರು. ಆ ಬಳಿಕ ಸಿಂಧಿಯಾ ಬಿಜೆಪಿ ಸೇರಿ ಕೇಂದ್ರದಲ್ಲಿ ಸಚಿವರಾಗಿದ್ದಾರೆ.

ಶಿವರಾಜ್ ಸಿಂಗ್ ಚೌಹಾಣ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿ ವಿದಿಶಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮಧ್ಯಪ್ರದೇಶದಲ್ಲಿ ಬಹುಕಾಲ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ಅವರು ವಿದಿಶಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ವಿರುದ್ಧ ಶಿವರಾಜ್ ಸಿಂಗ್ ಚೌಹಾಣ್ ಸ್ಪರ್ಧಿಸುತ್ತಿದ್ದಾರೆ.

ಸುಪ್ರಿಯಾ ಸುಳೆ

ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಪವಾರ್‌ vs ಪವಾರ್‌ ಈ ಬಾರಿಯ ವಿಶೇಷ. ಬಿಜೆಪಿ ನೇತೃತ್ವದ ಎನ್‌ಡಿಎ ಸೇರಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಈಗ ಸುಪ್ರಿಯಾ ಸುಳೆ ವಿರುದ್ಧ ಸ್ಪರ್ಧಿಸಿದ್ದಾರೆ. ಹಾಗಾಗಿ ಫಲಿತಾಂಶ ಭಾರಿ ಕುತೂಹಲ ಮೂಡಿಸಿದೆ. ಹಾಲಿ ಸಂಸದೆ ಸುಪ್ರಿಯಾ ಸುಳೆ ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಗೆದ್ದಿದ್ದರು.

ಕರ್ನಾಟಕದಲ್ಲಿ ಬಿಜೆಪಿ ಹಿರಿಯ ನಾಯಕ ಕೆ ಎಸ್‌ ಈಶ್ವರಪ್ಪ ಅವರು ಈ ಬಾರಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕೆ ಇಳಿದಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿಸ ಸಂಸದ ಬಿ ವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ.

3ನೇ ಹಂತದ ಚುನಾವಣೆ ನಡೆಯಲಿರುವ ಕ್ಷೇತ್ರಗಳು

ಅಸ್ಸಾಂ: ಧುಬ್ರಿ, ಕೊಕ್ರಜಾರ್, ಬರ್ಪೇಟಾ, ಗೌಹಾಟಿ, ಬಿಹಾರದ ಝಂಜರ್ಪುರ್, ಸುಪೌಲ್, ಅರಾರಿಯಾ, ಮಾಧೆಪುರ, ಖಗಾರಿಯಾ

ಛತ್ತೀಸ್‌ಗಢ: ಸರ್ಗುಜಾ, ರಾಯ್‌ಗಢ, ಜಾಂಜ್‌ಗೀರ್-ಚಂಪಾ, ಕೊರ್ಬಾ, ಬಿಲಾಸ್‌ಪುರ್, ದುರ್ಗ್, ರಾಯ್‌ಪುರ್.

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು

ಗೋವಾ: ಉತ್ತರ ಗೋವಾ, ದಕ್ಷಿಣ ಗೋವಾ, ಗುಜರಾತ್ ನ ಕಚ್ಛ್, ಬನಸ್ಕಾಂತ, ಪಟಾನ್, ಮಹೇಶಾನಾ, ಸಬರ್ಕಾಂತ, ಗಾಂಧಿನಗರ, ಅಹಮದಾಬಾದ್ ಪೂರ್ವ, ಅಹಮದಾಬಾದ್ ಪಶ್ಚಿಮ, ಸುರೇಂದ್ರನಗರ, ರಾಜ್‌ಕೋಟ್, ಪೋರಬಂದರ್, ಜಾಮ್‌ನಗರ, ಜುನಾಗಢ, ಅಮ್ರೇಲಿ, ಭಾವನಗರ, ಆನಂದ್, ಖೇಡಾ, ಪಂಚಮಹಲ್, ದಾಹೋದ್, ವಡೋದರ, ಛೋಟಾ ಉದಯಪುರ, ಭರೂಚ್, ಭರೂಚ್, ನವಸಾರಿ, ವಲ್ಸಾದ್

ಕರ್ನಾಟಕ: ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಮಧ್ಯಪ್ರದೇಶ: ಬೇತುಲ್, ಮೊರೆನಾ, ಭಿಂಡ್, ಗ್ವಾಲಿಯರ್, ಗುಣ, ಸಾಗರ್, ವಿದಿಶಾ, ಭೋಪಾಲ್, ರಾಜ್‌ಗಢ್, ಬೇತುಲ್

ಮಹಾರಾಷ್ಟ್ರ: ಬಾರಾಮತಿ, ರಾಯಗಢ, ಧರಾಶಿವ, ಲಾತೂರ್ (SC), ಸೋಲಾಪುರ (SC), ಮಾಧಾ, ಸಾಂಗ್ಲಿ, ರತ್ನಗಿರಿ-ಸಿಂಧುದುರ್ಗ, ಕೊಲ್ಲಾಪುರ, ಹತ್ಕನಂಗಲೆ

ಉತ್ತರ ಪ್ರದೇಶ: ಸಂಭಾಲ್, ಹತ್ರಾಸ್, ಆಗ್ರಾ (SC), ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್‌ಪುರಿ, ಇಟಾಹ್, ಬುಡೌನ್, ಅಯೋನ್ಲಾ, ರಾಯ್‌ ಬರೇಲಿ

ಪಶ್ಚಿಮ ಬಂಗಾಳ: ಮಾಲ್ಡಾ ಉತ್ತರ, ಮಾಲ್ಡಾ ದಕ್ಷಿಣ, ಜಂಗಿಪುರ, ಮುರ್ಷಿದಾಬಾದ್

ಕಣದಲ್ಲಿ 1,351 ಅಭ್ಯರ್ಥಿಗಳು

ಮೇ 7ರಂದು ನಡೆಯಲಿರುವ ಮೂರನೇ ಹಂತದ ಲೋಕಸಭೆ ಚುನಾವಣೆಯಲ್ಲಿ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 1,351 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಇದನ್ನೂ ಓದಿ: Amethi Unrest: ಕಾಂಗ್ರೆಸ್‌ ಕಚೇರಿ ಮೇಲೆ ಕಿಡಿಗೇಡಿಗಳಿಂದ ಅಟ್ಯಾಕ್‌; ಬಿಜೆಪಿಯ ದುಷ್ಕೃತ್ಯ ಎಂದು ಆರೋಪ

ಅತೀ ಹೆಚ್ಚು ನಾಮಪತ್ರ

ಮೂರನೇ ಹಂತದಲ್ಲಿ ಗುಜರಾತ್ 26 ಸಂಸದೀಯ ಕ್ಷೇತ್ರಗಳಿಂದ ಗರಿಷ್ಠ 658 ನಾಮನಿರ್ದೇಶನಗಳನ್ನು ಹೊಂದಿತ್ತು, ಅನಂತರ ಮಹಾರಾಷ್ಟ್ರವು 11 ಸ್ಥಾನಗಳಿಂದ 519 ನಾಮನಿರ್ದೇಶನಗಳನ್ನು ಹೊಂದಿದೆ. ಮಹಾರಾಷ್ಟ್ರದ ಒಸ್ಮಾನಾಬಾದ್ ಕ್ಷೇತ್ರಕ್ಕೆ ಗರಿಷ್ಠ 77 ನಾಮಪತ್ರಗಳು ಬಂದಿದ್ದು, ಛತ್ತೀಸ್‌ಗಢದ ಬಿಲಾಸ್‌ಪುರ ಕ್ಷೇತ್ರಕ್ಕೆ 68 ನಾಮಪತ್ರಗಳು ಬಂದಿವೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

Continue Reading

ದೇಶ

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Crude Bomb:ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

VISTARANEWS.COM


on

Crude Bomb
Koo

ಪಶ್ಚಿಮ ಬಂಗಾಳ:ಲೋಕಸಭಾ ಚುನಾವಣೆ(Lok sabha Election 2024)ಯ ಮೂರನೇ ಹಂತದ ಮತದಾನಕ್ಕೆ ಒಂದು ದಿನ ಇರುವಾಗಲೇ ಪಶ್ಚಿಮ ಬಂಗಾಳ(West Bengal)ದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಹೂಗ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಗುವೊಂದು ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಪಾಂಡುವಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಚ್ಚಾ ಬಾಂಬ್‌(Crude Bomb) ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎನ್ನಲಾಗಿದೆ.

ಘಟನೆಯ ವಿವರ:

ಇನ್ನು ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡಿದೆ. ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಇನ್ನು ಈ ಕಚ್ಚಾ ಬಾಂಬ್‌ ಎಲ್ಲಿಂದ ಬಂತು? ಯಾರು ಎಸೆದರು ಎಂಬುದು ತನಿಖೆಯಲ್ಲಿ ತಿಳಿಯಬೇಕಾಗಿದೆ.

ಇನ್ನು ಲೋಕಸಭಾ ಚುನಾವಣೆ ಹಿನ್ನೆಲೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಂದು ಇದೇ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಳ್ಳಬೇಕಿತ್ತು. ಬೃಹತ್‌ ಸಾರ್ವಜನಿಕ ಸಭೆಯನ್ನೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಈ ಘಟನೆ ನಡೆದಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇನ್ನು ನಾಳೆ ನಡೆಯಲಿರುವ ಮೂರನೇ ಹಂತ ಚುನಾವಣೆಯಲ್ಲಿ ರಾಜ್ಯ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ವಾರ ಪಶ್ಚಿಮ ಬಂಗಾಳದ ರಾಜ್ಯ ರಾಜಧಾನಿ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ (Trinmool Congress)ನ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟು, ಟಿಎಂಸಿ(TMC)ಯ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅರ್ಜುನ್‌ಪುರದ ಪಶ್ಚಿಮ್‌ಪುರ ಪ್ರದೇಶದಲ್ಲಿ ಟಿಎಂಸಿಯ ಒಂದು ಬಣ ಕರೆಂಟ್‌ ಕಟ್‌ ಮಾಡಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಎರಡೂ ತಂಡಗಳ ಜಗಳ ತಾರಕಕ್ಕೇರಿ ಮಾರಾಮಾರಿ ನಡೆದಿದೆ. ಪರಸ್ಪರ ದೊಣ್ಣೆ, ಕಲ್ಲಿನಿಂದ ಬಡಿದಾಟ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸಂಜೀವ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವ ಮೊದಲೇ ಆತ ಕೊನೆಯುಸಿರೆಳೆದಿದ್ದ.

ಕಲ್ಲೇಟು ಬಿದ್ದು ಕೆಳಗೆ ಬಿದ್ದಿದ್ದ ಸಂಜೀವ್‌ ಮೇಲೆ ದುಷ್ಕರ್ಮಿಗಳು ರಾಡ್‌ನಿಂದ ದಾಳಿ ನಡೆಸಿದ್ದರು ಎನ್ನಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಕೇಸ್‌ ದಾಖಲಾಗಿದ್ದು, ಅವರನ್ನು ಅರೆಸ್ಟ್‌ ಮಾಡಲಾಗಿದೆ. ಘಟನೆ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ಸಂಜೀವ್‌ ದಾಸ್‌ ಹತ್ಯೆಗೆ ಖಂಡನೆ ವ್ಯಕ್ತಪಡಿಸಿರುವ ಅವರ ಕುಟುಂಬಸ್ಥರು ದುರ್ಘಟನೆಗೆ ಟಿಎಂಸಿಯನ್ನೇ ಹೊಣೆಯನ್ನಾಗಿದೆ.

ಇದನ್ನೂ ಓದಿ:ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ಮತ್ತೊಂದೆಡೆ ಅದೇ ದಿನ ದಕ್ಷಿಣ ಕೋಲ್ಕತಾದ ಆನಂದಪುರದಲ್ಲಿ ಬಿಜೆಪಿ ನಾಯಕಿ ಸರಸ್ವತಿ ಸರ್ಕಾರ್‌ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರು ಸರಸ್ವತಿ ಮೇಲೆ ಹರಿತವಾದ ಆಯುಧದಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಚುನಾವಣಾ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಟಿಎಂಸಿ ನಾಯಕರ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ.

Continue Reading

ದೇಶ

ED Raid: ಇಡಿ ಭರ್ಜರಿ ಬೇಟೆ; ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ

ED Raid: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

VISTARANEWS.COM


on

ED Raid
Koo

ರಾಂಚಿ: ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಸೋಮವಾರ ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ (ED Raid). ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿದೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇಡಿ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ಶೆಲ್ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಸದ್ಯ ನೋಟಿನ ರಾಶಿಯನ್ನು ತೋರಿಸುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್‌ ಆಗಿದೆ. ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್, ”ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ. ಈ ಹಣಗಳನ್ನು ಇವರು (ಕಾಂಗ್ರೆಸ್‌) ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ.

ಜಾರ್ಖಂಡ್‌ನ ಮತ್ತೋರ್ವ ಬಿಜೆಪಿ ಸಂಸದ ದೀಪಕ್ ಪ್ರಕಾಶ್ ಮಾತನಾಡಿ, “ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆರ್‌ಜೆಡಿ ಜಾರ್ಖಂಡ್ ಅನ್ನು ‘ಲೂಟ್‌ಖಂಡ್‌ʼ ಆಗಿ ಪರಿವರ್ತಿಸುವ ಕೆಲಸವನ್ನು ಮಾಡುತ್ತಿವೆ. ಇಂದು ಮತ್ತೆ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಅದು ಆಡಳಿತ ಪಕ್ಷದ ಸಚಿವರಿಗೆ ಸೇರಿದೆ. ಇದು ಜಾರ್ಖಂಡ್‌ನ ಜನರಿಗೆ ಮಾಡಿದ ಅವಮಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಕಡೆ ದಾಳಿ

ರಾಂಚಿಯ ಸೈಲ್ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ಕೈಗೊಂಡಿದೆ. ಇಡಿಯ ಒಂದು ತಂಡ ಸೋಮವಾರ ಬೆಳಗ್ಗೆ, ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್ ವಿಕಾಸ್ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: Shiv Sena : ಇಡಿ ದಾಳಿಗೆ ಒಳಗಾಗಿದ್ದ ಉದ್ಧವ್​ ಬಣದ ಶಾಸಕ, ಶಿಂಧೆ ಬಣಕ್ಕೆ ಸೇರ್ಪಡೆ

ಕಳೆದ ವರ್ಷ ಬಂಧಿತರಾದ ವೀರೇಂದ್ರ ರಾಮ್‌ ಅಕ್ಮವಾಗಿ 100 ಕೋಟಿ ರೂ. ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಜತೆಗೆ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಅವರಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading
Advertisement
Cauvery Theatre bengaluru another single screen close
ಸಿನಿಮಾ3 mins ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ8 mins ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Lok Sabha Elections-2024
Lok Sabha Election 202414 mins ago

Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ICC Women’s T20 World Cup 2024
ಕ್ರೀಡೆ15 mins ago

ICC Women’s T20 World Cup 2024: ಮಹಿಳಾ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದ ಶ್ರೀಲಂಕಾ

Road Accident
ಕ್ರೈಂ17 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಮೃತ್ಯು; 30ಕ್ಕೂ ಹೆಚ್ಚು ಮಂದಿಗೆ ಗಾಯ

Prajwal Revanna Case HD Revanna asks NO to sign voluntary statement in kidnapping case
ಕ್ರೈಂ19 mins ago

Prajwal Revanna Case: ಅಪಹರಣ ಕೇಸ್‌ನಲ್ಲಿ ಸ್ವ-ಇಚ್ಚಾ ಹೇಳಿಕೆಗೆ ಸಹಿ ಹಾಕಲು NO ಎಂದ ಎಚ್‌.ಡಿ. ರೇವಣ್ಣ!

Crude Bomb
ದೇಶ28 mins ago

Crude Bomb: ಚೆಂಡೆಂದು ಭಾವಿಸಿ ಬಾಂಬ್‌ ಜೊತೆ ಮಕ್ಕಳ ಆಟ; ಪಶ್ಚಿಮ ಬಂಗಾಳದಲ್ಲಿ ಭಾರೀ ಸ್ಫೋಟ

Shine Shetty follows diet and fitness
ಕಿರುತೆರೆ38 mins ago

Shine Shetty: ಸಖತ್‌ ಫಿಟ್‌ ಆದ ‘ಬಿಗ್ ಬಾಸ್‌’ ವಿನ್ನರ್ ಶೈನ್ ಶೆಟ್ಟಿ!

Rohit Sharma
ಕ್ರೀಡೆ54 mins ago

Rohit Sharma: ಐಪಿಎಲ್​ನಿಂದ ಹೊರಗುಳಿಯಲಿದ್ದಾರೆ ರೋಹಿತ್​ ಶರ್ಮ!

Karan Johar upset with Kettan Singh's poor mimicry of him
ಸಿನಿಮಾ59 mins ago

Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ8 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ17 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ19 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ19 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌