PM Modi To CM Kejriwal: AI ಗ್ರಾಫಿಕ್ ಕರಾಮತ್ತು; ಮೋದಿ, ಸೋನಿಯಾ, ಕೇಜ್ರಿವಾಲ್ ಗತ್ತು! - Vistara News

ದೇಶ

PM Modi To CM Kejriwal: AI ಗ್ರಾಫಿಕ್ ಕರಾಮತ್ತು; ಮೋದಿ, ಸೋನಿಯಾ, ಕೇಜ್ರಿವಾಲ್ ಗತ್ತು!

PM Modi To CM Kejriwal: ಬಾರ್ಬಿ ಸಿನಿಮಾ ಬಿಡುಗಡೆಯಾದಾಗಿನಿಂದ, ಹಲವಾರು AI ರೀತಿಯ ಫೋಟೊಗಳು ವೈರಲ್‌ ಆಗುತ್ತಿವೆ. ಈಗ ಭಾರತೀಯ ರಾಜಕಾರಣಿಗಳು ಬಾರ್ಬಿ ಲೋಕಕ್ಕೆ ಕಾಲಿಟ್ಟಿದ್ದಾರೆ!

VISTARANEWS.COM


on

Modi, soniya, rahul gandhi Barbie Land AI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
PM Modi To CM Kejriwal
ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬಿಂದಾಸ್ ಲುಕ್!
PM Modi To CM Kejriwal
ಸ್ಪೆಷಲ್ ಗೆಟಪ್‌ನಲ್ಲಿ ಸೋನಿಯಾ ಗಾಂಧಿ
PM Modi To CM Kejriwal
ಸ್ಮೃತಿ ಇರಾನಿ ಮಾಡರ್ನ್ ಪೋಸ್
PM Modi To CM Kejriwal
ಮಮತಾ ಬ್ಯಾನರ್ಜಿ ವಿಶೇಷ ದಿರಸಿನಲ್ಲಿ
PM Modi To CM Kejriwal
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್.
PM Modi To CM Kejriwal
ಕಾಂಗ್ರೆಸ್ ಯುವ ರಾಜ ರಾಹುಲ್ ಗಾಂಧಿ.
PM Modi To CM Kejriwal
ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ.
PM Modi To CM Kejriwal
‘ದಿಲ್ಲಿ ದೊರೆ’ ಅರವಿಂದ್ ಕೇಜ್ರಿವಾಲ್.
PM Modi To CM Kejriwal
ಬಿಜೆಪಿಯ ಟ್ರಬಲ್ ಶೂಟರ್ ಅಮಿತ್ ಶಾ.
PM Modi To CM Kejriwal
ಆಹಾ! ನರೇಂದ್ರ ಮೋದಿಯವರು ಎಂಥ ಲುಕ್!!
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

Toll Fee Hike:ದೇಶದಲ್ಲಿ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ ಶುಲ್ಕ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ

VISTARANEWS.COM


on

Toll Fee Hike
Koo

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024) ಮುಗಿಯುತ್ತಿದ್ದಂತೆ ವಾಹನ ಸವಾರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇಂದಿನಿಂದ ದೇಶ್ಯಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ(Toll Fee Hike)ವನ್ನು 3-5% ರಷ್ಟು ಹೆಚ್ಚಿಸಲಾಗುತ್ತಿದೆ, ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಇದೀಗ ಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆ ಹೆದ್ದಾರಿ ಟೋಲ್‌ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ದೇಶದಲ್ಲಿ ಟೋಲ್ ಶುಲ್ಕಗಳನ್ನು ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಪರಿಷ್ಕರಿಸಲಾಗುತ್ತದೆ ಮತ್ತು ಹೆದ್ದಾರಿ ನಿರ್ವಾಹಕರು ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ 3% ರಿಂದ 5% ರಷ್ಟು ಹೆಚ್ಚಳ ಮಾಡಲಿದ್ದು, ಸ್ಥಳೀಯ ಪತ್ರಿಕೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ ಶುಲ್ಕ ದರಗಳ ಪರಿಷ್ಕರಣೆಯು ಜೂನ್ 3 ರಿಂದ ಜಾರಿಗೆ ಬರಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪ್ರಯಾಣಿಕರ ಮೇಲೂ ಭಾರೀ ಹೊರೆ

ಟೋಲ್ ಶುಲ್ಕಗಳು ಮತ್ತು ಇಂಧನ ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಳವು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣೆಗ ಮತ್ತು ಅಭಿವೃದ್ಧಿಗೆ ಸಹಾಯ ಮಾಡಲಿದೆ. ಆದರೆ ಸರ್ಕಾರದ ಈ ಕ್ರಮಕ್ಕೆ ವಿರೋಧ ಪಕ್ಷಗಳು ಹಾಗೂಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ದರ ಹೆಚ್ಚಳದಿಂದ ಅಗತ್ಯ ಸರಕುಗಳ ಸಾರಿಗೆ ವೆಚ್ಚ ಹೆಚ್ಚಾಗುತ್ತದೆ ಮತ್ತು ಪ್ರಯಾಣಿಕರಿಗೆ ಇದು ಹೊರೆಯಾಗಲಿದೆ ಎಂದು ಕಿಡಿ ಕಾರಿದ್ದಾರೆ.

ಐಆರ್‌ಬಿ ಇನ್‌ಫ್ರಾಸ್ಟ್ರಕ್ಚರ್ ಡೆವಲಪರ್ಸ್ ಮತ್ತು ಅಶೋಕ್ ಬಿಲ್ಡ್‌ಕಾನ್ ಲಿಮಿಟೆಡ್‌ನಂತಹ ಟೋಲ್ ಪ್ಲಾಜಾಗಳನ್ನು ನಿರ್ವಹಣೆ ಮಾಡುವವರು ಹೆಚ್ಚಿನ ಲಾಭ ಪಡೆಯಲಿದ್ದಾರೆ. ಭಾರತ ಕಳೆದ ದಶಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ವಿಸ್ತರಣೆ ಮತ್ತು ಅಭಿವೃದ್ಧಿಗೆ ಶತಕೋಟಿ ಡಾಲರ್‌ಗಳನ್ನು ಹೂಡಿಕೆ ಮಾಡಿದೆ, ಸುಮಾರು 146,000 ಕಿಲೋಮೀಟರ್‌ಗಳಷ್ಟು ಹೆದ್ದಾರಿ ನಿರ್ಮಿಸಲಾಗಿದೆ

ಇದನ್ನೂ ಓದಿ: Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

ಈ ಹಿಂದೆ ಹಣಕಾಸು ವರ್ಷದ ಆರಂಭದಲ್ಲೇ ರಾಜ್ಯದ ವಾಹನ ಸವಾರರಿಗೆ ಮತ್ತೆ ಟೋಲ್‌ ಬರೆ ಬಿದ್ದಿತ್ತು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸೇರಿ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ (Toll Hike) ಏರಿಸಲಾಗಿತ್ತು. ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ ವರ್ಷ ಏಪ್ರಿಲ್‌ನಲ್ಲಿ ಟೋಲ್‌ ದರ ಹೆಚ್ಚಳ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣಕ್ಕೆ ದರ ಹೆಚ್ಚಳವನ್ನು ಕೈ ಬಿಟ್ಟಿತ್ತು. ಆ ಬಳಿಕ ಜೂನ್‌ನಲ್ಲಿ ಏಕಾಏಕಿ ಶೇ.22ರಷ್ಟು ದರ ಹೆಚ್ಚಳ ಮಾಡಲಾಗಿತ್ತು. ಇದಾದ ಬಳಿಕ 9 ತಿಂಗಳ ನಂತರ ಮತ್ತೆ ಟೋಲ್‌ ದರ ಏರಿಕೆ ಆಗಿತ್ತು.

Continue Reading

ಪ್ರಮುಖ ಸುದ್ದಿ

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Road Accident: 40ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

VISTARANEWS.COM


on

road accident tractor
Koo

ಹೊಸದಿಲ್ಲಿ: ಭಾನುವಾರ ರಾತ್ರಿ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಪಿಪ್ಲೋಡಿಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ (Tractor Accident) ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ 13 ಪ್ರಯಾಣಿಕರು (Road Accident) ಸಾವನ್ನಪ್ಪಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ. ಮೃತರು, ರಾಜಸ್ಥಾನದ ಮೋತಿಪುರ ಗ್ರಾಮದಿಂದ ರಾಜ್‌ಗಢ್‌ನ ಕುಲಂಪುರಕ್ಕೆ ಪ್ರಯಾಣಿಸುತ್ತಿದ್ದ (wedding procession) ಮದುವೆ ದಿಬ್ಬಣದಲ್ಲಿದ್ದರು.

ರಾಜ್‌ಗಢ್ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ. ಗಾಯಗೊಂಡವರಲ್ಲಿ 13 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆ ಮತ್ತು ಎದೆಗೆ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಭೋಪಾಲ್‌ನ ಹಮಿಡಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂದು ರಾಜ್‌ಗಢ ಜಿಲ್ಲಾಧಿಕಾರಿ ಹರ್ಷ್ ದೀಕ್ಷಿತ್ ತಿಳಿಸಿದ್ದಾರೆ. “ತೀವ್ರವಾಗಿ ಗಾಯಗೊಂಡಿರುವ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ” ಎಂದು ಅವರು ತಿಳಿಸಿದರು.

ಮದುವೆ ದಿಬ್ಬಣದ ಟ್ರಾಕ್ಟರ್‌ನಲ್ಲಿ 40ರಿಂದ 50 ಜನರು ಹತ್ತಿದ್ದು, ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. “40ರಿಂದ 50 ಜನರೊಂದಿಗೆ ಮದುವೆ ಮೆರವಣಿಗೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಮೋತಿಪುರದಿಂದ ರಾಜ್‌ಗಢದ ಕುಮಾಲ್‌ಪುರಕ್ಕೆ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಬರುತ್ತಿತ್ತು. ಪಿಪ್ಲೋಡಿ ಗ್ರಾಮದ ಬಳಿ ಟ್ರ್ಯಾಕ್ಟರ್ ಟ್ರಾಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ” ಎಂದು ದೀಕ್ಷಿತ್ ತಿಳಿಸಿದ್ದಾರೆ.

ಚಾಲಕ ಪಾನಮತ್ತನಾಗಿದ್ದ ಮತ್ತು ಟ್ರಾಲಿ ಓವರ್‌ಲೋಡ್ ಆಗಿತ್ತು ಎಂದು ಗಾಯಗೊಂಡ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಪಲ್ಟಿಯಾದ ನಂತರ, ಜನರು ಅದರ ಅಡಿಯಲ್ಲಿ ಸಿಲುಕಿಕೊಂಡರು. ತಡರಾತ್ರಿಯವರೆಗೂ ಜೆಸಿಬಿ ಯಂತ್ರಗಳ ಸಹಾಯದಿಂದ ಹೊರತೆಗೆಯಲಾಯಿತು.

ರಾಷ್ಟ್ರಪತಿ ಮುರ್ಮು, ಸಿಎಂ ಸಂತಾಪ

ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಮೃತರ ಕುಟುಂಬಗಳಿಗೆ ತಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ. “ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಹಾಗೂ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ (MP CM Mohan Yadav) ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್‌ಗಢ್ ಜಿಲ್ಲೆಯ ಪಿಪ್ಲೋಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ರಾಜಸ್ಥಾನದ ಝಲಾವರ್ ಜಿಲ್ಲೆಯ 13 ಜನರ ಅಕಾಲಿಕ ಮರಣದ ಸುದ್ದಿ ಅತ್ಯಂತ ದುಃಖಕರವಾಗಿದೆ. ಸ್ಥಳದಲ್ಲಿ ಜನಪ್ರತಿನಿಧಿ ನಾರಾಯಣ ಸಿಂಗ್ ಪನ್ವಾರ್‌, ರಾಜಗಢ ಜಿಲ್ಲಾಧಿಕಾರಿ ಮತ್ತು ಎಸ್ಪಿ ಉಪಸ್ಥಿತರಿದ್ದರು. ನಾವು ರಾಜಸ್ಥಾನ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ರಾಜ್‌ಗಡ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳ ಚಿಕಿತ್ಸೆ ನಡೆಯುತ್ತಿದೆ. ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್‌ಗೆ ಕಳಿಸಲಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಯಾದವ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Continue Reading

ಪ್ರಮುಖ ಸುದ್ದಿ

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Chamarajanagar Lok Sabha Constituency : ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಈ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು 1962 ರಲ್ಲಿ ಅಸ್ತಿತ್ವಕ್ಕೆ ಬಂದಿತು.

VISTARANEWS.COM


on

Chamarajanagar Lok Sabha Constituency
Koo

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು. ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

Continue Reading

ದೇಶ

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Amul Milk: ಲೋಕಸಭಾ ಚುನಾವಣೆಯ ಫಲಿತಾಂಶದತ್ತ ಇಡೀ ದೇಶದ ಗಮನ ನೆಟ್ಟಿದೆ. ಈ ಮಧ್ಯೆ ಜನತೆಗೆ ಅಮುಲ್‌ ಕಂಪನಿ ಬೆಲೆ ಏರಿಕೆಯ ಶಾಕ್‌ ಕೊಟ್ಟಿದೆ. ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಬೆಲೆ ಏರಿಕೆ ಇಂದಿನಿಂದಲೇ (ಜೂನ್ 3) ಜಾರಿಗೆ ಬರಲಿದೆ. ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF) ತಿಳಿಸಿದೆ. ಜಿಸಿಎಂಎಂಎಫ್ ಕೊನೆಯ ಬಾರಿಗೆ ಹಾಲಿನ ಬೆಲೆಯನ್ನು 2023ರ ಫೆಬ್ರವರಿಯಲ್ಲಿ ಹೆಚ್ಚಿಸಿತ್ತು.

VISTARANEWS.COM


on

Amul Milk
Koo

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶದತ್ತ ಇಡೀ ದೇಶದ ಗಮನ ನೆಟ್ಟಿದೆ. ಈ ಮಧ್ಯೆ ಜನತೆಗೆ ಅಮುಲ್‌ ಕಂಪನಿ ಬೆಲೆ ಏರಿಕೆಯ ಶಾಕ್‌ ಕೊಟ್ಟಿದೆ (Amul Milk). ಎಲ್ಲ ರೀತಿಯ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಬೆಲೆ ಏರಿಕೆ ಸೋಮವಾರದಿಂದಲೇ (ಜೂನ್ 3) ಜಾರಿಗೆ ಬರಲಿದೆ.

ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಅಮುಲ್ ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF) ತಿಳಿಸಿದೆ. ಜಿಸಿಎಂಎಂಎಫ್ ಕೊನೆಯ ಬಾರಿಗೆ ಹಾಲಿನ ಬೆಲೆಯನ್ನು 2023ರ ಫೆಬ್ರವರಿಯಲ್ಲಿ ಹೆಚ್ಚಿಸಿತ್ತು.

‘ಅಮುಲ್’ ಬ್ರ್ಯಾಂಡ್‌ ಅಡಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಜಿಸಿಎಂಎಂಎಫ್‌ನ ಎಂ.ಡಿ. ಜಯೇನ್ ಮೆಹ್ತಾ ಈ ಬಗ್ಗೆ ಮಾತನಾಡಿ, ʼʼಹೆಚ್ಚಿದ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಏರಿಕೆ ಅನಿವಾರ್ಯʼʼ ಎಂದು ತಿಳಿಸಿದ್ದಾರೆ.

ಪರಿಷ್ಕೃತ ದರ ಹೀಗಿದೆ

ಬೆಲೆ ಏರಿಕೆಯೊಂದಿಗೆ 500 ಎಂಎಲ್‌ನ ಅಮುಲ್ ಎಮ್ಮೆ ಹಾಲು, 500 ಎಂಎಲ್‌ನ ಅಮುಲ್ ಗೋಲ್ಡ್ ಹಾಲು ಮತ್ತು 500 ಎಂಎಲ್‌ನ ಅಮುಲ್ ಶಕ್ತಿ ಹಾಲಿನ ದರ ಕ್ರಮವಾಗಿ 36 ರೂ., 33 ರೂ. ಮತ್ತು 30 ರೂ. ಆಗಲಿದೆ. “ಪ್ರತಿ ಲೀಟರ್‌ಗೆ 2 ರೂ.ಗಳ ಹೆಚ್ಚಳದೊಂದಿಗೆ ದರ ಶೇ. 3-4ರಷ್ಟು ಅಧಿಕವಾಗಲಿದೆ. 2023ರ ಫೆಬ್ರವರಿಯಿಂದ ಅಮುಲ್ ತಾಜಾ ಹಾಲಿನ ಬೆಲೆಯನ್ನು ಹೆಚ್ಚಿಸಿರಲಿಲ್ಲ. ಸುಮಾರು ಒಂದೂವರೆ ವರ್ಷಗಳ ಬಳಿಕ ಈ ಹೆಚ್ಚಳ ಕಂಡು ಬಂದಿದೆʼʼ ಎಂದು ಜಿಸಿಎಂಎಂಎಫ್‌ನ ಪ್ರಕಟಣೆ ತಿಳಿಸಿದೆ.

ಹಾಲು ಉತ್ಪಾದನೆಯ ಒಟ್ಟಾರೆ ವೆಚ್ಚದ ಹೆಚ್ಚಳದಿಂದಾಗಿ ಈ ಬೆಲೆ ಏರಿಕೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅದು ಹೇಳಿದೆ. ಜಿಸಿಎಂಎಂಎಫ್ ಪ್ರಕಾರ, ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಗ್ರಾಹಕರು ಪಾವತಿಸುವ ಪ್ರತಿ ರೂಪಾಯಿಯಲ್ಲಿ ಸುಮಾರು 80 ಪೈಸೆಯನ್ನು ಅಮುಲ್ ಹಾಲು ಉತ್ಪಾದಕರಿಗೆ ವರ್ಗಾಯಿಸುತ್ತದೆ. “ಬೆಲೆ ಪರಿಷ್ಕರಣೆಯು ನಮ್ಮ ಹಾಲು ಉತ್ಪಾದಕರ ನಷ್ಟವನ್ನು ಸರಿದೂಗಿಸಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಹಾಲು ಉತ್ಪಾದನೆಗೆ ರೈತರನ್ನು ಪ್ರೋತ್ಸಾಹಿಸುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: Nandini milk: ಅಮುಲ್‌ಗೆ ನಂದಿನಿ ಸೆಡ್ಡು; ಇಂದಿರಾ ಕ್ಯಾಂಟೀನ್‌ಗಳಲ್ಲೂ ಹಾಲು ಮಾರಾಟಕ್ಕೆ ಪ್ಲಾನ್‌!

ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

ಜೂನ್‌ 1ರಂದು ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರ ಮೊಗದಲ್ಲಿ ನಗು ಮೂಡಿತ್ತು. ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿದ್ದವು (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ. ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು.

Continue Reading
Advertisement
bangalore rain news
ಪ್ರಮುಖ ಸುದ್ದಿ14 mins ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ24 mins ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ29 mins ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

road accident tractor
ಪ್ರಮುಖ ಸುದ್ದಿ57 mins ago

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Belagavi Lok Sabha Constituency
ಬೆಳಗಾವಿ1 hour ago

Belagavi Lok Sabha Constituency: ಶೆಟ್ಟರ್‌ ವರ್ಸಸ್‌ ಹೆಬ್ಬಾಳ್ಕರ್‌; ಯಾರಿಗೆ ಬೆಳಗಾವಿ ಕುಂದಾ?

Sweating And Body Odor
ಆರೋಗ್ಯ1 hour ago

Sweating And Body Odor: ಅತಿಯಾಗಿ ಬೆವರುತ್ತಿದ್ದೀರಾ? ಈ ಆಹಾರಗಳು ನಿಮ್ಮ ಬೆವರ ದುರ್ಗಂಧಕ್ಕೆ ಮುಖ್ಯ ಕಾರಣ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Hassan Lok Sabha Constituency
ಪ್ರಮುಖ ಸುದ್ದಿ2 hours ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್2 hours ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ3 hours ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌