Gandhi Jayanti: ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ, ಪಾಲ್ಗೊಳ್ಳಲು ಮೋದಿ ಕರೆ Vistara News

ದೇಶ

Gandhi Jayanti: ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ, ಪಾಲ್ಗೊಳ್ಳಲು ಮೋದಿ ಕರೆ

Gandhi Jayanti: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್‌ 1ರಂದು ದೇಶಾದ್ಯಂತ ಒಂದು ಗಂಟೆ ಸ್ವಚ್ಛತಾ ಅಭಿಯಾನ ನಡೆಯಲಿದ್ದು, ಎಲ್ಲರೂ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

VISTARANEWS.COM


on

Cleanliness Drive
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಹಾತ್ಮ ಗಾಂಧಿ ಜಯಂತಿಗೂ (Gandhi Jayanti) ಒಂದು ದಿನ ಮೊದಲು ಅಂದರೆ ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್‌ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ (Cleanliness Drive) ತೊಡಗುವ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸೋಣ ಎಂದು ಮನ್‌ ಕಿ ಬಾತ್‌ (Mann Ki Baat) ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ಜನರಿಗೆ ಕರೆ ನೀಡಿ ನೀಡಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅಭಿಯಾನದ ಕುರಿತು ಮಾಹಿತಿ ಹಂಚಿಕೊಂಡಿದೆ.

ಸ್ವಚ್ಛತಾ ಅಭಿಯಾನದ ಕುರಿತು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯವು ಅಭಿಯಾನದ ಕುರಿತು ಮಾಹಿತಿ ನೀಡಿದೆ. “ಏಕ್‌ ತಾರೀಖ್‌, ಏಕ್‌ ಘಂಟಾ, ಏಕ್‌ ಸಾಥ್” ಎಂಬುದು ಅಭಿಯಾನದ ಹೆಸರಾಗಿದೆ. “ಸಾರ್ವಜನಿಕ ಸ್ಥಳಗಳಾದ ಮಾರುಕಟ್ಟೆ, ರೈಲ್ವೆ ಹಳಿ, ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು ಸೇರಿ ಹಲವೆಡೆ ಅಕ್ಟೋಬರ್‌ 1ರಂದು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುತ್ತಿದೆ. ದೇಶದ ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳಿ” ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

“ದೇಶದ ಪ್ರತಿಯೊಂದು ನಗರ, ಪಟ್ಟಣ, ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುತ್ತಿದೆ. ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ಸ್ವಚ್ಛತೆಯಲ್ಲಿ ಪಾಲ್ಗೊಳ್ಳಿ” ಎಂಬುದಾಗಿ ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜತೆಗೆ ಕೇಂದ್ರ ಸಚಿವರು, ಶಾಸಕರು, ಸಂಸದರು, ಶಾಸಕರು, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಸ್ವಚ್ಛತಾ ಅಭಿಯಾನದ ಕುರಿತು ಹೆಚ್ಚಿನ ಮಾಹಿತಿಗೆ, ಕಾರ್ಯಕ್ರಮಗಳ ವಿವರಕ್ಕೆ ವೆಬ್‌ಪೋರ್ಟಲ್‌ಅನ್ನು ಕೂಡ ಕೇಂದ್ರ ಸರ್ಕಾರ ಆರಂಭಿಸಿದೆ. ಸಾರ್ವಜನಿಕರು https://swachhatahiseva.com/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಗಾಂಧಿ ಜಯಂತಿಯಂದೇ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು.

ಇದನ್ನೂ ಓದಿ: Mann Ki Baat: ಬೇಲೂರು, ಹಳೆಬೀಡು ದೇಗುಲಗಳಿಗೆ ವಿಶ್ವಮಾನ್ಯತೆ; ಮನ್‌ ಕಿ ಬಾತ್‌ನಲ್ಲಿ ಮೋದಿ ಸಂತಸ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

Rajastan Elections 2023: ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಹೊಸ್ತಿಲಿನಲ್ಲಿದೆ. ಈ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳು ಇಲ್ಲಿವೆ.

VISTARANEWS.COM


on

Rajastan Elections: 10 reasons for BJP Win
Koo

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ (Rajastan Elections 2023) ಆಡಳಿತಾರೂಢ ಕಾಂಗ್ರೆಸ್‌ನ್ನು ಮಣಿಸಿ (Antiincumbency to Congress) ಬಿಜೆಪಿ ಮತ್ತೆ ಅಧಿಕಾರಕ್ಕೇರುವ ಸ್ಪಷ್ಟ ಸೂಚನೆಗಳು ಸಿಕ್ಕಿವೆ. 199 ಕ್ಷೇತ್ರಗಳ ಪೈಕಿ ಬಿಜೆಪಿ 120ರಷ್ಟು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ಗೆ ದೊಡ್ಡ ಠಕ್ಕರ್‌ ಕೊಟ್ಟಿದೆ. ಚುನಾವಣೆಯ ಅಖಾಡಕ್ಕಿಳಿದ ಸಂದರ್ಭದಲ್ಲಿ ಬಿಜೆಪಿ ಪರಿಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ರಾಜ್ಯ ಬಿಜೆಪಿಯ ಮುಂಚೂಣಿ ನಾಯಕಿ ವಸುಂಧರಾ ರಾಜೇ ಅವರು ಮುನಿಸಿಕೊಂಡಿದ್ದರು. ರಾಜ್ಯದ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸುವವರು ಯಾರು ಎನ್ನುವ ಪ್ರಶ್ನೆಗೆ ಉತ್ತರವಿರಲಿಲ್ಲ. ಇನ್ನೊಂದು ಕಡೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ (Ashok Gehlot) ಮತ್ತು ಯುವ ನಾಯಕ ಸಚಿನ್‌ ಪೈಲಟ್‌ ಅವರು ರಾಜ್ಯದಲ್ಲಿ ಪ್ರಬಲ ಕಾಂಗ್ರೆಸ್‌ ನಾಯಕರಾಗಿ ಹೊರಹೊಮ್ಮಿದ್ದರು. ಇಷ್ಟೆಲ್ಲದರ ನಡುವೆಯೇ ಬಿಜೆಪಿ ರಾಜಸ್ಥಾನದಲ್ಲಿ ಕಮಾಲ್‌ (BJP set to win Rajastan ಮಾಡಿದೆ. ಹಾಗಿದ್ದರೆ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿರುವ ಕಾರಣಗಳು ಏನು? ಇಲ್ಲಿದೆ ವಿವರ.

1. ರಾಜಸ್ಥಾನದಲ್ಲಿ ‌ ಪ್ರತಿ ಐದು ವರ್ಷಕ್ಕೊಮ್ಮೆ ಆಡಳಿತ ಬದಲಾವಣೆಯ ಸಂಪ್ರದಾಯ ಕಳೆದ ಮೂವತ್ತ ಮೂರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಅದು ಮುಂದುವರಿದಿದೆ.

2. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ. ಉತ್ತರ ಭಾರತದಲ್ಲಿ ಪ್ರಧಾನಿ ಮೋದಿ ಅವರ ಜನಪ್ರಿಯತೆ ಜೋರಾಗಿದೆ. ಗುಜರಾತ್‌ ಚುನಾವಣೆಯನ್ನು ಸ್ವತಃ ಮೋದಿ ಅವರೇ ಮುಂದೆ ನಿಂತು ನಿಭಾಯಿಸಿದ್ದರು. ಈಗ ರಾಜಸ್ಥಾನಕ್ಕೂ ಅದರ ಪ್ರಭಾವ ತಟ್ಟಿದೆ.

3. ಚುನಾವಣಾ ಉಸ್ತುವಾರಿ ಪ್ರಹ್ಲಾದ್‌ ಜೋಶಿ ಅವರ ಟಿಕೆಟ್‌ ಹಂಚಿಕೆ ಪ್ಲ್ಯಾನಿಂಗ್‌
ಈ ಬಾರಿ ರಾಜಸ್ಥಾನದಲ್ಲಿ ಚುನಾವಣಾ ಉಸ್ತುವಾರಿ ವಹಿಸಿದ್ದವರು ಕೇಂದ್ರ ಸಚಿವರಾಗಿರುವ ಪ್ರಹ್ಲಾದ್‌ ಜೋಶಿ. ಟಿಕೆಟ್‌ ಹಂಚಿಕೆ ವೇಳೆ ಒಂದೊಂದು ಕ್ಷೇತ್ರಕ್ಕೆ 10ರಷ್ಟು ಆಕಾಂಕ್ಷಿಗಳಿದ್ದರು. ಅವರೆಲ್ಲರನ್ನೂ ಸಮಾಧಾನ ಮಾಡಿ ಟಿಕೆಟ್‌ ಹಂಚಿಕೆ ಮಾಡಲಾಗಿತ್ತು. ಆಕಾಂಕ್ಷಿಗಳು ಕೂಡಾ ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮನವೊಲಿಸಲಾಗಿತ್ತು. ಆ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಗೊಳಿಸಲಾಗಿತ್ತು.

4. ಯಾರೇ ಅಭ್ಯರ್ಥಿಯಾದರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು ಎಂಬ ಖಡಕ್‌ ಸೂಚನೆಯನ್ನು ನೀಡಲಾಗಿತ್ತು. ಅದನ್ನು ಪಾಲಿಸಲಾಗಿದೆ. ಒಂದು ಹಂತದಲ್ಲಿ ವಸುಂಧರಾ ರಾಜೇ ಅವರನ್ನು ಕಡೆಗಣಿಸಲಾಗಿದೆ ಎಂಬ ಸೂಚನೆ ಇತ್ತು. ಆದರೆ, ಕೊನೆಯ ಹಂತದಲ್ಲಿ ಅವರನ್ನು ಕೇಂದ್ರ ಸ್ಥಾನಕ್ಕೆ ತಂದು ನಿಲ್ಲಿಸಲಾಗಿದೆ.

5. ಕಾಂಗ್ರೆಸ್‌ ನೀಡಿದ ಗ್ಯಾರಂಟಿಗಳಿಗೆ ಠಕ್ಕರ್‌ ನೀಡಲು ಬಿಜೆಪಿ ಕೂಡಾ ಐದು ಪ್ರತ್ಯಾಸ್ತ್ರಗಳನ್ನು ಬಳಕೆ ಮಾಡಿತ್ತು. ಅದರಲ್ಲೂ ಮುಖ್ಯವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟಿ ಭರವಸೆ ನೀಡಲಾಗಿತ್ತು. ಗ್ಯಾಸ್ ಬೆಲೆ ಇಳಿಕೆ ಭರವಸೆ ಕೂಡಾ ಕೆಲಸ ಮಾಡಿದೆ.

6. ಮಹಿಳೆಯರ ಸುರಕ್ಷತೆಗಾಗಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆ್ಯಂಟಿ ರೋಮಿಯೋ ಸ್ಕ್ವಾಡ್ ಸ್ಥಾಪನೆ ಮಾಡಿದ್ದು ಮಹಿಳೆಯರಲ್ಲಿ ಭರವಸೆ ಮೂಡಿಸಿತ್ತು. ಜತೆಗೆ ಹೆಣ್ಣು ಮಗುವಿನ ಹೆಸರಿನಲ್ಲಿ ಬಾಂಡ್‌ ಸ್ಥಾಪಿಸಿ 18 ವರ್ಷ ಆದಾಗ 2 ಲಕ್ಷ ರೂ. ದೊರೆಯುವಂತೆ ಮಾಡುವ ಯೋಜನೆ ಆರಂಭ ಫಲ ನೀಡಿದೆ.

7. ಹಲವು ಕೇಂದ್ರ ಸಚಿವರು ಈ ಬಾರಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ ಮತ್ತು ಕೆಲವು ಉಸ್ತುವಾರಿ ವಹಿಸಿದ್ದಾರೆ. ಈ ಮೂಲಕ ಬದಲಿ ನಾಯಕತ್ವದ ಮುನ್ಸೂಚನೆ ದೊರೆತಿತ್ತು.

ಇದನ್ನೂ ಓದಿ: Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

8. ಕಾಂಗ್ರೆಸ್‌ಗೆ ಎದುರಾಗಿದ್ದ ಆಡಳಿತ ವಿರೋಧಿ ಅಲೆಯನ್ನು, ಕಾಂಗ್ರೆಸ್‌ ಪಕ್ಷದ ಒಳ ಜಗಳವನ್ನು ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದು ಬಿಜೆಪಿಗೆ ಲಾಭವಾಗಿದೆ.

9. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಚಿನ್‌ ಪೈಲಟ್‌ ಅವರು ಮುಖ್ಯಮಂತ್ರಿ ಆಗಬಹುದು ಎಂಬ ನಿರೀಕ್ಷೆಯಲ್ಲಿ ಗುಜ್ಜರ್‌ ಸಮುದಾಯ ಕಾಂಗ್ರೆಸ್‌ ನ್ನು ಬೆಂಬಲಿಸಿತ್ತು. ಈ ಬಾರಿ‌ ಅವರನ್ನು ಬಿಜೆಪಿಗೆ ಮತ್ತೆ ಸೆಳೆಯಲು ಸಾಧ್ಯವಾಗಿರುವುದು ಪ್ಲಸ್‌ ಪಾಯಿಟ್‌.

10. 2018ರ ಚುನಾವಣೆಯಲ್ಲಿ ರಜಪೂತ ಸಮುದಾಯ ಬಿಜೆಪಿ ಮೇಲೆ ಸಿಟ್ಟುಗೊಂಡಿತ್ತು. ಆದರೆ, ಬಿಜೆಪಿ ಸಾವಧಾನದಿಂದ ಸಮಸ್ಯೆಯನ್ನು ಬಗೆಹರಿಸಿಕೊಂಡು ಅವರನ್ನು ಮನವೊಲಿಸಿಕೊಂಡಿದೆ.

Continue Reading

ದೇಶ

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

ಛತ್ತೀಸ್‌ಗಢದಲ್ಲಿ ಎಲ್ಲ ಮತಗಟ್ಟೆ ಸಮೀಕ್ಷೆಗಳನ್ನು ಸುಳ್ಳಾಗಿಸಿ ಭರ್ಜರಿ ಜಯದತ್ತ ಬಿಜೆಪಿ ದಾಪುಗಾಲು (Chhattisgarh Assembly Election Result 2023) ಹಾಕುತ್ತಿದೆ.

VISTARANEWS.COM


on

raman singh bhupesh baghel
ರಮಣ್‌ ಸಿಂಗ್‌, ಭೂಪೇಶ್‌ ಬಘೇಲ್
Koo

ರಾಯ್ಪುರ: ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯ ಫಲಿತಾಂಶದ (Chhattisgarh Assembly Election Result 2023) ಸ್ಥೂಲ ಚಿತ್ರಣ ಇದೀಗ ದೊರೆತಿದ್ದು, ಬಿಜೆಪಿ ಸ್ಪಷ್ಟ ಗೆಲುವಿನತ್ತ ಸಾಗಿದೆ. ಇದು ಎಲ್ಲ ಮತಗಟ್ಟೆ ಸಮೀಕ್ಷೆಗಳನ್ನು (Exit poll) ಸುಳ್ಳಾಗಿಸಿದೆ.

ಮಧ್ಯಾಹ್ನ 12.50ರ ಹೊತ್ತಿಗೆ ಬಿಜೆಪಿ 54 ವಿಧಾನಸಭೆ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 34ರಲ್ಲಿ ಮುಂದಿತ್ತು. ಮುಂಜಾನೆಯ ಮೊದಲಿನ ಟ್ರೆಂಡ್‌ಗಳ ಪ್ರಕಾರ ಕಾಂಗ್ರೆಸ್‌ ನಲುವತ್ತಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಹೊಂದಿತ್ತು. ಎರಡು ಗಂಟೆಗಳ ಎಣಿಕೆಯ ಬಳಿಕ ಎರಡೂ ಪಕ್ಷಗಳೂ ಸಮಬಲ ಸಾಧಿಸಿದವು. 12 ಗಂಟೆಯ ಬಳಿಕ ಬಿಜೆಪಿ ಸ್ಪಷ್ಟ ಮುನ್ನಡೆ ಸಾಧಿಸಿತು.

ಛತ್ತೀಸ್‌ಗಢದ ವಿಧಾನಸಭೆಯ ಸದಸ್ಯ ಬಲ 90 ಆಗಿದ್ದು, 46 ಸ್ಥಾನಗಳನ್ನು ಗೆದ್ದರೆ ಸರ್ಕಾರ ರಚಿಸಬಹುದಾಗಿದೆ. ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.

ಉತ್ತರ ಭಾರತದ ಹಿಂದಿ ಬೆಲ್ಟ್‌ನ ಪ್ರಮುಖ ರಾಜ್ಯವಾಗಿರುವ ಛತ್ತೀಸ್‌ಗಢ ರಾಜ್ಯದಲ್ಲಿ ನಡೆಸಲಾದ ಮತಗಟ್ಟೆ ಸಮೀಕ್ಷೆಗಳು ಕಾಂಗ್ರೆಸ್‌ಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದೇ ಹೇಳಿದ್ದವು. ಕಾಂಗ್ರೆಸ್ ಪಕ್ಷವು (Congress Party) ಅಧಿಕಾರ ಉಳಿಸಿಕೊಂಡರೆ, ಭಾರತೀಯ ಜನತಾ ಪಾರ್ಟಿಗೆ (BJP Party) ನಿರಾಸೆ ಕಾದಿದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ಸಾರಾಂಶವಾಗಿತ್ತು. ಹಿಂದಿನ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 48 ಸ್ಥಾನಗಳನ್ನು ಹೊಂದಿದ್ದರೆ, ಬಿಜೆಪಿ 15 ಸ್ಥಾನಗಳನ್ನು ಹೊಂದಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಉತ್ತಮ ಅಂತರದಿಂದ ಸೋಲಿಸಿ 3 ಚುನಾವಣೆಗಳ ನಂತರ ಅಧಿಕಾರಕ್ಕೆ ಬಂದಿತ್ತು.

2023ರ ವಿಧಾನಸಭಾ ಚುನಾವಣೆಯಲ್ಲಿ, 18,833 ಮತಗಟ್ಟೆಗಳಲ್ಲಿ 81,41,624 ಪುರುಷರು, 81,72,171 ಮಹಿಳೆಯರು ಮತ್ತು 684 ತೃತೀಯ ಲಿಂಗಿಗಳು ಸೇರಿದಂತೆ 1,63,14,479 ಮತದಾರರು ಮತ ಚಲಾಯಿಸಿದ್ದರು. ಕಾಂಗ್ರೆಸ್‌ನ ಪ್ರಮುಖ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ (Bhupesh baghel), ಉಪಮುಖ್ಯಮಂತ್ರಿ ಟಿ.ಎಸ್.ಸಿಂಗ್ ದೇವ್ ಮತ್ತು ವಿಧಾನಸಭಾ ಸ್ಪೀಕರ್ ಚರಣ್ ದಾಸ್ ಮಹಂತ್ ಸೇರಿದ್ದಾರೆ. ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ರಮಣ್‌ ಸಿಂಗ್‌ (Raman Singh) ಅವರು ಪ್ರಮುಖ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಸಮೀಕ್ಷೆಗಳು ಹೇಳಿದ್ದೇನು?

ಎಬಿಪಿ ನ್ಯೂಸ್-ಸಿ ವೋಟರ್: ಬಿಜೆಪಿ 36-48, ಕಾಂಗ್ರೆಸ್​ 41-53, ಬಿಎಸ್​ಪಿ 0, ಇತರ 0-4
ದೈನಿಕ್ ಭಾಸ್ಕರ್: ಬಿಜೆಪಿ 35-45, ಕಾಂಗ್ರೆಸ್​ 46-55, ಬಿಎಸ್​ಪಿ 0, ಇತರ 0-10
ಇಂಡಿಯಾ ಟುಡೇ- ಆಕ್ಸಿಸ್ ಮೈ ಇಂಡಿಯಾ: ಬಿಜೆಪಿ 36-46, ಕಾಂಗ್ರೆಸ್​ 40-50, ಬಿಎಸ್​ಪಿ 0,ಇತರ 1-5
ಇಂಡಿಯಾ ಟಿವಿ- ಸಿಎನ್ಎಕ್ಸ್: ಬಿಜೆಪಿ 30-40,ಕಾಂಗ್ರೆಸ್​ 46-56,ಬಿಎಸ್​ಪಿ 0,ಇತರ 3-5
ಜನ್ ಕಿ ಬಾತ್: ಬಿಜೆಪಿ 34-45,ಕಾಂಗ್ರೆಸ್​ 42-53,ಬಿಎಸ್​ಪಿ 0,ಇತರ 3
ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ 33.ಕಾಂಗ್ರೆಸ್​ 57, ಬಿಎಸ್​ಪಿ 0,ಇತರ 0
ರಿಪಬ್ಲಿಕ್ ಟಿವಿ- ಮ್ಯಾಟ್ರಿಜ್: ಬಿಜೆಪಿ 34-42, ಕಾಂಗ್ರೆಸ್​ 44-52,ಬಿಎಸ್​ಪಿ 0,ಇತರ 00-02
ಟೈಮ್ಸ್ ನೌ-ಇಟಿಜಿ: ಬಿಜೆಪಿ 32-40, ಕಾಂಗ್ರೆಸ್​ 48-56,ಬಿಎಸ್​ಪಿ 0,ಇತರ 2-4
ಟಿವಿ 9 ಭಾರತ್ ವರ್ಷ್ – ಪೋಲ್ಸ್ಟ್ರಾಟ್: ಬಿಜೆಪಿ 35-45,ಕಾಂಗ್ರೆಸ್​ 40-50,ಬಿಎಸ್​ಪಿ 0,ಇತರ 0-3

ಮೋದಿ ಗ್ಯಾರಂಟಿ: ರಮಣ್‌ ಸಿಂಗ್‌

“ಇದು ಮೋದಿಜಿಯವರ ಗ್ಯಾರಂಟಿʼʼ ಎಂದು ಛತ್ತೀಸ್‌ಗಢದ ಬಿಜೆಪಿಯ ಹಿರಿಯ ನಾಯಕ ರಮಣ್ ಸಿಂಗ್ ಹೇಳಿದ್ದಾರೆ. “ಜನರು ಮೋದಿಜಿಯವರ ಗ್ಯಾರಂಟಿಯನ್ನು ನಂಬಿದ್ದಾರೆ. ಅದನ್ನೇ ಟ್ರೆಂಡ್‌ಗಳು ತೋರಿಸುತ್ತಿವೆ. ಒಳಪ್ರವಾಹವನ್ನು ನಾವು ತಿಳಿದಿದ್ದೆವು. ಆದರೆ ಅದು ಇಷ್ಟು ದೊಡ್ಡದಾಗಿದೆ ಎಂದು ತಿಳಿದಿರಲಿಲ್ಲ. ಭೂಪೇಶ್ ಬಘೇಲ್ ಅವರನ್ನು ಛತ್ತೀಸ್‌ಗಢ ತಿರಸ್ಕರಿಸಿದೆ. ಭೂಪೇಶ್ ಬಘೇಲ್ ಅವರ ಭ್ರಷ್ಟಾಚಾರ, ಮದ್ಯ ಹಗರಣ, ಮಹದೇವ್ ಆ್ಯಪ್ ಹಗರಣವು ತಿರುಗೇಟು ನೀಡಿದೆ” ಎಂದು ರಮಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಮುಖ್ಯಮಂತ್ರಿಯಾಗುತ್ತಾರೆ ಎಂಬುದಕ್ಕೆ ಪ್ರತಿಕ್ರಿಯಿಸಿದ ರಮಣ್‌ ಸಿಂಗ್‌, “ಅದು ಪಕ್ಷದ ನಿರ್ಧಾರ. ನಾನು ಎಂದಿಗೂ ಏನನ್ನೂ ಕೇಳಲಿಲ್ಲ. ನನಗೆ ನಿಯೋಜಿಸಲಾದ ಯಾವುದೇ ಕೆಲಸವನ್ನು ಸಮರ್ಪಣಾ ಭಾವದಿಂದ ಮಾಡಿದ್ದೇನೆ” ಎಂದಿದ್ದಾರೆ.

Continue Reading

ದೇಶ

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

ಮಧ್ಯಪ್ರದೇಶ ಹಾಗೂ ರಾಜಸ್ಥಾನ ಈ ಎರಡೂ ರಾಜ್ಯಗಳ ಫಲಿತಾಂಶದ (Election Results 2023) ಪ್ರಭಾವ ಮುಂದಿನ ವರ್ಷ ಆಗಮಿಸುತ್ತಿರುವ ಲೋಕಸಭೆ ಚುನಾವಣೆಯ ಪ್ರದರ್ಶನದ ಮೇಲೆ ಭಾರಿಯಾಗಿಯೇ ಆಗಲಿದೆ.

VISTARANEWS.COM


on

election five states
Koo

ಹೊಸದಿಲ್ಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ (Election Results 2023) ನಡೆಯುತ್ತಿದ್ದಂತೆ, ಎರಡು ದೊಡ್ಡ ರಾಜ್ಯಗಳಾದ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಬಿಜೆಪಿ ಪರ ಬಂದಿರುವುದು ಸ್ಪಷ್ಟವಾಗಿದೆ. ಇದರ ಜತೆ ಛತ್ತೀಸ್‌ಗಢದಲ್ಲೂ ಬಿಜೆಪಿ ಪಾರಮ್ಯ ಸಾಧಿಸುತ್ತಿದೆ. ರಾಜಸ್ಥಾನ (Rajasthan election result) ಹಾಗೂ ಮಧ್ಯಪ್ರದೇಶಗಳು (Madhya Pradesh election result) ಬಿಜೆಪಿ ಕಡೆ ಒಲವು ತೋರಿಸುತ್ತಿರುವಂತೆ, ಮುಂದಿನ ಲೋಕಸಭೆ ಚುನಾವಣೆಯಲ್ಲಿ (Parliament Election 2024) ಈ ರಾಜ್ಯಗಳ ಪ್ರದರ್ಶನದ ಸ್ಥೂಲ ಚಿತ್ರಣವೂ ಲಭ್ಯವಾಗುವಂತಾಗಿದೆ.

ರಾಜಸ್ಥಾನದಲ್ಲಿ ಹಾಗೂ ಮಧ್ಯಪ್ರದೇಶದಲ್ಲಿ ಎಕ್ಸಿಟ್‌ ಪೋಲ್‌ ನಿರೀಕ್ಷೆಗಳಂತೆಯೇ ಬಿಜೆಪಿ ಮುನ್ನಡೆ ಸಾಧಿಸಿದೆ. ಸದ್ಯ ರಾಜಸ್ಥಾನದಲ್ಲಿ ಬಿಜೆಪಿ 106 ಸ್ಥಾನಗಳೊಂದಿಗೆ ಮುನ್ನಡೆ ಹಾಗೂ ಮಧ್ಯಪ್ರದೇಶದಲ್ಲಿ 150 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದೆ. ಈ ಎರಡೂ ರಾಜ್ಯಗಳನ್ನು ಬಿಜೆಪಿ ಬಗಲಿಗೆ ಹಾಕಿಕೊಳ್ಳುವುದು ಖಚಿತವಾಗಿದೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಜಸ್ಥಾನದಲ್ಲಿ ಕಾಂಗ್ರೆಸ್‌ನಿಂದ ಕಿತ್ತುಕೊಳ್ಳಲಿದೆ.

ಈ ಎರಡೂ ರಾಜ್ಯಗಳ ಫಲಿತಾಂಶ ಪ್ರಭಾವ ಬೀರಲಿರುವುದು ಮುಂದಿನ ವರ್ಷ ಆಗಮಿಸುತ್ತಿರುವ ಲೋಕಸಭೆ ಚುನಾವಣೆಯ ಪ್ರದರ್ಶನದ ಮೇಲೆ. ಸಾಮಾನ್ಯವಾಗಿ ಲೋಕಸಭೆ ಚುನಾವಣೆಗಳಲ್ಲಿ ರಾಜ್ಯಗಳ ಮತದಾರರು, ರಾಜ್ಯದಲ್ಲಿ ಯಾವ ಸರ್ಕಾರ ಅಸ್ತಿತ್ವದಲ್ಲದೆಯೋ ಆ ಪಕ್ಷದ ಪರವಾಗಿ ಮತ ಚಲಾಯಿಸುವುದು ರೂಢಿಯಾಗಿದೆ. ಈ ನಿಟ್ಟಿನಿಂದ ನೋಡಿದರೆ, ಈ ಎರಡೂ ರಾಜ್ಯಗಳಲ್ಲಿ ಗರಿಷ್ಠ ಮತದಾರರು ಬಿಜೆಪಿಗೆ ಮತ ಹಾಕುವ ಸಾಧ್ಯತೆ ಇದೆ.

ಮಧ್ಯಪ್ರದೇಶದಲ್ಲಿ 29 ಲೋಕಸಭೆ ಸ್ಥಾನಗಳು ಹಾಗೂ ರಾಜಸ್ಥಾನದಲ್ಲಿ 25 ಲೋಕಸಭೆ ಸ್ಥಾನಗಳು ಇವೆ. ಒಟ್ಟಾಗಿ 54 ಸ್ಥಾನಗಳಾಗುತ್ತವೆ. ಈ ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆ ಇದೆ. ಕಳೆದ ಸಲ ಲೋಕಸಭೆ ಚುನಾವಣೆ ನಡೆದಾಗ, ಈ ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿ ಇರಲಿಲ್ಲ. ಆದರೂ ಇವೆರಡೂ ಕಡೆಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ 53 ಸ್ಥಾನ ಗೆದ್ದಿತ್ತು. ಮಧ್ಯಪ್ರದೇಶದಲ್ಲಿ ಒಂದೇ ಒಂದು ಸ್ಥಾನವನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು 28 ಸೀಟ್‌ಗಳನ್ನು ಗೆದ್ದಿತ್ತು. ರಾಜಸ್ಥಾನದಲ್ಲಿ 25ರಲ್ಲಿ 24 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಉಳಿದ ಒಂದು ಸ್ಥಾನ ಕೂಡ ಬಿಜೆಪಿ ಮಿತ್ರ ಪಕ್ಷದ ಪಾಲಾಗಿತ್ತು. ಈ ಬಾರಿ ರಾಜ್ಯ ಸರ್ಕಾರವೂ ಬಿಜೆಪಿಯದೇ ಆದರೆ ಮತ್ತೊಮ್ಮೆ ಅಷ್ಟೂ ಸ್ಥಾನಗಳನ್ನು ಗೆದ್ದುಕೊಳ್ಳುವುದು ಸುಲಭವಾಗುತ್ತದೆ.

ಮಧ್ಯಪ್ರದೇಶದಲ್ಲಿ 15 ವರ್ಷಕ್ಕೂ ಹೆಚ್ಚು ಅವಧಿಗೆ ಅಧಿಕಾರದಲ್ಲಿದ್ದ ಭಾರತೀಯ ಜನತಾ ಪಾರ್ಟಿಗೆ ಈ ಬಾರಿ ಆಡಳಿತ ವಿರೋಧಿ ಅಲೆ ತಟ್ಟಿತ್ತು. ಆದರೆ ಬಿಜೆಪಿಯ ವಿರುದ್ಧ ಮತದಾರರು ತಿರಸ್ಕಾರವನ್ನು ತೋರಿಲ್ಲ. ಕೊನೆ ಗಳಿಗೆಯಲ್ಲಿ ಸಿಎಂ ಪ್ರಕಟಿಸಿದ ಉಚಿತ ಕೊಡುಗೆಗಳು ಮತದಾರರನ್ನು ಬಿಜೆಪಿಯತ್ತ ಎಳೆದು ತಂದಿರುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ನ ವಿರುದ್ಧ ಸಾಕಷ್ಟು ಆಡಳಿತ ವಿರೋಧಿ ಅಲೆ ಇತ್ತು. ಸಿಎಂ ಅಶೋಕ್ ಗೆಹ್ಲೋಟ್ ಮರಳಿ ಅಧಿಕಾರ ಪಡೆಯುವುದಕ್ಕಾಗಿ ಸಾಕಷ್ಟು ಕೊಡುಗೆ ಘೋಷಣೆ ಮಾಡಿದ್ದರೂ, ಅದನ್ನು ಬಹುಮತವಾಗಿ ಪರಿವರ್ತಿಸಲು ಅವರಿಗೆ ಸಾಧ್ಯವಾಗಿಲ್ಲ.

modi in telangana

ಹಿಂದಿ ಬೆಲ್ಟ್‌ನ ಈ ಎರಡು ಪ್ರಮುಖ ರಾಜ್ಯಗಳ 54 ಸ್ಥಾನಗಳನ್ನು ಗೆದ್ದುಕೊಳ್ಳುವುದು ಬಿಜೆಪಿಗೆ ಲೋಕಸಭೆಯಲ್ಲಿ ಲಾಟರಿ ಹೊಡೆದಂತೆಯೇ. ಈ ಎರಡೂ ರಾಜ್ಯಗಳಲ್ಲಿ ಈ ಬಾರಿಯ ಪ್ರಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರು ಭಾರಿ ಪ್ರಮಾಣದಲ್ಲಿ ರ‍್ಯಾಲಿಗಳನ್ನು ನಡೆಸಿ ಪ್ರಚಾರ ಮಾಡಿದ್ದರು.

ಈ ನಡುವೆ, ಛತ್ತೀಸ್‌ಗಢದಲ್ಲಿ ಕೂಡ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಎರಡೂ ರಾಜ್ಯಗಳ ಮುನ್ನಡೆ ನಿರೀಕ್ಷಿತವಾಗಿದ್ದರೆ, ಛತ್ತೀಸ್‌ಗಢದ ಮುನ್ನಡೆ ಅನಿರೀಕ್ಷಿತವಾಗಿದೆ. ಇಲ್ಲಿ 11 ಲೋಕಸಭೆ ಸ್ಥಾನಗಳಿವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈಗ ಪಕ್ಷ ಅಧಿಕಾರದಲ್ಲಿ ಇರುವುದರಿಂದ 11ರಲ್ಲಿ 11 ಸ್ಥಾನಗಳನ್ನು ಕೂಡ ಬಗಲಿಗೆ ಹಾಕಿಕೊಳ್ಳಲು ಬಿಜೆಪಿ ಎಲ್ಲ ಪ್ರಯತ್ನ ನಡೆಸುವುದು ನಿಶ್ಚಿತ. ಸದ್ಯದ ಟ್ರೆಂಡ್‌ಗಳ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ಸನ್ನೂ ಹಿಂದಿಕ್ಕಿ ಮುನ್ನಡೆದಿದೆ. ಇಲ್ಲಿನ ಫಲಿತಾಂಶ ಎಕ್ಸಿಟ್‌ ಪೋಲ್‌ಗಳನ್ನು ಸುಳ್ಳಾಗಿಸಲಿದೆ. ಇಲ್ಲಿನ 11 ಸ್ಥಾನಗಳನ್ನೂ ಪರಿಗಣಿಸಿದರೆ ಬಿಜೆಪಿ ಈ ಸಲದ ವಿಧಾನಸಭೆ ಚುನಾವಣೆಯಲ್ಲಿ 65 ಲೋಕಸಭೆ ಸ್ಥಾನಗಳನ್ನೂ ಬುಟ್ಟಿಗೆ ಕೆಡವಿಕೊಂಡಂತಾಗುತ್ತದೆ.

ಇದನ್ನೂ ಓದಿ: Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

Continue Reading

ದೇಶ

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Ladli Behna: ಮಧ್ಯಪ್ರದೇಶದಲ್ಲಿ ಚುನಾವಣೆಗೂ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದರು. ಇದು ಬಿಜೆಪಿಗೆ ವರದಾನವಾಯಿತು ಎಂದು ಹೇಳಲಾಗುತ್ತಿದೆ.

VISTARANEWS.COM


on

Shivraj Singh Chouhan
Koo

ಭೋಪಾಲ್‌: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ (Madhya Pradesh Assembly Election 2023) ಆಡಳಿತಾರೂಢ ಬಿಜೆಪಿಯು ಚುನಾವಣೆ ಸಮೀಕ್ಷೆ, ಪಕ್ಷದ ಮುಖಂಡರ ನಿರೀಕ್ಷೆಯನ್ನೂ ಮೀರಿ ಮುನ್ನಡೆ ಸಾಧಿಸಿದೆ. ಒಟ್ಟು 230 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ. ಬಿಜೆಪಿಗೆ ಗೆಲುವಿಗೆ ಹಲವು ಕಾರಣಗಳನ್ನು ನೀಡಲಾಗುತ್ತಿದ್ದರೂ ಚುನಾವಣೆಗೆ ಮೊದಲು ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಅವರು ಜಾರಿಗೆ ತಂದ ಕೆಲ ಯೋಜನೆಗಳು ಗೆಲುವಿಗೆ (Madhya Pradesh Election Result 2023) ಮುಖ್ಯ ಕಾರಣ ಎಂದೇ ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ, ಲಾಡ್ಲಿ ಬೆಹನಾ (Ladli Behna) ಯೋಜನೆಯು ಮಧ್ಯಪ್ರದೇಶ ಹೆಣ್ಣುಮಕ್ಕಳ ಮನ ಗೆದ್ದಿತು ಎಂದು ಹೇಳಲಾಗುತ್ತಿದೆ.

ಏನಿದು ಲಾಡ್ಲಿ ಬೆಹನಾ ಸ್ಕೀಮ್?

ಮಧ್ಯಪ್ರದೇಶದಲ್ಲಿ ಬಡ ಹೆಣ್ಣುಮಕ್ಕಳಿಗೆ ಮಾಸಿಕ 1 ಸಾವಿರ ರೂ. ಸಹಾಯ ಧನ ನೀಡುವುದೇ ಲಾಡ್ಲಿ ಬೆಹನಾ ಯೋಜನೆಯಾಗಿದೆ. ಕಾಂಗ್ರೆಸ್‌ ಉಚಿತ ಕೊಡುಗೆಗಳ ಘೋಷಣೆಯನ್ನು ಮೊದಲೇ ಅರಿತಿದ್ದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು 2023ರ ಮಾರ್ಚ್‌ನಲ್ಲಿಯೇ ಲಾಡ್ಲಿ ಬೆಹನಾ ಯೋಜನೆಯನ್ನು ಜಾರಿಗೆ ತಂದರು. ಯೋಜನೆ ಜಾರಿಗೆ ತಂದು, ಬಡ ಹೆಣ್ಣುಮಕ್ಕಳ ಖಾತೆಗಳಿಗೆ ಮಾಸಿಕ 1 ಸಾವಿರ ರೂ. ಜಮೆ ಮಾಡಿಸಿದರು. ಆ ಮೂಲಕ ಸರ್ಕಾರವು ಮಹಿಳೆಯರ ಪರ ಇದೆ ಎಂಬ ಸಂದೇಶ ರವಾನಿಸಿದರು.

ಅಷ್ಟೇ ಅಲ್ಲ, ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ ಎನ್ನುವಾಗ ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ನೀಡುವ ಮಾಸಿಕ 1 ಸಾವಿರ ರೂ. ಸಹಾಯಧನದ ಮೊತ್ತವನ್ನು 1,250 ರೂ.ಗೆ ಏರಿಸಿದರು. ಅಲ್ಲದೆ, ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.35ರಷ್ಟು ಮೀಸಲಾತಿ ಘೋಷಿಸಿದರು. ಸಾವನ್‌ ತಿಂಗಳಲ್ಲಿ ಬಡವರಿಗೆ ಕೇವಲ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ ನೀಡಿದರು. ಇದರಿಂದಾಗಿ ಮಧ್ಯಪ್ರದೇಶದ ಮಹಿಳೆಯರು ಬಿಜೆಪಿ ಪರ ವಾಲಿದರು. ಕಾಂಗ್ರೆಸ್‌ ಗ್ಯಾರಂಟಿಗಳನ್ನೂ ಮೀರಿ ಅವರು ಬಿಜೆಪಿಗೆ ಮತ ಹಾಕಿದರು ಎಂದು ತಿಳಿದುಬಂದಿದೆ. ಇದರೊಂದಿಗೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಐದನೇ ಬಾರಿ ಸಿಎಂ ಆಗುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ

ಛತ್ತೀಸ್‌ಗಢ 11, ಮಧ್ಯಪ್ರದೇಶ 29, ಮಿಜೋರಾಂ 1, ರಾಜಸ್ಥಾನ 25 ಹಾಗೂ ತೆಲಂಗಾಣದ 17 ಲೋಕಸಭೆ ಕ್ಷೇತ್ರ ಸೇರಿ ಐದೂ ರಾಜ್ಯಗಳಲ್ಲಿ ಒಟ್ಟು 83 ಲೋಕಸಭೆ ಕ್ಷೇತ್ರಗಳಿವೆ. ಈ ರಾಜ್ಯಗಳಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆಯೋ, ಆ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರ ಗೆಲ್ಲಲು ಸಾಧ್ಯವಾಗಲಿದೆ. ಹಾಗೆಯೇ, ಜನರ ಒಲವು ಯಾವ ಪಕ್ಷದ ಕಡೆ ಇದೆ ಎಂಬುದರ ಮುನ್ಸೂಚನೆಯು ವಿಧಾನಸಭೆ ಚುನಾವಣೆಯಲ್ಲಿಯೇ ತಿಳಿಯಲಿದೆ. ಲೋಕಸಭೆ ಚುನಾವಣೆಯ ಪ್ರಚಾರಕ್ಕೂ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮುನ್ನುಡಿ ಬರೆಯಲಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Maratha Mahamela cannot be held Belagavi district administration denies permission for MES
ಕರ್ನಾಟಕ10 mins ago

Assembly Session: ಮರಾಠ ಮಹಾಮೇಳಾವ್‌ ನಡೆಸುವಂತಿಲ್ಲ; ಎಂಇಎಸ್‌ಗೆ ಟಕ್ಕರ್‌ ಕೊಟ್ಟ ಜಿಲ್ಲಾಡಳಿತ

Tulu Language
ಕರ್ನಾಟಕ12 mins ago

Tulu Language : ತುಳುಗೆ ಸಿಗಲಿದೆಯೇ ಭಾಷಾ ಪ್ರಾತನಿಧ್ಯ? ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ!

Rajastan Elections: 10 reasons for BJP Win
ದೇಶ27 mins ago

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

raman singh bhupesh baghel
ದೇಶ28 mins ago

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

Ration card not cancelled and Vidhanasoudha
ಕರ್ನಾಟಕ39 mins ago

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Sachin Tendulkar says he is super impressed by Vicky Kaushal
ಕ್ರಿಕೆಟ್48 mins ago

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Crime Sense Murder Case
ಕರ್ನಾಟಕ1 hour ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ1 hour ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ2 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ2 hours ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ2 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ8 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ21 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌