PM Narendra Modi: ಪ್ರಧಾನಿಯಿಂದ ಭವ್ಯ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಉದ್ಘಾಟನೆ, ಅಮೃತ್‌ ಭಾರತ್‌ ರೈಲಿಗೆ ಚಾಲನೆ - Vistara News

ದೇಶ

PM Narendra Modi: ಪ್ರಧಾನಿಯಿಂದ ಭವ್ಯ ಅಯೋಧ್ಯಾ ಧಾಮ್ ರೈಲು ನಿಲ್ದಾಣ ಉದ್ಘಾಟನೆ, ಅಮೃತ್‌ ಭಾರತ್‌ ರೈಲಿಗೆ ಚಾಲನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು 240 ಕೋಟಿ ರೂ. ವೆಚ್ಚದ ನೂತನ, ಭವ್ಯ ಅಯೋಧ್ಯಾ ಧಾಮ್ ರೈಲ್ವೇ ನಿಲ್ದಾಣವನ್ನು (Ayodhya Dham Railway station) ಉದ್ಘಾಟಿಸಿದರು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ದೇಗುಲ ನಗರಿ ಅಯೋಧ್ಯೆಗೆ ಇಂದು ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು 240 ಕೋಟಿ ರೂ. ವೆಚ್ಚದ ನೂತನ, ಭವ್ಯ ಅಯೋಧ್ಯಾ ಧಾಮ್ ರೈಲ್ವೇ ನಿಲ್ದಾಣವನ್ನು (Ayodhya Dham Railway station) ಉದ್ಘಾಟಿಸಿದರು. ಇದಕ್ಕೂ ಮುನ್ನ ಅವರು 5 ಕಿಲೋಮೀಟರ್‌ ದೂರ ರೋಡ್‌ ಶೋ ನಡೆಸಿದರು.

11.30ರ ಸುಮಾರಿಗೆ ನೂತನ ಅಯೋಧ್ಯಾ ಧಾಮ್‌ ರೈಲ್ವೆ ನಿಲ್ದಾಣವನ್ನು ಪ್ರಧಾನಿ ಉದ್ಘಾಟಿಸಿದರು. ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದತ್ಯನಾಥ್‌, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಉತ್ತರಪ್ರದೇಶ ರಾಜ್ಯಪಾಲ ಆನಂದಿ ಬೆನ್‌ ಉಪಸ್ಥಿತರಿದ್ದರು. ರೈಲ್ವೆ ನಿಲ್ದಾಣದ ಜೊತೆಗೆ 2 ಹೊಸ ಅಮೃತ್ ಭಾರತ್ ರೈಲುಗಳು ಮತ್ತು 6 ವಂದೇ ಭಾರತ್ ರೈಲುಗಳನ್ನು ಫ್ಲ್ಯಾಗ್ ಆಫ್ ಮಾಡಿದರು.

ಈದಕ್ಕೂ ಮುನ್ನ ಪ್ರಧಾನಿ ಮೋದಿ ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.40ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ತೆರೆದ ವಾಹನದಲ್ಲಿ ರೋಡ್‌ ಶೋ ಮಾಡಿದರು. ರೋಡ್‌ ಶೋ ನಡೆದ ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಜನ ನೆರೆದು ಮೋದಿಯವರನ್ನು ಪುಷ್ಪಾರ್ಚನೆ ಹಾಗೂ ಜಯಘೋಷಗಳಿಂದ ಸ್ವಾಗತಿಸಿದರು. ದೇಶದ ನಾನಾ ಕಡೆಗಳಿಂದ ಬಂದ ಸಾಂಸ್ಕೃತಿಕ ಕಲಾ ತಂಡಗಳು ದಾರಿಯುದ್ದಕ್ಕೂ ತಮ್ಮ ಕಲಾ ಪ್ರದರ್ಶನಗಳನ್ನು ನೀಡಿ ನೋಡುಗರ ಮನ ಸೂರೆಗೊಂಡವು.

ಮಧ್ಯಾಹ್ನ 1 ಗಂಟೆಗೆ ಮೋದಿಯವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಅಲ್ಲಿ ಅವರು ರಾಜ್ಯದಲ್ಲಿ ₹ 15,000 ಕೋಟಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಇವುಗಳಲ್ಲಿ ಅಯೋಧ್ಯೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ₹ 11,100 ಕೋಟಿ ಮೌಲ್ಯದ ಯೋಜನೆಗಳು ಮತ್ತು ಉತ್ತರ ಪ್ರದೇಶದಾದ್ಯಂತ ಇತರ ಯೋಜನೆಗಳಿಗೆ ಸಂಬಂಧಿಸಿದ ₹ 4,600 ಕೋಟಿ ಮೌಲ್ಯದ ಯೋಜನೆಗಳು ಸೇರಿವೆ.

ಅಯೋಧ್ಯಾ ಧಾಮ್ ರೈಲು ನಿಲ್ದಾಣ

ಅಯೋಧ್ಯೆ ರೈಲು ನಿಲ್ದಾಣವನ್ನು, ಸಿಟಿ ಅಯೋಧ್ಯಾ ಜಂಕ್ಷನ್‌ಗೆ (Ayodhya Railway Station) ಬದಲಿಗೆ ಅಯೋಧ್ಯಾ ಧಾಮ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ (Ayodhya Dham Junction). ರಾಮ ಮಂದಿರ ನಿರ್ಮಾಣಕ್ಕಾಗಿ ರಾಜಸ್ಥಾನದ ಭಾರತಪುರ್ ಜಿಲ್ಲೆಯಿಂದಲೇ ಕಲ್ಲುಗಳನ್ನು ತರಿಸಲಾಗಿತ್ತು. ಈ ಅಯೋಧ್ಯೆ ರೈಲು ನಿಲ್ದಾಣ ಅಭಿವೃದ್ಧಿಗೂ ಅಲ್ಲಿಂದಲೇ ಕಲ್ಲುಗಳನ್ನು ತರಿಸಲಾಗಿದೆ. ಗುಣಮಟ್ಟ ಮತ್ತು ಅನುಕೂಲತೆಯ ದೃಷ್ಟಿಯಿಂದ ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಸಹ ಮೀರಿಸುವಂತಹ ಅದರ ನಿಖರವಾದ ಯೋಜಿತ ನಿಲ್ದಾಣವನ್ನು ಇಲ್ಲಿ ಅಭಿವೃದ್ಧಿಪಡಿಸಲಾಗಿದೆ. ಶಿಶುಪಾಲನಾ ಕೇಂದ್ರ, ಆನಾರೋಗ್ಯರಿಗೆ ಪ್ರತ್ಯೇಕ ಕೋಣೆ, ಪ್ರವಾಸಿ ಮಾಹಿತಿ ಕೇಂದ್ರ, ಅಗ್ನಿ ಅವಘಡ ನಿರ್ಗಮನ ದ್ವಾರ ಮತ್ತು ದೇಶದಲ್ಲೇ ಅತಿ ದೊಡ್ಡ ಎನ್ನಬಹುದಾದ ಅಂಗಣ ಸೇರಿದಂತೆ ಅನೇಕ ಸೌಲಭ್ಯಗಳು ಈ ರೈಲ್ವೆ ನಿಲ್ದಾಣದಲ್ಲಿ ದೊರೆಯಲಿವೆ.

ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣದ ಹಂತ I – ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಎಂದು ಕರೆಯಲ್ಪಡುತ್ತದೆ. ₹ 240 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಮೂರು ಅಂತಸ್ತಿನ ಆಧುನಿಕ ರೈಲು ನಿಲ್ದಾಣದ ಕಟ್ಟಡವು ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜಾ ಅಗತ್ಯಗಳಿಗಾಗಿ ಅಂಗಡಿಗಳು, ಕ್ಲೋಕ್‌ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು ಮತ್ತು ಕಾಯುವ ಹಾಲ್‌ಗಳಂತಹ ಎಲ್ಲಾ ಆಧುನಿಕ ವೈಶಿಷ್ಟ್ಯಗಳೊಂದಿಗೆ ಸುಸಜ್ಜಿತವಾಗಿದೆ. ನಿಲ್ದಾಣದ ಕಟ್ಟಡ ಎಲ್ಲರಿಗೂ ಪ್ರವೇಶಿಸಬಹುದಾದಂತೆ ಐಜಿಬಿಸಿ-ಪ್ರಮಾಣೀಕೃತ ಹಸಿರು ನಿಲ್ದಾಣ ಕಟ್ಟಡವಾಗಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

Narendra Modi:ಬಿಹಾರದ ಪಾಟ್ನಾದಲ್ಲಿರುವ ಐತಿಹಾಸಿಕ ಗುರುದ್ವಾರ ಪಾಟ್ನಾ ಸಾಹಿಬ್‍ಗೆ ಭೇಟಿ ನೀಡಿದ ಪಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ, ಬಳಿಕ ಹರಿಮಂದಿರ್ ಜಿ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು. ಅಲ್ಲಿ ಭಕ್ತರಿಗೆ ಅನ್ನ ಸಂಪರ್ತಣೆ ಮಾಡಿದ್ದಾರೆ. ಅಲ್ಲಿ ಸ್ವತಃ ಅಡುಗೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಳಿಕ ಅಲ್ಲಿನ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿದ್ದಾರೆ.

VISTARANEWS.COM


on

Narendra Modi
Koo

ಪಾಟ್ನಾ: ಲೋಕಸಭಾ ಚುನಾವಣೆ(Lok Sabha Election 2024)ಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ನಾಯಕನೂ ತನ್ನದೇ ವಿಭಿನ್ನ ಶೈಲಿಯಲ್ಲಿ ಜನರ ಮನಸ್ಸು ಗೆಲ್ಲಲು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಲೋಕಲ್‌ ಟ್ರೈನ್‌ನಲ್ಲಿ ಪ್ರಯಾಣಿಸುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಗಮನ ಸೆಳೆದಿದ್ದರು. ಇದಾದ ಬಳಿಕ ಸ್ಕೂಟರ್‌ನಲ್ಲಿ ತೆರಳಿ ಸ್ಮೃತಿ ಇರಾನಿ(Smriti Irani) ಪ್ರಚಾರ ಮಾಡಿದ್ದರು. ಅತ್ತ ಅಸಾದುದ್ದೀನ್‌ ಓವೈಸಿ ಕೂಡ ಭರ್ಜರಿ ಬೈಕ್‌ ರೈಡ್‌ ಮಾಡುವ ಮೂಲಕ ಜನರ ಗಮನ ಸೆಳೆದಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿ(Narendra Modi)ಯಂತೂ ಸಾಮಾನ್ಯರಲ್ಲಿ ಸಾಮಾನ್ಯ ಜನರಲ್ಲಿ ಬೆರೆಯುವ ಮೂಲಕ ಆಗಾಗ ಸುದ್ದಿಯಲ್ಲಿರುತ್ತಾರೆ. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್‌(Viral Video) ಆಗಿದೆ.

ಬಿಹಾರದ ಪಾಟ್ನಾದಲ್ಲಿರುವ ಐತಿಹಾಸಿಕ ಗುರುದ್ವಾರ ಪಾಟ್ನಾ ಸಾಹಿಬ್‍ಗೆ ಭೇಟಿ ನೀಡಿದ ಪಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ, ಬಳಿಕ ಹರಿಮಂದಿರ್ ಜಿ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದರು. ಅಲ್ಲಿ ಭಕ್ತರಿಗೆ ಅನ್ನ ಸಂಪರ್ತಣೆ ಮಾಡಿದ್ದಾರೆ. ಅಲ್ಲಿ ಸ್ವತಃ ಅಡುಗೆ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಳಿಕ ಅಲ್ಲಿನ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆ ಬಿಹಾರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮೋದಿ ಅವರು ಸಿಖ್ ಪೇಟವನ್ನು ಧರಿಸಿ ಸೋಮವಾರ ಸಾಹಿಬ್ ಗುರುದ್ವಾರದಲ್ಲಿ ಆಹಾರ ಸೇವೆಯಲ್ಲಿ ಪಾಲ್ಗೊಂಡರು. ಮೋದಿ ಅವರು ಸ್ಟೀಲ್ ಬಕೆಟ್ ಹಿಡಿದು ಸಿಖ್ಖರಿಗೆ ಆಹಾರ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಿಹಾರ ಪ್ರವಾಸದಲ್ಲಿರುವ ಮೋದಿ ಅವರು, ಇಂದು ಹಾಜಿಪುರ, ಮುಜಾಫರ್‍ಪುರ, ಮತ್ತು ಸರನ್ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ.

ಪಾಟ್ನಾ ಸಾಹಿಬ್ ಗುರುದ್ವಾರದ ಇತಿಹಾಸ

ಪಾಟ್ನಾ ಸಾಹಿಬ್ ಸಿಖ್ಖರ ಐದು ತಖತ್‍ಗಳಲ್ಲಿ ಒಂದಾಗಿದೆ. ಇದು ಬಿಹಾರದ ರಾಜಧಾನಿ ಪಾಟ್ನಾದಲ್ಲಿದೆ. ಮಹಾರಾಜ ರಂಜಿತ್ ಸಿಂಗ್ ಅವರು 18ನೇ ಶತಮಾನದಲ್ಲಿ ಗುರುದ್ವಾರ ಮತ್ತು ತಖತ್ ಅನ್ನು ನಿರ್ಮಿಸಿದ್ದರು. ಇದು ಸಿಖ್ಖರ 10ನೇ ಗುರು ಗೋವಿಂದ್‌ ಸಿಂಗ್‌ ಅವರ ಜನ್ಮ ಸ್ಥಳವೆಂದೇ ಪೂಜಿಸಲಾಗುತ್ತದೆ. 1666ರಲ್ಲಿ ಪಾಟ್ನಾದಲ್ಲಿ ಜನಿಸಿದ ಗುರು ಗೋವಿಂದ್‌ ಸಿಂಗ್‌ ಆನಂದ್‌ಪುರ ಸಾಹೀಬ್‌ಗೆ ತೆರಳುವ ಮುನ್ನ ಕೆಲ ವರ್ಷಗಳ ಕಾಲ ಈ ಸ್ಥಳದಲ್ಲಿ ಕಾಲ ಈ ಪುಣ್ಯ ಸ್ಥಳದಲ್ಲಿ ಕಳೆದಿದ್ದರು ಎನ್ನಲಾಗಿದೆ.

ಇದನ್ನೂ ಓದಿ:CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

Continue Reading

ಪ್ರಮುಖ ಸುದ್ದಿ

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

CBSE 12th Results 2024: ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

VISTARANEWS.COM


on

CBSE 12th results 2024
Koo

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ (CBSE 12th Results 2024) ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ (Pass) ಪ್ರಮಾಣ ಶೇ.87.98ರಷ್ಟಿದೆ. 16,33,730 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದು, 14,26,420 ಮಂದಿ ಪಾಸ್‌ ಆಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ.

ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಇದಲ್ಲದೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು digilocker.gov.in ಮತ್ತು results.gov.in ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. ಆನ್‌ಲೈನ್‌ನಲ್ಲಿ ಫಲಿತಾಂಶಗಳನ್ನು ಪ್ರವೇಶಿಸಲು, ವಿದ್ಯಾರ್ಥಿಗಳಿಗೆ ಅವರ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿ ಅಗತ್ಯವಿರುತ್ತದೆ.

CBSE 10ನೇ ತರಗತಿ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಟಾಪರ್‌ಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಆದರೆ ಮಂಡಳಿಯು ಪ್ರತಿ ತರಗತಿಯಲ್ಲಿನ ಅಭ್ಯರ್ಥಿಗಳ ಸಂಖ್ಯೆ, ಉತ್ತೀರ್ಣ ಶೇಕಡಾವಾರು, ಲಿಂಗವಾರು ಫಲಿತಾಂಶಗಳು ಮತ್ತು ಇತರ ಸಂಬಂಧಿತ ವಿವರಗಳನ್ನು ತನ್ನ ಅಧಿಸೂಚನೆಯಲ್ಲಿ ಬಿಡುಗಡೆ ಮಾಡುತ್ತದೆ.

CBSE ಬೋರ್ಡ್ ಫಲಿತಾಂಶ 2024 ಅನ್ನು ಹೇಗೆ ಪರಿಶೀಲಿಸುವುದು?

ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಲು, ಈ ಹಂತಗಳನ್ನು ಅನುಸರಿಸಿ:
ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ: cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್‌ಗೆ ಹೋಗಿ ಅಥವಾ ಕೆಳಗಿನ ಯಾವುದೇ ವೆಬ್‌ಸೈಟ್‌ಗಳಿಗೆ ಹೋಗಿ: cbse.nic.in, cbseresults.nic.in, ಅಥವಾ results.cbse.nic.in.
ಪ್ರವೇಶ ಫಲಿತಾಂಶಗಳ ವಿಭಾಗ: ವೆಬ್‌ಸೈಟ್‌ನ ಮುಖಪುಟದಲ್ಲಿ “ಫಲಿತಾಂಶಗಳು” ಅಥವಾ “ಫಲಿತಾಂಶ” ವಿಭಾಗವನ್ನು ನೋಡಿ.
ವರ್ಗ ಮತ್ತು ವರ್ಷವನ್ನು ಆಯ್ಕೆಮಾಡಿ: ನಿಮ್ಮ ತರಗತಿಗೆ ಸೂಕ್ತವಾದ ಆಯ್ಕೆಯನ್ನು ಆರಿಸಿ.
ವಿವರಗಳನ್ನು ನಮೂದಿಸಿ: ನಿಮ್ಮ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ನಮೂದಿಸಲು ನಿಮ್ಮನ್ನು ಕೇಳಲಾಗುತ್ತದೆ. ಈ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
ಫಲಿತಾಂಶಗಳನ್ನು ಸಲ್ಲಿಸಿ ಮತ್ತು ವೀಕ್ಷಿಸಿ: ನಿಮ್ಮ ವಿವರಗಳನ್ನು ನಮೂದಿಸಿದ ನಂತರ, ಫಾರ್ಮ್ ಅನ್ನು ಸಲ್ಲಿಸಿ. ಆಯ್ಕೆಮಾಡಿದ ವರ್ಗ ಮತ್ತು ವರ್ಷಕ್ಕೆ ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಉಳಿಸಿ ಅಥವಾ ಮುದ್ರಿಸಿ: ನಿಮ್ಮ ಫಲಿತಾಂಶಗಳನ್ನು ಪ್ರದರ್ಶಿಸಿದ ನಂತರ, ನೀವು ಡಿಜಿಟಲ್ ನಕಲನ್ನು ಉಳಿಸಬಹುದು ಅಥವಾ ಭವಿಷ್ಯದ ಉಲ್ಲೇಖಕ್ಕಾಗಿ ಅದನ್ನು ಮುದ್ರಿಸಬಹುದು.

CBSE ಬೋರ್ಡ್ ಫಲಿತಾಂಶ 2024 ಅನ್ನು ಪರಿಶೀಲಿಸಲು ನೇರ ಲಿಂಕ್

ಹೆಚ್ಚುವರಿಯಾಗಿ, ವಿದ್ಯಾರ್ಥಿಗಳು ನಿಮ್ಮ ಫಲಿತಾಂಶಗಳನ್ನು ಡಿಜಿಲಾಕರ್ (digilocker.gov.in) ಮತ್ತು results.gov.in ಮೂಲಕ ಅದೇ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ಬಳಸಿಕೊಂಡು ಪರಿಶೀಲಿಸಬಹುದು.

ನಿಮ್ಮ ಫಲಿತಾಂಶಗಳನ್ನು ಸರಾಗವಾಗಿ ಪಡೆಯಲು, ನಿಮ್ಮ ಡಾಕ್ಯುಮೆಂಟ್‌ಗಳನ್ನು ಕೈಯಲ್ಲಿ ಇರಿಸಿಕೊಳ್ಳಲು ಮತ್ತು ಅವುಗಳನ್ನು ಸರಿಯಾಗಿ ನಮೂದಿಸಲು ಮರೆಯದಿರಿ. ನೀವು ಯಾವುದೇ ಸಮಸ್ಯೆ ಎದುರಿಸಿದರೆ ಸಹಾಯಕ್ಕಾಗಿ CBSE ಸಹಾಯವಾಣಿ ಅಥವಾ ನಿಮ್ಮ ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.

10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು CBSEಯಿಂದ ಫೆಬ್ರವರಿ 15ರಿಂದ ಮಾರ್ಚ್ 13, 2024 ರವರೆಗೆ ನಡೆಸಲಾಯಿತು. 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ 15ರಿಂದ ಏಪ್ರಿಲ್ 2, 2024ರವರೆಗೆ ರಾಷ್ಟ್ರವ್ಯಾಪಿ ನಡೆಸಲಾಯಿತು. ಎರಡೂ ತರಗತಿಗಳಿಗೆ ಪರೀಕ್ಷೆಗಳನ್ನು ಒಂದೇ ಪಾಳಿಯಲ್ಲಿ 10:30ರಿಂದ ನಡೆಸಲಾಯಿತು. ಈ ವರ್ಷ, ಸರಿಸುಮಾರು 39 ಲಕ್ಷ ಅಭ್ಯರ್ಥಿಗಳು ಎರಡೂ ತರಗತಿಗಳಿಗೆ CBSE ಬೋರ್ಡ್ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Continue Reading

ದೇಶ

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha election 2024: ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha election 2024) ನಾಲ್ಕನೇ ಹಂತದ ಮತದಾನ ಇಂದು ನಡೆಯುತ್ತಿದೆ. ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟ(INDIA) ಇದು ಬಹಳ ಸವಾಲಿನ ಹಂತವಾಗಿದ್ದು, ಆಂತರಿಕ ಬಿಕ್ಕಟ್ಟು ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಕಳೆದ ಹಂತಗಳಿಗೆ ಹೋಲಿಸಿದರೆ ಬಿಜೆಪಿ ನೇತೃತ್ವದ (NDA) ಒಕ್ಕೂಟದಲ್ಲಿ ಈ ಬಾರಿ ಸಣ್ಣಪುಟ್ಟ ಬಿಕ್ಕಟ್ಟನ್ನು ಹೊರತುಪಡಿಸಿದರೆ ಬೇರೆ ಏನು ಸಮಸ್ಯೆ ಇಲ್ಲದಂತೆ ಭಾಸವಾಗುತ್ತಿದೆ. ಪಶ್ಚಿಮ ಬಂಗಾಳ(West Bengal)ದ ಎಂಟು ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಬಿಕ್ಕಟ್ಟು ಎದುರಿಸುತ್ತಿದ್ದು, ಕಾಂಗ್ರೆಸ್‌ ಮತ್ತು ಸಿಎಐ(ಎಂ) ಜೊತೆ ಮೈತ್ರಿಯಲ್ಲಿ ಸಾಗಲು ತೃಣಮೂಲ ಕಾಂಗ್ರೆಸ್‌ (TMC) ಹಿಂದೇಟು ಹಾಕಿದೆ.

ಇಂದು ದೇಶಾದ್ಯಂತ ಒಟ್ಟು 96 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಎನ್‌ಡಿಎ ಒಟ್ಟು 97 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಆಂತರಿಕ ಬಿಕ್ಕಟ್ಟು ಎದುರಿಸುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದ ಒಂದೊಂದು ಕ್ಷೇತ್ರಗಳಲ್ಲಿ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ(ಅಠಾವಳೆ) ಪಕ್ಷ ಮಿತ್ರ ಪಕ್ಷ ತೆಲುಗು ದೇಶಂ ಪಾರ್ಟಿ ಮತ್ತು ಬಿಜೆಪಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೈತ್ರಿಕೂಟಕ್ಕೆ ಸವಾಲೊಡ್ಡಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಎನ್‌ಡಿಎ ಮೈತ್ರಿಕೂಟ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇನ್ನು ಈ ಹಂತದಲ್ಲಿ ಮತ್ತೊಂದು ಆಸಕ್ತಿಕರ ವಿಚಾರವೇನೆಂದರೆ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಅತಿ ದೊಡ್ಡ ಪಾಲುದಾರ ಪಕ್ಷವಾಗಿದ್ದು, ಕಳೆದ ಹಂತಗಳಿಗೆ ಹೋಲಿಸಿದರೆ ಈ ಬಾರಿ ಅತ್ಯಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಆಂಧ್ರಪ್ರದೇಶದಲ್ಲಿ ಬಿಜೆಪಿ ಒಟ್ಟು 25ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಮಿತ್ರ ಪಕ್ಷ ಟಿಡಿಪಿಗೆ ಬಿಟ್ಟುಕೊಟ್ಟಿದೆ. ಇನ್ನು ಎನ್‌ಡಿಎ ಯ ಇತರೆ ಸದಸ್ಯ ಪಕ್ಷಗಳು ಈ ಹಂತದಲ್ಲಿ ಮೂರು ಅಥವಾ ಅದಕ್ಕಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದೇ ರೀತಿಯ ಸೀಟು ಹಂಚಿಕೆಯನ್ನು ಐದನೇ ಮತ್ತು ಏಳನೇ ಹಂತದಲ್ಲಿ ಚುನಾವಣೆ ಎದುರಿಸುತ್ತಿರುವ ಮಹಾರಾಷ್ಟ್ರ ಮತ್ತು ಬಿಹಾರದಲ್ಲಿ ಕಾಣಬಹುದಾಗಿದೆ.

ಕಾಂಗ್ರೆಸ್‌ಗಿರುವ ಸವಾಲುಗಳೇನು?

ಎನ್‌ಡಿಎಗೆ ವಿರುದ್ಧ ನೇರಾನೇರ ಹಣಾಹಣಿಯಲ್ಲಿರುವ ಇಂಡಿಯಾ ಒಕ್ಕೂಟದಲ್ಲೂ ಈ ಹಂತದ ಚುನಾವಣೆಯಲ್ಲಿ ಭಾರೀ ಬಿಕ್ಕಟ್ಟು ಭುಗಿಲೆದ್ದಿರುವುದನ್ನು ಕಾಣಬಹುದಾಗಿದೆ. ಇಂಡಿಯಾ ಒಕ್ಕೂಟ ಈ ಬಾರಿ 95 ಕ್ಷೇತ್ರಗಳಲ್ಲಿ 148 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬರೋಬ್ಬರಿ 48 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇಂಧೋರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತನ್ನ ನಾಮಪತ್ರ ಹಿಂಪಡೆದಿರುವ ಕಾರಣ ಆ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ ಕಣದಲ್ಲಿಲ್ಲ. ಈ ಹಂತದ ಚುನಾವಣೆಯಲ್ಲಿ 96 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ 61 ಕ್ಷೇತ್ರಗಳಲ್ಲಿ(63.5%) ಸ್ಪರ್ಧಿಸುತ್ತಿದೆ. ಮೊಲದ ಮೂರು ಹಂತಗಳಲ್ಲಿ 54.9%, 79.5%, ಮತ್ತು 73.1% ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿತ್ತು.

ಇದನ್ನೂ ಓದಿ:Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪಕ್ಷವು ಬಿಹಾರ, ಜಾರ್ಖಂಡ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಸಣ್ಣ ಪಾಲುದಾರನಾಗಿರುವುದರಿಂದ ಹೆಚ್ಚಿನ ಪ್ರಮಾಣದ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿಲ್ಲ; ಪ್ರಸ್ತುತ ಹಂತದಲ್ಲಿ ಚುನಾವಣೆ ನಡೆಯಲಿರುವ ಈ ರಾಜ್ಯಗಳ 41 ಸ್ಥಾನಗಳಲ್ಲಿ ಕೇವಲ 10 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಇನ್ನು ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಒಕ್ಕೂಟದ ವಿರುದ್ಧವೇ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

Continue Reading

Lok Sabha Election 2024

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

PM Nanrendra Modi: ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

VISTARANEWS.COM


on

pm narendra Modi Varanasi road show
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Nanrendra Modi) ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ (Varanasi) ಲೋಕಸಭೆ ಚುನಾವಣೆ (Lok Sabha Election 2024) ಬಿಜೆಪಿ (BJP) ಸ್ಪರ್ಧಿಯಾಗಿ ನಾಮಪತ್ರ (nomination) ಸಲ್ಲಿಸಲಿದ್ದಾರೆ. ಇದಕ್ಕೆ ಒಂದು ದಿನ ಮೊದಲು, ಅಂದರೆ ಇಂದು ಸಂಜೆ ಭವ್ಯವಾದ ರೋಡ್‌ ಶೋ ನಡೆಯಲಿದೆ.

ರೋಡ್ ಶೋ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಗೇಟ್‌ನಿಂದ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಅಲ್ಲಿ ಮೋದಿ ಅವರು ಬಿಎಚ್‌ಯು ಸಂಸ್ಥಾಪಕ ಮಹಾಮಾನ ಪಂ. ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ರೋಡ್ ಶೋನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಜೊತೆಗೆ ಸಾಥ್ ನೀಡಲಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೆ ಇತರ ಪ್ರಮುಖರು ಭಾಗವಹಿಸಲಿದ್ದಾರೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಲಿವೆ. ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಲಿದೆ.

ಭಾರತ ರತ್ನ, ಶಹನಾಯ್‌ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಕುಟುಂಬ ಸದಸ್ಯರು ಮದನಪುರ ಬಳಿ ಶೆಹನಾಯಿ ಬಾರಿಸುವ ಮೂಲಕ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋನಲ್ಲಿ 5,000ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಲಿದ್ದು, 100 ಕಡೆ ಪುಷ್ಪವೃಷ್ಟಿ ಮಾಡಲಾಗುವುದು. ಇದರೊಂದಿಗೆ ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಾರಣಾಸಿಯ ಕಲಾವಿದರು ಮೋದಿಯನ್ನು ಸ್ವಾಗತಿಸಲು ಜಾನಪದ ನೃತ್ಯ ಮತ್ತು ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಮುಸ್ಲಿಂ ಸಮುದಾಯದವರೂ ಸ್ವಾಗತಕ್ಕೆ ಮುಂದೆ ಬಂದಿದ್ದು, ಮದನಪುರದಲ್ಲಿಯೇ ಮಾಜಿ ಸಂಸದ ರಾಜೇಶ್ ಮಿಶ್ರಾ ನೇತೃತ್ವದಲ್ಲಿ ಮುಸ್ಲಿಮರು ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರಧಾನಿ ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸುವ ಚಿತ್ರವೂ ರೋಡ್ ಶೋನಲ್ಲಿ ಇರುತ್ತದೆ. ಕಾರ್ಯಕ್ರಮ ಮುಕ್ತಾಯವಾದ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

Continue Reading
Advertisement
Murder case Hacked to death with sickle for stepping into a field with an injection order
ಕರ್ನಾಟಕ1 min ago

Murder case: ಇಂಜೆಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Narendra Modi
ದೇಶ6 mins ago

Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

CBSE 12th results 2024
ಪ್ರಮುಖ ಸುದ್ದಿ41 mins ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ50 mins ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Murder Case in hubballi
ಹುಬ್ಬಳ್ಳಿ56 mins ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್56 mins ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

shivamogga road accident hit and run
ಕ್ರೈಂ1 hour ago

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Lok Sabha Election 2024
ದೇಶ2 hours ago

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha Elections 2024 Jr NTR, Allu Arjun, Chiranjeevi cast votes
ಟಾಲಿವುಡ್2 hours ago

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ6 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ8 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ18 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ19 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ24 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌