PM Narendra Modi: ಮೋದಿ ಭೇಟಿ ಹಿನ್ನೆಲೆಯಲ್ಲಿ ತಿರಂಗಾ ಬಣ್ಣಗಳಲ್ಲಿ ಮಿನುಗಿದ ಸಿಡ್ನಿ ಹಾರ್ಬರ್, ಓಪೇರಾ ಹೌಸ್! - Vistara News

ದೇಶ

PM Narendra Modi: ಮೋದಿ ಭೇಟಿ ಹಿನ್ನೆಲೆಯಲ್ಲಿ ತಿರಂಗಾ ಬಣ್ಣಗಳಲ್ಲಿ ಮಿನುಗಿದ ಸಿಡ್ನಿ ಹಾರ್ಬರ್, ಓಪೇರಾ ಹೌಸ್!

PM Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದಾರೆ.

VISTARANEWS.COM


on

PM Narendra Modi: Sydney Harbour and Opera House light up in Tiranga colours
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಭೇಟಿ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಸಿಡ್ನಿ ಹಾರ್ಬರ್ (Sydney Harbour) ಮತ್ತು ಓಪೇರಾ ಹೌಸ್‌ ವನ್ನು (Opera House) ಭಾರತದ ತ್ರಿವರ್ಣಧ್ವಜ ಬಣ್ಣಗಳಲ್ಲಿ ಬೆಳಗಲಾಗಿತ್ತು. ಮಂಗಳವಾರ ಆಸ್ಟ್ರೇಲಿಯಾಕ್ಕೆ ಆಗಮಿಸಿದ ಮೋದಿ ದ್ವೀಪಕ್ಷೀಯ ಮಾತುಕತೆ ನಡೆಸಿದ್ದಾರೆ. ಮೋದಿ ಅವರು ಎರಡನೇ ಬಾರಿಗೆ ಆಸ್ಟ್ರೇಲಿಯಾಕ್ಕೆ ಭೇಟಿ ನೀಡಿದ್ದಾರೆ.

ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಸಿಡ್ನಿ ಹಾರ್ಬರ್ ಮತ್ತು ಓಪೇರಾ ಹೌಸ್

ಒಪೇರಾ ಹೌಸ್ ಕೂಡ ಭಾರತದ ರಾಷ್ಟ್ರಧ್ವಜದ ಮೂರು ಬಣ್ಣಗಳಲ್ಲಿ ಹೊಳೆಯುತ್ತಿರುವುದು ಕಂಡುಬಂದಿತು. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಪ್ರಧಾನ ನರೇಂದ್ರ ಮೋದಿ ಅವರು ಸಿಡ್ನಿಯಲ್ಲಿರುವ ಒಪೇರಾ ಹೌಸ್‌ಗೆ ಪ್ರವೇಶಿಸಿದರು. ಇದು ಮೋದಿ ಅವರು ಪ್ರವಾಸದ ಕೊನೆಯ ಕಂತಾಗಿದೆ.

ಇಬ್ಬರು ನಾಯಕರು ಈ ವೇಳೆ, ಫೋಟೋಗಳಿಗೆ ಪೋಸ್ ನೀಡಿ, ಎರಡು ಬೆರಳುಗಳಿಂದ ಶಾಂತಿಯ ಸಂಕೇತವನ್ನು ಪ್ರದರ್ಶಿಸಿದರು. ಉಭಯ ನಾಯಕರು ಗಾಢವಾದ ಸ್ನೇಹವನ್ನು ಹೊಂದಿದ್ದು, ಪ್ರಧಾನಿ ಮೋದಿಯವರು ಅಲ್ಬನೀಸ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಕರೆಯುತ್ತಾರೆ.

ತಮ್ಮ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ ಅವರು ಭಾರತ-ಆಸ್ಟ್ರೇಲಿಯಾ ಸಂಬಂಧಗಳ ಕುರಿತು ಹಲವಾರು ಸುತ್ತಿನ ಚರ್ಚೆಗಳನ್ನು ನಡೆಸಿದರು. ವೇಗವಾಗಿ ವಿಸ್ತರಿಸುತ್ತಿರುವ ಭಾರತ-ಆಸ್ಟ್ರೇಲಿಯಾ ಬಾಂಧವ್ಯವನ್ನು ವಿವರಿಸಲು ಕ್ರಿಕೆಟ್ ಉದಾಹರಣೆಯನ್ನು ಬಳಸಿಕೊಂಡರು. ಉಭಯ ದೇಶಗಳ ನಡುವಿನ ಸಂಬಂಧವು ಟಿ-20 ಮೋಡ್ ಅನ್ನು ಪ್ರವೇಶಿಸಿದೆ ಎಂದು ಅವರು ಹೇಳಿದರು. ಆಸ್ಟ್ರೇಲಿಯಾ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಪ್ರಧಾನಿ ಮೋದಿ ಅವರು ಮಾತುಕತೆ ನಡೆಸಿದರು.

ಇದನ್ನೂ ಓದಿ: ದೇಗುಲ ಧ್ವಂಸ ಸಹಿಸಲ್ಲ; ಆಸ್ಟ್ರೇಲಿಯಾದಲ್ಲಿ ನಡೆದ ಕೃತ್ಯ ಖಂಡಿಸಿದ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಹೇಳಿದ್ದೇನು?

ನನ್ನ ಸ್ನೇಹಿತ ಪ್ರಧಾನಿ ಅಲ್ಬನೀಸ್ ಭಾರತಕ್ಕೆ ಭೇಟಿ ನೀಡಿದ ಎರಡು ತಿಂಗಳೊಳಗೆ ನಾನು ಇಲ್ಲಿಗೆ ಬಂದಿದ್ದೇನೆ. ಇದು ಕಳೆದ ಒಂದು ವರ್ಷದಲ್ಲಿ ನಮ್ಮ ಆರನೇ ಭೇಟಿಯಾಗಿದೆ. ಇದು ನಮ್ಮ ವಿಶಾಲ ವ್ಯಾಪ್ತಿಯ ಬಾಂಧವ್ಯಗಳ ಆಳ, ನಮ್ಮ ಅಭಿಪ್ರಾಯಗಳ ಒಮ್ಮುಖತೆ ಮತ್ತು ನಮ್ಮ ಸಹಕಾರದ ಪರಿಪಕ್ವತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ಹೇಳಿದರು.

ವಿದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

Actor Govinda: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚರ್ಚಿಸಲು ನಟ ಗೋವಿಂದ ಅವರು ಶಿವಸೇನೆ (ಏಕನಾಥ್‌ ಶಿಂಧೆ ಬಣ) ನಾಯಕರೊಬ್ಬರ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Actor Govinda
Koo

ಮುಂಬೈ: ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ದಿನಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ನಟ, ನಟಿಯರು, ಸಮಾಜ ಸೇವಕರು ಸೇರಿ ಹಲವರನ್ನು ಕಣಕ್ಕೆ ಇಳಿಸುತ್ತಿವೆ. ಇದರ ಬೆನ್ನಲ್ಲೇ, ಬಾಲಿವುಡ್‌ ನಟ ಗೋವಿಂದ (Actor Govinda) ಅವರು ಶಿವಸೇನೆ (ಏಕನಾಥ್‌ ಶಿಂಧೆ) (Shiv Sena) ನಾಯಕರೊಬ್ಬರನ್ನು ಭೇಟಿಯಾಗಿದ್ದು, ಮುಂಬೈ ವಾಯವ್ಯ ಕ್ಷೇತ್ರದಿಂದ (North West Mumbai) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾರ್ಚ್‌ ತಿಂಗಳ ಆರಂಭದಲ್ಲಿ ನಟ ಗೋವಿಂದ ಅವರು ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ಭೇಟಿಯಾಗಿದ್ದರು. ಇದಾದ ಬಳಿಕವೇ, ನಟ ಗೋವಿಂದ ಅವರು ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಮತ್ತೆ ಶಿವಸೇನೆ ನಾಯಕರೊಬ್ಬರನ್ನು ಗೋವಿಂದ ಅವರು ಭೇಟಿಯಾಗಿದ್ದು, ವದಂತಿಗಳ ತೀವ್ರತೆ ಇನ್ನೂ ಜಾಸ್ತಿಯಾಗಿದೆ. ಆದಾಗ್ಯೂ, ಸ್ಪರ್ಧೆ ಕುರಿತು ಗೋವಿಂದ ಅವರಾಗಲಿ, ಶಿವಸೇನೆಯಾಗಿ ಇದುವರೆಗೆ ಯಾವುದೇ ಘೋಷಣೆ ಮಾಡಿಲ್ಲ.

ಮೂಲಗಳ ಪ್ರಕಾರ, ನಟ ಗೋವಿಂದ ಅವರು ಜುಹುವಿನಲ್ಲಿ ಶಿವಸೇನೆ ನಾಯಕ ಕೃಷ್ಣ ಹೆಗಡೆ ಅವರನ್ನು ಭೇಟಿಯಾಗಿ, ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Rekha Patra: ಸಂದೇಶ್‌ಖಾಲಿ ಸಂತ್ರಸ್ತೆಗೆ ಟಿಕೆಟ್‌ ನೀಡಿದ ಬಿಜೆಪಿ; ಯಾರಿವರು ರೇಖಾ ಪಾತ್ರಾ?

ನಟ ಗೋವಿಂದಗೆ ಇದು 2ನೇ ಇನ್ನಿಂಗ್ಸ್‌

ಹೀರೋ ನಂಬರ್‌ 1 ಖ್ಯಾತಿಯ ನಟ ಗೋವಿಂದ ಅವರು ಮತ್ತೆ ಚುನಾವಣಾ ರಾಜಕೀಯಕ್ಕೆ ಇಳಿದರೆ, ಇದು ಅವರಿಗೆ ಎರಡನೇ ಇನ್ನಿಂಗ್ಸ್‌ ಆಗಲಿದೆ. ಗೋವಿಂದ ಅವರು 2004ರಲ್ಲಿ ಮುಂಬೈ ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿಯ ರಾಮ್‌ ನಾಯಕ್‌ ಅವರನ್ನು ಗೋವಿಂದ ಸೋಲಿಸಿದ್ದರು. ಆದರೆ, ಕಾರಣಾಂತರಗಳಿಂದ ಗೋವಿಂದ ಅವರು ಬಳಿಕ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಈಗ ಶಿವಸೇನೆ ಮೂಲಕ ಅವರು ಮತ್ತೆ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದೇ ಹೇಳಲಾಗುತ್ತಿದೆ.

ನಸೀಬ್‌, ಹೀರೋ ನಂಬರ್‌ 1, ಪಾರ್ಟ್‌ನರ್‌, ರಾಜು ಬಾಬು, ಕೂಲಿ ನಂಬರ್‌ 1, ಧುಲೆ ರಾಜ ಸೇರಿ ಹಲವು ಸಿನಿಮಾಗಳಲ್ಲಿ ನಟಿಸುವ ಮೂಲಕ ಸೈ ಎನಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ತಪ್ಪದ ಸಂಕಷ್ಟ; ಇನ್ನೂ 4 ದಿನ ಜೈಲೇ ಗತಿ!

Arvind Kejriwal: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಇನ್ನೂ 4 ದಿನ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಕಸ್ಟಡಿಗೆ ನೀಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಇ.ಡಿ ಕಸ್ಟಡಿಯನ್ನು ಏಪ್ರಿಲ್‌ 1ರವರೆಗೆ ವಿಸ್ತರಿಸಿದೆ. ಕಸ್ಟಡಿಯ ಅವಧಿಯು ಗುರುವಾರ (ಮಾರ್ಚ್‌ 28) ಮುಗಿಯುವ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು (ED Officials) ಕೇಜ್ರಿವಾಲ್‌ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದರು. ಇನ್ನೂ ಒಂದು ವಾರ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ, ನ್ಯಾಯಾಲಯವು ನಾಲ್ಕು ದಿನಗಳವರೆಗೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಕಸ್ಟಡಿಗೆ ನೀಡಿತು.

ಅರವಿಂದ್‌ ಕೇಜ್ರಿವಾಲ್‌ ಪರ ವಾದ ಮಂಡಿಸಿದ ವಕೀಲರು, “ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನಕ್ಕೆ ಬಲವಾದ ಕಾರಣಗಳೇ ಇಲ್ಲ. ಇ.ಡಿ, ಸಿಬಿಐ ದಾಖಲೆಗಳಲ್ಲಿ ಕೇವಲ ನಾಲ್ಕು ಕಡೆ ಅರವಿಂದ್‌ ಕೇಜ್ರಿವಾಲ್‌ ಅವರ ಹೆಸರಿದೆ. ಇವರನ್ನು ಏಕೆ ಬಂಧಿಸಿದ್ದಾರೆ ಎಂಬುದೇ ಅಧಿಕಾರಿಗಳಿಗೆ ಗೊತ್ತಿಲ್ಲ” ಎಂಬುದಾಗಿ ಹೇಳಿದರು. ಇನ್ನು, 100 ಕೋಟಿ ರೂ. ಲಂಚದ ಪ್ರಕರಣದಲ್ಲಿ ಕೇಜ್ರಿವಾಲ್‌ ಅವರನ್ನು ಇನ್ನೂ ಒಂದು ವಾರ ವಿಚಾರಣೆ ನಡೆಸಬೇಕು ಎಂಬುದಾಗಿ ಇ.ಡಿ ಅಧಿಕಾರಿಗಳು ಮನವಿ ಮಾಡಿದರು. ಕೊನೆಗೆ ನ್ಯಾಯಾಲಯವು ನಾಲ್ಕು ದಿನ ಇ.ಡಿ ಕಸ್ಟಡಿಗೆ ನೀಡಿತು.

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಇದಾದ ಬಳಿಕ ಮಾರ್ಚ್‌ 28ರವರೆಗೆ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿತ್ತು. ಇನ್ನು, ಅರವಿಂದ್‌ ಕೇಜ್ರಿವಾಲ್‌ ಅವರ ಬಂಧನ ಖಂಡಿಸಿ ಆಪ್‌ ಮುಖಂಡರು ಹಾಗೂ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ.

ಸಿಎಂ ಸ್ಥಾನ ಅಬಾಧಿತ

ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಬೇಕು ಎಂಬುದಾಗಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. “ಇದೆಲ್ಲ ಶಾಸಕಾಂಗದ ಕೆಲಸ. ಯಾವುದೇ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವ ಅಧಿಕಾರ ನ್ಯಾಯಾಲಯಕ್ಕಿಲ್ಲ” ಎಂದು ಕೋರ್ಟ್‌ ಸ್ಪಷ್ಟಪಡಿಸಿತು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಕೆ. ಕವಿತಾ ಅವರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಬಂಧನ: ಮತ್ತೆ ಅಮೆರಿಕ ಕ್ಯಾತೆ; ಕಾಂಗ್ರೆಸ್‌ ಬ್ಯಾಂಕ್‌ ಅಕೌಂಟ್‌ ನಿರ್ಬಂಧ ಕುರಿತೂ ಕಿರಿಕ್

ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಮೋದಿ ಅವರ ಡೀಸೆಲ್ ಚಾಲಿತ ವಿಶೇಷ ವಾಹನಗಳ ನೋಂದಣಿ ವಿಸ್ತರಣೆ ತಿರಸ್ಕರಿಸಿದ ಎನ್‌ಜಿಟಿ; ಕಾರಣವೇನು?

Narendra Nodi: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರ ಭದ್ರತೆಯ ಉದ್ದೇಶಕ್ಕಾಗಿ ಅಗತ್ಯವಿರುವ ಮೂರು ಡೀಸೆಲ್ ಚಾಲಿತ ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿಯನ್ನು ವಿಸ್ತರಿಸುವಂತೆ ವಿಶೇಷ ಸಂರಕ್ಷಣಾ ಗುಂಪು ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತಿರಸ್ಕರಿಸಿದೆ. ಇದಕ್ಕೇನು ಕಾರಣ ಎನ್ನುವ ವಿವರ ಇಲ್ಲಿದೆ.

VISTARANEWS.COM


on

narendra modi
Koo

ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ (Narendra Nodi) ಅವರ ಭದ್ರತೆಯ ಉದ್ದೇಶಕ್ಕಾಗಿ ಅಗತ್ಯವಿರುವ ಮೂರು ಡೀಸೆಲ್ ಚಾಲಿತ ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿಯನ್ನು ವಿಸ್ತರಿಸುವಂತೆ ವಿಶೇಷ ಸಂರಕ್ಷಣಾ ಗುಂಪು (Special Protection Group) ಸಲ್ಲಿಸಿದ್ದ ಮನವಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (National Green Tribunal) ತಿರಸ್ಕರಿಸಿದೆ.

ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ 2018ರಲ್ಲಿ ನೀಡಿದ ತೀರ್ಪನ್ನು ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.

“ಈ ಮೂರು ವಾಹನಗಳು ಸಾಮಾನ್ಯವಾಗಿ ಬಳಸಲ್ಪಡದ, ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್‌ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್‌ಜಿಟಿ ಹೇಳಿದೆ.

ʼʼಎಸ್‌ಪಿಜಿ ಅರ್ಜಿಯನ್ನು ತಿರಸ್ಕರಿಸಿದ ಅಧ್ಯಕ್ಷ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ಸದಸ್ಯ ಡಾ.ಎ.ಸೆಂಥಿಲ್ ವೇಲ್ ಅವರನ್ನೊಳಗೊಂಡ ಎನ್‌ಜಿಟಿ ಪ್ರಧಾನ ಪೀಠವು ಮಾರ್ಚ್ 22ರ ಆದೇಶದಲ್ಲಿ, ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ ತೀರ್ಪು ನೀಡಿದೆʼʼ ಎಂದು ಮೂಲಗಳು ತಿಳಿಸಿವೆ.

ಈ 3 ವಿಶೇಷ ಶಸ್ತ್ರಸಜ್ಜಿತ ವಾಹನಗಳ ನೋಂದಣಿ ಅವಧಿಯನ್ನು ಐದು ವರ್ಷಗಳವರೆಗೆ ಅಂದರೆ 2029ರ ಡಿಸೆಂಬರ್‌ 23ರವರೆಗೆ ವಿಸ್ತರಿಸಲು ಅನುಮತಿ ನೀಡುವಂತೆ ದೆಹಲಿಯ ಸಾರಿಗೆ ಇಲಾಖೆ, ನೋಂದಣಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡುವಂತೆ ಎಸ್‌ಪಿಜಿಯು ಎನ್‌ಜಿಟಿಯನ್ನು ಸಂಪರ್ಕಿಸಿತ್ತು.

2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್‌ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ. ಈ ವಾಹನಗಳನ್ನು ವಿಶೇಷ ಸಂದರ್ಭಗಳಲ್ಲಿ ಮಾತ್ರ ಬಳಸಲಾಗುತ್ತದೆ.

ಈ ವಾಹನಗಳನ್ನು 2029ರ ವರೆಗೆ 15 ವರ್ಷಗಳ ಅವಧಿಗೆ ನೋಂದಾಯಿಸಲಾಗಿದೆ. ಆದರೆ ಈ ವಾಹನಗಳು 10 ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಸುಪ್ರೀಂ ಕೋರ್ಟ್‌ನ ಆದೇಶದ ಅನುಗುಣವಾಗಿ 2024ರ ಡಿಸೆಂಬರ್‌ನಲ್ಲಿ ನೋಂದಣಿಯನ್ನು ರದ್ದುಗೊಳಿಸಲಾಗುತ್ತದೆ.

ಇದನ್ನೂ ಓದಿ: Lok Sabha Election: ಬಿಜೆಪಿ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ; ಇವರೇ ನೋಡಿ ಆ ಸ್ಟಾರ್‌ಗಳು

ಎಸ್‌ಪಿಜಿ ಸಲ್ಲಿಸಿದ ಮನವಿಯಲ್ಲಿ ಏನಿದೆ?

ನೋಂದಣಿಯನ್ನು ವಿಸ್ತರಿಸುವಂತೆ ಮನವಿ ಸಲ್ಲಿಸಿದ ಎಸ್‌ಪಿಜಿ ಅದಕ್ಕೆ ಕಾರಣವನ್ನೂ ನೀಡಿದೆ. ʼʼಈ ವಾಹನಗಳು ವಿನ್ಯಾಸ ಮತ್ತು ತಾಂತ್ರಿಕ / ಕಾರ್ಯತಂತ್ರಗಳ ವಿಚಾರದಲ್ಲಿ ಬಹಳ ವಿಶೇಷವಾಗಿವೆ ಮತ್ತು ಈ ಅಗತ್ಯಗಳನ್ನು ಪೂರೈಸುವ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲʼʼ ಎಂದು ಎಸ್‌ಪಿಜಿ ತಿಳಿಸಿದೆ.

ಸುಪ್ರೀಂ ಕೋರ್ಟ್‌ನ 2018ರ ಆದೇಶಕ್ಕೆ ಮೊದಲು ಎನ್‌ಜಿಟಿ 2015ರ ಏಪ್ರಿಲ್‌ನಲ್ಲಿ ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ದೆಹಲಿ ಎನ್‌ಸಿಆರ್‌ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್‌ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

Varun Gandhi: ಉತ್ತರ ಪ್ರದೇಶದ ಪಿಲಿಭಿಟ್‌ ಕ್ಷೇತ್ರದಿಂದ ವರುಣ್‌ ಗಾಂಧಿ ಅವರಿಗೆ ಬಿಜೆಪಿಯು ಟಿಕೆಟ್‌ ನಿರಾಕರಿಸಿದೆ. ಹಾಗಾಗಿ ಅವರು ಕ್ಷೇತ್ರದ ಜನರಿಗೆ ಭಾವುಕರಾಗಿ ಪತ್ರ ಬರೆದಿದ್ದಾರೆ.

VISTARANEWS.COM


on

Varun Gandhi
Koo

ನವದೆಹಲಿ: ಒಂದು ಕಾಲದಲ್ಲಿ ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕರಾಗಿದ್ದ ವರುಣ್‌ ಗಾಂಧಿ (Varun Gandhi) ಅವರಿಗೆ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಪಕ್ಷವು ಟಿಕೆಟ್‌ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಡು ಟೀಕೆ ಮಾಡುತ್ತಿದ್ದ ವರುಣ್‌ ಗಾಂಧಿ ಅವರಿಗೆ ಪಕ್ಷವು ಟಿಕೆಟ್‌ ನೀಡಿಲ್ಲ. ಇದರ ಬೆನ್ನಲ್ಲೇ ಅವರು, ತಮ್ಮ ಪಿಲಿಭಿಟ್‌ ಕ್ಷೇತ್ರದ ಜನರಿಗೆ ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. “ಸಂಸದನಾಗಿ ಅಲ್ಲದಿದ್ದರೂ ನಾನು ನಿಮ್ಮ ಮಗನಾಗಿ ಇರುತ್ತೇನೆ” ಎಂದು ವರುಣ್‌ ಗಾಂಧಿ ಪತ್ರ ಬರೆದಿದ್ದಾರೆ.

“ಪಿಲಿಭಿಟ್‌ ಲೋಕಸಭೆ ಕ್ಷೇತ್ರದ ಸದಸ್ಯನಾಗಿ ನನ್ನ ಅವಧಿಯು ಮುಗಿಯುತ್ತ ಬಂದಿದೆ. ಆದರೇನಂತೆ, ಮುಂದಿನ ದಿನಗಳಲ್ಲಿ ನಾನು ನಿಮಗೆ ಸಂಸದನಾಗಿ ಇರದಿದ್ದರೂ, ಮಗನಾಗಿ ಇರುತ್ತೇನೆ. ಸಂಸದನಾಗಿ ಪಿಲಿಭಿಟ್‌ ಜನರೊಂದಿಗಿನ ಸಂಪರ್ಕ ಮುಕ್ತಾಯವಾಗಬಹುದು. ಆದರೆ, ಒಬ್ಬ ವ್ಯಕ್ತಿಯಾಗಿ ನನ್ನ ಕೊನೆಯ ಉಸಿರಿರುವವರೆಗೆ ಪಿಲಿಭಿಟ್‌ ಜನರೊಂದಿಗೆ ನಾನು ಇರುತ್ತೇನೆ” ಎಂಬುದಾಗಿ ವರುಣ್‌ ಗಾಂಧಿ ಪತ್ರ ಬರೆದಿದ್ದಾರೆ.

ಸೇವೆ ಮಾಡಿದ ಖುಷಿ ಇದೆ

“ಪಿಲಿಭಿಟ್‌ ಜನರು ಅದ್ಭುತ. ಅವರ ವರ್ತನೆ, ಸರಳ ಜೀವನ, ಉದಾತ್ತ ಚಿಂತನೆಗಳೇ ನನ್ನನ್ನು ಒರೆಗೆ ಹಚ್ಚಿಸುತ್ತವೆ. ಅದರಲ್ಲೂ, ಪಿಲಿಭಿಟ್‌ ಸಂಸದನಾಗಿ ನಾನು ಅವರ ಸೇವೆ ಮಾಡಿರುವ ತೃಪ್ತಿ ಇದೆ. ನನ್ನ ಅವಧಿಯಲ್ಲಿ ಪಿಲಿಭಿಟ್‌ ಕ್ಷೇತ್ರದ ಅಭಿವೃದ್ಧಿಗೆ ಇನ್ನಿಲ್ಲದಂತೆ ಶ್ರಮಿಸಿದ್ದೇನೆ. ನಿಮ್ಮನ್ನೆಲ್ಲ ನಾನು ಪ್ರತಿನಿಧಿಸಿದೆ ಎಂಬ ಸಂಗತಿಯೇ ನನಗೆ ಹೆಚ್ಚು ಖುಷಿ ಕೊಡುತ್ತದೆ. ನನಗೆ ಇದಕ್ಕಿಂತ ಸೌಭಾಗ್ಯ ಇನ್ನೊಂದಿಲ್ಲ” ಎಂದು ಪತ್ರದಲ್ಲಿ ವರುಣ್‌ ಗಾಂಧಿ ಉಲ್ಲೇಖಿಸಿದ್ದಾರೆ.

“ನಾನು ಚುನಾವಣೆ ರಾಜಕೀಯ ಪ್ರವೇಶಿಸಿದ ಬಳಿಕ ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಿದೆ. ಇಡೀ ಕ್ಷೇತ್ರದ ಏಳಿಗೆಗೆ ಶ್ರಮ ವಹಿಸಿದೆ. ಹತ್ತಾರು ಯೋಜನೆಗಳನ್ನು ಜಾರಿಗೆ ತಂದೆ. ಆದರೆ, ಇನ್ನು ಮುಂದೆ ನಿಮ್ಮ ಜತೆ ನಾನು ಎಂಪಿಯಾಗಿ ಇರುವುದಿಲ್ಲ. ಆದರೆ, ಕೊನೆಯವರೆಗೂ ನಿಮ್ಮ ಮಗನಾಗಿ ಇರುತ್ತೇನೆ. ನಿಮಗಾಗಿ ನನ್ನ ಮನೆಯ ಬಾಗಿಲುಗಳು ಎಂದಿಗೂ ತೆರೆದಿರುತ್ತವೆ. ಈಗ ನಿಮ್ಮ ಆಶೀರ್ವಾದವನ್ನಷ್ಟೇ ನಾನು ಬೇಡುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: Narendra Modi : ಸಂದೇಶ್​ಖಾಲಿ ಸಂತ್ರಸ್ತೆಯನ್ನು ‘ಶಕ್ತಿ ಸ್ವರೂಪ’ ಎಂದು ಕರೆದ ಪ್ರಧಾನಿ ಮೋದಿ

ವರುಣ್‌ ಗಾಂಧಿ ಅವರು ಪಿಲಿಭಿಟ್‌ ಕ್ಷೇತ್ರದಿಂದ 2009 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇವರು 2014ರಲ್ಲಿ ಸುಲ್ತಾನ್‌ಪುರದಿಂದಲೂ ಸ್ಪರ್ಧಿಸಿ ಜಯ ಕಂಡಿದ್ದರು. 2019ರಲ್ಲಿ ಸುಲ್ತಾನ್‌ಪುರದಲ್ಲಿ ವರುಣ್‌ ಗಾಂಧಿ ಅವರ ತಾಯಿ ಮನೇಕಾ ಗಾಂಧಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಈಗ ಪಿಲಿಭಿಟ್‌ ಕ್ಷೇತ್ರದಲ್ಲಿ ಬಿಜೆಪಿಯು ವರುಣ್‌ ಗಾಂಧಿ ಅವರ ಬದಲು ಜಿತಿನ್‌ ಪ್ರಸಾದ ಅವರಿಗೆ ಟಿಕೆಟ್‌ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hardik Pandya
ಕ್ರೀಡೆ3 mins ago

Hardik Pandya : ಹೈದರಾಬಾದ್​ನಲ್ಲೂ ಪಾಂಡ್ಯಗೆ ಕಾಟ ಕೊಟ್ಟ ಕ್ರಿಕೆಟ್​ ಪ್ರೇಕ್ಷಕರು

money guide
ಮನಿ-ಗೈಡ್14 mins ago

Money Guide: ಗಮನಿಸಿ; ಏ. 1ರಿಂದ ಬದಲಾಗುತ್ತವೆ ಈ ಎಲ್ಲ ಹಣಕಾಸು ನಿಯಮಗಳು

IPL 2024-CSKRCB
ಕ್ರೀಡೆ26 mins ago

IPL 2024 : ವೀಕ್ಷಣೆಯಲ್ಲಿ ದಾಖಲೆ ಬರೆದ ಚೆನ್ನೈ- ಆರ್​ಸಿಬಿ ಮ್ಯಾಚ್​!

Prithviraj Sukumaran
ಸಿನಿಮಾ37 mins ago

Prithviraj Sukumaran: ಪೃಥ್ವಿರಾಜ್ ಸುಕುಮಾರನ್‌ ಅಭಿನಯದ ‘ಆಡುಜೀವಿತಂ’ ಚಿತ್ರಕ್ಕೆ ಪ್ರೇಕ್ಷಕರು ಫಿದಾ!

Lok Sabha Election 2024 DK Shivakumar Suresh assetsworth Rs 598 crore and 259.19 crore Increase in 5 years
Lok Sabha Election 202441 mins ago

Lok Sabha Election 2024: ಡಿ.ಕೆ. ಸುರೇಶ್‌ ಆಸ್ತಿ ಮೌಲ್ಯ 598 ಕೋಟಿ ರೂ.; 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

Summer Fashion
ಫ್ಯಾಷನ್44 mins ago

Summer Fashion: ಸಮ್ಮರ್‌ ಸೀಸನ್‌ನಲ್ಲಿ ಸಿಂಪಲ್‌ ಸ್ಲಿವ್‌ಲೆಸ್‌ ಗೌನ್‌ಗಳ ಹಂಗಾಮ!

job alert
ಉದ್ಯೋಗ44 mins ago

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Aditi Rao Hydari engaged to Siddharth
ಟಾಲಿವುಡ್51 mins ago

Aditi Rao Hydari: ಎಂಗೇಜ್‌ ಆಗಿರುವ ಫೋಟೊ ಶೇರ್‌ ಮಾಡಿದ ಅದಿತಿ ರಾವ್ ಹೈದರಿ!

Henrich Klasen- IPL
ಪ್ರಮುಖ ಸುದ್ದಿ54 mins ago

IPL 2024 : ಅಪ್ಪನ ಸಿಕ್ಸರ್​​ಗೆ ಚಿಯರ್ಸ್ ಹೇಳಿದ ಕ್ಲಾಸೆನ್ ಪುತ್ರಿ, ಇಲ್ಲಿದೆ ವಿಡಿಯೊ

Actor Govinda
ದೇಶ57 mins ago

Actor Govinda: ಶಿವಸೇನೆ ನಾಯಕನ ಜತೆ ನಟ ಗೋವಿಂದಾ ಚರ್ಚೆ; ಚುನಾವಣಾ ಕಣಕ್ಕೆ ಎಂಟ್ರಿ?

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20244 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20245 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌