NDA Meeting: ಎನ್‌ಡಿಎಗೆ ಮೋದಿಯೇ ಸಾರಥಿ ಎಂದು ಸಭೆ ತೀರ್ಮಾನ; ಶೀಘ್ರವೇ ಸರ್ಕಾರ ರಚಿಸಲು ಹಕ್ಕುಮಂಡನೆ - Vistara News

ದೇಶ

NDA Meeting: ಎನ್‌ಡಿಎಗೆ ಮೋದಿಯೇ ಸಾರಥಿ ಎಂದು ಸಭೆ ತೀರ್ಮಾನ; ಶೀಘ್ರವೇ ಸರ್ಕಾರ ರಚಿಸಲು ಹಕ್ಕುಮಂಡನೆ

NDA Meeting: ದೇಶದಲ್ಲಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕ ಅಮಿತ್‌ ಶಾ ಅವರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ದಿಸೆಯಲ್ಲಿಯೇ ಎನ್‌ಡಿಎ ಮಿತ್ರಪಕ್ಷಗಳ ಸಭೆ ನಡೆಸಿದ್ದು, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಭಾಗಿಯಾಗಿದ್ದಾರೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್‌ಡಿಎ (NDA) ಹಾಗೂ 234 ಕ್ಷೇತ್ರಗಳನ್ನು ಗೆದ್ದ ಇಂಡಿಯಾ ಒಕ್ಕೂಟದ (India Bloc) ಮಧ್ಯೆ ಸರ್ಕಾರ ರಚಿಸಲು ಪೈಪೋಟಿ ಶುರುವಾಗಿದೆ. ನಿತೀಶ್‌ ಕುಮಾರ್‌, ಚಂದ್ರಬಾಬು ನಾಯ್ಡು ಸೇರಿ ಹಲವರನ್ನು ಸೆಳೆಯಲು ಇಂಡಿಯಾ ಒಕ್ಕೂಟ (India Bloc) ಪ್ರಯತ್ನಿಸುತ್ತಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ನೇತೃತ್ವದಲ್ಲಿ ಎನ್‌ಡಿಎ ಒಕ್ಕೂಟದ ಹೈಲೆವೆಲ್‌ ಸಭೆ ನಡೆದಿದೆ. ಇನ್ನು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಜೆಡಿಯು, ಟಿಡಿಪಿ, ಎಲ್‌ಜೆಪಿ ಸೇರಿ ಮೈತ್ರಿಕೂಟದ ಎಲ್ಲ ಪಕ್ಷಗಳು ಸಮ್ಮತಿ ಸೂಚಿಸಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ನಾಯಕರು ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

‌ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ನರೇಂದ್ರ ಮೋದಿ ಅವರ ನಿವಾಸದಲ್ಲಿ ಸಭೆ ನಡೆಯಿತು. ತೆಲುಗುದೇಶಂ ಪಕ್ಷದ (TDP), ಸಂಯುಕ್ತ ಜನತಾದಳದ ನಿತೀಶ್‌ ಕುಮಾರ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌, ಆರ್‌ಎಲ್‌ಡಿಯ ಜಯಂತ್‌ ಚೌಧರಿ, ಜನಸೇನಾ ಪಕ್ಷದ ಪವನ್‌ ಕಲ್ಯಾಣ್ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಎಲ್ಲರೂ ಒಗ್ಗೂಡಿ ಸರ್ಕಾರ ರಚಿಸುವುದು, ಒಗ್ಗಟ್ಟಿನಿಂದ ಇರುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚೆಯಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.

ನಿತೀಶ್‌ ಕುಮಾರ್‌ ಅವರ ಪಕ್ಷವು 16, ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಯು 12, ಏಕನಾಥ್‌ ಶಿಂಧೆ ಬಣದ ಶಿವಸೇನೆ 7 ಹಾಗೂ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿಯು 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರಿಂದಾಗಿ, ಎನ್‌ಡಿಎ ಮೈತ್ರಿಕೂಟದ ಸರ್ಕಾರ ರಚನೆಗೆ ಇವರ ಪಾತ್ರವು ನಿರ್ಣಾಯಕವಾಗಿದೆ. ಹಾಗಾಗಿ, ಮೋದಿ ಹಾಗೂ ಅಮಿತ್‌ ಶಾ ಅವರು ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸಭೆ ನಡೆಸಿ, ಸರ್ಕಾರ ರಚಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಎಲ್ಲ ಪಕ್ಷಗಳು ಬೆಂಬಲ ಪತ್ರಗಳನ್ನು ನೀಡಿದ್ದು, ಸರ್ಕಾರ ರಚಿಸಲು ಹಕ್ಕು ಮಂಡಿಸಲಾಗುತ್ತದೆ.

ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ಜೆಡಿಯು, ಟಿಡಿಪಿ, ಶಿವಸೇನೆ ಹಾಗೂ ಎಲ್‌ಜೆಪಿ ಪಕ್ಷಗಳ ಪಾತ್ರ ನಿರ್ಣಾಯಕವಾಗಿರುವ ಕಾರಣ ಆಯಾ ಪಕ್ಷಗಳ ನಾಯಕರು ಮಹತ್ವದ ಖಾತೆ, ಹುದ್ದೆ ಸೇರಿ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಕೂಡ ಕೇಂದ್ರದಲ್ಲಿ ಒಂದು ಖಾತೆಗೆ ಬೇಡಿಕೆ ಇಟ್ಟಿದ್ದು, ಅವರು ಕೃಷಿ ಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: J Shantha: ಅಣ್ಣ-ತಂಗಿಗೆ ಕಹಿ; ಕರ್ನಾಟಕದಲ್ಲಿ ಶ್ರೀರಾಮುಲು, ಆಂಧ್ರದಲ್ಲಿ ಜೆ. ಶಾಂತಾಗೆ ಸೋಲು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Parliament Sessions: ನೀಟ್‌ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಪಕ್ಷ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಸ್ತಾಗಿ ತಲೆ ಸುತ್ತಿ ಬಿದ್ದ ಫೂಲೋ ದೇವಿಯವರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು ಅವರ ಆರೋಗ್ಯ ವಿಚಾರಿಸಿದ್ದಾರೆ. ಫೂಲೋ ದೇವಿಯ ಸಿಟಿ ಸ್ಕ್ಯಾನ್‌ ಮಾಡಿಸಲು ವೈದ್ಯರು ಸೂಚಿಸಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Parliament Sessions
Koo

ಹೊಸದಿಲ್ಲಿ: ಸಂಸತ್‌ ಅಧಿವೇಶನ(Parliament Sessions)ದಲ್ಲಿ ಇಂದು ನೀಟ್‌ ಪರೀಕ್ಷೆ ಅಕ್ರಮ(NEET Exam) ವಿಚಾರ ಕೋಲಾಹಲ ಎಬ್ಬಿಸಿತ್ತು. ರಾಜ್ಯಸಭೆಯಲ್ಲಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಫೂಲೋ ದೇವಿ ನೇತಾಂ ಪ್ರಜ್ಞೆ ತಪ್ಪಿ ಬಿದ್ದ ಘಟನೆ ನಡೆಯಿತು. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ನೀಟ್‌ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಪಕ್ಷ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಸ್ತಾಗಿ ತಲೆ ಸುತ್ತಿ ಬಿದ್ದ ಫೂಲೋ ದೇವಿಯವರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು ಅವರ ಆರೋಗ್ಯ ವಿಚಾರಿಸಿದ್ದಾರೆ. ಫೂಲೋ ದೇವಿಯ ಸಿಟಿ ಸ್ಕ್ಯಾನ್‌ ಮಾಡಿಸಲು ವೈದ್ಯರು ಸೂಚಿಸಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಶುಕ್ರವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ವಿರೋಧ ಪಕ್ಷದ ಸದಸ್ಯರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ತಮ್ಮ ಬೇಡಿಕೆಯನ್ನು ಮುಂದುವರೆಸಿದರು. ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಈ ವಿಷಯವನ್ನು ಚರ್ಚಿಸಬಹುದು ಎಂದು ವಿರೋಧ ಪಕ್ಷದ ಸದಸ್ಯರಿಗೆ ತಿಳಿಸಿದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading

ವಾಣಿಜ್ಯ

Nita Ambani: 50-60 ಬನಾರಸಿ ಸೀರೆ ಖರೀದಿಸಿದ ನೀತಾ ಅಂಬಾನಿ: ಸೀರೆಯ ದರ ಎಷ್ಟು?

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೂ ಮುನ್ನ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿ ಸೀರೆಗಳನ್ನು ಖರೀದಿ ಮಾಡಿ, ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲಿ ಅವರು ಐವತ್ತಕ್ಕೂ ಹೆಚ್ಚು ಸೀರೆಗಳನ್ನು ಖರೀದಿಸಿದ್ದಾರೆ. ಇವು ಯಾವ ಮಾದರಿ ಸೀರೆ, ದರ ಎಷ್ಟು ಇತ್ಯಾದಿ ಮಾಹಿತಿ ಇಲ್ಲಿದೆ.

VISTARANEWS.COM


on

By

Nita Ambani
Koo

ಎಲ್ಲ ಸಂದರ್ಭಕ್ಕೂ ಸೂಕ್ತವಾಗುವ ಬನಾರಸಿ ಸೀರೆಗಳು (Banarasi sari) ಎಲ್ಲರಿಗೂ ಇಷ್ಟವಾಗುತ್ತದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Anant Radhika Wedding) ಅವರ ಮದುವೆಗೂ ಮುನ್ನ ಬನಾರಸಿ ಸೀರೆಗಳನ್ನು ಖರೀದಿ ಮಾಡಲು ರಿಲಯನ್ಸ್ ಫೌಂಡೇಶನ್‌ನ (Reliance Foundation) ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ (Nita Ambani) ಅವರು ವಾರಣಾಸಿಗೆ (varanasi) ತೆರಳಿ ಐವತ್ತರಿಂದ ಅರವತ್ತು ಸೀರೆಗಳನ್ನು ಖರೀದಿಸಿದರು.

ವಾರಣಾಸಿಯಲ್ಲಿ ಮಗ್ಗದ ಮಾಲೀಕರು ಮತ್ತು ನೇಕಾರರನ್ನು ಭೇಟಿ ಮಾಡಿದ ಅವರು ಸೀರೆಗಳನ್ನು ಖರೀದಿ ಮಾಡಿದರು. ಇದಕ್ಕೂ ಮೊದಲು ಹಲವಾರು ಬನಾರಸಿ ಕುಶಲಕರ್ಮಿಗಳು ಮತ್ತು ವ್ಯಾಪಾರಿಗಳನ್ನು ಹೊಟೇಲ್ ಗೆ ಕರೆಸಿ ಮಾತನಾಡಿದ ಅವರು ಬಳಿಕ ಸೀರೆಗಳನ್ನು ಸ್ವತಃ ಆಯ್ಕೆ ಮಾಡಿದರು. ನೇಕಾರರ ಕೌಶಲಕ್ಕಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಾಲಿವುಡ್, ಹಾಲಿವುಡ್ ಮತ್ತು ಇತರ ದೇಶಗಳ ಅನೇಕ ಅತಿಥಿಗಳು ಅನಂತ್ ಅಂಬಾನಿ ಅವರ ವಿವಾಹದಲ್ಲಿ ಪಾಲ್ಗೊಳ್ಳುವುದರಿಂದ ಬನಾರಸಿ ಸೀರೆಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಅಂಬಾನಿ ಕುಟುಂಬ ಸೀರೆಗಳಿಗೆ ಆರ್ಡರ್ ಮಾಡಿದ್ದು, ನೇಕಾರರು ಸಂತಸ ವ್ಯಕ್ತಪಡಿಸಿದ್ದಾರೆ.

ಲಕ್ಕಾ ಬೂಟಿ ಸೀರೆ

ನೀತಾ ಅಂಬಾನಿ ಅವರ ಲಕ್ಕಾ ಬೂಟಿ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದು ಬನಾರಸಿ ಕೈಮಗ್ಗ ನೇಕಾರ ಛೋಟೆ ಲಾಲ್ ಪಾಲ್ ತಿಳಿಸಿದ್ದಾರೆ. ಅಂಬಾನಿ ಕುಟುಂಬವು ಭಾರತದ ಪ್ರಸಿದ್ಧ ವ್ಯಾಪಾರ ಕುಟುಂಬವಾಗಿದೆ. ನೀತಾ ಅಂಬಾನಿ ತನ್ನ ಮಗನ ಮದುವೆಯಲ್ಲಿ ನಾನು ತಯಾರಿಸಿದ ಸೀರೆಯನ್ನು ಧರಿಸಿದರೆ ಅನಂತರ ಎಲ್ಲರೂ ಅದನ್ನು ಟಿವಿಯಲ್ಲಿ ನೋಡುತ್ತಾರೆ. ಅವರು ನನ್ನ ಸೀರೆಯನ್ನು ಇಷ್ಟಪಟ್ಟಿದ್ದಾರೆ ಎಂದರು.


ನಾವು ಬನಾರಸ್‌ನ ಹಳೆಯ ಕುಶಲಕರ್ಮಿಗಳು. ನಾವು ಮೂರನೇ ತಲೆಮಾರಿನವರು. ನಮ್ಮ ಅಜ್ಜ ಮತ್ತು ತಂದೆ ನೇಕಾರರು. ನಾವು ತಯಾರಿಸುವ ಸೀರೆಗೆ ಲಖ ಬೂಟಿ ಎಂದು ಕರೆಯಲಾಗುತ್ತದೆ. ಈ ಸೀರೆಯ ವಿಶೇಷತೆ ಎಂದರೆ ಆಂಚಲ್ ಬಳಿ ಒಂದು ಮೂಲೆ ಇದೆ. ಒಮ್ಮೆ ಮಗ್ಗವನ್ನು ಸ್ಥಾಪಿಸಿದಾಗ, ಸಂಪೂರ್ಣ ಸೀರೆಯನ್ನು ಸಿದ್ಧಪಡಿಸುತ್ತೇವೆ. ಆದರೆ ವಿಶೇಷ ಸೀರೆಯನ್ನು ತಯಾರಿಸಲು ಮಗ್ಗವನ್ನು ಮೂರು ಬಾರಿ ತಯಾರಿಸಲಾಗುತ್ತದೆ/ ಇದನ್ನು ಹಿಂದೂ ಧರ್ಮದ ಶುಭ ಸಮಾರಂಭಗಳಲ್ಲಿ ಬಳಸಲಾಗುತ್ತದೆ, ಇದನ್ನು ತಯಾರಿಸಲು 60 ರಿಂದ 62 ದಿನಗಳು ಬೇಕಾಗುತ್ತದೆ ಎಂದು ಹೇಳಿದರು.

ನೇಕಾರರ ಜೊತೆಗೆ ಸೀರೆ ತಯಾರಿಸಲು ಸಹಾಯ ಮಾಡಲು ಇನ್ನೂ 20ರಿಂದ 25 ಕಾರ್ಮಿಕರು ಅಗತ್ಯವಿದೆ. ಮೊದಲು ತಯಾರಿ ಇದೆ. ವಿವರಣೆ ಮುಗಿದಿದೆ. ವಿನ್ಯಾಸವನ್ನು ರಚಿಸಲಾಗಿದೆ. ನಕ್ಷೆಯನ್ನು ರಚಿಸಲಾಗಿದೆ. ವಿನ್ಯಾಸ ಮುಗಿದ ಮೇಲೆ ಸೀರೆಯನ್ನು ಕೈಮಗ್ಗಕ್ಕೆ ಕಳುಹಿಸಲಾಗುತ್ತದೆ. ಇಪ್ಪತ್ತೈದು ಜನರ ಕೈಗಳಲ್ಲಿ ಸೀರೆ ಸಂಪೂರ್ಣ ವಿನ್ಯಾಸಗೊಳ್ಳುತ್ತದೆ.


ಪ್ರತಿ ಸೀರೆಯು ಚಿನ್ನ ಮತ್ತು ಬೆಳ್ಳಿಯ ಎಳೆಗಳನ್ನು ಹೊಂದಿರುವ ನಿಜವಾದ ಝರಿಯನ್ನು ಬಳಸಿ ಕೈಯಿಂದ ಮಾಡಲ್ಪಟ್ಟಿದೆ. ಶೇ. 58-60ರಷ್ಟು ಬೆಳ್ಳಿ ಮತ್ತು ಶೇ. 1.5ರಷ್ಟು ಚಿನ್ನದ ಲೇಪನವನ್ನು ಅನ್ವಯಿಸಲಾಗುತ್ತದೆ. ಚಿನ್ನ ಮತ್ತು ಬೆಳ್ಳಿಯ ದಾರಗಳ ಸೀರೆಗಳ ಬೆಲೆ 1.5 – 2 ಲಕ್ಷ ರೂ. ಗಳಿಂದ 5- 6 ಲಕ್ಷ ರೂ. ಗಳವರೆಗೆ ಇರುತ್ತದೆ.

ಈ ಸೀರೆಗಳನ್ನು ತಯಾರಿಸಲು ಬಹಳ ಸಮಯ ಬೇಕಾಗುತ್ತದೆ. ನೀತಾ ಅಂಬಾನಿ ಅವರು ಹಜಾರಾ ಬುಟಿ ಎಂದು ಕರೆಯಲ್ಪಡುವ ವಿಶಿಷ್ಟವಾದ ಸೀರೆಯನ್ನು ಖರೀದಿಸಿದ್ದಾರೆ. ಇದು 35,000 ಬೆಳ್ಳಿಯ ಬೂಟಿಗಳನ್ನು ಒಳಗೊಂಡಿದೆ. ಹಜಾರಾ ಬುಟಿ ಸೀರೆಯನ್ನು 40- 45 ದಿನಗಳಲ್ಲಿ ತಯಾರಿಸಲಾಗುತ್ತದೆ.


ಅನಂತ್-ರಾಧಿಕಾ ಮದುವೆ

ಜುಲೈ 12ರಂದು ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಪ್ರಸಿದ್ಧ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮದುವೆಗೆ ಮುನ್ನ ನೀತಾ ಅಂಬಾನಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಯ ದಿನ ಹತ್ತಿರವಾಗುತ್ತಿದ್ದಂತೆ ಮುಂಬಯಿನಲ್ಲಿ ಪುರಾತನ ಹಿಂದೂ ವೈದಿಕ ಸಂಪ್ರದಾಯದಂತೆ ನಡೆಯಲಿದೆ ಎನ್ನಲಾಗಿದೆ.

ಮಂಗಳಕರ ಶುಭ ವಿವಾಹ ಎಂದೂ ಕರೆಯಲ್ಪಡುವ ವಿವಾಹ ಸಮಾರಂಭವು ಶುಕ್ರವಾರ ಮುಖ್ಯ ಸಮಾರಂಭಗಳ ಮೂಲಕ ಪ್ರಾರಂಭವಾಗಲಿದೆ. ಆಚರಣೆಯ ವಾತಾವರಣವನ್ನು ಸಂಪೂರ್ಣವಾಗಿ ಆನಂದಿಸಲು ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ಅತಿಥಿಗಳಿಗೆ ಸೂಚಿಸಲಾಗಿದೆ. ಜುಲೈ 13ರಂದು ಶುಭ್ ಆಶೀರ್ವಾದ್ , ಕೊನೆಯ ದಿನವಾದ ಜುಲೈ 14ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

Post Office: 2024-25ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಸಿಗುತ್ತಿದ್ದ ಬಡ್ಡಿದರವೇ ಮುಂದುವರಿಯಲಿದೆ ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಯಾವೆಲ್ಲ ಯೋಜನೆಗಳ ಬಡ್ಡಿದರ ಎಷ್ಟಿದೆ ಎಂಬುದರ ಕಿರು ಮಾಹಿತಿ ಇಲ್ಲಿದೆ.

VISTARANEWS.COM


on

Post Office
Koo

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ (2024-25) ಎರಡನೇ ತ್ರೈಮಾಸಿಕದ ಅವಧಿಗೆ (ಜುಲೈ-ಸೆಪ್ಟೆಂಬರ್‌ 2024) ಕೇಂದ್ರ ಸರ್ಕಾರವು ಪೋಸ್ಟ್‌ ಆಫೀಸ್‌ (Post Office) ಉಳಿತಾಯ ಯೋಜನೆ ಸೇರಿ ಯಾವುದೇ ಕಿರು ಉಳಿತಾಯ ಯೋಜನೆಗಳ (Small Savings Schemes) ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿಲ್ಲ. ಇದರಿಂದಾಗಿ ಪಬ್ಲಿಕ್‌ ಪ್ರಾವಿಡೆಂಟ್‌ ಫಂಡ್‌ (PPF), ಸುಕನ್ಯಾ ಸಮೃದ್ಧಿ ಯೋಜನೆ (SSY) ಸೇರಿ ಹಲವು ಉಳಿತಾಯ ಯೋಜನೆಗಳ ಬಡ್ಡಿದರದಲ್ಲಿ ಬದಲಾವಣೆಯಾಗದ ಕಾರಣ ಸಣ್ಣ ಪ್ರಮಾಣದಲ್ಲಿ ಠೇವಣಿ ಮಾಡುವವರಿಗೆ ಯಾವುದೇ ಅನುಕೂಲ ಆಗಿಲ್ಲ.

ಬಡ್ಡಿದರದ ಪಟ್ಟಿ ಹೀಗಿದೆ

ಯೋಜನೆಗಳುಬಡ್ಡಿದರ
ಉಳಿತಾಯ ಖಾತೆಯ ಠೇವಣಿ4%
1 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ6.9%
2 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7%
3 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7.1%
5 ವರ್ಷ ಪೋಸ್ಟ್‌ ಆಫೀಸ್‌ ಠೇವಣಿ7.5%
5 ವರ್ಷ ರೆಕರಿಂಗ್‌ ಡೆಪಾಸಿಟ್‌ (RD)6.7%
ನ್ಯಾಷನಲ್‌ ಸೇವಿಂಗ್ಸ್‌ ಸರ್ಟಿಫಿಕೇಟ್ (NSC)‌7.7%
ಕಿಸಾನ್‌ ವಿಕಾಸ್‌ ಪತ್ರ7.5%
ಪಿಪಿಎಫ್‌7.1%
ಸುಕನ್ಯಾ ಸಮೃದ್ಧಿ ಖಾತೆ8.2%
ಹಿರಿಯ ನಾಗರಿಕರ ಉಳಿತಾಯ ಯೋಜನೆ8.2%

“2024-25ನೇ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಅವಧಿಗೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಬದಲಾವಣೆ ಮಾಡಿಲ್ಲ. ಏಪ್ರಿಲ್‌-ಜೂನ್‌ ತ್ರೈಮಾಸಿಕದಲ್ಲಿ ಸಿಗುತ್ತಿದ್ದ ಬಡ್ಡಿದರವೇ ಮುಂದುವರಿಯಲಿದೆ” ಎಂಬುದಾಗಿ ಕೇಂದ್ರ ಹಣಕಾಸು ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಕಿರು ಉಳಿತಾಯ ಯೋಜನೆಗಳ ಮೂಲಕ ಠೇವಣಿ ಇರಿಸಿದವರಿಗೆ ತುಸು ನಿರಾಸೆಯಾದಂತಾಗಿದೆ. ಎರಡನೇ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರವು ಬಡ್ಡಿದರ ಏರಿಕೆ ಮಾಡುವ ನಿರೀಕ್ಷೆ ಇತ್ತು.

Job Alert

ಮತ್ತೊಂದೆಡೆ, ಭವಿಷ್ಯ ನಿಧಿ ಹೊಂದಿರುವ ಉದ್ಯೋಗಿಗಳು ತಮ್ಮ ಖಾತೆಗೆ ಬಡ್ಡಿ ಮೊತ್ತ ಜಮೆಯಾಗುವುದನ್ನು ಕಾಯುತ್ತಿದ್ದಾರೆ. ಅಂತಹವರಿಗೆ ಇದೀಗ ಸಿಹಿ ಸುದ್ದಿ. ಜುಲೈ ಅಂತ್ಯದ ವೇಳೆಗೆ ಬಡ್ಡಿ ಹಣ ಇಪಿಎಫ್ ಒ ಸದಸ್ಯರ ಖಾತೆಗೆ ತಲುಪಬಹುದು. ಇದಕ್ಕಾಗಿ ಶೀಘ್ರದಲ್ಲೇ ಹಣಕಾಸು ಸಚಿವಾಲಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸುವ ನಿರೀಕ್ಷೆ ಇದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು ಫೆಬ್ರವರಿಯಲ್ಲಿ ಆರ್ಥಿಕ ವರ್ಷ 2024 ಕ್ಕೆ ಶೇ. 8.25ರ ಬಡ್ಡಿ ದರವನ್ನು ಅನುಮೋದಿಸಿದೆ. ಆದರೆ ಔಪಚಾರಿಕ ಅಧಿಸೂಚನೆಯನ್ನು ಹೊರಡಿಸಲು ಹಣಕಾಸು ಸಚಿವಾಲಯವು ಇನ್ನೂ ಕಾಯುತ್ತಿದೆ. ಸಾರ್ವತ್ರಿಕ ಚುನಾವಣೆಗಳಿಂದಾಗಿ ಇದು ವಿಳಂಬವಾಗಿದೆ. ಇದು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: EPFO Balance Check: ಜುಲೈ ಅಂತ್ಯದಲ್ಲಿ ಪಿಎಫ್ ಖಾತೆಗೆ ಬಡ್ಡಿ ಹಣ ಬರಲಿದೆ; ಪರಿಶೀಲಿಸುವುದು ಹೇಗೆ?

Continue Reading

ಪ್ರಮುಖ ಸುದ್ದಿ

Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Vikram Misri: ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್‌ ಮಿಸ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್‌ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ವಿಕ್ರಮ್‌ ಮಿಸ್ರಿ ಅವರು ಪರಿಣತ ಎಂದೇ ಖ್ಯಾತರಾಗಿದ್ದಾರೆ. ಇವರು ಮೂವರು ಪ್ರಧಾನಿಗಳಿಗೆ ಖಾಸಗಿ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

VISTARANEWS.COM


on

Vikram Misri
Koo

ನವದೆಹಲಿ: 1989ರ ಐಎಫ್‌ಎಸ್‌ ಬ್ಯಾಚ್‌ ಅಧಿಕಾರಿ, ಚೀನಾಗೆ ಸಂಬಂಧಿಸಿದ ವಿಷಯಗಳಲ್ಲಿ ತಜ್ಞ ಎಂದೇ ಖ್ಯಾತರಾಗಿರುವ ವಿಕ್ರಮ್‌ ಮಿಸ್ರಿ (Vikram Misri) ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ (Foreign Secretary) ಆಯ್ಕೆ ಮಾಡಲಾಗಿದೆ. ಹಾಲಿ ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾಟ್ರಾ ಅವರ ಅವಧಿಯು ಜುಲೈ 14ರಂದು ಮುಗಿಯುವ ಕಾರಣ ವಿಕ್ರಮ್‌ ಮಿಸ್ರಿ ಅವರನ್ನು ನೇಮಿಸಲಾಗಿದೆ. ಜುಲೈ 15ರಂದು ವಿಕ್ರಮ್‌ ಮಿಸ್ರಿ ಅವರು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ವಿನಯ್‌ ಕ್ವಾಟ್ರಾ ಅವರ ಅಧಿಕಾರದ ಅವಧಿಯನ್ನು ಆರು ತಿಂಗಳು ವಿಸ್ತರಣೆ ಮಾಡಲಾಗಿತ್ತು. ಅವರ ಅವಧಿಯು ಜುಲೈ 14ಕ್ಕೆ ಮುಗಿಯಲಿರುವ ಕಾರಣ ಕೇಂದ್ರ ಸರ್ಕಾರವು ನೂತನ ಕಾರ್ಯದರ್ಶಿಯನ್ನು ನೇಮಿಸಿದೆ. ವಿನಯ್‌ ಕ್ವಾಟ್ರಾ ಅವರನ್ನು ಅಮೆರಿಕಕ್ಕೆ ಭಾರತದ ರಾಯಭಾರಿಯನ್ನಾಗಿ ನೇಮಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಯಾರಿವರು ವಿಕ್ರಮ್‌ ಮಿಸ್ರಿ?

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ 1964ರ ನವೆಂಬರ್‌ 7ರಂದು ಜನಿಸಿದ ವಿಕ್ರಮ್‌ ಮಿಸ್ರಿ ಅವರು ಇತಿಹಾಸ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಜಮ್‌ಶೆಡ್‌ಪುರದಲ್ಲಿ ಎಂಬಿಎ ಅಧ್ಯಯನ ಮಾಡಿರುವ ಇವರು ಮೂವರು ಪ್ರಧಾನಿಗಳಿಗೆ ಖಾಸಗಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನರೇಂದ್ರ ಮೋದಿ, ಮನಮೋಹನ್‌ ಸಿಂಗ್‌ ಹಾಗೂ ಐ.ಕೆ. ಗುಜ್ರಾಲ್‌ ಅವರಿಗೆ ಕಾರ್ಯದರ್ಶಿಯಾಗಿದ್ದರು.

ಚೀನಾ ವಿಷಯದಲ್ಲಿ ಪರಿಣತ

ಚೀನಾದ ಬೀಜಿಂಗ್‌ನಲ್ಲಿ ದೂತಾವಾಸ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವ ಇರುವ ವಿಕ್ರಮ್‌ ಮಿಸ್ರಿ ಅವರು ಚೀನಾ ವಿಷಯಕ್ಕೆ ಸಂಬಂಧಿಸಿದಂತೆ ಪರಿಣತ ಎನಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿಯೇ ಚೀನಾ ಬಗ್ಗೆ ಹೆಚ್ಚು ಗೊತ್ತಿರುವ, ಸಮಸ್ಯೆಗಳನ್ನು ನಿರ್ವಹಿಸುವ ಸಾಮರ್ಥ್ಯ ಇರುವ ಕೆಲವೇ ಅಧಿಕಾರಿಗಳಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ.

ಭಾರತದ ಮಟ್ಟಿಗೆ ವಿದೇಶಾಂಗ ನೀತಿಯಲ್ಲಿ ಎದುರಾಗುವ ಪ್ರಮುಖ ಸವಾಲುಗಳಲ್ಲಿ ಚೀನಾದ ವಿಷಯವು ಒಂದಾಗಿದೆ. ಲಡಾಕ್‌ ಗಡಿಯಲ್ಲಿ ಯೋಧರು ಚೀನಾ ಸೈನಿಕರನ್ನು ಎದುರಿಸುವ ಜತೆಗೆ ರಾಜತಾಂತ್ರಿಕವಾಗಿಯೂ ಚೀನಾವನ್ನು ನಿಯಂತ್ರಿಸುವುದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದು ಪ್ರಮುಖ ಸಂಗತಿಯಾಗಿದೆ. ಹಾಗಾಗಿಯೇ, ವಿಕ್ರಮ್‌ ಮಿಸ್ರಿ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

Continue Reading
Advertisement
Rahyl Dravid
ಪ್ರಮುಖ ಸುದ್ದಿ9 mins ago

Rahul Dravid : ವಿಶ್ವ ಕಪ್​ ಗೆದ್ದು ಬನ್ನಿ ಅಭಿಯಾನದ ವಿರುದ್ಧ ಸಿಟ್ಟಿಗೆದ್ದ ರಾಹುಲ್ ದ್ರಾವಿಡ್​

Run4Research programme on June 30 in Bengaluru
ಕರ್ನಾಟಕ16 mins ago

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

MLA Dr N T Srinivas drives for crop insurance rally in Kudligi
ವಿಜಯನಗರ18 mins ago

Vijayanagara News: ಕೂಡ್ಲಿಗಿಯಲ್ಲಿ ಬೆಳೆ ವಿಮೆ ಜಾಥಾಕ್ಕೆ ಶಾಸಕ ಶ್ರೀನಿವಾಸ್ ಚಾಲನೆ

physical Abuse
ಕ್ರೈಂ19 mins ago

Physical Abuse: ಕಲಬುರಗಿಯಲ್ಲಿ 13 ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ, ತೀವ್ರ ರಕ್ತಸ್ರಾವವಾಗಿ ಸಾವು!

Viral Video
Latest21 mins ago

Viral Video: ಈ ಆರು ಯೂಟ್ಯೂಬರ್‌ಗಳು ಜೈಲು ಪಾಲಾಗಲು ಶಾರುಖ್‌ ಖಾನ್‌ ಕಾರಣವಂತೆ!

Sonakshi Sinha
Latest29 mins ago

Sonakshi Sinha: ಈಗಷ್ಟೇ ಮದುವೆಯಾಗಿರುವ ನಟಿ ಸೋನಾಕ್ಷಿ ಸಿನ್ಹಾ ಗರ್ಭಿಣಿ?

Snake
ಪ್ರಮುಖ ಸುದ್ದಿ29 mins ago

Snake: ಮಲಗಿದ್ದವನ ಚಡ್ಡಿಯೊಳಗೆ ನುಗ್ಗಿದ ನಾಗರಹಾವು; ಅದು ಹೊರಬರುವ ಮುನ್ನ ಮಾಡಿದ ಅನಾಹುತ ಏನು?

Team India
ಪ್ರಮುಖ ಸುದ್ದಿ36 mins ago

Team India : ಟೆಸ್ಟ್​​ ಕ್ರಿಕೆಟ್​ನ ಒಂದೇ ದಿನದಲ್ಲಿ ಗರಿಷ್ಠ ರನ್​; ದಾಖಲೆ ಬರೆದ ಭಾರತ ತಂಡ

Parliament Sessions
ದೇಶ42 mins ago

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Breast Cancer Awareness
ಆರೋಗ್ಯ57 mins ago

What Is Stage 3 Breast Cancer: ಮೂರನೇ ಹಂತದ ಸ್ತನ ಕ್ಯಾನ್ಸರ್‌ ಎಂದರೇನು? ಇದರ ಲಕ್ಷಣಗಳೇನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ9 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌