Narendra Modi: ಜನ್ಮದಿನದಂದು ಮೆಟ್ರೋದಲ್ಲಿ ಮೋದಿ ಸಂಚಾರ; ಸಂಸ್ಕೃತದಲ್ಲಿ ಶುಭಕೋರಿದ ಯುವತಿ Vistara News
Connect with us

ದೇಶ

Narendra Modi: ಜನ್ಮದಿನದಂದು ಮೆಟ್ರೋದಲ್ಲಿ ಮೋದಿ ಸಂಚಾರ; ಸಂಸ್ಕೃತದಲ್ಲಿ ಶುಭಕೋರಿದ ಯುವತಿ

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋದಲ್ಲಿ ಸಂಚರಿಸುವ ವೇಳೆ ಯುವಕ, ಯುವತಿಯರು ಸೆಲ್ಫಿ ತೆಗೆದುಕೊಂಡರು. ಮೋದಿ ಅವರೂ ಖುಷಿಯಿಂದ ಸೆಲ್ಫಿಗೆ ಪೋಸ್‌ ಕೊಟ್ಟರು.

VISTARANEWS.COM


on

Narendra Modi Travels In Metro
ಮೋದಿ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಯುವತಿಯರು.
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮೆಟ್ರೋ ಯೋಜನೆಗಳಿಗೆ ಚಾಲನೆ ನೀಡುವುದಿದ್ದರೆ, ಮೆಟ್ರೋ ರೈಲಿನಲ್ಲಿಯೇ ಪ್ರಯಾಣಿಸುತ್ತಾರೆ. ಅಷ್ಟೇ ಅಲ್ಲ, ಮೆಟ್ರೋ ಪ್ರಯಾಣದ ವೇಳೆ ಯುವಕ, ಯುವತಿಯರು ಸೇರಿ ಎಲ್ಲ ಪ್ರಯಾಣಿಕರ ಜತೆ ಮಾತುಕತೆ ನಡೆಸುತ್ತಾರೆ. ಭಾನುವಾರವೂ (ಸೆಪ್ಟೆಂಬರ್‌ 17) ನರೇಂದ್ರ ಮೋದಿ (Narendra Modi) ಅವರು ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಚಾಲನೆ ನೀಡುವ ಮೊದಲು ಮೋದಿ ಅವರು ದೆಹಲಿ ಮೆಟ್ರೋದಲ್ಲಿ (Delhi Metro) ಸಂಚರಿಸಿದರು.

ದ್ವಾರಕಾ ಸೆಕ್ಟರ್‌ 21ರಿಂದ ಯಶೋಭೂಮಿ ದ್ವಾರಕಾ ಸೆಕ್ಟರ್‌ 25ನೇ ಸ್ಟೇಷನ್‌ಗೆ ವಿಸ್ತರಣೆಯಾಗಿರುವ ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಮೋದಿ ಚಾಲನೆ ನೀಡಿದರು. ಇದಕ್ಕೂ ಮೊದಲು ಅವರು ಮೆಟ್ರೋದಲ್ಲಿ ಪ್ರಯಾಣಿಸಿದರು. ಪ್ರಯಾಣದ ವೇಳೆ ಮೋದಿ ಅವರು ಹಿರಿಯರು, ಮಕ್ಕಳು, ಯುವಕ, ಯುವತಿಯರ ಜತೆ ಮಾತುಕತೆ ನಡೆಸಿದರು. ಯುವತಿಯರಂತೂ ಮೋದಿ ಜತೆ ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಜನ್ಮದಿನದ ಖುಷಿಯಲ್ಲಿರುವ ಮೋದಿ ಅವರೂ ಸೆಲ್ಫಿಗೆ ಪೋಸ್‌ ನೀಡಿದರು. ಇದೇ ವೇಳೆ ಯುವತಿಯೊಬ್ಬಳು ಮೋದಿ ಅವರಿಗೆ ಸಂಸ್ಕೃತದಲ್ಲಿ ಜನ್ಮದಿನದ ಶುಭಕೋರಿದ್ದು ವಿಶೇಷವಾಗಿತ್ತು.

ಮೆಟ್ರೋ ಉದ್ಯೋಗಿಗಳ ಜತೆಗೂ ಮಾತುಕತೆ

ದೆಹಲಿ ಏರ್‌ಪೋರ್ಟ್‌ ಮೆಟ್ರೋ ಎಕ್ಸ್‌ಪ್ರೆಸ್‌ ಲೈನ್‌ಗೆ ಚಾಲನೆ ನೀಡಿದ ಬಳಿಕ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋ ಸಹೋದ್ಯೋಗಿಗಳು, ಕಾರ್ಮಿಕರ ಜತೆಗೂ ಮಾತುಕತೆ ನಡೆಸಿದರು. ಮೆಟ್ರೋ ಕಾಮಗಾರಿ, ಅವರ ಕೆಲಸದ ಅವಧಿ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲ, ದ್ವಾರಕಾದಲ್ಲಿರುವ, ಯಶೋಭೂಮಿ ಎಂದೇ ಖ್ಯಾತಿಯಾಗಿರುವ ಇಂಡಿಯಾ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಆ್ಯಂಡ್‌ ಎಕ್ಸ್‌ಪೋ ಸೆಂಟರ್‌ಅನ್ನು (IICC) ಲೋಕಾರ್ಪಣೆಗೊಳಿಸಿದರು. ಇದೇ ಸಮಯದಲ್ಲಿ ಅವರು ಕಲಾವಿದರು ಹಾಗೂ ಕರಕುಶಲಕರ್ಮಿಗಳ ಯೋಗಕ್ಷೇಮ ವಿಚಾರಿಸಿದರು.

ಇದನ್ನೂ ಓದಿ: PM Modi Birthday: ದಿರಸಿನಿಂದಲೇ ಮೋಡಿ ಮಾಡುತ್ತಾರೆ ಮೋದಿ… ಇಲ್ಲಿವೆ ಅವರ ಸ್ಪೆಷಲ್‌ ಲುಕ್‌ಗಳು

ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಅಮಿತ್‌ ಶಾ, ಕ್ರಿಕೆಟಿಗ ಚೇತೇಶ್ವರ ಪೂಜಾರ ಸೇರಿ ಹಲವು ಗಣ್ಯರು ಶುಭಕೋರಿದ್ದಾರೆ. ದೇಶಾದ್ಯಂತ ಸೇವಾ ಕಾರ್ಯಕ್ರಮಗಳ ಮೂಲಕ ಬಿಜೆಪಿಯು ಮೋದಿ ಜನ್ಮದಿನವನ್ನು ಆಚರಿಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

ವಿಸ್ತಾರ ಸಂಪಾದಕೀಯ: ಏಷ್ಯನ್‌ ಗೇಮ್ಸ್‌ನಲ್ಲಿ ಅರುಣಾಚಲ ತಗಾದೆ, ಚೀನಾದ ಅಧಿಕ ಪ್ರಸಂಗ

ಅರುಣಾಚಲ ವಿಚಾರದಲ್ಲಿ ಚೀನಾ ತಗಾದೆ ತೆಗೆಯುತ್ತಿರುವುದು ಇದೇ ಮೊದಲಲ್ಲ. ಆದರೆ ಕ್ರೀಡೆಯಲ್ಲೂ ಭೇದ ಮಾಡುವ, ಕಿರುಕುಳ ನೀಡುವ ಚೀನಾದ ವರಸೆ ಅಸಹನೀಯ.

VISTARANEWS.COM


on

Edited by

Vistara Editorial and Asian Games and China again played dirty tricks
Koo

ಭಾರತಕ್ಕೆ ಕಿರುಕುಳ ಕೊಡುವ ವಿಚಾರದಲ್ಲಿ ಪಾಕಿಸ್ತಾನವನ್ನೂ ಚೀನಾ ಮೀರಿಸಿದೆ. ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್​ ಗೇಮ್ಸ್​ನಲ್ಲಿ ಅರುಣಾಚಲ ಪ್ರದೇಶದ ಮೂವರು ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದಾರೆ. ಇದಕ್ಕೆ ಚೀನಾ ಮೊದಲಿನಿಂದಲೂ ತಗಾದೆ ತೆಗೆಯುತ್ತ ಬಂದಿರುವ ಗಡಿ ರಾಜಕೀಯ ಕಾರಣವಾಗಿದೆ. ಅರುಣಾಚಲ ಪ್ರದೇಶ ವಿಚಾರದಲ್ಲಿ ಭಾರತ ಹಾಗೂ ಚೀನಾ ನಡುವೆ ವಿವಾದವಿದೆ. ಹೀಗಾಗಿ ವುಶು ಸ್ಪರ್ಧಿಗಳಿಗೆ ಅಲ್ಲಿನ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದರು. ಅವರಿಗೆ ಮಾನ್ಯತಾ ಪತ್ರಗಳನ್ನು ಡೌನ್​ಲೋಡ್​ ಮಾಡಲು ಸಾಧ್ಯವಾಗದ ಕಾರಣ ದೆಹಲಿಯಲ್ಲೇ ಉಳಿದಿದ್ದಾರೆ. ಚೀನಾದ ಈ ನೀತಿಯನ್ನು ಭಾರತ ಖಂಡಿಸಿದೆ. ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಚೀನಾಗೆ ಪ್ರವಾಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆತಿಥೇಯರ ಆಹ್ವಾನವನ್ನು ಖಡಾಖಂಡಿತವಾಗಿ ತಿರಸ್ಕರಿಸಿದ್ದಾರೆ.

ಅರುಣಾಚಲ ವಿಚಾರದಲ್ಲಿ ಚೀನಾ ತಗಾದೆ ತೆಗೆಯುತ್ತಿರುವುದು ಇದೇ ಮೊದಲಲ್ಲ. ಆದರೆ ಕ್ರೀಡೆಯಲ್ಲೂ ಭೇದ ಮಾಡುವ, ಕಿರುಕುಳ ನೀಡುವ ಚೀನಾದ ವರಸೆ ಹೊಸತು. ಇದು ಕ್ರೀಡಾ ಸ್ಫೂರ್ತಿಗೆ ವಿರುದ್ಧ ಎಂಬುದನ್ನು ಪ್ರತ್ಯೇಕ ಹೇಳಬೇಕಿಲ್ಲ. ಮತ್ತಿದು ಏಷ್ಯನ್ ಕ್ರೀಡಾಕೂಟದ ಆಶಯ, ನಿಯಮಗಳನ್ನೂ ಉಲ್ಲಂಘಿಸುತ್ತದೆ. ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ನಡುವೆ ತಾರತಮ್ಯ ಮಾಡುವುದು ಸ್ಪಷ್ಟವಾಗಿ ಕ್ರೀಡಾನಿಯಮಗಳ ಉಲ್ಲಂಘನೆ. ಯುದ್ಧಕೈದಿಗಳನ್ನೂ ಗೌರವದಿಂದ ನಡೆಸಿಕೊಳ್ಳಬೇಕು ಎಂಬುದು ಅಂತಾರಾಷ್ಟ್ರೀಯ ಸನ್ನದು. ಹೀಗಿರುವಾಗ, ಅತಿಥಿ ದೇಶಗಳ ಕ್ರೀಡಾಳುಗಳನ್ನು ಗೌರವಿಸುವುದು, ಆಟಕ್ಕೆ ಆಸ್ಪದ ಮಾಡಿಕೊಡುವುದು ಆತಿಥೇಯ ದೇಶದ ಕರ್ತವ್ಯ. ಚೀನಾ ಈ ಕರ್ತವ್ಯಕ್ಕೆ ದ್ರೋಹ ಬಗೆದಿದೆ. ಕ್ರೀಡೆಗೆ ಅನ್ಯಾಯ ಎಸಗಿದೆ.

ಇದಕ್ಕೂ ಮುನ್ನ ಚೆಂಗ್ಡುವಿನಲ್ಲಿ ನಡೆಯಲಿದ್ದ ವಿಶ್ವ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸಲು 12 ಸದಸ್ಯರ ತಂಡ ಪ್ರಯಾಣಿಸುತ್ತಿದ್ದಾಗ ದೆಹಲಿಯ ಚೀನಾದ ರಾಯಭಾರ ಕಚೇರಿ ಮೂವರು ಕ್ರೀಡಾಪಟುಗಳಿಗೆ ಸ್ಟೇಪಲ್ಡ್ ವೀಸಾಗಳನ್ನು (ಅಧಿಕೃತ ಮುದ್ರೆಯೊತ್ತದ ಅನುಮತಿ ಪತ್ರ) ನೀಡಿತ್ತು. ಇದನ್ನು ಭಾರತ ಬಲವಾದ ಪ್ರತಿಭಟಿಸಿ ಪ್ರವಾಸ ರದ್ದುಗೊಳಿಸಿತ್ತು. ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಈ ಹಿಂದೆಯೂ ಸ್ಟಾಂಪ್ ವೀಸಾ ನೀಡಲು ಚೀನಾ ನಿರಾಕರಿಸಿದೆ. 2011ರಲ್ಲಿ ಅರುಣಾಚಲ ಪ್ರದೇಶದ ಐವರು ಕರಾಟೆ ಪಟುಗಳಿಗೆ ಕ್ವಾನ್ಝೌನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಟೇಪಲ್ಡ್ ವೀಸಾ ನೀಡಲಾಗಿತ್ತು. ಈ ತಿಂಗಳ ಆರಂಭದಲ್ಲಿ, ಚೀನಾ ತನ್ನ ದೇಶದ ಹೊಸ ನಕ್ಷೆಯನ್ನು ಪ್ರಕಟಿಸಿ ಅರುಣಾಚಲ ಪ್ರದೇಶ ತನ್ನ ಭಾಗವೆಂದು ಹೇಳಿತ್ತು. ಇದು ಭಾರತವನ್ನು ಕೆರಳಿಸಿತ್ತು. ಚೀನಾದ ನೈಸರ್ಗಿಕ ಸಂಪನ್ಮೂಲ ಸಚಿವಾಲಯದ ವೆಬ್​ಸೈಟ್​ ಮತ್ತು ಅಲ್ಲಿನ ಗ್ಲೋಬಲ್ ಟೈಮ್ಸ್​ ಹೊಸ ನಕ್ಷೆಯನ್ನು ಹಂಚಿಕೊಂಡಿದ್ದವು. ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ದಕ್ಷಿಣ ಚೀನಾ ಸಮುದ್ರ ಪ್ರದೇಶಗಳನ್ನು ತನ್ನದೆಂದು ಹೇಳಿತ್ತು. ಇದನ್ನು ಅಮೆರಿಕ, ತೈವಾನ್ ಮತ್ತು ವಿಯೆಟ್ನಾಂ ಸೇರಿದಂತೆ ಹಲವಾರು ದೇಶಗಳು ವ್ಯಾಪಕವಾಗಿ ಟೀಕಿಸಿದ್ದರೂ ಚೀನಾ ಮಣಿದಿಲ್ಲ.

ಭಾರತದೊಳಗಿರುವ ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಪ್ರತ್ಯೇಕ ಹೆಸರಿಟ್ಟು, ಆ ಎಲ್ಲ ಪ್ರದೇಶಗಳು ದಕ್ಷಿಣ ಟಿಬೆಟ್‌ಗೆ ಸೇರಿದ್ದು ಎಂದು ಚೀನಾ ಹಿಂದೆಯೇ ಘೋಷಿಸಿದೆ. ಇಡೀ ಅರುಣಾಚಲ ಪ್ರದೇಶವೇ ದಕ್ಷಿಣ ಟಿಬೆಟ್‌ ಎಂಬುದು ಚೀನಾದ ಹಳೇ ಪ್ರತಿಪಾದನೆ. ಆದರೆ ಈ ಈಶಾನ್ಯ ರಾಜ್ಯ ಸಂಪೂರ್ಣವಾಗಿ ನಮಗೇ ಸೇರಿದ್ದು, ಹೆಸರು ಬದಲಿಸಿದ ಮಾತ್ರಕ್ಕೆ ವಾಸ್ತವ ಬದಲಿಸಲಾಗದು ಎಂದು ಭಾರತ ಬಲವಾಗಿ ಪ್ರತಿಪಾದಿಸಿದೆ. ಕಳೆದ ವರ್ಷ ಅರುಣಾಚಲ ಪ್ರದೇಶದ ತವಾಂಗ್‌ ಸೆಕ್ಟರ್‌ನ ಗಡಿಯಲ್ಲಿ ಚೀನಾದ ಸೇನೆ ಉಪಟಳ ಉಂಟುಮಾಡಿತ್ತು. ಭಾರತ ಹಾಗೂ ಚೀನಾ ಯೋಧರ ಮಧ್ಯೆ ಭಾರಿ ಪ್ರಮಾಣದಲ್ಲಿ ಹೊಡೆದಾಟ ನಡೆದಿದ್ದು, ಉಭಯ ಕಡೆಗಳ ಸೈನಿಕರಿಗೂ ಗಾಯಗಳಾಗಿದ್ದವು. ಟಿಬೆಟಿಗರ ಪರಮೋಚ್ಚ ಧರ್ಮಗುರುವಾದ ದಲಾಯಿ ಲಾಮ ಅವರಿಗೆ ನಾವು ಆಶ್ರಯ ಕೊಟ್ಟದ್ದು ಹಾಗೂ ಟಿಬೆಟಿಗರ ನಿರಾಶ್ರಿತ ಸರ್ಕಾರವನ್ನು ಅವರು ಭಾರತದ ಧರ್ಮಶಾಲೆಯಿಂದ ನಡೆಸುತ್ತಿರುವುದು ಅದರ ಪಾಲಿಗೆ ಇಂದಿಗೂ ಸಹಿಸಲಾಗದ ಸಂಗತಿ. ಹಾಗೆಯೇ ಇತ್ತೀಚೆಗೆ ಅವರು ಮಂಗೋಲಿಯಾದ ಬಾಲಕನೊಬ್ಬನನ್ನು ಬೌದ್ಧರ ಮೂರನೇ ಮರಮೋಚ್ಚ ಧಾರ್ಮಿಕ ನಾಯಕನಾಗಿ ನೇಮಿಸಿದ್ದು ಕೂಡ ಚೀನಾಗೆ ಕಿರಿಕಿರಿ ಉಂಟುಮಾಡಿದೆ. ಇದೆಲ್ಲದರ ಫಲವೇ ಚೀನಾದ ಮುಂದುವರಿದ ರಗಳೆ. ಜಿಹೀಗೆ ಮತ್ತೆ ಮತ್ತೆ ಹೊಸ ಹೊಸ ಕ್ಯಾತೆ ತೆಗೆದು ಭಾರತವನ್ನು ಪ್ರಚೋದಿಸುತ್ತಲೇ ಇರುವ ಚೀನಾದಿಂದಾಗಿ ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧ ಹಳಸಿದ್ದು, ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ.

ಅರುಣಾಚಲದಲ್ಲಿ ಕೆಲವು ಕಡೆ ಗಡಿ ಸರಿಯಾಗಿ ನಿರ್ಧಾರವಾಗಿಲ್ಲ ಎಂಬುದು ನಿಜ. ಇಲ್ಲಿ ಚೀನಾ ಸೈನ್ಯ ಸುಲಭವಾಗಿ ಒಳತೂರಿ ಬರುವುದಕ್ಕೆ ಸಾಕಷ್ಟು ಆಸ್ಪದವಿದೆ ಎಂಬುದೂ ನಿಜ. 1962ರ ಯುದ್ಧದ ವೇಳೆಗೆ ಚೀನಾದ ಸೈನಿಕರು ಸುಮಾರು 20 ಕಿಲೋಮೀಟರ್‌ನಷ್ಟು ಒಳಬಂದು, ಯುದ್ಧವಿರಾಮದ ಬಳಿಕ ಹಿಂದೆ ಸರಿದಿದ್ದರು. ಆಗ ಅಂತಾರಾಷ್ಟ್ರೀಯ ಸಮುದಾಯ ಭಾರತದ ಜತೆಗೆ ನಿಂತಿತ್ತು. ಭಾರತವನ್ನು ಆಗಾಗ ಕೆಣಕುವುದು ಚೀನಾದ ಯುದ್ಧತಂತ್ರಗಳಲ್ಲಿ ಒಂದು. ನೆರೆರಾಷ್ಟ್ರಕ್ಕೆ ಕಾಟ ಕೊಡುವಲ್ಲಿ ಚೀನಾದ ಯುದ್ಧನೀತಿ ಬಹುಮುಖಿಯಾಗಿದೆ. ಭಾರತದ ಸುತ್ತಮುತ್ತಲಿನ ಪುಟ್ಟ ದೇಶಗಳಿಗೆ ಸಾಲ ನೀಡಿ, ತನ್ನ ಸಾಲದಿಂದ ಅವುಗಳು ಮುಳುಗುವಂತೆ ಮಾಡಿ, ಅಲ್ಲಿ ತನ್ನ ವ್ಯಾಪಾರ ಹಾಗೂ ಮಿಲಿಟರಿ ವಸಾಹತುಗಳನ್ನು ಸ್ಥಾಪಿಸಿ, ಅಲ್ಲಿಂದ ಭಾರತದ ಮೇಲೆ ನಿಗಾ ಇಡುವ ವ್ಯವಸ್ಥೆ ಮಾಡಿಕೊಳ್ಳುತ್ತದೆ. ಸೈಬರ್‌ ಕಾರಸ್ಥಾನಗಳ ಮೂಲಕ ನಮ್ಮ ದೇಶದ ಸರಕಾರಿ- ವ್ಯೂಹಾತ್ಮಕ ವೆಬ್‌ಸೈಟ್‌ಗಳಿಗೆ ಲಗ್ಗೆ ಹಾಕಲು ಯತ್ನಿಸುತ್ತದೆ. ವೈರಿ ದೇಶ ಪಾಕಿಸ್ತಾನಕ್ಕೆ ಮಿಲಿಟರಿ ಬೆಂಬಲ ಹಾಗೂ ಅಲ್ಲಿಂದ ಕಾರ್ಯಾಚರಿಸುವ ಉಗ್ರರ ಶಿಬಿರಗಳಿಗೆ ಧನಸಹಾಯ ಮಾಡುತ್ತದೆ. ವಿಶ್ವಸಂಸ್ಥೆಯಲ್ಲಿ ಭಾರತ ತಕ್ಕ ದಾಖಲೆಗಳನ್ನು ನೀಡಿ, ತನ್ನ ವಿರುದ್ಧ ಕೆಲಸ ಮಾಡುವ ಭಯೋತ್ಪಾದಕರನ್ನು ಕಪ್ಪು ಪಟ್ಟಿಗೆ ಸೇರಿಸಲು ಒತ್ತಡ ತಂದಾಗಲೂ ಚೀನಾ ಅದಕ್ಕೆ ಅಡ್ಡಗಾಲು ಹಾಕುತ್ತದೆ. ಹೀಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಭಾರತಕ್ಕೆ ಕಿರುಕುಳ ಕೊಡಲು ಅದು ಸದಾ ಸಿದ್ಧವಾಗಿಯೇ ಇರುತ್ತದೆ.

ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ರಾಜ್ಯಕ್ಕೆ ಅನ್ಯಾಯ; ಕಾವೇರಿ ನೀರು ಬೆಂಕಿಯಾಗದಿರಲಿ

ಆದರೆ ಪ್ರತಿ ಬಾರಿಯೂ ಭಾರತ ಚೀನಾಗೆ ತಕ್ಕ ಉತ್ತರ ನೀಡುತ್ತಲೇ ಬಂದಿದೆ. ಚೀನಾದ ಕಪಟ ಕಾರ್ಯತಂತ್ರಗಳನ್ನೂ ಯುದ್ಧನೀತಿಗಳನ್ನೂ ಅರ್ಥ ಮಾಡಿಕೊಂಡಿರುವ ನೂತನ ಭಾರತದ ಎದಿರೇಟುಗಳು ಚೀನಾವನ್ನು ಅಚ್ಚರಿಯಲ್ಲಿ ಕೆಡವಿರುವ ಸಾಧ್ಯತೆ ಇದೆ. ಗಲ್ವಾನ್‌ನಲ್ಲಿ ಚೀನಾ ಸೈನಿಕರ ಪಾಶವೀ ದಾಳಿಗೆ ಅದೇ ಮಾದರಿಯ ಉತ್ತರ ನೀಡುವಲ್ಲಿಂದ ಹಿಡಿದು, ವಿಶ್ವಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಒತ್ತಡ ಹಾಕಿಸುವವರೆಗೂ ಭಾರತದ ರಾಜನೀತಿ, ವ್ಯೂಹಾತ್ಮಕ ಸಿದ್ಧತೆ, ಮಿಲಿಟರಿ ಸನ್ನದ್ಧತೆಗಳು ಹಬ್ಬಿವೆ. ಇತ್ತೀಚೆಗೆ ಜಿ20 ಶೃಂಗಸಭೆಯ ವೇದಿಕೆಯಲ್ಲೂ ಭಾರತ ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿರುವುದು, ಇಲ್ಲೂ ಚೀನಾಕ್ಕೆ ತಕ್ಕ ಇದಿರೇಟು ನೀಡಿರುವುದು ಚೀನಾಗೆ ಇರಸುಮುರಸು ಉಂಟುಮಾಡಿರಬಹುದು. ಆದರೆ ಅದು ಯಾವಾಗ ಪಾಠ ಕಲಿಯುವುದೋ ಗೊತ್ತಿಲ್ಲ. ಚೀನಾದ ಬಗ್ಗೆ ಸದಾ ಎಚ್ಚರ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡುವ ರಾಜನೀತಿಯ ಮಾದರಿಯನ್ನು ಮುಂದುವರಿಯುವುದು ಅಗತ್ಯವಾಗಲಿದೆ. ಸದ್ಯ ಏಷ್ಯನ್‌ ಗೇಮ್ಸ್‌ ವಿಚಾರದಲ್ಲಿ ಆಯೋಜಕರ ಕಾರ್ಯಕಾರಿ ಗುಂಪಿನ ಜತೆಗೆ ಚರ್ಚಿಸಿ ಮುನ್ನಡೆಯಬೇಕಾದೀತು.

ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Parliament Special Session: ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಅವರಿಗೆ ಬಿಜೆಪಿಯ ಸಂಸದ ರಮೇಶ್ ಬಿಧುರಿ ಅವರು ಭಯೋತ್ಪಾದಕ ಎಂದು ಕರೆದಿದ್ದಾರೆ.

VISTARANEWS.COM


on

Edited by

Danish Ali and Rahul Gandhi
Koo

ನವದೆಹಲಿ: ಲೋಕಸಭೆಯಲ್ಲಿ (Lok Sabha) ಬಿಜೆಪಿ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರಿಂದ ‘ಉಗ್ರ’ (Terrorist) ಎಂದು ಕರೆಯಿಸಿಕೊಂಡಿದ್ದ ಬಿಎಸ್‌ಪಿ ಸಂಸದ ಕುನ್ವರ್ ಡ್ಯಾನಿಶ್ ಅಲಿ(BSP MP Danish Ali) ಅವರನ್ನು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು. ಲೋಕಸಭೆಯಲ್ಲಿ ಚಂದ್ರಯಾನ-3 (Chandrayaan 3) ಯಶಸ್ಸಿನ ಕುರಿತಾದ ಚರ್ಚೆ ನಡೆಯುತ್ತಿತ್ತು. ಈ ವೇಳೆ, ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ ಅವರು, ಡ್ಯಾನಿಶ್ ಅಲಿ ಅವರನ್ನು ಇಸ್ಲಾಮೋಫೋಬಿಕ್ ಆಗಿ ನಿಂದಿಸುತ್ತಿದ್ದರು. ಒಂದು ಹಂತದಲ್ಲಿ ಅವರನ್ನು ಭಯೋತ್ಪಾದಕ ಎಂದು ಕೂಡ ಕರೆದರು. ಇದು ಭಾರೀ ವಿವಾದಕ್ಕೆ ಕಾರಣವಾಗಿದೆ. ಶುಕ್ರವಾರ ಸಂಜೆ, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಬಿಜೆಪಿ ಸಂಸದರಿಂದ ನಿಂದನೆಗೊಳಗಾದ ಡ್ಯಾನಿಶ್ ಅಲಿಯನ್ನು ಭೇಟಿ ಮಾಡಿ, ಸಮಾಧಾನಪಡಿಸಿದರು. ಈ ಕುರಿತಾದ ಫೋಟೋಗಳನ್ನು ಎಕ್ಸ್ ವೇದಿಕೆಯಲ್ಲಿ ಹಂಚಿಕೊಂಡಿದ್ದು, ನಫ್ರತ್ ಕೆ ಬಜಾರ್ ಮೇ, ಮೊಹಬ್ಬತ್ ಕಿ ದುಕಾನ್(ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ) ಎಂದು ಬರೆಯಲಾಗಿದೆ(Parliament Special Session).

ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು, ಭಾರತೀಯ ಜನತಾ ಪಾರ್ಟಿ ಹುಟ್ಟು ಹಾಕಿರುವ ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿಯನ್ನು ತೆರೆಯಲಿದ್ದೇನೆ ಎಂದು ಹೇಳಿದ್ದರು. ಬಳಿಕ ಭಾರತ್ ಜೋಡೋ ಯಾತ್ರೆಯ ವೇಳೆ, ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ ಘೋಷಣೆಯಾಗಿ ಹೊರ ಹೊಮ್ಮಿತು. ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ವೇಳೆ ಈ ಘೋಷವಾಕ್ಯವನ್ನು ಬಳಸುತ್ತಾರೆ.

ರಾಹುಲ್ ಗಾಂಧಿ ಅವರು ಭೇಟಿಯಾಗುವ ಮುಂಚೆ ಡ್ಯಾನಿಶ್ ಅಲಿ ಅವರು, ಬಿಜೆಪಿ ಸಂಸದರಿಂದ ನಿಂದನೆಗೊಳಗಾದ ಬಳಿಕ ರಾತ್ರಿ ನಿದ್ದೆ ಮಾಡಲಾಗುತ್ತಿಲ್ಲ ಎಂದು ಎನ್‌ಡಿ ಟಿವಿ ಮುಂದೆ ಕಣ್ಣೀರಿಟ್ಟಿದ್ದರು.

ಈ ಸುದ್ದಿಯನ್ನೂ ಓದಿ: Parliament Special Session: ಬಿಎಸ್ಪಿ ಸಂಸದ ಡ್ಯಾನಿಶ್ ಅಲಿಗೆ ‘ಉಗ್ರ’ ಎಂದು ಜರಿದ ಬಿಜೆಪಿ ಎಂಪಿ ಬಿಧುರಿ! ಕ್ರಮಕ್ಕೆ ಪ್ರತಿಪಕ್ಷಗಳ ಆಗ್ರಹ

ಚುನಾಯಿತ ಸಂಸದರನ್ನು ಅವರ ಸಮುದಾಯಕ್ಕೆ ಸೇರಿಸುವ ಮೂಲಕ ಅವರ ಮೇಲೆ ದಾಳಿ ಮಾಡಲು ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆಯೇ? ಇದರಿಂದ ಇಡೀ ದೇಶವೇ ತಲೆತಗ್ಗಿಸಿದೆ. ಆ ಸಂಸದ ವಿರುದ್ಧ ಬಿಜೆಪಿ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಉತ್ತೇಜನ ನೀಡುತ್ತದೆಯೋ ಕಾದು ನೋಡಬೇಕು. ಬಿಧುರಿಯದ್ದು ಸಂಪೂರ್ಣವಾಗಿ ದ್ವೇಷ ಭಾಷಣವಾಗಿದೆ ಎಂದು ಡ್ಯಾನಿಶ್ ಅಲಿ ಹೇಳಿದ್ದಾರೆ. ಈ ಮಧ್ಯೆ, ನಿಂದನೆಯ ಮಾತುಗಳನ್ನಾಡಿರುವ ಬಿಜೆಪಿ ಸಂಸದ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಾರ್ಟಿಯು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದೆ. ಹಾಗೆಯೇ, ಕಲಾಪದ ಕಡಿತದಿಂದ ಉಗ್ರ ಪದವನ್ನು ತೆಗೆದ ಹಾಕಲಾಗಿದೆ. ಪ್ರತಿಪಕ್ಷಗಳ ತೀವ್ರ ಒತ್ತಡಕ್ಕೆ ಒಳಗಾಗಿರುವ ಬಿಜೆಪಿಯು, ಸಂಸದ ರಮೇಶ್ ಬಿಧುರಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ತಮ್ಮ ಈ ನಡವಳಿಕೆ ಕುರಿತು ವಿವರಣೆ ನೀಡುವಂತೆ ಕೋರಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಕರ್ನಾಟಕ

VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!

VISTARA TOP 10 NEWS: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಹೊಸ ರಾಜಕೀಯ ಶಕೆ ಆರಂಭವಾಗಿದೆ. ಕಾವೇರಿ ನೀರು ಬಿಡುಗಡೆ ಮುಂದುವರಿಸಲು ತೀರ್ಮಾನವಾಗಿದೆ. ಹೀಗೆ ದಿನದ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Edited by

Vistara Top 10 News 22
Koo

1.ಬಿಜೆಪಿ-ಜೆಡಿಎಸ್‌ ಮೈತ್ರಿ ಘೋಷಣೆ; ಕಾಂಗ್ರೆಸ್‌ ಮಣಿಸಲು ಅಮಿತ್‌ ಶಾ-ಕುಮಾರಸ್ವಾಮಿ ಪಣ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ದೃಷ್ಟಿಯಿಂದ ಕೊನೆಗೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ (BJP-JDS Alliance) ಅಧಿಕೃತ ಮುದ್ರೆ ಬಿದ್ದಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಮೈತ್ರಿಗೆ ಅಧಿಕೃತ ಮುದ್ರೆ ಒತ್ತಿದರು. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭ!

2. ಸೆ.26ರವರೆಗೆ ಕಾವೇರಿ ನೀರು ಬಿಡುಗಡೆ ಫಿಕ್ಸ್‌; ಬಳಿಕ ಬಿಡುವುದಿಲ್ಲ ಎಂದು ಅಧಿವೇಶನ ಕರೆದು ನಿರ್ಣಯ?
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಕಾವೇರಿ ಬಿಕ್ಕಟ್ಟು ಚರ್ಚೆಯಾಗಿದೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಸೆ. 26ರವರೆಗೆ ನೀರು ಬಿಡುಗಡೆ ಮಾಡುವುದು, ಮುಂದೆ ಮತ್ತೊಮ್ಮೆ ಆದೇಶ ನೀಡದಂತೆ ಅಧಿವೇಶನ ಕರೆದು ನೀರು ಬಿಡುವುದಿಲ್ಲ ಎಂಬ ನಿರ್ಣಯ ತೆಗೆದುಕೊಳ್ಳುವುದೆಂದು ಚರ್ಚೆ ನಡೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ: ಕಾವೇರಿ ಹೋರಾಟಕ್ಕೆ ಧುಮುಕಿದ ಚುಂಚಶ್ರೀ, ರೈತ ಪರ ನಿರ್ಧಾರ ತೆಗೆದುಕೊಳ್ಳಲು ಹಕ್ಕೊತ್ತಾಯ

3. ಏಷ್ಯನ್‌ ಗೇಮ್ಸ್‌ಗೆ ಅರುಣಾಚಲದ ಅಥ್ಲಿಟ್‌ಗೆ ಚೀನಾ ಪ್ರವೇಶ ನಿರಾಕರಣೆ: ಏನಿದು ಹೊಸ ವಿವಾದ?
ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್​ ಗೇಮ್ಸ್​ನಲ್ಲಿ (Asian Games 2023) ಗಡಿ ರಾಜಕೀಯ ಮುನ್ನೆಲೆಗೆ ಬಂದಿದೆ. ಅರುಣಾಚಲ ಪ್ರದೇಶದ ಮೂವರು ವುಶ್​ ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಏನಿದು ವಿವಾದ? ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಸ್ತ್ರೀ ಸಬಲೀಕರಣಕ್ಕೆ ಮಹಿಳಾ ಮೀಸಲಾತಿ ಶಕ್ತಿ, ಇದು ಐತಿಹಾಸಿಕ; ಮೋದಿ ಸಂತಸ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು ಕಲ್ಪಿಸುವ ವಿಧೇಯಕಕ್ಕೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಆಗ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಸಂತಸ ಹಂಚಿಕೊಂಡರು. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್‌, ಎದುರಾಯ್ತು ಸಂಕಷ್ಟ
“ಸನಾತನ ಧರ್ಮವು ಕೊರೊನಾ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಹಾಗೂ ತಮಿಳುನಾಡು ಸರ್ಕಾರ ಸೇರಿ 16 ಜನರಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಬಿಎಸ್‌ಪಿ ಸಂಸದ ಡ್ಯಾನಿಷ್‌ ಅಲಿ ಉಗ್ರ ಎಂದು ಜರಿದ ಬಿಜೆಪಿ ಎಂಪಿ, ಕ್ರಮಕ್ಕೆ ಪ್ರತಿಪಕ್ಷಗಳ ಆಗ್ರಹ
ಬಿಎಸ್‌ಪಿಯ ಸಂಸದ ಡ್ಯಾನಿಶ್ ಅಲಿ (BSP MP Danish Ali) ಅವರಿಗೆ ಭಾರತೀಯ ಜನತಾ ಪಾರ್ಟಿಯ ಸಂಸದ ರಮೇಶ್ ಬಿಧುರಿ (BJP MP Ramesh Bidhuri) ಅವರು ಸಂಸತ್ತಿನಲ್ಲಿ ‘ಉಗ್ರ’ (Terrorist) ಎಂದು ಕರೆದಿದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ಮೊದಲ ಏಕದಿನ ಶುಭಾರಂಭ: ಆಸ್ಟ್ರೇಲಿಯಾಕ್ಕೆ ಸೋಲುಣಿಸಿ ನಂ. 1 ಪಟ್ಟಕ್ಕೇರಿದ ಭಾರತ
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದೆ. ಬೌಲಿಂಗ್‌ನಲ್ಲಿ ಮೊಹಮ್ಮದ್‌ ಶಮಿ, ಬ್ಯಾಟಿಂಗ್‌ನಲ್ಲಿ ಶುಭಮನ್‌ ಗಿಲ್‌, ಕೆ.ಎಲ್‌ ರಾಹುಲ್‌, ಋತುರಾಜ್‌ ಗಾಯಕ್ವಾಡ್‌, ಸೂರ್ಯಕುಮಾರ್‌ ಯಾದವ್‌ ಸಖತ್ತಾಗಿ ಮಿಂಚಿದರು. ಈ ಗೆಲುವಿನಿಂದ ಭಾರತ ಏಕದಿನ ಕ್ರಿಕೆಟ್‌ನಲ್ಲೂ ನಂಬರ್‌ ಒನ್‌ ಸ್ಥಾನಕ್ಕೆ ಬಂತು. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ಸುದ್ದಿ: ಏಕದಿನ ವಿಶ್ವಕಪ್‌ ಬಹುಮಾನ ಎಷ್ಟು ಗೊತ್ತೆ? ಇಲ್ಲಿದೆ ಎಲ್ಲ ವಿವರ

8 ಯೋಗಿ ರಾಜ್ಯದಲ್ಲಿ ಎನ್‌ಕೌಂಟರ್‌ಗೆ ಮತ್ತೊಬ್ಬ ಪಾತಕಿ ಬಲಿ, ದುಷ್ಕರ್ಮಿಗಳಿಗೆ ನಡುಕ
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ (Yogi Adityanath) ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕ್ರಿಮಿನಲ್‌ಗಳ ಎನ್‌ಕೌಂಟರ್‌ ಜಾಸ್ತಿಯಾಗಿವೆ. ಇದೀಗ ಮಹಿಳಾ ಪೊಲೀಸ್‌ ಪೇದೆಯೊಬ್ಬರ ಹತ್ಯೆಯ ಪ್ರಮುಖ ಆರೋಪಿಯಾದ ಅನೀಶ್‌ ಖಾನ್‌ ಎಂಬುವನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ಮುಂದಿನ ಆಸ್ಕರ್‌ ರೇಸ್‌ನಲ್ಲಿ ಯಾವೆಲ್ಲ ಚಿತ್ರಗಳು ಇರಲಿವೆ?
2024ರ ಆಸ್ಕರ್‌ (Oscars 2024) ರೇಸ್‌ನಲ್ಲಿ ಯಾವೆಲ್ಲ ಭಾರತೀಯ ಸಿನಿಮಾಗಳು ಬರಬಹುದು ಎಂಬ ಚರ್ಚೆ ಶುರುವಾಗಿವೆ. ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ (Rocky Aur Rani Kii Prem Kahaani), ʻಜ್ವಿಗಾಟೊʼ (Zwigato), ʻದಿ ಕೇರಳ ಸ್ಟೋರಿʼ ಹೆಸರು ಜೋರಾಗಿ ಕೇಳಿಬರುತ್ತಿದೆ ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ವ್ಯಾನ್‌ನಿಂದ ಜಿಗಿದು ಇಬ್ಬರು ಕೈದಿಗಳ ಪರಾರಿ, ಕತ್ತೆ ಕಾಯುತ್ತಿದ್ದ ಪೊಲೀಸರು!
ಉತ್ತರ ಪ್ರದೇಶದಲ್ಲಿ ಮೂವರು ಆರೋಪಿಗಳು ಪೊಲೀಸ್‌ ವ್ಯಾನ್‌ನಿಂದ ತಪ್ಪಿಸಿಕೊಂಡು ಓಡಿಹೋದ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಉತ್ತರ ಪ್ರದೇಶ ಪೊಲೀಸರ ಕಾರ್ಯವೈಖರಿ ಕುರಿತು ಜನರಿಂದ ಅಸಮಾಧಾನ ವ್ಯಕ್ತವಾಗಿದೆ. ಅವರೇನು ಕತ್ತೆ ಕಾಯ್ತಿದ್ರಾ ಎಂದು ಜನ ಕೇಳ್ತಿದಾರೆ. ಪೂರ್ಣ ಸುದ್ದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Continue Reading

ದೇಶ

Money Guide: ಅತ್ಯುತ್ತಮ ನಿವೃತ್ತ ಜೀವನಕ್ಕಾಗಿ ಟಾಪ್ 10 ಹಣ ಉಳಿತಾಯದ ಟಿಪ್ಸ್!

Money Guide: ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮ ಆಗಿರಬೇಕು ಎಂದಾದರೆ, ವೃತ್ತಿಯ ಆರಂಭದಿಂದಲೇ ಉಳಿತಾಯವನ್ನು ಆರಂಭಿಸಿ.

VISTARANEWS.COM


on

Edited by

savings
Koo

ಣವನ್ನು ಉಳಿತಾಯ (Money Saving) ಮಾಡುವುದೂ ಒಂದು ಕಲೆ. ದುಡಿಮೆಯ ದಿನಗಳಲ್ಲಿ ಒಂದಿಷ್ಟು ಹಣವನ್ನು ಉಳಿತಾಯದ ಮಾಡಿದರೆ, ನಿವೃತ್ತಿಯ ದಿನಗಳನ್ನು (Retirement Life) ನೆಮ್ಮದಿಯಾಗಿ ಕಳೆಯಬಹುದು. ಇಲ್ಲದಿದ್ದರೆ, ದುಡಿಯುವ ಕಸುವು ಇಲ್ಲದ ಸಮಯದಲ್ಲಿ ಹಣಕ್ಕಾಗಿ ಪರದಾಡಬೇಕಾಗುತ್ತದೆ. ಹಾಗಾಗಿ, ನಿಮ್ಮ ವೃತ್ತಿಯ ಆರಂಭದ ದಿನಗಳಿಂದಲೇ ನಿವೃತ್ತಿಯ ಬಗ್ಗೆ ಪ್ಲ್ಯಾನ್ ಮಾಡಿ(Plan for Retirement life), ಹಣವನ್ನು ಉಳಿತಾಯ ಮಾಡಬೇಕು. ನಿವೃತ್ತಿಯ ಅಂಚಿಗೆ ಬರುವಷ್ಟರಲ್ಲಿ ದೊಡ್ಡ ಮೊತ್ತದ ಉಳಿತಾಯ ನಿಮಗಾಗಿ ಕಾಯುತ್ತಿರುತ್ತದೆ. ಹಾಗಾಗಿ, ಈಗನಿಂದಲೇ ನೀವು ಉಳಿತಾಯ ಮತ್ತು ನಿವೃತ್ತಿಯ ದಿನಗಳಿಗಾಗಿ ಹೂಡಿಕೆಯ ಪ್ಲ್ಯಾನ್ ಮಾಡುವುದು ಶುರು ಮಾಡಿ(Money Guide).

ನಿವೃತ್ತಿಗಾಗಿ ಹಣ ಉಳಿಸುವ ಮಾರ್ಗಗಳು….

1.ಉಳಿತಾಯ ಬೇಗ ಆರಂಭಿಸಿ

ಉತ್ತಮ ನಿವೃತ್ತಿ ಜೀವನಕ್ಕಾಗಿ ವೃತ್ತಿ ಆರಂಭದ ದಿನಗಳಿಂದಲೇ ಉಳಿತಾಯವನ್ನು ಆರಂಭಿಸಬೇಕು. ಚಿಕ್ಕ ಮೊತ್ತದ ಸೇವಿಂಗ್ ಕೂಡ ನಿವೃತ್ತಿ ಹೊತ್ತಿಗೆ ಬಹುದೊಡ್ಡ ಮೊತ್ತವಾಗಿ ಬದಲಾಗಿರುತ್ತದೆ.

2.ಟಾರ್ಗೆಟ್ ಸೆಟ್ ಮಾಡಿಕೊಳ್ಳಿ

ನಿಮ್ಮ ನಿರೀಕ್ಷಿತ ವೆಚ್ಚಗಳು ಮತ್ತು ಜೀವನಶೈಲಿಯ ಆಧಾರದ ಮೇಲೆ ನಿವೃತ್ತಿಗಾಗಿ ನಿಮಗೆ ಎಷ್ಟು ಹಣ ಬೇಕು ಎಂದು ನಿರ್ಧರಿಸಿ. ಹಣದುಬ್ಬರ ಮತ್ತು ಆರೋಗ್ಯ ವೆಚ್ಚಗಳಂತಹ ಅಂಶಗಳನ್ನು ಪರಿಗಣಿಸಿ ಸೇವಿಂಗ್ ಆರಂಭಿಸಿ. ಸ್ಪಷ್ಟವಾದ ನಿವೃತ್ತಿ ಗುರಿಯನ್ನು ಹಾಕಿಕೊಳ್ಳುವುದರಿಂದ ಹಣ ಉಳಿಕೆಯಲ್ಲಿ ಸ್ಪಷ್ಟತೆ ದೊರೆಯುತ್ತದೆ.

3.ರಿಟೈರ್‌ಮೆಂಟ್ ಬಜೆಟ್ ತಯಾರಿಸಿ

ನಿಮ್ಮ ಸದ್ಯದ ಆದಾಯ ಮತ್ತು ವೆಚ್ಚದ ಅನುಸಾರ ನಿಮ್ಮ ನಿವೃತ್ತಿಯ ಬಜೆಟ್ ತಯಾರಿಸಿ. ಅನವಶ್ಯವಾಗಿ ಎಲ್ಲೆಲ್ಲಿ ಹಣ ಪೋಲಾಗುತ್ತಿದೆ ಎಂದು ಗುರುತಿಸಿಕೊಳ್ಳಿ ಮತ್ತು ಅಂಥ ಹಣವನ್ನು ಉಳಿಕೆಯ ಪಟ್ಟಿಗೆ ಸೇರಿಸಿ. ಈ ಮೂಲಕ ರಿಟೈರ್ ಫಂಡ್ ಕ್ರೋಡೀಕರಿಸಬಹುದು.

4.ರಿಟೈರ್‌ಮೆಂಟ್ ಅಕೌಂಟ್!

ಭಾರತದಲ್ಲಿ ನಾನಾ ಅಕೌಂಟ್‌ಗಳು ಚಾಲ್ತಿಯಲ್ಲಿವೆ. ಅವುಗಳ ಮೂಲಕ ರಿಟೈರ್ಮೆಂಟ್ ಪ್ಲ್ಯಾನ್ ಮಾಡಬಹುದು. ಇಪಿಎಫ್, ಪಿಪಿಎಫ್, ಎನ್‌ಪಿಎಸ್, ಎಫ್‌ಡಿ ಇತ್ಯಾದಿ ಖಾತೆಗಳ ಮೂಲಕ ಸೇವಿಂಗ್‌ ಹೆಚ್ಚಿಸುತ್ತಾ ಹೋದಂತೆ ನಿವೃತ್ತಿ ಸಮಯದಯಲ್ಲಿ ತುಂಬಾ ಸಹಕಾರಿಯಾಗುತ್ತದೆ.

5.ಹೂಡಿಕೆ ಮಾಡಿ

ಷೇರುಗಳು, ನಿರ್ದಿಷ್ಟ ಆದಾಯ ತರುವ ಹೂಡಿಕೆಗಳು, ರಿಯಲ್ ಎಸ್ಟೇಟ್ ಸೇರಿದಂತೆ ಇನ್ನಿತರ ಹೂಡಿಕೆಗಳನ್ನು ಆಯ್ದುಕೊಳ್ಳಬಹುದು. ನೀವು ಯಾವುದೇ ರೀತಿಯ ಹೂಡಿಕೆಯ ಸಾಧನವನ್ನು ಆಯ್ಕೆ ಮಾಡಿಕೊಳ್ಳಿ. ಆದರೆ, ಅದಕ್ಕಿಂತ ಮುಂಚೆ ಅದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಮುಂದುವರಿಯರಿ.

6.ಅನವಶ್ಯ ವೆಚ್ಚ ಬೇಡ

ನಿಮ್ಮ ನಿವೃತ್ತಿಯ ದಿನಗಳು ಅತ್ಯುತ್ತಮವಾಗಿರಬೇಕು ಎಂದಾದರೆ, ಈಗಿನಿಂದಲೂ ಅನವಶ್ಯ ವೆಚ್ಚಗಳನ್ನು ದೂರ ಮಾಡಿ. ನಿಮ್ಮ ರಿಟೈರ್ಮೆಂಟ್‌ ಖಾತೆಗಳಿಗೆ ಆಟೋಮೆಟಿಕ್ ಆಗಿ ದುಡ್ಡು ಪೇ ಆಗುವ ಹಾಗೆ ಮಾಡಿ. ನಿಮ್ಮ ಸಂಬಳದಲ್ಲಿ ಇನ್‌ಕ್ರಿಮೆಂಟ್ ಆದಾಗಲೆಲ್ಲ. ಈ ರೀತಿಯ ಪರಿಹಾರವನ್ನು ಕಂಡುಕೊಳ್ಳಬಹುದು.

7.ಪರ್ಯಾಯ ಉಳಿತಾಯ

ಮ್ಯೂಚವಲ್ ಫಂಡ್ಸ್, ಷೇರುಗಳು, ಬಾಂಡ್‌ಗಳಂಥ ಪರ್ಯಾಯ ಉಳಿತಾಯದ ಮಾರ್ಗಗಳನ್ನು ಹುಡುಕಿಕೊಳ್ಳಬಹುದು. ಕೇವಲ ಹಣವನ್ನು ಫಿಕ್ಸೆಡ್ ಡಿಪಾಸೆಟ್ ಮಾಡುವುದು ಮಾತ್ರವೇ ಉಳಿತಾಯದ ಮಾರ್ಗವಲ್ಲ. ಉಳಿತಾಯದ ಜತೆಗೆ ಹಣ ಹೆಚ್ಚಾಗುವ ಮಾರ್ಗಗಳಿವೆ. ಅವುಗಳನ್ನು ಶೋಧಿಸಬಹುದು. ಆದರೆ, ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ.

8.ತೆರಿಗೆ ಮಾಹಿತಿ ಇರಲಿ

ತೆರಿಗೆ ಕಾನೂನುಗಳು, ಹೂಡಿಕೆ ಆಯ್ಕೆಗಳು ಮತ್ತು ನಿವೃತ್ತಿ ಯೋಜನೆ ತಂತ್ರಗಳಲ್ಲಿನ ಬದಲಾವಣೆಗಳ ಬಗ್ಗೆ ನಿಮಗೆ ಅಪ್‌ಡೇಟೆಡ್ ಮಾಹಿತಿ ಇರುವುದು ಉತ್ತಮ. ತಿಳುವಳಿಕೆಯುಳ್ಳ ಹಣಕಾಸಿನ ನಿರ್ಧಾರಗಳನ್ನು ಮಾಡಲು ಈ ರೀತಿಯ ಅಪ್‌ಡೇಟೆಡ್ ಮಾಹಿತಿ ಇದ್ದರೆ ಬೆಸ್ಟ್ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ.

9.ರಿಟೈರ್ಮೆಂಟ್ ಫಂಡ್ ಮುಟ್ಟಬೇಡಿ

ಯಾವುದೇ ಕಾರಣಕ್ಕೂ ನಿಮ್ಮ ನಿವೃತ್ತಿ ಉಳಿತಾಯವನ್ನು ಇತರ ವೆಚ್ಚಗಳಿಗಾಗಿ ಬಳಸಲು ಹೋಗಲೇಡಿ. ಉಳಿತಾಯದ ಹಣವನ್ನು ಬಳಸಲಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ಮತ್ತೆ ನೀವು ಹಣವಿಲ್ಲದೇ ಪರದಾಡಬೇಕಾಗುತ್ತದೆ. ಹಾಗಾಗಿ, ಎಂಥದ್ದೇ ಸಂದರ್ಭದಲ್ಲಿ ನಿವೃತ್ತಿಗಾಗಿ ತೆಗೆದಿಟ್ಟ ಅಥವಾ ಸೇವಿಂಗ್ ಮಾಡಿದ ಹಣವನ್ನು ಸದ್ಯದ ವೆಚ್ಚಕ್ಕೆ ಬಳಸಲು ಮುಂದಾಗಬೇಡಿ.

ಈ ಸುದ್ದಿಯನ್ನೂ ಓದಿ: Money Guide: ಪಿಪಿಎಫ್‌, ಎನ್‌ಎಸ್‌ಸಿ, ಎಸ್‌ಸಿಎಸ್‌ಎಸ್‌ ಖಾತೆ ಸ್ಥಗಿತವಾಗದಂತೆ ನೋಡಿಕೊಳ್ಳಿ

10.ತುರ್ತು ನಿಧಿ ಇರಲಿ

ಅನಿರೀಕ್ಷಿತ ವೆಚ್ಚಗಳಿಗಾಗಿ ತುರ್ತು ನಿಧಿಯನ್ನು ನಿರ್ವಹಣೆ ಮಾಡುವುದು ಉತ್ತಮ. ಯಾಕೆಂದರೆ, ತುರ್ತು ನಿಧಿ ನಿಮ್ಮ ಬಳಿ ಇದ್ದರೆ ನೀವು ನಿಮ್ಮ ಸೇವಿಂಗ್ಸ್‌ ಅನ್ನು ವೆಚ್ಚಗಳಿಗೆ ಬಳಸಲು ಮುಂದಾಗುವುದಿಲ್ಲ. ಇಲ್ಲದಿದ್ದರೆ, ಉಳಿತಾಯದ ಹಣವನ್ನೇ ನೀವು ತುರ್ತು ಅಗತ್ಯಗಳಿಗೆ ಬಳಸುತ್ತೀರಿ. ಆಗ ನಿಮ್ಮ ನಿವೃತ್ತಿಯ ಎಲ್ಲ ಪ್ಲ್ಯಾನ್ ಹಾಳಾಗುತ್ತದೆ.

Continue Reading
Advertisement
meri maati mera desh
ಅಂಕಣ30 mins ago

ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!

Vistara Editorial and Asian Games and China again played dirty tricks
ಕ್ರೀಡೆ51 mins ago

ವಿಸ್ತಾರ ಸಂಪಾದಕೀಯ: ಏಷ್ಯನ್‌ ಗೇಮ್ಸ್‌ನಲ್ಲಿ ಅರುಣಾಚಲ ತಗಾದೆ, ಚೀನಾದ ಅಧಿಕ ಪ್ರಸಂಗ

Dina bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Sphoorti Salu
ಸುವಚನ2 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

MLA Gopalakrishna Belur surprise visit to Ripponpet Primary Health Centre
ಶಿವಮೊಗ್ಗ7 hours ago

Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ

Vehicle Scrapping
ಕರ್ನಾಟಕ7 hours ago

Cabinet Meeting: ವಾಹನಗಳ ಗುಜರಿ ನೀತಿ-2022 ಜಾರಿ ಮಾಡಲು ಸಚಿವ ಸಂಪುಟ ಒಪ್ಪಿಗೆ

Danish Ali and Rahul Gandhi
ದೇಶ7 hours ago

‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Vistara Top 10 News 22
ಕರ್ನಾಟಕ7 hours ago

VISTARA TOP 10 NEWS: ಬಿಜೆಪಿ-ಜೆಡಿಎಸ್ ಮೈತ್ರಿ ಸೆಟ್ಟಾಯ್ತು, ಸೆ. 26ರವರೆಗೆ ನೀರು ಬಿಡೋದೂ ಫಿಕ್ಸಾಯ್ತು!

Zameer Pinjara
ಕರ್ನಾಟಕ8 hours ago

Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!

3 Indian companies among America's happiest employees top 20 company list
ಪ್ರಮುಖ ಸುದ್ದಿ8 hours ago

Happiest Employees: ಅಮೆರಿಕದ ಹ್ಯಾಪಿಯೆಸ್ಟ್ ಕಂಪನಿಗಳ ಟಾಪ್‍ 20 ಪಟ್ಟಿಯಲ್ಲಿ ಭಾರತದ 3 ಕಂಪನಿ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ2 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌