The Kerala Story | ಕೇರಳ ಉಗ್ರರ ಸ್ವರ್ಗ: ದಿ ಕೇರಳ ಸ್ಟೋರಿ ಚಿತ್ರ ತಂಡದ ವಿರುದ್ಧ ಕೇಸ್! Vistara News
Connect with us

ದೇಶ

The Kerala Story | ಕೇರಳ ಉಗ್ರರ ಸ್ವರ್ಗ: ದಿ ಕೇರಳ ಸ್ಟೋರಿ ಚಿತ್ರ ತಂಡದ ವಿರುದ್ಧ ಕೇಸ್!

ಕೇರಳ ಉಗ್ರರ ಸ್ವರ್ಗ ಎಂದು ಬಿಂಬಿಸುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ತಂತ್ರಜ್ಞರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಕೇರಳದ 32 ಸಾವಿರ ಯುವತಿಯರನ್ನುಇಸ್ಲಾಂಗೆ ಮತಾಂತರ ಮಾಡಿ ಸಿರಿಯಾ ಮತ್ತಿತರ ಕಡೆ ಭಯೋತ್ಪಾದನೆಗೆ ತಳ್ಳಲಾಗಿದೆ ಎನ್ನುವುದು ಈ ಚಿತ್ರದ ಹೈಲೈಟ್ಸ್‌ ಆಗಿದೆ.

VISTARANEWS.COM


on

The Kerala Story
Koo

ತಿರುವನಂತಪುರಂ: ಕಳೆದ ತಿಂಗಳು ಬಿಡುಗಡೆಯಾದ ‘ದಿ ಕೇರಳ ಸ್ಟೋರಿ’ (The Kerala Story) ಚಿತ್ರದ ಟೀಸರ್ ವಿವಾದಕ್ಕೆ ಕಾರಣವಾಗಿದೆ. ಚಿತ್ರದ ತಂತ್ರಜ್ಞರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ತಿರುವನಂತಪುರಂ ಪೊಲೀಸ್ ಕಮಿಷನರ್ ಸ್ಪರ್ಜನ್ ಕುಮಾರ್ ಅವರು ಆದೇಶಿಸಿದ್ದಾರೆ. ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ‘ಕೇರಳವನ್ನು ಉಗ್ರರ ಸ್ವರ್ಗ’ ಎಂಬಂತೆ ಬಿಂಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಒಂದು ದಶಕದಲ್ಲಿ ಕೇರಳದ 32 ಸಾವಿರ ಹೆಣ್ಣು ಮಕ್ಕಳನ್ನು ಇಸ್ಲಾಮ್‌ಗೆ ಮತಾಂತರ ಮಾಡಿ, ಅವರನ್ನು ಐಸಿಸ್ ಪ್ರಭಾವ ಇರುವ ಅಫಘಾನಿಸ್ತಾನ ಮತ್ತು ಸಿರಿಯಾಗಳಿಗೆ ರವಾನಿಸಿ, ಉಗ್ರರನ್ನಾಗಿ ಮಾಡಲಾಗುತ್ತಿದೆ ಎಂದು ಟೀಸರ್‌ನಲ್ಲಿ ಹೇಳಲಾಗಿದೆ. ಈ ಸಂಗತಿಯೇ ಈಗ ವಿವಾದಕ್ಕೆ ಕಾರಣವಾಗಿದೆ. ಈ ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶನ ಮಾಡಿದ್ದಾರೆ ಮತ್ತು ವಿ ಎ ಶಾ ನಿರ್ಮಾಪಕರಾಗಿದ್ದಾರೆ.

ಎರಡು ದಿನಗಳ ಹಿಂದೆ ತಮಿಳುನಾಡು ಮೂಲದ ಪತ್ರಕರ್ತ ಬಿ ಆರ್ ಅರವಿಂದಕ್ಷಣ್ ಅವರು ಕೇಂದ್ರ ಸಿನಿಮಾ ಸೆನ್ಸಾರ್ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಶಿ ಅವರಿಗೆ ಪತ್ರ ಬರೆದು, ಚಿತ್ರದ ತಯಾರಿಕರು ತಾವು ಹೇಳಿಕೊಂಡಿರುವುದಕ್ಕೆ(ಕೇರಳ ಉಗ್ರರ ಸ್ವರ್ಗ) ಪೂರಕ ಸಾಕ್ಷ್ಯಗಳನ್ನು ಒದಗಿಸುವ ತನಕ ನಿಷೇಧ ಹೇರಬೇಕು ಎಂದು ಆಗ್ರಹಿಸಿದ್ದಾರೆ. ಇದೇ ಪತ್ರದ ಪ್ರತಿಗಳನ್ನು ಅವರು ಕೇರಳ ಮುಖ್ಯಮಂತ್ರಿ ಸಿಎಂ ಪಿಣರಾಯಿ ವಿಜಯನ್ ಕಳುಹಿಸಿದ್ದರು. ನಂತರ, ಈ ಪ್ರತಿಯನ್ನು ಸಿಎಂ ಅವರು ಡಿಜಿಪಿ ಅವರಿಗೂ ಕಳುಹಿಸಿದ್ದರು.

ನಾನು ಕೇರಳ ಸಿಎಂ ಮತ್ತು ಡಿಜಿಪಿ ಅವರಿಗೂ ಪತ್ರವನ್ನು ಮೇಲ್ ಮಾಡಿದ್ದು, ದಿ ಕೇರಳ ಸ್ಟೋರಿ ಚಿತ್ರದ ನಿರ್ದೇಶಕ ಸುದೀಪ್ತೋ ಸೇನ್ ಅವರನ್ನು ಕರೆಯಿಸಿ, ಟೀಸರ್‌ನಲ್ಲಿ ಹೇಳಲಾದ ಸಂಗತಿಗಳ ಬಗ್ಗೆ ತನಿಖೆ ಮಾಡುವಂತೆ ಕೋರಿದ್ದೇನೆ ಎಂದು ಪತ್ರಕರ್ತ ಅರವಿಂದಕ್ಷಣ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ಕೇರಳ ಪೊಲೀಸರು, ದಿ ಕೇರಳ ಸ್ಟೋರಿ ಚಿತ್ರದ ಟೀಸರ್ ಸಂಪೂರ್ಣವಾಗಿ ವೀಕ್ಷಿಸಿ, ಪರಿಶೀಲಿಸಿದ್ದಾರೆ. ಸಮುದಾಯಗಳ ಮಧ್ಯೆ ದ್ವೇಷ ಭಾವನೆ ಬಿತ್ತುವ ಉದ್ದೇಶ ಸ್ಪಷ್ಟವಾಗಿದೆ. ಚಿತ್ರದಲ್ಲಿ ಮಾಡಲಾಗಿರುವ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲದಿರುವುದು ಖಾತ್ರಿಯಾಗಿದೆ. ಕೇಸ್ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಚಿತ್ರವು ಉತ್ತರ ಕೇರಳದಿಂದ ಕಾಣೆಯಾದ ನಾಲ್ವರು ಮಹಿಳೆಯರನ್ನು ಆಧರಿಸಿದೆ ಎಂದು ಹೇಳಲಾಗುತ್ತಿದೆ. ಗಂಡಂದಿರ ಸಾವಿನ ನಂತರ ಅವರು ಅಫಘಾನಿಸ್ತಾನ ಜೈಲಿನಲ್ಲಿರುವುದನ್ನು ಪತ್ತೆ ಹಚ್ಚಲಾಯಿತು. ಆದರೆ, ಎರಡು ವರ್ಷಗಳ ಹಿಂದೆ ಅವರನ್ನು ಮತ್ತೆ ದೇಶಕ್ಕೆ ಕರೆಯಿಸಿಕೊಳ್ಳಲು ವಿದೇಶಾಂಗ ಸಚಿವಾಲಯವು ನಿರಾಕರಿಸಿತು.

ಇದನ್ನೂ ಓದಿ | Adipurush Film | ಆದಿಪುರುಷ್‌ ಚಿತ್ರತಂಡದ ಐವರ ವಿರುದ್ಧ ಕೇಸ್: ಅ. 27ರಂದು ವಿಚಾರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ದೇಶ

VD Savarkar: ಇಕ್ಬಾಲ್​ ಪಠ್ಯ ಕೈಬಿಟ್ಟು ಸಾರ್ವಕರ್ ಪಾಠ ಸೇರ್ಪಡೆಗೆ ಗಣ್ಯರ ಬಳಗದ ಬೆಂಬಲ

ಗಣ್ಯ ನಾಗರಿಕರ ತಂಡ ಪತ್ರಿಕಾಪ್ರಕಟಣೆಯನ್ನು ಹೊರಡಿಸಿ ವಿಶ್ವ ವಿದ್ಯಾಲಯ ಸರಿಯಾ ಕ್ರಮವನ್ನು ಕೈಗೊಂಡಿದೆ ಎಂದು ಹೇಳಿಕೆ ನೀಡಿದೆ.

VISTARANEWS.COM


on

V D Savarkar
Koo

ನವ ದೆಹಲಿ: ಸ್ವಾತಂತ್ರ್ಯ ಪೂರ್ವದಲ್ಲಿ ಪ್ರತ್ಯೇಕ ಇಸ್ಲಾಂ ರಾಷ್ಟ್ರದ ವಾದ ಮಂಡಿಸಿದ್ದ ಮೊಹಮ್ಮದ್​ ಇಕ್ಬಾಲ್​ ಅವರ ಪಠ್ಯವನ್ನು ತೆಗೆದು ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾರ್ವಕರ್​ ಅವರ ಪಾಠವನ್ನು ಡೆಲ್ಲಿ ವಿಶ್ವ ವಿದ್ಯಾಲಯದಲ್ಲಿ ರಾಜಕೀಯ ಶಾಸ್ತ್ರ ಪಠ್ಯದಲ್ಲಿ ಸೇರ್ಪಡೆ ಮಾಡಿರುವುದಕ್ಕೆ ಶಿಕ್ಷಣ ಕ್ಷೇತ್ರದ ಮುತ್ಸದ್ಧಿಗಳು, ಮಾಜಿ ನ್ಯಾಯಾಧೀಶರು ಸೇರಿದಂತೆ ಗಣ್ಯರ ಗುಂಪು ಸ್ವಾಗತಿಸಿದೆ. ವಿಶ್ವ ವಿದ್ಯಾಲಯದ ಕ್ರಮವನ್ನು ಬೆಂಬಲಿಸಿ ಅವರೆಲ್ಲರೂ ಹೇಳಿಕೆಯೊಂದನ್ನು ಪ್ರಕಟಿಸಿದ್ದಾರೆ.

ಕವಿ ಮೊಹಮ್ಮದ್ ಇಕ್ಬಾಲ್ ಅವರನ್ನು ಪಠ್ಯಕ್ರಮದಿಂದ ಕೈಬಿಡುವ ವಿಶ್ವವಿದ್ಯಾಲಯದ ನಿರ್ಧಾರವನ್ನು ಗುಂಪು ಬೆಂಬಲಿಸಿದೆ. ಅವರ ಬರಹಗಳು ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಕಲ್ಪನೆಯೊಂದಿಗೆ ಸಂಬಂಧ ಹೊಂದಿವೆ. ಇದು ಭಾರತದ ವಿಭಜನೆಯ ದುರಂತಕ್ಕೆ ಕಾರಣವಾಯಿತು ಎಂದು ಅವರೆಲ್ಲರೂ ಅಭಿಪ್ರಾಯಪಟ್ಟಿದ್ದಾರೆ.

ಬ್ರಿಟಿಷ್ ಸಾಮ್ರಾಜ್ಯಶಾಹಿಯ ಹಿಡಿತದಿಂದ ಹೊರಬರಲು ಭಾರತಕ್ಕೆ ಸಹಾಯ ಮಾಡಲು ಈ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅನೇಕ ಐತಿಹಾಸಿಕ ವ್ಯಕ್ತಿಗಳಿಗೆ ತೀವ್ರ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಶಶಾಂಕ್, ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಸ್ ಎನ್ ಧಿಂಗ್ರಾ, ಎಂಸಿ ಗರ್ಗ್ ಮತ್ತು ಆರ್ ಎಸ್ ರಾಥೋಡ್ ಸೇರಿದಂತೆ 123 ಗಣ್ಯ ವ್ಯಕ್ತಿಗಳು ಹೇಳಿಕೆ ಪ್ರಕಟಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಪಠ್ಯಕ್ರಮದಲ್ಲಿ ಸಾವರ್ಕರ್ ಅವರ ಕೊಡುಗೆ ಮತ್ತು ತತ್ವಶಾಸ್ತ್ರವನ್ನು ಪ್ರಸ್ತುತ ಸೇರಿಸುವ ಮೂಲಕ ನ್ಯಾಯ ಕಲ್ಪಿಸಲಾಗಿದೆ. ಆದರೆ, ಕಾಂಗ್ರೆಸ್​ ಮತ್ತು ಎಡಪಂಥೀಯ ಪ್ರಭಾವದ ವಿಶ್ವವಿದ್ಯಾಲಯಗಳು ನಮ್ಮ ತಾಯ್ನಾಡಿಗೆ ಸಾರ್ವಕರ್ ನೀಡಿದ ಕೊಡುಗೆಯನ್ನು ಉದ್ದೇಶಪೂರ್ವಕವಾಗಿ ಸ್ಮರಿಸಿಲ್ಲ ಎಂದು ಅವರೆಲ್ಲರೂ ಬೇಸರ ವ್ಯಕ್ತಪಡಿಸಿದ್ದಾರೆ.

ಸಾವರ್ಕರ್ ಅವರು ತಮ್ಮ ಕೃತಿ “ಹಿಂದುತ್ವ: ಯಾರು ಹಿಂದೂ” ಎಂಬ ಗಮನಾರ್ಹ ಸಾಹಿತ್ಯ ಬರೆದವರು. ಅವರು ಹಿಂದುತ್ವದ ಪಿತಾಮಹ . ಅವರು ಹಿಂದುತ್ವವನ್ನು ಭೌಗೋಳಿಕ ರಾಜಕೀಯ ಪರಿಕಲ್ಪನೆಯಾಗಿ ಪ್ರಚಾರ ಮಾಡಿದವರು. ವೈವಿಧ್ಯಮಯ ಸಮುದಾಯಗಳನ್ನು ಹಂಚಿಕೊಂಡ ಸಾಂಸ್ಕೃತಿಕ ಮತ್ತು ನಾಗರಿಕ ಗುರುತಿನ ಅಡಿಯಲ್ಲಿ ಒಂದುಗೂಡಿಸಿದ ಶ್ರೇಷ್ಠ ಚಿಂತಕ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: HD Deve Gowda: ಕಸಾಪದ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿಗೆ ಎಚ್‌.ಡಿ. ದೇವೇಗೌಡರು ಆಯ್ಕೆ

ಸಾವರ್ಕರ್ ಏಕಕಾಲದಲ್ಲಿ ದಲಿತ ಹಕ್ಕುಗಳಿಗಾಗಿ ಹೋರಾಡಿದರು ಮತ್ತು ಜಾತಿ ನಿರ್ಮೂಲನೆ ಮತ್ತು ಸಾಮಾಜಿಕ ಸಮಾನತೆಗಾಗಿ ಕೆಲಸ ಮಾಡಿದರು. ಭಾರತವನ್ನು ಒಂದು ರಾಷ್ಟ್ರವಾಗಿ ನೋಡುವ ಅವರ ದೃಷ್ಟಿಕೋನವು ಅಖಂಡ ಭಾರತ ಸಿದ್ಧಾಂತದ ಕೇಂದ್ರಬಿಂದುವಾಗಿತ್ತು ಎಂದು ಹೇಳಿಕೆಯಲ್ಲಿ ಬರೆಯಲಾಗಿದೆ.

ವಿದ್ಯಾರ್ಥಿಗಳಿಗೆ ಸಾವರ್ಕರ್ ಕಲಿಕೆ ಅಗತ್ಯ

ಸ್ವಾತಂತ್ರ್ಯ, ಸಾಮಾಜಿಕ ಸುಧಾರಣೆ ಮತ್ತು ರಾಷ್ಟ್ರೀಯ ಏಕತೆಯ ಬಗ್ಗೆ ಸಾವರ್ಕರ್ ಅವರ ದೃಷ್ಟಿಕೋನಗಳು ಅವರನ್ನು ಭಾರತೀಯ ಇತಿಹಾಸದಲ್ಲಿ ಶಾಶ್ವತ ವ್ಯಕ್ತಿಯನ್ನಾಗಿ ಮಾಡಿವೆ. ಸಾವರ್ಕರ್ ಅವರ ರಾಜಕೀಯ ಸಿದ್ಧಾಂತಗಳನ್ನು ಅಧ್ಯಯನ ಮಾಡುವ ಮೂಲಕ ವಿದ್ಯಾರ್ಥಿಗಳು, ಭಾರತದ ರಾಷ್ಟ್ರೀಯತಾ ಚಳುವಳಿ ಮತ್ತು ಅದರ ನಂತರದ ಪಥವನ್ನು ಅರಿತುಕೊಳ್ಳಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕವಿ ಇಕ್ಬಾಲ್ ಅವರನ್ನು ಭಾರತದಲ್ಲಿ ಪ್ರತ್ಯೇಕತೆಯ ಬೀಜಗಳನ್ನು ಬಿತ್ತಿದ ವಿಭಜಕ ವ್ಯಕ್ತಿ” ಎಂದು ಪ್ರಕಟಣೆಯಲ್ಲಿ ಬಣ್ಣಿಸಲಾಗಿದೆ. ಆಗಿನ ಪಂಜಾಬ್ ಮುಸ್ಲಿಂ ಲೀಗ್​ನ ಅಧ್ಯಕ್ಷರಾಗಿದ್ದ ಇಕ್ಬಾಲ್ ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಕಾರಣಕ್ಕಾಗಿ ಹೋರಾಡಿದರು. ‘ಸಾರೆ ಜಹಾನ್ ಸೆ ಅಚ್ಚಾ ಹಿಂದೂಸ್ತಾನ್ ಹಮಾರಾ…’ ಎಂಬ ಕೃತಿಯನ್ನು ಬರೆದ ಇಕ್ಬಾಲ್ ಇಸ್ಲಾಮಿಕ್ ಖಿಲಾಫತ್ ಬಗ್ಗೆ ಮಾತನಾಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇಕ್ಬಾಲ್ ತೀವ್ರಗಾಮಿಗಳಾಗಿ ಬದಲಾದವರು. ಅವರ ಆಲೋಚನೆಗಳು ಪ್ರಜಾಪ್ರಭುತ್ವ ಮತ್ತು ಭಾರತೀಯ ಜಾತ್ಯತೀತತೆಗೆ ವಿರುದ್ಧವಾಗಿದ್ದವು. ಇಕ್ಬಾಲ್ ಅವರ ಅನೇಕ ಬರಹಗಳು ಪ್ರತ್ಯೇಕ ಮುಸ್ಲಿಂ ರಾಷ್ಟ್ರದ ಕಲ್ಪನೆಯೊಂದಿಗೆ ಸಂಬಂಧ ಹೊಂದಿವೆ ಎಂದು ಗಣ್ಯ ನಾಗರಿಕರು ಆರೋಪಿಸಿದ್ದಾರೆ.

Continue Reading

ದೇಶ

News Anchor : ಭಾರತದ ಮೊಟ್ಟ ಮೊದಲ ಇಂಗ್ಲಿಷ್​ ನ್ಯೂಸ್ ಮಹಿಳಾ ಆ್ಯಂಕರ್​ ಇನ್ನಿಲ್ಲ

ಗೀತಾಂಜಲಿ ಅಯ್ಯರ್ 1971 ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ತಮ್ಮ ಸಾಧನೆಗಾಗಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದರು.

VISTARANEWS.COM


on

Gitanjali Aiyar
Koo

ನವ ದೆಹಲಿ: ಭಾರತದ ಮೊಟ್ಟ ಮೊದಲ ಇಂಗ್ಲಿಷ್​ ಸುದ್ದಿ ನಿರೂಪಕಿ (News Anchor) ಗೀತಾಂಜಲಿ ಅಯ್ಯರ್ ಬುಧವಾರ ನಿಧನ ಹೊಂದಿದ್ದಾರೆ. ದೂರದರ್ಶನದಲ್ಲಿ ವಾರ್ತೆಗಳನ್ನು ಓದುವ ಮೂಲಕ ದೇಶದ ಮನೆಮನೆಗಳಿಗೆ ಪರಿಚಿತರಾಗಿದ್ದ ಅವರು ನಿಧನ ಹೊಂದಿರುವ ವಾರ್ತೆಯನ್ನು ಅವರ ಸಹೋದ್ಯೋಗಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ದೂರದರ್ಶನದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನಂತರದಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದಾರೆ. ಗೀತಾಂಜಲಿ ಅವರು 1971ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ನಿರೂಪಕಿಯಾಗಿ ಮಾಡಿದ ಅಪ್ರತಿಮ ಸಾಧನೆಗಾಗಿ ಅವರು ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಕೊಲ್ಕತ್ತಾದ ಲೊರೆಟೊ ಕಾಲೇಜಿನಿಂದ ಪದವಿ ಪಡೆದಿದ್ದ ಗೀತಾಂಜಲಿ ಅಯ್ಯರ್, ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾದಿಂದ ಡಿಪ್ಲೊಮಾ ಪಡೆದಿದ್ದಾರೆ. 1989ರಲ್ಲಿ ಅತ್ಯುತ್ತಮ ಮಹಿಳೆಯರಿಗಾಗಿ ನೀಡುವ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಆಲ್ ಇಂಡಿಯಾ ರೇಡಿಯೋದಲ್ಲಿ ಶುಕ್ರವಾರ ರಾತ್ರಿ ಇಂಗ್ಲಿಷ್ ಹಾಡಿನ ಕೋರಿಕೆಯ ಜನಪ್ರಿಯ ಕಾರ್ಯಕ್ರಮ ಎ ಡೇಟ್ ವಿತ್ ಯು ಕಾರ್ಯಕ್ರವನ್ನು ಅವರು ಪ್ರಸ್ತುತಪಡಿಸುತ್ತಿದ್ದರು. ಸುದ್ದಿ ಉದ್ಯಮದಲ್ಲಿ ದಶಕಗಳ ವೃತ್ತಿಜೀವನವನ್ನು ಹೊಂದಿದ್ದ ನಂತರ ಅವರು ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್​ ಕ್ಷೇತ್ರಕ್ಕೆ ಕಾಲಿಟ್ಟಿದ್​ದರು. ಅವರು ಭಾರತದ ವರ್ಲ್ಡ್ ವೈಡ್ ಫಂಡ್​​ ಸಂಸ್ಥೆಯ ಪ್ರಮುಖ ದಾನಿಗಳಲ್ಲಿ ಒಬ್ಬರಾಗಿದ್ದರು.

ಗಣ್ಯರ ಸಂತಾಪಗಳು

ಗೀತಾಂಜಲಿ ಅಯ್ಯರ್ ಅವರು ನಮ್ಮ ಟಿವಿ ಪರದೆಗಳನ್ನು ಅಲಂಕರಿಸಿದ ದಿನಗಳನ್ನು ನಾವು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇವೆ. ಅವರು ಸುದ್ದಿ ನೋಡುವ ಅನುಭವಗಳ ಮೇಲೆ ಅಳಿಸಲಾಗದ ಛಾಪು ಮೂಡಿಸಿದವರು. ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಅವರಿಗೆ ಚಿರಶಾಂತಿ ಸಿಗಲಿ ಎಂದು ಕಾಂಗ್ರೆಸ್ ನಾಯಕಿ ನೆಟ್ಟಾ ಡಿಸೋಜಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Narendra Modi: ಅಮೆರಿಕ ಸಂಸತ್‌ನಲ್ಲಿ ಮೋದಿ ಭಾಷಣದ ಮೋಡಿ; ಆಹ್ವಾನ ಸ್ವೀಕರಿಸಿದ ಪ್ರಧಾನಿ

ಖ್ಯಾತ ಪತ್ರಕರ್ತೆ ಶೀಲಾ ಭಟ್, ಭಾರತದ ಅತ್ಯುತ್ತಮ ಟಿವಿ ನ್ಯೂಸ್ ರೀಡರ್​ಗಳಲ್ಲಿ ಒಬ್ಬರಾದ ಗೀತಾಂಜಲಿ ಅಯ್ಯರ್ ಅವರು ಇಂದು ನಿಧನರಾದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

Continue Reading

ಕರ್ನಾಟಕ

ವಿಸ್ತಾರ TOP 10 NEWS: ಬಾಡಿಗೆಯವರಿಗೂ ಫ್ರೀ ಕರೆಂಟ್‌ನಿಂದ, ಅಂತಿಮ ಘಟ್ಟದಲ್ಲಿ ಕುಸ್ತಿ ಕದನದವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

Edited by

for tenants also to wrestlers protest and more news
Koo

1. Congress Guarantee: ಬಾಡಿಗೆಯವರಿಗೂ ಸಿಗುತ್ತೆ ಫ್ರೀ ಕರೆಂಟ್‌ ಎಂದ ಸರ್ಕಾರ: ಏನೇನು ದಾಖಲೆ ಬೇಕು? ಇಲ್ಲಿದೆ ವಿವರ
ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ಮಾಸಿಕ 200 ಯುನಿಟ್‌ ಉಚಿತ ವಿದ್ಯುತ್‌ ಯೋಜನೆಯು ಬಾಡಿಗೆ ಮನೆಯವರಿಗೂ ಅನ್ವಯ ಆಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ. ಬಾಡಿಗೆ ಮನೆಯವರು ತಮ್ಮ ಆಧಾರ್‌ ಸಂಖ್ಯೆ, ಬಾಡಿಗೆ ಕರಾರು ಪತ್ರ, ವೋಟರ್‌ ಐಡಿಯನ್ನು ಆರ್‌ಆರ್‌ ಸಂಖ್ಯೆಯೊಂದಿಗೆ ಲಿಂಕ್‌ ಮಾಡಬೇಕು. ಆಗ ಅವರಿಗೂ ಯೋಜನೆ ಅನ್ವಯ ಆಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

2. Congress Guarantee : ತೆರಿಗೆ ಪಾವತಿಸುವವರ ಪತ್ನಿಗೆ ಗೃಹ ಲಕ್ಷ್ಮಿ ಯೋಜನೆಯ 2 ಸಾವಿರ ರೂ. ಸಿಗೋದಿಲ್ಲ!
5 ಪ್ರಮುಖ ಗ್ಯಾರಂಟಿಗಳಲ್ಲಿ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ನೀಡುವ ʼಗೃಹಲಕ್ಷ್ಮಿʼ ಯೋಜನೆಗೆ (Congress Guarantee) ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದ್ದು, ತೆರಿಗೆ ಪಾವತಿದಾರನ ಪತ್ನಿ ಹೊರತುಪಡಿಸಿ ಅಂತ್ಯೋದಯ, ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಈ ಯೋಜನೆಯ ಪ್ರಯೋಜನ ಸಿಗಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!
ಈ ಬಾರಿಯ ಚುನಾವಣೆಯಲ್ಲಿ ಘೋಷಣೆ ಮಾಡಲಾಗಿರುವ ಗ್ಯಾರಂಟಿ (Congress Guarantee) ಯೋಜನೆಗಳು ಚುನಾವಣೆ ಗಿಮಿಕ್‌ ಎಂದು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ (N Chaluvarayaswamy) ಅವರು ಹೇಳಿರುವ ವಿಡಿಯೊವೊಂದು ವೈರಲ್‌ (Video Viral) ಆಗಿದೆ. ಚುನಾವಣೆ ವೇಳೆ ಅಧಿಕಾರವನ್ನು ಹಿಡಿಯುವುದೇ ಬಹುಮುಖ್ಯ ಆಗಿದ್ದರಿಂದ ನಮಗೆ ಇಷ್ಟ ಇದೆಯೋ ಇಲ್ಲವೋ, ಸಿದ್ದರಾಮಯ್ಯ (CM Siddaramaiah) ಅವರಿಗೆ ಇಷ್ಟ ಆಗುತ್ತದೆಯೋ ಇಲ್ಲವೋ ಇಂಥ ಚೀಪ್‌ ಗಿಮಿಕ್‌ಗಳನ್ನು ಮಾಡಬೇಕಾಗುತ್ತದೆ ಎಂದು ಚಲುವರಾಯಸ್ವಾಮಿ ಹೇಳಿದ್ದಾರೆ. ಇವರ ಈ ಹೇಳಿಕೆಯು ಸರ್ಕಾರಕ್ಕೆ ಮುಜುಗರವನ್ನು ತಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. Caste Census: ಮತ್ತೆ ಜಾತಿ ಹುತ್ತಕ್ಕೆ ಕೈಹಾಕಿದ ಸಿದ್ದರಾಮಯ್ಯ?: ಒಕ್ಕಲಿಗ- ವೀರಶೈವ ಲಿಂಗಾಯತರು ವಿರೋಧಿಸಿದ್ದ ವರದಿ ಸ್ವೀಕಾರ?
ಈ ಹಿಂದೆ ಒಮ್ಮೆ ರಾಜ್ಯದಲ್ಲಿ ವಿವಾದಕ್ಕೀಡಾಗಿ ತಣ್ಣಗಾಗಿದ್ದ ವಿಚಾರವನ್ನು ಮತ್ತೆ ಕೈಗೆತ್ತಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ತಮ್ಮ ಮೊದಲ ಅವಧಿಯಲ್ಲಿ ನಡೆಸಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು (ಜಾತಿ ಗಣತಿ) ಸ್ವೀಕರಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವರದಿಗೆ ರಾಜ್ಯದ ಎರಡು ಪ್ರಬಲ ಜಾತಿಗಳಾದ ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Monsoon Season: ಮಂಗಳೂರು ವಿವಿ ಕಾಲೇಜಲ್ಲಿ ಕೈ ತೊಳೆಯೋಕೂ ನೀರಿಲ್ಲ; ರಜೆ ಕೊಟ್ಟ ಆಡಳಿತ ಮಂಡಳಿ!
ರಾಜ್ಯದಲ್ಲಿ ಮುಂಗಾರು (Monsoon Season) ಇನ್ನೂ ವಿಳಂಬ ಆಗುವ ಸೂಚನೆ ಕಂಡುಬಂದಿದೆ. ಆದರೆ, ರಾಜ್ಯದ ಹಲವು ಕಡೆ ಹಿಂಗಾರು ಮಳೆ ಭರ್ಜರಿಯಾಗಿಯೇ ಸುರಿಯುತ್ತಿದೆ. ಅಲ್ಲದೆ, ಈಗ ಬಿಪರ್‌ಜಾಯ್‌ ಚಂಡಮಾರುತದಿಂದಾಗಿ (Cyclone Biparjoy) ಇನ್ನೂ ಮೂರು ದಿನ (ಜೂನ್‌ 7, 8, 9) ರಾಜ್ಯದ ಹಲವು ಕಡೆ ಮಳೆಯಾಗಲಿದೆ. ಇನ್ನು ಈ ಬಾರಿ ಕರಾವಳಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅಷ್ಟಾಗಿ ಮಳೆ ಆಗದೇ ಇರುವುದು ತೀವ್ರ ನೀರಿನ ಅಭಾವಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಮಂಗಳೂರು ವಿಶ್ವವಿದ್ಯಾಲಯವು (Mangalore University) ತನ್ನ ಕಾಲೇಜಿಗೆ ರಜೆಯನ್ನೇ ಘೋಷಿಸಿದೆ! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Weather Report: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ರಾಜ್ಯಾದ್ಯಂತ ಇನ್ನೂ 4 ದಿನ ಜಡಿ ಮಳೆ
ಬಿಪರ್‌ಜಾಯ್‌ ಸೈಕ್ಲೋನ್‌ (Cyclone Biporjoy) ಎಫೆಕ್ಟ್‌ನಿಂದಾಗಿ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ (Weather Report) ಇರಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Wrestlers Protest: ಅನುರಾಗ್​ ಠಾಕೂರ್​ ಮನೆಗೆ ಭೇಟಿ ನೀಡಿದ ಕುಸ್ತಿಪಟುಗಳು
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್​ಭೂಷನ್​ ಸಿಂಗ್ ಶರಣ್​ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಾದ ಬಜರಂಗ್​ ಪೂನಿಯಾ, ವಿನೇಶ್​ ಫೋಗಟ್​ ಮತ್ತು ಸಾಕ್ಷಿ ಮಲಿಕ್​ ಅವರನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ಚರ್ಚೆಗೆ ಆಹ್ವಾನಿಸಿದೆ. ಇದರ ಬೆನ್ನಲ್ಲೇ ಕುಸ್ತಿಪಟುಗಳು ಸಚಿವ ಅನುರಾಗ್​ ಠಾಕೂರ್​ ಅವರ ನಿವಾಸಕ್ಕೆ ತೆರಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. ಮಹಾರಾಷ್ಟ್ರದಲ್ಲೂ ಟಿಪ್ಪು ವಿವಾದ;‌ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳ ಪ್ರತಿಭಟನೆ, ಪರಿಸ್ಥಿತಿ ಉದ್ವಿಗ್ನ
ಕರ್ನಾಟಕದಲ್ಲಿ ಮೈಸೂರು ಅರಸ ಟಿಪ್ಪು ಸುಲ್ತಾನ್‌ ವಿಷಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಆಗಾಗ ವಾಗ್ವಾದ, ಆಕ್ರೋಶ, ಟೀಕೆ, ವ್ಯಂಗ್ಯ, ಪ್ರತ್ಯುತ್ತರಗಳು ನಡೆಯುತ್ತಲೇ ಇರುತ್ತವೆ. ಟಿಪ್ಪು ಜಯಂತಿ ವಿಚಾರದಲ್ಲೂ ವಾಗ್ಯುದ್ಧವೇ ನಡೆಯುತ್ತದೆ. ಆದರೆ, ಟಿಪ್ಪು ಸುಲ್ತಾನ್‌ ವಿವಾದವೀಗ ಮಹಾರಾಷ್ಟ್ರಕ್ಕೂ ಕಾಲಿಟ್ಟಿದೆ. ಟಿಪ್ಪು ಸುಲ್ತಾನ್‌ ಹಾಗೂ ಔರಂಗಜೇಬ್‌ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಹಿಂದು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇನ್ನು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. WTC Final 2023: ಆಡುವ ಬಳಗದಿಂದ ಅಶ್ವಿನ್​ ಕೈ ಬಿಡಲು ಕಾರಣ ಇದಂತೆ
ಆಸ್ಟ್ರೇಲಿಯಾ ವಿರುದ್ಧ ಆರಂಭಗೊಂಡ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದಲ್ಲಿ ಆರ್​. ಅಶ್ವಿನ್​ಗೆ ಆಡುವ ಬಳಗದಲ್ಲಿ ಅವಕಾಶ ಸಿಗಲಿಲ್ಲ. ಇದೇ ವಿಚಾರವಾಗಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರತ ತಂಡ ಮಾಡಿದ ದೊಡ್ಡ ತಪ್ಪು ಇದಾಗಿದೆ ಎಂದು ಹೇಳಿದ್ದಾರೆ. ಆದರೆ ತಂಡದ ನಾಯಕ ರೋಹಿತ್​ ಶರ್ಮ ಅವರು ಅಶ್ವಿನ್​ ಅವರನ್ನು ಕೈಬಿಟ್ಟ ಕುರಿತು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. The Kerala Story: ʼದಿ ಕೇರಳ ಸ್ಟೋರಿʼ ನೋಡಲು ಸಾಧ್ವಿ ಪ್ರಜ್ಞಾ ಕರೆದೊಯ್ದು ಯುವತಿ ಮುಸ್ಲಿಂ ಲವರ್‌ ಜತೆ ಪರಾರಿ!
ಭೋಪಾಲ್‌ನ 19 ವರ್ಷದ ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ತನ್ನ ಮುಸ್ಲಿಂ ಪ್ರಿಯಕರನ ಜತೆ ಪರಾರಿಯಾಗಿದ್ದಾಳೆ. ಆದರೆ ಸ್ವಾರಸ್ಯಕರ ಸಂಗತಿ ಬೇರೊಂದಿದೆ. ಈಕೆಯನ್ನು ಬಿಜೆಪಿಯ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ʼದಿ ಕೇರಳ ಸ್ಟೋರಿʼ (The Kerala Story) ಫಿಲಂ ನೋಡಲು ಕರೆದೊಯ್ದಿದ್ದಳು ಹಾಗೂ ಮುಸ್ಲಿಂ ಬಾಯ್‌ಫ್ರೆಂಡ್‌ನಿಂದ ದೂರವಿರುವಂತೆ ತಾಕೀತು ಮಾಡಿದ್ದಳು ಎಂಬುದೇ ಅದು! ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Continue Reading

ದೇಶ

Odisha Train Accident : ಅಯ್ಯೊ ದುರ್ವಿಧಿ, ಟ್ರೈನ್ ಕೆಳಗೆ ಮಲಗಿದ್ದವರು ಅಲ್ಲೇ ಅಪ್ಪಚ್ಚಿ!

ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದರೆ ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Good Train Accident
Koo

ನವದೆಹಲಿ: ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್ ರೈಲಿನಡಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ದುರದೃಷ್ಟವೆಂದರೆ ಇವರೆಲ್ಲರೂ ಕೆಲಸ ಮಾಡಿ ಸುಸ್ತಾಯಿತು ಎಂದು ನಿಂತಿದ್ದ ಗೂಡ್ಸ್​ ರೈಲಿನಡಿ ಮಲಗಿದ್ದರು. ಏಕಾಏಕಿ ಟ್ರೈನ್​ ಹೊರಟ ಕಾರಣ ಗಾಡ ನಿದ್ದೆಯಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಪ್ಪಚ್ಚಿಯಾದರೆ, ಇನ್ನೂ ನಾಲ್ವರು ಗಾಯಗೊಂಡಿದ್ದಾರೆ. ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ಅಪಘಾತದಲ್ಲಿ (Odisha Train Accident) 288 ಜನರು ಮೃತಪಟ್ಟ ಘಟನೆ ನಡೆದು ನಾಲ್ಕು ದಿನಗಳ ಒಳಗೆ ಅದೇ ರಾಜ್ಯದಲ್ಲಿ ಘಟನೆ ನಡೆಸಿದೆ.

ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲು ಬೇಗ ಹೊರಡದು ಎಂದು ಅಂದುಕೊಂಡ ಕಾರ್ಮಿಕರು ಅದರಡಿಯಲ್ಲಿ ಮಲಗಿದ್ದರು. ಇದರ ಬಗ್ಗೆ ಅರಿವೇ ಇಲ್ಲದ ಲೋಕೋಪೈಲೆಟ್​ ಸಿಗ್ನಲ್​ ದೊರೆತ ತಕ್ಷಣ ರೈಲನ್ನು ಮುಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಘಟನೆ ವಿಚಾರ ತಿಳಿದ ತಕ್ಷಣ ಸಾವಿರಾರು ಮಂದಿ ರೈಲ್ವೇ ಸ್ಟೇಷನ್​ ಬಳಿ ಜಮಾಯಿಸಿದ್ದಾರೆ. ಹೀಗಾಗಿ ರೈಲ್ವೇ ಅಧಿಕಾರಿಗಳು ಘಟನೆ ನಡೆದ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಕೋರಮಂಡಲ ಎಕ್ಸ್​ಪ್ರೆಸ್​​ ಪ್ರಯಾಣ ಶುರು

ಕಳೆದ ಶುಕ್ರವಾರ ಅಪಘಾತಕ್ಕೆ ಈಡಾಗಿ ನೂರಾರು ಜನರ ಸಾವಿಗೆ ಕಾರಣವಾದ ಕೋರಮಂಡಲ ಎಕ್ಸ್​ಪ್ರೆಸ್​ ಟ್ರೈನ್​ ಮತ್ತೆ ತನ್ನ ಸಂಚಾರ ಆರಂಭಿಸಿದೆ. ಬುಧವಾರ ಮಧ್ಯಾಹ್ನ ಚೆನ್ನೈನ ಶಾಲಿಮರ್​ ಸ್ಟೇಷನ್​ನಿಂದ ಸಂಚಾರ ಶುರುಮಾಡಿತು.

ಇದನ್ನೂ ಓದಿ : Goods Train Derails: ಮಧ್ಯಪ್ರದೇಶದಲ್ಲಿ ಹಳಿ ತಪ್ಪಿದ ಎಲ್‌ಪಿಜಿ ಸಾಗಿಸುತ್ತಿದ್ದ ರೈಲು; ಯಾರನ್ನು ‘ಹಳಿ’ಯಬೇಕು?

ಕೋರಮಂಡಲ್ ಎಕ್ಸ್​ಪ್ರೆಸ್​​ ಶುಕ್ರವಾರ ಸಂಜೆ ವೇಳೆಗೆ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಗೂಡ್ಸ್ ರೈಲು ನಿಂತಿದ್ದ ಲೂಪ್​ಲೈನ್​ಗೆ ತಪ್ಪು ಸಿಗ್ನಲ್​ ಸಿಕ್ಕಿದ್ದರಿಂದ ಪ್ರವೇಶಿಸಿ ಗೂಡ್ಸ್​​ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿತ್ತು. ರೈಲಿನ ಬೋಗಿಗಳು ಎದುರಿನಿಂದ ಬರುತ್ತಿದ್ದ ಹೌರಾದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಸಂಚರಿಸುತ್ತಿದ್ದದ ಹಳಿಗೆ ಬಿದ್ದ ಕಾರಣ ಆ ರೈಲು ಕೂಡ ಅಪಘಾತಕ್ಕೆ ಈಡಾಗಿತ್ತು.

Continue Reading
Advertisement
V D Savarkar
ದೇಶ13 mins ago

VD Savarkar: ಇಕ್ಬಾಲ್​ ಪಠ್ಯ ಕೈಬಿಟ್ಟು ಸಾರ್ವಕರ್ ಪಾಠ ಸೇರ್ಪಡೆಗೆ ಗಣ್ಯರ ಬಳಗದ ಬೆಂಬಲ

icc test championship trophy
ಕ್ರಿಕೆಟ್19 mins ago

WTC Final 2023: ಲಂಡನ್​​ನಲ್ಲೇ ವಿಶ್ವ ಟೆಸ್ಟ್​ ಫೈನಲ್​ ನಡೆಯಲು ಕಾರಣವೇನು

Ex Minister V Somanna and MP GS Basavaraj
ಕರ್ನಾಟಕ41 mins ago

Lok Sabha Election 2024: ಸೋಮಣ್ಣಗೆ ತುಮಕೂರು ಲೋಕಸಭೆ ಟಿಕೆಟ್; ಗುಟ್ಟು ಬಿಚ್ಚಿಟ್ಟ ಹಾಲಿ ಸಂಸದ

successful brain surgery on a 5 year old boy at ballari vims
ಕರ್ನಾಟಕ48 mins ago

Ballari News : 5 ವರ್ಷದ ಬಾಲಕನಿಗೆ ಅತೀ ವಿರಳ ಯಶಸ್ವಿ ಮೆದುಳಿನ ಶಸ್ತ್ರ ಚಿಕಿತ್ಸೆ

Gitanjali Aiyar
ದೇಶ49 mins ago

News Anchor : ಭಾರತದ ಮೊಟ್ಟ ಮೊದಲ ಇಂಗ್ಲಿಷ್​ ನ್ಯೂಸ್ ಮಹಿಳಾ ಆ್ಯಂಕರ್​ ಇನ್ನಿಲ್ಲ

old pair dance
ವೈರಲ್ ನ್ಯೂಸ್51 mins ago

Viral Video : ವೇದಿಕೆ ಮೇಲೆ ಧೂಳೆಬ್ಬಿಸಿದ ಭಲೇ ಜೋಡಿ; ಸಕತ್‌ ಆಗಿದೆ ಈ ಸೆನೋರಿಟಾ ಡ್ಯಾನ್ಸ್‌

India vs West Indies Schedule
ಕ್ರಿಕೆಟ್1 hour ago

INDvsWI: ಭಾರತ-ವಿಂಡೀಸ್‌ ಕ್ರಿಕೆಟ್​ ಸರಣಿಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Marnus Labuschagne
ಕ್ರಿಕೆಟ್1 hour ago

WTC Final 2023 : ಶಮಿ ಎಸೆತಕ್ಕೆ ಮರ್ನಸ್​ ಲಾಬುಶೇನ್​ ಬೌಲ್ಡ್​ ಆದ ರೀತಿ ಹೀಗಿದೆ

wrestlers protest
ಕ್ರೀಡೆ2 hours ago

Wrestlers Protest: ಜೂನ್​ 15ರ ತನಕ ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

abhishek ambareesh wedding Reception
ಕರ್ನಾಟಕ2 hours ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ17 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

abhishek ambareesh wedding Reception
ಕರ್ನಾಟಕ2 hours ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ10 hours ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ17 hours ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

Salman Khan Bigg Boss ott 2
South Cinema1 day ago

Big Boss OTT 2: ಜೂನ್ 17ಕ್ಕೆ ಬಿಗ್‌ಬಾಸ್ ಒಟಿಟಿ 2 ಪ್ರಸಾರ, ಇಲ್ಲೂ ನಿರೂಪಕ ಸಲ್ಲೂ!

dining table vastu tips
ಭವಿಷ್ಯ1 day ago

Vastu Tips : ಮನೆಯ ಡೈನಿಂಗ್‌ ಹಾಲ್‌ನಲ್ಲಿ ಈ ಆಕಾರದ ಟೇಬಲ್‌ ಇರಲೇಬಾರದು!

pineapple cultivation
ಕೃಷಿ1 day ago

Krishi Khajane : ಆರೋಗ್ಯಕರ ಅನಾನಸ್‌ ಬೆಳೆಯುವುದು ಕಷ್ಟವೇನಲ್ಲ!

health and horoscope horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ, ಇರಲಿ ಎಚ್ಚರ!

Chakravarthy Sulibele and MB Patil
ಕರ್ನಾಟಕ2 days ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ2 days ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ3 days ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

ಟ್ರೆಂಡಿಂಗ್‌

error: Content is protected !!