ವಂಶ ರಾಜಕಾರಣಕ್ಕೀಗ ಕೆಟ್ಟಕಾಲ; ರಾಜರಂತೆ ಮೆರೆದಿದ್ದ ಅಪ್ಪ-ಮಕ್ಕಳ ಪಕ್ಷಗಳೆಲ್ಲ ಮೂಲೆಗುಂಪು! - Vistara News

ದೇಶ

ವಂಶ ರಾಜಕಾರಣಕ್ಕೀಗ ಕೆಟ್ಟಕಾಲ; ರಾಜರಂತೆ ಮೆರೆದಿದ್ದ ಅಪ್ಪ-ಮಕ್ಕಳ ಪಕ್ಷಗಳೆಲ್ಲ ಮೂಲೆಗುಂಪು!

ದೇಶದ ಜನರು ವಂಶ ರಾಜಕಾರಣದಲ್ಲಿ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ ಎಂಬ ಸನ್ನಿವೇಶ ಈಗ ಎದುರಾಗುತ್ತಿದೆ. ಇದಕ್ಕೆ ಪ್ರಧಾನಿ ಮೋದಿಯೂ ಕಾರಣ ಇರಬಹುದು !

VISTARANEWS.COM


on

Dynasties Losing Public Faith
ಉದ್ಧವ್‌ ಠಾಕ್ರೆ, ರಾಹುಲ್‌ ಗಾಂಧಿ, ಅಖಿಲೇಶ್‌ ಯಾದವ್‌, ಸುಖ್‌ಬೀರ್‌ ಸಿಂಗ್‌ ಬಾದಲ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದಲ್ಲಿ ವಂಶ ರಾಜಕಾರಣ(Political Dynasties)ಕ್ಕೆ ಕೇಡುಗಾಲ ಬಂದಿದೆಯಾ? -ಸದ್ಯದ ಪರಿಸ್ಥಿತಿ ನೋಡಿದೆ ಹೌದು ಎಂದು ಉತ್ತರಿಸಬಹುದು ಎನ್ನಿಸುತ್ತದೆ. ಒಮ್ಮೆ ಗಮನಿಸಿ, ದೆಹಲಿಯಲ್ಲಿ ಗಾಂಧಿ ಕುಟುಂಬ, ಉತ್ತರ ಪ್ರದೇಶದಲ್ಲಿ ಯಾದವ್‌ ವಂಶ, ಪಂಜಾಬ್‌ನ ಬಾದಲ್‌ ಮತ್ತು ಈಗ ಮಹಾರಾಷ್ಟ್ರದ ಠಾಕ್ರೆ ಕುಟುಂಬದ ಪಕ್ಷಗಳೆಲ್ಲ ನಿಧಾನವಾಗಿ ಮೂಲೆಗೆ ಸರಿಯುತ್ತಿವೆ. ಗಾಂಧಿ ಕುಟುಂಬದ ಪಕ್ಷವೆಂದೇ ಹೆಸರಾದ ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷ. 70ವರ್ಷ ದೇಶವನ್ನು ದೆಹಲಿಯಲ್ಲಿ ಕುಳಿತು ಆಳಿತು. ಆದರೆ ಆ ಪಕ್ಷವೀಗ ಜನರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಇಡೀ ದೇಶದಲ್ಲಿ ಒಂದೇ ಒಂದು ರಾಜ್ಯದಲ್ಲಿ ಮಾತ್ರ ಸಂಪೂರ್ಣ ಕಾಂಗ್ರೆಸ್‌ ಸರ್ಕಾರ ಉಳಿದುಕೊಂಡಿದೆ. ಚುನಾವಣೆಗಳಲ್ಲಿ ಗೆಲ್ಲುವುದು ಬಿಡಿ, ನೆಲೆ ಉಳಿಸಿಕೊಳ್ಳಲೂ ಕಷ್ಟಪಡುತ್ತಿದೆ.

ಯಾದವ ವಂಶ ಏನಾಯ್ತು?
ಉತ್ತರ ಪ್ರದೇಶದಲ್ಲಿ ಒಂದು ಕಾಲದಲ್ಲಿ ಮೆರೆದಿದ್ದ ಯಾದವ ವಂಶಕ್ಕೆ ಈಗ ಬಲವಿಲ್ಲ. ಮುಲಾಯಂ ಸಿಂಗ್‌ ಯಾದವ್‌ 1992ರಲ್ಲಿ ಸಮಾಜವಾದಿ ಪಕ್ಷ ಕಟ್ಟಿ, ಮೂರು ಬಾರಿ ಉತ್ತರ ಪ್ರದೇಶದ ಚುಟುಕು ಮುಖ್ಯಮಂತ್ರಿಯಾಗಿದ್ದಲ್ಲದೆ, (ಒಂದು ಬಾರಿಯೂ 5 ವರ್ಷಗಳ ಅವಧಿ ಪೂರೈಸಿಲ್ಲ), ಅವರ ಪುತ್ರ ಅಖಿಲೇಶ್‌ ಯಾದವ್‌ ಕೂಡ ಸಿಎಂ ಪಟ್ಟಕ್ಕೇರಿದರು. ಇವರು 2012ರಿಂದ 2017ರವರೆಗೆ ಪೂರ್ತಿ ಅವಧಿಗೆ ಆಡಳಿತ ನಡೆಸಿದ್ದರು. ಆದರೆ ಇವರ ಕುಟುಂಬದಲ್ಲೂ ಬಿರುಕು ಮೂಡಿತ್ತು. 2017ರಲ್ಲಿ ಅಖಿಲೇಶ್‌ ಚಿಕ್ಕಪ್ಪ ಶಿವಪಾಲ್‌ ಸಿಂಗ್‌ ಬೇರೆ ಪಕ್ಷ ಕಟ್ಟಿದ್ದರು. ಆಮೇಲೆ ಮತ್ತೆ ಸ್ವಲ್ಪ ರಾಜಿಯಾಗಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿಯನ್ನೂ ಮಾಡಿಕೊಂಡು, ಈ ಬಾರಿ ವಿಧಾನಸಭೆ ಚುನಾವಣೆಯನ್ನು ಎದುರಿಸಿದರೂ ಈಗ ಮತ್ತೆ ಅವರ ಮಧ್ಯೆ ಏನೇನೂ ಸರಿಯಿಲ್ಲ. ಇನ್ನೊಂದೆಡೆ ರಾಜ್ಯದಲ್ಲಿ ಅಖಿಲೇಶ್‌ ಯಾದವ್‌ರ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲೂ ನೆಲೆ ಕಳೆದುಕೊಳ್ಳುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಲ್ಲದೆ, ಎಸ್‌ಪಿ ಕೈಯಲ್ಲಿದ್ದ ಲೋಕಸಭಾ ಕ್ಷೇತ್ರಗಳಾದ ರಾಂಪುರ, ಅಜಂಗಢ್‌ಗಳು ಮೊನ್ನೆಮೊನ್ನೆ ನಡೆದ ಉಪಚುನಾವಣೆಯಲ್ಲಿ ಕೈತಪ್ಪಿ ಹೋಗಿವೆ.

ಬಾದಲ್‌ ಕುಟುಂಬಕ್ಕಿಲ್ಲ ರಾಜಕೀಯ ಭವಿಷ್ಯ !
ಒಂದು ಕಾಲದಲ್ಲಿ ಪಂಜಾಬ್‌ ರಾಜ್ಯವನ್ನಾಳಿದ್ದ ಬಾದಲ್‌ ಕುಟುಂಬ ಈಗೇನಾಯಿತು. ಕುಟುಂಬ ಹಾಗೇ, ಇದೆ ಆದರೆ ಅದರ ರಾಜಕೀಯ ಅಸ್ತಿತ್ವ ನಶಿಸುತ್ತಿದೆ. ಶಿರೋಮಣಿ ಅಕಾಲಿ ದಳ್‌ ನಾಯಕ ಪ್ರಕಾಶ್‌ ಸಿಂಗ್‌ ಬಾದಲ್‌ 1970ರಿಂದ 2012ರವರೆಗೆ ಪಂಜಾಬ್‌ನಲ್ಲಿ ಒಟ್ಟು 5 ಬಾರಿ ಮುಖ್ಯಮಂತ್ರಿಯಾದರು. ಅದರಲ್ಲಿ 2007ರಿಂದ 2017ರವರೆಗೆ ಸತತ 10 ವರ್ಷ ಇದೇ ಹುದ್ದೆಯಲ್ಲಿದ್ದರು. ಆದರೆ 2009ರಿಂದ 2017ರವರೆಗೆ ಸಿಎಂ ಹುದ್ದೆಯ ಆಡಳಿತವನ್ನು ಅವರ ಪುತ್ರ ಸುಖ್ಬೀರ್‌ ಸಿಂಗ್‌ ಬಾದಲ್‌ ನೋಡಿಕೊಳ್ಳುತ್ತಿದ್ದರು. ಬಾದಲ್‌ ಕುಟುಂಬದ ಶಿರೋಮಣಿ ಅಕಾಲಿ ದಳ್‌ ಪ್ರಾರಂಭದಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ನಂತರ 1990ರ ದಶಕದಲ್ಲಿ ಬಿಜೆಪಿಯೊಂದಿಗೆ ಸೇರ್ಪಡೆಯಾಯಿತು. ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ಜಾರಿಗೆ ತಂದ ಮೇಲೆ ಅದರ ವಿರುದ್ಧ ಪಂಜಾಬ್‌ ರೈತರು ತೀವ್ರ ಹೋರಾಟ ನಡೆಸಿದರು. ಇದೇ ಸಂಘರ್ಷದಲ್ಲಿ ಎನ್‌ಡಿಎ ಒಕ್ಕೂಟದಿಂದ ಶಿರೋಮಣಿ ಅಕಾಲಿ ದಳ್‌ ಹೊರಬಿತ್ತು. ರೈತ ವಿರೋಧಿ ಪಕ್ಷದೊಂದಿಗೆ ನಾವಿರಲ್ಲ ಎಂದು ಘೋಷಿಸಿಕೊಂಡಿತು. 2022ರ ವಿಧಾನಸಭೆ ಚುನಾವಣೆಯಲ್ಲಿ ಬಾದಲ್‌ ಕುಟುಂಬದ ಅಕಾಲಿ ದಳ್‌ಗೆ ಗೆಲ್ಲುವ ಭರವಸೆಯೇನೋ ತುಂಬ ಇತ್ತು. ಆದರೆ ಅದು ಉಲ್ಟಾ ಆಯಿತು. ಕೇವಲ 3 ಕ್ಷೇತ್ರಗಳನ್ನು ಮಾತ್ರ ಗೆದ್ದುಕೊಂಡಿತು. ಮೈತ್ರಿಗೂ ಪ್ರಯೋಜನಕ್ಕೆ ಬಾರದ ಸ್ಥಿತಿ ಅದರದ್ದಾಯಿತು.

ಇದನ್ನೂ ಓದಿ: Bypoll Results: ಅಖಿಲೇಶ್‌ ಯಾದವ್‌ ಪಕ್ಷದ ಕೈಯಲ್ಲಿದ್ದ ಎರಡೂ ಲೋಕಸಭಾ ಕ್ಷೇತ್ರಗಳು ಬಿಜೆಪಿ ಮಡಿಲಿಗೆ

ಠಾಕ್ರೆ ಮನೆತನದ ರಾಜಕೀಯವೀಗ ಅತಂತ್ರ
ಬಾಳ್‌ ಠಾಕ್ರೆ ಪ್ರಖರ ಹಿಂದುತ್ವವಾದಿ. ಇವರು ಹಿಂದುತ್ವದ ಅಜೆಂಡಾ ಇಟ್ಟುಕೊಂಡು 1966ರಲ್ಲಿ ಶಿವಸೇನೆ ಪಕ್ಷವನ್ನು ಸಂಸ್ಥಾಪಿಸಿದರು. ಛತ್ರಪತಿ ಶಿವಾಜಿ ಹೆಸರಲ್ಲಿ ಹುಟ್ಟಿದ ಶಿವಸೇನೆ ಮಹಾರಾಷ್ಟ್ರದಲ್ಲಿ ಪ್ರಬಲ ಪ್ರಾದೇಶಿಕ ಪಕ್ಷವಾಗಿ ಬೆಳೆಯಿತು. ಬಾಳ್‌ ಠಾಕ್ರೆ ನಂತರ ಅವರ ಪುತ್ರ ಉದ್ಧವ್‌ ಠಾಕ್ರೆ, ಈಗ ಅವರ ಮಗ ಆದಿತ್ಯ ಠಾಕ್ರೆಯವರೇ ಇಲ್ಲಿ ಹೈಲೆಟ್‌ ಆಗಿದ್ದರು. ಆದರೀಗ ಉದ್ಧವ್‌ ಠಾಕ್ರೆ ಬಲ ಕುಂದುತ್ತಿದೆ. ಅವರ ತಂದೆಯೇ ಹುಟ್ಟುಹಾಕಿದ್ದ ಪಕ್ಷದಲ್ಲಿದ್ದ ಅನೇಕರು ಏಕನಾಥ್‌ ಶಿಂಧೆ ಬಣ ಸೇರಿಕೊಂಡು ನಾವೇ ನಿಜವಾದ ಶಿವಸೈನಿಕರು ಎನ್ನುತ್ತಿದ್ದಾರೆ. ಈ ಶಿವಸೇನೆ ಕೂಡ 2019ರವರೆಗೆ ಬಿಜೆಪಿ ಮೈತ್ರಿಪಕ್ಷವೇ ಆಗಿತ್ತು. ಮತ್ತಲ್ಲಿ ಮುಖ್ಯಮಂತ್ರಿ ಹುದ್ದೆಯ 50;50 ಹಂಚಿಕೆ ವಿಚಾರದಲ್ಲಿ ಬಂದ ಜಗಳ ಇವೆರಡನ್ನೂ ಬೇರ್ಪಡಿಸಿದೆ. ಅತ್ತ ಠಾಕ್ರೆ ಕುಟುಂಬದಲ್ಲೂ ಎಲ್ಲವೂ ಸರಿಯಿಲ್ಲ. ಇಲ್ಲಿ ಉದ್ಧವ್‌ ಠಾಕ್ರೆ ಮತ್ತು ಅವರ ಸೋದರ ಸಂಬಂಧಿ ರಾಜ್‌ ಠಾಕ್ರೆ (ಬಾಳ್‌ ಠಾಕ್ರೆ ಸಹೋದರನ ಪುತ್ರ) ಮಧ್ಯೆ ಈಗಾಗಲೇ ಸಂಘರ್ಷಗಳಿವೆ. ರಾಜ್‌ ಠಾಕ್ರೆಯದ್ದು ಮಹಾರಾಷ್ಟ್ರ ನವ ನಿರ್ಮಾಣ ಸೇನೆಯೆಂಬ ಬೇರೆ ಪಕ್ಷವೇ ಇದೆ. ಸದ್ಯಕ್ಕಂತೂ, ಶಿವಸೇನೆಯ ಹುಟ್ಟಿಗೆ ಕಾರಣವಾದ ಠಾಕ್ರೆ ಕುಟುಂಬ ಅನಾಥವಾಗಿದೆ.

ಮೋದಿ ಹೇಳಿದ್ದೇ ಆಯ್ತಾ?
ಪ್ರಧಾನಿ ನರೇಂದ್ರ ಮೋದಿ ವಂಶಪಾರಂಪರ್ಯ ರಾಜಕಾರಣದ ಕಟು ವಿರೋಧಿ. ದೇಶದಲ್ಲಿ ಕುಟುಂಬ ರಾಜಕಾರಣ ನಿರ್ಮೂಲನ ಮಾಡಬೇಕು ಎಂದು ಅವರು ಯಾವಾಗಲೂ ಹೇಳುತ್ತಿರುತ್ತಾರೆ. ವಂಶ ರಾಜಕೀಯವೆಂಬುದು ದೇಶದ ಪ್ರಜಾಪ್ರಭುತ್ವಕ್ಕೆ ದೊಡ್ಡ ಶಾಪ ಎನ್ನುವ ಮೂಲಕ, ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿ ಹಲವು ಪಕ್ಷಗಳನ್ನು ಟೀಕಿಸುತ್ತಾರೆ. ಅದರಂತೆ ಈಗಿನ ಸನ್ನಿವೇಶವೂ ಬದಲಾಗುತ್ತಿದೆ. ಅಪ್ಪ-ಮಕ್ಕಳು-ಮೊಮ್ಮಕ್ಕಳ ಪಕ್ಷಗಳೀಗ ನಿಧಾನಕ್ಕೆ ಮೂಲೆಗುಂಪಾಗುತ್ತಿವೆ. ಇದು ಪ್ರಧಾನಿ ಮೋದಿ ಸೃಷ್ಟಿಸಿದ ಸಂದರ್ಭವೂ ಇರಬಹುದು ಅಥವಾ ಆ ಪಕ್ಷಗಳೇ ತಂದುಕೊಂಡ ದುರಂತವೂ ಇರಬಹುದು. ಒಟ್ಟಾರೆ ಕುಟುಂಬದಲ್ಲೇ ಒಗ್ಗಟ್ಟು ಇಲ್ಲದ ಇವರೆಲ್ಲ ದೇಶವನ್ನೇನು ಆಳಬಲ್ಲರು ಎಂಬ ಅಪನಂಬಿಕೆ ಜನರಲ್ಲಿ ಹುಟ್ಟುತ್ತಿರುವುದಂತೂ ಸತ್ಯ ಎನಿಸುತ್ತಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಶಿಂಧೆ ಬಣದ ಬೆಂಬಲ ಪಡೆದು ಹೊಸ ಸರ್ಕಾರ ರಚನೆಗೆ ಬಿಜೆಪಿ ಸಜ್ಜು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

VISTARANEWS.COM


on

Lok Sabha Election
Koo

ನವದೆಹಲಿ: ಹಿಂದಿನ ಕಾಂಗ್ರೆಸ್​ ಸರ್ಕಾರಗಳು ಪಾಕಿಸ್ತಾನದ ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ಪ್ರಯತ್ನ ಮಾಡುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರಗಳು ಶಾಂತಿಯ ಭರವಸೆಯೊಂದಿಗೆ ಪಾಕಿಸ್ತಾನಕ್ಕೆ “ಪ್ರೇಮ ಪತ್ರಗಳನ್ನು” ಕಳುಹಿಸುತ್ತಿದ್ದವು. ಪ್ರತಿಯಾಗಿ ಅವರು ಹೆಚ್ಚಿನ ಭಯೋತ್ಪಾದಕರನ್ನು ಕಳುಹಿಸುತ್ತಿದ್ದರು ಎಂದು ಅವರು ಲೇವಡಿ ಮಾಡಿದರು. ಮುಂದುವರಿದ ಮೋದಿ. ಈ ಚುನಾವಣೆಯಲ್ಲಿ (Lok Sabha Election ) ರಾಹುಲ್ ಪ್ರಧಾನಿಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತಿದೆ. ಆದರೆ, ಬಲಿಷ್ಠ ಭಾರತ ಬಲವಾದ ಸರ್ಕಾರ ಬಯಸಿದೆ ಎಂದು ನುಡಿದಿದ್ದಾರೆ.

ಜಾರ್ಖಂಡ್​​ನ ಪಲಮುದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದಕರು ನಮ್ಮ ದೇಶದ ಮುಗ್ಧರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು. ಪ್ರತಿಯಾಗಿ ಇಲ್ಲಿನ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸುತ್ತಿತ್ತು. ಆದರೆ ನಾವು ನಿಮ್ಮ ಒಂದು ಮತದ ಶಕ್ತಿಯಿಂದ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದೆವು. ಅಂತೆಯೇ ನವಭಾರತ ಪಾಕ್​ಗೆ ನುಗ್ಗಿ ಹೊಡೆಯುತ್ತಿದೆ ಎಂದು ಹೇಳಿದರು.

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋಗುತ್ತಿದ್ದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ಸಾಯುತ್ತಿದ್ದ ಸಮಯವಿತ್ತು. ಅದೊಂದು ನಾಚಿಕೆಯ ವಿಷಯವಾಗಿತ್ತು. ಕಾಂಗ್ರೆಸ್​ನ ಹೇಡಿ ಸರ್ಕಾರಗಳು ಜಗತ್ತಿನ ಮುಂದೆ ಇದರ ಬಗ್ಗೆ ಅಳುತ್ತಿದ್ದವು” ಎಂದು ಪ್ರಧಾನಿ ಲೇವಡಿ ಮಾಡಿದರು.

ಸರ್ಜಿಕಲ್ ಮತ್ತು ಬಾಲಕೋಟ್ ದಾಳಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈಗ ವಿಶ್ವಾದ್ಯಂತ ಸಹಾಯವನ್ನು ಕೋರುತ್ತಿದೆ ಮತ್ತು “ಬಚಾವೋ, ಬಚಾವೋ (ಕಾಪಾಡಿ ಕಾಪಾಡಿ )” ಎಂದು ಕೂಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

ಪಾಕಿಸ್ತಾನದ ನಾಯಕರು ಕಾಂಗ್ರೆಸ್​​ನ ಶೆಹಜಾದಾ (ರಾಹುಲ್ ಗಾಂಧಿ) ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಬಲಿಷ್ಠ ಭಾರತವು ಈಗ ಬಲವಾದ ಸರ್ಕಾರವನ್ನು ಬಯಸುತ್ತದೆ” ಎಂದು ಅವರು ಹೇಳಿದರು.

ಮೋದಿ ಜತೆಗಾರರಿಗೆ ಅವರ ಬಗ್ಗೆಯೇ ಭಯವಿದೆ: ಪ್ರಿಯಾಂಕಾ ಗಾಂಧಿ

ಇದಕ್ಕೂ ಮುನ್ನ ಶನಿವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಯವರನ್ನು “ಅರಮನೆಯಲ್ಲಿ ವಾಸಿಸುವ ಚಕ್ರವರ್ತಿ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ನನ್ನ ಸಹೋದರನನ್ನು (ರಾಹುಲ್​) ರಾಜಕುಮಾರ ಎಂದು ಕರೆಯುತ್ತಾರೆ. ನನ್ನ ಸಹೋದರ 4,000 ಕಿಲೋಮೀಟರ್ ನಡೆದು, ದೇಶದ ಜನರನ್ನು ಭೇಟಿಯಾಗಿದ್ದಾರೆ. ಅವರ ಸಮಸ್ಯೆಗಳೇನು ಎಂದು ಆಲಿಸಿದ್ದಾರೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಮತ್ತೊಂದೆಡೆ, ಚಕ್ರವರ್ತಿ ನರೇಂದ್ರ ಮೋದಿ ಅರಮನೆಗಳಲ್ಲಿ ಬೀಡು ಬಿಡುತ್ತಾರೆ. ರೈತರು ಮತ್ತು ಮಹಿಳೆಯರ ಅಸಹಾಯಕತೆಯನ್ನು ಅವರು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ?” ಎಂದು ಅವರು ಗುಜರಾತ್​ನ ಬನಸ್ಕಥಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು

“ನರೇಂದ್ರ ಮೋದಿ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಅವನ ಸುತ್ತಲಿನ ಜನರು ಅವರಿಗೆ ಹೆದರುತ್ತಾರೆ. ಯಾರೂ ಅವನಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೆ ಆ ಧ್ವನಿಯನ್ನೇ ನಿಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

Continue Reading

ಆರೋಗ್ಯ

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಈ ಕುರಿತು ನಡೆದ ಸಂಶೋಧನೆಯ ಮಾಹಿತಿ (Mobile Side Effect)ಇಲ್ಲಿದೆ.

VISTARANEWS.COM


on

By

Mobile Side Effect
Koo

ಕೋವಿಡ್ (covid) ಬಳಿಕ ಕಳೆದ ಮೂರು ನಾಲ್ಕು ವರ್ಷಗಳಿಂದ ಮಕ್ಕಳು (Mobile Side Effect) ತಡವಾಗಿ ಮಾತನಾಡುವ ಪ್ರಕರಣಗಳು, ಸೀಮಿತ ಭಾಷೆಯೊಂದಿಗೆ ಮತ್ತು ಸ್ವಲೀನತೆಯ (autism) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಮೊಬೈಲ್ ಫೋನ್ ಗಳ (phone) ಸುದೀರ್ಘ ಬಳಕೆಯಿಂದ ಶ್ರವಣ ದೋಷ (Hearing Disorder) ಉಂಟಾಗುತ್ತದೆ ಎಂದು ಚಂಡೀಗಢ (Chandigarh) ಪಿಜಿಐನ (PGI) ಓಟೋಲರಿಂಗೋಲಜಿ ವಿಭಾಗದ ಪ್ರೊ. ಸಂಜಯ್ ಮುಂಜಾಲ್ ತಿಳಿಸಿದ್ದಾರೆ.


ಪಿಜಿಐನ ಓಟೋಲರಿಂಗೋಲಜಿ (ಇಎನ್‌ಟಿ) ವಿಭಾಗವು ಐಸಿಎಂಆರ್‌ಗೆ ಸಲ್ಲಿಸಿದ ಹೊಸ ಸಂಶೋಧನೆ ವರದಿಯಲ್ಲಿ ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ. ಕೋವಿಡ್ ಅನಂತರ ಮಕ್ಕಳಲ್ಲಿ ಏಕಮುಖ ಸಂವಹನ ಹೆಚ್ಚಾಗಿದೆ. ಮೊಬೈಲ್ ನಲ್ಲಿ ಆಟಗಳನ್ನು ಆಡುವುದು, ಫೋನ್‌ ಪರದೆಯನ್ನು ವೀಕ್ಷಿಸುವುದು, ಟ್ಯಾಬ್‌ಗಳಲ್ಲಿ ಏಕಮುಖ ಸಂವಹನ ನಡೆಸುವುದು ಅತ್ಯಧಿಕವಾಗಿದೆ. ಮಾತು ದ್ವಿಮುಖವಾಗಿರುತ್ತದೆ. ಇದನ್ನು ಮಕ್ಕಳಲ್ಲಿ ಅಭಿವೃದ್ಧಿಪಡಿಸುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಪ್ರಾರಂಭದ ಎರಡು ವರ್ಷಗಳಲ್ಲಿ ಸಾಕಷ್ಟು ಸಾಮಾಜಿಕ ಸಂವಹನದ ಅವಶ್ಯಕವಿರುತ್ತದೆ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮದೇ ಆದ ಜಗತ್ತಿನಲ್ಲಿ ವಾಸಿಸುವುದು, ಕೇವಲ ನೋಡುವುದು ಮತ್ತು ಆಲಿಸುವುದನ್ನು ಮಾಡುತ್ತಾರೆ. ಆದರೆ ಗ್ಯಾಜೆಟ್ ಗಳು ಮೊದಲ ಎರಡು ವರ್ಷಗಳಲ್ಲಿ ಅಗತ್ಯವಿರುವ ಸಾಕಷ್ಟು ಪ್ರಚೋದನೆಯನ್ನು ಒದಗಿಸುವುದಿಲ್ಲ. ಅಂತಹ ಚಿಕ್ಕ ಮಕ್ಕಳು ಗಂಟೆಗಟ್ಟಲೆ ಗ್ಯಾಜೆಟ್‌ಗಳನ್ನು ಬಳಸುವುದರಿಂದ ಅದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಆಟಿಸಂ ನ ಅನೇಕ ಪ್ರಕರಣಗಳು ಕಂಡು ಬರುತ್ತಿದೆ. ಮಕ್ಕಳ ಮತ್ತು ಮನೋವೈದ್ಯಕೀಯ ವಿಭಾಗಗಳಿಂದ ಪ್ರಾಥಮಿಕ ರೋಗನಿರ್ಣಯದ ಅನಂತರ ಮಕ್ಕಳನ್ನು ಆಟಿಸಂ ನ ವಿಭಾಗಕ್ಕೆ ಕಳುಹಿಸಲಾಗುತ್ತಿದೆ ಎನ್ನುತ್ತಾರೆ ಡಾ. ಮುಂಜಾಲ್ ಹೇಳಿದ್ದಾರೆ.


ಆಟಿಸಂನ ಚಿಹ್ನೆಗಳು ಹೆಚ್ಚುತ್ತಿರುವುದು ಯಾಕೆ?


ಪೋಷಕರು ಆಟಿಸಂನ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು. ಮಕ್ಕಳಿಗೆ ಒಂದರಿಂದ ಆರು ವರ್ಷಗಳ ನಡುವಿನ ವಯಸ್ಸು ಅತ್ಯಂತ ಮುಖ್ಯವಾಗಿದೆ.‌ ಈ ವಯಸ್ಸಿನ ಮಕ್ಕಳು ಸಂವಾದಿಸಲು ಹೆಚ್ಚು ಸನ್ನೆ ಮತ್ತು ಚಿಹ್ನೆಗಳನ್ನು ಬಳಸುತ್ತಿದ್ದಾರೆ. ಅವರ ಭಾವನೆಗಳನ್ನು ವ್ಯಕ್ತಪಡಿಸಲು ಮೂಲಭೂತ ಅಗತ್ಯಗಳನ್ನು ಸನ್ನೆಗಳ ಮೂಲಕ ಪ್ರಯತ್ನಿಸುತ್ತಾರೆ. ಇವರಲ್ಲಿ ಭಾಷೆಯ ಬಳಕೆಯ ಕೊರತೆಯಿದೆ ಎಂದರು.

ಕಡಿಮೆ ಮಾನವ ಸಂವಹನ, ಅವಿಭಕ್ತ ಕುಟುಂಬ ವ್ಯವಸ್ಥೆಯ ವಿಘಟನೆ ಹೀಗೆ ಈಗಿನ ಸಮಸ್ಯೆಗಳು ಹಲವಾರು ಮಕ್ಕಳ ಸರಿಯಾದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಮಕ್ಕಳು ಯಾವುದೇ ಗ್ಯಾಜೆಟ್‌ಗೆ ಒಂದು ಗಂಟೆಗಿಂತ ಹೆಚ್ಚು ಅಥವಾ ಕಡಿಮೆ ಕಾಲ ಒಡ್ಡಿಕೊಳ್ಳಬಾರದು ಎಂದು ನಮಗೆ ತಿಳಿದಿದೆ ಆದರೂ ಮಕ್ಕಳ ಮೇಲೆ ಅವುಗಳ ಪರಿಣಾಮವನ್ನು ಉಂಟು ಮಾಡುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ವಾಕ್ ಪ್ರಚೋದನೆ ಸೇರಿದಂತೆ ಹಲವಾರು ಚಿಕಿತ್ಸೆಗಳನ್ನು ನೀಡುತ್ತೇವೆ. ಇದಕ್ಕಾಗಿ ಪೂರ್ಣ ಪ್ರಮಾಣದ ಅಧ್ಯಯನವನ್ನು ಮಾಡಲು ಯೋಜಿಸುತ್ತಿದ್ದೇವೆ. ಈ ಕುರಿತು ಯೋಜನೆಯನ್ನು ಐಸಿಎಂಆರ್ ಗೆ ಸಲ್ಲಿಸಿದ್ದೇವೆ ಎಂದರು.

ಯಾರಲ್ಲಿ ಹೆಚ್ಚು?

ಇಲಾಖೆಯಲ್ಲಿ ಪ್ರತಿದಿನ ಎರಡು ಅಥವಾ ಮೂರು ಶ್ರವಣ ದೋಷದ ಪ್ರಕರಣಗಳು ಕಂಡುಬರುತ್ತಿವೆ. ಇವರಲ್ಲ 15ರಿಂದ 30 ವರ್ಷ ವಯಸ್ಸಿನವರು ಹೆಚ್ಚಾಗುತ್ತಿದ್ದಾರೆ. ಮೊಬೈಲ್ ಫೋನ್‌ಗಳಲ್ಲಿ ಹೆಚ್ಚು ಗಂಟೆಗಳ ಕಾಲ ಮಾತನಾಡುವುದು, ಹೆಡ್‌ಫೋನ್‌ಗಳ ಅತಿಯಾದ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದರು.
ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುವುದರಿಂದ ಶ್ರವಣದೋಷವು ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಶ್ರವಣ ಸಾಧನಗಳ ಮೇಲೆ ಅತಿಯಾದ ಅವಲಂಬನೆಯನ್ನು ತಡೆಯಬೇಕು ಎಂದು ಡಾ. ಮುಂಜಾಲ್ ವಿವರಿಸುತ್ತಾರೆ.


ಶ್ರವಣ ದೋಷಕ್ಕೆ ಕಾರಣ

ಹೆಡ್‌ಫೋನ್‌ಗಳ ಅತಿಯಾದ ದೈನಂದಿನ ಬಳಕೆಯು ಶ್ರವಣ ನಷ್ಟದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಏಕೆಂದರೆ ಇದು ನೇರವಾದ ಧ್ವನಿಯಾಗಿದೆ ಮತ್ತು ನಮ್ಮ ಕಿವಿಗಳು 85 ಡೆಸಿಬಲ್‌ಗಳ (dB) ವರೆಗಿನ ಶಬ್ದಗಳನ್ನು ಮಾತ್ರ ಕೇಳಲು ವಿನ್ಯಾಸಗೊಳಿಸಲಾಗಿದೆ, ಆದರೆ ಇಯರ್‌ಫೋನ್‌ಗಳು ಅಥವಾ ಹೆಡ್‌ಫೋನ್‌ಗಳು ಇದಕ್ಕಿಂತ ಹೆಚ್ಚಿನ ಶಬ್ದಗಳನ್ನು ಹೊರಸೂಸುತ್ತವೆ.

ಇದನ್ನೂ ಓದಿ; Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಏನು ಮಾಡಬಹುದು ?

ಡೆಸಿಬಲ್ ಹೆಚ್ಚಾದರೆ, ಬಳಕೆಯನ್ನು ಕಡಿಮೆ ಮಾಡಬೇಕು. ಅಂದರೆ 90 ಡಿಬಿ ನಾಲ್ಕು ಗಂಟೆಗಳಿಗಿಂತ ಹೆಚ್ಚಿರಬಾರದು. ಎರಡು ಗಂಟೆಗೆ 95 ಡಿಬಿ ಮತ್ತು ಒಂದು ಗಂಟೆಗೆ 100 ಡಿಬಿ ಇರಬಾರದು. ಈಗಿನ ಪೀಳಿಗೆಯು ಚಿಕ್ಕ ವಯಸ್ಸಿನಿಂದಲೇ ಗ್ಯಾಜೆಟ್‌ಗಳಿಗೆ ಒಡ್ಡಿಕೊಳ್ಳುವುದರಿಂದ ಹಾನಿಯು ಆರಂಭಿಕ ಹಂತದಲ್ಲಿ ಕಂಡುಬರುತ್ತದೆ ಮತ್ತು ಮೊದಲ ಲಕ್ಷಣವೆಂದರೆ ಕಿವಿ ಅಥವಾ ಟಿನ್ನಿಟಸ್‌ನಲ್ಲಿ ರಿಂಗಿಂಗ್ ಶಬ್ದ. ದೀರ್ಘ ಕರೆಗಳನ್ನು ತಪ್ಪಿಸಿ, ಸ್ಪೀಕರ್ ಫೋನ್ ಬಳಸಿ. ದೀರ್ಘಾವಧಿಯವರೆಗೆ ಜೋರಾಗಿ ಧ್ವನಿಯಲ್ಲಿ ಸಂಗೀತವನ್ನು ಕೇಳಬೇಡಿ ಮತ್ತು ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ, ಯಾವುದೇ ರೋಗಲಕ್ಷಣದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಿ ಎನ್ನುತ್ತಾರೆ ಡಾ. ಮುಂಜಾಲ್ ತಿಳಿಸಿದ್ದಾರೆ.

Continue Reading

ದೇಶ

Gold Smuggling: ಜ್ಯಾಕೆಟ್‌, ಲೆಗ್ಗಿನ್ಸ್‌ನಲ್ಲಿ, ಬೆಲ್ಟ್‌ನಲ್ಲಿ 25 ಕೆ.ಜಿ ಚಿನ್ನ; ಆಫ್ಘಾನ್‌ ರಾಜತಾಂತ್ರಿಕ ಅಧಿಕಾರಿ ಕಸ್ಟಮ್ಸ್‌ ಬಲೆಗೆ

Gold Smuggling:ಅಫ್ಘಾನಿಸ್ತಾನದ ಇಸ್ಲಾಮಿಕ್‌ ರಿಪಬ್ಲಿಕ್‌ನ ರಾಜತಾಂತ್ರಿಕ ಅಧಿಕಾರಿ ಜಾಕಿಯಾ ವಾರ್ದಕ್‌ ಅವರು ಬರೋಬ್ಬರಿ 18.6 ಕೋಟಿ ರೂ. ಮೌಲ್ಯದ 25 ಕೆ.ಜಿ. ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ ಏರ್‌ಪೋರ್ಟ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಏ.25ರಂದು ಈ ಘಟನೆ ನಡೆದಿದ್ದು, ಅಕ್ರಮ ಚಿನ್ನಾಭರಣ ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅನೇಕ ಸಿಬ್ಬಂದಿ ನೇಮಿಸುವ ಮೂಲಕ ಡಿಆರ್‌ಐ ಅಧಿಕಾರಿಗಳು ಕಾರ್ಯಪ್ರವೃತರಾಗಿದ್ದರು.

VISTARANEWS.COM


on

Gold smuggling
Koo

ಮುಂಬೈ: ಭಾರತದಿಂದ ದುಬೈಗೆ ಕೋಟ್ಯಂತರ ರೂ ಮೌಲ್ಯದ ಚಿನ್ನವನ್ನು ಕಳ್ಳ ಸಾಗಾಣೆ(Gold Smuggling) ಮಾಡುತ್ತಿದ್ದ ಅಫ್ಘಾನಿಸ್ತಾನದ ರಾಜತಾಂತ್ರಿಕ(Afghan diplomat) ಅಧಿಕಾರಿಯೊಬ್ಬರು ಮುಂಬೈ ವಿಮಾನ ನಿಲ್ದಾಣದಲ್ಲಿ ಬಲೆಗೆ ಬಿದ್ದಿದ್ದಾರೆ. ಅಫ್ಘಾನಿಸ್ತಾನದ(Afghanistan) ಇಸ್ಲಾಮಿಕ್‌ ರಿಪಬ್ಲಿಕ್‌ನ ರಾಜತಾಂತ್ರಿಕ ಅಧಿಕಾರಿ ಜಾಕಿಯಾ ವಾರ್ದಕ್‌ ಅವರು ಬರೋಬ್ಬರಿ 18.6 ಕೋಟಿ ರೂ. ಮೌಲ್ಯದ 25 ಕೆ.ಜಿ. ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದ ವೇಳೆ ಏರ್‌ಪೋರ್ಟ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಏ.25ರಂದು ಈ ಘಟನೆ ನಡೆದಿದ್ದು, ಅಕ್ರಮ ಚಿನ್ನಾಭರಣ ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅನೇಕ ಸಿಬ್ಬಂದಿ ನೇಮಿಸುವ ಮೂಲಕ ಡಿಆರ್‌ಐ ಅಧಿಕಾರಿಗಳು ಕಾರ್ಯಪ್ರವೃತರಾಗಿದ್ದರು. ಜಾಕಿಯಾ ಮತ್ತು ಅವರ ಪುತ್ರ ಸಂಜೆ 5:45 ದುಬೈಗೆ ಪ್ರಯಾಣ ಬೆಳೆಸಲೆಂದು ಏರ್‌ಪೋರ್ಟ್‌ಗೆ ಬಂದಿದ್ದರು. ತಾವು ಯಾವುದೇ ಲಗೇಜ್‌ ತಂದಿಲ್ಲ ಎಂಬುದನ್ನು ತೋರಿಸಿಕೊಳ್ಳಲು ತಾಯಿ ಮಗ ಇಬ್ಬರೂ ಏರ್‌ಪೋರ್ಟ್‌ನ ಹಸಿರು ಚಾನೆಲನ್ನು ಬಳಸಿದ್ದರು ಎನ್ನಲಾಗಿದೆ.

ಜಾಕಿಯಾ ಮತ್ತು ಅವರ ಪುತ್ರನ ಬಳಿ ಇದ್ದ ಐದು ಟ್ರಾಲಿ ಬ್ಯಾಗ್‌ಗಳು, ಒಂದು ಹ್ಯಾಂಡ್‌ ಬ್ಯಾಗ್‌, ಒಂದು ಹ್ಯಾಂಗಿಂಗ್‌ ಬ್ಯಾಗ್‌ ಮತ್ತು ನೆಕ್‌ ಪಿಲ್ಲೋಗಳನ್ನು ತಪಾಸಣೆಗೊಳಪಡಿಸಿದ ಅಧಿಕಾರಿಗಳಿಗೆ ಅವುಗಳಲ್ಲಿ ಯಾವುದೇ ಚಿನ್ನ ಪತ್ತೆಯಾಗಿತ್ತು. ಆಮೇಲೆ ಅವರ ಬಳಿ ಯಾವುದಾದರೂ ಸುಂಕ ವಿಧಿಸಬಹುದಾದ ಅಥವಾ ಚಿನ್ನಾಭರಣ ಹೊಂದಿದ್ದೀರಾ ಎಂದು ಅಧಿಕಾರಿಗಳು ಜಾಕಿಯಾ ಅವರನ್ನು ಪ್ರಶ್ನಿಸಿದ್ದಾರೆ. ಆದರೆ ಅನುಮಾನಗೊಂಡ ಅಧಿಕಾರಿಗಳು ಜಾಕಿಯಾ ಮತ್ತು ಅವರ ಪುತ್ರನನ್ನು ಪ್ರತ್ಯೇಕ ಕೋಣೆಗೆ ಕರೆದೊಯ್ದು, ತಪಾಸಣೆಗೊಳಪಡಿಸಿದರು. ಆಗ ಆಕೆ ಧರಿಸಿದ್ದ ಜ್ಯಾಕೆಟ್‌, ಲೆಗ್ಗಿನ್ಸ್‌, ಮೊಣಕಾಲಿಗೆ ಹಾಕುವ ಕ್ಯಾಪ್‌ ಮತ್ತು ಬೆಲ್ಟ್‌ನಲ್ಲಿ ಚಿನ್ನದ ಬಿಸ್ಕೇಟ್‌ ಪತ್ತೆಯಾಗಿತ್ತು. ಆಕೆಯ ಮಗನನ್ನು ತಪಾಸಣೆಗೊಳಪಡಿಸಿದಾಗ ಯಾವುದೇ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಧಿಕಾರಿಗಳು 1962ರ ಕಸ್ಟಮ್ಸ್‌ ಕಾಯ್ದೆ ಅಡಿಯಲ್ಲಿ ಎಲ್ಲಾ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಅದಾಗ್ಯೂ ಆಕೆ ಅಫ್ಘಾನಿಸ್ತಾನದ ರಾಜತಾಂತ್ರಿಕ ಅಧಿಕಾರಿಯಾಗಿರುವ ಕಾರಣ ಅವರನ್ನು ಬಂಧಿಸಿಲ್ಲ.

ಇದನ್ನೂ ಓದಿ:Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

ಎರಡು ವಾರಗಳ ಹಿಂದೆ ಮುಂಬೈ ಏರ್‌ಪೋರ್ಟ್‌ನಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದ್ದು, ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್​ಗಳಲ್ಲಿ ಹುದುಗಿಸಿಟ್ಟಿದದ ವಜ್ರಗಳ ಹರಳುಗಳು ಪತ್ತೆಯಾಗಿದ್ದವು. ಅದರ ಮೌಲ್ಯ 6.48 ಕೋಟಿ ರೂಪಾಯಿ ಎಂದು ತಿಳಿದುಬಂದಿದ್ದು, ಅರೋಪಿ ಸಮೇತ ಅಧಿಕಾರಿಗಳು ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯನ್ನು ವಿವರಿಸಿದ ಅಧಿಕಾರಿಯೊಬ್ಬರು ಮುಂಬೈನಿಂದ ಬ್ಯಾಂಕಾಕ್​​ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ತಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್​ನಲ್ಲಿ ನೂಡಲ್ಸ್ ಪ್ಯಾಕೆಟ್​ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಕಂಡುಬಂತು ಎಂದು ಹೇಳಿದ್ದಾರೆ. ಅದೇ ರೀತಿ ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿರುವುದು ಗೊತ್ತಾಯಿತು ಎಂದು ಅವರು ಹೇಳಿದ್ದಾರೆ.


Continue Reading

ದೇಶ

Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

Elvish Yadav: ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಸಿದ್ದಾರ್ಥ್‌ ಯಾದವ್‌ ಅಲಿಯಾಸ್‌ ಎಲ್ವಿಶ್ ಯಾದವ್ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಕೇಸ್‌ ದಾಖಲಿಸಿದೆ. ಉತ್ತರಪ್ರದೇಶದ ಗೌತಮ್‌ ಬುದ್ಧನಗರ ಜಿಲ್ಲೆಯಲ್ಲಿ ದಾಖಲಾಗಿರುವ ಎಫ್‌ ಐಆರ್‌ ಮತ್ತು ಚಾರ್ಜ್‌ಶೀಟ್‌ಗಳ ಆಧಾರದ ಮೇಲೆ ಇಡಿ ಎಲ್ವಿಶ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಲ್ಲಿ ಕೇಸ್‌ ದಾಖಲಿಸಿದೆ.

VISTARANEWS.COM


on

Elvish Yadav
Koo

ನವದೆಹಲಿ: ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಸಿದ್ದಾರ್ಥ್‌ ಯಾದವ್‌ ಅಲಿಯಾಸ್‌ ಎಲ್ವಿಶ್ ಯಾದವ್ (Elvish Yadav) ವಿರುದ್ಧ ಜಾರಿ ನಿರ್ದೇಶನಾಲಯ(ED) ಅಕ್ರಮ ಹಣ ವರ್ಗಾವಣೆ ಕೇಸ್‌ (Money laundering case) ದಾಖಲಿಸಿದೆ. ಉತ್ತರಪ್ರದೇಶದ ಗೌತಮ್‌ ಬುದ್ಧನಗರ ಜಿಲ್ಲೆಯಲ್ಲಿ ದಾಖಲಾಗಿರುವ ಎಫ್‌ ಐಆರ್‌ ಮತ್ತು ಚಾರ್ಜ್‌ಶೀಟ್‌ಗಳ ಆಧಾರದ ಮೇಲೆ ಇಡಿ ಎಲ್ವಿಶ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA)ಯಲ್ಲಿ ಕೇಸ್‌ ದಾಖಲಿಸಿದೆ.

ಎಲ್ವಿಶ್‌ ಯಾದವ್‌ ಅಕ್ರಮವಾಗಿ ಹಣ ಪಡೆದು ವಿವಿಧ ಕಡೆಗಳಲಿ ರೇವ್‌ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಎಂಬುದು ಚಾರ್ಜ್‌ಶೀಟ್‌ ನಲ್ಲಿ ದಾಖಲಿಸಲಾಗಿದೆ. ಹೀಗಾಗಿ ಶೀಘ್ರದಲ್ಲೇ ಎಲ್ವಿಶ್‌ನನ್ನು ಇಡಿ ವಿಚಾರಣೆಗೊಳಪಡಿಸಲಿದೆ. ಇನ್ನು ಪ್ರಕರಣದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳನ್ನೂ ಇಡಿ ಗ್ರಿಲ್‌ ಮಾಡಲಿದೆ. ಯಾದವ್‌ ಜೊತೆಗೆ ಒಟ್ಟು ಆರು ಜನರ ವಿರುದ್ಧ ಇಡಿ ಕೇಸ್‌ ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರೇವ್ ಪಾರ್ಟಿಯಲ್ಲಿ ಹಾವಿನ ವಿಷ ಬಳಸಿದ ಆರೋಪದ ಮೇಲೆ ಯೂಟ್ಯೂಬರ್, ಬಿಗ್ ಬಾಸ್ OTT2 ವಿಜೇತ ಎಲ್ವಿಶ್ ಯಾದವ್ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇವರ ಗ್ಯಾಂಗ್‌ನ ಐವರು ಸದಸ್ಯರನ್ನು ನೋಯ್ಡಾದಲ್ಲಿ ಬಂಧಿಸಲಾಗಿತ್ತು. ಸೆಕ್ಟರ್ 51ರ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಾವಿನ ವಿಷ ಲಭ್ಯವಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಂಧಿತರನ್ನು ಆಗ್ನೇಯ ದೆಹಲಿಯ ಬದರ್‌ಪುರದ ಮೊಹರ್‌ಬಂದ್ ಗ್ರಾಮದ ನಿವಾಸಿಗಳಾದ ರಾಹುಲ್(32), ತೀತುನಾಥ್ (45), ಜೈಕರನ್ (50), ನಾರಾಯಣ್ (50) ಮತ್ತು ರವಿನಾಥ್ (45) ಎಂದು ಗುರುತಿಸಲಾಗಿತ್ತು.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಯಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿದ್ದು, ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆದರೆ ಅಂದು ಎಲ್ವಿಶ್ ಯಾದವ್ ಅವರನ್ನು ಬಂಧಿಸಿರಲಿಲ್ಲ.
ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು, ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರು. ಪಾರ್ಟಿಗಳಲ್ಲಿ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಈ ಮುಂಚೆ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Rahul Gandhi: ಪ್ರಧಾನಿ ದ್ವಾರಕಾ ಪೂಜೆ ಒಂದು ನಾಟಕ; ಮತ್ತೆ ಸನಾತನ ಆಚರಣೆ ಬಗ್ಗೆ ರಾಹುಲ್‌ ಪ್ರಶ್ನೆ

ಎಲ್ವಿಶ್ ಯಾದವನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದ. ಇದಾದ ಕೆಲವೇ ದಿನಗಳಲ್ಲಿ ಎಲ್ವಿಶ್‌ 3 ಕೋಟಿ ರೂ ಮೌಲ್ಯದ ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದ.

Continue Reading
Advertisement
Summer Tour
ಪ್ರವಾಸ5 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ8 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ17 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ40 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್42 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ45 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ54 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ57 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್1 hour ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್1 hour ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌