G20 Summit 2023: ವಿಶ್ವ ನಾಯಕರಿಗೆ ರಾಷ್ಟ್ರಪತಿ ಔತಣಕೂಟ, ಸೀರೆಯುಟ್ಟು ಬಂದ ಜಪಾನ್ ಪಿಎಂ ಪತ್ನಿ! Vistara News

ದೇಶ

G20 Summit 2023: ವಿಶ್ವ ನಾಯಕರಿಗೆ ರಾಷ್ಟ್ರಪತಿ ಔತಣಕೂಟ, ಸೀರೆಯುಟ್ಟು ಬಂದ ಜಪಾನ್ ಪಿಎಂ ಪತ್ನಿ!

G20 Summit 2023: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವ ನಾಯಕರಿಗೆ ಶನಿವಾರ ರಾತ್ರಿ ವಿಶೇಷ ಔತಣಕೂಟ ನೀಡಿದರು. 170ಕ್ಕೂ ಅಧಿಕ ಗಣ್ಯರು ಈ ಪಾಲ್ಗೊಂಡಿದ್ದರು.

VISTARANEWS.COM


on

G20 Summit 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಿ20 ಶೃಂಗ ಸಭೆಯ (G20 Summit 2023) ಮೊದಲ ದಿನ ಬಹುತೇಕ ಯಶಸ್ವಿಯಾಗಿದ್ದು, ಶನಿವಾರ ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು (Rashtrapati draupadi murmu) ಅವರು ವಿಶ್ವ ನಾಯಕರು ಹಾಗೂ ದೇಶ-ವಿದೇಶಗಳ 170ಕ್ಕೂ ಅಧಿಕ ಗಣ್ಯರಿಗೆ ಔತಣಕೂಟ (Dinner Party) ನೀಡಿದರು. ಜಿ20 ಶೃಂಗ ಸಭೆ ಆಯೋಜನೆಯಾಗಿರುವ ದಿಲ್ಲಿಯ ಭಾರತ್ ಮಂಟಪಮ್‌ನಲ್ಲಿ (Bharat Mantapam) ಈ ಔತಣಕೂಟವನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಯಕರನ್ನು ಸ್ವಾಗತಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪರಿಚಯ ಮಾಡಿಕೊಟ್ಟರು. ಬಳಿಕ ಔತಣಕೂಟ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿದೇಶಿ ಗಣ್ಯರನ್ನು ಸ್ವಾಗತಿಸಿದ್ದು, ವಿಶೇಷವಾಗಿತ್ತು. ಬೆಳಿಗ್ಗೆ ವಿವಿಧ ರಾಷ್ಟ್ರದ ಅಧ್ಯಕ್ಷರು, ಪ್ರಧಾನಿಗಳಿಗೆ ಪಿಎಂ ನರೇಂದ್ರ ಮೋದಿ ಅವರು ಸ್ವಾಗತ ಕೋರಿಸಿದ್ದರು. ಇದೀಗ ರಾಷ್ಟ್ರಪತಿಗಳ ಜೊತೆಯೂ ಸಹ ನಿಂತು ಬರುವ ಅತಿಥಿಗಳಿಗೆ ಸ್ವಾಗತ ಕೋರಿದ್ದು ವಿಶೇಷವಾಗಿತ್ತು.

ಸೀರೆ ಉಟ್ಟು ಬಂದ ಜಪಾನ್ ಪ್ರಧಾನಿ ಪತ್ನಿ

ರಾಷ್ಟ್ರಪತಿಗಳ ಆಹ್ವಾನದ ಔತಣಕೂಟಕ್ಕೆ ಭಾರತೀಯ ಸಂಸ್ಕೃತಿಯ ಸೀರೆ ಧರಿಸಿ ಬಂದ ಜಪಾನ್ ಪ್ರಧಾನಿಯ ಪತ್ನಿ ಯೋಕೋ ಕಿಷಿದಾ ಅವರು ಎಲ್ಲರ ಗಮನ ಸೆಳೆದರು. ಮಾರಿಷಿಸ್ ಪ್ರಧಾನ ಮಂತ್ರಿ ಪತ್ನಿ ಕೋಬಿತಾ ಜೂಗ್ನತ್ ಸಹ ಸೀರೆ ಧರಿಸಿ ಔತಣಕೂಟಕ್ಕೆ ಹಾಜರಾಗಿದ್ದಾರೆ.

ರಾಷ್ಟ್ರಪತಿ ಅವರಿಂದ ವಿಶ್ವ ನಾಯಕರಿಗೆ ಔತಣಕೂಟ

ದೇಶಿ ಮೆನು

ಔತಣಕೂಟದಲ್ಲಿ ಭಾರತೀಯ ಖಾದ್ಯಗಳನ್ನು ಪರಿಚಯಿಸಲಾಗಿತ್ತು. ವಿವಿಧ ಭಾಗಗಳ ಪ್ರಸಿದ್ಧ ಆಹಾರಗಳನ್ನು ಈ ಔತಣಕೂಟದಲ್ಲಿತ್ತು ಎಂದು ತಿಳಿದು ಬಂದಿದೆ. ದೇಶಿ ವಿಶೇಷ ಆಹಾರ ಖಾದ್ಯಗಳು ಗಮನ ಸೆಳೆದವು.

ಈ ಸುದ್ದಿಯನ್ನೂ ಓದಿ: G20 Summit 2023: ದಿಲ್ಲಿ ಜಿ20 ಶೃಂಗ ಸಭೆ ಸಕ್ಸೆಸ್! ಮಾನವ ಕೇಂದ್ರೀತ ನೀತಿಗೆ ವಿಶ್ವನಾಯಕರ ಬಹುಪರಾಕ್!

ಹಲವು ಮುಖ್ಯಮಂತ್ರಿಗಳು ಗೈರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಈ ಔತಣಕೂಟಕ್ಕೆ ದೇಶದ ಎಲ್ಲ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಕೆಲವು ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷಗಳ 12 ಮುಖ್ಯಮಂತ್ರಿಗಳು ಔತಣಕೂಟಕ್ಕೆ ಹಾಜರಾಗಿಲ್ಲ. ಈ ಮಧ್ಯೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದಿರುವುದು, ವಿವಾದಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಹಾಗೂ ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತಾದರೂ, ಅವರು ಅನಾರೋಗ್ಯದ ಕಾರಣದಿಂದಾಗಿ ಪಾಲ್ಗೊಂಡಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋರ್ಟ್

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

Bombay High court: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ತಾಯಿಯನ್ನು ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡುವಂತೆ ಸೂಚಿಸಿದೆ.

VISTARANEWS.COM


on

Bombay High court orders to son to vacate his mother flat
Koo

ಮುಂಬೈ: ತಾಯಿಯನ್ನು (Mother) ಆರೈಕೆ ಮಾಡದ ಪುತ್ರನಿಗೆ, ತಾಯಿಯ ಫ್ಲ್ಯಾಟ್‌ ಖಾಲಿ (Flat Vacate) ಮಾಡುವಂತೆ ಬಾಂಬೆ ಹೈಕೋರ್ಟ್ (Bombay High Court) ಆದೇಶ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕ ನ್ಯಾಯಮಂಡಳಿಯ (senior citizen tribunal) ಆದೇಶವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಪರೇಲ್‌ನಲ್ಲಿನ (Mumbai Parel) ಬಹುಮಹಡಿಯಲ್ಲಿರುವ ತನ್ನ ತಾಯಿಯ ಫ್ಲ್ಯಾಟ್ ಅನ್ನು ತೆರವು ಮಾಡುವಂತೆ ಮಗನಿಗೆ (Son) ಸ್ಪಷ್ಟವಾಗಿ ಸೂಚಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕ ನ್ಯಾಯಮಂಡಳಿ ತೀರ್ಪು ನೀಡಿ, ಭೋಯಿವಾಡದ ಸಂಪದಾ ಹೈಟ್ಸ್‌ನಲ್ಲಿರುವ ತನ್ನ ತಾಯಿಯ ಫ್ಲಾಟ್ ಅನ್ನು ಖಾಲಿ ಮಾಡುವಂತೆ ಸೂಚಿಸಿತ್ತು. ನ್ಯಾಯಮಂಡಳಿಯ ತೀರ್ಪನ್ನು ಬಾಂಬ್ ಹೈಕೋರ್ಟ್‌ನಲ್ಲಿ ಪುತ್ರ ಪ್ರಶ್ನಿಸಿದ್ದರು. ಅಂತಿಮವಾಗಿ ನವೆಂಬರ್ 9ರಂದು ತೀರ್ಪು ನೀಡಿದ ಬಾಂಬೆ ಹೈಕೋರ್ಟ್‌ನ ಜಸ್ಟೀಸ್ ಸಂದೀಪ್ ಮಾರ್ನೆ ಅವರು, ನ್ಯಾಯಮಂಡಳಿ ಆದೇಶವನ್ನು ಎತ್ತಿ ಹಿಡಿದರು.

ನಿಸ್ಸಂದೇಹವಾಗಿ, ಅನಾರೋಗ್ಯ ಪೀಡಿತ ತಾಯಿಯು ಫ್ಲಾಟ್ ನಂ.1301ರ ಮಾಲೀಕರಾಗಿದ್ದಾರೆ. ಅವರಿಗೆ ಬೇರೆ ಯಾವುದೇ ವಾಸಸ್ಥಳ ಇಲ್ಲ. ಫ್ಲಾಟ್‌ನಲ್ಲಿ ತನ್ನೊಂದಿಗೆ ಯಾರು ಇರಬೇಕು ಎಂಬುದನ್ನು ನಿರ್ಧರಿಸುವ ಹಕ್ಕು ಮತ್ತು ಅರ್ಹತೆ ತಾಯಿಗೆ ಇದೆ ಎಂದು ನ್ಯಾಯಮೂರ್ತಿ ಮಾರ್ನೆ ಅವರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

ತನಗೆ ವಾಸಿಸಲು ಬೇರೆ ಮನೆ ಇಲ್ಲ. ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳಿದ್ದಾರೆ. ಹಾಗಾಗಿ, ಫ್ಲ್ಯಾಟ್‌ನಲ್ಲಿ ವಾಸಿಸಲು ಅವಕಾಶ ನೀಡಬೇಕು ಎಂದು ಪುತ್ರನ ಪರ ವಕೀಲರು ವಾದಿಸಿದರು. ಅಲ್ಲದೇ, ಅನಾರೋಗ್ಯ ಪೀಡಿತ ತಾಯಿಯನ್ನು ಆರೈಕೆ ಮಾಡುತ್ತಿದ್ದೇನೆ. ಮುಂದೆಯೇ ಕೂಡ ಮಾಡುತ್ತೇನೆ ಎಂದು ಪುತ್ರ ಮನವಿ ಮಾಡಿಕೊಂಡರು.

ಆದರೆ, ಪುತ್ರನ ಈ ವಾದವನ್ನು ತಿರಸ್ಕರಿಸಿದ ತಾಯಿಯ ಪರ ವಕೀಲರು, ಶಹಾಪುರದಲ್ಲಿ ಒಂದು ಬೆಡ್‌ರೂಮ್‌-ಹಾಲ್‌-ಕಿಚನ್‌ ಫ್ಲ್ಯಾಟ್‌ ಖರೀದಿಸಿದ್ದಾಗಿ ನ್ಯಾಯಾಧಿಕರಣದ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಲ್ಲದೆ, ನ್ಯಾಯಮಂಡಳಿ ತನ್ನ ಆದೇಶವನ್ನು ನೀಡುವಾಗ, ಮಗ ಮದ್ಯವ್ಯಸನಿಯಾಗಿದ್ದು, ಆತ ತಾಯಿಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದ ಎಂಬುದನ್ನು ಗಣನೆಗೆ ತೆಗೆದುಕೊಂಡಿತ್ತು. ಈ ಸಂಗತಿಯನ್ನು ಗಮನಿಸಿದ ಹೈಕೋರ್ಟ್, ತನಗೆ ಉಳಿದುಕೊಳ್ಳಲು ಬೇರೆ ಸ್ಥಳವಿಲ್ಲ ಎಂದು ಹೇಳುವ ಮೂಲಕ ಮಗ ವಾಸ್ತವಿಕವಾಗಿ ತಪ್ಪು ಹೇಳಿಕೆ ನೀಡಿದ್ದಾನೆ ಎಂದು ಆರೋಪಿಸಿತು.

ಮದ್ಯವ್ಯಸನಿಯಾಗಿರುವ ಪುತ್ರ, ತನ್ನ ತಾಯಿಯ ಖಾತೆಗಳಿಂದ ಹಣವನ್ನು ಡ್ರಾ ಮಾಡುತ್ತಿದ್ದಾನೆ. ಅಲ್ಲದೇ, ಅನಾರೋಗ್ಯಪೀಡಿತ ತಾಯಿಯನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾನೆ. ಹಾಗಾಗಿ, ಮನೆ ಖಾಲಿ ಮಾಡುವಂತೆ ಸೂಚಿಸಬೇಕು ಎಂದು ವಕೀಲರು ವಾದ ಮಂಡಿಸಿದರು. ಅಂತಿಮವಾಗಿ, ಕೋರ್ಟ್ ವಾದ ಮತ್ತು ಪ್ರತಿವಾದವನ್ನು ಆಲಿಸಿ ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಎತ್ತಿ ಹಿಡಿಯುವ ಮೂಲಕ, ಪ್ರಮುಖ ತೀರ್ಪು ನೀಡಿತು.

ಈ ಸುದ್ದಿಯನ್ನೂ ಓದಿ: ಶಾರ್ಟ್ ಸ್ಕರ್ಟ್ ಧರಿಸಿ ಡ್ಯಾನ್ಸ್‌ ಮಾಡುವುದು ಅಶ್ಲೀಲವಲ್ಲ ಎಂದ ಬಾಂಬೆ ಹೈಕೋರ್ಟ್

Continue Reading

ದೇಶ

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

ಮಂಗಳವಾರ ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಡ್ರಾಪ್ ಮಾಡುತ್ತಿದ್ದಾಗ ಚಾಲಕ ದುಷ್ಕೃತ್ಯ ಎಸಗಿದ್ದಾನೆ.

VISTARANEWS.COM


on

physical abuse
Koo

ಪಟನಾ: ಬಿಹಾರದ ಬೇಗುಸರಾಯ್ನಲ್ಲಿ ನರ್ಸರಿ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಾಲಾ ವ್ಯಾನ್ ಚಾಲಕ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಳಿಕ ಉದ್ವಿಗ್ನಗೊಂಡ ಗ್ರಾಮಸ್ಥರು ಚಾಲಕನನ್ನು ಹಿಡಿದು ಥಳಿಸಿ ವ್ಯಾನ್​ಗೆ ಬೆಂಕಿ ಹಂಚಿ ಸುಟ್ಟು ಹಾಕಿದ್ದಾರೆ.

ಮಂಗಳವಾರ ಸಂಜೆ ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗೆ ಡ್ರಾಪ್ ಮಾಡುವ ವೇಳೆ ಚಾಲಕ ಈ ಕುಕೃತ್ಯ ಎಸಗಿದ್ದಾನೆ. ವ್ಯಾನ್ ನಲ್ಲಿ ಇಬ್ಬರು ನರ್ಸರಿ ವಿದ್ಯಾರ್ಥಿಗಳು ಮಾತ್ರ ಉಳಿದಿದ್ದಾಗ, ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳು ಮನೆಗೆ ತಲುಪಿದ ನಂತರ, ಕುಟುಂಬ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಚಾಲಕನನ್ನು ಥಳಿಸಿ ಶಾಲಾ ವ್ಯಾನ್ ಗೆ ಬೆಂಕಿ ಹಚ್ಚಿದ್ದಾರೆ.

ಆರೋಪಿ ಚಾಲಕನನ್ನು ಬಂಧಿಸಲಾಗಿದ್ದು, ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಪುರಾವೆಗಳನ್ನು ಸಂಗ್ರಹಿಸಲು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮಕ್ಕಳಿಗೆ ಬೇಗುಸರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕ ಕಳೆದ ಮೂರು ವರ್ಷಗಳಿಂದ ಖಾಸಗಿ ಶಾಲೆಯ ವ್ಯಾನ್ ಓಡಿಸುತ್ತಿದ್ದ ಎನ್ನಲಾಗಿದೆ.

ಘಟನೆಯ ಬಗ್ಗೆ ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರಲ್ಲಿ ಆಕ್ರೋಶವಿದೆ ಮತ್ತು ಅವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಬೆಗುಸರಾಯ್ ಡಿಎಸ್ಪಿ ಅಮಿತ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ : Escape Drama : ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಾಟಕ ಆಡಿದ ಮಹಿಳೆ!

142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಿನ್ಸಿಪಾಲ್‌ ವಜಾ, ಮಕ್ಕಳ ಹೋರಾಟ ಯಶಸ್ವಿ

ಪಾಪಿ ಪ್ರಿನ್ಸಿಪಾಲ್‌ (principal) ವಿರುದ್ಧ ವಿದ್ಯಾರ್ಥಿನಿಯರ ಹೋರಾಟ ಯಶಸ್ವಿಯಾಗಿದೆ. 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ (physical abuse, sexual harassment) ನೀಡಿದ ಕಿರಾತಕ ಪ್ರಾಂಶುಪಾಲನಿಗೆ ಕೆಲಸದಿಂದ ಗೇಟ್‌ಪಾಸ್‌ ನೀಡಲಾಗಿದೆ. ಈತನನ್ನು ಬಂಧಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ.

ಹರಿಯಾಣದ ಜಿಂದ್ ಜಿಲ್ಲೆಯ ಬಾಲಕಿಯರ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಪ್ರಾಂಶುಪಾಲ ಕರ್ತಾರ್ ಸಿಂಗ್ ಈ ಕೃತ್ಯ ಎಸಗಿದವನು. ಈತನನ್ನು ಸರ್ಕಾರ ಮಂಗಳವಾರ ಸೇವೆಯಿಂದ ವಜಾಗೊಳಿಸಿದೆ. ನವೆಂಬರ್ 4ರಂದು ಪೊಲೀಸರು ಆರೋಪಿ ಕರ್ತಾರ್ ಸಿಂಗ್‌ನನ್ನು ಬಂಧಿಸಿದ್ದು, ಅವನೀಗ ಜಿಂದ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈತನ ಕೃತ್ಯಗಳ ಬಗ್ಗೆ ವಿದ್ಯಾರ್ಥಿನಿಯರೇ ಮೊದಲು ಸಂಘಟಿತರಾಗಿ ಹೋರಾಟಕ್ಕಿಳಿದು ಪೊಲೀಸರ, ರಾಷ್ಟ್ರಪತಿಗಳ ಗಮನಕ್ಕೆ ತಂದಿದ್ದರು.

ಉಚ್ಚಾನಾ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಗುಲ್ಜಾರ್ ಮಲಿಕ್ ನೇತೃತ್ವದ ಸಮಿತಿಯ ತನಿಖಾ ವರದಿಯ ಮೇಲೆ ಕಾರ್ಯನಿರ್ವಹಿಸಿದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು, ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ತಪ್ಪಿತಸ್ಥನೆಂದು ಕಂಡುಬಂದಿರುವುದರಿಂದ, ಆತನನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿದ್ದಾರೆ.

ಸಂವಿಧಾನದ 311 (2) (ಬಿ) ಅಡಿಯಲ್ಲಿ ವಜಾ ಆದೇಶ ನೀಡಲಾಗಿದೆ. ಇದು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಸಿವಿಲ್ ಉದ್ಯೋಗದಲ್ಲಿರುವ ವ್ಯಕ್ತಿಗಳನ್ನು ಇಲಾಖಾ ವಿಚಾರಣೆ ನಡೆಸದೆ ವಜಾಗೊಳಿಸಲು, ತೆಗೆದುಹಾಕಲು ಅಥವಾ ಹಿಂಬಡ್ತಿ ನೀಡಲು ಸಕ್ಷಮ ಪ್ರಾಧಿಕಾರಕ್ಕೆ ಅಧಿಕಾರ ನೀಡುತ್ತದೆ.

ಉಚ್ಚಾನಾ ಮ್ಯಾಜಿಸ್ಟ್ರೇಟ್ ನೇತೃತ್ವದ ಪ್ರಕರಣದ ವಿಚಾರಣಾ ಸಮಿತಿಯು 390 ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದು, ಅದರಲ್ಲಿ 142 ವಿದ್ಯಾರ್ಥಿನಿಯರು ಸಿಂಗ್ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ ಎಂದು ಜಿಂದ್ ಜಿಲ್ಲಾಧಿಕಾರಿ ಮೊಹಮ್ಮದ್ ಇಮ್ರಾನ್ ರಜಾ ಹೇಳಿದ್ದಾರೆ. ಮೊದಲಿಗೆ ಈತ 60 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಮಾತುಗಳು ಕೇಳಿಬಂದಿದ್ದವು. ತನಿಖೆಯ ವೇಳೆ ಆತ ಸುಮಾರು 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ಬಯಲಾಯಿತು. ಅವನಿಗೆ 56 ವರ್ಷ.

ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡುತ್ತಿದ್ದು, ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಲೆಯ ವಿದ್ಯಾರ್ಥಿನಿಯರೇ ಹೋರಾಟ ಆರಂಭಿಸಿದ್ದರು. ಅವರು ಕಳೆದ ಆಗಸ್ಟ್‌ 31ರಂದು ಸಹಿ ಹಾಕಿರುವ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಹರಿಯಾಣ ರಾಜ್ಯಪಾಲ, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಕಳುಹಿಸಿದ್ದರು. ಇದಾದ ಬಳಿಕ ಶಾಲೆಯ ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಾಗಿತ್ತು. ಕೊನೆಗೆ ಆತನನ್ನು ಬಂಧಿಸಲಾಗಿದ್ದು, ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿನಿಯರು, ಅವರ ಪೋಷಕರು ಆಗ್ರಹಿಸಿದ್ದಾರೆ.

Continue Reading

ದೇಶ

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

peace accord: 1964ರಲ್ಲಿ ಆರಂಭವಾದ ಯುಎನ್ಎಲ್ಎಫ್ ಸಶಸ್ತ್ರ ಬಂಡಾಯದಲ್ಲಿ ತೊಡಿಕೊಂಡಿತ್ತು. ಕೇಂದ್ರ ಸರ್ಕಾರವನ್ನು ಈ ಸಂಘಟನೆಯನ್ನು ನಿಷೇಧಿಸಿತ್ತು.

VISTARANEWS.COM


on

peace accord between Manipur oldest armed group UNLF and Government
Koo

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಶಾಂತಿ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಹತ್ವದ ಯಶಸ್ಸನ್ನು ಸಾಧಿಸಿದೆ. ಮಣಿಪುರದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (United National Liberation Front – UNLF) ಕೇಂದ್ರ ಸರ್ಕಾರದೊಂದಿಗೆ (Central Government) ಶಾಂತಿ ಒಪ್ಪಂದಕ್ಕೆ (peace accord) ಸಹಿ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ(Union Home Minister Amit Shah).

ಕೇಂದ್ರ ಸರ್ಕಾರವು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಮೋದಿ ಸರ್ಕಾರದ ಅವಿರತ ಪ್ರಯತ್ನಗಳು ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫ್ರಂಟ್ (ಯುಎನ್‌ಎಲ್‌ಎಫ್) ಇಂದು ನವದೆಹಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರಿಂದ ಹೊಸ ಅಧ್ಯಾಯವನ್ನು ಆರಂಭಿಸಲಾಗಿದೆ ಎಂದು ಎಕ್ಸ್ ವೇದಿಕೆಯಲ್ಲಿ ಕೇಂದ್ರ ಗೃಹ ಸಚಿವ ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಮಣಿಪುರದ ಅತ್ಯಂತ ಹಳೆಯ ಮತ್ತು ಕಣಿವೆ ಮೂಲದ ಸಶಸ್ತ್ರ ಗುಂಪು ಯುಎನ್‌ಎಲ್‌ಎಫ್ ಹಿಂಸಾಚಾರವನ್ನು ತ್ಯಜಿಸಲು ಮತ್ತು ಮುಖ್ಯವಾಹಿನಿಗೆ ಸೇರಲು ಒಪ್ಪಿಕೊಂಡಿದೆ. ನಾನು ಅವರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಿಗೆ ಸ್ವಾಗತಿಸುತ್ತೇನೆ ಮತ್ತು ಶಾಂತಿ ಮತ್ತು ಪ್ರಗತಿಯ ಹಾದಿಯಲ್ಲಿ ಅವರ ಪ್ರಯಾಣದಲ್ಲಿ ಅವರಿಗೆ ಶುಭ ಹಾರೈಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಯುಎನ್‌ಎಲ್‌ಎಫ್ ಜೊತೆಗೆ ಹಲವಾರು ಇತರ ಉಗ್ರಗಾಮಿ ಸಂಘಟನೆಗಳನ್ನು ಗೃಹ ಸಚಿವಾಲಯ ನಿಷೇಧಿಸಿದ ದಿನಗಳ ನಂತರ ಈ ಶಾಂತಿ ಒಪ್ಪಂದವು ಏರ್ಪಟ್ಟಿದೆ. ಈ ಸಂಘಟನೆಗಳು ಮಣಿಪುರದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ನಾಗರಿಕರ ಮೇಲೆ ದಾಳಿಗಳು ಮತ್ತು ಹತ್ಯೆಗಳು ಮತ್ತು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯುಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಕೇಂದ್ರ ಸರ್ಕಾರ ನಿಷೇಧ ಅಸ್ತ್ರವನ್ನು ಪ್ರಯೋಗಿಸಿತ್ತು.

1964ರ ನವೆಂಬರ್ 24ರಂದು ಅರೆಂಬಮ್ ಸಮ್ರೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ಯುಎನ್‌ಎಲ್‌ಎಫ್ ಜನ್ಮ ತಳೆಯಿತು. ಇದು ಮಣಿಪುರದ ಅತ್ಯಂತ ಹಳೆಯ ಬಂಡಾಯ ಗುಂಪು ಎನಿಸಿಕೊಂಡಿದೆ. 70 ಮತ್ತು 80 ರ ದಶಕಗಳಲ್ಲಿ ಈ ಗುಂಪು ಮುಖ್ಯವಾಗಿ ಸಿದ್ಧತೆ ಮತ್ತು ನೇಮಕಾತಿಯ ಮೇಲೆ ಹೆಚ್ಚು ಕೇಂದ್ರೀಕೃತವಾಗಿತ್ತು. 1990ರಲ್ಲಿ ಭಾರತದಿಂದ ಮಣಿಪುರದ ‘ವಿಮೋಚನೆ’ಗಾಗಿ ಸಶಸ್ತ್ರ ಹೋರಾಟವನ್ನು ಪ್ರಾರಂಭಿಸಲು ನಿರ್ಧರಿಸಿತು. ಅದೇ ವರ್ಷದಲ್ಲಿ, ಇದು ಮಣಿಪುರ ಪೀಪಲ್ಸ್ ಆರ್ಮಿ ಎಂಬ ಸಶಸ್ತ್ರ ವಿಭಾಗವನ್ನು ಕೂಡ ಆರಂಭಿಸಿತ್ತು. ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಕೇಂದ್ರ ಸರ್ಕಾರವು ಈ ಸಂಘಟನೆಯನ್ನೂ ನಿಷೇಧಿಸಿತ್ತು.

ಈ ಸುದ್ದಿಯನ್ನೂ ಓದಿ: Manipur Violence: ಮಣಿಪುರದಲ್ಲಿ ಪೊಲೀಸ್‌ ಅಧಿಕಾರಿಯ ಹತ್ಯೆ; ‘ಕುಕಿ’ ಜನರಿಂದ ದಾಳಿ

Continue Reading

ದೇಶ

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

ಚೆನ್ನೈನಿಂದ ಗುಜರಾತ್​ನ ಪಾಲಿಟಾನಾಗೆ ತೆರಳುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ (Indian Railways ) ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಮಂಗಳವಾರ ರಾತ್ರಿ ಖಾಸಗಿಯಾಗಿ ಖರೀದಿಸಿದ ಊಟ ಸೇವಿಸಿದ ನಂತರ ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

Gauvarav Yatra
Koo

ನವದೆಹಲಿ: ಚೆನ್ನೈನಿಂದ ಗುಜರಾತ್​ನ ಪಾಲಿಟಾನಾಗೆ ತೆರಳುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ (Indian Railways) ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಮಂಗಳವಾರ ರಾತ್ರಿ ಖಾಸಗಿಯಾಗಿ ಪೂರೈಕೆಯಾದ ಊಟವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇದಕ್ಕೆ ರೈಲ್ವೆ ಇಲಾಖೆಯ ಹೊಣೆಯಲ್ಲ ಎಂಬುದಾಗಿ ಇಲಾಖೆಯ ಸಾರ್ವಜನಿಕ ಸಂಪರ್ಕ ಇಲಾಖೆ ಹೇಳಿದೆ. ಇದೇ ವೇಳೆ ಪ್ರಯಾಣಿಕ ಹಿತರಕ್ಷಣೆಗಾಗಿ ಮಾಡಿದ್ದೇವೆ ಎಂಬುದಾಗಿಯೂ ಹೇಳಿದೆ.

ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗುಜರಾತ್​ನ ಪಾಲಿಟಾನಾಗೆ ಖಾಸಗಿಯಾಗಿ ಕಾಯ್ದಿರಿಸಲಾಗಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ರೈಲಿನಲ್ಲಿ ಈ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.ಊಟ ಮಾಡಿದ ಬಳಿಕ ಪ್ರಯಾಣಿಕರು ಹೊಟ್ಟೆ ನೋವು, ವಾಂತಿ, ತಲೆತಿರುಗುವಿಕೆ ಮತ್ತು ಅತಿಸಾರದಿಂದ ಬಳಲಿದ್ದಾರೆ. ನಂತರ ಪುಣೆ ರೈಲ್ವೆ ನಿಲ್ದಾಣದಲ್ಲಿ ರೈಲಿನ ತುರ್ತು ನಿಲುಗಡೆ ಮಾಡಿದ್ದಾರೆ ಎಂದು ಕೇಂದ್ರ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಶಿವರಾಜ್ ಮನಸ್ಪುರೆ ತಿಳಿಸಿದ್ದಾರೆ.

ಸೋಲಾಪುರ ಮತ್ತು ಪುಣೆ ನಡುವೆ ಘಟನೆ ನಡೆದಿದೆ. ಬೋಗಿಯಲ್ಲಿದ್ದ ಸುಮಾರು 80 ರಿಂದ 90 ಪ್ರಯಾಣಿಕರು ಸೇವಿಸಿದ ಆಹಾರ ಕಲುಷಿತಗೊಂಡಿತ್ತ ಎಂದು ಅವರು ಹೇಳಿದ್ದಾರೆ. ಅವರು ಹೊಟ್ಟೆ ನೋವು, ವಾಕರಿಕೆ, ಭೇದಿ ಮತ್ತು ತಲೆನೋವಿನ ಬಗ್ಗೆ ಮಾಹಿತಿ ನೀಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ವೈದ್ಯರಿಂದ ತುರ್ತು ನೆರವು

“ಪುಣೆ ನಿಲ್ದಾಣದಲ್ಲಿ, ಮೂರು ವೈದ್ಯಕೀಯ ತಂಡಗಳು, 15 ರೈಲ್ವೆ ವೈದ್ಯರು ಮತ್ತು ಸಿಬ್ಬಂದಿಯ, 13 ಖಾಸಗಿ ವೈದ್ಯರು ಮತ್ತು ಸಿಬ್ಬಂದಿ ಮತ್ತು ಎಂಟು ಎನ್​ಜಿಒ ಕಾರ್ಯಕರ್ತರು ನೆರವು ಕಾರ್ಯದಲ್ಲಿ ತೊಡಗಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ನಾಲ್ಕು ಮುಖ್ಯ ಆರೋಗ್ಯ ನಿರೀಕ್ಷಕರು ಸಹ ಕೆಲಸ ಮಾಡುತ್ತಿದ್ದಾರೆ” ಎಂದು ರೈಲ್ವೆ ಪಿಆರ್​ಒ ಮಾಹಿತಿ ನೀಡಿದ್ದಾರೆ.

ರೈಲು ಮಂಗಳವಾರ ರಾತ್ರಿ 11.27 ಕ್ಕೆ ಪುಣೆ ಪ್ಲಾಟ್ ಫಾರ್ಮ್ ಸಂಖ್ಯೆ 2 ಕ್ಕೆ ಬಂದು 12.29 ಕ್ಕೆ ಹೊರಟಿತ್ತು. ಕೋಚ್ ನಂ. ಬಿ 11ರಲ್ಲಿ ವಾಂತಿ, ಹೊಟ್ಟೆ ನೋವು, ಭೇದಿ ಹೊಂದಿರುವ ಕೆಲವು ಪ್ರಯಾಣಿಕರನ್ನು ವೈದ್ಯರ ತಂಡವು ಗಮನಿಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಗಂಡ ಹೆಂಡತಿ ಜಗಳದಿಂದಾಗಿ ರೇಮಂಡ್ ಕಂಪನಿಗೆ 1500 ಕೋಟಿ ರೂ. ನಷ್ಟ!

ರೈಲ್ವೆ ಪಿಆರ್​ಒ ಪ್ರಕಾರ, ಆಹಾರವನ್ನು ರೈಲ್ವೆ ಅಥವಾ ಐಆರ್​ಸಿಟಿಸಿ ಸಿಬ್ಬಂದಿ ಪೂರೈಸಿಲ್ಲ/ ಆದರೆ ಖಾಸಗಿಯಾಗಿ ಸಂಗ್ರಹಿಸಲಾಗಿದೆ ಎಂದು ಮನಸ್ಪುರೆ ಹೇಳಿದರು. ರೈಲ್ವೆ ಸಚಿವಾಲಯದ ಪ್ರಕಾರ, ಖಾಸಗಿ ಪೂರೈಕೆದಾರರೊಬ್ಬರು ಈ ಸೇವೆಯನ್ನು ನಿರ್ವಹಿಸುತ್ತಿದ್ದಾರೆ. ಸಚಿವಾಲಯವು ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಎಲ್ಲಾ 90 ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆಯ ನಂತರ ಸಾಮಾನ್ಯ ಸುಧಾರಿಸಿಕೊಂಡಿದ್ದಾರೆ ಎಂದು ಮನಸ್ಪುರೆ ಭರವಸೆ ನೀಡಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. “ರೈಲು 50 ನಿಮಿಷಗಳ ನಂತರ ಹೊರಟಿತು. ಎಲ್ಲಾ ಪ್ರಯಾಣಿಕರ ಸ್ಥಿತಿ ಸ್ಥಿರವಾಗಿದೆ” ಎಂದು ಅವರು ಹೇಳಿದರು.

Continue Reading
Advertisement
Bombay High court orders to son to vacate his mother flat
ಕೋರ್ಟ್9 mins ago

ಆರೈಕೆ ಮಾಡದ ಮಗನಿಗೆ ತಾಯಿಯ ಫ್ಲ್ಯಾಟ್ ಖಾಲಿ ಮಾಡಲು ಬಾಂಬೆ ಹೈಕೋರ್ಟ್ ಆದೇಶ

TV Mohandas Pai Priyank Kharge
ಕರ್ನಾಟಕ18 mins ago

Mohandas Pai : ಐಟಿ ಸಿಟಿ ಗರಿ ಉದುರೀತು ಎಂದ ಮೋಹನ್‌ ದಾಸ್‌ ಪೈ, ಪ್ರಿಯಾಂಕ್‌ ತಿರುಗೇಟು

physical abuse
ದೇಶ36 mins ago

Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

peace accord between Manipur oldest armed group UNLF and Government
ದೇಶ46 mins ago

ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಹಳೆ ಬಂಡುಕೋರ ಗುಂಪು ಯುಎನ್ಎಲ್ಎಫ್!

Gauvarav Yatra
ದೇಶ1 hour ago

Indian Railways : ಭಾರತ ಗೌರವ ಯಾತ್ರಾ ರೈಲಿನಲ್ಲಿ ಕಲುಷಿತ ಆಹಾರ ಸೇವಿಸಿ 90 ಮಂದಿ ಅಸ್ವಸ್ಥ

Actress Ramya
ಕರ್ನಾಟಕ1 hour ago

Actress Ramya: ಹುಟ್ಟುಹಬ್ಬದಂದು ನಾಯಿಮರಿಗಳೊಂದಿಗೆ ಕಾಲಕಳೆದ ಮೋಹಕ ತಾರೆ ರಮ್ಯಾ

fight between Couple in air and Lufthansa flight was diverted to Delhi and Viral News
ದೇಶ1 hour ago

ಗಂಡ-ಹೆಂಡತಿ ಜಗಳ ವಿಮಾನ ಹತ್ತಿದ್ರೂ ಮುಗಿಲಿಲ್ಲ! ಆ ಮೇಲೆ ಏನಾಯ್ತು?

life certificate
ಉದ್ಯೋಗ1 hour ago

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

pain
ಆರೋಗ್ಯ2 hours ago

Home Remedies: ಚಳಿಗಾಲದಲ್ಲಿ ಪಾದ ನೋವೇ? ಇಲ್ಲಿದೆ ಮನೆಮದ್ದು

BPO Employee Bangalore Nude Photos
ಕರ್ನಾಟಕ2 hours ago

ಬಾಯ್‌ಫ್ರೆಂಡ್‌ ಮೊಬೈಲ್‌ ತೆರೆದಾಗ ಅವಳಿಗೆ ಕಂಡಿದ್ದು 13000 ಹುಡುಗಿಯರ ನಗ್ನಲೋಕ!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ16 hours ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ2 days ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ2 days ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ2 days ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ2 days ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ3 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ3 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

ಟ್ರೆಂಡಿಂಗ್‌